Shuru
Apke Nagar Ki App…
ಚಿಕ್ಕೋಡಿ : ನವಲಿಹಾಳ ಗ್ರಾಮದ ಸರಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆಯ ಮುಖ್ಯಾಧ್ಯಾಪಕ ಡಾ.ವಿಶ್ವನಾಥ ಧುಮಾಳ ಡಾ.ಅಂಬೇಡ್ಕರ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸರಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆಯ ಮುಖ್ಯಾಧ್ಯಾಪಕ ಡಾ.ವಿಶ್ವನಾಥ ಧುಮಾಳ ಭಾರತೀಯ ದಲಿತ ಸಾಹಿತ್ಯ ಅಕಾಡೆಮಿ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಡಾ. ಅಂಬೇಡ್ಕರ್ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಡಾ.ಧುಮಾಳ ಅವರು ದಲಿತರ, ಶೋಷಿತರ ಹಾಗೂ ದಮನಿತರ ಸಮಗ್ರ ಅಭಿವೃದ್ಧಿಗಾಗಿ ನಿರಂತರವಾಗಿ ಸಲ್ಲಿಸಿದ ಮಹತ್ವದ ಸೇವೆ ಪರಿಗಣಿಸಿ ಆಯ್ಕೆಮಾಡಲಾಗಿದೆ. ಈ ಗೌರವ ಪ್ರಶಸ್ತಿಯನ್ನು ಡಿ.14ರಂದು ದೆಹಲಿಯಲ್ಲಿ ಆಯೋಜಿಸಲಾಗಿರುವ ವಿಶೇಷ ಸಮಾರಂಭದಲ್ಲಿ ನೀಡಿ ಸನ್ಮಾನಿಸಲಾಗುವುದು ಎಂದು ಅಕಾಡೆಮಿಯ ರಾಷ್ಟ್ರೀಯ ಅಧ್ಯಕ್ಷ ಡಾ.ಎಸ್.ಪಿ. ಸುಮನಕ್ಷರ ತಿಳಿಸಿದ್ದಾರೆ
ನದೀಮ ಎನ್. ನಾಯಕವಾಡಿ
ಚಿಕ್ಕೋಡಿ : ನವಲಿಹಾಳ ಗ್ರಾಮದ ಸರಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆಯ ಮುಖ್ಯಾಧ್ಯಾಪಕ ಡಾ.ವಿಶ್ವನಾಥ ಧುಮಾಳ ಡಾ.ಅಂಬೇಡ್ಕರ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸರಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆಯ ಮುಖ್ಯಾಧ್ಯಾಪಕ ಡಾ.ವಿಶ್ವನಾಥ ಧುಮಾಳ ಭಾರತೀಯ ದಲಿತ ಸಾಹಿತ್ಯ ಅಕಾಡೆಮಿ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಡಾ. ಅಂಬೇಡ್ಕರ್ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಡಾ.ಧುಮಾಳ ಅವರು ದಲಿತರ, ಶೋಷಿತರ ಹಾಗೂ ದಮನಿತರ ಸಮಗ್ರ ಅಭಿವೃದ್ಧಿಗಾಗಿ ನಿರಂತರವಾಗಿ ಸಲ್ಲಿಸಿದ ಮಹತ್ವದ ಸೇವೆ ಪರಿಗಣಿಸಿ ಆಯ್ಕೆಮಾಡಲಾಗಿದೆ. ಈ ಗೌರವ ಪ್ರಶಸ್ತಿಯನ್ನು ಡಿ.14ರಂದು ದೆಹಲಿಯಲ್ಲಿ ಆಯೋಜಿಸಲಾಗಿರುವ ವಿಶೇಷ ಸಮಾರಂಭದಲ್ಲಿ ನೀಡಿ ಸನ್ಮಾನಿಸಲಾಗುವುದು ಎಂದು ಅಕಾಡೆಮಿಯ ರಾಷ್ಟ್ರೀಯ ಅಧ್ಯಕ್ಷ ಡಾ.ಎಸ್.ಪಿ. ಸುಮನಕ್ಷರ ತಿಳಿಸಿದ್ದಾರೆ
More news from ಕರ್ನಾಟಕ and nearby areas
- ..... ಪೊಲೀಸ್ ಅಧಿಕಾರಿ ಮೇಲೆ ..... ಅಧಿಕಾರಿಗಳಿಂದ ಕಿರುಕುಳ ವಿಡಿಯೋ ಮಾಡಿ ನ್ಯಾಯಕ್ಕಾಗಿ ಅಂಗಲಾಚಿದ ಇನ್ಸ್ಪೆಕ್ಟರ್ ಶ್ರೀನಿವಾಸ್ . . . #suddipoint #enrisamasse #policeofficer1
- Post by Uday Chougale1
- ದುರಂತ: ಕಾವೇರಿ ನದಿಯಲ್ಲಿ ಈಜಲು ಹೋದ ಆರು ಮಂದಿ ಜಲಸಮಾಧಿ ಮೈಸೂರು: ಜಿಲ್ಲೆಯ ಕೆ.ಆರ್. ನಗರದ ಪ್ರಸಿದ್ಧ ಅರ್ಕೇಶ್ವರ ದೇಗುಲದ ಬಳಿ ಹರಿಯುವ ಕಾವೇರಿ ನದಿಯಲ್ಲಿ ಈಜಲು ಹೋದ ಆರು ಮಂದಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಅತ್ಯಂತ ಘೋರ ಘಟನೆ ನಡೆದಿದೆ. 1
- *ರಾಯಬಾಗದಲ್ಲಿ ಬಸವ ಜಯಂತಿಯ ಹಳ್ಳಿ ಸೊಬಗು: ಶಿಕ್ಷಣ ಪ್ರೇಮಿ ಪಾಟೀಲ ಪರಿವಾರದ ಜನಸೇವೆಗೆ ಸಾಕ್ಷಿಯಾದ ಶೋಭಾಯಾತ್ರೆ* ಕಾಯಕವೇ ಕೈಲಾಸ ಎಂದು ಸಾರಿದ ಜಗಜ್ಯೋತಿ ಬಸವಣ್ಣನವರ ಜಯಂತಿಯ ನಿಮಿತ್ತ ಇಂದು ರಾಯಬಾಗ ಪಟ್ಟಣ ಭಕ್ತಿ ಮತ್ತು ಸಂಭ್ರಮದ ಕಡಲಲ್ಲಿ ತೇಲಿತು. ಪಟ್ಟಣದಾದ್ಯಂತ ಹಮ್ಮಿಕೊಳ್ಳಲಾಗಿದ್ದ ಭವ್ಯ ಶೋಭಾಯಾತ್ರೆಯು ಹಳ್ಳಿಯ ಸೊಬಗನ್ನು ಮರುಸೃಷ್ಟಿಸಿ ನೋಡುಗರ ಕಣ್ಮನ ಸೆಳೆಯಿತು. ಹಿಂದೂ ಧರ್ಮದಲ್ಲಿ ಬಸವಣ್ಣ ಅಥವಾ ನಂದಿ ಎಂದು ಪೂಜಿಸಲ್ಪಡುವ ಸುಮಾರು 170ಕ್ಕೂ ಹೆಚ್ಚು ಎತ್ತುಗಳನ್ನು ಅತ್ಯಂತ ಸುಂದರವಾಗಿ ಅಲಂಕರಿಸಿ ಮೆರವಣಿಗೆಯಲ್ಲಿ ಪಾಲ್ಗೊಳ್ಳುವಂತೆ ಮಾಡಲಾಗಿತ್ತು. ಸಾಲು ಸಾಲಾಗಿ ಸಾಗುತ್ತಿದ್ದ ಈ ಎತ್ತುಗಳ ಗಾಂಭೀರ್ಯವು ಗ್ರಾಮೀಣ ಸೊಬಗನ್ನು ಎತ್ತಿ ತೋರಿಸುವಂತಿತ್ತು. ಮೆರವಣಿಗೆಯ ಮುಂಚೂಣಿಯಲ್ಲಿ ಕಂಗೊಳಿಸುತ್ತಿದ್ದ ಬಸವಣ್ಣನವರ ಬೃಹತ್ ಪುತ್ಥಳಿಯು ಭಕ್ತರ ಪಾಲಿಗೆ ದರ್ಶನ ಭಾಗ್ಯವನ್ನೇ ನೀಡಿತು. ರಾಯಬಾಗದ ಇತಿಹಾಸದಲ್ಲಿ ವಸಂತರಾವ್ ಪಾಟೀಲ್ ಅವರ ಕುಟುಂಬದ ಹೆಸರು ಅಚ್ಚಳಿಯದಂತದ್ದು. ಅಜ್ಜನ ಕಾಲದಿಂದಲೂ ಬಡವರಿಗೆ ಅಕ್ಷರ ದಾಸೋಹ ಮಾಡುತ್ತಾ ಬಂದಿರುವ ಈ ಕುಟುಂಬ, ಸಾವಿರಾರು ಜನ ಶಿಕ್ಷಣ ಪಡೆದು ಉನ್ನತ ಹುದ್ದೆಗಳನ್ನು ಅಲಂಕರಿಸಲು ಕಾರಣವಾಗಿದೆ. ಇಂದಿಗೂ ಶಿಕ್ಷಣ ಪ್ರೇಮಿಯಾಗಿ ಬಡ ಮಕ್ಕಳ ಪಾಲಿನ ಆಶಾಕಿರಣವಾಗಿರುವ ವಸಂತರಾವ್ ಪಾಟೀಲ್ ಅವರ ಸರಳತೆ ಎಲ್ಲರಿಗೂ ಮಾದರಿ. ಈ ಮೆರವಣಿಗೆಯ ವಿಶೇಷ ಆಕರ್ಷಣೆಯೆಂದರೆ, ಹಿರಿಯರು ಮತ್ತು ಯುವಕರ ಹೃದಯದಲ್ಲಿ ಸ್ಥಾನ ಪಡೆದಿರುವ ಯುವ ನಾಯಕ ಪ್ರಣಯ್ ಅಣ್ಣ ಪಾಟೀಲ್ ಅವರ ಮೇಲಿನ ಅಭಿಮಾನ. ಸಮಾಜ ಸೇವೆಯಲ್ಲಿ ಸದಾ ಮುಂಚೂಣಿಯಲ್ಲಿರುವ ಅವರ ಭಾವಚಿತ್ರವನ್ನು ಎತ್ತುಗಳ ಮೇಲೆ ಕಲಾತ್ಮಕವಾಗಿ ಬಿಡಿಸಿದ್ದು, ಜನರ ವಿಶೇಷ ಗಮನ ಸೆಳೆಯಿತು. "ಶಿಕ್ಷಣದ ಮೂಲಕ ಬದುಕು ಕಟ್ಟಿಕೊಟ್ಟ ಹಿರಿಯರು ಒಂದೆಡೆಯಾದರೆ, ಸಮಾಜ ಸೇವೆಯ ಮೂಲಕ ಯುವ ಶಕ್ತಿಯನ್ನು ಸಂಘಟಿಸುತ್ತಿರುವ ಪ್ರಣಯ್ ಅಣ್ಣ ಪಾಟೀಲ್ ಅವರ ನಾಯಕತ್ವ ರಾಯಬಾಗಕ್ಕೆ ಹೆಮ್ಮೆ."1
- Post by @april14news1
- |ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ)ಜೈ ಭೀಮ ಯುವ ಘರ್ಜನೆ ಹಳೇ ಮುರನಾಳ ಗ್ರಾಮದಲ್ಲಿ ಗ್ರಾಮ ಘಟಕ ಉದ್ಘಾಟನೆ|1
- ಕುಂದಗೋಳ: ತಾಲ್ಲೂಕಿನ ಹಿರೇನರ್ತಿ ಗ್ರಾಮದಲ್ಲಿ ಆಸ್ತಿ ವಿಚಾರವಾಗಿ ತಲೆದೋರಿದ ಹಳೆಯ ದ್ವೇಷವೊಂದು ವಿಕೋಪಕ್ಕೆ ತಿರುಗಿದ್ದು, ಒಂದೇ ಮನೆತನದವರ ನಡುವಿನ ಜಗಳದಲ್ಲಿ ಮುಂದುವರೆದು ಹಲ್ಲೆಯಲ್ಲಿ ಅಂತ್ಯಗೊಂಡಿದೆ. ಜಾಗದ ವಿವಾದಕ್ಕೆ ಸಂಬಂಧಿಸಿದಂತೆ ನಡೆದ ಈ ಭೀಕರ ಗಲಾಟೆಯಲ್ಲಿ ಕರಿಯಪ್ಪಗೌಡ ಎಂಬುವವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು, ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸೋಮವಾರ ಮಧ್ಯಾಹ್ನದ ವೇಳೆಗೆ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಜಾಗದ ವಿಷಯವಾಗಿ ಮಾತಿಗೆ ಮಾತು ಬೆಳೆದು, ಒಂದೇ ಮನೆತನದ ಅಣ್ಣತಮ್ಮಂದಿರಾದ ಪ್ರಜ್ವಲ್ ಗೌಡ , ಸಿದ್ದನಗೌಡ ಹಾಗೂ ಶಿವನಗೌಡ (ಚಿಕ್ಕಪ್ಪ-ದೊಡ್ಡಪ್ಪನ ಮಕ್ಕಳು) ನಡುವೆ ಸಂಘರ್ಷ ಏರ್ಪಟ್ಟಿದೆ. ಕರಿಯಪ್ಪಗೌಡ ಅವರು ಬಣವೆ ಒಟ್ಟುತ್ತಿದ್ದ ಸಮಯದಲ್ಲಿ ಸ್ಥಳಕ್ಕೆ ಬಂದ ಪ್ರಜ್ವಲ್ ಗೌಡ ಹಾಗೂ ಆತನ ಸಹಚರರು, ಕಲ್ಲು ಮತ್ತು ಬಡಿಗೆಗಳಿಂದ ಏಕಾಏಕಿ ಅಟ್ಟಹಾಸ ಮೆರೆದಿದ್ದಾರೆ ಎಂದು ಸ್ವತಃ ಹಲ್ಲೆಗೊಳಗಾದ ಕರಿಯಪ್ಪಗೌಡರು ತಮ್ಮ ನೋವಿನ ಸಂಗತಿಯನ್ನು ಹೇಳಿಕೊಂಡಿದ್ದಾರೆ. ಆರೋಪಿಗಳು ಕರಿಯಪ್ಪಗೌಡರ ಮೇಲೆ ಮನಬಂದಂತೆ ಹಲ್ಲೆ ನಡೆಸಿದ ಪರಿಣಾಮ, ಅವರ ತಲೆ ಹಾಗೂ ಮೈಮೇಲೆ ರಕ್ತಸಿಕ್ತ ಗಾಯಗಳಾಗಿವೆ. ರಕ್ತದ ಘಾಯದಿಂದ ಬಿದ್ದಿದ್ದ ಅವರನ್ನು ಗ್ರಾಮಸ್ಥರು ಕೂಡಲೇ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ಸದ್ಯ ಗಾಯಾಳು ಕರಿಯಪ್ಪಗೌಡರು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕುಂದಗೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದ್ದು, ಸದ್ಯ ಕುಂದಗೋಲ ಪೋಲಿಸ್ ಠಾಣೆಯಲ್ಲಿ ವಿಚಾರಣೆ ನಡೆಯತ್ತಿದ್ದು ಇದು ಎಪ್ ಆಯ್ ಆರ್ ಆಗುತ್ತಾ ರಾಜಿ ಸಂಧಾನದ ಮೂಲಕ ಇಥ್ಯರ್ಥ ಆಗುತ್ತದೆಯಾ ಎಂದುದನ್ನು ಕಾದು ನೋಡಬೇಕು. ಘಟನೆಯಿಂದಾಗಿ ಗ್ರಾಮದಲ್ಲಿ ಸದ್ಯ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.1
- ಭಾಲ್ಕಿಯಲ್ಲಿ ಬೃಹತ್ ಆರೋಗ್ಯ ಶಿಬಿರ: 180 ಜನರಿಗೆ ತಪಾಸಣೆ, 101 ಯುವಕರಿಂದ ರಕ್ತದಾನ ಆರೋಗ್ಯವೇ ಭಾಗ್ಯ: ಭಾಲ್ಕಿಯ ಚನ್ನಬಸವಾಶ್ರಮದಲ್ಲಿ ಮಾನವೀಯತೆಯ ಮೆರಗು; 101 ಯುನಿಟ್ ರಕ್ತ ಸಂಗ್ರಹ #JB_News_Kannada1