ಪಾವಗಡದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: 11 ಹೊಸ ಮತಗಟ್ಟೆಗಳ ಸ್ಥಾಪನೆ, 1.83 ಲಕ್ಷಕ್ಕೆ ಇಳಿದ ಮತದಾರರ ಸಂಖ್ಯೆ ಪಾವಗಡದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: 11 ಹೊಸ ಮತಗಟ್ಟೆಗಳ ಸ್ಥಾಪನೆ, 1.83 ಲಕ್ಷಕ್ಕೆ ಇಳಿದ ಮತದಾರರ ಸಂಖ್ಯೆ ಪಾವಗಡ: ತಾಲೂಕಿನಲ್ಲಿ ಮತದಾರರ ಪಟ್ಟಿ ಸಮಗ್ರ ಸಂಕ್ಷಿಪ್ತ ಪರಿಷ್ಕರಣೆ ನಂತರ ಒಟ್ಟು ಮತದಾರರ ಸಂಖ್ಯೆ 1.83 ಲಕ್ಷಕ್ಕೆ ಇಳಿಕೆಯಾಗಿದ್ದು, ಸಾರ್ವಜನಿಕರ ಅನುಕೂಲಕ್ಕಾಗಿ ಹೆಚ್ಚುವರಿಯಾಗಿ 11 ಹೊಸ ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಮತದಾರರ ನೋಂದಣಾಧಿಕಾರಿ ಹಾಗೂ ವಿಶೇಷ ಭೂಸ್ವಾಧೀನಾಧಿಕಾರಿ ಮಮತಾದೇವಿ ತಿಳಿಸಿದರು. ಕರಡು ಪಟ್ಟಿ ಪ್ರಕಟಣೆ ಸಂಬಂಧ ನಡೆದ ಪರಿಶೀಲನಾ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಪಾವಗಡ ಕ್ಷೇತ್ರದಲ್ಲಿ ಒಟ್ಟು 1,98,927 ಮತದಾರರಿದ್ದರು. ಪರಿಷ್ಕರಣೆಯ ನಂತರ ಪ್ರಸ್ತುತ ಕರಡು ಪಟ್ಟಿಯಲ್ಲಿ ಮತದಾರರ ಸಂಖ್ಯೆ 1,83,312ಕ್ಕೆ ಇಳಿಕೆಯಾಗಿದೆ. ತಾಲೂಕಿನಲ್ಲಿ ಪ್ರಸ್ತುತ 240 ಮತಗಟ್ಟೆಗಳಿದ್ದು, ಹೊಸದಾಗಿ 11 ಸೇರ್ಪಡೆಯಾಗಲಿವೆ ಎಂದರು. 15,615 ಜನರ ಪರಿಶೀಲನೆ: ಪರಿಶೀಲನೆ ವೇಳೆ ಒಟ್ಟು 15,615 ಪ್ರಕರಣಗಳನ್ನು ಗುರುತಿಸಲಾಗಿದೆ. ಇದರಲ್ಲಿ ಶಾಶ್ವತವಾಗಿ ಸ್ಥಳಾಂತರಗೊಂಡವರು 9,069, ಮರಣ ಹೊಂದಿದವರು 3,703, ಮನೆಯಲ್ಲಿ ಇಲ್ಲದವರು 1,523 ಹಾಗೂ ವಿಳಾಸ ಸಿಗದವರು 9 ಜನರಿದ್ದಾರೆ. 6,342 ಮತದಾರರಿಗೆ ನೋಟಿಸ್: ಅರ್ಹತೆ ಹಾಗೂ ದಾಖಲೆಗಳ ಸ್ಪಷ್ಟತೆಗಾಗಿ ಒಟ್ಟು 6,342 ಮತದಾರರಿಗೆ ನೋಟಿಸ್ ಜಾರಿಗೊಳಿಸಲಾಗುತ್ತಿದ್ದು, ಸಂಬಂಧಪಟ್ಟ ಮತದಾರರು ಸೂಕ್ತ ದಾಖಲೆಗಳನ್ನು ಒದಗಿಸಿ ವಿಚಾರಣೆಗೆ ಸಹಕರಿಸಬೇಕು ಎಂದು ಮನವಿ ಮಾಡಿದರು. ಆಕ್ಷೇಪಣೆಗೆ ಅವಕಾಶ: ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತಿದ್ದು, ಸಾರ್ವಜನಿಕರು ಅಥವಾ ರಾಜಕೀಯ ಪಕ್ಷಗಳ ಮುಖಂಡರು ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಈ ಸಂದರ್ಭದಲ್ಲಿ ಪ್ರಮುಖ ರಾಜಕೀಯ ಮುಖಂಡರಾದ ರವಿ, ಹನುಮೇಶ್, ರಾಮಾಂಜಿನಪ್ಪ, ತಿಪ್ಪೇಸ್ವಾಮಿ, ಬಾಬು ಸೇರಿದಂತೆ ಇತರರು ಉಪಸ್ಥಿತರಿದ್ದರು. ಪಾವಗಡ ವರದಿ
ಪಾವಗಡದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: 11 ಹೊಸ ಮತಗಟ್ಟೆಗಳ ಸ್ಥಾಪನೆ, 1.83 ಲಕ್ಷಕ್ಕೆ ಇಳಿದ ಮತದಾರರ ಸಂಖ್ಯೆ ಪಾವಗಡದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: 11 ಹೊಸ ಮತಗಟ್ಟೆಗಳ ಸ್ಥಾಪನೆ, 1.83 ಲಕ್ಷಕ್ಕೆ ಇಳಿದ ಮತದಾರರ ಸಂಖ್ಯೆ ಪಾವಗಡ: ತಾಲೂಕಿನಲ್ಲಿ ಮತದಾರರ ಪಟ್ಟಿ ಸಮಗ್ರ ಸಂಕ್ಷಿಪ್ತ ಪರಿಷ್ಕರಣೆ ನಂತರ ಒಟ್ಟು ಮತದಾರರ ಸಂಖ್ಯೆ 1.83 ಲಕ್ಷಕ್ಕೆ ಇಳಿಕೆಯಾಗಿದ್ದು, ಸಾರ್ವಜನಿಕರ ಅನುಕೂಲಕ್ಕಾಗಿ ಹೆಚ್ಚುವರಿಯಾಗಿ 11 ಹೊಸ ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಮತದಾರರ ನೋಂದಣಾಧಿಕಾರಿ ಹಾಗೂ ವಿಶೇಷ ಭೂಸ್ವಾಧೀನಾಧಿಕಾರಿ ಮಮತಾದೇವಿ ತಿಳಿಸಿದರು. ಕರಡು ಪಟ್ಟಿ ಪ್ರಕಟಣೆ ಸಂಬಂಧ ನಡೆದ ಪರಿಶೀಲನಾ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಪಾವಗಡ ಕ್ಷೇತ್ರದಲ್ಲಿ ಒಟ್ಟು 1,98,927 ಮತದಾರರಿದ್ದರು. ಪರಿಷ್ಕರಣೆಯ ನಂತರ ಪ್ರಸ್ತುತ ಕರಡು ಪಟ್ಟಿಯಲ್ಲಿ ಮತದಾರರ ಸಂಖ್ಯೆ 1,83,312ಕ್ಕೆ ಇಳಿಕೆಯಾಗಿದೆ. ತಾಲೂಕಿನಲ್ಲಿ ಪ್ರಸ್ತುತ 240 ಮತಗಟ್ಟೆಗಳಿದ್ದು, ಹೊಸದಾಗಿ 11 ಸೇರ್ಪಡೆಯಾಗಲಿವೆ ಎಂದರು. 15,615 ಜನರ ಪರಿಶೀಲನೆ: ಪರಿಶೀಲನೆ ವೇಳೆ ಒಟ್ಟು 15,615 ಪ್ರಕರಣಗಳನ್ನು ಗುರುತಿಸಲಾಗಿದೆ. ಇದರಲ್ಲಿ ಶಾಶ್ವತವಾಗಿ ಸ್ಥಳಾಂತರಗೊಂಡವರು 9,069, ಮರಣ ಹೊಂದಿದವರು 3,703, ಮನೆಯಲ್ಲಿ ಇಲ್ಲದವರು 1,523 ಹಾಗೂ ವಿಳಾಸ ಸಿಗದವರು 9 ಜನರಿದ್ದಾರೆ. 6,342 ಮತದಾರರಿಗೆ ನೋಟಿಸ್: ಅರ್ಹತೆ ಹಾಗೂ ದಾಖಲೆಗಳ ಸ್ಪಷ್ಟತೆಗಾಗಿ ಒಟ್ಟು 6,342 ಮತದಾರರಿಗೆ ನೋಟಿಸ್ ಜಾರಿಗೊಳಿಸಲಾಗುತ್ತಿದ್ದು, ಸಂಬಂಧಪಟ್ಟ ಮತದಾರರು ಸೂಕ್ತ ದಾಖಲೆಗಳನ್ನು ಒದಗಿಸಿ ವಿಚಾರಣೆಗೆ ಸಹಕರಿಸಬೇಕು ಎಂದು ಮನವಿ ಮಾಡಿದರು. ಆಕ್ಷೇಪಣೆಗೆ ಅವಕಾಶ: ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತಿದ್ದು, ಸಾರ್ವಜನಿಕರು ಅಥವಾ ರಾಜಕೀಯ ಪಕ್ಷಗಳ ಮುಖಂಡರು ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಈ ಸಂದರ್ಭದಲ್ಲಿ ಪ್ರಮುಖ ರಾಜಕೀಯ ಮುಖಂಡರಾದ ರವಿ, ಹನುಮೇಶ್, ರಾಮಾಂಜಿನಪ್ಪ, ತಿಪ್ಪೇಸ್ವಾಮಿ, ಬಾಬು ಸೇರಿದಂತೆ ಇತರರು ಉಪಸ್ಥಿತರಿದ್ದರು. ಪಾವಗಡ ವರದಿ
- ವರಮಹಾಲಕ್ಷ್ಮಿ ಹಬ್ಬಕ್ಕೆ ಮೆರಗು: ನಟ ಚಿರಂಜೀವಿ ಹುಟ್ಟುಹಬ್ಬದ ಸವಿನೆನಪಿನಲ್ಲಿ ಪೌರಕಾರ್ಮಿಕರಿಗೆ ಸೀರೆ ವಿತರಣೆ ಪಾವಗಡ: ಸಿನಿಮಾ ನಟನೆಯನ್ನು ಮೆಚ್ಚಿ ಶಿಳ್ಳೆ, ಕೇಕೆ ಹಾಕಿ ಸಂಭ್ರಮಿಸುವುದಷ್ಟೇ ಅಲ್ಲದೆ, ನಟರು ಮಾಡುವ ಸಾಮಾಜಿಕ ಸೇವಾ ಕಾರ್ಯಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಸಮಾಜಕ್ಕೆ ನೈಜ ಒಳಿತಾಗುತ್ತದೆ ಎಂದು ಹಿರಿಯ ಪತ್ರಕರ್ತ ಹಾಗೂ ಶಮಿ ವೃಕ್ಷ ಅಭಿವೃದ್ಧಿ ಸಮಿತಿ ಟ್ರಸ್ಟ್ ಕಾರ್ಯದರ್ಶಿ ಸತ್ಯ ಲೋಕೇಶ್ ತಿಳಿಸಿದರು. ಪಟ್ಟಣದ ಬ್ರೈಟ್ ಫ್ಯೂಚರ್ ಕಂಪ್ಯೂಟರ್ ಕೇಂದ್ರದಲ್ಲಿ ಗುರುವಾರ ಆಯೋಜಿಸಿದ್ದ ತೆಲುಗು ಚಿತ್ರರಂಗದ ಮೆಗಾಸ್ಟಾರ್ ಚಿರಂಜೀವಿ ಅವರ 71ನೇ ಹುಟ್ಟುಹಬ್ಬದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಪಟ್ಟಣದ ಮಹಿಳಾ ಪೌರಕಾರ್ಮಿಕರಿಗೆ ಹಾಗೂ ಸರ್ಕಾರಿ ಆಸ್ಪತ್ರೆಯ ಸ್ವಚ್ಛತಾ ಮಹಿಳಾ ಕಾರ್ಮಿಕರಿಗೆ ಉಚಿತ ಸೀರೆಗಳನ್ನು ವಿತರಿಸುವ ಮೂಲಕ ಹಬ್ಬದ ಸಡಗರಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಮುಖ್ಯ ರೂವಾರಿ, ಸೇವಾ ಟ್ರಸ್ಟ್ನ ಅಧ್ಯಕ್ಷ ಮಾನಂ ಶಶಿಕಿರಣ್ ಮಾತನಾಡಿ, "ಚಿರಂಜೀವಿ ಅವರು ಕೇವಲ ನಟನಾಗಿ ಉಳಿಯದೆ, ಬ್ಲಡ್ ಬ್ಯಾಂಕ್ ಸ್ಥಾಪಿಸಿ ರಕ್ತದ ಅಗತ್ಯವಿರುವ ಸಾವಿರಾರು ಜನರಿಗೆ ನೆರವಾಗುವ ಮೂಲಕ ದೇಶಾದ್ಯಂತ ರಕ್ತದಾನದ ಮಹತ್ವ ಸಾರಿದ್ದಾರೆ. ಮುಂಬರುವ ವರಮಹಾಲಕ್ಷ್ಮಿ ಹಬ್ಬವನ್ನು ಬಡ ಮಹಿಳಾ ಕಾರ್ಮಿಕರು ಸಂಭ್ರಮದಿಂದ ಆಚರಿಸಲಿ ಎಂಬ ಉದ್ದೇಶದಿಂದ ಈ ಸಮಾಜ ಸೇವೆಗೆ ಮುನ್ನುಡಿ ಬರೆದಿದ್ದೇವೆ" ಎಂದರು. ವಾಲ್ಮೀಕಿ ಜಾಗೃತಿ ವೇದಿಕೆ ಅಧ್ಯಕ್ಷ ಪಾಳ್ಳೇಕಾರ ಲೋಕೇಶ್ ಮಾತನಾಡಿ, ಸೇವಾ ಟ್ರಸ್ಟ್ ವತಿಯಿಂದ ಇದುವರೆಗೆ ಸುಮಾರು 13,500 ಉಚಿತ ಕಣ್ಣಿನ ಶಸ್ತ್ರಚಿಕಿತ್ಸಾ ಶಿಬಿರಗಳನ್ನು ಏರ್ಪಡಿಸಿ ಬಡವರ ಸೇವೆ ಮಾಡುತ್ತಿರುವ ಮಾನಂ ಶಶಿಕಿರಣ್ ಅವರ ಕಾರ್ಯವನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಅಂಗನವಾಡಿಗೆ ಧನಸಹಾಯ & ಸಾಂಸ್ಕೃತಿಕ ಸಂಭ್ರಮ: ಇದೇ ವೇಳೆ ಪಟ್ಟಣದ ಆದರ್ಶ ನಗರದ ಅಂಗನವಾಡಿ ಕೇಂದ್ರದ ನವೀಕರಣಕ್ಕಾಗಿ ₹15,000 ಮೊತ್ತದ ಚೆಕ್ ಅನ್ನು ಶಿಕ್ಷಕಿ ಭೂಲಕ್ಷ್ಮಿ ಅವರಿಗೆ ಹಸ್ತಾಂತರಿಸಲಾಯಿತು. ಸುಮಾರು 100 ಮಹಿಳಾ ಕಾರ್ಮಿಕರಿಗೆ ಉಚಿತ ಸೀರೆ ವಿತರಿಸಲಾಯಿತು. ಉನ್ನತಿ ತರಬೇತಿಯ ವಿದ್ಯಾರ್ಥಿನಿಯರು ಚಿರಂಜೀವಿ ಅವರ ಜನಪ್ರಿಯ ಗೀತೆಗಳಿಗೆ ಸಖತ್ ನೃತ್ಯ ಮಾಡಿ ಸಭಿಕರನ್ನು ರಂಜಿಸಿದರು. ಅತ್ಯುತ್ತಮವಾಗಿ ನೃತ್ಯ ಪ್ರದರ್ಶಿಸಿದ ವಿದ್ಯಾರ್ಥಿಗಳಿಗೆ ಷಾ ಬಾಬು ಹಾಗೂ ಗಣ್ಯರು ನಗದು ಪುರಸ್ಕಾರ ನೀಡಿ ಪ್ರೋತ್ಸಾಹಿಸಿದರು. ಕೊನೆಯಲ್ಲಿ 71ನೇ ಹುಟ್ಟುಹಬ್ಬದ ಸಂಭ್ರಮಕ್ಕಾಗಿ ಕೇಕ್ ಕತ್ತರಿಸಿ ಶುಭಾಶಯ ಕೋರಲಾಯಿತು. ಕಾರ್ಯಕ್ರಮದಲ್ಲಿ ಚಿರಂಜೀವಿ ಅಭಿಮಾನಿಗಳಾದ ಮಾಜಿ ಪುರಸಭಾ ಸದಸ್ಯರಾದ ರಿಜ್ವಾನ್ ಹುಲ್ಲಾ, ಷಾ ಬಾಬು, ನಂದೀಶ್, ಮುತ್ಯಾಲಪ್ಪ ಹಾಗೂ ಪ್ರಮುಖರಾದ ಶ್ರೀಧರ್ ಗುಪ್ತ, ಸೋಲಾರ್ ರಾಜಶೇಖರ್ ರೆಡ್ಡಿ, ಅಮಿಲಿನೇನಿ ನರೇಶ್, ಶಾರು, ಸಂಧ್ಯಾ ಮಾನಂ, ವಿಶಾಲ್, ಪ್ರಜ್ವಲ್, ಶಿಕ್ಷಕಿ ನಳಿನಾ, ಚಂದನ, ಶಿವಕುಮಾರ್, ಹರ್ಷ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. ಪಾವಗಡ ವರದಿ1
- NICE ಸಂಸ್ಥೆ ನಡೆಸಿರುವ ಅಕ್ರಮ ಮತ್ತು ವಂಚನೆ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರಿಗೆ ದೂರು ಸಲ್ಲಿಸಿದ ಜೆಡಿಎಸ್ ನಿಯೋಗ ಬೆಂಗಳೂರು: NICE ಸಂಸ್ಥೆ ನಡೆಸಿರುವ ಅಕ್ರಮ ಮತ್ತು ವಂಚನೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಜೆಡಿಎಸ್ ನಿಯೋಗ ಇಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ಸಲ್ಲಿಸಿದರು. ಲೋಕಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿ, ಹೈಕೋರ್ಟ್ ತೀರ್ಪಿನ ಪ್ರತಿ ಸಮೇತ 5 ಪುಟಗಳ ಮನವಿ ಪತ್ರ ಸಲ್ಲಿಸಿದರು.1
- ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ.. ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು. ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ.. ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.1
- ಬಾಗೇಪಲ್ಲಿ ಶಾಸಕ ಎಸ್ಎನ್ ಸುಬ್ಬಾರೆಡ್ಡಿ ಮಾತನಾಡುತ್ತಾ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಬಾಗೇಪಲ್ಲಿ ಗುಡಿಬಂಡೆ ಚೇಳೂರು ತಾಲೂಕುಗಳ ಎಲ್ಲರಿಗೂ ನಮಸ್ಕಾರಗಳನ್ನು ತಿಳಿಸುತ್ತಾ ಪ್ರತಿ ವರ್ಷದಂತೆ ಈ ವರ್ಷವೂ ನನ್ನ ಎಸ್ ಎನ್ ಸುಬ್ಬಾರೆಡ್ಡಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದಿನಾಂಕ 26.08.2026 ರ ಬುಧವಾರ ಗಡಿದಿಂ ಶ್ರೀ ಕ್ಷೇತ್ರದಲ್ಲಿ 23 ನೇ ವರ್ಷದ ಸಾಮೂಹಿಕ ವಿವಾಹ ಕಾರ್ಯಕ್ರಮ ಮತ್ತು ತಿರುಮಲ ತಿರುಪತಿ ದೇವಸ್ಥಾನ ಟ್ರಸ್ಟ್ ವತಿಯಿಂದ ಶ್ರೀನಿವಾಸ ಕಲ್ಯಾಣೋತ್ಸವ ಹಮ್ಮಿಕೊಂಡಿದ್ದು ತಾವೆಲ್ಲರೂ ಕಾರ್ಯಕ್ರಮಕ್ಕೆ ಆಗಮಿಸಿ ವಧು ವರರನ್ನು ಆಶೀರ್ವದಿಸಿ ಕಾರ್ಯಕ್ರಮ ಯಶಸ್ವಿ ಮಾಡಲು ಕೋರುತ್ತೇನೆ ಎಂದು ತಿಳಿಸಿದರು1
- ಹಿರಿಯೂರು ತಾಲ್ಲೂಕು ಆಸ್ಪತ್ರೆಯಲ್ಲಿ ಮೊಬೈಲ್ ಕಳವು: ಸಿಸಿಟಿವಿಯಲ್ಲಿ ದೃಶ್ಯ ಸೆರೆ ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯ ಸಂಬಂಧಿಕರ ಮೊಬೈಲ್ ಫೋನನ್ನು ಕಳ್ಳನೊಬ್ಬ ಎಗರಿಸಿ ಪರಾರಿಯಾದ ಘಟನೆ ಹಿರಿಯೂರು ಸರಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಕಳೆದ ಮೂರು ದಿನಗಳ ಹಿಂದೆ ಚಿಕಿತ್ಸೆಗೆಂದು ರೋಗಿಯೊಬ್ಬರು ದಾಖಲಾಗಿದ್ರು. ರೋಗಿಯ ಸಂಬಂಧಿಗಳು ರಾತ್ರಿ ವೇಳೆ ನಿದ್ರೆಗೆ ಜಾರಿದ್ದ ವೇಳೆ ಖದೀಮ ತನ್ನ ಕೈಚಳಕ ತೋರಿದ್ದು, ಮೆಲ್ಲನೇ ಮೊಬೈಲ್ ಫೋನನ್ನ ಎತ್ತಿಕೊಂಡು ಪರಾರಿಯಾಗಿದ್ದಾನೆ. ಇನ್ನು ಕಳ್ಳನ ಖರಾಮತ್ತು ಆಸ್ಪತ್ರೆಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಹಿರಿಯೂರು ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳು ಎಷ್ಟು ಸುರಕ್ಷಿತ ಎನ್ನುವ ಚರ್ಚೆಗಳು ಪ್ರಾರಂಬವಾಗಿದ್ದು, ಸಧ್ಯ ಕಳ್ಳತನ ಘಟನೆಗಳಿಗೆ ಬ್ರೇಕ್ ಹಾಕುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಫ್ಲೋ......1
- ಈದ್ ಮಿಲಾದ್: ಶಾಂತಿ ಸುವ್ಯವಸ್ಥೆ ಕಾಪಾಡಲು ಚಳ್ಳಕೆರೆಯಲ್ಲಿ ಪೊಲೀಸರಿಂದ ಬೃಹತ್ ಪಥಸಂಚಲನ ಚಳ್ಳಕೆರೆ: ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ನಗರದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ಪೊಲೀಸ್ ಇಲಾಖೆ ವತಿಯಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಬೃಹತ್ ಪಥಸಂಚಲನ ನಡೆಸಲಾಯಿತು. ನಗರದ ಪೊಲೀಸ್ ಠಾಣೆಯ ಮುಂಭಾಗದಿಂದ ಆರಂಭವಾದ ಈ ಶಿಸ್ತುಬದ್ಧ ಪಥಸಂಚಲನವು ಚಿತ್ರದುರ್ಗ ರಸ್ತೆ, ಅಂಬೇಡ್ಕರ್ ವೃತ್ತ, ಎಸ್.ಆರ್. ರಸ್ತೆ, ಬೆಂಗಳೂರು ರಸ್ತೆ, ಬಸವೇಶ್ವರ ವೃತ್ತ, ಹಳೆನಗರದ ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಮೂಲಕ ಸಾಗಿ ಬಳ್ಳಾರಿ ರಸ್ತೆಯವರೆಗೆ ಜರುಗಿತು. ನಗರದ ಅಷ್ಟ ದಿಕ್ಕುಗಳಲ್ಲೂ ಸಂಚರಿಸಿದ ಪೊಲೀಸ್ ಪಡೆ, ಸಾರ್ವಜನಿಕರಲ್ಲಿ ಧೈರ್ಯ ಮತ್ತು ಭದ್ರತೆಯ ಭಾವನೆ ಮೂಡಿಸುವಲ್ಲಿ ಯಶಸ್ವಿಯಾಯಿತು. ಚಳ್ಳಕೆರೆ ವಿಭಾಗದ ಡಿವೈಎಸ್ಪಿ ಸತ್ಯನಾರಾಯಣ ರಾವ್ ಅವರ ನೇತೃತ್ವದಲ್ಲಿ ನಡೆದ ಈ ಪಥಸಂಚಲನದಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಕೆ. ಕುಮಾರ್, ಪಿಎಸ್ಐ ಶಿವರಾಜ್ ಸೇರಿದಂತೆ ಕೆಎಸ್ಆರ್ಪಿ , ಠಾಣೆಯ ಪೊಲೀಸ್ ಸಿಬ್ಬಂದಿ ಹಾಗೂ ಗೃಹರಕ್ಷಕ ದಳದ ಸಿಬ್ಬಂದಿ ವರ್ಗದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಹಬ್ಬದ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು. ಎಲ್ಲರೂ ಅನ್ಯೋನ್ಯತೆಯಿಂದ, ಶಾಂತಿ ಹಾಗೂ ಸೌಹಾರ್ದತೆಯಿಂದ ಈದ್ ಮಿಲಾದ್ ಹಬ್ಬವನ್ನು ಆಚರಿಸಬೇಕು,ಎಂದು ಪೊಲೀಸ್ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.1
- ಚಿತ್ರದುರ್ಗ: ಅಲೆಮಾರಿಗಳು ರಾಜಕಾರಿಗಳಿಗೆ ಮತ ಹಾಕಲು ಬೇಕು ಸೌಲಭ್ಯಗಳಿಗೆ ಬೇಡವಾಗಿದ್ದಾರೆ ಅಲೆಮಾರಿಗಳಿಗೆ ಹೆಸರಿಗಷ್ಟೆ ಶೇಕಡ 1ರಷ್ಟ ಮೀಸಲಾತಿ ನೀಡಿದ್ದು, ಅದು ಯಾರಿಗೂ ಸಿಗದಂತಾಗಿದೆ. ರಾಜಕಾರಣಿಗಳಿಗೆ ಮತ ಹಾಕಲು ಮಾತ್ರ ನಾವು ಬೇಕು, ಸೌಲಭ್ಯಕ್ಕೆ ಬೇಡ ಎನ್ನುವಂತಾಗಿದೆ ಎಂದು ಅಲೆಮಾರಿ ಬುಡಕಟ್ಟು ಮಹಾಸಭಾ ಗೌರವಾಧ್ಯಕ್ಷ ಸಚಿನ್ ಬೇಸರ ವ್ಯಕ್ತಪಡಿಸಿದರು. ಚಿತ್ರದುರ್ಗದಲ್ಲಿಂದು ಪತ್ರಿಕಾ ಗೋಷ್ಠಿಯಲ್ಲಿ ಮಾತಾಡಿ, ಸಂವಿಧಾನದಲ್ಲಿ ಕೂಡ ನಮ್ಮನ್ನು ಕಡೆಗಣಿಸಲಾಗುತ್ತಿದೆ. ಅಲೆಮಾರಿ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಪಲ್ಲವಿ ಅವರು, ಕೇವಲ ಜಿಲ್ಲಾ ಕೇಂದ್ರದಲ್ಲಿ ಪ್ರಗತಿ ಪರಿಶೀಲನೆ ನಡೆಸುವ ಬದಲು ಅಲೆಮಾರಿಗಳ ನೋವು ಸಂಕಷ್ಟಗಳನ್ನು ಅರಿಯಲು ಸ್ಥಳಗಳಿಗೆ ಬರಬೇಕು. ಸರ್ಕಾರಗಳು ಕೂಡ ಅಲೆ ಮಾರಿಗಳ ಸಮಸ್ಯೆಗಳನ್ನು ಆಲಿಸಬೇಕು. ಅಭಿವೃದ್ದಿ ನಿಗಮದಿಂದ ಸಾಲಪಡೆದು ಸಾಲಗಾರರಾಗುತ್ತಿದ್ದೇವೆಯೇ ಹೊರೆತು, ಶೈಕ್ಷಣಿಕವಾಗಿ ಅರ್ಥಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತಿಲ್ಲವೆಂದರು.1
- ಮುಂದಿನ 6 ತಿಂಗಳಲ್ಲಿ 1 ಲಕ್ಷ ಯುವಕರಿಗೆ ಸರ್ಕಾರಿ ಉದ್ಯೋಗ: ಯುಪಿ ಸಿಎಂ ಯೋಗಿ ಆದಿತ್ಯನಾಥ್ ಬೃಹತ್ ಘೋಷಣೆ ಲಖನೌ: ಉತ್ತರ ಪ್ರದೇಶದಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶುಭ ಸುದ್ದಿ ನೀಡಿದ್ದಾರೆ. ಮುಂಬರುವ ಆರು ತಿಂಗಳ ಅವಧಿಯಲ್ಲಿ ರಾಜ್ಯದ ಸುಮಾರು 1 ಲಕ್ಷ ಯುವಕರಿಗೆ ಸರ್ಕಾರಿ ನೇಮಕಾತಿ ಪತ್ರಗಳನ್ನು ವಿತರಿಸಲಾಗುವುದು ಎಂದು ಅವರು ಮಂಗಳವಾರ ನಡೆದ ಕಾರ್ಯಕ್ರಮವೊಂದರಲ್ಲಿ ಪ್ರಕಟಿಸಿದ್ದಾರೆ. ಈ ಪ್ರಕ್ರಿಯೆಯನ್ನು ಪ್ರತಿ ವಾರ ಹಂತ-ಹಂತವಾಗಿ (ಬ್ಯಾಚ್ಗಳಲ್ಲಿ) ಕೈಗೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ. ನೇಮಕಾತಿ ಪತ್ರ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ತಮ್ಮ ಆಡಳಿತಾವಧಿಯ ಪಾರದರ್ಶಕತೆ ಹಾಗೂ ಸಾಧನೆಗಳನ್ನು ಎತ್ತಿಹಿಡಿಯುವುದರ ಜೊತೆಗೆ 2017 ಕ್ಕೂ ಮುಂಚಿನ ನೇಮಕಾತಿ ವ್ಯವಸ್ಥೆಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. **ಸುದ್ದಿಯ ಪ್ರಮುಖ ಅಂಶಗಳು:** * **1 ಲಕ್ಷ ಹೊಸ ಉದ್ಯೋಗ ಪತ್ರ:** ಮುಂದಿನ 6 ತಿಂಗಳಲ್ಲಿ 1,00,000 ಅರ್ಹ ಯುವಕರಿಗೆ ನಿಯಮಿತವಾಗಿ ಬ್ಯಾಚ್ಗಳ ಮೂಲಕ ನೇಮಕಾತಿ ಆದೇಶಗಳನ್ನು ನೀಡಲು ಸರ್ಕಾರ ಯೋಜಿಸಿದೆ. * **9.30 ಲಕ್ಷ ಉದ್ಯೋಗಗಳ ಸಾಧನೆ:** ಕಳೆದ ಒಂಬತ್ತೂವರೆ ವರ್ಷಗಳ ‘ಡಬಲ್-ಎಂಜಿನ್’ ಬಿಜೆಪಿ ಸರ್ಕಾರವು 9.30 ಲಕ್ಷಕ್ಕೂ ಹೆಚ್ಚು ಯುವಕರಿಗೆ ಪಾರದರ್ಶಕವಾಗಿ ಸರ್ಕಾರಿ ಉದ್ಯೋಗ ಒದಗಿಸಿದೆ. ಈ ಪೈಕಿ ಒಂದೇ ಒಂದು ನೇಮಕಾತಿಯೂ ನ್ಯಾಯಾಲಯದಲ್ಲಿ ಪ್ರಶ್ನೆಗೊಳಗಾಗಿಲ್ಲ ಎಂದು ಸಿಎಂ ಪ್ರತಿಪಾದಿಸಿದರು. * **ಹಿಂದಿನ ವ್ಯವಸ್ಥೆಗೆ ವೀಟೋ:** 2017 ಕ್ಕೂ ಮೊದಲು ರಾಜ್ಯದಲ್ಲಿ ಸ್ವಜನಪಕ್ಷಪಾತ, ಭ್ರಷ್ಟಾಚಾರ ಹಾಗೂ 'ಕುಲ ಆಡಳಿತ' ತಾಂಡವವಾಡುತ್ತಿತ್ತು. ಇದರಿಂದಾಗಿ ಅರ್ಹ ಯುವಕರು ಕೆಲಸವಿಲ್ಲದೆ ಅಲೆಯಬೇಕಾಯಿತು ಮತ್ತು ಅಂತಿಮವಾಗಿ ನ್ಯಾಯಾಲಯಗಳು ತಡೆಯಾಜ್ಞೆ ನೀಡುವ ಪರಿಸ್ಥಿತಿ ನಿರ್ಮಾಣವಾಗಿತ್ತು ಎಂದು ಯೋಗಿ ಆದಿತ್ಯನಾಥ್ ಟೀಕಿಸಿದರು. * **ಅಕ್ರಮವೆಸಗುವವರ ವಿರುದ್ಧ ಶೂನ್ಯ ಸಹಿಷ್ಣುತೆ:** ನೇಮಕಾತಿ ಮಂಡಳಿಗಳು ಹಾಗೂ ಸರ್ಕಾರಿ ಯಂತ್ರದಲ್ಲಿದ್ದ ಭ್ರಷ್ಟರನ್ನು ತಳೆದುಹಾಕಲಾಗಿದೆ. ಪರೀಕ್ಷಾ ಅಕ್ರಮಗಳಲ್ಲಿ ತೊಡಗುವ 'ವಂಚನೆ ಮಾಫಿಯಾ' ಮತ್ತು ಕಿಂಗ್ಪಿನ್ಗಳ ಬೆನ್ನುಮೂಳೆ ಮುರಿಯಲು ಸರ್ಕಾರ ‘ಶೂನ್ಯ ಸಹಿಷ್ಣುತೆ’ ನೀತಿಯಡಿ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಅವರು ಎಚ್ಚರಿಸಿದರು. ಯುವಕರ ಪ್ರತಿಭೆ ಮತ್ತು ಶಕ್ತಿಯನ್ನು ತಾರತಮ್ಯವಿಲ್ಲದೆ ಬಳಸಿಕೊಂಡಾಗ ಇಡೀ ರಾಜ್ಯವು ಅಭಿವೃದ್ಧಿಯತ್ತ ಸಾಗುತ್ತದೆ ಎಂದು ಪ್ರತಿಪಾದಿಸಿದ ಮುಖ್ಯಮಂತ್ರಿಗಳು, ಅರ್ಹತೆಗೆ ಆದ್ಯತೆ ನೀಡುವುದೇ ತಮ್ಮ ಸರ್ಕಾರದ ಮುಖ್ಯ ಉದ್ದೇಶ ಎಂದಿದ್ದಾರೆ.1