ಚಿಂಚೋಳಿ : ತಾಲೂಕು ಮಟ್ಟದ ಶಾಲಾ ಕ್ರೀಡಾಕೂಟಕ್ಕೆ ಶಾಸಕರು ಅವಿನಾಶ್ ಜಾಧವ ಚಾಲನೆ ನೀಡಿದರು ಚಿಂಚೋಳಿ: ಜಿಲ್ಲಾ ಪಂಚಾಯತ್ ಕಲಬುರಗಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಚಿಂಚೋಳಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಕ್ರೀಡಾಕೂಟಕ್ಕೆ ಶಾಸಕ ಅವಿನಾಶ್ ಜಾಧವ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕ್ರೀಡೆಯಲ್ಲಿ ಸೋಲು-ಗೆಲುವು ಸಾಮಾನ್ಯವಾಗಿದ್ದು, ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವದಿಂದ ಭಾಗವಹಿಸಿ ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಬೇಕು ಎಂದು ಕರೆ ನೀಡಿದರು. ಕ್ರೀಡೆ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗಿದ್ದು, ಯುವ ಪ್ರತಿಭೆಗಳನ್ನು ಗುರುತಿಸಿ ಬೆಳೆಸುವಲ್ಲಿ ಕ್ರೀಡಾಕೂಟಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಹೇಳಿದರು. ಪೋಲಕಪಳ್ಳಿಯ ಉಮೇಶ್ ಜಾಧವ ಅವರ ಕನಸಿನ ಕ್ರೀಡಾಂಗಣವನ್ನು ಇನ್ನಷ್ಟು ಅಭಿವೃದ್ಧಿಪಡಿಸಿ ಯುವಕರಿಗೆ ಉತ್ತಮ ಕ್ರೀಡಾ ಸೌಲಭ್ಯ ಕಲ್ಪಿಸಲು ನಿರಂತರ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ, ಇಒ ಸಂತೋಷ್ ಚೌಹಾನ್, ಬಿಇಒ ದುಳಪ್ಪ ಮಲನೂರ್, ದೇವೀಂದ್ರಪ್ಪ ಹೊಲ್ಕರ್, ನಾಗಶೆಟ್ಟಿ ಭದ್ರಶೆಟ್ಟಿ, ಜಯಪ್ಪ ಚಪಲ, ಕುಪೇಂದ್ರ ಗೌನಳ್ಳಿ, ರಾಜಶೇಖರ್ ಮುಸ್ತರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ವಿವಿಧ ಶಾಲೆಗಳ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಾರ್ವಜನಿಕರು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.
ಚಿಂಚೋಳಿ : ತಾಲೂಕು ಮಟ್ಟದ ಶಾಲಾ ಕ್ರೀಡಾಕೂಟಕ್ಕೆ ಶಾಸಕರು ಅವಿನಾಶ್ ಜಾಧವ ಚಾಲನೆ ನೀಡಿದರು ಚಿಂಚೋಳಿ: ಜಿಲ್ಲಾ ಪಂಚಾಯತ್ ಕಲಬುರಗಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಚಿಂಚೋಳಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಕ್ರೀಡಾಕೂಟಕ್ಕೆ ಶಾಸಕ ಅವಿನಾಶ್ ಜಾಧವ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ
ಅವರು, ಕ್ರೀಡೆಯಲ್ಲಿ ಸೋಲು-ಗೆಲುವು ಸಾಮಾನ್ಯವಾಗಿದ್ದು, ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವದಿಂದ ಭಾಗವಹಿಸಿ ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಬೇಕು ಎಂದು ಕರೆ ನೀಡಿದರು. ಕ್ರೀಡೆ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗಿದ್ದು, ಯುವ ಪ್ರತಿಭೆಗಳನ್ನು ಗುರುತಿಸಿ ಬೆಳೆಸುವಲ್ಲಿ ಕ್ರೀಡಾಕೂಟಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಹೇಳಿದರು. ಪೋಲಕಪಳ್ಳಿಯ ಉಮೇಶ್ ಜಾಧವ ಅವರ ಕನಸಿನ ಕ್ರೀಡಾಂಗಣವನ್ನು ಇನ್ನಷ್ಟು ಅಭಿವೃದ್ಧಿಪಡಿಸಿ ಯುವಕರಿಗೆ
ಉತ್ತಮ ಕ್ರೀಡಾ ಸೌಲಭ್ಯ ಕಲ್ಪಿಸಲು ನಿರಂತರ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ, ಇಒ ಸಂತೋಷ್ ಚೌಹಾನ್, ಬಿಇಒ ದುಳಪ್ಪ ಮಲನೂರ್, ದೇವೀಂದ್ರಪ್ಪ ಹೊಲ್ಕರ್, ನಾಗಶೆಟ್ಟಿ ಭದ್ರಶೆಟ್ಟಿ, ಜಯಪ್ಪ ಚಪಲ, ಕುಪೇಂದ್ರ ಗೌನಳ್ಳಿ, ರಾಜಶೇಖರ್ ಮುಸ್ತರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ವಿವಿಧ ಶಾಲೆಗಳ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಾರ್ವಜನಿಕರು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.
- ಕುಂಚಾವರಂನಲ್ಲಿ ಡಾ ಬಿ ಆರ್ ಅಂಬೇಡ್ಕರ್ ವಸತಿ ಶಾಲೆಯ ಪ್ರವೇಶ ಕಾರ್ಯಕ್ರಮಕ್ಕೆ ಶಾಸಕರು ಅವಿನಾಶ್ ಜಾಧವ ಚಾಲನೆ ನೀಡಿದರು ಚಿಂಚೋಳಿ: ಕುಂಚಾವರಂ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ವತಿಯಿಂದ ನೂತನವಾಗಿ ನಿರ್ಮಿಸಲಾದ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ ವಿದ್ಯಾರ್ಥಿಗಳ ಪ್ರವೇಶ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಚಿಂಚೋಳಿ ಶಾಸಕ ಡಾ. ಅವಿನಾಶ್ ಜಾಧವ್ ಉದ್ಘಾಟಿಸಿದರು. ಶಾಲೆಯ ಪ್ರಾಂಶುಪಾಲ ಪ್ರಭುರಾಜ ಸೇರಿದಂತೆ ಗೋಪಾಲರಾವ ಕಟ್ಟಿಮನಿ, ವಿಜಯಕುಮಾರ್ ಚಂಗಟ್ಟಿ, ಶ್ರೀಮಂತ ಕಟ್ಟಿಮನಿ, ಕೆ.ಎಂ. ಭೀಮಶಟ್ಟಿ ಮೂರಡಾ, ಅಶೋಕಕುಮಾರ್ ಮೂಗದಂಪೂರ, ವೆಂಕಟರೆಡ್ಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಶಾಸಕರು ಮಾತನಾಡಿ, ಗಡಿಭಾಗದಲ್ಲಿ ಸುಮಾರು ₹9 ಕೋಟಿ ಅನುದಾನದಲ್ಲಿ ವಸತಿ ಶಾಲೆ ನಿರ್ಮಾಣವಾಗಿರುವುದು ಸಂತಸದ ಸಂಗತಿ. ಜಿಲ್ಲೆಯ 43 ವಸತಿ ಶಾಲೆಗಳ ಪೈಕಿ ಈ ಶಾಲೆ 3ನೇ ಸ್ಥಾನದಲ್ಲಿರುವುದು ಹೆಮ್ಮೆಯ ವಿಷಯ ಎಂದರು. ಕಾರ್ಯಕ್ರಮಕ್ಕೆ ಗೈರಾಗಿದ್ದ ಸರ್ಕಾರಿ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಶಾಸಕರು, ವೈಯಕ್ತಿಕ ಲೆಟರ್ಪ್ಯಾಡ್ ಮೂಲಕ ನೋಟಿಸ್ ನೀಡಿ, ಸಂಬಂಧಪಟ್ಟ ಅಧಿಕಾರಿಗಳಿಂದ ಉತ್ತರ ಪಡೆಯುವುದಾಗಿ ತಿಳಿಸಿದರು.3
- ಮಧ್ಯರಾತ್ರಿ ಬಂದು ರೈತರ ಮನವಿ ಪಡೆದ ಕಲಬುರಗಿ ಜಿಲ್ಲಾಧಿಕಾರಿ, ಎಸ್ಪಿ ರೈತ ಸಂಘಟನೆಗಳು ಕರೆ ನೀಡಿದ್ದ ಹೋರಾಟಕ್ಕೆ ಮಣಿದು ಕಡೆಗೂ ಕಲಬುರಗಿ ಜಿಲ್ಲಾಧಿಕಾರಿಗಳು ಸೇಡಂಗೆ ಮಧ್ಯರಾತ್ರಿ ಭೇಟಿ ನೀಡಿ ಮನವಿ ಪಡೆದಿದ್ದಾರೆ. ಸೇಡಂ ತಾಲೂಕನ್ನು ಬರಗಾಲ ಪಟ್ಟಿಯಿಂದ ಕೈಬಿಟ್ಟಿರುವುದು ಹಾಗೂ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರೈತರು ಚಿಂಚೋಳಿ ಕ್ರಾಸ್ ಬಳಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದರು.1
- ಪಾದಯಾತ್ರೆ ನಂತರ ಹೋರಾಟದಲ್ಲಿ ಭಾಗವಹಿಸಿದ ಜನರ ಕಾಲಿಗೆ ಬಿದ್ದು ಅಭಿನಂದನೆ ಸಲ್ಲಿಸಿದ ಶಾಸಕ ಡಾ ಸಿದ್ದು ಪಾಟೀಲ್1
- ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಎಲೆಕ್ಟ್ರಾನಿಕ್ ಸಿಟಿ ಎಲಿವೇಟೆಡ್ ಫೈಓವರ್ ಮೇಲೆ ಅಧಿಕ ಪ್ರಮಾಣದ ನೀರು ನಿಂತಿದ್ದು, ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಬೆಳಗ್ಗೆಯಾದರೂ ನೀರು ಸರಾಗವಾಗಿ ಹರಿದು ಹೋಗದೆ ರಸ್ತೆಯಲ್ಲೇ ನೀರು ನಿಂತಿದೆ. ಹೀಗಾಗಿ, ಸುಮಾರು 7KM ಉದ್ದಕ್ಕೂ ವಾಹನಗಳು ಸಾಲುಗಟ್ಟಿ ನಿಂತು, ಟ್ರಾಫಿಕ್ ಜಾಮ್ ಉಂಟಾಗಿದೆ. ಸಿಲ್ಕ್ ಬೋರ್ಡ್ನಿಂದ ಎಲೆಕ್ಟ್ರಾನಿಕ್ ಸಿಟಿ ಸಂಪರ್ಕಿಸುವ 9KM ಉದ್ದದ ಈ ರಸ್ತೆಯಲ್ಲಿ ಬೆಳಗ್ಗೆ ವಾಹನ ಸವಾರರಿಗೆ ಬಹಳ ಸಮಸ್ಯೆಯಾಗಿದೆ. ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ನಿಂತ ಮಳೆ ನೀರು; 7 ಕಿ.ಮೀ ಸುದೀರ್ಘ ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ!1
- ಗಣೇಶ ಪ್ರತಿಷ್ಠಾಪನೆ ಕಾರ್ಯಕ್ರಮ ಪರಮೇಶ್ವರ ಬೆನಕಿನಪಳ್ಳಿ ಸಂಗೀತ ಗಾಯಕ ಜೈಬಜರಂಗಬಲಿ ಕಮಿಟಿ ಬಜಾನಾ ಮಂಡಳಿ ನಡೆಸಿಕೊಟ್ಟರು ಕಾಳಗಿ(ಇಂಗನಕಲ್) ಗಣೇಶ ಪ್ರತಿಷ್ಠಾಪನೆ ಕಾರ್ಯಕ್ರಮ ಅಂಗವಾಗಿ ಜೈಬಜರಂಗಬಲಿ ಕಮಿಟಿ ಬಜಾನಾ ಮಂಡಳಿ ನಡೆಸಿಕೊಟ್ಟರು ಈ ಸಂದರ್ಭದಲ್ಲಿ ಶ್ರೀ ಪೂಜ್ಯ ಗುರುಗಳಾದ ವೀರಭದ್ರಯ್ಯ ಸ್ವಾಮೀಜಿ ಗಾಯಕರು ಸಂಗೀತ ಗಾಯಕ ಪರಮೇಶ್ವರ ಬೆನಕಿನಪಳ್ಳಿ ಪ್ರಸಿದ್ಧ ಡೋಲು ವಾದಕರು ಸಿದ್ದಣ್ಣ ಮಗಿ ಮಲ್ಲಿಕಾರ್ಜುನ ಮಾನಕಾರ ಗಾಯಕ ಶಿವಲಿಂಗಣ್ಣ ಪಾಟೀಲ್ ಶಾಂತಪ್ಪಗೌಡ ಬಿರಾದಾರ ಕಂಠೆಪ್ಪಾ ಬಸವಂತರಾವ ಮಾನಕಾರ ಬಸವರಾಜ ಮಾವನೂರ ಶರಣಪ್ಪಾ ಚಂದ್ರಶೇಖರ ರವೀಂದ್ರ ಹಾಲಕಾಯಿ ಮಲ್ಲಣ್ಣ ಸಂತೋಷ ಬಿರಂಜಗಿ ಹಣಮಂತ ಶರಣು ಮಂಗಲಗಿ ನಾಗಣ್ಣ ಜಗದೇವಪ್ಪ ಬಡಿಗೇರ ಅನೇಕ ಭಕ್ತರು ಸಹಕಾರ ಕೊಟ್ಟು ಸುಗಮವಾಗಿ ಸಂಗೀತ ಜೊತೆಗೆ ಭಜನೆ ನಡೆಸಿಕೊಟ್ಟರು1
- ಅದ್ಧೂರಿಯಾಗಿ ಜರುಗಿದ ಶ್ರಾವಣ ಮಾಸದ ಪುರಾಣ ಮಂಗಲ: ಬಬಲಾದ ಶ್ರೀಗಳ ತುಲಾಭಾರ ಬಸವಕಲ್ಯಾಣ: ತಾಲ್ಲೂಕಿನ ಜಾಪೂರವಾಡಿ ಗ್ರಾಮದಲ್ಲಿ ಶ್ರಾವಣ ಮಾಸದ ಪುರಾಣ ಮಂಗಲ ಹಾಗೂ ಬಬಲಾದ ಶ್ರೀಗಳ ತುಲಾಭಾರ ಕಾರ್ಯಕ್ರಮ ಅದ್ಧೂರಿಯಾಗಿ ಜರುಗಿತು1
- ಚನ್ನಮ್ಮ ಗುಣಾರಿ ಸಾಧನೆಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ: ಅಫಜಲಪುರ ತಾಲೂಕಿನ ಹೆಮ್ಮೆ – ಅಕ್ಷಯ ಸಲಗರ ಅಫಜಲಪುರ: ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಉತ್ತಮ ಸೇವೆ, ಕರ್ತವ್ಯನಿಷ್ಠೆ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ನೀಡಿದ ಕೊಡುಗೆಯನ್ನು ಗುರುತಿಸಿ ಶ್ರೀಮತಿ ಚನ್ನಮ್ಮ ಗುಣಾರಿ ಅವರಿಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಲಭಿಸಿರುವುದು ಅಫಜಲಪುರ ತಾಲೂಕಿನ ಹೆಮ್ಮೆಯ ಸಂಗತಿಯಾಗಿದೆ ಎಂದು ಯುವ ಮುಖಂಡ ಅಕ್ಷಯ ಸಲಗರ ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದರು. ಈ ಕುರಿತು ಮಾತನಾಡಿದ ಅಕ್ಷಯ ಸಲಗರ , “ಶಿಕ್ಷಕ ವೃತ್ತಿ ಅತ್ಯಂತ ಜವಾಬ್ದಾರಿಯುತ ಹಾಗೂ ಗೌರವಯುತ ವೃತ್ತಿಯಾಗಿದೆ. ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ಚನ್ನಮ್ಮ ಗುಣಾರಿ ಅವರು ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ ನಿರ್ವಹಿಸುತ್ತಾ, ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ನಿರಂತರವಾಗಿ ಶ್ರಮಿಸಿದ್ದಾರೆ. ಅವರ ಸೇವೆ ಮತ್ತು ಸಾಧನೆಯನ್ನು ಗುರುತಿಸಿ ಜಿಲ್ಲಾಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ನೀಡಿರುವುದು ನಿಜಕ್ಕೂ ಸಂತಸದ ವಿಚಾರವಾಗಿದೆ” ಎಂದರು. “ಚನ್ನಮ್ಮ ಗುಣಾರಿ ಅವರ ಈ ಸಾಧನೆ ಅಫಜಲಪುರ ತಾಲೂಕಿನ ಇತರ ಶಿಕ್ಷಕರಿಗೂ ಹಾಗೂ ವಿದ್ಯಾರ್ಥಿಗಳಿಗೂ ಪ್ರೇರಣೆಯಾಗಲಿದೆ. ಪ್ರಶಸ್ತಿ ಅವರ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುವುದರ ಜೊತೆಗೆ, ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ಉತ್ತಮ ಕಾರ್ಯಗಳನ್ನು ಮಾಡಲು ಪ್ರೋತ್ಸಾಹ ನೀಡಲಿ. ಮುಂದಿನ ದಿನಗಳಲ್ಲಿಯೂ ಅವರು ಇದೇ ರೀತಿಯ ನಿಷ್ಠೆ ಹಾಗೂ ಬದ್ಧತೆಯಿಂದ ಸೇವೆ ಸಲ್ಲಿಸಿ ಇನ್ನಷ್ಟು ಪ್ರಶಸ್ತಿಗಳನ್ನು ಪಡೆಯಲಿ ಎಂದು ಹಾರೈಸುತ್ತೇನೆ” ಎಂದು ಅಕ್ಷಯ ಸಲಗರ ಶುಭ ಹಾರೈಸಿದರು. ಚನ್ನಮ್ಮ ಗುಣಾರಿ ಅವರಿಗೆ ದೊರೆತಿರುವ ಜಿಲ್ಲಾಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಅಫಜಲಪುರ ತಾಲೂಕಿನ, ಶಿಕ್ಷಕರು ಹಾಗೂ ವಿವಿಧ ಮುಖಂಡರು ಅಭಿನಂದನೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಯುವ ಮುಖಂಡರಾದ ವಿಶ್ವನಾಥ ಮಠಪತಿ ಸಂಗುಗೌಡ ಬಿರಾದಾರ ಹಾಗೂ ಅಭಿಷೇಕ ಪಾಟೀಲ ಸಂಜು ಕಡ್ಲಾಜಿ ಸೇರಿದಂತೆ ಹಲವರು ಚನ್ನಮ್ಮ ಗುಣಾರಿ ಅವರಿಗೆ ಅಭಿನಂದಿಸಿ ಶುಭ ಹಾರೈಸಿದರು.1
- ಚಿಂಚೋಳಿ : ತಾಲೂಕು ಮಟ್ಟದ ಶಾಲಾ ಕ್ರೀಡಾಕೂಟಕ್ಕೆ ಶಾಸಕರು ಅವಿನಾಶ್ ಜಾಧವ ಚಾಲನೆ ನೀಡಿದರು ಚಿಂಚೋಳಿ: ಜಿಲ್ಲಾ ಪಂಚಾಯತ್ ಕಲಬುರಗಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಚಿಂಚೋಳಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಕ್ರೀಡಾಕೂಟಕ್ಕೆ ಶಾಸಕ ಅವಿನಾಶ್ ಜಾಧವ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕ್ರೀಡೆಯಲ್ಲಿ ಸೋಲು-ಗೆಲುವು ಸಾಮಾನ್ಯವಾಗಿದ್ದು, ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವದಿಂದ ಭಾಗವಹಿಸಿ ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಬೇಕು ಎಂದು ಕರೆ ನೀಡಿದರು. ಕ್ರೀಡೆ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗಿದ್ದು, ಯುವ ಪ್ರತಿಭೆಗಳನ್ನು ಗುರುತಿಸಿ ಬೆಳೆಸುವಲ್ಲಿ ಕ್ರೀಡಾಕೂಟಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಹೇಳಿದರು. ಪೋಲಕಪಳ್ಳಿಯ ಉಮೇಶ್ ಜಾಧವ ಅವರ ಕನಸಿನ ಕ್ರೀಡಾಂಗಣವನ್ನು ಇನ್ನಷ್ಟು ಅಭಿವೃದ್ಧಿಪಡಿಸಿ ಯುವಕರಿಗೆ ಉತ್ತಮ ಕ್ರೀಡಾ ಸೌಲಭ್ಯ ಕಲ್ಪಿಸಲು ನಿರಂತರ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ, ಇಒ ಸಂತೋಷ್ ಚೌಹಾನ್, ಬಿಇಒ ದುಳಪ್ಪ ಮಲನೂರ್, ದೇವೀಂದ್ರಪ್ಪ ಹೊಲ್ಕರ್, ನಾಗಶೆಟ್ಟಿ ಭದ್ರಶೆಟ್ಟಿ, ಜಯಪ್ಪ ಚಪಲ, ಕುಪೇಂದ್ರ ಗೌನಳ್ಳಿ, ರಾಜಶೇಖರ್ ಮುಸ್ತರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ವಿವಿಧ ಶಾಲೆಗಳ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಾರ್ವಜನಿಕರು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.3