logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

*ಭಾರತ ನಲ್ಲಿ ವೈರಲ್*

on 20 February
user_Md Aleemulla Shariff
Md Aleemulla Shariff
Citizen Reporter Mysuru, Karnataka•
on 20 February

*ಭಾರತ ನಲ್ಲಿ ವೈರಲ್*

More news from ಕರ್ನಾಟಕ and nearby areas
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    20 min ago
  • On Invitation From RTI ACTIVIST SADA E ITTEHA FOUNDER BABA MUJAHID ALI VISITED GUMBAD E SHAHI IN SRIRANGAPATNA
    1
    On Invitation From RTI ACTIVIST SADA E ITTEHA FOUNDER BABA MUJAHID ALI VISITED GUMBAD E SHAHI IN SRIRANGAPATNA
    user_Mudassir Ahmed
    Mudassir Ahmed
    Local News Reporter ಮೈಸೂರು, ಮೈಸೂರು, ಕರ್ನಾಟಕ•
    1 hr ago
  • ಮೈಸೂರು: ನಗರದ ಜನಗಣತಿ ಕಾರ್ಯವನ್ನು ಪರಿಣಾಮಕಾರಿಯಾಗಿ ನಡೆಸುವ ಉದ್ದೇಶದಿಂದ ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಶಿಕ್ಷಕರಿಗೆ ವಿಶೇಷ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಜನಗಣತಿ ಕಾರ್ಯದಲ್ಲಿ ಪಾಲ್ಗೊಳ್ಳಲಿರುವ ಶಿಕ್ಷಕರು, ಮೇಲ್ವಿಚಾರಕರು ಹಾಗೂ ಸಿಬ್ಬಂದಿಗೆ ಡಿಜಿಟಲ್ ಪದ್ಧತಿಯ ಜನಗಣತಿ ಹಾಗೂ ಸೆಲ್ಫ್ ಜನಗಣತಿ (Self Enumeration) ಕುರಿತು ವಿವರವಾದ ಮಾರ್ಗದರ್ಶನ ನೀಡಲಾಯಿತು. ತರಬೇತಿ ವೇಳೆ ಅಧಿಕಾರಿಗಳು ಮಾತನಾಡಿ, ಜನಗಣತಿ ದೇಶದ ಯೋಜನೆ ರೂಪಿಸುವಲ್ಲಿ ಪ್ರಮುಖ ಅಂಕಿಅಂಶಗಳನ್ನು ಒದಗಿಸುವ ಮಹತ್ವದ ಪ್ರಕ್ರಿಯೆಯಾಗಿದೆ ಎಂದು ತಿಳಿಸಿದರು. ಜನಸಂಖ್ಯೆ, ಶಿಕ್ಷಣ, ಉದ್ಯೋಗ, ವಾಸಸ್ಥಿತಿ, ಸಾಮಾಜಿಕ ಹಾಗೂ ಆರ್ಥಿಕ ಮಾಹಿತಿಗಳು ಸರ್ಕಾರದ ಅಭಿವೃದ್ಧಿ ಯೋಜನೆಗಳಿಗೆ ಆಧಾರವಾಗುತ್ತವೆ. ಆದ್ದರಿಂದ ಪ್ರತಿಯೊಬ್ಬ ನಾಗರಿಕರು ನಿಖರ ಮಾಹಿತಿಯನ್ನು ನೀಡುವುದು ಅಗತ್ಯ ಎಂದು ತಿಳಿಸಲಾಯಿತು. ಈ ಬಾರಿ ಜನಗಣತಿಯಲ್ಲಿ ಡಿಜಿಟಲ್ ತಂತ್ರಜ್ಞಾನಕ್ಕೆ ಹೆಚ್ಚಿನ ಒತ್ತು ನೀಡಲಾಗಿದ್ದು, ನಾಗರಿಕರು ತಮ್ಮ ಮನೆಗಳಿಂದಲೇ ಸ್ವಯಂವಾಗಿ ಮಾಹಿತಿ ಸಲ್ಲಿಸುವ ಅವಕಾಶವನ್ನು ಸರ್ಕಾರ ಕಲ್ಪಿಸಿದೆ. ಇದನ್ನೇ ಸೆಲ್ಫ್ ಜನಗಣತಿ ಎಂದು ಕರೆಯಲಾಗುತ್ತದೆ. ಸೆಲ್ಫ್ ಜನಗಣತಿ ಮಾಡಿಕೊಳ್ಳುವುದು ಹೇಗೆ? ನಾಗರಿಕರು ಕೆಳಗಿನ ವಿಧಾನವನ್ನು ಅನುಸರಿಸಿ ಸೆಲ್ಫ್ ಜನಗಣತಿ ಪೂರ್ಣಗೊಳಿಸಬಹುದು: ಅಧಿಕೃತ ಜನಗಣತಿ ವೆಬ್‌ಸೈಟ್ ಗೆ ಭೇಟಿ ನೀಡಬೇಕು. ಮೊಬೈಲ್ ಸಂಖ್ಯೆ ಅಥವಾ ಇಮೇಲ್ ಮೂಲಕ ನೋಂದಣಿ ಮಾಡಿಕೊಂಡು OTP ಮೂಲಕ ಲಾಗಿನ್ ಆಗಬೇಕು. ಮನೆಯ ವಿವರ, ಕುಟುಂಬದ ಸದಸ್ಯರ ಸಂಖ್ಯೆ, ವಯಸ್ಸು, ಶಿಕ್ಷಣ, ಉದ್ಯೋಗ ಹಾಗೂ ಇತರೆ ಅಗತ್ಯ ಮಾಹಿತಿಗಳನ್ನು ಸರಿಯಾಗಿ ನಮೂದಿಸಬೇಕು. ನೀಡಿದ ಮಾಹಿತಿಯನ್ನು ಪರಿಶೀಲಿಸಿ ಅಂತಿಮವಾಗಿ Submit ಮಾಡಬೇಕು. ಸಲ್ಲಿಸಿದ ನಂತರ ಸಿಗುವ ರೆಫರೆನ್ಸ್ ಸಂಖ್ಯೆ ಅಥವಾ ದೃಢೀಕರಣವನ್ನು ಸಂಗ್ರಹಿಸಿಟ್ಟುಕೊಳ್ಳಬೇಕು. ಹಾಗೂ ಶಿಕ್ಷಕರು ಮನೆ ಬಂದಿರುವ id ತೋರಿಸಿದರೆ ಸಾಕು ತರಬೇತಿ ಕಾರ್ಯಕ್ರಮದಲ್ಲಿ ಶಿಕ್ಷಕರಿಗೆ ಸಾರ್ವಜನಿಕರಿಗೆ ಸಹಾಯ ಮಾಡುವ ಜವಾಬ್ದಾರಿಯನ್ನು ವಹಿಸಲಾಗಿದ್ದು, ಡಿಜಿಟಲ್ ಜನಗಣತಿ ಕುರಿತು ಜನರಲ್ಲಿ ಜಾಗೃತಿ ಮೂಡಿಸುವಂತೆ ಸೂಚಿಸಲಾಯಿತು. ಸೆಲ್ಫ್ ಜನಗಣತಿ ವಿಧಾನದಿಂದ ಸಮಯ ಉಳಿತಾಯವಾಗುವುದರ ಜೊತೆಗೆ ಮಾಹಿತಿ ಸಂಗ್ರಹ ಪ್ರಕ್ರಿಯೆ ವೇಗವಾಗಿ ನಡೆಯಲಿದೆ ಎಂದು ಅಧಿಕಾರಿಗಳು ತಿಳಿಸಿದರು. ನಗರದಲ್ಲಿ ಜನಗಣತಿ ಕಾರ್ಯ ಯಶಸ್ವಿಯಾಗಿ ನಡೆಯಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಸ್ವಯಂವಾಗಿ ಮಾಹಿತಿ ಸಲ್ಲಿಸಿ ಸಹಕರಿಸುವಂತೆ ಪಾಲಿಕೆ ಮನವಿ ಮಾಡಿದೆ.
    1
    ಮೈಸೂರು: ನಗರದ ಜನಗಣತಿ ಕಾರ್ಯವನ್ನು ಪರಿಣಾಮಕಾರಿಯಾಗಿ ನಡೆಸುವ ಉದ್ದೇಶದಿಂದ ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಶಿಕ್ಷಕರಿಗೆ ವಿಶೇಷ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಜನಗಣತಿ ಕಾರ್ಯದಲ್ಲಿ ಪಾಲ್ಗೊಳ್ಳಲಿರುವ ಶಿಕ್ಷಕರು, ಮೇಲ್ವಿಚಾರಕರು ಹಾಗೂ ಸಿಬ್ಬಂದಿಗೆ ಡಿಜಿಟಲ್ ಪದ್ಧತಿಯ ಜನಗಣತಿ ಹಾಗೂ ಸೆಲ್ಫ್ ಜನಗಣತಿ (Self Enumeration) ಕುರಿತು ವಿವರವಾದ ಮಾರ್ಗದರ್ಶನ ನೀಡಲಾಯಿತು.
ತರಬೇತಿ ವೇಳೆ ಅಧಿಕಾರಿಗಳು ಮಾತನಾಡಿ, ಜನಗಣತಿ ದೇಶದ ಯೋಜನೆ ರೂಪಿಸುವಲ್ಲಿ ಪ್ರಮುಖ ಅಂಕಿಅಂಶಗಳನ್ನು ಒದಗಿಸುವ ಮಹತ್ವದ ಪ್ರಕ್ರಿಯೆಯಾಗಿದೆ ಎಂದು ತಿಳಿಸಿದರು. ಜನಸಂಖ್ಯೆ, ಶಿಕ್ಷಣ, ಉದ್ಯೋಗ, ವಾಸಸ್ಥಿತಿ, ಸಾಮಾಜಿಕ ಹಾಗೂ ಆರ್ಥಿಕ ಮಾಹಿತಿಗಳು ಸರ್ಕಾರದ ಅಭಿವೃದ್ಧಿ ಯೋಜನೆಗಳಿಗೆ ಆಧಾರವಾಗುತ್ತವೆ. ಆದ್ದರಿಂದ ಪ್ರತಿಯೊಬ್ಬ ನಾಗರಿಕರು ನಿಖರ ಮಾಹಿತಿಯನ್ನು ನೀಡುವುದು ಅಗತ್ಯ ಎಂದು ತಿಳಿಸಲಾಯಿತು.
ಈ ಬಾರಿ ಜನಗಣತಿಯಲ್ಲಿ ಡಿಜಿಟಲ್ ತಂತ್ರಜ್ಞಾನಕ್ಕೆ ಹೆಚ್ಚಿನ ಒತ್ತು ನೀಡಲಾಗಿದ್ದು, ನಾಗರಿಕರು ತಮ್ಮ ಮನೆಗಳಿಂದಲೇ ಸ್ವಯಂವಾಗಿ ಮಾಹಿತಿ ಸಲ್ಲಿಸುವ ಅವಕಾಶವನ್ನು ಸರ್ಕಾರ ಕಲ್ಪಿಸಿದೆ. ಇದನ್ನೇ ಸೆಲ್ಫ್ ಜನಗಣತಿ ಎಂದು ಕರೆಯಲಾಗುತ್ತದೆ.
ಸೆಲ್ಫ್ ಜನಗಣತಿ ಮಾಡಿಕೊಳ್ಳುವುದು ಹೇಗೆ?
ನಾಗರಿಕರು ಕೆಳಗಿನ ವಿಧಾನವನ್ನು ಅನುಸರಿಸಿ ಸೆಲ್ಫ್ ಜನಗಣತಿ ಪೂರ್ಣಗೊಳಿಸಬಹುದು:
ಅಧಿಕೃತ ಜನಗಣತಿ ವೆಬ್‌ಸೈಟ್  ಗೆ ಭೇಟಿ ನೀಡಬೇಕು.
ಮೊಬೈಲ್ ಸಂಖ್ಯೆ ಅಥವಾ ಇಮೇಲ್ ಮೂಲಕ ನೋಂದಣಿ ಮಾಡಿಕೊಂಡು OTP ಮೂಲಕ ಲಾಗಿನ್ ಆಗಬೇಕು.
ಮನೆಯ ವಿವರ, ಕುಟುಂಬದ ಸದಸ್ಯರ ಸಂಖ್ಯೆ, ವಯಸ್ಸು, ಶಿಕ್ಷಣ, ಉದ್ಯೋಗ ಹಾಗೂ ಇತರೆ ಅಗತ್ಯ ಮಾಹಿತಿಗಳನ್ನು ಸರಿಯಾಗಿ ನಮೂದಿಸಬೇಕು.
ನೀಡಿದ ಮಾಹಿತಿಯನ್ನು ಪರಿಶೀಲಿಸಿ ಅಂತಿಮವಾಗಿ Submit ಮಾಡಬೇಕು.
ಸಲ್ಲಿಸಿದ ನಂತರ ಸಿಗುವ ರೆಫರೆನ್ಸ್ ಸಂಖ್ಯೆ ಅಥವಾ ದೃಢೀಕರಣವನ್ನು ಸಂಗ್ರಹಿಸಿಟ್ಟುಕೊಳ್ಳಬೇಕು. ಹಾಗೂ ಶಿಕ್ಷಕರು ಮನೆ ಬಂದಿರುವ id ತೋರಿಸಿದರೆ ಸಾಕು 
ತರಬೇತಿ ಕಾರ್ಯಕ್ರಮದಲ್ಲಿ ಶಿಕ್ಷಕರಿಗೆ ಸಾರ್ವಜನಿಕರಿಗೆ ಸಹಾಯ ಮಾಡುವ ಜವಾಬ್ದಾರಿಯನ್ನು ವಹಿಸಲಾಗಿದ್ದು, ಡಿಜಿಟಲ್ ಜನಗಣತಿ ಕುರಿತು ಜನರಲ್ಲಿ ಜಾಗೃತಿ ಮೂಡಿಸುವಂತೆ ಸೂಚಿಸಲಾಯಿತು. ಸೆಲ್ಫ್ ಜನಗಣತಿ ವಿಧಾನದಿಂದ ಸಮಯ ಉಳಿತಾಯವಾಗುವುದರ ಜೊತೆಗೆ ಮಾಹಿತಿ ಸಂಗ್ರಹ ಪ್ರಕ್ರಿಯೆ ವೇಗವಾಗಿ ನಡೆಯಲಿದೆ ಎಂದು ಅಧಿಕಾರಿಗಳು ತಿಳಿಸಿದರು.
ನಗರದಲ್ಲಿ ಜನಗಣತಿ ಕಾರ್ಯ ಯಶಸ್ವಿಯಾಗಿ ನಡೆಯಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಸ್ವಯಂವಾಗಿ ಮಾಹಿತಿ ಸಲ್ಲಿಸಿ ಸಹಕರಿಸುವಂತೆ ಪಾಲಿಕೆ ಮನವಿ ಮಾಡಿದೆ.
    user_ಹೊಂಗಿರಣ ನ್ಯೂಸ್
    ಹೊಂಗಿರಣ ನ್ಯೂಸ್
    Photographer Nanjangud, Mysuru•
    15 hrs ago
  • ಹನೂರು :ತಾಲೂಕಿನ ಸೂಳೆರಿಪಾಳ್ಯ ಗ್ರಾ. ಪಂ ವ್ಯಾಪ್ತಿಯ ಕಾಂಚಳ್ಳಿ ಗ್ರಾಮದ ಶ್ರೀ ಮಕ್ಕಳ ಮಾರಮ್ಮನ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಮೊದಲ ದಿನವಾದ ಮಂಗಳವಾರ ತಡರಾತ್ರಿ ಶ್ರೀ ಮಕ್ಕಳ ಮಾರಮ್ಮನಿಗೆ ಜಾಗರ ಸಮರ್ಪಣೆ ಮಾಡಲಾಯಿತು. ಜಾತ್ರೆಯ ಮೊದಲ ದಿನ ಶ್ರೀ ಮಕ್ಕಳ ಮಾರಮ್ಮನಿಗೆ ವಿವಿಧ ಪುಷ್ಪಲಂಕಾರ ಮಾಡಿ,ಪಂಚಾಮೃತ ಅಭಿಷೇಕ, ಎಳನೀರಿನ ಅಭಿಷೇಕ, ವಿಶೇಷ ಪೂಜೆ ನೆರವೇರಿತು. ತಡರಾತ್ರಿ 12 ಗಂಟೆಯ ಸಮಯದಲ್ಲಿ ಊರಿನ ಪ್ರತಿ ಮನೆಯಲ್ಲೂ ದ್ವಿದಳ ದಾನ್ಯಗಳಿಂದ ಮೊಳಕೆ ಹೊಡೆದ ಪೈರನ್ನ ತಂದು ಶ್ರೀ ಮಕ್ಕಳ ಮಾರಮ್ಮನಿಗೆ ಅರ್ಪಿಸಿದರು. ಮೆರಗು ತಂದ ಗಾಡಿ ಗೊಂಬೆ :ಜಾತ್ರಾ ಮಹೋತ್ಸವ ಹಿನ್ನಲೆಯಲ್ಲಿ ಬಿದಿರಿನಿಂದ ಮಾಡಿದ ಬೋಂಬೆಯು ನೋಡುಗರ ಕಣ್ಮಣ ಸೆಳೆಯುವಂತಿತ್ತು. ಕಳೆದ 10 ವರ್ಷಗಳ ನಂತರ ವೆಂಕಟಾಚಲಚಾರಿಯವರ ಕಸುಬಾಗಿದ್ದು, ಒಣ ಬಿದಿರಿನಿಂದ ಬೋಂಬೆ ತಯಾರು ಮಾಡಿ, ಬಟ್ಟೆ ಓದಿಸಿಕೊಂಡು ಕುಣಿದರು. ತಮಟೆ ಸದ್ದಿಗೆ ಯುವಕರು, ಯಜಮಾನರು, ಮಕ್ಕಳು ಕುಣಿದು ಕುಪ್ಪಳಿಸಿದರು.
    4
    ಹನೂರು :ತಾಲೂಕಿನ ಸೂಳೆರಿಪಾಳ್ಯ ಗ್ರಾ. ಪಂ ವ್ಯಾಪ್ತಿಯ ಕಾಂಚಳ್ಳಿ ಗ್ರಾಮದ ಶ್ರೀ ಮಕ್ಕಳ ಮಾರಮ್ಮನ  ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಮೊದಲ ದಿನವಾದ ಮಂಗಳವಾರ ತಡರಾತ್ರಿ ಶ್ರೀ ಮಕ್ಕಳ ಮಾರಮ್ಮನಿಗೆ ಜಾಗರ ಸಮರ್ಪಣೆ ಮಾಡಲಾಯಿತು.
ಜಾತ್ರೆಯ ಮೊದಲ ದಿನ ಶ್ರೀ ಮಕ್ಕಳ ಮಾರಮ್ಮನಿಗೆ ವಿವಿಧ ಪುಷ್ಪಲಂಕಾರ ಮಾಡಿ,ಪಂಚಾಮೃತ ಅಭಿಷೇಕ, ಎಳನೀರಿನ ಅಭಿಷೇಕ, ವಿಶೇಷ ಪೂಜೆ ನೆರವೇರಿತು.
ತಡರಾತ್ರಿ 12 ಗಂಟೆಯ ಸಮಯದಲ್ಲಿ  ಊರಿನ ಪ್ರತಿ ಮನೆಯಲ್ಲೂ ದ್ವಿದಳ ದಾನ್ಯಗಳಿಂದ ಮೊಳಕೆ ಹೊಡೆದ ಪೈರನ್ನ ತಂದು ಶ್ರೀ ಮಕ್ಕಳ ಮಾರಮ್ಮನಿಗೆ ಅರ್ಪಿಸಿದರು.
ಮೆರಗು ತಂದ ಗಾಡಿ ಗೊಂಬೆ :ಜಾತ್ರಾ ಮಹೋತ್ಸವ ಹಿನ್ನಲೆಯಲ್ಲಿ  ಬಿದಿರಿನಿಂದ ಮಾಡಿದ ಬೋಂಬೆಯು ನೋಡುಗರ ಕಣ್ಮಣ ಸೆಳೆಯುವಂತಿತ್ತು. ಕಳೆದ 10 ವರ್ಷಗಳ ನಂತರ ವೆಂಕಟಾಚಲಚಾರಿಯವರ ಕಸುಬಾಗಿದ್ದು, ಒಣ ಬಿದಿರಿನಿಂದ ಬೋಂಬೆ ತಯಾರು ಮಾಡಿ, ಬಟ್ಟೆ ಓದಿಸಿಕೊಂಡು ಕುಣಿದರು.
ತಮಟೆ ಸದ್ದಿಗೆ ಯುವಕರು, ಯಜಮಾನರು, ಮಕ್ಕಳು ಕುಣಿದು ಕುಪ್ಪಳಿಸಿದರು.
    user_Vijay kumar
    Vijay kumar
    ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    14 hrs ago
  • ಹನೂರು : ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಸಾಲೂರು ಬೃಹನ್ ಮಠದ ಪೀಠಾಧ್ಯಕ್ಷರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ವಿದ್ಯಾವಾರಾದಿ ರವರಿಗೆ ವಿಶ್ವವಿದ್ಯಾಲಯದ ಕುಲಪತಿಗಳು ಹಾಗೂ ರಾಜ್ಯಪಾಲರಾದ ಥಾವರ್ ಚಂದ್ ಗೇಹ್ಲೋಟ್ ರವರು ಪಿ ಎಚ್ ಡಿ ಪದವಿ ಪ್ರಧಾನ ಮಾಡಿದರು. ಏಪ್ರಿಲ್ ಏಳ ರಂದು ಬೆಂಗಳೂರು ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ 12 ಮತ್ತು 13ನೇ ಘಟಿಕೋತ್ಸವದ ಸಮಾರಂಭದಲ್ಲಿ ವಿತರಿಸಿದ್ದಾರೆ. ಸಾಲೂರು ಬೃಹನ್ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ರವರು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಕುಂದೂರು ಮಠದ ಮಠಾಧಿಪತಿಗಳಾದ ಶ್ರೀ ಶರತ್ ಚಂದ್ರ ಸ್ವಾಮಿಗಳ ಮಾರ್ಗದರ್ಶನದಲ್ಲಿ ವೇದಾಂತ ವಿಭಾಗದಲ್ಲಿ ಅಂಶುಮದಾಗಮಮ್ ಸಂಪದನಾತ್ಮಕ ಅಧ್ಯಯನಮ್ ಎಂಬ ವಿಷಯದಲ್ಲಿ ಹಸ್ತಪ್ರತಿ ಅಧ್ಯಯನ ಮಾಡಿ ಸಂಶೋಧನಾ ಪ್ರಬಂಧವನ್ನು ವಿಶ್ವವಿದ್ಯಾಲಯಕ್ಕೆ ಮಂಡಿಸಿದ್ದರು. ಘಟಿಕೋತ್ಸವದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಲೋಕಸಭಾ ಸದಸ್ಯರಾದ ಡಾ. ಸಿ.ಎನ್. ಮಂಜುನಾಥ್ ಅವರು ಘಟಿಕೋತ್ಸವ ಭಾಷಣ ಮಾಡಿದರು, ಉಪಕುಲಪತಿ ಶ್ರೀಮತಿ ಅಹಲ್ಯ ಕುಲಸಚಿವರಾದ ಪ್ರೊ. ಗಿರೀಶ್ ಚಂದ್ರ ಉಪಸ್ಥಿತರಿದ್ದರು. ಸಾಲೂರು ಶ್ರೀಗಳ ಸಾಧನೆ: ಗ್ರಂಥಕ್ಕೆ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯವು 2024ನೇ ಸಾಲಿನ 'ಸಂಸ್ಕೃತ ಗ್ರಂಥ ಪುರಸ್ಕಾರವು ಲಭಿಸಿದೆ. ಪರಮಪೂಜ್ಯ ಲಿಂ. ಶ್ರೀ ಗುರುಸ್ವಾಮೀಜಿ ಆಶೀರ್ವಾದ, ಪ್ರೇರಣೆ ನೀಡಿದ ಕುಂದೂರು ಮಠದ ಡಾ.ಶರತ್‌ಚಂದ್ರ ಸ್ವಾಮೀಜಿ, ಸುತ್ತೂರು ದೇಗುಲಮಠದ ಶ್ರೀಗಳ ಮಾರ್ಗದರ್ಶನದಲ್ಲಿ ಶ್ರೀಮಠದ ಅಭ್ಯುದಯಕ್ಕಾಗಿ ಅಳಿಲು ಸೇವೆ ಸಲ್ಲಿಸುತ್ತಿದ್ದಾರೆ. ಭಾರತ ಸರ್ಕಾರ ಭಾರತೀಯ ಭಾಷಾ ಸಂಸ್ಥಾನದಲ್ಲಿ 5 ವರ್ಷಗಳ ಕಾಲ ಸೇವೆ ಸಲ್ಲಿಸಿ, ಅನಂತರ 8 ಆಗಸ್ಟ್ 2020 ರಂದು ಶ್ರೀ ಸಾಲೂರು ಬೃಹನ್ಮಠಕ್ಕೆ ಪಟ್ಟಾಭಿಷೇಕವಾಯಿತು. ಇಂದು ಶ್ರೀ ಕ್ಷೇತ್ರದ ಶ್ರೀ ಸಾಲೂರು ಬೃಹನ್ಮಠದಲ್ಲಿ ಪೂಜ್ಯ ಲಿಂ. ಪಟ್ಟದ ಗುರುಸ್ವಾಮಿಗಳವರು ಮತ್ತು ಭಕ್ತರ ಆಶಯದಂತೆ ಶ್ರೀಮಠದ ಸೇವಾ ಕೈಂಕರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಪ್ರೌಢಪ್ರಬಂಧದಲ್ಲಿ ಶ್ರೀಗಳು ಸಂಪಾದಿಸಿರುವ ಪ್ರೌಢಪ್ರಬಂಧದಲ್ಲಿ ಅಂಕುಮದಾಗಮದಲ್ಲಿ 84 ಅಧ್ಯಾಯಗಳಿವೆ. 84 ಅಧ್ಯಾಯಗಳು ಇವುಗಳೆಲ್ಲ ಪರಿಪೂರ್ಣವಾಗಿ ದೇವಾಲಯಗಳು ಮತ್ತು ಅವುಗಳ ಪೂಜಾದಿ ಆರಂಭಿಸಿ, ಸಕಳ ಸ್ಥಾಪನ, ಅತ್ಯಾರ್ಥಯಜನ ಪವಿತ್ರ ವಿಧಿ, ಪಂಚಾಮೃತ ವಿಧಿ, ಚೂರ್ಣೋತ್ಸವ ವಿಧಿ, ಪರಸುಪ್ರತ್ತಯ ವಿಧಿ, ಪಾದ್ಯಾದಿವಿಧಿಗಳನ್ನು ಇಲ್ಲಿ ಅತ್ಯಂತ ಸುವಿಸ್ತಾರವಾಗಿ ವರ್ಣಿತವಾಗಿವೆ. ವಿವಿಧ ದೇವತೆಗಳಿಗೆ ಸಂಬಂಧಿಸಿದ ಅರ್ಚನಾ ಕ್ರಮಗಳ ವಿವರಗಳೂ ಇವೆ. ಉದಾಹರಣೆಗೆ ವಿನಾಯಕ ವ್ರತ, ಮುಖಲಿಂಗಾರ್ಚನ, ಗೌರೀಪವಿತ್ರ ವಿಧಿ, ನಕ್ಷತ್ರ ಪೂಜಾ ವಿಧಿ. ಅರ್ಧನಾರೀಶ್ವರ ಪೂಜಾ ವಿಧಿ. ಚಂದೇಕಾರ್ಚನ ವಿಧಿ ಮಹಾಶಾಂತಿ ವಿಧಿ, ದೇವೀಪೂಜಾ ವಿಧಿ. ಈ ಆಗಮದ ಅತ್ಯಂತ ಮಹತ್ವದ ಮತ್ತೊಂದು ಸಂಗತಿ ಏನೆಂದರೆ, ಇಲ್ಲಿ ದೇವಾಲಯಗಳ ನಿರ್ಮಾಣ, ಮೂರ್ತಿ ನಿರ್ಮಾಣದ ವಿಧಾನಗಳೂ ಸೇನಾಸ್ಥಂಭ, ಅಶ್ವಸ್ತಂಭಗಳ ಸ್ಥಾಪನೆ ಇತ್ಯಾದಿ ವಿವರಗಳಿವೆ. ಇವುಗಳ ಜತೆಗೆ, ರುದ್ರಾಕ್ರ ಭಸ್ಮಾದಿ ವಿಧಿಗಳು, ಕೃತ್ತಿಕಾದೀಪ ವಿಧಿ, ವಿವಿಧ ಪ್ರಾಯಶ್ಚಿತ್ರಗಳು, ಪ್ರದೋಷ ಪೂಜಾದಿ ವಿಧಿಗಳೆಲ್ಲವೂ ವಿಸ್ತಾರವಾಗಿ ವಿವರಣೆಗೊಂಡಿವೆ. ಇದು ದೇವಾಲಯಗಳ ವಿವಿಧ ಕರ್ಮ ವಿಧಾನಗಳಿಗೆ ಸಹಕಾರಿಯಾಗಲಿವೆ. ಶೈವ ದೇವಾಲಯಗಳ ವಿಧಿವಿಧಾನಗಳ ಬಗ್ಗೆ ಅಧ್ಯಯನ ಮಾಡುವ ಸಂಶೋಧಕರಿಗೆ ಇದು ಅನುಕೂಲವಾಗುತ್ತದೆ. ಸಾಲೂರು ಶ್ರೀಗಳನ್ನು ಪಿಎಚ್. ಡಿವರೆಗೂ ಕೈ ಹಿಡಿದು ಮುನ್ನಡೆಸಿರುವವರು ಮತ್ತೊಬ್ಬ ಶ್ರೀಗಳು. ಕುಂದೂರು ಮಠದ ಮಠಾಧೀಫತಿಗಳು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಪ್ರಾಧ್ಯಾಪಕರೂ ಆಗಿರುವ ಖ್ಯಾತ ವಿದ್ವಾಂಸರಾದ ಡಾ.ಶರತ್‌ ಚಂದ್ರ ಸ್ವಾಮೀಜಿ ಮಾರ್ಗದರ್ಶನ ಗುರಿ ತಲುಪಿಸಿದೆ. ಅಂದು ಸೋತು ಬಂದ ಶಿಷ್ಯನನ್ನು ಇಂದು ಗೆಲ್ಲಿಸಿದ್ದಾರೆ. ಶ್ರೀಗಳು ಪಿಯುಸಿ ಫೇಲ್ ಆದ ಸಂದರ್ಭದಲ್ಲಿ ಡಾ.ಶರತ್ ಚಂದ್ರ ಸ್ವಾಮೀಜಿ ಆತ್ಮಸ್ಥೆರ್ಯ ತುಂಬಿದರು. ಸಂಸ್ಕೃತ ಅಧ್ಯಯನ ಮಾಡಿಸಿದರು. ಎಂ.ಎ. ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಾಗ ಮತ್ತೆ ಪರೀಕ್ಷೆ ಬರೆಯಲು ಸಲಹೆ ನೀಡಿ ಪೂಜ್ಯರು ಎಂ.ಫೀಲ್ ಮತ್ತು ಪಿ.ಎಚ್ಡಿ ಗೆ ಮಾರ್ಗದರ್ಶನ ನೀಡಿದನ್ನು ಸಾಲೂರು ಶ್ರೀಗಳು ಸ್ಮರಿಸಿಕೊಂಡಿದ್ದಾರೆ.
    1
    ಹನೂರು : ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಸಾಲೂರು ಬೃಹನ್ ಮಠದ ಪೀಠಾಧ್ಯಕ್ಷರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ವಿದ್ಯಾವಾರಾದಿ ರವರಿಗೆ ವಿಶ್ವವಿದ್ಯಾಲಯದ ಕುಲಪತಿಗಳು ಹಾಗೂ ರಾಜ್ಯಪಾಲರಾದ ಥಾವರ್ ಚಂದ್ ಗೇಹ್ಲೋಟ್ ರವರು ಪಿ ಎಚ್ ಡಿ ಪದವಿ ಪ್ರಧಾನ ಮಾಡಿದರು. 
ಏಪ್ರಿಲ್ ಏಳ ರಂದು ಬೆಂಗಳೂರು ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ 12 ಮತ್ತು 13ನೇ ಘಟಿಕೋತ್ಸವದ ಸಮಾರಂಭದಲ್ಲಿ ವಿತರಿಸಿದ್ದಾರೆ.
ಸಾಲೂರು ಬೃಹನ್ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ರವರು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಕುಂದೂರು ಮಠದ ಮಠಾಧಿಪತಿಗಳಾದ ಶ್ರೀ ಶರತ್ ಚಂದ್ರ ಸ್ವಾಮಿಗಳ ಮಾರ್ಗದರ್ಶನದಲ್ಲಿ ವೇದಾಂತ ವಿಭಾಗದಲ್ಲಿ ಅಂಶುಮದಾಗಮಮ್ ಸಂಪದನಾತ್ಮಕ ಅಧ್ಯಯನಮ್ ಎಂಬ ವಿಷಯದಲ್ಲಿ ಹಸ್ತಪ್ರತಿ ಅಧ್ಯಯನ ಮಾಡಿ ಸಂಶೋಧನಾ ಪ್ರಬಂಧವನ್ನು ವಿಶ್ವವಿದ್ಯಾಲಯಕ್ಕೆ ಮಂಡಿಸಿದ್ದರು.
ಘಟಿಕೋತ್ಸವದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಲೋಕಸಭಾ ಸದಸ್ಯರಾದ ಡಾ. ಸಿ.ಎನ್. ಮಂಜುನಾಥ್ ಅವರು ಘಟಿಕೋತ್ಸವ ಭಾಷಣ ಮಾಡಿದರು, ಉಪಕುಲಪತಿ ಶ್ರೀಮತಿ ಅಹಲ್ಯ ಕುಲಸಚಿವರಾದ ಪ್ರೊ. ಗಿರೀಶ್ ಚಂದ್ರ ಉಪಸ್ಥಿತರಿದ್ದರು.
ಸಾಲೂರು ಶ್ರೀಗಳ ಸಾಧನೆ: 
ಗ್ರಂಥಕ್ಕೆ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯವು 2024ನೇ ಸಾಲಿನ 'ಸಂಸ್ಕೃತ ಗ್ರಂಥ ಪುರಸ್ಕಾರವು ಲಭಿಸಿದೆ.
ಪರಮಪೂಜ್ಯ ಲಿಂ. ಶ್ರೀ ಗುರುಸ್ವಾಮೀಜಿ ಆಶೀರ್ವಾದ, ಪ್ರೇರಣೆ ನೀಡಿದ ಕುಂದೂರು ಮಠದ ಡಾ.ಶರತ್‌ಚಂದ್ರ ಸ್ವಾಮೀಜಿ, ಸುತ್ತೂರು ದೇಗುಲಮಠದ ಶ್ರೀಗಳ ಮಾರ್ಗದರ್ಶನದಲ್ಲಿ ಶ್ರೀಮಠದ ಅಭ್ಯುದಯಕ್ಕಾಗಿ ಅಳಿಲು ಸೇವೆ ಸಲ್ಲಿಸುತ್ತಿದ್ದಾರೆ.
ಭಾರತ ಸರ್ಕಾರ ಭಾರತೀಯ ಭಾಷಾ ಸಂಸ್ಥಾನದಲ್ಲಿ 5 ವರ್ಷಗಳ ಕಾಲ ಸೇವೆ ಸಲ್ಲಿಸಿ, ಅನಂತರ 8 ಆಗಸ್ಟ್ 2020 ರಂದು ಶ್ರೀ ಸಾಲೂರು ಬೃಹನ್ಮಠಕ್ಕೆ ಪಟ್ಟಾಭಿಷೇಕವಾಯಿತು.
ಇಂದು ಶ್ರೀ ಕ್ಷೇತ್ರದ ಶ್ರೀ ಸಾಲೂರು ಬೃಹನ್ಮಠದಲ್ಲಿ ಪೂಜ್ಯ ಲಿಂ. ಪಟ್ಟದ ಗುರುಸ್ವಾಮಿಗಳವರು ಮತ್ತು ಭಕ್ತರ ಆಶಯದಂತೆ ಶ್ರೀಮಠದ ಸೇವಾ ಕೈಂಕರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.
ಪ್ರೌಢಪ್ರಬಂಧದಲ್ಲಿ ಶ್ರೀಗಳು ಸಂಪಾದಿಸಿರುವ ಪ್ರೌಢಪ್ರಬಂಧದಲ್ಲಿ ಅಂಕುಮದಾಗಮದಲ್ಲಿ 84 ಅಧ್ಯಾಯಗಳಿವೆ. 84 ಅಧ್ಯಾಯಗಳು ಇವುಗಳೆಲ್ಲ ಪರಿಪೂರ್ಣವಾಗಿ ದೇವಾಲಯಗಳು ಮತ್ತು ಅವುಗಳ ಪೂಜಾದಿ ಆರಂಭಿಸಿ, ಸಕಳ ಸ್ಥಾಪನ, ಅತ್ಯಾರ್ಥಯಜನ ಪವಿತ್ರ ವಿಧಿ, ಪಂಚಾಮೃತ ವಿಧಿ, ಚೂರ್ಣೋತ್ಸವ ವಿಧಿ, ಪರಸುಪ್ರತ್ತಯ ವಿಧಿ, ಪಾದ್ಯಾದಿವಿಧಿಗಳನ್ನು ಇಲ್ಲಿ ಅತ್ಯಂತ ಸುವಿಸ್ತಾರವಾಗಿ ವರ್ಣಿತವಾಗಿವೆ. ವಿವಿಧ ದೇವತೆಗಳಿಗೆ ಸಂಬಂಧಿಸಿದ ಅರ್ಚನಾ ಕ್ರಮಗಳ ವಿವರಗಳೂ ಇವೆ. ಉದಾಹರಣೆಗೆ ವಿನಾಯಕ ವ್ರತ, ಮುಖಲಿಂಗಾರ್ಚನ, ಗೌರೀಪವಿತ್ರ ವಿಧಿ, ನಕ್ಷತ್ರ ಪೂಜಾ ವಿಧಿ. ಅರ್ಧನಾರೀಶ್ವರ ಪೂಜಾ ವಿಧಿ. ಚಂದೇಕಾರ್ಚನ ವಿಧಿ ಮಹಾಶಾಂತಿ ವಿಧಿ, ದೇವೀಪೂಜಾ ವಿಧಿ. ಈ ಆಗಮದ ಅತ್ಯಂತ ಮಹತ್ವದ ಮತ್ತೊಂದು ಸಂಗತಿ ಏನೆಂದರೆ, ಇಲ್ಲಿ ದೇವಾಲಯಗಳ ನಿರ್ಮಾಣ, ಮೂರ್ತಿ ನಿರ್ಮಾಣದ ವಿಧಾನಗಳೂ ಸೇನಾಸ್ಥಂಭ, ಅಶ್ವಸ್ತಂಭಗಳ ಸ್ಥಾಪನೆ ಇತ್ಯಾದಿ ವಿವರಗಳಿವೆ. ಇವುಗಳ ಜತೆಗೆ, ರುದ್ರಾಕ್ರ ಭಸ್ಮಾದಿ ವಿಧಿಗಳು, ಕೃತ್ತಿಕಾದೀಪ ವಿಧಿ, ವಿವಿಧ ಪ್ರಾಯಶ್ಚಿತ್ರಗಳು, ಪ್ರದೋಷ ಪೂಜಾದಿ ವಿಧಿಗಳೆಲ್ಲವೂ ವಿಸ್ತಾರವಾಗಿ ವಿವರಣೆಗೊಂಡಿವೆ. ಇದು ದೇವಾಲಯಗಳ ವಿವಿಧ ಕರ್ಮ ವಿಧಾನಗಳಿಗೆ ಸಹಕಾರಿಯಾಗಲಿವೆ. ಶೈವ ದೇವಾಲಯಗಳ ವಿಧಿವಿಧಾನಗಳ ಬಗ್ಗೆ ಅಧ್ಯಯನ ಮಾಡುವ ಸಂಶೋಧಕರಿಗೆ ಇದು ಅನುಕೂಲವಾಗುತ್ತದೆ.
ಸಾಲೂರು ಶ್ರೀಗಳನ್ನು ಪಿಎಚ್. ಡಿವರೆಗೂ ಕೈ ಹಿಡಿದು ಮುನ್ನಡೆಸಿರುವವರು ಮತ್ತೊಬ್ಬ ಶ್ರೀಗಳು. ಕುಂದೂರು ಮಠದ ಮಠಾಧೀಫತಿಗಳು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಪ್ರಾಧ್ಯಾಪಕರೂ ಆಗಿರುವ ಖ್ಯಾತ ವಿದ್ವಾಂಸರಾದ ಡಾ.ಶರತ್‌ ಚಂದ್ರ ಸ್ವಾಮೀಜಿ ಮಾರ್ಗದರ್ಶನ ಗುರಿ ತಲುಪಿಸಿದೆ. ಅಂದು ಸೋತು ಬಂದ ಶಿಷ್ಯನನ್ನು ಇಂದು ಗೆಲ್ಲಿಸಿದ್ದಾರೆ.
ಶ್ರೀಗಳು ಪಿಯುಸಿ ಫೇಲ್ ಆದ ಸಂದರ್ಭದಲ್ಲಿ ಡಾ.ಶರತ್ ಚಂದ್ರ ಸ್ವಾಮೀಜಿ ಆತ್ಮಸ್ಥೆರ್ಯ ತುಂಬಿದರು. ಸಂಸ್ಕೃತ ಅಧ್ಯಯನ ಮಾಡಿಸಿದರು. ಎಂ.ಎ. ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಾಗ ಮತ್ತೆ ಪರೀಕ್ಷೆ ಬರೆಯಲು ಸಲಹೆ ನೀಡಿ ಪೂಜ್ಯರು ಎಂ.ಫೀಲ್ ಮತ್ತು ಪಿ.ಎಚ್ಡಿ ಗೆ ಮಾರ್ಗದರ್ಶನ ನೀಡಿದನ್ನು ಸಾಲೂರು ಶ್ರೀಗಳು ಸ್ಮರಿಸಿಕೊಂಡಿದ್ದಾರೆ.
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Farmer ಹನೂರು, ಚಾಮರಾಜನಗರ, ಕರ್ನಾಟಕ•
    21 hrs ago
  • ​ ಮಾಗಡಿ : ಮಾಗಡಿ ಕೆರೆಗಳನ್ನು ತುಂಬಿಸಿ ನಂತರ ಡಾಬಸ್‍ಪೇಟೆ ಕೈಗಾರಿಕೆ ಪ್ರದೇಶಕ್ಕೆ ನೀರು ನೀಡಲಿ ಇಲ್ಲದಿದ್ರೆ ಏ. 17 ರಂದು ಬೃಹತ್ ತಡೆ ನಡೆಸುವುದಾಗಿ ತಾಲೂಕು ರೈತಸಂಘದ ಅಧ್ಯಕ್ಷ ಹೋಸಪಾಳ್ಯ ಲೋಕೇಶ್ ಎಚ್ಚರಿಕೆ ನೀಡಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಗಡಿ ತಾಲೂಕಿನ ಕೆರೆಗಳಿಗೆ ಹೇಮಾವತಿ ನೀರು ತುಂಬಿಸಲು ಸರಕಾರ ಇಂತಿಷ್ಟು ನೀರು ಅಲೋಕೇಟ್ ಮಾಡಿದೆ ಈ ನೀರನ್ನು ಮಾಗಡಿಗೆ ನೀಡಲು ತುಮಕೂರಿನ ಚುನಾಯಿತ ಪ್ರತಿನಿಧಿಗಳು ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಈ ನಡುವೆ ಸತ್ತೆಗಾಲದಿಂದ ಕಣ್ವ ಮಾಗಡಿ ಪಟ್ಟಣದ ಮೂಲಕ ದಾಬಸ್ ಪೇಟೆ ಕೈಗಾರಿಕೆ ಪ್ರದೇಶಕ್ಕೆ ಬೃಹತ್ ಗಾತ್ರದ ಪೈಪು ಮೂಲಕ ನೀಡಲು ಸರಕಾರ ಮುಂದಾಗಿದ್ದು ನೂರಾರು ಮರಗಳಿಗೆ ಹಾಗೂ ರಸ್ತೆಗಳನ್ನು ಹಾನಿ ಮಾಡಿ ಕಾಮಗಾರಿಯೂ ನಡೆಯುತ್ತಿದೆ ಮೊದಲು ಮಾಗಡಿ ತಾಲೂಕಿನ ಕೆರೆಗಳಿಗೆ ನೀರು ಕೊಟ್ಟು ನಂತರ ಡಾಬಸ್ ಪೇಟೆ ಕೈಗಾರಿಕೆ ಪ್ರದೇಶಕ್ಕೆ ನೀಡಲಿ ಎಂದು ಒತ್ತಾಯಿಸಿದರು. ಉಪಮುಖ್ಯಮಂತ್ರಿ ಡಿಕೆ.ಶಿವಕುಮಾರು, ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್, ಶಾಸಕ ಎಚ್.ಸಿ.ಬಾಲಕೃಷ್ಣ ಅವರು ಜಿಲ್ಲೆಯವರೆ ಆಗಿರುವುದರಿಂದ ಕಾವೇರಿ ನದಿ ನೀರನ್ನು ಈ ಭಾಗದ ಕೆರೆ,ಕಟ್ಟೆಗಳಿಗೆ ತುಂಬಿಸಬೇಕು. ಡಾಬಸ್ ಪೇಟೆ ಕೈಗಾರಿಕೆ ಪ್ರದೇಶಕ್ಕೆ ಎಷ್ಟು ನೀರನ್ನು ತೆಗೆದುಕೊಂಡು ಹೋಗಲಾಗುತ್ತಿದೆ ಯಾವ ಮಾನದಂಡದಲ್ಲಿ ನೀರನ್ನು ಕೊಡೋಯ್ಯಲಾಗುತ್ತಿದೆ ಎಂಬುದರ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳು ರೈತಸಂಘದೊಂದಿಗೆ ಸಭೆ ನಡೆಸಿ ಸಂಬಂಧ ಪಟ್ಟ ಮಾಹಿತಿ ತಿಳಿಸಬೇಕು ಇಲ್ಲದಿದ್ರೆ ಏ. 17 ರಂದು ಪಟ್ಟಣದ ಹೋಸಪೇಟೆ ವೃತ್ತದಲ್ಲಿ ರಸ್ತೆ ತಡೆನಡೆಸಿ ನಂತರ ಎಲ್ಲಾ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಜೆಸಿಬಿ ಮೂಲಕ ಪೈಪುಗಳನ್ನು ಕಿತ್ತುಹಾಕುವ ಕೆಲಸಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು. ಸತ್ತೆಗಾಲದಿಂದ ಡಾಬಸ್ ಪೇಟೆ ಕೈಗಾರಿಕೆ ಪ್ರದೇಶ ಸುಮಾರು 100 ಕಿಲೋಮೀಟರ್ ಗೂ ಹೆಚ್ಚಿದ್ದು ಅಲ್ಲಿಂದ ಇಲ್ಲಿಗೆ ನೀರು ಕೊಡುವ ಅಗತ್ಯವಾದರೂ ಏನಿದೆ ತುಮಕೂರು ಜಿಲ್ಲೆ ವ್ಯಾಪ್ತಿಯಲ್ಲಿ ಹರಿಯುವ ಹೇಮಾವತಿ ನೀರನ್ನು ಕೈಗಾರಿಕೆ ಪ್ರದೇಶಕ್ಕೆ ನೀಡಬಹುದಿತ್ತು ಅದನ್ನು ಬಿಟ್ಟು ಕಾವೇರಿ ನೀರನ್ನು ಕೋಡುತ್ತಿರುವುದಾದರು ಏನು ಈ ಬಗ್ಗೆ ಸಾಕಷ್ಟು ಅನುಮಾನ ಮೂಢಿದೆ. ಮಾಗಡಿ ತಾಲೂಕಿನ ಜನರಿಗೆ ಕುಡಿಯುವ ನೀರಿಲ್ಲದೆ ಆಹಾಕಾರ ಉಂಟಾಗಿದೆ. ಅದರಲ್ಲೂ ಮಂಚನಬೆಲೆ ಜಲಾಶಯದಿಂದ ಮಾಗಡಿ ಪಟ್ಟಣಕ್ಕೆ ಸರಬರಾಜು ಮಾಡುವ ನೀರು ಸಮರ್ಪಕವಾಗಿ ನೀಡುತ್ತಿಲ್ಲ ಈಗಿರುವಾಗ ಮಾಗಡಿ ತಾಲೂಕಿನ ಜನರಿಗೆ ಕಾವೇರಿಯ ನೀರು ಅತ್ಯವಶ್ಯಕವಾಗಿದೆ ಎಂದರು. ತಾಲೂಕಿನಲ್ಲಿ ಸಮರ್ಪಕ ವಿದ್ಯುತ್ ನೀಡದೆ ಇರುವುದರಿಂದ ರೈತರ ಮೋಟಾರ್ ಸುಟ್ಟುಹೋಗುತ್ತಿದೆ, ಗ್ರಾಮಗಳಲ್ಲಿ ಜೆಜೆಎಂ ಕಾಮಗಾರಿ ಸಂಪೂರ್ಣ ಕಳಫೆಯಿಂದ ಕೂಡಿದೆ, ತಾಲೂಕಿನಲ್ಲಿನ ಎಲ್ಲಾ ಶುದ್ದಕುಡಿಯುವ ನೀರಿನ ಘಟಕಗಳು ಸುಟ್ಟುಹೋಗಿವೆ, ತಾಲೂಕು ಕಚೇರಿಗಳಲ್ಲಿ ರೈತರ ಕೆಲಸವಾಗುತ್ತಿಲ್ಲ, ಬಹುತೇಕ ಗ್ರಾಮಗಳಲ್ಲಿ ಬಸ್ ಸೌಲಭ್ಯಗಳಿಲ್ಲ ರೈತರ ಸಮಸ್ಯೆಗಳು ದಿನೆ,ದಿನೇ ಹೆಚ್ಚಾಗುತ್ತಿದೆ ಈ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ತಹಶೀಲ್ದಾರ್ ಶರತ್ ಕುಮಾರು ವಿಫಲರಾಗಿದ್ದಾರೆ ಈ ಸಂಬಂಧ ತಾಲೂಕು ಕಚೇರಿಗೆ ಮುತ್ತಿಗೆ ಹಾಕುವ ಕೆಲಸ ಮಾಡಲಾಗುವುದು ಎಂದರು. ತಾಲೂಕಿನ ತಿಪ್ಪಗೊಂಡನಹಳ್ಳಿ ಜಲಾಶಯದಲ್ಲಿನ ಹೂಳೆತ್ತಿದ್ದರೆ ಮಾಗಡಿ- ಕುಣಿಗಲ್ ಭಾಗದಲ್ಲಿ ಅಂತರ್ ಜಲವೃದ್ದಿಯಾಗುತ್ತದೆ ಇದರಿಂದ ರೈತರಿಗೆ ಅನುಕೂಲವಾಗುತ್ತದೆ ಎಂದು ಮಾಗಡಿ- ತಿಪ್ಪಗೊಂಡನಹಳ್ಳಿ ವರೆಗೆ ಪಾದಯಾತ್ರೆ ನಡೆಸಿ 3 ಭಾರಿ ರಸ್ತೆ ತಡೆನಡೆಸಿದ ಕಾರಣ ತಿಪ್ಪಗೊಂಡನಹಳ್ಳಿ ಜಲಾಶಯದ ಹೂಳೆತ್ತಲು ಸರಕಾರ 100 ಕೋಟಿಗೂ ಹೆಚ್ಚು ಅನುದಾನ ಬಿಡುಗಡೆ ಮಾಡಿತು ಆದರೂ ಕಾಮಗಾರಿ ಪೂರ್ಣಗೊಂಡಿಲ್ಲ ಪೂರ್ಣಗೊಳಿಸುವಂತೆ ಹಾಗೂ ಬೆಂಗಳೂರು ಸುತ್ತಮುತ್ತಲಿನಿಂದ ಜಲಾಶಯಕ್ಕೆ ಸೇರುವ ಕಲುಷಿತ ನೀರು ತಡೆಗಟ್ಟುವಂತೆ ಆಗ್ರಹಿಸಿ ಏ. 28 ರಂದು ಮಾಗಡಿಯಿಂದ ತಿಪ್ಪಗೊಂಡನಹಳ್ಳಿ ಜಲಾಶಯದ ವರೆಗೂ ಬೃಹತ್ ಬೈಕ್ ರ್ಯಾಲಿ ಮೂಲಕ ಉಗ್ರಹೋರಾಟವನ್ನು ತಾಲೂಕು ರೈತಸಂಘ ಹಮ್ಮಿಕೊಳ್ಳಲಿದೆ ಈ ಹೋರಾಟಕ್ಕೆ ಪೊಲೀಸ್ ಇಲಾಖೆ ಸಹಕಾರ ನೀಡುವಂತೆ ಮನವಿ ಮಾಡಿದರು. ಕಾಂಗ್ರೆಸ್, ಜೆಡಿಎಸ್‍ನ ಮುಖಂಡರು ಪ್ರತಿನಿತ್ಯ ಪತ್ರಿಕಾಘೋಷ್ಠಿ ಏರ್ಪಡಿಸಿ ರಾಜಕೀಯ ಕೆಸೆರೆಚಾಟ ಮಾಡುವುದನ್ನು ಬಿಟ್ಟು ರೈತರ ಸಮಸ್ಯೆಗಳಿಗೆ ಧ್ವನಿಗೂಡಿಸಿ ಎಂದು ಮನವಿ ಮಾಡಿದರು. ರೈತಮುಖಂಡರಾದ ಶಿವಲಿಂಗಯ್ಯ, ರವಿಕುಮಾರು, ರಾಮಣ್ಣ, ಚಿಕ್ಕಣ್ಣ, ವೆಂಕಟೇಶ್, ಶಿವರುದ್ರಯ್ಯ, ಕಾಂತರಾಜು, ನಾಗರಾಜು, ಆಂಜನಪ್ಪ, ನಾರಾಯಣಪ್ಪ, ಕರಿಯಪ್ಪ, ಮುನಿರಾಜು, ಶಂಕರಯ್ಯ, ಹನುಮಂತಯ್ಯ, ಗಂಗಾಧರಯ್ಯ ಇತರರು ಇದ್ದರು.
    1
    ​ ಮಾಗಡಿ :   ಮಾಗಡಿ ಕೆರೆಗಳನ್ನು ತುಂಬಿಸಿ ನಂತರ ಡಾಬಸ್‍ಪೇಟೆ ಕೈಗಾರಿಕೆ ಪ್ರದೇಶಕ್ಕೆ ನೀರು ನೀಡಲಿ ಇಲ್ಲದಿದ್ರೆ ಏ. 17  ರಂದು ಬೃಹತ್ ತಡೆ ನಡೆಸುವುದಾಗಿ ತಾಲೂಕು ರೈತಸಂಘದ ಅಧ್ಯಕ್ಷ ಹೋಸಪಾಳ್ಯ ಲೋಕೇಶ್ ಎಚ್ಚರಿಕೆ ನೀಡಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಗಡಿ ತಾಲೂಕಿನ ಕೆರೆಗಳಿಗೆ ಹೇಮಾವತಿ ನೀರು ತುಂಬಿಸಲು  ಸರಕಾರ ಇಂತಿಷ್ಟು ನೀರು ಅಲೋಕೇಟ್ ಮಾಡಿದೆ ಈ ನೀರನ್ನು  ಮಾಗಡಿಗೆ ನೀಡಲು ತುಮಕೂರಿನ ಚುನಾಯಿತ ಪ್ರತಿನಿಧಿಗಳು ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಈ ನಡುವೆ ಸತ್ತೆಗಾಲದಿಂದ ಕಣ್ವ  ಮಾಗಡಿ ಪಟ್ಟಣದ ಮೂಲಕ ದಾಬಸ್ ಪೇಟೆ ಕೈಗಾರಿಕೆ ಪ್ರದೇಶಕ್ಕೆ ಬೃಹತ್ ಗಾತ್ರದ ಪೈಪು ಮೂಲಕ ನೀಡಲು ಸರಕಾರ ಮುಂದಾಗಿದ್ದು  ನೂರಾರು ಮರಗಳಿಗೆ ಹಾಗೂ ರಸ್ತೆಗಳನ್ನು  ಹಾನಿ ಮಾಡಿ ಕಾಮಗಾರಿಯೂ ನಡೆಯುತ್ತಿದೆ ಮೊದಲು ಮಾಗಡಿ ತಾಲೂಕಿನ ಕೆರೆಗಳಿಗೆ ನೀರು ಕೊಟ್ಟು ನಂತರ ಡಾಬಸ್ ಪೇಟೆ ಕೈಗಾರಿಕೆ ಪ್ರದೇಶಕ್ಕೆ ನೀಡಲಿ ಎಂದು ಒತ್ತಾಯಿಸಿದರು.
ಉಪಮುಖ್ಯಮಂತ್ರಿ ಡಿಕೆ.ಶಿವಕುಮಾರು, ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್,  ಶಾಸಕ ಎಚ್.ಸಿ.ಬಾಲಕೃಷ್ಣ ಅವರು ಜಿಲ್ಲೆಯವರೆ ಆಗಿರುವುದರಿಂದ ಕಾವೇರಿ ನದಿ ನೀರನ್ನು ಈ ಭಾಗದ ಕೆರೆ,ಕಟ್ಟೆಗಳಿಗೆ ತುಂಬಿಸಬೇಕು.  ಡಾಬಸ್ ಪೇಟೆ ಕೈಗಾರಿಕೆ ಪ್ರದೇಶಕ್ಕೆ ಎಷ್ಟು ನೀರನ್ನು ತೆಗೆದುಕೊಂಡು ಹೋಗಲಾಗುತ್ತಿದೆ ಯಾವ ಮಾನದಂಡದಲ್ಲಿ ನೀರನ್ನು ಕೊಡೋಯ್ಯಲಾಗುತ್ತಿದೆ  ಎಂಬುದರ  ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳು ರೈತಸಂಘದೊಂದಿಗೆ ಸಭೆ ನಡೆಸಿ ಸಂಬಂಧ ಪಟ್ಟ ಮಾಹಿತಿ ತಿಳಿಸಬೇಕು ಇಲ್ಲದಿದ್ರೆ ಏ. 17 ರಂದು ಪಟ್ಟಣದ ಹೋಸಪೇಟೆ ವೃತ್ತದಲ್ಲಿ  ರಸ್ತೆ ತಡೆನಡೆಸಿ ನಂತರ ಎಲ್ಲಾ  ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಜೆಸಿಬಿ ಮೂಲಕ  ಪೈಪುಗಳನ್ನು ಕಿತ್ತುಹಾಕುವ ಕೆಲಸಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸತ್ತೆಗಾಲದಿಂದ ಡಾಬಸ್ ಪೇಟೆ ಕೈಗಾರಿಕೆ ಪ್ರದೇಶ ಸುಮಾರು 100 ಕಿಲೋಮೀಟರ್ ಗೂ ಹೆಚ್ಚಿದ್ದು ಅಲ್ಲಿಂದ ಇಲ್ಲಿಗೆ ನೀರು ಕೊಡುವ ಅಗತ್ಯವಾದರೂ ಏನಿದೆ ತುಮಕೂರು ಜಿಲ್ಲೆ ವ್ಯಾಪ್ತಿಯಲ್ಲಿ ಹರಿಯುವ ಹೇಮಾವತಿ ನೀರನ್ನು ಕೈಗಾರಿಕೆ ಪ್ರದೇಶಕ್ಕೆ ನೀಡಬಹುದಿತ್ತು ಅದನ್ನು ಬಿಟ್ಟು ಕಾವೇರಿ ನೀರನ್ನು ಕೋಡುತ್ತಿರುವುದಾದರು ಏನು ಈ ಬಗ್ಗೆ ಸಾಕಷ್ಟು ಅನುಮಾನ ಮೂಢಿದೆ. ಮಾಗಡಿ ತಾಲೂಕಿನ ಜನರಿಗೆ ಕುಡಿಯುವ ನೀರಿಲ್ಲದೆ ಆಹಾಕಾರ ಉಂಟಾಗಿದೆ. ಅದರಲ್ಲೂ ಮಂಚನಬೆಲೆ ಜಲಾಶಯದಿಂದ ಮಾಗಡಿ ಪಟ್ಟಣಕ್ಕೆ  ಸರಬರಾಜು ಮಾಡುವ ನೀರು ಸಮರ್ಪಕವಾಗಿ ನೀಡುತ್ತಿಲ್ಲ ಈಗಿರುವಾಗ ಮಾಗಡಿ ತಾಲೂಕಿನ ಜನರಿಗೆ  ಕಾವೇರಿಯ ನೀರು ಅತ್ಯವಶ್ಯಕವಾಗಿದೆ ಎಂದರು.
ತಾಲೂಕಿನಲ್ಲಿ ಸಮರ್ಪಕ  ವಿದ್ಯುತ್ ನೀಡದೆ ಇರುವುದರಿಂದ   ರೈತರ ಮೋಟಾರ್ ಸುಟ್ಟುಹೋಗುತ್ತಿದೆ, ಗ್ರಾಮಗಳಲ್ಲಿ ಜೆಜೆಎಂ ಕಾಮಗಾರಿ ಸಂಪೂರ್ಣ ಕಳಫೆಯಿಂದ ಕೂಡಿದೆ, ತಾಲೂಕಿನಲ್ಲಿನ ಎಲ್ಲಾ ಶುದ್ದಕುಡಿಯುವ ನೀರಿನ ಘಟಕಗಳು ಸುಟ್ಟುಹೋಗಿವೆ,  ತಾಲೂಕು ಕಚೇರಿಗಳಲ್ಲಿ ರೈತರ ಕೆಲಸವಾಗುತ್ತಿಲ್ಲ, ಬಹುತೇಕ ಗ್ರಾಮಗಳಲ್ಲಿ ಬಸ್ ಸೌಲಭ್ಯಗಳಿಲ್ಲ ರೈತರ ಸಮಸ್ಯೆಗಳು ದಿನೆ,ದಿನೇ ಹೆಚ್ಚಾಗುತ್ತಿದೆ ಈ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ತಹಶೀಲ್ದಾರ್ ಶರತ್ ಕುಮಾರು ವಿಫಲರಾಗಿದ್ದಾರೆ ಈ ಸಂಬಂಧ ತಾಲೂಕು ಕಚೇರಿಗೆ ಮುತ್ತಿಗೆ ಹಾಕುವ ಕೆಲಸ ಮಾಡಲಾಗುವುದು ಎಂದರು.
ತಾಲೂಕಿನ ತಿಪ್ಪಗೊಂಡನಹಳ್ಳಿ ಜಲಾಶಯದಲ್ಲಿನ ಹೂಳೆತ್ತಿದ್ದರೆ ಮಾಗಡಿ- ಕುಣಿಗಲ್  ಭಾಗದಲ್ಲಿ ಅಂತರ್ ಜಲವೃದ್ದಿಯಾಗುತ್ತದೆ ಇದರಿಂದ ರೈತರಿಗೆ ಅನುಕೂಲವಾಗುತ್ತದೆ ಎಂದು ಮಾಗಡಿ- ತಿಪ್ಪಗೊಂಡನಹಳ್ಳಿ ವರೆಗೆ ಪಾದಯಾತ್ರೆ ನಡೆಸಿ 3 ಭಾರಿ ರಸ್ತೆ ತಡೆನಡೆಸಿದ ಕಾರಣ  ತಿಪ್ಪಗೊಂಡನಹಳ್ಳಿ ಜಲಾಶಯದ ಹೂಳೆತ್ತಲು ಸರಕಾರ 100 ಕೋಟಿಗೂ ಹೆಚ್ಚು ಅನುದಾನ ಬಿಡುಗಡೆ ಮಾಡಿತು ಆದರೂ ಕಾಮಗಾರಿ ಪೂರ್ಣಗೊಂಡಿಲ್ಲ ಪೂರ್ಣಗೊಳಿಸುವಂತೆ ಹಾಗೂ ಬೆಂಗಳೂರು ಸುತ್ತಮುತ್ತಲಿನಿಂದ ಜಲಾಶಯಕ್ಕೆ ಸೇರುವ ಕಲುಷಿತ ನೀರು ತಡೆಗಟ್ಟುವಂತೆ  ಆಗ್ರಹಿಸಿ ಏ. 28 ರಂದು   ಮಾಗಡಿಯಿಂದ ತಿಪ್ಪಗೊಂಡನಹಳ್ಳಿ ಜಲಾಶಯದ ವರೆಗೂ ಬೃಹತ್ ಬೈಕ್ ರ್ಯಾಲಿ ಮೂಲಕ  ಉಗ್ರಹೋರಾಟವನ್ನು ತಾಲೂಕು ರೈತಸಂಘ ಹಮ್ಮಿಕೊಳ್ಳಲಿದೆ ಈ ಹೋರಾಟಕ್ಕೆ ಪೊಲೀಸ್ ಇಲಾಖೆ ಸಹಕಾರ ನೀಡುವಂತೆ ಮನವಿ ಮಾಡಿದರು.
ಕಾಂಗ್ರೆಸ್, ಜೆಡಿಎಸ್‍ನ ಮುಖಂಡರು ಪ್ರತಿನಿತ್ಯ ಪತ್ರಿಕಾಘೋಷ್ಠಿ ಏರ್ಪಡಿಸಿ ರಾಜಕೀಯ ಕೆಸೆರೆಚಾಟ ಮಾಡುವುದನ್ನು ಬಿಟ್ಟು ರೈತರ ಸಮಸ್ಯೆಗಳಿಗೆ ಧ್ವನಿಗೂಡಿಸಿ ಎಂದು ಮನವಿ ಮಾಡಿದರು.
ರೈತಮುಖಂಡರಾದ ಶಿವಲಿಂಗಯ್ಯ, ರವಿಕುಮಾರು, ರಾಮಣ್ಣ, ಚಿಕ್ಕಣ್ಣ, ವೆಂಕಟೇಶ್, ಶಿವರುದ್ರಯ್ಯ, ಕಾಂತರಾಜು, ನಾಗರಾಜು, ಆಂಜನಪ್ಪ, ನಾರಾಯಣಪ್ಪ, ಕರಿಯಪ್ಪ, ಮುನಿರಾಜು, ಶಂಕರಯ್ಯ, ಹನುಮಂತಯ್ಯ,  ಗಂಗಾಧರಯ್ಯ ಇತರರು ಇದ್ದರು.
    user_Siddalinga siddalinga
    Siddalinga siddalinga
    ಮಾಗಡಿ, ರಾಮನಗರ, ಕರ್ನಾಟಕ•
    20 hrs ago
  • ಮೈಸೂರು ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಕಬಿನಿ ಹಿನ್ನೀರು ಪ್ರದೇಶದ ದಮ್ಮನಕಟ್ಟೆ ಅರಣ್ಯ ವಲಯದಲ್ಲಿ ಹುಲಿಯೊಂದು ಕ್ಯಾಮೆರಾ ಕಣ್ಣಿಗೆ ಸೆರೆಯಾಗಿದ್ದು, ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪ್ರವಾಸಿಗರತ್ತ ಗಾಂಭೀರ್ಯದಿಂದ ನೋಡುತ್ತಾ ನಿಧಾನವಾಗಿ ಸಾಗಿದ ಹುಲಿಯ ದೃಶ್ಯ ಸಫಾರಿ ಪ್ರಿಯರಿಗೆ ರೋಮಾಂಚನಕಾರಿ ಅನುಭವ ನೀಡಿದೆ. ಕಬಿನಿಯ ನೈಸರ್ಗಿಕ ಸೌಂದರ್ಯದ ನಡುವೆ ಕಾಣಿಸಿಕೊಂಡ ಈ ಅಪರೂಪದ ಕ್ಷಣ ಪ್ರಕೃತಿ ಪ್ರೇಮಿಗಳಲ್ಲಿ ಭಾರೀ ಕುತೂಹಲ ಮೂಡಿಸಿದೆ. ಕಾಡಿನ ರಾಜನ ಗಾಂಭೀರ್ಯ ಎಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದ್ದು, ಕಬಿನಿ ಸಫಾರಿಯ ವಿಶೇಷತೆಯನ್ನು ಮತ್ತೊಮ್ಮೆ ನೆನಪಿಸಿದೆ.
    1
    ಮೈಸೂರು ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಕಬಿನಿ ಹಿನ್ನೀರು ಪ್ರದೇಶದ ದಮ್ಮನಕಟ್ಟೆ ಅರಣ್ಯ ವಲಯದಲ್ಲಿ ಹುಲಿಯೊಂದು ಕ್ಯಾಮೆರಾ ಕಣ್ಣಿಗೆ ಸೆರೆಯಾಗಿದ್ದು, ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪ್ರವಾಸಿಗರತ್ತ ಗಾಂಭೀರ್ಯದಿಂದ ನೋಡುತ್ತಾ ನಿಧಾನವಾಗಿ ಸಾಗಿದ ಹುಲಿಯ ದೃಶ್ಯ ಸಫಾರಿ ಪ್ರಿಯರಿಗೆ ರೋಮಾಂಚನಕಾರಿ ಅನುಭವ ನೀಡಿದೆ. ಕಬಿನಿಯ ನೈಸರ್ಗಿಕ ಸೌಂದರ್ಯದ ನಡುವೆ ಕಾಣಿಸಿಕೊಂಡ ಈ ಅಪರೂಪದ ಕ್ಷಣ ಪ್ರಕೃತಿ ಪ್ರೇಮಿಗಳಲ್ಲಿ ಭಾರೀ ಕುತೂಹಲ ಮೂಡಿಸಿದೆ. ಕಾಡಿನ ರಾಜನ ಗಾಂಭೀರ್ಯ ಎಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದ್ದು, ಕಬಿನಿ ಸಫಾರಿಯ ವಿಶೇಷತೆಯನ್ನು ಮತ್ತೊಮ್ಮೆ ನೆನಪಿಸಿದೆ.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    16 min ago
  • Now Available at Dargah E Musa Ali Chisty in Bannur For Booking & Details Contact Aijaz pasha 8970712631-6363583017
    1
    Now Available at Dargah E Musa Ali Chisty in Bannur For Booking & Details Contact  Aijaz pasha 8970712631-6363583017
    user_Mudassir Ahmed
    Mudassir Ahmed
    Local News Reporter ಮೈಸೂರು, ಮೈಸೂರು, ಕರ್ನಾಟಕ•
    4 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.