ಜೈಲಿನಲ್ಲೂ ಮೊಬೈಲ್ ಬಳಕೆ ಆರೋಪ: ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ 7 ಮಂದಿ ವಿರುದ್ಧ ಎಫ್ಐಆರ್ ಬೆಂಗಳೂರು, ಸೆ.14: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಂಡಿದೆ. ಜೈಲಿನೊಳಗೆ ಮೊಬೈಲ್ ತಲುಪಿಸಲು ನೆರವಾದ ಆರೋಪದಲ್ಲಿ ಜೈಲ್ ವಾರ್ಡನ್ ಸೇರಿದಂತೆ ಒಟ್ಟು ಏಳು ಮಂದಿಯ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಜೈಲಿನ ಬ್ಯಾರಕ್ನಲ್ಲಿ ಮೊಬೈಲ್ ಬಳಕೆಯ ಮಾಹಿತಿ ಬಹಿರಂಗವಾದ ಬಳಿಕ ಪೊಲೀಸರು ಮೊಬೈಲ್ ಫೋನ್ ಹಾಗೂ ಸಿಮ್ ಕಾರ್ಡ್ನ ಮೂಲದ ಕುರಿತು ತನಿಖೆ ಆರಂಭಿಸಿದ್ದರು. ಈ ವೇಳೆ ಪ್ರಕರಣಕ್ಕೆ ಕೆ.ಜಿ. ಹಳ್ಳಿ–ಡಿಜೆ ಹಳ್ಳಿ ಗಲಭೆ ಪ್ರಕರಣದ ಆರೋಪಿಗಳ ಸಂಪರ್ಕವೂ ಇರುವುದಾಗಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎನ್ನಲಾಗಿದೆ. ತನಿಖೆಯ ಪ್ರಕಾರ, ಜೈಲಿನಲ್ಲಿ ಪರಿಚಯವಾಗಿದ್ದ ತೌಫಿಕ್ ಎಂಬಾತ ಅನಾರೋಗ್ಯದ ನೆಪದಲ್ಲಿ ಜಯನಗರ ಆಸ್ಪತ್ರೆಗೆ ದಾಖಲಾಗಿದ್ದ ಸಂದರ್ಭದಲ್ಲಿ ಮೊಬೈಲ್ ಖರೀದಿಸಿದ್ದಾನೆ ಎನ್ನಲಾಗಿದೆ. ಬಳಿಕ ಸಿದ್ದಿಕ್ ಹೆಸರಿನಲ್ಲಿ ಸಿಮ್ ಕಾರ್ಡ್ ಪಡೆದು ಅದನ್ನು ಜೈಲಿನೊಳಗೆ ತಲುಪಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ₹1 ಲಕ್ಷಕ್ಕೆ ಮೊಬೈಲ್, ₹50 ಸಾವಿರಕ್ಕೆ ಸಿಮ್? ಪ್ರಜ್ವಲ್ ರೇವಣ್ಣ ಅವರು ಮೊಬೈಲ್ಗೆ ಸುಮಾರು ₹1 ಲಕ್ಷ ಹಾಗೂ ಸಿಮ್ ಕಾರ್ಡ್ಗೆ ₹50 ಸಾವಿರ ಪಾವತಿಸಿದ್ದರೆಂಬ ಮಾಹಿತಿ ತನಿಖೆಯಲ್ಲಿ ಹೊರಬಂದಿದೆ ಎಂದು ಹೇಳಲಾಗಿದೆ. ಆಂಧ್ರಪ್ರದೇಶದ ಪುಂಗನೂರಿನಲ್ಲಿ ಸಿಮ್ ಕಾರ್ಡ್ ಖರೀದಿಸಲಾಗಿತ್ತು ಎನ್ನಲಾಗಿದೆ. ಜಪ್ತಿ ಮಾಡಲಾದ ಸಿಮ್ನ ಕಾಲ್ ಡಿಟೇಲ್ಸ್ (CDR) ಪರಿಶೀಲನೆ ನಡೆಸಿದಾಗ ಜೈಲಿನಿಂದಲೇ ಹಲವು ಮಂದಿಗೆ, ಕುಟುಂಬಸ್ಥರಿಗೆ ಕರೆ ಮಾಡಿರುವ ಮಾಹಿತಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮೊಬೈಲ್ ಮೂಲಕ ಸಂಪರ್ಕದಲ್ಲಿದ್ದವರನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆಯೂ ಇದೆ. ಮೊಬೈಲ್ನಲ್ಲಿ 173 ವೀಡಿಯೋಗಳ ಪತ್ತೆ ಇದೇ ವೇಳೆ ಜಪ್ತಿ ಮಾಡಲಾದ ಮೊಬೈಲ್ನಲ್ಲಿ ಸುಮಾರು 173 ಅಶ್ಲೀಲ ವೀಡಿಯೋಗಳು ಸೇರಿದಂತೆ ಹಳೆಯ ವೀಡಿಯೋಗಳು ಸಂಗ್ರಹವಾಗಿದ್ದವು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ ಎನ್ನಲಾಗಿದೆ. ಈ ಪ್ರಕರಣದಲ್ಲಿ ಜೈಲ್ ವಾರ್ಡನ್ ಸೇರಿದಂತೆ ಪ್ರತಾಪ್ ರಾವ್, ತೌಸಿಪ್, ಸಿದ್ದಿಕ್, ಪ್ರಕಾಶ್, ಮಂಜುನಾಥ್ ಸೇರಿದಂತೆ ಏಳು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ. ಪ್ರಕರಣದ ತನಿಖೆ ಪೂರ್ಣಗೊಂಡ ಬಳಿಕ ಮೊಬೈಲ್ ಜೈಲಿನೊಳಗೆ ಹೇಗೆ ತಲುಪಿತು, ಯಾರು ಯಾರು ಸಹಕರಿಸಿದರು ಹಾಗೂ ಹಣಕಾಸಿನ ವ್ಯವಹಾರ ಹೇಗೆ ನಡೆದಿದೆ ಎಂಬ ಕುರಿತು ಮತ್ತಷ್ಟು ಮಾಹಿತಿ ಹೊರಬರುವ ನಿರೀಕ್ಷೆಯಿದೆ.
ಜೈಲಿನಲ್ಲೂ ಮೊಬೈಲ್ ಬಳಕೆ ಆರೋಪ: ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ 7 ಮಂದಿ ವಿರುದ್ಧ ಎಫ್ಐಆರ್ ಬೆಂಗಳೂರು, ಸೆ.14: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಂಡಿದೆ. ಜೈಲಿನೊಳಗೆ ಮೊಬೈಲ್ ತಲುಪಿಸಲು ನೆರವಾದ ಆರೋಪದಲ್ಲಿ ಜೈಲ್ ವಾರ್ಡನ್ ಸೇರಿದಂತೆ ಒಟ್ಟು ಏಳು ಮಂದಿಯ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಜೈಲಿನ ಬ್ಯಾರಕ್ನಲ್ಲಿ ಮೊಬೈಲ್ ಬಳಕೆಯ ಮಾಹಿತಿ ಬಹಿರಂಗವಾದ ಬಳಿಕ ಪೊಲೀಸರು ಮೊಬೈಲ್ ಫೋನ್ ಹಾಗೂ ಸಿಮ್ ಕಾರ್ಡ್ನ ಮೂಲದ ಕುರಿತು ತನಿಖೆ ಆರಂಭಿಸಿದ್ದರು. ಈ ವೇಳೆ ಪ್ರಕರಣಕ್ಕೆ ಕೆ.ಜಿ. ಹಳ್ಳಿ–ಡಿಜೆ ಹಳ್ಳಿ ಗಲಭೆ ಪ್ರಕರಣದ ಆರೋಪಿಗಳ ಸಂಪರ್ಕವೂ ಇರುವುದಾಗಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎನ್ನಲಾಗಿದೆ. ತನಿಖೆಯ ಪ್ರಕಾರ, ಜೈಲಿನಲ್ಲಿ ಪರಿಚಯವಾಗಿದ್ದ ತೌಫಿಕ್ ಎಂಬಾತ ಅನಾರೋಗ್ಯದ ನೆಪದಲ್ಲಿ ಜಯನಗರ ಆಸ್ಪತ್ರೆಗೆ ದಾಖಲಾಗಿದ್ದ ಸಂದರ್ಭದಲ್ಲಿ ಮೊಬೈಲ್ ಖರೀದಿಸಿದ್ದಾನೆ ಎನ್ನಲಾಗಿದೆ. ಬಳಿಕ ಸಿದ್ದಿಕ್ ಹೆಸರಿನಲ್ಲಿ ಸಿಮ್ ಕಾರ್ಡ್ ಪಡೆದು ಅದನ್ನು ಜೈಲಿನೊಳಗೆ ತಲುಪಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ₹1 ಲಕ್ಷಕ್ಕೆ ಮೊಬೈಲ್, ₹50 ಸಾವಿರಕ್ಕೆ ಸಿಮ್? ಪ್ರಜ್ವಲ್ ರೇವಣ್ಣ ಅವರು ಮೊಬೈಲ್ಗೆ ಸುಮಾರು ₹1 ಲಕ್ಷ ಹಾಗೂ ಸಿಮ್ ಕಾರ್ಡ್ಗೆ ₹50 ಸಾವಿರ ಪಾವತಿಸಿದ್ದರೆಂಬ ಮಾಹಿತಿ ತನಿಖೆಯಲ್ಲಿ ಹೊರಬಂದಿದೆ ಎಂದು ಹೇಳಲಾಗಿದೆ. ಆಂಧ್ರಪ್ರದೇಶದ ಪುಂಗನೂರಿನಲ್ಲಿ ಸಿಮ್ ಕಾರ್ಡ್ ಖರೀದಿಸಲಾಗಿತ್ತು ಎನ್ನಲಾಗಿದೆ. ಜಪ್ತಿ ಮಾಡಲಾದ ಸಿಮ್ನ ಕಾಲ್ ಡಿಟೇಲ್ಸ್ (CDR) ಪರಿಶೀಲನೆ ನಡೆಸಿದಾಗ ಜೈಲಿನಿಂದಲೇ ಹಲವು ಮಂದಿಗೆ, ಕುಟುಂಬಸ್ಥರಿಗೆ ಕರೆ ಮಾಡಿರುವ ಮಾಹಿತಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮೊಬೈಲ್ ಮೂಲಕ ಸಂಪರ್ಕದಲ್ಲಿದ್ದವರನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆಯೂ ಇದೆ. ಮೊಬೈಲ್ನಲ್ಲಿ 173 ವೀಡಿಯೋಗಳ ಪತ್ತೆ ಇದೇ ವೇಳೆ ಜಪ್ತಿ ಮಾಡಲಾದ ಮೊಬೈಲ್ನಲ್ಲಿ ಸುಮಾರು 173 ಅಶ್ಲೀಲ ವೀಡಿಯೋಗಳು ಸೇರಿದಂತೆ ಹಳೆಯ ವೀಡಿಯೋಗಳು ಸಂಗ್ರಹವಾಗಿದ್ದವು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ ಎನ್ನಲಾಗಿದೆ. ಈ ಪ್ರಕರಣದಲ್ಲಿ ಜೈಲ್ ವಾರ್ಡನ್ ಸೇರಿದಂತೆ ಪ್ರತಾಪ್ ರಾವ್, ತೌಸಿಪ್, ಸಿದ್ದಿಕ್, ಪ್ರಕಾಶ್, ಮಂಜುನಾಥ್ ಸೇರಿದಂತೆ ಏಳು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ. ಪ್ರಕರಣದ ತನಿಖೆ ಪೂರ್ಣಗೊಂಡ ಬಳಿಕ ಮೊಬೈಲ್ ಜೈಲಿನೊಳಗೆ ಹೇಗೆ ತಲುಪಿತು, ಯಾರು ಯಾರು ಸಹಕರಿಸಿದರು ಹಾಗೂ ಹಣಕಾಸಿನ ವ್ಯವಹಾರ ಹೇಗೆ ನಡೆದಿದೆ ಎಂಬ ಕುರಿತು ಮತ್ತಷ್ಟು ಮಾಹಿತಿ ಹೊರಬರುವ ನಿರೀಕ್ಷೆಯಿದೆ.
- ಸೈದಾಪುರ ಎಪಿಎಂಸಿಯಲ್ಲಿ ಮೂಲಸೌಕರ್ಯಗಳು ಒದಗಿಸಿ-ಉಮೇಶ್ ಮುದ್ನಾಳ ಆಗ್ರಹ ಸೈದಾಪೂರ ದನಗಳ, ಕುರಿ, ಆಡಳು, ಕೋಳಿ ಸಂತೆ ಪ್ರಾರಂಭ ಮಾಡಿ, ಆ ಸ್ಥಳದಲ್ಲಿ ಕುಡಿಯುವ ನೀರು ಮತ್ತು ರೈತರಿಗೆ ಮೂಲಭೂತ ಸೌಕರ್ಯಗಳು ಒದಗಿಸಲು ಉಮೇಶ ಮುದ್ನಾಳ ಆಗ್ರಹ, ಜಿಲ್ಲಾಡಳಿತಕ್ಕೆ ಒಂದು ವಾರದ ಗಡುವು. ಸೈದಾಪೂರ : ಪಟ್ಟಣದ ಉಪ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಆವರಣದಲ್ಲಿ ಪ್ರತಿ ಗುರುವಾರ ನಡೆಯುತ್ತಿರುವ ಸಂತೆಯಲ್ಲಿ ದನ, ಆಡು, ಕುರಿ, ಕೋಳಿ ಮಾರಾಟಕ್ಕೆ ಪ್ರಾರಂಭ ಮಾಡಿ, ಸಂತೆ ಸ್ಥಳದಲ್ಲಿ ಕುಡಿಯುವ ನೀರು & ಮೂಲಭೂತ ಸೌಕರ್ಯ ಒದಗಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕೆಂದು ಸಾಮಾಜಿಕ ಹೋರಾಟಗಾರ ಉಮೇಶ.ಕೆ.ಮುದ್ನಾಳ 1 ವಾರದ ಗಡುವು ನೀಡಿ ಜಿಲ್ಲಾಡಳಿತಕ್ಕೆ ಹೋರಾಟದ ಎಚ್ಚರಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಳ್ಳಂ ಬೆಳಿಗ್ಗೆ ಸಂತೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾತನಾಡಿದ ಅವರು ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ್ ಕೆ. ಮುದ್ನಾಳ ಅವರು ಉಪ ಎಪಿಎಂಸಿ ಅಧಿಕಾರಿಗಳ ನಿರ್ಲಕ್ಷ್ಯವನ್ನು ತೀವ್ರವಾಗಿ ಖಂಡಿಸಿದರು. ಸ್ಥಳದಲ್ಲಿ ರೈತರೊಂದಿಗೆ ಚರ್ಚಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲೇ ಅತಿದೊಡ್ಡ ಜಾನುವಾರು ಸಂತೆಗಳಾದ ಶುಕ್ರವಾರ-ಶಹಾಪೂರ, ಮಂಗಳವಾರ-ಯಾದಗಿರಿ, ಸೋಮವಾರ-ಗುರುಮಠಕಲ್, ಗುರುವಾರ-ಸೈದಾಪೂರದಲ್ಲಿ ಪ್ರಾರಂಭ ಮಾಡಬೇಕೆಂದು ಒತ್ತಾಯಿಸಿದರು. ಸಂತೆ ಆವರಣದಲ್ಲಿ ದನ-ಕರುಗಳ, ಕುರಿ, ಆಡು, ಕೋಳಿ ಮಾರಾಟಕ್ಕೆ ಬಂದ ರೈತರಿಗೆ ಸೂಕ್ತ ಸ್ಥಳಾವಕಾಶವಿಲ್ಲದೇ ಜಾಲಿ ಕಂಟಿಗಳು ಬೆಳೆದು, ವಿಷ-ಜಂತುಗಳು ಸೇರಿಕೊಂಡಿವೆ. ಚರಂಡಿಯಲ್ಲಿ ತುಂಬಿ ನಿಂತು ಗಬ್ಬೆದ್ದು ನಾರುತ್ತಿದೆ. ಕುಡುಕರ ಹಾವಳಿ, ಅಕ್ರಮ ಚಟುವಟಿಕೆ ನಡೆಯುತ್ತಿದ್ದು, ಎಲ್ಲೆಡೆ ಅಸ್ವಚ್ಛತೆ ಆವರಿಸಿದ್ದು, ದುರ್ವಾಸನೆ ಬೀರುತ್ತಿದೆ. ಕೆಲವೆಡೆ ಭಿಕ್ಷುಕರು ಹಾಗೂ ಪುಂಡ-ಪೊಕರಿಗಳ ತಂಗುದಾಣವಾಗಿ ಮಾರ್ಪಟ್ಟಿರುವುದು ರೈತರು ಮತ್ತು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಇಂತಹ ಪರಿಸ್ಥಿತಿಯಲ್ಲಿ ಸಂತೆಗೆ ಆಗಮಿಸುವ ರೈತರು ಹಾಗೂ ವ್ಯಾಪಾರಿಗಳು ಹಲವು ತೊಂದರೆಗಳನ್ನು ಎದುರಿಸುತ್ತಿದ್ದಾರೆ ಎಂದು ಅವರು ತಿಳಿಸಿದರು. ಬಿರುಬಿಸಿಲಿನ ನಡುವೆಯೂ ಜನ-ಜಾನುವಾರುಗಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಗೆ ಅಗತ್ಯ ಕ್ರಮ ಕೈಗೊಂಡು ಜನ-ಜಾನುವಾರುಗಳಿಗೆ ರೋಗ-ರುಜಿನ ಹರಡದಂತೆ ನೋಡಿಕೊಳ್ಳಬೇಕೆಂದು ಆಗ್ರಹಿಸಿದರು. ಸಂತೆ ಪ್ರಾರಂಭವಾದ ನಂತರ ಸಂತೆ ಒಳಗಡೆ ನಡೆಯುತ್ತಿರುವ ಪ್ರತಿ ವಾರ ಪಶುವೈದ್ಯರನ್ನು ಕಡ್ಡಾಯವಾಗಿ ನಿಯೋಜಿಸಿ, ಜಾನುವಾರುಗಳ ಆರೋಗ್ಯ ತಪಾಸಣೆ ನಡೆಸಬೇಕು. ಸಾಂಕ್ರಾಮಿಕ ರೋಗಗಳ ಹರಡುವಿಕೆಯನ್ನು ತಡೆಯಲು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಜಾನುವಾರುಗಳನ್ನು ಕಟ್ಟಲು ಸಾಲುಸಾಲಾಗಿ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ನೆರಳಿಗಾಗಿ ಮರಗಳನ್ನು ನೆಡುವುದು ಅಥವಾ ಶೆಡ್ ನಿರ್ಮಿಸುವುದು ಅಗತ್ಯವಾಗಿದೆ. ಅಲ್ಲದೆ ಮಾರುಕಟ್ಟೆ ಆವರಣದಲ್ಲಿ ಉದ್ಯಾನ ನಿರ್ಮಿಸಿ ಪರಿಸರವನ್ನು ಸುಂದರ ಹಾಗೂ ಸ್ವಚ್ಛವಾಗಿಡಲು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು. ಜಿಲ್ಲಾಧಿಕಾರಿಗಳು ಹಾಗೂ ಸಂಬAಧಪಟ್ಟ ಎಪಿಎಂಸಿ ಅಧಿಕಾರಿಗಳು ಕೂಡಲೇ ಸಂತೆ ಆವರಣಕ್ಕೆ ಭೇಟಿ ನೀಡಿ ವಾಸ್ತವ ಸ್ಥಿತಿಯನ್ನು ಪರಿಶೀಲಿಸಿ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಬೇಕು. ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಂಡು ರೈತರು ಮತ್ತು ಜಾನುವಾರುಗಳಿಗೆ ಅನುಕೂಲಕರ ವಾತಾವರಣ ಕಲ್ಪಿಸಬೇಕು ಎಂದು ಉಮೇಶ್ ಕೆ. ಮುದ್ನಾಳ ಆಗ್ರಹಿಸಿದರು. ಪ್ರತಿ ಗುರುವಾರ ಸಾವಿರಾರು ರೈತರು ಆಗಮಿಸುವ ಈ ಸಂತೆಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದು ಅತ್ಯಗತ್ಯವಾಗಿದೆ. ಸಂಬAಧಪಟ್ಟ ಅಧಿಕಾರಿಗಳು ಶೀಘ್ರವೇ ಅಗತ್ಯ ಕ್ರಮ ಕೈಗೊಂಡು ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. ಆವರಣದಲ್ಲಿ ಖಾಸಗಿ ಅಂಗಡಿ ಮಾಲೀಕರು ಎ.ಪಿ.ಎಂ.ಸಿ ಶೆಡ್ ನಲ್ಲಿ ಅಕ್ರಮವಾಗಿ ದಾಸ್ತಾನಿಗಾಗಿ ಬಳಸುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕು. ಒಂದು ನಿರ್ಲಕ್ಷ್ಯ ವಹಿಸಿದರೆ ಉಪ ಕೃಷಿ ಉತ್ಪನ್ನ ಮಾರುಕಟ್ಟೆ ಮುಂಬಾಗದಲ್ಲಿರುವ ಯಾದಗಿರಿ – ರಾಯಚೂರು ಕರಿಬೆಟ್ಟ ಸರ್ಕಲನ ಮುಖ್ಯ ರಸ್ತೆ ಬಂದ್ ಮಾಡಿ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.3
- ರೈತರ ಹೋರಾಟ ಬರಗಾಲ ಹೋರಾಟ ನಮ್ಮ ಯಾದಗಿರಿ ಜಿಲ್ಲಾ ಬರಗಾಲ ಘೋಷಣೆ ಮಾಡು ಅಂತ ಹೋರಾಟ ನಡೆದಿದೆ ಮುಖಂಡ ಅಮಿನ್ ರೆಡ್ಡಿ ಅಳಿಗೆ ರೈತರ ಹೋರಾಟ ಬರಗಾಲ ಹೋರಾಟ ನಮ್ಮ ಯಾದಗಿರಿ ಜಿಲ್ಲಾ ಬರಗಾಲ ಘೋಷಣೆ ಮಾಡು ಅಂತ ಹೋರಾಟ ನಡೆದಿದೆ ಮುಖಂಡ ಅಮಿನ್ ರೆಡ್ಡಿ ಅಳಿಗೆ1
- ಮಾತೆ ಮಾಣಿಕೇಶ್ವರಿ ನಗರದಲ್ಲಿ ಗಣೇಶನ ಭವ್ಯ ಮೆರವಣಿಗೆ ಯಾದಗಿರಿ: ನಗರದ ಮಾತೆ ಮಾಣಿಕೇಶ್ವರಿ ನಗರದಲ್ಲಿ ಮಹಿಳಾ ಬಳಗದ ವತಿಯಿಂದ ಗಣೇಶ ಚತುರ್ದಶಿ ಅಂಗವಾಗಿ ಗಣೇಶನ ಆಗಮನ ಕಾರ್ಯಕ್ರಮವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಮಹಿಳೆಯರು ಕುಂಭಮೇಳದೊಂದಿಗೆ ಭವ್ಯ ಮೆರವಣಿಗೆ ನಡೆಸಿದರು. ಶ್ರೀ ಮ.ನಿ.ಪ್ರ. ಕಲ್ಯಾಣ ಸ್ವಾಮಿಗಳು ಹಾಗೂ ಪರಮಪೂಜ್ಯ ಷಟಾಕ್ಷರಿ ಚಲಿಸಿದ ಸ್ವಾಮಿಗಳು ಮೆರವಣಿಗೆಗೆ ಚಾಲನೆ ನೀಡಿದರು. ಕುಂಭಮೇಳದೊಂದಿಗೆ ಸಾಗಿದ ಗಣೇಶನ ಭವ್ಯ ಮೆರವಣಿಗೆಯು ಮಾತೆ ಮಾಣಿಕೇಶ್ವರಿ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಮೆರವಣಿಗೆಯಲ್ಲಿ ಮಹಿಳೆಯರು ಸೇರಿದಂತೆ ಸಮಸ್ತ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಗಣೇಶನ ದರ್ಶನ ಪಡೆದು ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಭಕ್ತರು ಭಕ್ತಿ-ಶ್ರದ್ಧೆಯಿಂದ ಗಣೇಶನನ್ನು ಪೂಜಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.1
- ದಕ್ಷಿಣ ಭಾರತದಲ್ಲೇ ಅತ್ಯಂತ ಅಭೂತಪೂರ್ವವಾದ ಮಹಾಶಿಲಾ ತಾಣವೆಂದರೆ ರಾಜನಕೊಲ್ಲೂರು. ಇಲ್ಲಿ ಅನೇಕ ಬಗೆಯ ಮರಳುಗಲ್ಲಿನ ಮಹಾಶಿಲೆಗಳು ಇವೆ. ಕರ್ನಾಟಕದ ಅತ್ಯಂತ ಸುಪ್ರಸಿದ್ದ ತಾಣಗಳು ದಕ್ಷಿಣ ಭಾರತದಲ್ಲೇ ಅತ್ಯಂತ ಅಭೂತಪೂರ್ವವಾದ ಮಹಾಶಿಲಾ ತಾಣವೆಂದರೆ ರಾಜನಕೊಲ್ಲೂರು. ಇಲ್ಲಿ ಅನೇಕ ಬಗೆಯ ಮರಳುಗಲ್ಲಿನ ಮಹಾಶಿಲೆಗಳು ಇವೆ. ಡೋಲ್ಡನ್ಗಳೆಂಬ ಜಾವಡಿಗೆ ಆಧಾರವಾಗಿ ನಿಂತ ಬದಿಯ ಚಪ್ಪಡಿಗಳುಳ್ಳ ಆಯತಾಕಾರದ ರಚನೆಗಳನ್ನು ಡೋಲೈನ್ ಗಳೆಂದು ಕರೆಯುತ್ತಾರೆ. ಇಲ್ಲಿ ಕಾಣುವ ವಿವಿಧ ಬಗೆಗಳನ್ನು ಗಮನಿಸಿ, ಕೆಲವಕ್ಕೆ ಮೂರು ಅಥವಾ ನಾಲ್ಕು ಬದಿಗಳಿವೆ. ಹಾಗೂ ಸಣ್ಣ ಕಿಟಕಿ-ರಂಧ್ರವು ಅದರಲ್ಲಿ ಇರಬಹುದು ಅಥವಾ ಇಲ್ಲದಿರಬಹುದು. ಡೋಲೈನ್ಗಳ ಮಧ್ಯೆ ಇರುವ ಭಾಗಶಃ ಹೂತಿರುವ, ಡಬ್ಬಿ ಆಕಾರದ ರಚನೆಗಳನ್ನು ಸಿಸ್ಟ್ಗಳೆಂದು ಕರೆಯುತ್ತಾರೆ. ಸಿಸ್ಟ್ ತನ್ನೊಳಗೇ ಕುಸಿದು ಬೀಳದಂತೆ ತಡೆಗಟ್ಟುವ ರೀತಿಯಲ್ಲಿ, ರಾಜನಕೊಲ್ಲೂರಿನ ಎಲ್ಲ ಸಿಸ್ಟ್ಗಳಲ್ಲೂ ಅದರ ಬದಿಯ ಉದ್ದನೆಯ ಚಪ್ಪಡಿಗಳು, ಸ್ವಲ್ಪ ಚಿಕ್ಕ ಚಪ್ಪಡಿಗಳಿಗಿಂತ ಮುಂದಕ್ಕೆ ಚಾಚಿವೆ.1
- ಕಾಳಗಿಯಲ್ಲಿ ಬರಗಾಲ ಘೋಷಣೆಗೆ ಆಗ್ರಹಿಸಿ ಬಿಜೆಪಿ,ಯಿಂದ ಪ್ರತಿಭಟನೆ ಕಾಳಗಿ : ಪಟ್ಟಣದಲ್ಲಿ ಕಾಳಗಿ ಹಾಗೂ ಚಿಂಚೋಳಿ ತಾಲೂಕುಗಳನ್ನು ಬರಗಾಲ ಘೋಷಣೆ ಮಾಡುವಂತೆ ಶಾಸಕ ಡಾ ಅವಿನಾಶ್ ಜಾಧವ್ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಕಾರ್ಯಕರ್ತರು ಹಾಗೂ ರೈತರು ಬೃಹತ್ ಪ್ರತಿಭಟನೆ ಮಾಡಿದರು. ಕಾಳಗಿ ಹಾಗೂ ಚಿಂಚೋಳಿ ತಾಲೂಕಿನಲ್ಲಿ ಮಳೆ ಇಲ್ಲದೆ ರೈತರ ಬಿತ್ತಿದ ಬೆಳೆಗಳು ಒಣಗಿ ಹೋಗಿ ರೈತರು ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಆದರೂ ಕಾಂಗ್ರೆಸ್ ಸರ್ಕಾರ ಮಾತ್ರ ಚಿಂಚೋಳಿ- ಕಾಳಗಿ ತಾಲೂಕಿನ ರೈತರಿಗೆ ಅನ್ಯಾಯ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಇದ್ದರು.1
- ರಾಯಚೂರು ನಗರದ ಇಂಜಿನಿಯರ್ಸ್ ಬಡಾವಣೆಯಲ್ಲಿ ಸರಳವಾಗಿ ಗಣೇಶ ಚತುರ್ಥಿ ಆಚರಣೆ ರಾಯಚೂರು: ನಗರದ ಆಶಾಪುರ ರಸ್ತೆಯಲ್ಲಿರುವ ಇಂಜಿನಿಯರ್ಸ್ ಬಡಾವಣೆಯಲ್ಲಿ ಗಣೇಶ ಚತುರ್ಥಿ ಹಬ್ಬವನ್ನು ನಿವಾಸಿಗಳು ಸರಳವಾಗಿ ಹಾಗೂ ಭಕ್ತಿಭಾವದಿಂದ ಆಚರಿಸಿದರು. ಗಣೇಶ ಚತುರ್ಥಿ ಅಂಗವಾಗಿ ಬಡಾವಣೆಯಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು. ನಿವಾಸಿಗಳು ಹಾಗೂ ಮಕ್ಕಳು ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಘ್ನ ನಿವಾರಕ ಗಣೇಶನಿಗೆ ಭಕ್ತಿಯಿಂದ ಪೂಜೆ ಸಲ್ಲಿಸಿದರು. ಬಡಾವಣೆಯ ನಿವಾಸಿಗಳು ಒಗ್ಗೂಡಿ ಹಬ್ಬವನ್ನು ಆಚರಿಸುವ ಮೂಲಕ ಸೌಹಾರ್ದತೆ ಹಾಗೂ ಸಾಮೂಹಿಕ ಭಾವನೆಗೆ ಸಾಕ್ಷಿಯಾದರು. ಪರಿಸರ ಸ್ನೇಹಿ ರೀತಿಯಲ್ಲಿ ಹಬ್ಬ ಆಚರಿಸುವಂತೆ ನಿವಾಸಿಗಳು ಗಮನಹರಿಸಿದ್ದು, ಸರಳ ಅಲಂಕಾರದೊಂದಿಗೆ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿತ್ತು. ಗಣೇಶನಿಗೆ ವಿಶೇಷ ನೈವೇದ್ಯ ಅರ್ಪಿಸಿ, ಕುಟುಂಬಗಳ ಸುಖ, ಶಾಂತಿ, ಆರೋಗ್ಯ ಹಾಗೂ ಸಮೃದ್ಧಿಗಾಗಿ ಪ್ರಾರ್ಥಿಸಲಾಯಿತು. ಈ ಸಂದರ್ಭದಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ ಬಡಾವಣೆಯ ನಿವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಂಭ್ರಮಿಸಿದರು. ಸರಳವಾಗಿ ಆಚರಿಸಿದರೂ ಭಕ್ತಿ ಮತ್ತು ಸಂಭ್ರಮಕ್ಕೆ ಯಾವುದೇ ಕೊರತೆಯಾಗದಂತೆ ಗಣೇಶ ಚತುರ್ಥಿಯನ್ನು ಆಚರಿಸಲಾಯಿತು.1
- ಕಲಬುರಗಿ:ನಾನು ಕೇವಲ ನಾಲ್ಕು ಸೆಲ್ ನ ಗೃಹ ಮಂತ್ರಿ ಅಲ್ಲ-ಹೆಚ್ ಡಿಕೆ ಹೇಳಿಕೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತೀರುಗೇಟು ಕಲಬುರಗಿಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ನೀಡಿದ್ದು ಬಿಡದಿ ವಿಚಾರ ಡೈವಟ್೯ ಮಾಡೋಕೆ ಜೈಲು ರೈಡ್ ಮಾಡಿಲ್ಲ ನಾನು ಕೇವಲ ನಾಲ್ಕು ಸೆಲ್ ನ ಗೃಹ ಮಂತ್ರಿ ಅಲ್ಲ ಎಂದು ಹೆಚ್ ಡಿಕೆ ಹೇಳಿಕೆಗೆ ಕಲಬುರಗಿಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತೀರುಗೇಟು ನೀಡಿದ್ದಾರೆ. ರಾಜ್ಯದ ಹಲವು ಜೈಲುಗಳ ಮೇಲೆ ರೇಡ್ ಮಾಡಿದ್ದೆವೆ. ಅದನ್ನ ನಾವು ಮಾಡಬಾರದ? ಪ್ರಜ್ವಲ್ ನಿರಂತರವಾಗಿ ಪೋನ್ ನಲ್ಲಿ ಮಾತನಾಡಿದ್ದು ಯಾರಿಗೆ? ಇಷ್ಟೆಲ್ಲಾ ಮಾತನಾಡೋರು ಯಾಕೆ ಮಾಹಿತಿ ನೀಡಿಲ್ಲ. ಕುಟುಂಬದವರ ಜೊತೆ ತಾನೇ ಆತ ಮಾತನಾಡಿದ್ದು. ಹಾಸನದಲ್ಲಿ ಏನಾಗಿತ್ತು ಅದರ ಬಗ್ಗೆ ಒಂದು ಭಾರಿಯಾದ್ರು ಮಾತನಾಡಿದ್ದಾರಾ..? ಮೊದಲು ಆ ಕುಟುಂಬಗಳಿಗೆ ಕ್ಷೆಮೆ ಕೇಳಬೇಕು. ಆ ನೊಂದ ಹೆಣ್ಮಕ್ಕಳ ಕ್ಷೇಮೆ ಕೇಳಲಿ. ವಿಜಯದಶಮಿಯಿಂದ ಯುದ್ದ ಸ್ಟಾಟ್೯ ಎಂದ ಹೆಚ್ ಡಿಕೆ ಹೇಳಿಕೆ ವಿಚಾರ. ಮಾತನಾಡಿದ ಅವರು ಅಲ್ಲೋಲ ಕಲ್ಲೋಲ ಆಗೋದು ಮುಂದಕ್ಕೆ ಹೋಯ್ತಾ ಅಂತ ವ್ಯಂಗ್ಯವಾಡಿದ ಪ್ರಿಯಾಂಕ್. ನಮ್ಮ ಕುಟುಂಬವನ್ನ ಮುಗಿಸೋಕೆ ಪ್ಲ್ಯಾನ್ ಮಾಡಿದ್ದಾರೆ ಎನ್ನೋ ಹೆಚ್ ಡಿಕೆ ಹೇಳಿಕೆ ಯಾರು ಪ್ರಯತ್ನ ಮಾಡ್ತಿದ್ದಾರೆ. ನಾವ್ಯಕೆ ಅದನ್ನ ಮಾಡೋಣ ಟಿ.ನರಸಿಪುರ ಇನ್ಸಪೆಕ್ಟರ್ ವಿರದ್ದು ಹಳೇ ಕೇಸ್ ವಿಚಾರ.ಅವರ ಮೇಲೆ ಇಲಾಖೆ ವಿಚಾರಣೆ ಆಗಿರಬೇಕು. ಅದಕ್ಕೂ ಇದಕ್ಕೂ ಏನ್ ಸಂಬಂಧ. ಗಣೇಶ ವಿಚಾರವಾಗಿ ಅವರ ಇಲಾಖೆಯ ಎಸ್ ಓಪಿ ಹೇಳಬಾರದಾ..? ಅವರ ಮೇಲೆ ಆರೋಪ ಇದ್ರೆ ದೂರು ಕೊಡಲಿ. ನಾವೇ ತನೀಖೆ ಮಾಡ್ತೆವೆ. ಅದು ಬಿಟ್ಟು ಆ ಮಾಜಿ ಸಂಸದರು ಏನಾದ್ರು ಮಾಡಿದ್ರೆ ನಡಿಯುತ್ತಾ..? ನಮ್ಮ ಸಂಭ್ರಮ ಬೇರೆಯವರಿಗೆ ಆತಂಕ ಆಗಬಾರದು. ಎಲ್ಲರೂ ವಿಜೃಂಭ್ರಣೆಯಿಂದ ಹಬ್ಬ ಮಾಡಿ. ಇವರಿಗೆ ಬೆಂಕಿ ಹಚ್ಚೋದೆ ಕೆಲಸ ಎಂದು ಕಿಡಿಕಾರಿದರು ಉಮರ ಖಾಲಿದ್ ಅವರನ್ನ ರಾಷ್ಟ್ರೀಯವಾದಿ ಅಂತ ಹರಿಪ್ರಸಾದ್ ಬಿಂಬಿಸೋ ವಿಚಾರಯು ಮಾತನಾಡಿದ ಅವರು ಉಮರ್ ಖಲಿದ್ ಎಷ್ಟು ದಿನದಿಂದ ಜೈಲಿನಲ್ಲಿದ್ದಾನೆ. ಯಾಕೆ ಕೇಂದ್ರ ಸರ್ಕಾರ ಟ್ರಯಲ್ ಮಾಡ್ತಿಲ್ಲ, ಟ್ರಯಲ್ ಮಾಡಿ ಕೋಟ್೯ ಘೋಷಣೆ ಮಾಡಲಿ. ಅವಾಗ ಎಲ್ಲರೂ ಆತ ಅಪರಾಧಿ ಅಂತ ಒಪ್ಪಕೊಳ್ಳುತ್ತಾರೆ. ಬಿಜೆಪಿ ಹೇಳಿದ್ರೆ ನಾವು ಒಪ್ಕೊಳ್ಳಬೇಕಾ.? ಎಂದು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದರು1
- ಕಲಬುರಗಿ- ನೀರಿಗಾಗಿ ಕೈ ಶಾಸಕಿ ಮನೆ ಮುಂದೆ ಸಾರ್ವಜನಿಕರ ಪ್ರತಿಭಟನೆ ಕಲಬುರಗಿ:ನೀರು ಪೂರೈಕೆಯಾಗದಿದ್ದಕ್ಕೆ ಕೈ ಶಾಸಕಿ ಕನೀಜ್ ಫಾತಿಮಾ ಬೇಗಂ ಮನೆ ಮುಂದೆ ದಿಡೀರ್ ಪ್ರತಿಭಟನೆ ಮಾಡಲಾಯಿತು. ವಾಡ್೯ ನಂ. 15, 16 ರಲ್ಲಿ ಸಮರ್ಪಕವಾಗಿ ನೀರು ಪೂರೈಕೆ ಆಗ್ತಿಲ್ಲ ಎಂದು ತಾಹೇರ್ ಅಲಿ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಿ ಮನೆಗೆ ಮುತ್ತಿಗೆ ಹಾಕಿಲಾಯಿತು. ಮೂರು ಗಂಟೆಗಳ ಕಾಲ ಶಾಸಕಿ ಮನೆ ಮುಂದೆ ಹೈ ಡ್ರಾಮಾ ನಡರದಿದಗದು ಸಾರ್ವಜನಿಕರಿಂದ ತೀವ್ರ ವಾಗ್ವಾದ ನಡೆಯಿತು, ಸ್ಥಳಕ್ಕೆ ಬಂದ ಪೋಲಿಸರು ನಂತರ ಪರಿಸ್ಥಿತಿ ತಿಳಿಗೊಳಿಸಿದರು. ನೀರು ಕೊಡದ ಶಾಸಕಿ ಫಾತಿಮಾ ಮಗನಿಗೆ ತರಾಟೆಗೆ ತೆಗೆದುಕೊಂಡ ಜನರು ತಕ್ಷಣವೇ ನೀರು ಬಿಡುವಂತೆ ಆಗ್ರಹಿಸಿದರು. ನೀರು ಪೂರೈಕೆ ಮಾಡೊದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆ ವಾಪಾಸು ಪಡೆಯಲಾಯಿತು1