Shuru
Apke Nagar Ki App…
ಶಾಸಕ ಪೊನ್ನಣ್ಣ ಅವರ ತಂದೆಯ ಪುಣ್ಯಸ್ಮರಣೆ, ತಂದೆಯ ನೆನೆದು ಭಾವುಕರಾದ ಶಾಸಕ ಮಾನ್ಯ ಶಾಸಕರ ತಂದೆಯವರಾದ ದಿವಂಗತ ಶ್ರೀ ಎ.ಕೆ ಸುಬ್ಬಯ್ಯರವರ ಪುಣ್ಯ ಸ್ಮರಣೆಯ ದಿನದಂದು, ದಿವಂಗತರ ಸಮಾಧಿಗೆ ತೆರಳಿದ ವಿರಾಜಪೇಟೆ ಶಾಸಕರು ಹಾಗೂ ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯವರಾದ ಶ್ರೀ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರು, ಪೂಜ್ಯನೀಯರ ಸಮಾಧಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ನಮನ ಸಲ್ಲಿಸಿದರು. ಬಳಿಕ ತಮ್ಮ ಪೂಜನೀಯ ತಾಯಿಯವರ ಸಮಾಧಿಗೂ ಪುಷ್ಪ ನಮನ ಸಲ್ಲಿಸಿ ವಂದಿಸಿದರು. ಈ ಸಂದರ್ಭದಲ್ಲಿ ಮಾನ್ಯ ಶಾಸಕರ ಹಿರಿಯ ಸಹೋದರರಾದ ಶ್ರೀ ಎ.ಎಸ್ ನರೇನ್ ಕಾರ್ಯಪ್ಪ, ಶಾಸಕರ ದೊಡ್ಡಮ್ಮ ಮಾಚಮಾಡ ಗಂಗಮ್ಮ, ಪ್ರಮುಖರಾದ ಅಜ್ಜಿಕುಟ್ಟಿರ ಗಿರೀಶ್, ಪಮ್ಮು, ಪೊನ್ನಪ್ಪ, ಆದಿತ್ಯ ಪೆಮ್ಮಯ್ಯ, ಬಾಳೇಯಡ ಕರುಣ್ ಕಾಳಪ್ಪ, ಮಾನ್ಯ ಶಾಸಕರ ಸಿಬ್ಬಂದಿ ವರ್ಗದವರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.
Kodagu Updates
ಶಾಸಕ ಪೊನ್ನಣ್ಣ ಅವರ ತಂದೆಯ ಪುಣ್ಯಸ್ಮರಣೆ, ತಂದೆಯ ನೆನೆದು ಭಾವುಕರಾದ ಶಾಸಕ ಮಾನ್ಯ ಶಾಸಕರ ತಂದೆಯವರಾದ ದಿವಂಗತ ಶ್ರೀ ಎ.ಕೆ ಸುಬ್ಬಯ್ಯರವರ ಪುಣ್ಯ ಸ್ಮರಣೆಯ ದಿನದಂದು, ದಿವಂಗತರ ಸಮಾಧಿಗೆ ತೆರಳಿದ ವಿರಾಜಪೇಟೆ ಶಾಸಕರು ಹಾಗೂ ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯವರಾದ ಶ್ರೀ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರು, ಪೂಜ್ಯನೀಯರ ಸಮಾಧಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ನಮನ ಸಲ್ಲಿಸಿದರು. ಬಳಿಕ ತಮ್ಮ ಪೂಜನೀಯ ತಾಯಿಯವರ ಸಮಾಧಿಗೂ ಪುಷ್ಪ ನಮನ ಸಲ್ಲಿಸಿ ವಂದಿಸಿದರು. ಈ ಸಂದರ್ಭದಲ್ಲಿ ಮಾನ್ಯ ಶಾಸಕರ ಹಿರಿಯ ಸಹೋದರರಾದ ಶ್ರೀ ಎ.ಎಸ್ ನರೇನ್ ಕಾರ್ಯಪ್ಪ, ಶಾಸಕರ ದೊಡ್ಡಮ್ಮ ಮಾಚಮಾಡ ಗಂಗಮ್ಮ, ಪ್ರಮುಖರಾದ ಅಜ್ಜಿಕುಟ್ಟಿರ ಗಿರೀಶ್, ಪಮ್ಮು, ಪೊನ್ನಪ್ಪ, ಆದಿತ್ಯ ಪೆಮ್ಮಯ್ಯ, ಬಾಳೇಯಡ ಕರುಣ್ ಕಾಳಪ್ಪ, ಮಾನ್ಯ ಶಾಸಕರ ಸಿಬ್ಬಂದಿ ವರ್ಗದವರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.
More news from ಕರ್ನಾಟಕ and nearby areas
- ಮೈಸೂರು : ಅರಣ್ಯ ಭವನದಲ್ಲಿ ನಮ್ಮ ದಸರಾ ಗಜಪಡೆ ಭರ್ಜರಿ ರಿಲ್ಯಾಕ್ಸ್ ನಾಡಹಬ್ಬ ದಸರಾ 2026 ಹಿನ್ನಲೆ ಮೈಸೂರಿಗೆ ಆಗಮಿಸಿದ ಗಜಪಡೆ ಅರಣ್ಯ ಭವನದಲ್ಲಿ ರಿಲ್ಯಾಕ್ಸ್ ಮೂಡ್ ನಲ್ಲಿದೆ.ಮೊದಲ ಹಂತದಲ್ಲಿ ಬಂದಿರುವ 9 ಆನೆಗಳ ತಂಡ ಅರಣ್ಯ ಭವನದಲ್ಲಿ ಬೀಡು ಬಿಟ್ಟಿವೆ. ಜಿಲ್ಲಾಡಳಿತ ಹಾಗೂ ಅರಮನೆ ಆಡಳಿತ ಮಂಡಳಿ ವತಿಯಿಂದ ಆನೆಗಳನ್ನ ಸಂಪ್ರದಾಯವಾಗಿ ಸ್ವಾಗತಿಸಲಾಗುತ್ತದೆ. ಅಕ್ಟೋಬರ್ 21 ರಂದು ನಡೆಯಲಿರುವ ಜಂಬೂಸವಾರಿಗೆ ಗಜಪಡೆ ಸಜ್ಜಾಗಲಿದೆ...1
- News by dailynews ಶಹೀನ್ ಷಾ ಅಹಮ್ಮದ್ ಬಹಿರಂಗ ಸವಾಲು: ಪೊಲೀಸರಿಗೆ ಬೆದರಿಕೆ ಹಾಕಿದ ಆಡಿಯೋ ಬಿಡುಗಡೆ ಮಾಡಿ ತೋರಿಸಿ! ಸಾಕ್ಷಿ ಎಲ್ಲಿದೆ?: ಪ್ರತಿಯೊಂದನ್ನೂ ರೆಕಾರ್ಡ್ ಮಾಡುವವರು, ಪೊಲೀಸರಿಗೆ ಧಮಕಿ ಹಾಕಿದ ವೀಡಿಯೊ ಅಥವಾ ಆಡಿಯೋ ಸಾಬೀತುಪಡಿಸಲಿ. #tanveersait #viral #mysuru #cmdkshivakumar #viralnews News by dailynews ಶಹೀನ್ ಷಾ ಅಹಮ್ಮದ್ ಬಹಿರಂಗ ಸವಾಲು: ಪೊಲೀಸರಿಗೆ ಬೆದರಿಕೆ ಹಾಕಿದ ಆಡಿಯೋ ಬಿಡುಗಡೆ ಮಾಡಿ ತೋರಿಸಿ! ಸಾಕ್ಷಿ ಎಲ್ಲಿದೆ?: ಪ್ರತಿಯೊಂದನ್ನೂ ರೆಕಾರ್ಡ್ ಮಾಡುವವರು, ಪೊಲೀಸರಿಗೆ ಧಮಕಿ ಹಾಕಿದ ವೀಡಿಯೊ ಅಥವಾ ಆಡಿಯೋ ಸಾಬೀತುಪಡಿಸಲಿ. #tanveersait #viral #mysuru #cmdkshivakumar #viralnews1
- ಹೆಬ್ಬಾಲೆಯಲ್ಲಿ 25 ಲಕ್ಷದಲ್ಲಿ ಪ್ರೇಕ್ಷಕ ಗ್ಯಾಲರಿ ಬನಶಂಕರಿ ಅಮ್ಮನವರ ರಂಗ ಮಂದಿರ ಉದ್ಘಾಟನಾ ಸಮಾರಂಭ. ಕೊಡಗು: ಕುಶಾಲನಗರ ತಾಲೂಕಿನ ಹೆಬ್ಬಾಲೆ ಗ್ರಾಮದ ಮಾದರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಮಾರಂಭದಲ್ಲಿ ಇನ್ನುಳಿಕೆ ಆಗಿರುವ ಪ್ರೇಕ್ಷಕ ಗ್ಯಾಲರಿಯನ್ನು 15 ಲಕ್ಷ ರೂ ವೆಚ್ಚದಲ್ಲಿ ಮುಂದಿನ ದಿನಗಳಲ್ಲಿ ವಿಸ್ತರಿಸಿಕೊಡುವುದಾಗಿ ಮಡಿಕೇರಿ ಕ್ಷೇತ್ರದ ಜನಪ್ರಿಯ ಶಾಸಕರಾದ ಡಾಕ್ಟರ್ ಮಂತರ್ ಗೌಡ ಭರವಸೆ ನೀಡಿದರು. ತಾಲೂಕಿನ ಹೆಬ್ಬಾಲೆ ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶಾಸಕರ ಅನುದಾನದಿಂದ 20 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣಗೊಂಡ ಪ್ರೇಕ್ಷಕರ ಗ್ಯಾಲರಿ ಮತ್ತು 5 ಲಕ್ಷದಲ್ಲಿ ಬನಶಂಕರಿ ಅಮ್ಮನವರ ಬಯಲು ರಂಗಮಂದಿರವನ್ನು ಉದ್ಘಾಟಿಸಿ ಮಾತನಾಡಿ ಈ ವ್ಯಾಪ್ತಿಯಲ್ಲಿ ಮುಂದಿನ ದಿನಗಳಲ್ಲಿ ಇನ್ನು ಹೆಚ್ಚು ಅಭಿವೃದ್ಧಿ ಕೆಲಸಗಳನ್ನು ಮಾಡುವುದಾಗಿ ಉದ್ಘಾಟನಾ ಸಮಾರಂಭದಲ್ಲಿ ಭರವಸೇನು ನೀಡಿದರು. ಸಮಾರಂಭದಲ್ಲಿ ಗ್ಯಾರಂಟಿ ಯೋಜನಾ ಅಧ್ಯಕ್ಷರಾದ ವಿಪಿ ಶಶಿಧರ್, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಚಂದ್ರಕಲಾ, ಶಾಲಾ ಅಭಿವೃದ್ಧಿ ಅಧ್ಯಕ್ಷರಾದ ಪ್ರದೀಪ್ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಅರುಣ್ ಕುಮಾರಿ, ದಿನೇಶ್, ರಾಜಶೇಖರ್ ಮುಖ್ಯ ಶಿಕ್ಷಕರಾದ ವೆಂಕಟೇಶ್ ಮುಂತಾದ ನಾಯಕರು ಹಾಜರಿದ್ದರು.4
- ಅಧಿಕಾರಿಗಳಿಗೆ ರಾಖಿ ಕಟ್ಟಿ ರಕ್ಷಾ ಬಂಧನ ಆಚರಿಸಿದ ಬಚಪನ್ ಶಾಲಾ ಮಕ್ಕಳು ಮೈಸೂರು: ರಕ್ಷಾ ಬಂಧನ ಹಬ್ಬದ ಅಂಗವಾಗಿ ನಗರದ ಬಚಪನ್ ಶಾಲೆಯ ಮಕ್ಕಳು ವಿಶೇಷ ರೀತಿಯಲ್ಲಿ ಹಬ್ಬವನ್ನು ಆಚರಿಸಿದರು. ಶಾಲೆಯ ಮಕ್ಕಳು ವಿವಿಧ ಸರ್ಕಾರಿ ಕಚೇರಿಗಳು ಹಾಗೂ ಸಾರ್ವಜನಿಕ ಸೇವಾ ಕೇಂದ್ರಗಳಿಗೆ ತೆರಳಿ ಅಲ್ಲಿನ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ರಾಖಿ ಕಟ್ಟಿ ಶುಭಾಶಯ ಕೋರಿದರು. ಮಕ್ಕಳು ಸರ್ಕಾರಿ ನೌಕರರು, ವೈದ್ಯರು, ಪೋಸ್ಟ್ ಆಫೀಸ್ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಯ ಕಚೇರಿಗಳಿಗೆ ಭೇಟಿ ನೀಡಿ ಅಧಿಕಾರಿಗಳಿಗೆ ರಾಖಿ ಕಟ್ಟಿದರು. ಈ ಮೂಲಕ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವವರೊಂದಿಗೆ ಸಹೋದರತ್ವ ಹಾಗೂ ಪ್ರೀತಿಯ ಬಾಂಧವ್ಯವನ್ನು ಬೆಳೆಸುವ ಸಂದೇಶ ನೀಡಿದರು. ಪೊಲೀಸ್ ಇಲಾಖೆ ಕಚೇರಿಗೆ ತೆರಳಿದ ಮಕ್ಕಳು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ರಾಖಿ ಕಟ್ಟುವ ಮೂಲಕ ಅವರ ಸೇವೆಗೆ ಗೌರವ ಸಲ್ಲಿಸಿದರು. ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಹಗಲಿರುಳು ಶ್ರಮಿಸುವ ಪೊಲೀಸರೊಂದಿಗೆ ಮಕ್ಕಳು ಆತ್ಮೀಯವಾಗಿ ಬೆರೆತು ಸಂಭ್ರಮಿಸಿದರು. ಇದೇ ವೇಳೆ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿಗೂ ರಾಖಿ ಕಟ್ಟಿ, ಜನರ ಆರೋಗ್ಯ ಕಾಪಾಡುವ ಅವರ ಸೇವೆಯನ್ನು ಸ್ಮರಿಸಿದರು. ಪೋಸ್ಟ್ ಆಫೀಸ್ಗೆ ಭೇಟಿ ನೀಡಿದ ಮಕ್ಕಳು ಅಲ್ಲಿನ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ರಾಖಿ ಕಟ್ಟಿ ರಕ್ಷಾ ಬಂಧನದ ಶುಭಾಶಯ ತಿಳಿಸಿದರು. ಸರ್ಕಾರಿ ಕಚೇರಿಗಳಲ್ಲಿಯೂ ಅಧಿಕಾರಿಗಳು ಮಕ್ಕಳೊಂದಿಗೆ ಆತ್ಮೀಯವಾಗಿ ಮಾತನಾಡಿ, ರಾಖಿ ಕಟ್ಟಿಸಿಕೊಂಡು ಮಕ್ಕಳಿಗೆ ಶುಭ ಹಾರೈಸಿದರು. ಶಾಲಾ ಮಕ್ಕಳ ಈ ವಿಶೇಷ ಆಚರಣೆ ಅಧಿಕಾರಿಗಳಲ್ಲಿಯೂ ಸಂತಸ ಮೂಡಿಸಿತು. ರಕ್ಷಾ ಬಂಧನ ಕೇವಲ ಸಹೋದರ-ಸಹೋದರಿಯರ ನಡುವಿನ ಹಬ್ಬವಲ್ಲ, ಪರಸ್ಪರ ಪ್ರೀತಿ, ಗೌರವ, ಕಾಳಜಿ ಮತ್ತು ಸಹೋದರತ್ವದ ಭಾವನೆಯನ್ನು ಬೆಳೆಸುವ ಹಬ್ಬ ಎಂಬ ಸಂದೇಶವನ್ನು ಮಕ್ಕಳು ಸಾರಿದರು. ಬಚಪನ್ ಶಾಲೆಯ ಶಿಕ್ಷಕರು ಮಕ್ಕಳಿಗೆ ರಕ್ಷಾ ಬಂಧನದ ಮಹತ್ವವನ್ನು ತಿಳಿಸಿ, ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುವವರನ್ನು ಗೌರವಿಸುವ ಮನೋಭಾವ ಬೆಳೆಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಿದ್ದರು. ಮಕ್ಕಳ ಈ ವಿಭಿನ್ನ ಆಚರಣೆ ಸಾರ್ವಜನಿಕರ ಗಮನ ಸೆಳೆಯಿತು.1
- ಪುತ್ತೂರು ಗಲಾಟೆ: ನಮಗೆ ಹಿಂದೂ–ಮುಸ್ಲಿಂ ಗಲಾಟೆ ಬೇಡ, ಇಲ್ಲೇ ಮುಗಿಸಬೇಕು: ಪುತ್ತೂರು ಸಂತ್ರಸ್ತೆ ಮುಬಶ್ಶಿರಾ ಹೇಳಿಕೆ ಪುತ್ತೂರು ಗಲಾಟೆ: ನಮಗೆ ಹಿಂದೂ–ಮುಸ್ಲಿಂ ಗಲಾಟೆ ಬೇಡ, ಇಲ್ಲೇ ಮುಗಿಸಬೇಕು: ಪುತ್ತೂರು ಸಂತ್ರಸ್ತೆ ಮುಬಶ್ಶಿರಾ ಹೇಳಿಕೆ1
- ಮಂಗಳಾದೇವಿ ದೇವಾಲಯದಲ್ಲಿ ವರಮಹಾಲಕ್ಷ್ಮೀ ಪೂಜೆ ವಿಜೃಂಭಣೆಯಿಂದ ನೆರವೇರಿತು ಮಂಗಳಾದೇವಿ ದೇವಾಲಯದಲ್ಲಿ ವರಮಹಾಲಕ್ಷ್ಮೀ ಪೂಜೆ1
- ದರ್ಬೆ ಘಟನೆ: ಹಿಂದು ಸಮಾಜ ಎಚ್ಚರಿಕೆಯಿಂದ ಇರಬೇಕು – ಪ್ರಭಾಕರ್ ಭಟ್ ಕಲ್ಲಡ್ಕ ಮಂಗಳೂರು: ನಗರದ ದರ್ಬೆಯ ಜೆರಾಕ್ಸ್ ಅಂಗಡಿಯೊಂದರಲ್ಲಿ ಇತ್ತೀಚೆಗೆ ನಡೆದ ಘಟನೆಯ ಹಿನ್ನೆಲೆಯಲ್ಲಿ ಹಿಂದು ಸಮಾಜವು ಮುಂದಿನ ದಿನಗಳಲ್ಲಿ ಎಲ್ಲಾ ರೀತಿಯಿಂದಲೂ ಎಚ್ಚರಿಕೆಯಿಂದ ಇರಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಮುಖಂಡ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು. ದರ್ಬೆ ಘಟನೆಯಲ್ಲಿ ಗಾಯಗೊಂಡು ಪುತ್ತೂರಿನ ಆದರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಜನಾ ಪೈ ಅವರನ್ನು ಆ.27ರ ರಾತ್ರಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಬಳಿಕ ಅವರ ಪತಿ ಸದಾಶಿವ ಪೈ, ಡಾ. ಪ್ರಭಾಕರ್ ಭಟ್ ಹಾಗೂ ಕಮಲಾ ಭಟ್ ದಂಪತಿ ಜತೆ ಮಾತುಕತೆ ನಡೆಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಘಟನೆಯಲ್ಲಿ ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆದಿರುವುದು ಗಂಭೀರ ವಿಚಾರ. ಮಹಿಳೆಯರ ರಕ್ಷಣೆಗೆ ಸರಕಾರ ಮತ್ತು ಪೊಲೀಸ್ ವ್ಯವಸ್ಥೆ ಯಾವ ರೀತಿಯಲ್ಲಿ ಸ್ಪಂದಿಸಬೇಕು ಎಂಬ ಬಗ್ಗೆ ಚಿಂತನೆ ನಡೆಯಬೇಕು. ಅಂಜನಾ ಪೈ ಮತ್ತು ಅವರ ಪುತ್ರನ ಮೇಲೆ ಗಂಭೀರ ಪ್ರಕರಣ ದಾಖಲಿಸಿರುವುದು ಸರಿಯೇ ಎಂಬುದನ್ನು ಪೊಲೀಸ್ ಇಲಾಖೆ ಮತ್ತು ಸರಕಾರ ಪರಿಶೀಲಿಸಬೇಕು ಒತ್ತಾಯಿಸಿದರು. ತಾಯಿಯ ಮೇಲೆಯೇ ದಾಳಿ ನಡೆಯುತ್ತಿರುವ ಸಂದರ್ಭದಲ್ಲಿ ಮಗ ಏನು ಮಾಡಬೇಕು? ಮಹಾಭಾರತದಲ್ಲಿ ದ್ರೌಪದಿಯ ಸೀರೆ ಎಳೆದಾಗ ಸುಮ್ಮನಿದ್ದಂತೆ ಇರಬೇಕೇ ಎಂಬುದನ್ನೂ ಕಾನೂನು ವ್ಯವಸ್ಥೆ ಪರಿಗಣಿಸಬೇಕು ಎಂದು ಹೇಳಿದ ಅವರು, ನಮ್ಮ ಮೇಲೆ ಅಥವಾ ನಮ್ಮ ಕುಟುಂಬದವರ ಮೇಲೆ ಆಕ್ರಮಣ ನಡೆದಾಗ ಆತ್ಮರಕ್ಷಣೆ ಮಾಡಿಕೊಳ್ಳುವ ಹಕ್ಕು ಪ್ರತಿಯೊಬ್ಬರಿಗೂ ಇದೆ. ಕಾನೂನನ್ನು ಕೈಗೆತ್ತಿಕೊಳ್ಳುವುದು ನಮ್ಮ ಉದ್ದೇಶವಲ್ಲ. ಆದರೆ, ಆಕ್ರಮಣವಾದಾಗ ರಕ್ಷಿಸಿಕೊಳ್ಳುವುದೇ ಅಪರಾಧವಾಗಬಾರದು' ಎಂದು ಹೇಳಿದರು. ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದವರ ವಿರುದ್ಧವೂ ಸೂಕ್ತ ಕ್ರಮ ಕೈಗೊಳ್ಳಬೇಕು. ಯಾವುದೇ ಸಂಘಟನೆ ಅಥವಾ ಗುಂಪಿನಿಂದ ಜನರಲ್ಲಿ ಭಯದ ವಾತಾವರಣ ಸೃಷ್ಟಿಸುವ ಪ್ರಯತ್ನ ನಡೆಯಬಾರದು. ದರ್ಬೆ ಘಟನೆ ಉದ್ದೇಶಪೂರ್ವಕವಾಗಿ ನಡೆದಿದೆಯೇ ಎಂಬುದನ್ನು ತನಿಖೆ ಮೂಲಕ ಸ್ಪಷ್ಟಪಡಿಸಬೇಕು ಎಂದು ಅವರು ಆಗ್ರಹಿಸಿದರು. ಪೊಲೀಸರು ಯಾವುದೇ ಸರ್ಕಾರದ ಒತ್ತಡಕ್ಕೆ ಒಳಗಾಗದೆ ನ್ಯಾಯಯುತವಾಗಿ ಕರ್ತವ್ಯ ನಿರ್ವಹಿಸಬೇಕು. ಸರ್ಕಾರವೂ ಮತಬ್ಯಾಂಕ್ ರಾಜಕಾರಣವನ್ನು ಬದಿಗಿಟ್ಟು ಎಲ್ಲರಿಗೂ ಸಮಾನ ರಕ್ಷಣೆ ನೀಡಬೇಕು ಎಂದು ಪ್ರಭಾಕರ್ ಭಟ್ ಹೇಳಿದರು. ಇದೆ ಸಂದರ್ಭದಲ್ಲಿ ಪ್ರಭಾಕರ್ ಭಟ್ ಅವರ ಪತ್ನಿ ಕಮಲ ಭಟ್,ನಗರ ಬಿಜೆಪಿ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರ್, ಶಶಿಧರ್ ನಾಯಕ್, ನಿರಂಜನ್ ಮಾನ್ಯ,ಭಾಮಿ ಅಶೋಕ್ ಶೇನೆಯಿ, ನಾಗೇಂದ್ರ ಬಾಳಿಗ, ಬುಡಿಯಾರ್ ರಾಧಾಕೃಷ್ಣ ರೈ, ಸುನೀತ್ ಭಟ್, ಸುರೇಶ್ ದರ್ಬೆ ಮತ್ತಿತ್ತರರು ಉಪಸ್ಥಿತರಿದ್ದರು1
- ಮೈಸೂರಿನ ಮೀಲಾದ್ ಬಾಗ್ನಲ್ಲಿ ಶ್ರದ್ಧಾ ಭಕ್ತಿಯ ಈದ್ ಮಿಲಾದ್ ಸಂಭ್ರಮ! #tanveersait #viral #eidmiladunnabiﷺ #kannadanews #todayviral ಮೈಸೂರಿನ ಮೀಲಾದ್ ಬಾಗ್ನಲ್ಲಿ ಶ್ರದ್ಧಾ ಭಕ್ತಿಯ ಈದ್ ಮಿಲಾದ್ ಸಂಭ್ರಮ! #tanveersait #viral #eidmiladunnabiﷺ #kannadanews #todayviral1