logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ವಿಶ್ವಕರ್ಮ ಜಯಂತಿ; ಭಾವಚಿತ್ರಕ್ಕೆ ಮಾನೆ ಶ್ರೀನಿವಾಸ ಗೌರವಾರ್ಪಣೆ ಹಾನಗಲ್ ತಮ್ಮ ಜನಸಂಪರ್ಕ ಕಚೇರಿಯಲ್ಲಿ ಇಂದು ಆಯೋಜಿಸಿದ್ದ ವಿಶ್ವಕರ್ಮ ಜಯಂತಿಯಲ್ಲಿ ಶಾಸಕರು, ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರಾದ ಮಾನೆ ಶ್ರೀನಿವಾಸ ಅವರು ಭಾಗವಹಿಸಿ ದೇವಶಿಲ್ಪಿಯ ಭಾವಚಿತ್ರಕ್ಕೆ ಗೌರವಾರ್ಪಿಸಿದರು. ವಿಶ್ವಕರ್ಮ ಸಮುದಾಯದ ಕಲೆ, ಕೌಶಲ್ಯ ಹಾಗೂ ಸೃಜನಶೀಲತೆ ಭಾರತೀಯ ಸಂಸ್ಕೃತಿ ಮತ್ತು ನಿರ್ಮಾಣ ಕ್ಷೇತ್ರಕ್ಕೆ ನೀಡಿರುವ ಕೊಡುಗೆಯನ್ನು ಈ ಸಂದರ್ಭದಲ್ಲಿ ಸ್ಮರಿಸಿದರು...

4 hrs ago
user_ಸಂತೋಷ S H
ಸಂತೋಷ S H
Local News Reporter ಹಾನಗಲ್, ಹಾವೇರಿ, ಕರ್ನಾಟಕ•
4 hrs ago
9ff1a32a-0387-467c-b0e2-ce4b58b54314
62228a97-52ed-453f-b2f0-5bb0c20ef7db

ವಿಶ್ವಕರ್ಮ ಜಯಂತಿ; ಭಾವಚಿತ್ರಕ್ಕೆ ಮಾನೆ ಶ್ರೀನಿವಾಸ ಗೌರವಾರ್ಪಣೆ ಹಾನಗಲ್ ತಮ್ಮ ಜನಸಂಪರ್ಕ ಕಚೇರಿಯಲ್ಲಿ ಇಂದು ಆಯೋಜಿಸಿದ್ದ ವಿಶ್ವಕರ್ಮ ಜಯಂತಿಯಲ್ಲಿ ಶಾಸಕರು, ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರಾದ ಮಾನೆ ಶ್ರೀನಿವಾಸ ಅವರು ಭಾಗವಹಿಸಿ ದೇವಶಿಲ್ಪಿಯ ಭಾವಚಿತ್ರಕ್ಕೆ ಗೌರವಾರ್ಪಿಸಿದರು. ವಿಶ್ವಕರ್ಮ ಸಮುದಾಯದ ಕಲೆ, ಕೌಶಲ್ಯ ಹಾಗೂ ಸೃಜನಶೀಲತೆ ಭಾರತೀಯ ಸಂಸ್ಕೃತಿ ಮತ್ತು ನಿರ್ಮಾಣ ಕ್ಷೇತ್ರಕ್ಕೆ ನೀಡಿರುವ ಕೊಡುಗೆಯನ್ನು ಈ ಸಂದರ್ಭದಲ್ಲಿ ಸ್ಮರಿಸಿದರು...

More news from ಕರ್ನಾಟಕ and nearby areas
  • ಪಟ್ಟಣದಲ್ಲಿ ರೈತ ಸಂಘಟನೆ ಹಾಗೂ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ಶಿಗ್ಗಾವಿ: ತಾಲೂಕಿನ ವಿವಿಧ ಸಂಘಟನೆಗಳ ಮುಖಂಡರು ರೈತರು ಸೇರಿಕೊಂಡು ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪಟ್ಟಣದ ಪೊಸ್ಟ್ ಆಫೀಸನಿಂದ ಪ್ರತಿಭಟನಾ ಮೆರವಣಿಗೆಯ ಮೂಲಕ ವೀರ ರಾಣಿ ಚನ್ನಮ್ಮ ವೃತ್ತಕ್ಕೆ ಆಗಮಿಸಿ ಪ್ರತಿಭಟನೆ ನಡೆಸಿ ಗ್ರೇಡ್ ೨ ತಹಶೀಲ್ದಾರ ದೇವಾನಂದ ವಾಲ್ಮೀಕಿ ಅವರ ಮೂಲಕ ಸಿ.ಎಂ. ಅವರಿಗೆ ಮನವಿ ಅರ್ಪಿಸಿದರು. ತಾಲೂಕಿನಲ್ಲಿ ಸಮರ್ಪಕ ಮಳೆಯಾಗದೆ ಬೆಳೆಗಳು ಒಣಗುತ್ತಿದ್ದು, ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಸರ್ಕಾರ ಕೂಡಲೇ ರೈತರಿಗೆ ಬರ ಪರಿಹಾರ ಒದಗಿಸಬೇಕು. ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ರಸಗೊಬ್ಬರ ಹಾಗೂ ಇತರ ಪರಿಕರಗಳ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಬತ್ತ, ಗೋವಿನಜೋಳ, ಸೇರಿದಂತೆ ವಿವಿಧ ಬೇಳೆಗಳು ತೀವ್ರ ಹಾನಿಯಾಗಿವೆ. ಅಲ್ಲದೆ, ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ೫.೫೦೦ ದರ ನಿಗದಿ ಮಾಡಬೇಕು ಎಂದು ಆಗ್ರಹಿಸಿದರು. ರೈತರು ಬೆಳೆ ವಿಮೆ ಪಾವತಿಸಿದ್ದರೂ ಬರಗಾಲದ ಪರಿಸ್ಥಿತಿ ಎದುರಾಗಿರುವುದರಿಂದ, ಬೆಳೆ ವಿಮೆ ಕಂಪನಿಗಳಿAದ ರೈತರಿಗೆ ಮಧ್ಯಂತರ ಪರಿಹಾರ ಹಣ ಕೂಡಲೇ ಬಿಡುಗಡೆ ಮಾಡಿಸಲು ರಾಜ್ಯ ಸರ್ಕಾರಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ. ರೈತರ ಹಿತದೃಷ್ಟಿಯಿಂದ ಮೂರು ಬೇಡಿಕೆಗಳನ್ನು ಈಡೇರಿಸುವಂತ ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿಡಿ.ಕೆ. ಶಿವಕುಮಾರ್‌ಅವರಿಗೆ ಮನವಿ ಮೂಲಕ ಒತ್ತಾಯಿಸಲಾಯಿತು. ಈ ಸಂದರ್ಭದಲ್ಲಿ ರೈತ ಸಂಘದ ಮುಖಂಡರಾದ ಬಸಲಿಂಗಪ್ಪ ನರಗುಂದ, ಸಂತೋಷ ಪಾಟೀಲ, ಬಸವರಾಜ ಬೇಕಿನಕಟ್ಟಿ, ಮಂಜುನಾಥ ಕಂಕನವಾಡ, ಭಾರತೀಯ ಕ್ರಾಂತಿಕಾರಿ ಕಿಸಾನ ಸೇನಾ ರಾಷ್ಟ್ರೀಯ ಅಧ್ಯಕ್ಷ ಎಂ.ಎನ್. ಕುಕನೂರ, ಕನ್ನಡಪರ ಸಂಘಟನೆಯ ಅಧ್ಯಕ್ಷ ದುರ್ಗಪ್ಪ ವಡ್ಡರ ಸೇರಿದಂತೆ ಹಲವಾರು ಮುಖಂಡರುಗಳು ಮಾತನಾಡಿ ತಕ್ಷಣ ಬರಗಾಲ ಪ್ರದೇಶವೆಂದು ಸಾರಿ ಪರಿಹಾರ ನೀಡಬೇಕು ಎಂದರು. ಈ ಸಂದರ್ಭದಲ್ಲಿ ಮಹಿಳಾ ರೈತಪರ ಹೊರಾಟಗಾರರಾದ ಶೋಭಾ ಲಕ್ಷ್ಮೀಶ್ವರ, ಸುಶೀಲಾ ಲಕ್ಷ್ಮೀಶ್ವರ, ಪುಷ್ಪಾ ಹುಡೇದ, ನೀಲಪ್ಪ ವಾಲ್ಮೀಕಿ, ನೇತ್ರಾ ಮರಿಗೌಡ್ರ, ಶೋಭಾ ಶಿರೂರ, ಮಂಜುಳಾ ಕಳಸದ, ಪಾರಪ್ಪ ಮರಿಗೌಡ್ರ, ಹಾವೇರಿ ಘಟಕದ ಪ್ರದಾನ ಕಾರ್ಯದರ್ಶಿ ನಿಂಗಪ್ಪ ವಾಲೀಕಾರ, ಕಲ್ಯಾಣ ಕರ್ನಾಟಕ ಅಧ್ಯಕ್ಷ ಶಬ್ಬಿರ ಎಚ್, ಕೆಆರ್.ಎಸ್ ಪಕ್ಷದ ಸರ್ವ ಸದಸ್ಯರುಗಳು, ಸೇರಿದಂತೆ ಹಲವಾರು ಸಂಘಟನೆಗಳ ಮುಖಂಡರುಗಳು ಇದ್ದರು
    1
    ಪಟ್ಟಣದಲ್ಲಿ ರೈತ ಸಂಘಟನೆ ಹಾಗೂ ವಿವಿಧ ಸಂಘಟನೆಗಳಿಂದ ಪ್ರತಿಭಟನೆ 
ಶಿಗ್ಗಾವಿ: ತಾಲೂಕಿನ ವಿವಿಧ ಸಂಘಟನೆಗಳ ಮುಖಂಡರು ರೈತರು ಸೇರಿಕೊಂಡು ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪಟ್ಟಣದ ಪೊಸ್ಟ್ ಆಫೀಸನಿಂದ ಪ್ರತಿಭಟನಾ ಮೆರವಣಿಗೆಯ ಮೂಲಕ ವೀರ ರಾಣಿ ಚನ್ನಮ್ಮ ವೃತ್ತಕ್ಕೆ ಆಗಮಿಸಿ ಪ್ರತಿಭಟನೆ ನಡೆಸಿ ಗ್ರೇಡ್ ೨ ತಹಶೀಲ್ದಾರ ದೇವಾನಂದ ವಾಲ್ಮೀಕಿ ಅವರ ಮೂಲಕ ಸಿ.ಎಂ. ಅವರಿಗೆ ಮನವಿ  ಅರ್ಪಿಸಿದರು.
ತಾಲೂಕಿನಲ್ಲಿ ಸಮರ್ಪಕ ಮಳೆಯಾಗದೆ ಬೆಳೆಗಳು ಒಣಗುತ್ತಿದ್ದು, ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಸರ್ಕಾರ ಕೂಡಲೇ ರೈತರಿಗೆ ಬರ ಪರಿಹಾರ ಒದಗಿಸಬೇಕು. ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ರಸಗೊಬ್ಬರ ಹಾಗೂ ಇತರ ಪರಿಕರಗಳ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಬತ್ತ, ಗೋವಿನಜೋಳ, ಸೇರಿದಂತೆ ವಿವಿಧ ಬೇಳೆಗಳು ತೀವ್ರ ಹಾನಿಯಾಗಿವೆ. ಅಲ್ಲದೆ, ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ೫.೫೦೦ ದರ ನಿಗದಿ ಮಾಡಬೇಕು ಎಂದು ಆಗ್ರಹಿಸಿದರು.
ರೈತರು ಬೆಳೆ ವಿಮೆ ಪಾವತಿಸಿದ್ದರೂ ಬರಗಾಲದ ಪರಿಸ್ಥಿತಿ ಎದುರಾಗಿರುವುದರಿಂದ, ಬೆಳೆ ವಿಮೆ ಕಂಪನಿಗಳಿAದ ರೈತರಿಗೆ ಮಧ್ಯಂತರ ಪರಿಹಾರ ಹಣ ಕೂಡಲೇ ಬಿಡುಗಡೆ ಮಾಡಿಸಲು ರಾಜ್ಯ ಸರ್ಕಾರಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ. ರೈತರ ಹಿತದೃಷ್ಟಿಯಿಂದ ಮೂರು ಬೇಡಿಕೆಗಳನ್ನು ಈಡೇರಿಸುವಂತ ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿಡಿ.ಕೆ. ಶಿವಕುಮಾರ್‌ಅವರಿಗೆ ಮನವಿ ಮೂಲಕ ಒತ್ತಾಯಿಸಲಾಯಿತು.
ಈ ಸಂದರ್ಭದಲ್ಲಿ ರೈತ ಸಂಘದ ಮುಖಂಡರಾದ ಬಸಲಿಂಗಪ್ಪ ನರಗುಂದ, ಸಂತೋಷ ಪಾಟೀಲ, ಬಸವರಾಜ ಬೇಕಿನಕಟ್ಟಿ, ಮಂಜುನಾಥ ಕಂಕನವಾಡ, ಭಾರತೀಯ ಕ್ರಾಂತಿಕಾರಿ ಕಿಸಾನ ಸೇನಾ ರಾಷ್ಟ್ರೀಯ ಅಧ್ಯಕ್ಷ ಎಂ.ಎನ್. ಕುಕನೂರ, ಕನ್ನಡಪರ ಸಂಘಟನೆಯ ಅಧ್ಯಕ್ಷ ದುರ್ಗಪ್ಪ ವಡ್ಡರ ಸೇರಿದಂತೆ ಹಲವಾರು ಮುಖಂಡರುಗಳು ಮಾತನಾಡಿ ತಕ್ಷಣ ಬರಗಾಲ ಪ್ರದೇಶವೆಂದು ಸಾರಿ ಪರಿಹಾರ ನೀಡಬೇಕು ಎಂದರು. 
ಈ ಸಂದರ್ಭದಲ್ಲಿ ಮಹಿಳಾ ರೈತಪರ ಹೊರಾಟಗಾರರಾದ ಶೋಭಾ ಲಕ್ಷ್ಮೀಶ್ವರ, ಸುಶೀಲಾ ಲಕ್ಷ್ಮೀಶ್ವರ, ಪುಷ್ಪಾ ಹುಡೇದ, ನೀಲಪ್ಪ ವಾಲ್ಮೀಕಿ, ನೇತ್ರಾ ಮರಿಗೌಡ್ರ, ಶೋಭಾ ಶಿರೂರ, ಮಂಜುಳಾ ಕಳಸದ, ಪಾರಪ್ಪ ಮರಿಗೌಡ್ರ, ಹಾವೇರಿ ಘಟಕದ ಪ್ರದಾನ ಕಾರ್ಯದರ್ಶಿ ನಿಂಗಪ್ಪ ವಾಲೀಕಾರ, ಕಲ್ಯಾಣ ಕರ್ನಾಟಕ ಅಧ್ಯಕ್ಷ ಶಬ್ಬಿರ ಎಚ್, ಕೆಆರ್.ಎಸ್ ಪಕ್ಷದ ಸರ್ವ ಸದಸ್ಯರುಗಳು, ಸೇರಿದಂತೆ ಹಲವಾರು ಸಂಘಟನೆಗಳ ಮುಖಂಡರುಗಳು ಇದ್ದರು
    user_ವಿಶ್ವನಾಥ ಬಂಡಿವಡ್ಡರ
    ವಿಶ್ವನಾಥ ಬಂಡಿವಡ್ಡರ
    Local News Reporter ಹಾವೇರಿ, ಹಾವೇರಿ, ಕರ್ನಾಟಕ•
    48 min ago
  • ಭಾರತ ದೇಶದ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿಯವರ 76 ನೇಯ ಜನ್ಮದಿನದ ಅಂಗವಾಗಿ ದೇವಾಲಯಕ್ಕೆ ಭೇಟಿ ನೀಡಿದ. ಬೊಮ್ಮಾಯಿ. ಭಾರತ ದೇಶದ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿಯವರ 76 ನೇಯ ಜನ್ಮದಿನದ ಅಂಗವಾಗಿ ಇಂದು ಹುಬ್ಬಳ್ಳಿಯ ಆದರ್ಶ ನಗರದಲ್ಲಿರುವ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ, ಶ್ರೀ ಗಣೇಶ ದೇವಸ್ಥಾನ ಹಾಗೂ ಶ್ರೀ ಸುಬ್ರಮಣ್ಯ ಸ್ವಾಮಿಯ ದರ್ಶನಾಶೀರ್ವಾದವನ್ನು ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಬಸವರಾಜ ಬೊಮ್ಮಾಯಿರವರು ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನಾಶೀರ್ವಾದ ಪಡೆದುಕೊಂಡರು.
    1
    ಭಾರತ ದೇಶದ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿಯವರ 76 ನೇಯ ಜನ್ಮದಿನದ ಅಂಗವಾಗಿ ದೇವಾಲಯಕ್ಕೆ ಭೇಟಿ ನೀಡಿದ. ಬೊಮ್ಮಾಯಿ.
ಭಾರತ ದೇಶದ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿಯವರ 76 ನೇಯ ಜನ್ಮದಿನದ ಅಂಗವಾಗಿ ಇಂದು ಹುಬ್ಬಳ್ಳಿಯ ಆದರ್ಶ ನಗರದಲ್ಲಿರುವ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ, ಶ್ರೀ ಗಣೇಶ ದೇವಸ್ಥಾನ ಹಾಗೂ ಶ್ರೀ ಸುಬ್ರಮಣ್ಯ ಸ್ವಾಮಿಯ ದರ್ಶನಾಶೀರ್ವಾದವನ್ನು ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಬಸವರಾಜ ಬೊಮ್ಮಾಯಿರವರು ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನಾಶೀರ್ವಾದ ಪಡೆದುಕೊಂಡರು.
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    2 hrs ago
  • *ಹಾವೇರಿ, ಸೆ.17:* ಇಂದು ಪ್ರಧಾನಿ ನರೇಂದ್ರ ಮೋದಿಜಿ ಅವರ 76ನೇ ಜನ್ಮದಿನದ ಅಂಗವಾಗಿ ನಗರದ ಪುರಸಿದ್ದೇಶ್ವರ ದೇವಸ್ಥಾನದಲ್ಲಿ ಮೋದಿಜಿಯವರಿಗೆ ಆಯುಷ್ಯ, ಆರೋಗ್ಯ ನೀಡಿ ಕಾಪಾಡಲಿ ಎಂದು ವಿಶೇಷ ಪೂಜಾ ಅರ್ಚನೆ ನೆರವೇರಿಸಲಾಯಿತು. ಇದೇ ಸಂದರ್ಭದಲ್ಲಿ ಆಶಾಕಿರಣ ವೃದ್ಧಾಶ್ರಮದಲ್ಲಿ ಕೇಕ್ ಕಟ್ ಮಾಡಿ ಸಿಹಿ ಹಂಚಲಾಯಿತು. ಈ ಕಾರ್ಯಕ್ರಮದಲ್ಲಿ ಹಾವೇರಿ ವಿಧಾನಸಭಾ ಕ್ಷೇತ್ರದ ಮುಖಂಡರಾದ ಗವಿಸಿದ್ದಪ್ಪ ದ್ಯಾಮಣ್ಣನವರ್, ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಸಿದ್ದರಾಜಣ್ಣ ಕಲಕೋಟಿ, ನಗರಾಧ್ಯಕ್ಷರಾದ ಕಿರಣ್ ಕೊಳ್ಳಿ, ಅಲ್ಪಸಂಖ್ಯಾತ ರಾಜ್ಯ ಉಪಾಧ್ಯಕ್ಷರಾದ ಅಲ್ಲಾಭಕ್ಷ ತಿಮ್ಮಾಪುರ, ಮಂಜುಳಾ ಕರಬಸಣ್ಣನವರ್, ನಿರಂಜನ್ ಹೇರೂರ್, ಎಸ್.ಸಿ ಮೋರ್ಚಾ ಅಧ್ಯಕ್ಷರಾದ ಸುನಿಲ್ ಬೆಟಗೇರಿ, ಸುರೇಶ್ ಹೊಸಮನಿ, ಗಿರೀಶ್ ಶೆಟ್ಟಿ ಹಾಗೂ ರಾಜ್ಯ, ಜಿಲ್ಲಾ, ನಗರ ಮಂಡಲ ಪದಾಧಿಕಾರಿಗಳು, ಮೋರ್ಚಾ ಅಧ್ಯಕ್ಷರು, ಬೂತ್ ಅಧ್ಯಕ್ಷರು, ನಗರಸಭೆ ಮಾಜಿ ಸದಸ್ಯರು ಮತ್ತು ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.
    1
    *ಹಾವೇರಿ, ಸೆ.17:* ಇಂದು ಪ್ರಧಾನಿ ನರೇಂದ್ರ ಮೋದಿಜಿ ಅವರ 76ನೇ ಜನ್ಮದಿನದ ಅಂಗವಾಗಿ ನಗರದ ಪುರಸಿದ್ದೇಶ್ವರ ದೇವಸ್ಥಾನದಲ್ಲಿ ಮೋದಿಜಿಯವರಿಗೆ ಆಯುಷ್ಯ, ಆರೋಗ್ಯ ನೀಡಿ ಕಾಪಾಡಲಿ ಎಂದು ವಿಶೇಷ ಪೂಜಾ ಅರ್ಚನೆ ನೆರವೇರಿಸಲಾಯಿತು.
ಇದೇ ಸಂದರ್ಭದಲ್ಲಿ ಆಶಾಕಿರಣ ವೃದ್ಧಾಶ್ರಮದಲ್ಲಿ ಕೇಕ್ ಕಟ್ ಮಾಡಿ ಸಿಹಿ ಹಂಚಲಾಯಿತು.
ಈ ಕಾರ್ಯಕ್ರಮದಲ್ಲಿ ಹಾವೇರಿ ವಿಧಾನಸಭಾ ಕ್ಷೇತ್ರದ ಮುಖಂಡರಾದ ಗವಿಸಿದ್ದಪ್ಪ ದ್ಯಾಮಣ್ಣನವರ್, ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಸಿದ್ದರಾಜಣ್ಣ ಕಲಕೋಟಿ, ನಗರಾಧ್ಯಕ್ಷರಾದ ಕಿರಣ್ ಕೊಳ್ಳಿ, ಅಲ್ಪಸಂಖ್ಯಾತ ರಾಜ್ಯ ಉಪಾಧ್ಯಕ್ಷರಾದ ಅಲ್ಲಾಭಕ್ಷ ತಿಮ್ಮಾಪುರ, ಮಂಜುಳಾ ಕರಬಸಣ್ಣನವರ್, ನಿರಂಜನ್ ಹೇರೂರ್, ಎಸ್.ಸಿ ಮೋರ್ಚಾ ಅಧ್ಯಕ್ಷರಾದ ಸುನಿಲ್ ಬೆಟಗೇರಿ, ಸುರೇಶ್ ಹೊಸಮನಿ, ಗಿರೀಶ್ ಶೆಟ್ಟಿ ಹಾಗೂ ರಾಜ್ಯ, ಜಿಲ್ಲಾ, ನಗರ ಮಂಡಲ ಪದಾಧಿಕಾರಿಗಳು, ಮೋರ್ಚಾ ಅಧ್ಯಕ್ಷರು, ಬೂತ್ ಅಧ್ಯಕ್ಷರು, ನಗರಸಭೆ ಮಾಜಿ ಸದಸ್ಯರು ಮತ್ತು ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.
    user_ಸುನೀಲ್ ಲ್ ಬೆಟಗೇರಿ
    ಸುನೀಲ್ ಲ್ ಬೆಟಗೇರಿ
    Spa ಹಾವೇರಿ, ಹಾವೇರಿ, ಕರ್ನಾಟಕ•
    4 hrs ago
  • ಗದಗ ಜೀಮ್ಸ್‌ನಲ್ಲಿ ಬಿಸಿಲಲ್ಲೇ ನಿಂತು ಔಷಧಿ ಪಡೆಯುವ ದುಸ್ಥಿತಿ! ಗದಗ ಜಿಲ್ಲೆಯ ಪ್ರಮುಖ ಸರ್ಕಾರಿ ಆಸ್ಪತ್ರೆಯಾಗಿರುವ ಜೀಮ್ಸ್‌ಗೆ ಪ್ರತಿದಿನ ನೂರಾರು ರೋಗಿಗಳು ಹಾಗೂ ಅವರ ಸಂಬಂಧಿಕರು ಚಿಕಿತ್ಸೆಗಾಗಿ ಆಗಮಿಸುತ್ತಾರೆ. ಆದರೆ, ಇಲ್ಲಿ ಔಷಧಿ ಪಡೆಯಲು ರೋಗಿಗಳು ಬಿಸಿಲು, ಮಳೆ ಹಾಗೂ ಗಾಳಿಯ ನಡುವೆಯೇ ಸರತಿ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. ಗದಗ ಜೀಮ್ಸ್‌ನಲ್ಲಿ ಬಿಸಿಲಲ್ಲೇ ನಿಂತು ಔಷಧಿ ಪಡೆಯುವ ದುಸ್ಥಿತಿ! ಗದಗ ಜಿಲ್ಲೆಯ ಪ್ರಮುಖ ಸರ್ಕಾರಿ ಆಸ್ಪತ್ರೆಯಾಗಿರುವ ಜೀಮ್ಸ್‌ಗೆ ಪ್ರತಿದಿನ ನೂರಾರು ರೋಗಿಗಳು ಹಾಗೂ ಅವರ ಸಂಬಂಧಿಕರು ಚಿಕಿತ್ಸೆಗಾಗಿ ಆಗಮಿಸುತ್ತಾರೆ. ಆದರೆ, ಇಲ್ಲಿ ಔಷಧಿ ಪಡೆಯಲು ರೋಗಿಗಳು ಬಿಸಿಲು, ಮಳೆ ಹಾಗೂ ಗಾಳಿಯ ನಡುವೆಯೇ ಸರತಿ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. ವೃದ್ಧರು, ಮಹಿಳೆಯರು ಹಾಗೂ ಅನಾರೋಗ್ಯದಿಂದ ಬಳಲುತ್ತಿರುವ ರೋಗಿಗಳಿಗೂ ಸಮರ್ಪಕ ನೆರಳಿನ ವ್ಯವಸ್ಥೆ ಇಲ್ಲದೆ ಹೊರಗಡೆ ಕಾಯುವಂತಾಗಿದೆ. ಆಸ್ಪತ್ರೆ ಆವರಣದಲ್ಲಿ ಆಸನಗಳಿದ್ದರೂ, ಔಷಧಿ ವಿತರಣಾ ಕೌಂಟರ್ ಬಳಿ ಸರಿಯಾದ ಸರತಿ ವ್ಯವಸ್ಥೆ ಮತ್ತು ರೋಗಿಗಳಿಗೆ ಅನುಕೂಲಕರ ಮೂಲಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ಇದರ ಜೊತೆಗೆ, ಆಸ್ಪತ್ರೆಯಲ್ಲಿ ಔಷಧಿ ಲಭ್ಯವಿಲ್ಲದೆ ಹೊರಗಿನ ಖಾಸಗಿ ಔಷಧಿ ಅಂಗಡಿಗಳಿಂದ ಖರೀದಿಸುವಂತೆ ಚೀಟಿ ನೀಡಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ. ಹಾಗಾದರೆ ಜೀಮ್ಸ್‌ನಲ್ಲಿ ರೋಗಿಗಳ ಗೋಳು ಕೇಳುವವರು ಯಾರು? ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಔಷಧಿ ವಿತರಿಸುವ ಕೌಂಟರ್‌ಗೆ ನೆರಳು, ಕುಡಿಯುವ ನೀರು, ಆಸನ ಹಾಗೂ ಸಮರ್ಪಕ ಔಷಧಿ ವಿತರಣಾ ವ್ಯವಸ್ಥೆ ಕಲ್ಪಿಸಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.
    1
    ಗದಗ ಜೀಮ್ಸ್‌ನಲ್ಲಿ ಬಿಸಿಲಲ್ಲೇ ನಿಂತು ಔಷಧಿ ಪಡೆಯುವ ದುಸ್ಥಿತಿ!
ಗದಗ ಜಿಲ್ಲೆಯ ಪ್ರಮುಖ ಸರ್ಕಾರಿ ಆಸ್ಪತ್ರೆಯಾಗಿರುವ ಜೀಮ್ಸ್‌ಗೆ ಪ್ರತಿದಿನ ನೂರಾರು ರೋಗಿಗಳು ಹಾಗೂ ಅವರ ಸಂಬಂಧಿಕರು ಚಿಕಿತ್ಸೆಗಾಗಿ ಆಗಮಿಸುತ್ತಾರೆ.
ಆದರೆ, ಇಲ್ಲಿ ಔಷಧಿ ಪಡೆಯಲು ರೋಗಿಗಳು ಬಿಸಿಲು, ಮಳೆ ಹಾಗೂ ಗಾಳಿಯ ನಡುವೆಯೇ ಸರತಿ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬ ಆರೋಪ ಕೇಳಿಬರುತ್ತಿದೆ.
ಗದಗ ಜೀಮ್ಸ್‌ನಲ್ಲಿ ಬಿಸಿಲಲ್ಲೇ ನಿಂತು ಔಷಧಿ ಪಡೆಯುವ ದುಸ್ಥಿತಿ!
ಗದಗ ಜಿಲ್ಲೆಯ ಪ್ರಮುಖ ಸರ್ಕಾರಿ ಆಸ್ಪತ್ರೆಯಾಗಿರುವ ಜೀಮ್ಸ್‌ಗೆ ಪ್ರತಿದಿನ ನೂರಾರು ರೋಗಿಗಳು ಹಾಗೂ ಅವರ ಸಂಬಂಧಿಕರು ಚಿಕಿತ್ಸೆಗಾಗಿ ಆಗಮಿಸುತ್ತಾರೆ.
ಆದರೆ, ಇಲ್ಲಿ ಔಷಧಿ ಪಡೆಯಲು ರೋಗಿಗಳು ಬಿಸಿಲು, ಮಳೆ ಹಾಗೂ ಗಾಳಿಯ ನಡುವೆಯೇ ಸರತಿ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬ ಆರೋಪ ಕೇಳಿಬರುತ್ತಿದೆ.
ವೃದ್ಧರು, ಮಹಿಳೆಯರು ಹಾಗೂ ಅನಾರೋಗ್ಯದಿಂದ ಬಳಲುತ್ತಿರುವ ರೋಗಿಗಳಿಗೂ ಸಮರ್ಪಕ ನೆರಳಿನ ವ್ಯವಸ್ಥೆ ಇಲ್ಲದೆ ಹೊರಗಡೆ ಕಾಯುವಂತಾಗಿದೆ.
ಆಸ್ಪತ್ರೆ ಆವರಣದಲ್ಲಿ ಆಸನಗಳಿದ್ದರೂ, ಔಷಧಿ ವಿತರಣಾ ಕೌಂಟರ್ ಬಳಿ ಸರಿಯಾದ ಸರತಿ ವ್ಯವಸ್ಥೆ ಮತ್ತು ರೋಗಿಗಳಿಗೆ ಅನುಕೂಲಕರ ಮೂಲಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ.
ಇದರ ಜೊತೆಗೆ, ಆಸ್ಪತ್ರೆಯಲ್ಲಿ ಔಷಧಿ ಲಭ್ಯವಿಲ್ಲದೆ ಹೊರಗಿನ ಖಾಸಗಿ ಔಷಧಿ ಅಂಗಡಿಗಳಿಂದ ಖರೀದಿಸುವಂತೆ ಚೀಟಿ ನೀಡಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ.
ಹಾಗಾದರೆ ಜೀಮ್ಸ್‌ನಲ್ಲಿ ರೋಗಿಗಳ ಗೋಳು ಕೇಳುವವರು ಯಾರು?
ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಔಷಧಿ ವಿತರಿಸುವ ಕೌಂಟರ್‌ಗೆ ನೆರಳು, ಕುಡಿಯುವ ನೀರು, ಆಸನ ಹಾಗೂ ಸಮರ್ಪಕ ಔಷಧಿ ವಿತರಣಾ ವ್ಯವಸ್ಥೆ ಕಲ್ಪಿಸಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.
    user_NEWS 83 KARNATAKA
    NEWS 83 KARNATAKA
    ಲಕ್ಷ್ಮೇಶ್ವರ, ಗದಗ, ಕರ್ನಾಟಕ•
    21 hrs ago
  • ಶಿಕಾರಿಪುರ : ಕಸ್ತೂರಿ ರಂಗನ್ ವರದಿ ವಿರೋಧಿಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ, ಶಿಕಾರಿಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಭಂಡಾರಿ ಮಾಲತೇಶ್.B.G. ಕರ್ನಾಟಕ ಸರ್ಕಾರದ ಮಾನ್ಯ ಮುಖ್ಯ ಮಂತ್ರಿಗಳಾದ ಶ್ರೀಯುತ ಡಿ.ಕೆ ಶಿವಕುಮಾರ್ ರವರು ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಮಾನ್ಯ ಮಧು ಬಂಗಾರಪ್ಪ ನವರು ದಿನಾಂಕ:19-09-2026 ರ ಶನಿವಾರ ರಂದು ಬೆಳಿಗ್ಗೆ 09-30 ಕ್ಕೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಗೆ ಆಗಮಿಸುತ್ತಿದ್ದು, ಕೇಂದ್ರ ಸರ್ಕಾರದ ಕಸ್ತೂರಿ ರಂಗನ್ ವರದಿ ಕರಡು ಅಧಿಸೂಚನೆ ಜಾರಿಯಾದರೆ ನಮ್ಮ ಮಲೆನಾಡಿನ ರೈತರು. ಕೃಷಿ ಕಾರ್ಮಿಕರು ಹಾಗೂ ಸಾರ್ವಜನಿಕರ ಬದುಕಿಗೆ ದೊಡ್ಡ ಸಂಕಷ್ಟ ಎದುರಾಗಲಿದೆ. ಈ ಹಿನ್ನೆಲೆಯಲ್ಲಿ ಮಲೆನಾಡಿನ ಜನರ ನೈಜ ಪರಿಸ್ಥಿತಿ ಮತ್ತು ಅಹವಾಲುಗಳನ್ನು ಖುದ್ದು ಆಲಿಸಲಿದ್ದಾರೆ. ಶಿಕಾರಿಪುರ ತಾಲೂಕು ಹಾಗೂ ಶಿವಮೊಗ್ಗ ಜಿಲ್ಲೆ ಮತ್ತು ಪಶ್ಚಿಮ ಘಟ್ಟ ಮತ್ತು ಮಲೆನಾಡಿನ ಸಮಸ್ತ ರೈತರು ಕೃಷಿಕರು ಕಾರ್ಮಿಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ನಿಮ್ಮ ಅಹವಾಲುಗಳನ್ನು ಸಲ್ಲಿಸುವ ಮೂಲಕ ಈ ವರದಿಯನ್ನು ಒಗ್ಗಟ್ಟಿನಿಂದ ವಿರೋಧಿಸೋಣ ಎಂದರು. ಈ ಕಾರ್ಯಕ್ರಮಕ್ಕೆ ಶಿಕಾರಿಪುರ ತಾಲ್ಲೂಕ್ ಹಾಗೂ ಶಿವಮೊಗ್ಗ ಜಿಲ್ಲೆ ಮತ್ತು ಪಶ್ಚಿಮ ಘಟ್ಟ ಮತ್ತು ಮಲೆನಾಡಿನ ಸಮಸ್ತ ರೈತರು, ಕೃಷಿಕರು, ಕಾರ್ಮಿಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ನಿಮ್ಮ ಅಹವಾಲುಗಳನ್ನು ಸಲ್ಲಿಸುವ ಮೂಲಕ ಈ ವರದಿಯನ್ನು ಒಗ್ಗಟ್ಟಿನಿಂದ ವಿರೋಧಿಸೋಣ. ಈ ಸಂದರ್ಭದಲ್ಲಿ ಕೆಡಿಸಿ ಜಿಲ್ಲಾ ಸದಸ್ಯರಾದ ಮಾರವಳ್ಳಿ ಉಮೇಶ್, ಶಿಕಾರಿಪುರ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರೋಷನ್ ಶಿರಾಳಕೊಪ್ಪ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಮಿತ್ರೇಶ್, ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷರಾದ ಮಂಜನಾಯ್ಕ, ಶಿರಾಳಕೊಪ್ಪ ಯುವ ಕಾಂಗ್ರೆಸ್ ಅಧ್ಯಕ್ಷರಾದ ನಯಾಜ್, ಕಸಬಾ ಸೊಸೈಟಿ ಹಾಲಿ ನಿರ್ದೇಶಕರಾದ ಬಡಗಿ ಪಾಲಾಕ್ಷಪ್ಪ, ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್, ಹಾಗೂ ಕಾಂಗ್ರೆಸ್ ಮುಖಂಡರಾದ ಅತಾವುಲ್ಲಾ ,ರಬ್ಬಾನಿ ,ಮುಜೀಬ್, ಶಫಿವುಲ್ಲಾ, ಸಂದೀಪ್, ರವಿ ಬಗನಕಟ್ಟೆ, ಶಬ್ಬೀರ್ ಉಪಸ್ಥಿತರಿದ್ದರು.
    1
    ಶಿಕಾರಿಪುರ : ಕಸ್ತೂರಿ ರಂಗನ್ ವರದಿ ವಿರೋಧಿಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ, ಶಿಕಾರಿಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಭಂಡಾರಿ ಮಾಲತೇಶ್.B.G.
ಕರ್ನಾಟಕ ಸರ್ಕಾರದ ಮಾನ್ಯ ಮುಖ್ಯ ಮಂತ್ರಿಗಳಾದ ಶ್ರೀಯುತ ಡಿ.ಕೆ ಶಿವಕುಮಾರ್ ರವರು ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಮಾನ್ಯ ಮಧು ಬಂಗಾರಪ್ಪ ನವರು ದಿನಾಂಕ:19-09-2026 ರ ಶನಿವಾರ ರಂದು ಬೆಳಿಗ್ಗೆ 09-30 ಕ್ಕೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಗೆ ಆಗಮಿಸುತ್ತಿದ್ದು, 
ಕೇಂದ್ರ ಸರ್ಕಾರದ ಕಸ್ತೂರಿ ರಂಗನ್ ವರದಿ ಕರಡು ಅಧಿಸೂಚನೆ ಜಾರಿಯಾದರೆ ನಮ್ಮ ಮಲೆನಾಡಿನ ರೈತರು. ಕೃಷಿ ಕಾರ್ಮಿಕರು ಹಾಗೂ ಸಾರ್ವಜನಿಕರ ಬದುಕಿಗೆ ದೊಡ್ಡ ಸಂಕಷ್ಟ ಎದುರಾಗಲಿದೆ. ಈ ಹಿನ್ನೆಲೆಯಲ್ಲಿ ಮಲೆನಾಡಿನ ಜನರ ನೈಜ ಪರಿಸ್ಥಿತಿ ಮತ್ತು ಅಹವಾಲುಗಳನ್ನು ಖುದ್ದು ಆಲಿಸಲಿದ್ದಾರೆ.
ಶಿಕಾರಿಪುರ ತಾಲೂಕು ಹಾಗೂ ಶಿವಮೊಗ್ಗ ಜಿಲ್ಲೆ ಮತ್ತು ಪಶ್ಚಿಮ ಘಟ್ಟ ಮತ್ತು ಮಲೆನಾಡಿನ ಸಮಸ್ತ ರೈತರು ಕೃಷಿಕರು ಕಾರ್ಮಿಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ನಿಮ್ಮ ಅಹವಾಲುಗಳನ್ನು ಸಲ್ಲಿಸುವ ಮೂಲಕ ಈ ವರದಿಯನ್ನು ಒಗ್ಗಟ್ಟಿನಿಂದ ವಿರೋಧಿಸೋಣ ಎಂದರು. 
ಈ ಕಾರ್ಯಕ್ರಮಕ್ಕೆ
ಶಿಕಾರಿಪುರ ತಾಲ್ಲೂಕ್ ಹಾಗೂ ಶಿವಮೊಗ್ಗ ಜಿಲ್ಲೆ ಮತ್ತು ಪಶ್ಚಿಮ ಘಟ್ಟ ಮತ್ತು ಮಲೆನಾಡಿನ ಸಮಸ್ತ ರೈತರು, ಕೃಷಿಕರು, ಕಾರ್ಮಿಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ನಿಮ್ಮ ಅಹವಾಲುಗಳನ್ನು ಸಲ್ಲಿಸುವ ಮೂಲಕ ಈ ವರದಿಯನ್ನು ಒಗ್ಗಟ್ಟಿನಿಂದ ವಿರೋಧಿಸೋಣ.
ಈ ಸಂದರ್ಭದಲ್ಲಿ 
ಕೆಡಿಸಿ ಜಿಲ್ಲಾ ಸದಸ್ಯರಾದ ಮಾರವಳ್ಳಿ ಉಮೇಶ್,
ಶಿಕಾರಿಪುರ  ನಗರ ಬ್ಲಾಕ್ ಕಾಂಗ್ರೆಸ್ 
ಅಧ್ಯಕ್ಷರಾದ ರೋಷನ್ 
ಶಿರಾಳಕೊಪ್ಪ  ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಮಿತ್ರೇಶ್,
ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷರಾದ ಮಂಜನಾಯ್ಕ, ಶಿರಾಳಕೊಪ್ಪ ಯುವ ಕಾಂಗ್ರೆಸ್ ಅಧ್ಯಕ್ಷರಾದ ನಯಾಜ್,
ಕಸಬಾ ಸೊಸೈಟಿ ಹಾಲಿ ನಿರ್ದೇಶಕರಾದ
ಬಡಗಿ ಪಾಲಾಕ್ಷಪ್ಪ,
ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್, ಹಾಗೂ 
ಕಾಂಗ್ರೆಸ್ ಮುಖಂಡರಾದ 
ಅತಾವುಲ್ಲಾ ,ರಬ್ಬಾನಿ ,ಮುಜೀಬ್, ಶಫಿವುಲ್ಲಾ, ಸಂದೀಪ್, ರವಿ ಬಗನಕಟ್ಟೆ, ಶಬ್ಬೀರ್ ಉಪಸ್ಥಿತರಿದ್ದರು.
    user_Press Narashimha swamy SN
    Press Narashimha swamy SN
    Newspaper publisher ಶಿಕಾರಿಪುರ, ಶಿವಮೊಗ್ಗ, ಕರ್ನಾಟಕ•
    21 min ago
  • ಪ್ರಧಾನಿ ಮೋದಿ ಬಗ್ಗೆ ಮಾತನಾಡುವ ನೈತಿಕತೆ ರಾಹುಲ್ ಗಾಂಧಿಗಿಲ್ಲ: ಬಸವರಾಜ ಬೊಮ್ಮಾಯಿ ತಿರುಗೇಟು* ​ಗದಗ: ಅಮೇರಿಕ ಅಧ್ಯಕ್ಷ ಡೋಲಾನ್ಡ್ ಟ್ರಂಪ್ ಏನೇ ಮಾಡಿದರೂ ಅದನ್ನು ನಮ್ಮ ದೇಶದ ಪರಿಸ್ಥಿತಿಗೆ ಜೋಡಿಸುವ ಕೆಲಸವನ್ನು ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಧಿ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು. ಗದಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭಾರತದ ಆರ್ಥಿಕತೆ ಶೂನ್ಯ ಎಂದಾಗ ಇವರು ಖುಷಿ ಪಟ್ಟಿದ್ದರು, ಆದರೆ ಇಂದು ಭಾರತ ಶೇ. 7.8 ರಷ್ಟು ಬೆಳವಣಿಗೆಯನ್ನು ಸಾಧಿಸುತ್ತಿದ್ದು, ಇಂತಹ ಅದ್ಭುತ ಪ್ರಗತಿ ಅಮೆರಿಕಕ್ಕಾಗಲಿ ಅಥವಾ ರಷ್ಯಾಕ್ಕಾಗಲಿ ಇಲ್ಲ," ಎಂದು ಸ್ಪಷ್ಟಪಡಿಸಿದರು. ಇಂದಿರಾಗಾಂಧಿ ಅವರ ಕಾಲದಲ್ಲಿ 1975ರಲ್ಲಿ ಬಹುಮತ ಕಳೆದುಕೊಂಡು, ಕಮ್ಯುನಿಷ್ಟ್ ಪಾರ್ಟಿಯ ಬೆಂಬಲದೊಂದಿಗೆ ಅಲ್ಪಸಂಖ್ಯಾತ ಸರ್ಕಾರವನ್ನು ನಡೆಸಲಾಗಿತ್ತು. ಆ ಸಂದರ್ಭದಲ್ಲಿ ದೇಶದಲ್ಲಿ ಎಡಪಂಥವಾಗಲಿ, ಬಲಪಂಥವಾಗಲಿ, ಜನಪಂಥವೂ ಇರಲಿಲ್ಲ, ಬದಲಿಗೆ ತುರ್ತು ಪರಿಸ್ಥಿತಿಯನ್ನು ಹೇರಲಾಯಿತು. ಇದು ಇಂದಿರಾಗಾಂಧಿ ಅವರ ಅಜ್ಜಿ ಗೀತು ಪಾಠ," ಎಂದು ಬೊಮ್ಮಾಯಿ ವ್ಯಂಗ್ಯವಾಡಿದರು. *​ಪ್ರಧಾನಿ ಮೋದಿ ಆಡಳಿತದಲ್ಲಿ ದೇಶದ ಆರ್ಥಿಕ ಅಭಿವೃದ್ಧಿ:* ಇವತ್ತು ದೇಶವು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಅತ್ಯಂತ ಗಟ್ಟಿಯಾಗಿದೆ ಎಂದರೆ ಅದು ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಮಾತ್ರ ಸಾಧ್ಯವಾಗಿದೆ ಎಂದ ಬೊಮ್ಮಾಯಿ, "ಪ್ರಜಾಪ್ರಭುತ್ವವನ್ನು ಎತ್ತಿಹಿಡಿದಿರುವ ನಮ್ಮ ದೇಶದಲ್ಲಿ ಸಂಕಷ್ಟದ ಕಾಲದಲ್ಲಿಯೂ ಆರ್ಥಿಕವಾಗಿ ಮೂರನೇ ಸ್ಥಾನಕ್ಕೆ ಮುನ್ನಡೆಯುತ್ತಿರುವ ಏಕೈಕ ರಾಷ್ಟ್ರ ಭಾರತ. ಇದು ನರೇಂದ್ರ ಮೋದಿ ಅವರ ವಿಚಾರ, ಕಾರ್ಯಕ್ರಮ ಮತ್ತು ಅನುಷ್ಠಾನ ಶಕ್ತಿಯ ಫಲ," ಎಂದು ಪ್ರಶಂಸಿಸಿದರು. ,*​ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ವಾಗ್ದಾಳಿ:* ಕಾಂಗ್ರೆಸ್ ಪಕ್ಷದಲ್ಲಿ ನರೇಂದ್ರ ಮೋದಿ ಅವರ ಬಗ್ಗೆ ಮಾತನಾಡುವ ನಾಯಕರಿಲ್ಲ, ಅದರಲ್ಲಿ ರಾಹುಲ್ ಗಾಂಧಿ ಕೂಡ ಒಬ್ಬರು. ಯುಪಿಐ ಶುಲ್ಕ ಹೆಚ್ಚಳದ ವಿಚಾರದಲ್ಲಿ ಅಮೆರಿಕದ ಟ್ರಂಪ್‌ಗೆ ಶರಣಾಗಿದ್ದಾರೆ ಎನ್ನುವ ರಾಹುಲ್ ಗಾಂಧಿ ಹೇಳಿಕೆಗೆ ಪ್ರತಿಕ್ರಿಯಿಸಿ, "ಟ್ರಂಪ್ ಏನೇ ಮಾಡಿದರೂ ಅದನ್ನು ನಮ್ಮ ದೇಶದ ಪರಿಸ್ಥಿತಿಗೆ ಜೋಡಿಸುವ ಕೆಲಸ ಮಾಡುತ್ತಿದ್ದಾರೆ. ಭಾರತದ ಆರ್ಥಿಕತೆ ಶೂನ್ಯ ಎಂದಾಗ ಇವರು ಖುಷಿ ಪಟ್ಟಿದ್ದರು, ಆದರೆ ಇಂದು ಭಾರತ ಶೇ. 7.8 ರಷ್ಟು ಬೆಳವಣಿಗೆಯನ್ನು ಸಾಧಿಸುತ್ತಿದ್ದು, ಇಂತಹ ಅದ್ಭುತ ಪ್ರಗತಿ ಅಮೆರಿಕಕ್ಕಾಗಲಿ ಅಥವಾ ರಷ್ಯಾಕ್ಕಾಗಲಿ ಇಲ್ಲ," ಎಂದು ಸ್ಪಷ್ಟಪಡಿಸಿದರು. ​ದೇಶದ ನೈಜ ಆರ್ಥಿಕ ಸಾಧನೆ ಮತ್ತು ಪ್ರಧಾನಿ ಮೋದಿಯವರ ಜನಪರ ನಾಯಕತ್ವವನ್ನು ಹತ್ತಿಕ್ಕಲು ವಿರೋಧ ಪಕ್ಷಗಳು ನಿರರ್ಥಕ ಪ್ರಯತ್ನ ಮಾಡುತ್ತಿವೆ ಎಂದು ಬೊಮ್ಮಾಯಿ ಕಿಡಿಕಾರಿದರು. *ಕೆಪಿಎಸ್ಸಿ ಹಗರಣ* ​ ರಾಜ್ಯದಲ್ಲಿ ಪೊಲೀಸ್ ಅಧಿಕಾರಿಗಳ ವರ್ಗಾವಣೆ ಮತ್ತು ಕೆಪಿಸಿಎಸ್‌ ಹಗರಣ ದಿನದಿಂದ ದಿನಕ್ಕೆ ಬಯಲಾಗುತ್ತಿದ್ದು, ಸರ್ಕಾರದ ವಿರುದ್ಧ ಸಾಕಷ್ಟು ಜನರು ಪರದಾಡುತ್ತಿದ್ದಾರೆ. ​​ಟಿ. ನರಸೀಪುರ ಪೊಲೀಸ್ ಅಧಿಕಾರಿಯ ಉದ್ಧಟತನದ ಬಗ್ಗೆ ಮಾತನಾಡಿದ ಅವರು, ಈಗಾಗಲೇ ಹೈಕೋರ್ಟ್ ಹಲವಾರು ಬಾರಿ ಚಾಟಿ ಬೀಸಿದೆ ಮತ್ತು ಡಿಎಸ್‌ಪಿಗಳು ಸೇರಿದಂತೆ ಎಲ್ಲರಿಗೂ ಇದು ಒಂದು ಹೊಸ ಪೊಲೀಸ್ ಸಂಸ್ಕೃತಿಯಂತೆ ಮುಂದುವರಿದಿದೆ ಎಂದರು. ​ಪೊಲೀಸರು ಜನರ ಪರವಾಗಿರಬೇಕು, ಸ್ನೇಹಮಯಿಯಾಗಿರಬೇಕು ಆದರೆ ಕಾನೂನು ರಕ್ಷಣೆ ಮಾಡುವ ರಕ್ಷಕರೇ ಕಾನೂನು ಸುವ್ಯವಸ್ಥೆಯನ್ನು ಹದೆಗೆಡಿಸುವಂತೆ ವರ್ತಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ​*ಜನರ ಪರದಾಟ:* ​ಕೆಪಿಸಿಎಸ್ ಹಗರಣ ದಿನದಿಂದ ದಿನಕ್ಕೆ ಹೊರಬರುತ್ತಿದ್ದು, ಕೆವೈಸಿ, ಈ-ಖಾತೆ, ಎ ಯಿಂದ ಬಿ ಖಾತೆ ಹಾಗೂ ರೇಷನ್ ಕಾರ್ಡ್ ಪಡೆಯಲು ಕೂಡ ಜನರು ಸಾಕಷ್ಟು ಪರದಾಡುತ್ತಿದ್ದಾರೆ. ​ಯಾವುದೇ ಪೂರ್ವ ತಯಾರಿ, ತಾಂತ್ರಿಕ ಜ್ಞಾನ ಅಥವಾ ಸರ್ವರ್ ವ್ಯವಸ್ಥೆ ಇಲ್ಲದೆ ಈ ಸರ್ಕಾರ ಜನರಿಗೆ ತೊಂದರೆ ಕೊಡುತ್ತಿದ್ದು, ಇದು ಕೇವಲ ಒಂದು ನಾಟಕ ಕಂಪನಿಯಂತೆ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು. *​ಸಿಬಿಐ ತನಿಖೆಗೆ ಒತ್ತಾಯ:* ​ಈ ಎಲ್ಲಾ ಹಗರಣಗಳ ಸತ್ಯಾಂಶ ಪೂರ್ಣ ಪ್ರಮಾಣದಲ್ಲಿ ಹೊರಬರಬೇಕಾದರೆ ಸಿಬಿಐ ತನಿಖೆಯಾಗಬೇಕು ಎಂದು ಬಸವರಾಜ ಬೊಮ್ಮಾಯಿ ಒತ್ತಾಯಿಸಿದ್ದಾರೆ. ಈ ನಿಟ್ಟಿನಲ್ಲಿ ​ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
    1
    ಪ್ರಧಾನಿ ಮೋದಿ ಬಗ್ಗೆ ಮಾತನಾಡುವ ನೈತಿಕತೆ ರಾಹುಲ್ ಗಾಂಧಿಗಿಲ್ಲ: ಬಸವರಾಜ ಬೊಮ್ಮಾಯಿ ತಿರುಗೇಟು*
​ಗದಗ:  ಅಮೇರಿಕ ಅಧ್ಯಕ್ಷ  ಡೋಲಾನ್ಡ್ ಟ್ರಂಪ್ ಏನೇ ಮಾಡಿದರೂ ಅದನ್ನು ನಮ್ಮ ದೇಶದ ಪರಿಸ್ಥಿತಿಗೆ ಜೋಡಿಸುವ ಕೆಲಸವನ್ನು  ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಧಿ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.
ಗದಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭಾರತದ ಆರ್ಥಿಕತೆ ಶೂನ್ಯ ಎಂದಾಗ ಇವರು ಖುಷಿ ಪಟ್ಟಿದ್ದರು, ಆದರೆ ಇಂದು ಭಾರತ ಶೇ. 7.8 ರಷ್ಟು ಬೆಳವಣಿಗೆಯನ್ನು ಸಾಧಿಸುತ್ತಿದ್ದು, ಇಂತಹ ಅದ್ಭುತ ಪ್ರಗತಿ ಅಮೆರಿಕಕ್ಕಾಗಲಿ ಅಥವಾ ರಷ್ಯಾಕ್ಕಾಗಲಿ ಇಲ್ಲ," ಎಂದು ಸ್ಪಷ್ಟಪಡಿಸಿದರು.
ಇಂದಿರಾಗಾಂಧಿ ಅವರ ಕಾಲದಲ್ಲಿ 1975ರಲ್ಲಿ ಬಹುಮತ ಕಳೆದುಕೊಂಡು, ಕಮ್ಯುನಿಷ್ಟ್ ಪಾರ್ಟಿಯ ಬೆಂಬಲದೊಂದಿಗೆ ಅಲ್ಪಸಂಖ್ಯಾತ ಸರ್ಕಾರವನ್ನು ನಡೆಸಲಾಗಿತ್ತು. ಆ ಸಂದರ್ಭದಲ್ಲಿ ದೇಶದಲ್ಲಿ ಎಡಪಂಥವಾಗಲಿ, ಬಲಪಂಥವಾಗಲಿ, ಜನಪಂಥವೂ ಇರಲಿಲ್ಲ, ಬದಲಿಗೆ ತುರ್ತು ಪರಿಸ್ಥಿತಿಯನ್ನು ಹೇರಲಾಯಿತು. ಇದು ಇಂದಿರಾಗಾಂಧಿ ಅವರ ಅಜ್ಜಿ ಗೀತು ಪಾಠ," ಎಂದು ಬೊಮ್ಮಾಯಿ ವ್ಯಂಗ್ಯವಾಡಿದರು.
*​ಪ್ರಧಾನಿ ಮೋದಿ ಆಡಳಿತದಲ್ಲಿ ದೇಶದ ಆರ್ಥಿಕ ಅಭಿವೃದ್ಧಿ:*
ಇವತ್ತು ದೇಶವು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಅತ್ಯಂತ ಗಟ್ಟಿಯಾಗಿದೆ ಎಂದರೆ ಅದು ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಮಾತ್ರ ಸಾಧ್ಯವಾಗಿದೆ ಎಂದ ಬೊಮ್ಮಾಯಿ, "ಪ್ರಜಾಪ್ರಭುತ್ವವನ್ನು ಎತ್ತಿಹಿಡಿದಿರುವ ನಮ್ಮ ದೇಶದಲ್ಲಿ ಸಂಕಷ್ಟದ ಕಾಲದಲ್ಲಿಯೂ ಆರ್ಥಿಕವಾಗಿ ಮೂರನೇ ಸ್ಥಾನಕ್ಕೆ ಮುನ್ನಡೆಯುತ್ತಿರುವ ಏಕೈಕ ರಾಷ್ಟ್ರ ಭಾರತ. ಇದು ನರೇಂದ್ರ ಮೋದಿ ಅವರ ವಿಚಾರ, ಕಾರ್ಯಕ್ರಮ ಮತ್ತು ಅನುಷ್ಠಾನ ಶಕ್ತಿಯ ಫಲ," ಎಂದು ಪ್ರಶಂಸಿಸಿದರು.
,*​ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ವಾಗ್ದಾಳಿ:*
ಕಾಂಗ್ರೆಸ್ ಪಕ್ಷದಲ್ಲಿ ನರೇಂದ್ರ ಮೋದಿ ಅವರ ಬಗ್ಗೆ ಮಾತನಾಡುವ ನಾಯಕರಿಲ್ಲ, ಅದರಲ್ಲಿ ರಾಹುಲ್ ಗಾಂಧಿ ಕೂಡ ಒಬ್ಬರು. ಯುಪಿಐ ಶುಲ್ಕ ಹೆಚ್ಚಳದ ವಿಚಾರದಲ್ಲಿ ಅಮೆರಿಕದ ಟ್ರಂಪ್‌ಗೆ ಶರಣಾಗಿದ್ದಾರೆ ಎನ್ನುವ ರಾಹುಲ್ ಗಾಂಧಿ ಹೇಳಿಕೆಗೆ ಪ್ರತಿಕ್ರಿಯಿಸಿ, "ಟ್ರಂಪ್ ಏನೇ ಮಾಡಿದರೂ ಅದನ್ನು ನಮ್ಮ ದೇಶದ ಪರಿಸ್ಥಿತಿಗೆ ಜೋಡಿಸುವ ಕೆಲಸ ಮಾಡುತ್ತಿದ್ದಾರೆ. ಭಾರತದ  ಆರ್ಥಿಕತೆ ಶೂನ್ಯ ಎಂದಾಗ ಇವರು ಖುಷಿ ಪಟ್ಟಿದ್ದರು, ಆದರೆ ಇಂದು ಭಾರತ ಶೇ. 7.8 ರಷ್ಟು ಬೆಳವಣಿಗೆಯನ್ನು ಸಾಧಿಸುತ್ತಿದ್ದು, ಇಂತಹ ಅದ್ಭುತ ಪ್ರಗತಿ ಅಮೆರಿಕಕ್ಕಾಗಲಿ ಅಥವಾ ರಷ್ಯಾಕ್ಕಾಗಲಿ ಇಲ್ಲ," ಎಂದು ಸ್ಪಷ್ಟಪಡಿಸಿದರು. ​ದೇಶದ ನೈಜ ಆರ್ಥಿಕ ಸಾಧನೆ ಮತ್ತು ಪ್ರಧಾನಿ ಮೋದಿಯವರ ಜನಪರ ನಾಯಕತ್ವವನ್ನು ಹತ್ತಿಕ್ಕಲು ವಿರೋಧ ಪಕ್ಷಗಳು ನಿರರ್ಥಕ ಪ್ರಯತ್ನ ಮಾಡುತ್ತಿವೆ ಎಂದು ಬೊಮ್ಮಾಯಿ ಕಿಡಿಕಾರಿದರು.
*ಕೆಪಿಎಸ್ಸಿ ಹಗರಣ* ​
ರಾಜ್ಯದಲ್ಲಿ ಪೊಲೀಸ್ ಅಧಿಕಾರಿಗಳ ವರ್ಗಾವಣೆ ಮತ್ತು ಕೆಪಿಸಿಎಸ್‌ ಹಗರಣ ದಿನದಿಂದ ದಿನಕ್ಕೆ ಬಯಲಾಗುತ್ತಿದ್ದು, ಸರ್ಕಾರದ ವಿರುದ್ಧ ಸಾಕಷ್ಟು ಜನರು ಪರದಾಡುತ್ತಿದ್ದಾರೆ. ​​ಟಿ. ನರಸೀಪುರ ಪೊಲೀಸ್ ಅಧಿಕಾರಿಯ ಉದ್ಧಟತನದ ಬಗ್ಗೆ ಮಾತನಾಡಿದ ಅವರು, ಈಗಾಗಲೇ ಹೈಕೋರ್ಟ್ ಹಲವಾರು ಬಾರಿ ಚಾಟಿ ಬೀಸಿದೆ ಮತ್ತು ಡಿಎಸ್‌ಪಿಗಳು ಸೇರಿದಂತೆ ಎಲ್ಲರಿಗೂ ಇದು ಒಂದು ಹೊಸ ಪೊಲೀಸ್ ಸಂಸ್ಕೃತಿಯಂತೆ ಮುಂದುವರಿದಿದೆ ಎಂದರು.
​ಪೊಲೀಸರು ಜನರ ಪರವಾಗಿರಬೇಕು, ಸ್ನೇಹಮಯಿಯಾಗಿರಬೇಕು ಆದರೆ ಕಾನೂನು ರಕ್ಷಣೆ ಮಾಡುವ ರಕ್ಷಕರೇ ಕಾನೂನು ಸುವ್ಯವಸ್ಥೆಯನ್ನು ಹದೆಗೆಡಿಸುವಂತೆ ವರ್ತಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
​*ಜನರ ಪರದಾಟ:*
​ಕೆಪಿಸಿಎಸ್ ಹಗರಣ ದಿನದಿಂದ ದಿನಕ್ಕೆ ಹೊರಬರುತ್ತಿದ್ದು, ಕೆವೈಸಿ, ಈ-ಖಾತೆ, ಎ ಯಿಂದ ಬಿ ಖಾತೆ ಹಾಗೂ ರೇಷನ್ ಕಾರ್ಡ್ ಪಡೆಯಲು ಕೂಡ ಜನರು ಸಾಕಷ್ಟು ಪರದಾಡುತ್ತಿದ್ದಾರೆ. ​ಯಾವುದೇ ಪೂರ್ವ ತಯಾರಿ, ತಾಂತ್ರಿಕ ಜ್ಞಾನ ಅಥವಾ ಸರ್ವರ್ ವ್ಯವಸ್ಥೆ ಇಲ್ಲದೆ ಈ ಸರ್ಕಾರ ಜನರಿಗೆ ತೊಂದರೆ ಕೊಡುತ್ತಿದ್ದು, ಇದು ಕೇವಲ ಒಂದು ನಾಟಕ ಕಂಪನಿಯಂತೆ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.
*​ಸಿಬಿಐ ತನಿಖೆಗೆ ಒತ್ತಾಯ:*
​ಈ ಎಲ್ಲಾ ಹಗರಣಗಳ ಸತ್ಯಾಂಶ ಪೂರ್ಣ ಪ್ರಮಾಣದಲ್ಲಿ ಹೊರಬರಬೇಕಾದರೆ ಸಿಬಿಐ  ತನಿಖೆಯಾಗಬೇಕು ಎಂದು ಬಸವರಾಜ ಬೊಮ್ಮಾಯಿ ಒತ್ತಾಯಿಸಿದ್ದಾರೆ. ಈ ನಿಟ್ಟಿನಲ್ಲಿ ​ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    2 hrs ago
  • ಬೆಳಗಾವಿ: ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ನಿವೃತ್ತ ಯೋಧ, ಪುತ್ರಿ ಹ... ಬೆಳಗಾವಿ: ಜಿಲ್ಲೆಯ ಕಿತ್ತೂರು ತಾಲೂಕಿನ ಅವರಾದಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಿವೃತ್ತ ಯೋಧ ಹಾಗೂ ಅವರ ಪುತ್ರಿ ಹತ್ಯೆಯಾಗಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಮೃತರನ್ನು ನಿವೃತ್ತ ಯೋಧ ರುದ್ರಪ್ಪ ಕುಂದರಗಿ (67) ಹಾಗೂ ಅವರ ಪುತ್ರಿ ಶಶಿಕಲಾ ಕುಂದರಗಿ (26) ಎಂದು ಗುರುತಿಸಲಾಗಿದೆ ಎಂದು ತಿಳಿದುಬಂದಿದೆ. ಆಸ್ತಿ ಹಾಗೂ ಜಮೀನು ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆದರೆ ಹತ್ಯೆಗೆ ನಿಖರ ಕಾರಣವೇನು ಮತ್ತು ಕೃತ್ಯದಲ್ಲಿ ಯಾರು ಭಾಗಿಯಾಗಿದ್ದಾರೆ ಎಂಬುದು ಪೊಲೀಸ್ ತನಿಖೆಯಿಂದ ಸ್ಪಷ್ಟವಾಗಬೇಕಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳದಲ್ಲಿ ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದ್ದು, ಪ್ರಕರಣದ ವಿವಿಧ ಆಯಾಮಗಳ ಕುರಿತು ತನಿಖೆ ಮುಂದುವರಿದಿದೆ. ಆರೋಪಿಗಳ ಪತ್ತೆ ಹಾಗೂ ಘಟನೆಯ ಸಂಪೂರ್ಣ ಹಿನ್ನೆಲೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. **ಪೊಲೀಸರ ಅಧಿಕೃತ ಮಾಹಿತಿ ಹೊರಬಂದ ಬಳಿಕವಷ್ಟೇ ಹತ್ಯೆಯ ನಿಖರ ಕಾರಣ ಮತ್ತು ಆರೋಪಿಗಳ ಕುರಿತು ಸ್ಪಷ್ಟತೆ ಸಿಗಲಿದೆ.**
    1
    ಬೆಳಗಾವಿ: ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ನಿವೃತ್ತ ಯೋಧ, ಪುತ್ರಿ ಹ...
ಬೆಳಗಾವಿ: ಜಿಲ್ಲೆಯ ಕಿತ್ತೂರು ತಾಲೂಕಿನ ಅವರಾದಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಿವೃತ್ತ ಯೋಧ ಹಾಗೂ ಅವರ ಪುತ್ರಿ ಹತ್ಯೆಯಾಗಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ.
ಮೃತರನ್ನು ನಿವೃತ್ತ ಯೋಧ ರುದ್ರಪ್ಪ ಕುಂದರಗಿ (67) ಹಾಗೂ ಅವರ ಪುತ್ರಿ ಶಶಿಕಲಾ ಕುಂದರಗಿ (26) ಎಂದು ಗುರುತಿಸಲಾಗಿದೆ ಎಂದು ತಿಳಿದುಬಂದಿದೆ.
ಆಸ್ತಿ ಹಾಗೂ ಜಮೀನು ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆದರೆ ಹತ್ಯೆಗೆ ನಿಖರ ಕಾರಣವೇನು ಮತ್ತು ಕೃತ್ಯದಲ್ಲಿ ಯಾರು ಭಾಗಿಯಾಗಿದ್ದಾರೆ ಎಂಬುದು ಪೊಲೀಸ್ ತನಿಖೆಯಿಂದ ಸ್ಪಷ್ಟವಾಗಬೇಕಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳದಲ್ಲಿ ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದ್ದು, ಪ್ರಕರಣದ ವಿವಿಧ ಆಯಾಮಗಳ ಕುರಿತು ತನಿಖೆ ಮುಂದುವರಿದಿದೆ.
ಆರೋಪಿಗಳ ಪತ್ತೆ ಹಾಗೂ ಘಟನೆಯ ಸಂಪೂರ್ಣ ಹಿನ್ನೆಲೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. **ಪೊಲೀಸರ ಅಧಿಕೃತ ಮಾಹಿತಿ ಹೊರಬಂದ ಬಳಿಕವಷ್ಟೇ ಹತ್ಯೆಯ ನಿಖರ ಕಾರಣ ಮತ್ತು ಆರೋಪಿಗಳ ಕುರಿತು ಸ್ಪಷ್ಟತೆ ಸಿಗಲಿದೆ.**
    user_ದರ್ಪಣ ಕನ್ನಡ ಟಿವಿ
    ದರ್ಪಣ ಕನ್ನಡ ಟಿವಿ
    ಲಕ್ಷ್ಮೇಶ್ವರ, ಗದಗ, ಕರ್ನಾಟಕ•
    22 hrs ago
  • ಅಣ್ಣಿಗೇರಿ ಹುಬ್ಬಳ್ಳಿ ರಸ್ತೆ ಕಾರಿನ ಟೈರ ಬ್ಲಾಸ್ಟ್ ಆಗ್ಗಿ ಕಾರ್ ಪಾಲ್ಟಿ ಆಗಿ ಒಬ್ಬ ಸಾವು ಇಬ್ಬರೂ ಗಾಯಾಳುಗಳ ಅಣ್ಣಿಗೇರಿ ಹುಬ್ಬಳ್ಳಿ ರಸ್ತೆ ಕಾರಿನ ಟೈರ ಬ್ಲಾಸ್ಟ್ ಆಗ್ಗಿ ಕಾರ್ ಪಾಲ್ಟಿ ಆಗಿ ಒಬ್ಬ ಸಾವು ಇಬ್ಬರೂ ಗಾಯಾಳುಗಳ
    1
    ಅಣ್ಣಿಗೇರಿ ಹುಬ್ಬಳ್ಳಿ ರಸ್ತೆ ಕಾರಿನ ಟೈರ ಬ್ಲಾಸ್ಟ್ ಆಗ್ಗಿ ಕಾರ್ ಪಾಲ್ಟಿ ಆಗಿ ಒಬ್ಬ ಸಾವು ಇಬ್ಬರೂ ಗಾಯಾಳುಗಳ 
ಅಣ್ಣಿಗೇರಿ ಹುಬ್ಬಳ್ಳಿ ರಸ್ತೆ ಕಾರಿನ ಟೈರ ಬ್ಲಾಸ್ಟ್ ಆಗ್ಗಿ ಕಾರ್ ಪಾಲ್ಟಿ ಆಗಿ ಒಬ್ಬ ಸಾವು ಇಬ್ಬರೂ ಗಾಯಾಳುಗಳ
    user_Annigeri Sunil
    Annigeri Sunil
    Electrician ಅಣ್ಣಿಗೇರಿ, ಧಾರವಾಡ, ಕರ್ನಾಟಕ•
    6 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.