Shuru
Apke Nagar Ki App…
ವಂದೇ ಮಾತರಂ ಗೀತೆ ವಿವಾದ: ನಗರದಲ್ಲಿ ಬಿಜೆಪಿ ಕಾರ್ಯಕರ್ತರು ವಂದೇ ಮಾತರಂ ಗೀತೆ ಹಾಡಿ ಡಿಸಿಗೆ ದೂರು ಸಲ್ಲಿಕೆ ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡಬೇಕು. ಗೀತೆಯನ್ನು ಅರ್ಧಕ್ಕೆ ಮೊಟಕುಗೊಳಿಸುವುದಕ್ಕೆ ವಿರೋಧವಿದೆ ಎಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ಮುಖಂಡರು ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದರು. ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಬಿಜೆಪಿ ಕಾರ್ಯಕರ್ತರು ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡಿ ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಲು ಮುಂದಾದರು. ಈ ವೇಳೆ ಪೊಲೀಸರು ಅವರನ್ನು ತಡೆದರು. ಡಿಸಿ ಕಚೇರಿಗೆ ತೆರಳಲು ಪೊಲೀಸರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಪೊಲೀಸರ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡಬೇಕು ಎಂಬ ಆಗ್ರಹದೊಂದಿಗೆ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಲು ಮುಂದಾದರು.
ಚಾಮರಾಜನಗರ ಸುದ್ದಿ ಮನೆ
ವಂದೇ ಮಾತರಂ ಗೀತೆ ವಿವಾದ: ನಗರದಲ್ಲಿ ಬಿಜೆಪಿ ಕಾರ್ಯಕರ್ತರು ವಂದೇ ಮಾತರಂ ಗೀತೆ ಹಾಡಿ ಡಿಸಿಗೆ ದೂರು ಸಲ್ಲಿಕೆ ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡಬೇಕು. ಗೀತೆಯನ್ನು ಅರ್ಧಕ್ಕೆ ಮೊಟಕುಗೊಳಿಸುವುದಕ್ಕೆ ವಿರೋಧವಿದೆ ಎಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ಮುಖಂಡರು ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದರು. ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಬಿಜೆಪಿ ಕಾರ್ಯಕರ್ತರು ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡಿ ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಲು ಮುಂದಾದರು. ಈ ವೇಳೆ ಪೊಲೀಸರು ಅವರನ್ನು ತಡೆದರು. ಡಿಸಿ ಕಚೇರಿಗೆ ತೆರಳಲು ಪೊಲೀಸರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಪೊಲೀಸರ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡಬೇಕು ಎಂಬ ಆಗ್ರಹದೊಂದಿಗೆ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಲು ಮುಂದಾದರು.
More news from ಕರ್ನಾಟಕ and nearby areas
- ನರೇಂದ್ರಮೋದಿ ಹುಟ್ಟುಹಬ್ಬ: ಪೌರಕಾರ್ಮಿಕರಿಗೆ ಗೌರವ ಸಮರ್ಪಣೆ, ಸೀರೆ, ಸಿಹಿ ವಿತರಣೆ ವರದಿ: ಹೊಮ್ಮನಂಜುಂಡನಾಯಕ ನರೇಂದ್ರಮೋದಿ ಹುಟ್ಟುಹಬ್ಬ: ಪೌರಕಾರ್ಮಿಕರಿಗೆ ಗೌರವ ಸಮರ್ಪಣೆ, ಸೀರೆ, ಸಿಹಿ ವಿತರಣೆ ಚಾಮರಾಜನಗರ: ಪ್ರಧಾನಮಂತ್ರಿ ನರೇಂದ್ರಮೋದಿಯವರ 76ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಅಭಿಮಾನಿ ಬಳಗ ಹಾಗೂ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಶಿವುವಿರಾಟ್, ಬಿಜೆಪಿ ಕಾರ್ಯಕರ್ತರ ವತಿಯಿಂದ ನಗರದಲ್ಲಿ ಪೌರಕಾರ್ಮಿಕ ಮಹಿಳೆಯನ್ನು ಸನ್ಮಾನಿಸಿ, ಸೀರೆ, ಸಿಹಿ ವಿತರಿಸಲಾಯಿತು. ಇದಕ್ಕೂ ಮೊದಲು ನಗರದ ಮುದುಕುಮಾರಮ್ಮ ದೇವಸ್ಥಾನದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಶಿವುವಿರಾಟ್ ಅವರ ನೇತೃತ್ವದಲ್ಲಿ ಮೋದಿಯವರ ಹೆಸರಿನಲ್ಲಿ ಆರ್ಚನೆ ಮಾಡಿಸಿ... ವಿಶೇಷಪೂಜೆ ಸಲ್ಲಿಸಲಾಯಿತು. ಪೂಜಾ ಕಾರ್ಯ ನೆರವೇರಿಸಿದ ಆಗಮಿಕ ಪ್ರದೀಪ್ ಕುಮಾರ್ ದೀಕ್ಷಿತ್ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರಮೋದಿಯವರ ಜನ್ಮದಿನದ ಅಂಗವಾಗಿ ಶಿವುವಿರಾಟ್ ಅವರು ಸಮಾಜಮುಖಿ ಚಿಂತನೆಗಳೊಂದಿಗೆ ಅರ್ಥಪೂರ್ಣವಾಗಿ ಆಚರಣೆ ಮಾಡುತಿದ್ದಾರೆ. ಈ ಭೂಮಿಗೆ ಅನೇಕ ಮಹನೀಯರು ತಮ್ಮ ಕೊಡುಗೆ ನೀಡಿದ್ದಾರೆ. ಬಹಳ ವಿಶಿಷ್ಠ ವ್ಯಕ್ತಿತ್ವಯುಳ್ಳ ವ್ಯಕ್ತಿ ನರೇಂದ್ರಮೋದಿಯವರು, ಅವರು ದೇಶದ ಪ್ರಧಾನಿಗಳಾಗಿ ಅವರು ಆಯ್ಕೆಯಾದ ಮೇಲೆ ರಾಷ್ಟ್ರದ ಚಿಂತನೆಯಲ್ಲಿ ದೇಶ ಕಂಡಂತಹ ಅನೇಕ ಪ್ರಧಾನಿಗಳಲ್ಲಿ ನರೇಂದ್ರಮೋದಿಯವರು ಅಗ್ರಗಣ್ಯರು ಎಂದರು. ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನ್ ಕುಮಾರ್ ಮಾತನಾಡಿ, ನರೇಂದ್ರಮೋದಿಯವರು ಮುಖ್ಯಮಂತ್ರಿಯಾಗಿ, ಪ್ರಧಾನಮಂತ್ರಿಯಾಗಿ ಇಂದು ದೇಶದಲ್ಲಿ ಕಾರ್ಯಕ್ರಮಗಳು ನಡೆಯುತ್ತಿದೆ. ನರೇಂದ್ರಮೋದಿಯವರು ಸೃಚ್ಚಭಾರತ್ ಮಿಷನ್ ಯೋಜನೆಯಡಿಯಲ್ಲಿ ಶೌಚಾಲಯ ನಿರ್ಮಾಣ ಮಾಡಿದರು. ಜಲಜೀವನ್ ಮಿಷನ್ ಯೋಜನೆಯಡಿ ಮನೆಮನೆಗೆ ನಳ ಸೌಲಭ್ಯ ಕಲ್ಪಿಸಿದರು. ಉಜ್ವಲ ಯೋಜನೆಯಡಿಯಲ್ಲಿ ಉಚಿತ ಅನಿಲ ಸಂಪರ್ಕ ಕಲ್ಪಿಸಿದರು. ಉತ್ತ ಮ ರಸ್ತೆಗಳ ನಿರ್ಮಾಣ, ದೊಡ್ಡದೊಡ್ಡ ಸೇತುವೆ ನಿರ್ಮಾಣ ಮಾಡಿದರು. ಗ್ರಾಮೀಣ ಭಾಗದ ಅಭಿವೃದ್ಧಿಗೆ ಒತ್ತು ನೀಡಿದ್ದರು. ಅಲ್ಲದೆ ದೇಶದ ಪ್ರಗತಿಗಾಗಿ ಒತ್ತು ನೀಡಿದ್ದಾರೆ. ಎಂದರು. ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ. ಎಂ.ರಾಮಚಂದ್ರ ಮಾತನಾಡಿ, ನರೇಂದ್ರಮೋದಿಯವರ ಆಡಳಿತದ ಅವಧಿಯಲ್ಲಿ ದೇಶ ಸುಭದ್ರವಾಗಿದೆ. ಯಾವುದೇ ಆರ್ಥಿಕ ಸಮಸ್ಯೆ. ಇಲ್ಲದೆ ಭಾರತವನ್ನು ಇಡೀ ವಿಶ್ವಕ್ಕೆ ಕೊಂಡೊಯ್ಯುವ ಕೆಲಸವನ್ನು ನರೇಂದ್ರಮೋದಿಯವರು ಮಾಡಿದ್ದಾರೆ ಎಂದರು. ಕಾರ್ಯಕ್ರಮದ ಆಯೋಜಕ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಶಿವುವಿರಾಟ್ ಮಾತನಾಡಿ, ಪ್ರಧಾನಿಮಂತ್ರಿ ನರೇಂದ್ರಮೋದಿ ಅವರು ಪೌರಕಾರ್ಮಿಕರ ಪಾದಗಳನ್ನು ತೊಳೆದು, ಒರೆಸಿ ಗೌರವಿಸಿದರು. ಅವರ ಹುಟ್ಟುಹಬ್ಬದ ಅಂಗವಾಗಿ ಅವರ ಅಭಿಮಾನಿ ಬಳಗ, ಬಿಜೆಪಿ ಕಾರ್ಯಕರ್ತರು ಸೇರಿ ನಗರದ ಮುದುಕುಮಾರಮ್ಮ ದೇವಸ್ಥಾನದಲ್ಲಿ ವಿಶೇಷಪೂಜೆ ಸಲ್ಲಿಸಿ, ಪೌರಕಾರ್ಮಿಕರ ಮಹಿಳೆಯರನ್ನು ಸನ್ಮಾನಿಸಿ, ಸೀರೆ ವಿತರಣೆ ಮಾಡುವ ಮೂಲಕ ಮೋದಿಯವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಗಿದೆ ಎಂದರು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಪ್ರೊ.ಕೆ.ಆರ್.ಮಲ್ಲಿ ಕಾರ್ಜುನಪ್ಪ, ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ, ಕಾಡಾ ಮಾಜಿ ಅಧ್ಯಕ್ಷ ನಿಜಗುಣರಾಜು, ಎಸ್ಟಿ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಜಯಸುಂದರ್, ಡಾ.ಎ.ಆರ್.ಬಾಬು, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷರಾದ ಆರ್.ಸುಂದರ್, ನಾರಾಯಣಪ್ರಸಾದ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ವೃಷಬೇಂದದ್ರಪ್ಪ, ಜಿಲ್ಲಾ ವಕ್ತಾರ ಮನೋಜ್ಪಟೇಲ್, ಮೂಡ್ಲು ಪುರ ನಂದೀಶ್, ಶ್ರೀನಿವಾಸಗೌಡ, ನಗರಸಭಾ ಮಾಜಿ ಸದಸ್ಯರಾದ ರಾಜೇಶ್, ಶಿವಣ್ಣ, ಜಿಲ್ಲಾ ಕಾರ್ಯದರ್ಶಿನಟರಾಜು, ಆನಂದ್ ಭಗೀರಥ, ರವಿ, ನಾಗೇಂದ್ರ, ಆಟೋ ಮಹೇಶ್, ಕೃಷ್ಣ, ಚಂದ್ರಶೇಖರ್, ಪ್ರದೀಪ್, ರಾಕೇಶ್, ಮಣಿಕಂಠ, ಮನು, ಅರುಣ್, ಪ್ರಸನ್ನ, ಭಾನು, ಟಗರುಶಿವ, ಕುಮಾರ್, ಕಿಲಗೆರೆಶಿವು, ರಾಮಸಮುದ್ರಶಿವು, ವೆಂಕಟೇಶ್, ಪುರುಷೋತ್ತಮ . ಫೃಥ್ವಿ, ಕಿರಣ ಇತರರು ಹಾಜರಿದ್ದರು.4
- ವಂದೇ ಮಾತರಂ ಗೀತೆ ವಿವಾದ: ನಗರದಲ್ಲಿ ಬಿಜೆಪಿ ಕಾರ್ಯಕರ್ತರು ವಂದೇ ಮಾತರಂ ಗೀತೆ ಹಾಡಿ ಡಿಸಿಗೆ ದೂರು ಸಲ್ಲಿಕೆ ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡಬೇಕು. ಗೀತೆಯನ್ನು ಅರ್ಧಕ್ಕೆ ಮೊಟಕುಗೊಳಿಸುವುದಕ್ಕೆ ವಿರೋಧವಿದೆ ಎಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ಮುಖಂಡರು ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದರು. ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಬಿಜೆಪಿ ಕಾರ್ಯಕರ್ತರು ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡಿ ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಲು ಮುಂದಾದರು. ಈ ವೇಳೆ ಪೊಲೀಸರು ಅವರನ್ನು ತಡೆದರು. ಡಿಸಿ ಕಚೇರಿಗೆ ತೆರಳಲು ಪೊಲೀಸರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಪೊಲೀಸರ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡಬೇಕು ಎಂಬ ಆಗ್ರಹದೊಂದಿಗೆ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಲು ಮುಂದಾದರು.1
- ಇತ್ತೀಚಿನ ಮಳೆಗೆ ಶಾಲೆಯ ಮೇಲ್ಚಾವಣಿ ಕುಸಿತ ಆತಂಕದಲ್ಲಿ ಶಾಲಾ ಮಕ್ಕಳು ಚಾಮರಾಜನಗರ:ಉನ್ನತಿಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಸಣಾಪುರ ಇಲ್ಲಿನ ಶಾಲಾ ಕೊಠಡಿ ಹಳೆಯದಾಗಿದ್ದು ಇತ್ತೀಚಿಗೆ ಸುರಿಯುತ್ತಿರುವ ಬಾರಿಮಳೆಗೆ ಕೊಠಡಿಯ ಮೇಲ್ಚಾವಣಿ ಕುಸಿಯುತ್ತಿದ್ದು ಶಾಲಾ ಮಕ್ಕಳು ಮತ್ತು ಶಿಕ್ಷಕರು ಆತಂಕದಲ್ಲಿ ಶಾಲೆಯನ್ನು ಮುಂದುವರಿಸಬೇಕಾಗಿದೆ ಕಳೆದ ಬಾರಿಯು ಕೂಡ ಸಂಬಂಧಪಟ್ಟ ಇಲಾಖೆಗೆ ತಮ್ಮ ಸಮಸ್ಯೆಯನ್ನು ಹೇಳಿದರು ಕೂಡ ಇಲಾಖೆ ನಿರ್ಲಕ್ಷಯನ್ನು ತೂರುತ್ತಿದೆ. ಶಾಲೆಯಲ್ಲಿ ಮಕ್ಕಳ ಸಂಖ್ಯೆ ಹೆಚ್ಚಾಗಿದ್ದು ಶಿಕ್ಷಕರ ಕೊರತೆಯನ್ನು ನಿವಾರಿಸಲು ಇಲಾಖೆಯು ಮೀನಾಮೇಶ ಎನಿಸುತ್ತಿದೆ. ಕಳೆದ ಬಾರಿಯಿಂದಲೂ ಕೂಡ ಶಿಕ್ಷಕರ ಕೊರತೆ ಇದ್ದ ಮಕ್ಕಳ ಸಂಖ್ಯಾ ಶೇಕಡಾ ವಾರು ಶಿಕ್ಷಕರನ್ನು ಆಯೋಜನೆ ಮಾಡುವುದರಲ್ಲಿ ಸಂಬಂಧ ಪಟ್ಟ ಅಧಿಕಾರಿಯು ನಿರ್ಲಕ್ಷವನ್ನು ತೂರುತಿದ್ದಾರೆ ಎಂದು sdmc ಕಮಿಟಿಯ ಸದಸ್ಯರಾದ ಶಿವಕುಮಾರ. ಎನ್ ರವರು ದೂರಿನಲ್ಲಿ ತಿಳಿಸಿರುತ್ತಾರೆ.3
- ಯಳಂದೂರು ಪಟ್ಟಣದಲ್ಲಿ ವಿಶ್ವಕರ್ಮ ಜಯಂತಿ ಕಾರ್ಯಕ್ರಮ ಸರಳ ಆಚರಣೆ . ಯಳಂದೂರು ನ್ಯೂಸ್ ವರದಿ. ಎಸ್. ಪುಟ್ಟಸ್ವಾಮಿಹೊನ್ನೂರು ಯಳಂದೂರು ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಯಳಂದೂರು ತಾಲೂಕು ಆಡಳಿತ, ರಾಷ್ಟ್ರೀಯ ಹಬ್ಬಗಳ ಆಚನ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ ಶ್ರೀ ವಿಶ್ವಕರ್ಮ ಜಯಂತಿ ಸಮಾರಂಭದ ಕಾರ್ಯಕ್ರಮದಲ್ಲಿ ಗಣ್ಯರು ವಿಶ್ವಕರ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು ನಂತರ ಮುಖ್ಯ ಭಾಷಣಕಾರರಾಗಿ ಭಾಗವಹಿಸಿದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕರಾದ ಎಸ್ ಪುಷ್ಪಲತಾ ರವರು ಮಾತನಾಡಿ ವಿಶ್ವಕರ್ಮ ಜಯಂತಿ ಒಂದು ಜನಾಂಗಕ್ಕೆ ಸೀಮಿತವಾಗಿರುವುದು ದುರಂತ ಕಲೆ, ವಾಸ್ತುಶಿಲ್ಪ ಕ್ಷೇತ್ರಕ್ಕೆ ವಿಶ್ವಕರ್ಮ ಸಮುದಾಯದ ಕೊಡುಗೆ ಅಪಾರವಾದುದ್ದು ವಿಶ್ವಕರ್ಮ ಸಮುದಾಯವು ಕಲೆ ಮತ್ತು ವಾಸ್ತುಶಿಲ್ಪ ಕ್ಷೇತ್ರಕ್ಕೆ ಅವಿಸ್ಮರಣೀಯ ಕೊಡುಗೆ ನೀಡಿದೆ ಪ್ರತಿನಿತ್ಯ ಜನರು ಬಳಸುವ ಕರಕುಶಲ ಸಾಮಗ್ರಿಗಳು, ಲೋಹ, ಕಬ್ಬಿಣ, ದೇವರ ವಿಗ್ರಹ, ಚಿತ್ರಪಟಗಳು, ಗೃಹಬಳಕೆ ವಸ್ತುಗಳು, ಸ್ಮಾರಕಗಳ ನಿರ್ಮಾಣದ ಕಾರ್ಯದಲ್ಲಿ ವಿಶ್ವಕರ್ಮರ ಕಲೆಯ ಜೀವಂತಿಕೆಯ ಅಸ್ತಿತ್ವವನ್ನು ಇಂದಿಗೂ ಉಳಿಸಿರುವುದೇ ಸಾಕ್ಷಿ. ಲೋಕವನ್ನು ವೈಭವೀಕರಿಸುವ ಸಾಂಸ್ಕೃತಿಕ ಪರಂಪರೆ, ಕಲೆ ಮತ್ತು ವಾಸ್ತಶಿಲ್ಪ ಕ್ಷೇತ್ರಕ್ಕೆ ವಿಶ್ವಕರ್ಮರ ಕೊಡುಗೆ ಅಪಾರವಾಗಿದೆ’ ‘ವಿಶ್ವಕರ್ಮ ಸಮುದಾಯಕ್ಕೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ತಲುಪಿಸಲು ಪೂರಕವಾದ ವ್ಯವಸ್ಥೆ ಕಲ್ಪಿಸಿದಲ್ಲಿ ಸಮುದಾಯವು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯ’ ಎಂದು ಅದರಿಂದ ಪ್ರತಿಯೊಬ್ಬ ನಾಗರಿಕರು ವಿಶ್ವಕರ್ಮರ ಆದರ್ಶ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ದೇಶದ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ತಿಳಿಸಿದರು. ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಜಿಲ್ಲಾಧ್ಯಕ್ಷರಾದ ಹೆಚ್. ವಿ . ಚಂದ್ರು, ತಾಲೂಕು ಗ್ಯಾರೆಂಟಿ ಯೋಜನೆ ಅಧ್ಯಕ್ಷರಾದ ಪ್ರಭು ಪ್ರಸಾದ್, ತಹಸಿಲ್ದಾರ್ ಎಸ್. ಎಲ್ ನಯನ ಸಮಾರಂಭವನ್ನು ಉದ್ದೇಶಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ವಿಶ್ವಕರ್ಮ ಸಮಾಜದ ತಾಲೂಕ ಅಧ್ಯಕ್ಷ ನಾಗರಾಜು, ಪಟ್ಟಣ ಪಂಚಾಯಿತಿ ಪ್ರಭಾರ ಮುಖ್ಯ ಅಧಿಕಾರಿ ಮಹದೇವ ನಾಯಕ, ಕೃಷಿ ಇಲಾಖೆ ಸಹಾಯಕ ನಿರ್ದೇಶಕರಾದ ಅಮೃತೇಶ್, ಶಿಕ್ಷಣ ಇಲಾಖೆ ಬಿ ಆರ್ ಪಿ ರೇಚಣ್ಣ, ಶಿವಣ್ಣಚಾರಿ ತಾಲೂಕಿನ ವಿಶ್ವಕರ್ಮ ಸಮಾಜದ ಮುಖಂಡರು, ಯುವಕರು, ವಿವಿಧ ಇಲಾಖೆ ಅಧಿಕಾರಿಗಳು ಸಾರ್ವಜನಿಕರು ಭಾಗವಹಿಸಿದ್ದರು.1
- ಜೆಸ್ಕಾಂ ಕಚೇರಿ ಮುಂದೆ ಕೃಷಿಕಂಸೆಟ್ಗಳಿಗೆ ಸಮರ್ಪಕ ವಿದ್ಯುತ್ ನೀಡುವಂತೆ ಒತ್ತಾಯಿಸಿ ರೈತರ ಪ್ರತಿಭಟನೆ ಟಿ. ನರಸೀಪುರ ಅಸಮರ್ಪಕ ವಿದ್ಯುತ್ ಪೂರೈಕೆ: ರೈತರು ಸಂಕಷ್ಟದಲ್ಲಿ. ಟಿ. ನರಸೀಪುರ: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕೃಷಿ ಪಂಪ್ಸೆಟ್ಗಳಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆಯಾಗದೆ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ವಿದ್ಯುತ್ ಪೂರೈಕೆಯಲ್ಲಿ ಪದೇಪದೇ ವ್ಯತ್ಯಯ ಉಂಟಾಗುತ್ತಿರುವುದರಿಂದ ನೀರಾವರಿ ವ್ಯವಸ್ಥೆಗೆ ತೊಂದರೆಯಾಗಿದ್ದು, ಹೊಲಗಳಲ್ಲಿ ಬೆಳೆದಿರುವ ಬೆಳೆಗಳು ನೀರಿನ ಕೊರತೆಯಿಂದ ಒಣಗುವ ಆತಂಕ ಎದುರಾಗಿದೆ. ಕೃಷಿ ಪಂಪ್ಸೆಟ್ಗಳಿಗೆ ನಿಗದಿತ ಸಮಯದಲ್ಲಿ ಸಮರ್ಪಕ ವೋಲ್ಟೇಜ್ನೊಂದಿಗೆ ವಿದ್ಯುತ್ ಪೂರೈಕೆ ಮಾಡದಿರುವುದರಿಂದ ಮೋಟಾರ್ಗಳನ್ನು ಚಾಲನೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ. ಈಗಾಗಲೇ ಬೆಳೆಗಳಿಗೆ ಸಾಕಷ್ಟು ಖರ್ಚು ಮಾಡಿರುವ ರೈತರಿಗೆ ವಿದ್ಯುತ್ ಸಮಸ್ಯೆ ಮತ್ತಷ್ಟು ಆರ್ಥಿಕ ಹೊರೆ ತಂದಿದೆ. ವಿದ್ಯುತ್ ಸಮಸ್ಯೆಯಿಂದ ಬೆಳೆ ಹಾನಿಯಾದರೆ ರೈತರ ಪರಿಸ್ಥಿತಿ ಮತ್ತಷ್ಟು ದುಸ್ತರವಾಗಲಿದೆ. ಕೃಷಿ ಪಂಪ್ಸೆಟ್ಗಳಿಗೆ ನಿಗದಿತ ಸಮಯದಲ್ಲಿ ನಿರಂತರ ಹಾಗೂ ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕು. ವಿದ್ಯುತ್ ಲೈನ್ಗಳು, ಟ್ರಾನ್ಸ್ಫಾರ್ಮರ್ಗಳು ಹಾಗೂ ಇತರೆ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣವೇ ಸರಿಪಡಿಸಿ ರೈತರ ಬೆಳೆಗಳನ್ನು ರಕ್ಷಿಸಲು ಕ್ರಮ ಕೈಗೊಳ್ಳಬೇಕು ಎಂದು ರೈತರು ಒತ್ತಾಯಿಸಿದ್ದಾರೆ. ಸಂಬಂಧಪಟ್ಟ ವಿದ್ಯುತ್ ಇಲಾಖೆ ಅಧಿಕಾರಿಗಳು ತುರ್ತಾಗಿ ಸಮಸ್ಯೆ ಪರಿಹರಿಸಿ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂಬುದು ರೈತರ ಆಗ್ರಹವಾಗಿದೆ. ರೈತರ ಬೆಳೆ ಉಳಿಸಲು ವಿದ್ಯುತ್ ಪೂರೈಕೆ ಸಮರ್ಪಕವಾಗಲಿಯಂದು ರೈತರ ಒತ್ತಾಯ . ಈ ಪ್ರತಿಭಟನೆಯಲ್ಲಿ ಕಿರಗುಸೂರು ಶಂಕರ್ ಕೆಜಿ ಗುರುಸ್ವಾಮಿ ಕುರುಬುರ್ ಗೌರಿಶಂಕರ್ ವಾಚ್ ಕುಮಾರ್ ಆದಿ ಬೆಟ್ಟಳ್ಳಿ ನಂಜುಂಡಸ್ವಾಮಿ ಅಪ್ಪಣ್ಣ ಕುರುಬೂರು ಸಿದ್ದೇಶ್, ಬಿಪಿ ಪರಶಿವಮೂರ್ತಿ, ಕರುವಟಿ ಉಮೇಶ್ ಕುರುಬೂರ ಪ್ರದೀಪ್ ಸೋಮಶೇಖರ್ ಬನ್ನಳ್ಳಿ ಹುಂಡಿ ರಾಜೇಂದ್ರ ನಿಲ್ಸೋಗೆ ಉಮೇಶ್ ಪ್ರತಾಪ್, ಕುಮಾರ್ ಕೆ ಎಂ, ವಾಟಾಳ್ ಪುರ ಸತೀಶ್ ಕುಮಾರ್ ಹೊಸಪುರ ನಾಗರಾಜು ಮಾದೇಶ್ ಮಾದೇವಮೂರ್ತಿ ಬಸವರಾಜು ಎಸ್ ಕೆಬ್ಬೆ ಹುಂಡಿ, ಮಾದೇವಸ್ವಾಮಿ ಮಾವ್ನಹಳ್ಳಿ, ತರಕಾರಿ ನಿಂಗರಾಜು ಬನ್ನಳ್ಳಿ ಶಾಂತರಾಜು ಆದಿ ಬೆಟ್ಟಳ್ಳಿ ಮಹೇಶ ಕನ್ನಳ್ಳಿ ಮೊಳೆ ಮಣಿಕಂಠ ಲೋಕೇಶ್ ರವೀಂದ್ರ ಮಾದೇಶ್ ನಿಲ್ಸೋಗೆ ನಾಗರಾಜು ಚಿನ್ನಸ್ವಾಮಿ ಕುರುಬೂರು ಶಿವಪ್ರಸಾದ್ ವೀರೇಶ್ ಎಲ್ ಐ ಸಿ ಪ್ರದೀಪ್ ಎಬಿ ಮಂಜುನಾಥ್ ನವೀನ ತೊಟ್ಟುವಾಡಿ ಇನ್ನು ಮುಂತಾದ ರೈತರು ಭಾಗವಹಿಸಿದ್ದರು1
- ಚಂಗವಾಡಿ ಗ್ರಾಮದಲ್ಲಿ ಹೊಸ ಸೇತುವೆ ಕಾಮಗಾರಿ: ಪ್ರವಾಹಕ್ಕೆ ಕೊಚ್ಚಿಹೋಗಿದ್ದ ತಾತ್ಕಾಲಿಕ ಸೇತುವೆ ಜೆಸಿಬಿ ಮೂಲಕ ದುರಸ್ತಿ, ಸಂಚಾರ ಸುಗಮ ಹನೂರು: ತಾಲ್ಲೂಕಿನ ಚಂಗವಾಡಿ ಗ್ರಾಮದ ಬಳಿ ಹೊಸ ಸೇತುವೆ ನಿರ್ಮಾಣ ಹಾಗೂ ದುರಸ್ತಿ ಕಾಮಗಾರಿ ಪ್ರಗತಿಯಲ್ಲಿದ್ದು, ಈ ವೇಳೆ ಪ್ರವಾಹದ ನೀರಿಗೆ ಕೊಚ್ಚಿಹೋಗಿದ್ದ ತಾತ್ಕಾಲಿಕ ಸೇತುವೆಯನ್ನು ಜೆಸಿಬಿ ಯಂತ್ರದ ಮೂಲಕ ಸರಿಪಡಿಸಿ ಸಾರ್ವಜನಿಕರ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಚಂಗವಾಡಿ ಗ್ರಾಮದ ಬಳಿ ಹೊಸ ಸೇತುವೆ ಕಾಮಗಾರಿ ನಡೆಯುತ್ತಿದ್ದು, ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಪಕ್ಕದಲ್ಲೇ ತಾತ್ಕಾಲಿಕ ಬದಲಿ ಮಾರ್ಗವನ್ನು ವ್ಯವಸ್ಥೆ ಮಾಡಲಾಗಿತ್ತು. ಆದರೆ, ಅನಿರೀಕ್ಷಿತವಾಗಿ ನೀರಿನ ರಭಸ ಹೆಚ್ಚಾದ ಕಾರಣ ತಾತ್ಕಾಲಿಕ ಸೇತುವೆಯು ಕೊಚ್ಚಿಹೋಗಿ ಸಂಪರ್ಕ ಕಡಿತಗೊಂಡಿತ್ತು. ಇದರಿಂದಾಗಿ ದ್ವಿಚಕ್ರ ವಾಹನ ಸವಾರರು ಹಾಗೂ ಸ್ಥಳೀಯರು ಓಡಾಟ ನಡೆಸಲು ಪರದಾಡುವಂತಾಯಿತು. ಜೆಸಿಬಿ ಮೂಲಕ ತ್ವರಿತ ದುರಸ್ತಿ: ಸಮಸ್ಯೆಯ ತೀವ್ರತೆಯನ್ನು ಮನಗಂಡು, ತಕ್ಷಣವೇ ಜೆಸಿಬಿ (JCB) ಯಂತ್ರವನ್ನು ಬಳಸಿ ರಸ್ತೆ ಹಾಗೂ ತಾತ್ಕಾಲಿಕ ಮಾರ್ಗವನ್ನು ಸರಿಪಡಿಸುವ ಕಾರ್ಯ ಕೈಗೊಳ್ಳಲಾಯಿತು. ಪ್ರಸ್ತುತ ಜೆಸಿಬಿ ಮೂಲಕ ಮಣ್ಣು ಹಾಕಿ ದಾರಿ ಮಾಡಿಕೊಟ್ಟಿದ್ದು, ಸಾರ್ವಜನಿಕರ ಮತ್ತು ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಲಾಗಿದೆ. ಹೊಸ ಸೇತುವೆಯ ಮುಖ್ಯ ಕಾಮಗಾರಿಯೂ ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ ಎಂದು ತಿಳಿಸಲಾಗಿದೆ.2
- ಪ್ರಧಾನಿ ಮೋದಿ ದಣಿವರಿಯದ ವಿಶ್ವಶ್ರೇಷ್ಠ ನಾಯಕ, ಪಟ್ಟಣದಲ್ಲಿ ಬಿಜೆಪಿ ಮುಖಂಡ ಯಮದೂರು ಸಿದ್ದರಾಜು ಬಣ್ಣನೆ ಮಳವಳ್ಳಿ: ಜನ ಸೇವೆಗಾ ಗಿಯೇ ತಮ್ಮ ಜೀವನವನ್ನು ಮುಡಿಪಾಗಿಸಿರುವ ದಣಿವರಿ ಯದ ನಾಯಕ ಪ್ರಧಾನಿ ನರೇಂದ್ರ ಮೋದಿ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಡಾ ಯಮದೂರು ಸಿದ್ದರಾಜು ಬಣ್ಣಿಸಿದ್ದಾರೆ. ಗುರುವಾರ ಮಧ್ಯಾಹ್ನ 1.30 ರ ಸಮಯದಲ್ಲಿ ಮಳವಳ್ಳಿ ಪಟ್ಟಣದ ಸಾರ್ವ ಜನಿಕ ಆಸ್ಪತ್ರೆ ಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ತಾಲೂಕು ಬಿಜೆಪಿ ಮಂಡಲದ ವತಿಯಿಂದ ರೋಗಿ ಗಳಿಗೆ ಹಣ್ಣು ಹಂಪಲು ವಿತರಿ ಸುವ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದ ಅವರು ಪ್ರಧಾನಿ ಮೋದಿ ಅವರು ಕಳೆದ 11 ವರ್ಷಗಳಿಂದ ದೇಶದ ಸರ್ವ ತೋಮುಖ ಅಭಿವೃದ್ಧಿಗೆ ಶ್ರಮಿ ಸುತ್ತಿದ್ದಾರೆ. ಬಡವರ, ರೈತರ, ಮಹಿಳೆಯರ, ಯುವಜನರ ಏಳಿಗೆಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ವಿಶ್ವದಲ್ಲೇ ಭಾರತದ ಗೌರವವನ್ನು ಹೆಚ್ಚಿಸಿದ್ದಾರೆ. ಅವರ ಜನ್ಮದಿನವನ್ನು ಸೇವಾ ದಿನವಾಗಿ ಆಚರಿಸುತ್ತಿರುವುದು ಹೆಮ್ಮೆಯ ವಿಷಯ ಎಂದು ಹೇಳಿದರು. ಬಿಜೆಪಿ ತಾಲ್ಲೂಕು ಅಧ್ಯಕ್ಷ ಮಧು ಗಂಗಾಧರ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶ ಸುರಕ್ಷಿತವಾಗಿದೆ, ಅಭಿವೃದ್ಧಿ ಪಥದತ್ತ ಸಾಗುತ್ತಿದೆ ಎಂದು ಹೇಳಿದರು. ಮೋದಿ ಅವರು ಹುಟ್ಟುಹಬ್ಬ ವನ್ನು ಅದ್ಧೂರಿಯಾಗಿ ಆಚರಿಸಿ ಕೊಳ್ಳದೆ, ಸೇವಾ ಕಾರ್ಯಗಳ ಮೂಲಕ ಆಚರಿಸಲು ಕರೆ ನೀಡಿದ್ದಾರೆ. ಅದರಂತೆ ಇಂದು ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಗಿದೆ. ಮೋದಿ ಅವರ ಆರೋಗ್ಯ, ದೀರ್ಘಾಯುಷ್ಯ ಕ್ಕಾಗಿ ಪ್ರಾರ್ಥಿಸಿ ಮನೆಗಳಲ್ಲಿ ದೀಪ ಬೆಳಗುವಿಕೆ ದೇವಾಲಯ ಗಳಲ್ಲಿ ವಿಶೇಷ ಪೂಜೆ ಹಮ್ಮಿ ಕೊಳ್ಳಲಾಗಿದೆ ಎಂದು ತಿಳಿಸಿ ದರು. ಕಾರ್ಯಕ್ರಮದಲ್ಲಿ ವೈದ್ಯಾಧಿಕಾ ರಿಗಳಾದ ಡಾ. ಶಿವಸ್ವಾಮಿ ಬಿಜೆಪಿ ತಾಲೂಕು ಮಾಜಿ ಅಧ್ಯಕ್ಷ ಹೆಬ್ಬಣಿ ಬಸವರಾಜು, ಎಸ್ಸಿ ಮೋರ್ಚಾ ತಾಲೂಕು ಅಧ್ಯಕ್ಷ ಚಿಕ್ಜಣ್ಣ, ಪ್ರಧಾನ ಕಾರ್ಯದರ್ಶಿ ಉಮೇಶ್, ಜೆಡಿಎಸ್ ಮುಖಂಡ ಕಂಬರಾಜು, ಮುಖಂಡರಾದ ಸಿದ್ದರಾಜು, ದೇವರಾಜು, ವಕ್ಕರಹಳ್ಳಿ ಬಸವರಾಜು, ಮಾದೇಶ, ಸೇರಿದಂತೆ ಇತರರು ಈ ವೇಳೆ ಹಾಜರಿದ್ದರು.1
- ಕೌದಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ನಾಗರಹಾವು ಪ್ರತ್ಯಕ್ಷ, ಆತಂಕದಲ್ಲಿ ಸಿಬ್ಬಂದಿಗಳು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕೌದಳ್ಳಿ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ನಾಗರಹಾವು ಪ್ರತ್ಯಕ್ಷವಾಗಿ ಆಸ್ಪತ್ರೆ ಸಿಬ್ಬಂದಿಯಲ್ಲಿ ಆತಂಕ ಮೂಡಿಸಿದ ಘಟನೆ ನಡೆದಿದೆ. ಆಸ್ಪತ್ರೆ ಆವರಣದಲ್ಲಿ ನಾಗರಹಾವು ಕಾಣಿಸಿಕೊಂಡಿದ್ದರಿಂದ ಸಿಬ್ಬಂದಿ ಗಾಬರಿಗೊಂಡಿದ್ದರು. ಕೂಡಲೇ ಉರಗ ರಕ್ಷಕ ಸ್ನೇಕ್ ಮಧು ಅವರಿಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಆಗಮಿಸಿದ ಅವರು ಸುರಕ್ಷಿತವಾಗಿ ನಾಗರಹಾವನ್ನು ಸೆರೆಹಿಡಿದರು. ನಂತರ ಸೆರೆಹಿಡಿದ ನಾಗರಹಾವನ್ನು ಮಲೆ ಮಹದೇಶ್ವರ ವನ್ಯಧಾಮದ ಕಾಡಿಗೆ ಬಿಡಲಾಯಿತು. ಹಾವನ್ನು ಸುರಕ್ಷಿತವಾಗಿ ರಕ್ಷಿಸಿ ಕಾಡಿಗೆ ಬಿಟ್ಟ ಉರಗ ರಕ್ಷಕ ಮಧು ಅವರ ಕಾರ್ಯಕ್ಕೆ ಆಸ್ಪತ್ರೆ ಸಿಬ್ಬಂದಿ ಮೆಚ್ಚುಗೆ ವ್ಯಕ್ತಪಡಿಸಿದರು1