Shuru
Apke Nagar Ki App…
ಪೊಲೀಸ್ ಪ್ರಕಟಣೆ.........................................
KRUTHI NEWS KANNADA
ಪೊಲೀಸ್ ಪ್ರಕಟಣೆ.........................................
More news from ಕರ್ನಾಟಕ and nearby areas
- Post by KRUTHI NEWS KANNADA1
- Post by Venu Gopal1
- Madrase Hajira niswan bismilla negar near nisar negar kolar1
- Post by Ayub Pasha1
- Post by Rownak Ali khan1
- Post by Chand Pasha1
- ಶುದ್ದ ಕುಡಿಯುವ ನೀರಿನ ಘಟಕಗಳ ಹಾಗೂ ಆಶ್ರಯ ಯೋಜನೆ ಬಗ್ಗೆ ಪ್ರಗತಿ ಪರಿಶೀಲನೆ ಸಭೆ ಬಾಗೇಪಲ್ಲಿ:- ಇಂದು ಬಾಗೆಪಲ್ಲಿ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಎಸ್. ಎನ್. ಸುಬ್ಬಾರೆಡ್ಡಿ ಶಾಸಕರು ಬಾಗೇಪಲ್ಲಿ ವಿಧಾನಸಭೆ ಕ್ಷೇತ್ರ ರವರ ಅಧ್ಯಕ್ಷತೆಯಲ್ಲಿ ಡಾ|| ನವೀನ್ ಭಟ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿ. ಪಂ ರವರ ಉಪಸ್ಥಿತಿಯಲ್ಲಿ ಶುದ್ದ ಕುಡಿಯುವ ನೀರಿನ ಸಮಸ್ಯೆ ಬಗ್ಗೆ, ಶುದ್ದ ಕುಡಿಯುವ ನೀರಿನ ಘಟಕಗಳ ಬಗ್ಗೆ ಮತ್ತು ಆಶ್ರಯ ಯೋಜನೆ ಬಗ್ಗೆ ಪ್ರಗತಿ ಪರಿಶೀಲನೆ ಸಭೆಯನ್ನು ಮಾಡಲಾಯಿತು. ಈ ಸಂದರ್ಭದಲ್ಲಿ ಸಹಾಯಕ ಕಾರ್ಯದರ್ಶಿ ಜಿ. ಪಂ,ಜಿಲ್ಲಾ ಕುಡಿಯುವ ನೀರು & ನೖರ್ಮಲ್ಯ ಇಲಾಖೆಯ ಇಂಜಿನಿಯರ್ ಬಾಗೆಪಲ್ಲಿ ಗುಡಿಬಂಡೆ,ಹಾಗೂ ಚೇಳೂರು ತಾಲ್ಲೂಕಿನ ತಹಶಿಲ್ದಾರು,ಕಾರ್ಯನಿರ್ವಾಹಕ ಅಧಿಕಾರಿಗಳು,ಸಹಾಯಕ ನಿರ್ದೇಶಕರು ,ಮೂರು ತಾಲ್ಲೂಕಿನ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು,ಸಿಬ್ಬಂದಿಗಳು ಹಾಜರಿದ್ದರು1
- *ಚಿಂತಾಮಣಿ:-ಏಪ್ರಿಲ್ 1 ರಿಂದ ತೆರಿಗೆ ಪಾವತಿಸುವ ನಾಗರಿಕರಿಗೆ ಶೇಕಡಾ.5 ರಷ್ಟು ರಿಯಾಯಿತಿಯನ್ನು ಘೋಷಿಸಿ ಸರ್ಕಾರ ಆದೇಶ* ಚಿಂತಾಮಣಿ: ಏಪ್ರಿಲ್ 1 ರಿಂದ ಹೊಸ ಆರ್ಥಿಕ ವರ್ಷ ಪ್ರಾರಂಭವಾಗಲಿದೆ. ಆರಂಭದ ಮಾಹೆಯಲ್ಲಿ ಆಸ್ತಿ ತೆರಿಗೆ ಪಾವತಿಸುವ ನಾಗರಿಕರಿಗೆ ಶೇ.5 ರಷ್ಟು ರಿಯಾಯಿತಿಯನ್ನು ಘೋಷಿಸಿ ಸರ್ಕಾರ ಆದೇಶ ಹೊರಡಿಸಿದೆ ಎಂದು ನಗರಸಭೆ ಆಯುಕ್ತ ಜಿ.ಎನ್.ಚಲಪತಿ ತಿಳಿಸಿದರು. ನಾಗರಿಕರು ಸುಲಭವಾಗಿ ತೆರಿಗೆ ಪಾವತಿಸಲು ಅನುಕೂಲವಾಗುವಂತೆ ನಗರಸಭೆಯಲ್ಲಿ ಹಾಗೂ ವಿವಿಧ ಭಾಗಗಳಲ್ಲಿ ತೆರಿಗೆ ವಸೂಲಿ ಕೇಂದ್ರಗಳನ್ನು ತೆರೆಯಲಾಗುವುದು. ನಗರಸಭೆ ಕಚೇರಿಯಲ್ಲೇ ಬ್ಯಾಂಕ್ ಕೌಂಟರ್ ತೆರೆಯಲಾಗಿದೆ. ನಾಗರಿಕರು ಸರತಿ ಸಾಲಿನಲ್ಲಿ ನಿಲ್ಲುವ ಅವಶ್ಯಕತೆ ಇಲ್ಲದೆ ಶೀಘ್ರವಾಗಿ ಚಲನ್ ಪಡೆದು ತೆರಿಗೆ ಪಾವತಿಸಬಹುದು ಎಂದರು. ವಾಣಿಜ್ಯ ಮಳಿಗೆಗಳ ತೆರಿಗೆ ಮೌಲ್ಯಮಾಪನವನ್ನು ನಗರಸಭೆಯ ಅಧಿಕಾರಿಗಳು ಕ್ರಾಸ್ ವೆರಿಫಿಕೇಶನ್ ಮಾಡಲಾಗುವುದು. ತೆರಿಗೆಯಲ್ಲಿ ನಿಗಧಿಪಡಿಸುವಲ್ಲಿ ವಂಚನೆ, ಮೋಸ ಕಂಡುಬಂದಲ್ಲಿ ಕಾನೂನಿನಂತೆ ಕ್ರಮಕೈಗೊಂಡು ದುಪ್ಪಟ್ಟು ದಂಡ ವಿಧಿಸಲಾಗುವುದು. ವಿಶೇಷವಾಗಿ ವಾಣಿಜ್ಯ ಮಳಿಗೆಗಳ ತೆರಿಗೆಯನ್ನು ಕಾನೂನಿನಂತೆ ಮೌಲ್ಯತಮಾಪನ ಮಾಡಿ ಪಾವತಿಸಬವೇಕು ಎಂದು ಮನವಿ ಮಾಡಿದರು. ಕುಡಿಯುವ ನೀರು ಮತ್ತು ಬೀದಿ ದೀಪಗಳ ವ್ಯವಸ್ಥೆ ಬೇಸಿಗೆಯ ಹಿನ್ನೆಲೆಯಲ್ಲಿ ನೀರಿನ ಸಮಸ್ಯೆ ನೀಗಿಸಲು ಈಗಾಗಲೇ 20 ಹೊಸ ಬೋರ್ವೆಲ್ಗಳನ್ನು ಕೊರೆಸಲಾಗಿದೆ. ಶೀಘ್ರದಲ್ಲೇ ಪಂಪ್ ಮತ್ತು ಮೋಟಾರು ಗಳನ್ನು ಅಳವಡಿಸಲಾಗುವುದು. ಸಮರ್ಪಕವಾಗಿ ನೀರನ್ನು ಒದಗಿಸಲು ಸಾಧ್ಯವಾದ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು. ಸಾರ್ವಜನಿಕರು ನೀರನ್ನು ಮಿತವಾಗಿ ಬಳಸಬೇಕು,ಪೋಲು ಮಾಡಬಾರದು ಎಂದು ಮನವಿ ಮಾಡಿದರು. ನಗರದ ದೊಡ್ಡಪೇಟೆ ರಸ್ತೆಯನ್ನು ಅಗಲೀಕರಣಗೊಳಿಸಲು ಮಾರ್ಕ್ ಮಾಡಲಾಗಿದೆ. ರಸ್ತೆಯ ಮದ್ಯದಿಂದ ಎರಡು ಕಡೆ 6 ಮೀಟರ್ ಇರುತ್ತದೆ. 2–3 ದಿನಗಳಲ್ಲಿ ರಸ್ತೆಯ ನಿವಾಸಿಗಳ ಸಭೆಯನ್ನು ಕರೆಯಲಾಗುವುದು. ರೈಲ್ವೆ ನಿಲ್ದಾಣ ಮತ್ತು 3–4 ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಾಗಿದ್ದು, ಆ ಭಾಗದ ನಾಗರಿಕರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. ಆಢಳಿತಾಧಿಕಾರಿಗಳ ಆದೇಶದಂತೆ ವಿವಿಧ ಅನುದಾನದಿಂದ ಒಂದು ಸಾವಿರ ದೀಪಗಳನ್ನು ಖರೀದಿಸಿ, ನಗರದಾದ್ಯಂತ ಹೊಸ ಬೀದಿ ದೀಪಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ. ಮುಂದಿನ ನಾಲ್ಕೈದು ದಿನಗಳಲ್ಲಿ ಈ ಕಾರ್ಯ ಪೂರ್ಣಗೊಳ್ಳಲಿದೆ.ನಗರದ ಸರ್ವತೋಮುಖ ಅಭಿವೃದ್ಧಿಗೆ ನಾಗರಿಕರು ಸಹಕರಿಸಬೇಕೆಂದು ಪೌರಾಯುಕ್ತರಾದ ಜಿ.ಎನ್.ಚಲಪತಿ ರವರು ಮನವಿ ಮಾಡಿದರು. ವರದಿ:-ಸೀನ. ಟಿ ಚಿಂತಾಮಣಿ4