logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಸಂಘಟಿತ ಹೋರಾಟದಿಂದ ಮಾತ್ರ ಬದುಕಿನ ಉನ್ನತಿ ಸಾಧ್ಯ: ವಕೀಲ ಮುನಿರಾಜ್‌ ಪ್ರತಿಪಾದನೆ. ಶಿಡ್ಲಘಟ್ಟ: "ಮನುಷ್ಯನ ಜೀವನದಲ್ಲಿ ಎಲ್ಲಿಯವರೆಗೆ ಹೋರಾಟದ ಮನೋಭಾವವಿರುತ್ತದೆಯೋ, ಅಲ್ಲಿಯವರೆಗೆ ಮಾತ್ರ ಪ್ರಗತಿಯ ಹಾದಿ ತೆರೆದಿರುತ್ತದೆ. ಸೋಲೊಪ್ಪದೆ ಮುನ್ನುಗ್ಗುವ ಛಲವಿದ್ದರೆ ಬದುಕಿನ ದಾರಿ ತಾನಾಗಿಯೇ ಸುಗಮವಾಗುತ್ತದೆ," ಎಂದು ನಗರಸಭೆಯ ಮಾಜಿ ಸದಸ್ಯ ಹಾಗೂ ಹಿರಿಯ ವಕೀಲ ಮುನಿರಾಜ್‌ ಅವರು ಹೇಳಿದರು. ​ನಗರದ ಶ್ರಮಿಕ ಕರ್ನಾಟಕ ರಾಜ್ಯ ಅಸಂಘಟಿತ ಕಟ್ಟಡ ಕಾರ್ಮಿಕರ ಸಂಘದ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು. ಅಸಂಘಟಿತ ವಲಯದಲ್ಲಿ ದುಡಿಯುವ ಮಹಿಳೆಯರು ಕೇವಲ ಶ್ರಮಿಕರಲ್ಲ, ಅವರು ಸಮಾಜದ ಭದ್ರ ಬುನಾದಿ ಎಂದು ಬಣ್ಣಿಸಿದರು.

9 hrs ago
user_Nandi Rajesh Press reporter
Nandi Rajesh Press reporter
ಚಿಕ್ಕಬಳ್ಳಾಪುರ, ಚಿಕ್ಕಬಳ್ಳಾಪುರ, ಕರ್ನಾಟಕ•
9 hrs ago
ce22f33b-7903-4104-8903-0ca46aada61b
6223c315-a9bf-43cc-83e8-a9d44d6f44fd
83f4a9b7-e934-451f-a382-4578fa38fda8
bf123a48-5fdd-4f34-8e31-f47819d8aadf
988b4205-ea52-4187-b9d1-ef3f6549be16
e4bd6e71-5573-4351-817b-cae37a4a8375

ಸಂಘಟಿತ ಹೋರಾಟದಿಂದ ಮಾತ್ರ ಬದುಕಿನ ಉನ್ನತಿ ಸಾಧ್ಯ: ವಕೀಲ ಮುನಿರಾಜ್‌ ಪ್ರತಿಪಾದನೆ. ಶಿಡ್ಲಘಟ್ಟ: "ಮನುಷ್ಯನ ಜೀವನದಲ್ಲಿ ಎಲ್ಲಿಯವರೆಗೆ ಹೋರಾಟದ ಮನೋಭಾವವಿರುತ್ತದೆಯೋ, ಅಲ್ಲಿಯವರೆಗೆ ಮಾತ್ರ ಪ್ರಗತಿಯ ಹಾದಿ ತೆರೆದಿರುತ್ತದೆ. ಸೋಲೊಪ್ಪದೆ ಮುನ್ನುಗ್ಗುವ ಛಲವಿದ್ದರೆ ಬದುಕಿನ ದಾರಿ ತಾನಾಗಿಯೇ ಸುಗಮವಾಗುತ್ತದೆ," ಎಂದು ನಗರಸಭೆಯ ಮಾಜಿ ಸದಸ್ಯ ಹಾಗೂ ಹಿರಿಯ ವಕೀಲ ಮುನಿರಾಜ್‌ ಅವರು ಹೇಳಿದರು. ​ನಗರದ ಶ್ರಮಿಕ ಕರ್ನಾಟಕ ರಾಜ್ಯ ಅಸಂಘಟಿತ ಕಟ್ಟಡ ಕಾರ್ಮಿಕರ ಸಂಘದ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು. ಅಸಂಘಟಿತ ವಲಯದಲ್ಲಿ ದುಡಿಯುವ ಮಹಿಳೆಯರು ಕೇವಲ ಶ್ರಮಿಕರಲ್ಲ, ಅವರು ಸಮಾಜದ ಭದ್ರ ಬುನಾದಿ ಎಂದು ಬಣ್ಣಿಸಿದರು.

More news from Chikkaballapura and nearby areas
  • Post by Venu Gopal
    2
    Post by Venu Gopal
    user_Venu Gopal
    Venu Gopal
    ಪತ್ರಕರ್ತ Sidlaghatta, Chikkaballapura•
    1 hr ago
  • ದೊಡ್ಡಬಳ್ಳಾಪುರ ಪ್ಯಾಕ್ಟರಿಯ ಒಂದು ಎಕರೆಗೂ ಅಧಿಕ ಪ್ರದೇಶದಲ್ಲಿ ಆವರಿಸಿರುವ ಬೆಂಕಿ. ಎಷ್ಟೆ ನೀರು ತಂದು ಹಾಕಿದರು ಹತೋಟಿಗೆ ಬಾರದ ಬೆಂಕಿ ನಿತ್ಯ 50 ಜನ ಕಾರ್ಮಿಕರು ಕೆಲಸ ಮಾಡ್ತಿದ್ದ ಕೇಬಲ್ ಪ್ಯಾಕ್ಟರಿ. ಅಕ್ಕ ಪಕ್ಕದ ಕಾರ್ಖಾನೆಗಳಿಗೆ ಬೆಂಕಿ ವ್ಯಾಪಿಸದಂತೆ ಮುಂಜಾಗ್ರತಾ ಕ್ರಮ. ಹತ್ತಕ್ಕೂ ಅಧಿಕ ಅಗ್ನಿ ಶಾಮಕ ವಾಹನ ಹಾಗೂ 100 ಕ್ಕೂ ಅಧಿಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಯತ್ನ. ಸ್ಥಳದಲ್ಲೆ ಬೀಡು ಬಿಟ್ಟ ಅಗ್ನಿಶಾಮಕ ದಳದ ಹಿರಿಯ ಅಧಿಕಾರಿಗಳು. ರಾತ್ರಿಯೆಲ್ಲ ಬೆಂಕಿ ನಂದಿಸಲು ಹರಸಾಹಸ ಪಡಲಿರುವ ಅಗ್ನಿಶಾಮಕ ದಳದ ಸಿಬ್ಬಂದಿ. ಸ್ಥಳಿಯ ರೈತರ ತೋಟಗಳಿಂದ ನೀರು ತುಂಬಿಕೊಂಡು ಬಂದು ಬೆಂಕಿ ನಂದಿಸುವ ಕಾರ್ಯ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ಹೊರವಲಯದ ಬಾಶೆಟ್ಟಹಳ್ಳಿ ಕೈಗಾರಿಕಾ ಪ್ರದೇಶ
    1
    ದೊಡ್ಡಬಳ್ಳಾಪುರ
ಪ್ಯಾಕ್ಟರಿಯ ಒಂದು ಎಕರೆಗೂ ಅಧಿಕ ಪ್ರದೇಶದಲ್ಲಿ ಆವರಿಸಿರುವ ಬೆಂಕಿ. 
ಎಷ್ಟೆ ನೀರು ತಂದು ಹಾಕಿದರು ಹತೋಟಿಗೆ ಬಾರದ ಬೆಂಕಿ
ನಿತ್ಯ 50 ಜನ ಕಾರ್ಮಿಕರು ಕೆಲಸ ಮಾಡ್ತಿದ್ದ ಕೇಬಲ್ ಪ್ಯಾಕ್ಟರಿ. 
ಅಕ್ಕ ಪಕ್ಕದ ಕಾರ್ಖಾನೆಗಳಿಗೆ ಬೆಂಕಿ ವ್ಯಾಪಿಸದಂತೆ ಮುಂಜಾಗ್ರತಾ ಕ್ರಮ.
ಹತ್ತಕ್ಕೂ ಅಧಿಕ ಅಗ್ನಿ ಶಾಮಕ ವಾಹನ ಹಾಗೂ 100 ಕ್ಕೂ ಅಧಿಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಯತ್ನ. 
ಸ್ಥಳದಲ್ಲೆ ಬೀಡು ಬಿಟ್ಟ ಅಗ್ನಿಶಾಮಕ ದಳದ ಹಿರಿಯ ಅಧಿಕಾರಿಗಳು. 
ರಾತ್ರಿಯೆಲ್ಲ ಬೆಂಕಿ ನಂದಿಸಲು ಹರಸಾಹಸ ಪಡಲಿರುವ ಅಗ್ನಿಶಾಮಕ ದಳದ ಸಿಬ್ಬಂದಿ.
ಸ್ಥಳಿಯ ರೈತರ ತೋಟಗಳಿಂದ ನೀರು ತುಂಬಿಕೊಂಡು ಬಂದು ಬೆಂಕಿ ನಂದಿಸುವ ಕಾರ್ಯ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ಹೊರವಲಯದ ಬಾಶೆಟ್ಟಹಳ್ಳಿ ಕೈಗಾರಿಕಾ ಪ್ರದೇಶ
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    9 hrs ago
  • *ಚಿಂತಾಮಣಿ:-ಖಾದ್ರಿ ಲಕ್ಷ್ಮೀನರಸಿಂಹ ಸ್ವಾಮಿ ಬ್ರಹ್ಮರಥೋತ್ಸವಕ್ಕೆ ಭಾಗಿಯಾದ ಕೊರ್ ಕಮಿಟಿ ಅಧ್ಯಕ್ಷ ಜೆಕೆ ಕೃಷ್ಣಾರೆಡ್ಡಿ* ಚಿಂತಾಮಣಿ ತಾಲೂಕಿನ ಅಂಬಾಜಿದುರ್ಗ ಹೋಬಳಿ ಕೋಟಗಲ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆ ರಾಗುಟ್ಟಹಳ್ಳಿ ಶಿಂಗರೇಪಲ್ಲಿ ಮಜರಾ ಗ್ರಾಮದಲ್ಲಿ ನೆಲೆಸಿರುವ ಪುರಾತನ ಖಾದ್ರಿ ಲಕ್ಷ್ಮಿ ನರಸಿಂಹಸ್ವಾಮಿ ದೇವಾಲಯ ಆಗಿದ್ದು ಈ ದೇವಾಲಯಕ್ಕೆ ಜೆಡಿಎಸ್ ರಾಜ್ಯ ಕೊರ್ ಕಮಿಟಿ ಅಧ್ಯಕ್ಷ ಜೆಕೆ ಕೃಷ್ಣಾರೆಡ್ಡಿ ಆಗಮಿಸಿ ದೇವರಲ್ಲಿ ಪೂಜೆ ಸಲ್ಲಿಸಿ ನಂತರ ಮಾತನಾಡಿದ ಅವರು ಕೋಟಗಲ್ ಸಾಗುಟ್ಟಹಳ್ಳಿ ಮಜರಾ ಶಿಂಗರೇಪಲ್ಲಿ ಗ್ರಾಮದಲ್ಲಿ ಅತ್ಯಂತ ಪ್ರಸಿದ್ಧಿ ಯಾಗಿರುವ ಈ ದೇವಾಲಯು ಭಕ್ತಾದಿಗಳನ್ನು ಕೈಬೀಸಿ ಕರೆಯುವಂತಹ ಸ್ಥಳವಾಗಿದೆ ಖಾದ್ರಿ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಿಂದ ತೀರ್ಥವು ಕದರಿ ದೇವಾಲಯಕ್ಕೆ ಹೋದರೆ ಮಾತ್ರ ಅಲ್ಲಿ ತೇರು ಸಾಗುತ್ತದೆ ಎಂಬ ಪುರಾತನ ಕಾಲದಿಂದಲೂ ನಡೆದುಕೊಂಡು ಬಂದಿರುವ ರೂಢಿ ಸಂಪ್ರದಾಯ ವಾಗಿದೆ ಶ್ರೀ ಖಾದ್ರಿ ನರಸಿಂಹಸ್ವಾಮಿ ದೇವಾಲಯು ಜಗತ್ ಪ್ರಸಿದ್ಧಿಯಾಗಿದ್ದು ಈ ದೇವಾಲಯಕ್ಕೆ ಮೂಲೆ ಮೂಲೆಗಳಿಂದ ಸಹಸ್ರಾರು ಜನ ಆಗಮಿಸುತ್ತಾರೆ ,ದೇವರಲ್ಲಿ ಪ್ರಾರ್ಥಿಸಿಕೊಂಡರೆ ಸಕಲ ಸೌಭಾಗ್ಯಗಳು ಸಿಗುತ್ತವೆ ಎಂದು ಜನರ ಅಪಾರ ನಂಬಿಕೆಯಿದೆ ಎಂದು ಮಾಜಿ ಶಾಸಕ ಹಾಗು ಜೆಡಿಎಸ್ ರಾಜ್ಯ ಕೋರ್ ಕಮಿಟಿ ರಾಜ್ಯಾಧ್ಯಕ್ಷರು ಜೆಕೆ ಕೃಷ್ಣಾರೆಡ್ಡಿ ದೇವಸ್ಥಾನಕ್ಕೆ ಆಗಮಿಸಿ ದೇವರ ಪೂಜೆಯಲ್ಲಿ ಪಾಲ್ಗೊಂಡು ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕ್ಷೇತ್ರದ ಜನಜಾನುವಾರುಗಳು ಮಳೆ ಬೆಳೆ ಸಮೃದ್ಧಿಯಾಗಿ ಬರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತಾ ಇಲ್ಲಿ ಬಂದ ಸಾವಿರಾರು ಜನರಿಗೆ ದೇವರು ಆಯುಷ್ಯ ಆರೋಗ್ಯ ಉತ್ತಮ ಬೆಳೆ ಮಳೆ ಸಿಗಲಿ ಎಂಬುದಾಗಿ ದೇವರಲ್ಲಿ ಪ್ರಾರ್ಥಿಸಿದರು ಈ ಸಂದರ್ಭದಲ್ಲಿ:-ಚಿಮುಲ್ ನಿರ್ದೇಶಕ ಬ್ಯಾಂಕ್ ಕೃಷ್ಣಾರೆಡ್ಡಿ ಸೇರಿದಂತೆ ಜೆಡಿಎಸ್ ಕಾರ್ಯಕರ್ತರು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾದರು
    4
    *ಚಿಂತಾಮಣಿ:-ಖಾದ್ರಿ ಲಕ್ಷ್ಮೀನರಸಿಂಹ ಸ್ವಾಮಿ ಬ್ರಹ್ಮರಥೋತ್ಸವಕ್ಕೆ ಭಾಗಿಯಾದ ಕೊರ್ ಕಮಿಟಿ ಅಧ್ಯಕ್ಷ ಜೆಕೆ ಕೃಷ್ಣಾರೆಡ್ಡಿ*
ಚಿಂತಾಮಣಿ ತಾಲೂಕಿನ ಅಂಬಾಜಿದುರ್ಗ ಹೋಬಳಿ ಕೋಟಗಲ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆ ರಾಗುಟ್ಟಹಳ್ಳಿ ಶಿಂಗರೇಪಲ್ಲಿ ಮಜರಾ ಗ್ರಾಮದಲ್ಲಿ ನೆಲೆಸಿರುವ ಪುರಾತನ ಖಾದ್ರಿ ಲಕ್ಷ್ಮಿ ನರಸಿಂಹಸ್ವಾಮಿ ದೇವಾಲಯ ಆಗಿದ್ದು  ಈ ದೇವಾಲಯಕ್ಕೆ ಜೆಡಿಎಸ್ ರಾಜ್ಯ ಕೊರ್ ಕಮಿಟಿ  ಅಧ್ಯಕ್ಷ ಜೆಕೆ ಕೃಷ್ಣಾರೆಡ್ಡಿ  ಆಗಮಿಸಿ ದೇವರಲ್ಲಿ ಪೂಜೆ ಸಲ್ಲಿಸಿ ನಂತರ ಮಾತನಾಡಿದ
ಅವರು ಕೋಟಗಲ್ ಸಾಗುಟ್ಟಹಳ್ಳಿ ಮಜರಾ ಶಿಂಗರೇಪಲ್ಲಿ ಗ್ರಾಮದಲ್ಲಿ ಅತ್ಯಂತ ಪ್ರಸಿದ್ಧಿ ಯಾಗಿರುವ ಈ ದೇವಾಲಯು ಭಕ್ತಾದಿಗಳನ್ನು ಕೈಬೀಸಿ ಕರೆಯುವಂತಹ ಸ್ಥಳವಾಗಿದೆ ಖಾದ್ರಿ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಿಂದ
ತೀರ್ಥವು ಕದರಿ ದೇವಾಲಯಕ್ಕೆ ಹೋದರೆ ಮಾತ್ರ ಅಲ್ಲಿ ತೇರು ಸಾಗುತ್ತದೆ ಎಂಬ ಪುರಾತನ ಕಾಲದಿಂದಲೂ ನಡೆದುಕೊಂಡು 
ಬಂದಿರುವ ರೂಢಿ ಸಂಪ್ರದಾಯ ವಾಗಿದೆ ಶ್ರೀ ಖಾದ್ರಿ ನರಸಿಂಹಸ್ವಾಮಿ ದೇವಾಲಯು ಜಗತ್ ಪ್ರಸಿದ್ಧಿಯಾಗಿದ್ದು ಈ ದೇವಾಲಯಕ್ಕೆ ಮೂಲೆ ಮೂಲೆಗಳಿಂದ ಸಹಸ್ರಾರು ಜನ ಆಗಮಿಸುತ್ತಾರೆ ,ದೇವರಲ್ಲಿ  ಪ್ರಾರ್ಥಿಸಿಕೊಂಡರೆ ಸಕಲ ಸೌಭಾಗ್ಯಗಳು ಸಿಗುತ್ತವೆ ಎಂದು ಜನರ ಅಪಾರ ನಂಬಿಕೆಯಿದೆ
ಎಂದು ಮಾಜಿ  ಶಾಸಕ ಹಾಗು ಜೆಡಿಎಸ್ ರಾಜ್ಯ ಕೋರ್ ಕಮಿಟಿ ರಾಜ್ಯಾಧ್ಯಕ್ಷರು ಜೆಕೆ ಕೃಷ್ಣಾರೆಡ್ಡಿ  ದೇವಸ್ಥಾನಕ್ಕೆ ಆಗಮಿಸಿ ದೇವರ ಪೂಜೆಯಲ್ಲಿ ಪಾಲ್ಗೊಂಡು ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕ್ಷೇತ್ರದ ಜನಜಾನುವಾರುಗಳು ಮಳೆ ಬೆಳೆ ಸಮೃದ್ಧಿಯಾಗಿ ಬರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತಾ ಇಲ್ಲಿ ಬಂದ ಸಾವಿರಾರು ಜನರಿಗೆ ದೇವರು ಆಯುಷ್ಯ ಆರೋಗ್ಯ ಉತ್ತಮ ಬೆಳೆ ಮಳೆ ಸಿಗಲಿ ಎಂಬುದಾಗಿ ದೇವರಲ್ಲಿ ಪ್ರಾರ್ಥಿಸಿದರು
ಈ ಸಂದರ್ಭದಲ್ಲಿ:-ಚಿಮುಲ್ ನಿರ್ದೇಶಕ ಬ್ಯಾಂಕ್ ಕೃಷ್ಣಾರೆಡ್ಡಿ ಸೇರಿದಂತೆ ಜೆಡಿಎಸ್ ಕಾರ್ಯಕರ್ತರು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾದರು
    user_KRUTHI NEWS KANNADA
    KRUTHI NEWS KANNADA
    Local News Reporter ಚಿಂತಾಮಣಿ, ಚಿಕ್ಕಬಳ್ಳಾಪುರ, ಕರ್ನಾಟಕ•
    2 hrs ago
  • ಎಸ್‍ಎಸ್‍ಎಲ್‍ಸಿ ಪರೀಕ್ಷೆ : ಆತ್ಮವಿಶ್ವಾಸ ಮೂಡಿಸಲು ನೇರ ಫೋನ್ ಇನ್ ಕಾರ್ಯಕ್ರಮ ಬಾಗೇಪಲ್ಲಿ:- 2025-26 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಫಲಿತಾಂಶ ಸುಧಾರಣೆಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಮಕ್ಕಳಲ್ಲಿ ಪರೀಕ್ಷೆಯ ಬಗ್ಗೆ ಆತ್ಮವಿಶ್ವಾಸ ಮೂಡಿಸುವುದು ಹಾಗೂ ಗೊಂದಲಗಳನ್ನು ನಿವಾರಿಸಲು ಬಿಇಓ ಕಛೇರಿಯಲ್ಲಿ ಮಕ್ಕಳಿಗೆ ನೇರ ಫೋನ್ ಇನ್ ಕಾರ್ಯಕ್ರಮವನ್ನು ಮಾ 9 ರಂದು ಸೋಮವಾರ ಬೆಳಗ್ಗೆ 10:30 ಮಧ್ಯಾಹ್ನ 3 ಗಂಟೆಯ ವರೆಗೆ ಹಮ್ಮಿಕೊಳ್ಳಲಾಗಿತ್ತು ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18 ರಿಂದ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಸೋಮವಾರ ಇಲ್ಲಿನ ಪಟ್ಟಣದ ಬಿಇಓ ಕಛೇರಿಯಲ್ಲಿ ಶಾಲಾ ಶಿಕ್ಷಣ ಇಲಾಖೆ ಆಯೋಜಿಸಿದ ನೇರ ‘ಫೋನ್ ಇನ್ ಕಾರ್ಯಕ್ರಮ’ ದಲ್ಲಿ ಭಾಗವಹಿಸಿದ ಬಿಇಓ ಎನ್ ವೆಂಕಟೇಶಪ್ಪ ಅವರು ಮಕ್ಕಳ ಚುಟುಕು ಪ್ರಶ್ನೆಗೆ ನೇರವಾಗಿ ಉತ್ತರಿಸಿ ಅವರ ಸಂದೇಹಗಳನ್ನು ನಿವಾರಿಸುವ ಪ್ರಯತ್ನ ಮಾಡಿದರು. ಅವರು ಮಕ್ಕಳ ಪ್ರಶ್ನೆಗೆ ಉತ್ತರಿಸುತ್ತಾ ಪರೀಕ್ಷೆಯನ್ನು ಖುಷಿ-ಖುಷಿಯಿಂದ ಬರೆಯಬೇಕು. ಯಾವುದೇ ಭಯ, ಒತ್ತಡಕ್ಕೆ ಒಳಗಾಗದೆ ತಪ್ಪು ಬರೆಯುವ ಪ್ರಯತ್ನ ಮಾಡಬೇಡಿ. ಸುಲಭ ಪ್ರಶ್ನೆಗಲಿಗೆ ಮೊದಲು ಉತ್ತರಿಸಿ. ಸಮಯ ಪರಿಪಾಲನೆ ತುಂಬಾ ಮುಖ್ಯ. ಫಲಿತಾಂಶ ಸುಧಾರಣೆಗೆ ಅವಕಾಶ ಉಂಟು ಎಂಬಿತ್ಯಾದಿ ಸಲಹೆಗಳನ್ನು ಮಕ್ಕಳಿಗೆ ನೀಡಿ ಪರೀಕ್ಷೆ ಭಯ ನಿವಾರಿಸುವ ಪ್ರಯತ್ಮ ಮಾಡಿದರು. ವಿದ್ಯಾರ್ಥಿ, ಶಿಕ್ಷಕ ಮತ್ತು ಪಾಲಕ-ಪೋಷಕರೂ ಸಹ ನೇರ ಫೋನ್ ಇನ್ ನಲ್ಲಿ ಭಾಗಿಯಾಗಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಂಡರು. ಎಸ್. ಎಸ್.ಎಲ್.ಸಿ ನೀಡಲ್ ಅಧಿಕಾರಿ ಪಿ.ಎನ್.ನಾರಾಯಣ ಸ್ವಾಮಿ ಮಾತನಾಡಿ ಪ್ರಸಕ್ತ ಎಸ್.ಎಸ್.ಎಲ್.ಸಿ ಪರೀಕ್ಷಾ ಸಿದ್ಧತೆಗೆ ಕೈಗೊಳ್ಳಲಾದ ವ್ಯವಸ್ಥಿತವಾದ ಯೋಜಿತ ಅಂಶಗಳ ಬಗ್ಗೆ ಮಾತನಾಡಿದರು. ಬಾಗೇಪಲ್ಲಿ ತಾಲೂಕಿನಲ್ಲಿ 2025-26 ನೇ ಸಾಲಿನ ಎಸ್. ಎಸ್.ಎಲ್.ಸಿ. ಮಕ್ಕಳು ಮಾರ್ಚ್ ಪರೀಕ್ಷೆಗೆ ಒಟ್ಟು 2201 ವಿದ್ಯಾರ್ಥಿಗಳು ನೊಂದಾಯಿಸಿದ್ದು ಒಟ್ಟು 9 ಪರೀಕ್ಷಾ ಕೇಂದ್ರಗಳು ಪರೀಕ್ಷೆ ನಡೆಸಲಾಗುತ್ತದೆ ಎಂದು ಹೇಳಿದರು ಎಸ್. ಎಸ್. ಎಲ್.ಸಿ ಪರೀಕ್ಷೆ ಪೋನ್ ಇನ್ ಕಾರ್ಯಕ್ರಮದಲ್ಲಿ ಆರ್.ಸುಧಾಕರ್ ಕನ್ನಡ ಭಾಷೆ,ಮಂಜುನಾಥ. ಇ. ಆಂಗ್ಲ ಭಾಷೆ,ಈಶ್ವರಾಚಾರಿ ಹಿಂದಿ ಭಾಷೆ, ಎನ್.ಕುಮಾರ್ ಗಣಿತ, ಮಹಮ್ಮದ್ ಹಮೀದ್ ವಿಜ್ಞಾನ, ಗಂಗರಾಜು ಸಮಾಜ ವಿಜ್ಞಾನ ಇವರು ಎಸ್. ಎಸ್.ಎಲ್. ಸಿ.ಮಕ್ಕಳ ಪೋನ್ ಇನ್ ಕಾರ್ಯಕ್ರಮ ನಡೆಸಿಕೊಟ್ಟರು.
    1
    ಎಸ್‍ಎಸ್‍ಎಲ್‍ಸಿ ಪರೀಕ್ಷೆ : ಆತ್ಮವಿಶ್ವಾಸ ಮೂಡಿಸಲು ನೇರ ಫೋನ್ ಇನ್ ಕಾರ್ಯಕ್ರಮ
ಬಾಗೇಪಲ್ಲಿ:-
2025-26 ನೇ ಸಾಲಿನ
ಎಸ್‍ಎಸ್‍ಎಲ್‍ಸಿ ಫಲಿತಾಂಶ ಸುಧಾರಣೆಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಮಕ್ಕಳಲ್ಲಿ ಪರೀಕ್ಷೆಯ ಬಗ್ಗೆ ಆತ್ಮವಿಶ್ವಾಸ ಮೂಡಿಸುವುದು ಹಾಗೂ ಗೊಂದಲಗಳನ್ನು ನಿವಾರಿಸಲು ಬಿಇಓ ಕಛೇರಿಯಲ್ಲಿ  ಮಕ್ಕಳಿಗೆ ನೇರ ಫೋನ್ ಇನ್ ಕಾರ್ಯಕ್ರಮವನ್ನು ಮಾ 9 ರಂದು ಸೋಮವಾರ
ಬೆಳಗ್ಗೆ 10:30 ಮಧ್ಯಾಹ್ನ 3 ಗಂಟೆಯ  ವರೆಗೆ ಹಮ್ಮಿಕೊಳ್ಳಲಾಗಿತ್ತು
ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18 ರಿಂದ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಸೋಮವಾರ ಇಲ್ಲಿನ ಪಟ್ಟಣದ ಬಿಇಓ ಕಛೇರಿಯಲ್ಲಿ ಶಾಲಾ ಶಿಕ್ಷಣ ಇಲಾಖೆ  ಆಯೋಜಿಸಿದ ನೇರ ‘ಫೋನ್ ಇನ್ ಕಾರ್ಯಕ್ರಮ’ ದಲ್ಲಿ ಭಾಗವಹಿಸಿದ ಬಿಇಓ ಎನ್ ವೆಂಕಟೇಶಪ್ಪ ಅವರು ಮಕ್ಕಳ ಚುಟುಕು ಪ್ರಶ್ನೆಗೆ ನೇರವಾಗಿ ಉತ್ತರಿಸಿ ಅವರ ಸಂದೇಹಗಳನ್ನು ನಿವಾರಿಸುವ ಪ್ರಯತ್ನ ಮಾಡಿದರು.
ಅವರು ಮಕ್ಕಳ ಪ್ರಶ್ನೆಗೆ ಉತ್ತರಿಸುತ್ತಾ ಪರೀಕ್ಷೆಯನ್ನು ಖುಷಿ-ಖುಷಿಯಿಂದ ಬರೆಯಬೇಕು. ಯಾವುದೇ ಭಯ, ಒತ್ತಡಕ್ಕೆ ಒಳಗಾಗದೆ ತಪ್ಪು ಬರೆಯುವ ಪ್ರಯತ್ನ ಮಾಡಬೇಡಿ. ಸುಲಭ ಪ್ರಶ್ನೆಗಲಿಗೆ ಮೊದಲು ಉತ್ತರಿಸಿ. ಸಮಯ ಪರಿಪಾಲನೆ ತುಂಬಾ ಮುಖ್ಯ. ಫಲಿತಾಂಶ ಸುಧಾರಣೆಗೆ ಅವಕಾಶ ಉಂಟು ಎಂಬಿತ್ಯಾದಿ ಸಲಹೆಗಳನ್ನು ಮಕ್ಕಳಿಗೆ ನೀಡಿ ಪರೀಕ್ಷೆ ಭಯ ನಿವಾರಿಸುವ ಪ್ರಯತ್ಮ ಮಾಡಿದರು. ವಿದ್ಯಾರ್ಥಿ, ಶಿಕ್ಷಕ ಮತ್ತು ಪಾಲಕ-ಪೋಷಕರೂ ಸಹ ನೇರ ಫೋನ್ ಇನ್ ನಲ್ಲಿ ಭಾಗಿಯಾಗಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಂಡರು.
ಎಸ್. ಎಸ್.ಎಲ್.ಸಿ ನೀಡಲ್ ಅಧಿಕಾರಿ ಪಿ.ಎನ್.ನಾರಾಯಣ ಸ್ವಾಮಿ ಮಾತನಾಡಿ ಪ್ರಸಕ್ತ ಎಸ್.ಎಸ್.ಎಲ್.ಸಿ ಪರೀಕ್ಷಾ ಸಿದ್ಧತೆಗೆ ಕೈಗೊಳ್ಳಲಾದ ವ್ಯವಸ್ಥಿತವಾದ ಯೋಜಿತ ಅಂಶಗಳ ಬಗ್ಗೆ ಮಾತನಾಡಿದರು.
ಬಾಗೇಪಲ್ಲಿ ತಾಲೂಕಿನಲ್ಲಿ 
2025-26 ನೇ ಸಾಲಿನ ಎಸ್. ಎಸ್.ಎಲ್.ಸಿ.
ಮಕ್ಕಳು ಮಾರ್ಚ್ ಪರೀಕ್ಷೆಗೆ ಒಟ್ಟು
2201 ವಿದ್ಯಾರ್ಥಿಗಳು ನೊಂದಾಯಿಸಿದ್ದು
ಒಟ್ಟು  9
ಪರೀಕ್ಷಾ ಕೇಂದ್ರಗಳು 
ಪರೀಕ್ಷೆ ನಡೆಸಲಾಗುತ್ತದೆ ಎಂದು ಹೇಳಿದರು
ಎಸ್. ಎಸ್. ಎಲ್.ಸಿ ಪರೀಕ್ಷೆ
ಪೋನ್ ಇನ್ ಕಾರ್ಯಕ್ರಮದಲ್ಲಿ
ಆರ್.ಸುಧಾಕರ್ ಕನ್ನಡ ಭಾಷೆ,ಮಂಜುನಾಥ. ಇ. ಆಂಗ್ಲ ಭಾಷೆ,ಈಶ್ವರಾಚಾರಿ ಹಿಂದಿ ಭಾಷೆ, ಎನ್.ಕುಮಾರ್ ಗಣಿತ, ಮಹಮ್ಮದ್ ಹಮೀದ್ ವಿಜ್ಞಾನ, ಗಂಗರಾಜು ಸಮಾಜ ವಿಜ್ಞಾನ ಇವರು
ಎಸ್. ಎಸ್.ಎಲ್. ಸಿ.ಮಕ್ಕಳ
ಪೋನ್ ಇನ್ ಕಾರ್ಯಕ್ರಮ ನಡೆಸಿಕೊಟ್ಟರು.
    user_Gopala Reddy R N
    Gopala Reddy R N
    Press advisory ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಕರ್ನಾಟಕ•
    17 hrs ago
  • L.F.C GROUP I IFTAR PARTY
    1
    L.F.C GROUP I IFTAR PARTY
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop ದೊಡ್ ಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    20 hrs ago
  • ಬೆಂಗಳೂರಿನ ಹೆಣ್ಣೂರು ಗಾರ್ಡನ್ಸ್‌ನ ಪ್ರಕೃತಿ ಲೇಔಟ್‌ನಲ್ಲಿ ನಡೆದ ಆತಂಕಕಾರಿ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಸ್ತೆಯಲ್ಲಿ ವ್ಯಕ್ತಿಯೊಬ್ಬ ಬಿದ್ದಿದ್ದರೆ, ಮತ್ತೊಂದು ಗುಂಪು ಕಿತ್ತಾಟದಲ್ಲಿ ತೊಡಗಿದೆ. ಅಷ್ಟರಲ್ಲಿ ಬುಲೆಟ್ ಸವಾರನೊಬ್ಬ ಚಲಿಸುತ್ತಿದ್ದ ಬೈಕ್‌ಗೆ ಕಾಲಿನಿಂದ ಒದ್ದು ಪುಂಡಾಟಿಕೆ ಮೆರೆದಿದ್ದಾನೆ. ಒಂದೇ ಸ್ಕೂಟಿಯಲ್ಲಿ ಮೂವರು ಸವಾರಿ ಮಾಡುವ ಮೂಲಕ ಸಂಚಾರಿ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ಸಾರ್ವಜನಿಕರ ಸುರಕ್ಷತೆಗೆ ಸವಾಲು ಹಾಕುವಂತಿರುವ ಈ ರೌಡಿಸಂ ಮತ್ತು ಅಶಿಸ್ತಿನ ವರ್ತನೆಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.
    1
    ಬೆಂಗಳೂರಿನ ಹೆಣ್ಣೂರು ಗಾರ್ಡನ್ಸ್‌ನ ಪ್ರಕೃತಿ ಲೇಔಟ್‌ನಲ್ಲಿ ನಡೆದ ಆತಂಕಕಾರಿ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಸ್ತೆಯಲ್ಲಿ ವ್ಯಕ್ತಿಯೊಬ್ಬ ಬಿದ್ದಿದ್ದರೆ, ಮತ್ತೊಂದು ಗುಂಪು ಕಿತ್ತಾಟದಲ್ಲಿ ತೊಡಗಿದೆ. ಅಷ್ಟರಲ್ಲಿ ಬುಲೆಟ್ ಸವಾರನೊಬ್ಬ ಚಲಿಸುತ್ತಿದ್ದ ಬೈಕ್‌ಗೆ ಕಾಲಿನಿಂದ ಒದ್ದು ಪುಂಡಾಟಿಕೆ ಮೆರೆದಿದ್ದಾನೆ. ಒಂದೇ ಸ್ಕೂಟಿಯಲ್ಲಿ ಮೂವರು ಸವಾರಿ ಮಾಡುವ ಮೂಲಕ ಸಂಚಾರಿ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ಸಾರ್ವಜನಿಕರ ಸುರಕ್ಷತೆಗೆ ಸವಾಲು ಹಾಕುವಂತಿರುವ ಈ ರೌಡಿಸಂ ಮತ್ತು ಅಶಿಸ್ತಿನ ವರ್ತನೆಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.
    user_Mohan
    Mohan
    ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    11 hrs ago
  • ಹಿರಿಯ ನಾಗರಿಕರು ಮೈದಾನದಲ್ಲಿ ವ್ಯಾಯಾಮ ಮಾಡುವ ಸಲುವಾಗಿ ಇದ್ದ ಜಾಗದಲ್ಲಿ ವ್ಯಕ್ತಿಯೊಬ್ಬ ಸಾಕುನಾಯಿ ಕರೆತಂದು ಮಲಮೂತ್ರ ವಿಸರ್ಜನೆ ಮಾಡಿಸುತ್ತಿದ್ದ ಕಾರಣ ಹಿರಿಯ ನಾಗರಿಕರೊಬ್ಬರು ತಗಾದೆ ತೆಗೆದಾಗ, ನಾಯಿ ಮಾಲೀಕ ವಿಡಿಯೋ ಮಾಡಲು ಮೊಬೈಲ್ ಫೋನ್ ತೆಗೆದಿದ್ದಾನೆ, ಆಗ ಹಿರಿಯ ವ್ಯಕ್ತ ವಿಡಿಯೋ ಮಾಡಬೇಡ ಎಂದು ಫೋನ್ ತಳ್ಳಿದ್ದಾರೆ,ಕೋಪಗೊಂಡ ವ್ಯಕ್ತಿ ಹಿರಿಯರ ಮೇಲೆ ಹಲ್ಲೆ ಮಾಡಿದ್ದಾರೆ, ವಿಕೋಪಕ್ಕೆ ತಿರುಗಿದ ಜಗಳದಿಂದ ಅಲ್ಲಿದ ಹಿರಿಯ ನಾಗರಿಕರು ವ್ಯಕ್ತಿಗೆ ಹಿಗ್ಗಾ ಮುಗ್ಗಾ ಥಳಿಸಿದ್ದಾರೆ..
    1
    ಹಿರಿಯ ನಾಗರಿಕರು ಮೈದಾನದಲ್ಲಿ ವ್ಯಾಯಾಮ ಮಾಡುವ ಸಲುವಾಗಿ ಇದ್ದ ಜಾಗದಲ್ಲಿ ವ್ಯಕ್ತಿಯೊಬ್ಬ ಸಾಕುನಾಯಿ ಕರೆತಂದು ಮಲಮೂತ್ರ ವಿಸರ್ಜನೆ ಮಾಡಿಸುತ್ತಿದ್ದ ಕಾರಣ ಹಿರಿಯ ನಾಗರಿಕರೊಬ್ಬರು ತಗಾದೆ ತೆಗೆದಾಗ, ನಾಯಿ ಮಾಲೀಕ ವಿಡಿಯೋ ಮಾಡಲು ಮೊಬೈಲ್ ಫೋನ್ ತೆಗೆದಿದ್ದಾನೆ, ಆಗ ಹಿರಿಯ ವ್ಯಕ್ತ ವಿಡಿಯೋ ಮಾಡಬೇಡ ಎಂದು ಫೋನ್ ತಳ್ಳಿದ್ದಾರೆ,ಕೋಪಗೊಂಡ ವ್ಯಕ್ತಿ ಹಿರಿಯರ ಮೇಲೆ ಹಲ್ಲೆ ಮಾಡಿದ್ದಾರೆ, ವಿಕೋಪಕ್ಕೆ ತಿರುಗಿದ ಜಗಳದಿಂದ ಅಲ್ಲಿದ ಹಿರಿಯ ನಾಗರಿಕರು ವ್ಯಕ್ತಿಗೆ ಹಿಗ್ಗಾ ಮುಗ್ಗಾ ಥಳಿಸಿದ್ದಾರೆ..
    user_ಅರವಿಂದ್ ರಾಜೀವ್
    ಅರವಿಂದ್ ರಾಜೀವ್
    ಬೆಂಗಳೂರು ಉತ್ತರ, ಬೆಂಗಳೂರು ನಗರ, ಕರ್ನಾಟಕ•
    2 hrs ago
  • ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಎಮ್.ಜಿ.ರಸ್ತೆಯಲ್ಲಿ ಶ್ರೀ ದ್ರೌಪದಿ ಧರ್ಮರಾಯ ಸ್ವಾಮಿಯ ಕರಗ ಮಹೋತ್ಸವನ್ನು ಅತಿ ಶೀಘ್ರದಲ್ಲೇ ಪ್ರಾರಂಭ ಮಾಡಲಾಗುತ್ತದೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಬಂದು ದ್ರೌಪದಿ ಧರ್ಮರಾಯಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ಕೋರಿರುತ್ತಾರೆ
    2
    ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಎಮ್.ಜಿ.ರಸ್ತೆಯಲ್ಲಿ ಶ್ರೀ ದ್ರೌಪದಿ ಧರ್ಮರಾಯ ಸ್ವಾಮಿಯ ಕರಗ ಮಹೋತ್ಸವನ್ನು ಅತಿ ಶೀಘ್ರದಲ್ಲೇ ಪ್ರಾರಂಭ ಮಾಡಲಾಗುತ್ತದೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಬಂದು ದ್ರೌಪದಿ ಧರ್ಮರಾಯಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ಕೋರಿರುತ್ತಾರೆ
    user_KRUTHI NEWS KANNADA
    KRUTHI NEWS KANNADA
    Local News Reporter ಚಿಂತಾಮಣಿ, ಚಿಕ್ಕಬಳ್ಳಾಪುರ, ಕರ್ನಾಟಕ•
    14 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.