ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಭಾರತದ ವಿವಿಧ ರಾಜ್ಯಗಳ ಉಡುಗೆ-ತೊಡಿಗೆಗಳ ಪ್ರದರ್ಶನ.. ಸೂಲಗಿತ್ತಿ ತಿಮ್ಮಕ್ಕನಿಗೆ ಸನ್ಮಾನ.. "ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಸೂಲಗಿತ್ತಿ ತಿಮ್ಮಕ್ಕಗೆ ಸನ್ಮಾನ". ಚಳ್ಳಕೆರೆ:-ನಗರದ ವೀರಶೈವ ಮಹಿಳಾ ಸಂಘದ ವತಿಯಿಂದ "ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ"ಯ ಪ್ರಯುಕ್ತ ಕಾಲುವೆಹಳ್ಳಿಯ ಶತಾಯುಷಿ ಸೂಲಗಿತ್ತಿ ತಳುಕಿನ ತಿಮ್ಮಕ್ಕಗೆ ಸನ್ಮಾನಿಸಿ ಗೌರವಧನ ನೀಡಿ ಗೌರವಿಸಲಾಯಿತು. "ಸಂಸ್ಕೃತಿ ಮತ್ತು ಸಂಪ್ರಾದಯಗಳ ಉಳುವಿನಲ್ಲಿ ಮಹಿಳೆಯ ಪಾತ್ರ"ಎಂಬ ವಿಷಯವಾಗಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದ ನಿರ್ದೇಶಕಿ ಶ್ರೀಮತಿ ಗೀತಾ ಪ್ರಕಾಶ್ ಅವರು ಭಾರತೀಯ ಸನಾತನ ಪರಂಪರೆಯ ಸಂಸ್ಕೃತಿ ಮತ್ತು ವಿಶಿಷ್ಟ ಸಂಪ್ರದಾಯಗಳನ್ನು ಮಹಿಳೆಯರು ಪ್ರತಿನಿತ್ಯ ತಮ್ಮ ದೈನಂದಿನ ಜೀವನದಲ್ಲಿ ಆಚರಣೆಗೆ ತರುವ ಮೂಲಕ ಅವುಗಳನ್ನು ಉಳಿಸಿ ಅದನ್ನು ಮುಂದಿನ ಪೀಳಿಗೆಗೆ ತಲುಪಿಸಬೇಕು.ಇದರ ಭಾಗವಾಗಿ ಮಕ್ಕಳಲ್ಲಿ ಉತ್ತಮ ಸಾಂಸ್ಕೃತಿಕ ಮೌಲ್ಯಗಳನ್ನು ತುಂಬಿ ಒಳ್ಳೆಯ ಪುಸ್ತಕಗಳನ್ನು ಓದುವ ಹವ್ಯಾಸಗಳನ್ನು ಬೆಳೆಸಿ ಅವರನ್ನು ಸಾಂಸ್ಕೃತಿಕ ರಾಯಭಾರಿಗಳಾಗಿ ಮಾಡಬೇಕು ಕಿವಿಮಾತು ಹೇಳಿದರು. ಮಹಿಳಾ ದಿನಾಚರಣೆಯ ಪ್ರಯುಕ್ತ ವೀರಶೈವ ಮಹಿಳೆಯರಿಂದ ಭಾರತದ ವಿವಿಧ ರಾಜ್ಯಗಳ ಉಡುಗೆ-ತೊಡಿಗೆಗಳ ಪ್ರದರ್ಶನ ನಡೆಯಿತು. ಕಾರ್ಯಕ್ರಮದಲ್ಲಿ ವೀರಶೈವ ಮಹಿಳಾ ಸಂಘದ ತಾಲೂಕು ಅಧ್ಯಕ್ಷೆ ಪದ್ಮ ನಾಗರಾಜ್, ಕಾರ್ಯದರ್ಶಿ ಮಂಜುಳಾ ನಾಗರಾಜ್, ನಿರ್ದೇಶಕರಾದ ಗೀತಾ ಪ್ರಕಾಶ್, ಸುನೀತಾ,ಸುಮಾ, ಮಮತಾ,ವನಜಾ, ಸೌಮ್ಯಲತಾ, ಮಂಗಳಾ,ಕವಿತಾ, ಕಾಲುವೆಹಳ್ಳಿ ಪಾಲಕ್ಕ, ಕರೀಕೆರೆ ಮಂಜುಳಾ, ಪ್ರಮೀಳಾ, ತಳುಕಿನ ತೊಯಜಾಕ್ಷಿ, ಜಗದಂಬಾ, ಶಾಂತಮ್ಮ, ರತ್ನಮ್ಮ, ಪುಷ್ಪಲತಾ, ಅನಿತಾ,ಜಾನಕಿ, ಶೈಲಜಾ, ವಿಶಾಲಾಕ್ಷಿ, ಯಶೋಧಾ,ಶಾರದಾ, ತಿಪ್ಪಮ್ಮ,ಸಮಾಜ ಸೇವಕ ಯತೀಶ್ ಎಂ ಸಿದ್ದಾಪುರ ಸೇರಿದಂತೆ ಸಾಕಷ್ಟು ಸಂಖ್ಯೆಯಲ್ಲಿ ವೀರಶೈವ ಮಹಿಳಾ ಸಂಘದ ಸದಸ್ಯರು ಇದ್ದರು.
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಭಾರತದ ವಿವಿಧ ರಾಜ್ಯಗಳ ಉಡುಗೆ-ತೊಡಿಗೆಗಳ ಪ್ರದರ್ಶನ.. ಸೂಲಗಿತ್ತಿ ತಿಮ್ಮಕ್ಕನಿಗೆ ಸನ್ಮಾನ.. "ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಸೂಲಗಿತ್ತಿ ತಿಮ್ಮಕ್ಕಗೆ ಸನ್ಮಾನ". ಚಳ್ಳಕೆರೆ:-ನಗರದ ವೀರಶೈವ ಮಹಿಳಾ ಸಂಘದ ವತಿಯಿಂದ "ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ"ಯ ಪ್ರಯುಕ್ತ ಕಾಲುವೆಹಳ್ಳಿಯ ಶತಾಯುಷಿ ಸೂಲಗಿತ್ತಿ ತಳುಕಿನ ತಿಮ್ಮಕ್ಕಗೆ ಸನ್ಮಾನಿಸಿ ಗೌರವಧನ ನೀಡಿ ಗೌರವಿಸಲಾಯಿತು. "ಸಂಸ್ಕೃತಿ ಮತ್ತು ಸಂಪ್ರಾದಯಗಳ ಉಳುವಿನಲ್ಲಿ ಮಹಿಳೆಯ ಪಾತ್ರ"ಎಂಬ ವಿಷಯವಾಗಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದ ನಿರ್ದೇಶಕಿ ಶ್ರೀಮತಿ ಗೀತಾ ಪ್ರಕಾಶ್ ಅವರು ಭಾರತೀಯ ಸನಾತನ ಪರಂಪರೆಯ ಸಂಸ್ಕೃತಿ ಮತ್ತು ವಿಶಿಷ್ಟ ಸಂಪ್ರದಾಯಗಳನ್ನು ಮಹಿಳೆಯರು ಪ್ರತಿನಿತ್ಯ ತಮ್ಮ ದೈನಂದಿನ ಜೀವನದಲ್ಲಿ ಆಚರಣೆಗೆ ತರುವ ಮೂಲಕ ಅವುಗಳನ್ನು ಉಳಿಸಿ ಅದನ್ನು ಮುಂದಿನ ಪೀಳಿಗೆಗೆ ತಲುಪಿಸಬೇಕು.ಇದರ ಭಾಗವಾಗಿ ಮಕ್ಕಳಲ್ಲಿ ಉತ್ತಮ ಸಾಂಸ್ಕೃತಿಕ ಮೌಲ್ಯಗಳನ್ನು ತುಂಬಿ ಒಳ್ಳೆಯ ಪುಸ್ತಕಗಳನ್ನು ಓದುವ ಹವ್ಯಾಸಗಳನ್ನು ಬೆಳೆಸಿ ಅವರನ್ನು ಸಾಂಸ್ಕೃತಿಕ ರಾಯಭಾರಿಗಳಾಗಿ ಮಾಡಬೇಕು ಕಿವಿಮಾತು ಹೇಳಿದರು. ಮಹಿಳಾ ದಿನಾಚರಣೆಯ ಪ್ರಯುಕ್ತ ವೀರಶೈವ ಮಹಿಳೆಯರಿಂದ ಭಾರತದ ವಿವಿಧ ರಾಜ್ಯಗಳ ಉಡುಗೆ-ತೊಡಿಗೆಗಳ ಪ್ರದರ್ಶನ ನಡೆಯಿತು. ಕಾರ್ಯಕ್ರಮದಲ್ಲಿ ವೀರಶೈವ ಮಹಿಳಾ ಸಂಘದ ತಾಲೂಕು ಅಧ್ಯಕ್ಷೆ ಪದ್ಮ ನಾಗರಾಜ್, ಕಾರ್ಯದರ್ಶಿ ಮಂಜುಳಾ ನಾಗರಾಜ್, ನಿರ್ದೇಶಕರಾದ ಗೀತಾ ಪ್ರಕಾಶ್, ಸುನೀತಾ,ಸುಮಾ, ಮಮತಾ,ವನಜಾ, ಸೌಮ್ಯಲತಾ, ಮಂಗಳಾ,ಕವಿತಾ, ಕಾಲುವೆಹಳ್ಳಿ ಪಾಲಕ್ಕ, ಕರೀಕೆರೆ ಮಂಜುಳಾ, ಪ್ರಮೀಳಾ, ತಳುಕಿನ ತೊಯಜಾಕ್ಷಿ, ಜಗದಂಬಾ, ಶಾಂತಮ್ಮ, ರತ್ನಮ್ಮ, ಪುಷ್ಪಲತಾ, ಅನಿತಾ,ಜಾನಕಿ, ಶೈಲಜಾ, ವಿಶಾಲಾಕ್ಷಿ, ಯಶೋಧಾ,ಶಾರದಾ, ತಿಪ್ಪಮ್ಮ,ಸಮಾಜ ಸೇವಕ ಯತೀಶ್ ಎಂ ಸಿದ್ದಾಪುರ ಸೇರಿದಂತೆ ಸಾಕಷ್ಟು ಸಂಖ್ಯೆಯಲ್ಲಿ ವೀರಶೈವ ಮಹಿಳಾ ಸಂಘದ ಸದಸ್ಯರು ಇದ್ದರು.
- "ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಸೂಲಗಿತ್ತಿ ತಿಮ್ಮಕ್ಕಗೆ ಸನ್ಮಾನ". ಚಳ್ಳಕೆರೆ:-ನಗರದ ವೀರಶೈವ ಮಹಿಳಾ ಸಂಘದ ವತಿಯಿಂದ "ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ"ಯ ಪ್ರಯುಕ್ತ ಕಾಲುವೆಹಳ್ಳಿಯ ಶತಾಯುಷಿ ಸೂಲಗಿತ್ತಿ ತಳುಕಿನ ತಿಮ್ಮಕ್ಕಗೆ ಸನ್ಮಾನಿಸಿ ಗೌರವಧನ ನೀಡಿ ಗೌರವಿಸಲಾಯಿತು. "ಸಂಸ್ಕೃತಿ ಮತ್ತು ಸಂಪ್ರಾದಯಗಳ ಉಳುವಿನಲ್ಲಿ ಮಹಿಳೆಯ ಪಾತ್ರ"ಎಂಬ ವಿಷಯವಾಗಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದ ನಿರ್ದೇಶಕಿ ಶ್ರೀಮತಿ ಗೀತಾ ಪ್ರಕಾಶ್ ಅವರು ಭಾರತೀಯ ಸನಾತನ ಪರಂಪರೆಯ ಸಂಸ್ಕೃತಿ ಮತ್ತು ವಿಶಿಷ್ಟ ಸಂಪ್ರದಾಯಗಳನ್ನು ಮಹಿಳೆಯರು ಪ್ರತಿನಿತ್ಯ ತಮ್ಮ ದೈನಂದಿನ ಜೀವನದಲ್ಲಿ ಆಚರಣೆಗೆ ತರುವ ಮೂಲಕ ಅವುಗಳನ್ನು ಉಳಿಸಿ ಅದನ್ನು ಮುಂದಿನ ಪೀಳಿಗೆಗೆ ತಲುಪಿಸಬೇಕು.ಇದರ ಭಾಗವಾಗಿ ಮಕ್ಕಳಲ್ಲಿ ಉತ್ತಮ ಸಾಂಸ್ಕೃತಿಕ ಮೌಲ್ಯಗಳನ್ನು ತುಂಬಿ ಒಳ್ಳೆಯ ಪುಸ್ತಕಗಳನ್ನು ಓದುವ ಹವ್ಯಾಸಗಳನ್ನು ಬೆಳೆಸಿ ಅವರನ್ನು ಸಾಂಸ್ಕೃತಿಕ ರಾಯಭಾರಿಗಳಾಗಿ ಮಾಡಬೇಕು ಕಿವಿಮಾತು ಹೇಳಿದರು. ಮಹಿಳಾ ದಿನಾಚರಣೆಯ ಪ್ರಯುಕ್ತ ವೀರಶೈವ ಮಹಿಳೆಯರಿಂದ ಭಾರತದ ವಿವಿಧ ರಾಜ್ಯಗಳ ಉಡುಗೆ-ತೊಡಿಗೆಗಳ ಪ್ರದರ್ಶನ ನಡೆಯಿತು. ಕಾರ್ಯಕ್ರಮದಲ್ಲಿ ವೀರಶೈವ ಮಹಿಳಾ ಸಂಘದ ತಾಲೂಕು ಅಧ್ಯಕ್ಷೆ ಪದ್ಮ ನಾಗರಾಜ್, ಕಾರ್ಯದರ್ಶಿ ಮಂಜುಳಾ ನಾಗರಾಜ್, ನಿರ್ದೇಶಕರಾದ ಗೀತಾ ಪ್ರಕಾಶ್, ಸುನೀತಾ,ಸುಮಾ, ಮಮತಾ,ವನಜಾ, ಸೌಮ್ಯಲತಾ, ಮಂಗಳಾ,ಕವಿತಾ, ಕಾಲುವೆಹಳ್ಳಿ ಪಾಲಕ್ಕ, ಕರೀಕೆರೆ ಮಂಜುಳಾ, ಪ್ರಮೀಳಾ, ತಳುಕಿನ ತೊಯಜಾಕ್ಷಿ, ಜಗದಂಬಾ, ಶಾಂತಮ್ಮ, ರತ್ನಮ್ಮ, ಪುಷ್ಪಲತಾ, ಅನಿತಾ,ಜಾನಕಿ, ಶೈಲಜಾ, ವಿಶಾಲಾಕ್ಷಿ, ಯಶೋಧಾ,ಶಾರದಾ, ತಿಪ್ಪಮ್ಮ,ಸಮಾಜ ಸೇವಕ ಯತೀಶ್ ಎಂ ಸಿದ್ದಾಪುರ ಸೇರಿದಂತೆ ಸಾಕಷ್ಟು ಸಂಖ್ಯೆಯಲ್ಲಿ ವೀರಶೈವ ಮಹಿಳಾ ಸಂಘದ ಸದಸ್ಯರು ಇದ್ದರು.1
- ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆ ಬಳಿ ಮೃತ ಮಹಿಳೆಯ ಪೋಷಕರು ಪ್ರತಿಭಟನೆ ನಡೆಸಿದ್ದಾರೆ. ಇನ್ನೂ ಚಿತ್ರದುರ್ಗದ ಜಿಲ್ಲಾಸ್ಪತ್ರೆಯಲ್ಲಿ ಹೆರಿಗೆಗೆ ಧಾಖಲಾಗಿದ್ದ ಮಹಿಳೆ ಹೆರಿಗೆ ನಂತರ ಮೃತಪಟ್ಟಿದ್ದು ಮಗು ಚಿಕಿತ್ಸೆ ಪಡೆಯುತ್ತಿದ್ದು ಶಿಲ್ಪ ಎಂಬ ಮಹಿಳೆ ಸಾವನ್ನಪ್ಪಿದ್ದು ಮಹಿಳೆ ಸಾವಿಗೆ ವೈದ್ಯರು ಹಾಗೂ ಜಿಲ್ಲಾ ಸರ್ಜನ್ ಅವರೆ ಕಾರಣ ಎಂದು ಆರೋಪಿಸಿದ್ದಾರೆ1
- ಚಳ್ಳಕೆರೆ: ತಾಲೂಕಿನ ಗೋಪನಹಳ್ಳಿ ಗ್ರಾಮದ ರೈತ ನಾಗರಾಜ್ ಅವರ ಬಣವೆಗೆ ಸೋಮವಾರ ಬೆಂಕಿ ಬಿದ್ದು ಮೇವು ಸಂಪೂರ್ಣವಾಗಿ ಸುಟ್ಟು ಹೋಗಿದ್ದ ಘಟನೆಗೆ ಸಂಬಂಧಿಸಿದಂತೆ ಜನಧ್ವನಿ ನ್ಯೂಸ್ ಪ್ರಕಟಿಸಿದ ವರದಿಗೆ ಉತ್ತಮ ಸ್ಪಂದನೆ ದೊರೆತಿದೆ. ವರದಿ ಬೆಳಕಿಗೆ ಬಂದ ಬೆನ್ನಲ್ಲೇ ಪಾವಗಡದ ಶ್ರೀರಾಮಕೃಷ್ಣ ಸೇವಾಶ್ರಮದ ಶ್ರೀ ಜಪಾನಂದ ಸ್ವಾಮೀಜಿ ಬುಧವಾರ ಗೋಪನಹಳ್ಳಿ ಗ್ರಾಮದ ರೈತ ನಾಗರಾಜ್ ಅವರಿಗೆ ಒಂದು ಲೋಡ್ ಭತ್ತದ ಮೇವನ್ನು ವಿತರಣೆ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಈ ವೇಳೆ ಮಾತನಾಡಿದ ಅವರು, ರೈತರು ಹಾಗೂ ಜಾನುವಾರುಗಳ ಪಾಲನೆ-ಪೋಷಣೆ ಮಾಡುವಲ್ಲಿ ಎದುರಿಸುವ ಕಷ್ಟಗಳನ್ನು ನಾನು ಚೆನ್ನಾಗಿ ಅರಿತಿದ್ದೇನೆ. ಗೋಪನಹಳ್ಳಿ ಗ್ರಾಮದ ರೈತ ನಾಗರಾಜ್ ಅವರ ಬಣವೆಗೆ ಬೆಂಕಿ ಬಿದ್ದು ಉಂಟಾದ ನಷ್ಟದ ಕುರಿತು ಜನಧ್ವನಿ ನ್ಯೂಸ್ ವರದಿ ನೋಡಿ ಮನಸ್ಸಿಗೆ ಬೇಸರವಾಯಿತು. ಆದ್ದರಿಂದ ರೈತನ ಜಾನುವಾರುಗಳಿಗೆ ನೆರವಾಗುವ ಉದ್ದೇಶದಿಂದ ಮೇವು ವಿತರಣೆ ಮಾಡಲಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮೇವು ನೆರವು ನೀಡಿದ ಶ್ರೀ ಜಪಾನಂದ ಸ್ವಾಮೀಜಿಗಳಿಗೆ ರೈತ ನಾಗರಾಜ್ ಕೃತಜ್ಞತೆ ಸಲ್ಲಿಸಿದರು.1
- ಸಿರಗುಪ್ಪ ನಗರಸಭೆ ವ್ಯಾಪ್ತಿಯಲ್ಲಿ ಸರ್ಕಾರಿ ಜಮೀನುಗಳಿಗೆ ಕಾನೂನುಬಾಹಿರವಾಗಿ ನಮೂನೆ-3ಬಿ ಖಾತಾ ನೀಡಿರುವ ಬಗ್ಗೆ ಗಂಭೀರ ಆರೋಪ ಕೇಳಿಬಂದಿದೆ. ಸರ್ವೇ ನಂ.437/ಬಿ2ರಲ್ಲಿ ಉದ್ಯಾನವನಕ್ಕಾಗಿ ಕಾಯ್ದಿರಿಸಿದ್ದ 3.05 ಎಕರೆ ಜಾಗದಲ್ಲಿ ಒತ್ತುವರಿ ಮಾಡಿಕೊಂಡಿರುವವರಿಗೆ ಖಾತಾ ನೀಡಲಾಗಿದೆ ಎನ್ನಲಾಗಿದೆ. ಇದೇ ರೀತಿ ಸರ್ವೇ ನಂ.337ಎ ಹಾಗೂ 345ಬಿ/1 ಸರ್ಕಾರಿ ಹಳ್ಳ ಪರಂಬೋಕು ಜಮೀನುಗಳಿಗೂ ಖಾತಾ ನೀಡಿರುವ ಬಗ್ಗೆ ದೂರು ಸಲ್ಲಿಸಲಾಗಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಡಳಿತಕ್ಕೆ ಆಗ್ರಹಿಸಲಾಗಿದೆ.1
- ಸಂಬಂಧಪಟ್ಟ ಅಧಿಕಾರಿಗಳು ಆದಷ್ಟು ಬೇಗ ಸೇರ್ಪಡಿಸಬೇಕಾಗಿ ವಿನಂತಿ1
- ಹೆಬ್ಬೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ನವಗ್ರಾಮದ ಬಂಗಾರಪ್ಪ ಕಾಲೋನಿಯಲ್ಲಿ ಚರಂಡಿ ಯ ನೀರು ಕುಡಿಯುವ ನೀರಿಗೆ ಮಿಶ್ರಣ ವಾಗಿ ಬಂಗಾರಪ್ಪ ಕಾಲೋನಿ ನಿವಾಸಿ ಗಳ ದೇಹ ಸೇರುತ್ತಿದೆ ಸ್ಥಳೀಯ ನಿವಾಸಿಗಳು ಗ್ರಾಮ ಪಂಚಾಯತಿ ಅಧಿಕಾರಿಗಳಿಗೆ ಲಿಖಿತ ಮೂಲಕ ಮನವಿ ಸಲ್ಲಿಸಿದ್ದಾರೆ ಮನವಿ ಸಲ್ಲಿಸಿದ ನಂತರವೂ ಯಾವುದೇ ಕೆಲಸ ಆಗಿಲ್ಲ ಎಂದು ಬಂಗಾರಪ್ಪ ಕಾಲೋನಿ ನಿವಾಸಿಗಳ ಅಳಲು ಅಲ್ಲದೆ ಚರಂಡಿ ಕೂಡ ಸ್ವಚ್ಛತೆ ಮಾಡುವ ಕಾರ್ಯ ಮಾಡಿಲ್ಲ , ಸ್ಥಳೀಯ ನಿವಾಸಿಗಳು ಮಕ್ಕಳು ಅನಾರೋಗ್ಯ ಪೀಡಿತ ರಾಗುತ್ತಿದ್ದಾರೆ ಎಂದು ತಮ್ಮ ಅಳಲು ಹೇಳಿದ್ದಾರೆ.4
- ಕರ್ನಾಟಕ ರಾಜ್ಯದಾದ್ಯಂತ ಜಿಲ್ಲಾ ಹಾಗೂ ತಾಲೂಕು ವರದಿಗಾರರು ಬೇಕಾಗಿದ್ದಾರೆ ಆಸಕ್ತಿಯುಳ್ಳ ಅಭ್ಯರ್ಥಿ ಸಂಪರ್ಕಿಸಿ1
- ಚಿತ್ರದುರ್ಗದ ಜಿಲ್ಲಾಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ವಿರುದ್ಧ ಒಂದಲ್ಲ ಒಂದು ದೂರು ಕೇಳಿ ಬರುತ್ತಲೇ ಇರುವ ನಡುವೆಯೇ ನಡೆದ ಬಾಣಂತಿಯ ಸಾವು.. ಚಿತ್ರದುರ್ಗ :ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ಪರಶುರಾಮಪುರದ ಶಿಲ್ಪ ಎನ್ನುವ ಮಹಿಳೆಯೋರ್ವರು ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಹೆರಿಗೆ ವೇಳೆ ವೈದ್ಯರು ಮತ್ತು ಸಿಬ್ಬಂದಿ ನಿರ್ಲಕ್ಷದಿಂದಾಗಿಯೇ ಸಾವಾಗಿರೋದಾಗಿ ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ.. ಶಿಲ್ಪಾ(28) ಮೃತ ದುರ್ದೈವಿಯಾಗಿದ್ದು, ಮಗುವಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಐಸಿಯುಗೆ ದಾಖಲಿಸುವುದಾಗಿ ಹೇಳಿ ಶಿಲ್ಪಾರ ಮೃತದೇಹವನ್ನು ಶವಾಗಾರಕ್ಕೆ ಶಿಫ್ಟ್ ಮಾಡಲಾಗಿದೆ.. ಚಳ್ಳಕೆರೆ ತಾಲೂಕಿನ ಪರಶುರಾಂಪುರದ ಶಿಲ್ಪಾರನ್ನು ನಿನ್ನೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ತಡರಾತ್ರಿ ಹೆಣ್ಣು ಮಗುವಿಗೆ ಅವರು ಜನ್ಮ ನೀಡಿದ್ದರು. ಹೆರಿಗೆ ಬಳಿಕ ವೈದ್ಯರು ನಿರ್ಲಕ್ಷ ತೋರಿದ ಪರಿಣಾಮ ಶಿಲ್ಪಾಳ ಸಾವು ಸಂಭವಿಸಿದೆ. ಏಕಾಏಕಿ ಐಸಿಯುಗೆ ಶಿಫ್ಟ್ ಮಾಡಬೇಕೆಂದು ಹೇಳಿ ನೇರವಾಗಿ ಶವಾಗಾರಕ್ಕೆ ಶಿಫ್ಟ್ ಮಾಡಿದ್ದಾರೆ ಎಂಬುದು ಮೃತಳ ತಾಯಿ ದುರ್ಗಮ್ಮ ಅವರ ಆರೋಪ. ಇನ್ನು ವಿಷಯ ತಿಳಿಯುತ್ತಿದ್ದಂತೆ ಮೃತರ ಸಂಬಂಧಿಕರು ಆಸ್ಪತ್ರೆ ಬಳಿ ಜಮಾಯಿಸಿದ್ದು, ಜಿಲ್ಲಾಸ್ಪತ್ರೆಯ ಮುಖ್ಯಸ್ಥರಾದ ಡಾ.ರವೀಂದ್ರ ಸೇರಿ ಸಿಬ್ಬಂದಿಯನ್ನು ತರಾಟೆಗೆ ಪಡೆದಿದ್ದಾರೆ..1