Shuru
Apke Nagar Ki App…
ಸಿರಗುಪ್ಪದಲ್ಲಿ ಸರ್ಕಾರಿ ಜಮೀನಿಗೆ ಕಾನೂನುಬಾಹಿರ 3ಬಿ ಖಾತಾ? ತನಿಖೆಗೆ ಆಗ್ರಹ ಸಿರಗುಪ್ಪ ನಗರಸಭೆ ವ್ಯಾಪ್ತಿಯಲ್ಲಿ ಸರ್ಕಾರಿ ಜಮೀನುಗಳಿಗೆ ಕಾನೂನುಬಾಹಿರವಾಗಿ ನಮೂನೆ-3ಬಿ ಖಾತಾ ನೀಡಿರುವ ಬಗ್ಗೆ ಗಂಭೀರ ಆರೋಪ ಕೇಳಿಬಂದಿದೆ. ಸರ್ವೇ ನಂ.437/ಬಿ2ರಲ್ಲಿ ಉದ್ಯಾನವನಕ್ಕಾಗಿ ಕಾಯ್ದಿರಿಸಿದ್ದ 3.05 ಎಕರೆ ಜಾಗದಲ್ಲಿ ಒತ್ತುವರಿ ಮಾಡಿಕೊಂಡಿರುವವರಿಗೆ ಖಾತಾ ನೀಡಲಾಗಿದೆ ಎನ್ನಲಾಗಿದೆ. ಇದೇ ರೀತಿ ಸರ್ವೇ ನಂ.337ಎ ಹಾಗೂ 345ಬಿ/1 ಸರ್ಕಾರಿ ಹಳ್ಳ ಪರಂಬೋಕು ಜಮೀನುಗಳಿಗೂ ಖಾತಾ ನೀಡಿರುವ ಬಗ್ಗೆ ದೂರು ಸಲ್ಲಿಸಲಾಗಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಡಳಿತಕ್ಕೆ ಆಗ್ರಹಿಸಲಾಗಿದೆ.
ASN News24Kannada
ಸಿರಗುಪ್ಪದಲ್ಲಿ ಸರ್ಕಾರಿ ಜಮೀನಿಗೆ ಕಾನೂನುಬಾಹಿರ 3ಬಿ ಖಾತಾ? ತನಿಖೆಗೆ ಆಗ್ರಹ ಸಿರಗುಪ್ಪ ನಗರಸಭೆ ವ್ಯಾಪ್ತಿಯಲ್ಲಿ ಸರ್ಕಾರಿ ಜಮೀನುಗಳಿಗೆ ಕಾನೂನುಬಾಹಿರವಾಗಿ ನಮೂನೆ-3ಬಿ ಖಾತಾ ನೀಡಿರುವ ಬಗ್ಗೆ ಗಂಭೀರ ಆರೋಪ ಕೇಳಿಬಂದಿದೆ. ಸರ್ವೇ ನಂ.437/ಬಿ2ರಲ್ಲಿ ಉದ್ಯಾನವನಕ್ಕಾಗಿ ಕಾಯ್ದಿರಿಸಿದ್ದ 3.05 ಎಕರೆ ಜಾಗದಲ್ಲಿ ಒತ್ತುವರಿ ಮಾಡಿಕೊಂಡಿರುವವರಿಗೆ ಖಾತಾ ನೀಡಲಾಗಿದೆ ಎನ್ನಲಾಗಿದೆ. ಇದೇ ರೀತಿ ಸರ್ವೇ ನಂ.337ಎ ಹಾಗೂ 345ಬಿ/1 ಸರ್ಕಾರಿ ಹಳ್ಳ ಪರಂಬೋಕು ಜಮೀನುಗಳಿಗೂ ಖಾತಾ ನೀಡಿರುವ ಬಗ್ಗೆ ದೂರು ಸಲ್ಲಿಸಲಾಗಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಡಳಿತಕ್ಕೆ ಆಗ್ರಹಿಸಲಾಗಿದೆ.
More news from Karnataka and nearby areas
- ಭಾಲ್ಕಿಯಲ್ಲಿ ಎ. 20ರಿಂದ ಬಸವ ಜಯಂತಿ ಹಾಗೂ ವಚನ ಜಾತ್ರೆ ಸಂಭ್ರಮ; ಏಪ್ರಿಲ್ 18ಕ್ಕೆ ಬೈಕ್ ರ್ಯಾಲಿ #jb_news_kannada #bidar #bhalki1
- ಬಳ್ಳಾರಿ ಮಹಾನಗರ ಪಾಲಿಕೆ 2026-27ನೇ ಸಾಲಿನ ಆಸ್ತಿ ತೆರಿಗೆ ಪಾವತಿದಾರರಿಗೆ ವಿಶೇಷ ರಿಯಾಯಿತಿಗಳನ್ನು ಘೋಷಿಸಿದೆ 💰 👉 ಏಪ್ರಿಲ್ 1 ರಿಂದ 30ರವರೆಗೆ ಪಾವತಿಸಿದರೆ 5% ರಿಯಾಯಿತಿ 👉 ಮೇ 1 ರಿಂದ ಜೂನ್ 30ರವರೆಗೆ ದಂಡವಿಲ್ಲದೆ ಪಾವತಿ ಅವಕಾಶ 👉 ಜುಲೈ 1ರಿಂದ ಪ್ರತಿ ತಿಂಗಳು 2% ದಂಡ ಪಾಲಿಕೆ ಆಯುಕ್ತರು, ನಗರದ ಅಭಿವೃದ್ಧಿಗೆ ನಾಗರಿಕರ ಸಹಕಾರ ಅಗತ್ಯ ಎಂದು ಮನವಿ ಮಾಡಿ, ಸಕಾಲದಲ್ಲಿ ತೆರಿಗೆ ಪಾವತಿಸಿ ಲಾಭ ಪಡೆಯಲು ಕರೆ ನೀಡಿದ್ದಾರೆ.1
- ಮನೆ ಕಳ್ಳತನ ಮಾಡಿದ್ದ ಆರೋಪಿ ಬಂಧನ; ₹1,90,000 ಜಪ್ತಿ ಕೂಡ್ಲಿಗಿ ಮನೆ ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕಾನಹೊಸಹಳ್ಳಿಯ ಪೊಲೀಸರು ಯಶಸ್ವಿಯಾಗಿದರೆ. ನಜೀರ್ ಶಫಿ ಬಂಧಿತ ಆರೋಪಿ, ಕಾನಹೊಸಹಳ್ಳಿ ಪೊಲೀಸ್ ಠಾಣ ವ್ಯಾಪ್ತಿಯ ಮಂಗಾಪುರ ಗ್ರಾಮದಲ್ಲಿ ಜನವರಿ ಹಾಗು ಡಿಸೆಂಬರ್ ತಿಂಗಳಲ್ಲಿ ಎರಡು ಪ್ರತ್ಯಕ ಮನೆಗಳ್ಳತಾನವಾದ ಕುರಿತು ಪ್ರಕರಣ ದಾಕಲಾಗಿದ್ದವು, ಪ್ರಕರಣದ ಜಾಡು ಹಿಡಿದ ಕಾನಾಹೊಸಹಳ್ಳಿ ಪೊಲೀಸರು ಆರೋಪಿಯನ್ನು ಬಂಧಿಸಿ ₹1,90000 ಹಣವನ್ನು ವಶಕ್ಕೆ ಪಡೆದಿದ್ದಾರೆ. ಮಂಗಪುರದ ಬಸವರಾಜ ಎಂಬುವವರ ಮನೆಯಲ್ಲಿ ಬೀರುವಿನಲ್ಲಿದ್ದ 145000 ಹಾಗೂ ಗುರುಬಸವರಾಜ್ ಎಂಬುವವರ ಮನೆಯಲ್ಲಿ ₹55000 ಹಣವನ್ನು ಯಾರು ಇಲ್ಲದ ವೇಳೆ ಕಳ್ಳತನ ಮಾಡಿರುವ ಬಗ್ಗೆ ಪ್ರಕರಣ ದಾಕಲಾಗಿತ್ತು. ಎಸ್ಪಿ ಜಾಹ್ನವಿ ಎಸ್, ಎಎಸ್ಪಿ ಮಂಜುನಾಥ, ಡಿವೈಸ್ಪಿ ಮಲ್ಲೇಶ್ ದೊಡ್ಡಮನಿ, ಸಿಪಿಐ ಡಿ ದುರುಗಪ್ಪ ಮಾರ್ಗದರ್ಶನದಲ್ಲಿ ಪಿಎಸ್ಐ ಸಿದ್ರಾಮ್ ಬಿದರಾಣಿ ನೇತೃತ್ವದಲ್ಲಿ ಸಿಬಂದ್ದಿ ಕೃಷ್ಣಪ್ಪ, ಸುರೇಶ್, ಕೊಟ್ರೇಶ ಅಂಗಡಿ, ಸಿದ್ದಲಿಂಗಪ್ಪ, ವಿನಾಯಕ್, ಸಂದೀಪ್, ರವಿಚಂದ್ರ ಗೌಡ, ಕೃಷ್ಣ ನಾಯಕ್ ಒಳಗೊಂಡ ತಂಡ ಕಾರ್ಯಾಚರಣೆ ನಡೆಸಿದೆ. ಕಾರ್ಯಾಚರಣೆಯಲ್ಲಿ ಭಾಗಿಯಾದ ಅಧಿಕಾರಿ ಹಾಗೂ ಸಿಬಂದ್ದಿ ವರ್ಗಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್ ಜಾಹ್ನವಿ ಅಭಿನಂದಿಸಿದ್ದಾರೆ.1
- Post by Suresh Belagere1
- ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಾರೊಗೇರಿ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಶ್ರೀ ಆಂಜನೇಯಸ್ವಾಮಿ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನಡೆಯಿತು ಬೆಳಗ್ಗೆ ಗಂಗೆ ಹೋಗುವುದರಿಂದ ಪ್ರಾರಂಭವಾಯಿತು ಮಧ್ಯಾಹ್ನ ಮುಳ್ಳು ಪವಾಡ ಸಾಯಂಕಾಲ ಅಗ್ನಿ ಮಹೋತ್ಸವದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು1
- ಶಾಸಕರ ದೆಹಲಿ ಭೇಟಿ ಅವರ ಹಕ್ಕು - ಸಚಿವ ಎಚ್.ಕೆ. ಪಾಟೀಲ್ ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಶಾಸಕರ ದೆಹಲಿ ಭೇಟಿ ಈಗ ಭಾರಿ ಚರ್ಚೆಗೆ ಪ್ರತಿಕ್ರಿಯಿಸಿರುವ ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಅವರು, ಶಾಸಕರ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. "ದೆಹಲಿಗೆ ಹೋಗುವುದು ಅವರ ಹಕ್ಕು" ಎಂದು ಹೇಳುವ ಮೂಲಕ ಪ್ರತಿಪಕ್ಷಗಳ ಟೀಕೆಗೆ ತಿರುಗೇಟು ನೀಡಿದ್ದಾರೆ. ದೆಹಲಿಗೆ ಹೋಗುವುದು ಮತ್ತು ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವುದು ಪ್ರಜಾಪ್ರಭುತ್ವದಲ್ಲಿ ಶಾಸಕರಿಗಿರುವ ಮುಕ್ತ ಅವಕಾಶ. ಅಸಮಾಧಾನದ ಪ್ರಶ್ನೆಯಿಲ್ಲ: ಈ ಭೇಟಿಯನ್ನು ಕೇವಲ ಅಸಮಾಧಾನ ಅಥವಾ ಬಂಡಾಯ ಎಂದು ಬಿಂಬಿಸುವುದು ತಪ್ಪು. ಕ್ಷೇತ್ರದ ಅಭಿವೃದ್ಧಿ ಅಥವಾ ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಚರ್ಚಿಸಲು ದೆಹಲಿಗೆ ತೆರಳಿರುತ್ತಾರೆ. ಗದಗ ಜಿಲ್ಲಾ ಪ್ರವಾಸದಲ್ಲಿರುವ ಸಚಿವ ಎಚ್.ಕೆ. ಪಾಟೀಲ್ ಅವರು ಇಂದು ಮಾಧ್ಯಮಗಳೊಂದಿಗೆ ಮಾತನಾಡಿದರು. ರಾಜ್ಯದ ಹಲವು ಕಾಂಗ್ರೆಸ್ ಶಾಸಕರು ತಂಡೋಪತಂಡವಾಗಿ ದೆಹಲಿಗೆ ತೆರಳುತ್ತಿರುವ ವಿಚಾರದ ಬಗ್ಗೆ ಕೇಳಲಾದ ಪ್ರಶ್ನೆಗೆ ಅವರು ಸ್ಪಷ್ಟನೆ ನೀಡಿದರು.1
- ಹೊಳಲ್ಕೆರೆ ಅಂಗಡಿ ಹೋಟೆಲ್ ಗಳ ಮೇಲೆ ತಹಶಿಲ್ದಾರ್ ವಿಜಯ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಿ ಅಕ್ರಮ ಸಿಲಿಂಡರ್ ಗಳನ್ನ ವಷಕ್ಕೆ ಪಡೆಯಲಾಗಿದೆ. ಇನ್ನೂ ಸಿಲಿಂಡರ್ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಅಕ್ರಮವಾಗಿ ಸಿಲಿಂಡರ್ ಗಳನ್ನ ಏಜೆನ್ಸಿ ಮಾಲೀಕರು ಮಾರಾಟ ಮಾಡುತ್ತಿದ್ದ ಬಗ್ಗೆ ಆರೋಪಗಳು ಕೇಳಿ ಬರುತ್ತಿದ್ದು ಈ ಹಿನ್ನೆಲೆ ದಾಳಿ ನಡೆಸಿ ಸಿಲಿಂಡರ್ ಗಳನ್ನ ವಷಕ್ಕೆ ಪಡೆದಿದ್ದಾರೆ.1
- Post by Suresh Belagere1