Shuru
Apke Nagar Ki App…
ಸರ್ಕಾರ ಇದ್ದರೂ ಇಲ್ಲದಿದ್ದರೂ ಗೆಲುವು ಸಾಧ್ಯ: ಜಗದೀಶ ಶೆಟ್ಟರ್ ಆತ್ಮವಿಶ್ವಾಸ ಬಾಗಲಕೋಟೆ: ಭಾರತೀಯ ಜನತಾ ಪಕ್ಷದ ಜಿಲ್ಲಾ ಕಾರ್ಯಾಲಯದಲ್ಲಿ ಬೆಳಗಾವಿ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ನೇತೃತ್ವದಲ್ಲಿ ಬಿಜೆಪಿಯ ಸಂಘಟನಾತ್ಮಕ ಸಭೆ ಜರುಗಿತು. ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ನಮ್ಮದಾಗಿದ್ದರೂ ಇಲ್ಲದಿದ್ದರೂ ಬಿಜೆಪಿ ಚುನಾವಣೆಗಳಲ್ಲಿ ಗೆಲುವು ಸಾಧಿಸುವ ಶಕ್ತಿ ಹೊಂದಿದೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು. #bagalkot #karnataka #bjp
Shabbir Bijapur
ಸರ್ಕಾರ ಇದ್ದರೂ ಇಲ್ಲದಿದ್ದರೂ ಗೆಲುವು ಸಾಧ್ಯ: ಜಗದೀಶ ಶೆಟ್ಟರ್ ಆತ್ಮವಿಶ್ವಾಸ ಬಾಗಲಕೋಟೆ: ಭಾರತೀಯ ಜನತಾ ಪಕ್ಷದ ಜಿಲ್ಲಾ ಕಾರ್ಯಾಲಯದಲ್ಲಿ ಬೆಳಗಾವಿ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ನೇತೃತ್ವದಲ್ಲಿ ಬಿಜೆಪಿಯ ಸಂಘಟನಾತ್ಮಕ ಸಭೆ ಜರುಗಿತು. ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ನಮ್ಮದಾಗಿದ್ದರೂ ಇಲ್ಲದಿದ್ದರೂ ಬಿಜೆಪಿ ಚುನಾವಣೆಗಳಲ್ಲಿ ಗೆಲುವು ಸಾಧಿಸುವ ಶಕ್ತಿ ಹೊಂದಿದೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು. #bagalkot #karnataka #bjp
More news from ಕರ್ನಾಟಕ and nearby areas
- ಯಶಸ್ವಿಯಾಗಿ ಜರುಗಿದ ವಿಶ್ವ ಕ್ಯಾನ್ಸರ್ ಜಾಗೃತಿ ದಿನದ ಕಾರ್ಯಕ್ರಮ1
- ಸಾಲೋಟಗಿ ಭಜಂತ್ರಿ ಸೌದತ್ತಿ ಎಲ್ಲಮ್ಮ ಪಾದಯಾತ್ರೆ ವಿಡಿಯೋ ವೈರಲ್ ಮಾಡಿ 93803537101
- ಇಡೀ ರಾಜ್ಯದಲ್ಲಿ ಅಥಣಿ ವಿಭಾಗದ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಅಪಘಾತಗಳಲ್ಲಿ ಸಾವು ನೋವುಗಳು ಸಂಭವಿಸುತ್ತಿವೆ ಸೂಕ್ತ ಕ್ರಮ ಕೈಗೊಳ್ಳಬೇಕು : ಬೆಳಗಾವಿ ಎಸ್.ಪಿ ಕೆ. ರಾಮರಾಜನ್. ಅಥಣಿ: ಕುಡಿದ ಅಮಲಿನಲ್ಲಿ ವಾಹನ ಚಲಾಯಿಸಿ ಯಾರಿಗಾದರೂ ಅಪಘಾತ ಮಾಡಿ ಘಟನೆಯಲ್ಲಿ ಸಾವುಗಳು ಸಂಭವಿಸಿದರೆ ಅಂತಹ ವಾಹನ ಚಾಲಕರ ವಿರುದ್ಧ ಕೊಲೆ ಪ್ರಕರಣ ದಾಖಲಿಸಲು ಸೂಚನೆ ನೀಡಲಾಗಿದೆ. ಸಾರ್ವಜನಿಕರ ನಡುವೆ ಉತ್ತಮ ಸಂವಹನ ಮಾನವೀಯ ಭದ್ರತೆಗಾಗಿ ಅತ್ಯಂತ ಮುಖ್ಯ ಎಂದು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್.ಪಿ.) ಕೆ ರಾಮರಾಜನ್ ಹೇಳಿದರು. ಅಥಣಿ ಪೊಲೀಸ್ ಉಪವಿಭಾಗದ ವ್ಯಾಪ್ತಿಯಲ್ಲಿ ರವಿವಾರ ನಿಯೋಜಿತ ಭೇಟಿ ನೀಡಿದ ನೂತನವಾಗಿ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ರಾಮರಾಜನ್ ಅಥಣಿ, ಕಾಗವಾಡ, ಕುಡಚಿ, ರಾಯಬಾಗ, ಹಾರೂಗೇರಿ, ಐಗಳಿ ಪೊಲೀಸ್ ಠಾಣೆಗಳಿಗೆ ಠಾಣೆಗಳಲ್ಲಿ ಇರುವ ವಾಸ್ತವ ಸ್ಥಿತಿಗತಿ, ವ್ಯವಸ್ಥೆ, ಸಾರ್ವಜನಿಕರೊಂದಿಗೆ ಪೊಲೀಸರ ನಡುವಳಿಕೆ, ಹಲವು ಕಡತಗಳನ್ನು ಪರಿಶೀಲನೆ ನಡೆಸಿ ಪೊಲೀಸ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಸೂಕ್ತ ಸಲಹೆಗಳನ್ನು ನೀಡಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಬೆಳಗಾವಿ ಎಸ್.ಪಿ ಕೆ ರಾಮರಾಜನ್ ಕಾನೂನು ಎಲ್ಲರಿಗೂ ಸಮಾನ ಯಾರೇ ಪೊಲೀಸ್ ಠಾಣೆಗೆ ಬಂದು ದೂರು ನೀಡಿದರೆ ಯಾವುದೇ ರಾಜಿ ಸಂಧಾನ ಮಾಡದೆ ದೂರಿನ ಅನ್ವಯ ಎಫ್ ಐ ಆರ್ ದಾಖಲಿಸಬೇಕು. ಇಡೀ ರಾಜ್ಯದಲ್ಲಿ ಅಥಣಿ ಪೊಲೀಸ್ ಉಪ ವಿಭಾಗದ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಅಪಘಾತಗಳಲ್ಲಿ ಸಾವು ನೋವುಗಳು ಸಂಭವಿಸುತ್ತಿವೆ ಅವುಗಳನ್ನು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕು. ಕಾನೂನುಬಾಹಿರ ಯಾವುದೇ ಚಟುವಟಿಕೆಗಳು ನಡೆಯದಂತೆ ಮುಂಜಾಗ್ರತೆ ವಹಿಸಬೇಕು. ಅಕ್ರಮ ಮಧ್ಯ ಮಾರಾಟಗಾರರ ವಿರುದ್ಧ ಕೇಸ್ ದಾಖಲು ಮಾಡಿ ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಂ ಗಳು ಕಂಡುಬರುತ್ತಿದ್ದು ಜನರಲ್ಲಿ ಜಾಗೃತಿ ಮೂಡಿಸಬೇಕು, ಹಣದ ಆಸೆಗಾಗಿ ವಂಚಕರ ಬಲೆಗೆ ಬೀಳಬಾರದು ಅಂತಹ ಯಾವುದೇ ಸಂದೇಹ ಬಂದಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಹೇಳಿದರು. ಅಥಣಿ ಪಟ್ಟಣದಲ್ಲಿ ಟ್ರಾಫಿಕ್ ಸಮಸ್ಯೆ ಜೊತೆಗೆ ಅಪರಾಧ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತವೆ. ಇಲ್ಲಿರುವ ಸಿಬ್ಬಂದಿಗಳ ಸಂಖ್ಯೆ ಕಡಿಮೆ ಇರುವುದು ಕಂಡು ಬಂದಿದೆ. ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜನೆ ಮಾಡಲು ಕ್ರಮ ಕೈಗೊಳ್ಳಲಾಗುವುದು. ಅಥಣಿಗೆ ಗ್ರಾಮೀಣ ಪೊಲೀಸ್ ಠಾಣೆ ಹಾಗೂ ಟ್ರಾಫಿಕ್ ಪೊಲೀಸ್ ಠಾಣೆ ಬೇಡಿಕೆ ಇದ್ದು, ಈ ಕುರಿತು ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗುವುದು ಎಂದು ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಕೆ ರಾಮರಾಜನ್ ಹೇಳಿದರು. ಈ ವೇಳೆ ಅಥಣಿ ಪೊಲೀಸ್ ಉಪ ವಿಭಾಗದ ಡಿವೈಎಸ್ಪಿ ಪ್ರಶಾಂತ ಮುನ್ನೊಳ್ಳಿ, ಸಿಪಿಐ ಸಂತೋಷ ಹಳ್ಳೂರ, ಪಿ ಎಸ್ ಐ ಗಿರಿಮಲ್ಲಪ್ಪ ಉಪ್ಪಾರ, ಅಥಣಿ ಪೊಲೀಸ್ ಉಪ ವಿಭಾಗದ ಪಿಎಸ್ಐ, ಎ ಎಸ್ ಐ, ಎಲ್ಲ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.2
- ಮೈಸೂರು-ನಾಗಲಿಂಗ ಸ್ವಾಮಿ ನಿವಾಸಕ್ಕೆ ಮುತಾಲಿಕ್ ಬೇಟೆ #onlinetv24x7 #Mysore #Pramodmuthali1
- ಹೈಯಾಳಲಿಂಗೇಶ್ವರ ದೇವಸ್ಥಾನದ ದೇವರ ಹುಂಡಿ ಕಳ್ಳತನಕ್ಕೆ ಯತ್ನ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹೈಯಾಳಲಿಂಗೇಶ್ವರ ಗ್ರಾಮದ ಹೈಯಾಳಲಿಂಗೇಶ್ವರ ದೇವಸ್ಥಾನದಲ್ಲಿ ದೇವರ ಹುಂಡಿಯನ್ನು ಕಳ್ಳತನ ಮಾಡಲು ಯತ್ನಿಸಿದ ಘಟನೆ ವರದಿಯಾಗಿದೆ. ಬೈಕ್ನಲ್ಲಿ ಬಂದ ನಾಲ್ವರು ಕಳ್ಳರು ಹುಂಡಿಯಲ್ಲಿದ್ದ ಹಣವನ್ನು ದೋಚಲು ಪ್ರಯತ್ನಿಸಿದ್ದಾರೆ. ಈ ಘಟನೆ ವಡಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.1
- ರಾಜ್ಯ ಹಾಗೂ ಹೊರ ರಾಜ್ಯಗಳಿಂದಲೂ ನಿತ್ಯ ಸಾವಿರಾರು ಭಕ್ತರು ಬರುವ ತಾಲೂಕಿನ ಮೈಲಾಪುರದಲ್ಲಿ ಮೂಲಭೂತ ಸೌಲಭ್ಯಗಳಿಲ್ಲದೇ ತೊಂದರೆಯಾಗುತ್ತಿದೆ. ಅಲ್ಲದೆ ಜಿಲ್ಲಾ ಕೇಂದ್ರವಾಗಿ 15 ವರ್ಷ ಗತಿಸಿದ್ದರು ಈ ದೇವಸ್ಥಾನಕ್ಕೆ ಬರತ್ಕಂತ ಭಕ್ತಾಧಿಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಲ್ಲಿ ಜಿಲ್ಲಾಡಲಿತ ವಿಫಲವಾಗಿದೆ ಎಂದು ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶಕೆ. ಮುದ್ನಾಳ ಅವರು ಆರೋಪಿಸಿದ್ದಾರೆ ಮೈಲಾರ ಮಲ್ಲಯ್ಯನ ದರ್ಶನ ಪಡೆದ ನಂತರ ಎಲ್ಲಾ ಪ್ರಮುಖ ಸ್ಥಳಗಳಿಗೆ ಸಂಚರಿಸಿ ಪರೀಶೀಲಸಿದ ನಂತರ ಮಾತನಾಡಿದ ಅವರು ಯಾದಗಿರಿ ಜಿಲ್ಲೆಯಲ್ಲಿ ಎರಡು ಎ ಗ್ರೇಡ್ ದೇವಸ್ಥಾನಗಳ ಪೈಕಿ ಮೈಲಾಪುರ ಒಂದಾಗಿದ್ದು, ಅಸಂಖ್ಯಾತ ಭಕ್ತರು ಆಗಮಿಸುತ್ತಾರೆ. ಧಾರ್ಮಿಕ, ಪ್ರೇಕ್ಷಣೀಯ ಸ್ಥಳದಲ್ಲಿ ಮೂಲಸೌಕಯ್ಯ ವಿಲ್ಲದೆ ಸಮಸ್ಯೆ ಎದುರಿಸುವಂತಾಗಿದೆ ಎಂದು ಹೇಳಿದರು ಪ್ರತಿ ವರ್ಷ ಸಂಕ್ರಾಮಣದಲ್ಲಿ ಜಾತ್ರೆಯನ್ನು ಹೊರತು ಪಡೆಸಿ ಪ್ರತಿ ರವಿವಾರ ಮತ್ತು ಪ್ರತಿ ಅಮವಾಸ್ಯೆದಂದು ಇಲ್ಲಿಗೆ ಬರುವ ಭಕ್ತಾದಿಗಳ ಸಂಖ್ಯೆ, ದೇವಸ್ಥಾನದ ಆದಾಯ ಹೆಚ್ಚುತಿದ್ದರೂ ಮೂಲ ಸೌಕರ್ಯ ಮಾತ್ರ ನಿರೀಕ್ಷಿತ ಮಟ್ಟದಲ್ಲಿ ಹೆಚ್ಚುತ್ತಿಲ್ಲ. ಬರುವ ಸಾರ್ವಜನಿಕರ ಸೌಲಭ್ಯಕ್ಕಾಗಿ ಶಾಶ್ವತ ಪರಿಹಾರ ಮಾಡದೇ ತಾತ್ಕಲಿಕ ಪರಿಹಾರಕ್ಕೆ ಮುಂದಾಗುತ್ತಿರುವುದು ಬೇಸರ ವ್ಯಕ್ತಪಡಿಸಿದರು. ಇದೇ ಸಂದರ್ಬದಲ್ಲಿ ಪವನ ಮಲ್ಲೇಶಿ, ರಾಜಪ್ಪ ಹಣಮಂತ ಬಸವರಾಜ ಸೇರಿದಂತೆ ಅನೇಕರು ಉಪಸ್ಥಿತರಿದ್ದರು1
- Post by Udaysingh Patel1
- ಪ್ರಧಾನಿ ಮೋದಿ ಅವರ ವಿರುದ್ಧ ಅಸಂಬದ್ಧ ಪದ ಬಳಕೆ ಕ್ರಮಕ್ಕೆ ಆಗ್ರಹ ಅಥಣಿ : ಪ್ರಧಾನಿ ನರೇಂದ್ರ ಮೋದಿಯವರ ವಿರುದ್ದ ಅಸಂಬದ್ದ ಪದ ಬಳಕೆ ಮಾಡಿರುವ ಅಥಣಿ ವ್ಯಾಪಾರಿ ವಿರುದ್ಧ, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬೆಳಗಾವಿ SP ಅವರಿಗೆ ಅಥಣಿ ಬಿಜೆಪಿ ವತಿಯಿಂದ ಅಥಣಿ ಪಟ್ಟಣಕ್ಕೆ ಆಗಮಿಸಿದ ಬೆಳಗಾವಿ ಜಿಲ್ಹಾ ಪೊಲೀಸ್ ವರಿಷ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.1