Shuru
Apke Nagar Ki App…
Shilpa
More news from ಕರ್ನಾಟಕ and nearby areas
- ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ನಾಗಪುರದಲ್ಲಿರುವ ಶ್ರೀ ಲಕ್ಷ್ಮೀದೇವಿ ರೈಸ್ ಕಾರ್ನರ್ ಅಂಗಡಿಯಲ್ಲಿ ಮಧ್ಯರಾತ್ರಿ ತೆಂಗಿನಕಾಯಿ ಕಳ್ಳತನ ನಡೆದಿರುವ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಂಗಡಿ ಮುಚ್ಚಿದ್ದ ವೇಳೆ ಮಹಿಳೆಯೊಬ್ಬಳು ಬೆಳಗಿನ ಜಾವ ಸುಮಾರು 3 ಗಂಟೆಗೆ ಬಂದು ಸುಮಾರು 15 ತೆಂಗಿನಕಾಯಿಗಳನ್ನು ಕದ್ದೊಯ್ದಿರುವುದು ದೃಶ್ಯಗಳಲ್ಲಿ ಕಾಣಿಸಿದೆ. ಇದೇ ಅಂಗಡಿಯಲ್ಲಿ ಈ ಹಿಂದೆ ಹಲವು ಬಾರಿ ಕಳ್ಳತನ ನಡೆದಿದ್ದರಿಂದ ಅಂಗಡಿ ಮಾಲೀಕರು ಕಳೆದ ಒಂದು ವಾರದಿಂದ ಖದೀಮೆಯನ್ನು ಹಿಡಿಯಲು ಕಾಯುತ್ತಿದ್ದರು ಎಂದು ತಿಳಿದುಬಂದಿದೆ. ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಆರೋಪಿಯನ್ನು ಪತ್ತೆಹಚ್ಚಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ.1
- Post by Shilpa3
- ನೆಲಮಂಗಲದಲ್ಲಿ ಬಾಲಕಿಯ ಬಾಲ್ಯವಿವಾಹಕ್ಕೆ ಯತ್ನ! 17 ವರ್ಷದ ಬಾಲಕಿಯ ಬಲವಂತ ವಿವಾಹಕ್ಕೆ ತಡೆ ನೆಲಮಂಗಲ ಕವಾಡಿಮಠದ ವೀರಭದ್ರೇಶ್ವರದಲ್ಲಿ ಕಲ್ಯಾಣ ಮಂಟಪದಲ್ಲಿ ಘಟನೆ ಮಧ್ಯರಾತ್ರಿ 1098 ಮಕ್ಕಳ ಸಹಾಯವಾಣಿಗೆ ಕರೆಮಾಡಿ ಮಾಹಿತಿ ಮಾಹಿತಿ ತಿಳಿಯುತ್ತಿದ್ದಂತೆ ಅಧಿಕಾರಿಗಳ ದಾಳಿ, ಪರಿಶೀಲನೆ ಬಾಲಕಿ ದಾಖಲೆ ಪರಿಶೀಲನೆ ವೇಳೆ ಅಪ್ರಾಪ್ತತೆ ಎಂದು ಬಹಿರಂಗ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ತಂಡದಿಂದ ಕಾರ್ಯಾಚರಣೆ ನೆಲಮಂಗಲ ಟೌನ್ ಪೊಲೀಸರ ಸಹಾಯದಲ್ಲಿ ದಾಳಿ 18 ವರ್ಷದ ಒಳಗಿನ ಬಾಲಕಿ ಆದ್ದರಿಂದ ಬಾಲ್ಯ ವಿವಾಹವೆಂದು ಪರಿಗಣಿಸಿ ಪ್ರಕರಣ ಮಧ್ಯರಾತ್ರಿ 3 ಗಂಟೆಗೆ ದಾಳಿ ನಡೆಸಿ ಬಾಲಕಿ ರಕ್ಷಣೆ ತಾಯಿಯೊಂದಿಗೆ ಸುರಕ್ಷಿತ ಸ್ಥಳಕ್ಕೆ ಬಾಲಕಿ ಸ್ಥಳಾಂತರ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲು ಕ್ರಮ ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲು.4
- Post by Chand Pasha1
- KOLAR KI.AWAAZ KOUSAR1
- ಹನೂರು ತಾಲೂಕಿನ ಪಿಜಿಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎರಡನೇ ವಾರ್ಡ್ನಲ್ಲಿ ಕುಡಿಯುವ ನೀರಿನ ತೀವ್ರ ಅಭಾವ ಉಂಟಾಗಿ, ಗ್ರಾಮಸ್ಥರು ಸಂಕಷ್ಟಕ್ಕೊಳಗಾಗಿದ್ದಾರೆ. ಸಮಸ್ಯೆಯಿಂದ ಬೇಸತ್ತ ಮಹಿಳೆಯರು ಬುಧವಾರ ಖಾಲಿ ಬಿಂದಿಗೆಗಳನ್ನು ಹಿಡಿದು ತಮ್ಮ ಆಕ್ರೋಶ ಮತ್ತು ನೋವನ್ನು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಹಿಳೆಯರು, “ಎರಡನೇ ವಾರ್ಡ್ನಲ್ಲಿ ವಾಸಿಸುವ ಕ್ರಿಶ್ಚಿಯನ್ ಸಮುದಾಯದ ಜನರು ನೀರಿನ ಕೊರತೆಯಿಂದ ದಿನನಿತ್ಯದ ಜೀವನ ನಡೆಸುವುದು ದುಸ್ತರವಾಗಿದೆ. ಕುಡಿಯಲು ನೀರಿಲ್ಲದೆ, ಶೌಚಾಲಯಗಳಿಗೂ ನೀರಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ನಾವು ತೀವ್ರ ಸಂಕಷ್ಟ ಅನುಭವಿಸುತ್ತಿದ್ದೇವೆ,” ಎಂದು ಹೇಳಿದರು. “ನಾವು ಅಲ್ಪಸಂಖ್ಯಾತರು. ನಮ್ಮ ಸಮಸ್ಯೆಯನ್ನು ಕೇಳುವವರೇ ಇಲ್ಲ. ನಮಗೆ ಬೇರೆ ಏನೂ ಬೇಡ, ಕುಡಿಯಲು ನೀರು ಕೊಟ್ಟರೆ ಸಾಕು,” ಎಂದು ಮಹಿಳೆಯರು ಕಳವಳ ವ್ಯಕ್ತಪಡಿಸಿದರು.1
- ಕೊಳ್ಳೇಗಾಲ. ಕರ್ನಾಟಕ ರಕ್ಷಣಾ ವೇದಿಕೆ( ಪ್ರವೀಣ್ ಶೆಟ್ಟಿ ಬಣ) ವತಿಯಿಂದ ಇಂದು ಡಾ.ಬಿ.ಆರ್.ಅಂಬೇಡ್ಕರ್ ರವರ ಜನ್ಮದಿನದಂದು ಸರ್ಕಾರಿ ಕಚೇರಿಗಳಿಗೆ ವಿದ್ಯುತ್ ದೀಪಾಲಂಕರ ಮಾಡದೇ ಅಪಮಾನ ಎಸಗಿರುವುದನ್ನು ಖಂಡಿಸಿ ಮನವಿ ಸಲ್ಲಿಸಿದರು. ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಕರವೇ ತಾಲ್ಲೂಕು ಅಧ್ಯಕ್ಷ ಜಗದೀಶ್ ಶಾಸ್ತ್ರೀ ಹಾಗೂ ಪದಾಧಿಕಾರಿಗಳು ಜಮಾಯಿಸಿ ಶಿರೆಸ್ತದಾರ್ ಕೃಪಕಾರ್ ರವರಿಗೆ ಮನವಿ ಸಲ್ಲಿಸಿದರು. ತಾಲ್ಲೂಕು ಅಧ್ಯಕ್ಷ ಜಗದೀಶ್ ಶಾಸ್ತ್ರೀ ಮಾತನಾಡಿ ಪ್ರಜಾಪ್ರಭುತ್ವದ ಪಿತಾಮಹ, ರಾಷ್ಟ್ರನಾಯಕ ಡಾ. ಅಂಬೇಡ್ಕರ್ರವರ 135ನೇ ಜಯಂತಿಯನ್ನು ರಾಷ್ಟ್ರ ಅಂತರಾಷ್ಟ್ರೀಯ ಮಟ್ಟದಲ್ಲಿ ಬಹಳ ಗೌರವ ಪೂರ್ವಕವಾಗಿ ಆಚರಣೆ ಮಾಡುತ್ತೀರುವುದು ನಮ್ಮೇಲ್ಲರಿಗೂ ತಿಳಿದಿರುವು ನಿಮಗೂ ಸಹ ತಿಳಿದಿಲಿದೆ. ಆದರೆ ಕೊಳ್ಳೇಗಾಲ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯು ಕೂಡ ಆಚರಣೆ ಮಾಡಿದೆ ಆದರೆ ಕೆಲವು ತಾಲ್ಲೂಕಿನ ವಿವಿಧ ಇಲಾಖೆಗಳು ನಿಯಮ ವಾಗಿ ದೀಪಾಲಂಕರ ಮಾಡದೆ, ಕಾಟಚಾರಕ್ಕೆ ಜಯಂತಿಯನ್ನು ಮಾಡಿರುತ್ತಾರೆ, ಹಾಗಾಗಿ ಇಂತವರ ವಿರುದ್ಧ ಕಾನೂನು ಪ್ರಕಾರ ಕ್ರಮಕೈಗೊಳ್ಳಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು. ಈ ಸಂಧರ್ಭದಲ್ಲಿ ಕರವೇ ತಾಲ್ಲೂಕು ಅಧ್ಯಕ್ಷ ಜಗದೀಶ್ ಶಾಸ್ತ್ರೀ, ಉಪಾಧ್ಯಕ್ಷರು ಮೊಹಮ್ಮದ್ ಅಬ್ಜಲ್, ಯೂನುಸ್ ಪಾಷ, ಪ್ರಧಾನ ಕಾರ್ಯದರ್ಶಿ ನಾಗರಾಜು, ಚೇತನ್, ಚಂದನ್ ಇದ್ದರು.1
- ಬೆಂಗಳೂರು ಏರ್ಪೋರ್ಟ್ನಿಂದ ಹುಬ್ಬಳ್ಳಿಗೆ ತೆರಳುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಎಂಎಲ್ಸಿ ನಾಜಿರ್ ಅಹಮದ್ ರಾಜ್ಯ ರಾಜಕಾರಣದ ಪ್ರಚಲಿತ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯೆ ನೀಡಿದರು. ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಶಾಸಕರು ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ದಾವಣಗೆರೆ ಉಪಚುನಾವಣೆ ಹಾಗೂ ಮುಸ್ಲಿಂ ಮುಖಂಡರ ನಡುವಿನ ಭಿನ್ನಾಭಿಪ್ರಾಯದ ಪ್ರಶ್ನೆಗೆ ಉತ್ತರಿಸಿದ ಅವರು, ಹೈಕಮಾಂಡ್ ಎಲ್ಲಾ ಬೆಳವಣಿಗೆಗಳನ್ನು ಗಮನಿಸುತ್ತಿದೆ ಎಂದು ಹೇಳಿದರು. ಈ ಹೇಳಿಕೆ ರಾಜ್ಯ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.1