Shuru
Apke Nagar Ki App…
ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ* *ಸಿಎಂ ಆಪ್ತರನ್ನೆ ಟಾರ್ಗೆಟ್ ಮಾಡ್ತಿದ್ದಾರ?ಕೆ ಎನ್ ರಾಜಣ್ಣ ಆಯ್ತು ಈಗ ಜಬ್ಬಾರ್,ನಸೀರ್,ಜಮೀರ್ ಮೇಲೂ ಕ್ರಮ ಆಗ್ಬೇಕೆನ್ನುವ ಒತ್ತಾಯವಿರುವ ವಿಚಾರವಾಗಿ ಪ್ರಶ್ನೆ* ಕಾಂಗ್ರೆಸ್ನಿಂದ ಬೇರೆ ಬೇರೆ ಸಮುದಾಯಕ್ಕೆ ಅನ್ಯಾಯ ಆಯ್ತು ಎಂದು ಚರ್ಚೆ ಆಯ್ತು ಈ ಹಿಂದೆ ವಾಲ್ಮೀಕಿ ಸಮುದಾಯಕ್ಕೆ ಅನ್ಯಾಯವಾಯ್ತು ಈಗ ಮುಸ್ಲಿಂ ಸಮುದಾಯಕ್ಕೆ ಅನ್ಯಾಯವೆಂದು ಚರ್ಚೆ ಆಗಿದೆ ಈ ರೀತಿಯಾಗಿ ತಪ್ಪು ಸಂದೇಶ ಹೋಗ್ಬಾರ್ದು ನಾನು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಮಾತಾಡ್ತೇನೆ ಈ ವಿಚಾರವಾಗಿ ಚರ್ಚೆ ಮಾಡ್ತೇವೆ ಎಂದ ಸಚಿವ ಸತೀಶ್ ಜಾರಕಿಹೊಳಿ....
Vinod
ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ* *ಸಿಎಂ ಆಪ್ತರನ್ನೆ ಟಾರ್ಗೆಟ್ ಮಾಡ್ತಿದ್ದಾರ?ಕೆ ಎನ್ ರಾಜಣ್ಣ ಆಯ್ತು ಈಗ ಜಬ್ಬಾರ್,ನಸೀರ್,ಜಮೀರ್ ಮೇಲೂ ಕ್ರಮ ಆಗ್ಬೇಕೆನ್ನುವ ಒತ್ತಾಯವಿರುವ ವಿಚಾರವಾಗಿ ಪ್ರಶ್ನೆ* ಕಾಂಗ್ರೆಸ್ನಿಂದ ಬೇರೆ ಬೇರೆ ಸಮುದಾಯಕ್ಕೆ ಅನ್ಯಾಯ ಆಯ್ತು ಎಂದು ಚರ್ಚೆ ಆಯ್ತು ಈ ಹಿಂದೆ ವಾಲ್ಮೀಕಿ ಸಮುದಾಯಕ್ಕೆ ಅನ್ಯಾಯವಾಯ್ತು ಈಗ ಮುಸ್ಲಿಂ ಸಮುದಾಯಕ್ಕೆ ಅನ್ಯಾಯವೆಂದು ಚರ್ಚೆ ಆಗಿದೆ ಈ ರೀತಿಯಾಗಿ ತಪ್ಪು ಸಂದೇಶ ಹೋಗ್ಬಾರ್ದು ನಾನು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಮಾತಾಡ್ತೇನೆ ಈ ವಿಚಾರವಾಗಿ ಚರ್ಚೆ ಮಾಡ್ತೇವೆ ಎಂದ ಸಚಿವ ಸತೀಶ್ ಜಾರಕಿಹೊಳಿ....
More news from ಕರ್ನಾಟಕ and nearby areas
- ಬಿಆರ್ಟಿ ವನ್ಯಧಾಮ ವ್ಯಾಪ್ತಿಯ ಲೊಕ್ಕನಹಳ್ಳಿ ಅರಣ್ಯ ಪ್ರದೇಶದಲ್ಲಿ ಮತ್ತೆ ಬೆಂಕಿ ಕಾಣಿಸಿಕೊಂಡ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಇತ್ತೀಚೆಗಷ್ಟೇ ಬಿಆರ್ಟಿ ವ್ಯಾಪ್ತಿಯ ಹಲವು ಅರಣ್ಯ ಪ್ರದೇಶಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಈ ಘಟನೆ ಆತಂಕಕ್ಕೆ ಕಾರಣವಾಗಿದೆ. ಗುರುವಾರ ಮಧ್ಯಾಹ್ನ ಲೊಕ್ಕನಹಳ್ಳಿ ಸಮೀಪದ ಅರಣ್ಯ ಪ್ರದೇಶದಲ್ಲಿ ಬೆಂಕಿ ಹಬ್ಬಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಿಯಂತ್ರಣಕ್ಕೆ ಕ್ರಮ ಕೈಗೊಂಡಿದ್ದಾರೆ. ಬೆಂಕಿ ಉಂಟಾಗಲು ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಪ್ರದೇಶದಲ್ಲಿ ನಿರಂತರವಾಗಿ ಬೆಂಕಿ ಘಟನೆಗಳು ಸಂಭವಿಸುತ್ತಿರುವುದರಿಂದ ಅರಣ್ಯ ಸಂಪತ್ತಿಗೆ ಹಾನಿಯಾಗುತ್ತಿರುವ ಬಗ್ಗೆ ಪರಿಸರ ಪ್ರೇಮಿಗಳು ಆತಂಕ ವ್ಯಕ್ತಪಡಿಸಿದ್ದಾರೆ.1
- ಮಲೆ ಮಹದೇಶ್ವರ ಬೆಟ್ಟ ‘ಹಸಿರು ನಾಳೆ-ಎಂ.ಎಂ. ಹಿಲ್ಸ್' (Green Tomorrow – MM Hills) ಅಭಿಯಾನದ ಅಂಗವಾಗಿ ಜಿಲ್ಲಾಧಿಕಾರಿ ಶ್ರೀರೂಪ ಅವರು ಬುಧವಾರ (ಏ.15) ಮಲೆ ಮಹದೇಶ್ವರ ಬೆಟ್ಟದಲ್ಲಿ ಘನ ತ್ಯಾಜ್ಯ ನಿರ್ವಹಣೆಯ ನೂತನ ಯಂತ್ರೋಪಕರಣಗಳನ್ನು ಅಧಿಕೃತವಾಗಿ ಉದ್ಘಾಟಿಸಿದರು. ಪವಿತ್ರ ಯಾತ್ರಾ ಸ್ಥಳದಲ್ಲಿ ಹೆಚ್ಚುತ್ತಿರುವ ಪರಿಸರ ಸವಾಲುಗಳನ್ನು ಎದುರಿಸಲು ಮತ್ತು ವೈಜ್ಞಾನಿಕ ಮಾದರಿಯಲ್ಲಿ ತ್ಯಾಜ್ಯ ಸಂಸ್ಕರಣೆ ಮಾಡಲು ಅಭಿಯಾನ ಹಮ್ಮಿಕೊಳ್ಳಲಾಗಿದೆ. ನೂತನವಾಗಿ ಅಳವಡಿಸಲಾದ ಯಂತ್ರಗಳು ಕಸವನ್ನು ಸಮರ್ಪಕವಾಗಿ ವಿಂಗಡಿಸಲು ಮತ್ತು ವಿಲೇವಾರಿ ಮಾಡಲು ಸಹಕಾರಿಯಾಗಲಿದ್ದು, ಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತ ಹಾಗೂ ಪರಿಸರ ಸ್ನೇಹಿ ತಾಣವನ್ನಾಗಿ ಮಾಡುವ ಗುರಿಯನ್ನು ಹೊಂದಿವೆ. ಯೋಜನೆಯ ಯಶಸ್ಸಿನ ಹಿಂದಿರುವ ಪೌರಕಾರ್ಮಿಕರು ಹಾಗೂ ಸ್ತ್ರೀ ಶಕ್ತಿ ಸಂಘದ ಸದಸ್ಯರು ಈ ಸಮಾರಂಭಕ್ಕೆ ಸಾಕ್ಷಿಯಾದರು. ಈ ಸಾಮೂಹಿಕ ಪ್ರಯತ್ನವು ಬೆಟ್ಟದ ನೈಸರ್ಗಿಕ ಸೌಂದರ್ಯವನ್ನು ಕಾಪಾಡುವಲ್ಲಿ ಒಂದು ಪ್ರಮುಖ ಹೆಜ್ಜೆಯಾಗಿದೆ. ಈ ಸಂದರ್ಭದಲ್ಲಿ ಮಲೆ ಮಹದೇಶ್ವರ ಬೆಟ್ಟ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿಗಳಾದ ಎ.ಇ. ರಘು, ಉಪಕಾರ್ಯದರ್ಶಿ ಚಂದ್ರಶೇಖರ್, ಮೈಕಾಪ್ಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಅಶ್ರಫುಲ್ ಹಸನ್, ಗ್ರಾಮ ಪಂಚಾಯಿತಿ ಪಿಡಿಒ ಕಿರಣ್, ಜಾಗೃತ್ ಟೆಕ್ ಪ್ರೈವೇಟ್ ಲಿಮಿಟೆಡ್ ನ ನಿರ್ದೇಶಕರು, ಮಂಗಳೂರಿನ ಮಿನಿ ಟೆಕ್ ಸಂಸ್ಥೆಯ ಪ್ರತಿನಿಧಿಗಳು, ಇತರರು ಉಪಸ್ಥಿತರಿದ್ದರು.4
- ನಂಜನಗೂಡು: ನಾಳೆಯಿಂದ ನಡೆಯುವ ಜನಗಣತಿಯಲ್ಲಿ ಎಲ್ಲರೂ ಭಾಗವಹಿಸಿ ಎಂದು ನಂಜನಗೂಡಿನ ತಹಶೀಲ್ದಾರ್ ಡಾ.ಸ್ಮಿತಾ ರಾಮು ಮನವಿ ಮಾಡಿದ್ದಾರೆ. ನಂಜನಗೂಡಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಏ.16 ರಿಂದ ಮೇ.16 ರವರಿಗೆ ಜನಗಣತಿ ನಡೆಯಲಿದೆ. ಪ್ರತಿಯೊಬ್ಬರು ಕೂಡ ಜನಗಣತಿಯಲ್ಲಿ ಭಾಗವಹಿಸುವ ಮೂಲಕ ತಮ್ಮ ಅಂಕಿ ಅಂಶಗಳನ್ನು ನೈಜ್ಯವಾಗಿ ಕೊಡಬೇಕು. ನಾಳೆಯಿಂದಲೇ ನಿಮ್ಮ ಮನೆ ಬಾಗಿಲಿಗೆ ಜನಗಣತಿದಾರರು ಬರಲಿದ್ದಾರೆ. ಬಿಸಿಲಿನ ತಾಪಮಾನವು ಹೆಚ್ಚಾಗಿರುವುದರಿಂದ ನಿಮ್ಮ ಮನೆ ಬಾಗಿಲಿಗೆ ಬರುವ ಅಧಿಕಾರಿಗಳಿಗೆ ಸರಿಯಾದ ಮಾಹಿತಿಯನ್ನು ನೀಡುವುದರಿಂದ ನಮ್ಮ ಮುಂದಿನ ಜನಸಂಖ್ಯೆಗೆ ಅನುಗುಣವಾಗಿ ಸೌಲಭ್ಯಗಳನ್ನು ಕಲ್ಪಿಸಲು ಅನುಕೂಲವಾಗಲಿದೆ. ಕೋವಿಡ್ ಇದ್ದ ಕಾರಣದಿಂದ ಜನಗಣತಿಯನ್ನು ಮಾಡಿರಲಿಲ್ಲ. ಈಗ ಕೇಂದ್ರ ಸರ್ಕಾರ ಜನಗಣತಿ ಮಾಡುತ್ತಿರುವುದರಿಂದ ಎಲ್ಲರೂ ಸಮೀಕ್ಷೆಯಲ್ಲಿ ಭಾಗವಹಿಸಿ ನೈಜವಾದ ಅಂಕಿ ಅಂಶಗಳನ್ನು ನೀಡುವಂತೆ ನಂಜನಗೂಡಿನಲ್ಲಿ ತಹಶೀಲ್ದಾರ್ ಡಾ.ಸ್ಮಿತಾ ರಾಮು ತಿಳಿಸಿದ್ದಾರೆ.1
- ಕೆರೆಯಲ್ಲಿ ಮೀನು ಹಿಡಿಯಲು ಹೋದ ಯುವಕ ನೀರುಪಾಲು.*1
- ಅರಕಲಗೂಡಿನಲ್ಲಿ ನಡೆದ ಈ ಘಟನೆ ನಿಜಕ್ಕೂ ಆತಂಕಕಾರಿ. ಅದೃಷ್ಟವಶಾತ್ ಟ್ರ್ಯಾಕ್ಟರ್ ನಿಧಾನವಾಗಿ ಚಲಿಸುತ್ತಿದ್ದರಿಂದ ಮತ್ತು ಸಮಯಪ್ರಜ್ಞೆ ಮೆರೆದ ಸಾರ್ವಜನಿಕರಿಂದ ದೊಡ್ಡ ಅನಾಹುತ ತಪ್ಪಿದೆ. ಅರಕಲಗೂಡು : ಪಟ್ಟಣದಿಂದ ರಾಮನಾಥಪುರ ಕಡೆಗೆ ಟ್ರ್ಯಾಕ್ಟರ್ ಚಾಲನೆ ಮಾಡುತ್ತಿದ್ದ ವ್ಯಕ್ತಿಯೋರ್ವ ಹಠಾತ್ತನೆ ಮೂರ್ಚೆಹೋದ ಪ್ರಕರಣ ನಡೆದಿದೆ. ಬುಧವಾರ ಮಧ್ಯಾಹ್ನ 12-15ರ ವೇಳೆ ಪಟ್ಟಣದ ಖಾಸಗಿ ಅಂಗಡಿಯೊಂದರಲ್ಲಿ ಪಶು ಆಹಾರದ ಚೀಲಗಳನ್ನು ಟ್ರ್ಯಾಕ್ಟರ್ ನಲ್ಲಿ ತುಂಬಿಸಿಕೊಂಡು ಶಿರಂಗಾಲ ಗ್ರಾಮಕ್ಕೆ ತೆರಳುವ ಮಾರ್ಗ ಮಧ್ಯದಲ್ಲಿಯೇ ಚಾಲನೆ ಮಾಡುವ ವೇಳೆಯೇ ಮೂರ್ಚೆ ಹೋಗಿದ್ದಾನೆ.ಈ ವೇಳೆ ವಾಹನದ ಚಾಲನೆ ಮುಂದೆ ಸಾಗುತ್ತಿತ್ತು.ಪಟ್ಟಣದ ಚನ್ನಬಸವೇಶ್ವರ ಸಮುದಾಯದ ಸರ್ಕಲ್ನಲ್ಲಿ ಗಾಡಿಯನ್ನು ರಾಮನಾಥಪುರ ಮಾರ್ಗಕ್ಕೆ ತಿರುಗಿಸಿದ್ದಾನೆ.ಈ ಭಾಗ ಸ್ವಲ್ಪಮಟ್ಟಿದೆ ದಿಬ್ಬದಿಂದ ಕೂಡಿರುವ ಪರಿಣಾಮ ನಿಧಾನವಾಗಿ ಟ್ರ್ಯಾಕ್ಟರ್ ಚಲಿಸುತ್ತಿದೆ.ಆದರೆ ಚಾಲಕ ಮಾತ್ರ ಸೀಟ್ಗೆ ಒರೆಗಿಕೊಂಡು ಪ್ರಜ್ಞಾ ಹೀನ ಸ್ಥಿತಿಯಲ್ಲಿ ತಲೆ ಹೊರಭಾಗಕ್ಕೆ ಭಾಗಿರುವುದು ಕಂಡುಬಂದೆ.ಕೂಡಲೇ ರಸ್ತೆಯಲ್ಲಿ ಸಂಚರಿಸುತ್ತಿದ್ದ ವಾಹನ ಸವಾರರು ನಿಧಾನಗತಿಯಲ್ಲಿ ಚಲಿಸುತ್ತಿದ್ದ ಟ್ರ್ಯಾಕ್ಟರ್ನ್ನು ತಡೆದು ಮುಂದೆ ಸಂಭವಿಸಬಹುದಾಗಿದ್ದ ಅಪಘಾತ,ಪ್ರಾಣ ಹಾನಿಯನ್ನು ತಪ್ಪಿಸಿದ್ದಾರೆ. ಒಬ್ಬ ವ್ಯಕ್ತಿ ಚಾಲನೆ ಮಾಡುವಾಗ ಈ ರೀತಿ ಮೂರ್ಛೆ ಹೋಗಲು ಅಥವಾ ಪ್ರಜ್ಞೆ ತಪ್ಪಲು ಹಲವು ಕಾರಣಗಳಿರಬಹುದು: ತೀವ್ರ ಬಿಸಿಲು ಮತ್ತು ನಿರ್ಜಲೀಕರಣ: ಬೇಸಿಗೆಯ ತಾಪಮಾನ ಹೆಚ್ಚಾಗಿರುವುದರಿಂದ ದೇಹದಲ್ಲಿ ನೀರಿನಂಶ ಕಡಿಮೆಯಾಗಿ (Dehydration) ತಲೆಸುತ್ತು ಬರಬಹುದು. ರಕ್ತದೊತ್ತಡದ ಏರುಪೇರು: ಲೋ ಬಿಪಿ ಅಥವಾ ಸಕ್ಕರೆ ಅಂಶ ಕಡಿಮೆಯಾಗುವುದು (Hypoglycemia) ಕೂಡ ಹಠಾತ್ ಪ್ರಜ್ಞೆ ತಪ್ಪಲು ಕಾರಣವಾಗುತ್ತದೆ. ಅಪಸ್ಮಾರ (Epilepsy): ವ್ಯಕ್ತಿಗೆ ಮೊದಲೇ ಫಿಟ್ಸ್ ಅಥವಾ ಅಪಸ್ಮಾರದ ಸಮಸ್ಯೆ ಇದ್ದರೆ ಈ ರೀತಿ ಸಂಭವಿಸುವ ಸಾಧ್ಯತೆ ಇರುತ್ತದೆ. ಅತಿಯಾದ ಆಯಾಸ: ಸರಿಯಾದ ವಿಶ್ರಾಂತಿ ಇಲ್ಲದೆ ದೀರ್ಘಕಾಲ ಕೆಲಸ ಮಾಡುವುದು ಸಹ ಮೆದುಳಿನ ಮೇಲೆ ಪರಿಣಾಮ ಬೀರಬಹುದು. #ArkalgudNews #tractorlife #news5kannada #NewsUpdate1
- Post by ಈಶ್ವರ್ ಬೆಳಕು ನ್ಯೂಸ್ ಕನ್ನಡ User1
- ಶುದ್ಧ ತಿಂಡಿ ಹೋಟೆಲ್ ಬೆಂಕಿಗೆ ಆಹುತಿಯಾಯಿತು ಶಾರ್ಟ್ ಸರ್ಕ್ಯೂಟ್ನಿಂದ ಲಕ್ಷಾಂತರ ನಷ್ಟ1
- Post by Suresh Belagere1
- ಚಿತ್ರದುರ್ಗದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ತಡೆಗೋಡೆ ದ್ವಂಸಗೊಂಡ ಘಟನೆ ನಡೆದಿದೆ. ಹೊಳಲ್ಕೆರೆ ರಸ್ತೆಯ ಸ್ವಾತಂತ್ರ್ಯ ಸೇನಾನಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದ ತಡೆಗೋಡೆಗೆ ಡಿಕ್ಕಿ ಹೊಡೆದು ಘಟನೆ ನಡೆದಿದ್ದು ವೃತ್ತದ ಸುತ್ತಲೂ ಸ್ಟೀಲ್ ರೀಲ್ ಮಾಡಲಾಗಿತ್ತು ಅಪರಿಚತ ವಾಹನ ಡಿಕ್ಕಿ ಹೊಡದ ಪರಿಣಾಮ ಸ್ಟೀಲ್ ರೀಲ್ ಧ್ವಂಸಗೊಂಡಿದೆ.1