Shuru
Apke Nagar Ki App…
ಹಿರಿಯೂರಿನಲ್ಲಿ ನಂದಿ ಮೋಟಾರ್ಸ್ ಎಲೆಕ್ಟ್ರಿಕಲ್ ಶೋ ರೂಮ್ ಪ್ರಾರಂಭ...... ಇತ್ತೀಚಿಗೆ ಎಲೆಕ್ರಾನಿಕ್ಸ್ ವಾಹನಗಳ ಬೇಡಿಕೆ ಹೆಚ್ಚಾಗುತ್ತಿದ್ದು ಗ್ರಾಹಕರು ಸಹ ಎಲೆಕ್ಟ್ರಿಕಲ್ ವಾಹನಗಳ ಕಡೆ ಮುಖ ಮಾಡುತ್ತಿದ್ದಾರೆ, ನಂದಿ ಮೋಟರ್ಸ್ ನಲ್ಲಿ ಬೇಸಿಕ್, ಮಿಡಲ್ ಹಾಗೂ ಟಾಪ್ ಎಂಡ್ ವಾಹನಗಳು ಬೇರೆ ಶೋ ರೂಮ್ ಗಳಿಗೆ ಹೋಲಿಸಿದರೆ ಕಡಿಮೆ ಬೆಲೆಯಲ್ಲಿ ಗ್ರಾಹಕರಿಗೆ ಉತ್ತಮವಾದ ಸಾಲ ಸೌಲಭ್ಯದೊಂದಿಗೆ ದೊರೆಯುವುದಾಗಿ ವಾಹನ ಮಾರಾಟ ಮಳಿಗೆಯವರು ತಿಳಿಸಿರುತ್ತಾರೆ... ಒಮ್ಮೆ ಭೇಟಿ ಕೊಡಿ.... ಮಾಹಿತಿ ಪಡೆದುಕೊಳ್ಳಿ...
ಅಪ್ಪಾಜಿ ಬಂಡೆ
ಹಿರಿಯೂರಿನಲ್ಲಿ ನಂದಿ ಮೋಟಾರ್ಸ್ ಎಲೆಕ್ಟ್ರಿಕಲ್ ಶೋ ರೂಮ್ ಪ್ರಾರಂಭ...... ಇತ್ತೀಚಿಗೆ ಎಲೆಕ್ರಾನಿಕ್ಸ್ ವಾಹನಗಳ ಬೇಡಿಕೆ ಹೆಚ್ಚಾಗುತ್ತಿದ್ದು ಗ್ರಾಹಕರು ಸಹ ಎಲೆಕ್ಟ್ರಿಕಲ್ ವಾಹನಗಳ ಕಡೆ ಮುಖ ಮಾಡುತ್ತಿದ್ದಾರೆ, ನಂದಿ ಮೋಟರ್ಸ್ ನಲ್ಲಿ ಬೇಸಿಕ್, ಮಿಡಲ್ ಹಾಗೂ ಟಾಪ್ ಎಂಡ್ ವಾಹನಗಳು ಬೇರೆ ಶೋ ರೂಮ್ ಗಳಿಗೆ ಹೋಲಿಸಿದರೆ ಕಡಿಮೆ ಬೆಲೆಯಲ್ಲಿ ಗ್ರಾಹಕರಿಗೆ ಉತ್ತಮವಾದ ಸಾಲ ಸೌಲಭ್ಯದೊಂದಿಗೆ ದೊರೆಯುವುದಾಗಿ ವಾಹನ ಮಾರಾಟ ಮಳಿಗೆಯವರು ತಿಳಿಸಿರುತ್ತಾರೆ... ಒಮ್ಮೆ ಭೇಟಿ ಕೊಡಿ.... ಮಾಹಿತಿ ಪಡೆದುಕೊಳ್ಳಿ...
More news from ಕರ್ನಾಟಕ and nearby areas
- ಸಾರ್ವಜನಿಕ ಸ್ಥಳದಲ್ಲಿ ನಿದ್ರೆಗೆ ಜಾರುವ ವ್ಯಕ್ತಿಗಳಿಗೆ ಅತಿ ಹೆಚ್ಚು ದಣಿವು, ನಿದ್ರಾಹೀನತೆ ಅಥವಾ ಆರೋಗ್ಯದ ಸಮಸ್ಯೆ ಮತ್ತು ಮಧ್ಯದ ಪ್ರಭಾವ ಕಾರಣವಿರಬಹುದು. ನಿದ್ರಾದೇವಿ ಆವರಿಸಿದಾಗ ಇವೆಲ್ಲವನ್ನೂ ಮರೆತು ಎಂಥದೆ ಸ್ಥಳದಲ್ಲಿಯೂ ಸಹ ತನ್ನನ್ನು ತಾನು ಮರೆತು ನಿದ್ರೆಗೆ ಜಾರುವ ಕೆಲವು ವ್ಯಕ್ತಿಗಳು ಇದ್ದಾರೆ .. ಹೌದು ಆತ್ಮೀಯ ವೀಕ್ಷಕರೇ ಚಳ್ಳಕೆರೆ ನಗರದ ನೆಹರು ಸರ್ಕಲ್ ಬಳಿಯ ರಸ್ತೆಯ ಪಕ್ಕದಲ್ಲಿ ಮೆಟ್ಟಿಲುಗಳ ಮೇಲೆ ಕುಳಿತು ಒಬ್ಬ ವ್ಯಕ್ತಿ ಮೊಬೈಲ್ ಹಾಗೂ ಬ್ಯಾಗನ್ನು ಮರೆತು ನಿದ್ರೆ ಮಾಡುವುದು ಕಂಡು ಬಂತು ಅಲ್ಲಿ ತಕ್ಷಣ ಆ ವ್ಯಕ್ತಿಯನ್ನು ಎಚ್ಚರಿಸಿ ಮಾತನಾಡಿಸಿ ಮೊಬೈಲ್ ಹಾಗೂ ಬ್ಯಾಗ್ ಗಳ ಜೋಪಾನತೆಗೆ ಎಚ್ಚರಿಕೆಯನ್ನು ನೀಡಿಲಾಯ್ತು ಸಾರ್ವಜನಿಕ ಸ್ಥಳದಲ್ಲಿ ನಿದ್ರೆಗೆ ಜಾರುವ ವ್ಯಕ್ತಿಗಳಿಗೆ ಅತಿ ಹೆಚ್ಚು ದಣಿವು, ನಿದ್ರಾಹೀನತೆ ಅಥವಾ ಆರೋಗ್ಯದ ಸಮಸ್ಯೆ ಮತ್ತು ಮಧ್ಯದ ಪ್ರಭಾವ ಕಾರಣವಿರಬಹುದು. ಹೀಗೆ ನಿದ್ದೆ ಮಾಡುವ ವೇಳೆ ಅದರಲ್ಲೂ ಸಾರ್ವಜನಿಕ ಸ್ಥಳಗಳಲ್ಲಿ ನಿದ್ದೆ ಮಾಡುವ ವೇಳೆ ತುಂಬಾ ಜಾಗೃತೆ ವಹಿಸಬೇಕು ಮೊಬೈಲ್ ಬ್ಯಾಗ್ ಗಳು ಇತರೆ ವಸ್ತುಗಳನ್ನ ಕಾಣುವ ರೀತಿಯಲ್ಲಿ ಇಟ್ಟುಕೊಂಡು ನಿದ್ರೆ ಮಾಡಿದರೆ ಆ ವಸ್ತುಗಳು ಕಳೆದು ಹೋದರೆ ಯಾರು ಹೊಣೆ ಆಗ್ತಾರೆ ಅಲ್ವೇ ಸ್ನೇಹಿತರೇ..1
- ಯುವ ಕರ್ನಾಟಕ ವೇದಿಕೆ ಮತ್ತು ರೈತ ಸಂಘದ ವತಿಯಿಂದ ಕೆರೆಯಾಗಳಹಳ್ಳಿ ಗ್ರಾಮದ ಸರ್ಕಾರಿ ಶಾಲೆ ಮಕ್ಕಳಿಗೆ ನೋಡ್ ಬುಕ್ ವಿತರಣೆ ಕೆರೆಯಾಗಳ ಹಳ್ಳಿ ಗ್ರಾಮದಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯ ಮಕ್ಕಳಿಗೆ ಪಠ್ಯಪುಸ್ತಕಗಳನ್ನ ವಿತರಣೆ ಮಾಡಲಾಯಿತು. ಹೊಳಲ್ಕೆರೆ ತಾಲೂಕು ಕೆರೆಯಾಗಳ ಹಳ್ಳಿ ಗ್ರಾಮದಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯ ಮಕ್ಕಳಿಗೆ ಯುವ ಕರ್ನಾಟಕ ವೇದಿಕೆ ಮತ್ತು ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ ಡಾಕ್ಟರ್ ವಾಸುದೇವ ಮೇಟಿ ಬಣ್ಣದ ವತಿಯಿಂದ ಶಾಲೆಯ ಮಕ್ಕಳಿಗೆ ಪಠ್ಯಪುಸ್ತಕ ವಿತರಿಸಲಾಯಿತು. ಈ ಸಂದರ್ಭದಲ್ಲಿ ಯುವ ಕರ್ನಾಟಕ ವೇದಿಕೆ ಜಿಲ್ಲಾಧ್ಯಕ್ಷರಾದ ರವಿ ಕುಮಾರ್ ನಾಯಕ್ ಮಾತನಾಡಿ ಸರ್ಕಾರಿ ಶಾಲೆಯ ಬಡ ಮಕ್ಕಳಿಗೆ ಒಂದು ವರ್ಷಕ್ಕೆ ಬೇಕಾಗುವ ಪುಸ್ತಕ ನೋಟ್ ಪುಸ್ತಕಗಳು ಪೆನ್ಸಿಲ್ ಗಳನ್ನು ಕೊಡುವುದಾಗಿ ಹೇಳಿದರು.1
- ಚಿತ್ರದಲ್ಲಿರುವ ಪತ್ರದ ವಿವರಗಳನ್ನು ಆಧರಿಸಿ ಸಿದ್ಧಪಡಿಸಲಾದ ಸುದ್ದಿ ವರದಿ ಇಲ್ಲಿದೆ: ಚಿತ್ರದಲ್ಲಿರುವ ಪತ್ರದ ವಿವರಗಳನ್ನು ಆಧರಿಸಿ ಸಿದ್ಧಪಡಿಸಲಾದ ಸುದ್ದಿ ವರದಿ ಇಲ್ಲಿದೆ: ಚಿತ್ರದುರ್ಗ: ಆಗಸ್ಟ್ 3 ರೊಳಗೆ ಕ್ರಮ ಕೈಗೊಳ್ಳದಿದ್ದರೆ ತಹಶೀಲ್ದಾರ್ ಕಚೇರಿ ಮುಂದೆ ಧರಣಿ ಸತ್ಯಾಗ್ರಹದ ಎಚ್ಚರಿಕೆ ಚಿತ್ರದುರ್ಗ: ತಾಲೂಕಿನ ಹಿರೇಗುಂಟನೂರು ಹೋಬಳಿ, ಗೂಳಯ್ಯನಹಟ್ಟಿ ಗ್ರಾಮದ ಜಮೀನು ವರ್ಗಾವಣೆಯಲ್ಲಿ ನಡೆದಿರುವ ಅಧಿಕಾರ ದುರುಪಯೋಗ ಮತ್ತು ಅನ್ಯಾಯವನ್ನು ಖಂಡಿಸಿ, ಬರುವ ಆಗಸ್ಟ್ 3 ರೊಳಗೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ತಾಲೂಕು ದಂಡಾಧಿಕಾರಿಗಳಾದ ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ಧರಣಿ ಸತ್ಯಾಗ್ರಹ ನಡೆಸುವುದಾಗಿ ಕರುನಾಡು ವಿಜಯ ಸೇನೆ ಹಾಗೂ ಬಿ.ಜೆ.ಪಿ. ನಗರ ಉಪಾಧ್ಯಕ್ಷರಾದ ಬಿ.ಆರ್. ನಾಗರಾಜ್ ಮತ್ತು ರೈತರು ಜಿಲ್ಲಾಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಚಿತ್ರದುರ್ಗ ಜಿಲ್ಲಾಧಿಕಾರಿಗಳಿಗೆ ಲಿಖಿತ ಮನವಿ ಸಲ್ಲಿಸಲಾಗಿದ್ದು, ಅದರ ಪ್ರಮುಖ ವಿವರಗಳು ಈ ಕೆಳಗಿನಂತಿವೆ: ಪ್ರಕರಣದ ಹಿನ್ನೆಲೆ: ಗೂಳಯ್ಯನಹಟ್ಟಿ ಗ್ರಾಮದ ನಿವಾಸಿಯಾದ ಚಂದ್ರಪ್ಪ ಬಿನ್ ಈರಪ್ಪ ಎಂಬುವವರ ಹೆಸರಿಗೆ ಚಿತ್ರದುರ್ಗ ತಾಲೂಕಿನ ಹಿರೇಗುಂಟನೂರು ಹೋಬಳಿಯ ಸ. ನಂ: 8/1 ರಲ್ಲಿ ಒಟ್ಟು 2 ಎಕರೆ 20 ಗುಂಟೆ ಜಮೀನು ಇರುತ್ತದೆ. ಜಮೀನು ವರ್ಗಾವಣೆ: ಈ ಜಮೀನಿನ ಪೈಕಿ 1 ಎಕರೆ 20 ಗುಂಟೆ ಜಮೀನನ್ನು ಸರ್ವೆ ಸ್ಕೆಚ್ ನಕ್ಷೆ ಸಂಖ್ಯೆ: 13030925111232001 ರ ಪ್ರಕಾರ ದಿನಾಂಕ 19-05-2026 ರಂದು ಶ್ರೀಮತಿ ಜಯಲಕ್ಷ್ಮಿ ಎಂಬುವವರಿಗೆ ಚಿತ್ರದುರ್ಗ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ನೋಂದಣಿ ಮಾಡಿಕೊಡಲಾಗಿತ್ತು. ಕಾನೂನುಬದ್ಧವಾಗಿ ಕೇವಲ 1 ಎಕರೆ 20 ಗುಂಟೆ ಜಮೀನು ಮಾತ್ರ ವರ್ಗಾವಣೆಯಾಗಬೇಕಿತ್ತು. ಅಧಿಕಾರಿಗಳ ನಿರ್ಲಕ್ಷ್ಯದ ಆರೋಪ: ತಾಲೂಕು ಕಚೇರಿಯ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನದಿಂದಾಗಿ, ಇಡೀ 2 ಎಕರೆ 20 ಗುಂಟೆ ಜಮೀನನ್ನು ಶ್ರೀಮತಿ ಜಯಲಕ್ಷ್ಮಿ ಅವರ ಹೆಸರಿಗೆ ಪಹಣಿ ಮಾಡಲು ಮುಂದಾಗಿದ್ದಾರೆ ಎಂದು ಮನವಿಯಲ್ಲಿ ದೂರಲಾಗಿದೆ. ಇದರಿಂದಾಗಿ ಚಂದ್ರಪ್ಪ ಅವರಿಗೆ ಉಳಿಯಬೇಕಾದ 1 ಎಕರೆ ಜಮೀನು ಕೈತಪ್ಪಿ ಅನ್ಯಾಯವಾಗುತ್ತಿದೆ. ಅರ್ಜಿ ತಿರಸ್ಕಾರ: ಈ ಅನ್ಯಾಯದ ವಿರುದ್ಧ ಚಂದ್ರಪ್ಪ ಅವರು ದಿನಾಂಕ 31-08-2026 ರಂದು (ಪತ್ರದಲ್ಲಿ ಉಲ್ಲೇಖಿಸಿರುವಂತೆ) ಸಂಬಂಧಪಟ್ಟ ಅಧಿಕಾರಿಗಳಿಗೆ ಲಿಖಿತವಾಗಿ ಆಕ್ಷೇಪಣೆ ಸಲ್ಲಿಸಿದ್ದರೂ ಸಹ, ಅಧಿಕಾರಿಗಳು ಯಾವುದೇ ಆನ್ಲೈನ್ ಅರ್ಜಿಯನ್ನು ಸ್ವೀಕರಿಸದೆ ತಿರಸ್ಕರಿಸಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರತಿಭಟನೆಯ ಎಚ್ಚರಿಕೆ: ಈ ಗಂಭೀರ ಜಮೀನು ಅಕ್ರಮ ಹಾಗೂ ರೈತರಿಗೆ ಆಗಿರುವ ಅನ್ಯಾಯದ ವಿರುದ್ಧ ದಿನಾಂಕ 03-08-2026 ರ ಒಳಗಾಗಿ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ, ಸಮಾಜ ಸೇವಕರು ಹಾಗೂ ಬಿ.ಜೆ.ಪಿ. ನಗರ ಉಪಾಧ್ಯಕ್ಷರಾದ ಬಿ.ಆರ್. ನಾಗರಾಜ್ ಮತ್ತು ಸಮಸ್ತ ರೈತರು ಒಟ್ಟಾಗಿ ತಾಲೂಕು ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳುವುದಾಗಿ ಪತ್ರದ ಮೂಲಕ ಕರುನಾಡು ವಿಜಯ ಸೇನೆಯ ಜಿಲ್ಲಾಧ್ಯಕ್ಷರಾದ ಕೆ.ಟಿ. ಶಿವಕುಮಾರ್ ಎಚ್ಚರಿಸಿದ್ದಾರೆ. ಮನವಿ ಪತ್ರಕ್ಕೆ ಹಲವು ರೈತರು ಸಹಿ ಹಾಕಿ ಬೆಂಬಲ ಸೂಚಿಸಿದ್ದಾರೆ.2
- ಚಿಕ್ಕನಾಯಕನಹಳ್ಳಿಯಲ್ಲಿ ಹೇಮಾವತಿ ನೀರಿಗಾಗಿ ರೈತರು ಅಹೋರಾತ್ರಿ ಧರಣೀಯ ಮುಂದುವರಿಸಿದ್ದಾರೆ4
- ಸಿಎಂ ಡಿಕೆ ಶಿವಕುಮಾರ್ ಅವರು ಮೈಸೂರಿಗೆ ಭೇಟಿ ಆತ್ಮೀಯವಾಗಿ ಸ್ವಾಗತಿಸಿದ ಸಾಂಸ್ಕೃತಿಕ ನಗರಿಯ ಜನರು ಮೈಸೂರು: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಸಿಎಂ ಡಿಕೆ ಶಿವಕುಮಾರ್ ಅವರು ಮೈಸೂರಿಗೆ ಭೇಟಿ ನೀಡಿದ್ದು, ಸಾಂಸ್ಕೃತಿಕ ನಗರಿಯ ಜನರು ನೀಡಿದ ಆತ್ಮೀಯವಾಗಿ ಸ್ವಾಗತಿಸಿದರು.1
- ಪಾಕಿಸ್ತಾನಿ ಸೈನಿಕರು ಹಾಕಿದ ಬಾಂಬ್ ನಿಂದ ನನ್ನ ಕಾಲು ಹೋಯಿತು ಆದರೂ ಯುದ್ಧ ಗೆದ್ದಿದ್ದೇವೆ 1999 ರಲ್ಲಿ ನಡೆದ ಕಾರ್ಗಿಲ್ ಯುದ್ಧದಲ್ಲಿ ಕ್ಯಾಪ್ಟನ್ ನವೀನ್ ನಾಗಪ್ಪ ಯುದ್ಧದ ಸಮಯದಲ್ಲಿ ಬಿದ್ದಂತಹ ಬಾಂಬ ನಿಂದ ತಮ್ಮ ಕಾಲನ್ನೇ ಕಳೆದುಕೊಂಡಿದ್ದಾರೆ ಕಾರ್ಗಿಲ್ ಯುದ್ಧದ ಸಮಯದಲ್ಲಿ ನಾವು ಹೇಗೆಲ್ಲಾ ಹೋರಾಟ ಮಾಡಿದೆವು ಎಂಬುದರ ಬಗ್ಗೆ ವಿದ್ಯಾರ್ಥಿಗಳಿಗೆ ಮನ ಮುಟ್ಟುವಂತೆ ಹೇಳಿದ್ರು ಕಾರ್ಗಿಲ್ನಂತಹ ಈ ಮಚ್ಚಾದಿತಾ ಪ್ರದೇಶದಲ್ಲಿ ಪಾಕಿಸ್ತಾನಿ ಸೈನಿಕರು ಹಾಗೂ ಭಾರತೀಯ ಸೈನಿಕರ ಹೋರಾಟ ಹೇಗಿತ್ತು ಎಂಬುದರ ಬಗ್ಗೆ ಮಾಹಿತಿಯನ್ನು ನೀಡಿದರು1
- ಬಿದರೆಕೆರೆ-ಬೇಡತ್ತೂರು ರೈಲ್ವೆ ನಿಲ್ದಾಣಕ್ಕೆ ಮಿಡಿಗೇಶಿ ಹೆಸರಿಡಲು ಒತ್ತಾಯ ಮಧುಗಿರಿ ತಾಲೂಕಿನಲ್ಲಿ ನಡೆಯುತ್ತಿರುವ ತುಮಕೂರು ರಾಯದುರ್ಗ ರೈಲ್ವೆ ಕಾಮಗಾರಿಯಲ್ಲಿ ಬಿದರೆಕೆರೆ ಬೇಡತ್ತೂರು ಗ್ರಾಮದ ರೈಲ್ವೆ ನಿಲ್ದಾಣಕ್ಕೆ ಮಿಡಿಗೇಶಿ ಹೆಸರಿಡುವಂತೆ, ಬಿಜೆಪಿ ಒಬಿಸಿ ಮೋರ್ಚ ಜಿಲ್ಲಾ ಉಪಾಧ್ಯಕ್ಷ ಮಿಡಿಗೇರ್ ಶ್ರೀ ಕೃಷ್ಣಮೂರ್ತಿ ಇವತ್ತಾಯಿಸಿದ್ದಾರೆ2
- ಹೊಳಲ್ಕೆರೆಯನ್ನ ಬರಪೀಡಿತ ತಾಲ್ಲೂಕಾಗಿ ಘೋಷಿಸುವಂತೆ ರೈತ ಸಂಘದಿಂದ ತಹಶಿಲ್ದಾರ್ ಗೆ ಮನವಿ ಹೊಳಲ್ಕೆರೆ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡಲು ಒತ್ತಾಯಿಸಿ ತಹಶಿಲ್ದಾರ್ ಗೆ ಪ್ರತಿಭಟನೆ ಮೂಲಕ ಮನವಿ ಸಲ್ಲಿಸಲಾಯಿತು. ಹೊಸ ತಾಲೂಕ್ ರೈತ ಸಂಘದ ವತಿಯಿಂದ ಮನವಿ ಸಲ್ಲಿಸಿದ್ದಾರೆ. ಹೊಳಲ್ಕೆರೆ ತಾಲೂಕಿನಾಧ್ಯಂತ ಭೀಕರ ಬರಗಾಲ ತಾಂಡವವಾಡುತ್ತಿದ್ದು ಮುಂಗಾರುಮಳೆ ಮುಗಿಯುತ್ತಾ ಬಂದಿದ್ದು ತಾಲೂಕಿನಾಧ್ಯಂತ ಶೇಕಡ 25ರಷ್ಟು ಮಾತ್ರ ಬಿತ್ತನೆ ಮಾಡಿದ್ದು ಉಳಿದ 75ರಷ್ಟು ಭೂಮಿ ಬಿತ್ತನೆ ಮಾಡದೆ ರೈತರು ಮುಗಿಲು ನೋಡುತ್ತ ಕುಳಿತಿದ್ದಾರೆ, ಕೊಳವೆ ಬಾವಿಗಳೆಲ್ಲ ಬತ್ತಿದ್ದು ಕುಡಿಯುವ ನೀರಿಗಾಗಿ ಸಾರ್ವಜನಿಕರು, ವಿದ್ಯಾರ್ಥಿಗಳು, ಜಾನುವಾರುಗಳು ದಿನನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ, ರೈತರು ಸಾಲ ಮಾಡಿ ಬೀಜ ಗೊಬ್ಬರ ತಂದು ಭೂಮಿಗೆ ಹಾಕಿ ಕೈಚೆಲ್ಲಿದ್ದಾರೆ. ಈ ಹಿನ್ನೆಲೆ ಸರ್ಕಾರವು ಶೀಘ್ರವೇ ಹೊಳಲ್ಕೆರೆ ತಾಲೂಕನ್ನು ಬರಪೀಡಿತ ಪ್ರದೇಶವನ್ನು ಘೋಷಣೆ ಮಾಡಬೇಕು ಎಂದು ಪ್ರತಿಭಟನೆ ಮೂಲಕ ಮನವಿ ಸಲ್ಲಿಸಿದ್ದಾರೆ.1