ಬಿ.ಸಿ ನಾಗೇಶ್ ಪಕ್ಷಾತೀತವಾದ ಅಭಿವೃದ್ಧಿ ಪುರುಷ: ಮಸಾಲಾ ಜಯರಾಮ್ ಮಾಜಿ ಶಿಕ್ಷಣ ಸಚಿವ ದಿ. ಬಿ.ಸಿ ನಾಗೇಶ್ ಅವರಿಗೆ ನುಡಿ ನಮನ; ಎನ್ಇಪಿ ಜಾರಿ, 135 ಶಾಲಾ ಕೊಠಡಿ ನಿರ್ಮಾಣದ ಸ್ಮರಣೆ. ತುರುವೇಕೆರೆ, ಆ.26: ಶಿಕ್ಷಣ ಕ್ಷೇತ್ರದಲ್ಲಿ ಎನ್ಇಪಿ (ರಾಷ್ಟ್ರೀಯ ಶಿಕ್ಷಣ ನೀತಿ) ಶಿಕ್ಷಣ ಪದ್ಧತಿಯನ್ನು ಜಾರಿಗೆ ತಂದಂತಹ ಹೆಗ್ಗಳಿಕೆ ಮಾಜಿ ಶಿಕ್ಷಣ ಸಚಿವ ದಿವಂಗತ ಬಿ.ಸಿ ನಾಗೇಶ್ ಅವರಿಗೆ ಸಲ್ಲುತ್ತದೆ. ಪಕ್ಷಾತೀತವಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡಿದ ಅಜಾತಶತ್ರುವಾಗಿದ್ದರು ಎಂದು ಮಾಜಿ ಶಾಸಕ ಮಸಾಲಾ ಜಯರಾಮ್ ಅಭಿಪ್ರಾಯಪಟ್ಟರು. ಇತ್ತೀಚೆಗೆ ಅನಾರೋಗ್ಯದಿಂದ ನಿಧನರಾದ ಮಾಜಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರ ನುಡಿ ನಮನ ಕಾರ್ಯಕ್ರಮವನ್ನು ಮಸಾಲಾ ಜಯರಾಮ್ ಅವರ ತೋಟದ ಮನೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ಮಸಾಲಾ ಜಯರಾಮ್, ನಾಗೇಶಣ್ಣನ ನಿಧನದಿಂದ ತಮ್ಮ ಕ್ಷೇತ್ರಕ್ಕೆ ತುಂಬಲಾಗದ ನಷ್ಟವಾಗಿದೆ ಎಂದು ಶೋಕ ವ್ಯಕ್ತಪಡಿಸಿದರು.ಅವರ ಬಗ್ಗೆ ಹೇಳಲು ಒಂದು ದಿನವಾದರೂ ಸಾಲದು, ಅಂತಹ ಸಜ್ಜನ ರಾಜಕಾರಣಿ ನಾಗೇಶಣ್ಣ. ತಾವು ಶಾಸಕರಾಗಿದ್ದ ಸಂದರ್ಭದಲ್ಲಿ ಅವರ ಜೊತೆ ಕೆಲಸ ಮಾಡಿದ್ದು ತಮಗೆ ಹೆಮ್ಮೆಯ ವಿಷಯ ಎಂದು ಸ್ಮರಿಸಿದ ಜಯರಾಮ್, ನಾಗೇಶ್ ಅವರ ಅಭಿವೃದ್ಧಿಯ ಚಿಂತನೆ ಅಪಾರವಾದದ್ದು, ಅವರ ದೇಶಪ್ರೇಮ ಪ್ರಶ್ನಾತೀತವಾದದ್ದು ಎಂದು ಬಣ್ಣಿಸಿದರು. ಅವರು ಸ್ವದೇಶೀ ವಸ್ತುಗಳನ್ನೇ ಬಳಸುತ್ತಿದ್ದರು ಎಂದು ಸ್ಮರಿಸಿ. ಶಿಕ್ಷಣ ಸಚಿವರಾಗಿದ್ದಾಗ ತಮ್ಮ ಸಂಬಳದ ಹಣವನ್ನು ಸ್ವಂತಕ್ಕೆ ಬಳಸದೆ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ನೀಡಿದ್ದನ್ನು ತಾವು ಕಣ್ಣಾರೆ ಕಂಡಿರುವುದಾಗಿ ಜಯರಾಮ್ ಹೇಳಿದರು. ಅಂತಹ ಸಜ್ಜನರು ತಮ್ಮ ತಾಲ್ಲೂಕಿಗೆ ಯಾರೂ ಕೊಡದಂತಹ ಕೊಡುಗೆಯನ್ನು ನೀಡಿದ್ದಾರೆ ಎಂದ ಅವರು, ಕ್ಷೇತ್ರಕ್ಕೆ 135 ಶಾಲಾ ಕೊಠಡಿಗಳನ್ನು ನೀಡಿದ್ದನ್ನು ಸ್ಮರಿಸಿದರು. ಪಕ್ಷಾತೀತವಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡಿದ ಅಜಾತಶತ್ರುವಾಗಿದ್ದ ಅವರು ಉನ್ನತವಾದ ಕೆಲಸಗಳನ್ನು ಮಾಡಿ ಜನಮನ್ನಣೆ ಗಳಿಸಿದ್ದರು ಎಂದು ಹೇಳಿದರು.ಸಂಘ ಪರಿವಾರದಿಂದ ಬಂದು ಉನ್ನತ ಮಟ್ಟಕ್ಕೇರಿದ ನಾಗೇಶ್, ಸಂಘಪರಿವಾರ ಜಾತಿ ಭೇದ ನೋಡದೆ ವ್ಯಕ್ತಿಗಳನ್ನು ಉನ್ನತ ಮಟ್ಟಕ್ಕೆ ಬೆಳೆಸುತ್ತದೆ ಎಂಬುದಕ್ಕೆ ನಿದರ್ಶನವಾಗಿ ಜಾತಿ ಮೀರಿ ಬೆಳೆದ ವ್ಯಕ್ತಿ ಎಂದು ಜಯರಾಮ್ ಬಣ್ಣಿಸಿದರು. ಶಿಕ್ಷಣ ಕ್ಷೇತ್ರದಲ್ಲಿ ಎನ್ಇಪಿ ಜಾರಿಗೆ ತಂದಂತಹ ಹೆಗ್ಗಳಿಕೆ ಅವರಿಗೆ ಸಲ್ಲುತ್ತದೆ ಎಂದು ಪುನರುಚ್ಚರಿಸಿದ ಅವರು, ನಾಗೇಶ್ ಅವರ ನಿಧನದಿಂದ ತಮಗೆ ತುಂಬಾ ನೋವುಂಟಾಗಿದೆ ಎಂದೂ ಹೇಳಿದರು. ಭಗವಂತ ಅವರ ಕುಟುಂಬಕ್ಕೆ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ತಾಲ್ಲೂಕು ಬಿಜೆಪಿ ಮಂಡಲಾಧ್ಯಕ್ಷ ಜಿ.ವಿ ಪ್ರಕಾಶ್, ಜಿಲ್ಲಾಘಟಕದ ಶಿವಕುಮಾರಸ್ವಾಮಿ, ತಾಲ್ಲೂಕು ಉಸ್ತುವಾರಿ ಬಸವರಾಜ್, ಮಹಿಳಾಘಟಕದ ತಾಲ್ಲೂಕು ಅಧ್ಯಕ್ಷೆ ರಾಧಾಮಣಿ, ಅನಿತಾ ನಂಜುಂಡಯ್ಯ, ಸಂತೋಷ್, ಹರಿಕಾರನಹಳ್ಳಿ ಪ್ರಸಾದ್, ನವೀನ್ ಬಾಬು, ಚಿದಾನಂದ್, ರಾಕೇಂದು, ಯೋಗಾನಂದ್, ವಿ.ಬಿ ಸುರೇಶ್, ಕಾಳಂಜಿಹಳ್ಳಿ ಸೋಮಶೇಖರ್, ಸಂತೋಷ್ ಕಂಟ್ಲಿ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಇದ್ದರು.
ಬಿ.ಸಿ ನಾಗೇಶ್ ಪಕ್ಷಾತೀತವಾದ ಅಭಿವೃದ್ಧಿ ಪುರುಷ: ಮಸಾಲಾ ಜಯರಾಮ್ ಮಾಜಿ ಶಿಕ್ಷಣ ಸಚಿವ ದಿ. ಬಿ.ಸಿ ನಾಗೇಶ್ ಅವರಿಗೆ ನುಡಿ ನಮನ; ಎನ್ಇಪಿ ಜಾರಿ, 135 ಶಾಲಾ ಕೊಠಡಿ ನಿರ್ಮಾಣದ ಸ್ಮರಣೆ. ತುರುವೇಕೆರೆ, ಆ.26: ಶಿಕ್ಷಣ ಕ್ಷೇತ್ರದಲ್ಲಿ ಎನ್ಇಪಿ (ರಾಷ್ಟ್ರೀಯ ಶಿಕ್ಷಣ ನೀತಿ) ಶಿಕ್ಷಣ ಪದ್ಧತಿಯನ್ನು ಜಾರಿಗೆ ತಂದಂತಹ ಹೆಗ್ಗಳಿಕೆ ಮಾಜಿ ಶಿಕ್ಷಣ ಸಚಿವ ದಿವಂಗತ ಬಿ.ಸಿ ನಾಗೇಶ್ ಅವರಿಗೆ ಸಲ್ಲುತ್ತದೆ. ಪಕ್ಷಾತೀತವಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡಿದ ಅಜಾತಶತ್ರುವಾಗಿದ್ದರು ಎಂದು ಮಾಜಿ ಶಾಸಕ ಮಸಾಲಾ ಜಯರಾಮ್ ಅಭಿಪ್ರಾಯಪಟ್ಟರು. ಇತ್ತೀಚೆಗೆ ಅನಾರೋಗ್ಯದಿಂದ ನಿಧನರಾದ ಮಾಜಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರ ನುಡಿ ನಮನ
ಕಾರ್ಯಕ್ರಮವನ್ನು ಮಸಾಲಾ ಜಯರಾಮ್ ಅವರ ತೋಟದ ಮನೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ಮಸಾಲಾ ಜಯರಾಮ್, ನಾಗೇಶಣ್ಣನ ನಿಧನದಿಂದ ತಮ್ಮ ಕ್ಷೇತ್ರಕ್ಕೆ ತುಂಬಲಾಗದ ನಷ್ಟವಾಗಿದೆ ಎಂದು ಶೋಕ ವ್ಯಕ್ತಪಡಿಸಿದರು.ಅವರ ಬಗ್ಗೆ ಹೇಳಲು ಒಂದು ದಿನವಾದರೂ ಸಾಲದು, ಅಂತಹ ಸಜ್ಜನ ರಾಜಕಾರಣಿ ನಾಗೇಶಣ್ಣ. ತಾವು ಶಾಸಕರಾಗಿದ್ದ ಸಂದರ್ಭದಲ್ಲಿ ಅವರ ಜೊತೆ ಕೆಲಸ ಮಾಡಿದ್ದು ತಮಗೆ ಹೆಮ್ಮೆಯ ವಿಷಯ ಎಂದು ಸ್ಮರಿಸಿದ ಜಯರಾಮ್, ನಾಗೇಶ್ ಅವರ ಅಭಿವೃದ್ಧಿಯ ಚಿಂತನೆ ಅಪಾರವಾದದ್ದು, ಅವರ ದೇಶಪ್ರೇಮ ಪ್ರಶ್ನಾತೀತವಾದದ್ದು ಎಂದು ಬಣ್ಣಿಸಿದರು. ಅವರು ಸ್ವದೇಶೀ ವಸ್ತುಗಳನ್ನೇ ಬಳಸುತ್ತಿದ್ದರು ಎಂದು ಸ್ಮರಿಸಿ. ಶಿಕ್ಷಣ ಸಚಿವರಾಗಿದ್ದಾಗ ತಮ್ಮ ಸಂಬಳದ ಹಣವನ್ನು
ಸ್ವಂತಕ್ಕೆ ಬಳಸದೆ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ನೀಡಿದ್ದನ್ನು ತಾವು ಕಣ್ಣಾರೆ ಕಂಡಿರುವುದಾಗಿ ಜಯರಾಮ್ ಹೇಳಿದರು. ಅಂತಹ ಸಜ್ಜನರು ತಮ್ಮ ತಾಲ್ಲೂಕಿಗೆ ಯಾರೂ ಕೊಡದಂತಹ ಕೊಡುಗೆಯನ್ನು ನೀಡಿದ್ದಾರೆ ಎಂದ ಅವರು, ಕ್ಷೇತ್ರಕ್ಕೆ 135 ಶಾಲಾ ಕೊಠಡಿಗಳನ್ನು ನೀಡಿದ್ದನ್ನು ಸ್ಮರಿಸಿದರು. ಪಕ್ಷಾತೀತವಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡಿದ ಅಜಾತಶತ್ರುವಾಗಿದ್ದ ಅವರು ಉನ್ನತವಾದ ಕೆಲಸಗಳನ್ನು ಮಾಡಿ ಜನಮನ್ನಣೆ ಗಳಿಸಿದ್ದರು ಎಂದು ಹೇಳಿದರು.ಸಂಘ ಪರಿವಾರದಿಂದ ಬಂದು ಉನ್ನತ ಮಟ್ಟಕ್ಕೇರಿದ ನಾಗೇಶ್, ಸಂಘಪರಿವಾರ ಜಾತಿ ಭೇದ ನೋಡದೆ ವ್ಯಕ್ತಿಗಳನ್ನು ಉನ್ನತ ಮಟ್ಟಕ್ಕೆ ಬೆಳೆಸುತ್ತದೆ ಎಂಬುದಕ್ಕೆ ನಿದರ್ಶನವಾಗಿ ಜಾತಿ ಮೀರಿ ಬೆಳೆದ ವ್ಯಕ್ತಿ ಎಂದು ಜಯರಾಮ್ ಬಣ್ಣಿಸಿದರು. ಶಿಕ್ಷಣ ಕ್ಷೇತ್ರದಲ್ಲಿ
ಎನ್ಇಪಿ ಜಾರಿಗೆ ತಂದಂತಹ ಹೆಗ್ಗಳಿಕೆ ಅವರಿಗೆ ಸಲ್ಲುತ್ತದೆ ಎಂದು ಪುನರುಚ್ಚರಿಸಿದ ಅವರು, ನಾಗೇಶ್ ಅವರ ನಿಧನದಿಂದ ತಮಗೆ ತುಂಬಾ ನೋವುಂಟಾಗಿದೆ ಎಂದೂ ಹೇಳಿದರು. ಭಗವಂತ ಅವರ ಕುಟುಂಬಕ್ಕೆ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ತಾಲ್ಲೂಕು ಬಿಜೆಪಿ ಮಂಡಲಾಧ್ಯಕ್ಷ ಜಿ.ವಿ ಪ್ರಕಾಶ್, ಜಿಲ್ಲಾಘಟಕದ ಶಿವಕುಮಾರಸ್ವಾಮಿ, ತಾಲ್ಲೂಕು ಉಸ್ತುವಾರಿ ಬಸವರಾಜ್, ಮಹಿಳಾಘಟಕದ ತಾಲ್ಲೂಕು ಅಧ್ಯಕ್ಷೆ ರಾಧಾಮಣಿ, ಅನಿತಾ ನಂಜುಂಡಯ್ಯ, ಸಂತೋಷ್, ಹರಿಕಾರನಹಳ್ಳಿ ಪ್ರಸಾದ್, ನವೀನ್ ಬಾಬು, ಚಿದಾನಂದ್, ರಾಕೇಂದು, ಯೋಗಾನಂದ್, ವಿ.ಬಿ ಸುರೇಶ್, ಕಾಳಂಜಿಹಳ್ಳಿ ಸೋಮಶೇಖರ್, ಸಂತೋಷ್ ಕಂಟ್ಲಿ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಇದ್ದರು.
- ಹುಳಿಯಾರಿನಲ್ಲಿ ಈದ್ ಮಿಲಾದ್ ಹಬ್ಬದ ಹಿನ್ನೆಲೆ ಪೊಲೀಸರಿಂದ ಪಥಸಂಚಲನ -------------------- ಈದ್ ಮಿಲಾದ್ ಹಬ್ಬದ ಹಿನ್ನೆಲೆ ಶಾಂತಿ, ಸೌಹಾರ್ದತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಪೊಲೀಸರು ಹುಳಿಯಾರ್ನ ಪ್ರಮುಖ ರಸ್ತೆಗಳಲ್ಲಿ ಗುರುವಾರ ಪಥಸಂಚಲನ ನಡೆಸಿದರು. ಹಬ್ಬದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಪ್ರಮುಖ ಪ್ರದೇಶಗಳಲ್ಲಿ ಸಂಚರಿಸಿ ಸಾರ್ವಜನಿಕರಲ್ಲಿ ಭದ್ರತೆಯ ಭಾವನೆ ಮೂಡಿಸಿದರು. ಎಲ್ಲಾ ಸಮುದಾಯದವರು ಪರಸ್ಪರ ಸೌಹಾರ್ದ ಮತ್ತು ಸಹಬಾಳ್ವೆಯಿಂದ ಹಬ್ಬ ಆಚರಿಸಬೇಕೆಂದು ಪೊಲೀಸರು ಮನವಿ ಮಾಡಿದರು.1
- 25 ಸಾವಿರ ಲೀಟರ್ ಹಾಲುಮಣ್ಣಿನ ಪಾಲು ಹಾಲು ತುಂಬಿ ಕೊಳಲ ಜನ ಸಾಗರವೇ ಸೇರಿತ್ತು ಹಾಲಿನ ಲಾರಿ ತುಮಕೂರು ಕಡೆಯಿಂದ ಮುಂಬೈಗೆ ತೆರಳಲು ಶಿರಾ ಬೈಪಾಸ್ನಲ್ಲಿ ಸಂಚರಿಸುತ್ತಿದ್ದ ವೇಳೆ, ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ರಸ್ತೆಯಲ್ಲಿ ಪಲ್ಟಿಯಾಗಿದೆ. ಲಾರಿ ಪಲ್ಟಿಯಾಗುತ್ತಿದ್ದಂತೆ ಅದರಲ್ಲಿದ್ದ ಸಾವಿರಾರು ಲೀಟರ್ ಹಾಲು ರಸ್ತೆಯುದ್ದಕ್ಕೂ ಕ್ಷೀರ ಸಾಗರದಂತೆ ಹರಿದಿದೆ. ಟ್ಯಾಂಕರ್ ಪಲ್ಟಿಯಾದ ವಿಷಯ ತಿಳಿದ ಕೆಲವರು ಕವರ್, ಪ್ಲಾಸ್ಟಿಕ್ ಬಾಟಲಿ ಹಾಗೂ ಕ್ಯಾನ್ಗಳೊಂದಿಗೆ ಸ್ಥಳಕ್ಕೆ ಧಾವಿಸಿ, ಚೆಲ್ಲುತ್ತಿದ್ದ ಹಾಲನ್ನು ತುಂಬಿಸಿಕೊಳ್ಳಲು ಮುಗಿಬಿದ್ದಿದ್ದಾರೆ. ಇದರಿಂದ ಹೆದ್ದಾರಿಯಲ್ಲಿ ಕೆಲಕಾಲ ತೀವ್ರ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.1
- *ವಿಬಿ-ಜಿ ರಾಮ್ ಜಿ ಯೋಜನೆಯಡಿ ದುಡಿಯುವ ಕಾರ್ಮಿಕರಿಗೆಸಮಯಕ್ಕೆ ಸರಿಯಾಗಿ ಕೂಲಿ ಪಾವತಿಸಿ- ಜಿಲ್ಲಾಪಂಚಾಯಿತಿ ನಿಗದಿತ ಅವಧಿಯೊಳಗೆ ಕೂಲಿ ಪಾವತಿಯಾಗುವುದು ಅತ್ಯಂತ ಮುಖ್ಯ. ಹಾಜರಾತಿ, ದಾಖಲೆ ನಿರ್ವಹಣೆ ಹಾಗೂ ವೇತನ ಪಾವತಿಗೆ ಸಂಬಂಧಿಸಿದ ಪ್ರಕ್ರಿಯೆಗಳನ್ನು ಯಾವುದೇ ವಿಳಂಬವಿಲ್ಲದೆ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಜಿಪಂ ಸಿಈಓ ಸೂಚಿಸಿದರು. ಕಾರ್ಮಿಕರು ನಿರಂತರವಾಗಿ ಉದ್ಯೋಗ ಕಲ್ಪಿಸುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ, ಪ್ರಸ್ತುತ ನಡೆಯುತ್ತಿರುವ ಮಸ್ಟರ್ ರೋಲ್ ಹಾಗೂ ಎನ್ಎಂಆರ್ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಮುಂದಿನ ಹಂತದ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಉದ್ಯೋಗದ ನಿರಂತರತೆಗೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು. *ಉತ್ತಮ ಗುಣಮಟ್ಟದ ಕಾಮಗಾರಿಗೆ ಆದ್ಯತೆ* : ಯೋಜನೆಯಡಿ ನಿರ್ಮಾಣವಾಗುವ ಪ್ರತಿಯೊಂದು ಆಸ್ತಿಯೂ ಗ್ರಾಮದ ಜನರಿಗೆ ದೀರ್ಘಕಾಲದವರೆಗೆ ಪ್ರಯೋಜನ ನೀಡುವಂತಾಗಬೇಕು. ಈ ನಿಟ್ಟಿನಲ್ಲಿ ಯೋಜನೆಯ ಕಾಮಗಾರಿ ಅನುಷ್ಠಾನದಲ್ಲಿ ಉತ್ತಮ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. “ಗುಣಮಟ್ಟದ ಕಾಮಗಾರಿ – ಶಾಶ್ವತ ಆಸ್ತಿ – ಸಮಗ್ರ ಗ್ರಾಮೀಣ ಅಭಿವೃದ್ಧಿ” ಎಂಬ ಪ್ರಮುಖ ಆಶಯದೊಂದಿಗೆ ಗ್ರಾಮೀಣ ಪ್ರದೇಶಗಳಲ್ಲಿ ಕೈಗೊಳ್ಳುವ ಪ್ರತಿಯೊಂದು ಕಾಮಗಾರಿಯನ್ನು ಅತ್ಯಂತ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು. *NMMS ಹಾಜರಾತಿ ದಾಖಲಾತಿ ಕಡ್ಡಾಯ* : ವಿ-ಬಿ-ಜಿ ರಾಮ್ ಜಿ ಯೋಜನೆಯಡಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವ ಹಿತದೃಷ್ಟಿಯಿಂದ ಕಾರ್ಮಿಕರ ಹಾಜರಾತಿಯನ್ನು NMMS ಆ್ಯಪ್ ಮೂಲಕ ನಿಯಮಾನುಸಾರ ದಾಖಲಿಸುವುದು ಅತ್ಯಂತ ಮಹತ್ವದ್ದಾಗಿದ್ದು, ಕಾರ್ಮಿಕರು ಕೆಲಸಕ್ಕೆ ಹಾಜರಾದ ಸಮಯದಲ್ಲಿಯೇ ನೈಜ ಸಮಯದ ಹಾಜರಾತಿಯನ್ನು ಅಪ್ಲೋಡ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಹಾಜರಾತಿಯಲ್ಲಿ ಸಮಯದಲ್ಲಿ ಯಾವುದೇ ತಾಂತ್ರಿಕ ಸಮಸ್ಯೆ ಕಂಡುಬಂದಲ್ಲಿ ಸಂಬಂಧಪಟ್ಟ ಸಿಬ್ಬಂದಿಗಳು ತಾಲ್ಲೂಕು ಪಂಚಾಯತ ಮುಖೇನಾ ಜಿಲ್ಲಾ ಪಂಚಾಯತ್ ತಂಡಕ್ಕೆ ಮಾಹಿತಿ ನೀಡಿ ಸಮಸ್ಯೆ ಬಗೆಹರಿಸಿಕೊಳ್ಳಲು ಆ ದಿನವೇ ಕಡ್ಡಾಯವಾಗಿ ಕ್ರಮವಹಿಸಬೇಕು. ಯಾವುದೇ ಸಂದರ್ಭದಲ್ಲಿಯೂ ಸಹ ತಾಂತ್ರಿಕ ಸಮಸ್ಯೆಯಿಂದಾಗಿ ಹಾಜರಾತಿ ತೆಗೆದುಕೊಳ್ಳದೇ ಹೋದಲ್ಲಿ ಸಂಬಂಧಪಟ್ಟ ಅಧಿಕಾರಿ /ಸಿಬ್ಬಂದಿಗಳ ಮೇಲೆ ಕ್ರಮವಹಿಸಲಾಗುವುದು ಎಂದು ಮಾಹಿತಿ ನೀಡಿದರು. *ಕಾಮಗಾರಿಗಳ ನಿರಂತರ ಮೇಲ್ವಿಚಾರಣೆಗೆ ಸೂಚನೆ* ಯೋಜನೆಯಡಿ ಕೈಗೆತ್ತಿಕೊಳ್ಳುವ ಅಭಿವೃದ್ಧಿ ಕಾಮಗಾರಿಗಳು ನಿರ್ವಹಣೆಯ ಕೊರತೆ ಅಥವಾ ಆಡಳಿತಾತ್ಮಕ ವಿಳಂಬದಿಂದ ಕುಂಠಿತಗೊಳ್ಳಬಾರದು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ತಾಂತ್ರಿಕ ಸಿಬ್ಬಂದಿ ಹಾಗೂ ಅನುಷ್ಠಾನಾಧಿಕಾರಿಗಳು ತಳಮಟ್ಟದಲ್ಲಿ ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು. ಕೇವಲ ಕಾಮಗಾರಿಗಳಿಗೆ ಅನುಮೋದನೆ ನೀಡುವುದಕ್ಕೆ ಸೀಮಿತವಾಗದೆ, ಕಾಮಗಾರಿ ಆರಂಭವಾದ ದಿನದಿಂದ ಪೂರ್ಣಗೊಳ್ಳುವವರೆಗೂ ನಿರಂತರ ಮೇಲ್ವಿಚಾರಣೆ ನಡೆಸಬೇಕು. ಗುಣಮಟ್ಟ, ಸಮಯಪಾಲನೆ ಹಾಗೂ ಸಾರ್ವಜನಿಕರಿಗೆ ಆಗುವ ಪ್ರಯೋಜನ—ಈ ಮೂರು ಅಂಶಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ತಿಳಿಸಿದರು. ಜಲಸಂರಕ್ಷಣೆ, ಕೃಷಿ ಭೂಮಿಗೆ ನೀರು ಹರಿಸುವ ವ್ಯವಸ್ಥೆ, ಕೆರೆ-ಕಾಲುವೆಗಳ ಪುನಶ್ಚೇತನ ಸೇರಿದಂತೆ ಸಾರ್ವಜನಿಕರಿಗೆ ದೀರ್ಘಕಾಲಿಕ ಪ್ರಯೋಜನ ನೀಡುವ ಕಾಮಗಾರಿಗಳಿಗೆ ಆದ್ಯತೆ ನೀಡಬೇಕು. ಇಂತಹ ಕಾಮಗಾರಿಗಳ ಮೂಲಕ ಕೂಲಿಕಾರರಿಗೆ ಉದ್ಯೋಗ ದೊರೆಯುವುದರ ಜೊತೆಗೆ ಗ್ರಾಮದಲ್ಲಿ ಶಾಶ್ವತ ಸಾರ್ವಜನಿಕ ಆಸ್ತಿಗಳ ನಿರ್ಮಾಣವಾಗಬೇಕು ಎಂದು ಸಿಇಒ ಅವರು ತಿಳಿಸಿದರು. ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕ ಮಂಜುನಾಥ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಐಇಸಿ ಸಂಯೋಜಕರು, ಜಿಎಫ್ಟಿ, ಕಾಯಕ ಬಂಧುಗಳು ಹಾಗೂ ಸಂಬಂಧಪಟ್ಟ ಸಿಬ್ಬಂದಿ ಹಾಜರಿದ್ದರು.1
- All About,Could you please Sir ji, Clear about your statement for "Concrete Road Aane ke Inkamath Hai" *ಭಾರತ ನಲ್ಲಿ ವೈರಲ್*1
- ಹಲಗೂರಿನಲ್ಲಿ ಶ್ರೀ ಪಟ್ಟದರಾಣಿ ದೇವಸ್ಥಾನದ ನಾಲ್ಕನೇ ವರ್ಷದ ವಾರ್ಷಿಕೋತ್ಸವ ಮಳವಳ್ಳಿ :ತಾಲ್ಲೂಕಿನ ಹಲಗೂರು ಗ್ರಾಮದ ಗಾಣಿಗರ ಬೀದಿಯಲ್ಲಿರುವ ಶ್ರೀ ಪಟ್ಟದರಾಣಿ ದೇವಸ್ಥಾನದ ನಾಲ್ಕನೇ ವರ್ಷದ ವಾರ್ಷಿಕೋತ್ಸವ ಸಮಾರಂಭವನ್ನು ಭಕ್ತಿ ಭಾವ ಪೂರಕವಾಗಿ ಆಚರಿಸಲಾಯಿತು. ಗುರುವಾರ ಬೆಳಿಗ್ಗೆ ಪಟ್ಟದ ರಾಣಿ ಅಮ್ಮನವರ ಮೂರ್ತಿಯನ್ನು ಶುಚಿಗೊಳಿಸಿ ,ನಂತರ ದುರ್ಗಾ ಹೋಮ ಮಹಾಗಣಪತಿ ಹೋಮ ನವಗ್ರಹ ಶಾಂತಿ ಹೋಮ ಪಂಚಾಮೃತ ಅಭಿಷೇಕ ನಡೆಸಿ, ನಂತರ ವಿವಿಧ ಪುಷ್ಪಗಳಿಂದ ದೇವರ ಮೂರ್ತಿಯನ್ನು ಅಲಂಕರಿಸಿ ವಿಶೇಷವಾಗಿ ಪೂಜಾ ಪುನಸ್ಕಾರಗಳನ್ನು ನಡೆಸಲಾಯಿತು. ಗ್ರಾಮ ದೇವತೆಯಾದ ಪಟ್ಟಲದಮ್ಮ, ಶ್ರೀ ಸಿದ್ದೇಶ್ವರ ಸ್ವಾಮಿ ಸತ್ತಿಗೆ ಹಾಗೂ ಪಟ್ಟದ ರಾಣಿ ದೇವರಿಗೆ ನಡುಕೇರಿ ವೀರಭದ್ರ ದೇವಸ್ಥಾನದ ಆವರಣದಲ್ಲಿ ಹೂ -ಹೊಂಬಾಳೆ ಮಾಡಿಕೊಂಡು ವಿಶೇಷವಾಗಿ ಅಲಂಕರಿಸಿ ಪೂಜಾ ಕುಣಿತದೊಡನೆ ಮೆರವಣಿಗೆ ಮುಖಾಂತರ ದೇವಸ್ಥಾನಕ್ಕೆ ದೇವರ ಮೂರ್ತಿಗಳನ್ನು ತರಲಾಯಿತು.ನಂತರ ಮಹಾಮಂಗಳಾರತಿ ನಡೆಸಿ ಬಂದ ಭಕ್ತಾದಿಗಳಿಗೆ ಅನ್ನ ಸಂತರ್ಪಣೆಯನ್ನು ನಡೆಸಲಾಯಿತು. ದೇವಸ್ಥಾನದ ಆವರಣದಲ್ಲಿ ರವಿ ಮಾತನಾಡಿ, ನಾವು ಪ್ರತಿವರ್ಷ ಅಮ್ಮನವರಿಗೆ ಪೂಜೆ ಪುನಸ್ಕಾರವನ್ನು ನಡೆಸಿಕೊಂಡು ಬರುತ್ತಿದ್ದು ,ಇಂದು ನಾಲ್ಕನೇ ವರ್ಷದ ಪ್ರಯುಕ್ತ ವಿಶೇಷವಾಗಿ ಪೂಜಾ ಕಾರ್ಯಕ್ರಮವನ್ನು ನಡೆಸಿ ಬಂದ ಭಕ್ತಾಧಿಗಳಿಗೆ ಅನ್ನ ಸಂತರ್ಪಣೆ ಮಾಡಿದ್ದೇವೆ. ಅಪಾರ ಭಕ್ತಾದಿಗಳು ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗಿದ್ದಾರೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಪಟ್ಟದ ರಾಣಿ ಅಮ್ಮನವರ ಸೇವಾ ಟ್ರಸ್ಟಿನ ಅಧ್ಯಕ್ಷರು ಮತ್ತು ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.1
- ಅಲುಗಾಡುತ್ತಿರುವ ರಾಷ್ಟ್ರೀಯ ಹೆದ್ದಾರಿ 948 ಸತ್ತಿಗಾಲ ಹೊಸ ಸೇತುವೆ ಸಾರ್ವಜನಿಕರಲ್ಲಿ ಆತಂಕ ಕೋಟಿಗಟ್ಟಲೆ ಯೋಜನೆ ಕಳಪೆ ಸಂಶಯ ಅಲಗಾಡುತ್ತಿದೆ ರಾಷ್ಟ್ರೀಯ ಹೆದ್ದಾರಿ 948 ಸತ್ತಿಗಾಲ ಹೊಸ ಸೇತುವೆ ಜನರಲ್ಲಿ ಆತಂಕ ಮಳವಳ್ಳಿಯಿಂದ ಕೊಳ್ಳೇಗಾಲಕ್ಕೆ ಹೋಗುವ ರಾಷ್ಟ್ರೀಯ ಹೆದ್ದಾರಿ 948 ರಸ್ತೆಗೆ ಸತ್ತಿಗಾಲ ಬಳಿ ನಿರ್ಮಿಸಿರುವ ಹೊಸ ಮೇಲ್ ಸೇತುವೆ ಅಲುಗಾಡುತ್ತಿರುವುದು ಸಾರ್ವಜನಿಕ ವಲಯದಲ್ಲಿ ಆತಂಕ ವ್ಯಕ್ತಪಡಿಸಿದೆ. ಈ ಬಗ್ಗೆ ಕಳೆದ ವಾರ ಸತಿಗಾಲ ಸೇತುವೆ ಬಳಿ ನಿಂತುಕೊಂಡು ಕಾವೇರಿ ನದಿಯ ನೀರು ಹರಿಯುವಿಕೆ ಹಾಗೂ ಸುತ್ತಮುತ್ತಲ ಸುಂದರ ವಾತಾವರಣವನ್ನು ನೋಡುತ್ತಿದ್ದ ಹಲವಾರು ಜನರು ಸತ್ತಿಗಾಲ ಹೊಸ ಸೇತುವೆಯ ಮೇಲೆ ನಿಂತಿದ್ದಾಗ ವಾಹನಗಳು ಹೋಗುವಾಗ ಬರುವಾಗ ಅದರಲ್ಲೂ ಅತಿ ಭಾರವಾದ ವಾಹನಗಳು ಸಂಚರಿಸುವಾಗ ಈ ಸೇತುವೆ ಅಲಗಾಡುತ್ತಿರುವ ರೋಮಾಂಚನ ಹಾಗೂ ಭಯದ ವಾತಾವರಣ ಸೃಷ್ಟಿಯಾಯಿತು ಇದು ಇತ್ತೀಚಿಗೆ ನಿರ್ಮಿಸಿರುವ ಸೇತುವೆಯಾಗಿದೆ ಹಳೆಯ ಸೇತುವೆ ಇದಕ್ಕಿಂತ ತುಂಬಾ ಉತ್ತಮ ವಿನ್ನಬಹುದಾಗಿದೆ. ಈ ಕಾಮಗಾರಿಗು ಮುನ್ನ ಹಳೆಯ ಸೇತುವೆಯ ಪುನರ್ ನಿರ್ಮಾಣ ಆಗಿತ್ತು ಅದಕ್ಕೆ ಮೂರು ಕೋಟಿಗೂ ಅಧಿಕ ಹಣವನ್ನು ಖರ್ಚು ಮಾಡಲಾಗಿತ್ತು 948 ನಂತರ ರಾಷ್ಟ್ರೀಯ ಹೆದ್ದಾರಿ ರಸ್ತೆ ಹೊಸದಾಗಿ ನಿರ್ಮಾಣ ಮಾಡುವ ಸಂದರ್ಭದಲ್ಲಿ ಇದಕ್ಕೆ ಹೊಸ ಮೇಲ್ ಸೇತುವೆ ನಿರ್ಮಾಣ ಮಾಡಲಾಗಿದೆ ಆದರೆ ಈ ಸೇತುವೆಯ ಕಾಮಗಾರಿ ಕಳಪೆ ಎನ್ನುವ ಆತಂಕ ಸಾರ್ವಜನಿಕ ವಲಯದಲ್ಲಿ ಹೆಚ್ಚಾಗಿದೆ ಏಕೆಂದರೆ ವಾಹನಗಳು ಸಂಚರಿಸುವಾಗ ಸೇತುವೆ ಭೂಕಂಪವಾದಾಗ ಯಾವ ರೀತಿ ಅಲುಗಾಡುತ್ತದೆ, ಶಬ್ದ ಅನುಭವ ಆಗುತ್ತದೋ ಆ ರೀತಿಯಲ್ಲಿ ಇಲ್ಲಿ ಶಬ್ದ ಬರುತ್ತದೆ ಇದು ಇದು ಕಳಪೆ ಕಾಮಗಾರಿಯೂ ಅಥವಾ ಆಧುನಿಕ ತಂತ್ರಜ್ಞಾನವು ಎಂಬ ಅನುಮಾನ ಮೂಡಿಸಿದೆ ಇನ್ನಾದರೂ ಸಂಬಂಧಪಟ್ಟ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಇದರ ಗುಣಮಟ್ಟ ಪರಿಶೀಲನೆ ನಡೆಸಿ ಕ್ರಮ ವಹಿಸುವ ಮೂಲಕ ಸಾರ್ವಜನಿಕ ಸಂಚಾರಕ್ಕೆ ಯಾವುದೇ ಆತಂಕ ಅಡ್ಡಿ ಅನಾಹುತ ಸಂಭವಿಸಿದಂತೆ ಎಚ್ಚರಿಕೆ ವಹಿಸಬೇಕೆಂದು ಸಾರ್ವಜನಿಕರು ಅಗ್ರಹಿಸಿದ್ದಾರೆ1
- ಬಿ.ಸಿ ನಾಗೇಶ್ ಪಕ್ಷಾತೀತವಾದ ಅಭಿವೃದ್ಧಿ ಪುರುಷ: ಮಸಾಲಾ ಜಯರಾಮ್ ಮಾಜಿ ಶಿಕ್ಷಣ ಸಚಿವ ದಿ. ಬಿ.ಸಿ ನಾಗೇಶ್ ಅವರಿಗೆ ನುಡಿ ನಮನ; ಎನ್ಇಪಿ ಜಾರಿ, 135 ಶಾಲಾ ಕೊಠಡಿ ನಿರ್ಮಾಣದ ಸ್ಮರಣೆ. ತುರುವೇಕೆರೆ, ಆ.26: ಶಿಕ್ಷಣ ಕ್ಷೇತ್ರದಲ್ಲಿ ಎನ್ಇಪಿ (ರಾಷ್ಟ್ರೀಯ ಶಿಕ್ಷಣ ನೀತಿ) ಶಿಕ್ಷಣ ಪದ್ಧತಿಯನ್ನು ಜಾರಿಗೆ ತಂದಂತಹ ಹೆಗ್ಗಳಿಕೆ ಮಾಜಿ ಶಿಕ್ಷಣ ಸಚಿವ ದಿವಂಗತ ಬಿ.ಸಿ ನಾಗೇಶ್ ಅವರಿಗೆ ಸಲ್ಲುತ್ತದೆ. ಪಕ್ಷಾತೀತವಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡಿದ ಅಜಾತಶತ್ರುವಾಗಿದ್ದರು ಎಂದು ಮಾಜಿ ಶಾಸಕ ಮಸಾಲಾ ಜಯರಾಮ್ ಅಭಿಪ್ರಾಯಪಟ್ಟರು. ಇತ್ತೀಚೆಗೆ ಅನಾರೋಗ್ಯದಿಂದ ನಿಧನರಾದ ಮಾಜಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರ ನುಡಿ ನಮನ ಕಾರ್ಯಕ್ರಮವನ್ನು ಮಸಾಲಾ ಜಯರಾಮ್ ಅವರ ತೋಟದ ಮನೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ಮಸಾಲಾ ಜಯರಾಮ್, ನಾಗೇಶಣ್ಣನ ನಿಧನದಿಂದ ತಮ್ಮ ಕ್ಷೇತ್ರಕ್ಕೆ ತುಂಬಲಾಗದ ನಷ್ಟವಾಗಿದೆ ಎಂದು ಶೋಕ ವ್ಯಕ್ತಪಡಿಸಿದರು.ಅವರ ಬಗ್ಗೆ ಹೇಳಲು ಒಂದು ದಿನವಾದರೂ ಸಾಲದು, ಅಂತಹ ಸಜ್ಜನ ರಾಜಕಾರಣಿ ನಾಗೇಶಣ್ಣ. ತಾವು ಶಾಸಕರಾಗಿದ್ದ ಸಂದರ್ಭದಲ್ಲಿ ಅವರ ಜೊತೆ ಕೆಲಸ ಮಾಡಿದ್ದು ತಮಗೆ ಹೆಮ್ಮೆಯ ವಿಷಯ ಎಂದು ಸ್ಮರಿಸಿದ ಜಯರಾಮ್, ನಾಗೇಶ್ ಅವರ ಅಭಿವೃದ್ಧಿಯ ಚಿಂತನೆ ಅಪಾರವಾದದ್ದು, ಅವರ ದೇಶಪ್ರೇಮ ಪ್ರಶ್ನಾತೀತವಾದದ್ದು ಎಂದು ಬಣ್ಣಿಸಿದರು. ಅವರು ಸ್ವದೇಶೀ ವಸ್ತುಗಳನ್ನೇ ಬಳಸುತ್ತಿದ್ದರು ಎಂದು ಸ್ಮರಿಸಿ. ಶಿಕ್ಷಣ ಸಚಿವರಾಗಿದ್ದಾಗ ತಮ್ಮ ಸಂಬಳದ ಹಣವನ್ನು ಸ್ವಂತಕ್ಕೆ ಬಳಸದೆ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ನೀಡಿದ್ದನ್ನು ತಾವು ಕಣ್ಣಾರೆ ಕಂಡಿರುವುದಾಗಿ ಜಯರಾಮ್ ಹೇಳಿದರು. ಅಂತಹ ಸಜ್ಜನರು ತಮ್ಮ ತಾಲ್ಲೂಕಿಗೆ ಯಾರೂ ಕೊಡದಂತಹ ಕೊಡುಗೆಯನ್ನು ನೀಡಿದ್ದಾರೆ ಎಂದ ಅವರು, ಕ್ಷೇತ್ರಕ್ಕೆ 135 ಶಾಲಾ ಕೊಠಡಿಗಳನ್ನು ನೀಡಿದ್ದನ್ನು ಸ್ಮರಿಸಿದರು. ಪಕ್ಷಾತೀತವಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡಿದ ಅಜಾತಶತ್ರುವಾಗಿದ್ದ ಅವರು ಉನ್ನತವಾದ ಕೆಲಸಗಳನ್ನು ಮಾಡಿ ಜನಮನ್ನಣೆ ಗಳಿಸಿದ್ದರು ಎಂದು ಹೇಳಿದರು.ಸಂಘ ಪರಿವಾರದಿಂದ ಬಂದು ಉನ್ನತ ಮಟ್ಟಕ್ಕೇರಿದ ನಾಗೇಶ್, ಸಂಘಪರಿವಾರ ಜಾತಿ ಭೇದ ನೋಡದೆ ವ್ಯಕ್ತಿಗಳನ್ನು ಉನ್ನತ ಮಟ್ಟಕ್ಕೆ ಬೆಳೆಸುತ್ತದೆ ಎಂಬುದಕ್ಕೆ ನಿದರ್ಶನವಾಗಿ ಜಾತಿ ಮೀರಿ ಬೆಳೆದ ವ್ಯಕ್ತಿ ಎಂದು ಜಯರಾಮ್ ಬಣ್ಣಿಸಿದರು. ಶಿಕ್ಷಣ ಕ್ಷೇತ್ರದಲ್ಲಿ ಎನ್ಇಪಿ ಜಾರಿಗೆ ತಂದಂತಹ ಹೆಗ್ಗಳಿಕೆ ಅವರಿಗೆ ಸಲ್ಲುತ್ತದೆ ಎಂದು ಪುನರುಚ್ಚರಿಸಿದ ಅವರು, ನಾಗೇಶ್ ಅವರ ನಿಧನದಿಂದ ತಮಗೆ ತುಂಬಾ ನೋವುಂಟಾಗಿದೆ ಎಂದೂ ಹೇಳಿದರು. ಭಗವಂತ ಅವರ ಕುಟುಂಬಕ್ಕೆ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ತಾಲ್ಲೂಕು ಬಿಜೆಪಿ ಮಂಡಲಾಧ್ಯಕ್ಷ ಜಿ.ವಿ ಪ್ರಕಾಶ್, ಜಿಲ್ಲಾಘಟಕದ ಶಿವಕುಮಾರಸ್ವಾಮಿ, ತಾಲ್ಲೂಕು ಉಸ್ತುವಾರಿ ಬಸವರಾಜ್, ಮಹಿಳಾಘಟಕದ ತಾಲ್ಲೂಕು ಅಧ್ಯಕ್ಷೆ ರಾಧಾಮಣಿ, ಅನಿತಾ ನಂಜುಂಡಯ್ಯ, ಸಂತೋಷ್, ಹರಿಕಾರನಹಳ್ಳಿ ಪ್ರಸಾದ್, ನವೀನ್ ಬಾಬು, ಚಿದಾನಂದ್, ರಾಕೇಂದು, ಯೋಗಾನಂದ್, ವಿ.ಬಿ ಸುರೇಶ್, ಕಾಳಂಜಿಹಳ್ಳಿ ಸೋಮಶೇಖರ್, ಸಂತೋಷ್ ಕಂಟ್ಲಿ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಇದ್ದರು.4
- ಚಿಕ್ಕನಾಯಕನಹಳ್ಳಿ ಪುರಸಭೆ ವ್ಯಾಪ್ತಿಯ ಜೋಗಿಹಳ್ಳಿಯಲ್ಲಿ ಕುಡಿಯುವ ನೀರಿಗಾಗಿ ಆಕ್ರೋಶ ಚಿಕ್ಕನಾಯಕನಹಳ್ಳಿ ಪುರಸಭೆ ವ್ಯಾಪ್ತಿಯ ಜೋಗಿಹಳ್ಳಿಯಲ್ಲಿ ಕುಡಿಯುವ ನೀರಿಗಾಗಿ ಆಕ್ರೋಶ --------------------- ಜೋಗಿಹಳ್ಳಿಯಲ್ಲಿ ಒಂದು ತಿಂಗಳಿಂದ ಕುಡಿಯುವ ನೀರು ಸರಬರಾಜು ಆಗಿಲ್ಲ! ಕುಡಿಯುವ ನೀರಿಗಾಗಿ ಸಾರ್ವಜನಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಒಂದು ತಿಂಗಳಿಂದ ನೀರು ಸರಬರಾಜು ಮಾಡದಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಸ್ಥಳೀಯರು, “ನಮಗೆ ನೀರು ಬಿಡದಿದ್ದರೆ ಪುರಸಭೆ ಕಚೇರಿಗೆ ಬಂದು ಪ್ರತಿಭಟನೆ ನಡೆಸುತ್ತೇವೆ” ಎಂದು ಎಚ್ಚರಿಕೆ ನೀಡಿದ್ದಾರೆ. ಸಾರ್ವಜನಿಕರ ಸಮಸ್ಯೆಯನ್ನು ಕೂಡಲೇ ಪರಿಹರಿಸಿ, ಸಮರ್ಪಕವಾಗಿ ಕುಡಿಯುವ ನೀರು ಪೂರೈಸುವಂತೆ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.1
- ಚಿಕ್ಕನಾಯಕನಹಳ್ಳಿಯಲ್ಲಿ ನಡೆದ ಕೆಂಪೇಗೌಡರ ಜಯಂತಿ ಹಾಗೂ ಒಕ್ಕಲಿಗ ಸಂಘ ಉದ್ಘಾಟನಾ ಕಾರ್ಯಕ್ರಮ ತುಮಕೂರು ಜಿಲ್ಲಾ ಒಕ್ಕಲಿಗರ ಸಂಘದಲ್ಲಿ ನಡೆಯುತ್ತಿರುವ ವಿವಿಧ ಪ್ರಗತಿಪರ ಕಾರ್ಯಕ್ರಮಗಳ ಕುರಿತಂತೆ ಚಿಕ್ಕನಾಯಕನಹಳ್ಳಿಯಲ್ಲಿ ನಡೆದ ಕೆಂಪೇಗೌಡರ ಜಯಂತಿ ಹಾಗೂ ಒಕ್ಕಲಿಗ ಸಂಘ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಹಾಗೂ ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಎಸ್ ಆರ್ ಶ್ರೀನಿವಾಸ್ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದರು ಇದೆ ಸಂದರ್ಭದಲ್ಲಿ ಶಾಸಕ ಸಿ ಬಿ ಸುರೇಶ್ ಬಾಬು ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.1