ಒಳಮೀಸಲಾತಿ ವರದಿ ವಿರೋಧಿಸಿ ಹನೂರಿನಲ್ಲಿ ಬಲಗೈ ಸಮುದಾಯದ ಬೃಹತ್ ಪ್ರತಿಭಟನೆ ಹನೂರು: ಒಳಮೀಸಲಾತಿ ಕುರಿತಾಗಿ ನಾಗಮೋಹನ್ ದಾಸ್ ಸಮಿತಿ ನೀಡಿರುವ ವರದಿ ಅವೈಜ್ಞಾನಿಕವಾಗಿದ್ದು, ರೋಸ್ಟರ್ ಬಿಂದುಗಳ ಹಂಚಿಕೆಯಲ್ಲಿ ಬಲಗೈ ಹೊಲಯ ಸಮುದಾಯಕ್ಕೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ಸೋಮವಾರ ಹನೂರು ಪಟ್ಟಣದಲ್ಲಿ ಬಲಗೈ ಸಮುದಾಯದವರು ಪ್ರತಿಭಟನೆ ನಡೆಸಿದರು. ಹನೂರು ತಾಲೂಕು ಹಾಗೂ ಚಾಮರಾಜನಗರ ಜಿಲ್ಲಾ ಬಲಗೈ ಸಮುದಾಯದ ಒಕ್ಕೂಟದ ವತಿಯಿಂದ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಹನೂರು ಮತ್ತು ಕೊಳ್ಳೇಗಾಲ ತಾಲೂಕಿನ ವಿವಿಧ ಗ್ರಾಮಗಳಿಂದ ಸಂಘಟನೆಗಳು, ಮುಖಂಡರು ಹಾಗೂ ಮಹಿಳೆಯರು ಭಾಗವಹಿಸಿದರು. ಪ್ರತಿಭಟನಾಕಾರರು ಮಹದೇಶ್ವರ ಕ್ರೀಡಾಂಗಣದಿಂದ ಮೆರವಣಿಗೆ ನಡೆಸಿ ಕೆಂಪೇಗೌಡ ವೃತ್ತ, ಖಾಸಗಿ ಬಸ್ ನಿಲ್ದಾಣ, ಡಾ. ಬಿ.ಆರ್. ಅಂಬೇಡ್ಕರ್ ಸರ್ಕಲ್ ಮೂಲಕ ತಹಶೀಲ್ದಾರ್ ಕಚೇರಿಗೆ ತೆರಳಿ ತಹಶೀಲ್ದಾರ್ ಚೈತ್ರ ಅವರಿಗೆ ಮನವಿ ಪತ್ರ ಸಲ್ಲಿಸಿದರು. ನಾಗಮೋಹನ್ ದಾಸ್ ವರದಿಯನ್ನು ತಕ್ಷಣವೇ ರದ್ದುಪಡಿಸಿ ಸಮುದಾಯಕ್ಕೆ ನ್ಯಾಯ ಒದಗಿಸಬೇಕು. ಇಲ್ಲವಾದಲ್ಲಿ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಹೋರಾಟಗಾರರು ಎಚ್ಚರಿಸಿದರು. ಈ ಸಂದರ್ಭದಲ್ಲಿ ಹಲವು ಮುಖಂಡರು ಉಪಸ್ಥಿತರಿದ್ದರು.
ಒಳಮೀಸಲಾತಿ ವರದಿ ವಿರೋಧಿಸಿ ಹನೂರಿನಲ್ಲಿ ಬಲಗೈ ಸಮುದಾಯದ ಬೃಹತ್ ಪ್ರತಿಭಟನೆ ಹನೂರು: ಒಳಮೀಸಲಾತಿ ಕುರಿತಾಗಿ ನಾಗಮೋಹನ್ ದಾಸ್ ಸಮಿತಿ ನೀಡಿರುವ ವರದಿ ಅವೈಜ್ಞಾನಿಕವಾಗಿದ್ದು, ರೋಸ್ಟರ್ ಬಿಂದುಗಳ ಹಂಚಿಕೆಯಲ್ಲಿ ಬಲಗೈ ಹೊಲಯ ಸಮುದಾಯಕ್ಕೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ಸೋಮವಾರ ಹನೂರು ಪಟ್ಟಣದಲ್ಲಿ ಬಲಗೈ ಸಮುದಾಯದವರು ಪ್ರತಿಭಟನೆ ನಡೆಸಿದರು. ಹನೂರು ತಾಲೂಕು ಹಾಗೂ ಚಾಮರಾಜನಗರ ಜಿಲ್ಲಾ ಬಲಗೈ ಸಮುದಾಯದ ಒಕ್ಕೂಟದ ವತಿಯಿಂದ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಹನೂರು ಮತ್ತು ಕೊಳ್ಳೇಗಾಲ ತಾಲೂಕಿನ ವಿವಿಧ ಗ್ರಾಮಗಳಿಂದ
ಸಂಘಟನೆಗಳು, ಮುಖಂಡರು ಹಾಗೂ ಮಹಿಳೆಯರು ಭಾಗವಹಿಸಿದರು. ಪ್ರತಿಭಟನಾಕಾರರು ಮಹದೇಶ್ವರ ಕ್ರೀಡಾಂಗಣದಿಂದ ಮೆರವಣಿಗೆ ನಡೆಸಿ ಕೆಂಪೇಗೌಡ ವೃತ್ತ, ಖಾಸಗಿ ಬಸ್ ನಿಲ್ದಾಣ, ಡಾ. ಬಿ.ಆರ್. ಅಂಬೇಡ್ಕರ್ ಸರ್ಕಲ್ ಮೂಲಕ ತಹಶೀಲ್ದಾರ್ ಕಚೇರಿಗೆ ತೆರಳಿ ತಹಶೀಲ್ದಾರ್ ಚೈತ್ರ ಅವರಿಗೆ ಮನವಿ ಪತ್ರ ಸಲ್ಲಿಸಿದರು. ನಾಗಮೋಹನ್ ದಾಸ್ ವರದಿಯನ್ನು ತಕ್ಷಣವೇ ರದ್ದುಪಡಿಸಿ ಸಮುದಾಯಕ್ಕೆ ನ್ಯಾಯ ಒದಗಿಸಬೇಕು. ಇಲ್ಲವಾದಲ್ಲಿ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಹೋರಾಟಗಾರರು ಎಚ್ಚರಿಸಿದರು. ಈ ಸಂದರ್ಭದಲ್ಲಿ ಹಲವು ಮುಖಂಡರು ಉಪಸ್ಥಿತರಿದ್ದರು.
- *ಭಾರತ ನಲ್ಲಿ ವೈರಲ್*1
- *ನನಗೆ ಮೊದಲು ಬಿ ಫಾರಂ ಕೊಟ್ಟು, ಅವಕಾಶ ಕಲ್ಪಿಸಿದ್ದು ಕೆ.ಹೆಚ್ ಪಾಟೀಲರು: ಡಿಸಿಎಂ ಡಿ.ಕೆ. ಶಿವಕುಮಾರ್* *ಪಾಟೀಲರ ಜತೆ ವಿದ್ಯಾರ್ಥಿ ನಾಯಕ, ಪಕ್ಷದ ಕಾರ್ಯದರ್ಶಿ, ಶಾಸಕ, ಸಚಿವನಾಗಿ ಕೆಲಸ ಮಾಡಿರುವೆ* *ಬೆಂಗಳೂರು, ಮಾ.:* "ಕೆ.ಹೆಚ್. ಪಾಟೀಲರು, ವೀರಪ್ಪ ಮೊಯ್ಲಿ, ದೆಹಲಿ ನಾಯಕರು, ಚಂದ್ರಶೇಖರ ಮೂರ್ತಿ ಅವರು ನನ್ನನ್ನು ಗುರುತಿಸಿ ಬಿ ಫಾರಂ ನೀಡದ್ದಕ್ಕೆ ನಾನು ಇಲ್ಲಿಯವರೆಗೂ ಬರಲು ಸಾಧ್ಯವಾಗಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಮರಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಸೋಮವಾರ ನಡೆದ ಕೆ.ಹೆಚ್ ಪಾಟೀಲ್ ಅವರ 101ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. "ಕೆ.ಹೆಚ್. ಪಾಟೀಲ್ ಅವರಿಗೂ ನನಗೂ 37 ವರ್ಷಗಳ ಅಂತರವಿದೆ. ನಾನು ಅವರ ಜೊತೆ ವಿದ್ಯಾರ್ಥಿ ನಾಯಕನಾಗಿ ಕೆಲಸ ಮಾಡಿದ್ದೇನೆ. ಪಾಟೀಲರು ಅಧ್ಯಕ್ಷರಾಗಿದ್ದಾಗ ಹಾಗೂ ವೀರಪ್ಪ ಮೊಯ್ಲಿ ಅವರು ವಿರೋಧ ಪಕ್ಷದ ನಾಯಕರಾಗಿದ್ದಾಗ ಇಬ್ಬರೂ ಸೇರಿ ನನಗೆ ಮೊದಲ ಬಾರಿಗೆ ವಿಧಾನಸಭೆ ಚುನಾವಣೆ ಟಿಕೆಟ್ ನೀಡಿದರು. ನಂತರ ಅವರ ಜತೆ ಶಾಸಕರಾಗಿ ಕೆಲಸ ಮಾಡಿದ್ದೆ. ನಾನು ಅವರ ಜತೆ ಪಕ್ಷದ ಕಾರ್ಯದರ್ಶಿಯಾಗಿದ್ದೆ. ನಂತರ ಅವರೊಂದಿಗೆ ಮಂತ್ರಿಯಾಗಿಯೂ ಕೆಲಸ ಮಾಡಿದ್ದೇನೆ" ಎಂದರು. "ಅವರ ಆಚಾರ, ವಿಚಾರ ಅರ್ಥ ಮಾಡಿಕೊಂಡಿದ್ದೇನೆ. ಇಟ್ಟರೆ ಸಗಣಿಯಾಗು, ತಟ್ಟಿದರೆ ಬೆರಣಿಯಾಗು, ಸುಟ್ಟರೆ ಹಣೆಗೆ ವಿಭೂತಿಯಾಗು, ನೀನಾರಿಗಾದೆಯೋ ಮಾನವ ಎಂಬ ಗೋವಿನ ಹಾಡು ಆಗಾಗ್ಗೆ ನೆನಪಾಗುತ್ತದೆ. ಎಲ್ಲಾ ವಿಚಾರಕ್ಕೂ ಅವರ ಚಿಂತನೆ ಈಗಲೂ ಪ್ರಸ್ತುತ. ಅವರ ದಿಟ್ಟ ನಾಯಕತ್ವ, ಯಾವುದಕ್ಕೂ ಅಂಜುತ್ತಿರಲಿಲ್ಲ. ಅವರು ಅರಣ್ಯ ಸಚಿವರಾಗಿದ್ದರು. ಬಂಗಾರಪ್ಪ ಅವರ ಸಂಪುಟದಲ್ಲಿ ನಾನು, ಮೊಯ್ಲಿ ಸಾಹೇಬರು ಅವರ ಜೊತೆ ಸಹೋದ್ಯೋಗಿಯಾಗಿದ್ದೆವು" ಎಂದು ತಿಳಿಸಿದರು. "ಪಾಟೀಲರು ರೈತರ ಬದುಕು ಹಾಗೂ ಅರಣ್ಯ ರಕ್ಷಣೆಗೆ ಕೈಗೊಂಡ ತೀರ್ಮಾನ, ಸಹಕಾರ ಕ್ಷೇತ್ರದಲ್ಲಿ ಅವರ ದೂರದೃಷ್ಟಿ ಬಹಳ ದೊಡ್ಡದು. ಒಂದು ಊರಿಗೆ ಒಂದು ಶಾಲೆ, ಒಂದು ಸಹಕಾರಿ ಸಂಘ ಇರಬೇಕು ಎಂದು ಸಹಕಾರ ತತ್ವವನ್ನು ಬೆಳೆಸಿದವರು. ಧಾರವಾಡ ಜಿಲ್ಲೆಯಲ್ಲಿ ದೊಡ್ಡ ನಾಯಕತ್ವ ಬೆಳೆಸಿಕೊಂಡಿದ್ದರು" ಎಂದರು. "ನನಗೆ ಚುನಾವಣೆ ಟಿಕೆಟ್ ನೀಡುವಾಗ ಕೆಲವರ ಭಿನ್ನಾಭಿಪ್ರಾಯ ಇತ್ತು. ದೆಹಲಿಯವರು ತೀರ್ಮಾನ ಮಾಡಿದರು. ಆಗ ಪಾಟೀಲರು ನನ್ನನ್ನು ಕರೆಸಿ, ನೀನು ದೇವೇಗೌಡರ ವಿರುದ್ಧ ಸ್ಪರ್ಧೆ ಮಾಡಿ ಗೆಲ್ಲುತ್ತೀಯಾ ಎಂದು ಕೇಳಿದರು. ನಂತರ ನನಗೆ ಬಿ ಫಾರಂಗೆ ಸಹಿ ಹಾಕಿ ಕೊಟ್ಟರು. ಅಲ್ಲಿಂದ ನನ್ನ ಪಯಣ ಶುರುವಾಗಿದೆ ಇಲ್ಲಿಯವರೆಗೆ ಬಂದಿದೆ. ಮನುಷ್ಯ ಸತ್ತ ನಂತರ ದೇಹ ಭೂಮಿಯ ಒಳಗೆ ಇರುತ್ತದೆ, ಮಾಡಿದ ಸಾಧನೆ ಭೂಮಿಯ ಮೇಲೆ ಇರುತ್ತವೆ" ಎಂದರು. "ಮನುಷ್ಯನ ಹುಟ್ಟು ಆಕಸ್ಮಿಕ, ಸಾವು ಅನಿವಾರ್ಯ. ಜನನ ಉಚಿತ, ಮರಣ ಖಚಿತ. ಈ ಹುಟ್ಟು ಸಾವಿನ ಮಧ್ಯೆ ನಾವು ಏನು ಸಾಧನೆ ಮಾಡುತ್ತೇವೆ ಎಂಬುದು ಮುಖ್ಯ. ಅಧಿಕಾರದಲ್ಲಿ ಯಾರು ಹೇಗೆ ಇರುತ್ತಾರೆ ಎಂಬುದಕ್ಕಿಂತ, ಅಧಿಕಾರ ಇದ್ದಾಗ, ಯಾವ ರೀತಿ ಸಾಧನೆ ಮಾಡಿ ಎಷ್ಟು ಜನ ನಾಯಕರನ್ನು ತಯಾರು ಮಾಡುತ್ತಾರೆ ಎಂಬುದು ಮುಖ್ಯ. ಅದೇರೀತಿ ಇಂದು ಅನೇಕ ನಾಯಕರು ಅವರ ಕಾಲದಲ್ಲಿ ಬೆಳೆದಿದ್ದಾರೆ. ಅವರು ನಮ್ಮೊಂದಿಗೆ ಇಲ್ಲದಿದ್ದರೂ ಅವರ ಆದರ್ಶ, ದಿಟ್ಟವಾದ ರಾಜಕೀಯ ಬದುಕು ನಮಗೆ ಸ್ಫೂರ್ತಿಯಾಗಿದೆ. ದೇವರಾಜ ಅರಸು ಅವರು ಕೂಡ ವಿಧಾನಸಭೆಯಲ್ಲಿ ಪಾಟೀಲರ ನಿಷ್ಠೆಯನ್ನು ಶ್ಲಾಘಿಸಿದ್ದಾರೆ. ನಾನು ಬಸವಣ್ಣನ ಅನುಯಾಯಿ ಎಂದು ಹೇಳಿದ್ದರು" ಎಂದು ಸ್ಮರಿಸಿದರು. "ಕೆ.ಹೆಚ್ ಪಾಟೀಲರ ಹೆಸರನ್ನು ಹೆಚ್.ಕೆ. ಪಾಟೀಲ್ ಹಾಗೂ ಅವರ ಶಿಷ್ಯಕೋಟಿಗಳು ಉಳಿಸಿಕೊಂಡು ಹೋಗುತ್ತಿದ್ದಾರೆ. ಅವರಲ್ಲಿದ್ದ ಧೈರ್ಯ ಒಂದು ಮಾತ್ರ ಹೆಚ್.ಕೆ ಪಾಟೀಲ್ ಅವರಲ್ಲಿ ಇಲ್ಲ, ಉಳಿದ ಎಲ್ಲಾ ಗುಣಗಳಿವೆ. ಕೆಲವು ವಿಚಾರಗಳಲ್ಲಿ ಹೆಚ್.ಕೆ. ಪಾಟೀಲರು ತಂದೆಯಂತೆ ಧೈರ್ಯ ತೀರ್ಮಾನ ಮಾಡಿದ್ದರೆ, ಅವರು ಇನ್ನು ಎತ್ತರಕ್ಕೆ ಬೆಳೆಯುತ್ತಿದ್ದರು. ಕೃಷ್ಣ ಅವರ ನಂತರ ಅವರೇ ನಮ್ಮ ನಾಯಕರಾಗುತ್ತಾರೆ ಎಂದು ನಾನು ಭಾವಿಸಿದ್ದೆ" ಎಂದು ಹೇಳಿದರು. "ದೇವರು ವರ, ಶಾಪ ನೀಡುವುದಿಲ್ಲ. ಕೇವಲ ಅವಕಾಶ ಮಾತ್ರ ನೀಡುತ್ತಾನೆ. ಸಿಕ್ಕ ಅವಕಾಶದಲ್ಲಿ ನಾವು ಏನು ಒಳ್ಳೆಯದನ್ನು ಮಾಡುತ್ತೇವೆ ಎಂಬುದು ಮುಖ್ಯ" ಎಂದು ತಿಳಿಸಿದರು.1
- Post by ಅರವಿಂದ್ ರಾಜೀವ್1
- ಕೆ.ಆರ್.ಪೇಟೆ,ಮಾ.16: ತಾಲ್ಲೂಕಿನ ಬೂಕನಕೆರೆ ಮತ್ತು ಶೀಳನೆರೆ ಹೋಬಳಿಗಳಿಗೆ ನೀರಾವರಿ ಸೌಲಭ್ಯ ಸೌಲಭ್ಯವನ್ನು ಒದಗಿಸುವ ಕಟ್ಟಹಳ್ಳಿ ಬಳಿ ನಿರ್ಮಿಸಲಾಗಿರುವ ಸುಮಾರು 165ಕೋಟಿ ರೂಪಾಯಿಗಳ ವೆಚ್ಚದಲ್ಲಿ ನಿರ್ಮಿಸಲಾಗಿರುವ ಐಚನಹಳ್ಳಿ ಏತ ನೀರಾವರಿ ಯೋಜನೆಯ ಎರಡನೇ ಹಂತದ ನೀರು ಪೂರೈಸುವ ಪಂಪ್ಹೌಸ್ ಕೇಂದ್ರವನ್ನು ಮೊಸಳೆಕೊಪ್ಪಲು ಬಳಿ ಶಾಸಕ ಹೆಚ್.ಟಿ.ಮಂಜು ವೀಕ್ಷಣೆ ಮಾಡಿ ಆದಷ್ಟು ಬೇಗ ಉದ್ಘಾಟನೆಗೆ ಸಿದ್ದತೆ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ತಾಲ್ಲೂಕಿನ ಮೊಸಳೇಕೊಪ್ಪಲು ಗ್ರಾಮದ ಬಳಿ ನಿರ್ಮಿಸಿರುವ ಎರಡನೇ ಹಂತದ ಏತ ನೀರಾವರಿ ಯೋಜನೆಯ ಪಂಪ್ ಹೌಸ್ ಕೇಂದ್ರವನ್ನು ವೀಕ್ಷಣೆ ಮಾಡಿ ನಂತರ ಶೀಳನೆರೆ ಹೋಬಳಿಯ ಭೈರಾಪುರ ಕೆರೆಗೆ ಪ್ರಾಯೋಗಿಕವಾಗಿ ನೀರು ತುಂಬಿಸುವ ಕಾರ್ಯವನ್ನು ಸಣ್ಣ ನೀರಾವರಿ ಅಧಿಕಾರಿಗಳು ಮತ್ತು ಭೈರಾಪುರ ಗ್ರಾಮಸ್ಥರೊಂದಿಗೆ ವೀಕ್ಷಣೆ ಮಾಡಿ ನೀರನ್ನು ಪೋಲು ಮಾಡದಂತೆ ಸಂರಕ್ಷಣೆ ಮಾಡಬೇಕು ಎಂದು ಮನವಿ ಮಾಡಿದರು. ಐಚನಹಳ್ಳಿ ಏತನೀರಾವರಿ ಯೋಜನೆಯನ್ನು ನಮ್ಮ ತಾಲ್ಲೂಕಿನ ಬೂಕನಕೆರೆ ಗ್ರಾಮದ ಸುಪುತ್ರರಾದ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ತವರೂರಿಗೆ ವಿಶೇಷ ಯೋಜನೆ ರೂಪಿಸಬೇಕೆಂಬ ಮಹದಾಸೆಯಿಂದ 165ಕೋಟಿ ರೂಪಾಯಿಗಳ ವೆಚ್ಚದಲ್ಲಿ ಕಟ್ಟಹಳ್ಳಿ ಬಳಿ ಏತ ನೀರಾವರಿ ಯೋಜನೆಗೆ ತಮ್ಮ ಅಧಿಕಾರದ ಅವಧಿಯಲ್ಲಿ 2020ರಲ್ಲಿ ಚಾಲನೆ ನೀಡಿದ್ದರು. ಇದರ ಮೊದಲ ಅಂತದ ಕಾಮಗಾರಿಯು ಮುಗಿದು ಬೂಕನಕೆರೆ ಹೋಬಳಿಯ ಎಲ್ಲಾ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಗೆ ಕಳೆದ ವರ್ಷ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚೆಲುವರಾಯಸ್ವಾಮಿ ಮತ್ತು ಕ್ಷೇತ್ರದ ಶಾಸಕನಾದ ನಾನು ಸೇರಿ ಉದ್ಘಾಟನೆ ಮಾಡಿದ್ದೆವು. ಈಗ ಎರಡನೇ ಹಂತದ ಏತನೀರಾವರಿ ಯೋಜನೆಯ ಕಾಮಗಾರಿಯು ಮುಕ್ತಾಯಗೊಂಡಿದ್ದು ಉದ್ಘಾಟನೆಗೆ ಸಿದ್ದವಾಗಿದೆ. ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಚೆಲುವರಾಯಸ್ವಾಮಿ ಮತ್ತು ಸಂಬAಧಪಟ್ಟ ಸಚಿವರು ಉದ್ಘಾಟನೆಗೆ ಹಸಿರು ನಿಶಾನೆ ತೋರಿದ ಕೂಡಲೇ ದಿನಾಂಕ ನಿಗಧಿಪಡಿಸಿದ ಎರಡನೇ ಹಂತದ ಏತನೀರಾವರಿ ಯೋಜನೆಯನ್ನು ಉದ್ಘಾಟಿಸಲಾಗುವುದು. ಇದರ ಪ್ರಾಯೋಗಿಕ ನೀರು ಹರಿಸುವ ಕಾರ್ಯಕ್ಕೆ ಇಂದು ಚಾಲನೆ ನೀಡಲಾಗಿದೆ. ಅಧಿಕೃತ ಉದ್ಘಾಟನೆಯ ನಂತರ ಶೀಳನೆರೆ ಹೋಬಳಿಯ ಎಲ್ಲಾ ಕೆರೆಕಟ್ಟೆಗಳಿಗೆ ನೀರು ತುಂಬಿಸಲು ಕ್ರಮ ವಹಿಸಲಾಗುವುದು. ಮಳೆಯಾಶ್ರಿತ ಪ್ರದೇಶವಾಗಿರುವ ಶೀಳನೆರೆ ಮತ್ತು ಬೂಕನಕೆರೆ ಹೋಬಳಿಗಳಿಗೆ ಈ ಏತ ನೀರಾವರಿ ಯೋಜನೆ ವರಧಾನವಾದ ಯೋಜನೆಯಾಗಿದೆ. ಅಂತರ್ಜಲ ಮಟ್ಟ ವೃದ್ದಿಯಾಗಲಿದೆ. ರೈತರ ಕೃಷಿ ಕೊಳವೆ ಬಾವಿಗಳು, ರೈತರ ತೆರೆದ ಬಾವಿಗಳು, ಕುಡಿಯುವ ನೀರಿನ ಮೂಲಗಳಲ್ಲಿ ಅಂತರ್ಜಲ ಮಟ್ಟದ ಹೆಚ್ಚಲಿದೆ. ಕುಡಿಯುವ ನೀರಿಗೆ ಹಾಗೂ ಜನ-ಜಾನುವಾರುಗಳಿಗೆ ಅನುಕೂಲವಾಗಲಿದೆ. ಈ ಏತ ಯೋಜನೆಗೆ ಕಾರಣಕರ್ತರಾದ ಮಾಜಿ ಸಿ.ಎಂ.ಯಡಿಯೂರಪ್ಪ ಹಾಗೂ ಮಾಜಿ ಸಚಿವ ನಾರಾಯಣಗೌಡ ಅವರಿಗೆ ಎರಡೂ ಹೋಬಳಿಯ ಜನತೆಯ ಪರವಾಗಿ ತುಂಬು ಹೃದಯದ ಕೃತಜ್ಞತೆಗಳನ್ನು ಸಲ್ಲಿಸುವುದಾಗಿ ಶಾಸಕ ಹೆಚ್.ಟಿ.ಮಂಜು ಹೇಳಿದರು. ಈ ಸಂದರ್ಭದಲ್ಲಿ ಸಣ್ಣ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ನಿರ್ಮಲೇಶ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಭೈರಾಪುರ ಹರೀಶ್, ತಾಲ್ಲೂಕು ಜೆಡಿಎಸ್ ರೈತ ಮೋರ್ಚಾ ಅಧ್ಯಕ್ಷ ಹೆಳವೇಗೌಡ, ಮೊಸಳೇಕೊಪ್ಪಲು ಗ್ರಾಮದ ಯಜಮಾನರುಗಳಾದ ಪಟೇಲ್ ನಿಂಗೇಗೌಡ, ಯಜಮಾನ್ ರಾಮಕೃಷ್ಣೇಗೌಡ, ರಮೇಶ್, ಬಸವೇಗೌಡ, ರಂಗೇಗೌಡ, ಕೆಂಪಣ್ಣ ರವಿ, ಡೇರಿ ತಿಮ್ಮೇಗೌಡ, ನಗುವನಹಳ್ಳಿ ರಾಮಕೃಷ್ಣೇಗೌಡ, ನಾಗೇಗೌಡ, ಅರೆ ರಮೇಶ್, ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಮಂಜುನಾಥ್, ಶೀಳನೆರೆ ಹೋಬಳಿ ಜೆಡಿಎಸ್ ಅಧ್ಯಕ್ಷ ಸ್ವಾಮೀಗೌಡ, ಜಿಲ್ಲಾ ಜೆಡಿಎಸ್ ಕರ್ಯಕಾರಣಿ ಸದಸ್ಯ ಕುರುಬಹಳ್ಳಿ ಕೆ.ಬಿ.ನಾಗೇಶ್, ಜೈನ್ನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಧರಣೇಶ್, ತಾಲ್ಲೂಕು ಪಂಚಾಯತ್ ಮಾಜಿ ಸದಸ್ಯ ಚಿಕ್ಕಗಾಡಿಗನಹಳ್ಳಿ ಸೋಮಶೇಖರ್, ಗಂಜಿಗೆರೆಕೊಪ್ಪಲು ರಾಮಕೃಷ್ಣೇಗೌಡ, ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಚಿತ್ರಶೀರ್ಷಿಕೆ:16.ಕೆ.ಆರ್.ಪಿ-02: ಕೆ.ಆರ್.ಪೇಟೆ: ತಾಲ್ಲೂಕಿನ ಬೂಕನಕೆರೆ ಮತ್ತು ಶೀಳನೆರೆ ಹೋಬಳಿಗಳಿಗೆ ನೀರಾವರಿ ಸೌಲಭ್ಯ ಸೌಲಭ್ಯವನ್ನು ಒದಗಿಸುವ ಕಟ್ಟಹಳ್ಳಿ ಬಳಿ ನಿರ್ಮಿಸಲಾಗಿರುವ ಸುಮಾರು 165ಕೋಟಿ ರೂಪಾಯಿಗಳ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಐಚನಹಳ್ಳಿ ಏತ ನೀರಾವರಿ ಯೋಜನೆಯ ಎರಡನೇ ಹಂತದ ನೀರು ಪೂರೈಸುವ ಪಂಪ್ಹೌಸ್ ಕೇಂದ್ರವನ್ನು ಶಾಸಕ ಹೆಚ್.ಟಿ.ಮಂಜು ವೀಕ್ಷಣೆ ಮಾಡಿ ಆದಷ್ಟು ಬೇಗ ಉದ್ಘಾಟನೆಗೆ ಸಿದ್ದತೆ ಮಾಡಿಕೊಳ್ಳುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ==================================4
- Post by SUDHUR CHAULANI NEWS1
- ಬೈಕ್ ಚಾಲನೆ ವೇಳೆ ಮೊಬೈಲ್ ಬಳಸಿದಕ್ಕೆ 1500 ರೂ ಪೈನ್1
- ಇಂದು ರಾಜ್ಯಾದ್ಯಂತ ಎಲ್ಲಾ ರೈಲ್ವೆ ನಿಲ್ದಾಣ ಮುಂದೆ ಕರವೇ ಪ್ರತಿಭಟನೆ ನಗರದ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಮುಂಭಾಗ & MDDTI ಟ್ರೈನಿಂಗ್ ಸೆಂಟರ್ ಮುಂದೆ ಪ್ರತಿಭಟನೆ ಪ್ರತಿಭಟನೆ ಹಿನ್ನಲ್ಲೆ ರೈಲ್ವೆ ನಿಲ್ದಾಣ ಮುಂಭಾಗ ಬೀಗಿ ಪೊಲೀಸ್ ಬಂದೋಬಸ್ತ್ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ರೈಲ್ವೆ ನಿಲ್ದಾಣ ಮುಂಭಾಗ ಐವತ್ತಕ್ಕೂ ಹೆಚ್ಚು ಪೋಲೀಸ್ ಸಿಬ್ಬಂದಿ ನಿಯೋಜನೆ ಎರಡು ಬಿಎಂಟಿಸಿ ಬಸ್ ಗಳನ್ನ ನೀಯೋಜನೆ ಮಾಡಲಾಗಿದೆ. ಡಿವಿಜನಲ್ ರೈಲ್ವೆ ಮ್ಯಾನೇಜರ್ ಕಛೇರಿ ಮುಂದೆ ಕರವೇ ಕಾರ್ಯಕರ್ತರು ಪ್ರತಿಭಟನೆ.*ರಾಜ್ಯದ ಕೇಂದ್ರ ಮಂತ್ರಿಗಳ ವಿರುದ್ದ ಘೋಷಣೆ ಕೂಗಿ ಪ್ರತಿಭಟನೆ ಕೇಂದ್ರ ಸರ್ಕಾರ ಕನ್ನಡಗರಿಗೆ ಅನ್ಯಾಯ ಮಾಡುತ್ತಿದೆ ಎಂದು ಆಕ್ರೋಶ..ಬೇಕೆ ಬೇಕೆ ನ್ಯಾಯ ಬೇಕು ಎನ್ನುತ್ತಿರುವ ಕಾರ್ಯಕರ್ತರು ರೈಲ್ವೆ ಇಲಾಖೆಗೆ ದಿಕ್ಕಾರ ಕೂಗಿದ ಪ್ರತಿಭಟನೆಕಾರರು.* ಮುಂಬಡ್ತಿಯ ನಡ್ಸತಿರೋ ಪರೀಕ್ಷೆ ಬರಿ ಹಿಂದಿ ಇಂಗ್ಲಿಷ್ ಅಲ್ಲಿ ಮಾಡ್ತಿದ್ದಾರೆ ಕನ್ನಡ ವಿದ್ಯಾರ್ಥಿಗಳ ಬಾಯಿಗೆ ಮಣ್ಣು ಹಾಕುವ ಕೆಲಸ ಮಾಡ್ತಿದ್ದಾರೆ ಕುಮಾರಸ್ವಾಮಿ, ಶೋಬಾ ಕರಂದ್ಲಾಜ್,ಪ್ರಹ್ಲಾದ ಜೋಶಿ, ಯಾಕೆ ಈ ಬಗ್ಗೆ ಮಾತಾಡ್ತಿಲ್ಲ ರಾಜ್ಯ ಸಚಿವರ ಮನೆ ಮುಂದೆ ಹೋರಾಟ ಮಾಡ್ತಾರೆ ರೈಲ್ವೆಯಲ್ಲಿ ಕೆಲಸ ಮಾಡ್ತಿರುವ ಕನ್ನಡಿಗರಿಗೆ ಹಿಂದಿ ಬರೋದಿಲ್ಲ ಉತ್ತರ ಭಾರತದವರಿಗೆ ಮಾತ್ರ ಅನುಕೂಲ ಆಗುವಂತೆ ಹಿಂದಿ ಇಂಗ್ಲಿಷ್ ಅಲ್ಲಿ ಪರೀಕ್ಷೆ ಕನ್ನಡ ಅಭ್ಯರ್ಥಿಗಳಿಗೆ ಮೋಸ ಆಗಲು ಬಿಡಲ್ಲ ಮುಂದಿನ ದಿನಗಳಲ್ಲಿ ಉಗ್ರವಾದ ಪ್ರತಿಭಟನೆ ಮಾಡುತ್ತೇವೆ ಬೈಟ್ : ಸಣ್ಣೀರಪ್ಪ, ಕನ್ನಡಪರ ಹೋರಟಗಾರ1
- ಮಧ್ಯಪ್ರದೇಶದ ಅದಾನಿ ಗ್ರೂಪಿನ ಕಾರ್ಖಾನೆಯಲ್ಲಿ ಕಾರ್ಮಿಕನೊಬ್ಬ ಮೇಲಿನಿಂದ ಬಿದ್ದು ಮರಣ ಹೊಂದಿರುತ್ತಾನೆ, ಈ ಸಂಬಂಧ ಕಾರ್ಮಿಕರು ನ್ಯಾಯ ಕೇಳಿದಾಗ ಉಡಾಫೆ ಮಾತನಾಡಿದ ಅಧಿಕಾರಿಗಳು, ಆತನ ಶವವನ್ನು ಮುಚ್ಚಿಡಲು ಪ್ರಯತ್ನಿಸಿದಾಗ ರೊಚ್ಚಿಗೆದ್ದ ಕಾರ್ಮಿಕರು ಪೊಲೀಸ್ ಜೀಪ್ ಸೇರಿದಂತೆ ವಾಹನಗಳು, ಕಾರ್ಖಾನೆಯನ್ನು ಉಡೀಸ್ ಮಾಡಿದ್ದಾರೆ ಎನ್ನಲಾಗಿದೆ...1
- Post by SUDHUR CHAULANI NEWS1