ಶ್ರೀ ಚನ್ನಪ್ಪ ಕುನ್ನೂರ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ತು ಹಾಗೂ ವಿವಿಧ ಪಠ್ಯೇತರ ಚಟುವಟಿಕೆಗಳ ಉದ್ಘಾಟನಾ ಸಮಾರಂಭ. ಶಿಗ್ಗಾವಿ:“ಹೊರಗಿನ ಜ್ಞಾನವನ್ನು ವಿದ್ಯಾರ್ಥಿಗಳಲ್ಲಿ ತುಂಬಿ ಅವರನ್ನು ಪ್ರತಿಭಾವಂತರನ್ನಾಗಿಸುವುದು ಪಠ್ಯ ಶಿಕ್ಷಣವಾದರೆ, ಅವರೊಳಗೇ ಅಡಗಿರುವ ಸುಪ್ತ ಪ್ರತಿಭೆಯನ್ನು ಹೊರತಂದು ಸಮಗ್ರ ವ್ಯಕ್ತಿತ್ವ ರೂಪಿಸುವುದು ಪಠ್ಯೇತರ ಚಟುವಟಿಕೆಗಳ ಉದ್ದೇಶವಾಗಿದೆ” ಎಂದು ವಚನ ನಿಧಿ ವನಿತಾ ಸಂಘದ ಕಾರ್ಯದರ್ಶಿ ಶಕುಂತಲಾ ಕೋಣನವರ ಹೇಳಿದರು. ಪಟ್ಟಣದ ಶ್ರೀ ಚನ್ನಪ್ಪ ಕುನ್ನೂರ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ತು ಹಾಗೂ ವಿವಿಧ ಪಠ್ಯೇತರ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ವಿಶೇಷ ಉಪನ್ಯಾಸ ನೀಡಿದ ಅವರು “ಶಾಲಾ ಸಂಸತ್ತಿನ ರಚನೆಯಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ, ಜವಾಬ್ದಾರಿಯ ಪ್ರಜ್ಞೆ ಹಾಗೂ ಸೇವಾ ಮನೋಭಾವ ಬೆಳೆಸಲು ಸಾಧ್ಯ. ಪ್ರಜಾಪ್ರಭುತ್ವದ ಆಶಯಗಳನ್ನು ಶಾಲಾ ಹಂತದಲ್ಲಿಯೇ ಅನುಭವಿಸುವ ಅವಕಾಶ ಇದರಿಂದ ದೊರೆಯುತ್ತದೆ” ಎಂದು ಹೇಳಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪ್ರಾಚಾರ್ಯ ಡಾ. ನಾಗರಾಜ ದ್ಯಾಮನಕೊಪ್ಪ, ಇಂದಿನ ಸಾಮಾಜಿಕ ವ್ಯವಸ್ಥೆ ಅತ್ಯಂತ ಸಂಕೀರ್ಣವಾಗಿದ್ದು, ಇಂತಹ ಸವಾಲಿನ ಪರಿಸರದಲ್ಲಿ ಭವಿಷ್ಯದ ಬದುಕನ್ನು ಎದುರಿಸುವ ಸಾಮರ್ಥ್ಯವನ್ನು ವಿದ್ಯಾರ್ಥಿಗಳು ಶಾಲಾ ಹಂತದಿಂದಲೇ ಬೆಳೆಸಿಕೊಳ್ಳಬೇಕು. ಶಿಕ್ಷಣವು ಕೇವಲ ಪಠ್ಯಪುಸ್ತಕದ ಜ್ಞಾನಕ್ಕೆ ಸೀಮಿತವಾಗದೆ, ಜೀವನವನ್ನು ಎದುರಿಸುವ ಕೌಶಲ್ಯ ಮತ್ತು ಮೌಲ್ಯಗಳನ್ನು ಬೆಳೆಸುವಂತಿರಬೇಕು ಎಂದರು. ಮುಖ್ಯ ಅತಿಥಿ ಎಂ. ಎ. ಗಾಣಿಗೇರ ಮಾತನಾಡಿ, ತಂದೆ-ತಾಯಿ, ಗುರು-ಹಿರಿಯರಿಗೆ ಗೌರವ ನೀಡುವ ಸಂಸ್ಕಾರ ಇತ್ತೀಚಿನ ದಿನಗಳಲ್ಲಿ ಕ್ಷೀಣಿಸುತ್ತಿದೆ. ಆದ್ದರಿಂದ ಪಠ್ಯ ಶಿಕ್ಷಣದ ಜತೆಗೆ ಮಕ್ಕಳಿಗೆ ಮೌಲ್ಯ ಶಿಕ್ಷಣ ನೀಡುವುದು ಇಂದಿನ ಅಗತ್ಯವಾಗಿದೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ವಯೋನಿವೃತ್ತಿ ಹೊಂದಿದ ಎಸ್ಎಫ್ಎಂ ಬಾಲಕಿಯರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಡಿ. ಪಿ. ಕರೂರ ಅವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ತಮ್ಮ ಸೇವಾವಧಿಯ ಸ್ಮರಣೀಯ ಕ್ಷಣಗಳನ್ನು ಮೆಲುಕು ಹಾಕಿ, “ಶಿಕ್ಷಕರಿಗೆ ವಿದ್ಯಾರ್ಥಿಗಳೇ ನಿಜವಾದ ಆಸ್ತಿ” ಎಂದರು. ಕಾರ್ಯಕ್ರಮದ ಮತ್ತೊಂದು ವಿಶೇಷವೆಂದರೆ ವಿದ್ಯಾರ್ಥಿನಿ ಸವಿತಾ ಅಜ್ಜಂಪುರ ತಾನೇ ತಯಾರಿಸಿದ ಸಿಂಹದ ಮುಖವುಳ್ಳ ಸುಂದರ ರಾಷ್ಟ್ರ ಲಾಂಛನವನ್ನು ಶಾಲೆಗೆ ದೇಣಿಗೆಯಾಗಿ ನೀಡಿದ್ದು ಎಲ್ಲರ ಗಮನ ಸೆಳೆಯಿತು. ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಿ. ಎಂ. ಅರಗೋಳ ಅಧ್ಯಕ್ಷತೆ ವಹಿಸಿದ್ದರು. ಎಂ. ಬಿ. ನೀರಲಗಿ, ರೇಣುಕಾ ಹಿರೇಗೌಡ್ರ, ಆರ್. ವಿ. ಹೆಬ್ಬಳ್ಳಿ, ಎಸ್. ಎಸ್. ಘೋಡಗೇರಿ, ಕೆ. ಜಿ. ಮಲ್ಲೂರ, ಕಲ್ಪನಾ ಯಲವಿಗಿ, ಯು. ಎನ್. ಮುದಿಗೌಡ್ರ ಸೇರಿದಂತೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಅಭಿಜ್ಞಾನ ಹುಬ್ಬಳ್ಳಿ ಸ್ವಾಗತಿಸಿದರು. ಅಪೇಕ್ಷಾ ಕಾಮನಹಳ್ಳಿ ಹಾಗೂ ವಂದನಾ ಪುರೋಹಿತ ಕಾರ್ಯಕ್ರಮ ನಿರೂಪಿಸಿದರು. ಸುಷ್ಮಿತಾ ಪಾಟೀಲ ವಂದಿಸಿದರು.
ಶ್ರೀ ಚನ್ನಪ್ಪ ಕುನ್ನೂರ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ತು ಹಾಗೂ ವಿವಿಧ ಪಠ್ಯೇತರ ಚಟುವಟಿಕೆಗಳ ಉದ್ಘಾಟನಾ ಸಮಾರಂಭ. ಶಿಗ್ಗಾವಿ:“ಹೊರಗಿನ ಜ್ಞಾನವನ್ನು ವಿದ್ಯಾರ್ಥಿಗಳಲ್ಲಿ ತುಂಬಿ ಅವರನ್ನು ಪ್ರತಿಭಾವಂತರನ್ನಾಗಿಸುವುದು ಪಠ್ಯ ಶಿಕ್ಷಣವಾದರೆ, ಅವರೊಳಗೇ ಅಡಗಿರುವ ಸುಪ್ತ ಪ್ರತಿಭೆಯನ್ನು ಹೊರತಂದು ಸಮಗ್ರ ವ್ಯಕ್ತಿತ್ವ ರೂಪಿಸುವುದು ಪಠ್ಯೇತರ ಚಟುವಟಿಕೆಗಳ ಉದ್ದೇಶವಾಗಿದೆ” ಎಂದು ವಚನ ನಿಧಿ ವನಿತಾ ಸಂಘದ ಕಾರ್ಯದರ್ಶಿ ಶಕುಂತಲಾ ಕೋಣನವರ ಹೇಳಿದರು. ಪಟ್ಟಣದ ಶ್ರೀ ಚನ್ನಪ್ಪ ಕುನ್ನೂರ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ತು ಹಾಗೂ ವಿವಿಧ ಪಠ್ಯೇತರ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ವಿಶೇಷ ಉಪನ್ಯಾಸ ನೀಡಿದ ಅವರು “ಶಾಲಾ ಸಂಸತ್ತಿನ ರಚನೆಯಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ, ಜವಾಬ್ದಾರಿಯ ಪ್ರಜ್ಞೆ ಹಾಗೂ ಸೇವಾ ಮನೋಭಾವ ಬೆಳೆಸಲು ಸಾಧ್ಯ. ಪ್ರಜಾಪ್ರಭುತ್ವದ ಆಶಯಗಳನ್ನು ಶಾಲಾ ಹಂತದಲ್ಲಿಯೇ ಅನುಭವಿಸುವ ಅವಕಾಶ ಇದರಿಂದ ದೊರೆಯುತ್ತದೆ” ಎಂದು ಹೇಳಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪ್ರಾಚಾರ್ಯ ಡಾ. ನಾಗರಾಜ ದ್ಯಾಮನಕೊಪ್ಪ, ಇಂದಿನ ಸಾಮಾಜಿಕ ವ್ಯವಸ್ಥೆ ಅತ್ಯಂತ ಸಂಕೀರ್ಣವಾಗಿದ್ದು, ಇಂತಹ ಸವಾಲಿನ ಪರಿಸರದಲ್ಲಿ ಭವಿಷ್ಯದ ಬದುಕನ್ನು ಎದುರಿಸುವ ಸಾಮರ್ಥ್ಯವನ್ನು ವಿದ್ಯಾರ್ಥಿಗಳು ಶಾಲಾ ಹಂತದಿಂದಲೇ ಬೆಳೆಸಿಕೊಳ್ಳಬೇಕು. ಶಿಕ್ಷಣವು ಕೇವಲ ಪಠ್ಯಪುಸ್ತಕದ ಜ್ಞಾನಕ್ಕೆ ಸೀಮಿತವಾಗದೆ, ಜೀವನವನ್ನು ಎದುರಿಸುವ ಕೌಶಲ್ಯ ಮತ್ತು ಮೌಲ್ಯಗಳನ್ನು ಬೆಳೆಸುವಂತಿರಬೇಕು ಎಂದರು. ಮುಖ್ಯ ಅತಿಥಿ ಎಂ. ಎ. ಗಾಣಿಗೇರ ಮಾತನಾಡಿ, ತಂದೆ-ತಾಯಿ, ಗುರು-ಹಿರಿಯರಿಗೆ ಗೌರವ ನೀಡುವ ಸಂಸ್ಕಾರ ಇತ್ತೀಚಿನ ದಿನಗಳಲ್ಲಿ ಕ್ಷೀಣಿಸುತ್ತಿದೆ. ಆದ್ದರಿಂದ ಪಠ್ಯ ಶಿಕ್ಷಣದ ಜತೆಗೆ ಮಕ್ಕಳಿಗೆ ಮೌಲ್ಯ ಶಿಕ್ಷಣ ನೀಡುವುದು ಇಂದಿನ ಅಗತ್ಯವಾಗಿದೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ವಯೋನಿವೃತ್ತಿ ಹೊಂದಿದ ಎಸ್ಎಫ್ಎಂ ಬಾಲಕಿಯರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಡಿ. ಪಿ. ಕರೂರ ಅವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ತಮ್ಮ ಸೇವಾವಧಿಯ ಸ್ಮರಣೀಯ ಕ್ಷಣಗಳನ್ನು ಮೆಲುಕು ಹಾಕಿ, “ಶಿಕ್ಷಕರಿಗೆ ವಿದ್ಯಾರ್ಥಿಗಳೇ ನಿಜವಾದ ಆಸ್ತಿ” ಎಂದರು. ಕಾರ್ಯಕ್ರಮದ ಮತ್ತೊಂದು ವಿಶೇಷವೆಂದರೆ ವಿದ್ಯಾರ್ಥಿನಿ ಸವಿತಾ ಅಜ್ಜಂಪುರ ತಾನೇ ತಯಾರಿಸಿದ ಸಿಂಹದ ಮುಖವುಳ್ಳ ಸುಂದರ ರಾಷ್ಟ್ರ ಲಾಂಛನವನ್ನು ಶಾಲೆಗೆ ದೇಣಿಗೆಯಾಗಿ ನೀಡಿದ್ದು ಎಲ್ಲರ ಗಮನ ಸೆಳೆಯಿತು. ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಿ. ಎಂ. ಅರಗೋಳ ಅಧ್ಯಕ್ಷತೆ ವಹಿಸಿದ್ದರು. ಎಂ. ಬಿ. ನೀರಲಗಿ, ರೇಣುಕಾ ಹಿರೇಗೌಡ್ರ, ಆರ್. ವಿ. ಹೆಬ್ಬಳ್ಳಿ, ಎಸ್. ಎಸ್. ಘೋಡಗೇರಿ, ಕೆ. ಜಿ. ಮಲ್ಲೂರ, ಕಲ್ಪನಾ ಯಲವಿಗಿ, ಯು. ಎನ್. ಮುದಿಗೌಡ್ರ ಸೇರಿದಂತೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಅಭಿಜ್ಞಾನ ಹುಬ್ಬಳ್ಳಿ ಸ್ವಾಗತಿಸಿದರು. ಅಪೇಕ್ಷಾ ಕಾಮನಹಳ್ಳಿ ಹಾಗೂ ವಂದನಾ ಪುರೋಹಿತ ಕಾರ್ಯಕ್ರಮ ನಿರೂಪಿಸಿದರು. ಸುಷ್ಮಿತಾ ಪಾಟೀಲ ವಂದಿಸಿದರು.
- ಹಾನಗಲ್...ತಾಲೂಕು ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ ಆರೋಪ. ಚಿಕಿತ್ಸೆ ವಿಳಂಬದಿಂದ ಮಗು ಮೃತಪಟ್ಟಿದೆ ಎಂದು ಕುಟುಂಬಸ್ಥರ ಆರೋಪ ಆಸ್ಪತ್ರೆ ಎದುರು ಪ್ರತಿಭಟನೆ ಮಂಗಳವಾರ ಪಟ್ಟಣದ ತಾಲೂಕು ಆಸ್ಪತ್ರೆಯ ಎದುರು ಮಗುವಿನ ಶವವಿಟ್ಟು ಪ್ರತಿಭಟಿಸಿದ ಕುಟುಂಬಸ್ಥರು. ಸ್ಥಳಕ್ಕೆ ಮೆಲ್ಮಟ್ಟದ ಅಧಿಕಾರಿಗಳು ಸ್ಥಳಕ್ಕೆ1
- ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು ಖಂಡಿಸಿ ಲೋಕಾಯುಕ್ತರಿಗೆ ದೂರು ಮಾನ್ಯ ಲೋಕಾಯುಕ್ತರು ಶ್ರೀ ಬಿ ಎಸ್ ಪಾಟೀಲ್ ಸರ್ ಅವರಿಗೆ ಹಾವೇರಿ ಜಿಲ್ಲೆಯಲ್ಲಿ ಎನ್ ಆರ್ ಎಲ್ ಎಂ ಥೀಮ್ ನಲ್ಲಿ ಆಗಿರುವ ಹಗರಣ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ನಡೆದಿರುವ ಹಗರಣ, ಹಾಗೂ ಅಕ್ಷರ ದಾಸೋಹ ಯೋಜನೆಯಹಳ್ಳಿ ನಡೆದಿರುವ ಹಗರಣ ಹಾಗೂ ಪಿಡಬ್ಲ್ಯೂಡಿ ಇಲಾಖೆ ವತಿಯಿಂದ ನಿರ್ಮಾಣಗೊಳ್ಳುತ್ತಿರುವ ಕಾಗಿನೆಲೆ ರೋಡ ಹಗರಣ, ಕನವಳ್ಳಿಯಲ್ಲಿ ಮೊಲನ ಆಜಾದ್ ಮಾದರಿ ಶಾಲೆಯ ದುರಸ್ತಿ ಕಾಮಗಾರಿಯಲ್ಲಿ 21 ಲಕ್ಷ ಹಗರಣ, ಜಮ್ ಪೋರ್ಟಲ್ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಮಾಡಿರುವ ಹಗರಣ, ಮತ್ತು ಎಂ ಜಿ ಎನ್ ಆರ್ ಜಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಇಂಜಿನಿಯರ್ಗಳನ್ನು ರುಚಿಯಿಂದಾಲ್ ಮೇಡಂ ಅವರು ವರ್ಗಾವಣೆ ಮಾಡಿರುವ ಆದೇಶವನ್ನು ತಡೆ ಹಿಡಿದಿರುವ ವಿರೋಧಿಸಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳ ವಿರುದ್ಧ ದೂರನ್ನು ನೀಡಲಾಯಿತು. ಹಾವೇರಿ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು ಖಂಡಿಸಿ ಮತ್ತು ವಿವಿಧ ಹಳ್ಳಿಗಳಲ್ಲಿ ಇರುವ ಗೋಮಾಳ ಜಾಗವನ್ನು ಖಾಸಗಿ ವ್ಯಕ್ತಿಗಳು ತಮ್ಮ ಹೆಸರಿಗೆ ಮಾಡಿಕೊಳ್ಳುವುದನ್ನು ಖಂಡಿಸಿ ಮತ್ತು ವೈದ್ಯ ಇಲಾಖೆ ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಅವ್ಯವಹಾರ ವೈದ್ಯಕೀಯ ನಿರ್ಲಕ್ಷತೆ ವಿರುದ್ಧ, ಹಿರೇಕೆರೂರು ತಾಲೂಕ್ ಎಳವಾಳ ಗ್ರಾಮದ ಗೋಮಾಳ ಆಸ್ತಿಯನ್ನು ಒಬ್ಬರು ತಮ್ಮ ವೈಯಕ್ತಿಕ ಹೆಸರಿನಲ್ಲಿ ಮಾಡಿಕೊಂಡಿರುವ ವಿರುದ್ಧ ಮತ್ತು ಬ್ಯಾಡಗಿ ತಾಲೂಕ್ ಸುಭಾಷ್ ತುಪ್ಪದ್ ಇವರ ಮಗಳಾದ ವಂದನಾ ಅವರ ಚಿರಾಯು ಆಸ್ಪತ್ರೆಯಲ್ಲಿ ವೈದ್ಯಕೀಯ ನಿರ್ಲಕ್ಷತೆಯಿಂದ ಆಗಿರುವ ಸಾವನ್ನು ಖಂಡಿಸಿ ಮತ್ತು ರಟ್ಟಿಹಳ್ಳಿ ತಾಲೂಕ ಚಾಂದ್ ಪೀರ್ 6 ವರ್ಷದ ಮಗು ಜಿಲ್ಲಾ ಜಿಲ್ಲಾ ಆಸ್ಪತ್ರೆ ವೈದ್ಯರ ನಿರ್ಲಕ್ಷತೆಯಿಂದ ಕೋಮಾದಲ್ಲಿ ಹೋಗಿರುವುದನ್ನು ಖಂಡಿಸಿ ಮಾನ್ಯ ಲೋಕಾಯುಕ್ತರಿಗೆ ಮನವಿ ಸಲ್ಲಿಸಿ ತನಿಖೆಯನ್ನು ನಡೆಸಲು ಆಗ್ರಹಿಸಲಾಯಿತು1
- ಶಿಕಾರಿಪುರ. 'ಕ್ರಾಂತಿಯ ಜ್ಯೋತಿ: ಪ್ರವಾದಿ ಮುಹಮ್ಮದ್(ಸ)' ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕ ಅಧ್ಯಕ್ಷರಾದ ಮೊಹಮ್ಮದ್ ಹುಸೇನ್ ಶಿರಾಳಕೊಪ್ಪ. ಶಿಕಾರಿಪುರ. ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕದ ವತಿಯಿಂದ ದಿನಾಂಕ 26-08-2026ರಿಂದ 06-09-20265 ತನಕ ಪ್ರವಾದಿ ಮುಹಮ್ಮದ್(ಸ)ರವರ ಜನ್ಮ ದಿನದ ಪ್ರಯುಕ್ತ ರಾಜ್ಯಾದ್ಯಂತ ಸೀರತ್ ಅಭಿಯಾನ ನಡೆಯಲಿದೆ. ಶಿಕಾರಿಪುರ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮೊಹಮ್ಮದ್ ಹುಸೇನ್ ಅಧ್ಯಕ್ಷ ಶಿರಾಳಕೊಪ್ಪ ಮಾತನಾಡಿ, ಪ್ರವಾದಿಮುಹಮ್ಮದ್(ಸ)ರವರು ಜಗತ್ತಿನಲ್ಲಿ ತಂದ ಸಮಗ್ರ ಕ್ರಾಂತಿಯು ಸತ್ಯ, ನ್ಯಾಯ, ಕರುಣೆ, ಮಾನವ ಸಮಾನತೆ, ಮಾನವ ಘನತೆ ಹಾಗೂ ಮಾನವ ಕುಲದ ಏಕತೆಯ ಮೇಲೆ ಸ್ಥಾಪಿತವಾಗಿದೆ. ಅವರು ಜನದ ಮನಸ್ಸನ್ನು ಸಂಸ್ಕರಿಸಿ, ಅವರ ನೈತಿಕತೆ ಮತ್ತು ಚಾರಿತ್ಯವನ್ನು ಶುದ್ದೀಕರಿಸುವ ಮೂಲಕ ವ್ಯಕ್ತಿಗಳನ್ನು ಸಮಾಜವನ್ನು ಪರಿವರ್ತಿಸಿದರು. ಅವರ ಕ್ರಾಂತಿಯು ಅಪ್ಪಟ ಮಾನವೀಯ ಕ್ರಾಂತಿಯಾಗಿತ್ತು ಹಾಗೂ ಮಾನವ ಜೀವನದ ಆಧ್ಯಾತ್ಮಿಕ, ಸಾಮಾಜಿಕ, ಕೌಟುಂಬಿಕ, ಆರ್ಥಿಕ, ಶೈಕ್ಷಣಿಕ, ಆಡಳಿತ ಹೀಗೆ ಎಲ್ಲ ಕ್ಷೇತ್ರಗಳನ್ನು ಬೆಳಗಿಸಿದ ಕ್ರಾಂತಿಯಾಗಿತ್ತು. ಸುಭಿಕ್ಷೆ ಮತ್ತು ನಿರ್ಭಯತ್ವದ ಸಮಾಜ ನಿರ್ಮಾಣ ಅವರ ಗುರಿಯಾಗಿತ್ತು. ಪ್ರವಾದಿಮುಹಮ್ಮದ್(ಸ)ರವರು ಈ ಸಂದೇಶಗಳನ್ನು ಕನ್ನಡ ಜನತೆಗೆ ಪರಿಚಯಿಸುವುದು, ತಪ್ಪು ಕಲ್ಪನೆಗಳನ್ನು ಹೋಗಲಾಡಿಸುವುದು, ಪರಸ್ಪರ ಬಾಂಧವ್ಯಗಳನ್ನು ಬಲಪಡಿಸುವುದು ಈ ಅಭಿಯಾನದ ಉದ್ದೇಶವಾಗಿದೆ. ಅಭಿಯಾನದ ಪ್ರಯುಕ್ತ, ಖ್ಯಾತ ಸಾಹಿತಿ ಹಾಗೂ ಗ್ರಂಥಕರ್ತ ಶ್ರೀ ಯೋಗೇಶ್ ಮಾಸ್ಟರ್ ಅವರು ಬರೆದ 'ಮಾನವ ಮನಸ್ಸಿನ ಕೃಷಿಕ ಮನದೊಡೆಯ ಪ್ರವಾದಿ ಮುಹಮ್ಮದ್(ಸ)' ಹಾಗೂ ವಾರ್ತಾ ಭಾರತಿ ದಿನಪತ್ರಿಕೆಯ ಪ್ರಧಾನ ಸಂಪಾದಕರಾದ ಅಬ್ದುಸ್ಸಲಾಮ್ ಪುತ್ತಿಗೆಯವರು ಬರೆದ 'ಸಮಗ್ರ ಕ್ರಾಂತಿಯ ಜ್ಯೋತಿ ಬೆಳಗಿದ ಪೈಗಂಬರ್ ಮುಹಮ್ಮದ್(ಸ)' ಎಂಬ ಎರಡು ಕೃತಿಗಳನ್ನು ರಾಜ್ಯಾದ್ಯಂತ ಬಿಡುಗಡೆಗೊಳಿಸಲಾಗುವುದು. ಅಭಿಯಾನದ ಪ್ರಯುಕ್ತ ರಾಜ್ಯಾದ್ಯಂತ ವೈಯಕ್ತಿಕ ಭೇಟಿ, 'ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್(ಸ)' ಎಂಬ ವಿಚಾರಗೋಷ್ಠಿಗಳು, ಸಾರ್ವಜನಿಕ ಸಮಾವೇಶಗಳು, ಸಂವಾದ ಕಾರ್ಯಕ್ರಮ. ಚರ್ಚಾಗೋಷ್ಠಿಗಳು, ಸೀರತ್ ಪ್ರವಚನ. ಪ್ರವಚನ, ಸೀರತ್ ಎಕ್ಸಿಬಿಶನ್, ಸಮಾಜಸೇವಾ ಚಟುವಟಿಕೆಗಳು, ಸೌಹಾರ್ದ ಸಂದೇಶ ರ್ಕ್ಯಾಲಿಗಳು ಹೀಗೆ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿರುವುದು ಎಂದರು. ಜಕೀ ಅಹ್ಮದ್ ಆಫ್ರಿದಿ ಕಾರ್ಯದರ್ಶಿ ಶಿರಾಳಕೊಪ್ಪ ಮಾತನಾಡಿ, ರೋಗಿಗಳ ಭೇಟಿ ಮತ್ತು ಹಣ್ಣು ವಿತರಣೆ ಬಡ ವಿದ್ಯಾರ್ಥಿಗಳಿಗೆ ನೋಟ್ಬುಕ್, ಪೆನ್ ವಿತರಣೆ ಬಡ ಮತ್ತು ಅಗತ್ಯವಿರುವ ಕುಟುಂಬಗಳನ್ನು ಭೇಟಿ ಮಾಡಿ ಸಮಸ್ಯೆ ಪರಿಹರಿಸಲು ಪ್ರಯತ್ನ ಮನೆ ನಿರ್ಮಾಣಕ್ಕೆ ಸಹಾಯ - ಇತ್ತೀಚೆಗೆ ಮೇಲ್ಚಾವಣಿಯ ಸ್ಲಾಬ್ ಹಾಕಿಸಿದ ಸೇವಾ ಕಾರ್ಯಹಾಗೂ ಮುಸ್ಲಿಮರು ಮತ್ತು ಮುಸ್ಲಿಮೇತರರಿಗಾಗಿ ರಕ್ತದಾನ ಶಿಬಿರ ಮತ್ತು ರೇಷನ್ ಕಿಟ್ ವಿತರಣೆ, ಪರಿಸರ ಮತ್ತು ಸ್ವಚ್ಛತಾ ಕಾರ್ಯ ಶಾಲೆ ಆಸ್ಪತ್ರೆ ಗ್ರಂಥಾಲಯ ಮುಂತಾದ ಸ್ಥಳಗಳಲ್ಲಿ ಸೀರತ್ ಪುಸ್ತಕಗಳ ವಿತರಣೆ, ಉಲಾಮ ಗಣ್ಯರು ಮತ್ತು ವಿವಿಧ ಕ್ಷೇತ್ರಗಳ ಪ್ರಮುಖ ವ್ಯಕ್ತಿಗಳ ಭೇಟಿ,ಮೊಹ್ಸಿನೇ ಇನ್ಸಾನಿಯತ್ ಪುಸ್ತಕವನ್ನು ಕಾರ್ಯಕರ್ತರು ಅಧ್ಯಯನ ಮಾಡುವಂತೆ ಪ್ರೋತ್ಸಾಹಿಸುವುದು, ಕನ್ನಡ ಮತ್ತು ಉರ್ದು ಭಾಷೆಗಳಲ್ಲಿ ಸ್ಪರ್ಧೆಗಳು ಸಂದೇಶಗಳನ್ನು ಸೇವಾ ಕಾರ್ಯಗಳ ಮೂಲಕ ಸಮಾಜದ ಎಲ್ಲಾ ವರ್ಗಗಳಿಗೂ ತಲುಪಿಸುವುದು ಎಂದರು. ಇದೇ ಸಂದರ್ಭದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಸಿಬ್ ಗತ್ ಉಲ್ಲಾ ಕಾರ್ಯಕರ್ತರು,ಅಬ್ದುಲ್ ಗಪೂರ್ ಸ್ಥಾನೀಯ ಅಧ್ಯಕ್ಷರು,ಶಿಕಾರಿಪುರ, ಜಾಕಿರ್ ಹುಸೇನ್ ಸ್ಥಾನೀಯ ಅಧ್ಯಕ್ಷರು, ಚಿಕ್ಕ ಜಂಬೂರು ಅಬ್ದುಲ್ ಕಬೀರ್ ಕಾರ್ಯಕರ್ತರು, ಅಬ್ದುಲ್ ರೆಹಮಾನ್ ಸ್ಥಾಯಿ ಕಾರ್ಯದರ್ಶಿ ಎಸ್.ಐ.ಒ. ಸಂಘಟನೆ ಶಿರಾಳಕೊಪ್ಪ ಉಪಸ್ಥಿತರಿದ್ದರು.1
- ಕನ್ನಡ ಸಾಹಿತ್ಯ ಸಮ್ಮೇಳನ ಗದಗ ಜಿಲ್ಲಾ ಮುಂಡರಗಿ ತಾಲೂಕಿನಲ್ಲಿ ನಡೆದ ವಿಶೇಷ ಆಕರ್ಷಣೆ ಗದಗ ಜಿಲ್ಲಾ ಮುಂಡರಗಿ ತಾಲೂಕಿನ ಕಪ್ಪತ್ತಗುಡ್ಡದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನದ ಕುರಿತು ಮಾತನಾಡಿದ ಮಂಜುನಾಥ್ ಮುಧೋಳ1
- ಈದ್ ಮಿಲಾದ್ ಹಬ್ಬದ ಅಂಗವಾಗಿ ಮುಸ್ಲಿಂ ಬಾಂಧವರಲ್ಲಿ ಸಂಭ್ರಮಾಚರಣೆ ಮನೆ ಮಾಡಿದೆ1
- ಈದ್ ಮಿಲಾದ್ಗೆ ಶಿವಮೊಗ್ಗ ಸಜ್ಜು: ಹಸಿರು ಬಾವುಟಗಳಿಂದ ಕಂಗೊಳಿಸಿದ ನಗರ ಪ್ರವಾದಿ ಮೊಹಮ್ಮದ್ ಜನ್ಮದಿನಾಚರಣೆಗೆ ಶಿವಮೊಗ್ಗದಲ್ಲಿ ಭರ್ಜರಿ ಸಿದ್ಧತೆ1
- ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಮನವಿ ಕೂಡ್ಲಿಗಿ: ಗೌರವಧನ ಹೆಚ್ಚಿಸುವ 6ನೇ ಗ್ಯಾರಂಟಿ ಜಾರಿಗೆ ಆಗ್ರಹಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಮಂಗಳವಾರ ತಹಶೀಲ್ದಾರ್ ವಿ.ಕೆ. ನೇತ್ರಾವತಿ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ತಾಲೂಕು ಸಮಿತಿ ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು. ಅಂಗನವಾಡಿ ಕಾರ್ಯಕರ್ತೆಯರು ಹಲವು ವರ್ಷಗಳಿಂದ ಮಕ್ಕಳ ಪೌಷ್ಟಿಕತೆ, ಆರೋಗ್ಯ ಹಾಗೂ ಪೂರ್ವ ಪ್ರಾಥಮಿಕ ಶಿಕ್ಷಣ ಸೇರಿದಂತೆ ಸರ್ಕಾರದ ವಿವಿಧ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುತ್ತಿದ್ದಾರೆ. ಆದರೆ ಅವರ ಶ್ರಮಕ್ಕೆ ತಕ್ಕಂತೆ ಗೌರವಧನ ದೊರೆಯುತ್ತಿಲ್ಲ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು. ಆದ್ದರಿಂದ ಸರ್ಕಾರ ಕೂಡಲೇ ಗೌರವಧನ ಹೆಚ್ಚಿಸುವ 6ನೇ ಗ್ಯಾರಂಟಿ ಜಾರಿಗೆ ತಂದು, ₹15 ಸಾವಿರ ಹಾಗೂ ಸಹಾಯಕಿಯರಿಗೆ ₹10 ಸಾವಿರ ಗೌರವಧನ ನೀಡಬೇಕು. ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಜೀವನೋಪಾಯಕ್ಕೆ ಸೂಕ್ತ ಭದ್ರತೆ ಒದಗಿಸಬೇಕು. ಬಿ.ಎಲ್.ಓ. ಜವಾಬ್ದಾರಿ ಹೊರಿಸುವುದನ್ನು ಕೂಡಲೇ ನಿಲ್ಲಿಸಬೇಕು. ಅಂಗನವಾಡಿ ಉದ್ಯೋಗಿಗಳಿಗೆ ನಿವೃತ್ತಿ ನಂತರದ ಜೀವನಕ್ಕೆ ಅನುಕೂಲವಾಗುವಂತೆ ಗ್ರಾಚ್ಯುಟಿ ಸೌಲಭ್ಯ ಕಲ್ಪಿಸಬೇಕು. ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವಿವಿಧ ಬೇಡಿಕೆಗಳಿಗೆ ಸ್ಪಂದಿಸಿ, ಶೀಘ್ರವೇ ನ್ಯಾಯಯುತವಾಗಿ ಈಡೇರಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಿದರು. ಈ ಸಂದರ್ಭದಲ್ಲಿ ಗೌರವ ಅಧ್ಯಕ್ಷೆ ಕೆ ಪದ್ಮಾವತಿ, ತಾಲೂಕ್ ಅಧ್ಯಕ್ಷರು ಎನ್ ಸುಮಾ, ಉಪಾಧ್ಯಕ್ಷರಾದ ಕೆಎನ್ ಕವಿತಾ, ಪಾರ್ವತಮ್ಮ, ಪ್ರಧನ ಕಾರ್ಯದರ್ಶಿ ಎಚ್ ಅನ್ನಪೂರ್ಣ, ಸಹ ಕಾರ್ಯದರ್ಶಿ ಬಿ ಪದ್ಮಾವತಿ, ಓ ಕರಿಬಸಮ್ಮ, ಖಜಾಂಚಿ ಜಯಮಾಲ ಜೆ, ಸಂಘಟನಾ ಕಾರ್ಯದರ್ಶಿ ಮೀನಾಕ್ಷಿ, ಸದಸ್ಯರಾದ ಬಿ ಶಿವಲೀಲಾ, ಜಿ ಗಾಯತ್ರಿ, ರೇಣುಕಮ್ಮ, ಎಚ್ಎಸ್ ಚಂದ್ರಮ್ಮ, ಎಬಿ ಬಸಮ್ಮ, ಓ ಸುಜಾತ, ಸುಮಲತಾ, ಬಿ ರೇಖಾ, ದ್ಯಾಮಕ್ಕ, ಸಿ.ಬಿ ಅನುಸೂಯ ಸೇರಿದಂತೆ ತಾಲೂಕಿನ ಅಂಗನವಾಡಿ ಕಾರ್ಯಕರ್ತರು, ಸಹಾಯಕರು ಉಪಸಿದ್ಧರಿದ್ದರು.1
- ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು ಖಂಡಿಸಿ, ಎಂ ಎನ್ ನಾಯಕ್ ನೇತೃತ್ವದಲ್ಲಿ ಲೋಕಾಯುಕ್ತರಿಗೆ ಮನವಿ. ಹಾವೇರಿ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು ಖಂಡಿಸಿ ಮತ್ತು ವಿವಿಧ ಹಳ್ಳಿಗಳಲ್ಲಿ ಇರುವ ಗೋಮಾಳ ಜಾಗವನ್ನು ಖಾಸಗಿ ವ್ಯಕ್ತಿಗಳು ತಮ್ಮ ಹೆಸರಿಗೆ ಮಾಡಿಕೊಳ್ಳುವುದನ್ನು ಖಂಡಿಸಿ ಮತ್ತು ವೈದ್ಯ ಇಲಾಖೆ ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಅವ್ಯವಹಾರ ವೈದ್ಯಕೀಯ ನಿರ್ಲಕ್ಷತೆ ವಿರುದ್ಧ, ಹಿರೇಕೆರೂರು ತಾಲೂಕ್ ಎಳವಾಳ ಗ್ರಾಮದ ಗೋಮಾಳ ಆಸ್ತಿಯನ್ನು ಒಬ್ಬರು ತಮ್ಮ ವೈಯಕ್ತಿಕ ಹೆಸರಿನಲ್ಲಿ ಮಾಡಿಕೊಂಡಿರುವ ವಿರುದ್ಧ ಮತ್ತು ಬ್ಯಾಡಗಿ ತಾಲೂಕ್ ಸುಭಾಷ್ ತುಪ್ಪದ್ ಇವರ ಮಗಳಾದ ವಂದನಾ ಅವರ ಚಿರಾಯು ಆಸ್ಪತ್ರೆಯಲ್ಲಿ ವೈದ್ಯಕೀಯ ನಿರ್ಲಕ್ಷತೆಯಿಂದ ಆಗಿರುವ ಸಾವನ್ನು ಖಂಡಿಸಿ ಮತ್ತು ರಟ್ಟಿಹಳ್ಳಿ ತಾಲೂಕ ಚಾಂದ್ ಪೀರ್ ಆರು ವರ್ಷದ ಮಗು ಜಿಲ್ಲಾ ಕೋಮಾದಲ್ಲಿ ಹೋಗಿರುವುದನ್ನು ಖಂಡಿಸಿ ಮಾನ್ಯ ಲೋಕಾಯುಕ್ತರಿಗೆ ಮನವಿ ಸಲ್ಲಿಸಿ ತನಿಖೆಯನ್ನು ನಡೆಸಲು ಆಗ್ರಹಿಸಲಾಯಿತು.1