logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಉದಯ್ ಕುಮಾರ್ ಎಲಿವಾಳ ಅವರು ರೈತರ ಜಮೀನುಗಳಿಗೆ ಭೇಟಿ ನೀಡಿದರು. ಈ ಭೇಟಿ ರೈತರ ಸಮಸ್ಯೆಗಳನ್ನು ಆಲಿಸಲು ಹಾಗೂ ಇಲಾಖೆಯ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲು ಮಹತ್ವದ್ದಾಗಿದೆ.

10 hrs ago
user_Ranganath Kandagal
Ranganath Kandagal
TV News Anchor ಮುಂಡರಗಿ, ಗದಗ, ಕರ್ನಾಟಕ•
10 hrs ago

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಉದಯ್ ಕುಮಾರ್ ಎಲಿವಾಳ ಅವರು ರೈತರ ಜಮೀನುಗಳಿಗೆ ಭೇಟಿ ನೀಡಿದರು. ಈ ಭೇಟಿ ರೈತರ ಸಮಸ್ಯೆಗಳನ್ನು ಆಲಿಸಲು ಹಾಗೂ ಇಲಾಖೆಯ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲು ಮಹತ್ವದ್ದಾಗಿದೆ.

More news from ಕರ್ನಾಟಕ and nearby areas
  • ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಉದಯ್ ಕುಮಾರ್ ಎಲಿವಾಳ ಅವರು ರೈತರ ಜಮೀನುಗಳಿಗೆ ಭೇಟಿ ನೀಡಿದರು. ಈ ಭೇಟಿ ರೈತರ ಸಮಸ್ಯೆಗಳನ್ನು ಆಲಿಸಲು ಹಾಗೂ ಇಲಾಖೆಯ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲು ಮಹತ್ವದ್ದಾಗಿದೆ.
    1
    ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಉದಯ್ ಕುಮಾರ್ ಎಲಿವಾಳ ಅವರು ರೈತರ ಜಮೀನುಗಳಿಗೆ ಭೇಟಿ ನೀಡಿದರು. ಈ ಭೇಟಿ ರೈತರ ಸಮಸ್ಯೆಗಳನ್ನು ಆಲಿಸಲು ಹಾಗೂ ಇಲಾಖೆಯ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲು ಮಹತ್ವದ್ದಾಗಿದೆ.
    user_Ranganath Kandagal
    Ranganath Kandagal
    TV News Anchor ಮುಂಡರಗಿ, ಗದಗ, ಕರ್ನಾಟಕ•
    10 hrs ago
  • ನಾಗೇಶ್ ಎಸ್ ಅವರು ಶ್ರೀ ಬಂಜಾರ ಲಂಬಾಣಿ ಸಮುದಾಯ ದಿಗ್ವಿಜಯ ಭಾರತ ಪಕ್ಷದ ರಾಜ್ಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಲಂಬಾಣಿ ಸಮುದಾಯಗಳ ಹಿತಾಸಕ್ತಿ ಮತ್ತು ಅಭಿವೃದ್ಧಿಗಾಗಿ ಪಕ್ಷದ ಮೂಲಕ ಶ್ರಮಿಸಲು ಅವರು ಮುಂದಾಗಿದ್ದಾರೆ.
    2
    ನಾಗೇಶ್ ಎಸ್ ಅವರು ಶ್ರೀ ಬಂಜಾರ ಲಂಬಾಣಿ ಸಮುದಾಯ ದಿಗ್ವಿಜಯ ಭಾರತ ಪಕ್ಷದ ರಾಜ್ಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಲಂಬಾಣಿ ಸಮುದಾಯಗಳ ಹಿತಾಸಕ್ತಿ ಮತ್ತು ಅಭಿವೃದ್ಧಿಗಾಗಿ ಪಕ್ಷದ ಮೂಲಕ ಶ್ರಮಿಸಲು ಅವರು ಮುಂದಾಗಿದ್ದಾರೆ.
    user_ನಾಗೇಶ್ ಎಸ್
    ನಾಗೇಶ್ ಎಸ್
    ಹಾಸನ, ಹಾಸನ, ಕರ್ನಾಟಕ•
    18 hrs ago
  • ಬಳ್ಳಾರಿ: ಸಚಿವ ಡಿ. ಸುಧಾಕರ್ ನಿಧನ: "ಎಲ್ಲವೂ ವಿಧಿಯಾಟ'' ಎಂದು ಭಾವುಕರಾದ ಸಚಿವ ಜಮೀ‌ರ್ ಅಹಮದ್! ಸಚಿವ ಡಿ. ಸುಧಾಕರ್ ಅವರ ಅಕಾಲಿಕ ನಿಧನಕ್ಕೆ ಬಳ್ಳಾರಿ ಉಸ್ತುವಾರಿ ಸಚಿವ ಜಮೀರ್ ಅಹಮದ್ ಚಳ್ಳಕೆರೆಯಲ್ಲಿ ಸೋಮವಾರ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. "ಯಾರು ಯಾವಾಗ ನಮ್ಮನ್ನು ಬಿಟ್ಟು ಹೋಗುತ್ತಾರೆ ಎಂದು ತಿಳಿಯುವುದಿಲ್ಲ, ಎಲ್ಲವೂ ವಿಧಿಯಾಟ' ಎಂದು ಅವರು ಭಾವುಕರಾಗಿ ನುಡಿದರು. ಕೇವಲ ಮಂಡಿ ನೋವಿನ ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಸುಧಾಕ‌ರ್ ಅವರಿಗೆ ನಂತರ ಶ್ವಾಸಕೋಶದ ಸಮಸ್ಯ ೆ ಕಾಣಿಸಿಕೊಂಡಿತ್ತು. ಸದಾ ಹಸನ್ಮುಖಿಯಾಗಿದ್ದ ಅವರು ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ನಿರೀಕ್ಷಿಸಿರಲಿಲ್ಲ ಎಂದು ಜಮೀರ್ ಸ್ಮರಿಸಿದರು. ಮೃತರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಅವರು ದೇವರಲ್ಲಿ ಪ್ರಾರ್ಥಿಸಿದರು.
    1
    ಬಳ್ಳಾರಿ: ಸಚಿವ ಡಿ. ಸುಧಾಕರ್ ನಿಧನ: "ಎಲ್ಲವೂ ವಿಧಿಯಾಟ'' ಎಂದು ಭಾವುಕರಾದ ಸಚಿವ ಜಮೀ‌ರ್ ಅಹಮದ್!
ಸಚಿವ ಡಿ. ಸುಧಾಕರ್ ಅವರ ಅಕಾಲಿಕ ನಿಧನಕ್ಕೆ ಬಳ್ಳಾರಿ ಉಸ್ತುವಾರಿ ಸಚಿವ ಜಮೀರ್ ಅಹಮದ್ ಚಳ್ಳಕೆರೆಯಲ್ಲಿ ಸೋಮವಾರ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
"ಯಾರು ಯಾವಾಗ ನಮ್ಮನ್ನು ಬಿಟ್ಟು ಹೋಗುತ್ತಾರೆ ಎಂದು ತಿಳಿಯುವುದಿಲ್ಲ, ಎಲ್ಲವೂ ವಿಧಿಯಾಟ' ಎಂದು ಅವರು ಭಾವುಕರಾಗಿ ನುಡಿದರು. ಕೇವಲ ಮಂಡಿ ನೋವಿನ ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಸುಧಾಕ‌ರ್ ಅವರಿಗೆ ನಂತರ ಶ್ವಾಸಕೋಶದ ಸಮಸ್ಯ ೆ ಕಾಣಿಸಿಕೊಂಡಿತ್ತು. ಸದಾ ಹಸನ್ಮುಖಿಯಾಗಿದ್ದ ಅವರು ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ನಿರೀಕ್ಷಿಸಿರಲಿಲ್ಲ ಎಂದು ಜಮೀರ್ ಸ್ಮರಿಸಿದರು. ಮೃತರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಅವರು ದೇವರಲ್ಲಿ ಪ್ರಾರ್ಥಿಸಿದರು.
    user_YSRmedia vijayanagaraupsates
    YSRmedia vijayanagaraupsates
    Mobile Phone Accessory Shop ಹೊಸಪೇಟೆ, ವಿಜಯನಗರ, ಕರ್ನಾಟಕ•
    3 min ago
  • ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ವಿಶೇಷ ಸನ್ಮಾನ. ಕುಷ್ಟಗಿ:- ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಕುಷ್ಟಗಿ ಪಟ್ಟಣದಲ್ಲಿ ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ, ದ್ವೀತಿಯ ಮತ್ತು ಅತಿ ಹೆಚ್ಚು ಅಂಕಪಡೆದ ಕಲಾ, ವಾಣಿಜ್ಯ, ವಿಜ್ಞಾನ ವಿಭಾಗದ ವಿಧ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ ಏರ್ಪಡಿಸಲಾಗಿದೆ ಎಂದು ಕುಷ್ಟಗಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಲೆಂಕಪ್ಪ ವಾಲಿಕಾರ ತಿಳಿಸಿದರು. ಇಲ್ಲಿನ ಹಳೆ ಪ್ರವಾಸಿ ಮಂದಿರದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು 2025- 2026ನೇ ಸಾಲಿನ ಈ ವರ್ಷದ ಕೊಪ್ಪಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ತಾಲೂಕಿನ ಮುದೇನೂರು ಗ್ರಾಮದಲ್ಲಿ ಹಮ್ಮಿಕೊಳ್ಳಬೇಕಾಗಿತ್ತು. ಕಾರಣಾಂತರಗಳಿಂದ ಮುದೇನೂರು ಗ್ರಾಮದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಮಾಡಲು ಆಗುವುದಿಲ್ಲ ಆದರೆ ಮುಂದಿನ ತಿಂಗಳಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಮಾಡಲು ಕನ್ನಡ ಸಾಹಿತ್ಯ ಪರಿಷತ್ತಿನ ಎಲ್ಲಾ ಪದಾಧಿಕಾರಿಗಳಿಂದ ಮತ್ತು ಎಲ್ಲಾ ಸದಸ್ಯರಿಂದ ಒಪ್ಪಿಗೆ ಪಡೆಯಲಾಗಿದೆ. ಮುಂದಿನ ದಿನಮಾನದಲ್ಲಿ ಯಾವ ಕಡೆ ಸಮ್ಮೇಳನ ನೆಡೆಸಿದರೆ ಸೂಕ್ತ ಆಗುತ್ತದೆ ಎಂಬ ತೀರ್ಮಾನ ತೆಗೆದುಕೊಂಡು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಮಾಡಲಾಗುವದು ಎಂದರು. ಅದರಂತೆ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಎಸ್.ಎಸ್‌ಎಲ್.ಸಿ. ಮತ್ತು ಯುಪಿಸಿ ಮಕ್ಕಳಿಗೆ ವಿಶೇಷ ಸನ್ಮಾನ ಸಮಾರಂಭ ಏರ್ಪಡಿಸಿಲಾಗುತ್ತಿದೆ ಆದ್ದರಿಂದ ತಾಲೂಕಿನ ಪ್ರಥಮ, ದ್ವೀತಿಯ ಸ್ಥಾನದಲ್ಲಿ ಹಾಗೂ ಅತಿ ಹೆಚ್ಚು ಅಂಕ ಪಡೆದ ಮಕ್ಕಳಿಗೆ ಸನ್ಮಾನಿಸಲಾಗುವದು ಈ ಒಂದು ಕಾರ್ಯಕ್ರಮಕ್ಕೆ ಪ್ರತಿಯೊಬ್ಬರ ಸಲಹೆ ಸಹಕಾರ ಬಹಳ ಅಗತ್ಯವಾಗಿದ್ದು ಈ ಒಂದು ಸಮಾರಂಭವನ್ನು ಯಶಸ್ವಿಗೊಳಿಸಬೇಕಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಶರಣೇಗೌಡ ಪಾಟೀಲ ಮಾತನಾಡಿ ಯಾವುದೇ ಕಾರ್ಯಕ್ರಮ ಮಾಡಬೇಕಾದರೆ ಮೊದಲು ಸೂಕ್ತ ತೀರ್ಮಾನ ತೆಗೆದುಕೊಂಡು ಸಭೆ ಸಮಾರಂಭ ಏರ್ಪಡಿಸಬೇಕಾಗುತ್ತದೆ ಈ ವರ್ಷದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಕುಷ್ಟಗಿ ತಾಲೂಕಿನಲ್ಲಿ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ ಆದರೆ ಪ್ರತಿಯೊಬ್ಬರ ಸಲಹೆ ಸಹಕಾರ ಅಗತ್ಯವಾಗಿದೆ ಸೂಕ್ತ ನಿರ್ಧಾರದೊಂದಿಗೆ ಜಿಲ್ಲಾ ಸಮ್ಮೇಳನ ನಡೆಸಲಾಗುವದು ಎಂಬ ಹೇಳಿದರು. ಈ ಸಂದರ್ಭದಲ್ಲಿ ರಾಜ್ಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಶರಣಪ್ಪ ವಡಗೇರಿ, ನಿಕಟ ಪೂರ್ವ ‌ಕನ್ನಡ ಸಾಹಿತ್ಯ ಪರಿಷತ್ತಿನ ‌ಅಧ್ಯಕ್ಷ ಹನಮೇಶ ಗುಮಗೇರಾ, ರವೀಂದ್ರ ಬಾಕಳೆ, ಉಮೇಶ ಹಿರೇಮಠ, ಸಾಹಿತಿಗಳಾದ ಅಮರೇಗೌಡ ಪಾಟೀಲ ಜಾಲಿಹಾಳ, ದೇವರಾಜ ವಿಶ್ವ ಕರ್ಮ, ದೊಡ್ಡಪ್ಪ ಕೈಲವಾಡಗಿ, ಹ.ಯ.ಈಟಿಯವರ್, ಆರ್.ಕೆ.ಸುಬೇದಾರ, ವಿದ್ಯಾ ಕಂಪಾಪೂರಮಠ, ಎಸ್.ಜೆ.ಕಡೆಮನಿ, ಶ್ರೀನಿವಾಸ ಕಟ್ಲಿ, ನಿಂಗಪ್ಪ ಸಜ್ಜನ್, ಚನ್ನಪ್ಪ ಬಾವಿಮನಿ, ಸಂತೋಷ ತೋಟದ್, ಹನಮೇಶ ‌ಶಾಖಾಪೂರ, ಕ.ಕಾ.ಪ.ಸ.ತಾಲೂಕು ಅಧ್ಯಕ್ಷ ಪವಾಡೆಪ್ಪ ಚೌಡ್ಕಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ‌ರಾಜ್ಯ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ವಿಜೇತ ಲಲಿತಮ್ಮ ಹಿರೇಮಠ ಇವರಿಗೆ ಸನ್ಮಾನಿಸಿ ಗೌರವಿಸಿದರು.
    2
    ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ವಿಶೇಷ ಸನ್ಮಾನ.

ಕುಷ್ಟಗಿ:- ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಕುಷ್ಟಗಿ ಪಟ್ಟಣದಲ್ಲಿ ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ, ದ್ವೀತಿಯ ಮತ್ತು ಅತಿ ಹೆಚ್ಚು ಅಂಕಪಡೆದ ಕಲಾ, ವಾಣಿಜ್ಯ, ವಿಜ್ಞಾನ ವಿಭಾಗದ ವಿಧ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ ಏರ್ಪಡಿಸಲಾಗಿದೆ ಎಂದು ಕುಷ್ಟಗಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಲೆಂಕಪ್ಪ ವಾಲಿಕಾರ ತಿಳಿಸಿದರು.
ಇಲ್ಲಿನ ಹಳೆ ಪ್ರವಾಸಿ ಮಂದಿರದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು 2025- 2026ನೇ ಸಾಲಿನ  ಈ ವರ್ಷದ ಕೊಪ್ಪಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ತಾಲೂಕಿನ ಮುದೇನೂರು ಗ್ರಾಮದಲ್ಲಿ ಹಮ್ಮಿಕೊಳ್ಳಬೇಕಾಗಿತ್ತು. ಕಾರಣಾಂತರಗಳಿಂದ ಮುದೇನೂರು ಗ್ರಾಮದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಮಾಡಲು ಆಗುವುದಿಲ್ಲ ಆದರೆ ಮುಂದಿನ ತಿಂಗಳಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಮಾಡಲು ಕನ್ನಡ ಸಾಹಿತ್ಯ ಪರಿಷತ್ತಿನ ಎಲ್ಲಾ  ಪದಾಧಿಕಾರಿಗಳಿಂದ ಮತ್ತು ಎಲ್ಲಾ ಸದಸ್ಯರಿಂದ ಒಪ್ಪಿಗೆ ಪಡೆಯಲಾಗಿದೆ. ಮುಂದಿನ ದಿನಮಾನದಲ್ಲಿ ಯಾವ ಕಡೆ ಸಮ್ಮೇಳನ ನೆಡೆಸಿದರೆ ಸೂಕ್ತ ಆಗುತ್ತದೆ ಎಂಬ ತೀರ್ಮಾನ ತೆಗೆದುಕೊಂಡು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಮಾಡಲಾಗುವದು ಎಂದರು.
ಅದರಂತೆ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಎಸ್.ಎಸ್‌ಎಲ್.ಸಿ. ಮತ್ತು ಯುಪಿಸಿ ಮಕ್ಕಳಿಗೆ ವಿಶೇಷ  ಸನ್ಮಾನ ಸಮಾರಂಭ ಏರ್ಪಡಿಸಿಲಾಗುತ್ತಿದೆ ಆದ್ದರಿಂದ ತಾಲೂಕಿನ ಪ್ರಥಮ, ದ್ವೀತಿಯ ಸ್ಥಾನದಲ್ಲಿ ಹಾಗೂ ಅತಿ ಹೆಚ್ಚು ಅಂಕ ಪಡೆದ ಮಕ್ಕಳಿಗೆ ಸನ್ಮಾನಿಸಲಾಗುವದು ಈ ಒಂದು ಕಾರ್ಯಕ್ರಮಕ್ಕೆ ಪ್ರತಿಯೊಬ್ಬರ ಸಲಹೆ ಸಹಕಾರ ಬಹಳ ಅಗತ್ಯವಾಗಿದ್ದು ಈ ಒಂದು ಸಮಾರಂಭವನ್ನು ಯಶಸ್ವಿಗೊಳಿಸಬೇಕಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಶರಣೇಗೌಡ ಪಾಟೀಲ ಮಾತನಾಡಿ ಯಾವುದೇ ಕಾರ್ಯಕ್ರಮ ಮಾಡಬೇಕಾದರೆ ಮೊದಲು ಸೂಕ್ತ ತೀರ್ಮಾನ ತೆಗೆದುಕೊಂಡು ಸಭೆ ಸಮಾರಂಭ ಏರ್ಪಡಿಸಬೇಕಾಗುತ್ತದೆ ಈ ವರ್ಷದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಕುಷ್ಟಗಿ ತಾಲೂಕಿನಲ್ಲಿ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ ಆದರೆ ಪ್ರತಿಯೊಬ್ಬರ ಸಲಹೆ ಸಹಕಾರ ಅಗತ್ಯವಾಗಿದೆ ಸೂಕ್ತ ನಿರ್ಧಾರದೊಂದಿಗೆ ಜಿಲ್ಲಾ ಸಮ್ಮೇಳನ ನಡೆಸಲಾಗುವದು ಎಂಬ ಹೇಳಿದರು.
ಈ ಸಂದರ್ಭದಲ್ಲಿ ರಾಜ್ಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಶರಣಪ್ಪ ವಡಗೇರಿ, ನಿಕಟ ಪೂರ್ವ ‌ಕನ್ನಡ ಸಾಹಿತ್ಯ ಪರಿಷತ್ತಿನ ‌ಅಧ್ಯಕ್ಷ ಹನಮೇಶ ಗುಮಗೇರಾ, ರವೀಂದ್ರ ಬಾಕಳೆ, ಉಮೇಶ ಹಿರೇಮಠ, ಸಾಹಿತಿಗಳಾದ ಅಮರೇಗೌಡ ಪಾಟೀಲ ಜಾಲಿಹಾಳ, ದೇವರಾಜ ವಿಶ್ವ ಕರ್ಮ, ದೊಡ್ಡಪ್ಪ ಕೈಲವಾಡಗಿ, ಹ.ಯ.ಈಟಿಯವರ್, ಆರ್.ಕೆ.ಸುಬೇದಾರ, ವಿದ್ಯಾ ಕಂಪಾಪೂರಮಠ, ಎಸ್.ಜೆ.ಕಡೆಮನಿ, ಶ್ರೀನಿವಾಸ ಕಟ್ಲಿ, ನಿಂಗಪ್ಪ ಸಜ್ಜನ್, ಚನ್ನಪ್ಪ ಬಾವಿಮನಿ, ಸಂತೋಷ ತೋಟದ್, ಹನಮೇಶ ‌ಶಾಖಾಪೂರ, ಕ.ಕಾ.ಪ.ಸ.ತಾಲೂಕು ಅಧ್ಯಕ್ಷ ಪವಾಡೆಪ್ಪ ಚೌಡ್ಕಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ‌ರಾಜ್ಯ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ವಿಜೇತ ಲಲಿತಮ್ಮ ಹಿರೇಮಠ ಇವರಿಗೆ ಸನ್ಮಾನಿಸಿ ಗೌರವಿಸಿದರು.
    user_Pavadeppa c choudiki
    Pavadeppa c choudiki
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    1 hr ago
  • ರೈಲ್ವೆ ಕಾಮಗಾರಿಯ ಕಂದಕದಲ್ಲಿ ಮುಳುಗಿ 17 ವರ್ಷದ ಬಾಲಕ ಸಾವು: ಗ್ರಾಮಸ್ಥರಲ್ಲಿ ಆತಂಕ ಕುಷ್ಟಗಿ: ತಾಲೂಕಿನ ವಿವಿಧೆಡೆ ರೈಲ್ವೆ ಇಲಾಖೆಯ ಕಾಮಗಾರಿಗಾಗಿ ಮಣ್ಣು (ಮರಂ) ತೆಗೆಯಲು ನಿರ್ಮಿಸಲಾಗಿರುವ ಆಳವಾದ ಕಂದಕಗಳು ಇದೀಗ ಸಾವಿನ ಬಲೆಗಳಾಗಿ ಪರಿಣಮಿಸುತ್ತಿರುವ ಆತಂಕಕಾರಿ ಘಟನೆಗಳು ಬೆಳಕಿಗೆ ಬರುತ್ತಿವೆ. ವಣಗೇರಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣಗೊಂಡಿದ್ದ ನೀರು ತುಂಬಿದ ಕಂದಕದಲ್ಲಿ ಈಜಲು ತೆರಳಿದ್ದ ಕೆ.ಬೋದೂರು ಗ್ರಾಮದ 17 ವರ್ಷದ ಬಾಲಕ ನೀರಿನಲ್ಲಿ ಮುಳುಗಿ ಮೃತಪಟ್ಟ ದುರ್ಘಟನೆ ನಡೆದಿದೆ. ವಣಗೇರಿ ಗ್ರಾಮದ ಸರ್ವೇ ನಂ. 24/1/3ರ ಜಮೀನಿನಲ್ಲಿ ರೈಲ್ವೆ ಕಾಮಗಾರಿಗಾಗಿ ಸುಮಾರು 6 ಎಕರೆ ಪ್ರದೇಶದಲ್ಲಿ ಮಣ್ಣು ತೆಗೆಯಲಾಗಿತ್ತು. ಇದರಿಂದ ಸುಮಾರು 45ರಿಂದ 50 ಅಡಿ ಆಳದ ಬೃಹತ್ ಕಂದಕ ನಿರ್ಮಾಣವಾಗಿದ್ದು, ಮಳೆ ಹಾಗೂ ಬಸಿ ನೀರು ತುಂಬಿ ಸಂಪೂರ್ಣ ಜಲಾವೃತಗೊಂಡಿತ್ತು. ಕೆ.ಬೋದೂರು ಗ್ರಾಮದ ಹನುಮಂತಪ್ಪ ತಂದೆ ಬಸವರಾಜ ಗೊರೆಬಾಳ (17) ಹಾಗೂ ಇನ್ನೊಬ್ಬ ಬಾಲಕ ಈಜಲು ಕಂದಕದ ಬಳಿ ತೆರಳಿದ್ದ ವೇಳೆ, ಆಳದ ಅರಿವಿಲ್ಲದೆ ನೀರಿನ ಸೆಳೆತಕ್ಕೆ ಸಿಲುಕಿ ಹನುಮಂತಪ್ಪ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ತಹಶೀಲ್ದಾರ ಅಶೋಕ ಶಿಗ್ಗಾಂವಿ, ಅಗ್ನಿಶಾಮಕ ಠಾಣಾಧಿಕಾರಿ ಮಾಳಿಂಗರಾಯ ಹಾಗೂ ಸಿಬ್ಬಂದಿ, ಕುಷ್ಟಗಿ ಪಿಎಸ್‌ಐ ಹನಮಂತಪ್ಪ ತಳವಾರ ನೇತೃತ್ವದ ಪೊಲೀಸ್ ತಂಡ ಸ್ಥಳಕ್ಕೆ ಭೇಟಿ ನೀಡಿ ಶೋಧ ಕಾರ್ಯಾಚರಣೆ ಆರಂಭಿಸಿತು. ನಿನ್ನೆ ಆರಂಭವಾದ ನಿರಂತರ ಕಾರ್ಯಾಚರಣೆಯ ಬಳಿಕ ಇಂದು ಬೆಳಿಗ್ಗೆ ಸುಮಾರು 9.30ಕ್ಕೆ ಬಾಲಕನ ಮೃತದೇಹ ಪತ್ತೆಯಾಯಿತು. ವಣಗೇರಿ ಮಾತ್ರವಲ್ಲದೆ ತಾಲೂಕಿನ ಟೆಂಗುಂಟಿ, ಕೆ.ಹೊಸೂರು, ಕಂದಕೂರು ಹಾಗೂ ಜಿ.ಗಂಗನಾಳ ಸೇರಿದಂತೆ ಹಲವು ಪ್ರದೇಶಗಳಲ್ಲಿ ರೈಲ್ವೆ ಯೋಜನೆಗಾಗಿ ಮಣ್ಣು ಮತ್ತು ಮರಳು ತೆಗೆಯಲಾಗಿದ್ದು, ಆಳವಾದ ಕಂದಕಗಳು ನಿರ್ಮಾಣಗೊಂಡಿವೆ. ಕೆಲವೆಡೆ ನೀರು ತುಂಬಿಕೊಂಡಿದ್ದು, ಇನ್ನೂ ಕೆಲವು ಸ್ಥಳಗಳಲ್ಲಿ ಅಪಾಯಕಾರಿಯಾಗಿ ತೆರೆದ ಸ್ಥಿತಿಯಲ್ಲಿವೆ. ಇದರಿಂದ ಗ್ರಾಮಸ್ಥರು ಹಾಗೂ ಜಾನುವಾರುಗಳಿಗೆ ಪ್ರಾಣಾಪಾಯ ಎದುರಾಗುವ ಭೀತಿ ಹೆಚ್ಚಾಗಿದೆ. ಸುರಕ್ಷತಾ ಕ್ರಮಗಳಿಲ್ಲದೆ ಕಂದಕಗಳನ್ನು ಬಿಟ್ಟಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಮೀನಿನ ಮಾಲೀಕರು ಹಾಗೂ ರೈಲ್ವೆ ಕಾಮಗಾರಿ ನಿರ್ವಹಣೆಯ ನಿರ್ಲಕ್ಷ್ಯವೇ ಈ ದುರ್ಘಟನೆಗೆ ಕಾರಣ ಎಂದು ಆರೋಪಿಸಿರುವ ಸ್ಥಳೀಯರು, ಮೃತ ಬಾಲಕನ ಕುಟುಂಬಕ್ಕೆ ಸರ್ಕಾರ ಹಾಗೂ ರೈಲ್ವೆ ಇಲಾಖೆ ತಕ್ಷಣ ಸೂಕ್ತ ಪರಿಹಾರ ಘೋಷಿಸಬೇಕು ಎಂದು ಒತ್ತಾಯಿಸಿದ್ದಾರೆ. ಇದಲ್ಲದೆ, ಅಪಾಯಕಾರಿ ಕಂದಕಗಳ ಸುತ್ತ ತಂತಿ ಬೇಲಿ ಅಳವಡಿಸುವುದು, ಎಚ್ಚರಿಕೆ ಫಲಕಗಳನ್ನು ಸ್ಥಾಪಿಸುವುದು ಸೇರಿದಂತೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೂಡಲೇ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
    4
    ರೈಲ್ವೆ ಕಾಮಗಾರಿಯ ಕಂದಕದಲ್ಲಿ ಮುಳುಗಿ 17 ವರ್ಷದ ಬಾಲಕ ಸಾವು: ಗ್ರಾಮಸ್ಥರಲ್ಲಿ ಆತಂಕ
ಕುಷ್ಟಗಿ: ತಾಲೂಕಿನ ವಿವಿಧೆಡೆ ರೈಲ್ವೆ ಇಲಾಖೆಯ ಕಾಮಗಾರಿಗಾಗಿ ಮಣ್ಣು (ಮರಂ) ತೆಗೆಯಲು ನಿರ್ಮಿಸಲಾಗಿರುವ ಆಳವಾದ ಕಂದಕಗಳು ಇದೀಗ ಸಾವಿನ ಬಲೆಗಳಾಗಿ ಪರಿಣಮಿಸುತ್ತಿರುವ ಆತಂಕಕಾರಿ ಘಟನೆಗಳು ಬೆಳಕಿಗೆ ಬರುತ್ತಿವೆ. ವಣಗೇರಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣಗೊಂಡಿದ್ದ ನೀರು ತುಂಬಿದ ಕಂದಕದಲ್ಲಿ ಈಜಲು ತೆರಳಿದ್ದ ಕೆ.ಬೋದೂರು ಗ್ರಾಮದ 17 ವರ್ಷದ ಬಾಲಕ ನೀರಿನಲ್ಲಿ ಮುಳುಗಿ ಮೃತಪಟ್ಟ ದುರ್ಘಟನೆ ನಡೆದಿದೆ.
ವಣಗೇರಿ ಗ್ರಾಮದ ಸರ್ವೇ ನಂ. 24/1/3ರ ಜಮೀನಿನಲ್ಲಿ ರೈಲ್ವೆ ಕಾಮಗಾರಿಗಾಗಿ ಸುಮಾರು 6 ಎಕರೆ ಪ್ರದೇಶದಲ್ಲಿ ಮಣ್ಣು ತೆಗೆಯಲಾಗಿತ್ತು. ಇದರಿಂದ ಸುಮಾರು 45ರಿಂದ 50 ಅಡಿ ಆಳದ ಬೃಹತ್ ಕಂದಕ ನಿರ್ಮಾಣವಾಗಿದ್ದು, ಮಳೆ ಹಾಗೂ ಬಸಿ ನೀರು ತುಂಬಿ ಸಂಪೂರ್ಣ ಜಲಾವೃತಗೊಂಡಿತ್ತು.
ಕೆ.ಬೋದೂರು ಗ್ರಾಮದ ಹನುಮಂತಪ್ಪ ತಂದೆ ಬಸವರಾಜ ಗೊರೆಬಾಳ (17) ಹಾಗೂ ಇನ್ನೊಬ್ಬ ಬಾಲಕ ಈಜಲು ಕಂದಕದ ಬಳಿ ತೆರಳಿದ್ದ ವೇಳೆ, ಆಳದ ಅರಿವಿಲ್ಲದೆ ನೀರಿನ ಸೆಳೆತಕ್ಕೆ ಸಿಲುಕಿ ಹನುಮಂತಪ್ಪ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ತಹಶೀಲ್ದಾರ ಅಶೋಕ ಶಿಗ್ಗಾಂವಿ, ಅಗ್ನಿಶಾಮಕ ಠಾಣಾಧಿಕಾರಿ ಮಾಳಿಂಗರಾಯ ಹಾಗೂ ಸಿಬ್ಬಂದಿ, ಕುಷ್ಟಗಿ ಪಿಎಸ್‌ಐ ಹನಮಂತಪ್ಪ ತಳವಾರ ನೇತೃತ್ವದ ಪೊಲೀಸ್ ತಂಡ ಸ್ಥಳಕ್ಕೆ ಭೇಟಿ ನೀಡಿ ಶೋಧ ಕಾರ್ಯಾಚರಣೆ ಆರಂಭಿಸಿತು. ನಿನ್ನೆ ಆರಂಭವಾದ ನಿರಂತರ ಕಾರ್ಯಾಚರಣೆಯ ಬಳಿಕ ಇಂದು ಬೆಳಿಗ್ಗೆ ಸುಮಾರು 9.30ಕ್ಕೆ ಬಾಲಕನ ಮೃತದೇಹ ಪತ್ತೆಯಾಯಿತು.
ವಣಗೇರಿ ಮಾತ್ರವಲ್ಲದೆ ತಾಲೂಕಿನ ಟೆಂಗುಂಟಿ, ಕೆ.ಹೊಸೂರು, ಕಂದಕೂರು ಹಾಗೂ ಜಿ.ಗಂಗನಾಳ ಸೇರಿದಂತೆ ಹಲವು ಪ್ರದೇಶಗಳಲ್ಲಿ ರೈಲ್ವೆ ಯೋಜನೆಗಾಗಿ ಮಣ್ಣು ಮತ್ತು ಮರಳು ತೆಗೆಯಲಾಗಿದ್ದು, ಆಳವಾದ ಕಂದಕಗಳು ನಿರ್ಮಾಣಗೊಂಡಿವೆ. ಕೆಲವೆಡೆ ನೀರು ತುಂಬಿಕೊಂಡಿದ್ದು, ಇನ್ನೂ ಕೆಲವು ಸ್ಥಳಗಳಲ್ಲಿ ಅಪಾಯಕಾರಿಯಾಗಿ ತೆರೆದ ಸ್ಥಿತಿಯಲ್ಲಿವೆ. ಇದರಿಂದ ಗ್ರಾಮಸ್ಥರು ಹಾಗೂ ಜಾನುವಾರುಗಳಿಗೆ ಪ್ರಾಣಾಪಾಯ ಎದುರಾಗುವ ಭೀತಿ ಹೆಚ್ಚಾಗಿದೆ.
ಸುರಕ್ಷತಾ ಕ್ರಮಗಳಿಲ್ಲದೆ ಕಂದಕಗಳನ್ನು ಬಿಟ್ಟಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಮೀನಿನ ಮಾಲೀಕರು ಹಾಗೂ ರೈಲ್ವೆ ಕಾಮಗಾರಿ ನಿರ್ವಹಣೆಯ ನಿರ್ಲಕ್ಷ್ಯವೇ ಈ ದುರ್ಘಟನೆಗೆ ಕಾರಣ ಎಂದು ಆರೋಪಿಸಿರುವ ಸ್ಥಳೀಯರು, ಮೃತ ಬಾಲಕನ ಕುಟುಂಬಕ್ಕೆ ಸರ್ಕಾರ ಹಾಗೂ ರೈಲ್ವೆ ಇಲಾಖೆ ತಕ್ಷಣ ಸೂಕ್ತ ಪರಿಹಾರ ಘೋಷಿಸಬೇಕು ಎಂದು ಒತ್ತಾಯಿಸಿದ್ದಾರೆ.
ಇದಲ್ಲದೆ, ಅಪಾಯಕಾರಿ ಕಂದಕಗಳ ಸುತ್ತ ತಂತಿ ಬೇಲಿ ಅಳವಡಿಸುವುದು, ಎಚ್ಚರಿಕೆ ಫಲಕಗಳನ್ನು ಸ್ಥಾಪಿಸುವುದು ಸೇರಿದಂತೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೂಡಲೇ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
    user_Maruti Gumagera
    Maruti Gumagera
    Farmer ಕುಷ್ಟಗಿ, ಕೊಪ್ಪಳ, ಕರ್ನಾಟಕ•
    2 hrs ago
  • ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಮೇ 10ರಂದು ತಾಯಿ ದಿನವನ್ನು ತಾಲೂಕಿನಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಸೇರಿದಂತೆ ಹಿರಿಯ ಸಾಹಿತಿಗಳು, ಪತ್ರಕರ್ತರು ಮತ್ತು ಸಾರ್ವಜನಿಕರು ತಮ್ಮ ತಾಯಂದಿರನ್ನು ಗೌರವಿಸಿ, ಸಿಹಿ ಹಂಚಿ ವಂದಿಸಿದರು. ಈ ದಿನ ತಾಯಿಯ ಆದರ್ಶ ಗುಣಗಳನ್ನು ಸ್ಮರಿಸಿ, ಪೋಷಕರನ್ನು ಪೂಜಿಸುವುದರ ಮಹತ್ವವನ್ನು ಸಾರಲಾಯಿತು.
    4
    ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಮೇ 10ರಂದು ತಾಯಿ ದಿನವನ್ನು ತಾಲೂಕಿನಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಸೇರಿದಂತೆ ಹಿರಿಯ ಸಾಹಿತಿಗಳು, ಪತ್ರಕರ್ತರು ಮತ್ತು ಸಾರ್ವಜನಿಕರು ತಮ್ಮ ತಾಯಂದಿರನ್ನು ಗೌರವಿಸಿ, ಸಿಹಿ ಹಂಚಿ ವಂದಿಸಿದರು. ಈ ದಿನ ತಾಯಿಯ ಆದರ್ಶ ಗುಣಗಳನ್ನು ಸ್ಮರಿಸಿ, ಪೋಷಕರನ್ನು ಪೂಜಿಸುವುದರ ಮಹತ್ವವನ್ನು ಸಾರಲಾಯಿತು.
    user_ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ
    ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ
    ವರದಿಗಾರ ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    8 hrs ago
  • ಕುಷ್ಟಗಿ ತಹಸೀಲ್ ಕಚೇರಿಯಲ್ಲಿ ತಾಲೂಕಾಡಳಿತದಿಂದ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಈ ವೇಳೆ ಮಾತನಾಡಿದ ಮುಖಂಡರು, 14ನೇ ಶತಮಾನದ ಈ ಭಕ್ತೆಯು ತಮ್ಮ ತ್ಯಾಗ, ಭಕ್ತಿ ಹಾಗೂ ಧಾರ್ಮಿಕ ನಿಷ್ಠೆಯಿಂದ ಸಮಾಜಕ್ಕೆ ಆದರ್ಶಪ್ರಾಯರಾಗಿದ್ದಾರೆ ಎಂದು ಸ್ಮರಿಸಿದರು. ಅವರು ಮಹಿಳೆಯರಲ್ಲಿ ಧೈರ್ಯ, ಸಹನೆ, ನಿಸ್ವಾರ್ಥ ಸೇವೆ ಹಾಗೂ ಭಕ್ತಿಯ ಸಂದೇಶವನ್ನು ಸಾರಿದರು.
    1
    ಕುಷ್ಟಗಿ ತಹಸೀಲ್ ಕಚೇರಿಯಲ್ಲಿ ತಾಲೂಕಾಡಳಿತದಿಂದ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಈ ವೇಳೆ ಮಾತನಾಡಿದ ಮುಖಂಡರು, 14ನೇ ಶತಮಾನದ ಈ ಭಕ್ತೆಯು ತಮ್ಮ ತ್ಯಾಗ, ಭಕ್ತಿ ಹಾಗೂ ಧಾರ್ಮಿಕ ನಿಷ್ಠೆಯಿಂದ ಸಮಾಜಕ್ಕೆ ಆದರ್ಶಪ್ರಾಯರಾಗಿದ್ದಾರೆ ಎಂದು ಸ್ಮರಿಸಿದರು. ಅವರು ಮಹಿಳೆಯರಲ್ಲಿ ಧೈರ್ಯ, ಸಹನೆ, ನಿಸ್ವಾರ್ಥ ಸೇವೆ ಹಾಗೂ ಭಕ್ತಿಯ ಸಂದೇಶವನ್ನು ಸಾರಿದರು.
    user_Bhimasenrao Kulkarni Kushtagi
    Bhimasenrao Kulkarni Kushtagi
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    18 hrs ago
  • ಈಜಲು ಹೋಗಿ ನೀರಲ್ಲಿ ಮುಳುಗಿ ಕೆ.ಬೋದೂರು ಗ್ರಾಮದ ಬಾಲಕ ಸಾವು ಕುಷ್ಟಗಿ:- ತಾಲೂಕಿನ ವಣಗೇರಿ ಸೀಮಾದಲ್ಲಿ ಸರ್ವೇ ನಂಬರ-25/1ಹಿಸ್ಸಾ 2 ಬಿ ಸೇತುಕುಮಾರ‌ ತಂದೆ ಬಿ ಜಯರಾಮಿ ರಡ್ಡಿ ಬಿನ್ ಜಯರಾಮಿ ರಡ್ಡಿ ಎಂಬುವವರಿಗೆ ಸೇರಿದ 7 ಎಕರೆ 25 ಗುಂಟೆ ಹೊಲದಲ್ಲಿ ಇರುವ ಮರಮ್ ತೆಗೆದ ಬೃಹತ್ ಆಕಾರದ ಗುಂಡಿಯ ನಿಂತ ನೀರಿನಲ್ಲಿ ಈಜಲು ಹೋದಾಗ ಮೇಲಿಂದ ಹಾರಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ರವಿವಾರ ನೆಡೆದಿದೆ. ಮೃತಪಟ್ಟ ಬಾಲಕ ಕುಷ್ಟಗಿ ತಾಲೂಕಿನ ಕೆ.ಬೋದೂರು ಗ್ರಾಮದ ನಿವಾಸಿ ಹನಮಂತಪ್ಪ ತಂದೆ ಬಸವರಾಜ ಗೋರೆಬಾಳ ವಯಸ್ಸು (17) ಎಂದು ತಿಳಿಸಲಾಗಿದೆ. ಮೃತ ಬಾಲಕನು ತನ್ನ ಸ್ನೇಹಿತರೊಂದಿಗೆ ತನ್ನ ಗ್ರಾಮಕ್ಕೆ ಬಹಳ ಹತ್ತಿರಕ್ಕೆ ಇರುವುದರಿಂದ ಈಜಲು ತೆರಳಿದ್ದಾರೆ. ಈ ಮರಮ್ ತೆಗೆದ ಹೊಲದಲ್ಲಿ ಜೆಸಿಬಿ ಮತ್ತು ಹಿಟಾಚಿ ಮೂಲಕ ಮಣ್ಣನ್ನು ಗದಗವಾಡಿ ರೈಲ್ವೆ ಕಾಮಗಾರಿಗೆ ಬಳಸಲಾಗಿದೆ. ಸಾಕಷ್ಟು ಪ್ರಮಾಣದಲ್ಲಿ ಮರಮ್ ತೆಗೆದಿದ್ದರಿಂದ ಸುಮಾರು 40 ರಿಂದ 50 ಫೀಟ್ ಆಳಕ್ಕೆ ಅಗಲಾಗಿದೆ. ಬಹಳ ಆಳಕ್ಕೆ ಆಗಿದೆದ್ದರಿಂದ ಅಂತರ್ಜಲ ಹೆಚ್ಚಾಗಿ ನೀರು ಸಾಕಷ್ಟ ಪ್ರಮಾಣದಲ್ಲಿ ಸಂಗ್ರಹವಾಗಿದೆ ಬೇಸಿಗೆ ಕಾಲ ಆಗಿರೋದ್ರಿಂದ ಅತಿಯಾದ ಬಿಸಿಲು ಇರುವ ಕಾರಣ ಬಾಲಕ ಮತ್ತು ಬಾಲಕನ ಸ್ನೇಹಿತರು ಈಜಲು ಹೋಗಿದ್ದಾರೆ. ಈಸಲು ಹೋದ ಸಮಯದಲ್ಲಿ ಹನುಮಂತಪ್ಪನ ಸ್ನೇಹಿತರು ಈಜಿ ದಡ ಸೇರಿದರೆ ಬಾಲಕ ಹನಮಂತಪ್ಪನು ಮಾತ್ರ ಮಣ್ಣಿನೊಳಗೆ ಸಿಲುಕಿ ನೀರಿನಲ್ಲಿ ಹೆಸರುಗಟ್ಟಿ ಮೃತಪಟ್ಟಿದ್ದಾನೆ. ಈ ಘಟನೆ ನಿನ್ನೆ ರವಿವಾರ ಬೆಳಿಗ್ಗೆ 12 ಗಂಟೆಗೆ ನೆಡೆದಿದ್ದು ತಕ್ಷಣಾ ಮೃತಪಟ್ಟ ಬಾಲಕನ ಸ್ನೇಹಿತರು ಕೆ.ಬೋದುರು ಗ್ರಾಮದಲ್ಲಿ ತಿಳಿಸಿದ್ದಾರೆ. ತಕ್ಷಣಾ ಕುಷ್ಟಗಿ ಪೋಲಿಸ್ ಠಾಣೆಯ ಪಿ.ಎಸ್.ಐ ಹನಮಂತಪ್ಪ ತಳವಾರ್ ಹಾಗೂ ಅಗ್ನಿಶಾಮಕ ದಳದವರು ಸೇರಿ ಶೋಧ ಕಾರ್ಯ ನಡೆಸಿದ್ದಾರೆ. ಆದರೆ ರವಿವಾರ ಬೆಳಿಗ್ಗೆಯಿಂದ ತಡ ರಾತ್ರಿ ಆಗೋವರೆಗೂ ಶೋಧ ನಡೆಸಿದರು ಸಹ ಮೃತಪಟ್ಟ ಬಾಲಕನ ಶವ ಪತ್ತೆ ಆಗಲಿಲ್ಲ. ನಂತರ ಸೋಮವಾರ ಬೆಳಗ್ಗೆ ಮೃತಪಟ್ಟ ಬಾಲಕ ಶಾವ ಪತ್ತೆಯಾಗಿದೆ ಎಂದು ಪೊಲೀಸರ ಖಚಿತ ಮಾಹಿತಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಪಿಎಸ್ಐ ಹನಮಂತಪ್ಪ ತಳವಾರ, ಎ.ಎಸ್.ಐ ತಾಯಪ್ಪ ಮತ್ತು ಅಗ್ನಿ ಶಾಮಕದಳ ಸಿಬ್ಬಂದಿಗಳು ಕಾರ್ಯಶೋದವನ್ನು ನಡೆಸಿ ಮೃತಪಟ್ಟ ಬಾಲಕನ ಶವವನ್ನು ಪತ್ತೆ ಹಚ್ಚಿ ಹೊರ ತೆಗೆಯಲು ತ ಯಶಸ್ವಿಯಾದರು. ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    2
    ಈಜಲು ಹೋಗಿ ನೀರಲ್ಲಿ ಮುಳುಗಿ     ಕೆ.ಬೋದೂರು ಗ್ರಾಮದ ಬಾಲಕ ಸಾವು
ಕುಷ್ಟಗಿ:- ತಾಲೂಕಿನ ವಣಗೇರಿ ಸೀಮಾದಲ್ಲಿ ಸರ್ವೇ ನಂಬರ-25/1ಹಿಸ್ಸಾ 2 ಬಿ ಸೇತುಕುಮಾರ‌ ತಂದೆ ಬಿ ಜಯರಾಮಿ ರಡ್ಡಿ ಬಿನ್ ಜಯರಾಮಿ ರಡ್ಡಿ ಎಂಬುವವರಿಗೆ ಸೇರಿದ 7 ಎಕರೆ 25 ಗುಂಟೆ ಹೊಲದಲ್ಲಿ ಇರುವ ಮರಮ್ ತೆಗೆದ ಬೃಹತ್ ಆಕಾರದ ಗುಂಡಿಯ ನಿಂತ ನೀರಿನಲ್ಲಿ ಈಜಲು ಹೋದಾಗ ಮೇಲಿಂದ ಹಾರಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ರವಿವಾರ ನೆಡೆದಿದೆ.
ಮೃತಪಟ್ಟ ಬಾಲಕ  ಕುಷ್ಟಗಿ ತಾಲೂಕಿನ ಕೆ.ಬೋದೂರು ಗ್ರಾಮದ ನಿವಾಸಿ ಹನಮಂತಪ್ಪ ತಂದೆ ಬಸವರಾಜ ಗೋರೆಬಾಳ ವಯಸ್ಸು (17) ಎಂದು ತಿಳಿಸಲಾಗಿದೆ.
ಮೃತ ಬಾಲಕನು ತನ್ನ ಸ್ನೇಹಿತರೊಂದಿಗೆ ತನ್ನ ಗ್ರಾಮಕ್ಕೆ ಬಹಳ ಹತ್ತಿರಕ್ಕೆ ಇರುವುದರಿಂದ ಈಜಲು ತೆರಳಿದ್ದಾರೆ. 
ಈ ಮರಮ್ ತೆಗೆದ ಹೊಲದಲ್ಲಿ ಜೆಸಿಬಿ ಮತ್ತು ಹಿಟಾಚಿ ಮೂಲಕ ಮಣ್ಣನ್ನು ಗದಗವಾಡಿ ರೈಲ್ವೆ ಕಾಮಗಾರಿಗೆ ಬಳಸಲಾಗಿದೆ. ಸಾಕಷ್ಟು ಪ್ರಮಾಣದಲ್ಲಿ ಮರಮ್ ತೆಗೆದಿದ್ದರಿಂದ ಸುಮಾರು 40 ರಿಂದ 50 ಫೀಟ್ ಆಳಕ್ಕೆ ಅಗಲಾಗಿದೆ. ಬಹಳ ಆಳಕ್ಕೆ ಆಗಿದೆದ್ದರಿಂದ ಅಂತರ್ಜಲ ಹೆಚ್ಚಾಗಿ ನೀರು ಸಾಕಷ್ಟ ಪ್ರಮಾಣದಲ್ಲಿ ಸಂಗ್ರಹವಾಗಿದೆ ಬೇಸಿಗೆ ಕಾಲ ಆಗಿರೋದ್ರಿಂದ ಅತಿಯಾದ ಬಿಸಿಲು ಇರುವ ಕಾರಣ ಬಾಲಕ ಮತ್ತು ಬಾಲಕನ ಸ್ನೇಹಿತರು ಈಜಲು ಹೋಗಿದ್ದಾರೆ.  ಈಸಲು ಹೋದ ಸಮಯದಲ್ಲಿ ಹನುಮಂತಪ್ಪನ ಸ್ನೇಹಿತರು ಈಜಿ ದಡ ಸೇರಿದರೆ ಬಾಲಕ ಹನಮಂತಪ್ಪನು ಮಾತ್ರ ಮಣ್ಣಿನೊಳಗೆ ಸಿಲುಕಿ ನೀರಿನಲ್ಲಿ ಹೆಸರುಗಟ್ಟಿ ಮೃತಪಟ್ಟಿದ್ದಾನೆ.  ಈ ಘಟನೆ  ನಿನ್ನೆ ರವಿವಾರ ಬೆಳಿಗ್ಗೆ 12 ಗಂಟೆಗೆ ನೆಡೆದಿದ್ದು ತಕ್ಷಣಾ ಮೃತಪಟ್ಟ ಬಾಲಕನ ಸ್ನೇಹಿತರು ಕೆ.ಬೋದುರು ಗ್ರಾಮದಲ್ಲಿ ತಿಳಿಸಿದ್ದಾರೆ. ತಕ್ಷಣಾ ಕುಷ್ಟಗಿ ಪೋಲಿಸ್ ಠಾಣೆಯ ಪಿ.ಎಸ್.ಐ ಹನಮಂತಪ್ಪ ತಳವಾರ್ ಹಾಗೂ  ಅಗ್ನಿಶಾಮಕ ದಳದವರು ಸೇರಿ ಶೋಧ ಕಾರ್ಯ ನಡೆಸಿದ್ದಾರೆ. ಆದರೆ ರವಿವಾರ ಬೆಳಿಗ್ಗೆಯಿಂದ ತಡ ರಾತ್ರಿ ಆಗೋವರೆಗೂ ಶೋಧ ನಡೆಸಿದರು ಸಹ ಮೃತಪಟ್ಟ ಬಾಲಕನ ಶವ ಪತ್ತೆ ಆಗಲಿಲ್ಲ. ನಂತರ  ಸೋಮವಾರ  ಬೆಳಗ್ಗೆ ಮೃತಪಟ್ಟ ಬಾಲಕ ಶಾವ ಪತ್ತೆಯಾಗಿದೆ ಎಂದು ಪೊಲೀಸರ ಖಚಿತ ಮಾಹಿತಿ ನೀಡಿದ್ದಾರೆ.
ಈ ಸಂದರ್ಭದಲ್ಲಿ ಪಿಎಸ್ಐ ಹನಮಂತಪ್ಪ ತಳವಾರ, ಎ.ಎಸ್.ಐ ತಾಯಪ್ಪ ಮತ್ತು ಅಗ್ನಿ ಶಾಮಕದಳ ಸಿಬ್ಬಂದಿಗಳು ಕಾರ್ಯಶೋದವನ್ನು ನಡೆಸಿ ಮೃತಪಟ್ಟ ಬಾಲಕನ ಶವವನ್ನು ಪತ್ತೆ ಹಚ್ಚಿ ಹೊರ ತೆಗೆಯಲು ತ ಯಶಸ್ವಿಯಾದರು. ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    user_Pavadeppa c choudiki
    Pavadeppa c choudiki
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    2 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.