"ಮೈಸೂರಲ್ಲಿ ಪೊಲೀಸರ ದೌರ್ಜನ್ಯ ,ವಿರುದ್ಧ ಅಪ್ಪ-ಮಗ ಪ್ರತಿಭಟನೆ" ಮೈಸೂರು: ಸ್ನೇಹಿತನ ಸೈಕಲ್ ಶಾಪ್ನ ವಸ್ತು ಕಳವು ಪ್ರಕರಣದಲ್ಲಿ ನ್ಯಾಯ ಕೇಳಲು ಹೋದ ಅಪ್ಪ-ಮಗನ ಮೇಲೆಯೇ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕಲ್ಯಾಣಗಿರಿಯ ಆರ್. ನರಹರಿ ಎಂಬ ಯುವಕನಿಗೆ ಪೊಲೀಸರು ಹಲ್ಲೆ ನಡೆಸಿ, ಮೊಬೈಲ್ಫೋನ್ಗಳನ್ನು ಕಸಿದುಕೊಂಡಿದ್ದಾರೆ ಎನ್ನಲಾಗಿದೆ. ತಂದೆಯ ಮೇಲೂ ಹಲ್ಲೆ ನಡೆಸಿ, ಅವಾಚ್ಯ ಶಬ್ಧಗಳಿಂದ ನಿಂದಿಸಿ ಸುಳ್ಳು ಪ್ರಕರಣ ದಾಖಲಿಸಲು ಯತ್ನಿಸಿದ ಆರೋಪ ಕೇಳಿಬಂದಿದೆ. ಸರಸ್ವತಿಪುರಂ ಠಾಣೆಯ ಇನ್ಸ್ಪೆಕ್ಟರ್ ರವಿಕಿರಣ್ ಹಾಗೂ ಎಸಿಪಿ ರವಿಶಂಕರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕುಟುಂಬಸ್ಥರು, ಠಾಣೆ ಎದುರು ಪ್ರತಿಭಟನೆ ನಡೆಸಿ ನ್ಯಾಯಕ್ಕೆ ಆಗ್ರಹಿಸಿದ್ದಾರೆ. ಪೊಲೀಸ್ ಜೀಪಿನಲ್ಲಿ ಕೂರಿಸಿಕೊಂಡು ಎಂಎಲ್ಸಿ ಮಾಡಿಸಲು ಮುಂದಾಗಿದ್ದು, ಯುವಕನ ಬಟ್ಟೆ ಬಿಚ್ಚಿಸಿ ಅಪರಿಚಿತ ಔಷಧಿ ಸೇವಿಸುವಂತೆ ಬಲವಂತಪಡಿಸಿದ ಆರೋಪವೂ ಕೇಳಿಬಂದಿದೆ. ಆರೋಗ್ಯದಲ್ಲಿ ಏರುಪೇರಾದ ಬಳಿಕ ಯುವಕನನ್ನು ಬಿಟ್ಟು ಕಳುಹಿಸಲಾಗಿದೆ ಎನ್ನಲಾಗಿದೆ.
"ಮೈಸೂರಲ್ಲಿ ಪೊಲೀಸರ ದೌರ್ಜನ್ಯ ,ವಿರುದ್ಧ ಅಪ್ಪ-ಮಗ ಪ್ರತಿಭಟನೆ" ಮೈಸೂರು: ಸ್ನೇಹಿತನ ಸೈಕಲ್ ಶಾಪ್ನ ವಸ್ತು ಕಳವು ಪ್ರಕರಣದಲ್ಲಿ ನ್ಯಾಯ ಕೇಳಲು ಹೋದ ಅಪ್ಪ-ಮಗನ ಮೇಲೆಯೇ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕಲ್ಯಾಣಗಿರಿಯ ಆರ್. ನರಹರಿ ಎಂಬ ಯುವಕನಿಗೆ ಪೊಲೀಸರು ಹಲ್ಲೆ ನಡೆಸಿ, ಮೊಬೈಲ್ಫೋನ್ಗಳನ್ನು ಕಸಿದುಕೊಂಡಿದ್ದಾರೆ ಎನ್ನಲಾಗಿದೆ. ತಂದೆಯ ಮೇಲೂ ಹಲ್ಲೆ ನಡೆಸಿ, ಅವಾಚ್ಯ ಶಬ್ಧಗಳಿಂದ ನಿಂದಿಸಿ ಸುಳ್ಳು ಪ್ರಕರಣ ದಾಖಲಿಸಲು ಯತ್ನಿಸಿದ ಆರೋಪ ಕೇಳಿಬಂದಿದೆ. ಸರಸ್ವತಿಪುರಂ ಠಾಣೆಯ ಇನ್ಸ್ಪೆಕ್ಟರ್ ರವಿಕಿರಣ್ ಹಾಗೂ ಎಸಿಪಿ ರವಿಶಂಕರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕುಟುಂಬಸ್ಥರು, ಠಾಣೆ ಎದುರು ಪ್ರತಿಭಟನೆ ನಡೆಸಿ ನ್ಯಾಯಕ್ಕೆ ಆಗ್ರಹಿಸಿದ್ದಾರೆ. ಪೊಲೀಸ್ ಜೀಪಿನಲ್ಲಿ ಕೂರಿಸಿಕೊಂಡು ಎಂಎಲ್ಸಿ ಮಾಡಿಸಲು ಮುಂದಾಗಿದ್ದು, ಯುವಕನ ಬಟ್ಟೆ ಬಿಚ್ಚಿಸಿ ಅಪರಿಚಿತ ಔಷಧಿ ಸೇವಿಸುವಂತೆ ಬಲವಂತಪಡಿಸಿದ ಆರೋಪವೂ ಕೇಳಿಬಂದಿದೆ. ಆರೋಗ್ಯದಲ್ಲಿ ಏರುಪೇರಾದ ಬಳಿಕ ಯುವಕನನ್ನು ಬಿಟ್ಟು ಕಳುಹಿಸಲಾಗಿದೆ ಎನ್ನಲಾಗಿದೆ.
- ರೈತರ ಧ್ವನಿ ಅಡಗುವುದಿಲ್ಲ… ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲುವುದಿಲ್ಲ! ಅಡಿಕೆ ಬೆಳೆಗಾರರ ನ್ಯಾಯಯುತ ಹೋರಾಟಕ್ಕೆ ನಮ್ಮ ಧ್ವನಿ ಇನ್ನಷ್ಟು ಗಟ್ಟಿಯಾಗಲಿ! ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕು ಅಡಿಕೆ ಬೆಳೆಗಾರರ ಒಕ್ಕೂಟದ ವತಿಯಿಂದ ಅಡಿಕೆ ಬೆಳೆಗಾರರ ವಿವಿಧ ಬೇಡಿಕೆಗಳು, ಹೊನ್ನಾಳಿ–ನ್ಯಾಮತಿ ತಾಲ್ಲೂಕುಗಳ ಕೆರೆಗಳನ್ನು ತುಂಬಿಸುವ ಯೋಜನೆ ಹಾಗೂ ಭದ್ರಾ ಜಲಾಶಯದಿಂದ ಅಪ್ಪರ್ ಭದ್ರಾ ಯೋಜನೆಗೆ 3 ಟಿಎಂಸಿ ನೀರು ಬಿಡುವುದನ್ನು ಖಂಡಿಸಿ ಮೂರು ದಿನಗಳಿಂದ ಬೃಹತ್ ಪಾದಯಾತ್ರೆ ನಡೆಸಲಾಯಿತು. ಹೊನ್ನಾಳಿಯಿಂದ ಆರಂಭವಾದ ಈ ಪಾದಯಾತ್ರೆ ವಿವಿಧ ಗ್ರಾಮಗಳ ಮೂಲಕ ಸಾಗುತ್ತಾ, ರೈತರ ಸಮಸ್ಯೆಗಳಿಗೆ ಜನಪ್ರತಿನಿಧಿಗಳು ಹಾಗೂ ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಇಂದು ದಾವಣಗೆರೆಗೆ ತಲುಪಿತು. ದಾವಣಗೆರೆ ಎಸಿ ಕಚೇರಿ ಎದುರು ಅಡಿಕೆ ಬೆಳೆಗಾರರ ಪ್ರತಿಭಟನಾ ಸಭೆ ನಡೆಸಲಾಯಿತು. ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ, ಹೊನ್ನಾಳಿ–ನ್ಯಾಮತಿ ತಾಲ್ಲೂಕುಗಳ ಕೆರೆಗಳಿಗೆ ನೀರು, ರೈತರ ಹಿತ ಕಾಪಾಡುವ ನೀರಾವರಿ ಯೋಜನೆಗಳು ಹಾಗೂ ಭದ್ರಾ ಜಲಾಶಯದ ನೀರಿನ ಸಮರ್ಪಕ ಬಳಕೆಗೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು. ರೈತರ ಧ್ವನಿ ಅಡಗುವುದಿಲ್ಲ… ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲುವುದಿಲ್ಲ!1
- ಗ್ರಾಮೀಣ ಭಾಗದಲ್ಲಿ ಹಂದಿಗಳ ಕಾಟ,ರೈತರ ಬೆಳೆಗಳ ನಾಶ: ಗ್ರಾಮಸ್ಥರ ಆಕ್ರೋಶ ಕಲಘಟಗಿ: ಗ್ರಾಮೀಣ ಭಾಗದಲ್ಲಿ ಹಂದಿಗಳ ಕಾಟ ಹೆಚ್ಚುತ್ತಿದ್ದೂ ರೈತರ ಬೆಳೆಗಳ ನಾಶ ಹಾಗೂ ಗ್ರಾಮದ ಮನೆ ಸುತ್ತ ಮುತ್ತಲಿನ ಪ್ರದೇಶದ ಸ್ವಚ್ಛತೆಗೆ ಕಂಟಕ್ಕೆ ತಂದೊಡ್ದುತ್ತಿವೆ ಎಂದು ಹಂದಿಗಳ ಮಾಲಕರ ಹಾಗೂ ಗ್ರಾಮ ಪಂಚಾಯತಿ ಅಧಿಕಾರಿಗಳ ವಿರುದ್ದ ಗ್ರಾಮಸ್ಥರು ಹಿಡಿ ಶಾಪ ಹಾಕುತ್ತಿದ್ದಾರೆ. ತಾಲ್ಲೂಕಿನಆಸ್ತಕಟ್ಟಿ, ತಬಕದಹೊನ್ನಳ್ಳಿ, ಪರಸಾಪುರ, ಸೋಲಾರಗೊಪ್ಪ ಹಾಗೂ ಇನ್ನಿತರ ಗ್ರಾಮಗಳಲ್ಲಿ ಹಂದಿಗಳ ಹಾವಳಿಗೆ ಜನರು ತತ್ತರಿಸಿ ಹೋಗಿದ್ದು ಅವುಗಳ ತಡೆಗಟ್ಟುವಲ್ಲಿ ಸ್ಥಳೀಯ ಗ್ರಾಮ ಪಂಚಾಯತಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಜನರು ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. ಆರೋಗ್ಯದ ಮೇಲೆ ಪರಿಣಾಮ: ಗ್ರಾಮದ ಓಣಿಗಳಲ್ಲಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಹಂದಿಗಳು ಗುಂಪು ಗುಂಪಾಗಿ ಬಂದು ಅಶುಚಿತ್ವ ಹರಡುತ್ತಿವೆ ಇದರಿಂದ ಜನರಿಗೆ ಡೆಂಗ್ಯೂ, ಮಲೇರಿಯಾ, ಸೊಳ್ಳೆಗಳ ಕಾಟದಿಂದ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ. ರೈತರ ಬೆಳೆ ನಾಶ: ಗ್ರಾಮದ ಸುತ್ತಮುತ್ತಲಿನ ಜಮೀನುಗಳಿಗೆ ಹಂದಿಗಳು ರೈತರು ಬೆಳೆದ ಬೆಳೆಗಳಾದ ಮೆಕ್ಕೆಜೋಳ, ಕಬ್ಬು ಬೆಳೆಗೆ ನುಗ್ಗಿ ಹಾನಿ ಮಾಡುತ್ತಿದ್ದು ರೈತರಿಗೆ ಆರ್ಥಿಕ ನಷ್ಟ ಅನುಭವಿಸುವಂತಾಗಿದೆ ಎಂದು ಗ್ರಾಮಸ್ಥರು ದೂರಿದರು. ಸಾರ್ವಜನಿಕರಿಗೆ ತೊಂದರೆ: ರಸ್ತೆಗಳಲ್ಲಿ ಹಂದಿಗಳು ಇದ್ದಕ್ಕಿದ್ದಂತೆ ಅಡ್ಡ ಬರುವುದರಿಂದ ದ್ವಿಚಕ್ರ ವಾಹನ ಸವಾರರು ಬಿದ್ದು ಗಾಯಗೊಂಡ ಘಟನೆಗಳು ಜರುಗಿವೆ. ಮನೆಯ ಹಿತ್ತಲಿನ ಜಾನುವಾರಗಳ ಮೇವಿನ ಬಣವಿಗಳಿಗೆ ನುಗ್ಗಿ ಹಾನಿ ಮಾಡುತ್ತಿದ್ದರಿಂದ ರೈತರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ ಎಂದು ಅಳಲು ತೋಡಿಕೊಂಡರು. ಗ್ರಾಮ ಪಂಚಾಯತಿ ಅಧಿಕಾರಿಗಳು ಹಂದಿಗಳ ಮಾಲೀಕರಿಗೆ ನೋಟೀಸ್ ಜಾರಿ ಮಾಡಿ ನಿರ್ಲಕ್ಷ ಮಾಡಿದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಿ ಹಂದಿಗಳ ಹಾವಳಿ ತಪ್ಪಿಸಬೇಕು ಎಂದು ತಾಲ್ಲೂಕಿನ ಆಸ್ತಕಟ್ಟಿ ಗ್ರಾಮದ ಸಂತ ಸೇವಾಲಾಲ ಗ್ರಾಮ ವಿಕಾಸ ಸಮಿತಿ ಸದಸ್ಯರು ಒತ್ತಾಯಿಸಿದ್ದಾರೆ. "ಹಂದಿಗಳ ಹಾವಳಿಯಿಂದ ಗ್ರಾಮದ ರೈತರಾದ ನಾನಪ್ಪ ಲಮಾಣಿ ಹಾಗೂ ಭಿಮ್ಲಪ್ಪ ಲಮಾಣಿ ಅವರ ವರ್ಷಪೂರ್ತಿ ಶ್ರಮವಹಿಸಿ ಬೆಳೆದ ಕಬ್ಬು,ಮೆಕ್ಕೆಜೋಳ ಬೆಳೆಗೆ ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿ ಮಾಡಿದ್ದು ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಪರಿಹಾರ ನೀಡಬೇಕು ಎಂದು ಆಸ್ತಕಟ್ಟಿ ಗ್ರಾಮದ ಸ್ವಗ್ರಾಮ ಮಿತ್ರರಾದ ಉಮ್ಮೆಶ ಲಮಾಣಿ ತಿಳಿಸಿದರು. " "ಎರಡು ತಿಂಗಳಿಂದ 20 ಕ್ಕೂ ಹೆಚ್ಚು ಹಂದಿಗಳು ಬಿಡುಬಿಟ್ಟು ಮನೆಯ ಹಿತ್ತಲಿನಲ್ಲಿ ಬೆಳೆದಿರುವ ತರಕಾರಿ ಕೈತೋಟ, ರೈತರ ಕಬ್ಬು,ಸೋಯಾಬಿನ್, ಮೆಕ್ಕೆಜೋಳ ಬೆಳೆಗಳಿಗೆ ನುಗ್ಗಿ ಹಾನಿ ಮಾಡುತ್ತಿದ್ದು ಹಂದಿಗಳ ತಡೆಗಟ್ಟಲ್ಲು ಗ್ರಾಮ ಪಂಚಾಯತಿಗೆ ಮನವಿ ಸಲ್ಲಿಸಿದರು ಗಮನಹರಿಸುತ್ತಿಲ್ಲ ಎಂದು ತಾಲ್ಲೂಕಿನ ಪರಸಾಪುರ ಗ್ರಾಮದ ಸ್ವಗ್ರಾಮ ಮಿತ್ರರಾದ ರೇಣುಕಾ ಸುಬ್ಬಣ್ಣವರ ಒತ್ತಾಯಿಸಿದರು."1
- ಕೊರಚರಹಟ್ಟಿಯಲ್ಲಿ ಶ್ರೀ ನೂಲಿ ಚಂದಯ್ಯ ಅವರ ಜಯಂತಿ ಅದ್ದೂರಿ ಆಚರಣೆ ಕೂಡ್ಲಿಗಿ: ತಾಲೂಕಿನ ಕೊರಚರಹಟ್ಟಿ ಗ್ರಾಮದಲ್ಲಿ ನೂಲಿ ಚಂದಯ್ಯ ಜಯಂತಿಯನ್ನು ಶುಕ್ರವಾರ ಅದ್ದೂರಿ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಜಯಂತಿ ಉತ್ಸವದ ಪ್ರಯುಕ್ತ ವಿವಿಧ ವಾದ್ಯ ಮೇಳಗಳೊಂದಿಗೆ ನಂದಿಕೋಲು ಕುಣಿತ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಗ್ರಾಮದ ಪ್ರಮುಖ ಬೀದಿಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದ್ದು, ಉತ್ಸವದ ಸಂಭ್ರಮ ಮತ್ತಷ್ಟು ಕಳೆಗಟ್ಟಿತ್ತು. ವಾದ್ಯ ಮೇಳಗಳ ನಾದಕ್ಕೆ ನಂದಿಕೋಲು ಕುಣಿತ ಪ್ರದರ್ಶನ ಜನರ ಗಮನ ಸೆಳೆಯಿತು. ಗ್ರಾಮಸ್ಥರು ಹಾಗೂ ಸಮುದಾಯದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ನೂಲಿ ಚಂದಯ್ಯ ಅವರ ಜಯಂತಿಯನ್ನು ಸಂಭ್ರಮದಿಂದ ಆಚರಿಸಿದರು.1
- ಕರ್ನಾಟಕ ರಾಜ್ಯ ರೈತ ಸಂಘಟನೆ ಹಾಗೂ ಹಸಿರು ಸೇನೆ ರಾಜ್ಯ ಮಹಿಳಾ ಅಧ್ಯಕ್ಷ ಸರೋಜಿನಿ ಅರಗೆ ಯವರು ರಾಜ್ಯ ಸರ್ಕಾರ ಬೆಳಗಾವಿ ಜಿಲ್ಲೆ ಹಾಗೂ ರಾಯಬಾಗ ತಾಲೂಕ ಬರಗಾಲ ಪೀಡಿತ ಘೋಷಣೆ ಮಾಡಬೇಕೆಂದು ಮಾಧ್ಯಮ ಮುಂದೆ ರಾಜ್ಯ ಸರ್ಕಾರ ವಿರುದ್ಧ ಆಕ್ರೋಶಹರ ಹಾಕಿದರು #85newsboxkannad ಕರ್ನಾಟಕ ರಾಜ್ಯ ರೈತ ಸಂಘಟನೆ ಹಾಗೂ ಹಸಿರು ಸೇನೆ ರಾಜ್ಯ ಮಹಿಳಾ ಅಧ್ಯಕ್ಷ ಸರೋಜಿನಿ ಅರಗೆ ಯವರು ರಾಜ್ಯ ಸರ್ಕಾರ ಬೆಳಗಾವಿ ಜಿಲ್ಲೆ ಹಾಗೂ ರಾಯಬಾಗ ತಾಲೂಕ ಬರಗಾಲ ಪೀಡಿತ ಘೋಷಣೆ ಮಾಡಬೇಕೆಂದು ಮಾಧ್ಯಮ ಮುಂದೆ ರಾಜ್ಯ ಸರ್ಕಾರ ವಿರುದ್ಧ ಆಕ್ರೋಶಹರ ಹಾಕಿದರು #85newsboxkannada #breakingnewskannada #belagavisuddi #vairalvideo #raibag1
- ಶಾಸಕ ರೇವಣ್ಣ ವಿರುದ್ಧ ಕೂಡ್ಲಿಗಿ ತಾಲೂಕಿನ ವಾಲ್ಮೀಕಿ ಸಂಘಟನೆ ವತಿಯಿಂದ ಪ್ರತಿಭಟನೆ ಶಾಸಕ ರೇವಣ್ಣ ವಿರುದ್ಧ ಕೂಡ್ಲಿಗಿ ತಾಲೂಕಿನ ವಾಲ್ಮೀಕಿ ಸಂಘಟನೆ ವತಿಯಿಂದ ಪ್ರತಿಭಟನೆ *ಕೂಡ್ಲಿಗಿ*: ದಲಿತ ಮಹಿಳೆ ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ ಅವರ ಕುರಿತು ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್.ಡಿ. ರೇವಣ್ಣ ಅವರು ನೀಡಿರುವ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ, ಕೂಡ್ಲಿಗಿ ತಾಲ್ಲೂಕಿನ ಮಹರ್ಷಿ ವಾಲ್ಮೀಕಿ ನಾಯಕ ಸಮುದಾಯದ ಮುಖಂಡರು ಹಾಗೂ ವಿವಿಧ ನಾಯಕ ಸಂಘಟನೆಗಳ ಸಹಯೋಗದಲ್ಲಿ ಶುಕ್ರವಾರ ಪ್ರತಿಭಟನೆ ಮೆರವಣಿಗೆ ನಡೆಸಲಾಯಿತು. ಪಟ್ಟಣದ ಪ್ರವಾಸಿ ಮಂದಿರದಿಂದ ಡಾ. ಬಿ. ಆರ್. ಅಂಬೇಡ್ಕರ್ ಸರ್ಕಲ್, ಮದಕರಿ ನಾಯಕ ವೃತ್ತದಿಂದ ಸಾಗಿದ ಪ್ರತಿಭಟನಾಕಾರರು ಮೆರವಣಿಗೆ ಮುಖಾಂತರ ತಹಶೀಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಮನವಿ ಪತ್ರ ನೀಡಿದರು. ಮಹಿಳಾ ಅಧಿಕಾರಿಯ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವುದು ಖಂಡನೀಯ ಕೂಡಲೇ ಶಾಸಕ ರೇವಣ್ಣ ರಾಜೀನಾಮೆ ನೀಡಬೇಕು, ಜಿಲ್ಲಾಧಿಕಾರಿ ಲತಾಕುಮಾರಿ ಅವರಿಗೆ ಕ್ಷಮೆ ಕೇಳಬೇಕು, ಮುಂದಿನ ದಿನಗಳಲ್ಲಿ ನಮ್ಮ ನಾಯಕ ಜನಾಂಗಷತಕ್ಕ ಪಾಠ ಕಲಿಸಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಾರ್ವಜನಿಕ ಜೀವನದಲ್ಲಿರುವ ಜನಪ್ರತಿನಿಧಿಗಳು ಮಹಿಳೆಯರು ಹಾಗೂ ಅಧಿಕಾರಿಗಳ ಬಗ್ಗೆ ಗೌರವಯುತವಾಗಿ ನಡೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ಅವಹೇಳನಕಾರಿ ಹೇಳಿಕೆ ನೀಡಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಕೂಡ್ಲಿಗಿ ತಾಲೂಕಿನ ಮಹರ್ಷಿ ವಾಲ್ಮೀಕಿ ನಾಯಕ ಸಮುದಾಯದ ನಿವೃತ್ತ ಇಒ ಜಿ. ಬಸಣ್ಣ, ತಳವಾರ್ ಶರಣಪ್ಪ, ಜಿಂಕಲ್ ನಾಗಮಣಿ, ಗುನ್ನಳ್ಳಿ ರಾಘವೇಂದ್ರ, ಕಾವಲಿ ಶಿವಪ್ಪನಾಯಕ, ವಾಲ್ಮೀಕಿ ಸಂಘದ ಅದ್ಯಕ್ಷ ಸುರೇಶ್, ಜಯರಾಮ್ ನಾಯಕ್, ಹುಡೇಂ ಪಾಪನಾಯಕ, ಅಶೋಕ್,ಕಾಟೇರ್ ಹಾಲೇಶ್, ರೖತಸಂಘದ ಮಹೇಶಪ್ಪ, ವಕೀಲ ಓಂಕಾರಪ್ಪ, ಮಹದೇವಪುರ ಓಬಯ್ಯ, ನಿವೃತ್ತ ಪ್ರಾಂಶುಪಾಲೆ ಕೋತ್ಲಮ್ಮ,ಹಾಲಸಾಗರ ಮಂಜಣ್ಣ, ಅಜಯ್, ಪಾಪಯ್ಯ, ಸಣ್ಣೊಬಯ್ಯ,ಗುಂಡುಮುಣಗು ಮಂಜಣ್ಣ, ಡಾ. ಸಿದ್ದೇಶ್, ಚಿರತಗುಂಡು ದಡ್ಡಯ್ಯ, ಗೋವಿಂದ ರೆಡ್ಡಿ, ರಾಮಸಾಗರ ರಾಜಶೇಖರ್, ಸೇರಿದಂತೆ ಮುಖಂಡರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.1
- ಈದ್ ಮಿಲಾದ್ ಪ್ರಯುಕ್ತ ಸೂಳೆಬೈಲ್ನಲ್ಲಿ ಧಾರ್ಮಿಕ ಕಾರ್ಯಕ್ರಮ: ಮಕ್ಕಳಿಂದ ಕುರಾನ್ ಪಠಣ ಎ.ಪಿ.ಜೆ. ಅಬ್ದುಲ್ ಕಲಾಂ ನಗರದಲ್ಲಿ ಈದ್ ಮಿಲಾದ್ ಸಂಭ್ರಮ: ಅನ್ನಸಂತರ್ಪಣೆಯಲ್ಲಿ ಸಾವಿರಾರು ಮಂದಿ ಭಾಗಿ1
- 🩸 ಶಿಕ್ಷಕರ ದಿನಾಚರಣೆ ವಿಶೇಷ: ರಕ್ತದಾನ ಶಿಬಿರಕ್ಕೆ ಶಾಸಕ ಡಿ. ಎಂ.ಐಹೊಳೆ ಮಹತ್ವದ ಸ್ಪಷ್ಟನೆ #TeacherDay2026 #Blod #DMAihole #TeachersDay #A9TODAYNEWSKANNADA #BloodDonationCamp 🩸 ಶಿಕ್ಷಕರ ದಿನಾಚರಣೆ ವಿಶೇಷ: ರಕ್ತದಾನ ಶಿಬಿರಕ್ಕೆ ಶಾಸಕ ಡಿ. ಎಂ.ಐಹೊಳೆ ಮಹತ್ವದ ಸ್ಪಷ್ಟನೆ #TeacherDay2026 #Blod #DMAihole #TeachersDay #A9TODAYNEWSKANNADA #BloodDonationCamp1
- BNSS ಸೆಕ್ಷನ್ 35(3) ಅಡಿಯಲ್ಲಿ ನೋಟಿಸ್ ನೀಡಿ, ಬಂಧಿಸಿದ ಪೊಲೀಸರ ನಡೆಗೆ ಗರಂ ಆದ ನ್ಯಾಯಾಧೀಶರು. ಪೊಲೀಸರು BNSS ಸೆಕ್ಷನ್ 35(3) ಅಡಿಯಲ್ಲಿ ನೋಟಿಸ್ ನೀಡಿ, ಆಗಸ್ಟ್ 27ರಂದು ಹಾಜರಾಗುವಂತೆ ಸೂಚಿಸಿದ್ದರು. ಆದರೆ ಹಾಜರಾಗಬೇಕಾದ ದಿನಾಂಕಕ್ಕೂ ಎರಡು ದಿನ ಮುಂಚಿತವಾಗಿ, ಆಗಸ್ಟ್ 25ರಂದು ಅವರನ್ನು ಬಂಧಿಸಲಾಯಿತು.1