logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕೋಲಾರ ತಾಲೂಕಿಗೆ ನೂತನವಾಗಿ ನೇಮಕಗೊಂಡಿರುವ ತಹಶಿಲ್ದಾರ್ ಹೆಚ್ ಶ್ರೀನಿವಾಸ್ ಅವರನ್ನು ಶುಕ್ರವಾರ ದಲಿತ ಸಂಘಟನೆಗಳ ಸಂಯುಕ್ತ ರಂಗದ ಪದಾಧಿಕಾರಿಗಳು ಹಾಗೂ ವಿವಿಧ ದಲಿತ ಸಂಘಟನೆಗಳ ಮುಖಂಡರು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ದಲಿತ ಸಂಘಟನೆಗಳ ಸಂಯುಕ್ತ ರಂಗದ ಅಧ್ಯಕ್ಷ ಡಿಪಿಎಸ್ ಮುನಿರಾಜು, ಕೋಲಾರ ಜಿಲ್ಲಾ ಕೇಂದ್ರವಾಗಿದ್ದರೂ ದಲಿತರ ಸಮಸ್ಯೆಗಳಿಗೆ ಸೂಕ್ತ ಸ್ಪಂದನೆ ಸಿಗುತ್ತಿಲ್ಲ ಮತ್ತು ನ್ಯಾಯಕ್ಕಾಗಿ ಹೋರಾಟ ಮಾಡಬೇಕಾದ ಅನಿವಾರ್ಯತೆ ಇದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ನೂತನ ತಹಶಿಲ್ದಾರ್ ಹೊಸ ಬದಲಾವಣೆ ತರುವ ಮೂಲಕ ದಲಿತರ ಸಮಸ್ಯೆಗಳಿಗೆ ಸ್ಪಂದಿಸಬೇಕು ಮತ್ತು ದಲಿತರ ಅಭಿವೃದ್ಧಿಗಾಗಿ ಮೀಸಲಾದ ಅನುದಾನವನ್ನು ಇತರ ಕಾರ್ಯಕ್ರಮಗಳಿಗೆ ಬಳಸದೆ ಸಮುದಾಯಕ್ಕೆ ನೇರವಾಗಿ ತಲುಪಿಸಬೇಕು ಎಂದು ಅವರು ಒತ್ತಾಯಿಸಿದರು. ಸರ್ಕಾರ ಮೀಸಲಿಡುವ ಸಾವಿರಾರು ಕೋಟಿ ರೂಪಾಯಿಗಳ ಅನುದಾನವು ಸದುಪಯೋಗವಾಗುವಂತೆ ಕಾರ್ಯಕ್ರಮಗಳನ್ನು ರೂಪಿಸಬೇಕೆಂದು ಅವರು ಆಗ್ರಹಿಸಿದರು. ದಲಿತ ದಮನಿತರ ಸೇವಾ ಸಮಿತಿಯ ರಾಜ್ಯ ಅಧ್ಯಕ್ಷ ಮೇಡಿಹಾಳ ಮುನಿಅಂಜಿನಪ್ಪ ಮಾತನಾಡಿ, ದಲಿತರ ಅಭಿವೃದ್ಧಿ, ಬಡತನ ನಿರ್ಮೂಲನೆ, ಶಿಕ್ಷಣ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಯೋಜನೆಗಳನ್ನು ಸಮರ್ಥವಾಗಿ ಬಳಸಿಕೊಳ್ಳಲು ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಮನವಿ ಮಾಡಿದರು. ಅಲ್ಲದೆ, ಗ್ರಾಪಂ ಮತ್ತು ಹೋಬಳಿ ಮಟ್ಟದಲ್ಲಿ ದಲಿತರ ಕುಂದುಕೊರತೆಗಳ ಸಭೆಗಳನ್ನು ನಡೆಸುವ ಮೂಲಕ ಅವರ ಆರ್ಥಿಕ ಸಬಲೀಕರಣಕ್ಕೆ ಒತ್ತು ನೀಡಬೇಕೆಂದು ಅವರು ಸಲಹೆ ನೀಡಿದರು. ಈ ಭೇಟಿಯ ವೇಳೆ ಖಾದ್ರಿಪುರ ಬಾಬು, ದಲಿತ್ ನಾರಾಯಣಸ್ವಾಮಿ, ಗಾಂಧಿನಗರ ರಾಜಕುಮಾರ್, ಡಿಎಸ್ಎಸ್ ಮಂಜುಳಾ, ಅಪ್ಪಿ ನಾರಾಯಣಸ್ವಾಮಿ, ಕರವೇ ಸೋಮಶೇಖರ್, ಗಿರಿಜಮ್ಮ, ಶ್ರೀರಾಮಪುರ ರವಿ, ಹರಳಕುಂಟೆ ರಾಜು, ಅಂಬೇಡ್ಕರ್ ನಗರ ರವಿ, ಮೋಚಿಪಾಳ್ಳ ನಾಗೇಶ್, ಯುವರಾಜ್, ಮುನಿಯಪ್ಪ, ಗಂಗಮ್ಮನಪಾಳ್ಯ ಶಿವು, ಎಸ್ಎಸ್ಡಿನಾಗರಾಜ್, ರಾಮಪಿರ ಮುನಿರಾಜು, ಬುಸನಹಳ್ಳಿ ರಮೇಶ್, ಟಮಕ ಮಂಜು, ನಡುಪಳ್ಳಿ ವೆಂಕಟೇಶ್ ಮತ್ತು ಮಂಜುನಾಥ್ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

23 hrs ago
user_Rownak Ali khan
Rownak Ali khan
Local News Reporter ಕೋಲಾರ, ಕೋಲಾರ, ಕರ್ನಾಟಕ•
23 hrs ago
4ee5e614-65a2-4e1c-80c3-ba0a7134a905

ಕೋಲಾರ ತಾಲೂಕಿಗೆ ನೂತನವಾಗಿ ನೇಮಕಗೊಂಡಿರುವ ತಹಶಿಲ್ದಾರ್ ಹೆಚ್ ಶ್ರೀನಿವಾಸ್ ಅವರನ್ನು ಶುಕ್ರವಾರ ದಲಿತ ಸಂಘಟನೆಗಳ ಸಂಯುಕ್ತ ರಂಗದ ಪದಾಧಿಕಾರಿಗಳು ಹಾಗೂ ವಿವಿಧ ದಲಿತ ಸಂಘಟನೆಗಳ ಮುಖಂಡರು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ದಲಿತ ಸಂಘಟನೆಗಳ ಸಂಯುಕ್ತ ರಂಗದ ಅಧ್ಯಕ್ಷ ಡಿಪಿಎಸ್ ಮುನಿರಾಜು, ಕೋಲಾರ ಜಿಲ್ಲಾ ಕೇಂದ್ರವಾಗಿದ್ದರೂ ದಲಿತರ ಸಮಸ್ಯೆಗಳಿಗೆ ಸೂಕ್ತ ಸ್ಪಂದನೆ ಸಿಗುತ್ತಿಲ್ಲ ಮತ್ತು ನ್ಯಾಯಕ್ಕಾಗಿ ಹೋರಾಟ ಮಾಡಬೇಕಾದ ಅನಿವಾರ್ಯತೆ ಇದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ನೂತನ ತಹಶಿಲ್ದಾರ್ ಹೊಸ ಬದಲಾವಣೆ ತರುವ ಮೂಲಕ ದಲಿತರ ಸಮಸ್ಯೆಗಳಿಗೆ ಸ್ಪಂದಿಸಬೇಕು ಮತ್ತು ದಲಿತರ ಅಭಿವೃದ್ಧಿಗಾಗಿ ಮೀಸಲಾದ ಅನುದಾನವನ್ನು ಇತರ ಕಾರ್ಯಕ್ರಮಗಳಿಗೆ ಬಳಸದೆ ಸಮುದಾಯಕ್ಕೆ ನೇರವಾಗಿ ತಲುಪಿಸಬೇಕು ಎಂದು ಅವರು ಒತ್ತಾಯಿಸಿದರು. ಸರ್ಕಾರ ಮೀಸಲಿಡುವ ಸಾವಿರಾರು ಕೋಟಿ ರೂಪಾಯಿಗಳ ಅನುದಾನವು ಸದುಪಯೋಗವಾಗುವಂತೆ ಕಾರ್ಯಕ್ರಮಗಳನ್ನು ರೂಪಿಸಬೇಕೆಂದು ಅವರು ಆಗ್ರಹಿಸಿದರು. ದಲಿತ ದಮನಿತರ ಸೇವಾ ಸಮಿತಿಯ ರಾಜ್ಯ ಅಧ್ಯಕ್ಷ ಮೇಡಿಹಾಳ ಮುನಿಅಂಜಿನಪ್ಪ ಮಾತನಾಡಿ, ದಲಿತರ ಅಭಿವೃದ್ಧಿ, ಬಡತನ ನಿರ್ಮೂಲನೆ, ಶಿಕ್ಷಣ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಯೋಜನೆಗಳನ್ನು ಸಮರ್ಥವಾಗಿ ಬಳಸಿಕೊಳ್ಳಲು ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಮನವಿ ಮಾಡಿದರು. ಅಲ್ಲದೆ, ಗ್ರಾಪಂ ಮತ್ತು ಹೋಬಳಿ ಮಟ್ಟದಲ್ಲಿ ದಲಿತರ ಕುಂದುಕೊರತೆಗಳ ಸಭೆಗಳನ್ನು ನಡೆಸುವ ಮೂಲಕ ಅವರ ಆರ್ಥಿಕ ಸಬಲೀಕರಣಕ್ಕೆ ಒತ್ತು ನೀಡಬೇಕೆಂದು ಅವರು ಸಲಹೆ ನೀಡಿದರು. ಈ ಭೇಟಿಯ ವೇಳೆ ಖಾದ್ರಿಪುರ ಬಾಬು, ದಲಿತ್ ನಾರಾಯಣಸ್ವಾಮಿ, ಗಾಂಧಿನಗರ ರಾಜಕುಮಾರ್, ಡಿಎಸ್ಎಸ್ ಮಂಜುಳಾ, ಅಪ್ಪಿ ನಾರಾಯಣಸ್ವಾಮಿ, ಕರವೇ ಸೋಮಶೇಖರ್, ಗಿರಿಜಮ್ಮ, ಶ್ರೀರಾಮಪುರ ರವಿ, ಹರಳಕುಂಟೆ ರಾಜು, ಅಂಬೇಡ್ಕರ್ ನಗರ ರವಿ, ಮೋಚಿಪಾಳ್ಳ ನಾಗೇಶ್, ಯುವರಾಜ್, ಮುನಿಯಪ್ಪ, ಗಂಗಮ್ಮನಪಾಳ್ಯ ಶಿವು, ಎಸ್ಎಸ್ಡಿನಾಗರಾಜ್, ರಾಮಪಿರ ಮುನಿರಾಜು, ಬುಸನಹಳ್ಳಿ ರಮೇಶ್, ಟಮಕ ಮಂಜು, ನಡುಪಳ್ಳಿ ವೆಂಕಟೇಶ್ ಮತ್ತು ಮಂಜುನಾಥ್ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

More news from ಕರ್ನಾಟಕ and nearby areas
  • ಕೋಲಾರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಓಂ ಶಕ್ತಿ ಚಲಪತಿ ಅವರು, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ ದೇಶದೊಳಗೆ ಅಕ್ರಮವಾಗಿ ನುಸುಳಿರುವವರಿಗೆ ಶಾಶ್ವತ ನಿವಾಸಿ ಪ್ರಮಾಣಪತ್ರ ನೀಡುವ ಪ್ರಯತ್ನಗಳು ನಡೆಯುತ್ತಿವೆ ಎಂಬ ಗಂಭೀರ ಆರೋಪಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂತಹ ಕಾನೂನುಬಾಹಿರ ಕ್ರಮವನ್ನು ಬಿಜೆಪಿ ತೀವ್ರವಾಗಿ ವಿರೋಧಿಸುತ್ತದೆ ಎಂದು ಎಚ್ಚರಿಸಿರುವ ಅವರು, ರಾಜ್ಯದ ಜನರ ಹಿತಾಸಕ್ತಿ, ದೇಶದ ಆಂತರಿಕ ಭದ್ರತೆ ಹಾಗೂ ಕಾನೂನುಬದ್ಧ ವ್ಯವಸ್ಥೆಗೆ ಧಕ್ಕೆಯಾಗುವ ಯಾವುದೇ ನಿರ್ಧಾರವನ್ನು ತಾವಾಗಲಿ ಅಥವಾ ತಮ್ಮ ಪಕ್ಷವಾಗಲಿ ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ ಎಂದು ಸ್ಪಷ್ಟಪಡಿಸಿದರು. ದೇಶದ ಕಾನೂನಿನ ಪ್ರಕಾರ ಅರ್ಹರಾಗಿರುವ ಜನರಿಗೆ ಮಾತ್ರ ಅಗತ್ಯ ದಾಖಲೆಗಳನ್ನು ನೀಡಬೇಕು ಮತ್ತು ಅಕ್ರಮ ನುಸುಳುಕೋರರಿಗೆ ಯಾವುದೇ ರೀತಿಯ ಮಾನ್ಯತೆ ಅಥವಾ ರಾಜಾಶ್ರಯ ನೀಡಬಾರದು ಎಂಬುದು ನಮ್ಮ ಸ್ಪಷ್ಟ ನಿಲುವು ಎಂದು ಅವರು ಪ್ರತಿಪಾದಿಸಿದರು. ಈ ಸೂಕ್ಷ್ಮ ವಿಷಯದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರವು ಸಂಪೂರ್ಣ ಪಾರದರ್ಶಕತೆ ಕಾಯ್ದುಕೊಳ್ಳಬೇಕು ಮತ್ತು ಈ ಪ್ರಕ್ರಿಯೆಯ ಕುರಿತು ಸಾರ್ವಜನಿಕರಲ್ಲಿ ಮೂಡಿರುವ ಅನುಮಾನ ಹಾಗೂ ಆತಂಕಗಳಿಗೆ ತಕ್ಷಣವೇ ಸ್ಪಷ್ಟ ಉತ್ತರ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ಈ ಪತ್ರಿಕಾಗೋಷ್ಠಿಯ ಸಂದರ್ಭದಲ್ಲಿ ಮಾಜಿ ಸಂಸದರು ಮುನಿಸ್ವಾಮಿ, ಜಿಲ್ಲಾ ಉಪಾಧ್ಯಕ್ಷರು ವಿಜಿ ಕುಮಾರ್, ಪ್ರಕೋಷ್ಟಗಳ ಸಂಚಾಲಕರು ಮಾಗೇರಿ ನಾರಾಯಣಸ್ವಾಮಿ, ನಗರ ಘಟಕ ಅಧ್ಯಕ್ಷರು ಸಾಮಾ ಅನಿಲ್ ಬಾಬು, ತಿಮ್ಮರಾಯಪ್ಪ, ಕೆಂಬೋಡಿ ನಾರಾಯಣಸ್ವಾಮಿ, ಗೋವಿಂದರಾಜ್, ಮೋರ್ಚಾ ಬಾಲಾಜಿ, ಸೂರಿ ಮತ್ತು ಮಂಜುನಾಥ್ ಸೇರಿದಂತೆ ಹಲವು ಪದಾಧಿಕಾರಿಗಳು ಉಪಸ್ಥಿತರಿದ್ದರು.
    2
    ಕೋಲಾರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಓಂ ಶಕ್ತಿ ಚಲಪತಿ ಅವರು, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ ದೇಶದೊಳಗೆ ಅಕ್ರಮವಾಗಿ ನುಸುಳಿರುವವರಿಗೆ ಶಾಶ್ವತ ನಿವಾಸಿ ಪ್ರಮಾಣಪತ್ರ ನೀಡುವ ಪ್ರಯತ್ನಗಳು ನಡೆಯುತ್ತಿವೆ ಎಂಬ ಗಂಭೀರ ಆರೋಪಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂತಹ ಕಾನೂನುಬಾಹಿರ ಕ್ರಮವನ್ನು ಬಿಜೆಪಿ ತೀವ್ರವಾಗಿ ವಿರೋಧಿಸುತ್ತದೆ ಎಂದು ಎಚ್ಚರಿಸಿರುವ ಅವರು, ರಾಜ್ಯದ ಜನರ ಹಿತಾಸಕ್ತಿ, ದೇಶದ ಆಂತರಿಕ ಭದ್ರತೆ ಹಾಗೂ ಕಾನೂನುಬದ್ಧ ವ್ಯವಸ್ಥೆಗೆ ಧಕ್ಕೆಯಾಗುವ ಯಾವುದೇ ನಿರ್ಧಾರವನ್ನು ತಾವಾಗಲಿ ಅಥವಾ ತಮ್ಮ ಪಕ್ಷವಾಗಲಿ ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ ಎಂದು ಸ್ಪಷ್ಟಪಡಿಸಿದರು. ದೇಶದ ಕಾನೂನಿನ ಪ್ರಕಾರ ಅರ್ಹರಾಗಿರುವ ಜನರಿಗೆ ಮಾತ್ರ ಅಗತ್ಯ ದಾಖಲೆಗಳನ್ನು ನೀಡಬೇಕು ಮತ್ತು ಅಕ್ರಮ ನುಸುಳುಕೋರರಿಗೆ ಯಾವುದೇ ರೀತಿಯ ಮಾನ್ಯತೆ ಅಥವಾ ರಾಜಾಶ್ರಯ ನೀಡಬಾರದು ಎಂಬುದು ನಮ್ಮ ಸ್ಪಷ್ಟ ನಿಲುವು ಎಂದು ಅವರು ಪ್ರತಿಪಾದಿಸಿದರು.

ಈ ಸೂಕ್ಷ್ಮ ವಿಷಯದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರವು ಸಂಪೂರ್ಣ ಪಾರದರ್ಶಕತೆ ಕಾಯ್ದುಕೊಳ್ಳಬೇಕು ಮತ್ತು ಈ ಪ್ರಕ್ರಿಯೆಯ ಕುರಿತು ಸಾರ್ವಜನಿಕರಲ್ಲಿ ಮೂಡಿರುವ ಅನುಮಾನ ಹಾಗೂ ಆತಂಕಗಳಿಗೆ ತಕ್ಷಣವೇ ಸ್ಪಷ್ಟ ಉತ್ತರ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ಈ ಪತ್ರಿಕಾಗೋಷ್ಠಿಯ ಸಂದರ್ಭದಲ್ಲಿ ಮಾಜಿ ಸಂಸದರು ಮುನಿಸ್ವಾಮಿ, ಜಿಲ್ಲಾ ಉಪಾಧ್ಯಕ್ಷರು ವಿಜಿ ಕುಮಾರ್, ಪ್ರಕೋಷ್ಟಗಳ ಸಂಚಾಲಕರು ಮಾಗೇರಿ ನಾರಾಯಣಸ್ವಾಮಿ, ನಗರ ಘಟಕ ಅಧ್ಯಕ್ಷರು ಸಾಮಾ ಅನಿಲ್ ಬಾಬು, ತಿಮ್ಮರಾಯಪ್ಪ, ಕೆಂಬೋಡಿ ನಾರಾಯಣಸ್ವಾಮಿ, ಗೋವಿಂದರಾಜ್, ಮೋರ್ಚಾ ಬಾಲಾಜಿ, ಸೂರಿ ಮತ್ತು ಮಂಜುನಾಥ್ ಸೇರಿದಂತೆ ಹಲವು ಪದಾಧಿಕಾರಿಗಳು ಉಪಸ್ಥಿತರಿದ್ದರು.
    user_ಜನಪರ ಸುದ್ದಿ 91
    ಜನಪರ ಸುದ್ದಿ 91
    Singer ಕೋಲಾರ, ಕೋಲಾರ, ಕರ್ನಾಟಕ•
    2 hrs ago
  • ಕೋಲಾರ ತಾಲ್ಲೂಕಿನ ವಕ್ಕಲೇರಿ ಹೋಬಳಿಯ ಚುಂಚದೇನಹಳ್ಳಿಯಲ್ಲಿ ನೆಲೆಸಿರುವ ಶ್ರೀ ರುಕ್ಕಿಣೀ ಸತ್ಯಭಾಮ ಸಮೇತ ಶ್ರೀ ವೇಣುಗೋಪಾಲ ಸ್ವಾಮಿಯ ಮರು ಪ್ರತಿಷ್ಠಾಪನೆ ಹಾಗೂ ವಿಮಾನ ಗೋಪುರ ಉದ್ಘಾಟನಾ ಮಹೋತ್ಸವವು ಇದೇ 12ರ ಭಾನುವಾರ ನಡೆಯಲಿದೆ ಎಂದು ಗ್ರಾಮದ ಮುಖಂಡರು ತಿಳಿಸಿದ್ದಾರೆ. ಭಗವಂತನ ಪ್ರೇರಣೆಯಿಂದ ಈ ಧಾರ್ಮಿಕ ಕಾರ್ಯಕ್ರಮಗಳು ಜರುಗುತ್ತಿವೆ ಎಂದು ಮುಖಂಡರು ಮಾಹಿತಿ ನೀಡಿದ್ದಾರೆ. ಈ ಶುಭ ಸಂದರ್ಭದಲ್ಲಿ ಭಕ್ತಾದಿಗಳು ಸಕಾಲಕ್ಕೆ ಆಗಮಿಸಿ ಸ್ವಾಮಿಯ ದಿವ್ಯ ದರ್ಶನ ಪಡೆದು, ತಮ್ಮ ಮನೋವಾಂಚಲ್ಯಗಳನ್ನು ನೆರವೇರಿಸಿಕೊಳ್ಳುವಂತೆ ಹಾಗೂ ತೀರ್ಥ ಪ್ರಸಾದ ಸ್ವೀಕರಿಸಬೇಕಾಗಿ ಕೋರಲಾಗಿದೆ. ಈ ವೇಳೆ ಗ್ರಾಮದ ಮುಖಂಡರಾದ ಡಿ. ರಾಮಚಂದ್ರಪ್ಪ, ಮಾಜಿ ಸದಸ್ಯ ಸಿ.ವಿ. ಮುನಿರಾಜು, ಎಸ್. ನಾರಾಯಣಸ್ವಾಮಿ, ರಾಮಣ್ಣ, ರಾಮಯ್ಯ, ಅನಿಲಕುಮಾರ, ವಿವೇಕ್, ಡಿ. ರಾಮಣ್ಣ, ಗುರುಮೂರ್ತಿ, ಜಯರಾಮ್, ಅರ್ಚಕರಾದ ರಾಮಾಚಾರಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
    2
    ಕೋಲಾರ ತಾಲ್ಲೂಕಿನ ವಕ್ಕಲೇರಿ ಹೋಬಳಿಯ ಚುಂಚದೇನಹಳ್ಳಿಯಲ್ಲಿ ನೆಲೆಸಿರುವ ಶ್ರೀ ರುಕ್ಕಿಣೀ ಸತ್ಯಭಾಮ ಸಮೇತ ಶ್ರೀ ವೇಣುಗೋಪಾಲ ಸ್ವಾಮಿಯ ಮರು ಪ್ರತಿಷ್ಠಾಪನೆ ಹಾಗೂ ವಿಮಾನ ಗೋಪುರ ಉದ್ಘಾಟನಾ ಮಹೋತ್ಸವವು ಇದೇ 12ರ ಭಾನುವಾರ ನಡೆಯಲಿದೆ ಎಂದು ಗ್ರಾಮದ ಮುಖಂಡರು ತಿಳಿಸಿದ್ದಾರೆ. ಭಗವಂತನ ಪ್ರೇರಣೆಯಿಂದ ಈ ಧಾರ್ಮಿಕ ಕಾರ್ಯಕ್ರಮಗಳು ಜರುಗುತ್ತಿವೆ ಎಂದು ಮುಖಂಡರು ಮಾಹಿತಿ ನೀಡಿದ್ದಾರೆ.

ಈ ಶುಭ ಸಂದರ್ಭದಲ್ಲಿ ಭಕ್ತಾದಿಗಳು ಸಕಾಲಕ್ಕೆ ಆಗಮಿಸಿ ಸ್ವಾಮಿಯ ದಿವ್ಯ ದರ್ಶನ ಪಡೆದು, ತಮ್ಮ ಮನೋವಾಂಚಲ್ಯಗಳನ್ನು ನೆರವೇರಿಸಿಕೊಳ್ಳುವಂತೆ ಹಾಗೂ ತೀರ್ಥ ಪ್ರಸಾದ ಸ್ವೀಕರಿಸಬೇಕಾಗಿ ಕೋರಲಾಗಿದೆ. ಈ ವೇಳೆ ಗ್ರಾಮದ ಮುಖಂಡರಾದ ಡಿ. ರಾಮಚಂದ್ರಪ್ಪ, ಮಾಜಿ ಸದಸ್ಯ ಸಿ.ವಿ. ಮುನಿರಾಜು, ಎಸ್. ನಾರಾಯಣಸ್ವಾಮಿ, ರಾಮಣ್ಣ, ರಾಮಯ್ಯ, ಅನಿಲಕುಮಾರ, ವಿವೇಕ್, ಡಿ. ರಾಮಣ್ಣ, ಗುರುಮೂರ್ತಿ, ಜಯರಾಮ್, ಅರ್ಚಕರಾದ ರಾಮಾಚಾರಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
    user_ಎಸ್.ಎನ್.ಪ್ರಕಾಶ್
    ಎಸ್.ಎನ್.ಪ್ರಕಾಶ್
    ಕೋಲಾರ, ಕೋಲಾರ, ಕರ್ನಾಟಕ•
    5 hrs ago
  • ಕೋಲಾರದ ಕೊಂಡರಾಜನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಜಾಮಲ್ತ್ ನಗರದಲ್ಲಿ ಶುಕ್ರವಾರ ಬೆಳಗ್ಗೆ ಅನಾಮಿಕರು ಪೋಲೀಸರೊಂದಿಗೆ ಜಾಗದ ಸರ್ವೆಗೆ ಮುಂದಾದಾಗ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಸುಮಾರು 1989ರಿಂದಲೂ ಈ ಜಾಗಕ್ಕೆ ಸಂಬಂಧಿಸಿದ ಮೂಲ ದಾಖಲೆಗಳು ತಮ್ಮ ಬಳಿಯೇ ಇವೆ ಎಂದು ಸ್ಥಳೀಯರು ಹಾಗೂ ಜಾಗದ ಮಾಲೀಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸ್ಥಳೀಯರ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಅನಾಮಿಕರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಜಾಗದ ಮಾಲೀಕರು, ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ನಕಲಿ ದಾಖಲೆಗಳನ್ನು ಸೃಷ್ಟಿಸುವ ಹುನ್ನಾರ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ಎನ್‌ಎಕೆ (NAK) ಕಾಯಿದೆಯ ಪ್ರಕಾರ ಪಾಣಿ ಮತ್ತು ಮ್ಯುಟೇಷನ್ ದಾಖಲೆಗಳು ಲಭ್ಯವಿದ್ದರೂ, ಇಂತಹ ಅಕ್ರಮ ಸರ್ವೆಗೆ ಮುಂದಾಗಿರುವುದು ಆತಂಕಕ್ಕೆ ಕಾರಣವಾಗಿದೆ.
    1
    ಕೋಲಾರದ ಕೊಂಡರಾಜನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಜಾಮಲ್ತ್ ನಗರದಲ್ಲಿ ಶುಕ್ರವಾರ ಬೆಳಗ್ಗೆ ಅನಾಮಿಕರು ಪೋಲೀಸರೊಂದಿಗೆ ಜಾಗದ ಸರ್ವೆಗೆ ಮುಂದಾದಾಗ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಸುಮಾರು 1989ರಿಂದಲೂ ಈ ಜಾಗಕ್ಕೆ ಸಂಬಂಧಿಸಿದ ಮೂಲ ದಾಖಲೆಗಳು ತಮ್ಮ ಬಳಿಯೇ ಇವೆ ಎಂದು ಸ್ಥಳೀಯರು ಹಾಗೂ ಜಾಗದ ಮಾಲೀಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸ್ಥಳೀಯರ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಅನಾಮಿಕರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಜಾಗದ ಮಾಲೀಕರು, ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ನಕಲಿ ದಾಖಲೆಗಳನ್ನು ಸೃಷ್ಟಿಸುವ ಹುನ್ನಾರ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ಎನ್‌ಎಕೆ (NAK) ಕಾಯಿದೆಯ ಪ್ರಕಾರ ಪಾಣಿ ಮತ್ತು ಮ್ಯುಟೇಷನ್ ದಾಖಲೆಗಳು ಲಭ್ಯವಿದ್ದರೂ, ಇಂತಹ ಅಕ್ರಮ ಸರ್ವೆಗೆ ಮುಂದಾಗಿರುವುದು ಆತಂಕಕ್ಕೆ ಕಾರಣವಾಗಿದೆ.
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop Kolar, Karnataka•
    12 hrs ago
  • ಬಂಗಾರಪೇಟೆ ತಾಲೂಕಿನ ಒಟ್ಟು 253 ಮತದಾನ ಕೇಂದ್ರಗಳಲ್ಲಿ ಜೂನ್ 29ರಿಂದ ಆರಂಭವಾಗಿರುವ ಮತದಾರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣಾ ಕಾರ್ಯವು ಚುರುಕಾಗಿ ನಡೆಯುತ್ತಿದೆ ಎಂದು ತಾಲೂಕು ಮತದಾರ ನೋಂದಣಾಧಿಕಾರಿ ಹಾಗೂ ಜಿಲ್ಲಾ ಆಹಾರ ಇಲಾಖೆಯ ಉಪ ನಿರ್ದೇಶಕ ಎಂ.ಮಲ್ಲಿಕಾರ್ಜುನ್ ತಿಳಿಸಿದ್ದಾರೆ. ತಾಲೂಕು ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈವರೆಗೆ ಒಟ್ಟು 2.12 ಲಕ್ಷ ಮತದಾರರ ಪೈಕಿ 2.08 ಲಕ್ಷ ಮಂದಿಗೆ ಮನೆ ಮನೆಗೆ ತೆರಳಿ ನಮೂನೆಗಳನ್ನು ತಲುಪಿಸಲಾಗಿದ್ದು, ಶೇಕಡಾ 97.94ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಮಾಹಿತಿ ನೀಡಿದರು. ಗ್ರಾಮೀಣ ಪ್ರದೇಶಗಳಲ್ಲಿ ನಮೂನೆ ವಿತರಣಾ ಪ್ರಕ್ರಿಯೆ ವೇಗವಾಗಿ ಸಾಗುತ್ತಿದ್ದು, ಇನ್ನೂ 4,670 ನಮೂನೆಗಳನ್ನು ವಿತರಿಸಬೇಕಿದೆ. ನಗರ ಪ್ರದೇಶಗಳಲ್ಲಿ ಮನೆಗಳಲ್ಲಿನ ಮತದಾರರನ್ನು ಗುರುತಿಸುವುದು ಸವಾಲಿನಾಯಕವಾಗಿರುವುದರಿಂದ ಪ್ರಕ್ರಿಯೆಯಲ್ಲಿ ಸ್ವಲ್ಪ ವಿಳಂಬವಾಗಿದೆ ಎಂದು ಅವರು ವಿವರಿಸಿದರು. ಬಂಗಾರಪೇಟೆ ತಾಲೂಕಿನ ಒಟ್ಟಾರೆ ಕಾರ್ಯನಿರ್ವಹಣೆಯಲ್ಲಿ ಎಸ್ಐಆರ್ (SIR) ಅಡಿ ಶೇ.97.80ರಷ್ಟು ಫಾರ್ಮ್ ವಿತರಣೆ ಕಾರ್ಯ ಈಗಾಗಲೇ ಪೂರ್ಣಗೊಂಡಿದೆ.
    1
    ಬಂಗಾರಪೇಟೆ ತಾಲೂಕಿನ ಒಟ್ಟು 253 ಮತದಾನ ಕೇಂದ್ರಗಳಲ್ಲಿ ಜೂನ್ 29ರಿಂದ ಆರಂಭವಾಗಿರುವ ಮತದಾರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣಾ ಕಾರ್ಯವು ಚುರುಕಾಗಿ ನಡೆಯುತ್ತಿದೆ ಎಂದು ತಾಲೂಕು ಮತದಾರ ನೋಂದಣಾಧಿಕಾರಿ ಹಾಗೂ ಜಿಲ್ಲಾ ಆಹಾರ ಇಲಾಖೆಯ ಉಪ ನಿರ್ದೇಶಕ ಎಂ.ಮಲ್ಲಿಕಾರ್ಜುನ್ ತಿಳಿಸಿದ್ದಾರೆ. ತಾಲೂಕು ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈವರೆಗೆ ಒಟ್ಟು 2.12 ಲಕ್ಷ ಮತದಾರರ ಪೈಕಿ 2.08 ಲಕ್ಷ ಮಂದಿಗೆ ಮನೆ ಮನೆಗೆ ತೆರಳಿ ನಮೂನೆಗಳನ್ನು ತಲುಪಿಸಲಾಗಿದ್ದು, ಶೇಕಡಾ 97.94ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಮಾಹಿತಿ ನೀಡಿದರು.

ಗ್ರಾಮೀಣ ಪ್ರದೇಶಗಳಲ್ಲಿ ನಮೂನೆ ವಿತರಣಾ ಪ್ರಕ್ರಿಯೆ ವೇಗವಾಗಿ ಸಾಗುತ್ತಿದ್ದು, ಇನ್ನೂ 4,670 ನಮೂನೆಗಳನ್ನು ವಿತರಿಸಬೇಕಿದೆ. ನಗರ ಪ್ರದೇಶಗಳಲ್ಲಿ ಮನೆಗಳಲ್ಲಿನ ಮತದಾರರನ್ನು ಗುರುತಿಸುವುದು ಸವಾಲಿನಾಯಕವಾಗಿರುವುದರಿಂದ ಪ್ರಕ್ರಿಯೆಯಲ್ಲಿ ಸ್ವಲ್ಪ ವಿಳಂಬವಾಗಿದೆ ಎಂದು ಅವರು ವಿವರಿಸಿದರು. ಬಂಗಾರಪೇಟೆ ತಾಲೂಕಿನ ಒಟ್ಟಾರೆ ಕಾರ್ಯನಿರ್ವಹಣೆಯಲ್ಲಿ ಎಸ್ಐಆರ್ (SIR) ಅಡಿ ಶೇ.97.80ರಷ್ಟು ಫಾರ್ಮ್ ವಿತರಣೆ ಕಾರ್ಯ ಈಗಾಗಲೇ ಪೂರ್ಣಗೊಂಡಿದೆ.
    user_Vishnu Press
    Vishnu Press
    Local News Reporter ಬಂಗಾರಪೇಟೆ, ಕೋಲಾರ, ಕರ್ನಾಟಕ•
    15 hrs ago
  • ಮುಳಬಾಗಿಲು ತಾಲೂಕಿನ ಅಂಬ್ಳಿಕಲ್ ಗ್ರಾಮದಲ್ಲಿ ನೂತನ ಹೈ ಮಾಸ್ಕ್ ದೀಪದ ಉದ್ಘಾಟನಾ ಕಾರ್ಯಕ್ರಮ ಜರುಗಿದೆ. ಕ್ಷೇತ್ರದ ಶಾಸಕರಾದ ಸಮೃದ್ಧಿ ಮಂಜುನಾಥ್ ಅವರು ಈ ಹೈ ಮಾಸ್ಕ್ ದೀಪವನ್ನು ಅಧಿಕೃತವಾಗಿ ಉದ್ಘಾಟಿಸಿದ್ದಾರೆ.
    1
    ಮುಳಬಾಗಿಲು ತಾಲೂಕಿನ ಅಂಬ್ಳಿಕಲ್ ಗ್ರಾಮದಲ್ಲಿ ನೂತನ ಹೈ ಮಾಸ್ಕ್ ದೀಪದ ಉದ್ಘಾಟನಾ ಕಾರ್ಯಕ್ರಮ ಜರುಗಿದೆ. ಕ್ಷೇತ್ರದ ಶಾಸಕರಾದ ಸಮೃದ್ಧಿ ಮಂಜುನಾಥ್ ಅವರು ಈ ಹೈ ಮಾಸ್ಕ್ ದೀಪವನ್ನು ಅಧಿಕೃತವಾಗಿ ಉದ್ಘಾಟಿಸಿದ್ದಾರೆ.
    user_Janasuddhi
    Janasuddhi
    ಮುಳಬಾಗಿಲು, ಕೋಲಾರ, ಕರ್ನಾಟಕ•
    2 hrs ago
  • ಅವರ ಅಂತ್ಯಕ್ರಿಯೆಯನ್ನು ಸರ್ಕಾರವೇ ನಿಗದಿಪಡಿಸಬೇಕು, ಇಲ್ಲದಿದ್ದರೆ ಬೆಂಗಳೂರಿನ ಆರ್‌ಟಿ ನಗರದಲ್ಲಿ ಅದನ್ನು ನೀಡಲು ನಮ್ಮ ಕುಟುಂಬ ಬದ್ಧವಾಗಿದೆ ಎಂದು ತಿಳಿಸಲಾಗಿದೆ.
    1
    ಅವರ ಅಂತ್ಯಕ್ರಿಯೆಯನ್ನು ಸರ್ಕಾರವೇ ನಿಗದಿಪಡಿಸಬೇಕು, ಇಲ್ಲದಿದ್ದರೆ ಬೆಂಗಳೂರಿನ ಆರ್‌ಟಿ ನಗರದಲ್ಲಿ ಅದನ್ನು ನೀಡಲು ನಮ್ಮ ಕುಟುಂಬ ಬದ್ಧವಾಗಿದೆ ಎಂದು ತಿಳಿಸಲಾಗಿದೆ.
    user_Veega News Kannada
    Veega News Kannada
    Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    13 min ago
  • ಕೋಲಾರ ತಾಲ್ಲೂಕಿನ ಅಮ್ಮೇರಹಳ್ಳಿ ಗ್ರಾಮದಲ್ಲಿ ಶ್ರೀ ಅಭಯ ಮಹಾ ಗಣಪತಿ ಪ್ರತಿಷ್ಠಾಪನೆ ಹಾಗೂ ಶ್ರೀ ಅಭಯ ಆಂಜನೇಯ ಸ್ವಾಮಿ, ಶ್ರೀ ವೇಣುಗೋಪಾಲಸ್ವಾಮಿ ಮತ್ತು ಆದಿತ್ಯಾದಿ ನವಗ್ರಹಗಳ ಕುಂಭಾಭಿಷೇಕ ಕಾರ್ಯಕ್ರಮಗಳು ಎರಡು ದಿನಗಳ ಕಾಲ ಅದ್ಧೂರಿಯಾಗಿ ನಡೆಯಲಿವೆ. ಈ ಧಾರ್ಮಿಕ ಕಾರ್ಯಕ್ರಮಗಳಿಗೆ ಭಕ್ತಾದಿಗಳು ಸಕಾಲಕ್ಕೆ ಆಗಮಿಸಿ ದೇವರ ಕೃಪೆಗೆ ಪಾತ್ರರಾಗಬೇಕೆಂದು ಅಮ್ಮೇರಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಕೋರಿದ್ದಾರೆ. ಕಾರ್ಯಕ್ರಮಗಳು ಈ ತಿಂಗಳ 11ರ ಸಂಜೆ 6:00 ಗಂಟೆಗೆ ಮಹಾಗಣಪತಿ ಪೂಜೆ, ಗಂಗೆ ಪೂಜೆ, ರಕ್ಷಾಬಂಧನ, ಅಂಕುರಾರ್ಪಣೆ, ಯಾಗ ಮಂಟಪ ಪ್ರವೇಶ, ಧ್ವಜಾರೋಹಣ, ವಿವಿಧ ಹೋಮಗಳು ಮತ್ತು ಪಿಂಡಿಕಾ ಸ್ಥಾಪನೆಯೊಂದಿಗೆ ಆರಂಭಗೊಳ್ಳಲಿವೆ. ಮುಂದುವರಿದ ಭಾಗವಾಗಿ, 12ರ ಭಾನುವಾರ ಬೆಳಿಗ್ಗೆ ಸೂರ್ಯೋದಯದ ನಂತರ 4:30 ರಿಂದ 5:30ರ ಒಳಗೆ ಸಲ್ಲುವ ಶುಭ ಬ್ರಾಹ್ಮ ಮುಹೂರ್ತದಲ್ಲಿ ಪ್ರತಿಷ್ಠಾಪನಾ ಮಹೋತ್ಸವ ಮತ್ತು ಕುಂಭಾಭಿಷೇಕ ಜರುಗಲಿದೆ. ಅಂದು ಪ್ರಾಣ ಪ್ರತಿಷ್ಠಾಪನೆ, ನೇತ್ರೋನ್ನಿಲನ, ಹೋಮಗಳು, ಬಲಿಹರಣ, ಪೂರ್ಣಾಹುತಿ ಹಾಗೂ ಪುಷ್ಪ ಅಲಂಕಾರದೊಂದಿಗೆ ಅಷ್ಟಾವಧಾನ ಸೇವೆ ಮತ್ತು ಮಹಾಮಂಗಳಾರತಿ ನಡೆಯಲಿದೆ. ಕಾರ್ಯಕ್ರಮದ ಅಂಗವಾಗಿ ಮಧ್ಯಾಹ್ನ 12 ಗಂಟೆಗೆ ಅನ್ನ ಸಂತರ್ಪಣೆಯೂ ಏರ್ಪಡಿಸಲಾಗಿದೆ.
    4
    ಕೋಲಾರ ತಾಲ್ಲೂಕಿನ ಅಮ್ಮೇರಹಳ್ಳಿ ಗ್ರಾಮದಲ್ಲಿ ಶ್ರೀ ಅಭಯ ಮಹಾ ಗಣಪತಿ ಪ್ರತಿಷ್ಠಾಪನೆ ಹಾಗೂ ಶ್ರೀ ಅಭಯ ಆಂಜನೇಯ ಸ್ವಾಮಿ, ಶ್ರೀ ವೇಣುಗೋಪಾಲಸ್ವಾಮಿ ಮತ್ತು ಆದಿತ್ಯಾದಿ ನವಗ್ರಹಗಳ ಕುಂಭಾಭಿಷೇಕ ಕಾರ್ಯಕ್ರಮಗಳು ಎರಡು ದಿನಗಳ ಕಾಲ ಅದ್ಧೂರಿಯಾಗಿ ನಡೆಯಲಿವೆ. ಈ ಧಾರ್ಮಿಕ ಕಾರ್ಯಕ್ರಮಗಳಿಗೆ ಭಕ್ತಾದಿಗಳು ಸಕಾಲಕ್ಕೆ ಆಗಮಿಸಿ ದೇವರ ಕೃಪೆಗೆ ಪಾತ್ರರಾಗಬೇಕೆಂದು ಅಮ್ಮೇರಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಕೋರಿದ್ದಾರೆ.

ಕಾರ್ಯಕ್ರಮಗಳು ಈ ತಿಂಗಳ 11ರ ಸಂಜೆ 6:00 ಗಂಟೆಗೆ ಮಹಾಗಣಪತಿ ಪೂಜೆ, ಗಂಗೆ ಪೂಜೆ, ರಕ್ಷಾಬಂಧನ, ಅಂಕುರಾರ್ಪಣೆ, ಯಾಗ ಮಂಟಪ ಪ್ರವೇಶ, ಧ್ವಜಾರೋಹಣ, ವಿವಿಧ ಹೋಮಗಳು ಮತ್ತು ಪಿಂಡಿಕಾ ಸ್ಥಾಪನೆಯೊಂದಿಗೆ ಆರಂಭಗೊಳ್ಳಲಿವೆ. ಮುಂದುವರಿದ ಭಾಗವಾಗಿ, 12ರ ಭಾನುವಾರ ಬೆಳಿಗ್ಗೆ ಸೂರ್ಯೋದಯದ ನಂತರ 4:30 ರಿಂದ 5:30ರ ಒಳಗೆ ಸಲ್ಲುವ ಶುಭ ಬ್ರಾಹ್ಮ ಮುಹೂರ್ತದಲ್ಲಿ ಪ್ರತಿಷ್ಠಾಪನಾ ಮಹೋತ್ಸವ ಮತ್ತು ಕುಂಭಾಭಿಷೇಕ ಜರುಗಲಿದೆ. ಅಂದು ಪ್ರಾಣ ಪ್ರತಿಷ್ಠಾಪನೆ, ನೇತ್ರೋನ್ನಿಲನ, ಹೋಮಗಳು, ಬಲಿಹರಣ, ಪೂರ್ಣಾಹುತಿ ಹಾಗೂ ಪುಷ್ಪ ಅಲಂಕಾರದೊಂದಿಗೆ ಅಷ್ಟಾವಧಾನ ಸೇವೆ ಮತ್ತು ಮಹಾಮಂಗಳಾರತಿ ನಡೆಯಲಿದೆ. ಕಾರ್ಯಕ್ರಮದ ಅಂಗವಾಗಿ ಮಧ್ಯಾಹ್ನ 12 ಗಂಟೆಗೆ ಅನ್ನ ಸಂತರ್ಪಣೆಯೂ ಏರ್ಪಡಿಸಲಾಗಿದೆ.
    user_ಎಸ್.ಎನ್.ಪ್ರಕಾಶ್
    ಎಸ್.ಎನ್.ಪ್ರಕಾಶ್
    ಕೋಲಾರ, ಕೋಲಾರ, ಕರ್ನಾಟಕ•
    14 hrs ago
  • ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಹೆದ್ದಾರಿಯಲ್ಲಿ ಮತ್ತೊಂದು ರೋಡ್ ರೇಜ್ ಘಟನೆ ವರದಿಯಾಗಿದೆ. ಆಂಬ್ಯುಲೆನ್ಸ್ ಚಾಲಕನನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು, ಆತನಿಗೆ ಕಪಾಳಮೋಕ್ಷ ಮಾಡಿ ಮನಸೋಇಚ್ಛೆ ಹಲ್ಲೆ ನಡೆಸಿದ್ದಾರೆ. ಈ ಗಲಾಟೆ ಮತ್ತು ಹಲ್ಲೆಯ ದೃಶ್ಯಗಳು ಸ್ಥಳೀಯರ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಈ ಘಟನೆಗೆ ಆಂಬ್ಯುಲೆನ್ಸ್ ಚಾಲಕನ ವರ್ತನೆಯೇ ಕಾರಣ ಎಂದು ಆರೋಪಿಸಲಾಗಿದೆ. ಆಂಬ್ಯುಲೆನ್ಸ್‌ನಲ್ಲಿ ರೋಗಿ ಇಲ್ಲದಿದ್ದರೂ ಸಹ, ಚಾಲಕ ಸೈರನ್ ಹಾಕಿಕೊಂಡು ಬೇಕಾಬಿಟ್ಟಿಯಾಗಿ ವಾಹನ ಚಲಾಯಿಸುತ್ತಿದ್ದನೆಂದು ಸ್ಥಳದಲ್ಲಿರುವವರು ದೂಷಿಸಿದ್ದಾರೆ. ಹೆದ್ದಾರಿಯಲ್ಲಿ ಕಾರನ್ನು ಅಡ್ಡ ನಿಲ್ಲಿಸಿ ಈ ಹಲ್ಲೆಯನ್ನು ನಡೆಸಲಾಗಿದೆ.
    2
    ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಹೆದ್ದಾರಿಯಲ್ಲಿ ಮತ್ತೊಂದು ರೋಡ್ ರೇಜ್ ಘಟನೆ ವರದಿಯಾಗಿದೆ. ಆಂಬ್ಯುಲೆನ್ಸ್ ಚಾಲಕನನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು, ಆತನಿಗೆ ಕಪಾಳಮೋಕ್ಷ ಮಾಡಿ ಮನಸೋಇಚ್ಛೆ ಹಲ್ಲೆ ನಡೆಸಿದ್ದಾರೆ. ಈ ಗಲಾಟೆ ಮತ್ತು ಹಲ್ಲೆಯ ದೃಶ್ಯಗಳು ಸ್ಥಳೀಯರ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿವೆ.

ಈ ಘಟನೆಗೆ ಆಂಬ್ಯುಲೆನ್ಸ್ ಚಾಲಕನ ವರ್ತನೆಯೇ ಕಾರಣ ಎಂದು ಆರೋಪಿಸಲಾಗಿದೆ. ಆಂಬ್ಯುಲೆನ್ಸ್‌ನಲ್ಲಿ ರೋಗಿ ಇಲ್ಲದಿದ್ದರೂ ಸಹ, ಚಾಲಕ ಸೈರನ್ ಹಾಕಿಕೊಂಡು ಬೇಕಾಬಿಟ್ಟಿಯಾಗಿ ವಾಹನ ಚಲಾಯಿಸುತ್ತಿದ್ದನೆಂದು ಸ್ಥಳದಲ್ಲಿರುವವರು ದೂಷಿಸಿದ್ದಾರೆ. ಹೆದ್ದಾರಿಯಲ್ಲಿ ಕಾರನ್ನು ಅಡ್ಡ ನಿಲ್ಲಿಸಿ ಈ ಹಲ್ಲೆಯನ್ನು ನಡೆಸಲಾಗಿದೆ.
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    13 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.