logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ರೋಣ ಪಟ್ಟಣದ ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ವಿಶ್ವ ತಂಬಾಕು ರಹಿತ ದಿನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಹಿರಿಯ ದಿವಾನಿ ನ್ಯಾಯಾಧೀಶರಾದ ಹೆಚ್. ಮಹಾದೇವಪ್ಪ ಅವರು, ತಂಬಾಕು ಮನುಷ್ಯನ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿ ಸೇರಿಕೊಂಡು, ತನ್ನ ಕರಾಳ ಬಾಹುಗಳಿಂದ ಆರೋಗ್ಯದ ಮೇಲೆ ಮಾರಕ ಪರಿಣಾಮ ಬೀರುತ್ತಿದೆ ಎಂದು ಎಚ್ಚರಿಸಿದರು. ಆದ್ದರಿಂದ ಪ್ರತಿಯೊಬ್ಬರೂ 'ಜೀವನ ಆಯ್ದುಕೊಳ್ಳಿ, ತಂಬಾಕನಲ್ಲ' ಎಂಬ ಸ್ಪಷ್ಟ ಸಂದೇಶವನ್ನು ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಜಿಲ್ಲಾ ಮಾಹಿತಿ ಶಿಕ್ಷಣ ಸಂವಹನ ವಿಭಾಗ (ಗದಗ), ತಾಲ್ಲೂಕು ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಆರಕ್ಷಕ ಇಲಾಖೆ, ಪೌರಾಡಳಿತ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಕ್ಯಾನ್ಸರ್, ಶರಣರ ಶಿಕ್ಷಣ ಸಮಿತಿಯ ಪ್ಯಾರಾಮೆಡಿಕಲ್ ಕಾಲೇಜ್, ರಾಜೀವ್ ಗಾಂಧಿ ಶಿಕ್ಷಣ ಸಂಸ್ಥೆಯ ನರ್ಸಿಂಗ್ ಕಾಲೇಜ್ ಹಾಗೂ ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯ, ರೋಣ ಇವರ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮ ಜರುಗಿತು. ನ್ಯಾ. ಮಹಾದೇವಪ್ಪ ಹೆಚ್. ಅವರು ತಂಬಾಕು ಮನುಷ್ಯನ ಜೀವನದಲ್ಲಿ ಹಾಸುಹೊಕ್ಕಾಗಿರುವುದನ್ನು ಪ್ರಸ್ತಾಪಿಸಿ, ಪ್ರತಿ ವರ್ಷ ತಂಬಾಕಿನಿಂದ 10 ದಶಲಕ್ಷ ಸಾವುಗಳು ಮತ್ತು ಪ್ಯಾಸೀವ್ ಸ್ಮೋಕ್‌ನಿಂದ 15 ಲಕ್ಷ ಸಾವುಗಳು ಸಂಭವಿಸುತ್ತಿವೆ ಎಂದು ತಿಳಿಸಿದರು. ಇಂತಹ ಮರಣಾಂತಿಕ ಮಾದಕ ವಸ್ತುವಿನಿಂದ ಸಾರ್ವಜನಿಕರು ದೂರವಿರಬೇಕೆಂದು ಅವರು ಕರೆ ನೀಡಿದರು. ಕಾರ್ಯಕ್ರಮದ ಇನ್ನೋರ್ವ ಅತಿಥಿಯಾದ ಅಧಿಕ ದಿವಾನಿ ನ್ಯಾಯಾಧೀಶರಾದ ವಿಜಯಕುಮಾರ್ ಎನ್. ಮಾತನಾಡಿ, ಮನುಷ್ಯ ಸಂಪತ್ತು ಕ್ರೋಡೀಕರಣವಾದ ಮೇಲೆ ಅನೇಕ ದುಶ್ಚಟಗಳಿಗೆ ಬಲಿಯಾಗಿ ತನ್ನ ಜೀವನವನ್ನೇ ಹಾಳು ಮಾಡಿಕೊಳ್ಳುತ್ತಿದ್ದಾನೆ. ಆದ್ದರಿಂದ ಯುವಜನತೆ ಮತ್ತು ಮಾದಕ ವಸ್ತುವಿನ ವ್ಯಸನಿಗಳಾದವರು ಕ್ಯಾನ್ಸರ್‌ಕಾರಕ ಮತ್ತು ಅತ್ಯಂತ ವಿಷಕಾರಿ ಪದಾರ್ಥವಾದ ತಂಬಾಕಿನಿಂದ ದೂರವಿರಬೇಕು ಎಂದು ಸಲಹೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಥಮಿಕ ಆರೋಗ್ಯ ಕೇಂದ್ರ ಮುಶಿಗೇರಿಯ ಆಡಳಿತ ವೈದ್ಯಾಧಿಕಾರಿಗಳಾದ ಡಾ. ಚಿದಾನಂದ ಮುಂಡಾಸದ ಅವರು ತಂಬಾಕಿನಲ್ಲಿ ಸುಮಾರು ಏಳು ಸಾವಿರ ವಿಷರಸಾಯನಿಕಗಳಿದ್ದು, ಅವುಗಳಲ್ಲಿ 70 ರಾಸಾಯನಿಕಗಳು ಕ್ಯಾನ್ಸರ್‌ಕಾರಕಗಳಾಗಿವೆ ಎಂದು ವಿವರಿಸಿದರು. ನಿಕೋಟಿನ್, ನೈಟ್ರೋಸೋಮೈನ್, ಬೆಂಜಿನ್, ಪಾಲಿಸೈಕ್ಲಿಕ್ ಏರೋಮೆಟಿಕ್ ಹೈಡ್ರೋಕಾರ್ಬನ್, ಭಾರಲೋಹಗಳು ಇವುಗಳಲ್ಲಿ ವ್ಯಾಪಕವಾಗಿ ಕಂಡುಬರುತ್ತವೆ. ಇಂತಹ ಮಾದಕ ವಸ್ತು ಸೇವನೆಯಿಂದ ಶ್ವಾಸಕೋಶದ ಕ್ಯಾನ್ಸರ್, ಹೃದಯಾಘಾತ, ಪಾರ್ಶ್ವವಾಯು, ಬಾಯಿ ಕ್ಯಾನ್ಸರ್ ಹಾಗೂ ದೀರ್ಘಕಾಲದ ಉಸಿರಾಟದ ಕಾಯಿಲೆಗಳು ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳಿಂದ ಉಂಟಾಗುತ್ತಿದ್ದು, ಸಾರ್ವಜನಿಕರು ಈ ಬಗ್ಗೆ ಎಚ್ಚೆತ್ತುಕೊಂಡು ಸಾವಿನ ದವಡೆಗೆ ಸಿಲುಕದೆ, ತಡೆಗಟ್ಟಬಹುದಾದ ಸಾವಿನಿಂದ ಪಾರಾಗಬೇಕೆಂದು ಅವರು ಹೇಳಿದರು. ಈ ಕಾರ್ಯಕ್ರಮದ ವೇದಿಕೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಈಶ್ವರ ಕುರಿ, ಆರಕ್ಷಕ ಇಲಾಖೆಯ ರೋಣದ ಪಿಎಸ್‌ಐ ವಿ.ಎಸ್. ಸವಡಿ, ಪುರಸಭೆ ರೋಣದ ನಬಿಸಾಬ್ ಕಂದಗಲ್, ಶರಣರ ಶಿಕ್ಷಣ ಸಂಸ್ಥೆಯ ಪ್ರಾಚಾರ್ಯರಾದ ಪ್ರಮೋದ್ ಚರಂತಿಮಠ, ವಕೀಲರ ಸಂಘದ ಉಪಾಧ್ಯಕ್ಷರಾದ ಶ್ರೀಮತಿ ವಿ.ಎಸ್. ಮಠದ, ಕಾರ್ಯದರ್ಶಿಗಳಾದ ಎಂ.ಹೆಚ್. ಮುಲ್ಲಾ, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಕೆ.ಎ. ಹಾದಿಮನಿ, ಆರ್‌ಬಿಎಸ್‌ಕೆ ವೈದ್ಯಾಧಿಕಾರಿಗಳಾದ ಡಾ. ರಾಘು ಹೊಸೂರ್, ಡಾ. ಸುನಿಲ್ ಸಾರಂಗಮಠ, ಡಾ. ದಾನಮ್ಮ ಹೆಚ್., ಡಾ. ನಾಗರಾಜ್ ಸತ್ತಿಗೇರಿ ಹಾಗೂ ಪ್ರಭಾರಿ ತಾಲ್ಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಬಿ.ಆರ್. ಪಾಟೀಲ್ ಸೇರಿದಂತೆ ಹಲವರು ಹಾಜರಿದ್ದರು.

1 hr ago
user_ಪ್ರಕಾಶ ಗುದ್ನೇಪ್ಪನವರ.
ಪ್ರಕಾಶ ಗುದ್ನೇಪ್ಪನವರ.
Local News Reporter ಗದಗ, ಗದಗ, ಕರ್ನಾಟಕ•
1 hr ago
4a7517c6-a6a7-4ecc-98ce-fb6c5d785fd2

ರೋಣ ಪಟ್ಟಣದ ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ವಿಶ್ವ ತಂಬಾಕು ರಹಿತ ದಿನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಹಿರಿಯ ದಿವಾನಿ ನ್ಯಾಯಾಧೀಶರಾದ ಹೆಚ್. ಮಹಾದೇವಪ್ಪ ಅವರು, ತಂಬಾಕು ಮನುಷ್ಯನ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿ ಸೇರಿಕೊಂಡು, ತನ್ನ ಕರಾಳ ಬಾಹುಗಳಿಂದ ಆರೋಗ್ಯದ ಮೇಲೆ ಮಾರಕ ಪರಿಣಾಮ ಬೀರುತ್ತಿದೆ ಎಂದು ಎಚ್ಚರಿಸಿದರು. ಆದ್ದರಿಂದ ಪ್ರತಿಯೊಬ್ಬರೂ 'ಜೀವನ ಆಯ್ದುಕೊಳ್ಳಿ, ತಂಬಾಕನಲ್ಲ' ಎಂಬ ಸ್ಪಷ್ಟ ಸಂದೇಶವನ್ನು ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಜಿಲ್ಲಾ ಮಾಹಿತಿ ಶಿಕ್ಷಣ ಸಂವಹನ ವಿಭಾಗ (ಗದಗ), ತಾಲ್ಲೂಕು ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಆರಕ್ಷಕ ಇಲಾಖೆ, ಪೌರಾಡಳಿತ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಕ್ಯಾನ್ಸರ್, ಶರಣರ ಶಿಕ್ಷಣ ಸಮಿತಿಯ ಪ್ಯಾರಾಮೆಡಿಕಲ್ ಕಾಲೇಜ್, ರಾಜೀವ್ ಗಾಂಧಿ ಶಿಕ್ಷಣ ಸಂಸ್ಥೆಯ ನರ್ಸಿಂಗ್ ಕಾಲೇಜ್ ಹಾಗೂ ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯ, ರೋಣ ಇವರ

71ccda1b-4419-4da3-a941-40cfc60f8b40

ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮ ಜರುಗಿತು. ನ್ಯಾ. ಮಹಾದೇವಪ್ಪ ಹೆಚ್. ಅವರು ತಂಬಾಕು ಮನುಷ್ಯನ ಜೀವನದಲ್ಲಿ ಹಾಸುಹೊಕ್ಕಾಗಿರುವುದನ್ನು ಪ್ರಸ್ತಾಪಿಸಿ, ಪ್ರತಿ ವರ್ಷ ತಂಬಾಕಿನಿಂದ 10 ದಶಲಕ್ಷ ಸಾವುಗಳು ಮತ್ತು ಪ್ಯಾಸೀವ್ ಸ್ಮೋಕ್‌ನಿಂದ 15 ಲಕ್ಷ ಸಾವುಗಳು ಸಂಭವಿಸುತ್ತಿವೆ ಎಂದು ತಿಳಿಸಿದರು. ಇಂತಹ ಮರಣಾಂತಿಕ ಮಾದಕ ವಸ್ತುವಿನಿಂದ ಸಾರ್ವಜನಿಕರು ದೂರವಿರಬೇಕೆಂದು ಅವರು ಕರೆ ನೀಡಿದರು. ಕಾರ್ಯಕ್ರಮದ ಇನ್ನೋರ್ವ ಅತಿಥಿಯಾದ ಅಧಿಕ ದಿವಾನಿ ನ್ಯಾಯಾಧೀಶರಾದ ವಿಜಯಕುಮಾರ್ ಎನ್. ಮಾತನಾಡಿ, ಮನುಷ್ಯ ಸಂಪತ್ತು ಕ್ರೋಡೀಕರಣವಾದ ಮೇಲೆ ಅನೇಕ ದುಶ್ಚಟಗಳಿಗೆ ಬಲಿಯಾಗಿ ತನ್ನ ಜೀವನವನ್ನೇ ಹಾಳು ಮಾಡಿಕೊಳ್ಳುತ್ತಿದ್ದಾನೆ. ಆದ್ದರಿಂದ ಯುವಜನತೆ ಮತ್ತು ಮಾದಕ ವಸ್ತುವಿನ ವ್ಯಸನಿಗಳಾದವರು ಕ್ಯಾನ್ಸರ್‌ಕಾರಕ ಮತ್ತು ಅತ್ಯಂತ ವಿಷಕಾರಿ ಪದಾರ್ಥವಾದ ತಂಬಾಕಿನಿಂದ ದೂರವಿರಬೇಕು ಎಂದು ಸಲಹೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಥಮಿಕ ಆರೋಗ್ಯ ಕೇಂದ್ರ ಮುಶಿಗೇರಿಯ ಆಡಳಿತ ವೈದ್ಯಾಧಿಕಾರಿಗಳಾದ ಡಾ. ಚಿದಾನಂದ ಮುಂಡಾಸದ ಅವರು ತಂಬಾಕಿನಲ್ಲಿ ಸುಮಾರು ಏಳು ಸಾವಿರ ವಿಷರಸಾಯನಿಕಗಳಿದ್ದು, ಅವುಗಳಲ್ಲಿ 70 ರಾಸಾಯನಿಕಗಳು ಕ್ಯಾನ್ಸರ್‌ಕಾರಕಗಳಾಗಿವೆ ಎಂದು ವಿವರಿಸಿದರು. ನಿಕೋಟಿನ್, ನೈಟ್ರೋಸೋಮೈನ್, ಬೆಂಜಿನ್, ಪಾಲಿಸೈಕ್ಲಿಕ್

013199b7-0d65-4058-b6a6-790564de52ce

ಏರೋಮೆಟಿಕ್ ಹೈಡ್ರೋಕಾರ್ಬನ್, ಭಾರಲೋಹಗಳು ಇವುಗಳಲ್ಲಿ ವ್ಯಾಪಕವಾಗಿ ಕಂಡುಬರುತ್ತವೆ. ಇಂತಹ ಮಾದಕ ವಸ್ತು ಸೇವನೆಯಿಂದ ಶ್ವಾಸಕೋಶದ ಕ್ಯಾನ್ಸರ್, ಹೃದಯಾಘಾತ, ಪಾರ್ಶ್ವವಾಯು, ಬಾಯಿ ಕ್ಯಾನ್ಸರ್ ಹಾಗೂ ದೀರ್ಘಕಾಲದ ಉಸಿರಾಟದ ಕಾಯಿಲೆಗಳು ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳಿಂದ ಉಂಟಾಗುತ್ತಿದ್ದು, ಸಾರ್ವಜನಿಕರು ಈ ಬಗ್ಗೆ ಎಚ್ಚೆತ್ತುಕೊಂಡು ಸಾವಿನ ದವಡೆಗೆ ಸಿಲುಕದೆ, ತಡೆಗಟ್ಟಬಹುದಾದ ಸಾವಿನಿಂದ ಪಾರಾಗಬೇಕೆಂದು ಅವರು ಹೇಳಿದರು. ಈ ಕಾರ್ಯಕ್ರಮದ ವೇದಿಕೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಈಶ್ವರ ಕುರಿ, ಆರಕ್ಷಕ ಇಲಾಖೆಯ ರೋಣದ ಪಿಎಸ್‌ಐ ವಿ.ಎಸ್. ಸವಡಿ, ಪುರಸಭೆ ರೋಣದ ನಬಿಸಾಬ್ ಕಂದಗಲ್, ಶರಣರ ಶಿಕ್ಷಣ ಸಂಸ್ಥೆಯ ಪ್ರಾಚಾರ್ಯರಾದ ಪ್ರಮೋದ್ ಚರಂತಿಮಠ, ವಕೀಲರ ಸಂಘದ ಉಪಾಧ್ಯಕ್ಷರಾದ ಶ್ರೀಮತಿ ವಿ.ಎಸ್. ಮಠದ, ಕಾರ್ಯದರ್ಶಿಗಳಾದ ಎಂ.ಹೆಚ್. ಮುಲ್ಲಾ, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಕೆ.ಎ. ಹಾದಿಮನಿ, ಆರ್‌ಬಿಎಸ್‌ಕೆ ವೈದ್ಯಾಧಿಕಾರಿಗಳಾದ ಡಾ. ರಾಘು ಹೊಸೂರ್, ಡಾ. ಸುನಿಲ್ ಸಾರಂಗಮಠ, ಡಾ. ದಾನಮ್ಮ ಹೆಚ್., ಡಾ. ನಾಗರಾಜ್ ಸತ್ತಿಗೇರಿ ಹಾಗೂ ಪ್ರಭಾರಿ ತಾಲ್ಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಬಿ.ಆರ್. ಪಾಟೀಲ್ ಸೇರಿದಂತೆ ಹಲವರು ಹಾಜರಿದ್ದರು.

More news from ಕರ್ನಾಟಕ and nearby areas
  • ಮಾಜಿ ಶಾಸಕಿ ಸೀಮಾ ಮಸೂತಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಸಿದ್ದರಾಮಯ್ಯನವರು ಬಿಟ್ಟಿ ಭಾಗ್ಯಗಳನ್ನು ಘೋಷಣೆ ಮಾಡಿ ರಾಜ್ಯವನ್ನು ಅಧೋಗತಿಗೆ ತಲುಪಿಸಿ ರಾಜಿನಾಮೆ ಸಲ್ಲಿಸಿದ್ದಾರೆ ಎಂದು ಹೇಳಿದ್ದಾರೆ. ಧಾರವಾಡ ನಗರದಲ್ಲಿ ಈ ಕುರಿತು ಮಾತನಾಡಿದ ಅವರು, ರಾಜ್ಯದ ಆರ್ಥಿಕ ಪರಿಸ್ಥಿತಿ ಬಹಳಷ್ಟು ಹದಗೆಟ್ಟಿದೆ ಹಾಗೂ ಅಭಿವೃದ್ಧಿ ಕೆಲಸಗಳು ಕುಂಠಿತವಾಗಿವೆ ಎಂದರು. ಗ್ಯಾರಂಟಿ ಯೋಜನೆಗಳ ಕಡಿತ ಮಾಡಲಾಗುತ್ತಿದೆ ಎಂದು ದೂರಿದ ಅವರು, ಮುಂದೆ ಬರಲಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು. ಈ ಬೆಳವಣಿಗೆಗಳಿಂದ ರೋಸಿಹೋದ ಜನರು ಮುಂಬರುವ ದಿನಗಳಲ್ಲಿ ವಿಧಾನಸೌಧ ನುಗ್ಗಿ ಪ್ರತಿಭಟನೆ (ಹೊಡೆಯುವ) ನಡೆಸುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಸೀಮಾ ಮಸೂತಿ ಎಚ್ಚರಿಕೆ ನೀಡಿದರು.
    1
    ಮಾಜಿ ಶಾಸಕಿ ಸೀಮಾ ಮಸೂತಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಸಿದ್ದರಾಮಯ್ಯನವರು ಬಿಟ್ಟಿ ಭಾಗ್ಯಗಳನ್ನು ಘೋಷಣೆ ಮಾಡಿ ರಾಜ್ಯವನ್ನು ಅಧೋಗತಿಗೆ ತಲುಪಿಸಿ ರಾಜಿನಾಮೆ ಸಲ್ಲಿಸಿದ್ದಾರೆ ಎಂದು ಹೇಳಿದ್ದಾರೆ. ಧಾರವಾಡ ನಗರದಲ್ಲಿ ಈ ಕುರಿತು ಮಾತನಾಡಿದ ಅವರು, ರಾಜ್ಯದ ಆರ್ಥಿಕ ಪರಿಸ್ಥಿತಿ ಬಹಳಷ್ಟು ಹದಗೆಟ್ಟಿದೆ ಹಾಗೂ ಅಭಿವೃದ್ಧಿ ಕೆಲಸಗಳು ಕುಂಠಿತವಾಗಿವೆ ಎಂದರು.

ಗ್ಯಾರಂಟಿ ಯೋಜನೆಗಳ ಕಡಿತ ಮಾಡಲಾಗುತ್ತಿದೆ ಎಂದು ದೂರಿದ ಅವರು, ಮುಂದೆ ಬರಲಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು. ಈ ಬೆಳವಣಿಗೆಗಳಿಂದ ರೋಸಿಹೋದ ಜನರು ಮುಂಬರುವ ದಿನಗಳಲ್ಲಿ ವಿಧಾನಸೌಧ ನುಗ್ಗಿ ಪ್ರತಿಭಟನೆ (ಹೊಡೆಯುವ) ನಡೆಸುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಸೀಮಾ ಮಸೂತಿ ಎಚ್ಚರಿಕೆ ನೀಡಿದರು.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    15 hrs ago
  • ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಹೇಳಿಕೆ ನೀಡಿದ್ದು, ಡಿ.ಕೆ. ಶಿವಕುಮಾರ್ ಅವರಿಗೆ ಸಲಹೆ ನೀಡಿದರು. ಸೋಮವಾರ ಪ್ರಮಾಣ ವಚನ ಸ್ವೀಕರಿಸಿ ರಾಜ್ಯದ ಆಡಳಿತದ ಚುಕ್ಕಾಣಿ ಹಿಡಿಯಲಿರುವ ಡಿ.ಕೆ. ಶಿವಕುಮಾರ್ ಅವರಿಗೆ, ರಾಜ್ಯದಲ್ಲಿ ಸಾರಿಗೆ ಸೇರಿದಂತೆ ಹಲವಾರು ಸಮಸ್ಯೆಗಳಿದ್ದು, ಇವೆಲ್ಲದರ ನಡುವೆ ರಾಜ್ಯದ ಅಭಿವೃದ್ಧಿ ಮಾಡಬೇಕು ಎಂದು ಬೊಮ್ಮಾಯಿ ಹೇಳಿದರು. ಇದಕ್ಕಾಗಿ ದಕ್ಷ ಮತ್ತು ಪ್ರಾಮಾಣಿಕ ಆಡಳಿತ ನೀಡಬೇಕು ಎಂದು ಅವರು ಸೂಚಿಸಿದರು.
    1
    ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಹೇಳಿಕೆ ನೀಡಿದ್ದು, ಡಿ.ಕೆ. ಶಿವಕುಮಾರ್ ಅವರಿಗೆ ಸಲಹೆ ನೀಡಿದರು. ಸೋಮವಾರ ಪ್ರಮಾಣ ವಚನ ಸ್ವೀಕರಿಸಿ ರಾಜ್ಯದ ಆಡಳಿತದ ಚುಕ್ಕಾಣಿ ಹಿಡಿಯಲಿರುವ ಡಿ.ಕೆ. ಶಿವಕುಮಾರ್ ಅವರಿಗೆ, ರಾಜ್ಯದಲ್ಲಿ ಸಾರಿಗೆ ಸೇರಿದಂತೆ ಹಲವಾರು ಸಮಸ್ಯೆಗಳಿದ್ದು, ಇವೆಲ್ಲದರ ನಡುವೆ ರಾಜ್ಯದ ಅಭಿವೃದ್ಧಿ ಮಾಡಬೇಕು ಎಂದು ಬೊಮ್ಮಾಯಿ ಹೇಳಿದರು. ಇದಕ್ಕಾಗಿ ದಕ್ಷ ಮತ್ತು ಪ್ರಾಮಾಣಿಕ ಆಡಳಿತ ನೀಡಬೇಕು ಎಂದು ಅವರು ಸೂಚಿಸಿದರು.
    user_H M ಹರಕುಣಿ
    H M ಹರಕುಣಿ
    Local News Reporter Haveri, Karnataka•
    21 hrs ago
  • ಕರ್ನಾಟಕ ರಾಜ್ಯದಲ್ಲಿ ಶಿಕ್ಷಕರಿಗೆ ಮೊಬೈಲ್ ಆಧಾರಿತ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಈ ವ್ಯವಸ್ಥೆಯನ್ನು ಚಾಮರಾಜನಗರ ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಕರ್ನಾಟಕ ಅಡ್ವಾನ್ಸ್ಡ್ ಮ್ಯಾನೇಜ್‌ಮೆಂಟ್ ಸಿಸ್ಟಮ್ ತಂತ್ರಾಂಶದ ಮೂಲಕ ಹೊಸ ಶೈಕ್ಷಣಿಕ ವರ್ಷದ ಆರಂಭದಿಂದಲೇ ಅನುಷ್ಠಾನಕ್ಕೆ ತರಲಾಗಿದೆ. ಈ ಹೊಸ ವ್ಯವಸ್ಥೆಯು ಶಿಕ್ಷಕರಿಗೆ ಎಷ್ಟು ಅನುಕೂಲಕರವಾಗಿದೆ ಎಂಬ ಪ್ರಶ್ನೆ ಉದ್ಭವಿಸಿದೆ. ಅಲ್ಲದೆ, ಮೊಬೈಲ್ ಆಧಾರಿತ ಹಾಜರಾತಿಯ ಲಾಗಿನ್ ಸಮಯವನ್ನು ಮೀರಿದರೆ ವೇತನ ಕಡಿತವಾಗುತ್ತದೆಯೇ ಎಂಬ ಆತಂಕವೂ ವ್ಯಕ್ತವಾಗಿದೆ. ಈ ಮೊಬೈಲ್ ಆಧಾರಿತ ಹಾಜರಾತಿಯ ಬಗ್ಗೆ ಶಿಕ್ಷಕರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ.
    1
    ಕರ್ನಾಟಕ ರಾಜ್ಯದಲ್ಲಿ ಶಿಕ್ಷಕರಿಗೆ ಮೊಬೈಲ್ ಆಧಾರಿತ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಈ ವ್ಯವಸ್ಥೆಯನ್ನು ಚಾಮರಾಜನಗರ ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಕರ್ನಾಟಕ ಅಡ್ವಾನ್ಸ್ಡ್ ಮ್ಯಾನೇಜ್‌ಮೆಂಟ್ ಸಿಸ್ಟಮ್ ತಂತ್ರಾಂಶದ ಮೂಲಕ ಹೊಸ ಶೈಕ್ಷಣಿಕ ವರ್ಷದ ಆರಂಭದಿಂದಲೇ ಅನುಷ್ಠಾನಕ್ಕೆ ತರಲಾಗಿದೆ.

ಈ ಹೊಸ ವ್ಯವಸ್ಥೆಯು ಶಿಕ್ಷಕರಿಗೆ ಎಷ್ಟು ಅನುಕೂಲಕರವಾಗಿದೆ ಎಂಬ ಪ್ರಶ್ನೆ ಉದ್ಭವಿಸಿದೆ. ಅಲ್ಲದೆ, ಮೊಬೈಲ್ ಆಧಾರಿತ ಹಾಜರಾತಿಯ ಲಾಗಿನ್ ಸಮಯವನ್ನು ಮೀರಿದರೆ ವೇತನ ಕಡಿತವಾಗುತ್ತದೆಯೇ ಎಂಬ ಆತಂಕವೂ ವ್ಯಕ್ತವಾಗಿದೆ. ಈ ಮೊಬೈಲ್ ಆಧಾರಿತ ಹಾಜರಾತಿಯ ಬಗ್ಗೆ ಶಿಕ್ಷಕರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ.
    user_Sharanugouda Patil
    Sharanugouda Patil
    ಮುದ್ದೇಬಿಹಾಳ, ವಿಜಯಪುರ, ಕರ್ನಾಟಕ•
    3 hrs ago
  • ಗೋಕಾಕ ತಾಲ್ಲೂಕಿನಲ್ಲಿರುವ ದೊಡ್ಡ ಗ್ರಾಮ ಖನಗಾವ, ಸುತ್ತಮುತ್ತಲಿನ ಪುಟ್ಟ ಗ್ರಾಮಗಳಿಗೆ ಕೇಂದ್ರವಾಗಿರುವ ಕಾರಣ ಇದನ್ನು 'ಏಳೂರ ತಗ್ಗು' ಎಂದೂ ಕರೆಯಲಾಗುತ್ತದೆ. ಇಲ್ಲಿನ ಖನ್ನಮ್ಮ ದೇವಿ ದೇವಸ್ಥಾನಕ್ಕೆ ದೂರದ ಊರುಗಳಿಂದಲೂ ಭಕ್ತರು ಆಗಮಿಸುತ್ತಾರೆ. ಖನಗಾವ ಸುತ್ತಮುತ್ತಲಿನ ಗಿಳಿಹೊಸೂರ, ಮಿಡಕನಟ್ಟಿ, ಶಿಲ್ತಿಭಾವಿ, ಕೈತನಾಳ ಮುಂತಾದ ಊರುಗಳನ್ನು ಆವರಿಸಿರುವ ಅರಣ್ಯ ಪ್ರದೇಶವು ಚಿಕ್ಕಪುಟ್ಟ ಪ್ರಾಣಿಗಳು ಮತ್ತು ಗಿಡಮೂಲಿಕೆಗಳಿಗೆ ನೆಲೆಯಾಗಿದೆ. ಈ ಕಾಡಿನಲ್ಲಿ 'ಗುಡ್ಡದ ಹೊನ್ನಾರಿ' ಎಂಬ ವಿಶೇಷ ತರಕಾರಿ ದೊರೆಯುತ್ತದೆ. ಇಂದಿನ ಅನೇಕರಿಗೆ ಇದರ ಬಗ್ಗೆ ತಿಳಿದಿಲ್ಲವಾದರೂ, ಈ ಲೇಖನದ ಲೇಖಕರು ತಮ್ಮ ಬಾಲ್ಯದಲ್ಲಿ ಈ ತರಕಾರಿಯನ್ನು ನೋಡಿ ಅದರ ರುಚಿಯನ್ನು ಮರೆತಿರಲಿಲ್ಲ. ಕಾಲಕಾಲಕ್ಕೆ ಕಾಡಿನಲ್ಲಿ ಇದನ್ನು ಅನ್ವೇಷಿಸಿದರೂ, ಈ ತರಕಾರಿ ಸಿಕ್ಕಿರಲಿಲ್ಲ. ಆದರೆ, ಕಳೆದ ವಾರ ಲೇಖಕರು ಕೈತನಾಳ ಪಕ್ಕದ ಕಾಡಿನ ಬಳಿ ಇರುವ ತಮ್ಮ ಸ್ನೇಹಿತ ಸತೀಶ ಡಬ್ಬನವರ ಅವರ ಹೊಲಕ್ಕೆ ಭೇಟಿ ನೀಡಿದಾಗ, ಈ ಕುರಿತು ವಿಚಾರಿಸಿದರು. ಸತೀಶ ಅವರು 'ಗುಡ್ಡದ ಹೊನ್ನಾರಿ' ಗಿಡಗಳನ್ನು ತೋರಿಸಿ, ಈ ರುಚಿಕರ ತರಕಾರಿಯ ಬಗ್ಗೆ ಸಂಪೂರ್ಣ ಮಾಹಿತಿಯನ್ನೂ ನೀಡಿದರು. ಈ ಮೂಲಕ ಹಲವು ವರ್ಷಗಳ ಹುಡುಕಾಟಕ್ಕೆ ಫಲ ದೊರೆತಿದೆ.
    4
    ಗೋಕಾಕ ತಾಲ್ಲೂಕಿನಲ್ಲಿರುವ ದೊಡ್ಡ ಗ್ರಾಮ ಖನಗಾವ, ಸುತ್ತಮುತ್ತಲಿನ ಪುಟ್ಟ ಗ್ರಾಮಗಳಿಗೆ ಕೇಂದ್ರವಾಗಿರುವ ಕಾರಣ ಇದನ್ನು 'ಏಳೂರ ತಗ್ಗು' ಎಂದೂ ಕರೆಯಲಾಗುತ್ತದೆ. ಇಲ್ಲಿನ ಖನ್ನಮ್ಮ ದೇವಿ ದೇವಸ್ಥಾನಕ್ಕೆ ದೂರದ ಊರುಗಳಿಂದಲೂ ಭಕ್ತರು ಆಗಮಿಸುತ್ತಾರೆ. ಖನಗಾವ ಸುತ್ತಮುತ್ತಲಿನ ಗಿಳಿಹೊಸೂರ, ಮಿಡಕನಟ್ಟಿ, ಶಿಲ್ತಿಭಾವಿ, ಕೈತನಾಳ ಮುಂತಾದ ಊರುಗಳನ್ನು ಆವರಿಸಿರುವ ಅರಣ್ಯ ಪ್ರದೇಶವು ಚಿಕ್ಕಪುಟ್ಟ ಪ್ರಾಣಿಗಳು ಮತ್ತು ಗಿಡಮೂಲಿಕೆಗಳಿಗೆ ನೆಲೆಯಾಗಿದೆ.

ಈ ಕಾಡಿನಲ್ಲಿ 'ಗುಡ್ಡದ ಹೊನ್ನಾರಿ' ಎಂಬ ವಿಶೇಷ ತರಕಾರಿ ದೊರೆಯುತ್ತದೆ. ಇಂದಿನ ಅನೇಕರಿಗೆ ಇದರ ಬಗ್ಗೆ ತಿಳಿದಿಲ್ಲವಾದರೂ, ಈ ಲೇಖನದ ಲೇಖಕರು ತಮ್ಮ ಬಾಲ್ಯದಲ್ಲಿ ಈ ತರಕಾರಿಯನ್ನು ನೋಡಿ ಅದರ ರುಚಿಯನ್ನು ಮರೆತಿರಲಿಲ್ಲ. ಕಾಲಕಾಲಕ್ಕೆ ಕಾಡಿನಲ್ಲಿ ಇದನ್ನು ಅನ್ವೇಷಿಸಿದರೂ, ಈ ತರಕಾರಿ ಸಿಕ್ಕಿರಲಿಲ್ಲ.

ಆದರೆ, ಕಳೆದ ವಾರ ಲೇಖಕರು ಕೈತನಾಳ ಪಕ್ಕದ ಕಾಡಿನ ಬಳಿ ಇರುವ ತಮ್ಮ ಸ್ನೇಹಿತ ಸತೀಶ ಡಬ್ಬನವರ ಅವರ ಹೊಲಕ್ಕೆ ಭೇಟಿ ನೀಡಿದಾಗ, ಈ ಕುರಿತು ವಿಚಾರಿಸಿದರು. ಸತೀಶ ಅವರು 'ಗುಡ್ಡದ ಹೊನ್ನಾರಿ' ಗಿಡಗಳನ್ನು ತೋರಿಸಿ, ಈ ರುಚಿಕರ ತರಕಾರಿಯ ಬಗ್ಗೆ ಸಂಪೂರ್ಣ ಮಾಹಿತಿಯನ್ನೂ ನೀಡಿದರು. ಈ ಮೂಲಕ ಹಲವು ವರ್ಷಗಳ ಹುಡುಕಾಟಕ್ಕೆ ಫಲ ದೊರೆತಿದೆ.
    user_Basavraj Pattansheti
    Basavraj Pattansheti
    Artist ಗೋಕಾಕ, ಬೆಳಗಾವಿ, ಕರ್ನಾಟಕ•
    3 hrs ago
  • ರಾಜ್ಯದಲ್ಲಿ ಸಂಪುಟ ವಿಸ್ತರಣೆಯ ಚಟುವಟಿಕೆಗಳು ತೀವ್ರಗೊಂಡಿರುವ ಬೆನ್ನಲ್ಲೇ, ಶಿವಮೊಗ್ಗದ ಭದ್ರಾವತಿಯಲ್ಲಿಯೂ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಭದ್ರಾವತಿಯ ಶಾಸಕ ಸಂಗಮೇಶ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಅವರ ಸಹೋದರ ಹಾಗೂ ಭದ್ರಾವತಿ ಪಿಎಲ್‌ಡಿ ಅಧ್ಯಕ್ಷ ಬಿ.ಕೆ. ಶಿವಕುಮಾರ್ ಅವರು ಹೈಕಮಾಂಡ್‌ಗೆ ಬಲವಾಗಿ ಆಗ್ರಹಿಸಿದ್ದಾರೆ. ನಗರದ ಹುತ್ತಾ ಕಾಲೋನಿಯಲ್ಲಿರುವ ಸಹ್ಯಾದ್ರಿ ಕಾಲೇಜಿನ ಆವರಣದಲ್ಲಿ ನಡೆದ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಬಿ.ಕೆ. ಶಿವಕುಮಾರ್, ಶಾಸಕ ಸಂಗಮೇಶ್ ಅವರು ಭದ್ರಾವತಿಯಿಂದ ನಾಲ್ಕು ಬಾರಿ ಗೆದ್ದಿದ್ದಾರೆ ಎಂದು ತಿಳಿಸಿದರು. ಭದ್ರಾವತಿಯ ಸಮಗ್ರ ಅಭಿವೃದ್ಧಿಗೆ ಸಚಿವ ಸ್ಥಾನವು ಅತ್ಯಂತ ಮುಖ್ಯವಾಗಿದ್ದು, ಜಿಲ್ಲೆಯಲ್ಲಿ ಸಂಗಮೇಶ್ ಹಿರಿಯ ಶಾಸಕರಾಗಿದ್ದಾರೆ ಎಂದು ಅವರು ಪ್ರತಿಪಾದಿಸಿದರು. ನಮ್ಮಂತೆ ಬೇರೆಯವರೂ ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದರೂ, ನಮ್ಮ ಶಾಸಕರು ಹಿರಿಯರಾಗಿರುವುದರಿಂದ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು. ಪ್ರಸ್ತುತ ಭದ್ರಾವತಿ ಸಾಕಷ್ಟು ಅಭಿವೃದ್ಧಿ ಕಾಣುತ್ತಿದ್ದು, ಸಚಿವ ಸ್ಥಾನ ಸಿಕ್ಕರೆ ನಗರ ಇನ್ನಷ್ಟು ವೇಗವಾಗಿ ಪ್ರಗತಿ ಸಾಧಿಸುತ್ತದೆ ಎಂದು ಬಿ.ಕೆ. ಶಿವಕುಮಾರ್ ಅಭಿಪ್ರಾಯಪಟ್ಟರು. ರಾಜ್ಯದ ಏಳು ತಾಲೂಕುಗಳಲ್ಲಿ ಎಲ್ಲ ತಾಲೂಕುಗಳಿಗೆ ಸಚಿವ ಸ್ಥಾನ ದೊರೆತಿದ್ದರೂ, ನಾಲ್ಕು ಬಾರಿ ಶಾಸಕರಾದ ಸಂಗಮೇಶ್ ಅವರಿಗೆ ಭದ್ರಾವತಿಯಿಂದ ಇದುವರೆಗೆ ಸಚಿವ ಸ್ಥಾನ ಸಿಕ್ಕಿಲ್ಲ ಎಂಬುದನ್ನು ಅವರು ಗಮನ ಸೆಳೆದರು. ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ಶಾಸಕರಿಗೆ ಸಚಿವ ಸ್ಥಾನ ಸಿಗಬೇಕೆಂದು ಬಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ.
    1
    ರಾಜ್ಯದಲ್ಲಿ ಸಂಪುಟ ವಿಸ್ತರಣೆಯ ಚಟುವಟಿಕೆಗಳು ತೀವ್ರಗೊಂಡಿರುವ ಬೆನ್ನಲ್ಲೇ, ಶಿವಮೊಗ್ಗದ ಭದ್ರಾವತಿಯಲ್ಲಿಯೂ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಭದ್ರಾವತಿಯ ಶಾಸಕ ಸಂಗಮೇಶ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಅವರ ಸಹೋದರ ಹಾಗೂ ಭದ್ರಾವತಿ ಪಿಎಲ್‌ಡಿ ಅಧ್ಯಕ್ಷ ಬಿ.ಕೆ. ಶಿವಕುಮಾರ್ ಅವರು ಹೈಕಮಾಂಡ್‌ಗೆ ಬಲವಾಗಿ ಆಗ್ರಹಿಸಿದ್ದಾರೆ.

ನಗರದ ಹುತ್ತಾ ಕಾಲೋನಿಯಲ್ಲಿರುವ ಸಹ್ಯಾದ್ರಿ ಕಾಲೇಜಿನ ಆವರಣದಲ್ಲಿ ನಡೆದ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಬಿ.ಕೆ. ಶಿವಕುಮಾರ್, ಶಾಸಕ ಸಂಗಮೇಶ್ ಅವರು ಭದ್ರಾವತಿಯಿಂದ ನಾಲ್ಕು ಬಾರಿ ಗೆದ್ದಿದ್ದಾರೆ ಎಂದು ತಿಳಿಸಿದರು. ಭದ್ರಾವತಿಯ ಸಮಗ್ರ ಅಭಿವೃದ್ಧಿಗೆ ಸಚಿವ ಸ್ಥಾನವು ಅತ್ಯಂತ ಮುಖ್ಯವಾಗಿದ್ದು, ಜಿಲ್ಲೆಯಲ್ಲಿ ಸಂಗಮೇಶ್ ಹಿರಿಯ ಶಾಸಕರಾಗಿದ್ದಾರೆ ಎಂದು ಅವರು ಪ್ರತಿಪಾದಿಸಿದರು. ನಮ್ಮಂತೆ ಬೇರೆಯವರೂ ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದರೂ, ನಮ್ಮ ಶಾಸಕರು ಹಿರಿಯರಾಗಿರುವುದರಿಂದ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.

ಪ್ರಸ್ತುತ ಭದ್ರಾವತಿ ಸಾಕಷ್ಟು ಅಭಿವೃದ್ಧಿ ಕಾಣುತ್ತಿದ್ದು, ಸಚಿವ ಸ್ಥಾನ ಸಿಕ್ಕರೆ ನಗರ ಇನ್ನಷ್ಟು ವೇಗವಾಗಿ ಪ್ರಗತಿ ಸಾಧಿಸುತ್ತದೆ ಎಂದು ಬಿ.ಕೆ. ಶಿವಕುಮಾರ್ ಅಭಿಪ್ರಾಯಪಟ್ಟರು. ರಾಜ್ಯದ ಏಳು ತಾಲೂಕುಗಳಲ್ಲಿ ಎಲ್ಲ ತಾಲೂಕುಗಳಿಗೆ ಸಚಿವ ಸ್ಥಾನ ದೊರೆತಿದ್ದರೂ, ನಾಲ್ಕು ಬಾರಿ ಶಾಸಕರಾದ ಸಂಗಮೇಶ್ ಅವರಿಗೆ ಭದ್ರಾವತಿಯಿಂದ ಇದುವರೆಗೆ ಸಚಿವ ಸ್ಥಾನ ಸಿಕ್ಕಿಲ್ಲ ಎಂಬುದನ್ನು ಅವರು ಗಮನ ಸೆಳೆದರು. ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ಶಾಸಕರಿಗೆ ಸಚಿವ ಸ್ಥಾನ ಸಿಗಬೇಕೆಂದು ಬಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ.
    user_Nandheesh kumar ac
    Nandheesh kumar ac
    ದಾವಣಗೆರೆ, ದಾವಣಗೆರೆ, ಕರ್ನಾಟಕ•
    4 hrs ago
  • ಜಮಖಂಡಿ ನಗರದ ಶ್ರೀ ಹನುಮಾನ್ ದೇವಸ್ಥಾನದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅಭಿಮಾನಿಗಳು ತಂಡದ ಬಗ್ಗೆ ಭಾರಿ ಉತ್ಸಾಹದಲ್ಲಿದ್ದು, ಇದೇ ಸಂಭ್ರಮದಲ್ಲಿ ಇಂದು ಸಂಜೆ 7 ಗಂಟೆಗೆ ತಾಲೂಕು ಕ್ರೀಡಾಂಗಣದ ಮುಂಭಾಗದಲ್ಲಿ ಫೈನಲ್ ಪಂದ್ಯವನ್ನು ಬಿಗ್ ಸ್ಕ್ರೀನ್‌ನಲ್ಲಿ ನೇರಪ್ರಸಾರ ಮಾಡಲು ವ್ಯವಸ್ಥೆ ಮಾಡಲಾಗಿದೆ.
    1
    ಜಮಖಂಡಿ ನಗರದ ಶ್ರೀ ಹನುಮಾನ್ ದೇವಸ್ಥಾನದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅಭಿಮಾನಿಗಳು ತಂಡದ ಬಗ್ಗೆ ಭಾರಿ ಉತ್ಸಾಹದಲ್ಲಿದ್ದು, ಇದೇ ಸಂಭ್ರಮದಲ್ಲಿ ಇಂದು ಸಂಜೆ 7 ಗಂಟೆಗೆ ತಾಲೂಕು ಕ್ರೀಡಾಂಗಣದ ಮುಂಭಾಗದಲ್ಲಿ ಫೈನಲ್ ಪಂದ್ಯವನ್ನು ಬಿಗ್ ಸ್ಕ್ರೀನ್‌ನಲ್ಲಿ ನೇರಪ್ರಸಾರ ಮಾಡಲು ವ್ಯವಸ್ಥೆ ಮಾಡಲಾಗಿದೆ.
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    2 hrs ago
  • ಬಿಜೆಪಿ ಮುಖಂಡ ಭರತ್ ಬೊಮ್ಮಾಯಿ ಅವರು ಶಿಗ್ಗಾವಿ-ಸವಣೂರು ತಾಲೂಕಿನ ನಿರುದ್ಯೋಗಿ ಯುವಕ ಯುವತಿಯರಿಗೆ ಉದ್ಯೋಗದ ಭರವಸೆ ನೀಡುತ್ತಿದ್ದಾರೆ. ಇತ್ತೀಚೆಗೆ ಅವರು ಆಯೋಜಿಸಿದ್ದ ಬೃಹತ್ ಉದ್ಯೋಗ ಮೇಳದಲ್ಲಿ ಸಾವಿರ ಯುವಕ ಯುವತಿಯರು ನೋಂದಣಿ ಮಾಡಿಕೊಂಡಿದ್ದು, ಅದರಲ್ಲಿ 350ಕ್ಕೂ ಹೆಚ್ಚು ಮಂದಿಗೆ ಸ್ಥಳದಲ್ಲಿಯೇ ನೇಮಕಾತಿ ಪತ್ರಗಳನ್ನು ವಿತರಿಸುವ ಮೂಲಕ ಉದ್ಯೋಗದ ಭರವಸೆಯನ್ನು ಹೆಚ್ಚಿಸಲಾಗಿದೆ. ಈ ಅವಕಾಶವನ್ನು ಶಿಗ್ಗಾವಿ-ಸವಣೂರು ತಾಲೂಕಿನ ಪ್ರತಿಭಾವಂತ ಹಾಗೂ ಅರ್ಹತೆಗೆ ತಕ್ಕ ಕೆಲಸ ಹುಡುಕುತ್ತಿರುವ ಎಲ್ಲಾ ಯುವಕ ಯುವತಿಯರು ಸದುಪಯೋಗಪಡಿಸಿಕೊಳ್ಳುವಂತೆ ಭರತ್ ಬೊಮ್ಮಾಯಿ ಮನವಿ ಮಾಡಿದ್ದಾರೆ.
    1
    ಬಿಜೆಪಿ ಮುಖಂಡ ಭರತ್ ಬೊಮ್ಮಾಯಿ ಅವರು ಶಿಗ್ಗಾವಿ-ಸವಣೂರು ತಾಲೂಕಿನ ನಿರುದ್ಯೋಗಿ ಯುವಕ ಯುವತಿಯರಿಗೆ ಉದ್ಯೋಗದ ಭರವಸೆ ನೀಡುತ್ತಿದ್ದಾರೆ. ಇತ್ತೀಚೆಗೆ ಅವರು ಆಯೋಜಿಸಿದ್ದ ಬೃಹತ್ ಉದ್ಯೋಗ ಮೇಳದಲ್ಲಿ ಸಾವಿರ ಯುವಕ ಯುವತಿಯರು ನೋಂದಣಿ ಮಾಡಿಕೊಂಡಿದ್ದು, ಅದರಲ್ಲಿ 350ಕ್ಕೂ ಹೆಚ್ಚು ಮಂದಿಗೆ ಸ್ಥಳದಲ್ಲಿಯೇ ನೇಮಕಾತಿ ಪತ್ರಗಳನ್ನು ವಿತರಿಸುವ ಮೂಲಕ ಉದ್ಯೋಗದ ಭರವಸೆಯನ್ನು ಹೆಚ್ಚಿಸಲಾಗಿದೆ. ಈ ಅವಕಾಶವನ್ನು ಶಿಗ್ಗಾವಿ-ಸವಣೂರು ತಾಲೂಕಿನ ಪ್ರತಿಭಾವಂತ ಹಾಗೂ ಅರ್ಹತೆಗೆ ತಕ್ಕ ಕೆಲಸ ಹುಡುಕುತ್ತಿರುವ ಎಲ್ಲಾ ಯುವಕ ಯುವತಿಯರು ಸದುಪಯೋಗಪಡಿಸಿಕೊಳ್ಳುವಂತೆ ಭರತ್ ಬೊಮ್ಮಾಯಿ ಮನವಿ ಮಾಡಿದ್ದಾರೆ.
    user_ಬಸವರಾಜ ವೀ ಎಚ್
    ಬಸವರಾಜ ವೀ ಎಚ್
    ಶಿಗ್ಗಾಂವ್, ಹಾವೇರಿ, ಕರ್ನಾಟಕ•
    4 hrs ago
  • ಧಾರವಾಡದಲ್ಲಿ ಪ್ರತ್ಯೇಕ ಮಹಾನಗರ ಪಾಲಿಕೆಗಾಗಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಹೋರಾಟದ ಸ್ಥಳಕ್ಕೆ ವಿರೋಧ ಪಕ್ಷದ ಉಪ ನಾಯಕ ಹಾಗೂ ಶಾಸಕ ಅರವಿಂದ ಬೆಲ್ಲದ ಭೇಟಿ ನೀಡಿ ತಮ್ಮ ಬೆಂಬಲ ಸೂಚಿಸಿದ್ದಾರೆ. ಈ ಹೋರಾಟಕ್ಕೆ ಹಿರಿಯ ನ್ಯಾಯವಾದಿ ಹಾಗೂ ಹೋರಾಟಗಾರ ಬಿ.ಡಿ. ಹಿರೇಮಠ ಅವರು ಹೊಸ ಶಕ್ತಿ ತುಂಬಿ ಯಶಸ್ವಿಗೊಳಿಸಿದ್ದಾರೆ ಎಂದು ಶಾಸಕ ಬೆಲ್ಲದ ಇದೇ ವೇಳೆ ಮಾತನಾಡುತ್ತಾ ಶ್ಲಾಘಿಸಿದರು. ಶಾಸಕ ಅರವಿಂದ ಬೆಲ್ಲದ ಅವರು ಹುಬ್ಬಳ್ಳಿ-ಧಾರವಾಡ ಮಹಾನಗರಗಳ ಅಭಿವೃದ್ಧಿಗೆ ನಿರಂತರವಾಗಿ ಪ್ರಯತ್ನ ಮಾಡಿದ್ದು, ಈಗಲೂ ಪ್ರಯತ್ನ ಮುಂದುವರಿಸುವುದಾಗಿ ತಿಳಿಸಿದರು. ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆಗೆ ತಾವು ಈಗ ಬದ್ಧರಾಗಿರುವುದಾಗಿ ಹೇಳಿದ ಅವರು, ತಮ್ಮ ನಾಯಕರಾದ ಪ್ರಹ್ಲಾದ ಜೋಶಿ ಅವರು ಸಹ ಧಾರವಾಡ ಮಹಾನಗರ ಪಾಲಿಕೆ ಹೋರಾಟಕ್ಕೆ ಕೈಜೋಡಿಸಿರುವುದಾಗಿ ತಿಳಿಸಿದರು.
    1
    ಧಾರವಾಡದಲ್ಲಿ ಪ್ರತ್ಯೇಕ ಮಹಾನಗರ ಪಾಲಿಕೆಗಾಗಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಹೋರಾಟದ ಸ್ಥಳಕ್ಕೆ ವಿರೋಧ ಪಕ್ಷದ ಉಪ ನಾಯಕ ಹಾಗೂ ಶಾಸಕ ಅರವಿಂದ ಬೆಲ್ಲದ ಭೇಟಿ ನೀಡಿ ತಮ್ಮ ಬೆಂಬಲ ಸೂಚಿಸಿದ್ದಾರೆ. ಈ ಹೋರಾಟಕ್ಕೆ ಹಿರಿಯ ನ್ಯಾಯವಾದಿ ಹಾಗೂ ಹೋರಾಟಗಾರ ಬಿ.ಡಿ. ಹಿರೇಮಠ ಅವರು ಹೊಸ ಶಕ್ತಿ ತುಂಬಿ ಯಶಸ್ವಿಗೊಳಿಸಿದ್ದಾರೆ ಎಂದು ಶಾಸಕ ಬೆಲ್ಲದ ಇದೇ ವೇಳೆ ಮಾತನಾಡುತ್ತಾ ಶ್ಲಾಘಿಸಿದರು.

ಶಾಸಕ ಅರವಿಂದ ಬೆಲ್ಲದ ಅವರು ಹುಬ್ಬಳ್ಳಿ-ಧಾರವಾಡ ಮಹಾನಗರಗಳ ಅಭಿವೃದ್ಧಿಗೆ ನಿರಂತರವಾಗಿ ಪ್ರಯತ್ನ ಮಾಡಿದ್ದು, ಈಗಲೂ ಪ್ರಯತ್ನ ಮುಂದುವರಿಸುವುದಾಗಿ ತಿಳಿಸಿದರು. ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆಗೆ ತಾವು ಈಗ ಬದ್ಧರಾಗಿರುವುದಾಗಿ ಹೇಳಿದ ಅವರು, ತಮ್ಮ ನಾಯಕರಾದ ಪ್ರಹ್ಲಾದ ಜೋಶಿ ಅವರು ಸಹ ಧಾರವಾಡ ಮಹಾನಗರ ಪಾಲಿಕೆ ಹೋರಾಟಕ್ಕೆ ಕೈಜೋಡಿಸಿರುವುದಾಗಿ ತಿಳಿಸಿದರು.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    15 hrs ago
  • ಶಾಸಕ ಯಾಸೀರ್ ಖಾನ್ ಪಠಾಣ ಅವರು ಹೈಕಮಾಂಡ್​ಗೆ ಮನವಿಯೊಂದನ್ನು ಸಲ್ಲಿಸಿದ್ದಾರೆ. ಈ ಮನವಿಯಲ್ಲಿ, ಒಟ್ಟು ಹತ್ತು ಅಲ್ಪಸಂಖ್ಯಾತ ಶಾಸಕರಲ್ಲಿ ನಾಲ್ಕು ಜನರಿಗೆ ಸಚಿವ ಸ್ಥಾನ ನೀಡಬೇಕೆಂದು ಕೋರಲಾಗಿದೆ.
    1
    ಶಾಸಕ ಯಾಸೀರ್ ಖಾನ್ ಪಠಾಣ ಅವರು ಹೈಕಮಾಂಡ್​ಗೆ ಮನವಿಯೊಂದನ್ನು ಸಲ್ಲಿಸಿದ್ದಾರೆ. ಈ ಮನವಿಯಲ್ಲಿ, ಒಟ್ಟು ಹತ್ತು ಅಲ್ಪಸಂಖ್ಯಾತ ಶಾಸಕರಲ್ಲಿ ನಾಲ್ಕು ಜನರಿಗೆ ಸಚಿವ ಸ್ಥಾನ ನೀಡಬೇಕೆಂದು ಕೋರಲಾಗಿದೆ.
    user_H M ಹರಕುಣಿ
    H M ಹರಕುಣಿ
    Local News Reporter Haveri, Karnataka•
    22 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.