Shuru
Apke Nagar Ki App…
ಭಾಲ್ಕಿ ಚನ್ನಬಸವ ಆಶ್ರಮದಲ್ಲಿ ಎಪ್ರಿಲ್ 20ರಂದು ವಿಶ್ವಗುರು ಬಸವಣ್ಣನವರ ಜಯಂತಿ.
ಈಶ್ವರ್ ಬೆಳಕು ನ್ಯೂಸ್ ಕನ್ನಡ User
ಭಾಲ್ಕಿ ಚನ್ನಬಸವ ಆಶ್ರಮದಲ್ಲಿ ಎಪ್ರಿಲ್ 20ರಂದು ವಿಶ್ವಗುರು ಬಸವಣ್ಣನವರ ಜಯಂತಿ.
More news from ಕರ್ನಾಟಕ and nearby areas
- ಚಿತ್ರದುರ್ಗದ ಕಲ್ಕುಂಟೆ ಬಳಿ ಎರಡು ಲಾರಿಗಳ ನಡುವೆ ಭೀಕರ ಅಪಘಾತ ನಡೆದು ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ಚಿತ್ರದುರ್ಗ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48 ರ ಕಲ್ಕುಂಟೆ ಗ್ರಾಮದ ಬಳಿ ಮಂಗಳವಾರ ಬೆಳಗಿನ ಜಾವ 3 ಗಂಟೆಗೆ ಘಟನೆ ನಡೆದಿದ್ದು ಎರಡು ಲಾರಿಗಳ ನಡುವೆ ಅಪಘಾತ ನಡೆದು ಇಬ್ಬರು ಸ್ಥಳದಲ್ಲೆ ಮೃತಪಟ್ಟಿದ್ದಾರೆ.1
- ನಂಜನಗೂಡು: ನಾಳೆಯಿಂದ ನಡೆಯುವ ಜನಗಣತಿಯಲ್ಲಿ ಎಲ್ಲರೂ ಭಾಗವಹಿಸಿ ಎಂದು ನಂಜನಗೂಡಿನ ತಹಶೀಲ್ದಾರ್ ಡಾ.ಸ್ಮಿತಾ ರಾಮು ಮನವಿ ಮಾಡಿದ್ದಾರೆ. ನಂಜನಗೂಡಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಏ.16 ರಿಂದ ಮೇ.16 ರವರಿಗೆ ಜನಗಣತಿ ನಡೆಯಲಿದೆ. ಪ್ರತಿಯೊಬ್ಬರು ಕೂಡ ಜನಗಣತಿಯಲ್ಲಿ ಭಾಗವಹಿಸುವ ಮೂಲಕ ತಮ್ಮ ಅಂಕಿ ಅಂಶಗಳನ್ನು ನೈಜ್ಯವಾಗಿ ಕೊಡಬೇಕು. ನಾಳೆಯಿಂದಲೇ ನಿಮ್ಮ ಮನೆ ಬಾಗಿಲಿಗೆ ಜನಗಣತಿದಾರರು ಬರಲಿದ್ದಾರೆ. ಬಿಸಿಲಿನ ತಾಪಮಾನವು ಹೆಚ್ಚಾಗಿರುವುದರಿಂದ ನಿಮ್ಮ ಮನೆ ಬಾಗಿಲಿಗೆ ಬರುವ ಅಧಿಕಾರಿಗಳಿಗೆ ಸರಿಯಾದ ಮಾಹಿತಿಯನ್ನು ನೀಡುವುದರಿಂದ ನಮ್ಮ ಮುಂದಿನ ಜನಸಂಖ್ಯೆಗೆ ಅನುಗುಣವಾಗಿ ಸೌಲಭ್ಯಗಳನ್ನು ಕಲ್ಪಿಸಲು ಅನುಕೂಲವಾಗಲಿದೆ. ಕೋವಿಡ್ ಇದ್ದ ಕಾರಣದಿಂದ ಜನಗಣತಿಯನ್ನು ಮಾಡಿರಲಿಲ್ಲ. ಈಗ ಕೇಂದ್ರ ಸರ್ಕಾರ ಜನಗಣತಿ ಮಾಡುತ್ತಿರುವುದರಿಂದ ಎಲ್ಲರೂ ಸಮೀಕ್ಷೆಯಲ್ಲಿ ಭಾಗವಹಿಸಿ ನೈಜವಾದ ಅಂಕಿ ಅಂಶಗಳನ್ನು ನೀಡುವಂತೆ ನಂಜನಗೂಡಿನಲ್ಲಿ ತಹಶೀಲ್ದಾರ್ ಡಾ.ಸ್ಮಿತಾ ರಾಮು ತಿಳಿಸಿದ್ದಾರೆ.1
- Post by Shilpa3
- ಸಾಮಾಜಿಕ ಜಾಲತಾಣದಲ್ಲಿ ನಿಂದನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ವಿಚಾರಣೆಗೆ ಹಾಜರಾಗದ ಕಾರಣ ಪುನೀತ್ ಕೆರೆಹಳ್ಳಿಯನ್ನು ಬೆಳ್ತಂಗಡಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ಪೊಲೀಸರು ನೀಡಿದ ನೋಟಿಸ್ ಗೆ ಹಾಜರಾಗದ ಕಾರಣ ಬೆಳ್ತಂಗಡಿ ನ್ಯಾಯಾಲಯದಿಂದ ಬಂಧನ ವಾರಂಟ್ ಪಡೆದು ಎ.15ರಂದು ಬೆಂಗಳೂರಿಗೆ ತೆರಳಿದ ಬೆಳ್ತಂಗಡಿ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ. ಪುನೀತ್ ಕೆರೆಹಳ್ಳಿಯನ್ನು ಇಂದು ಸಂಜೆಯ ವೇಳೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದು ಬಳಿಕ ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.1
- ಶುದ್ಧ ತಿಂಡಿ ಹೋಟೆಲ್ ಬೆಂಕಿಗೆ ಆಹುತಿಯಾಯಿತು ಶಾರ್ಟ್ ಸರ್ಕ್ಯೂಟ್ನಿಂದ ಲಕ್ಷಾಂತರ ನಷ್ಟ1
- ನೆಲಮಂಗಲ ನಾಪತ್ತೆಯಾಗಿದ್ದ ಮಹಿಳೆ ಅಸ್ಥಿಪಂಜರವಾಗಿ ಪತ್ತೆ! ಅನೈತಿಕ ಸಂಬಂಧ ಹಿನ್ನೆಲೆ ಮಹಿಳೆಯ ಕೊಲೆ ಶಂಕೆ ದಾಬಸ್ ಪೇಟೆ ಹಳೆನಿಜಗಲ್ ಬಳಿಯ ಜಮೀನಿನಲ್ಲಿ ಅಸ್ತಿಪಂಜರ ಪತ್ತೆ 38 ವರ್ಷದ ಯಮುನಾ ಕೊಲೆಯಾದ ಮಹಿಳೆ ರಾಘವೇಂದ್ರ ಎಂಬುವನ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆರೋಪ 19 ವರ್ಷಗಳ ಹಿಂದೆ ಮಲ್ಲಿಕಾರ್ಜುನ ಜೊತೆ ಮದುವೆ ದಂಪತಿಗಳಿಗೆ ಒಂದು ಗಂಡು, ಒಂದು ಹೆಣ್ಣು ಮಗು ನಂದಿಹಳ್ಳಿ ರಿಲಯನ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯಮುನಾ ಮಾರ್ಚ್ 21 ರಿಂದ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ ಮಹಿಳೆ ಪತ್ನಿಯನ್ನು ಹುಡುಕಿ ಕೊಡುವಂತೆ ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದ ಪತಿ ಜಮೀನಿನಲ್ಲಿ ತಲೆಬುರುಡೆ ಹಾಗೂ ಮಹಿಳೆಯ ಬ್ಯಾಗ್ ಪತ್ತೆ ಸ್ಥಳೀಯರಿಂದ ಪೊಲೀಸರಿಗೆ ಮಾಹಿತಿ ದಾಬಸ್ ಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ.3
- Post by Suresh Belagere1
- ಚಿತ್ರದುರ್ಗದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಅವರು ಆಗಮಿಸಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.1
- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಯ ಪ್ರಯುಕ್ತ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಬರುವ ಬಾರ್ ಮತ್ತು ವೈನ್ ಶಾಪ್ಗಳನ್ನು ಎಪ್ರಿಲ್ 17 ರಂದು ಬೆಳಿಗ್ಗೆ 6 ಗಂಟೆಯಿಂದ ಎಪ್ರಿಲ್ 18 ರ ಬೆಳಿಗ್ಗೆ 6 ಗಂಟೆಯವರೆಗೆ ಮುಚ್ಚಲು ಹಾಗೂ ಈ ಸಮಯದಲ್ಲಿ ಎಲ್ಲಾ ರೀತಿಯ ಅಮಲು ಪದಾರ್ಥಗಳ ಮಾರಾಟವನ್ನು ಮಾಡದಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಆದೇಶಿಸಿದ್ದಾರೆ. ಪ್ರಯುಕ್ತ ಎಪ್ರಿಲ್ 16 ರಂದು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಭೇಟಿ, ಕೆರೆ ಉತ್ಸವ, ತೆಪೆÇ್ಪೀತ್ಸವ ಹಾಗೂ ಎಪ್ರಿಲ್ 17 ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮರಥೋತ್ಸವ ಕಾರ್ಯಕ್ರಮ ಮತ್ತು ಎಪ್ರಿಲ್ 18 ರಂದು ದೇವರು ಅವಭೃತ ಸ್ನಾನಕ್ಕೆ ವೀರಮಂಗಲಕ್ಕೆ ಹೋಗಲಿದ್ದು, ಈ ವೇಳೆ ಸಾವಿರಾರು ಜನ ಭಕ್ತಾದಿಗಳು ಸೇರುವ ನಿರೀಕ್ಷೆಯಿರುತ್ತದೆ. ಪುತ್ತೂರು ಪರಿಸರವು ಸೂಕ್ಷ್ಮ ಪ್ರದೇಶವಾಗಿರುವುದರಿಂದ ಈ ಸಮಯದಲ್ಲಿ ಕಿಡಿಗೇಡಿಗಳು ಅಮಲುಪದಾರ್ಥ ಸೇವಿಸಿ ಅಹಿತಕರ ಘಟನೆಗಳಿಗೆ ಕಾರಣರಾಗಿ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಉಂಟಾಗುವ ಸಾಧ್ಯತೆ ಇರುವುದರಿಂದ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಬರುವ ಬಾರ್ ಮತ್ತು ವೈನ್ ಶಾಪ್ಗಳನ್ನು ಎಪ್ರಿಲ್ 17 ರಂದು ಬೆಳಿಗ್ಗೆ 6 ಗಂಟೆಯಿಂದ ಎಪ್ರಿಲ್ 18 ರ ಬೆಳಿಗ್ಗೆ 6 ಗಂಟೆಯವರೆಗೆ ಮುಚ್ಚಲು ಹಾಗೂ ಈ ಸಮಯದಲ್ಲಿ ಎಲ್ಲಾ ರೀತಿಯ ಅಮಲು ಪದಾರ್ಥಗಳ ಮಾರಾಟವನ್ನು ಮಾಡದಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಆದೇಶಿಸಿದ್ದಾರೆ.1