logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಬರ್ಗೂರು ಬಳಿ ಅರಣ್ಯ ಪ್ರದೇಶದಲ್ಲಿ ಕಂದಕ್ಕೆ ಬಿದ್ದ ಕಾರು, ಪ್ರಯಾಣಿಕರು ಪಾರು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಗಡಿ ಭಾಗದ್ದಲಿರುವ ಬರ್ಗೂರು ಅರಣ್ಯ ಪ್ರದೇಶದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂದಕ್ಕೆ ಬಿದ್ದಿದೆ. ಈ ವೇಳೆ ಸ್ಥಳೀಯರು ಕಾರಿನಲ್ಲಿದ್ದ ಪ್ರಯಾಣಿಕರಿಗೆ ಹಗ್ಗ ಕೊಟ್ಟು ರಕ್ಷಣೆ ಮಾಡಿದರು. ತಮಿಳುನಾಡು ಕಡೆಯಿಂದ ಕರ್ನಾಟಕ ಬರುತ್ತಿದ್ದ ಕಾರು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂದಕ್ಕೆ‌ ಉರುಳಿ ಬಿದ್ದಿದೆ.

46 min ago
user_ಚಾಮರಾಜನಗರ ಸುದ್ದಿ ಮನೆ
ಚಾಮರಾಜನಗರ ಸುದ್ದಿ ಮನೆ
ಪತ್ರಕರ್ತ ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
46 min ago

ಬರ್ಗೂರು ಬಳಿ ಅರಣ್ಯ ಪ್ರದೇಶದಲ್ಲಿ ಕಂದಕ್ಕೆ ಬಿದ್ದ ಕಾರು, ಪ್ರಯಾಣಿಕರು ಪಾರು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಗಡಿ ಭಾಗದ್ದಲಿರುವ ಬರ್ಗೂರು ಅರಣ್ಯ ಪ್ರದೇಶದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂದಕ್ಕೆ ಬಿದ್ದಿದೆ. ಈ ವೇಳೆ ಸ್ಥಳೀಯರು ಕಾರಿನಲ್ಲಿದ್ದ ಪ್ರಯಾಣಿಕರಿಗೆ ಹಗ್ಗ ಕೊಟ್ಟು ರಕ್ಷಣೆ ಮಾಡಿದರು. ತಮಿಳುನಾಡು ಕಡೆಯಿಂದ ಕರ್ನಾಟಕ ಬರುತ್ತಿದ್ದ ಕಾರು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂದಕ್ಕೆ‌ ಉರುಳಿ ಬಿದ್ದಿದೆ.

More news from ಕರ್ನಾಟಕ and nearby areas
  • ವಂದೇ ಮಾತರಂ ಗೀತೆ ವಿವಾದ: ನಗರದಲ್ಲಿ ಬಿಜೆಪಿ ಕಾರ್ಯಕರ್ತರು ವಂದೇ ಮಾತರಂ ಗೀತೆ ಹಾಡಿ ಡಿಸಿಗೆ ದೂರು ಸಲ್ಲಿಕೆ ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡಬೇಕು. ಗೀತೆಯನ್ನು ಅರ್ಧಕ್ಕೆ ಮೊಟಕುಗೊಳಿಸುವುದಕ್ಕೆ ವಿರೋಧವಿದೆ ಎಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ಮುಖಂಡರು ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದರು. ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಬಿಜೆಪಿ ಕಾರ್ಯಕರ್ತರು ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡಿ ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಲು ಮುಂದಾದರು. ಈ ವೇಳೆ ಪೊಲೀಸರು ಅವರನ್ನು ತಡೆದರು. ಡಿಸಿ ಕಚೇರಿಗೆ ತೆರಳಲು ಪೊಲೀಸರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಪೊಲೀಸರ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡಬೇಕು ಎಂಬ ಆಗ್ರಹದೊಂದಿಗೆ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಲು ಮುಂದಾದರು.
    1
    ವಂದೇ ಮಾತರಂ ಗೀತೆ ವಿವಾದ: ನಗರದಲ್ಲಿ ಬಿಜೆಪಿ ಕಾರ್ಯಕರ್ತರು ವಂದೇ ಮಾತರಂ ಗೀತೆ ಹಾಡಿ ಡಿಸಿಗೆ ದೂರು ಸಲ್ಲಿಕೆ
ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡಬೇಕು. ಗೀತೆಯನ್ನು ಅರ್ಧಕ್ಕೆ ಮೊಟಕುಗೊಳಿಸುವುದಕ್ಕೆ ವಿರೋಧವಿದೆ ಎಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ಮುಖಂಡರು ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದರು.
ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಬಿಜೆಪಿ ಕಾರ್ಯಕರ್ತರು ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡಿ ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಲು ಮುಂದಾದರು. ಈ ವೇಳೆ ಪೊಲೀಸರು ಅವರನ್ನು ತಡೆದರು.
ಡಿಸಿ ಕಚೇರಿಗೆ ತೆರಳಲು ಪೊಲೀಸರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಪೊಲೀಸರ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡಬೇಕು ಎಂಬ ಆಗ್ರಹದೊಂದಿಗೆ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಲು ಮುಂದಾದರು.
    user_ಚಾಮರಾಜನಗರ ಸುದ್ದಿ ಮನೆ
    ಚಾಮರಾಜನಗರ ಸುದ್ದಿ ಮನೆ
    ಪತ್ರಕರ್ತ ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    38 min ago
  • ನರೇಂದ್ರಮೋದಿ ಹುಟ್ಟುಹಬ್ಬ:ಬಿಜೆಪಿಯಿಂದ ಚಾಮರಾಜೇಶ್ವರಸ್ವಾಮಿಗೆ ವಿಶೇಷಪೂಜೆ ವರದಿ: ಹೊಮ್ಮನಂಜುಂಡನಾಯಕ ನರೇಂದ್ರಮೋದಿ ಹುಟ್ಟುಹಬ್ಬ:ಬಿಜೆಪಿಯಿಂದ ಚಾಮರಾಜೇಶ್ವರಸ್ವಾಮಿಗೆ ವಿಶೇಷಪೂಜೆ ದೇಶದ ಅಭಿವೃದ್ಧಿಗೆ ನರೇಂದ್ರಮೋದಿ ಕೊಡುಗೆ ಅಪಾರ :ಸಿ.ಎಸ್.ನಿರಂಜನ್‌ಕುಮಾರ್ ಚಾಮರಾಜನಗರ: ಪ್ರಧಾನಮಂತ್ರಿ ನರೇಂದ್ರಮೋದಿಯವರ 76ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಬಿಜೆಪಿ ನಗರಮಂಡಲ ಹಾಗೂ ಗ್ರಾಮಾಂತರ ಮಂಡಲ ವತಿಯಿಂದ ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದಲ್ಲಿ ವಿಶೇಷಪೂಜೆ ಪೂಜೆ ಸಲ್ಲಿಸಿ, ಮೋದಿಯವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಲಾಯಿತು. ನಂತರ ದೇವಸ್ಥಾನ ಮುಂಭಾಗದಲ್ಲಿ ನರೇಂದ್ರಮೋದಿ ಪರ ಜೈಕಾರ ಕೂಗಿ ಆಶೀರ್ವಾದದ ದೀಪ ಬೆಳಗಿಸಲಾಯಿತು. ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನ್‌ಕುಮಾರ್ ಮಾತನಾಡಿ, ನಮ್ಮ ನೆಚ್ಚಿನ ಪ್ರಧಾನಮಂತ್ರಿಗಳಾದ ನರೇಂದ್ರಮೋ ದಿಯವರ ಹುಟ್ಟುಹಬ್ಬದ ಪ್ರಯುಕ್ತ ನಗರದ ಚಾಮರಾಜೇಶ್ವರ ದೇವಸ್ಥಾನದಲ್ಲಿ ವಿಶೇಷಪೂಜೆ ಸಲ್ಲಿಸಿ, ದೀಪಹಚ್ಚಿ ನರೇಂದ್ರಮೋದಿ ಅವರಿಗೆ ದಿ ರ್ಘಾಯುಷ್ಯ, ಉತ್ತಮ ಆರೋಗ್ಯ ಕರುಣಿಸಿ, ಅವರಿಗೆ ಹೆಚ್ಚಿನ ಶಕ್ತಿಯನ್ನು ಕೊಟ್ಟು, ಅವರ ನವಭಾರತ ನಿರ್ಮಾಣ ಕನಸು ನನಸು ಮಾಡುವಂತಾಗಲಿ ಎಂದು ಪ್ರಾರ್ಥಿಸಲಾಯಿತು ಎಂದರು. ನರೇಂದ್ರಮೋದಿ ಅವರ ನೇತೃತ್ವ ಸರ್ಕಾರದ ಪ್ರಮುಖ ಸಾಧನೆಗಳು ಮತ್ತು ಜನಪರ ಯೋಜನೆಗಳು ದೇಶದ ಆರ್ಥಿಕ, ಸಾಮಾಜಿಕ, ಮೂಲಸೌಕರ್ಯಗಳಲ್ಲಿ ಬದಲಾವಣೆಗಳನ್ನು ತಂದಿದ್ದು, ವಿಶ್ವಮಟ್ಟದಲ್ಲಿ ಗಮನ ಸೆಳೆದಿದ್ದು, ಭಾರತವನ್ನು ವಿದೇಶಿಗರು ತಿರುಗಿ ನೋಡುವಂತೆ ಮಾಡಿದ್ದಾರೆ ಎಂದರು. ಪ್ರಧಾನಿ ಅವರು ನರೇಂದ್ರಮೋದಿ ಮುಖ್ಯಮಂತ್ರಿಯಾಗಿ, ಪ್ರಧಾನಮಂತ್ರಿಯಾಗಿ ಸಾರ್ವಜನಿಕ ಸೇವೆಯಲ್ಲಿ 25 ವರ್ಷಗಳನ್ನು ಪೂರೈಸುತ್ತಿದ್ದು, ಅವರ ಕಾರ್ಯಸಾಧನೆಯನ್ನು ಇಡೀ ವಿಶ್ವವೇ ಮೆಚ್ಚುವಂತದ್ದು, ದೇಶದ ಅಭಿವೃದ್ಧಿಗೆ ಎಲ್ಲ ಆಯಾಮಗಳಲ್ಲೂ ದೊಡ್ಡ ಕೊಡುಗೆ ನೀಡಿರುವುದು ಜಗತ್ ಜಾಹೀರಾತು ಆಗಿದೆ. ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 17ರವರಗೆ ಒಂದು ತಿಂಗಳಕಾಲ ಸೇವಾ ಸಂಕಲ್ಪ ಅಭಿಯಾನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ, ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ, ಎಸ್‌ಟಿ ಮೋರ್ಚಾದ ರಾಜ್ಯ ಉಪಾಧಕ್ಷ ಜಯಸುಂದರ್, ಮುಖಂಡ ಡಾ. ಎ.ಆರ್.ಬಾಬು, ಕಾಡಾ ಮಾಜಿ ಅಧ್ಯಕ್ಷ ನಿಜಗುಣರಾಜು, ಓಬಿಸಿ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ನೂರೊಂದುಶೆಟ್ಟಿ, ಚೂಡಾ ಮಾಜಿ ಅಧ್ಯಕ್ಷ ಶಾಂತಮೂರ್ತಿ ಕುಲಗಾಣ ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷರಾದ ನಾರಾಯಣಪ್ರಸಾದ್, ಆರ್.ಸುಂದರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಳಾದ ಪಿ.ವೃಷಬೇಂದ್ರಪ್ಪ, ಹೊನ್ನೂರು ಮಹದೇವಸ್ವಾಮಿ, ಜಿಲ್ಲಾ ಕಾರ್ಯದರ್ಶಿ ಸುಂದರ್‌ರಾಜ್, ನಗರಮಂಡಲ ಅಧ್ಯಕ್ಷ ಶಿವರಾಜ್, ಪ್ರಧಾನ ಕಾರ್ಯದರ್ಶಿ ಕೂಸಣ್ಣ, ಭಾಸ್ಕರ್, ಗ್ರಾಮಾಂತರ ಮಂಡಲ ಅಧ್ಯಕ್ಷ ಕಾಡಹಳ್ಳಿ ಕುಮಾರ್, ಪ್ರಧಾನ ಕಾರ್ಯದರ್ಶಿ ಪುರುಷೋ ತ್ತಮ, ಎಸ್‌ ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಚಂದ್ರಶೇಖರ್, ಉಪಾಧ್ಯಕ್ಷ ಬುಲೆಟ್ ಚಂದ್ರು, ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ಕಮಲಮ್ಮ, ಪ್ರಧಾನ ಕಾರ್ಯದರ್ಶಿ ಶೈಲಾ, ಮುಖಂಡರಾದ ನಟರಾಜು, ಮೂಡ್ಲುಪುರ ನಂದೀಶ್, ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಆನಂದ್‌ಭಗೀರಥ, ನಗರ ಮಂಡಲ ಕಾರ್ಯದರ್ಶಿ ಬಂಗಾರನಾಯಕ, ನಗರಸಭಾ ಮಾಜಿ ಸದಸ್ಯ ಶಿವಣ್ಣ, ಮುಖಂಡರಾದ ಎಂ.ಎಸ್.ಚಂದ್ರಶೇಖ‌ರ್, ಸುಂದರಪ್ಪ, ಮಹೇಶ್‌ಪಟೇಲ್‌, ಕೃಷ್ಣ ಇತರರು ಹಾಜರಿದ್ದರು
    4
    ನರೇಂದ್ರಮೋದಿ ಹುಟ್ಟುಹಬ್ಬ:ಬಿಜೆಪಿಯಿಂದ ಚಾಮರಾಜೇಶ್ವರಸ್ವಾಮಿಗೆ ವಿಶೇಷಪೂಜೆ
ವರದಿ: ಹೊಮ್ಮನಂಜುಂಡನಾಯಕ
ನರೇಂದ್ರಮೋದಿ ಹುಟ್ಟುಹಬ್ಬ:ಬಿಜೆಪಿಯಿಂದ ಚಾಮರಾಜೇಶ್ವರಸ್ವಾಮಿಗೆ ವಿಶೇಷಪೂಜೆ
ದೇಶದ ಅಭಿವೃದ್ಧಿಗೆ ನರೇಂದ್ರಮೋದಿ ಕೊಡುಗೆ ಅಪಾರ :ಸಿ.ಎಸ್.ನಿರಂಜನ್‌ಕುಮಾರ್
ಚಾಮರಾಜನಗರ: ಪ್ರಧಾನಮಂತ್ರಿ ನರೇಂದ್ರಮೋದಿಯವರ 76ನೇ
ವರ್ಷದ ಹುಟ್ಟುಹಬ್ಬದ ಅಂಗವಾಗಿ ಬಿಜೆಪಿ ನಗರಮಂಡಲ ಹಾಗೂ ಗ್ರಾಮಾಂತರ ಮಂಡಲ ವತಿಯಿಂದ ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದಲ್ಲಿ ವಿಶೇಷಪೂಜೆ ಪೂಜೆ ಸಲ್ಲಿಸಿ, ಮೋದಿಯವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಲಾಯಿತು.
ನಂತರ ದೇವಸ್ಥಾನ ಮುಂಭಾಗದಲ್ಲಿ ನರೇಂದ್ರಮೋದಿ ಪರ ಜೈಕಾರ ಕೂಗಿ ಆಶೀರ್ವಾದದ ದೀಪ ಬೆಳಗಿಸಲಾಯಿತು.
ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನ್‌ಕುಮಾರ್ ಮಾತನಾಡಿ, ನಮ್ಮ ನೆಚ್ಚಿನ ಪ್ರಧಾನಮಂತ್ರಿಗಳಾದ ನರೇಂದ್ರಮೋ
ದಿಯವರ ಹುಟ್ಟುಹಬ್ಬದ ಪ್ರಯುಕ್ತ ನಗರದ ಚಾಮರಾಜೇಶ್ವರ ದೇವಸ್ಥಾನದಲ್ಲಿ ವಿಶೇಷಪೂಜೆ ಸಲ್ಲಿಸಿ, ದೀಪಹಚ್ಚಿ ನರೇಂದ್ರಮೋದಿ ಅವರಿಗೆ ದಿ ರ್ಘಾಯುಷ್ಯ, ಉತ್ತಮ ಆರೋಗ್ಯ ಕರುಣಿಸಿ, ಅವರಿಗೆ ಹೆಚ್ಚಿನ ಶಕ್ತಿಯನ್ನು ಕೊಟ್ಟು, ಅವರ ನವಭಾರತ ನಿರ್ಮಾಣ ಕನಸು ನನಸು ಮಾಡುವಂತಾಗಲಿ ಎಂದು ಪ್ರಾರ್ಥಿಸಲಾಯಿತು ಎಂದರು.
ನರೇಂದ್ರಮೋದಿ ಅವರ ನೇತೃತ್ವ ಸರ್ಕಾರದ ಪ್ರಮುಖ ಸಾಧನೆಗಳು ಮತ್ತು ಜನಪರ ಯೋಜನೆಗಳು ದೇಶದ ಆರ್ಥಿಕ, ಸಾಮಾಜಿಕ, ಮೂಲಸೌಕರ್ಯಗಳಲ್ಲಿ ಬದಲಾವಣೆಗಳನ್ನು ತಂದಿದ್ದು, ವಿಶ್ವಮಟ್ಟದಲ್ಲಿ ಗಮನ ಸೆಳೆದಿದ್ದು, ಭಾರತವನ್ನು ವಿದೇಶಿಗರು ತಿರುಗಿ ನೋಡುವಂತೆ ಮಾಡಿದ್ದಾರೆ ಎಂದರು.
ಪ್ರಧಾನಿ ಅವರು ನರೇಂದ್ರಮೋದಿ ಮುಖ್ಯಮಂತ್ರಿಯಾಗಿ, ಪ್ರಧಾನಮಂತ್ರಿಯಾಗಿ ಸಾರ್ವಜನಿಕ ಸೇವೆಯಲ್ಲಿ 25 ವರ್ಷಗಳನ್ನು ಪೂರೈಸುತ್ತಿದ್ದು, ಅವರ ಕಾರ್ಯಸಾಧನೆಯನ್ನು ಇಡೀ ವಿಶ್ವವೇ ಮೆಚ್ಚುವಂತದ್ದು, ದೇಶದ ಅಭಿವೃದ್ಧಿಗೆ ಎಲ್ಲ ಆಯಾಮಗಳಲ್ಲೂ ದೊಡ್ಡ ಕೊಡುಗೆ ನೀಡಿರುವುದು ಜಗತ್ ಜಾಹೀರಾತು ಆಗಿದೆ. ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 17ರವರಗೆ ಒಂದು ತಿಂಗಳಕಾಲ ಸೇವಾ ಸಂಕಲ್ಪ ಅಭಿಯಾನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ
ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ, ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ, ಎಸ್‌ಟಿ ಮೋರ್ಚಾದ ರಾಜ್ಯ ಉಪಾಧಕ್ಷ ಜಯಸುಂದರ್, ಮುಖಂಡ ಡಾ. ಎ.ಆರ್.ಬಾಬು, ಕಾಡಾ ಮಾಜಿ ಅಧ್ಯಕ್ಷ ನಿಜಗುಣರಾಜು, ಓಬಿಸಿ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ನೂರೊಂದುಶೆಟ್ಟಿ, ಚೂಡಾ ಮಾಜಿ ಅಧ್ಯಕ್ಷ ಶಾಂತಮೂರ್ತಿ ಕುಲಗಾಣ ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷರಾದ ನಾರಾಯಣಪ್ರಸಾದ್, ಆರ್.ಸುಂದರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಳಾದ ಪಿ.ವೃಷಬೇಂದ್ರಪ್ಪ, ಹೊನ್ನೂರು ಮಹದೇವಸ್ವಾಮಿ,
ಜಿಲ್ಲಾ ಕಾರ್ಯದರ್ಶಿ ಸುಂದರ್‌ರಾಜ್, ನಗರಮಂಡಲ ಅಧ್ಯಕ್ಷ ಶಿವರಾಜ್, ಪ್ರಧಾನ ಕಾರ್ಯದರ್ಶಿ ಕೂಸಣ್ಣ, ಭಾಸ್ಕರ್, ಗ್ರಾಮಾಂತರ ಮಂಡಲ ಅಧ್ಯಕ್ಷ ಕಾಡಹಳ್ಳಿ ಕುಮಾರ್, ಪ್ರಧಾನ ಕಾರ್ಯದರ್ಶಿ ಪುರುಷೋ
ತ್ತಮ, ಎಸ್‌ ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಚಂದ್ರಶೇಖರ್, ಉಪಾಧ್ಯಕ್ಷ ಬುಲೆಟ್ ಚಂದ್ರು, ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ಕಮಲಮ್ಮ, ಪ್ರಧಾನ ಕಾರ್ಯದರ್ಶಿ ಶೈಲಾ, ಮುಖಂಡರಾದ ನಟರಾಜು, ಮೂಡ್ಲುಪುರ ನಂದೀಶ್, ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಆನಂದ್‌ಭಗೀರಥ, ನಗರ ಮಂಡಲ ಕಾರ್ಯದರ್ಶಿ ಬಂಗಾರನಾಯಕ, ನಗರಸಭಾ ಮಾಜಿ ಸದಸ್ಯ ಶಿವಣ್ಣ, ಮುಖಂಡರಾದ ಎಂ.ಎಸ್.ಚಂದ್ರಶೇಖ‌ರ್, ಸುಂದರಪ್ಪ, ಮಹೇಶ್‌ಪಟೇಲ್‌, ಕೃಷ್ಣ ಇತರರು ಹಾಜರಿದ್ದರು
    user_Nanjunda Nayak
    Nanjunda Nayak
    Photographer ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    1 hr ago
  • ಇತ್ತೀಚಿನ ಮಳೆಗೆ ಶಾಲೆಯ ಮೇಲ್ಚಾವಣಿ ಕುಸಿತ ಆತಂಕದಲ್ಲಿ ಶಾಲಾ ಮಕ್ಕಳು ಚಾಮರಾಜನಗರ:ಉನ್ನತಿಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಸಣಾಪುರ ಇಲ್ಲಿನ ಶಾಲಾ ಕೊಠಡಿ ಹಳೆಯದಾಗಿದ್ದು ಇತ್ತೀಚಿಗೆ ಸುರಿಯುತ್ತಿರುವ ಬಾರಿಮಳೆಗೆ ಕೊಠಡಿಯ ಮೇಲ್ಚಾವಣಿ ಕುಸಿಯುತ್ತಿದ್ದು ಶಾಲಾ ಮಕ್ಕಳು ಮತ್ತು ಶಿಕ್ಷಕರು ಆತಂಕದಲ್ಲಿ ಶಾಲೆಯನ್ನು ಮುಂದುವರಿಸಬೇಕಾಗಿದೆ ಕಳೆದ ಬಾರಿಯು ಕೂಡ ಸಂಬಂಧಪಟ್ಟ ಇಲಾಖೆಗೆ ತಮ್ಮ ಸಮಸ್ಯೆಯನ್ನು ಹೇಳಿದರು ಕೂಡ ಇಲಾಖೆ ನಿರ್ಲಕ್ಷಯನ್ನು ತೂರುತ್ತಿದೆ. ಶಾಲೆಯಲ್ಲಿ ಮಕ್ಕಳ ಸಂಖ್ಯೆ ಹೆಚ್ಚಾಗಿದ್ದು ಶಿಕ್ಷಕರ ಕೊರತೆಯನ್ನು ನಿವಾರಿಸಲು ಇಲಾಖೆಯು ಮೀನಾಮೇಶ ಎನಿಸುತ್ತಿದೆ. ಕಳೆದ ಬಾರಿಯಿಂದಲೂ ಕೂಡ ಶಿಕ್ಷಕರ ಕೊರತೆ ಇದ್ದ ಮಕ್ಕಳ ಸಂಖ್ಯಾ ಶೇಕಡಾ ವಾರು ಶಿಕ್ಷಕರನ್ನು ಆಯೋಜನೆ ಮಾಡುವುದರಲ್ಲಿ ಸಂಬಂಧ ಪಟ್ಟ ಅಧಿಕಾರಿಯು ನಿರ್ಲಕ್ಷವನ್ನು ತೂರುತಿದ್ದಾರೆ ಎಂದು sdmc ಕಮಿಟಿಯ ಸದಸ್ಯರಾದ ಶಿವಕುಮಾರ. ಎನ್ ರವರು ದೂರಿನಲ್ಲಿ ತಿಳಿಸಿರುತ್ತಾರೆ.
    3
    ಇತ್ತೀಚಿನ ಮಳೆಗೆ ಶಾಲೆಯ  ಮೇಲ್ಚಾವಣಿ ಕುಸಿತ ಆತಂಕದಲ್ಲಿ ಶಾಲಾ ಮಕ್ಕಳು
ಚಾಮರಾಜನಗರ:ಉನ್ನತಿಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಸಣಾಪುರ ಇಲ್ಲಿನ ಶಾಲಾ ಕೊಠಡಿ ಹಳೆಯದಾಗಿದ್ದು ಇತ್ತೀಚಿಗೆ ಸುರಿಯುತ್ತಿರುವ ಬಾರಿಮಳೆಗೆ  ಕೊಠಡಿಯ ಮೇಲ್ಚಾವಣಿ ಕುಸಿಯುತ್ತಿದ್ದು ಶಾಲಾ ಮಕ್ಕಳು ಮತ್ತು ಶಿಕ್ಷಕರು ಆತಂಕದಲ್ಲಿ ಶಾಲೆಯನ್ನು ಮುಂದುವರಿಸಬೇಕಾಗಿದೆ ಕಳೆದ ಬಾರಿಯು ಕೂಡ ಸಂಬಂಧಪಟ್ಟ ಇಲಾಖೆಗೆ ತಮ್ಮ ಸಮಸ್ಯೆಯನ್ನು ಹೇಳಿದರು ಕೂಡ ಇಲಾಖೆ ನಿರ್ಲಕ್ಷಯನ್ನು ತೂರುತ್ತಿದೆ.
ಶಾಲೆಯಲ್ಲಿ ಮಕ್ಕಳ ಸಂಖ್ಯೆ ಹೆಚ್ಚಾಗಿದ್ದು ಶಿಕ್ಷಕರ ಕೊರತೆಯನ್ನು ನಿವಾರಿಸಲು ಇಲಾಖೆಯು ಮೀನಾಮೇಶ ಎನಿಸುತ್ತಿದೆ.
ಕಳೆದ ಬಾರಿಯಿಂದಲೂ ಕೂಡ ಶಿಕ್ಷಕರ ಕೊರತೆ ಇದ್ದ ಮಕ್ಕಳ ಸಂಖ್ಯಾ ಶೇಕಡಾ ವಾರು ಶಿಕ್ಷಕರನ್ನು ಆಯೋಜನೆ ಮಾಡುವುದರಲ್ಲಿ ಸಂಬಂಧ ಪಟ್ಟ ಅಧಿಕಾರಿಯು ನಿರ್ಲಕ್ಷವನ್ನು ತೂರುತಿದ್ದಾರೆ ಎಂದು sdmc ಕಮಿಟಿಯ ಸದಸ್ಯರಾದ ಶಿವಕುಮಾರ. ಎನ್ ರವರು ದೂರಿನಲ್ಲಿ ತಿಳಿಸಿರುತ್ತಾರೆ.
    user_ಶಿವಕುಮಾರ ಎನ್ ಚಾಟೀಪುರ
    ಶಿವಕುಮಾರ ಎನ್ ಚಾಟೀಪುರ
    Security Guard Chamarajanagar, Chamarajanagara•
    6 hrs ago
  • ಯಳಂದೂರು ಪಟ್ಟಣದಲ್ಲಿ ವಿಶ್ವಕರ್ಮ ಜಯಂತಿ ಕಾರ್ಯಕ್ರಮ ಸರಳ ಆಚರಣೆ . ಯಳಂದೂರು ನ್ಯೂಸ್ ವರದಿ. ಎಸ್. ಪುಟ್ಟಸ್ವಾಮಿಹೊನ್ನೂರು ಯಳಂದೂರು ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಯಳಂದೂರು ತಾಲೂಕು ಆಡಳಿತ, ರಾಷ್ಟ್ರೀಯ ಹಬ್ಬಗಳ ಆಚನ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ ಶ್ರೀ ವಿಶ್ವಕರ್ಮ ಜಯಂತಿ ಸಮಾರಂಭದ ಕಾರ್ಯಕ್ರಮದಲ್ಲಿ ಗಣ್ಯರು ವಿಶ್ವಕರ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು  ನಂತರ ಮುಖ್ಯ ಭಾಷಣಕಾರರಾಗಿ ಭಾಗವಹಿಸಿದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕರಾದ ಎಸ್ ಪುಷ್ಪಲತಾ ರವರು ಮಾತನಾಡಿ ವಿಶ್ವಕರ್ಮ ಜಯಂತಿ ಒಂದು ಜನಾಂಗಕ್ಕೆ ಸೀಮಿತವಾಗಿರುವುದು ದುರಂತ ಕಲೆ, ವಾಸ್ತುಶಿಲ್ಪ ಕ್ಷೇತ್ರಕ್ಕೆ ವಿಶ್ವಕರ್ಮ ಸಮುದಾಯದ ಕೊಡುಗೆ ಅಪಾರವಾದುದ್ದು ವಿಶ್ವಕರ್ಮ ಸಮುದಾಯವು ಕಲೆ ಮತ್ತು ವಾಸ್ತುಶಿಲ್ಪ ಕ್ಷೇತ್ರಕ್ಕೆ ಅವಿಸ್ಮರಣೀಯ ಕೊಡುಗೆ ನೀಡಿದೆ ಪ್ರತಿನಿತ್ಯ ಜನರು ಬಳಸುವ ಕರಕುಶಲ ಸಾಮಗ್ರಿಗಳು, ಲೋಹ, ಕಬ್ಬಿಣ, ದೇವರ ವಿಗ್ರಹ, ಚಿತ್ರಪಟಗಳು, ಗೃಹಬಳಕೆ ವಸ್ತುಗಳು, ಸ್ಮಾರಕಗಳ ನಿರ್ಮಾಣದ ಕಾರ್ಯದಲ್ಲಿ ವಿಶ್ವಕರ್ಮರ ಕಲೆಯ ಜೀವಂತಿಕೆಯ ಅಸ್ತಿತ್ವವನ್ನು ಇಂದಿಗೂ ಉಳಿಸಿರುವುದೇ ಸಾಕ್ಷಿ. ಲೋಕವನ್ನು ವೈಭವೀಕರಿಸುವ ಸಾಂಸ್ಕೃತಿಕ ಪರಂಪರೆ, ಕಲೆ ಮತ್ತು ವಾಸ್ತಶಿಲ್ಪ ಕ್ಷೇತ್ರಕ್ಕೆ ವಿಶ್ವಕರ್ಮರ ಕೊಡುಗೆ ಅಪಾರವಾಗಿದೆ’ ‘ವಿಶ್ವಕರ್ಮ ಸಮುದಾಯಕ್ಕೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ತಲುಪಿಸಲು ಪೂರಕವಾದ ವ್ಯವಸ್ಥೆ ಕಲ್ಪಿಸಿದಲ್ಲಿ ಸಮುದಾಯವು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯ’ ಎಂದು ಅದರಿಂದ ಪ್ರತಿಯೊಬ್ಬ ನಾಗರಿಕರು ವಿಶ್ವಕರ್ಮರ ಆದರ್ಶ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ದೇಶದ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ತಿಳಿಸಿದರು. ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಜಿಲ್ಲಾಧ್ಯಕ್ಷರಾದ ಹೆಚ್. ವಿ . ಚಂದ್ರು, ತಾಲೂಕು ಗ್ಯಾರೆಂಟಿ ಯೋಜನೆ ಅಧ್ಯಕ್ಷರಾದ ಪ್ರಭು ಪ್ರಸಾದ್, ತಹಸಿಲ್ದಾರ್ ಎಸ್. ಎಲ್ ನಯನ ಸಮಾರಂಭವನ್ನು ಉದ್ದೇಶಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ವಿಶ್ವಕರ್ಮ ಸಮಾಜದ ತಾಲೂಕ ಅಧ್ಯಕ್ಷ ನಾಗರಾಜು, ಪಟ್ಟಣ ಪಂಚಾಯಿತಿ ಪ್ರಭಾರ ಮುಖ್ಯ ಅಧಿಕಾರಿ ಮಹದೇವ ನಾಯಕ, ಕೃಷಿ ಇಲಾಖೆ ಸಹಾಯಕ ನಿರ್ದೇಶಕರಾದ ಅಮೃತೇಶ್, ಶಿಕ್ಷಣ ಇಲಾಖೆ ಬಿ ಆರ್ ಪಿ ರೇಚಣ್ಣ, ಶಿವಣ್ಣಚಾರಿ ತಾಲೂಕಿನ ವಿಶ್ವಕರ್ಮ ಸಮಾಜದ ಮುಖಂಡರು, ಯುವಕರು, ವಿವಿಧ ಇಲಾಖೆ ಅಧಿಕಾರಿಗಳು ಸಾರ್ವಜನಿಕರು ಭಾಗವಹಿಸಿದ್ದರು.
    1
    ಯಳಂದೂರು ಪಟ್ಟಣದಲ್ಲಿ 
ವಿಶ್ವಕರ್ಮ ಜಯಂತಿ ಕಾರ್ಯಕ್ರಮ ಸರಳ ಆಚರಣೆ
.
ಯಳಂದೂರು ನ್ಯೂಸ್ 
ವರದಿ. ಎಸ್. ಪುಟ್ಟಸ್ವಾಮಿಹೊನ್ನೂರು 
ಯಳಂದೂರು ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಯಳಂದೂರು ತಾಲೂಕು ಆಡಳಿತ, ರಾಷ್ಟ್ರೀಯ ಹಬ್ಬಗಳ ಆಚನ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ ಶ್ರೀ ವಿಶ್ವಕರ್ಮ ಜಯಂತಿ ಸಮಾರಂಭದ
ಕಾರ್ಯಕ್ರಮದಲ್ಲಿ ಗಣ್ಯರು ವಿಶ್ವಕರ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು 
ನಂತರ ಮುಖ್ಯ ಭಾಷಣಕಾರರಾಗಿ ಭಾಗವಹಿಸಿದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕರಾದ ಎಸ್ ಪುಷ್ಪಲತಾ ರವರು ಮಾತನಾಡಿ ವಿಶ್ವಕರ್ಮ ಜಯಂತಿ ಒಂದು ಜನಾಂಗಕ್ಕೆ ಸೀಮಿತವಾಗಿರುವುದು ದುರಂತ  ಕಲೆ, ವಾಸ್ತುಶಿಲ್ಪ ಕ್ಷೇತ್ರಕ್ಕೆ ವಿಶ್ವಕರ್ಮ ಸಮುದಾಯದ ಕೊಡುಗೆ ಅಪಾರವಾದುದ್ದು  ವಿಶ್ವಕರ್ಮ ಸಮುದಾಯವು ಕಲೆ ಮತ್ತು ವಾಸ್ತುಶಿಲ್ಪ ಕ್ಷೇತ್ರಕ್ಕೆ ಅವಿಸ್ಮರಣೀಯ ಕೊಡುಗೆ ನೀಡಿದೆ  ಪ್ರತಿನಿತ್ಯ ಜನರು ಬಳಸುವ ಕರಕುಶಲ ಸಾಮಗ್ರಿಗಳು, ಲೋಹ, ಕಬ್ಬಿಣ, ದೇವರ ವಿಗ್ರಹ, ಚಿತ್ರಪಟಗಳು, ಗೃಹಬಳಕೆ ವಸ್ತುಗಳು, ಸ್ಮಾರಕಗಳ ನಿರ್ಮಾಣದ ಕಾರ್ಯದಲ್ಲಿ ವಿಶ್ವಕರ್ಮರ ಕಲೆಯ ಜೀವಂತಿಕೆಯ ಅಸ್ತಿತ್ವವನ್ನು ಇಂದಿಗೂ ಉಳಿಸಿರುವುದೇ ಸಾಕ್ಷಿ. ಲೋಕವನ್ನು ವೈಭವೀಕರಿಸುವ ಸಾಂಸ್ಕೃತಿಕ ಪರಂಪರೆ, ಕಲೆ ಮತ್ತು ವಾಸ್ತಶಿಲ್ಪ ಕ್ಷೇತ್ರಕ್ಕೆ ವಿಶ್ವಕರ್ಮರ ಕೊಡುಗೆ ಅಪಾರವಾಗಿದೆ’ 
‘ವಿಶ್ವಕರ್ಮ ಸಮುದಾಯಕ್ಕೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ತಲುಪಿಸಲು ಪೂರಕವಾದ ವ್ಯವಸ್ಥೆ ಕಲ್ಪಿಸಿದಲ್ಲಿ ಸಮುದಾಯವು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯ’ ಎಂದು ಅದರಿಂದ ಪ್ರತಿಯೊಬ್ಬ ನಾಗರಿಕರು ವಿಶ್ವಕರ್ಮರ ಆದರ್ಶ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ದೇಶದ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ತಿಳಿಸಿದರು.
ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಜಿಲ್ಲಾಧ್ಯಕ್ಷರಾದ ಹೆಚ್. ವಿ . ಚಂದ್ರು, ತಾಲೂಕು ಗ್ಯಾರೆಂಟಿ ಯೋಜನೆ ಅಧ್ಯಕ್ಷರಾದ ಪ್ರಭು ಪ್ರಸಾದ್, ತಹಸಿಲ್ದಾರ್ ಎಸ್. ಎಲ್ ನಯನ ಸಮಾರಂಭವನ್ನು ಉದ್ದೇಶಿ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ  ವಿಶ್ವಕರ್ಮ ಸಮಾಜದ ತಾಲೂಕ ಅಧ್ಯಕ್ಷ  ನಾಗರಾಜು, ಪಟ್ಟಣ ಪಂಚಾಯಿತಿ ಪ್ರಭಾರ ಮುಖ್ಯ ಅಧಿಕಾರಿ ಮಹದೇವ ನಾಯಕ, ಕೃಷಿ ಇಲಾಖೆ ಸಹಾಯಕ ನಿರ್ದೇಶಕರಾದ ಅಮೃತೇಶ್, ಶಿಕ್ಷಣ ಇಲಾಖೆ ಬಿ ಆರ್ ಪಿ ರೇಚಣ್ಣ,  ಶಿವಣ್ಣಚಾರಿ ತಾಲೂಕಿನ ವಿಶ್ವಕರ್ಮ ಸಮಾಜದ ಮುಖಂಡರು, ಯುವಕರು, ವಿವಿಧ ಇಲಾಖೆ ಅಧಿಕಾರಿಗಳು ಸಾರ್ವಜನಿಕರು ಭಾಗವಹಿಸಿದ್ದರು.
    user_S.Puttaswamyhonnur
    S.Puttaswamyhonnur
    Press reporter ಯಳಂದೂರು, ಚಾಮರಾಜನಗರ, ಕರ್ನಾಟಕ•
    1 hr ago
  • ಜೆಸ್ಕಾಂ ಕಚೇರಿ ಮುಂದೆ ಕೃಷಿಕಂಸೆಟ್ಗಳಿಗೆ ಸಮರ್ಪಕ ವಿದ್ಯುತ್ ನೀಡುವಂತೆ ಒತ್ತಾಯಿಸಿ ರೈತರ ಪ್ರತಿಭಟನೆ ಟಿ. ನರಸೀಪುರ ಅಸಮರ್ಪಕ ವಿದ್ಯುತ್ ಪೂರೈಕೆ: ರೈತರು ಸಂಕಷ್ಟದಲ್ಲಿ. ಟಿ. ನರಸೀಪುರ: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕೃಷಿ ಪಂಪ್‌ಸೆಟ್‌ಗಳಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆಯಾಗದೆ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ವಿದ್ಯುತ್ ಪೂರೈಕೆಯಲ್ಲಿ ಪದೇಪದೇ ವ್ಯತ್ಯಯ ಉಂಟಾಗುತ್ತಿರುವುದರಿಂದ ನೀರಾವರಿ ವ್ಯವಸ್ಥೆಗೆ ತೊಂದರೆಯಾಗಿದ್ದು, ಹೊಲಗಳಲ್ಲಿ ಬೆಳೆದಿರುವ ಬೆಳೆಗಳು ನೀರಿನ ಕೊರತೆಯಿಂದ ಒಣಗುವ ಆತಂಕ ಎದುರಾಗಿದೆ. ಕೃಷಿ ಪಂಪ್‌ಸೆಟ್‌ಗಳಿಗೆ ನಿಗದಿತ ಸಮಯದಲ್ಲಿ ಸಮರ್ಪಕ ವೋಲ್ಟೇಜ್‌ನೊಂದಿಗೆ ವಿದ್ಯುತ್ ಪೂರೈಕೆ ಮಾಡದಿರುವುದರಿಂದ ಮೋಟಾರ್‌ಗಳನ್ನು ಚಾಲನೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ. ಈಗಾಗಲೇ ಬೆಳೆಗಳಿಗೆ ಸಾಕಷ್ಟು ಖರ್ಚು ಮಾಡಿರುವ ರೈತರಿಗೆ ವಿದ್ಯುತ್ ಸಮಸ್ಯೆ ಮತ್ತಷ್ಟು ಆರ್ಥಿಕ ಹೊರೆ ತಂದಿದೆ. ವಿದ್ಯುತ್ ಸಮಸ್ಯೆಯಿಂದ ಬೆಳೆ ಹಾನಿಯಾದರೆ ರೈತರ ಪರಿಸ್ಥಿತಿ ಮತ್ತಷ್ಟು ದುಸ್ತರವಾಗಲಿದೆ. ಕೃಷಿ ಪಂಪ್‌ಸೆಟ್‌ಗಳಿಗೆ ನಿಗದಿತ ಸಮಯದಲ್ಲಿ ನಿರಂತರ ಹಾಗೂ ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕು. ವಿದ್ಯುತ್ ಲೈನ್‌ಗಳು, ಟ್ರಾನ್ಸ್‌ಫಾರ್ಮರ್‌ಗಳು ಹಾಗೂ ಇತರೆ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣವೇ ಸರಿಪಡಿಸಿ ರೈತರ ಬೆಳೆಗಳನ್ನು ರಕ್ಷಿಸಲು ಕ್ರಮ ಕೈಗೊಳ್ಳಬೇಕು ಎಂದು ರೈತರು ಒತ್ತಾಯಿಸಿದ್ದಾರೆ. ಸಂಬಂಧಪಟ್ಟ ವಿದ್ಯುತ್ ಇಲಾಖೆ ಅಧಿಕಾರಿಗಳು ತುರ್ತಾಗಿ ಸಮಸ್ಯೆ ಪರಿಹರಿಸಿ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂಬುದು ರೈತರ ಆಗ್ರಹವಾಗಿದೆ. ರೈತರ ಬೆಳೆ ಉಳಿಸಲು ವಿದ್ಯುತ್ ಪೂರೈಕೆ ಸಮರ್ಪಕವಾಗಲಿಯಂದು ರೈತರ ಒತ್ತಾಯ . ಈ ಪ್ರತಿಭಟನೆಯಲ್ಲಿ ಕಿರಗುಸೂರು ಶಂಕರ್ ಕೆಜಿ ಗುರುಸ್ವಾಮಿ ಕುರುಬುರ್ ಗೌರಿಶಂಕರ್ ವಾಚ್ ಕುಮಾರ್ ಆದಿ ಬೆಟ್ಟಳ್ಳಿ ನಂಜುಂಡಸ್ವಾಮಿ ಅಪ್ಪಣ್ಣ ಕುರುಬೂರು ಸಿದ್ದೇಶ್, ಬಿಪಿ ಪರಶಿವಮೂರ್ತಿ, ಕರುವಟಿ ಉಮೇಶ್ ಕುರುಬೂರ ಪ್ರದೀಪ್ ಸೋಮಶೇಖರ್ ಬನ್ನಳ್ಳಿ ಹುಂಡಿ ರಾಜೇಂದ್ರ ನಿಲ್ಸೋಗೆ ಉಮೇಶ್ ಪ್ರತಾಪ್, ಕುಮಾರ್ ಕೆ ಎಂ, ವಾಟಾಳ್ ಪುರ ಸತೀಶ್ ಕುಮಾರ್ ಹೊಸಪುರ ನಾಗರಾಜು ಮಾದೇಶ್ ಮಾದೇವಮೂರ್ತಿ ಬಸವರಾಜು ಎಸ್ ಕೆಬ್ಬೆ ಹುಂಡಿ, ಮಾದೇವಸ್ವಾಮಿ ಮಾವ್ನಹಳ್ಳಿ, ತರಕಾರಿ ನಿಂಗರಾಜು ಬನ್ನಳ್ಳಿ ಶಾಂತರಾಜು ಆದಿ ಬೆಟ್ಟಳ್ಳಿ ಮಹೇಶ ಕನ್ನಳ್ಳಿ ಮೊಳೆ ಮಣಿಕಂಠ ಲೋಕೇಶ್ ರವೀಂದ್ರ ಮಾದೇಶ್ ನಿಲ್ಸೋಗೆ ನಾಗರಾಜು ಚಿನ್ನಸ್ವಾಮಿ ಕುರುಬೂರು ಶಿವಪ್ರಸಾದ್ ವೀರೇಶ್ ಎಲ್ ಐ ಸಿ ಪ್ರದೀಪ್ ಎಬಿ ಮಂಜುನಾಥ್ ನವೀನ ತೊಟ್ಟುವಾಡಿ ಇನ್ನು ಮುಂತಾದ ರೈತರು ಭಾಗವಹಿಸಿದ್ದರು
    1
    ಜೆಸ್ಕಾಂ ಕಚೇರಿ ಮುಂದೆ ಕೃಷಿಕಂಸೆಟ್ಗಳಿಗೆ ಸಮರ್ಪಕ ವಿದ್ಯುತ್ ನೀಡುವಂತೆ ಒತ್ತಾಯಿಸಿ ರೈತರ ಪ್ರತಿಭಟನೆ 
ಟಿ. ನರಸೀಪುರ ಅಸಮರ್ಪಕ ವಿದ್ಯುತ್ ಪೂರೈಕೆ: ರೈತರು ಸಂಕಷ್ಟದಲ್ಲಿ.
ಟಿ. ನರಸೀಪುರ: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕೃಷಿ ಪಂಪ್‌ಸೆಟ್‌ಗಳಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆಯಾಗದೆ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ವಿದ್ಯುತ್ ಪೂರೈಕೆಯಲ್ಲಿ ಪದೇಪದೇ ವ್ಯತ್ಯಯ ಉಂಟಾಗುತ್ತಿರುವುದರಿಂದ ನೀರಾವರಿ ವ್ಯವಸ್ಥೆಗೆ ತೊಂದರೆಯಾಗಿದ್ದು, ಹೊಲಗಳಲ್ಲಿ ಬೆಳೆದಿರುವ ಬೆಳೆಗಳು ನೀರಿನ ಕೊರತೆಯಿಂದ ಒಣಗುವ ಆತಂಕ ಎದುರಾಗಿದೆ.
ಕೃಷಿ ಪಂಪ್‌ಸೆಟ್‌ಗಳಿಗೆ ನಿಗದಿತ ಸಮಯದಲ್ಲಿ ಸಮರ್ಪಕ ವೋಲ್ಟೇಜ್‌ನೊಂದಿಗೆ ವಿದ್ಯುತ್ ಪೂರೈಕೆ ಮಾಡದಿರುವುದರಿಂದ ಮೋಟಾರ್‌ಗಳನ್ನು ಚಾಲನೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ.
ಈಗಾಗಲೇ ಬೆಳೆಗಳಿಗೆ ಸಾಕಷ್ಟು ಖರ್ಚು ಮಾಡಿರುವ ರೈತರಿಗೆ ವಿದ್ಯುತ್ ಸಮಸ್ಯೆ ಮತ್ತಷ್ಟು ಆರ್ಥಿಕ ಹೊರೆ ತಂದಿದೆ. ವಿದ್ಯುತ್ ಸಮಸ್ಯೆಯಿಂದ ಬೆಳೆ ಹಾನಿಯಾದರೆ ರೈತರ ಪರಿಸ್ಥಿತಿ ಮತ್ತಷ್ಟು ದುಸ್ತರವಾಗಲಿದೆ.
ಕೃಷಿ ಪಂಪ್‌ಸೆಟ್‌ಗಳಿಗೆ ನಿಗದಿತ ಸಮಯದಲ್ಲಿ ನಿರಂತರ ಹಾಗೂ ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕು. ವಿದ್ಯುತ್ ಲೈನ್‌ಗಳು, ಟ್ರಾನ್ಸ್‌ಫಾರ್ಮರ್‌ಗಳು ಹಾಗೂ ಇತರೆ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣವೇ ಸರಿಪಡಿಸಿ ರೈತರ ಬೆಳೆಗಳನ್ನು ರಕ್ಷಿಸಲು ಕ್ರಮ ಕೈಗೊಳ್ಳಬೇಕು ಎಂದು ರೈತರು ಒತ್ತಾಯಿಸಿದ್ದಾರೆ.
ಸಂಬಂಧಪಟ್ಟ ವಿದ್ಯುತ್ ಇಲಾಖೆ ಅಧಿಕಾರಿಗಳು ತುರ್ತಾಗಿ ಸಮಸ್ಯೆ ಪರಿಹರಿಸಿ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂಬುದು ರೈತರ ಆಗ್ರಹವಾಗಿದೆ.
ರೈತರ ಬೆಳೆ ಉಳಿಸಲು ವಿದ್ಯುತ್ ಪೂರೈಕೆ ಸಮರ್ಪಕವಾಗಲಿಯಂದು ರೈತರ ಒತ್ತಾಯ
. ಈ ಪ್ರತಿಭಟನೆಯಲ್ಲಿ ಕಿರಗುಸೂರು  ಶಂಕರ್ ಕೆಜಿ ಗುರುಸ್ವಾಮಿ ಕುರುಬುರ್ ಗೌರಿಶಂಕರ್ ವಾಚ್ ಕುಮಾರ್ ಆದಿ ಬೆಟ್ಟಳ್ಳಿ ನಂಜುಂಡಸ್ವಾಮಿ ಅಪ್ಪಣ್ಣ ಕುರುಬೂರು ಸಿದ್ದೇಶ್,
ಬಿಪಿ ಪರಶಿವಮೂರ್ತಿ, ಕರುವಟಿ ಉಮೇಶ್ ಕುರುಬೂರ ಪ್ರದೀಪ್ 
ಸೋಮಶೇಖರ್ 
ಬನ್ನಳ್ಳಿ ಹುಂಡಿ ರಾಜೇಂದ್ರ 
ನಿಲ್ಸೋಗೆ ಉಮೇಶ್ 
ಪ್ರತಾಪ್, ಕುಮಾರ್ ಕೆ ಎಂ,
ವಾಟಾಳ್ ಪುರ ಸತೀಶ್ ಕುಮಾರ್ 
ಹೊಸಪುರ ನಾಗರಾಜು ಮಾದೇಶ್ ಮಾದೇವಮೂರ್ತಿ 
ಬಸವರಾಜು ಎಸ್ ಕೆಬ್ಬೆ ಹುಂಡಿ, ಮಾದೇವಸ್ವಾಮಿ ಮಾವ್ನಹಳ್ಳಿ,
ತರಕಾರಿ ನಿಂಗರಾಜು ಬನ್ನಳ್ಳಿ ಶಾಂತರಾಜು ಆದಿ ಬೆಟ್ಟಳ್ಳಿ ಮಹೇಶ ಕನ್ನಳ್ಳಿ ಮೊಳೆ ಮಣಿಕಂಠ ಲೋಕೇಶ್ ರವೀಂದ್ರ ಮಾದೇಶ್ ನಿಲ್ಸೋಗೆ ನಾಗರಾಜು ಚಿನ್ನಸ್ವಾಮಿ ಕುರುಬೂರು ಶಿವಪ್ರಸಾದ್ ವೀರೇಶ್ ಎಲ್ ಐ ಸಿ ಪ್ರದೀಪ್ ಎಬಿ ಮಂಜುನಾಥ್ ನವೀನ ತೊಟ್ಟುವಾಡಿ ಇನ್ನು ಮುಂತಾದ ರೈತರು ಭಾಗವಹಿಸಿದ್ದರು
    user_ಪ್ರದೀಪ್ ಎಂ ಕುರುಬೂರು
    ಪ್ರದೀಪ್ ಎಂ ಕುರುಬೂರು
    ತಿರುಮಕೂಡಲು - ನರಸಿಪುರ, ಮೈಸೂರು, ಕರ್ನಾಟಕ•
    9 hrs ago
  • ​ರಾಮಾಪುರ ಸರ್ಕಾರಿ ಶಾಲೆ ಅಸ್ತವ್ಯಸ್ತ: ಮೂಲಭೂತ ಸೌಕರ್ಯಗಳಿಲ್ಲದೆ ನರಕಯಾತನೆ ಅನುಭವಿಸುತ್ತಿರುವ ಮಕ್ಕಳು; ಶಾಲಾ ಮುಂಭಾಗ ಉಗ್ರ ಹೋರಾಟದ ಎಚ್ಚರಿಕೆ ​ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ರಾಮಾಪುರ ಸ್ಥಳೀಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂಲಭೂತ ಸೌಕರ್ಯಗಳ ತೀವ್ರ ಅಭಾವ ಉಂಟಾಗಿದ್ದು, ಶಾಲಾ ವಿದ್ಯಾರ್ಥಿನಿಯರು ಹಾಗೂ ಶಿಕ್ಷಕರು ದಿನನಿತ್ಯ ನರಕಸದೃಶ ವಾತಾವರಣದಲ್ಲಿ ಪರದಾಡುವಂತಾಗಿದೆ. ಶಿಕ್ಷಣ ಇಲಾಖೆಯ ನಿರ್ಲಕ್ಷ್ಯದ ವಿರುದ್ಧ ಗ್ರಾಮಸ್ಥರು ಹಾಗೂ ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ​ಪ್ರಮುಖ ಸಮಸ್ಯೆಗಳು ಮತ್ತು ಮುಖ್ಯಾಂಶಗಳು ​ಜಲಾವೃತಗೊಂಡ ಶಾಲೆ: ನೆನ್ನೆ ತಡರಾತ್ರಿ ಸುರಿದ ಭಾರಿ ಮಳೆಯ ಆರ್ಭಟಕ್ಕೆ ಶಾಲೆಯ ಆವರಣ ಹಾಗೂ ತರಗತಿ ಕೊಠಡಿಗಳ ಸುತ್ತಮುತ್ತ ಅಪಾರ ಪ್ರಮಾಣದ ನೀರು ನಿಂತುಕೊಂಡಿದ್ದು, ಇಡೀ ಶಾಲೆ ಜಲಾವೃತಗೊಂಡಿದೆ. ಮೈದಾನವೆಲ್ಲಾ ಕೆಸರು ಗದ್ದೆಯಂತಾಗಿದ್ದು ಮಕ್ಕಳಿಗೆ ಆಟವಾಡಲು ಜಾಗವಿಲ್ಲದಂತಾಗಿದೆ. ​ಕಳಪೆ ಬಿಸಿಯೂಟ: ಶಾಲೆಯಲ್ಲಿ ದಿನನಿತ್ಯ ಸಿದ್ಧಪಡಿಸುವ ಅಡುಗೆಯಲ್ಲಿ ಹುಳ-ಹುಪ್ಪಟೆಗಳು ಹಾಗೂ ಕಸ-ಕಡ್ಡಿಗಳು ಸಿಗುತ್ತಿದ್ದು, ಮಕ್ಕಳ ಆರೋಗ್ಯದ ಜೊತೆ ಚೆಲ್ಲಾಟವಾಡಲಾಗುತ್ತಿದೆ. ​ಶೌಚಾಲಯದ ಸಮಸ್ಯೆ: ಬಾಲಕಿಯರು ಹಾಗೂ ಶಿಕ್ಷಕಿಯರಿಗೆ ಸೂಕ್ತ ಶೌಚಾಲಯ ವ್ಯವಸ್ಥೆ ಇಲ್ಲ. ಇದ್ದ ಶೌಚಾಲಯದಲ್ಲೂ ನೀರಿನ ಸೌಲಭ್ಯವಿಲ್ಲದೆ ಹಾಗೂ ನೈರ್ಮಲ್ಯದ ಕೊರತೆಯಿಂದ ದುರ್ನಾತ ಬೀರುತ್ತಿದೆ. ​ಅಪಾಯಕಾರಿ ಕೊಠಡಿಗಳು: ತರಗತಿ ಕೊಠಡಿಗಳ ಗೋಡೆಗಳು ಬಿರುಕು ಬಿಟ್ಟಿದ್ದು, ಯಾವುದೇ ಕ್ಷಣದಲ್ಲಾದರೂ ಅನಾಹುತ ಸಂಭವಿಸುವ ಭೀತಿ ಎದುರಾಗಿದೆ. ​ಪೋಷಕರ ಆಕ್ರೋಶ ಹಾಗೂ ಎಚ್ಚರಿಕೆ ​"ನಮ್ಮ ಮಕ್ಕಳನ್ನು ನಂಬಿಕೆಯಿಂದ ಸರ್ಕಾರಿ ಶಾಲೆಗೆ ಕಳುಹಿಸುತ್ತೇವೆ. ಆದರೆ ಇಲ್ಲಿ ಕುಡಿಯುವ ನೀರು, ನೈರ್ಮಲ್ಯ ಹಾಗೂ ಕನಿಷ್ಠ ಸೌಲಭ್ಯಗಳೂ ಇಲ್ಲದಿರುವುದು ಬೇಸರದ ಸಂಗತಿ. ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ" ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. ​ತಕ್ಷಣವೇ ಶಿಕ್ಷಣ ಇಲಾಖೆಯ ಉನ್ನತಾಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ತುರ್ತಾಗಿ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡಬೇಕು. ಇಲ್ಲವಾದಲ್ಲಿ ಮುಂಬರುವ ದಿನಗಳಲ್ಲಿ ಶಾಲೆಗೆ ಬೀಗ ಜಡಿದು ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.
    4
    ​ರಾಮಾಪುರ ಸರ್ಕಾರಿ ಶಾಲೆ ಅಸ್ತವ್ಯಸ್ತ: ಮೂಲಭೂತ ಸೌಕರ್ಯಗಳಿಲ್ಲದೆ ನರಕಯಾತನೆ ಅನುಭವಿಸುತ್ತಿರುವ ಮಕ್ಕಳು; ಶಾಲಾ ಮುಂಭಾಗ ಉಗ್ರ ಹೋರಾಟದ ಎಚ್ಚರಿಕೆ


​ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ರಾಮಾಪುರ ಸ್ಥಳೀಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂಲಭೂತ ಸೌಕರ್ಯಗಳ ತೀವ್ರ ಅಭಾವ ಉಂಟಾಗಿದ್ದು, ಶಾಲಾ ವಿದ್ಯಾರ್ಥಿನಿಯರು ಹಾಗೂ ಶಿಕ್ಷಕರು ದಿನನಿತ್ಯ ನರಕಸದೃಶ ವಾತಾವರಣದಲ್ಲಿ ಪರದಾಡುವಂತಾಗಿದೆ. ಶಿಕ್ಷಣ ಇಲಾಖೆಯ ನಿರ್ಲಕ್ಷ್ಯದ ವಿರುದ್ಧ ಗ್ರಾಮಸ್ಥರು ಹಾಗೂ ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
​ಪ್ರಮುಖ ಸಮಸ್ಯೆಗಳು ಮತ್ತು ಮುಖ್ಯಾಂಶಗಳು
​ಜಲಾವೃತಗೊಂಡ ಶಾಲೆ: ನೆನ್ನೆ ತಡರಾತ್ರಿ ಸುರಿದ ಭಾರಿ ಮಳೆಯ ಆರ್ಭಟಕ್ಕೆ ಶಾಲೆಯ ಆವರಣ ಹಾಗೂ ತರಗತಿ ಕೊಠಡಿಗಳ ಸುತ್ತಮುತ್ತ ಅಪಾರ ಪ್ರಮಾಣದ ನೀರು ನಿಂತುಕೊಂಡಿದ್ದು, ಇಡೀ ಶಾಲೆ ಜಲಾವೃತಗೊಂಡಿದೆ. ಮೈದಾನವೆಲ್ಲಾ ಕೆಸರು ಗದ್ದೆಯಂತಾಗಿದ್ದು ಮಕ್ಕಳಿಗೆ ಆಟವಾಡಲು ಜಾಗವಿಲ್ಲದಂತಾಗಿದೆ.
​ಕಳಪೆ ಬಿಸಿಯೂಟ: ಶಾಲೆಯಲ್ಲಿ ದಿನನಿತ್ಯ ಸಿದ್ಧಪಡಿಸುವ ಅಡುಗೆಯಲ್ಲಿ ಹುಳ-ಹುಪ್ಪಟೆಗಳು ಹಾಗೂ ಕಸ-ಕಡ್ಡಿಗಳು ಸಿಗುತ್ತಿದ್ದು, ಮಕ್ಕಳ ಆರೋಗ್ಯದ ಜೊತೆ ಚೆಲ್ಲಾಟವಾಡಲಾಗುತ್ತಿದೆ.
​ಶೌಚಾಲಯದ ಸಮಸ್ಯೆ: ಬಾಲಕಿಯರು ಹಾಗೂ ಶಿಕ್ಷಕಿಯರಿಗೆ ಸೂಕ್ತ ಶೌಚಾಲಯ ವ್ಯವಸ್ಥೆ ಇಲ್ಲ. ಇದ್ದ ಶೌಚಾಲಯದಲ್ಲೂ ನೀರಿನ ಸೌಲಭ್ಯವಿಲ್ಲದೆ ಹಾಗೂ ನೈರ್ಮಲ್ಯದ ಕೊರತೆಯಿಂದ ದುರ್ನಾತ ಬೀರುತ್ತಿದೆ.
​ಅಪಾಯಕಾರಿ ಕೊಠಡಿಗಳು: ತರಗತಿ ಕೊಠಡಿಗಳ ಗೋಡೆಗಳು ಬಿರುಕು ಬಿಟ್ಟಿದ್ದು, ಯಾವುದೇ ಕ್ಷಣದಲ್ಲಾದರೂ ಅನಾಹುತ ಸಂಭವಿಸುವ ಭೀತಿ ಎದುರಾಗಿದೆ.
​ಪೋಷಕರ ಆಕ್ರೋಶ ಹಾಗೂ ಎಚ್ಚರಿಕೆ
​"ನಮ್ಮ ಮಕ್ಕಳನ್ನು ನಂಬಿಕೆಯಿಂದ ಸರ್ಕಾರಿ ಶಾಲೆಗೆ ಕಳುಹಿಸುತ್ತೇವೆ. ಆದರೆ ಇಲ್ಲಿ ಕುಡಿಯುವ ನೀರು, ನೈರ್ಮಲ್ಯ ಹಾಗೂ ಕನಿಷ್ಠ ಸೌಲಭ್ಯಗಳೂ ಇಲ್ಲದಿರುವುದು ಬೇಸರದ ಸಂಗತಿ. ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ" ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.
​ತಕ್ಷಣವೇ ಶಿಕ್ಷಣ ಇಲಾಖೆಯ ಉನ್ನತಾಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ತುರ್ತಾಗಿ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡಬೇಕು. ಇಲ್ಲವಾದಲ್ಲಿ ಮುಂಬರುವ ದಿನಗಳಲ್ಲಿ ಶಾಲೆಗೆ ಬೀಗ ಜಡಿದು ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.
    user_ಉಸ್ಮಾನ್ ಖಾನ್
    ಉಸ್ಮಾನ್ ಖಾನ್
    Local News Reporter ಹನೂರು, ಚಾಮರಾಜನಗರ, ಕರ್ನಾಟಕ•
    3 hrs ago
  • ಹನೂರು: ತಾಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಸಮೀಪದ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ ಕೋಡಿ ಮೂಲಕ ನೀರು ಹರಿಯುತ್ತಿದ್ದು, ಸುತ್ತಮುತ್ತಲಿನ ರೈತರಲ್ಲಿ ಸಂತಸ ಮೂಡಿಸಿದೆ. ಬರದ ಸಂದರ್ಭದಲ್ಲಿ ಶಾಸಕ ಎಂ.ಆರ್. ಮಂಜುನಾಥ್ ಅವರ ಪ್ರಯತ್ನದಿಂದ ಕಾವೇರಿ ನದಿ ಮೂಲದಿಂದ ಕೆರೆಗೆ ನೀರು ಹರಿಸುವ ವ್ಯವಸ್ಥೆ ಕಲ್ಪಿಸಲಾಗಿತ್ತು. ಇದೀಗ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಕೆರೆ ಭರ್ತಿಯಾಗಿ ನೀರು ಹೊರಹರಿಯುತ್ತಿದೆ. ಸುಮಾರು 40 ಎಂಸಿಎಫ್‌ಟಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಕೆರೆಯ 980 ಎಕರೆ ಅಚ್ಚುಕಟ್ಟು ಪ್ರದೇಶಕ್ಕೆ ನೀರಿನ ಲಭ್ಯತೆ ಹೆಚ್ಚುವ ನಿರೀಕ್ಷೆಯಿದೆ. ಕೆರೆ ಭರ್ತಿಯಾಗಿರುವುದರಿಂದ ಸುತ್ತಮುತ್ತಲಿನ ಚಿಂಚಳ್ಳಿ, ಮಣಗಳ್ಳಿ, ಬಂಡಳ್ಳಿ ಸೇರಿದಂತೆ ಹಲವು ಗ್ರಾಮಗಳ ತೋಡುಬಾವಿ ಹಾಗೂ ಕೊಳವೆಬಾವಿಗಳಲ್ಲಿ ಅಂತರ್ಜಲ ಮಟ್ಟ ಸುಧಾರಿಸುವ ಆಶಾಭಾವನೆ ರೈತರಲ್ಲಿದೆ. ಕೆರೆ ಹಾಗೂ ಕಾಲುವೆಗಳ ನಿರಂತರ ನಿರ್ವಹಣೆಗೆ ಸಂಬಂಧಿಸಿದ ಇಲಾಖೆಗಳು ಗಮನಹರಿಸಿ, ಸಂಗ್ರಹವಾಗಿರುವ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯ ರೈತರು ಮನವಿ ಮಾಡಿದ್ದಾರೆ. ಹನೂರು: ತಾಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಸಮೀಪದ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ ಕೋಡಿ ಮೂಲಕ ನೀರು ಹರಿಯುತ್ತಿದ್ದು, ಸುತ್ತಮುತ್ತಲಿನ ರೈತರಲ್ಲಿ ಸಂತಸ ಮೂಡಿಸಿದೆ. ಬರದ ಸಂದರ್ಭದಲ್ಲಿ ಶಾಸಕ ಎಂ.ಆರ್. ಮಂಜುನಾಥ್ ಅವರ ಪ್ರಯತ್ನದಿಂದ ಕಾವೇರಿ ನದಿ ಮೂಲದಿಂದ ಕೆರೆಗೆ ನೀರು ಹರಿಸುವ ವ್ಯವಸ್ಥೆ ಕಲ್ಪಿಸಲಾಗಿತ್ತು. ಇದೀಗ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಕೆರೆ ಭರ್ತಿಯಾಗಿ ನೀರು ಹೊರಹರಿಯುತ್ತಿದೆ. ಸುಮಾರು 40 ಎಂಸಿಎಫ್‌ಟಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಕೆರೆಯ 980 ಎಕರೆ ಅಚ್ಚುಕಟ್ಟು ಪ್ರದೇಶಕ್ಕೆ ನೀರಿನ ಲಭ್ಯತೆ ಹೆಚ್ಚುವ ನಿರೀಕ್ಷೆಯಿದೆ. ಕೆರೆ ಭರ್ತಿಯಾಗಿರುವುದರಿಂದ ಸುತ್ತಮುತ್ತಲಿನ ಚಿಂಚಳ್ಳಿ, ಮಣಗಳ್ಳಿ, ಬಂಡಳ್ಳಿ ಸೇರಿದಂತೆ ಹಲವು ಗ್ರಾಮಗಳ ತೋಡುಬಾವಿ ಹಾಗೂ ಕೊಳವೆಬಾವಿಗಳಲ್ಲಿ ಅಂತರ್ಜಲ ಮಟ್ಟ ಸುಧಾರಿಸುವ ಆಶಾಭಾವನೆ ರೈತರಲ್ಲಿದೆ. ಕೆರೆ ಹಾಗೂ ಕಾಲುವೆಗಳ ನಿರಂತರ ನಿರ್ವಹಣೆಗೆ ಸಂಬಂಧಿಸಿದ ಇಲಾಖೆಗಳು ಗಮನಹರಿಸಿ, ಸಂಗ್ರಹವಾಗಿರುವ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯ ರೈತರು ಮನವಿ ಮಾಡಿದ್ದಾರೆ.
    2
    ಹನೂರು: ತಾಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಸಮೀಪದ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ ಕೋಡಿ ಮೂಲಕ ನೀರು ಹರಿಯುತ್ತಿದ್ದು, ಸುತ್ತಮುತ್ತಲಿನ ರೈತರಲ್ಲಿ ಸಂತಸ ಮೂಡಿಸಿದೆ.
ಬರದ ಸಂದರ್ಭದಲ್ಲಿ ಶಾಸಕ ಎಂ.ಆರ್. ಮಂಜುನಾಥ್ ಅವರ ಪ್ರಯತ್ನದಿಂದ ಕಾವೇರಿ ನದಿ ಮೂಲದಿಂದ ಕೆರೆಗೆ ನೀರು ಹರಿಸುವ ವ್ಯವಸ್ಥೆ ಕಲ್ಪಿಸಲಾಗಿತ್ತು. ಇದೀಗ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಕೆರೆ ಭರ್ತಿಯಾಗಿ ನೀರು ಹೊರಹರಿಯುತ್ತಿದೆ.
ಸುಮಾರು 40 ಎಂಸಿಎಫ್‌ಟಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಕೆರೆಯ 980 ಎಕರೆ ಅಚ್ಚುಕಟ್ಟು ಪ್ರದೇಶಕ್ಕೆ ನೀರಿನ ಲಭ್ಯತೆ ಹೆಚ್ಚುವ ನಿರೀಕ್ಷೆಯಿದೆ. ಕೆರೆ ಭರ್ತಿಯಾಗಿರುವುದರಿಂದ ಸುತ್ತಮುತ್ತಲಿನ ಚಿಂಚಳ್ಳಿ, ಮಣಗಳ್ಳಿ, ಬಂಡಳ್ಳಿ ಸೇರಿದಂತೆ ಹಲವು ಗ್ರಾಮಗಳ ತೋಡುಬಾವಿ ಹಾಗೂ ಕೊಳವೆಬಾವಿಗಳಲ್ಲಿ ಅಂತರ್ಜಲ ಮಟ್ಟ ಸುಧಾರಿಸುವ ಆಶಾಭಾವನೆ ರೈತರಲ್ಲಿದೆ.
ಕೆರೆ ಹಾಗೂ ಕಾಲುವೆಗಳ ನಿರಂತರ ನಿರ್ವಹಣೆಗೆ ಸಂಬಂಧಿಸಿದ ಇಲಾಖೆಗಳು ಗಮನಹರಿಸಿ, ಸಂಗ್ರಹವಾಗಿರುವ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯ ರೈತರು ಮನವಿ ಮಾಡಿದ್ದಾರೆ.
ಹನೂರು: ತಾಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಸಮೀಪದ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ ಕೋಡಿ ಮೂಲಕ ನೀರು ಹರಿಯುತ್ತಿದ್ದು, ಸುತ್ತಮುತ್ತಲಿನ ರೈತರಲ್ಲಿ ಸಂತಸ ಮೂಡಿಸಿದೆ.
ಬರದ ಸಂದರ್ಭದಲ್ಲಿ ಶಾಸಕ ಎಂ.ಆರ್. ಮಂಜುನಾಥ್ ಅವರ ಪ್ರಯತ್ನದಿಂದ ಕಾವೇರಿ ನದಿ ಮೂಲದಿಂದ ಕೆರೆಗೆ ನೀರು ಹರಿಸುವ ವ್ಯವಸ್ಥೆ ಕಲ್ಪಿಸಲಾಗಿತ್ತು. ಇದೀಗ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಕೆರೆ ಭರ್ತಿಯಾಗಿ ನೀರು ಹೊರಹರಿಯುತ್ತಿದೆ.
ಸುಮಾರು 40 ಎಂಸಿಎಫ್‌ಟಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಕೆರೆಯ 980 ಎಕರೆ ಅಚ್ಚುಕಟ್ಟು ಪ್ರದೇಶಕ್ಕೆ ನೀರಿನ ಲಭ್ಯತೆ ಹೆಚ್ಚುವ ನಿರೀಕ್ಷೆಯಿದೆ. ಕೆರೆ ಭರ್ತಿಯಾಗಿರುವುದರಿಂದ ಸುತ್ತಮುತ್ತಲಿನ ಚಿಂಚಳ್ಳಿ, ಮಣಗಳ್ಳಿ, ಬಂಡಳ್ಳಿ ಸೇರಿದಂತೆ ಹಲವು ಗ್ರಾಮಗಳ ತೋಡುಬಾವಿ ಹಾಗೂ ಕೊಳವೆಬಾವಿಗಳಲ್ಲಿ ಅಂತರ್ಜಲ ಮಟ್ಟ ಸುಧಾರಿಸುವ ಆಶಾಭಾವನೆ ರೈತರಲ್ಲಿದೆ.
ಕೆರೆ ಹಾಗೂ ಕಾಲುವೆಗಳ ನಿರಂತರ ನಿರ್ವಹಣೆಗೆ ಸಂಬಂಧಿಸಿದ ಇಲಾಖೆಗಳು ಗಮನಹರಿಸಿ, ಸಂಗ್ರಹವಾಗಿರುವ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯ ರೈತರು ಮನವಿ ಮಾಡಿದ್ದಾರೆ.
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Farmer ಹನೂರು, ಚಾಮರಾಜನಗರ, ಕರ್ನಾಟಕ•
    23 hrs ago
  • ಕೌದಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ನಾಗರಹಾವು ಪ್ರತ್ಯಕ್ಷ, ಆತಂಕದಲ್ಲಿ ಸಿಬ್ಬಂದಿಗಳು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕೌದಳ್ಳಿ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ನಾಗರಹಾವು ಪ್ರತ್ಯಕ್ಷವಾಗಿ ಆಸ್ಪತ್ರೆ ಸಿಬ್ಬಂದಿಯಲ್ಲಿ ಆತಂಕ ಮೂಡಿಸಿದ ಘಟನೆ ನಡೆದಿದೆ. ಆಸ್ಪತ್ರೆ ಆವರಣದಲ್ಲಿ ನಾಗರಹಾವು ಕಾಣಿಸಿಕೊಂಡಿದ್ದರಿಂದ ಸಿಬ್ಬಂದಿ ಗಾಬರಿಗೊಂಡಿದ್ದರು. ಕೂಡಲೇ ಉರಗ ರಕ್ಷಕ ಸ್ನೇಕ್ ಮಧು ಅವರಿಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಆಗಮಿಸಿದ ಅವರು ಸುರಕ್ಷಿತವಾಗಿ ನಾಗರಹಾವನ್ನು ಸೆರೆಹಿಡಿದರು. ನಂತರ ಸೆರೆಹಿಡಿದ ನಾಗರಹಾವನ್ನು ಮಲೆ ಮಹದೇಶ್ವರ ವನ್ಯಧಾಮದ ಕಾಡಿಗೆ ಬಿಡಲಾಯಿತು. ಹಾವನ್ನು ಸುರಕ್ಷಿತವಾಗಿ ರಕ್ಷಿಸಿ ಕಾಡಿಗೆ ಬಿಟ್ಟ ಉರಗ ರಕ್ಷಕ ಮಧು ಅವರ ಕಾರ್ಯಕ್ಕೆ ಆಸ್ಪತ್ರೆ ಸಿಬ್ಬಂದಿ ಮೆಚ್ಚುಗೆ ವ್ಯಕ್ತಪಡಿಸಿದರು
    1
    ಕೌದಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ನಾಗರಹಾವು ಪ್ರತ್ಯಕ್ಷ, ಆತಂಕದಲ್ಲಿ ಸಿಬ್ಬಂದಿಗಳು 
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕೌದಳ್ಳಿ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ನಾಗರಹಾವು ಪ್ರತ್ಯಕ್ಷವಾಗಿ ಆಸ್ಪತ್ರೆ ಸಿಬ್ಬಂದಿಯಲ್ಲಿ ಆತಂಕ ಮೂಡಿಸಿದ ಘಟನೆ ನಡೆದಿದೆ.
ಆಸ್ಪತ್ರೆ ಆವರಣದಲ್ಲಿ ನಾಗರಹಾವು ಕಾಣಿಸಿಕೊಂಡಿದ್ದರಿಂದ ಸಿಬ್ಬಂದಿ ಗಾಬರಿಗೊಂಡಿದ್ದರು. ಕೂಡಲೇ ಉರಗ ರಕ್ಷಕ ಸ್ನೇಕ್ ಮಧು ಅವರಿಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಆಗಮಿಸಿದ ಅವರು ಸುರಕ್ಷಿತವಾಗಿ ನಾಗರಹಾವನ್ನು ಸೆರೆಹಿಡಿದರು.
ನಂತರ ಸೆರೆಹಿಡಿದ ನಾಗರಹಾವನ್ನು ಮಲೆ ಮಹದೇಶ್ವರ ವನ್ಯಧಾಮದ ಕಾಡಿಗೆ ಬಿಡಲಾಯಿತು.
ಹಾವನ್ನು ಸುರಕ್ಷಿತವಾಗಿ ರಕ್ಷಿಸಿ ಕಾಡಿಗೆ ಬಿಟ್ಟ ಉರಗ ರಕ್ಷಕ ಮಧು ಅವರ ಕಾರ್ಯಕ್ಕೆ ಆಸ್ಪತ್ರೆ ಸಿಬ್ಬಂದಿ ಮೆಚ್ಚುಗೆ ವ್ಯಕ್ತಪಡಿಸಿದರು
    user_ಚಾಮರಾಜನಗರ ಸುದ್ದಿ ಮನೆ
    ಚಾಮರಾಜನಗರ ಸುದ್ದಿ ಮನೆ
    ಪತ್ರಕರ್ತ ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    42 min ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.