Shuru
Apke Nagar Ki App…
ಕೆಆರ್ ಪುರ : ಐಟಿಐ ಭೂಮಿ ಹರಾಜು ವಿರೋಧಿಸಿ ಸ್ಥಳೀಯರಿಂದ ಕಾಲ್ನಡಿಗೆ ಜಾಥಾ ಐಟಿಐ ಸಂಸ್ಥೆಗೆ ಸೇರಿದ 44 ಎಕರೆ ಭೂಮಿ ಹರಾಜಿಗೆ ಕೇಂದ್ರ ಸರ್ಕಾರದ ಪ್ರಕಟಣೆ . ಹರಾಜು ನಿರ್ಧಾರಕ್ಕೆ ಸ್ಥಳೀಯ ಸಂಘಟನೆಗಳು ಹಾಗೂ ಸಾರ್ವಜನಿಕರಿಂದ ತೀವ್ರ ವಿರೋಧ . 44 ಎಕರೆ ಭೂಮಿಯನ್ನು ಹರಾಜು ಮಾಡದೆ ಸಾರ್ವಜನಿಕ ಬಳಕೆಗೆ ಉಳಿಸುವಂತೆ ಆಗ್ರಹ ಖಾಸಗೀಕರಣದಿಂದ ಪರಿಸರಕ್ಕೆ ಹಾನಿಯಾಗುವ ಆತಂಕ .ಐಟಿಐ ಕೈಗಾರಿಕೆಯನ್ನು ಆಧುನಿಕ ತಂತ್ರಜ್ಞಾನದೊಂದಿಗೆ ಪುನಶ್ಚೇತನಗೊಳಿಸುವಂತೆ ಒತ್ತಾಯ.ಮೊಬೈಲ್, ಲ್ಯಾಪ್ಟಾಪ್ ಸೇರಿದಂತೆ ಅಗತ್ಯ ಉತ್ಪನ್ನಗಳನ್ನು ಕೈಗೆಟುಕುವ ದರದಲ್ಲಿ ಉತ್ಪಾದಿಸಲು ಆಗ್ರಹ .ಐಟಿಐ ಪುನಶ್ಚೇತನದಿಂದ ಲಕ್ಷಾಂತರ ಉದ್ಯೋಗ ಸೃಷ್ಟಿಗೆ ಅವಕಾಶ ಎಂದು ಸ್ಥಳೀಯರ ಅಭಿಪ್ರಾಯ .ಸಾರ್ವಜನಿಕ ಆಸ್ತಿಯನ್ನು ಖಾಸಗೀಕರಣದ ಹೆಸರಿನಲ್ಲಿ ಮಾರಾಟ ಮಾಡದಂತೆ ಕೇಂದ್ರ ಸರ್ಕಾರಕ್ಕೆ ಆಗ್ರಹ 44 ಎಕರೆ ಭೂಮಿ ಹರಾಜು ಪ್ರಕ್ರಿಯೆ ಕೂಡಲೇ ಕೈಬಿಡುವಂತೆ ಒತ್ತಾಯ .ಜಾಥಾ ಬಳಿಕ ಐಟಿಐ ಮುಖ್ಯ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಲು ನಿರ್ಧಾರ
Darshan
ಕೆಆರ್ ಪುರ : ಐಟಿಐ ಭೂಮಿ ಹರಾಜು ವಿರೋಧಿಸಿ ಸ್ಥಳೀಯರಿಂದ ಕಾಲ್ನಡಿಗೆ ಜಾಥಾ ಐಟಿಐ ಸಂಸ್ಥೆಗೆ ಸೇರಿದ 44 ಎಕರೆ ಭೂಮಿ ಹರಾಜಿಗೆ ಕೇಂದ್ರ ಸರ್ಕಾರದ ಪ್ರಕಟಣೆ . ಹರಾಜು ನಿರ್ಧಾರಕ್ಕೆ ಸ್ಥಳೀಯ ಸಂಘಟನೆಗಳು ಹಾಗೂ ಸಾರ್ವಜನಿಕರಿಂದ ತೀವ್ರ ವಿರೋಧ . 44 ಎಕರೆ ಭೂಮಿಯನ್ನು ಹರಾಜು ಮಾಡದೆ ಸಾರ್ವಜನಿಕ ಬಳಕೆಗೆ ಉಳಿಸುವಂತೆ ಆಗ್ರಹ ಖಾಸಗೀಕರಣದಿಂದ ಪರಿಸರಕ್ಕೆ ಹಾನಿಯಾಗುವ ಆತಂಕ .ಐಟಿಐ ಕೈಗಾರಿಕೆಯನ್ನು ಆಧುನಿಕ ತಂತ್ರಜ್ಞಾನದೊಂದಿಗೆ ಪುನಶ್ಚೇತನಗೊಳಿಸುವಂತೆ ಒತ್ತಾಯ.ಮೊಬೈಲ್, ಲ್ಯಾಪ್ಟಾಪ್ ಸೇರಿದಂತೆ ಅಗತ್ಯ ಉತ್ಪನ್ನಗಳನ್ನು ಕೈಗೆಟುಕುವ ದರದಲ್ಲಿ ಉತ್ಪಾದಿಸಲು ಆಗ್ರಹ .ಐಟಿಐ ಪುನಶ್ಚೇತನದಿಂದ ಲಕ್ಷಾಂತರ ಉದ್ಯೋಗ ಸೃಷ್ಟಿಗೆ ಅವಕಾಶ ಎಂದು ಸ್ಥಳೀಯರ ಅಭಿಪ್ರಾಯ .ಸಾರ್ವಜನಿಕ ಆಸ್ತಿಯನ್ನು ಖಾಸಗೀಕರಣದ ಹೆಸರಿನಲ್ಲಿ ಮಾರಾಟ ಮಾಡದಂತೆ ಕೇಂದ್ರ ಸರ್ಕಾರಕ್ಕೆ ಆಗ್ರಹ 44 ಎಕರೆ ಭೂಮಿ ಹರಾಜು ಪ್ರಕ್ರಿಯೆ ಕೂಡಲೇ ಕೈಬಿಡುವಂತೆ ಒತ್ತಾಯ .ಜಾಥಾ ಬಳಿಕ ಐಟಿಐ ಮುಖ್ಯ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಲು ನಿರ್ಧಾರ
More news from ಕರ್ನಾಟಕ and nearby areas
- ಹಲಸೂರು ಕೆರೆ ಕಲ್ಯಾಣಿಯಲ್ಲಿ ದೊಡ್ಡ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡುವ ಕಾರ್ಯಕ್ಕೆ ಚಾಲನೆ ಬೆಂಗಳೂರು:ಕೇಂದ್ರ ನಗರ ಪಾಲಿಕೆಯ ಹಲಸೂರು ಕೆರೆ ಕಲ್ಯಾಣಿಯಲ್ಲಿ ಆಹಾರ ಖಾತೆ ಸಚಿವರು ಹಾಗು ಶಿವಾಜಿನಗರ ಶಾಸಕರಾದ ರಿಜ್ವಾನ್ ಹರ್ಷದ್ ರವರು ಹಲಸೂರು ಕೆರೆ ಕಲ್ಯಾಣಿಯಲ್ಲಿ ದೊಡ್ಡ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡುವ ಕಾರ್ಯಕ್ಕೆ ಚಾಲನೆ ಇಂದು ಸಂಜೆ ನೀಡಿದರು. ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ಶ್ರೀ ಜಗದೀಶ್ ಜಿ ರವರು ಹಾಗು ಅಭಿವೃದ್ಧಿ ಅಪರ ಆಯುಕ್ತರಾದ ಶ್ರೀ ವೆಂಕಟಾಚಲಪತಿ ಆರ್ ರವರು ಉಪಸ್ಥಿತರಿದ್ದಾರೆ. ಆಯುಕ್ತರು ಅಪರ ಆಯುಕ್ತರೊಂದಿಗೆ, ಜಂಟಿ ಆಯುಕ್ತರೊಂದಿಗೆ ಹಾಗು ಮುಖ್ಯ ಇಂಜಿನಿಯರ್ ಕಾರ್ಯಪಾಲಕ ಇಂಜಿನಿಯರ್ ಪೊಲೀಸ್ ಅಧಿಕಾರಿಗಳು, ಬೆಸ್ಕಾಂ ಅಧಿಕಾರಿಗಳೊಂದಿಗೆ ನಿರಂತರವಾಗಿ ಗಣೇಶ ಮೂರ್ತಿಗಳ ವಿಸರ್ಜನೆ ಕಾರ್ಯದ ಸಿದ್ಧತೆ ಬಗ್ಗೆ ಅಧಿಕಾರಿಗಳೊಂದಿಗೆ ನಿರಂತರ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.1
- ನೂರ ಒಂದು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿಸರ್ಜನೆ ಎತ್ತಿನ ಗಾಡಿಯಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ಮೆರವಣಿಗೆ ಮಾಡಿ ವಿಸರ್ಜಿಸಿದ ಗ್ರಾಮಸ್ಥರು ದೇವನಹಳ್ಳಿ ನೂರ ಒಂದು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿಸರ್ಜನೆ ಎತ್ತಿನ ಗಾಡಿಯಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ಮೆರವಣಿಗೆ ಮಾಡಿ ವಿಸರ್ಜಿಸಿದ ಗ್ರಾಮಸ್ಥರು ದೇವನಹಳ್ಳಿಯ ಪ್ರಸನ್ನಹಳ್ಳಿಯ ಜಟಾಯು ಯುವಸೇನೆವತಿಯಿಂದ ಗಣೇಶೋತ್ಸವ ಆಯೋಜನೆ ಯಾವುದೆ ಡಿಜೆ ಬಳಕೆ ಮಾಡದೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮಂಗಳ ವಾದ್ಯಗಳೊಂದಿಗೆ ಸಾಂಪ್ರದಾಯಿಕವಾಗಿ ಮೆರವಣಿಗೆ ಎತ್ತಿನಗಾಡಿ ಮತ್ತು ಮಹಿಳೆಯರಿಂದ ತಟ್ಟೆಗಳಲ್ಲಿ ಗಣಪತಿ ಮೂರ್ತಿಗಳ ಹೊತ್ತು ಮೆರವಣಿಗೆ ಪ್ರಸನ್ನಹಳ್ಳಿ ಇಂದ ಚಿಕ್ಕಕೆರೆವರೆಗೆ ಮೆರವಣಿಗೆ ಮಾಡಿ ಪರಿಸರ ಸ್ನೇಹಿ ಮೂರ್ತಿಗಳ ವಿಸರ್ಜನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಪ್ರಸನ್ನ ಹಳ್ಳಿ3
- ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಗೆ ಚಾಲನೆ ನೀಡಿದ ಸಚಿವ ಹೆಚ್.ಸಿ.ಬಾಲಕೃಷ್ಣ ನಗರದ ಜಿಲ್ಲಾ ಪಂಚಾಯತ್ ಭವನದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮವನ್ನು ಪೌರಾಢಳಿತ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಹಚ್.ಸಿ.ಬಾಲಕೃಷ್ಣ ಉದ್ಘಾಟನೆ ನೇರವೇರಿಸಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು , ನಮ್ಮ ಯುವ ಜನಾಂಗ ಸಂಸತ್ತು ಹಾಗೂ ವಿಧಾನ ಸಭೆ ಕಲಾಪಗಳಲ್ಲಿ ಯಾವ ರೀತಿ ಚರ್ಚೆ ಮಾಡಬೇಕು, ಯಾವ ರೀತಿ ಪಾಲ್ರ್ಗೊಳ್ಳಬೇಕು ಹಾಗೂ ರಾಷ್ಟ್ರೀಯ ಸಮಸ್ಯೆಗಳನ್ನು ಯಾವ ರೀತಿ ಪ್ರಸ್ತಾಪ ಮಾಡಬೇಕು ಎಂಬುದರ ಅರಿವು ಮೂಡಿಸುವ ನಿಟ್ಟಿನಲ್ಲಿ ಸರ್ಕಾರ ಕಾರ್ಯಕ್ರಮ ರೂಪಿಸಿದೆ. ಇನ್ನೂ ತಿಂಗಳ ಕಾಲಾವಕಾಶದಲ್ಲಿ ಪ್ರತಿ ತಾಲ್ಲೂಕು ಮಟ್ಟದಲ್ಲಿ ಮಕ್ಕಳ ಸಂಸತ್ತ ಕಾರ್ಯಕ್ರಮ ಅಯೋಜಿಸಿ ನಂತರ ಜಿಲ್ಲಾ ಮಟ್ಟದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲು ಸರ್ಕಾರ ಆದೇಶ ಮಾಡಿದೆ ಎಂದರು. ಕಾರ್ಯಕ್ರಮದಲ್ಲಿ ಸಚಿವ ಹೆಚ್.ಸಿ.ಬಾಲಕೃಷ್ಣ, ರಾಮನಗರ ಶಾಸಕ ಹೆಚ್.ಎ.ಇಕ್ಬಾಲ್ ಹುಸೇನ್, ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕಾರ್, ಜಿಲ್ಲಾಪೋಲಿಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಶಾಲಾ ಮಕ್ಕಳು ಪಾಲ್ಗೊಂಡಿದ್ದರು1
- * ಬಾಲಗಂಗಾಧರನಾಥ್ ತಿಲಕ್ ರವರ ಆಶಯದಂತೆ ಜನತೆಯನ್ನು ಒಗ್ಗೂಡಿಸಲು ಎಲ್ ಜಿ ಫೌಂಡೇಶನ್ ಆಶ್ರಯದಲ್ಲಿ ಅದ್ದೂರಿ ಗಣೇಶೋತ್ಸವ ಆಚರಣೆ: ಸಮಾಜ ಸೇವಕ ದೊಡ್ಡವಲ್ಲಬಿ ಲಕ್ಷ್ಮಣಗೌಡ* ಕೋಲಾರ : ಸಮಾಜ ಸೇವೆಯ ಮೂಲಕ ತನ್ನದೇ ಆದ ಹೆಸರು ಘನತೆ ಪಡೆದಿರುವ ಸಮಾಜ ಸೇವಕರು ಮತ್ತು ಎಲ್ ಜಿ ಫೌಂಡೇಶನ್ ಅಧ್ಯಕ್ಷರು ಹಾಗೂ ಆರ್ಯಭಟ ಪ್ರಶಸ್ತಿ ವಿಜೇತರಾದ ಕರುಣಾಮಯಿ ದೊಡ್ಡವಲ್ಲಬಿ ಲಕ್ಷ್ಮಣಗೌಡರ ನೇತೃತ್ವದಲ್ಲಿ ಅವರ ಹುಟ್ಟೂರಾದ ದೊಡ್ಡವಲ್ಲಬಿಯಲ್ಲಿ ಬಾಲಗಂಗಾಧರನಾಥ್ ತಿಲಕ್ ರವರ ಆಶಯದಂತೆ ಜನತೆಯನ್ನು ಒಗ್ಗೂಡಿಸಲು ಎಲ್ ಜಿ ಫೌಂಡೇಶನ್ ಆಶ್ರಯದಲ್ಲಿ ಅದ್ದೂರಿಯಾಗಿ ವೈಭವದಿಂದ ವಿಶೇಷ ಹಾಗೂ ವಿಶಿಷ್ಟವಾಗಿ ಗಣೇಶೋತ್ಸವ ಹಬ್ಬದವನ್ನು ಆಚರಣೆ ಮಾಡಲಾಯಿತು. ಈ ಸಂಧರ್ಭದಲ್ಲಿ ಮಾತಾಡಿದ ಲಕ್ಷ್ಮಣಗೌಡರು ಒಂದು ಊರಿನಲ್ಲಿ ಏಕತೆ ಮೂಡಿಸಲು ಗಣೇಶ ಹಬ್ಬ ಉತ್ತಮ ವೇದಿಕೆಯಾಗಿದ್ದು, ಮಹಿಳೆಯರಿಗೆ ಬಾಗೀನ ಕೊಡುವುದರೊಂದಿಗೆ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಲ್ಯಾಪ್ಟಾಪ್ಗಳನ್ನು ವಿತರಣೆ ಮಾಡಿ, ಮಕ್ಕಳನ್ನು ಪ್ರೋತ್ಸಾಹಿಲು ಮೂಜಿಕಲ್ ಚೇರ್ ಆಡಿಸಿ ಅವರಿಗೆ ಸ್ಕೂಲ್ ಬ್ಯಾಗ್ ಹಾಗೂ ಫೈಲ್ ಗಳನ್ನು ನೀಡುವ ಮೂಲಕ ಹಾಗೂ ಯುವಕರನ್ನು ಉತ್ತೇಜಿಸಲು ಕ್ರಿಕೆಟ್ ಮತ್ತು ವಾಲಿಬಾಲ್ ಕಿಟ್ಟುಗಳನ್ನು ನೀಡುವದರೊಂದಿಗೆ ಮತ್ತು ಹಿರಿಯರಿಗೆ ಮಡಿಕೆ ಹೊಡೆಯುವ ಕಾರ್ಯಕ್ರಮ ನಡೆಸಿ ಅವರುಗಳಿಗೆ ರಾಮ್ ರಾಜ್ ರೇಷ್ಮೆ ಪಂಚೆ ಮತ್ತು ಶರ್ಟ್, ಶಲ್ಯ ವಿತರಿಸಿ , ಎಲ್ಲಾ ಜಾತಿ ವರ್ಗ ಹಾಗೂ ಎಲ್ಲಾ ಪಕ್ಷದ ವರನ್ನು ಒಗ್ಗೂಡಿಸಿ ಗ್ರಾಮದಲ್ಲಿ ಒಗ್ಗಟು ಪ್ರದರ್ಶಿಸು ಮೂಲಕ ಅದ್ದೂರಿಯಾಗಿ ಹಾಗೂ ವೈಭವದಿಂದ ಗೌರಿ ಗಣೇಶನ ಹಬ್ಬವನ್ನು ಎಲ್ ಜಿ ಫೌಂಡೇಶನ್ ನೇತೃತ್ವದಲ್ಲಿ ಆಚರಣೆ ಮಾಡಲಾಯಿತು ಎಂದು ತಿಳಿಸಿದರು. ಇದೇ ಅಲ್ಲದೆ ಊರಿನ ಹೈಮಾಸ್ಟ್ ದೀಪ ಮತ್ತು ದೇವಾಲಯದ ದೀಪಗಳ ದುರಸ್ತಿ ಮಾಡಿಸಿದ್ದು,ಸುಮಾರು 500 ಜನ ಹೆಣ್ಣು ಮಕ್ಕಳಿಗೆ ಹಬ್ಬದ ಪ್ರಯುಕ್ತ ಬಾಗೀನ ನೀಡಲಾಗಿದ್ದು,ಮಕ್ಕಳು, ಯುವಕರು ಹಾಗೂ ಹಿರಿಯರು ಸೇರಿ ಒಂದು ಸಾವಿರಕ್ಕೂ ಹೆಚ್ಚು ಜನ ಸೇರಿ ಊರಿನ ಅಭಿವೃದ್ಧಿಯ ಸಂಕೇತವನ್ನು ತೋರಿಸಲು ಹಾಗೂ ಬಾಲಗಂಗಾಧರ ನಾಥರ ಆಶಯವನ್ನು ಸಾಕಾರಗೊಳಿಸಲು ಹಿಂದೂಗಳು ಒಗ್ಗೂಡಿ ಹಬ್ಬವನ್ನು ಆಚರಣೆ ಮಾಡುವ ಮೂಲಕ ಸಂಭ್ರಮಿಸಲಾಯಿತು ಎಂದು ಲಕ್ಷ್ಮಣಗೌಡರು ತಿಳಿಸಿದರು. ಹಬ್ಬದ ಅಂಗವಾಗಿ ಆಟಗಳನ್ನು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.4
- ಹೊಗರಿ ಪ್ರೀಮಿಯರ್ ಲೀಗ್ ಸೀಸನ್ -1 ಕೋಲಾರ-ತಾಲ್ಲೂಕಿನ ಹೊಗರಿ ಗ್ರಾಮದ ಕ್ರೀಡಾಂಗಣದಲ್ಲಿ ಹೊಗರಿ ಪ್ರೀಮಿಯರ್ ಲೀಗ್ ಸೀಸನ್ -1 ಪಂದ್ಯಾವಳಿಗಳಿಗೆ ಚಾಲನೆ ನೀಡಲಾಯಿತು ಹೊಗರಿಯ ಸುಮಾರು ಐದು ತಂಡಗಳು ಭಾಗವಹಿಸಿದ್ದು ಗ್ರಾಮಸ್ಥರೊಂದಿಗೆ ಕ್ರೀಡಾಭಿಮಾನ ಮೆರೆದರು . ಆಯೋಜಕರು ಮಾತನಾಡಿ ಪ್ರತೀ ವರುಷ ಗೌರಿ -ಗಣೇಶ ಹಬ್ಬದ ಅಂಗವಾಗಿ ಟೂರ್ನಮೆಂಟ್ ಆಯೋಜಿಸಲಾಗುತ್ತದೆ ಈ ವರ್ಷವೂ ಡಿ ಐ ಜಿ ಪಿ ದೇವರಾಜ್ ಅವರ ಹಾಗೂ ಗಾಜಲದಿನ್ನೇ ಗಜ ಸಹಕಾರದೊಂದಿಗೆ ಪಂದ್ಯಗಳು ನಡೆಯುತ್ತಿದ್ದು ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಅವರು ಭಾಗವಹಿಸಲಿದ್ದು ವಿಜೇತ ತಂಡಗಳಿಗೆ ಬಹುಮಾನಗಳನ್ನು ವಿತರಿಸುವರು ಎಂದರು . ಹೊಗರಿ ಪ್ರೀಮಿಯರ್ ಲೀಗ್ ಸೀಸನ್ -1 ಕೋಲಾರ-ತಾಲ್ಲೂಕಿನ ಹೊಗರಿ ಗ್ರಾಮದ ಕ್ರೀಡಾಂಗಣದಲ್ಲಿ ಹೊಗರಿ ಪ್ರೀಮಿಯರ್ ಲೀಗ್ ಸೀಸನ್ -1 ಪಂದ್ಯಾವಳಿಗಳಿಗೆ ಚಾಲನೆ ನೀಡಲಾಯಿತು ಹೊಗರಿಯ ಸುಮಾರು ಐದು ತಂಡಗಳು ಭಾಗವಹಿಸಿದ್ದು ಗ್ರಾಮಸ್ಥರೊಂದಿಗೆ ಕ್ರೀಡಾಭಿಮಾನ ಮೆರೆದರು . ಆಯೋಜಕರು ಮಾತನಾಡಿ ಪ್ರತೀ ವರುಷ ಗೌರಿ -ಗಣೇಶ ಹಬ್ಬದ ಅಂಗವಾಗಿ ಟೂರ್ನಮೆಂಟ್ ಆಯೋಜಿಸಲಾಗುತ್ತದೆ ಈ ವರ್ಷವೂ ಡಿ ಐ ಜಿ ಪಿ ದೇವರಾಜ್ ಅವರ ಹಾಗೂ ಗಾಜಲದಿನ್ನೇ ಗಜ ಸಹಕಾರದೊಂದಿಗೆ ಪಂದ್ಯಗಳು ನಡೆಯುತ್ತಿದ್ದು ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಅವರು ಭಾಗವಹಿಸಲಿದ್ದು ವಿಜೇತ ತಂಡಗಳಿಗೆ ಬಹುಮಾನಗಳನ್ನು ವಿತರಿಸುವರು ಎಂದರು .1
- ಗೌರಿ-ಗಣೇಶ ಹಬ್ಬ: ಸಮಾಜ ಸೇವಕ ಕೊತ್ತನೂರು ಪಂಚಾಕ್ಷರಿ ರೆಡ್ಡಿ ತೋಟದ ಮನೆಯಲ್ಲಿ ವಿಶೇಷ ಪೂಜೆ ಹಾಗೂ ಶುಭಾಶಯ ಸಲ್ಲಿಕೆ1
- ಗಣೇಶನ ವಿಗ್ರಹದ ಕಣ್ಣಿಂದ ಕಣ್ಣೀರು; ತಾಜಾಪುರದಲ್ಲಿ ಸಂಚಲನ ದೇವರ ಕೋಪ ಶಮನಕ್ಕೆ ಗ್ರಾಮಸ್ಥರಿಂದ ವಿಶೇಷ ಪೂಜೆ ಗಣೇಶನ ವಿಗ್ರಹದ ಕಣ್ಣಿಂದ ಕಣ್ಣೀರು; ತಾಜಾಪುರದಲ್ಲಿ ಸಂಚಲನ ದೇವರ ಕೋಪ ಶಮನಕ್ಕೆ ಗ್ರಾಮಸ್ಥರಿಂದ ವಿಶೇಷ ಪೂಜೆ1
- ದೇವನಹಳ್ಳಿಯಲ್ಲಿ ನೂರ ಒಂದು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿಸರ್ಜನೆ ಬೆಂಗಳೂರು:ಎತ್ತಿನ ಗಾಡಿಯಲ್ಲಿ ನೂರ ಒಂದು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ಮೆರವಣಿಗೆ ಮಾಡಿ ಗ್ರಾಮಸ್ಥರು ವಿಸರ್ಜನೆ ಮಾಡಿದ್ದಾರೆ.ದೇವನಹಳ್ಳಿಯ ಪ್ರಸನ್ನಹಳ್ಳಿಯ ಜಟಾಯು ಯುವಸೇನೆವತಿಯಿಂದ ಗಣೇಶೋತ್ಸವ ಆಯೋಜನೆ ಮಾಡಲಾಗಿದ್ದು,ಯಾವುದೆ ಡಿಜೆ ಬಳಕೆ ಮಾಡದೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮಂಗಳ ವಾದ್ಯಗಳೊಂದಿಗೆ ಸಾಂಪ್ರದಾಯಿಕವಾಗಿ ಮೆರವಣಿಗೆ ಮಾಡಲಾಗಿದೆ.ಎತ್ತಿನಗಾಡಿ ಮತ್ತು ಮಹಿಳೆಯರಿಂದ ತಟ್ಟೆಗಳಲ್ಲಿ ಗಣಪತಿ ಮೂರ್ತಿಗಳ ಹೊತ್ತು ಪ್ರಸನ್ನಹಳ್ಳಿ ಇಂದ ಚಿಕ್ಕಕೆರೆವರೆಗೆ ಮೆರವಣಿಗೆ ಮಾಡಿ ಪರಿಸರ ಸ್ನೇಹಿ ಮೂರ್ತಿಗಳ ವಿಸರ್ಜನೆ ಮಾಡಿದ್ದಾರೆ.1
- ಹೆಚ್ಡಿಕೆ ಕೇಂದ್ರ ಮಂತ್ರಿಯಂತೆ ವರ್ತಿಸಲಿ- ಹೆಚ್.ಸಿ.ಬಾಲಕೃಷ್ಣ ವ್ಯಂಗ್ಯ :ಹೆಚ್ಡಿಕೆ ಕೇಂದ್ರ ಮಂತ್ರಿಯಂತೆ ವರ್ತಿಸಲಿ, ಗ್ರಾಮ ಪಂಚಾಯತಿ ಸದಸ್ಯರಂತೆ ಅಲ್ಲ - ಪೌರಾಢಳಿತ ಸಚಿವ ಹೆಚ್.ಸಿ.ಬಾಲಕೃಷ್ಣ: ನೈಸ್, ಕೆಪಿಎಸ್ಸಿ ಹಗರಣ ಹಾಗೂ ಬಿಡದಿ ಟೌನ್ ಶಿಪ್ ವಿಚಾರವಾಗಿ ನಾವು ಧ್ವನಿ ಎತ್ತಿದ್ದಕ್ಕೆ ಪ್ರಜ್ವಲ್ ವಿಚಾರ ಮುನ್ನೆಲೆಗೆ ತಂದಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪ ಕ್ಕೆ ರಾಮನಗರದಲ್ಲಿ ಪ್ರತಿಕ್ರಿಯೆ ನೀಡಿದ ಪೌರಾಢಳಿತ ಸಚಿವ ಹೆಚ್.ಸಿ.ಬಾಲಕೃಷ್ಣ .ಪ್ರಜ್ವಲ್ ರೇವಣ್ಣ ಪ್ರಕರಣಕ್ಕೂ ಆ ಪ್ರಕರಣಗಳಿಗೂ ಏನು ಸಂಬಂಧ.? ಹೀಗೆ ಮಾತನಾಡಿಯೇ ಪ್ರಜ್ವಲ್ ರನ್ನ ಜೈಲಿಗೆ ಕಳುಹಿಸಿದ್ರು. ಪ್ರಜ್ವಲ್ ರೇವಣ್ಣ ಜೈಲಲ್ಲೇ ಇರಬೇಕು ಅನ್ನೋದು ಕುಮಾರಸ್ವಾಮಿ ಅಭಿಲಾಷೆ. ಜವಾಬ್ದಾರಿಯುತ ಮಂತ್ರಿ ಸ್ವಲ್ಪ ಗೌರವಯುತವಾಗಿ ಮಾತನಾಡಿ. ಕೇಂದ್ರ ಮಂತ್ರಿ ಅನ್ನೋದನ್ನ ಮರೆತು ಪಂಚಾಯ್ತಿ ಮೆಂಬರ್ ರೀತಿ ಆಡ್ತಿದ್ದಾರೆ. ಪ್ರಜ್ವಲ್ ಮುಗಿಸುವ ತನಕ ಕುಮಾರಸ್ವಾಮಿ ಸುಮ್ಮನಿರಲ್ಲ. ಎಂದು ಸಚಿವ ಹೆಚ್.ಸಿ.ಬಾಲಕೃಷ್ಣ, ಕೇಂದ್ರ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಹರಿಹಾಯ್ದರು1