Shuru
Apke Nagar Ki App…
ಗುಣಮಟ್ಟದ ಹಾಲನ್ನು ನೀಡಿದರೆ ಉತ್ತಮ ಫಲಿತಾಂಶ ನಿಮ್ಮದೇ ಆಗುತ್ತದೆ ಗುಬ್ಬಿ ತಾಲೂಕಿನ ಕಾಳೆನಹಳ್ಳಿ, ಕೊಡಗಿಹಳ್ಳಿ ಹಾಗೂ ಹೊಸಪಾಳ್ಯ ಹಾಲು ಉತ್ಪಾದಕರ ಸಹಕಾರ ಸಂಘಗಳ ವಾರ್ಷಿಕ ಮಹಾಸಭೆಯಲ್ಲಿ ತುಮಕೂರು ಹಾಲು ಒಕ್ಕೂಟದ ನಿರ್ದೇಶಕರಾದ ಭಾರತಿ ಶ್ರೀನಿವಾಸ್ ಭಾಗವಹಿಸಿ ಮಾತನಾಡಿದರು.. ಈ ಕಾರ್ಯಕ್ರಮವನ್ನು ಸಂಘದ ಅಧ್ಯಕ್ಷರು, ನಿರ್ದೇಶಕರು, ಸಿಬ್ಬಂದಿಗಳು ಹಾಗೂ ಎಲ್ಲಾ ಸದಸ್ಯರಿಗೆ ಹೃತ್ಪೂರ್ವಕ ಧನ್ಯವಾದಗಳು.
ಪ್ರಸನ್ನ ದೊಡ್ಡಗುಣಿ
ಗುಣಮಟ್ಟದ ಹಾಲನ್ನು ನೀಡಿದರೆ ಉತ್ತಮ ಫಲಿತಾಂಶ ನಿಮ್ಮದೇ ಆಗುತ್ತದೆ ಗುಬ್ಬಿ ತಾಲೂಕಿನ ಕಾಳೆನಹಳ್ಳಿ, ಕೊಡಗಿಹಳ್ಳಿ ಹಾಗೂ ಹೊಸಪಾಳ್ಯ ಹಾಲು ಉತ್ಪಾದಕರ ಸಹಕಾರ ಸಂಘಗಳ ವಾರ್ಷಿಕ ಮಹಾಸಭೆಯಲ್ಲಿ ತುಮಕೂರು ಹಾಲು ಒಕ್ಕೂಟದ ನಿರ್ದೇಶಕರಾದ ಭಾರತಿ ಶ್ರೀನಿವಾಸ್ ಭಾಗವಹಿಸಿ ಮಾತನಾಡಿದರು.. ಈ ಕಾರ್ಯಕ್ರಮವನ್ನು ಸಂಘದ ಅಧ್ಯಕ್ಷರು, ನಿರ್ದೇಶಕರು, ಸಿಬ್ಬಂದಿಗಳು ಹಾಗೂ ಎಲ್ಲಾ ಸದಸ್ಯರಿಗೆ ಹೃತ್ಪೂರ್ವಕ ಧನ್ಯವಾದಗಳು.
More news from ಕರ್ನಾಟಕ and nearby areas
- ಹೇಮಾವತಿ ನೀರಿಗಾಗಿ ಹೋರಾಟ ಪ್ರತಿಭಟನಾ ಸ್ಥಳಕ್ಕೆ ಬಂದ ಶಾಸಕ ಸಿ ಬಿ ಸುರೇಶ್ ಬಾಬು ಚಿಕ್ಕನಾಯಕನಹಳ್ಳಿಯಲ್ಲಿ ನಡೆಯುತ್ತಿರುವಂತಹ ಹೇಮಾವತಿ ನಾಲೆ ಶೀಘ್ರವೇ ಮುಗಿಸಬೇಕು ನೀರನ್ನು ಹರಿಸಬೇಕು ಎಂಬ ಹೋರಾಟ ಮೂರು ದಿನಗಳಿಂದ ನಡೆಯುತ್ತಿದ್ದು ಇಂದು ಚಿಕ್ಕನಾಯಕನಹಳ್ಳಿ ಕ್ಷೇತ್ರ ಶಾಸಕ ಸುರೇಶ್ ಬಾಬು ನೇರವಾಗಿ ತಾಲೂಕು ಕಚೇರಿಯ ಮುಂದೆ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾಗಿರುವ ಹೋರಾಟಗಾರರ ಜೊತೆ ನೇರವಾಗಿ ಮಾತನಾಡಿದ್ದಾರೆ ಮಂಗಳವಾರದ ಒಳಗೆ ಕಾಮಗಾರಿಯನ್ನ ಮುಗಿಸುತ್ತೇವೆ ಎಂಬ ಭರವಸೆಯನ್ನು ನೀಡಿದ್ದಾರೆ.1
- ಶ್ರೀ ಮಹಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ವ್ಯಸನ ಮುಕ್ತ ದಿನಾಚರಣೆಯನ್ನು ಪಟ್ಟಣದ ಗಣಪತಿ ಆಸ್ಥಾನ ಮಂಟಪದಲ್ಲಿ ಆಚರಿಸಲಾಯಿತು ತುರುವೇಕೆರೆ: ಶ್ರೀ ಶ್ರೀ ಶ್ರೀ ಡಾ // ಮಹಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ವ್ಯಸನ ಮುಕ್ತ ದಿನಾಚರಣೆ ವೈಭವದಿಂದ ಆಚರಣೆ ತಾಲೂಕು ಆಡಳಿತ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಪೊಲೀಸ್ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ಶ್ರೀ ಮಹಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ವ್ಯಸನ ಮುಕ್ತ ದಿನಾಚರಣೆಯನ್ನು ಪಟ್ಟಣದ ಗಣಪತಿ ಆಸ್ಥಾನ ಮಂಟಪದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಪಟ್ಟಣದ ಖ್ಯಾತ ಹಿರಿಯ ವೈದ್ಯ ಡಾ. ಎ. ನಾಗರಾಜ್ ಅವರು ಮಾತನಾಡಿ, ಮಕ್ಕಳು ಹಾಗೂ ಯುವಕರಲ್ಲಿ ಮಾದಕ ವ್ಯಸನದ ಬೆಳವಣಿಗೆ, ಅದರ ಆರೋಗ್ಯದ ಮೇಲಾಗುವ ಪರಿಣಾಮಗಳು ಮತ್ತು ಕುಟುಂಬ ಹಾಗೂ ಸಮಾಜದ ಮೇಲಾಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು. ಮಕ್ಕಳು ಮಾದಕ ವ್ಯಸನದ ಬಲೆಗೆ ಬೀಳುವ ಮೊದಲೇ ತಡೆಯುವುದು ಹೇಗೆ, ಪೋಷಕರು ಮತ್ತು ಶಿಕ್ಷಕರ ಪಾತ್ರ ಎಷ್ಟು ಮಹತ್ವದ್ದು ಎಂಬುದನ್ನು ವಿವರಿಸಿದರು. ಉಪನ್ಯಾಸಕ ವಿಜಯಕುಮಾರ್ ಅವರು ಮಾದಕ ವ್ಯಸನದಿಂದ ಯುವ ಸಮೂಹಕ್ಕೆ ಆಗುವ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಗೆಳೆಯನಂತೆ ತಿಳಿಸಿಕೊಟ್ಟರು. ವ್ಯಸನದಿಂದ ವಿದ್ಯಾರ್ಥಿಗಳ ಭವಿಷ್ಯ ಹೇಗೆ ಹಾಳಾಗುತ್ತದೆ, ಮಾನಸಿಕ ಆರೋಗ್ಯದ ಮೇಲೆ ಬೀರುವ ಪರಿಣಾಮ, ಮತ್ತು ವ್ಯಸನದಿಂದ ದೂರವಿರಲು ಯುವಕರು ಅನುಸರಿಸಬೇಕಾದ ಮಾರ್ಗಗಳ ಬಗ್ಗೆ ಸರಳವಾಗಿ ಮನವರಿಕೆ ಮಾಡಿಕೊಟ್ಟರು. ವ್ಯಸನ ಮುಕ್ತ ಸಮಾಜ ನಿರ್ಮಾಣದಲ್ಲಿ ಆಡಳಿತ, ಆರೋಗ್ಯ, ಶಿಕ್ಷಣ ಮತ್ತು ಪೊಲೀಸ್ ಇಲಾಖೆಗಳ ಸಮನ್ವಯದ ಅಗತ್ಯವನ್ನು ಕಾರ್ಯಕ್ರಮದಲ್ಲಿ ಒತ್ತಿ ಹೇಳಲಾಯಿತು. ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಹಾಗೂ ಸಾರ್ವಜನಿಕರು ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಂಡು ವ್ಯಸನ ಮುಕ್ತಿಯ ಸಂದೇಶಕ್ಕೆ ಬೆಂಬಲ ಸೂಚಿಸಿದರು. ಈ ಸಮಾರಂಭದಲ್ಲಿ ತಾಲೂಕು ಪಂಚಾಯಿತಿ ಇ ಓ ಅನಂತರಾಜು, ಗ್ರೇಡ್( 2) ತಹಶೀಲ್ದಾರ್ ಸುನಿಲ್, ಬಿಇಒ ಸೋಮಶೇಖರ್, ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಪಾಪಣ್ಣ, ಸಮಾಜ ಕಲ್ಯಾಣ ಇಲಾಖೆಯ ವರ್ಷಿಣಿ, ತಾಲೋಕು ಚುನಾವಣಾ ಶಾಖೆಯ ಶಿರಸ್ತೆದಾರ್ ರಂಗಸ್ವಾಮಿ, ಆರ್ ಆರ್ ಟಿ ಶಾಖೆಯ ಶ್ರೀನಿವಾಸ್, ವತ್ಸಲ, ಬಿ ಆರ್ ಸಿ ಸುರೇಶ್,ಉಪನ್ಯಾಸಕ ಡಾ, ಚಂದ್ರಯ್ಯ,ಆರೋಗ್ಯ ಇಲಾಖೆಯ ಸದಾಶಿವಯ್ಯ ಆಶಾ ಕಾರ್ಯಕರ್ತೆಯರು ಶಾಲಾ-ಕಾಲೇಜುಗಳ ವಿದ್ಯಾರ್ಥಿ ವಿದ್ಯಾರ್ಥಿನಿಯರು ಶಿಕ್ಷಕರು ಭಾಗವಹಿಸಿದ್ದರು.4
- ಕುಣಿಗಲ್ ತಾಲೂಕು ಯಡಿಯೂರು ಹೋಬಳಿ ಗ್ರಾಮಗಳಿಗೆ ಸುಮಾರು 6.50 ಕೋಟಿ ರೂ ಅಧಿಕ ಅಭಿವೃದ್ಧಿ ಕಾಮಗಾರಿ ನಾಗಸಂದ್ರ ಹುಲಿವಾನ ಅಕ್ಕಿ ಮರಿಪಾಳ್ಯ ಹೆಡ್ಡಿಗೆರೆ ಜೆಡ್ಡಿಗೆರೆ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಘಟಕ ಮತ್ತು ರಸ್ತೆ ಚರಂಡಿ ಕಾಮಗಾರಿಗೆ ಶಾಸಕರಿಂದ ಭೂಮಿ ಪೂಜೆ ನೆರವೇರಿಸಿದರು1
- ಚಿಕ್ಕನಾಯಕನಹಳ್ಳಿಯಲ್ಲಿ ಹೇಮಾವತಿ ನೀರಿಗಾಗಿ ರೈತರು ಅಹೋರಾತ್ರಿ ಧರಣೀಯ ಮುಂದುವರಿಸಿದ್ದಾರೆ4
- ಬಿದರೆಕೆರೆ-ಬೇಡತ್ತೂರು ರೈಲ್ವೆ ನಿಲ್ದಾಣಕ್ಕೆ ಮಿಡಿಗೇಶಿ ಹೆಸರಿಡಲು ಒತ್ತಾಯ ಮಧುಗಿರಿ ತಾಲೂಕಿನಲ್ಲಿ ನಡೆಯುತ್ತಿರುವ ತುಮಕೂರು ರಾಯದುರ್ಗ ರೈಲ್ವೆ ಕಾಮಗಾರಿಯಲ್ಲಿ ಬಿದರೆಕೆರೆ ಬೇಡತ್ತೂರು ಗ್ರಾಮದ ರೈಲ್ವೆ ನಿಲ್ದಾಣಕ್ಕೆ ಮಿಡಿಗೇಶಿ ಹೆಸರಿಡುವಂತೆ, ಬಿಜೆಪಿ ಒಬಿಸಿ ಮೋರ್ಚ ಜಿಲ್ಲಾ ಉಪಾಧ್ಯಕ್ಷ ಮಿಡಿಗೇರ್ ಶ್ರೀ ಕೃಷ್ಣಮೂರ್ತಿ ಇವತ್ತಾಯಿಸಿದ್ದಾರೆ2
- ಮುಖ್ಯಮಂತ್ರಿಗಳು ತಮಿಳುನಾಡಿಗೆ ಯಾವುದೇ ಕಾರಣಕ್ಕೂ ನೀರು ಬಿಡಬಾರದು1
- ಕೆಆರ್ಎಸ್ನಲ್ಲಿ ನೀರಿದ್ದಾಗ ಮಾತ್ರ ತಮಿಳುನಾಡಿಗೆ ನೀರು ಬಿಡುವುದಾಗಿ ರಾಜ್ಯ ಸರಕಾರ ಘೋಷಣೆ ಮಾಡಬೇಕು- ವೆಂಕಟಗಿರಿ ಯಯ್ಯ ಮಂಡ್ಯ: ಕೇಂದ್ರ ಸರಕಾರ ರಾಷ್ಟೀಯಸ ಜಲನೀತಿ ರೂಪಿಸುವವರೆಗೂ ಕೆಆರ್ಎಸ್ನಲ್ಲಿ ನೀರಿದ್ದಾಗ ಮಾತ್ರ ತಮಿಳುನಾಡಿಗೆ ನೀರು ಬಿಡುವುದಾಗಿ ರಾಜ್ಯ ಸರಕಾರ ಘೋಷಣೆ ಮಾಡಬೇಕು ಎಂದು ಕರ್ನಾಟಕದ ದಲಿತ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರಕಾರ ಕಾವೇರಿ ನೀರು ನಿಯಂತ್ರಣಾ ಸಮಿತಿ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಪಾಲಿಸಬಾರದು. ಸ್ವಾತಂತ್ರö್ಯ ಪೂರ್ವದ 1924ರ ಕಾವೇರಿ ಒಪ್ಪಂದವನ್ನುದ ಆಧಾರದ ಮೇಲೆ ಸ್ವತಂತ್ರ್ಯ ಭಾರತದ ವಿವಿಧ ನ್ಯಾಯಾಲಯ ಮತ್ತು ಪ್ರಾಧಿಕಾರಗಳ ಅಸಂವಿಧಾನಿಕ ಆದೇಶ ಗಳನ್ನು ತಿರಸ್ಕರಿಸಬೇಕು ಎಂದು ಒತ್ತಾಯಿಸಿದರು. ಕಾವೇರಿ ನದಿ ನೀರು ಹಂಚಿಕೆ ಸಂಬಂಧ 1924ರ ಒಪ್ಪಂದವು 50 ವರ್ಷಗಳ ಅವಧಿಗೆ ಸೀಮಿತವಾಗಿ 1974ಕ್ಕೆ ಅಂತಿಮಗೊಂಡಿದೆ. ಸಂವಿಧಾನದ ಅನುಚ್ಛೇದ 262ರಂದು ದೇಶದ ಮತ್ತು ಅಂತರಾಜ್ಯಗಳ ಎಲ್ಲ ವಿವಾದಗಳಿಗೆ ಪರಿಹಾರ ಕಂಡುಕೊಳ್ಳುವುದು ಸರಕಾರಗಳ ಬದ್ಧತೆಯಾಗಿದೆ. ಅಂತರ ರಾಜ್ಯ ಜಲವಿವಾದ ಪರಿಹಾರ ಕಾಯ್ದೆ ಸಂವಿಧಾನ ವಿರೋಧಿಯಾಗಿದ್ದು, 1924ರ ಮೈಸೂರು- ತಮಿಳುನಾಡು ನಡುವಿನ ಒಪ್ಪಂದಕ್ಕೆ ಇಂದಿಗೂ ಕೇಂದ್ರ ಹಾಗೂ ರಾಜ್ಯ ಸರಕಾಗಳು ಇಂದಿಗೂ ತಲೆ ಬಾಗಿರುವುದು ಖಂಡನಾರ್ಹ ಎಂದು ಕಿಡಿ ಕಾರಿದರು. ಇಲ್ಲಿಂದ ಹರಿಬಿಟ್ಟ ನೀರು ಸಂಗ್ರಹಿಸಿಟ್ಟುಕೊಳ್ಳದ ತಮಿಳುನಾಡು ಸರಕಾರಸಮುದ್ರಕ್ಕೆಹರಿಬಿಡುತ್ತಿದೆ. ಬಿಕ್ಕಟ್ಟು ಬಗೆಹರಿಸು ನೀಡು ಬಿಡುವ ಹಕ್ಕನ್ನು ಕೇಂದ್ರ ಸರಕಾರ ತಮ್ಮಲ್ಲೆ ಇರಿಸಿಕೊಂಡು ರಾಷ್ಟಿçÃಯ ಜಲನೀತಿ ರೂಪಿಸಬೇಕು. ಅಲ್ಲಿವರೆಗೂ ರಾಜ್ಯ ಸರಕಾರ ಇದ್ದಾಗ ಮಾತ್ರ ತಮಿಳುನಾಡಿಗೆ ನೀರು ಬಿಡಲು ಮುಂದಾಗಬೇಕು. ಇಲ್ಲವಾದಲ್ಲಿ ತೀವ್ರತರದ ಚಳುವಳಿಗೆ ಮುಂದಾಗಬೇಕಾಗುವುದು ಎಂದು ಎಚ್ಚರಿಸಿದರು. ಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಬಿ.ಆನಂದ, ಮಹಿಳಾ ಜಿಲ್ಲಾಧ್ಯಕ್ಷೆ ಸುಶ್ಮಿತ, ಪ್ರಧಾನ ಕಾರ್ಯದರ್ಶಿ ಸುರೇಶ್ಕುಮಾರ್, ಸಂಘಟನಾ ಕಾರ್ಯದರ್ಶಿ ಸಿದ್ದಯ್ಯ,ತಲ್ಲೊಕು ಅಧ್ಯಕ್ಷರಾದ ಕುಮಾರ್, ಬಸಸವರಾಜು, ಸದಸ್ಯ ಚಂದ್ರು ಇದ್ದರು.1
- ಪಾಕಿಸ್ತಾನಿ ಸೈನಿಕರು ಹಾಕಿದ ಬಾಂಬ್ ನಿಂದ ನನ್ನ ಕಾಲು ಹೋಯಿತು ಆದರೂ ಯುದ್ಧ ಗೆದ್ದಿದ್ದೇವೆ 1999 ರಲ್ಲಿ ನಡೆದ ಕಾರ್ಗಿಲ್ ಯುದ್ಧದಲ್ಲಿ ಕ್ಯಾಪ್ಟನ್ ನವೀನ್ ನಾಗಪ್ಪ ಯುದ್ಧದ ಸಮಯದಲ್ಲಿ ಬಿದ್ದಂತಹ ಬಾಂಬ ನಿಂದ ತಮ್ಮ ಕಾಲನ್ನೇ ಕಳೆದುಕೊಂಡಿದ್ದಾರೆ ಕಾರ್ಗಿಲ್ ಯುದ್ಧದ ಸಮಯದಲ್ಲಿ ನಾವು ಹೇಗೆಲ್ಲಾ ಹೋರಾಟ ಮಾಡಿದೆವು ಎಂಬುದರ ಬಗ್ಗೆ ವಿದ್ಯಾರ್ಥಿಗಳಿಗೆ ಮನ ಮುಟ್ಟುವಂತೆ ಹೇಳಿದ್ರು ಕಾರ್ಗಿಲ್ನಂತಹ ಈ ಮಚ್ಚಾದಿತಾ ಪ್ರದೇಶದಲ್ಲಿ ಪಾಕಿಸ್ತಾನಿ ಸೈನಿಕರು ಹಾಗೂ ಭಾರತೀಯ ಸೈನಿಕರ ಹೋರಾಟ ಹೇಗಿತ್ತು ಎಂಬುದರ ಬಗ್ಗೆ ಮಾಹಿತಿಯನ್ನು ನೀಡಿದರು1