ಶಿವಮೊಗ್ಗ-ಸಿಬಿಎಸ್ಇ SSLC ಫಲಿತಾಂಶ ಪ್ರಕಟ ಶಿವಮೊಗ್ಗ, ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ನ್ಯಾಷನಲ್ ಪಬ್ಲಿಕ್ ಶಾಲೆಯು ಸಿಬಿಎಸ್ಇ 10 ನೇ ತರಗತಿ ಪರೀಕ್ಷೆಯಲ್ಲಿ ಶೇ.100 ರಷ್ಟು ಫಲಿತಾಂಶ ದಾಖಲಿಸಿದೆ. ಪರೀಕ್ಷೆ ಬರೆದ 163 ವಿದ್ಯಾರ್ಥಿ ಗಳೂ ಉತ್ತೀರ್ಣರಾಗಿದ್ದು,102 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 21 ವಿದ್ಯಾರ್ಥಿಗಳು ಪ್ರಥಮ ದರ್ಜೆ ಹಾಗೂ 32 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣ ರಾಗಿದ್ದಾರೆ. ವಿದ್ಯಾರ್ಥಿಗಳಾದ ಕೀರ್ತನಾ.ಎಚ್. ಪಾಟೀಲ್ (ಶೇ.97.6), ಹಾಝಿರಾ ಮದಿಹಾ ಇಂದಾಡಿ (ಶೇ.97), ಅನುಷ್ಕಾ.ಕೆ (ಶೇ.96.6), ನವ್ಯಾ. ವೈ.ಮಥಡ್ (96.2), ವಿಪುಲಾ ಗಿರೀಶ್ ಸದವರ್ತಿ(ಶೇ.96.2), ಸಮನ್ವಿತಾ.ಎಸ್.ಪಿ (ಶೇ.96) ಅಂಕ ಪಡೆದಿದ್ದಾರೆ. 100 ಕ್ಕೆ 100 ಅಂಕ: ವಿಶೇಷವಾಗಿ ಕೆಲವು ವಿಷಯ ಗಳಲ್ಲಿ ವಿದ್ಯಾರ್ಥಿಗಳು 100 ಕ್ಕೆ 100 ಅಂಕ ಪಡೆದಿದ್ದು, ಇಂಗ್ಲೀಷ್ ವಿಷಯದಲ್ಲಿ 3 ವಿದ್ಯಾರ್ಥಿಗಳು, ಇನ್ಫಾರ್ಮೇಶನ್ ಟೆಕ್ನಾಲಜಿ ವಿಷಯದಲ್ಲಿ 3, ಸಮಾಜ ವಿಜ್ಞಾನ ವಿಷಯದಲ್ಲಿ ಓರ್ವ ವಿದ್ಯಾರ್ಥಿ ಹಾಗೂ ಕನ್ನಡದಲ್ಲಿ ಓರ್ವ ವಿದ್ಯಾರ್ಥಿನಿ 100 ಕ್ಕೆ 100 ಅಂಕ ಪಡೆದಿದ್ದಾರೆ. ವಿದ್ಯಾರ್ಥಿನಿ ಹಾಝಿರಾ ಮದಿಹಾ ಇಂದಾಡಿ ಇಂಗ್ಲೀಷ್ ವಿಷಯದಲ್ಲಿ 100 ಅಂಕ, ಅನುಷ್ಕಾ.ಕೆ ಇಂಗ್ಲೀಷ್ ಹಾಗೂ ಇನ್ಫಾರ್ಮೇಶನ್ ಟೆಕ್ನಾಲಜಿ ವಿಷಯದಲ್ಲಿ ತಲಾ 100 ಅಂಕ, ಸೈಯದ್ ರಾಹಿಲ್ ಇಂಗ್ಲೀಷ್ ಮತ್ತು ಸಮಾಜ ವಿಷಯದಲ್ಲಿ 100 ಅಂಕ, ಪ್ರಾರ್ಥನಾ. ಎಸ್.ಎಂ ಕನ್ನಡದಲ್ಲಿ 100 ಅಂಕ, ಇನ್ಫಾರ್ಮೇಶನ್ ಟೆಕ್ನಾಲಜಿಯಲ್ಲಿ ನಿದಾ ನಾಝ್. ಎಸ್.ಎ ಮತ್ತು ವಿಭಾ.ಎಸ್. ಗೌಡರ್ 100 ಅಂಕ ಪಡೆದಿದ್ದಾರೆ. ಇದರೊಂದಿಗೆ ಎಲ್ಲಾ ವಿದ್ಯಾರ್ಥಿ ಗಳ ಸರಾಸರಿ ಅಂಕ ಗಳಿಕೆಯು ಶೇ.78.57 ಪ್ರತಿಶತವಾಗಿದೆ.ಈ ಫಲಿತಾಂಶವು ಶಾಲೆಯ ಶೈಕ್ಷಣಿಕ ಗುಣಮಟ್ಟ ಮತ್ತು ಸಮಗ್ರ ತರಬೇತಿಯ ಪ್ರತೀಕವಾಗಿದ್ದು, ಎಲ್ಲಾ ವಿದ್ಯಾರ್ಥಿಗಳೂ 6 ನೇ ವಿಷಯವಾಗಿ ಇನ್ಫಾರ್ಮೇಶನ್ ಟೆಕ್ನಾಲಜಿ ಅಧ್ಯಯನ ನಡೆಸಿರು ವುದು ವಿಶೇಷ ಎಂದು ಪ್ರಾಂಶು ಪಾಲ ನವೀನ.ಎಂ.ಪಾಯಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಾಧಕರಿಗೆ ಎನ್ಇಎಸ್ ಆಡಳಿತ ಮಂಡಳಿ ಸದಸ್ಯರು ಅಭಿನಂದಿಸಿದ್ದಾರೆ.
ಶಿವಮೊಗ್ಗ-ಸಿಬಿಎಸ್ಇ SSLC ಫಲಿತಾಂಶ ಪ್ರಕಟ ಶಿವಮೊಗ್ಗ, ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ನ್ಯಾಷನಲ್ ಪಬ್ಲಿಕ್ ಶಾಲೆಯು ಸಿಬಿಎಸ್ಇ 10 ನೇ ತರಗತಿ ಪರೀಕ್ಷೆಯಲ್ಲಿ ಶೇ.100 ರಷ್ಟು ಫಲಿತಾಂಶ ದಾಖಲಿಸಿದೆ. ಪರೀಕ್ಷೆ ಬರೆದ 163 ವಿದ್ಯಾರ್ಥಿ ಗಳೂ ಉತ್ತೀರ್ಣರಾಗಿದ್ದು,102 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 21 ವಿದ್ಯಾರ್ಥಿಗಳು ಪ್ರಥಮ ದರ್ಜೆ ಹಾಗೂ 32 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣ ರಾಗಿದ್ದಾರೆ. ವಿದ್ಯಾರ್ಥಿಗಳಾದ ಕೀರ್ತನಾ.ಎಚ್. ಪಾಟೀಲ್ (ಶೇ.97.6), ಹಾಝಿರಾ ಮದಿಹಾ ಇಂದಾಡಿ (ಶೇ.97), ಅನುಷ್ಕಾ.ಕೆ (ಶೇ.96.6), ನವ್ಯಾ. ವೈ.ಮಥಡ್ (96.2), ವಿಪುಲಾ ಗಿರೀಶ್ ಸದವರ್ತಿ(ಶೇ.96.2), ಸಮನ್ವಿತಾ.ಎಸ್.ಪಿ (ಶೇ.96) ಅಂಕ ಪಡೆದಿದ್ದಾರೆ. 100 ಕ್ಕೆ 100 ಅಂಕ: ವಿಶೇಷವಾಗಿ ಕೆಲವು ವಿಷಯ ಗಳಲ್ಲಿ ವಿದ್ಯಾರ್ಥಿಗಳು 100 ಕ್ಕೆ 100 ಅಂಕ ಪಡೆದಿದ್ದು, ಇಂಗ್ಲೀಷ್ ವಿಷಯದಲ್ಲಿ 3 ವಿದ್ಯಾರ್ಥಿಗಳು, ಇನ್ಫಾರ್ಮೇಶನ್ ಟೆಕ್ನಾಲಜಿ ವಿಷಯದಲ್ಲಿ 3, ಸಮಾಜ ವಿಜ್ಞಾನ ವಿಷಯದಲ್ಲಿ ಓರ್ವ ವಿದ್ಯಾರ್ಥಿ ಹಾಗೂ ಕನ್ನಡದಲ್ಲಿ ಓರ್ವ ವಿದ್ಯಾರ್ಥಿನಿ 100 ಕ್ಕೆ 100 ಅಂಕ ಪಡೆದಿದ್ದಾರೆ. ವಿದ್ಯಾರ್ಥಿನಿ ಹಾಝಿರಾ ಮದಿಹಾ ಇಂದಾಡಿ ಇಂಗ್ಲೀಷ್ ವಿಷಯದಲ್ಲಿ 100 ಅಂಕ, ಅನುಷ್ಕಾ.ಕೆ ಇಂಗ್ಲೀಷ್ ಹಾಗೂ ಇನ್ಫಾರ್ಮೇಶನ್ ಟೆಕ್ನಾಲಜಿ ವಿಷಯದಲ್ಲಿ ತಲಾ 100 ಅಂಕ, ಸೈಯದ್ ರಾಹಿಲ್ ಇಂಗ್ಲೀಷ್ ಮತ್ತು ಸಮಾಜ ವಿಷಯದಲ್ಲಿ 100 ಅಂಕ, ಪ್ರಾರ್ಥನಾ. ಎಸ್.ಎಂ ಕನ್ನಡದಲ್ಲಿ 100 ಅಂಕ, ಇನ್ಫಾರ್ಮೇಶನ್ ಟೆಕ್ನಾಲಜಿಯಲ್ಲಿ ನಿದಾ ನಾಝ್. ಎಸ್.ಎ ಮತ್ತು ವಿಭಾ.ಎಸ್. ಗೌಡರ್ 100 ಅಂಕ ಪಡೆದಿದ್ದಾರೆ. ಇದರೊಂದಿಗೆ ಎಲ್ಲಾ ವಿದ್ಯಾರ್ಥಿ ಗಳ ಸರಾಸರಿ ಅಂಕ ಗಳಿಕೆಯು ಶೇ.78.57 ಪ್ರತಿಶತವಾಗಿದೆ.ಈ ಫಲಿತಾಂಶವು ಶಾಲೆಯ ಶೈಕ್ಷಣಿಕ ಗುಣಮಟ್ಟ ಮತ್ತು ಸಮಗ್ರ ತರಬೇತಿಯ ಪ್ರತೀಕವಾಗಿದ್ದು, ಎಲ್ಲಾ ವಿದ್ಯಾರ್ಥಿಗಳೂ 6 ನೇ ವಿಷಯವಾಗಿ ಇನ್ಫಾರ್ಮೇಶನ್ ಟೆಕ್ನಾಲಜಿ ಅಧ್ಯಯನ ನಡೆಸಿರು ವುದು ವಿಶೇಷ ಎಂದು ಪ್ರಾಂಶು ಪಾಲ ನವೀನ.ಎಂ.ಪಾಯಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಾಧಕರಿಗೆ ಎನ್ಇಎಸ್ ಆಡಳಿತ ಮಂಡಳಿ ಸದಸ್ಯರು ಅಭಿನಂದಿಸಿದ್ದಾರೆ.
- ಶಿವಮೊಗ್ಗ: ವಿದ್ಯಾರ್ಥಿಗಳ ಸಮಸ್ಯೆಗೆ ಸ್ಪಂದಿಸದ ಕುವೆಂಪು ವಿಶ್ವವಿದ್ಯಾಲಯದ ಕುಲಪತಿಗಳ ವಿರುದ್ದ ಎನ್ಎಸ್ಯುಐ ನೇತೃತ್ವದಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರ ಸ್ವರೂಪ ಪಡೆದು ಕೊಂಡಿತು. ಕುಲಪತಿಗಳ ಕಚೇರಿ ಆವರಣದಲ್ಲಿದ್ದ ಕುರ್ಚಿ, ಪ್ಲಾಟ್,ನಾಮಫಲಕ ಎಲ್ಲವನ್ನು ಪ್ರತಿಭಟನಾ ನಿರತ ವಿದ್ಯಾರ್ಥಿ ಗಳು ಪುಡಿ ಪುಡಿ ಮಾಡಿದ್ದಾರೆ. ವಿಶ್ವವಿದ್ಯಾಲಯದಲ್ಲಿ ನಿರಂತರವಾಗಿ ನಡೆಯುತ್ತಿರುವ ವಿದ್ಯಾರ್ಥಿ ವಿರೋಧಿ ಧೋರಣೆ ಹಾಗೂ ಆಡಳಿತಾತ್ಮಕ ವೈಫಲ್ಯ ಗಳನ್ನು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಖಂಡಿಸಿದರು. ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸದ ವಿಸಿಗೆ ಧಿಕ್ಕಾರ ಕೂಗಿ, ಕಚೇರಿಯ ಬೋರ್ಡ್ಗೆ ಕಪ್ಪು ಮಸಿ ಬಳಿದರು.ಅಷ್ಟಕ್ಕೆ ಸುಮ್ಮನಾಗದ ವಿದ್ಯಾರ್ಥಿಗಳು ಕುಲಪತಿಗಳ ಕಚೇರಿಯನ್ನು ವಿದ್ಯಾರ್ಥಿಗಳು ಅಕ್ಷರಶಃ ಧ್ವಂಸಗೊಳಿಸಿದರು.ವಿಶ್ವವಿದ್ಯಾಲಯದ ಆಂತರಿಕ ಕಲಹದಿಂದ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗುತ್ತಿದೆ ಎಂದು ಆಕ್ರೋಶ ಹೊರಹಾಕಿದರು. ಕಳೆದ ಐದು ತಿಂಗಳ ಹಿಂದೆ ನಡೆದ 1-3 ಮತ್ತು 5 ನೇ ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶ ಪ್ರಕಟಿಸಿಲ್ಲ ಮತ್ತು ಕಳೆದ ಮೂರು ವರ್ಷಗಳಿಂದ ಪದವಿ ಅಂಕಪಟ್ಟಿ ಗಳನ್ನು ವಿತರಿಸದಿರುವುದು ವಿದ್ಯಾರ್ಥಿಗಳ ಆತಂಕಕ್ಕೆ ಕಾರಣವಾಗಿದೆ. ಅಂಕಪಟ್ಟಿ ಇಲ್ಲದೆ ಪದವೀಧರರು ಉನ್ನತ ವ್ಯಾಸಂಗಕ್ಕೆ ಹಾಗೂ ಉದ್ಯೋಗಕ್ಕೆ ಸೇರಲು ಪರದಾಡುವಂತಾ ಗಿದೆ. ಈ ಬಗ್ಗೆ ಹಲವು ಬಾರಿ ಕುಲಪತಿಗಳಿಗೆ ಮನವಿ ಮಾಡಿದರೂ ಸ್ಪಂದಿಸದೆ, ಕೇವಲ ಅಧಿಕಾರಿಗಳ ಆಂತರಿಕ ಕಚ್ಚಾಟದಲ್ಲಿ ಕಾಲಹರಣ ಮಾಡುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು. ವಿಶ್ವವಿದ್ಯಾಲಯವು ಏಕಾಏಕಿ ಪರೀಕ್ಷಾ ಶುಲ್ಕ ಹಾಗೂ ಪ್ರವೇಶ ಶುಲ್ಕವನ್ನು ಸಾವಿರಾರು ರೂಪಾಯಿಗಳಷ್ಟು ಹೆಚ್ಚಿಸಿರು ವುದು ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳ ಪಾಲಿಗೆ ಮರಣ ಶಾಸನ ವಾಗಿದೆ. ಇದರ ಜೊತೆಗೆ ಡಿಜಿಟಲ್ ಮೌಲ್ಯಮಾಪನದಲ್ಲಿನ ತಾಂತ್ರಿಕ ಲೋಪ ಗಳಿಂದಾಗಿ ಫಲಿತಾಂಶಗಳಲ್ಲಿ ಗೊಂದಲ ಏರ್ಪಟ್ಟಿದ್ದು, ಪಾಸ್ ಆದವರು ಫೇಲ್ ಎಂದು ತೋರಿಸುತ್ತಿರುವುದು ವಿದ್ಯಾರ್ಥಿಗಳ ನಿದ್ದೆಗೆಡಿಸಿದೆ. ಈ ಅವ್ಯವಸ್ಥೆ ಸರಿಪಡಿಸಲು ವಿಫಲರಾಗಿರುವ ಕುಲಪತಿಗಳನ್ನು ಕೂಡಲೇ ವಜಾಗೊಳಿಸ ಬೇಕೆಂದು ಆಗ್ರಹಿಸಿದರು. ಕುಲಪತಿ ಹಾಗೂ ರಿಜಿಸ್ಟ್ರಾರ್ ಅವರನ್ನು ವಾಪಸ್ ಕರೆಸಿಕೊಳ್ಳಬೇಕು. ಸಮಸ್ಯೆ ಬಗೆಹರಿಸದೇ ಇದ್ದರೆ ಹೋರಾಟ ತೀವ್ರಗೊಳಿಸುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಪ್ರತಿಭಟನೆಯಲ್ಲಿ ಎನ್ಎಸ್ಯುಐ ನ ಜಿಲ್ಲಾಧ್ಯಕ್ಷ ವಿಜಯ್ ಕಾರ್ಯಾಧ್ಯಕ್ಷ ರವಿ ಕಟಿಕೆರೆ ನಗರಾಧ್ಯಕ್ಷ ರವಿ, ನಗರ ಉಪಾಧ್ಯಕ್ಷ ಆದಿತ್ಯ, ಸುಭಾನ್, ಪ್ರಧಾನ ಕಾರ್ಯದರ್ಶಿ ಚಂದ್ರೋಜಿ ರಾವ್, ವರುಣ್ ವಿ ಪಂಡಿತ್ ಮೊದಲಾದವರಿದ್ದರು. ಸ್ಥಳಕ್ಕೆ ಭೇಟಿ ನೀಡಿದ ಸಿಇಓ-ಎಎಸ್ಪಿ: ಕುವೆಂಪು ವಿವಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಂಡ ಹಿನ್ನಲೆಯಲ್ಲಿ ಘಟನಾ ಸ್ಥಳಕ್ಕೆ ಕುವೆಂಪು ವಿವಿಯ ಕುಲಸಚಿವರು ಆಗಿರುವ ಶಿವಮೊಗ್ಗ ಜಿ.ಪಂ ಸಿಇಓ ಹಾಗೂ ಪ್ರಭಾರ ಜಿಲ್ಲಾಧಿಕಾರಿ ಎನ್.ಹೇಮಂತ್ ಹಾಗೂ ಹೆಚ್ಚುವರಿಗೆ ಜಿಲ್ಲಾ ರಕ್ಷಣಾಧಿಕಾರಿ ಕಾರ್ಯಪ್ಪನವರು ಭೇಟಿ ನೀಡಿದರು. ಪೀಠೋಪಕರಣ ಧ್ವಂಸಗೊಂಡಿದ್ದನ್ನು ವೀಕ್ಷಿಸಿದ ಎನ್.ಹೇಮಂತ್ ಅವರು, ವಿವಿಯ ಸಿಂಡಿಕೇಟ್ ಸಭಾಂಗಣದಲ್ಲಿ ಚರ್ಚೆ ನಡೆಸಿದರು.ಘಟನೆ ಸಂಬಂಧ ಕುಲಪತಿ, ರಿಜಿಸ್ಟ್ರಾರ್ ಅವರಿಂದ ಮಾಹಿತಿ ಪಡೆದುಕೊಂಡರು. ಘಟನಾ ಸ್ಥಳಕ್ಕೆ ಶಿವಮೊಗ್ಗ ಎಎಸ್ಪಿ ಕಾರ್ಯಪ್ಪ ಭೇಟಿ ನೀಡಿ ಘಟನೆ ಸಂಬಂಧ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.ಪ್ರತಿಭಟನಾಕಾರರ ಜೊತೆ ಮಾತನಾಡಿದ ಭದ್ರಾವತಿ ಡಿವೈಎಸ್ಪಿ ಪ್ರಕಾಶ್ ರಾಥೋಡ್, ಪ್ರತಿಭಟನಾನಿರತ ವಿದ್ಯಾರ್ಥಿ ಗಳ ಮನವೊಲಿಸುವಲ್ಲಿ ಯಶಸ್ವಿಯಾದರು. ಬಳಿಕ ವಿದ್ಯಾರ್ಥಿಗಳು ಪ್ರತಿಭಟನೆ ಹಿಂಪಡೆದರು. ವಿದ್ಯಾರ್ಥಿಗಳ ಬೇಡಿಕೆಗಳೇನು: 1.ಕಳೆದ 5 ತಿಂಗಳ ಹಿಂದೆ ನಡೆದಿದ್ದ 1-3 ಮತ್ತು 5 ನೇ ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶ ಪ್ರಕಟಿಸಬೇಕು. ಪದವಿ ಪ್ರಮಾಣ ಪತ್ರ, ಅಂಕಪಟ್ಟಿ, ಜೆನ್ಯೂಯೆನ್ ಸರ್ಟಿಫಿಕೇಟ್ ವಿತರಣೆ ಮಾಡಬೇಕು. 2.ಏಕಾ ಏಕಿ ಏರಿಸಿರುವ ಸಾವಿರಾರು ರುಪಾಯಿ ಪರೀಕ್ಷಾ ಶುಲ್ಕ ಹಾಗು ಪ್ರವೇಶ ಶುಲ್ಕವನ್ನು ಇಳಿಸಬೇಕು. 3.ಡಿಜಿಟೆಲ್ ಮೌಲ್ಯಮಾಪನದಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದ್ದು ಕೂಡಲೇ ಡಿಜಿಟೆಲ್ ಮೌಲ್ಯಮಾಪನವನ್ನು ಕೈಬಿಡಬೇಕು. 4. ಭ್ರಷ್ಟಾಚಾರದ ಆರೋಪ ಹಾಗು ವಿಶ್ವ ವಿದ್ಯಾಲಯದಲ್ಲಿ ಕಳಂಕ ಹೊತ್ತಿರುವ ಎಲ್ಲಾ ಅಧಿಕಾರಿಗಳನ್ನೂ ತಕ್ಷಣ ವಜಾ ಮಾಡಬೇಕು 5. ಯು.ಯು.ಸಿ.ಎಮ್.ಎಸ್ ನಿಂದ ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆಗಳಿಗೆ ಸೂಕ್ತ ಪರಿಹಾರ ಒದಗಿಸಬೇಕು. 6. ವಿವಿ ಯಲ್ಲಿನ ತಾಂತ್ರಿಕ ತೊಂದರೆಗಳಿಗೆ ಸರ್ಕಾರವನ್ನು ದೂರದೆ ಸರಿಪಡಿಸುವ ವ್ಯವಸ್ಥೆ ಮಾಡಬೇಕು. 7.2021-22 ರ ದೂರಶಿಕ್ಷಣ ವಿದ್ಯಾರ್ಥಿಗಳ ಪರೀಕ್ಷೆ ಮತ್ತು ಅಂಕಪಟ್ಟಿ ಹಾಗು ಪಲಿತಾಂಶದ ಬಗ್ಗೆ ಕೂಡಲೆ ಗಮನಹರಿಸಬೇಕು. 8.ವಿವಿ ವ್ಯಾಪ್ತಿಗೊಳಪಡುವ ಎಲ್ಲಾ ಕಾಲೇಜುಗಳಲ್ಲಿ ಹಾಗು ಹಾಸ್ಟೆಲ್ಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಸರಿಪಡಿಸಬೇಕು. 9. ವಿವಿಯ ಎಲ್ಲಾ ಕಾಲೇಜುಗಳಿಗೆ ಕಂಪ್ಯೂಟರ್ ಹಾಗೂ ಲ್ಯಾಬ್ ವ್ಯವಸ್ಥೆ ಮಾಡಬೇಕು. 10. ವಿದ್ಯಾರ್ಥಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದ್ದು, ಕಾಲೇಜುಗಳಲ್ಲಿ ಹೆಚ್ಚುವರಿ ಕೊಠಡಿ ವ್ಯವಸ್ಥೆ ಮಾಡಬೇಕು ಎಂದು ಎಚ್ಚರಿಸಿದರು.1
- ವಿಧ್ಯಾರ್ಥಿಗಳ ಸನಸ್ಯೆ ಗಳನ್ನು ಬಗೆಹರಿಸುವಂತೆ ವಿಶ್ವವಿದ್ಯಾಲಯದ ಗಮನಕ್ಕೆ ಸಕಾಷ್ಟುಬಾರಿ ತಂದರು ಸ್ಪಂದಿಸದೇ ವಿದ್ಯಾರ್ಥಿ ವಿರೋದಿ ನೀತಿ ತೋರುತ್ತಿರುವ ಕುಲಪತಿಗಳ ವಿರುದ್ದ ಹೋರಾಟ ಕುವೆಂಪು ವಿಶ್ವವಿದ್ಯಾಲಯದಲ್ಲಿ ಇತ್ತೀಚೆಗೆ ನಿರಂತರವಾಗಿ ವಿದ್ಯಾರ್ಥಿ ವಿರೋಧಿ ನಡೆ ಅನುಸರಿಸುತ್ತಿದ್ದು, ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಚೆಲ್ಲಾಟವಾಡುತ್ತಿರುವ ವಿಶ್ವವಿದ್ಯಾಲಯದ ನಡೆಯನ್ನು ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ. ಖಂಡಿಸಿ ತೀವ್ರ ಪ್ರತಿಭಟನೆ ನಡೆಸಿತು.2
- ಕಡೂರು (ಬೀರೂರು): ಬೇಸಿಗೆ ರಜೆ ಹಿನ್ನೆಲೆಯಲ್ಲಿ ಊರಿಗೆ ಕಳಿಸಲಿಲ್ಲ ಎಂಬ ಸಣ್ಣದೊಂದು ಗಲಾಟೆಯ ನಡುವೆ ಪೊಲೀಸ್ ಅಧಿಕಾರಿಯ ಪತ್ನಿ ಮನನೊಂದು ನೇಣಿಗೆ ಶರಣಾದ ಘಟನೆ ಪಟ್ಟಣದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಬೀರೂರು ಪಟ್ಟಣದ ಪೊಲೀಸ್ ಠಾಣೆಯ ಪಿಎಸೈ ಡಿ.ವಿ. ತಿಪ್ಪೇಶ್ ಅವರ ಪತ್ನಿ ಪದ್ಮ(35) ಮೃತ ದುರ್ದೈವಿಯಾಗಿದ್ದು. ಬೀರೂರು ಪಟ್ಟಣದ ರಾಜಾಜಿನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಮೂಲತಃ ತುಮಕೂರು ಜಿಲ್ಲೆಯವರಾದ ಪದ್ಮ ಮತ್ತು ದಾವಣಗೆರೆ ಮೂಲದ ತಿಪ್ಪೇಶ್ 12 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು, ಇಬ್ಬರು ಮಕ್ಕಳಿದ್ದಾರೆ. ಮಕ್ಕಳಿಗೆ ಶಾಲೆ ರಜೆಯಿದ್ದು ಊರಿಗೆ ಕಳಿಸುವಂತೆ ಪತಿ ಪಿಎಸ್ಐ ತಿಪ್ಪೇಶ್ ಗೆ ಹೇಳಿದ್ದರು. ಮಕ್ಕಳಿಗೆ ಬೇಸಿಗೆ ರಜೆ ಇರೋದ್ರಿಂದ ಊರಿಗೆ ಹೋಗ್ತೀನಿ ಎಂದಿದ್ದರು. ಆದರೆ, ಪತಿ ತಿಪ್ಪೇಶ್ ನೈಟ್ ಡ್ಯೂಟಿ ಇದೆ. ನಾಳೆ ಹೋಗುವಂತೆ ಎಂದು ತಿಳಿ ಹೇಳಿದ್ದರು. ಅಷ್ಟಕ್ಕೆ ಮಾತಿಗೆ ಮಾತು ಬೆಳೆದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಇದೇ ವಿಚಾರ ದಂಪತಿಗಳ ಮಧ್ಯೆ ತೀವ್ರ ಮಾತಿನ ಚಕಮಕಿ ನಡೆದಿದ್ದು, ಪತಿ ಮಕ್ಕಳನ್ನ ಊರಿಗೆ ಕಳಿಸಲಿಲ್ಲವೆಂದು ಆಕ್ರೋಶಗೊಂಡ ಪದ್ಮ ಕಳೆದ ರಾತ್ರಿ 12 ಗಂಟೆಗೆ ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಮನೆಯ ರೋಮಿನಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬುಧವಾರ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಮೃತದೇಹವನ್ನು ಹಸ್ತಾಂತರಿಸಲಾಯಿತು. ಕೌಟುಂಬಿಕವಾಗಿ ಸಣ್ಣದೊಂದು ವಿಚಾರದ ಮಾತಿನ ಚಕಮಕಿಯಿಂದಾಗಿ ತನ್ನ ಜೀವವನ್ನೇ ಬಲಿಕೊಟ್ಟಿರುವ ಪದ್ಮಾ ಅವರ ಆತ್ಮಹತ್ಯೆಯ ನಿರ್ಧಾರದ ಧಾರುಣ ಘಟನೆಯ ಬಗ್ಗೆ ಪೊಲೀಸ್ ಸಿಬ್ಬಂದಿಗಳು ಮತ್ತು ನಾಗರೀಕರು ಮಮ್ಮುಲ ಮರುಗಿದರು. ಈ ಕುರಿತು ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.2
- Post by Suresh Belagere1
- ಕೇಂದ್ರ ಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಡಿ ಸುಧಾಕರ್ ಅಭಿಮಾನಿಗಳು ಅಕ್ರೋಶ ವ್ಯಕ್ತಪಡಿಸಿದ್ದು ಹೆಬ್ಬೆಟ್ಟು ಹೇಳಿಕೆ ವಾಪಾಸ್ ಪಡೆಯುವಂತೆ ಆಗ್ರಹಿಸಿದ್ದಾರೆ. ಈ ಕುರಿತು ಡಿ ಸುಧಾಕರ್ ಅಭಿಮಾನಿಗಳು ಮಾತನಾಡಿದ್ದು ಜಿಲ್ಲಾ ಉಸ್ತುವಾರಿ ಸಚಿವರಾದ ಡಿ ಸುಧಾಕರ್ ಅವರು ಶಸ್ತ್ರಚಿಕಿತ್ಸೆಗೆ ಧಾಖಲಾಗಿದ್ದು ಶ್ವಾಸಕೋಶದ ಸೋಂಕು ತಗುಲಿ ಚಿಕಿತ್ಸೆ ವಪಡೆಯುತ್ತಿದ್ದಾರೆ. ಆದರೆ ಕೇಂದ್ರ ಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಡಿ ಸುಧಾಕರ್ ಅವರು ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದು ಡಿ ಸುಧಾಕರ್ ಅವರು ಈಗಾಗಲೇ ಮೃತಪಟ್ಟಿದ್ದು ಅವರ ಆಸ್ತಿಯನ್ನ ಬೇರೆಯವರ ಹೆಸರಿಗೆ ಮಾಡಲು ಹೆಬ್ಬೆಟ್ಟು ಒತ್ತಿಸಿಕೊಳ್ಳಲು ಸತ್ತಿರುವುದನ್ನ ಮುಚ್ಚಿಟ್ಟಿದ್ದಾಗಿ ಹೇಳಿಕೆ ಕೊಟ್ಟಿದ್ದು ಈ ಹೇಳಿಕೆ ಖಂಡನೀಯವಾಗಿದೆ. ಚಿತ್ರದುರ್ಗದ ಹಾಗೂ ಹಿರಿಯೂರು ತಾಲ್ಲೂಕಿನ ಲಕ್ಷಾಂತರ ಅಭಿಮಾನಿಗಳು ಸುದಾಕರ್ ಅವರು ಶೀಘ್ರ ಗುಣಮುಖರಾಗಲು ಪೂಜೆ ಪುನಸ್ಕಾರ ಸಲ್ಲಿಸುತ್ತಿದ್ದಾರೆ. ಸಚಿವರು ಸಿ ಎಂ ಸಿದ್ದರಾಮಯ್ಯ ಅವರು ಕೂಡ ಆಸ್ಪತ್ರೆಗೆ ಬೇಟಿ ನೀಡಿ ಸುದಾಕರ್ ಅವರ ಆರೋಗ್ಯದ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ. ಆದರೆ ಕುಮಾರಸ್ವಾಮಿ ಆಸ್ಪತ್ರೆಗೆ ಬೇಟಿಯೂ ಕೊಡದೆ ವೈಧ್ಯರ ಬಳಿ ಮಾಹಿತಿಯನ್ನ ಸಹ ಪಡೆಯದೆ ಗಾಳಿಯಲ್ಲಿ ಗುಂಡು ಹೊಡೆದ ಹಾಗೆ ಹೇಳಿಕೆ ಕೊಟ್ಟು ಕಾಂಗ್ರೆಸ್ ನ ಕಾರ್ಯಕರ್ತರಲ್ಲಿ ಸುಧಾಕರ್ ಅಭಿಮಾನಿಗಳಲ್ಲಿ ನೊವ್ವುಂಟು ಮಾಡಿದ್ದು ಈ ಕೂಡಲೇ ಹೆಚ್ ಡಿ ಕುಮಾರಸ್ವಾಮಿ ಅವರು ತಮ್ಮ ಹೇಳಿಕೆಯನ್ನ ವಾಪಸ್ ಪಡೆಯಬೇಕು. ಹಾಗೂ ಡಿ ಕೆ ಶಿವಕುಮಾರ್ ಅವರು ಸಹ ಈಗಾಗಲೇ ಹಲವು ಬಾರಿ ಆಸ್ಪತ್ರೆಗೆ ಬೇಟಿ ನೀಡಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಹೆಚ್ ಡಿ ಕುಮಾರಸ್ವಾಮಿ ಅವರು ರಾಜಕೀಯವನ್ನ ಹೊರಗಿಟ್ಟು ಏನು ತಿಳಿಯದೇ ಈ ರೀತಿಯ ಹೇಳಿಕೆ ಕೊಡುತ್ತಿದ್ದು ನಾಚಿಕೆ ಗೇಡಿನ ಸಂಗತಿಯಾಗಿದೆ ಎಂದು ಎಚ್ಚರಿಕೆ ನೀಡಿದ್ದಾರೆ.1
- #ಚಿತ್ರದುರ್ಗ #Chitradurga #MidnightRain #RainNews #BreakingNews #WeatherUpdate #KarnatakaWeather #RainInChitradurga #HeavyRain #SummerHeat #RainRelief #WeatherNews #ಬಿಸಿಲು #ಮಳೆ #ಕರ್ನಾಟಕ #RainStorm #Lightning #StormRain #HeatWave #LocalNews #ಚಿತ್ರದುರ್ಗ #Chitradurga #MidnightRain #BreakingNews #RainUpdate #KarnatakaWeather #HeavyRain #WeatherNews #HeatWave #RainRelief1
- ಬೀದರ್ ಚಿಟ್ಟಾ ಅರಣ್ಯದಲ್ಲಿ ಕಾಡ್ಗಿಚ್ಚು: ಪ್ರಯಾಣದ ಮಧ್ಯೆಯೇ ಇಳಿದು ಬೆಂಕಿ ಆರಿಸಿದ ಅರಣ್ಯ ಸಚಿವರುಮಾದರಿ ನಡೆ: ಬೆಂಕಿ ನಂದಿಸಲು ಅಖಾಡಕ್ಕಿಳಿದ ಸಚಿವ ಈಶ್ವರ ಖಂಡ್ರೆ; ಪರಿಸರ ಪ್ರೇಮಕ್ಕೆ ಸಾಕ್ಷಿಯಾದ ಕ್ಷಣ#JB_NEWS_KANNADA ಜೆಬಿ ನ್ಯೂಸ್ ಕನ್ನಡ1
- Post by Suresh Belagere1