logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮಾ.30 ರಂದು ನಂಜನಗೂಡು ದೊಡ್ಡ ಜಾತ್ರಾ ಮಹೋತ್ಸವ: ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಡಾ.ಲಕ್ಷ್ಮೀಕಾಂತರೆಡ್ಡಿ ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಮಾ. 30 ರಂದು ನಡೆಯಲಿರುವ ಪುರಾಣ ಪ್ರಸಿದ್ಧ ಗೌತಮ ಪಂಚ ಮಹಾ ರಥೋತ್ಸವದ ದೊಡ್ಡ ಜಾತ್ರೆಗೆ ಸಕಲ ಸಿದ್ಧತೆಗಳು ನಡೆದು ಅದರಲ್ಲೂ ಮುಖ್ಯವಾಗಿ ಪಂಚ ಮಹಾ ರಥಗಳನ್ನು ಕಟ್ಟುವ ಹಾಗೂ ಶೃಂಗರಿಸುವ ಕಾರ್ಯ ಭರದಿಂದ ಸಾಗುತ್ತಿದೆ. ಸುಮಾರು 97 ಅಡಿ ಎತ್ತರದ 250 ಟನ್ ತೂಕ ವಿರುವ ಶ್ರೀ ನಂಜುಂಡೇಶ್ವರನ ದೊಡ್ಡ ರಥಕ್ಕೆ ಈಗಾಗಲೇ ಭಾಗಶಃ ಕೆಲಸ ಮುಗಿದಿದ್ದು, ಉಳಿಕೆ ಕೆಲಸವನ್ನು ಸಾಂಪ್ರದಾಯಕವಾಗಿ ರಥ ಕಟ್ಟುವ ಕಾರ್ಮಿಕರಿಂದ ನಡೆಯುತ್ತಿದೆ. ಉಳಿದಂತೆ ಶ್ರೀ ಅಮ್ಮನವರ ರಥ ಗಣೇಶ, ಸುಬ್ರಹ್ಮಣ್ಯ, ಚಂಡಿಕೇಶ್ವರ ಪಂಚ ರಥಗಳು ಜಾತ್ರೆಗೆ ಶೃಂಗಾರ ಗೊಳ್ಳುತ್ತಿವೆ. ಅಲ್ಲದೆ ಪಂಚ ರಥಗಳು ಚಲಿಸುವಾಗ ಮುಖ್ಯವಾಗಿ ಬೇಕಾಗಿರುವ ಮರದ ಗೊದಮಗಳು, ಹೊಸ ಹೊಸ ಹಗ್ಗಗಳು ಸೇರಿದಂತೆ ಕಳಶಗಳು ಪೀಠಿಕೆಗಳು, ಛತ್ರಿಗಳನ್ನು ಶುದ್ಧಗೊಳಿಸಿ ಕುದುರೆ ವಾಹನಗಳಿಗೆ ಬಣ್ಣ ಹಚ್ಚುವ ಮೂಲಕ ರಥಗಳಿಗೆ ಬೇಕಾಗುವ ಪರಿಕರಗಳನ್ನು ಅಣಿಗೊಳಿಸಲಾಗುತ್ತಿದೆ. ಮತ್ತು ದೇವಾಲಯದ ಸುತ್ತಮುತ್ತ ಬಣ್ಣ ಹೊಡೆಯುವುದು, ಶಾಮಿಯಾನ ವಿದ್ಯುತ್ ದೀಪ ಅಳವಡಿಸುವುದು ತಾತ್ಕಾಲಿಕ ಶೌಚಾಲಯಗಳ ನಿರ್ಮಾಣ ಸಿಸಿ ಕ್ಯಾಮರಾ ಗಳು, ಬ್ಯಾರೆಕೇಡ್ ಗಳು, ಕುಡಿಯುವ ನೀರಿನ ವ್ಯವಸ್ಥೆ, ರಥದ ಚಕ್ರಗಳು ಸಾರಾಗವಾಗಿ ಉರುಳಲು ರಸ್ತೆಗೆ ಮರಳು ಹಾಕಲು ಮರಳು ಸಂಗ್ರಹಣೆ ಸೇರಿದಂತೆ ಜಾತ್ರೆಗೆ ಬೇಕಾದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ಡಾ.ಲಕ್ಷ್ಮಿಕಾಂತ ರೆಡ್ಡಿ ಅವರು ದೇವಾಲಯಕ್ಕೆ ಭೇಟಿ ನೀಡಿ ರಥಗಳು ಸೇರಿದಂತೆ ವಿವಿಧ ಸಿದ್ಧತಾ ಬಗ್ಗೆ ಪರಿಶೀಲನೆ ನಡೆಸಿದರು. ಸಿದ್ಧತೆಗಳ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು ಜಾತ್ರೆಯಲ್ಲಿ ಭಕ್ತರಿಗೆ ಬೇಕಾದ ಮೂಲಭೂತ ಸೌಕರ್ಯಗಳು, ಬಿಗಿ ಭದ್ರತೆ, ಸ್ವಚ್ಛತೆ ಸೇರಿದಂತೆ ಯಾವುದಕ್ಕೂ ಕೊರತೆಯಾಗದಂತೆ ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು. ಈ ವೇಳೆ ತಹಶೀಲ್ದಾರ್ ಡಾ.ಸ್ಮಿತಾ ರಾಮು, ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ, ನಗರಸಭಾ ಆಯುಕ್ತ ಬಸವರಾಜ್ ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಬಸವರಾಜು ವೃತ್ತ ನಿರೀಕ್ಷಕ ರವೀಂದ್ರ, ತಾಲ್ಲೂಕು ಆರೋಗ್ಯ ಅಧಿಕಾರಿ ಈಶ್ವರ್ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಜೆರಾಲ್ಡ್ ರಾಜೇಶ್ ಸೇರಿದಂತೆ ಮತ್ತಿತರ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

7 days ago
user_Mysore update
Mysore update
ನಂಜನಗೂಡು, ಮೈಸೂರು, ಕರ್ನಾಟಕ•
7 days ago

ಮಾ.30 ರಂದು ನಂಜನಗೂಡು ದೊಡ್ಡ ಜಾತ್ರಾ ಮಹೋತ್ಸವ: ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಡಾ.ಲಕ್ಷ್ಮೀಕಾಂತರೆಡ್ಡಿ ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಮಾ. 30 ರಂದು ನಡೆಯಲಿರುವ ಪುರಾಣ ಪ್ರಸಿದ್ಧ ಗೌತಮ ಪಂಚ ಮಹಾ ರಥೋತ್ಸವದ ದೊಡ್ಡ ಜಾತ್ರೆಗೆ ಸಕಲ ಸಿದ್ಧತೆಗಳು ನಡೆದು ಅದರಲ್ಲೂ ಮುಖ್ಯವಾಗಿ ಪಂಚ ಮಹಾ ರಥಗಳನ್ನು ಕಟ್ಟುವ ಹಾಗೂ ಶೃಂಗರಿಸುವ ಕಾರ್ಯ ಭರದಿಂದ ಸಾಗುತ್ತಿದೆ. ಸುಮಾರು 97 ಅಡಿ ಎತ್ತರದ 250 ಟನ್ ತೂಕ ವಿರುವ ಶ್ರೀ ನಂಜುಂಡೇಶ್ವರನ ದೊಡ್ಡ ರಥಕ್ಕೆ ಈಗಾಗಲೇ ಭಾಗಶಃ ಕೆಲಸ ಮುಗಿದಿದ್ದು, ಉಳಿಕೆ ಕೆಲಸವನ್ನು ಸಾಂಪ್ರದಾಯಕವಾಗಿ ರಥ ಕಟ್ಟುವ ಕಾರ್ಮಿಕರಿಂದ ನಡೆಯುತ್ತಿದೆ. ಉಳಿದಂತೆ ಶ್ರೀ ಅಮ್ಮನವರ ರಥ ಗಣೇಶ, ಸುಬ್ರಹ್ಮಣ್ಯ, ಚಂಡಿಕೇಶ್ವರ ಪಂಚ ರಥಗಳು ಜಾತ್ರೆಗೆ ಶೃಂಗಾರ ಗೊಳ್ಳುತ್ತಿವೆ. ಅಲ್ಲದೆ ಪಂಚ ರಥಗಳು ಚಲಿಸುವಾಗ ಮುಖ್ಯವಾಗಿ ಬೇಕಾಗಿರುವ ಮರದ ಗೊದಮಗಳು, ಹೊಸ ಹೊಸ ಹಗ್ಗಗಳು ಸೇರಿದಂತೆ ಕಳಶಗಳು ಪೀಠಿಕೆಗಳು, ಛತ್ರಿಗಳನ್ನು ಶುದ್ಧಗೊಳಿಸಿ ಕುದುರೆ ವಾಹನಗಳಿಗೆ ಬಣ್ಣ ಹಚ್ಚುವ ಮೂಲಕ ರಥಗಳಿಗೆ ಬೇಕಾಗುವ ಪರಿಕರಗಳನ್ನು ಅಣಿಗೊಳಿಸಲಾಗುತ್ತಿದೆ. ಮತ್ತು ದೇವಾಲಯದ ಸುತ್ತಮುತ್ತ ಬಣ್ಣ ಹೊಡೆಯುವುದು, ಶಾಮಿಯಾನ ವಿದ್ಯುತ್ ದೀಪ ಅಳವಡಿಸುವುದು ತಾತ್ಕಾಲಿಕ ಶೌಚಾಲಯಗಳ ನಿರ್ಮಾಣ ಸಿಸಿ ಕ್ಯಾಮರಾ ಗಳು, ಬ್ಯಾರೆಕೇಡ್ ಗಳು, ಕುಡಿಯುವ ನೀರಿನ ವ್ಯವಸ್ಥೆ, ರಥದ ಚಕ್ರಗಳು ಸಾರಾಗವಾಗಿ ಉರುಳಲು ರಸ್ತೆಗೆ ಮರಳು ಹಾಕಲು ಮರಳು ಸಂಗ್ರಹಣೆ ಸೇರಿದಂತೆ ಜಾತ್ರೆಗೆ ಬೇಕಾದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ಡಾ.ಲಕ್ಷ್ಮಿಕಾಂತ ರೆಡ್ಡಿ ಅವರು ದೇವಾಲಯಕ್ಕೆ ಭೇಟಿ ನೀಡಿ ರಥಗಳು ಸೇರಿದಂತೆ ವಿವಿಧ ಸಿದ್ಧತಾ ಬಗ್ಗೆ ಪರಿಶೀಲನೆ ನಡೆಸಿದರು. ಸಿದ್ಧತೆಗಳ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು ಜಾತ್ರೆಯಲ್ಲಿ ಭಕ್ತರಿಗೆ ಬೇಕಾದ ಮೂಲಭೂತ ಸೌಕರ್ಯಗಳು, ಬಿಗಿ ಭದ್ರತೆ, ಸ್ವಚ್ಛತೆ ಸೇರಿದಂತೆ ಯಾವುದಕ್ಕೂ ಕೊರತೆಯಾಗದಂತೆ ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು. ಈ ವೇಳೆ ತಹಶೀಲ್ದಾರ್ ಡಾ.ಸ್ಮಿತಾ ರಾಮು, ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ, ನಗರಸಭಾ ಆಯುಕ್ತ ಬಸವರಾಜ್ ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಬಸವರಾಜು ವೃತ್ತ ನಿರೀಕ್ಷಕ ರವೀಂದ್ರ, ತಾಲ್ಲೂಕು ಆರೋಗ್ಯ ಅಧಿಕಾರಿ ಈಶ್ವರ್ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಜೆರಾಲ್ಡ್ ರಾಜೇಶ್ ಸೇರಿದಂತೆ ಮತ್ತಿತರ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

More news from Mysuru and nearby areas
  • ತಿ.ನರಸೀಪುರ ಪಟ್ಟಣದಲ್ಲಿ ನಡೆಯುತ್ತಿದ್ದ ಶ್ರೀ ಗುಂಜಾನರಸಿಂಹಸ್ವಾಮಿ ಬ್ರಹ್ಮ ರಥೋತ್ಸವದ ಅಂಗವಾಗಿ ಮೂರನೇ ದಿನ ಅವಬೃತ ಸ್ನಾನ ಹಾಗೂ ಧ್ವಜ ಅವರೋಹಣ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಭಕ್ತಿಭಾವದಿಂದ ನೆರವೇರಿದವು. ಸಾಂಪ್ರದಾಯಿಕ ವಾಡಿಕೆಯಂತೆ ಬೆಳಗಿನ ಜಾವ ವಿಶೇಷ ಪೂಜಾ ವಿಧಿವಿಧಾನಗಳೊಂದಿಗೆ ಅವಬೃತ ಪುಣ್ಯಸ್ನಾನ ಕಾರ್ಯಕ್ರಮ ಆಯೋಜಿಸಲಾಯಿತು. ಕಾವೇರಿ, ಕಪಿಲ ಮತ್ತು ಸ್ಪಟಿಕ ಸರೋವರಗಳ ತ್ರಿವೇಣಿ ಸಂಗಮದಲ್ಲಿ ಸುದರ್ಶನ ನರಸಿಂಹಸ್ವಾಮಿ ವಿಗ್ರಹವನ್ನು ಪ್ರತಿಷ್ಠಾಪಿಸಿ ವೇದಮಂತ್ರಗಳ ಮಧ್ಯೆ ಪೂಜೆಗಳು ನೆರವೇರಿಸಲಾಯಿತು. ಈ ವೇಳೆ ಹಾಲು, ಮೊಸರು, ಜೇನುತುಪ್ಪ ಸೇರಿದಂತೆ ವಿವಿಧ ದ್ರವ್ಯಗಳಿಂದ ಅಭಿಷೇಕ ಮಾಡಿ ದೇವರಿಗೆ ವಿಶೇಷ ಆರಾಧನೆ ಸಲ್ಲಿಸಲಾಯಿತು. ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಭಕ್ತ ಮಹಾಶಯರು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿ ದೇವರ ದರ್ಶನ ಪಡೆದು ಭಕ್ತಿ ಭಾವ ಮೆರೆದರು. ಪೂಜಾ ವಿಧಿಗಳು ಪೂರ್ಣಗೊಂಡ ಬಳಿಕ ಧ್ವಜ ಅವರೋಹಣ ನಡೆಸುವ ಮೂಲಕ ಬ್ರಹ್ಮ ರಥೋತ್ಸವಕ್ಕೆ ಅಧಿಕೃತ ಸಮಾರೋಪ ದೊರಕಿತು. ಸ್ಥಳೀಯರು ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಸಾವಿರಾರು ಭಕ್ತರು ಆಗಮಿಸಿ ಉತ್ಸವದಲ್ಲಿ ಭಾಗವಹಿಸಿದರು. ದೇವಸ್ಥಾನ ಆಡಳಿತ ಮಂಡಳಿ ಹಾಗೂ ಅರ್ಚಕರ ಮಾರ್ಗದರ್ಶನದಲ್ಲಿ ಕಾರ್ಯಕ್ರಮಗಳು ಶಿಸ್ತಿನಿಂದ ನೆರವೇರಿದವು. ಧಾರ್ಮಿಕ ಸಂಪ್ರದಾಯಗಳನ್ನು ಉಳಿಸಿಕೊಂಡು ಆಚರಿಸಲಾದ ಈ ಬ್ರಹ್ಮ ರಥೋತ್ಸವ ಭಕ್ತರಲ್ಲಿ ಆಧ್ಯಾತ್ಮಿಕ ಉತ್ಸಾಹವನ್ನು ಹೆಚ್ಚಿಸಿತು. ಇಡೀ ಉತ್ಸವ ಅವಧಿಯಲ್ಲಿ ಭಕ್ತರಿಗೆ ಪ್ರಸಾದ ವಿತರಣೆ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿತ್ತು. ಭಕ್ತರ ಭಾರೀ ಉಪಸ್ಥಿತಿಯಿಂದ ತಿ.ನರಸೀಪುರ ತೀರ್ಥಕ್ಷೇತ್ರ ಭಕ್ತಿರಸದ ಸಾಗರವಾಗಿ ಕಂಗೊಳಿಸಿತು.
    2
    ತಿ.ನರಸೀಪುರ ಪಟ್ಟಣದಲ್ಲಿ ನಡೆಯುತ್ತಿದ್ದ ಶ್ರೀ ಗುಂಜಾನರಸಿಂಹಸ್ವಾಮಿ ಬ್ರಹ್ಮ ರಥೋತ್ಸವದ ಅಂಗವಾಗಿ ಮೂರನೇ ದಿನ ಅವಬೃತ ಸ್ನಾನ ಹಾಗೂ ಧ್ವಜ ಅವರೋಹಣ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಭಕ್ತಿಭಾವದಿಂದ ನೆರವೇರಿದವು.
ಸಾಂಪ್ರದಾಯಿಕ ವಾಡಿಕೆಯಂತೆ ಬೆಳಗಿನ ಜಾವ ವಿಶೇಷ ಪೂಜಾ ವಿಧಿವಿಧಾನಗಳೊಂದಿಗೆ ಅವಬೃತ ಪುಣ್ಯಸ್ನಾನ ಕಾರ್ಯಕ್ರಮ ಆಯೋಜಿಸಲಾಯಿತು. ಕಾವೇರಿ, ಕಪಿಲ ಮತ್ತು ಸ್ಪಟಿಕ ಸರೋವರಗಳ ತ್ರಿವೇಣಿ ಸಂಗಮದಲ್ಲಿ ಸುದರ್ಶನ ನರಸಿಂಹಸ್ವಾಮಿ ವಿಗ್ರಹವನ್ನು ಪ್ರತಿಷ್ಠಾಪಿಸಿ ವೇದಮಂತ್ರಗಳ ಮಧ್ಯೆ ಪೂಜೆಗಳು ನೆರವೇರಿಸಲಾಯಿತು. ಈ ವೇಳೆ ಹಾಲು, ಮೊಸರು, ಜೇನುತುಪ್ಪ ಸೇರಿದಂತೆ ವಿವಿಧ ದ್ರವ್ಯಗಳಿಂದ ಅಭಿಷೇಕ ಮಾಡಿ ದೇವರಿಗೆ ವಿಶೇಷ ಆರಾಧನೆ ಸಲ್ಲಿಸಲಾಯಿತು.
ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಭಕ್ತ ಮಹಾಶಯರು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿ ದೇವರ ದರ್ಶನ ಪಡೆದು ಭಕ್ತಿ ಭಾವ ಮೆರೆದರು. ಪೂಜಾ ವಿಧಿಗಳು ಪೂರ್ಣಗೊಂಡ ಬಳಿಕ ಧ್ವಜ ಅವರೋಹಣ ನಡೆಸುವ ಮೂಲಕ ಬ್ರಹ್ಮ ರಥೋತ್ಸವಕ್ಕೆ ಅಧಿಕೃತ ಸಮಾರೋಪ ದೊರಕಿತು.
ಸ್ಥಳೀಯರು ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಸಾವಿರಾರು ಭಕ್ತರು ಆಗಮಿಸಿ ಉತ್ಸವದಲ್ಲಿ ಭಾಗವಹಿಸಿದರು. ದೇವಸ್ಥಾನ ಆಡಳಿತ ಮಂಡಳಿ ಹಾಗೂ ಅರ್ಚಕರ ಮಾರ್ಗದರ್ಶನದಲ್ಲಿ ಕಾರ್ಯಕ್ರಮಗಳು ಶಿಸ್ತಿನಿಂದ ನೆರವೇರಿದವು. ಧಾರ್ಮಿಕ ಸಂಪ್ರದಾಯಗಳನ್ನು ಉಳಿಸಿಕೊಂಡು ಆಚರಿಸಲಾದ ಈ ಬ್ರಹ್ಮ ರಥೋತ್ಸವ ಭಕ್ತರಲ್ಲಿ ಆಧ್ಯಾತ್ಮಿಕ ಉತ್ಸಾಹವನ್ನು ಹೆಚ್ಚಿಸಿತು.
ಇಡೀ ಉತ್ಸವ ಅವಧಿಯಲ್ಲಿ ಭಕ್ತರಿಗೆ ಪ್ರಸಾದ ವಿತರಣೆ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿತ್ತು. ಭಕ್ತರ ಭಾರೀ ಉಪಸ್ಥಿತಿಯಿಂದ ತಿ.ನರಸೀಪುರ ತೀರ್ಥಕ್ಷೇತ್ರ ಭಕ್ತಿರಸದ ಸಾಗರವಾಗಿ ಕಂಗೊಳಿಸಿತು.
    user_ಹೊಂಗಿರಣ ನ್ಯೂಸ್
    ಹೊಂಗಿರಣ ನ್ಯೂಸ್
    Photographer Nanjangud, Mysuru•
    12 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    12 hrs ago
  • ಕ್ಷುಲ್ಲಕ ಕಾರಣಕ್ಕೆ ವಿಶೇಷ ಚೇತನನ ಮೇಲೆ ಹಲ್ಲೆ ಮಾಡಿರುವ ಘಟನೆ ನಂಜನಗೂಡು ತಾಲೂಕಿನ ತಗಡೂರು ಗ್ರಾಮದಲ್ಲಿ ನೆಡೆದಿದೆ. ಮುದ್ದು ಮಾದೇಗೌಡ (40) ಹಲ್ಲೆಗೊಳಗಾದ ವಿಶೇಷಚೇತನನಾಗಿದ್ದು ಸದ್ಯ ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಕಳೆದ ಮಾರ್ಚ್ 31ರಂದು ಮುದ್ದು ಮಾದೇಗೌಡ ಮೂರು ಚಕ್ರದ ಬೈಕಿನಲ್ಲಿ ಮನೆಗೆ ತೆರಳುತ್ತಿದ್ದರು ಈ ವೇಳೆ ಗ್ರಾಮದ ಬಸವಣ್ಣ ಎಂಬ ವ್ಯಕ್ತಿ ರಸ್ತೆಗೆ ಅಡ್ಡಲಾಗಿ ಮುಳ್ಳು ಹಾಕಿದ್ದ ರಸ್ತೆಗೆ ಅಡ್ಡಲಾಗಿ ಮುಳ್ಳು ಹಾಕಿರುವ ಬಗ್ಗೆ ಪ್ರಶ್ನಿಸಿದ್ದಕ್ಕೆ ವಿಶೇಷ ಚೇತನ ಎಂಬುದನ್ನ ನೋಡದೆ ವಾಹನ ಅಡ್ಡ ಹಾಕಿ ಬಸವಣ್ಣ ಹಲ್ಲೆ ಮಾಡಿರುವುದಾಗಿ ಆರೋಪಿಸಿದ್ದಾರೆ. ಈ ಸಂಬಂಧ ದೊಡ್ಡ ಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    1
    ಕ್ಷುಲ್ಲಕ ಕಾರಣಕ್ಕೆ ವಿಶೇಷ ಚೇತನನ ಮೇಲೆ ಹಲ್ಲೆ ಮಾಡಿರುವ ಘಟನೆ ನಂಜನಗೂಡು ತಾಲೂಕಿನ ತಗಡೂರು ಗ್ರಾಮದಲ್ಲಿ ನೆಡೆದಿದೆ.
ಮುದ್ದು ಮಾದೇಗೌಡ (40) ಹಲ್ಲೆಗೊಳಗಾದ ವಿಶೇಷಚೇತನನಾಗಿದ್ದು ಸದ್ಯ
ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಕಳೆದ ಮಾರ್ಚ್ 31ರಂದು ಮುದ್ದು ಮಾದೇಗೌಡ ಮೂರು ಚಕ್ರದ ಬೈಕಿನಲ್ಲಿ ಮನೆಗೆ ತೆರಳುತ್ತಿದ್ದರು ಈ ವೇಳೆ ಗ್ರಾಮದ ಬಸವಣ್ಣ ಎಂಬ ವ್ಯಕ್ತಿ ರಸ್ತೆಗೆ ಅಡ್ಡಲಾಗಿ ಮುಳ್ಳು ಹಾಕಿದ್ದ
ರಸ್ತೆಗೆ ಅಡ್ಡಲಾಗಿ ಮುಳ್ಳು ಹಾಕಿರುವ ಬಗ್ಗೆ ಪ್ರಶ್ನಿಸಿದ್ದಕ್ಕೆ 
ವಿಶೇಷ ಚೇತನ ಎಂಬುದನ್ನ ನೋಡದೆ ವಾಹನ ಅಡ್ಡ ಹಾಕಿ ಬಸವಣ್ಣ ಹಲ್ಲೆ ಮಾಡಿರುವುದಾಗಿ ಆರೋಪಿಸಿದ್ದಾರೆ.
ಈ ಸಂಬಂಧ ದೊಡ್ಡ ಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    user_Sandeep Kumar
    Sandeep Kumar
    Local News Reporter ಮೈಸೂರು, ಮೈಸೂರು, ಕರ್ನಾಟಕ•
    14 hrs ago
  • ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿ ಗೃಹದಲ್ಲಿ ನಡೆದ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಡಾ. ಬಿ. ಆರ್. ಅಂಬೇಡ್ಕರ್ ಅವರ ಜಯಂತಿ ಆಚರಣೆಯ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಶಾಸಕರು ಸಮಾಜದ ಜನರ ಒಪ್ಪಿಗೆಯಂತೆ ಸರ್ಕಾರದ ಮಾರ್ಗ ಸೂಚಿಯಂತೆ ಜಯಂತಿ ಆಚರಿಸಲು ತಿಳಿಸಿದ್ದು ಅದರಂತೆ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ ಮಾಡಲು ತೀರ್ಮಾನಿಸಲಾಗಿದೆ. ಎಂದರು. ಇದೇ ಸಂದರ್ಭದಲ್ಲಿ ತಹಸೀಲ್ದಾರ್ ಚೈತ್ರ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೆಶಕ ಕೇಶವಮೂರ್ತಿ, ಶಿಕ್ಷಣಾಧಿಕಾರಿ ಮಹೇಶ್, ಕಾವೇರಿ ನಿಗಮದ ಎಇಇ ಕರುಣಾಮಯಿ, ಪರಿಶಿಷ್ಟ ವರ್ಗ ಇಲಾಖೆ ರಾಜೇಶ್, ಪ.ಪಂ. ಮುಖ್ಯಾಧಿಕಾರಿ ರೇಖಾ,ಜಿ.ಪಂ ಎಇಇ ಕುಮಾರ್, ಸಿಡಿಪಿಒ ಅಂಬಿಕಾ, ಅಗ್ನಿಶಾಮಕ ಮಹೇಶ್,ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಪಾಳ್ಯ ರಾಚಪ್ಪ,ಸಮುದಾಯದ ಮುಖಂಡರಾದ ನಾಗರಾಜು,ಬಸವರಾಜು,ಸಿದ್ದರಾಜು, ಯಜಮಾನರಾದ ಮಹೇಶ್ ಕಿರಣ್, ದಲಿತ್ ಸಿದ್ದರಾಜು,ಲಿಂಗರಾಜು, ದೇವರಾಜು ಹಾಗೂ ಯುವಕರು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
    4
    ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿ ಗೃಹದಲ್ಲಿ ನಡೆದ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಡಾ. ಬಿ. ಆರ್. ಅಂಬೇಡ್ಕರ್ ಅವರ ಜಯಂತಿ ಆಚರಣೆಯ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಶಾಸಕರು ಸಮಾಜದ ಜನರ ಒಪ್ಪಿಗೆಯಂತೆ ಸರ್ಕಾರದ ಮಾರ್ಗ ಸೂಚಿಯಂತೆ ಜಯಂತಿ ಆಚರಿಸಲು ತಿಳಿಸಿದ್ದು ಅದರಂತೆ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ ಮಾಡಲು ತೀರ್ಮಾನಿಸಲಾಗಿದೆ. ಎಂದರು.
ಇದೇ ಸಂದರ್ಭದಲ್ಲಿ ತಹಸೀಲ್ದಾರ್  ಚೈತ್ರ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೆಶಕ ಕೇಶವಮೂರ್ತಿ, ಶಿಕ್ಷಣಾಧಿಕಾರಿ ಮಹೇಶ್, ಕಾವೇರಿ ನಿಗಮದ ಎಇಇ ಕರುಣಾಮಯಿ, ಪರಿಶಿಷ್ಟ ವರ್ಗ ಇಲಾಖೆ ರಾಜೇಶ್, ಪ.ಪಂ. ಮುಖ್ಯಾಧಿಕಾರಿ  ರೇಖಾ,ಜಿ.ಪಂ ಎಇಇ ಕುಮಾರ್, ಸಿಡಿಪಿಒ
ಅಂಬಿಕಾ, ಅಗ್ನಿಶಾಮಕ  ಮಹೇಶ್,ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಪಾಳ್ಯ ರಾಚಪ್ಪ,ಸಮುದಾಯದ
ಮುಖಂಡರಾದ ನಾಗರಾಜು,ಬಸವರಾಜು,ಸಿದ್ದರಾಜು, ಯಜಮಾನರಾದ ಮಹೇಶ್ ಕಿರಣ್, ದಲಿತ್ ಸಿದ್ದರಾಜು,ಲಿಂಗರಾಜು, ದೇವರಾಜು ಹಾಗೂ ಯುವಕರು ತಾಲೂಕು ಮಟ್ಟದ ಅಧಿಕಾರಿಗಳು  ಉಪಸ್ಥಿತರಿದ್ದರು.
    user_Vijay kumar
    Vijay kumar
    ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    20 hrs ago
  • ಮಳವಳ್ಳಿ ತಾಲೂಕಿನ ಹೊಸಳ್ಳಿ ಗ್ರಾಮದ ಶ್ರೀ ಸಿದ್ದ ಮಲ್ಲೇಶ್ವರ ಪಟ್ಟದ ಮಠದ ಪ್ರಾರ್ಥನಾ ಮಂದಿರ ದಾಸೋಹ ಭವನ ಲೋಕಾರ್ಪಣೆಗೆ ಕ್ಷಣಗಣನೆ ಮಳವಳ್ಳಿ ತಾಲೂಕಿನ ಹೊಸಳ್ಳಿ ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಸಿದ್ದಮಲ್ಲೇಶ್ವರ ಪ್ರಾರ್ಥನ ಮಂದಿರ ದಾಸೋಹ ಭವನ ಲೋಕಾರ್ಪಣೆಗೆ ಕ್ಷಣೆ ಗಣನೆ ಆರಂಭವಾಗಿದ್ದು ಸಂಪ್ರದಾಯ ಬದ್ಧ ಪೂಜಾ ಕಾರ್ಯಕ್ರಮಗಳು ಬರದಿಂದ ಸಾಗಿವೆ. ಏಪ್ರಿಲ್ 5 ರಂದು ಭಾನುವಾರ ಬೆಳಿಗ್ಗೆ 10:30 ಗಂಟೆಗೆ ಸುತ್ತೂರು ಸಿದ್ದಗಂಗಾ ಆದಿಚುಂಚನಗಿರಿ ಮಠಾಧೀಶರುಗಳ ದಿವ್ಯ ಸಾನಿಧ್ಯದಲ್ಲಿ ನಡೆಯಲಿರುವ ಧಾರ್ಮಿಕ ಸಭೆಯಲ್ಲಿ ರಾಜ್ಯ ಭಾಜಪ ಅಧ್ಯಕ್ಷ ಬಿವೈ ವಿಜಯೇಂದ್ರ ಪ್ರಾರ್ಥನಾ ಮಂದಿರವನ್ನು ದಾಸೋಹ ಭವನವನ್ನು ಲೋಕಾರ್ಪಣೆ ಮಾಡಲಿದ್ದು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ವಿ ಸೋಮಣ್ಣ ಶಾಸಕರಾದ ಸಿಎಂ ನರೇಂದ್ರಸ್ವಾಮಿ ಮಾಜಿ ಸಚಿವರು ಮಾಜಿ ಶಾಸಕರು ಮಾಜಿ ವಿಧಾನ ಪರಿಷತ್ ಸದಸ್ಯರು ಉದ್ಯಮಿಗಳು ರಾಜ್ಯದ ಹಲವು ಮಠಗಳ ಹರಗುರು ಚರ ಮೂರ್ತಿಗಳು ಭಾಗವಹಿಸಲಿದ್ದಾರೆ. ಈ ಧಾರ್ಮಿಕ ಕಾರ್ಯಕ್ರಮಕ್ಕೆ ಆಗಮಿಸುವ ಸಕಲ ಭಕ್ತರಿಗೂ ಪ್ರಸಾದ ವ್ಯವಸ್ಥೆಗೆ ಶನಿವಾರ ರಾತ್ರಿಯಿಂದಲೇ ಸಿದ್ಧತೆಗಳು ಜರುಗಿವೆ ಸಾವಿರಾರು ಜನರು ಭಾನುವಾರದ ಕಾರ್ಯಕ್ರಮಕ್ಕೆ ಸಿದ್ಧತೆ ನಡೆಸಿದ್ದಾರೆ ಬನ್ನಿ ನಾವು ಹೋಗೋಣ ಹೊಸಹಳ್ಳಿ ಶ್ರೀ ಸಿದ್ದ ಮಲ್ಲೇಶ್ವರ ಪಟ್ಟದ ಮಠದ ಧಾರ್ಮಿಕ ಮಹೋತ್ಸವಕ್ಕೆ ಗುರು ಕೃಪೆಗೆ ಪಾತ್ರರಾಗೋಣ ಶರಣು ಬನ್ನಿ
    1
    ಮಳವಳ್ಳಿ ತಾಲೂಕಿನ ಹೊಸಳ್ಳಿ ಗ್ರಾಮದ ಶ್ರೀ ಸಿದ್ದ ಮಲ್ಲೇಶ್ವರ ಪಟ್ಟದ ಮಠದ ಪ್ರಾರ್ಥನಾ ಮಂದಿರ ದಾಸೋಹ ಭವನ ಲೋಕಾರ್ಪಣೆಗೆ ಕ್ಷಣಗಣನೆ
ಮಳವಳ್ಳಿ ತಾಲೂಕಿನ ಹೊಸಳ್ಳಿ ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಸಿದ್ದಮಲ್ಲೇಶ್ವರ ಪ್ರಾರ್ಥನ ಮಂದಿರ ದಾಸೋಹ ಭವನ ಲೋಕಾರ್ಪಣೆಗೆ ಕ್ಷಣೆ ಗಣನೆ ಆರಂಭವಾಗಿದ್ದು ಸಂಪ್ರದಾಯ ಬದ್ಧ ಪೂಜಾ ಕಾರ್ಯಕ್ರಮಗಳು ಬರದಿಂದ  ಸಾಗಿವೆ.
ಏಪ್ರಿಲ್ 5 ರಂದು ಭಾನುವಾರ ಬೆಳಿಗ್ಗೆ 10:30 ಗಂಟೆಗೆ ಸುತ್ತೂರು ಸಿದ್ದಗಂಗಾ ಆದಿಚುಂಚನಗಿರಿ ಮಠಾಧೀಶರುಗಳ ದಿವ್ಯ ಸಾನಿಧ್ಯದಲ್ಲಿ ನಡೆಯಲಿರುವ ಧಾರ್ಮಿಕ ಸಭೆಯಲ್ಲಿ ರಾಜ್ಯ ಭಾಜಪ ಅಧ್ಯಕ್ಷ ಬಿವೈ ವಿಜಯೇಂದ್ರ ಪ್ರಾರ್ಥನಾ ಮಂದಿರವನ್ನು ದಾಸೋಹ ಭವನವನ್ನು ಲೋಕಾರ್ಪಣೆ ಮಾಡಲಿದ್ದು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ವಿ ಸೋಮಣ್ಣ ಶಾಸಕರಾದ ಸಿಎಂ ನರೇಂದ್ರಸ್ವಾಮಿ ಮಾಜಿ ಸಚಿವರು ಮಾಜಿ ಶಾಸಕರು ಮಾಜಿ ವಿಧಾನ ಪರಿಷತ್ ಸದಸ್ಯರು ಉದ್ಯಮಿಗಳು ರಾಜ್ಯದ ಹಲವು ಮಠಗಳ ಹರಗುರು ಚರ ಮೂರ್ತಿಗಳು ಭಾಗವಹಿಸಲಿದ್ದಾರೆ.
ಈ ಧಾರ್ಮಿಕ ಕಾರ್ಯಕ್ರಮಕ್ಕೆ ಆಗಮಿಸುವ ಸಕಲ ಭಕ್ತರಿಗೂ ಪ್ರಸಾದ ವ್ಯವಸ್ಥೆಗೆ ಶನಿವಾರ ರಾತ್ರಿಯಿಂದಲೇ ಸಿದ್ಧತೆಗಳು ಜರುಗಿವೆ ಸಾವಿರಾರು ಜನರು ಭಾನುವಾರದ ಕಾರ್ಯಕ್ರಮಕ್ಕೆ ಸಿದ್ಧತೆ ನಡೆಸಿದ್ದಾರೆ ಬನ್ನಿ ನಾವು ಹೋಗೋಣ ಹೊಸಹಳ್ಳಿ ಶ್ರೀ ಸಿದ್ದ ಮಲ್ಲೇಶ್ವರ ಪಟ್ಟದ ಮಠದ ಧಾರ್ಮಿಕ ಮಹೋತ್ಸವಕ್ಕೆ ಗುರು ಕೃಪೆಗೆ ಪಾತ್ರರಾಗೋಣ ಶರಣು ಬನ್ನಿ
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    ಮಳವಳ್ಳಿ, ಮಂಡ್ಯ, ಕರ್ನಾಟಕ•
    11 hrs ago
  • ಹನೂರು :ತಾಲ್ಲೂಕಿನ ಬಂಡಳ್ಳಿ ಗ್ರಾಮದ ಅಂಬೇಡ್ಕರ್ ಸಮುದಾಯ ಭವನ ಆವರಣ ಏರ್ಪಡಿಸಿದ್ದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಕ್ಷೇತ್ರದ ಪ್ರತಿ ಗ್ರಾಮಗಳಲ್ಲಿ ಬದುಕು ಸಾಗಿಸುತ್ತಿರುವ ಸೂರು ಇಲ್ಲದ ಫಲಾನುಭವಿಗಳನ್ನು ಗುರುತಿಸಿ ಮನೆ ಒದಗಿಸುವ ಕೆಲಸಗಳು ಆಗಬೇಕು. ಜೊತೆಗೆ ಕಷ್ಟಕರವಾದ ಜೀವನದಲ್ಲಿ ದುಡಿಮೆಗಾಗಿ ವಲಸೆ ಹೋಗಿ ಬೇರ್ಪಟ್ಟಿರುವ ಕುಟುಂಬಗಳಿಗೆ ಆದಾಯದ ಮೂಲ ತೋರಿಸುವ ಮೂಲಕ ಸ್ವ ಗ್ರಾಮದಲ್ಲಿ ನೆಲೆಯಿರುವಂತೆ ಮಾಡಬೇಕು. ಅದಕ್ಕಾಗಿ ಜನರಿಗೆ ಉಧ್ಯೋಗ ಕೂಲಿ ದೊರೆಯುವ ಲಾಭ ದಾಯಕವಾದ ಹೈನುಗಾರಿಕೆ ಕೃಷಿ ವ್ಯವಸಾಯಗಳಿಗೆ ಅನುಕೂಲವಾಗುವಂತಹ ಮಾರ್ಗೋಪಾಯಗಳನ್ನು ಕಂಡುಕೊಳ್ಳುವ ಕೆಲಸ ಮಾಡಲಾಗುತ್ತಿದೆ ಮುಂದಿನ ದಿನಗಳಲ್ಲಿ ರೈತರಿಗೆ ಅಗತ್ಯವಾಗಿ ನೀರು ವಿದ್ಯುತ್ ರಸ್ತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕೆಲಸ ಮಾಡಲಾಗುತ್ತದೆ. ಸರ್ಕಾರದ ಸಾಲ ಸೌಲಭ್ಯಗಳು ಸುಲಲಿತವಾಗಿ ದೊರೆತಾಗ ಜನರು ಬದುಕು ಕಟ್ಟಿಕೊಳ್ಳಲು ಸಹಾಯವಾಗುತ್ತದೆ. ಎಂದರು ಗ್ರಾಮ ಪಂಚಾಯ್ತಿ ಮಾಜಿ ಸದಸ್ಯ ನಾಗಯ್ಯ ಮಾತನಾಡಿ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಸದಾ ಚಿಂತನೆ ಮಾಡುತ್ತಿರುವ ಶಾಸಕ ಎಂಆರ್ ಮಂಜುನಾಥ್ ರವರ ಜನಪರ ಸೇವಾ ಕಾರ್ಯಗಳನ್ನು ಮತ್ತು ಜನರ ಬಗ್ಗೆ ಅವರು ವಹಿಸುತ್ತಿದ್ದ ಕಾಳಜಿಯ ಒಂದು ನೋಟ ನನ್ನ ಮನಸ್ಸು ಪರಿವರ್ತನೆಗೆ ಕಾರಣವಾಗಿದ್ದು ಇಂದು ನಾನು ಬಿಜೆಪಿ ಪಕ್ಷವನ್ನು ತೆರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ ಆಗುತ್ತಿದ್ದೇನೆಂದು ತಿಳಿಸಿದರು. ಈ ವೇಳೆ ಬಂಡಳ್ಳಿ ಗ್ರಾಮದ ನಾಗಯ್ಯ ಮಹದೇವು ಪುಟ್ಟಸ್ವಾಮಿ ಕುಳ್ಳ ವೀರಯ್ಯ ಅಣಗಳ್ಳಿದೊಡ್ಡಿ ನಾಗರಾಜು ಭರತ್ ಹರೀಶ ಮಂಗಳಮ್ಮ ಮಹೇಂದ್ರ ಸೇರಿದಂತೆ 60 ಕ್ಕೂ ಹೆಚ್ಚು ಮಂದಿ ಮುಖಂಡರು ಮಹಿಳೆಯರು ಬಿಜೆಪಿ ಕಾಂಗ್ರೆಸ್ ಪಕ್ಷ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು. ಇದೆ ಸಮಯದಲ್ಲಿ ಶಂಕರಪ್ಪ,ತಿರುಪತಿ, ಸಮೀವುಳ್ಳ, ಮಂಜೇಶ್,ಶುವಣಪ್ಪ,ಉದ್ದನೂರು ಗಿರೀಶ್, ಅಣಗಳ್ಳಿ ಚಂದ್ರು, ಮಾದೇಶ್,ಕುಳ್ಳವಿರಯ್ಯ,ಶಿವರಾಜು,ಹುಚ್ಚಯ್ಯ,ಎಸ್ ಆರ್ ಮಹದೇವ್, ನಟರಾಜು ಜೇಸಿಮ್ ಪಾಷ, ಜವಾದ್,ಗೋಪಾಲ್ ನಾಯಕ,ಚಿನ್ನವೆಂಕಟ್,ಡಿ ಕೆ ರಾಜು, ಗೋವಿಂದ, ವೆಂಕಟೇಶ್,ಪ್ರಮೋದ್,ಸೇರಿದಂತೆ ಗ್ರಾಮಸ್ಥರು ಸಮುದಾಯದ ಮುಖಂಡರುಗಳು ಇದ್ದರು..
    4
    ಹನೂರು :ತಾಲ್ಲೂಕಿನ ಬಂಡಳ್ಳಿ ಗ್ರಾಮದ ಅಂಬೇಡ್ಕರ್ ಸಮುದಾಯ ಭವನ ಆವರಣ ಏರ್ಪಡಿಸಿದ್ದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಕ್ಷೇತ್ರದ ಪ್ರತಿ ಗ್ರಾಮಗಳಲ್ಲಿ ಬದುಕು ಸಾಗಿಸುತ್ತಿರುವ ಸೂರು ಇಲ್ಲದ ಫಲಾನುಭವಿಗಳನ್ನು ಗುರುತಿಸಿ ಮನೆ ಒದಗಿಸುವ ಕೆಲಸಗಳು ಆಗಬೇಕು. ಜೊತೆಗೆ ಕಷ್ಟಕರವಾದ ಜೀವನದಲ್ಲಿ ದುಡಿಮೆಗಾಗಿ ವಲಸೆ ಹೋಗಿ ಬೇರ್ಪಟ್ಟಿರುವ  ಕುಟುಂಬಗಳಿಗೆ ಆದಾಯದ ಮೂಲ ತೋರಿಸುವ ಮೂಲಕ ಸ್ವ ಗ್ರಾಮದಲ್ಲಿ ನೆಲೆಯಿರುವಂತೆ ಮಾಡಬೇಕು. 
ಅದಕ್ಕಾಗಿ ಜನರಿಗೆ ಉಧ್ಯೋಗ ಕೂಲಿ ದೊರೆಯುವ ಲಾಭ ದಾಯಕವಾದ ಹೈನುಗಾರಿಕೆ ಕೃಷಿ ವ್ಯವಸಾಯಗಳಿಗೆ ಅನುಕೂಲವಾಗುವಂತಹ ಮಾರ್ಗೋಪಾಯಗಳನ್ನು ಕಂಡುಕೊಳ್ಳುವ ಕೆಲಸ ಮಾಡಲಾಗುತ್ತಿದೆ ಮುಂದಿನ ದಿನಗಳಲ್ಲಿ ರೈತರಿಗೆ ಅಗತ್ಯವಾಗಿ ನೀರು ವಿದ್ಯುತ್ ರಸ್ತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕೆಲಸ ಮಾಡಲಾಗುತ್ತದೆ. ಸರ್ಕಾರದ ಸಾಲ ಸೌಲಭ್ಯಗಳು ಸುಲಲಿತವಾಗಿ ದೊರೆತಾಗ ಜನರು ಬದುಕು ಕಟ್ಟಿಕೊಳ್ಳಲು  
ಸಹಾಯವಾಗುತ್ತದೆ. ಎಂದರು
ಗ್ರಾಮ ಪಂಚಾಯ್ತಿ ಮಾಜಿ ಸದಸ್ಯ ನಾಗಯ್ಯ ಮಾತನಾಡಿ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಸದಾ ಚಿಂತನೆ ಮಾಡುತ್ತಿರುವ ಶಾಸಕ ಎಂಆರ್ ಮಂಜುನಾಥ್ ರವರ ಜನಪರ ಸೇವಾ ಕಾರ್ಯಗಳನ್ನು ಮತ್ತು ಜನರ ಬಗ್ಗೆ ಅವರು ವಹಿಸುತ್ತಿದ್ದ ಕಾಳಜಿಯ ಒಂದು ನೋಟ ನನ್ನ ಮನಸ್ಸು ಪರಿವರ್ತನೆಗೆ ಕಾರಣವಾಗಿದ್ದು ಇಂದು ನಾನು ಬಿಜೆಪಿ ಪಕ್ಷವನ್ನು ತೆರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ ಆಗುತ್ತಿದ್ದೇನೆಂದು ತಿಳಿಸಿದರು.
ಈ ವೇಳೆ ಬಂಡಳ್ಳಿ ಗ್ರಾಮದ ನಾಗಯ್ಯ ಮಹದೇವು ಪುಟ್ಟಸ್ವಾಮಿ ಕುಳ್ಳ ವೀರಯ್ಯ ಅಣಗಳ್ಳಿದೊಡ್ಡಿ ನಾಗರಾಜು ಭರತ್ ಹರೀಶ ಮಂಗಳಮ್ಮ ಮಹೇಂದ್ರ ಸೇರಿದಂತೆ 60 ಕ್ಕೂ ಹೆಚ್ಚು ಮಂದಿ ಮುಖಂಡರು ಮಹಿಳೆಯರು ಬಿಜೆಪಿ ಕಾಂಗ್ರೆಸ್ ಪಕ್ಷ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.
ಇದೆ ಸಮಯದಲ್ಲಿ ಶಂಕರಪ್ಪ,ತಿರುಪತಿ, ಸಮೀವುಳ್ಳ, ಮಂಜೇಶ್,ಶುವಣಪ್ಪ,ಉದ್ದನೂರು ಗಿರೀಶ್, ಅಣಗಳ್ಳಿ ಚಂದ್ರು, ಮಾದೇಶ್,ಕುಳ್ಳವಿರಯ್ಯ,ಶಿವರಾಜು,ಹುಚ್ಚಯ್ಯ,ಎಸ್ ಆರ್ ಮಹದೇವ್, ನಟರಾಜು ಜೇಸಿಮ್ ಪಾಷ, ಜವಾದ್,ಗೋಪಾಲ್ ನಾಯಕ,ಚಿನ್ನವೆಂಕಟ್,ಡಿ ಕೆ ರಾಜು, ಗೋವಿಂದ, ವೆಂಕಟೇಶ್,ಪ್ರಮೋದ್,ಸೇರಿದಂತೆ ಗ್ರಾಮಸ್ಥರು ಸಮುದಾಯದ ಮುಖಂಡರುಗಳು ಇದ್ದರು..
    user_ಉಸ್ಮಾನ್ ಖಾನ್
    ಉಸ್ಮಾನ್ ಖಾನ್
    Local News Reporter ಹನೂರು, ಚಾಮರಾಜನಗರ, ಕರ್ನಾಟಕ•
    12 hrs ago
  • ಹನೂರು: ಡಾ. ಬಿ. ಆರ್. ಅಂಬೇಡ್ಕರ್ ಜಯಂತಿಯನ್ನು ಏಪ್ರಿಲ್ 14ರಂದು ಅತ್ಯಂತ ವಿಜೃಂಭಣೆಯಿಂದ ಆಚರಿಸಲು ಸಮುದಾಯದ ಮುಖಂಡರು ಸಲಹೆ, ಸೂಚನೆ ನೀಡಿ ಸಹಕರಿಸಬೇಕು ಎಂದು ಶಾಸಕ ಎಂ.ಆರ್. ಮಂಜುನಾಥ್ ತಿಳಿಸಿದ್ದಾರೆ. ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿಗೃಹದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, “ಜಯಂತಿ ಕಾರ್ಯಕ್ರಮ ಕೇವಲ ಆಚರಣೆಗೆ ಸೀಮಿತವಾಗದೆ, ಸಮಾಜದ ಮಾರ್ಗದರ್ಶನವನ್ನು ಪಾಲನೆ ಮಾಡುವ ಮೂಲಕ ಮಾತ್ರ ಇದರ ಅರ್ಥ ಸಿಗುತ್ತದೆ. ವಿವಿಧ ಗ್ರಾಮಗಳಿಂದ ಬಂದಿರುವ ಯಜಮಾನರು, ಸಮುದಾಯ ಮುಖಂಡರು ಸಲಹೆ ನೀಡಿ ಕಾರ್ಯಕ್ರಮ ಯಶಸ್ವಿಯಾಗಲಿ” ಎಂದರು. ಸಭೆಯಲ್ಲಿ ತಾಲೂಕು ತಹಶೀಲ್ದಾರ್ ಚೈತ್ರ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಕೇಶವಮೂರ್ತಿ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರೇಖಾ, ಬಿ.ಇ.ಒ ಮಹೇಶ್, ಸಿಡಿಪಿಒ ಅಂಬಿಕಾ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಸೇರಿದಂತೆ ಹಲವು ಅಧಿಕಾರಿಗಳು ಮತ್ತು ವಿವಿಧ ಗ್ರಾಮಗಳ ಸಮುದಾಯ ಮುಖಂಡರು ಉಪಸ್ಥಿತರಿದ್ದರು
    1
    ಹನೂರು:
ಡಾ. ಬಿ. ಆರ್. ಅಂಬೇಡ್ಕರ್ ಜಯಂತಿಯನ್ನು ಏಪ್ರಿಲ್ 14ರಂದು ಅತ್ಯಂತ ವಿಜೃಂಭಣೆಯಿಂದ ಆಚರಿಸಲು ಸಮುದಾಯದ ಮುಖಂಡರು ಸಲಹೆ, ಸೂಚನೆ ನೀಡಿ ಸಹಕರಿಸಬೇಕು ಎಂದು ಶಾಸಕ ಎಂ.ಆರ್. ಮಂಜುನಾಥ್ ತಿಳಿಸಿದ್ದಾರೆ.
ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿಗೃಹದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, “ಜಯಂತಿ ಕಾರ್ಯಕ್ರಮ ಕೇವಲ ಆಚರಣೆಗೆ ಸೀಮಿತವಾಗದೆ, ಸಮಾಜದ ಮಾರ್ಗದರ್ಶನವನ್ನು ಪಾಲನೆ ಮಾಡುವ ಮೂಲಕ ಮಾತ್ರ ಇದರ ಅರ್ಥ ಸಿಗುತ್ತದೆ. ವಿವಿಧ ಗ್ರಾಮಗಳಿಂದ ಬಂದಿರುವ ಯಜಮಾನರು, ಸಮುದಾಯ ಮುಖಂಡರು ಸಲಹೆ ನೀಡಿ ಕಾರ್ಯಕ್ರಮ ಯಶಸ್ವಿಯಾಗಲಿ” ಎಂದರು.
ಸಭೆಯಲ್ಲಿ ತಾಲೂಕು ತಹಶೀಲ್ದಾರ್ ಚೈತ್ರ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಕೇಶವಮೂರ್ತಿ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರೇಖಾ, ಬಿ.ಇ.ಒ ಮಹೇಶ್, ಸಿಡಿಪಿಒ ಅಂಬಿಕಾ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಸೇರಿದಂತೆ ಹಲವು ಅಧಿಕಾರಿಗಳು ಮತ್ತು ವಿವಿಧ ಗ್ರಾಮಗಳ ಸಮುದಾಯ ಮುಖಂಡರು ಉಪಸ್ಥಿತರಿದ್ದರು
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Farmer ಹನೂರು, ಚಾಮರಾಜನಗರ, ಕರ್ನಾಟಕ•
    18 hrs ago
  • ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹಲವೆಡೆ ಮಳೆ ಉಂಟಾಗಿದ್ದು ಬಿರು ಬಿಸಿಲಿಗೆ ಮಳೆರಾಯ ತಂಪೆರೆದಿದ್ದಾನೆ. ನಗರದ ಕುವೆಂಪು ನಗರ, ವಿದ್ಯಾರಣ್ಯಪುರಂ, ಅಗ್ರಹಾರ, ಚಾಮುಂಡಿಪುರಂ ಸೇರಿದಂತೆ ಹಲವೆಡೆ ಸುರಿದ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದ್ದು ಪಾದಚಾರಿಗಳು ಪರದಾಟ ಅನುಭವಿಸಿದ್ದಾರೆ.
    1
    ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹಲವೆಡೆ ಮಳೆ ಉಂಟಾಗಿದ್ದು ಬಿರು ಬಿಸಿಲಿಗೆ  ಮಳೆರಾಯ ತಂಪೆರೆದಿದ್ದಾನೆ.
ನಗರದ ಕುವೆಂಪು  ನಗರ, ವಿದ್ಯಾರಣ್ಯಪುರಂ, ಅಗ್ರಹಾರ, ಚಾಮುಂಡಿಪುರಂ ಸೇರಿದಂತೆ ಹಲವೆಡೆ ಸುರಿದ ಮಳೆಗೆ  ಜನ ಜೀವನ ಅಸ್ತವ್ಯಸ್ತವಾಗಿದ್ದು ಪಾದಚಾರಿಗಳು ಪರದಾಟ ಅನುಭವಿಸಿದ್ದಾರೆ.
    user_Sandeep Kumar
    Sandeep Kumar
    Local News Reporter ಮೈಸೂರು, ಮೈಸೂರು, ಕರ್ನಾಟಕ•
    15 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.