logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕೊಪ್ಪಳ - ನೀರಲಗಿ ಸರ್ಕಾರಿ ಪ್ರೌಢಶಾಲೆಗೆ ನೂತನ ಎಸ್‌ಡಿಎಂಸಿ ಸಮಿತಿ aksharakranti news ನೀರಲಗಿ ಸರ್ಕಾರಿ ಪ್ರೌಢಶಾಲೆಗೆ ನೂತನ ಎಸ್‌ಡಿಎಂಸಿ ಸಮಿತಿ ಕೊಪ್ಪಳ,: ತಾಲೂಕಿನ ನೀರಲಗಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ನೂತನ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್‌ಡಿಎಂಸಿ) ರಚಿಸಲಾಯಿತು. ನೂತನ ಎಸ್‌ಡಿಎಂಸಿ ಅಧ್ಯಕ್ಷರಾಗಿ ಅಶೋಕ ಚಿಂಚಲಿ ಆಯ್ಕೆಯಾಗಿದ್ದು, ಸದಸ್ಯರಾಗಿ ನಿರ್ಮಲ ಭಜಂತ್ರಿ, ಶಕುಂತಲಾ ಮಳ್ಳಪ್ಪನವರ್, ಪೀರಾಬಿ ನದಾಫ್, ಬಸಮ್ಮ ಮಣ್ಣೂರ, ರಾಮಪ್ಪ ವಡ್ಡೀನ್, ಪಂಪಣ್ಣ ಹೂಗಾರ್, ಅಂದಪ್ಪ ಕ್ವಾಟಾಳಿ ಹಾಗೂ ಭರಮಪ್ಪ ಬಡಿಗೇರ್ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷ ಅಶೋಕ ಚಿಂಚಲಿ ಮಾತನಾಡಿ, 2026-27ನೇ ಸಾಲಿನಲ್ಲಿ ಶಾಲೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿ ಉತ್ತೀರ್ಣರಾಗುವ ಒಬ್ಬ ವಿದ್ಯಾರ್ಥಿಗೆ ₹5,000 ಬಹುಮಾನ ನೀಡುವುದಾಗಿ ಘೋಷಿಸಿದರು. ಇದಕ್ಕೆ ಸ್ಪಂದಿಸಿದ ಎಸ್‌ಡಿಎಂಸಿ ಸದಸ್ಯರೆಲ್ಲರೂ ವಿಷಯವಾರು ಅತಿ ಹೆಚ್ಚು ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ತಲಾ ₹1,000 ಬಹುಮಾನ ನೀಡುವುದಾಗಿ ಘೋಷಿಸಿದರು. ವಿದ್ಯಾರ್ಥಿಗಳಲ್ಲಿ ಶೈಕ್ಷಣಿಕ ಸಾಧನೆಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಎಸ್‌ಡಿಎಂಸಿ ಕೈಗೊಂಡಿರುವ ಈ ನಿರ್ಧಾರಕ್ಕೆ ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಾಲೆಯ ಪ್ರಭಾರಿ ಮುಖ್ಯೋಪಾಧ್ಯಾಯ ಭೀಮನಗೌಡ ಪೊಲೀಸ್ ಪಾಟೀಲ್, ಶಿಕ್ಷಕರಾದ ಸಣ್ಣದೇವಪ್ಪ ಮಂಜಾಲಿ, ನಾಗವೇಣಿ, ವಿಜಯಲಕ್ಷ್ಮಿ, ಮಧು, ಅಮೃತ  ಹಾಗೂ ಗೀತಾ ಉಪಸ್ಥಿತರಿದ್ದರು.

2 hrs ago
user_ಅಕ್ಷರಕ್ರಾಂತಿ ನ್ಯೂಸ್
ಅಕ್ಷರಕ್ರಾಂತಿ ನ್ಯೂಸ್
Local News Reporter ಕೊಪ್ಪಳ, ಕೊಪ್ಪಳ, ಕರ್ನಾಟಕ•
2 hrs ago
7c31cd25-c3f7-4b4d-967d-1f4352ef23d9

ಕೊಪ್ಪಳ - ನೀರಲಗಿ ಸರ್ಕಾರಿ ಪ್ರೌಢಶಾಲೆಗೆ ನೂತನ ಎಸ್‌ಡಿಎಂಸಿ ಸಮಿತಿ aksharakranti news ನೀರಲಗಿ ಸರ್ಕಾರಿ ಪ್ರೌಢಶಾಲೆಗೆ ನೂತನ ಎಸ್‌ಡಿಎಂಸಿ ಸಮಿತಿ ಕೊಪ್ಪಳ,: ತಾಲೂಕಿನ ನೀರಲಗಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ನೂತನ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್‌ಡಿಎಂಸಿ) ರಚಿಸಲಾಯಿತು. ನೂತನ ಎಸ್‌ಡಿಎಂಸಿ ಅಧ್ಯಕ್ಷರಾಗಿ ಅಶೋಕ ಚಿಂಚಲಿ ಆಯ್ಕೆಯಾಗಿದ್ದು, ಸದಸ್ಯರಾಗಿ ನಿರ್ಮಲ ಭಜಂತ್ರಿ, ಶಕುಂತಲಾ ಮಳ್ಳಪ್ಪನವರ್, ಪೀರಾಬಿ ನದಾಫ್, ಬಸಮ್ಮ ಮಣ್ಣೂರ, ರಾಮಪ್ಪ ವಡ್ಡೀನ್, ಪಂಪಣ್ಣ ಹೂಗಾರ್, ಅಂದಪ್ಪ ಕ್ವಾಟಾಳಿ ಹಾಗೂ ಭರಮಪ್ಪ ಬಡಿಗೇರ್ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷ ಅಶೋಕ ಚಿಂಚಲಿ ಮಾತನಾಡಿ, 2026-27ನೇ ಸಾಲಿನಲ್ಲಿ ಶಾಲೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿ ಉತ್ತೀರ್ಣರಾಗುವ ಒಬ್ಬ ವಿದ್ಯಾರ್ಥಿಗೆ ₹5,000 ಬಹುಮಾನ ನೀಡುವುದಾಗಿ ಘೋಷಿಸಿದರು. ಇದಕ್ಕೆ ಸ್ಪಂದಿಸಿದ ಎಸ್‌ಡಿಎಂಸಿ ಸದಸ್ಯರೆಲ್ಲರೂ ವಿಷಯವಾರು ಅತಿ ಹೆಚ್ಚು ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ತಲಾ ₹1,000 ಬಹುಮಾನ ನೀಡುವುದಾಗಿ ಘೋಷಿಸಿದರು. ವಿದ್ಯಾರ್ಥಿಗಳಲ್ಲಿ ಶೈಕ್ಷಣಿಕ ಸಾಧನೆಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಎಸ್‌ಡಿಎಂಸಿ ಕೈಗೊಂಡಿರುವ ಈ ನಿರ್ಧಾರಕ್ಕೆ ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಾಲೆಯ ಪ್ರಭಾರಿ ಮುಖ್ಯೋಪಾಧ್ಯಾಯ ಭೀಮನಗೌಡ ಪೊಲೀಸ್ ಪಾಟೀಲ್, ಶಿಕ್ಷಕರಾದ ಸಣ್ಣದೇವಪ್ಪ ಮಂಜಾಲಿ, ನಾಗವೇಣಿ, ವಿಜಯಲಕ್ಷ್ಮಿ, ಮಧು, ಅಮೃತ  ಹಾಗೂ ಗೀತಾ ಉಪಸ್ಥಿತರಿದ್ದರು.

More news from ಕರ್ನಾಟಕ and nearby areas
  • ಅಳವಂಡಿ-ಬೆಟ್ಟಗೇರಿ ಏತ ನೀರಾವರಿ ಯೋಜನೆಯಡಿ ಶೀಘ್ರವೇ 9000 ಎಕರೆ ಜಮೀನಿಗೆ ನೀರು: ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ಕೊಪ್ಪಳ : ತಾಲೂಕಿನ ಬಹುನಿರೀಕ್ಷಿತ ಅಳವಂಡಿ-ಬೆಟ್ಟಗೇರಿ ಏತ ನೀರಾವರಿ ಯೋಜನೆಯ ಕಾಮಗಾರಿಗಳು ಭರದಿಂದ ಸಾಗುತ್ತಿದ್ದು, ಶೀಘ್ರದಲ್ಲೇ ಒಟ್ಟು 9000 ಎಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲಾಗುವುದು ಎಂದು ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ್ ಅವರು ಹೇಳಿದರು. ನಗರದ ಎಸ್.ಎಫ್. ಶಾಲೆಯ ಎದುರುಗಡೆಯಿರುವ ತಮ್ಮ ಕಾರ್ಯಾಲಯದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಅಳವಂಡಿ ಬೇಟಗೇರಿ ಏತ ನೀರಾವರಿ ಯೋಜನೆಯು ಕೊಪ್ಪಳ ತಾಲ್ಲೂಕಿನ ಹನಕುಂಟಿ ಗ್ರಾಮದಿಂದ 2 ಕಿ.ಮೀ. ಹತ್ತಿರದಲ್ಲಿರುತ್ತದೆ. ಸದರಿ ಯೋಜನೆಗೆ ಮೂಲತಃ ಕೃಷ್ಣ ಕೊಳ್ಳದ ವ್ಯಾಪ್ತಿಯಲ್ಲಿ ಬರುವ ತುಂಗಭದ್ರ ನದಿಯಿಂದ 0.50 ಟಿ.ಎಂ.ಸಿ ನೀರನ್ನು ಹಂಚಿಕೆ ಮಾಡಲಾಗಿದೆ. ಈ ಯೋಜನೆಯಿಂದ ಕೊಪ್ಪಳ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ಒಟ್ಟು 9000 ಏಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಒದಗಿಸಬಹುದಾಗಿರುತ್ತದೆ. ಈ ಯೋಜನೆಗೆ ಈ ಹಿಂದೆ 87.10 ಕೋಟಿಗಳಿಗೆ ಡಿ.ಪಿ.ಆರ್ ಅನ್ನು ಸರ್ಕಾರಕ್ಕೆ ಸಲ್ಲಸಿ ದಿನಾಂಕ: 30.12.2014 ರಂದು ಆಡಳಿತಾತ್ಮಕ ಅನುಮೋದನೆ ನೀಡಲಾಗಿರುತ್ತದೆ ಎಂದರು. ಜಾಕ್‌ವೆಲ್, ಇನ್‌ಟೇಕ್ ಕಾಲುವೆ. ರೈಸಿಂಗ್ ಮೇನ್, ಡೆಲಿವರಿ ಚೇಂಬರ್ ಹಾಗೂ ಟ್ರಾನ್ಸ್‌ಮಿಷನ್ ಲೈನ್, 33 ಕೆವಿ ಸಬ್ ಸ್ಟೇಷನ್ ನಿರ್ಮಾಣ ಕಾಮಗಾರಿಗಳನ್ನು ಗುತ್ತಿಗೆದಾರರಾದ ಜಿ.ಶಂಕರ್ ರವರಿಗೆ ಟೆಂಡ‌ರ್ ಆಧಾರದ ಮೇಲೆ 61.30 ಕೋಟಿಗಳಿಗೆ 21.02.2016 ರಂದು ವಹಿಸಲಾಗಿತ್ತು. ಈ ಯೋಜನೆಯಡಿ ಜಾಕ್‌ವೆಲ್, ಇನ್‌ಟೀಕ್ ಕಾಲುವೆ ಉದ್ದ 1.02 ಕಿ.ಮೀ. 16.50ಕಿ.ಮೀ ಉದ್ದ ಎಂಎಸ್ ರೈಸಿಂಗ್ ಮೇನ್, 1760 ಹೆಚ್.ಪಿ ಸಾಮರ್ಥ್ಯದ 2+1 ಪಂಪ್ ಮತ್ತು ಮೋಟಾರಗಳು, 2 ಡೆಲವರಿ ಚೇಂಬರ್‌ಗಳು. ಜಾಕ್‌ವೆಲ್ ಪಕ್ಕದಲ್ಲಿ 33/6.6 ಕೆವಿ ಸಬ್ ಸ್ಟೇಷನ್, 6.10 ಕಿ.ಮೀ ಉದ್ದ ಟ್ರಾನ್ಸ್‌ಮಿಷನ್ ಲೈನ್ ಹಾಗೂ ಟರ್ಮಿನಲ್ ಬೇ ಸಿರ್ಮಿಸಲಾಗಿರುತ್ತದೆ. ದಿನಾಂಕ 10.09.2026 ರಂದು ಸಬ್ ಸ್ಟೇಷನ್ ಚಾರ್ಜ್ ಮಾಡಲಾಗಿರುತ್ತದೆ ಎಂದು ಹೇಳಿದರು. ಪ್ರತಿ ಪಂಪ್‌ನಿಂದ 28.28 ಕ್ಯೂಸೆಕ್ಸ್ ರಂತೆ ಒಟ್ಟು 56.56 ಕ್ಯೂಸೆಕ್ಸ್ ನೀರನ್ನು ಹರಿಸಲಾಗುವುದು ಹಾಗೂ ಜಲಾಶಯದ ನೀರಿನ ಮಟ್ಟ 1605.00 ಅಡಿ (ಜಲಾಶಯದ ಸಾಮರ್ಥ್ಯ 28.70 ಟಿ.ಎಂ.ಸಿ ವರೆಗು) ತಲುಪುವವರೆಗೆ ಲಭ್ಯವಿರುವ ನೀರನ್ನು ಪಡೆಯಬಹುದು. ಈ ಯೋಜನೆಯ ಹೆಚ್ಚುವರಿ 3000 ಎಕರೆ ಕ್ಷೇತ್ರದ ನೀರಾವರಿ ಕಲ್ಪಿಸುವ ಕಾಮಗಾರಿಯನ್ನು ಎ ವಿಆರ್ ಕನ್ಸಟ್ರಕ್ಷನ್ಸ್ ಇವರಿಗೆ ರೂ:4.59 ಕೋಟಿಗಳಿಗೆ ದಿನಾಂಕ: 30/03/2021 ರಂದು (9 ತಿಂಗಳ ಅವಧಿಗೆ) ಟರ್ನಕೀ ಆಧಾರದ ಮೇಲೆ ವಹಿಸಿದ್ದು, ಈ ಕಾಮಗಾರಿಯಲ್ಲಿ ರೈಸಿಂಗ್ ಮೇನ್ ಪೂರ್ಣಗೊಂಡಿದೆ ಮತ್ತು ಪಂಪುಗಳನ್ನು ಅಳವಡಿಸುವುದು ಹಾಗೂ ಸಬ್‌ಸ್ಟೇಷನ್ ಕಾಮಗಾರಿಗಳು ಬಾಕಿ ಉಳಿದಿರುತ್ತದೆ ಎಂದರು. ಪ್ರಸ್ತುತ ಅಳವಂಡಿ-ಬೆಟ್ಟಗೇರಿ ಏತ ನೀರಾವರಿ ಯೋಜನೆಯ ಪರಿಷ್ಕೃತ ಡಿ.ಪಿ.ಆರ್ ಅನ್ನು ಕರ್ನಾಟಕ ನೀರಾವರಿ ನಿಗಮದ ನಿರ್ದೇಶಕರ ಮಂಡಳಿಯ 105ನೇ ಸಭೆಯಲ್ಲಿ ಮಂಡಿಸಿದ್ದು. ರೂ.211.00 ಕೋಟಿಗಳಿಗೆ ಅನುಮೋದನೆ ನೀಡಿರುತ್ತಾರೆ. ಯೋಜನೆಯಡಿ 6000 ಎಕರೆ ಜಮೀನುಗಳಗೆ ಈಗಾಗಲೇ ಒಟ್ಟಾರೆ 39.78 ಕಿ.ಮೀ ಉದ್ದದ ಮುಖ್ಯ ಕಾಲುವೆ ಹಾಗೂ ಉಪ ಕಾಲುವೆಗಳ ನಿರ್ಮಾಣ ಪೂರ್ಣಗೊಂಡಿರುತ್ತದೆ ಎಂದು ತಿಳಿಸಿದರು. 3000 ಏಕರೆ ಜಮೀನುಗಳಗೆ ಮಧ್ಯ ಪ್ರದೇಶ ಮಾದರಿಯ ಮುಖ್ಯ ಪೈಪ್‌ಲೈನ್ ಹಾಗೂ ವಿತರಣಾ ಕಾಲುವೆ ಪೈಪ್‌ಲೈನ್ ಕಾಮಗಾರಿಯನ್ನು ರೂ. 11.50 ಕೋಟಿಗಳಿಗೆ ಟೆಂಡರ್ ಕರೆಯಲಾಗಿದ್ದು, ಚಿದು ಇನ್ಫ್ರಾಟೆಕ್ ಪ್ರೈ.ಲಿ (CHIDU INFRATECH PRIVATE LIMITED) ಇವರಿಗೆ ರೂ:11.80 ಕೋಟಿಗಳಿಗೆ ದಿನಾಂಕ: 22/08/2025 ರಂದು (9 ತಿಂಗಳ ಅವಧಿಗೆ) ಟರ್ನಕೀ ಆಧಾರದ ಮೇಲೆ ವಹಿಸಲಾಗಿರುತ್ತದೆ. ಈ ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿರುತ್ತದೆ ಎಂದರು. ಡೆಲಿವರಿ ಚೇಂಬರ್ ನಿಂದ ಬ್ಲಾಕ್-1 ಗೆ ಹೆ.ಡಿ.ಪಿ.ಇ ಪೈಪ್ (Dia-355 to 125) ನ ಒಟ್ಟು ಉದ್ದ 8.7 ಕಿ.ಮೀ, ಪೈಪ್ ನೆಟ್‌ವರ್ಕ್ ನಿಂದ 1243 ಎಕರೆ ಬ್ಲಾಕ್-2 ಗೆ ಎಂಎಸ್ ಪೈಪ್ (Dia-380, 360, 330) ಹಾಗೂ ಹೆ.ಡಿ.ಪಿ.ಇ ಪೈಪ್ (Dia-355 to 125)ನ ಒಟ್ಟು ಉದ್ದ 16.82 ಕಿ.ಮೀ ಪೈಪ್ ನೆಟ್‌ವರ್ಕ್ ನಿಂದ 1757 ಎಕರೆ ಒಟ್ಟಾರೆ 3000 ಎಕರೆ ಪ್ರದೇಶಕ್ಕೆ ನೀರಾವರಿ ಕಲ್ಪಸಲು ಯೋಜಿಸಲಾಗಿರುತ್ತದೆ. ಪ್ರತಿ 20 ಹೆಕ್ಟೇರ್ ಜಮೀನುಗಳಗೆ ಪೈಪ್‌ ಗಳಂದ ಚೆಕ್ ಓಟ್ ಲೆಟ್ ನಿಂದಾ ನೀರನ್ನು ಒದಗಿಸಲಾಗುವುದು ಎಂದು ಹೇಳಿದರು. *ಒಟ್ಟು 9 ಹಳ್ಳಿಗಳಿಗೆ ಅನುಕೂಲ:* ಅಳವಂಡಿ-ಬೆಟ್ಟಗೇರಿ ಏತ ನೀರಾವರಿ ಯೋಜನೆಯಿಂದ ಕೊಪ್ಪಳ ತಾಲೂಕಿನ ಮೈನಾಳ್ಳಿ, ಹಂದ್ರಾಳ, ಅಳವಂಡಿ, ಕವಲೂರು, ಹಿರೇಸಿಂದೋಗಿ, ಬಿಕ್ಕನಹಳ್ಳಿ, ಬೆಟ್ಟಗೇರಿ ಹಾಗೂ ಕುಕನೂರು ತಾಲೂಕಿನ ತಳಕಲ್ಲು, ಕೋಮಲಾಪುರ ಸೇರಿದಂತೆ ಒಟ್ಟು 9 ಗ್ರಾಮಗಳ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ದೊರೆಯಲಿದೆ. ಅಲ್ಲದೆ, 9000 ಎಕರೆ ಹೊಲಗಾಲುವೆಗಳ ನಿರ್ಮಾಣಕ್ಕಾಗಿ 47 ಕೋಟಿ ರೂ. ಅನುದಾನ ಅಗತ್ಯವಿದೆ ಎಂದು ಶಾಸಕರು ವಿವರಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಂಸದರಾದ ಕರಡಿ ಸಂಗಣ್ಣ, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರಸನ್ನ ಗಡಾದ, ಜಿ.ಪಂ ಮಾಜಿ ಅಧ್ಯಕ್ಷರಾದ ಎಸ್.ಬಿ. ನಾಗರಳ್ಳಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
    1
    ಅಳವಂಡಿ-ಬೆಟ್ಟಗೇರಿ ಏತ ನೀರಾವರಿ ಯೋಜನೆಯಡಿ ಶೀಘ್ರವೇ 9000 ಎಕರೆ ಜಮೀನಿಗೆ ನೀರು: ಶಾಸಕ ಕೆ.ರಾಘವೇಂದ್ರ ಹಿಟ್ನಾಳ್
ಕೊಪ್ಪಳ : ತಾಲೂಕಿನ ಬಹುನಿರೀಕ್ಷಿತ ಅಳವಂಡಿ-ಬೆಟ್ಟಗೇರಿ ಏತ ನೀರಾವರಿ ಯೋಜನೆಯ ಕಾಮಗಾರಿಗಳು ಭರದಿಂದ ಸಾಗುತ್ತಿದ್ದು, ಶೀಘ್ರದಲ್ಲೇ ಒಟ್ಟು 9000 ಎಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲಾಗುವುದು ಎಂದು ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ್ ಅವರು ಹೇಳಿದರು.
ನಗರದ ಎಸ್.ಎಫ್. ಶಾಲೆಯ ಎದುರುಗಡೆಯಿರುವ ತಮ್ಮ ಕಾರ್ಯಾಲಯದಲ್ಲಿ ಮಂಗಳವಾರ  ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಅಳವಂಡಿ ಬೇಟಗೇರಿ ಏತ ನೀರಾವರಿ ಯೋಜನೆಯು ಕೊಪ್ಪಳ ತಾಲ್ಲೂಕಿನ ಹನಕುಂಟಿ ಗ್ರಾಮದಿಂದ 2 ಕಿ.ಮೀ. ಹತ್ತಿರದಲ್ಲಿರುತ್ತದೆ. ಸದರಿ ಯೋಜನೆಗೆ ಮೂಲತಃ ಕೃಷ್ಣ ಕೊಳ್ಳದ ವ್ಯಾಪ್ತಿಯಲ್ಲಿ ಬರುವ ತುಂಗಭದ್ರ ನದಿಯಿಂದ 0.50 ಟಿ.ಎಂ.ಸಿ ನೀರನ್ನು ಹಂಚಿಕೆ ಮಾಡಲಾಗಿದೆ. ಈ ಯೋಜನೆಯಿಂದ ಕೊಪ್ಪಳ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ಒಟ್ಟು 9000 ಏಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಒದಗಿಸಬಹುದಾಗಿರುತ್ತದೆ. ಈ ಯೋಜನೆಗೆ ಈ ಹಿಂದೆ 87.10 ಕೋಟಿಗಳಿಗೆ ಡಿ.ಪಿ.ಆರ್ ಅನ್ನು ಸರ್ಕಾರಕ್ಕೆ ಸಲ್ಲಸಿ ದಿನಾಂಕ: 30.12.2014 ರಂದು ಆಡಳಿತಾತ್ಮಕ ಅನುಮೋದನೆ ನೀಡಲಾಗಿರುತ್ತದೆ ಎಂದರು.
ಜಾಕ್‌ವೆಲ್, ಇನ್‌ಟೇಕ್ ಕಾಲುವೆ. ರೈಸಿಂಗ್ ಮೇನ್, ಡೆಲಿವರಿ ಚೇಂಬರ್ ಹಾಗೂ ಟ್ರಾನ್ಸ್‌ಮಿಷನ್ ಲೈನ್, 33 ಕೆವಿ ಸಬ್ ಸ್ಟೇಷನ್ ನಿರ್ಮಾಣ ಕಾಮಗಾರಿಗಳನ್ನು ಗುತ್ತಿಗೆದಾರರಾದ ಜಿ.ಶಂಕರ್ ರವರಿಗೆ ಟೆಂಡ‌ರ್ ಆಧಾರದ ಮೇಲೆ 61.30 ಕೋಟಿಗಳಿಗೆ 21.02.2016 ರಂದು ವಹಿಸಲಾಗಿತ್ತು. ಈ ಯೋಜನೆಯಡಿ ಜಾಕ್‌ವೆಲ್, ಇನ್‌ಟೀಕ್ ಕಾಲುವೆ ಉದ್ದ 1.02 ಕಿ.ಮೀ. 16.50ಕಿ.ಮೀ ಉದ್ದ ಎಂಎಸ್ ರೈಸಿಂಗ್ ಮೇನ್, 1760 ಹೆಚ್.ಪಿ ಸಾಮರ್ಥ್ಯದ 2+1 ಪಂಪ್ ಮತ್ತು ಮೋಟಾರಗಳು, 2 ಡೆಲವರಿ ಚೇಂಬರ್‌ಗಳು. ಜಾಕ್‌ವೆಲ್ ಪಕ್ಕದಲ್ಲಿ 33/6.6 ಕೆವಿ ಸಬ್ ಸ್ಟೇಷನ್, 6.10 ಕಿ.ಮೀ ಉದ್ದ ಟ್ರಾನ್ಸ್‌ಮಿಷನ್ ಲೈನ್ ಹಾಗೂ ಟರ್ಮಿನಲ್ ಬೇ ಸಿರ್ಮಿಸಲಾಗಿರುತ್ತದೆ. ದಿನಾಂಕ 10.09.2026 ರಂದು ಸಬ್ ಸ್ಟೇಷನ್ ಚಾರ್ಜ್ ಮಾಡಲಾಗಿರುತ್ತದೆ ಎಂದು ಹೇಳಿದರು.
ಪ್ರತಿ ಪಂಪ್‌ನಿಂದ 28.28 ಕ್ಯೂಸೆಕ್ಸ್ ರಂತೆ ಒಟ್ಟು 56.56 ಕ್ಯೂಸೆಕ್ಸ್ ನೀರನ್ನು ಹರಿಸಲಾಗುವುದು ಹಾಗೂ ಜಲಾಶಯದ ನೀರಿನ ಮಟ್ಟ 1605.00 ಅಡಿ (ಜಲಾಶಯದ ಸಾಮರ್ಥ್ಯ 28.70 ಟಿ.ಎಂ.ಸಿ ವರೆಗು) ತಲುಪುವವರೆಗೆ ಲಭ್ಯವಿರುವ ನೀರನ್ನು ಪಡೆಯಬಹುದು. ಈ ಯೋಜನೆಯ ಹೆಚ್ಚುವರಿ 3000 ಎಕರೆ ಕ್ಷೇತ್ರದ ನೀರಾವರಿ ಕಲ್ಪಿಸುವ ಕಾಮಗಾರಿಯನ್ನು ಎ ವಿಆರ್ ಕನ್ಸಟ್ರಕ್ಷನ್ಸ್ ಇವರಿಗೆ ರೂ:4.59 ಕೋಟಿಗಳಿಗೆ ದಿನಾಂಕ: 30/03/2021 ರಂದು (9 ತಿಂಗಳ ಅವಧಿಗೆ) ಟರ್ನಕೀ ಆಧಾರದ ಮೇಲೆ ವಹಿಸಿದ್ದು, ಈ ಕಾಮಗಾರಿಯಲ್ಲಿ ರೈಸಿಂಗ್ ಮೇನ್ ಪೂರ್ಣಗೊಂಡಿದೆ ಮತ್ತು ಪಂಪುಗಳನ್ನು ಅಳವಡಿಸುವುದು ಹಾಗೂ ಸಬ್‌ಸ್ಟೇಷನ್ ಕಾಮಗಾರಿಗಳು ಬಾಕಿ ಉಳಿದಿರುತ್ತದೆ ಎಂದರು.
ಪ್ರಸ್ತುತ ಅಳವಂಡಿ-ಬೆಟ್ಟಗೇರಿ ಏತ ನೀರಾವರಿ ಯೋಜನೆಯ ಪರಿಷ್ಕೃತ ಡಿ.ಪಿ.ಆರ್ ಅನ್ನು ಕರ್ನಾಟಕ ನೀರಾವರಿ ನಿಗಮದ ನಿರ್ದೇಶಕರ ಮಂಡಳಿಯ 105ನೇ ಸಭೆಯಲ್ಲಿ ಮಂಡಿಸಿದ್ದು. ರೂ.211.00 ಕೋಟಿಗಳಿಗೆ ಅನುಮೋದನೆ ನೀಡಿರುತ್ತಾರೆ. ಯೋಜನೆಯಡಿ 6000 ಎಕರೆ ಜಮೀನುಗಳಗೆ ಈಗಾಗಲೇ ಒಟ್ಟಾರೆ 39.78 ಕಿ.ಮೀ ಉದ್ದದ ಮುಖ್ಯ ಕಾಲುವೆ ಹಾಗೂ ಉಪ ಕಾಲುವೆಗಳ ನಿರ್ಮಾಣ ಪೂರ್ಣಗೊಂಡಿರುತ್ತದೆ ಎಂದು ತಿಳಿಸಿದರು.
3000 ಏಕರೆ ಜಮೀನುಗಳಗೆ ಮಧ್ಯ ಪ್ರದೇಶ ಮಾದರಿಯ ಮುಖ್ಯ ಪೈಪ್‌ಲೈನ್ ಹಾಗೂ ವಿತರಣಾ ಕಾಲುವೆ ಪೈಪ್‌ಲೈನ್ ಕಾಮಗಾರಿಯನ್ನು ರೂ. 11.50 ಕೋಟಿಗಳಿಗೆ ಟೆಂಡರ್ ಕರೆಯಲಾಗಿದ್ದು, ಚಿದು ಇನ್ಫ್ರಾಟೆಕ್ ಪ್ರೈ.ಲಿ (CHIDU INFRATECH PRIVATE LIMITED) ಇವರಿಗೆ ರೂ:11.80 ಕೋಟಿಗಳಿಗೆ ದಿನಾಂಕ: 22/08/2025 ರಂದು (9 ತಿಂಗಳ ಅವಧಿಗೆ) ಟರ್ನಕೀ ಆಧಾರದ ಮೇಲೆ ವಹಿಸಲಾಗಿರುತ್ತದೆ. ಈ ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿರುತ್ತದೆ ಎಂದರು.
ಡೆಲಿವರಿ ಚೇಂಬರ್ ನಿಂದ ಬ್ಲಾಕ್-1 ಗೆ ಹೆ.ಡಿ.ಪಿ.ಇ ಪೈಪ್ (Dia-355 to 125) ನ ಒಟ್ಟು ಉದ್ದ 8.7 ಕಿ.ಮೀ, ಪೈಪ್ ನೆಟ್‌ವರ್ಕ್ ನಿಂದ 1243 ಎಕರೆ ಬ್ಲಾಕ್-2 ಗೆ ಎಂಎಸ್ ಪೈಪ್  (Dia-380, 360, 330) ಹಾಗೂ ಹೆ.ಡಿ.ಪಿ.ಇ ಪೈಪ್ (Dia-355 to 125)ನ  ಒಟ್ಟು ಉದ್ದ 16.82 ಕಿ.ಮೀ ಪೈಪ್ ನೆಟ್‌ವರ್ಕ್ ನಿಂದ 1757 ಎಕರೆ ಒಟ್ಟಾರೆ 3000 ಎಕರೆ ಪ್ರದೇಶಕ್ಕೆ ನೀರಾವರಿ ಕಲ್ಪಸಲು ಯೋಜಿಸಲಾಗಿರುತ್ತದೆ. ಪ್ರತಿ 20 ಹೆಕ್ಟೇರ್ ಜಮೀನುಗಳಗೆ ಪೈಪ್‌ ಗಳಂದ ಚೆಕ್ ಓಟ್ ಲೆಟ್ ನಿಂದಾ ನೀರನ್ನು ಒದಗಿಸಲಾಗುವುದು ಎಂದು ಹೇಳಿದರು.
*ಒಟ್ಟು 9 ಹಳ್ಳಿಗಳಿಗೆ ಅನುಕೂಲ:* ಅಳವಂಡಿ-ಬೆಟ್ಟಗೇರಿ ಏತ ನೀರಾವರಿ ಯೋಜನೆಯಿಂದ ಕೊಪ್ಪಳ ತಾಲೂಕಿನ ಮೈನಾಳ್ಳಿ, ಹಂದ್ರಾಳ, ಅಳವಂಡಿ, ಕವಲೂರು, ಹಿರೇಸಿಂದೋಗಿ, ಬಿಕ್ಕನಹಳ್ಳಿ, ಬೆಟ್ಟಗೇರಿ ಹಾಗೂ ಕುಕನೂರು ತಾಲೂಕಿನ ತಳಕಲ್ಲು, ಕೋಮಲಾಪುರ ಸೇರಿದಂತೆ ಒಟ್ಟು 9 ಗ್ರಾಮಗಳ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ದೊರೆಯಲಿದೆ. ಅಲ್ಲದೆ, 9000 ಎಕರೆ ಹೊಲಗಾಲುವೆಗಳ ನಿರ್ಮಾಣಕ್ಕಾಗಿ 47 ಕೋಟಿ ರೂ. ಅನುದಾನ ಅಗತ್ಯವಿದೆ ಎಂದು ಶಾಸಕರು ವಿವರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಂಸದರಾದ ಕರಡಿ ಸಂಗಣ್ಣ, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರಸನ್ನ ಗಡಾದ, ಜಿ.ಪಂ ಮಾಜಿ ಅಧ್ಯಕ್ಷರಾದ ಎಸ್.ಬಿ. ನಾಗರಳ್ಳಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
    user_STAR OF KOPPAL
    STAR OF KOPPAL
    Local News Reporter ಕೊಪ್ಪಳ, ಕೊಪ್ಪಳ, ಕರ್ನಾಟಕ•
    9 hrs ago
  • ಮಸೀದಿಯ ಪಕ್ಕದಲ್ಲಿ ಕೂತ ‘ಹುಡಿಯದ ಓಣಿಯ ಸಾಮ್ರಾಟ್’! ಮುಂಡರಗಿಯಲ್ಲಿ ಸೌಹಾರ್ದತೆಯ ಗಣೇಶೋತ್ಸವ ಮೆರೆದ ಮುಸ್ಲಿಂ ಮಕ್ಕಳು! ಮಸೀದಿಯ ಪಕ್ಕದಲ್ಲಿ ಕೂತ ‘ಹುಡಿಯದ ಓಣಿಯ ಸಾಮ್ರಾಟ್’! ಮುಂಡರಗಿಯಲ್ಲಿ ಸೌಹಾರ್ದತೆಯ ಗಣೇಶೋತ್ಸವ ಮೆರೆದ ಮುಸ್ಲಿಂ ಮಕ್ಕಳು! ನಮಸ್ಕಾರ ಬಂಧುಗಳೇ... ​ನಾಡಿನಾದ್ಯಂತ ಗಣೇಶ ಚತುರ್ಥಿಯ ಸಂಭ್ರಮ ಕಳೆಗಟ್ಟಿದೆ. ಬೀದಿ ಬೀದಿಗಳಲ್ಲಿ ವಿಘ್ನನಿವಾರಕನ ಜಯಘೋಷ ಮೊಳಗುತ್ತಿದೆ. ಆದರೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ 'ಹುಡಿಯದ ಓಣಿ'ಯಲ್ಲಿ ಕಂಡುಬಂದ ಈ ದೃಶ್ಯ ಮಾತ್ರ ಇಡೀ ನಾಡಿನ ಗಮನ ಸೆಳೆಯುವಂತಿದೆ, ಪ್ರತಿಯೊಬ್ಬರ ಮನ ಮುಟ್ಟುವಂತಿದೆ! ​ಹೌದು, ಇಲ್ಲಿ ಒಂದೆಡೆ ಅಲ್ಲಾಹನ ಪ್ರಾರ್ಥನೆ ನಡೆಯುವ ಮಸೀದಿ ಇದ್ದರೆ... ಅದೇ ಮಸೀದಿಯ ಅಂಗಳದ ಪಕ್ಕದಲ್ಲೇ ಸಿದ್ದಿವಿನಾಯಕ ವಿರಾಜಮಾನನಾಗಿದ್ದಾನೆ! ವಿಶೇಷ ಎಂದರೆ, ಯಾವುದೇ ಜಾತಿ-ಧರ್ಮದ ಹಂಗಿಲ್ಲದೆ, ಇಲ್ಲಿನ ಮುಸ್ಲಿಂ ಸಮುದಾಯದ ಪುಟ್ಟ ಮಕ್ಕಳು ಅತ್ಯಂತ ಶ್ರದ್ಧಾ-ಭಕ್ತಿಯಿಂದ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿದ್ದಾರೆ. ತಮ್ಮ ಕೈಯಾರೆ ಕಾಯಿ ಒಡೆದು, ಪೂಜೆ ಸಲ್ಲಿಸಿ, ಪ್ರಸಾದ ಹಂಚಿ ಹಬ್ಬದ ಸಂಭ್ರಮದಲ್ಲಿದ್ದಾರೆ. ​ಇನ್ನು ಅತ್ಯಂತ ಖುಷಿಯ ವಿಷಯ ಎಂದರೆ... ಇಲ್ಲಿನ ಮಕ್ಕಳು ಕೇವಲ ಗಣಪತಿಯನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸುತ್ತಿಲ್ಲ, ಬದಲಾಗಿ ಅತ್ಯಂತ ಪ್ರೀತಿಯಿಂದ ಈ ಮೂರ್ತಿಗೆ 'ಹುಡಿಯದ ಓಣಿಯ ಸಾಮ್ರಾಟ್' ಎಂದೇ ನಾಮಕರಣ ಮಾಡಿದ್ದಾರೆ! ​ಸಾಮ್ರಾಟ್ ಎಂಬ ಹೆಸರಿನಲ್ಲಿ ಗಣಪತಿಯನ್ನು ನೆನೆಯುತ್ತಿರುವ ಈ ಮಕ್ಕಳ ಮನಸ್ಸಿನಲ್ಲಿ 'ನಾವೆಲ್ಲರೂ ಒಂದೇ' ಎನ್ನುವ ಭ್ರಾತೃತ್ವದ ಸದ್ಭಾವನೆ ಆಳವಾಗಿ ಬೇರೂರಿದೆ. ಧರ್ಮಗಳ ಹೆಸರಿನಲ್ಲಿ ಕಹಿ ವಾತಾವರಣ ಸೃಷ್ಟಿಯಾಗುವ ಈ ದಿನಗಳಲ್ಲಿ, ಮುಂಡರಗಿಯ ಈ ಪುಟ್ಟ ಮಕ್ಕಳು ಇಡೀ ಸಮಾಜಕ್ಕೇ ಪ್ರೀತಿ ಮತ್ತು ಸೌಹಾರ್ದತೆಯ ದೊಡ್ಡ ಪಾಠ ಹೇಳಿಕೊಡುತ್ತಿದ್ದಾರೆ. ​ಶರೀಫ-ಶಿವಯೋಗಿಗಳು ನಡೆದ ಸೌಹಾರ್ದತೆಯ ನೆಲದಲ್ಲಿ, ಮುಂಡರಗಿಯ ಹುಡಿಯದ ಓಣಿಯ ಈ ಪುಟ್ಟ ಮಕ್ಕಳ ನಡೆ ಇಡೀ ನಾಡಿಗೆ ಭಾವೈಕ್ಯತೆಯ ಹೊಸ ಬೆಳಕನ್ನು ತೋರುತ್ತಿದೆ. ನಾವೆಲ್ಲರೂ ಒಂದೇ ಎನ್ನುವ ಈ ಮಕ್ಕಳ ಪ್ರೀತಿಗೆ ಕನ್ನಡಿಗರ ಪರವಾಗಿ ಹೃದಯಪೂರ್ವಕ ಸಾಷ್ಟಾಂಗ ನಮನಗಳು
    1
    ಮಸೀದಿಯ ಪಕ್ಕದಲ್ಲಿ ಕೂತ ‘ಹುಡಿಯದ ಓಣಿಯ ಸಾಮ್ರಾಟ್’!  ಮುಂಡರಗಿಯಲ್ಲಿ ಸೌಹಾರ್ದತೆಯ ಗಣೇಶೋತ್ಸವ ಮೆರೆದ ಮುಸ್ಲಿಂ ಮಕ್ಕಳು!
ಮಸೀದಿಯ ಪಕ್ಕದಲ್ಲಿ ಕೂತ ‘ಹುಡಿಯದ ಓಣಿಯ ಸಾಮ್ರಾಟ್’!  ಮುಂಡರಗಿಯಲ್ಲಿ ಸೌಹಾರ್ದತೆಯ ಗಣೇಶೋತ್ಸವ ಮೆರೆದ ಮುಸ್ಲಿಂ ಮಕ್ಕಳು!
ನಮಸ್ಕಾರ ಬಂಧುಗಳೇ...
​ನಾಡಿನಾದ್ಯಂತ ಗಣೇಶ ಚತುರ್ಥಿಯ ಸಂಭ್ರಮ ಕಳೆಗಟ್ಟಿದೆ. ಬೀದಿ ಬೀದಿಗಳಲ್ಲಿ ವಿಘ್ನನಿವಾರಕನ ಜಯಘೋಷ ಮೊಳಗುತ್ತಿದೆ. ಆದರೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ 'ಹುಡಿಯದ ಓಣಿ'ಯಲ್ಲಿ ಕಂಡುಬಂದ ಈ ದೃಶ್ಯ ಮಾತ್ರ ಇಡೀ ನಾಡಿನ ಗಮನ ಸೆಳೆಯುವಂತಿದೆ, ಪ್ರತಿಯೊಬ್ಬರ ಮನ ಮುಟ್ಟುವಂತಿದೆ!
​ಹೌದು, ಇಲ್ಲಿ ಒಂದೆಡೆ ಅಲ್ಲಾಹನ ಪ್ರಾರ್ಥನೆ ನಡೆಯುವ ಮಸೀದಿ ಇದ್ದರೆ... ಅದೇ ಮಸೀದಿಯ ಅಂಗಳದ ಪಕ್ಕದಲ್ಲೇ ಸಿದ್ದಿವಿನಾಯಕ ವಿರಾಜಮಾನನಾಗಿದ್ದಾನೆ! ವಿಶೇಷ ಎಂದರೆ, ಯಾವುದೇ ಜಾತಿ-ಧರ್ಮದ ಹಂಗಿಲ್ಲದೆ, ಇಲ್ಲಿನ ಮುಸ್ಲಿಂ ಸಮುದಾಯದ ಪುಟ್ಟ ಮಕ್ಕಳು ಅತ್ಯಂತ ಶ್ರದ್ಧಾ-ಭಕ್ತಿಯಿಂದ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿದ್ದಾರೆ. ತಮ್ಮ ಕೈಯಾರೆ ಕಾಯಿ ಒಡೆದು, ಪೂಜೆ ಸಲ್ಲಿಸಿ, ಪ್ರಸಾದ ಹಂಚಿ ಹಬ್ಬದ ಸಂಭ್ರಮದಲ್ಲಿದ್ದಾರೆ.
​ಇನ್ನು ಅತ್ಯಂತ ಖುಷಿಯ ವಿಷಯ ಎಂದರೆ... ಇಲ್ಲಿನ ಮಕ್ಕಳು ಕೇವಲ ಗಣಪತಿಯನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸುತ್ತಿಲ್ಲ, ಬದಲಾಗಿ ಅತ್ಯಂತ ಪ್ರೀತಿಯಿಂದ ಈ ಮೂರ್ತಿಗೆ 'ಹುಡಿಯದ ಓಣಿಯ ಸಾಮ್ರಾಟ್' ಎಂದೇ ನಾಮಕರಣ ಮಾಡಿದ್ದಾರೆ!
​ಸಾಮ್ರಾಟ್ ಎಂಬ ಹೆಸರಿನಲ್ಲಿ ಗಣಪತಿಯನ್ನು ನೆನೆಯುತ್ತಿರುವ ಈ ಮಕ್ಕಳ ಮನಸ್ಸಿನಲ್ಲಿ 'ನಾವೆಲ್ಲರೂ ಒಂದೇ' ಎನ್ನುವ ಭ್ರಾತೃತ್ವದ ಸದ್ಭಾವನೆ ಆಳವಾಗಿ ಬೇರೂರಿದೆ. ಧರ್ಮಗಳ ಹೆಸರಿನಲ್ಲಿ ಕಹಿ ವಾತಾವರಣ ಸೃಷ್ಟಿಯಾಗುವ ಈ ದಿನಗಳಲ್ಲಿ, ಮುಂಡರಗಿಯ ಈ ಪುಟ್ಟ ಮಕ್ಕಳು ಇಡೀ ಸಮಾಜಕ್ಕೇ ಪ್ರೀತಿ ಮತ್ತು ಸೌಹಾರ್ದತೆಯ ದೊಡ್ಡ ಪಾಠ ಹೇಳಿಕೊಡುತ್ತಿದ್ದಾರೆ.
​ಶರೀಫ-ಶಿವಯೋಗಿಗಳು ನಡೆದ ಸೌಹಾರ್ದತೆಯ ನೆಲದಲ್ಲಿ, ಮುಂಡರಗಿಯ ಹುಡಿಯದ ಓಣಿಯ ಈ ಪುಟ್ಟ ಮಕ್ಕಳ ನಡೆ ಇಡೀ ನಾಡಿಗೆ ಭಾವೈಕ್ಯತೆಯ ಹೊಸ ಬೆಳಕನ್ನು ತೋರುತ್ತಿದೆ. ನಾವೆಲ್ಲರೂ ಒಂದೇ ಎನ್ನುವ ಈ ಮಕ್ಕಳ ಪ್ರೀತಿಗೆ ಕನ್ನಡಿಗರ ಪರವಾಗಿ ಹೃದಯಪೂರ್ವಕ ಸಾಷ್ಟಾಂಗ ನಮನಗಳು
    user_Ranganath Kandagal
    Ranganath Kandagal
    TV News Anchor ಮುಂಡರಗಿ, ಗದಗ, ಕರ್ನಾಟಕ•
    14 hrs ago
  • ಬರದ ಬೇಗುದಿ: ಶೇಂಗಾ ಬೆಳೆ ಉಳಿಸಲು ಟ್ಯಾಂಕರ್ ನೀರಿನ ಮೊರೆ: ಸಾಲ ಮಾಡಿ ನೀರುಣಿಸುತ್ತಿರುವ ರೈತರು ಕೂಡ್ಲಿಗಿ: ಮಳೆ ಕೈಕೊಟ್ಟ ಪರಿಣಾಮ ಬಿತ್ತನೆ ಮಾಡಿರುವ ಶೇಂಗಾ ಬೆಳೆ ಒಣಗುವ ಹಂತಕ್ಕೆ ತಲುಪಿದ್ದು, ಬೆಳೆ ಉಳಿಸಿಕೊಳ್ಳಲು ರೈತರು ಪರದಾಡುವಂತಾಗಿದೆ. ಗುಡೇಕೋಟೆ ಗ್ರಾಮದ ರೈತ ಶಾಮ್ ರಾವ್ ಅವರು ಮಳೆಯ ನಿರೀಕ್ಷೆಯಲ್ಲಿದ್ದ ಶೇಂಗಾ ಬೆಳೆಗೆ ಟ್ಯಾಂಕರ್ ಮೂಲಕ ನೀರುಣಿಸುತ್ತಿರುವ ದೃಶ್ಯ ರೈತರ ಸಂಕಷ್ಟಕ್ಕೆ ಕನ್ನಡಿ ಹಿಡಿದಂತಾಗಿದೆ. ಶಾಮ್ ರಾವ್ ಅವರು ತಮ್ಮ ಮೂರುವರೆ ಎಕರೆ ಜಮೀನಿನಲ್ಲಿ ಶೇಂಗಾ ಬಿತ್ತನೆ ಮಾಡಿದ್ದು, ಉತ್ತಮ ಮಳೆಯ ನಿರೀಕ್ಷೆಯಲ್ಲಿದ್ದರು. ಆದರೆ ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಬೆಳೆ ತೇವಾಂಶದ ಕೊರತೆಯಿಂದ ಒಣಗುವ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಬೆಳೆ ಉಳಿಸಿಕೊಳ್ಳುವ ಕೊನೆಯ ಪ್ರಯತ್ನವಾಗಿ ಟ್ರ್ಯಾಕ್ಟರ್ ಮೂಲಕ ಟ್ಯಾಂಕರ್ ನೀರನ್ನು ಹೊಲಕ್ಕೆ ಸಾಗಿಸಿ ಶೇಂಗಾ ಬೆಳೆಗೆ ನೀರು ಹಾಯಿಸುತ್ತಿದ್ದಾರೆ. ಈಗಾಗಲೇ ಒಂದು ಟ್ಯಾಂಕರ್ ನೀರಿಗೆ ₹500ರಂತೆ 10 ಟ್ಯಾಂಕರ್ ನೀರು ಹಾಕಲಾಗಿದ್ದು, ನೀರಿಗಾಗಿಯೇ ಸುಮಾರು ₹5,000 ವೆಚ್ಚವಾಗಿದೆ. ಮುಂದಿನ ದಿನಗಳಲ್ಲಿಯೂ ಮಳೆ ಬಾರದಿದ್ದರೆ ಇನ್ನಷ್ಟು ನೀರು ಹಾಕಬೇಕಾದ ಅನಿವಾರ್ಯತೆ ರೈತನ ಮುಂದಿದೆ.
    1
    ಬರದ ಬೇಗುದಿ: ಶೇಂಗಾ ಬೆಳೆ ಉಳಿಸಲು ಟ್ಯಾಂಕರ್ ನೀರಿನ ಮೊರೆ: ಸಾಲ ಮಾಡಿ ನೀರುಣಿಸುತ್ತಿರುವ ರೈತರು 
ಕೂಡ್ಲಿಗಿ: ಮಳೆ ಕೈಕೊಟ್ಟ ಪರಿಣಾಮ ಬಿತ್ತನೆ ಮಾಡಿರುವ ಶೇಂಗಾ ಬೆಳೆ ಒಣಗುವ ಹಂತಕ್ಕೆ ತಲುಪಿದ್ದು, ಬೆಳೆ ಉಳಿಸಿಕೊಳ್ಳಲು ರೈತರು ಪರದಾಡುವಂತಾಗಿದೆ. ಗುಡೇಕೋಟೆ ಗ್ರಾಮದ ರೈತ ಶಾಮ್ ರಾವ್ ಅವರು ಮಳೆಯ ನಿರೀಕ್ಷೆಯಲ್ಲಿದ್ದ ಶೇಂಗಾ ಬೆಳೆಗೆ ಟ್ಯಾಂಕರ್ ಮೂಲಕ ನೀರುಣಿಸುತ್ತಿರುವ ದೃಶ್ಯ ರೈತರ ಸಂಕಷ್ಟಕ್ಕೆ ಕನ್ನಡಿ ಹಿಡಿದಂತಾಗಿದೆ.
ಶಾಮ್ ರಾವ್ ಅವರು ತಮ್ಮ ಮೂರುವರೆ ಎಕರೆ ಜಮೀನಿನಲ್ಲಿ ಶೇಂಗಾ ಬಿತ್ತನೆ ಮಾಡಿದ್ದು, ಉತ್ತಮ ಮಳೆಯ ನಿರೀಕ್ಷೆಯಲ್ಲಿದ್ದರು. ಆದರೆ ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಬೆಳೆ ತೇವಾಂಶದ ಕೊರತೆಯಿಂದ ಒಣಗುವ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಬೆಳೆ ಉಳಿಸಿಕೊಳ್ಳುವ ಕೊನೆಯ ಪ್ರಯತ್ನವಾಗಿ ಟ್ರ್ಯಾಕ್ಟರ್ ಮೂಲಕ ಟ್ಯಾಂಕರ್ ನೀರನ್ನು ಹೊಲಕ್ಕೆ ಸಾಗಿಸಿ ಶೇಂಗಾ ಬೆಳೆಗೆ ನೀರು ಹಾಯಿಸುತ್ತಿದ್ದಾರೆ. ಈಗಾಗಲೇ ಒಂದು ಟ್ಯಾಂಕರ್ ನೀರಿಗೆ ₹500ರಂತೆ 10 ಟ್ಯಾಂಕರ್ ನೀರು ಹಾಕಲಾಗಿದ್ದು, ನೀರಿಗಾಗಿಯೇ ಸುಮಾರು ₹5,000 ವೆಚ್ಚವಾಗಿದೆ. ಮುಂದಿನ ದಿನಗಳಲ್ಲಿಯೂ ಮಳೆ ಬಾರದಿದ್ದರೆ ಇನ್ನಷ್ಟು ನೀರು ಹಾಕಬೇಕಾದ ಅನಿವಾರ್ಯತೆ ರೈತನ ಮುಂದಿದೆ.
    user_ಹೂಡೇಂ ಮಂಜುನಾಥ
    ಹೂಡೇಂ ಮಂಜುನಾಥ
    Local News Reporter ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    52 min ago
  • *ಕೂಡ್ಲಿಗಿ : ನಾಗರೀಕ ಹಿತರಕ್ಷಣಾ ವೇದಿಕೆಯಿಂದ , ಅದ್ಧೂರಿ ಊರಗಣಪ ಪ್ರತಿಷ್ಠಾನೆ*-ವಿಜಯನಗರ ಜಿಲ್ಲೆ ಕೂಡ್ಲಿಗಿ : ಸೆಪ್ಟೆಂಬರ್ 14ರಂದು ಪಟ್ಟಣದ ಮೇನ್ ಬಾಯ್ಸ್ ಶಾಲೆಯ ಆವರಣದಲ್ಲಿ , ಶ್ರೀಗಣೇಶ ಚತುರ್ಥಿ ಪ್ರಯುಕ್ತ ನಾಗರೀಕ ಹಿತರಕ್ಷಣೆ ವೇದಿಕೆ ವತಿಯಿಂದ ಗಣೇಶ ಮೂರ್ತಿ ಪ್ರತಿಷ್ಠಾಮನೆ ಅದ್ಧೂರಿಯಾಗಿ ಜರುಗಿತು. ನಾಗರೀಕ ಹಿತರಕ್ಷಣ ವೇದಿಕೆ ಅಧ್ಯಕ್ಷರಾದ ಕಾವಲ್ಲಿ ಶಿವಪ್ಪನಾಯಕ ನೇತೃತ್ವದಲ್ಲಿ , ಪ್ರತಿ ವರ್ಷಗಳಂತೆಯೇ ಗಣೇಶ ಮೂರ್ತಿ ದ‍ಾನಿಗಳು. ಹಾಗೂ ಗೌಡ ಮನೆತನದ ಮುಖಂಡರಾದ , ಪಟ್ಟಣದ ಹೆಚ್.ವೀರನಗೌಡ ರವರ ಮನೆಯಿಂದ , ಗಣೇಶನ ಬೃಹತ್ ಗಾತ್ರದ ಗಣೇಶ ಮೂರ್ತಿಯನ್ನು. ಶಾಸ್ತ್ರೋಕ್ತವಾಗಿ ಪೂಜಿಸಿ ವಾಹನದಲ್ಲಿರಿಸಿಕೊಂಡು , ಪಟ್ಟಣದ ಪ್ರಮುಖ ರಸ್ತೆಯ ಮೂಲಕ ಬಹು ಅದ್ಧೂರಿಯಾಗಿ ಮೆರವಣಿಗೆ ಸಾಗಿ ವೇದಿಕೆಗೆ ಕರೆತರಲಾಯಿತು. ಪಟ್ಟಣದ ಶ್ರೀಚಂದ್ರಶೇಖರ ಆಜಾದ್ ರಂಗಮಂದಿರದ ವೇದಿಕೆ ಯಲ್ಲಿ , ಪುರೋಹಿತರಾದ ಎಮ್ ಎಮ್ ಉಮೇಶರವರ ನೇತೃತ್ವದಲ್ಲಿ. ಧಾರ್ಮಿಕ ವಿಧಿ ವಿಧಾನದೊಂದಿಗೆ ಪೂಜಿಸಿ ಪ್ರತಿಷ್ಠಾಪಿಸಲಾಯಿತು, ತದನಂತರ ಗಣೇಶ ಮೂರ್ತಿಯನ್ನು ಪ್ರತಿಷ್ಟಾಪಿಸಲಾಯಿತು. ನಂತರ ವೇದಭ್ರಾಹ್ಮಣ ಆರಾಧಕರಾದ ಬ್ರಹ್ಮಲಿಂಗಾಚಾರಿಗಳ ಪುರೋಹಿತ್ವದಲ್ಲಿ , ಪೂಜಾ ಕೈಂ ಕರ್ಯಗಳಾದಿಗಳನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ನಾಗರೀಕರ ಹಿತರಕ್ಷಣಾ ಸಮಿತಿಯ ಎಲ್ಲಾ ಪದಾಧಿಕಾರಿಗಳು ಸದಸ್ಯರು , ಹಿರಿಯನಾಗರೀಕರು , ಹಿರಿಯರು , ಗಣ್ಯರು ಮುಖಂಡರು , ನೂರಾರು ಸಾರ್ವಜನಿಕರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    4
    *ಕೂಡ್ಲಿಗಿ : ನಾಗರೀಕ ಹಿತರಕ್ಷಣಾ ವೇದಿಕೆಯಿಂದ , ಅದ್ಧೂರಿ ಊರಗಣಪ ಪ್ರತಿಷ್ಠಾನೆ*-ವಿಜಯನಗರ ಜಿಲ್ಲೆ ಕೂಡ್ಲಿಗಿ : ಸೆಪ್ಟೆಂಬರ್ 14ರಂದು  ಪಟ್ಟಣದ ಮೇನ್ ಬಾಯ್ಸ್ ಶಾಲೆಯ ಆವರಣದಲ್ಲಿ , ಶ್ರೀಗಣೇಶ ಚತುರ್ಥಿ ಪ್ರಯುಕ್ತ ನಾಗರೀಕ ಹಿತರಕ್ಷಣೆ ವೇದಿಕೆ ವತಿಯಿಂದ ಗಣೇಶ ಮೂರ್ತಿ ಪ್ರತಿಷ್ಠಾಮನೆ ಅದ್ಧೂರಿಯಾಗಿ ಜರುಗಿತು. ನಾಗರೀಕ ಹಿತರಕ್ಷಣ ವೇದಿಕೆ ಅಧ್ಯಕ್ಷರಾದ ಕಾವಲ್ಲಿ ಶಿವಪ್ಪನಾಯಕ ನೇತೃತ್ವದಲ್ಲಿ , ಪ್ರತಿ ವರ್ಷಗಳಂತೆಯೇ ಗಣೇಶ ಮೂರ್ತಿ ದ‍ಾನಿಗಳು. ಹಾಗೂ ಗೌಡ ಮನೆತನದ ಮುಖಂಡರಾದ , ಪಟ್ಟಣದ ಹೆಚ್.ವೀರನಗೌಡ ರವರ ಮನೆಯಿಂದ , ಗಣೇಶನ ಬೃಹತ್ ಗಾತ್ರದ ಗಣೇಶ ಮೂರ್ತಿಯನ್ನು. ಶಾಸ್ತ್ರೋಕ್ತವಾಗಿ ಪೂಜಿಸಿ ವಾಹನದಲ್ಲಿರಿಸಿಕೊಂಡು , ಪಟ್ಟಣದ ಪ್ರಮುಖ ರಸ್ತೆಯ ಮೂಲಕ ಬಹು ಅದ್ಧೂರಿಯಾಗಿ ಮೆರವಣಿಗೆ ಸಾಗಿ ವೇದಿಕೆಗೆ ಕರೆತರಲಾಯಿತು. ಪಟ್ಟಣದ ಶ್ರೀಚಂದ್ರಶೇಖರ ಆಜಾದ್ ರಂಗಮಂದಿರದ ವೇದಿಕೆ ಯಲ್ಲಿ , ಪುರೋಹಿತರಾದ ಎಮ್ ಎಮ್ ಉಮೇಶರವರ ನೇತೃತ್ವದಲ್ಲಿ. ಧಾರ್ಮಿಕ ವಿಧಿ ವಿಧಾನದೊಂದಿಗೆ ಪೂಜಿಸಿ ಪ್ರತಿಷ್ಠಾಪಿಸಲಾಯಿತು, ತದನಂತರ ಗಣೇಶ  ಮೂರ್ತಿಯನ್ನು ಪ್ರತಿಷ್ಟಾಪಿಸಲಾಯಿತು. ನಂತರ ವೇದಭ್ರಾಹ್ಮಣ ಆರಾಧಕರಾದ ಬ್ರಹ್ಮಲಿಂಗಾಚಾರಿಗಳ ಪುರೋಹಿತ್ವದಲ್ಲಿ , ಪೂಜಾ ಕೈಂ ಕರ್ಯಗಳಾದಿಗಳನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ನಾಗರೀಕರ ಹಿತರಕ್ಷಣಾ ಸಮಿತಿಯ ಎಲ್ಲಾ ಪದಾಧಿಕಾರಿಗಳು ಸದಸ್ಯರು , ಹಿರಿಯನಾಗರೀಕರು , ಹಿರಿಯರು , ಗಣ್ಯರು ಮುಖಂಡರು  , ನೂರಾರು ಸಾರ್ವಜನಿಕರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    user_ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    4 hrs ago
  • ಅಲಂಪೂರ್ ಪೇಟೆಯಲ್ಲಿ ಗಣೇಶನ ಪ್ರತಿಷ್ಠಾಪನೆ ; ಪ್ರಸಾದಕ್ಕೆ ಚಾಲನೆ ನೀಡಿದ ಮುಖಂಡರು ಇಲಕಲ್ ನಗರದ ಅಲಂಪೂರ ಪೇಟೆಯಲ್ಲಿ ಓಣಿಯ ಗುರುಹಿರಿಯರು ಯುವ ಮಿತ್ರರಿಂದ ಪ್ರತಿಷ್ಠಾಪನೆಗೊಂಡಿರುವ ಗಣೇಶಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಸಾದಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಗರದ ಹಿರಿಯ ಮುಖಂಡರಾದ ವೆಂಕಟೇಶ ಸಾಕಾ, ಮಂಜುನಾಥ ಹೊಸಮನಿ, ನಗರ ಪಿಎಸ್ಐ ನಾಗರಾಜ ಗಡಾದ, ಹನುಮಂತ ತುಂಬದ, ಅಶೋಕ ಪೂಜಾರಿ ಹಾಗೂ ಅನಂಪುರ್ಪೇಟೆಯ ಯುವ ಮಿತ್ರರು ಉಪಸ್ಥಿತರಿದ್ದರು
    4
    ಅಲಂಪೂರ್ ಪೇಟೆಯಲ್ಲಿ ಗಣೇಶನ ಪ್ರತಿಷ್ಠಾಪನೆ ; ಪ್ರಸಾದಕ್ಕೆ ಚಾಲನೆ ನೀಡಿದ ಮುಖಂಡರು
ಇಲಕಲ್ ನಗರದ ಅಲಂಪೂರ ಪೇಟೆಯಲ್ಲಿ
ಓಣಿಯ ಗುರುಹಿರಿಯರು ಯುವ ಮಿತ್ರರಿಂದ ಪ್ರತಿಷ್ಠಾಪನೆಗೊಂಡಿರುವ ಗಣೇಶಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಸಾದಕ್ಕೆ ಚಾಲನೆ ನೀಡಿದರು. 
ಈ ಸಂದರ್ಭದಲ್ಲಿ ನಗರದ ಹಿರಿಯ ಮುಖಂಡರಾದ ವೆಂಕಟೇಶ ಸಾಕಾ,  ಮಂಜುನಾಥ ಹೊಸಮನಿ, ನಗರ ಪಿಎಸ್ಐ ನಾಗರಾಜ ಗಡಾದ, ಹನುಮಂತ ತುಂಬದ, ಅಶೋಕ ಪೂಜಾರಿ ಹಾಗೂ ಅನಂಪುರ್ಪೇಟೆಯ ಯುವ ಮಿತ್ರರು ಉಪಸ್ಥಿತರಿದ್ದರು
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    5 hrs ago
  • ಪಕ್ಕ ಲವರ್’ ಸಿನಿಮಾ ಶುರು! 🎬 ಸ್ಥಳೀಯ ಪ್ರತಿಭೆಗಳಿಗೆ ದೊಡ್ಡ ಅವಕಾಶ! ಸಿನಿಮಾ ನಿರ್ಮಾಣಕ್ಕಿಂತ ಪ್ರಮೋಷನ್ ಮುಖ್ಯ! ಬಳ್ಳಾರಿಯ ಸ್ಥಳೀಯ ಪ್ರತಿಭೆಗಳನ್ನೇ ಒಳಗೊಂಡು ನಿರ್ಮಾಣವಾಗುತ್ತಿರುವ ‘ಪಕ್ಕ ಲವರ್’ ಕನ್ನಡ ಚಲನಚಿತ್ರದ ಟೈಟಲ್ ಹಾಗೂ ಹಾಡು ಬಿಡುಗಡೆಗೊಂಡಿದೆ. 🎬 ಸ್ಥಳೀಯ ಕಲಾವಿದರು ಹಾಗೂ ಪ್ರತಿಭೆಗಳಿಗೆ ಅವಕಾಶ ನೀಡಿ ಪ್ರೋತ್ಸಾಹಿಸುವ ಅಗತ್ಯವಿದೆ ಎಂದು ಚಿತ್ರದ ನಿರ್ದೇಶಕ ಕೋಳೂರು ಶೇಖರ್ ಹೇಳಿದ್ದಾರೆ. ಚಿತ್ರದ ಶೇ.30ರಷ್ಟು ಚಿತ್ರೀಕರಣ ಈಗಾಗಲೇ ಪೂರ್ಣಗೊಂಡಿದ್ದು, ಉಳಿದ ಚಿತ್ರೀಕರಣವನ್ನು ಬಳ್ಳಾರಿ ಮತ್ತು ಬೆಂಗಳೂರಿನಲ್ಲಿ ನಡೆಸಲಾಗಲಿದೆ. ಚಿತ್ರದ ನಾಯಕ ನಟ ಅವಿನಾಶ್, ‘ಪಕ್ಕ ಲವರ್’ ಸಿನಿಮಾ ಯಶಸ್ವಿಯಾಗುವ ಸಂಪೂರ್ಣ ವಿಶ್ವಾಸವಿದೆ ಎಂದು ಹೇಳಿದ್ದಾರೆ. ಉದ್ಯಮಿ ಹಾಗೂ ನಿರ್ಮಾಪಕ ಪೋಲಾ ಪ್ರವೀಣ್ ಕುಮಾರ್, ಸಿನಿಮಾ ನಿರ್ಮಾಣದಷ್ಟೇ ಪ್ರಮೋಷನ್‌ಗೂ ಆದ್ಯತೆ ನೀಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. 👉 ಸ್ಥಳೀಯ ಪ್ರತಿಭೆಗಳಿಗೆ ಅವಕಾಶ ಸಿಗಬೇಕು ಎನ್ನುವ ನಿಮ್ಮ ಅಭಿಪ್ರಾಯವೇನು? ಕಾಮೆಂಟ್ ಮಾಡಿ. ASN NEWS24 ಕನ್ನಡ – ಸುತ್ತಮುತ್ತ ನಡೆಯುವ ಸುದ್ದಿ ನಿಮ್ಮ ಮುಂದೆ. #PakkaLover #PakkaLoverMovie #KannadaMovie #KannadaCinema #KannadaFilm #Ballari #BallariNews #Bellary #KannadaNews #KannadaFilmIndustry #LocalTalent #LocalArtists #Avinash #KannadaActor #FilmPromotion #Sandalwood #SandalwoodNews #KarnatakaNews #ASNNews24 #ASNNews24Kannada
    1
    ಪಕ್ಕ ಲವರ್’ ಸಿನಿಮಾ ಶುರು! 🎬
ಸ್ಥಳೀಯ ಪ್ರತಿಭೆಗಳಿಗೆ ದೊಡ್ಡ ಅವಕಾಶ!
ಸಿನಿಮಾ ನಿರ್ಮಾಣಕ್ಕಿಂತ ಪ್ರಮೋಷನ್ ಮುಖ್ಯ!
ಬಳ್ಳಾರಿಯ ಸ್ಥಳೀಯ ಪ್ರತಿಭೆಗಳನ್ನೇ ಒಳಗೊಂಡು ನಿರ್ಮಾಣವಾಗುತ್ತಿರುವ ‘ಪಕ್ಕ ಲವರ್’ ಕನ್ನಡ ಚಲನಚಿತ್ರದ ಟೈಟಲ್ ಹಾಗೂ ಹಾಡು ಬಿಡುಗಡೆಗೊಂಡಿದೆ. 🎬
ಸ್ಥಳೀಯ ಕಲಾವಿದರು ಹಾಗೂ ಪ್ರತಿಭೆಗಳಿಗೆ ಅವಕಾಶ ನೀಡಿ ಪ್ರೋತ್ಸಾಹಿಸುವ ಅಗತ್ಯವಿದೆ ಎಂದು ಚಿತ್ರದ ನಿರ್ದೇಶಕ ಕೋಳೂರು ಶೇಖರ್ ಹೇಳಿದ್ದಾರೆ.
ಚಿತ್ರದ ಶೇ.30ರಷ್ಟು ಚಿತ್ರೀಕರಣ ಈಗಾಗಲೇ ಪೂರ್ಣಗೊಂಡಿದ್ದು, ಉಳಿದ ಚಿತ್ರೀಕರಣವನ್ನು ಬಳ್ಳಾರಿ ಮತ್ತು ಬೆಂಗಳೂರಿನಲ್ಲಿ ನಡೆಸಲಾಗಲಿದೆ.
ಚಿತ್ರದ ನಾಯಕ ನಟ ಅವಿನಾಶ್, ‘ಪಕ್ಕ ಲವರ್’ ಸಿನಿಮಾ ಯಶಸ್ವಿಯಾಗುವ ಸಂಪೂರ್ಣ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ಉದ್ಯಮಿ ಹಾಗೂ ನಿರ್ಮಾಪಕ ಪೋಲಾ ಪ್ರವೀಣ್ ಕುಮಾರ್, ಸಿನಿಮಾ ನಿರ್ಮಾಣದಷ್ಟೇ ಪ್ರಮೋಷನ್‌ಗೂ ಆದ್ಯತೆ ನೀಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.
👉 ಸ್ಥಳೀಯ ಪ್ರತಿಭೆಗಳಿಗೆ ಅವಕಾಶ ಸಿಗಬೇಕು ಎನ್ನುವ ನಿಮ್ಮ ಅಭಿಪ್ರಾಯವೇನು? ಕಾಮೆಂಟ್ ಮಾಡಿ.
ASN NEWS24 ಕನ್ನಡ – ಸುತ್ತಮುತ್ತ ನಡೆಯುವ ಸುದ್ದಿ ನಿಮ್ಮ ಮುಂದೆ.
#PakkaLover #PakkaLoverMovie #KannadaMovie #KannadaCinema #KannadaFilm #Ballari #BallariNews #Bellary #KannadaNews #KannadaFilmIndustry #LocalTalent #LocalArtists #Avinash #KannadaActor #FilmPromotion #Sandalwood #SandalwoodNews #KarnatakaNews #ASNNews24 #ASNNews24Kannada
    user_AsnNews24Kannada
    AsnNews24Kannada
    Local News Reporter Ballari, Karnataka•
    12 hrs ago
  • ಮಸ್ಕಿ ಟಾಟಾ ಎಸಿ ಚಾಲಕರ–ಮಾಲಕರ ಸಂಘದಿಂದ ಅದ್ದೂರಿ ಗಣೇಶ ವಿಸರ್ಜನೆ ಟಾಟಾ ಎಸಿ ಚಾಲಕರ–ಮಾಲಕರ ಸಂಘದಿಂದ ಅದ್ದೂರಿ ಗಣೇಶ ವಿಸರ್ಜನೆ ಮಸ್ಕಿ: ಪಟ್ಟಣದ ಹಳೆ ಬಸ್ ನಿಲ್ದಾಣದಲ್ಲಿ ಮಲ್ಲಿಕಾರ್ಜುನ ಬಂಡೆ ಟಾಟಾ ಎಸಿ ಚಾಲಕರ ಹಾಗೂ ಮಾಲಕರ ಸಂಘದ ವತಿಯಿಂದ ಗಣೇಶ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಸಂಘದ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಗಣಪತಿ ಮೂರ್ತಿಯ ವಿಸರ್ಜನಾ ಕಾರ್ಯಕ್ರಮವನ್ನು ಸೋಮವಾರ ಸಂಜೆ ಸುಮಾರು 7 ಗಂಟೆಗೆ ಸಂಭ್ರಮದಿಂದ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಸದಸ್ಯರು, ಚಾಲಕರು ಹಾಗೂ ಮಾಲಕರು ಡಿಜೆ ಸಂಗೀತಕ್ಕೆ ಹೆಜ್ಜೆ ಹಾಕಿ, ನೃತ್ಯ ಮಾಡುವ ಮೂಲಕ ಹಬ್ಬದ ಸಂಭ್ರಮವನ್ನು ಹೆಚ್ಚಿಸಿದರು. ಗಣೇಶ ಮೂರ್ತಿಯನ್ನು ಮೆರವಣಿಗೆಯಲ್ಲಿ ಕೊಂಡೊಯ್ದು ಭಕ್ತಿಭಾವ ಹಾಗೂ ಸಡಗರದಿಂದ ವಿಸರ್ಜನೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಸಂಘದ ಸದಸ್ಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
    1
    ಮಸ್ಕಿ ಟಾಟಾ ಎಸಿ ಚಾಲಕರ–ಮಾಲಕರ ಸಂಘದಿಂದ ಅದ್ದೂರಿ ಗಣೇಶ ವಿಸರ್ಜನೆ
ಟಾಟಾ ಎಸಿ ಚಾಲಕರ–ಮಾಲಕರ ಸಂಘದಿಂದ ಅದ್ದೂರಿ ಗಣೇಶ ವಿಸರ್ಜನೆ
ಮಸ್ಕಿ: ಪಟ್ಟಣದ ಹಳೆ ಬಸ್ ನಿಲ್ದಾಣದಲ್ಲಿ ಮಲ್ಲಿಕಾರ್ಜುನ ಬಂಡೆ ಟಾಟಾ ಎಸಿ ಚಾಲಕರ ಹಾಗೂ ಮಾಲಕರ ಸಂಘದ ವತಿಯಿಂದ ಗಣೇಶ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಯಿತು.
ಸಂಘದ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಗಣಪತಿ ಮೂರ್ತಿಯ ವಿಸರ್ಜನಾ ಕಾರ್ಯಕ್ರಮವನ್ನು ಸೋಮವಾರ ಸಂಜೆ ಸುಮಾರು 7 ಗಂಟೆಗೆ ಸಂಭ್ರಮದಿಂದ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಸದಸ್ಯರು, ಚಾಲಕರು ಹಾಗೂ ಮಾಲಕರು ಡಿಜೆ ಸಂಗೀತಕ್ಕೆ ಹೆಜ್ಜೆ ಹಾಕಿ, ನೃತ್ಯ ಮಾಡುವ ಮೂಲಕ ಹಬ್ಬದ ಸಂಭ್ರಮವನ್ನು ಹೆಚ್ಚಿಸಿದರು.
ಗಣೇಶ ಮೂರ್ತಿಯನ್ನು ಮೆರವಣಿಗೆಯಲ್ಲಿ ಕೊಂಡೊಯ್ದು ಭಕ್ತಿಭಾವ ಹಾಗೂ ಸಡಗರದಿಂದ ವಿಸರ್ಜನೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಸಂಘದ ಸದಸ್ಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
    user_ಹನುಮೇಶ ನಾಯಕ್
    ಹನುಮೇಶ ನಾಯಕ್
    ಮಾಸ್ಕಿ, ರಾಯಚೂರು, ಕರ್ನಾಟಕ•
    23 hrs ago
  • ಕೂಡ್ಲಿಗಿ : ಶಾಲಾ ಕ್ಷೇಮಾವೃದ್ಧಿಗಾಗಿ ತ್ಯಾಗ ಬಲಿದಾನಕ್ಕೆ ಸಿದ್ಧ- ರಾಘವೇಂದ್ರ , ಶಾಲಾ ಕ್ಷೇಮಾಭಿವೃದ್ಧಿಗೆ ಸದಾ ಬದ್ಧ - ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್ *ಕೂಡ್ಲಿಗಿ : ಶಾಲಾ ಕ್ಷೇಮಾವೃದ್ಧಿಗಾಗಿ ತ್ಯಾಗ ಬಲಿದಾನಕ್ಕೆ ಸಿದ್ಧ- ರಾಘವೇಂದ್ರ , ಶಾಲಾ ಕ್ಷೇಮಾಭಿವೃದ್ಧಿಗೆ ಸದಾ ಬದ್ಧ - ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್*- ವಿಜಯನಗರ ಜಿಲ್ಲೆ ಕೂಡ್ಲಿಗಿ : ಪಟ್ಟಣದ ಐತಿಹಾಸಿಕ ಸರ್ಕಾರಿ ಮೇನ್ ಬಾಯ್ಸ್ ಸ್ಕೂಲ್ ಕ್ಷೇಮಾಭಿವೃದ್ಧಿಗಾಗಿ ತಾವು ಯಾವುದೇ ಹಂತದ ಕಾನೂನಾತ್ಮಕ ಹೋರಾಟಕ್ಕೆ , ಹಾಗೂ ಎಲ್ಲಾ ರೀತಿಯ ತ್ಯಾಗ ಬಲಿದಾನಕ್ಕೆ ಸಿದ್ಧರಿರುವುದಾಗಿ ಹೋರಾಟಗಾರರು ಘೋಷಿಸಿದ್ದಾರೆ. ಅದೇ ರೀತಿಯಾಗಿ ಸರ್ಕಾರಿ ಶಾಲಾಭಿವೃದ್ಧಿಗಾಗಿ , ತಾವು ಸದಾ ಭದ್ಧರಾಗಿರುವುದಾಗಿ ಶಾಸಕರಾದ ಡಾ ॥ ಎನ್ ಟಿ ಶ್ರೀನಿವಾಸ್ ನುಡಿದಿದ್ದಾರೆ. ಪತ್ರಕರ್ತರೊಂದಿಗೆ ಹೋರಾಟಗಾರರಾದ ರಾಘವೇಂದ್ರರವರು ಮಾತನಾಡಿದ್ದು , ಮೇನ್ ಬಾಯ್ಸ್ ಸ್ಕೂಲ್ ಸ್ವಾತಂತ್ರ್ಯ ಪೂರ್ವದಲ್ಲಿಯೇ ನಿರ್ಮಾಣಮಾಗಿದ್ದು. ಕೆಲ ಪಟ್ಟ ಭದ್ರ ಹಿತಾಸಕ್ತಿಗಳ ಕುತಂತ್ರದಿಂದಾಗಿ , ನಿರಂತರವಾಗಿ ಶೋಷಣೆಗೆ ನಿರ್ಲಕ್ಷ್ಯಕ್ಕೆ ಗುರಿಯಾಗುತ್ತಿದೆ. ಆ ಅವ್ಯವಸ್ಥೆಯ ವಿರುದ್ಧ ತಾವು ಮೌನ ಪ್ರತಿಭಟನೆ ಹಮ್ಮಿಕೊಂಡಿರುವುದ‍ಾಗಿ , ಶಾಲಾಕ್ಷೇಮಾಭಿವೃದ್ಧಿ ಹೋರಾಟಗಾರರು. ಎಸ್ಡಿ ಎಮ್ಸಿ ಮೇಲುಸ್ತುವಾರಿ ಸಮಿತಿ ರಾಜ್ಯ ಉಪಾಧ್ಯಕ್ಷರಾದ , ಗುನ್ನಳ್ಳಿ ರಾಘವೇಂದ್ರ ನುಡಿದಿದ್ದಾರೆ. ಅವರು ಶಾಲಾ ಆವರಣದಲ್ಲಿ , ಯಾವುದೇ ಖಾಸಗೀ ಕಾರ್ಯಕ್ರಮ ಜರುಗುವುದನ್ನು ವಿರೋಧಿಸುತ್ತಿದ್ದು. ಮತ್ತು ಶಾಲಾವರಣ ಕೆಲ ಪಟ್ಟಭದ್ರರ ಕಪಿಮುಷ್ಠಿಯಲ್ಲಿ ನಲುಗುತ್ತಿದೆ , ಇದರಿಂದಾಗಿ ಶಾಲಾವಾತಾರಣದಲ್ಲಿ ಶಾಂತಿಗೆ ಭಂಗವಾಗಲಿದೆ. ಇದರ ವಿರುದ್ಧ ತಾವು ಮೌನ ಪ್ರತಿಭಟನೆ ನಡೆಸುತ್ತಿರುವುದಾಗಿ ಅವರು ತಿಳಿಸಿದರು. ಶಾಸಕರ ಮನವಿಯ ಮೇರೆಗೆ ಹೋರಾಟವನ್ನು ತಾವು , ತಾತ‍್ಕಾಲಿಕ ಸಮಯ ಮಾತ್ರ ಹಿಂಪಡೆಯುತ್ತಿದ್ದು. ಗಣೇಶೋತ್ಸವ ನಂತರದಲ್ಲಿ ಹೋರಾಟ ಮುಂದುವರೆಯಲಿದ್ದು , ಬೀದಿಗಿಳಿದು ಹೋರಾಟಗಳನ್ನು ನಡೆಸಲಾಗುವುದು. ಶಾಲೆ ಸ್ಥಳಾಂತರಕ್ಕೆ ಯಾವುದೇ ಕಾರಣಕ್ಕೆ ಅವಕಾಶ ಕೊಡೋದಿಲ್ಲ , ಶಾಲಾ ಆವರಣ ಉಳಿವಿಗಾಗಿ ಕ್ಷೇಮಾಭಿವೃದ್ಧಿಗೆ ತ‍ಾವು ಎಂತಹ ತ್ಯಾಗ ಬಲಿದಾನಕ್ಕೂ ಸಿದ್ಧರಿರುವುದ‍ಾಗಿ ಅವರು ಘೋಷಿಸಿದರು. ಶಾಲೆಯ ಉಳಿವಿಗಾಗಿ ಶಾಲಾ ಆವರಣ ಉಳಿವಿಗಾಗಿ , ಶ‍ಾಲೆಯ ಹಳೇ ವಿದ್ಯಾರ್ಥಿಗಳ ಸಂಘಟನೆ ಮಾಡಿ ಜಾಗೃತಿ ಆಂದೊಲನ ಹೋರಾಟಗಳನ್ನಿ ಹಮ್ಮಿಕೊಳ್ಳಲ‍ಾಗುವುದು. ಮತ್ತು ಶಾಲಾ ಕ್ಷೇಮಾಭಿವೃದ್ಧಿಗಾಗಿ , ನ್ಯ‍ಾಯ‍ಲಯದ ಮೊರೆ ಹೋಗಲಾಗುವುದು. ತಾವು ಕ‍ಾನೂನಾತ್ಮಕವಾಗಿ ಹೋರಾಡಲು ಸರ್ವಸಿದ್ಧವಿದ್ದು , ಎಲ್ಲಾ ಹಂತದ ಹೋರಾಟಕ್ಕೆ ಪೂರ್ವ ತಯಾರಿ ನಡೆಸುತ್ತಿರುವುದಾಗಿ ಅವರು ತಿಳಿಸಿದರು. ಅಭಿವೃದ್ಧಿ ನೆಪದಲ್ಲಿ ಶಾಲಾ ಮೂಲ ಆಕರಕ್ಕೆ ಯಾವುದೇ ದಕ್ಕೆಯಾಗಬಾರದು , ಅದು ಕಾನೂನು ಬಾಹೀರವಾಗಲಿದ್ದು. ಆಭಿವೃದ್ಧಿಯ ಹರಿಕಾರರಾದ ಶ‍ಾಸಕರ ಮನವಿಗೆ ಮಾನ್ಯತೆ ನೀಡಿ , ಅವರ ಅಭಿವೃದ್ಧಿ ಪರನಿಲುವಿನ ಮೇಲೆ ವಿಶ್ವಾಸವಿಟ್ಟು ತಾವು ಮೌನ ಪ್ರತಿಭಟನೆಯನ್ನು ತಾತ್ಕ‍ಾಲಿಕವಾಗಿ ನಿಲ್ಲಿಸಲಾಗುವುದೆಂದು ಅವರು ತಿಳಿಸಿದರು. ಹಿಂದೆ ಶಾಸಕರು ಸಮ್ಮುಖದಲ್ಲಿ ಪ್ರತಿಭಟನೆ ಮಾಡುತ್ತಿರುವವರನ್ನುದ್ಧೇಶಿಸಿ ಮಾತನ‍ಾಡಿದ ಶಾಸಕರು , ಹೋರಾಟಗಾರರಲ್ಲಿರುವ ಶಾಲಾಕಾಳಜಿಯನ್ನು ಪ್ರಶಂಸಿದರು. ಮತ್ತು ಶೀಘ್ರವೇ ಶಾಲೆಯ ಕ್ಷೇಮಾಭಿವೃದ್ಧಿಗೆ ಚಾಲನೆ ನೀಡಲಾಗುವುದು. ಸರ್ಕಾರಿ ಶಾಲ‍ೆಗಳ ಕ್ಷೇಮ‍ಾಭಿವೃದ್ಧಿಗೆ ತಾವು ಸದಾ ಬದ್ಧರಿರುವುದಾಗಿ , ಶಾಸಕರು ಹೋರಾಟಗಾರರಿಗೆ ಮನವರಿಕೆ ಮ‍ಾಡಿಕೊಟ್ಟರು. ಶಾಲೆಯನ್ನು ಐತಿಹಾಸಿಕ ಶಾಲೆಯನ್ನಾಗಿ ಮಾಡುತ್ತೇನೆಂದು ಭರವಸೆ ನೀಡಿದರು , ಸುಸಜ್ಜಿತವಾದಂತಹ ಗುಣ ಮಟ್ಟದ ಶಿಕ್ಷಣ ಒದಗಿಸುವುದಕ್ಕೆ. ಅಗತ್ಯ ಸೌಕರ್ಯಗಳನ್ನು ಒಸಗಿಸುವುದಾಗಿ ನುಡಿದರು. ಶಾಲೆಯ ಮೂಲ ಆಕಾರಕ್ಕೆ ಧಕ್ಕೆ ತರದೇ ಉನ್ನತೀಕರಿಸಲ‍ಾಗುವುದೆಂದು , ಶಾಲಾ ಆವರಣವನ್ನು ಮತ್ತಷ್ಟು ಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಲಾಗುವುದೆಂದು ಶಾಸಕರು ಭರವಸೆ ನೀಡಿದ್ದಾರೆನ್ನಲಾಗುತ್ತಿದೆ. ಈ ಸಂದರ್ಭದಲ್ಲಿ ಹತ್ತಾರು ಪ್ರಮುಖ ಸಂಘಟನೆಗಳ , ಮುಖಂಡರು ಗಣ್ಯರು ಉಪಸ್ಥಿತರಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    4
    ಕೂಡ್ಲಿಗಿ : ಶಾಲಾ ಕ್ಷೇಮಾವೃದ್ಧಿಗಾಗಿ ತ್ಯಾಗ ಬಲಿದಾನಕ್ಕೆ ಸಿದ್ಧ- ರಾಘವೇಂದ್ರ , ಶಾಲಾ ಕ್ಷೇಮಾಭಿವೃದ್ಧಿಗೆ ಸದಾ ಬದ್ಧ - ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್
*ಕೂಡ್ಲಿಗಿ : ಶಾಲಾ ಕ್ಷೇಮಾವೃದ್ಧಿಗಾಗಿ ತ್ಯಾಗ ಬಲಿದಾನಕ್ಕೆ ಸಿದ್ಧ- ರಾಘವೇಂದ್ರ , ಶಾಲಾ ಕ್ಷೇಮಾಭಿವೃದ್ಧಿಗೆ ಸದಾ ಬದ್ಧ - ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್*- ವಿಜಯನಗರ ಜಿಲ್ಲೆ ಕೂಡ್ಲಿಗಿ : ಪಟ್ಟಣದ  ಐತಿಹಾಸಿಕ ಸರ್ಕಾರಿ ಮೇನ್ ಬಾಯ್ಸ್ ಸ್ಕೂಲ್ ಕ್ಷೇಮಾಭಿವೃದ್ಧಿಗಾಗಿ ತಾವು ಯಾವುದೇ ಹಂತದ ಕಾನೂನಾತ್ಮಕ ಹೋರಾಟಕ್ಕೆ , ಹಾಗೂ ಎಲ್ಲಾ ರೀತಿಯ ತ್ಯಾಗ ಬಲಿದಾನಕ್ಕೆ ಸಿದ್ಧರಿರುವುದಾಗಿ ಹೋರಾಟಗಾರರು ಘೋಷಿಸಿದ್ದಾರೆ. ಅದೇ ರೀತಿಯಾಗಿ ಸರ್ಕಾರಿ ಶಾಲಾಭಿವೃದ್ಧಿಗಾಗಿ , ತಾವು ಸದಾ ಭದ್ಧರಾಗಿರುವುದಾಗಿ ಶಾಸಕರಾದ ಡಾ ॥ ಎನ್ ಟಿ ಶ್ರೀನಿವಾಸ್ ನುಡಿದಿದ್ದಾರೆ. ಪತ್ರಕರ್ತರೊಂದಿಗೆ ಹೋರಾಟಗಾರರಾದ ರಾಘವೇಂದ್ರರವರು ಮಾತನಾಡಿದ್ದು , ಮೇನ್ ಬಾಯ್ಸ್ ಸ್ಕೂಲ್ ಸ್ವಾತಂತ್ರ್ಯ ಪೂರ್ವದಲ್ಲಿಯೇ ನಿರ್ಮಾಣಮಾಗಿದ್ದು.  ಕೆಲ ಪಟ್ಟ ಭದ್ರ ಹಿತಾಸಕ್ತಿಗಳ ಕುತಂತ್ರದಿಂದಾಗಿ , ನಿರಂತರವಾಗಿ ಶೋಷಣೆಗೆ ನಿರ್ಲಕ್ಷ್ಯಕ್ಕೆ ಗುರಿಯಾಗುತ್ತಿದೆ. ಆ ಅವ್ಯವಸ್ಥೆಯ ವಿರುದ್ಧ ತಾವು ಮೌನ ಪ್ರತಿಭಟನೆ ಹಮ್ಮಿಕೊಂಡಿರುವುದ‍ಾಗಿ , ಶಾಲಾಕ್ಷೇಮಾಭಿವೃದ್ಧಿ ಹೋರಾಟಗಾರರು. ಎಸ್ಡಿ ಎಮ್ಸಿ ಮೇಲುಸ್ತುವಾರಿ ಸಮಿತಿ ರಾಜ್ಯ ಉಪಾಧ್ಯಕ್ಷರಾದ ,  ಗುನ್ನಳ್ಳಿ ರಾಘವೇಂದ್ರ ನುಡಿದಿದ್ದಾರೆ. ಅವರು ಶಾಲಾ ಆವರಣದಲ್ಲಿ , ಯಾವುದೇ ಖಾಸಗೀ ಕಾರ್ಯಕ್ರಮ ಜರುಗುವುದನ್ನು ವಿರೋಧಿಸುತ್ತಿದ್ದು. ಮತ್ತು ಶಾಲಾವರಣ ಕೆಲ ಪಟ್ಟಭದ್ರರ ಕಪಿಮುಷ್ಠಿಯಲ್ಲಿ ನಲುಗುತ್ತಿದೆ , ಇದರಿಂದಾಗಿ ಶಾಲಾವಾತಾರಣದಲ್ಲಿ ಶಾಂತಿಗೆ ಭಂಗವಾಗಲಿದೆ. ಇದರ ವಿರುದ್ಧ ತಾವು ಮೌನ ಪ್ರತಿಭಟನೆ ನಡೆಸುತ್ತಿರುವುದಾಗಿ ಅವರು ತಿಳಿಸಿದರು. ಶಾಸಕರ ಮನವಿಯ ಮೇರೆಗೆ ಹೋರಾಟವನ್ನು ತಾವು , ತಾತ‍್ಕಾಲಿಕ ಸಮಯ ಮಾತ್ರ ಹಿಂಪಡೆಯುತ್ತಿದ್ದು. ಗಣೇಶೋತ್ಸವ ನಂತರದಲ್ಲಿ ಹೋರಾಟ ಮುಂದುವರೆಯಲಿದ್ದು , ಬೀದಿಗಿಳಿದು ಹೋರಾಟಗಳನ್ನು ನಡೆಸಲಾಗುವುದು. ಶಾಲೆ ಸ್ಥಳಾಂತರಕ್ಕೆ ಯಾವುದೇ ಕಾರಣಕ್ಕೆ ಅವಕಾಶ ಕೊಡೋದಿಲ್ಲ  ,  ಶಾಲಾ ಆವರಣ ಉಳಿವಿಗಾಗಿ ಕ್ಷೇಮಾಭಿವೃದ್ಧಿಗೆ ತ‍ಾವು ಎಂತಹ ತ್ಯಾಗ ಬಲಿದಾನಕ್ಕೂ ಸಿದ್ಧರಿರುವುದ‍ಾಗಿ ಅವರು ಘೋಷಿಸಿದರು. ಶಾಲೆಯ ಉಳಿವಿಗಾಗಿ ಶಾಲಾ ಆವರಣ ಉಳಿವಿಗಾಗಿ , ಶ‍ಾಲೆಯ ಹಳೇ ವಿದ್ಯಾರ್ಥಿಗಳ ಸಂಘಟನೆ ಮಾಡಿ ಜಾಗೃತಿ ಆಂದೊಲನ ಹೋರಾಟಗಳನ್ನಿ ಹಮ್ಮಿಕೊಳ್ಳಲ‍ಾಗುವುದು. ಮತ್ತು ಶಾಲಾ ಕ್ಷೇಮಾಭಿವೃದ್ಧಿಗಾಗಿ , ನ್ಯ‍ಾಯ‍ಲಯದ ಮೊರೆ ಹೋಗಲಾಗುವುದು. ತಾವು ಕ‍ಾನೂನಾತ್ಮಕವಾಗಿ ಹೋರಾಡಲು ಸರ್ವಸಿದ್ಧವಿದ್ದು ,  ಎಲ್ಲಾ ಹಂತದ ಹೋರಾಟಕ್ಕೆ ಪೂರ್ವ ತಯಾರಿ ನಡೆಸುತ್ತಿರುವುದಾಗಿ ಅವರು ತಿಳಿಸಿದರು. ಅಭಿವೃದ್ಧಿ ನೆಪದಲ್ಲಿ ಶಾಲಾ ಮೂಲ ಆಕರಕ್ಕೆ ಯಾವುದೇ ದಕ್ಕೆಯಾಗಬಾರದು ,  ಅದು ಕಾನೂನು ಬಾಹೀರವಾಗಲಿದ್ದು. ಆಭಿವೃದ್ಧಿಯ ಹರಿಕಾರರಾದ ಶ‍ಾಸಕರ ಮನವಿಗೆ ಮಾನ್ಯತೆ ನೀಡಿ , ಅವರ ಅಭಿವೃದ್ಧಿ ಪರನಿಲುವಿನ ಮೇಲೆ ವಿಶ್ವಾಸವಿಟ್ಟು ತಾವು ಮೌನ ಪ್ರತಿಭಟನೆಯನ್ನು  ತಾತ್ಕ‍ಾಲಿಕವಾಗಿ ನಿಲ್ಲಿಸಲಾಗುವುದೆಂದು ಅವರು ತಿಳಿಸಿದರು. ಹಿಂದೆ ಶಾಸಕರು ಸಮ್ಮುಖದಲ್ಲಿ ಪ್ರತಿಭಟನೆ ಮಾಡುತ್ತಿರುವವರನ್ನುದ್ಧೇಶಿಸಿ ಮಾತನ‍ಾಡಿದ ಶಾಸಕರು , ಹೋರಾಟಗಾರರಲ್ಲಿರುವ ಶಾಲಾಕಾಳಜಿಯನ್ನು ಪ್ರಶಂಸಿದರು. ಮತ್ತು ಶೀಘ್ರವೇ ಶಾಲೆಯ ಕ್ಷೇಮಾಭಿವೃದ್ಧಿಗೆ ಚಾಲನೆ ನೀಡಲಾಗುವುದು. ಸರ್ಕಾರಿ ಶಾಲ‍ೆಗಳ ಕ್ಷೇಮ‍ಾಭಿವೃದ್ಧಿಗೆ ತಾವು ಸದಾ ಬದ್ಧರಿರುವುದಾಗಿ , ಶಾಸಕರು ಹೋರಾಟಗಾರರಿಗೆ ಮನವರಿಕೆ ಮ‍ಾಡಿಕೊಟ್ಟರು.  ಶಾಲೆಯನ್ನು ಐತಿಹಾಸಿಕ ಶಾಲೆಯನ್ನಾಗಿ ಮಾಡುತ್ತೇನೆಂದು  ಭರವಸೆ ನೀಡಿದರು ,  ಸುಸಜ್ಜಿತವಾದಂತಹ ಗುಣ ಮಟ್ಟದ ಶಿಕ್ಷಣ ಒದಗಿಸುವುದಕ್ಕೆ.  ಅಗತ್ಯ ಸೌಕರ್ಯಗಳನ್ನು ಒಸಗಿಸುವುದಾಗಿ ನುಡಿದರು. ಶಾಲೆಯ ಮೂಲ ಆಕಾರಕ್ಕೆ ಧಕ್ಕೆ ತರದೇ ಉನ್ನತೀಕರಿಸಲ‍ಾಗುವುದೆಂದು , ಶಾಲಾ ಆವರಣವನ್ನು ಮತ್ತಷ್ಟು ಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಲಾಗುವುದೆಂದು ಶಾಸಕರು ಭರವಸೆ ನೀಡಿದ್ದಾರೆನ್ನಲಾಗುತ್ತಿದೆ. ಈ ಸಂದರ್ಭದಲ್ಲಿ ಹತ್ತಾರು ಪ್ರಮುಖ ಸಂಘಟನೆಗಳ , ಮುಖಂಡರು ಗಣ್ಯರು ಉಪಸ್ಥಿತರಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    user_ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    7 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.