Shuru
Apke Nagar Ki App…
ಕಲ್ಯಾಣ ಕರ್ನಾಟಕದ ಇತಿಹಾಸ ಕರ್ನಾಟಕದ ಇತಿಹಾಸವಾಗಿ ಬದಲಾವಣೆ: ಸಿಎಂ ಡಿ ಕೆ ಶಿವಕುಮಾರ್ ಬಣ್ಣನೆ* ಕಲಬುರ್ಗಿ, ಸೆ. 16* "ಕಲ್ಯಾಣ ಕರ್ನಾಟಕದ ಇತಿಹಾಸ ಇಡೀ ಕರ್ನಾಟಕದ ಇತಿಹಾಸವಾಗಿ ಬದಲಾಗಿದೆ. ಕಲ್ಯಾಣ ಕರ್ನಾಟಕ ಭಾಗ ಯಾವುದಕ್ಕೂ ಕಡಿಮೆ ಇಲ್ಲದಂತೆ ಅಭಿವೃದ್ಧಿ ಹೊಂದುತ್ತಿದೆ. ಬೆಂಗಳೂರಿಗಿಂತ ಕಲಬುರ್ಗಿ ಕಡಿಮೆಯೇನಿಲ್ಲ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಬಣ್ಣಿಸಿದರು. ಕಲಬುರ್ಗಿ ನಗರದ ಪಬ್ಲಿಕ್ ಗಾರ್ಡನ್ ನಲ್ಲಿ ಆಯೋಜಿಸಿರುವ ಬೀದಿ ಉತ್ಸವ, ಅಪ್ಪನ ಕೆರೆಯ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು.
Shabbir Bijapur
ಕಲ್ಯಾಣ ಕರ್ನಾಟಕದ ಇತಿಹಾಸ ಕರ್ನಾಟಕದ ಇತಿಹಾಸವಾಗಿ ಬದಲಾವಣೆ: ಸಿಎಂ ಡಿ ಕೆ ಶಿವಕುಮಾರ್ ಬಣ್ಣನೆ* ಕಲಬುರ್ಗಿ, ಸೆ. 16* "ಕಲ್ಯಾಣ ಕರ್ನಾಟಕದ ಇತಿಹಾಸ ಇಡೀ ಕರ್ನಾಟಕದ ಇತಿಹಾಸವಾಗಿ ಬದಲಾಗಿದೆ. ಕಲ್ಯಾಣ ಕರ್ನಾಟಕ ಭಾಗ ಯಾವುದಕ್ಕೂ ಕಡಿಮೆ ಇಲ್ಲದಂತೆ ಅಭಿವೃದ್ಧಿ ಹೊಂದುತ್ತಿದೆ. ಬೆಂಗಳೂರಿಗಿಂತ ಕಲಬುರ್ಗಿ ಕಡಿಮೆಯೇನಿಲ್ಲ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಬಣ್ಣಿಸಿದರು. ಕಲಬುರ್ಗಿ ನಗರದ ಪಬ್ಲಿಕ್ ಗಾರ್ಡನ್ ನಲ್ಲಿ ಆಯೋಜಿಸಿರುವ ಬೀದಿ ಉತ್ಸವ, ಅಪ್ಪನ ಕೆರೆಯ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು.
More news from ಕರ್ನಾಟಕ and nearby areas
- ಬಿಜೆಪಿ ನಾಯಕರ ಮೇಲೆ ಯಾಕೆ ಇಡಿ ದಾಳಿ ಆಗುವುದಿಲ್ಲ ಸಚಿವ ಸತೀಶ್ ಜಾರಕಿಹೊಳಿ ಅವರ ಮೇಲೆ ಮಾಡಿದ ಇಡಿ ದಾಳಿ ಕುರಿತು ಸಚಿವ ಕಾಶಪ್ಪನವರ ತಿರುಗೇಟು.. ಬಿಜೆಪಿ ನಾಯಕರ ಮೇಲೆ ಯಾಕೆ ಇಡಿ ದಾಳಿ ಆಗುವುದಿಲ್ಲ ಸಚಿವ ಸತೀಶ್ ಜಾರಕಿಹೊಳಿ ಅವರ ಮೇಲೆ ಮಾಡಿದ ಇಡಿ ದಾಳಿ ಕುರಿತು ಸಚಿವ ಕಾಶಪ್ಪನವರ ತಿರುಗೇಟು..1
- ಕಲ್ಯಾಣ ಕರ್ನಾಟಕದ ಇತಿಹಾಸ ಕರ್ನಾಟಕದ ಇತಿಹಾಸವಾಗಿ ಬದಲಾವಣೆ: ಸಿಎಂ ಡಿ ಕೆ ಶಿವಕುಮಾರ್ ಬಣ್ಣನೆ* ಕಲಬುರ್ಗಿ, ಸೆ. 16* "ಕಲ್ಯಾಣ ಕರ್ನಾಟಕದ ಇತಿಹಾಸ ಇಡೀ ಕರ್ನಾಟಕದ ಇತಿಹಾಸವಾಗಿ ಬದಲಾಗಿದೆ. ಕಲ್ಯಾಣ ಕರ್ನಾಟಕ ಭಾಗ ಯಾವುದಕ್ಕೂ ಕಡಿಮೆ ಇಲ್ಲದಂತೆ ಅಭಿವೃದ್ಧಿ ಹೊಂದುತ್ತಿದೆ. ಬೆಂಗಳೂರಿಗಿಂತ ಕಲಬುರ್ಗಿ ಕಡಿಮೆಯೇನಿಲ್ಲ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಬಣ್ಣಿಸಿದರು. ಕಲಬುರ್ಗಿ ನಗರದ ಪಬ್ಲಿಕ್ ಗಾರ್ಡನ್ ನಲ್ಲಿ ಆಯೋಜಿಸಿರುವ ಬೀದಿ ಉತ್ಸವ, ಅಪ್ಪನ ಕೆರೆಯ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು.1
- ಹಿರೇಓತಗೇರಿ ಗ್ರಾಮದಲ್ಲಿ ಭಕ್ತಿಭಾವದಿಂದ ವಿಘ್ನನಿವಾರಕನ ವಿಸಜ೯ನೆ ಇಳಕಲ್ ; ತಾಲೂಕಿನ ಹಿರೇಓತಗೇರಿ ಗ್ರಾಮದಲ್ಲಿಶ್ರೀ ಸಿದ್ಧಿವಿನಾಯಕ ಸೇವಾ ಸಮಿತಿ ಬಳಗದ ವತಿಯಿಂದ ಪ್ರತಿಷ್ಠಾಪನೆ ಮಾಡುದ್ದ ಗಣೇಶನನ್ನ ಇಂದು ಭಕ್ತಿ ಭಾವದಿಂದ ಪೂಜಿಸಿ ವಿಸಜ೯ನೆ ಮಾಡಿದರು.3
- ರಬಕವಿ-ಬನಹಟ್ಟಿ: ಇಂದಿರಾ ಕ್ಯಾಂಟೀನ್ ಉದ್ಘಾಟನಾ ವೇಳೆ ವಾಗ್ವಾದ ಸಚಿವರ ಸಮ್ಮುಖದಲ್ಲೇ ಪರಸ್ಪರ ವಾಗ್ದಾಳಿ ರಬಕವಿ-ಬನಹಟ್ಟಿ ತಾಲೂಕು ಬನಹಟ್ಟಿ ನಗರದ ಇಂದಿರಾ ಕ್ಯಾಂಟೀನ್ ಉದ್ಘಾಟನಾ ಕಾರ್ಯಕ್ರಮದಲ್ಲಿ, ಸಚಿವರ ಸಮ್ಮುಖದಲ್ಲೇ ಬಿಜೆಪಿ ಶಾಸಕ ಸಿದ್ದು ಸವದಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ಕಾರ್ಯಕ್ರಮದ ವೇಳೆ ನಡೆದ ಈ ವಾಗ್ವಾದದಿಂದ ಕೆಲಕಾಲ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ವಾಗ್ವಾದಕ್ಕೆ ಕಾರಣವೇನು? ಯಾವ ವಿಚಾರಕ್ಕೆ ಸಂಬಂಧಿಸಿ ಮಾತಿನ ಚಕಮಕಿ ನಡೆಯಿತು ಸಚಿವರ ಸಮ್ಮುಖದಲ್ಲೇ ಈ ಬೆಳವಣಿಗೆಗೆ ಕಾರಣವೇನು1
- 30 ವರ್ಷಗಳಾದರೂ ಹಕ್ಕುಪತ್ರ ನೀಡಿರುವುದನ್ನು ಖಂಡಿಸಿ , ರೈತ ಸಂಘ ಪ್ರತಿಭಟನೆ.. ಕೊಲ್ಹಾರ: ಆಲಮಟ್ಟಿ ಜಲಾಶಯಕ್ಕಾಗಿ ಮನೆ, ಮಠ ಹಾಗೂ ಜಮೀನು ಕಳೆದುಕೊಂಡ ಮುಳುಗಡೆ ಸಂತ್ರಸ್ತರಿಗೆ 30 ವರ್ಷಗಳಾದರೂ ಹಕ್ಕುಪತ್ರ ನೀಡದಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಬುಧವಾರ ಕೊಲ್ಹಾರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಶಶಿಕಾಂತ ಗುರೂಜಿ ಹಾಗೂ ಚೂನಪ್ಪ ಪೂಜಾರಿ ನೇತೃತ್ವದಲ್ಲಿ ನಡೆದ ಮೆರವಣಿಗೆಯಲ್ಲಿ ಸಾವಿರಾರು ರೈತರು ಪಾಲ್ಗೊಂಡರು. ಹಕ್ಕುಪತ್ರ ವಿತರಣೆ, ಮುಳವಾಡ ಏತ ನೀರಾವರಿ ಮೂಲಕ ಕೆರೆಗಳ ಭರ್ತಿ, ಕುಡಿಯುವ ನೀರಿಗೆ 20 ಟಿಎಂಸಿ ನೀರು ಕಾಯ್ದಿರಿಸುವುದು ಹಾಗೂ ಸಮರ್ಪಕ ವಿದ್ಯುತ್ ಪೂರೈಕೆಗೆ ರೈತರು ಆಗ್ರಹಿಸಿದರು. ಅಧಿಕಾರಿಗಳು ಬಾಕಿ ಬೇಡಿಕೆಗಳನ್ನು ನಾಲ್ಕು ತಿಂಗಳಲ್ಲಿ ಬಗೆಹರಿಸುವುದಾಗಿ ಲಿಖಿತ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ಅಂತ್ಯಗೊಂಡಿತು.4
- ಲಿಂಗದಹಳ್ಳಿ ಸಹಕಾರಿ ಸಂಘದ 50ನೇ ವಾರ್ಷಿಕ ಮಹಾಸಭೆ | ಬಸನಗೌಡ ಬಸರಕೋಡ ಅಧ್ಯಕ್ಷತೆ | ವಿಜಯಪುರ ಜಿಲ್ಲೆ ತಾಳಿಕೋಟಿ ತಾಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಬ್ಯಾಂಕ್ ನಿಯಮಿತದ 50ನೇ ವಾರ್ಷಿಕ ಮಹಾಸಭೆ ಅರ್ಥಪೂರ್ಣವಾಗಿ ಜರುಗಿತು. ಸಂಘದ ಅಧ್ಯಕ್ಷರಾದ ಬಸನಗೌಡ ಬಸರಕೋಡ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಆರಂಭಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಸೌಮ್ಯ ಆರ್. ತಿಳಗೂಳ ಅವರು ವಾರ್ಷಿಕ ವರದಿಯನ್ನು ವಾಚಿಸಿ, ಕಳೆದ ಒಂದು ವರ್ಷದ ಅವಧಿಯಲ್ಲಿ ಸಂಘ ಕೈಗೊಂಡ ವಿವಿಧ ಚಟುವಟಿಕೆಗಳು ಹಾಗೂ ಪ್ರಗತಿಯ ವಿವರಗಳನ್ನು ಸಭೆಯ ಮುಂದಿಟ್ಟರು. ಸಭೆಯಲ್ಲಿ ಭಾಗವಹಿಸಿದ್ದ ಸಂಘದ ಶೇರುದಾರರು ಸಂಘದ ಮತ್ತಷ್ಟು ಅಭಿವೃದ್ಧಿಗಾಗಿ ಹಲವು ಅಮೂಲ್ಯ ಸಲಹೆ ಮತ್ತು ಸೂಚನೆಗಳನ್ನು ನೀಡಿದರು. ನಂತರ ಮಾತನಾಡಿದ ಸಂಘದ ಅಧ್ಯಕ್ಷ ಬಸನಗೌಡ ಬಸರಕೋಡ, ಸಂಘದ ಅಭಿವೃದ್ಧಿಗೆ ಶೇರುದಾರರು ಹಾಗೂ ಗ್ರಾಮಸ್ಥರು ಇದೇ ರೀತಿಯಲ್ಲಿ ಸಹಕಾರ ನೀಡಬೇಕೆಂದು ಮನವಿ ಮಾಡಿದರು. ಕಾರ್ಯಕ್ರಮವನ್ನು ಶಿಕ್ಷಕರಾದ ಅಪ್ಪಸಾಹೇಬಗೌಡ ಮೂಲಿಮನಿ ಅವರು ಅಚ್ಚುಕಟ್ಟಾಗಿ ನಿರ್ವಹಿಸಿದರು. ಇದೇ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಬಸನಗೌಡ ಬಸರಕೋಡ ಹಾಗೂ ಉಪಾಧ್ಯಕ್ಷರಾದ ಶ್ರೀಮತಿ ನೀಲಮ್ಮ ಪೀರಾಪೂರ ಅವರನ್ನು ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಸದಸ್ಯರಾದ ಗುರಪ್ಪ ಮೇಟಿ, ಬಸನಗೌಡ ಬಿರಾದಾರ, ಹಣಮಗೌಡ ಮುದ್ನೂರ, ಶರಣಪ್ಪ ಪಾಟೀಲ, ಹಣಮಂತ್ರಾಯ ಬಿರಾದಾರ, ನಿಂಗಪ್ಪ ಹೊಸಮನಿ, ಗಂಗಮ್ಮ ನಾಡಗೌಡ, ಗ್ಯಾನಪ್ಪ ವಾಲಿಕಾರ, ರಾಮಚಂದ್ರ ಹೊಸಮನಿ, ನೇತ್ರಾ ವಾಲಿಕಾರ, ವೃತ್ತಿಪರ ನಿರ್ದೇಶಕ ಶಾಂತಗೌಡ ಬಿರಾದಾರ, ಗ್ರಾಮದ ಗಣ್ಯರು, ಹಿರಿಯರು, ಸಂಘದ ಶೇರುದಾರರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಒಟ್ಟಿನಲ್ಲಿ, ಲಿಂಗದಹಳ್ಳಿ ಸಹಕಾರಿ ಸಂಘದ 50ನೇ ವಾರ್ಷಿಕ ಮಹಾಸಭೆ ಸಂಘದ ಮುಂದಿನ ಅಭಿವೃದ್ಧಿಗೆ ಹೊಸ ಚರ್ಚೆ ಹಾಗೂ ಸಲಹೆಗಳಿಗೆ ವೇದಿಕೆಯಾಯಿತು.1
- *ಕುಷ್ಟಗಿಯಲ್ಲಿ ಎತ್ತಿನ ಬಂಡಿಗಳ ಮೂಲಕ ಸಾವಿರಾರು ರೈತರ ಬೃಹತ್ ಪ್ರತಿಭಟನೆ: ಬರ ಘೋಷಣೆಗೆ ಆಗ್ರಹ* *ಇನ್ನೂ ಎರಡು ದಿನದಲ್ಲಿ ಘೋಷಿಸದಿದ್ದರೆ ಉಗ್ರ ಹೋರಾಟ: ಶಾಸಕ ದೊಡ್ಡನಗೌಡ ಪಾಟೀಲ, ಮಾಜಿ ಸಚಿವ ರಾಜುಗೌಡ ನಾಯಕ ಎಚ್ಚರಿಕೆ* *ಕುಷ್ಟಗಿ, ಸೆ.16:* ರಾಜ್ಯ ಸರ್ಕಾರ ಕುಷ್ಟಗಿ ತಾಲೂಕನ್ನು ಮೊದಲನೇ ಮತ್ತು ಎರಡನೇ ಬರ ಪೀಡಿತ ಪಟ್ಟಿಯಿಂದ ಕೈಬಿಟ್ಟಿರುವ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕುಷ್ಟಗಿಯಲ್ಲಿ ಸಾವಿರಾರು ರೈತರು ನೂರಾರು ಎತ್ತಿನ ಬಂಡಿಗಳ ಮೂಲಕ ಬೃಹತ್ ಪ್ರತಿಭಟನೆ ನಡೆಸಿದರು. ಭಾರತೀಯ ಜನತಾ ಪಾರ್ಟಿ, ಕುಷ್ಟಗಿ ಮಂಡಲ ಹಾಗೂ ಶಾಸಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ ಅವರ ನೇತೃತ್ವದಲ್ಲಿ ಮಲ್ಲಯ್ಯ ವೃತ್ತದಿಂದ ಹಿಡಿದು ಬಸ್ ನಿಲ್ದಾಣ, ಮಾರುತಿ ವೃತ್ತ, ಭಕ್ತ ಶ್ರೇಷ್ಠ ಕನಕದಾಸ ಸರ್ಕಲ್, ಪುರಸಭೆ, ವಾಲ್ಮೀಕಿ ವೃತ್ತದ ಮಾರ್ಗವಾಗಿ ಬಸವೇಶ್ವರ ಸರ್ಕಲ್ ವರೆಗೆ ಎತ್ತಿನ ಬಂಡಿಗಳ ಬೃಹತ್ ಮೆರವಣಿಗೆ ಹಾಗೂ ಮಾನವ ಸರಪಳಿ ನಿರ್ಮಿಸಿ, ಬಹಿರಂಗ ವೇದಿಕೆಯಲ್ಲಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. *2-3 ತಾಸು ಪಟ್ಟಣ ಸ್ತಬ್ಧ:* ಈ ಬೃಹತ್ ಎತ್ತಿನ ಬಂಡಿ ಪ್ರತಿಭಟನೆಯಿಂದ ಸುಮಾರು ಎರಡು ಮೂರು ತಾಸುಗಳ ಕಾಲ ಕುಷ್ಟಗಿ ಪಟ್ಟಣ ಸಂಪೂರ್ಣ ಸ್ತಬ್ಧವಾಗಿತ್ತು. ಇದರಿಂದ ವಾಹನ ಸವಾರರು ಮತ್ತು ನಾಗರಿಕರು ತೀವ್ರ ಪರದಾಡಿದರು. ಬಹಿರಂಗ ಸಭೆಯಲ್ಲಿ ಮಾತನಾಡಿದ ಶಾಸಕ ದೊಡ್ಡನಗೌಡ ಪಾಟೀಲ ಅವರು, "ನಮ್ಮ ತಾಲೂಕಿಗೆ ಶೇ.1 ರಷ್ಟು ಕೂಡ ನೀರಾವರಿ ಇಲ್ಲ. ನಾವು ಕೇವಲ ಒಣ ಬೇಸಾಯ, ಮಳೆ ಆಧಾರಿತ ಬೆಳೆಯನ್ನೇ ನಂಬಿಕೊಂಡಿದ್ದೇವೆ. ರೈತರು ಸಾಲ-ಸೂಲ ಮಾಡಿ ಭೂಮಿಗೆ ಬೀಜ, ಗೊಬ್ಬರ ಹಾಕಿ ಲಕ್ಷಾಂತರ ರೂ. ಖರ್ಚು ಮಾಡಿದರೂ ಸರಿಯಾದ ಸಮಯಕ್ಕೆ ಮಳೆಯಾಗದ ಕಾರಣ ಎರಡೆರಡು ಬಾರಿ ಬಿತ್ತನೆ ಮಾಡಿದ ಎಲ್ಲಾ ಬೆಳೆ ಸಂಪೂರ್ಣ ಹಾಳಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಮತ್ತು ಜಿಲ್ಲಾಧಿಕಾರಿಗಳು ಎಲ್ಲರೂ ಬಂದು ನೋಡಿ ಹೋದರೂ ಕುಷ್ಟಗಿಯನ್ನು ಪಟ್ಟಿಗೆ ಸೇರಿಸಿಲ್ಲ. ಕಾಂಗ್ರೆಸ್ ಸರ್ಕಾರ ಕೇಂದ್ರದ ಮೇಲೆ ಬೊಟ್ಟು ಮಾಡದೆ ಕೂಡಲೇ ಕುಷ್ಟಗಿಯನ್ನು ಬರ ಪೀಡಿತ ಎಂದು ಘೋಷಿಸಬೇಕು" ಎಂದು ಆಕ್ರೋಶ ವ್ಯಕ್ತಪಡಿಸಿದರು. *ಮಾಜಿ ಸಚಿವ ರಾಜುಗೌಡ ನಾಯಕ ಎಚ್ಚರಿಕೆ:* ಇನ್ನು ಎರಡು ದಿನದಲ್ಲಿ ಕುಷ್ಟಗಿ ಸೇರಿದಂತೆ ಉಳಿದ ತಾಲೂಕುಗಳನ್ನು ಬರ ಎಂದು ಘೋಷಿಸದಿದ್ದರೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸುವುದಾಗಿ ಸುರಪುರ ವಿಧಾನಸಭೆ ಕ್ಷೇತ್ರದ ಮಾಜಿ ಶಾಸಕ ಹಾಗೂ ಮಾಜಿ ಸಚಿವ ರಾಜುಗೌಡ ನಾಯಕ ಎಚ್ಚರಿಕೆ ನೀಡಿದರು. "ಈ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿಯೇ ಇಲ್ಲ. ರಾಜ್ಯದಲ್ಲಿ ಕೇವಲ 101 ತಾಲೂಕನ್ನು ಮಾತ್ರ ಬರ ಪೀಡಿತ ಎಂದು ಘೋಷಣೆ ಮಾಡಿ, ಕಲ್ಯಾಣ ಕರ್ನಾಟಕದ ತಾಲೂಕುಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ. ಬಿಜೆಪಿ ಕ್ಷೇತ್ರ ಮಾತ್ರವಲ್ಲ ಕಾಂಗ್ರೆಸ್ ಕ್ಷೇತ್ರದ ತಾಲೂಕುಗಳನ್ನೂ ಬರ ಪಟ್ಟಿಯಿಂದ ಕೈಬಿಟ್ಟಿದೆ. ಮುಂಬರುವ ಎರಡು ದಿನದಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಉಳಿದ ತಾಲೂಕುಗಳನ್ನು ಬರ ಎಂದು ಘೋಷಿಸಬೇಕು" ಎಂದು ಆಗ್ರಹಿಸಿದರು. ಕೊನೆಯಲ್ಲಿ ತಹಶಿಲ್ದಾರರ ಮೂಲಕ ರಾಜ್ಯ ಸರ್ಕಾರದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮತ್ತು ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. *ಪ್ರತಿಭಟನೆಯಲ್ಲಿ ಇದ್ದವರು:* ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಗಿರೇಗೌಡ ಗೌಡ್ರ, ಬಿಜೆಪಿ ಮುಖಂಡರಾದ ಬಸವರಾಜ ಕ್ಯಾವಟರ್, ಬಸವರಾಜ ಹಳ್ಳೂರು, ದೇವೇಂದ್ರಪ್ಪ ಬಳೂಟಗಿ, ಪಕೀರಪ್ಪ ಚಳಗೇರಿ ವಕೀಲರು, ತಾಲೂಕು ಬಿಜೆಪಿ ಮಂಡಲದ ಅಧ್ಯಕ್ಷ ಮಾಹಾಂತೇಶ ಬದಾಮಿ, ರವಿಕುಮಾರ ಹಿರೇಮಠ, ಮಲ್ಲಣ್ಣ ಪಲ್ಲೇದ್, ಮಾಜಿ ಪುರಸಭೆ ಅಧ್ಯಕ್ಷ ಕಲ್ಲೇಶ ತಾಳದ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಕೆ.ಮಹೇಶ ಕ್ಯಾವಟರ್, ವಿನಯಕುಮಾರ ಮೇಲಿನಮನಿ, ಭರಮಗೌಡ ಬ್ಯಾಲಿಹಾಳ, ಈರಣ್ಣ ಗಜೇಂದ್ರಗಡ ಸೇರಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ನೂರಾರು ರೈತರು ತಮ್ಮ ಎತ್ತಿನ ಬಂಡಿಗಳೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.1
- ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಗಣೇಶನ ಆಶೀರ್ವಾದ ಪಡೆದ ಸಚಿವ ವಿಜಯಾನಂದ ಕಾಶಪ್ಪನವರ ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಗಣೇಶ ಚತುರ್ಥಿಯ ಪಾವನ ಸಂದರ್ಭದಲ್ಲಿ ಕಸಬಾ ಗಣಪತಿ ಹಾಗೂ ಆಜುಭಾ ಗಣಪತಿಗೆ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವರಾದ ವಿಜಯಾನಂದ ಎಸ್ ಕಾಶಪ್ಪನವರ ಭೇಟಿ ನೀಡಿ, ವಿಘ್ನವಿನಾಶಕನ ದರ್ಶನ ಪಡೆದು ನಾಡಿನ ಸುಭಿಕ್ಷೆ, ಶಾಂತಿ ಹಾಗೂ ಸಮೃದ್ಧಿಗಾಗಿ ಪ್ರಾರ್ಥಿಸಿದರು.3