Shuru
Apke Nagar Ki App…
*ಭಾರತ ನಲ್ಲಿ ವೈರಲ್*
Md Aleemulla Shariff
*ಭಾರತ ನಲ್ಲಿ ವೈರಲ್*
More news from Mandya and nearby areas
- ಮಳವಳ್ಳಿ ತಾಲೂಕಿನ ಹೊನಗನಹಳ್ಳಿ ಹಳ ದಾಸನಹಳ್ಳಿ ಮಾರ್ಗ ಮಧ್ಯದಲ್ಲಿ ಸಮೀಪ ಸುಟ್ಟು ಬಸ್ಮವಾದ ಮಾರುತಿ ಕಾರು ಮಳವಳ್ಳಿ ತಾಲೂಕಿನ ಹಳದಾಸನಹಳ್ಳಿ ಹೊರಗನಹಳ್ಳಿ ಮಾರ್ಗ ಮಧ್ಯದ ರಸ್ತೆಯಲ್ಲಿ ಹಾಕಲಾಗಿದ್ದ ರಾಗಿ ಮುಂದಿನ ಮೆದೆಗೆ ಮಾರುತಿ ಕಾರು ಡಿಕ್ಕಿ ಹೊಡೆದು ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಬುಧವಾರ ರಾತ್ರಿ ಜರುಗಿದೆ ಬೆಂಗಳೂರಿಂದ ಕಗಲಿಪುರದಲ್ಲಿ ನಡೆಯುತ್ತಿರುವ ಮನೆಯ ಗೃಹಪ್ರವೇಶಕ್ಕೆಂದು ಈ ಮಾರುತಿ ಕಾರಿನಲ್ಲಿ ಕುಟುಂಬ ಒಂದು ಬಂದಿತ್ತು ಎನ್ನಲಾಗಿದೆ. ಬುದುವಾರ ಮಧ್ಯರಾತ್ರಿ ಕೆಲಸ ನಿಮಿತ್ತವೋ ಮಾರುತಿ ಕಾರಿನಲ್ಲಿ ಹೋಗುವಾಗ ತಿರುವಿನಲ್ಲಿ ಹಾಕಲಾಗಿದ್ದ ರಾಗಿ ಹುಲಿನ ಮೆದೆಗೆ ಡಿಕ್ಕಿ ಹೊಡೆದು ರಸ್ತೆ ಬದಿಗೆ ಜಾರಿಕೊಂಡು ಹೋಗಿ ಕಾರು ಬೆಂಕಿಯಿಂದ ಸುಟ್ಟು ಹೋಗಿದೆ . ಈ ಸಂದರ್ಭದಲ್ಲಿ ಕಾರಿನಲ್ಲಿ ಇದ್ದವರು ಯಾರು? ಯಾವ ರೀತಿ ಈ ಘಟನೆ ನಡೆದಿದೆ ಎಂಬುದು ಅನುಮಾನ ಮೂಡಿಸಿದೆ ಈ ಬಗ್ಗೆ ಬೆಳಕವಾಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಾಗ ಮಾತ್ರ ಘಟನೆಯ ಸಂಪೂರ್ಣ ವಿವರ ಬೆಳಕಿಗೆ ಬರಲಿದೆ1
- ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಮರ್ಪಕ ಮಳೆಯಾಗದೆ ಇರುವುದರಿಂದ ಕುಡಿಯುವ ನೀರಿನ ಸಮಸ್ಯೆ ಈಗಾಗಲೇ ಪ್ರಾರಂಭವಾಗಿದ್ದು, ಗ್ರಾಮ ಪಂಚಾ ಯಿತಿ ವ್ಯಾಪ್ತಿಯಲ್ಲೂ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಪ್ರತಿಯೊಬ್ಬರೂ ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶೃತಿ ತಿಳಿಸಿದರು. ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ಹಮ್ಮಿಕೊಂಡಿದ್ದ ಸಾಮಾನ್ಯ ಸಭೆಯಲ್ಲಿ ಮಾತನಾಡಿದರು. ಈವೇಳೆ ಇ ಓ ಉಮೇಶ್, ಅಂಗನವಾಡಿ ಮೇಲ್ವಿಚಾರಕಿ ಪೂರ್ಣಿಮಾ,ಸಹಾಯಕ ಕೃಷಿ ನಿರ್ದೇಶಕ ರಂಗಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು, ತಾಲೂಕು ಪಂಚಾಯಿತಿ ಪ್ರಥಮ ದರ್ಜೆ ಸಹಾಯಕ ರಮೇಶ್,ಆರೋಗ್ಯ ರಾಜು ಸೇರಿದಂತೆ ಇನ್ನಿತರರು ಹಾಜರಿದ್ದರು.4
- ತೀವ್ರ ವಿಷಾದ.. 10 ಸೈನಿಕರು ದುರ್ಮರಣಜಮ್ಮುಕಾಶ್ಮೀರದ ದೋಡಾ ಜಿಲ್ಲೆಯಲ್ಲಿ #JBNEWSKANNADA1
- Post by Venu Gopal2
- ಭದ್ರಾವತಿ: ತಾಲೂಕಿನ ಅರಬಿಳಚಿ ಕ್ಯಾಂಪ್ನ ಭದ್ರಾ ನಾಲೆಯಲ್ಲಿ ಒಂದೇ ಕುಟುಂಬದ ನಾಲ್ವರು ನೀರು ಪಾಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕನೇ ದಿನದ ಕಾರ್ಯಾಚರಣೆ ವೇಳೆ ಮುಳುಗು ತಜ್ಞ ಈಶ್ವರ್ ಮಲ್ಪೆ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ನಾಲ್ವರ ಮೃತದೇಹಗಳು ಪತ್ತೆಯಾಗಿವೆ. ನೀರಿನ ರಭಸದಿಂದಾಗಿ ಶೋಧ ಕಾರ್ಯಚರಣೆಗೆ ಅಡ್ಡಿ ಉಂಟಾಗಿತ್ತು. ಅದರ ನಡುವೆಯೂ ಮೃತದೇಹಗಳನ್ನ ಪತ್ತೆ ಹಚ್ಚುವಲ್ಲಿ ಇಂದು ಯಶಸ್ವಿಯಾಗಿದ್ದಾರೆ. ಆ ಮೂಲಕ ಮೃತದೇಹಗಳನ್ನು ಹುಡುಕಿ ಕೊಡುತ್ತೇನೆ ಎಂಬ ತಮ್ಮ ಮಾತನ್ನು ಈಶ್ವರ್ ಮಲ್ಪೆ ಉಳಿಸಿಕೊಂಡಿದ್ದಾರೆ. ಸದ್ಯ ಅವರ ಕಾರ್ಯಕ್ಕೆ ಗ್ರಾಮಸ್ಥರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಈಶ್ವರ್ ಮಲ್ಪೆ ಮೃತದೇಹ ಶೋಧ ಕಾರ್ಯಾಚರಣೆ ನಡೆಸಿದ್ದರು. ಭದ್ರಾ ನಾಲೆಯಲ್ಲಿ ನೀರು ಹರಿವು ಜಾಸ್ತಿ ಹಿನ್ನೆಲೆ ಕಾರ್ಯಾಚರಣೆಗೆ ಸಾಕಷ್ಟು ತೊಡಕು ಉಂಟಾಗಿತ್ತು. ಈ ಹಿನ್ನಲೆ ಶವ ಶೋಧ ಕಾರ್ಯಾಚರಣೆ ವಿಳಂಬ ವಾಗಿತ್ತು. ಕಳೆದ ಮೂರು ದಿನದಲ್ಲಿ ತಾಯಿ ನೀಲಾಬಾಯಿ ಮತ್ತು ರವಿ ಶವ ಪತ್ತೆ ಆಗಿತ್ತು. ನಾಲ್ಕನೇ ದಿನವಾದ ಇಂದು ಕಾರ್ಯಾಚರಣೆ ವೇಳೆ ಮಗಳು ಶ್ವೇತಾ ಮತ್ತು ಅಳಿಯ ಪರಶುರಾಮ ಮೃತದೇಹಗಳು ಪತ್ತೆ ಆಗಿವೆ. ಕಾರ್ಯಾಚರಣೆ ಬಳಿಕ ಮಾತನಾಡಿದ ಈಶ್ವರ್ ಮಲ್ಪೆ, ನಾನು ಮೊದಲ ದಿನವೇ ಮಾತು ಕೊಟ್ಟಿದ್ದೆ. ನಾಲ್ಕು ಶವ ಪತ್ತೆ ಮಾಡಿ ಇಲ್ಲಿಂದ ಹೋಗುತ್ತೇನೆ ಅಂತ. ಅದೇ ರೀತಿ ಮತ್ತೆ ಎರಡು ಶವ ಪತ್ತೆ ಮಾಡಿದೆ. ಈಗ ನಾಲ್ಕು ಶವ ಪತ್ತೆ ಮಾಡಿರುವ ಸಮಾಧಾನ ನನಗಿದೆ. ಆದರೆ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಶ್ವೇತಾ ಮತ್ತು ಪರಶುರಾಮ ತಂದೆ-ತಾಯಿ ಮೃತಪಟ್ಟಿದ್ದಾರೆ. ಅವರ ಮಕ್ಕಳು ತಂದೆ-ತಾಯಿ ಇಲ್ಲದೇ ತಬ್ಬಲಿ ಆಗಿದ್ದಾರೆ. ನಿಜಕ್ಕೂ ಈ ದುರ್ಘಟನೆಯಿಂದ ನನಗೆ ಬೇಸರ ಆಗಿದೆ. ಕಾರ್ಯಾಚರಣೆಗೆ ಗ್ರಾಮಸ್ಥರು, ಪೋಲೀಸರು ಮತ್ತು ಎಸ್ಡಿಆರ್ಎಫ್ ತಂಡ ಸಹಾಯ ಮಾಡಿದೆ ಎಂದು ಹೇಳಿದ್ದಾರೆ.2
- ಚಳ್ಳಕೆರೆ, ಜನವರಿ. 22 : ಹಳ್ಳಿಯ ಮಕ್ಕಳಲ್ಲಿ ಅಪಾರವಾದ ಬುದ್ಧಿವಂತಿಕೆ ಇರುತ್ತದೆ. ಅದಕ್ಕೆ ತಕ್ಕ ಬೆಂಬಲ ಸಿಕ್ಕರೆ ಜಾಗತಿಕವಾಗಿ ಸಾಧನೆ ಮಾಡಬಲ್ಲರು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದರು. ತಾಲೂಕಿನ ಸಾಣಿಕೆರೆ ಸಮೀಪದ ವೇದ ಸಮೂಹ ಶಿಕ್ಷಣ ಸಂಸ್ಥೆಗಳ ದಶಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ರಾಷ್ಟ್ರೀಯ ಶಿಕ್ಷಣ ನೀತಿ ಅಂಕಗಳು, ಪರೀಕ್ಷೆಗೆ ಸೀಮಿತವಾಗದೆ ಜಾಗತಿಕ ಮಟ್ಟದಲ್ಲಿ ಯುವಕರಿಗೆ ಉತ್ತಮ ಅವಕಾಶ ಕಲ್ಪಿಸುವ ಅಂಶಗಳು ನೀತಿಯಲ್ಲಿವೆ. ಹತ್ತು ವರ್ಷಗಳಲ್ಲಿ ರವೀಂದ್ರ ಹಾಗೂ ಅವರ ತಂಡ ಶ್ರಮವಹಿಸಿದ ಪ್ರತಿಫಲವಾಗಿ ವೇದ ಸಮೂಹ ಶಿಕ್ಷಣ ಸಂಸ್ಥೆ ಇಷ್ಟರ ಮಟ್ಟಿಗೆ ಬೆಳೆದು ನಿಂತಿದೆ ಎಂದರು. ಅಂಕ ಗಳಿಸುವುದೇ ಶಿಕ್ಷಣ ಅಲ್ಲ, ಮಕ್ಕಳಲ್ಲಿ ಸಂಸ್ಕಾರ, ಮಾನವೀಯತೆ ಜೊತೆಗೆ ಭವಿಷ್ಯ ರೂಪಿಸುವುದೇ ನಿಜವಾದ ಶಿಕ್ಷಣ. ನಾನು ಮುಖ್ಯಮಂತ್ರಿಯಾಗಿದ್ದ ವೇಳೆ ಭಾಗ್ಯಲಕ್ಷ್ಮಿ ಯೋಜನೆಯನ್ನು ಜಾರಿಗೆ ತರುವ ಮೂಲಕ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಿದ್ದೆ. ಅದರ ಪ್ರತಿಫಲದಿಂದ ಲಕ್ಷಾಂತರ ಹೆಣ್ಣು ಮಕ್ಕಳ ಬದುಕು ಹಾಸನಾಗಿದೆ. ವೇದ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಡಿ. ಟಿ ರವೀಂದ್ರ ಅವರು ಶಿಕ್ಷಣ ಕ್ಷೇತ್ರದಲ್ಲಿ ಯಾರೂ ಊಹೆ ಮಾಡದ ರೀತಿಯಲ್ಲಿ ಸಾಧನೆ ಮಾಡಿದ್ದಾರೆ. ಸಣ್ಣದಾಗಿ ಆರಂಭವಾದ ಸಂಸ್ಥೆ ಇಂದು ಹೆಮ್ಮರವಾಗಿ ಬೆಳೆದಿರುವುದು ಖುಷಿಯ ಸಂಗತಿ. ಬಯಲುಸೀಮೆಯ ಗ್ರಾಮೀಣ ಭಾಗದ ಸಾವಿರಾರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಶ್ಲಾಘನೀಯ ಎಂದರು.1
- *ಭಾರತ ನಲ್ಲಿ ವೈರಲ್*1
- ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷರಾದ ನಿಖಿಲ್ ಕುಮಾರ್ ಸ್ವಾಮಿಯವರ ಜನ್ನ ದಿನದ ಪ್ರಯುಕ್ತ ಮೊಳಕಾಲ್ಮೂರು ವಿಧಾನ ಸಭ ಕ್ಷೇತ್ರದ ಜೆಡಿಎಸ್ ಪರಜಿತ ಅಭ್ಯಾರ್ಥಿ ಟಿ. ವೀರಭದ್ರಪ್ಪ ಇವರ ನೇತೃತ್ವದಲ್ಲಿ ಇಂದು ಮೊಳಕಾಲ್ಮೂರು ನಗರದ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಾಲು ಹಣ್ಣು ಬಿಸ್ಕತ್ತು ಹಾಗೂ ಬ್ರೆಡ್ ವಿತರಣೆ ಮಾಡಲಾಯಿತು... ನಂತರ ಮಾತನಾಡಿದ ಅವರು ಟಿ.ವಿರಭದ್ರಪ್ಪ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷರು ಹಾಗೂ ಯುವನಾಯಕರಾದ ಶ್ರೀ ನಿಖಿಲ್ ಕುಮಾರ್ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರು ಅವರಿಗೆ ಉತ್ತಮ ಆಯುರಾರೋಗ್ಯವನ್ನು ಮತ್ತು ಜನಸೇವೆ ಮಾಡುವ ಮತ್ತಷ್ಟು ಉಜ್ವಲ ಅವಕಾಶಗಳನ್ನು ಕರುಣಿಸಲಿ. ಅವರು ನಟರಾಗಿ ಚಲನಚಿತ್ರರಂಗದಲ್ಲಿ ಉತ್ತಮ ಸೇವೆ ಸಲ್ಲಿಸಿದ್ದಾರೆ ಮತ್ತು ಅವರು ಸಿನಿಮಾಗಳಲ್ಲಿ ಸಮಾಜಕ್ಕೆ ಉತ್ತಮ ಸಂದೇಶವನ್ನ ನೀಡಿದ್ದಾರೆ ಅಷ್ಟೇ ಅಲ್ಲದೆ ರಾಜಕೀಯ ರಂಗದಲ್ಲಿ ತಮ್ಮ ನ ತೊಡಗಿಸಿಕೊಂಡಿದ್ದು ಪಕ್ಷ ಬಲವರ್ಧನೆ ಮಾಡಿಕೊಂಡು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ ಅವರ ರಾಜಕೀಯ ಭವಿಷ್ಯ ಇನ್ನಷ್ಟು ಉಜ್ವಲವಾಗಲಿ ಅವರು ಮುಂದಿನ ದಿನಗಳಲ್ಲಿ ರಾಜಕೀಯ ರಂಗದಲ್ಲಿ ಉತ್ತಮವಾಗಿ ಸೇವೆ ಸಲ್ಲಿಸಲಿ ಎಂದು ಕ್ಷೇತ್ರ ಜನತೆಯ ಆರೈಕೆಯಾಗಿದೆ ಎಂದರು.. ಜೆಡಿಎಸ್ ನ ತಾಲೂಕು ಅಧ್ಯಕ್ಷರಾದ ಕರಿಬಸಪ್ಪ ಸೇರಿದಂತೆ ಜೆಡಿಎಸ್ ಪಕ್ಷದ ಮುಖಂಡರು ಕಾರ್ಯಕರ್ತರು ಹಾಗೂ ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು ಇದ್ದರು....1
- ಸಾಗರದ ದೈವಜ್ಞ ಕಲ್ಯಾಣ ಮಂಟಪದಲ್ಲಿ ರಾಜ್ಯ ಸುರಭಿ ಶ್ರೀ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ಹನ್ನೆರಡನೇ ವರ್ಷದ ಸುರಭಿವಾಣಿ ಪತ್ರಿಕೆಯ ವಾರ್ಷಿಕೋತ್ಸವ ಸಮಾರಂಭ ಬಹಳ ವಿಜೃಂಭಣೆಯಿಂದ ನಡೆಯಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಕಾಶಿ ಜಗದ್ಗುರುಗಳು ತಮ್ಮ ಅಮೃತ ಹಸ್ತದಿಂದ ಉದ್ಘಾಟಿಸಿ ಆಶೀರ್ವದಿಸಿದರು.. ಈ ಸಂದರ್ಭದಲ್ಲಿ ಹಲವಾರು ಮಠಾಧೀಶರುಗಳು ರಾಜಕಾರಣಿಗಳು ಪ್ರಶಸ್ತಿ ಪುರಸ್ಕೃತರು ಉಪಸ್ಥಿತರಿದ್ದರು..1