logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಹನುಮಸಾಗರಕ್ಕೆ ನೂತನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಂಜೂರಾತಿಗೆ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿಗೆ ಶಾಸಕ ದೊಡ್ಡನಗೌಡ ಪಾಟೀಲ ಮನವಿ ಕುಷ್ಟಗಿ: ತಾಲೂಕಿನ ಪ್ರಮುಖ ಕೇಂದ್ರವಾದ ಹನುಮಸಾಗರ ಪಟ್ಟಣಕ್ಕೆ ನೂತನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು (ಡಿಗ್ರಿ ಕಾಲೇಜು) ಮಂಜೂರು ಮಾಡುವಂತೆ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಎಚ್. ಪಾಟೀಲ ಅವರು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರಿಗೆ ಬೆಂಗಳೂರಿನಲ್ಲಿ ಭೇಟಿಯಾಗಿ ಅಧಿಕೃತ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಕುಷ್ಟಗಿ ವಿಧಾನಸಭಾ ಕ್ಷೇತ್ರದ ಕಾಲೇಜುಗಳ ಮೂಲಸೌಕರ್ಯ, ಅಭಿವೃದ್ಧಿ ಹಾಗೂ ಶೈಕ್ಷಣಿಕ ಸೌಲಭ್ಯಗಳ ಸುಧಾರಣೆ ಕುರಿತಂತೆ ಸಚಿವರೊಂದಿಗೆ ಸುದೀರ್ಘ ಮಹತ್ವದ ಚರ್ಚೆ ನಡೆಸಲಾಯಿತು. 50ಕ್ಕೂ ಹೆಚ್ಚು ಗ್ರಾಮಗಳ ವಿದ್ಯಾರ್ಥಿಗಳಿಗೆ ಆಸರೆ ಹನುಮಸಾಗರ ಗ್ರಾಮ ಪಂಚಾಯಿತಿಯು ಪಟ್ಟಣವಾಗಿ ಮೇಲ್ದರ್ಜೆಗೇರಿದ್ದು, ಇದು ಸುತ್ತಮುತ್ತಲಿನ ಹನುಮನಾಳ ಸೇರಿದಂತೆ ಸುಮಾರು 50 ರಿಂದ 60 ಹಳ್ಳಿಗಳಿಗೆ ಪ್ರಮುಖ ಶೈಕ್ಷಣಿಕ ಮತ್ತು ವಾಣಿಜ್ಯ ಕೇಂದ್ರವಾಗಿದೆ. ಪ್ರತಿವರ್ಷ ನೂರಾರು ವಿದ್ಯಾರ್ಥಿಗಳು ಪಿಯುಸಿ ಶಿಕ್ಷಣ ಮುಗಿಸಿ ಉನ್ನತ ಶಿಕ್ಷಣಕ್ಕಾಗಿ ಗಜೇಂದ್ರಗಡ, ಇಲಕಲ್ ಹಾಗೂ ಕುಷ್ಟಗಿ ಪಟ್ಟಣಗಳಿಗೆ ನಿತ್ಯ ದೂರದ ಪ್ರಯಾಣ ಮಾಡಬೇಕಾದ ಅನಿವಾರ್ಯತೆ ಇದೆ. ಬಡ ವಿದ್ಯಾರ್ಥಿಗಳ ಶಿಕ್ಷಣ ಮೊಟಕು ತಪ್ಪಿಸಲು ಕ್ರಮ ಅಗತ್ಯ ದೂರದ ಊರುಗಳಿಗೆ ತೆರಳಲು ನಿತ್ಯದ ಪ್ರಯಾಣದ ವೆಚ್ಚ, ಸಮಯದ ಅಭಾವ ಹಾಗೂ ವಸತಿ ಕೊರತೆಯಿಂದಾಗಿ ಬಡ ಮತ್ತು ಮಧ್ಯಮ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳು, ವಿಶೇಷವಾಗಿ ಗ್ರಾಮೀಣ ಹೆಣ್ಣುಮಕ್ಕಳು ಪದವಿ ಶಿಕ್ಷಣವನ್ನು ಅರ್ಧದಲ್ಲೇ ಮೊಟಕುಗೊಳಿಸುವ ಆತಂಕವಿದೆ. ಸ್ಥಳೀಯವಾಗಿಯೇ ಪದವಿ ಕಾಲೇಜು ಆರಂಭವಾದರೆ ಬಡ ಕುಟುಂಬಗಳ ಮೇಲಿನ ಆರ್ಥಿಕ ಹೊರೆ ತಪ್ಪಲಿದ್ದು, ಎಲ್ಲರಿಗೂ ಸುಲಭವಾಗಿ ಉನ್ನತ ಶಿಕ್ಷಣ ಲಭ್ಯವಾಗಲಿದೆ ಎಂದು ಶಾಸಕರು ಸಚಿವರ ಗಮನಕ್ಕೆ ತಂದರು. ಕಾಲೇಜು ಸ್ಥಾಪನೆಗೆ 6 ಎಕರೆ ಜಾಗ ಲಭ್ಯ ಹನುಮಸಾಗರ ಪಟ್ಟಣದ ಸರ್ವೇ ನಂ. 70/5 ರಲ್ಲಿ ಈಗಾಗಲೇ ಸರ್ಕಾರಿ ಪದವಿ ಪೂರ್ವ ಕಾಲೇಜು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ. ಇದೇ ಆವರಣದಲ್ಲಿ ಸುಮಾರು 6 ಎಕರೆ ಸರ್ಕಾರಿ ಜಾಗ ಲಭ್ಯವಿದ್ದು, ನೂತನ ಪ್ರಥಮ ದರ್ಜೆ ಕಾಲೇಜು ಕಟ್ಟಡ ಹಾಗೂ ಕ್ಯಾಂಪಸ್ ನಿರ್ಮಾಣಕ್ಕೆ ಯಾವುದೇ ಭೂಮಿಯ ಕೊರತೆಯಿಲ್ಲ ಎಂದು ಮನವಿಯಲ್ಲಿ ವಿವರಿಸಲಾಗಿದೆ. ಪ್ರಸಕ್ತ ಸಾಲಿನಲ್ಲೇ ಮಂಜೂರಾತಿಗೆ ಒತ್ತಾಯ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ಹಿತದೃಷ್ಟಿಯಿಂದ ಅಗತ್ಯ ಆಡಳಿತಾತ್ಮಕ ಪ್ರಕ್ರಿಯೆಗಳನ್ನು ಶೀಘ್ರವಾಗಿ ಪೂರ್ಣಗೊಳಿಸಿ, ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿಯೇ ಹನುಮಸಾಗರಕ್ಕೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಂಜೂರು ಮಾಡಬೇಕು ಎಂದು ಶಾಸಕ ದೊಡ್ಡನಗೌಡ ಪಾಟೀಲ ಅವರು ಉನ್ನತ ಶಿಕ್ಷಣ ಸಚಿವರಲ್ಲಿ ಪ್ರಬಲವಾಗಿ ಆಗ್ರಹಿಸಿದರು.

51 min ago
user_Maruti Gumagera
Maruti Gumagera
Local News Reporter ಕುಷ್ಟಗಿ, ಕೊಪ್ಪಳ, ಕರ್ನಾಟಕ•
51 min ago
10981a2e-fdaa-46c2-b1a6-e6258426ff3f

ಹನುಮಸಾಗರಕ್ಕೆ ನೂತನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಂಜೂರಾತಿಗೆ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿಗೆ ಶಾಸಕ ದೊಡ್ಡನಗೌಡ ಪಾಟೀಲ ಮನವಿ ಕುಷ್ಟಗಿ: ತಾಲೂಕಿನ ಪ್ರಮುಖ ಕೇಂದ್ರವಾದ ಹನುಮಸಾಗರ ಪಟ್ಟಣಕ್ಕೆ ನೂತನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು (ಡಿಗ್ರಿ ಕಾಲೇಜು) ಮಂಜೂರು ಮಾಡುವಂತೆ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಎಚ್. ಪಾಟೀಲ ಅವರು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರಿಗೆ ಬೆಂಗಳೂರಿನಲ್ಲಿ ಭೇಟಿಯಾಗಿ ಅಧಿಕೃತ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಕುಷ್ಟಗಿ ವಿಧಾನಸಭಾ ಕ್ಷೇತ್ರದ ಕಾಲೇಜುಗಳ ಮೂಲಸೌಕರ್ಯ, ಅಭಿವೃದ್ಧಿ ಹಾಗೂ ಶೈಕ್ಷಣಿಕ ಸೌಲಭ್ಯಗಳ ಸುಧಾರಣೆ ಕುರಿತಂತೆ ಸಚಿವರೊಂದಿಗೆ ಸುದೀರ್ಘ ಮಹತ್ವದ ಚರ್ಚೆ ನಡೆಸಲಾಯಿತು. 50ಕ್ಕೂ ಹೆಚ್ಚು ಗ್ರಾಮಗಳ ವಿದ್ಯಾರ್ಥಿಗಳಿಗೆ ಆಸರೆ ಹನುಮಸಾಗರ ಗ್ರಾಮ ಪಂಚಾಯಿತಿಯು ಪಟ್ಟಣವಾಗಿ ಮೇಲ್ದರ್ಜೆಗೇರಿದ್ದು, ಇದು ಸುತ್ತಮುತ್ತಲಿನ ಹನುಮನಾಳ ಸೇರಿದಂತೆ ಸುಮಾರು 50 ರಿಂದ 60 ಹಳ್ಳಿಗಳಿಗೆ ಪ್ರಮುಖ ಶೈಕ್ಷಣಿಕ ಮತ್ತು ವಾಣಿಜ್ಯ ಕೇಂದ್ರವಾಗಿದೆ. ಪ್ರತಿವರ್ಷ ನೂರಾರು ವಿದ್ಯಾರ್ಥಿಗಳು ಪಿಯುಸಿ ಶಿಕ್ಷಣ ಮುಗಿಸಿ ಉನ್ನತ ಶಿಕ್ಷಣಕ್ಕಾಗಿ ಗಜೇಂದ್ರಗಡ, ಇಲಕಲ್ ಹಾಗೂ ಕುಷ್ಟಗಿ ಪಟ್ಟಣಗಳಿಗೆ ನಿತ್ಯ ದೂರದ ಪ್ರಯಾಣ ಮಾಡಬೇಕಾದ ಅನಿವಾರ್ಯತೆ ಇದೆ. ಬಡ ವಿದ್ಯಾರ್ಥಿಗಳ ಶಿಕ್ಷಣ ಮೊಟಕು ತಪ್ಪಿಸಲು ಕ್ರಮ ಅಗತ್ಯ ದೂರದ ಊರುಗಳಿಗೆ ತೆರಳಲು ನಿತ್ಯದ ಪ್ರಯಾಣದ ವೆಚ್ಚ, ಸಮಯದ ಅಭಾವ ಹಾಗೂ ವಸತಿ ಕೊರತೆಯಿಂದಾಗಿ ಬಡ ಮತ್ತು ಮಧ್ಯಮ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳು, ವಿಶೇಷವಾಗಿ ಗ್ರಾಮೀಣ ಹೆಣ್ಣುಮಕ್ಕಳು ಪದವಿ ಶಿಕ್ಷಣವನ್ನು ಅರ್ಧದಲ್ಲೇ ಮೊಟಕುಗೊಳಿಸುವ ಆತಂಕವಿದೆ. ಸ್ಥಳೀಯವಾಗಿಯೇ ಪದವಿ ಕಾಲೇಜು ಆರಂಭವಾದರೆ ಬಡ ಕುಟುಂಬಗಳ ಮೇಲಿನ ಆರ್ಥಿಕ ಹೊರೆ ತಪ್ಪಲಿದ್ದು, ಎಲ್ಲರಿಗೂ ಸುಲಭವಾಗಿ ಉನ್ನತ ಶಿಕ್ಷಣ ಲಭ್ಯವಾಗಲಿದೆ ಎಂದು ಶಾಸಕರು ಸಚಿವರ ಗಮನಕ್ಕೆ ತಂದರು. ಕಾಲೇಜು ಸ್ಥಾಪನೆಗೆ 6 ಎಕರೆ ಜಾಗ ಲಭ್ಯ ಹನುಮಸಾಗರ ಪಟ್ಟಣದ ಸರ್ವೇ ನಂ. 70/5 ರಲ್ಲಿ ಈಗಾಗಲೇ ಸರ್ಕಾರಿ ಪದವಿ ಪೂರ್ವ ಕಾಲೇಜು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ. ಇದೇ ಆವರಣದಲ್ಲಿ ಸುಮಾರು 6 ಎಕರೆ ಸರ್ಕಾರಿ ಜಾಗ ಲಭ್ಯವಿದ್ದು, ನೂತನ ಪ್ರಥಮ ದರ್ಜೆ ಕಾಲೇಜು ಕಟ್ಟಡ ಹಾಗೂ ಕ್ಯಾಂಪಸ್ ನಿರ್ಮಾಣಕ್ಕೆ ಯಾವುದೇ ಭೂಮಿಯ ಕೊರತೆಯಿಲ್ಲ ಎಂದು ಮನವಿಯಲ್ಲಿ ವಿವರಿಸಲಾಗಿದೆ. ಪ್ರಸಕ್ತ ಸಾಲಿನಲ್ಲೇ ಮಂಜೂರಾತಿಗೆ ಒತ್ತಾಯ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ಹಿತದೃಷ್ಟಿಯಿಂದ ಅಗತ್ಯ ಆಡಳಿತಾತ್ಮಕ ಪ್ರಕ್ರಿಯೆಗಳನ್ನು ಶೀಘ್ರವಾಗಿ ಪೂರ್ಣಗೊಳಿಸಿ, ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿಯೇ ಹನುಮಸಾಗರಕ್ಕೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಂಜೂರು ಮಾಡಬೇಕು ಎಂದು ಶಾಸಕ ದೊಡ್ಡನಗೌಡ ಪಾಟೀಲ ಅವರು ಉನ್ನತ ಶಿಕ್ಷಣ ಸಚಿವರಲ್ಲಿ ಪ್ರಬಲವಾಗಿ ಆಗ್ರಹಿಸಿದರು.

More news from ಕರ್ನಾಟಕ and nearby areas
  • ಬಸವನಗುಡಿ ಬಳಿ ಈದ್ ಮಿಲಾದ್ ಮೆರವಣಿಗೆ ವೇಳೆ ಮುಸ್ಲಿಂ ಗೂಂಡಾಗಳಿಂದ ಪುನೀತ್ ಕೆರೆಹಳ್ಳಿ ಕಾರ್ಯಾಲಯ ಬಳಿ ಗೂಂಡಾ ವರ್ತನೆ ಕಾರ್ಯಕರ್ತ ಮುರುಳಿಯ ಮೇಲೆ ಹಲ್ಲೆ…
    1
    ಬಸವನಗುಡಿ ಬಳಿ ಈದ್ ಮಿಲಾದ್ ಮೆರವಣಿಗೆ ವೇಳೆ ಮುಸ್ಲಿಂ ಗೂಂಡಾಗಳಿಂದ ಪುನೀತ್ ಕೆರೆಹಳ್ಳಿ ಕಾರ್ಯಾಲಯ ಬಳಿ ಗೂಂಡಾ ವರ್ತನೆ ಕಾರ್ಯಕರ್ತ ಮುರುಳಿಯ ಮೇಲೆ ಹಲ್ಲೆ…
    user_YSRmedia vijayanagaraupsates
    YSRmedia vijayanagaraupsates
    Mobile Phone Accessory Shop ಹೊಸಪೇಟೆ, ವಿಜಯನಗರ, ಕರ್ನಾಟಕ•
    10 hrs ago
  • ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬಾಗಲಕೋಟೆ ನಗರದ ಉಪ್ಪರ ಮೊಹಲ್ಲಾದಲ್ಲಿ ಸ್ಥಬ್ದ ಚಿತ್ರ ಪ್ರದರ್ಶನ
    1
    ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬಾಗಲಕೋಟೆ ನಗರದ ಉಪ್ಪರ ಮೊಹಲ್ಲಾದಲ್ಲಿ ಸ್ಥಬ್ದ ಚಿತ್ರ ಪ್ರದರ್ಶನ
    user_Shabbir Bijapur
    Shabbir Bijapur
    Local News Reporter ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    11 hrs ago
  • *ಕೂಡ್ಲಿಗಿ : SFI ಸಮಾವೇಶ - ಸಮಘ್ರ ಶೈಕ್ಷಣಿಕ ಪ್ರಗತಿಗೆ ಎಲ್ಲರೂ ಪ್ರಯತ್ನಿಸೋಣ - ಗುನ್ನಳ್ಳಿ ರಾಘವೇಂದ್ರ ಕರೆ- *ಕೂಡ್ಲಿಗಿ : SFI ಸಮಾವೇಶ - ಸಮಘ್ರ ಶೈಕ್ಷಣಿಕ ಪ್ರಗತಿಗೆ ಎಲ್ಲರೂ ಪ್ರಯತ್ನಿಸೋಣ - ಗುನ್ನಳ್ಳಿ ರಾಘವೇಂದ್ರ ಕರೆ*-ವಿಜಯನಗರ ಜಿಲ್ಲೆ ಕೂಡ್ಲಿಗಿ : ಕ್ಷೇತ್ರದ ಸಮಘ್ರ ಶೈಕ್ಷಣಿಕ ಅಭಿವೃದ್ಧಿಗಾಗಿ , ಎಲ್ಲರೂ ಪ್ರಾಮಾಣಿಕವಾಗಿ ಪ್ರಯತ್ನಿಸೋಣ ಎಂದು ಮುಖಂಡ ಗುನ್ನಳ್ಳಿ ರಾಘವೇಂದ್ರ ಕರೆನೀಡಿದರು. ಅವರು ಆ 27ರಂದು ಪಟ್ಟಣದ ಪಟ್ಟಣದ ಪ್ರವಾಸಿ ಮಂದಿರದಲ್ಲಿ , ಭಾರತ ವಿದ್ಯಾರ್ಥಿ ಪೆಡರೇಷನ್ ವತಿಯಿಂದ ಜರುಗಿದ ತಾಲೂಕು ಸಮಾವೇಶದಲ್ಲಿ ಮಾತನಾಡಿದರು. ವೇದಿಕೆಯಲ್ಲಿ ಎಸ್ಎಫ್ಐ ರಾಜ್ಯ ಉಪದಾಧ್ಯಕ್ಷರಾದ ಬಸವರಾಜ ಗುಳೆದಾಳ್ ಮುಖಂಡರಾದ ಆನಂದರಾಜ್ , ಜಿಲ್ಲಾ ಮುಖಂಡರಾದ ಸುಷ್ಮಿತ ಪವನಕುಮಾರ್ , ಪತ್ರಕರ್ತರಾರ ಭೀಮಣ್ಣ ಗಜಾಪುರ , ರಾಜ್ಯ ಉಪದಾಧ್ಯಕ್ಷರಾದ ಬಸವರಾಜ ಗುಳೆದಾಳ್ ಆನಂದರಾಜ್ , ಸುಸ್ಮಿತ ಸಮಾಜ ಸೇವಕ ಅಬ್ದುಲ್ ರಹೆಮ‍ಾನ್ , ತಾಲೂಕಾಧ್ಯಕ್ಷರಾದ ಟಿ. ಭಾಗ್ಯಮ್ಮ , ಭೀಮಣ್ಣ ಗಜಾಪುರ , ಬಿಟಿಗುದ್ದಿ ಚಂದ್ರು ವೇದಿಕೆಯಲ್ಲಿದ್ದರು. ಜಿಲ್ಲಾ ಕಾರ್ಯದರ್ಶಿ ಶಿವರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ✍ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    4
    *ಕೂಡ್ಲಿಗಿ : SFI ಸಮಾವೇಶ - ಸಮಘ್ರ ಶೈಕ್ಷಣಿಕ ಪ್ರಗತಿಗೆ ಎಲ್ಲರೂ ಪ್ರಯತ್ನಿಸೋಣ - ಗುನ್ನಳ್ಳಿ ರಾಘವೇಂದ್ರ ಕರೆ-
*ಕೂಡ್ಲಿಗಿ : SFI ಸಮಾವೇಶ - ಸಮಘ್ರ ಶೈಕ್ಷಣಿಕ ಪ್ರಗತಿಗೆ ಎಲ್ಲರೂ ಪ್ರಯತ್ನಿಸೋಣ - ಗುನ್ನಳ್ಳಿ ರಾಘವೇಂದ್ರ ಕರೆ*-ವಿಜಯನಗರ ಜಿಲ್ಲೆ  ಕೂಡ್ಲಿಗಿ : ಕ್ಷೇತ್ರದ ಸಮಘ್ರ ಶೈಕ್ಷಣಿಕ ಅಭಿವೃದ್ಧಿಗಾಗಿ , ಎಲ್ಲರೂ ಪ್ರಾಮಾಣಿಕವಾಗಿ ಪ್ರಯತ್ನಿಸೋಣ ಎಂದು ಮುಖಂಡ ಗುನ್ನಳ್ಳಿ ರಾಘವೇಂದ್ರ ಕರೆನೀಡಿದರು. ಅವರು ಆ 27ರಂದು ಪಟ್ಟಣದ ಪಟ್ಟಣದ ಪ್ರವಾಸಿ ಮಂದಿರದಲ್ಲಿ , ಭಾರತ ವಿದ್ಯಾರ್ಥಿ ಪೆಡರೇಷನ್ ವತಿಯಿಂದ ಜರುಗಿದ ತಾಲೂಕು ಸಮಾವೇಶದಲ್ಲಿ ಮಾತನಾಡಿದರು. ವೇದಿಕೆಯಲ್ಲಿ ಎಸ್ಎಫ್ಐ  ರಾಜ್ಯ ಉಪದಾಧ್ಯಕ್ಷರಾದ ಬಸವರಾಜ ಗುಳೆದಾಳ್ ಮುಖಂಡರಾದ ಆನಂದರಾಜ್ , ಜಿಲ್ಲಾ ಮುಖಂಡರಾದ ಸುಷ್ಮಿತ ಪವನಕುಮಾರ್ , ಪತ್ರಕರ್ತರಾರ ಭೀಮಣ್ಣ ಗಜಾಪುರ , ರಾಜ್ಯ ಉಪದಾಧ್ಯಕ್ಷರಾದ ಬಸವರಾಜ ಗುಳೆದಾಳ್  ಆನಂದರಾಜ್ , ಸುಸ್ಮಿತ  
ಸಮಾಜ ಸೇವಕ ಅಬ್ದುಲ್ ರಹೆಮ‍ಾನ್ , ತಾಲೂಕಾಧ್ಯಕ್ಷರಾದ ಟಿ. ಭಾಗ್ಯಮ್ಮ , ಭೀಮಣ್ಣ ಗಜಾಪುರ , ಬಿಟಿಗುದ್ದಿ ಚಂದ್ರು  ವೇದಿಕೆಯಲ್ಲಿದ್ದರು. ಜಿಲ್ಲಾ ಕಾರ್ಯದರ್ಶಿ ಶಿವರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ✍ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    user_ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    1 hr ago
  • ಕಳಪೆ ಸಿಸಿ ರಸ್ತೆ ಕಾಮಗಾರಿ ತಡೆಗೆ ಆಗ್ರಹಿಸಿ ರೈತ ಸಂಘದಿಂದ ಕೆ.ಆರ್.ಐ.ಡಿ ಎಲ್ ಅಧಿಕಾರಿಗೆ ಮನವಿ ಕೂಡ್ಲಿಗಿ: ತಾಲೂಕಿನ ಈಚಲಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಸಿಸಿ ರಸ್ತೆ ಕಾಮಗಾರಿಯಲ್ಲಿ ಕಳಪೆ ಗುಣಮಟ್ಟದ ಆರೋಪ ಕೇಳಿಬಂದಿದ್ದು, ಕಾಮಗಾರಿ ತಡೆದು ಗುಣಮಟ್ಟ ಪರಿಶೀಲನೆ ಹಾಗೂ ಸಮಗ್ರ ತನಿಖೆ ನಡೆಸುವಂತೆ ಕರ್ನಾಟಕ ರಾಜ್ಯ ರೈತ ಸಂಘದ ಕೂಡ್ಲಿಗಿ ತಾಲೂಕು ಹಾಗೂ ಜಿಲ್ಲಾ ಘಟಕದ ವತಿಯಿಂದ ಕೆ.ಆರ್.ಐ.ಡಿ.ಎಲ್ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು. ಗ್ರಾಮದಲ್ಲಿ ಹಳೆಯ ರಸ್ತೆಯ ಮೇಲೆಯೇ ಹೊಸ ಸಿಸಿ ರಸ್ತೆ ಕಾಮಗಾರಿ ನಡೆಸಲಾಗುತ್ತಿದೆ ಎಂದು ರೈತ ಸಂಘದ ಪದಾಧಿಕಾರಿಗಳು ಆರೋಪಿಸಿದರು. ಕಾಮಗಾರಿಯಲ್ಲಿ ನಿಯಮಾನುಸಾರ ಗುಣಮಟ್ಟದ ಸಾಮಗ್ರಿಗಳನ್ನು ಬಳಸಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಬೇಕು ಹಾಗೂ ಕಾಮಗಾರಿಯ ಸಂಪೂರ್ಣ ಗುಣಮಟ್ಟ ಪರೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿದರು. ಕಾಮಗಾರಿಯಲ್ಲಿ ಕಳಪೆ ಗುಣಮಟ್ಟ ಅಥವಾ ಯಾವುದೇ ಅಕ್ರಮ ಕಂಡುಬಂದಲ್ಲಿ, ಸಂಬಂಧಿಸಿದ ಗುತ್ತಿಗೆದಾರರು ಹಾಗೂ ಕಾಮಗಾರಿಗೆ ಹೊಣೆಗಾರ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ಅಲ್ಲದೆ, ಕಾಮಗಾರಿಗೆ ಸಂಬಂಧಿಸಿದ ದಾಖಲೆಗಳು, ಅಂದಾಜು, ಬಳಸಲಾಗುತ್ತಿರುವ ಸಾಮಗ್ರಿಗಳ ಗುಣಮಟ್ಟ ಹಾಗೂ ಸ್ಥಳದಲ್ಲಿನ ಕಾಮಗಾರಿಯನ್ನು ಪರಿಶೀಲಿಸಿ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ರೈತ ಸಂಘದ ಮುಖಂಡರು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಕೂಡ್ಲಿಗಿ ತಾಲೂಕು ಹಾಗೂ ಜಿಲ್ಲಾ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.
    1
    ಕಳಪೆ ಸಿಸಿ ರಸ್ತೆ ಕಾಮಗಾರಿ ತಡೆಗೆ ಆಗ್ರಹಿಸಿ ರೈತ ಸಂಘದಿಂದ ಕೆ.ಆರ್.ಐ.ಡಿ ಎಲ್ ಅಧಿಕಾರಿಗೆ ಮನವಿ

ಕೂಡ್ಲಿಗಿ: ತಾಲೂಕಿನ ಈಚಲಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಸಿಸಿ ರಸ್ತೆ ಕಾಮಗಾರಿಯಲ್ಲಿ ಕಳಪೆ ಗುಣಮಟ್ಟದ ಆರೋಪ ಕೇಳಿಬಂದಿದ್ದು, ಕಾಮಗಾರಿ ತಡೆದು ಗುಣಮಟ್ಟ ಪರಿಶೀಲನೆ ಹಾಗೂ ಸಮಗ್ರ ತನಿಖೆ ನಡೆಸುವಂತೆ ಕರ್ನಾಟಕ ರಾಜ್ಯ ರೈತ ಸಂಘದ ಕೂಡ್ಲಿಗಿ ತಾಲೂಕು ಹಾಗೂ ಜಿಲ್ಲಾ ಘಟಕದ ವತಿಯಿಂದ ಕೆ.ಆರ್.ಐ.ಡಿ.ಎಲ್ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು. ಗ್ರಾಮದಲ್ಲಿ ಹಳೆಯ ರಸ್ತೆಯ ಮೇಲೆಯೇ ಹೊಸ ಸಿಸಿ ರಸ್ತೆ ಕಾಮಗಾರಿ ನಡೆಸಲಾಗುತ್ತಿದೆ ಎಂದು ರೈತ ಸಂಘದ ಪದಾಧಿಕಾರಿಗಳು ಆರೋಪಿಸಿದರು. ಕಾಮಗಾರಿಯಲ್ಲಿ ನಿಯಮಾನುಸಾರ ಗುಣಮಟ್ಟದ ಸಾಮಗ್ರಿಗಳನ್ನು ಬಳಸಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಬೇಕು ಹಾಗೂ ಕಾಮಗಾರಿಯ ಸಂಪೂರ್ಣ ಗುಣಮಟ್ಟ ಪರೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿದರು. ಕಾಮಗಾರಿಯಲ್ಲಿ ಕಳಪೆ ಗುಣಮಟ್ಟ ಅಥವಾ ಯಾವುದೇ ಅಕ್ರಮ ಕಂಡುಬಂದಲ್ಲಿ, ಸಂಬಂಧಿಸಿದ ಗುತ್ತಿಗೆದಾರರು ಹಾಗೂ ಕಾಮಗಾರಿಗೆ ಹೊಣೆಗಾರ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ಅಲ್ಲದೆ, ಕಾಮಗಾರಿಗೆ ಸಂಬಂಧಿಸಿದ ದಾಖಲೆಗಳು, ಅಂದಾಜು, ಬಳಸಲಾಗುತ್ತಿರುವ ಸಾಮಗ್ರಿಗಳ ಗುಣಮಟ್ಟ ಹಾಗೂ ಸ್ಥಳದಲ್ಲಿನ ಕಾಮಗಾರಿಯನ್ನು ಪರಿಶೀಲಿಸಿ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ರೈತ ಸಂಘದ ಮುಖಂಡರು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಕೂಡ್ಲಿಗಿ ತಾಲೂಕು ಹಾಗೂ ಜಿಲ್ಲಾ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.
    user_ಹೂಡೇಂ ಮಂಜುನಾಥ
    ಹೂಡೇಂ ಮಂಜುನಾಥ
    Local News Reporter ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    4 hrs ago
  • ಮಾನ್ವಿಯಲ್ಲಿ ಸಂಭ್ರಮದ ಈದ್ ಮಿಲಾದುನ್ನಬಿ ಮೆರವಣಿಗೆ -ಸಹೋದರತೆಯ ಸಂದೇಶ ಸಾರಿದ ಶಾಸಕ ಹಂಪಯ್ಯ ನಾಯಕ ಮಾನ್ವಿಯಲ್ಲಿ ಸಂಭ್ರಮದ ಈದ್ ಮಿಲಾದುನ್ನಬಿ ಮೆರವಣಿಗೆ -ಸಹೋದರತೆಯ ಸಂದೇಶ ಸಾರಿದ ಶಾಸಕ ಹಂಪಯ್ಯ ನಾಯಕ
    2
    ಮಾನ್ವಿಯಲ್ಲಿ ಸಂಭ್ರಮದ ಈದ್ ಮಿಲಾದುನ್ನಬಿ ಮೆರವಣಿಗೆ -ಸಹೋದರತೆಯ ಸಂದೇಶ ಸಾರಿದ ಶಾಸಕ ಹಂಪಯ್ಯ ನಾಯಕ
ಮಾನ್ವಿಯಲ್ಲಿ ಸಂಭ್ರಮದ ಈದ್ ಮಿಲಾದುನ್ನಬಿ ಮೆರವಣಿಗೆ -ಸಹೋದರತೆಯ ಸಂದೇಶ ಸಾರಿದ ಶಾಸಕ ಹಂಪಯ್ಯ ನಾಯಕ
    user_Shivakumar Sajjan
    Shivakumar Sajjan
    Local News Reporter ಮಾನ್ವಿ, ರಾಯಚೂರು, ಕರ್ನಾಟಕ•
    9 hrs ago
  • ಲೋಕಕಲ್ಯಾಣಕ್ಕಾಗಿ ಸುರಪುರ ತಾಲೂಕಿನ ದೇವಪುರದಿಂದ ಶ್ರೀ ತಿಂಥಣಿ ಮೌನೇಶ್ವರ ದೇವಸ್ಥಾನದವರೆಗೆ ಸರ್ವಧರ್ಮ ಪಾದಯಾತ್ರೆ ಸುರಪುರ : ಹೌದು ಸುರಪುರ ತಾಲೂಕಿನ ದೇವಪುರ ಗ್ರಾಮದಿಂದ ಶ್ರೀ ತಿಂಥಣಿ ಮೌನೇಶ್ವರ ದೇವಸ್ಥಾನಕ್ಕೆ ಸರ್ವ ಧರ್ಮದ ವತಿಯಿಂದ ಭಕ್ತಿ ಪೂರ್ವಕ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿತು. ಶ್ರೀ ರವಿ ಮುತ್ಯಾ ದೇವಪುರ ಹಾಗೂ ಶ್ರೀ ನಾಗರಾಜ ಮುತ್ಯಾ ದೇವಪುರ ಅವರ ದಿವ್ಯ ನೇತೃತ್ವದಲ್ಲಿ ಈ ಪಾದಯಾತ್ರೆ ಅತ್ಯಂತ ಶ್ರದ್ಧಾ ಭಕ್ತಿಯಿಂದ ನಡೆಯಿತು. ಈ ಪಾದಯಾತ್ರೆಯಲ್ಲಿ ವಿವಿಧ ಧರ್ಮಗಳ ಭಕ್ತರು ಪಾಲ್ಗೊಂಡು ಶ್ರೀ ಮೌನೇಶ್ವರ ದೇವರ ಕೃಪೆಗೆ ಪಾತ್ರರಾದರು
    1
    ಲೋಕಕಲ್ಯಾಣಕ್ಕಾಗಿ ಸುರಪುರ ತಾಲೂಕಿನ ದೇವಪುರದಿಂದ ಶ್ರೀ ತಿಂಥಣಿ ಮೌನೇಶ್ವರ ದೇವಸ್ಥಾನದವರೆಗೆ ಸರ್ವಧರ್ಮ ಪಾದಯಾತ್ರೆ
ಸುರಪುರ : ಹೌದು ಸುರಪುರ ತಾಲೂಕಿನ ದೇವಪುರ ಗ್ರಾಮದಿಂದ ಶ್ರೀ ತಿಂಥಣಿ ಮೌನೇಶ್ವರ ದೇವಸ್ಥಾನಕ್ಕೆ ಸರ್ವ ಧರ್ಮದ ವತಿಯಿಂದ ಭಕ್ತಿ ಪೂರ್ವಕ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿತು. ಶ್ರೀ ರವಿ ಮುತ್ಯಾ ದೇವಪುರ ಹಾಗೂ ಶ್ರೀ ನಾಗರಾಜ ಮುತ್ಯಾ ದೇವಪುರ ಅವರ ದಿವ್ಯ ನೇತೃತ್ವದಲ್ಲಿ ಈ ಪಾದಯಾತ್ರೆ ಅತ್ಯಂತ ಶ್ರದ್ಧಾ ಭಕ್ತಿಯಿಂದ ನಡೆಯಿತು.  ಈ ಪಾದಯಾತ್ರೆಯಲ್ಲಿ ವಿವಿಧ ಧರ್ಮಗಳ ಭಕ್ತರು ಪಾಲ್ಗೊಂಡು ಶ್ರೀ ಮೌನೇಶ್ವರ ದೇವರ ಕೃಪೆಗೆ ಪಾತ್ರರಾದರು
    user_Bhimu
    Bhimu
    ಶೋರಾಪುರ, ಯಾದಗಿರಿ, ಕರ್ನಾಟಕ•
    37 min ago
  • ಆಗಸ್ಟ್ 30 ರಂದು ಕಮತಗಿಯಲ್ಲಿ AICSCA CSC Foundation ಉದ್ಘಾಟನೆ
    1
    ಆಗಸ್ಟ್ 30 ರಂದು ಕಮತಗಿಯಲ್ಲಿ AICSCA CSC Foundation ಉದ್ಘಾಟನೆ
    user_Shabbir Bijapur
    Shabbir Bijapur
    Local News Reporter ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    12 hrs ago
  • ಸರಕಾರಿ ಮಾದರಿಯ ಪ್ರಾಥಮಿಕ ಶಾಲೆ ಗೋನಾಳ ಗ್ರಾಮೀಣವಾಗದ ಮಕ್ಕಳ ಪ್ರತಿಭೆ ಸಾರ್ವಜನಿಕರು ವಿಕಿಸಿ
    1
    ಸರಕಾರಿ ಮಾದರಿಯ ಪ್ರಾಥಮಿಕ ಶಾಲೆ ಗೋನಾಳ ಗ್ರಾಮೀಣವಾಗದ ಮಕ್ಕಳ ಪ್ರತಿಭೆ ಸಾರ್ವಜನಿಕರು ವಿಕಿಸಿ
    user_Hasan Anjal
    Hasan Anjal
    ದೇವದುರ್ಗ, ರಾಯಚೂರು, ಕರ್ನಾಟಕ•
    5 hrs ago
  • ಈ ದೃಶ್ಯಗಳು ನೇಪಾಳದ ರಸುವಾ ಜಿಲ್ಲೆಯವು, ಆದರೆ ಈ ನೋವು ಇಡೀ ನೆರೆಹೊರೆಯವರದ್ದು. ​ಹೆಲಿಕಾಪ್ಟರ್‌ನಿಂದ ತೆಗೆದ ಈ ದೃಶ್ಯವನ್ನು ನೋಡಿ — ಎಲ್ಲಿ ಒಮ್ಮೆ ಮನೆಗಳು, ಹೊಲಗಳು, ರಸ್ತೆಗಳಿದ್ದವೋ, ಅಲ್ಲಿ ಇಂದು ಕೇವಲ ಕೆಸರು ಮತ್ತು ಸಾವು-ನೋವಿನ ಮೌನ ಮಾತ್ರವಿದೆ. ಭೋಟೇಕೋಶಿ ನದಿ ಕ್ಷಣಾರ್ಧದಲ್ಲಿ ಎಲ್ಲವನ್ನೂ ನುಂಗಿಹಾಕಿದೆ. ​ಈ ಅವಶೇಷಗಳ ನಡುವೆ ಒಂದು ಚಿತ್ರ ಹೃದಯವನ್ನು ತಟ್ಟುತ್ತ್ತದೆ — ಒಬ್ಬ ಅಜ್ಜಿ ಹೆಲಿಕಾಪ್ಟರ್‌ನಲ್ಲಿ ಕುಳಿತು, ಕೈ ಮುಗಿಯುತ್ತಿರುವ ದೃಶ್ಯ. ಆ ಕೈಗಳು ಕೇವಲ ಧನ್ಯವಾದಕ್ಕೆ ಮಾತ್ರವಲ್ಲ, ಅದು ಇಂದು ತಮ್ಮವರನ್ನು ಕಳೆದುಕೊಂಡ ಪ್ರತಿಯೊಬ್ಬ ತಾಯಿಯ ಪ್ರಾರ್ಥನೆಯಾಗಿದೆ. ​ ನಾವು ಈ ಆಪತ್ತಿನಲ್ಲಿರುವ ತಮ್ಮವರನ್ನು ಕಳೆದುಕೊಂಡ ಎಲ್ಲಾ ಕುಟುಂಬಗಳಿಗೆ ಸಂತಾಪ ಸೂಚಿಸುವ ಅಗತ್ಯವಿದೆ. ಮೃತರ ಆತ್ಮಗಳಿಗೆ ಶಾಂತಿ ಸಿಗಲಿ. ​ ಗಾಯಗೊಂಡಿರುವ, ಮನೆ ಕಳೆದುಕೊಂಡಿರುವ ಮತ್ತು ನಾಪತ್ತೆ ಆಗಿರುವವರಿಗಾಗಿ ನಾವು ದೇವರಲ್ಲಿ ಧೈರ್ಯ ಮತ್ತು ಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇವೆ. ​ಒಬ್ಬ ನಿಜವಾದ ಸ್ನೇಹಿತನ ಕರ್ತವ್ಯದಂತೆ — ಈ ಕಷ್ಟದ ಸಮಯದಲ್ಲಿ ಭಾರತವು ನೇಪಾಳದ ಜೊತೆಗೆ ಹೆಗಲಿಗೆ ಹೆಗಲು ಕೊಟ್ಟು ನಿಂತಿದೆ. ಗಡಿಯಲ್ಲಿ ನಮ್ಮ NDRF ತಂಡಗಳು ಸಂಪೂರ್ಣ ಸಜ್ಜಾಗಿವೆ, ಇದರಿಂದ ನಮ್ಮ ನೆರೆಯವರಿಗೆ ಯಾವುದೇ ತೊಂದರೆ ಆಗದಿರಲಿ. ​ಏಕೆಂದರೆ ನೆರೆಹೊರೆಯವರು ಕೇವಲ ನಕ್ಷೆಯಲ್ಲಿ ಮಾತ್ರವಲ್ಲ, ಹೃದಯದಲ್ಲೂ ಇರುತ್ತಾರೆ.
    1
    ಈ ದೃಶ್ಯಗಳು ನೇಪಾಳದ ರಸುವಾ ಜಿಲ್ಲೆಯವು, ಆದರೆ ಈ ನೋವು ಇಡೀ ನೆರೆಹೊರೆಯವರದ್ದು.
​ಹೆಲಿಕಾಪ್ಟರ್‌ನಿಂದ ತೆಗೆದ ಈ ದೃಶ್ಯವನ್ನು ನೋಡಿ — ಎಲ್ಲಿ ಒಮ್ಮೆ ಮನೆಗಳು, ಹೊಲಗಳು, ರಸ್ತೆಗಳಿದ್ದವೋ, ಅಲ್ಲಿ ಇಂದು ಕೇವಲ ಕೆಸರು ಮತ್ತು ಸಾವು-ನೋವಿನ ಮೌನ ಮಾತ್ರವಿದೆ. ಭೋಟೇಕೋಶಿ ನದಿ ಕ್ಷಣಾರ್ಧದಲ್ಲಿ ಎಲ್ಲವನ್ನೂ ನುಂಗಿಹಾಕಿದೆ.
​ಈ ಅವಶೇಷಗಳ ನಡುವೆ ಒಂದು ಚಿತ್ರ ಹೃದಯವನ್ನು ತಟ್ಟುತ್ತ್ತದೆ — ಒಬ್ಬ ಅಜ್ಜಿ ಹೆಲಿಕಾಪ್ಟರ್‌ನಲ್ಲಿ ಕುಳಿತು, ಕೈ ಮುಗಿಯುತ್ತಿರುವ ದೃಶ್ಯ. ಆ ಕೈಗಳು ಕೇವಲ ಧನ್ಯವಾದಕ್ಕೆ ಮಾತ್ರವಲ್ಲ, ಅದು ಇಂದು ತಮ್ಮವರನ್ನು ಕಳೆದುಕೊಂಡ ಪ್ರತಿಯೊಬ್ಬ ತಾಯಿಯ ಪ್ರಾರ್ಥನೆಯಾಗಿದೆ.

​ ನಾವು ಈ ಆಪತ್ತಿನಲ್ಲಿರುವ ತಮ್ಮವರನ್ನು ಕಳೆದುಕೊಂಡ ಎಲ್ಲಾ ಕುಟುಂಬಗಳಿಗೆ ಸಂತಾಪ ಸೂಚಿಸುವ ಅಗತ್ಯವಿದೆ. ಮೃತರ ಆತ್ಮಗಳಿಗೆ ಶಾಂತಿ ಸಿಗಲಿ.

​ ಗಾಯಗೊಂಡಿರುವ, ಮನೆ ಕಳೆದುಕೊಂಡಿರುವ ಮತ್ತು  ನಾಪತ್ತೆ ಆಗಿರುವವರಿಗಾಗಿ ನಾವು ದೇವರಲ್ಲಿ ಧೈರ್ಯ ಮತ್ತು ಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇವೆ.

​ಒಬ್ಬ ನಿಜವಾದ ಸ್ನೇಹಿತನ ಕರ್ತವ್ಯದಂತೆ — ಈ ಕಷ್ಟದ ಸಮಯದಲ್ಲಿ ಭಾರತವು ನೇಪಾಳದ ಜೊತೆಗೆ ಹೆಗಲಿಗೆ ಹೆಗಲು ಕೊಟ್ಟು ನಿಂತಿದೆ. ಗಡಿಯಲ್ಲಿ ನಮ್ಮ NDRF ತಂಡಗಳು ಸಂಪೂರ್ಣ ಸಜ್ಜಾಗಿವೆ, ಇದರಿಂದ ನಮ್ಮ ನೆರೆಯವರಿಗೆ ಯಾವುದೇ ತೊಂದರೆ ಆಗದಿರಲಿ.
​ಏಕೆಂದರೆ ನೆರೆಹೊರೆಯವರು ಕೇವಲ ನಕ್ಷೆಯಲ್ಲಿ ಮಾತ್ರವಲ್ಲ, ಹೃದಯದಲ್ಲೂ ಇರುತ್ತಾರೆ.
    user_YSRmedia vijayanagaraupsates
    YSRmedia vijayanagaraupsates
    Mobile Phone Accessory Shop ಹೊಸಪೇಟೆ, ವಿಜಯನಗರ, ಕರ್ನಾಟಕ•
    10 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.