Shuru
Apke Nagar Ki App…
ಧಾರವಾಡ: ಕರಾಳ ವಿದ್ಯುತ್ ತಿದ್ದುಪಡಿ ಮಸೂದೆ ವಾಪಸ್ ಪಡೆಯುವಂತೆ ಪ್ರತಿಭಟನೆ ಜನವಿರೋಧಿ ಕರಾಳ ವಿದ್ಯುತ್ ತಿದ್ದುಪಡಿ ಮಸೂದೆ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಧಾರವಾಡ ಮಹಾನಗರ ಪಾಲಿಕೆ ಕಚೇರಿ ಎದುರು ಕರ್ನಾಟಕ ರಾಜ್ಯ ವಿದ್ಯುತ್ ಬಳಕೆದಾರರ ಸಂಘ ಹಾಗೂ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನ ವಿರೋಧಿ ನೀತಿ ಅನುಸರಿಸುತ್ತಿದೆ. ವಿದ್ಯುತ್ ದರ ಏರಿಕೆ ಮಾಡುವ ಮೂಲಕ ಜನರ ಜೀವನ ಜೊತೆ ಆಟವಾಡುತ್ತಿವೆ. ಕೂಡಲೇ ಸಂಸತ್ತಿನ ಅಧಿವೇಶನದಲ್ಲಿ ಮಂಡಿಸಲಾದ ಕರಾಳ ವಿದ್ಯುತ್ ತಿದ್ದುಪಡಿ ಮಸೂದೆ ವಾಪಸ್ ಪಡೆಯಬೇಕು ಹಾಗೂ ವಿದ್ಯುತ್ ಗ್ರಾಹಕರು, ರೈತರು ಮತ್ತು ಸಣ್ಣ ಪ್ರಮಾಣದ ಕೈಗಾರಿಕೆಗಳ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
Manjunath kavali
ಧಾರವಾಡ: ಕರಾಳ ವಿದ್ಯುತ್ ತಿದ್ದುಪಡಿ ಮಸೂದೆ ವಾಪಸ್ ಪಡೆಯುವಂತೆ ಪ್ರತಿಭಟನೆ ಜನವಿರೋಧಿ ಕರಾಳ ವಿದ್ಯುತ್ ತಿದ್ದುಪಡಿ ಮಸೂದೆ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಧಾರವಾಡ ಮಹಾನಗರ ಪಾಲಿಕೆ ಕಚೇರಿ ಎದುರು ಕರ್ನಾಟಕ ರಾಜ್ಯ ವಿದ್ಯುತ್ ಬಳಕೆದಾರರ ಸಂಘ ಹಾಗೂ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನ ವಿರೋಧಿ ನೀತಿ ಅನುಸರಿಸುತ್ತಿದೆ. ವಿದ್ಯುತ್ ದರ ಏರಿಕೆ ಮಾಡುವ ಮೂಲಕ ಜನರ ಜೀವನ ಜೊತೆ ಆಟವಾಡುತ್ತಿವೆ. ಕೂಡಲೇ ಸಂಸತ್ತಿನ ಅಧಿವೇಶನದಲ್ಲಿ ಮಂಡಿಸಲಾದ ಕರಾಳ ವಿದ್ಯುತ್ ತಿದ್ದುಪಡಿ ಮಸೂದೆ ವಾಪಸ್ ಪಡೆಯಬೇಕು ಹಾಗೂ ವಿದ್ಯುತ್ ಗ್ರಾಹಕರು, ರೈತರು ಮತ್ತು ಸಣ್ಣ ಪ್ರಮಾಣದ ಕೈಗಾರಿಕೆಗಳ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
More news from ಕರ್ನಾಟಕ and nearby areas
- ತೇರದಾಳ: ಹೋಳಿ ಹಬ್ಬದ ವೇಳೆ ಉಂಟಾದ ಜಗಳವು ಸ್ನೇಹಿತನ ಕೊಲೆಯಲ್ಲಿ ಅಂತ್ಯವಾದ ದುರ್ಘಟನೆ ತೇರದಾಳ ಪಟ್ಟಣದಲ್ಲಿ ನಡೆದಿದೆ. ರಾಹುಲ್ ಬಾಹುಬಲಿ ಹತ್ಯೆಗೀಡಾದ ಯುವಕನಾಗಿದ್ದು, ಹೋಳಿ ಹಬ್ಬದ ದಿನ ರಾಹುಲ್ ಮತ್ತು ಆತನ ಸ್ನೇಹಿತನ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಉಂಟಾಗಿತ್ತು. ಈ ವಿಚಾರವಾಗಿ ಮಾತುಕತೆ ನಡೆಸಲು ಸ್ನೇಹಿತರು ದೇವಸ್ಥಾನವೊಂದರ ಬಳಿ ಸೇರಿದ್ದರು. ಈ ವೇಳೆ ಮಾತಿಗೆ ಮಾತು ಬೆಳೆದು ಆರೋಪಿಯು ರಾಹುಲ್ ಕತ್ತಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ್ ಗೋಯಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.1
- Post by @april14news1
- ಹೌದು ಹೋಳಿ ಹಬ್ಬದ ವೇಳೆ ನಡೆದ ಜಗಳ ಸ್ನೇಹಿತನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬಾಗಲಕೋಟ ಜಿಲ್ಲೆಯ ತೇರದಾಳ ಪಟ್ಟಣದಲ್ಲಿ ನಡೆದಿದೆ. ರಾಹುಲ್ ಬಾಹುಬಲಿ ಕೊಲೆಯಾದ ದುರ್ದೈವಿ, ಹೋಳಿ ಹಬ್ಬದಂದು ರಾಹುಲ ಹಾಗೂ ಆತನ ಸ್ನೇಹಿತನ ಕ್ಷುಲ್ಲಕ ಕಾರಣಕ್ಕೆ ಜಗಳವುಂಟಾಗಿತ್ತು. ಇದೇ ವಿಷಯವಾಗಿ ಮಾತನಾಡಲು ಸ್ನೇಹಿತರೆಲ್ಲ ದೇವಸ್ಥಾನ ಒಂದರ ಬಳಿ ಸೇರಿದ್ದ ವೇಳೆಯಲ್ಲಿ ಮಾತಿಗೆ ಮಾತು ಬೆಳೆದು ರಾಹುಲ್ ನನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ್ ಗೋಯಲ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.1
- ವಿಜಯಪುರ: ಎಲ್ಪಿಜಿ ಗ್ಯಾಸ್ ಕೊರತೆ ಆಟೋ ಚಾಲಕರ ಪರದಾಟ ಕೊಲ್ಲಿ ಪ್ರದೇಶದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಗ್ಯಾಸ್ ಪೂರೈಕೆಯಲ್ಲಿ ಅಡಚಣೆಯುಂಟಾಗಿ, ವಿಜಯಪುರ ನಗರದಲ್ಲಿ ಎಲ್ಪಿಜಿ ಗ್ಯಾಸ್ ಕೊರತೆ ಎದುರಾಗಿದೆ. ಇದರಿಂದಾಗಿ ಆಟೋ ಚಾಲಕರು ಗ್ಯಾಸ್ ಬಂಕ್ಗಳ ಬಳಿ ಕಿಲೋಮೀಟರ್ಗಟ್ಟಲೆ ಸರತಿ ನಿಲ್ಲುವಂತಾಗಿದೆ. 90 ರೂ.ಗೆ ಮಾರಾಟವಾಗುತ್ತಿರುವ ಗ್ಯಾಸ್ನಿಂದಾಗಿ ಆಟೋ ಚಾಲಕರ ದಿನನಿತ್ಯದ ಬದುಕು ಸಂಕಷ್ಟಕ್ಕೆ ಸಿಲುಕಿದೆ.1
- Post by ನಾಗರಾಜ3
- ಕಂಬದಾಳ್ ಹೊಸೂರು ಕ್ಯಾಂಪ್ ಆಟದ ಮೈದಾನ ಆವರಣದಲ್ಲಿ ನಡೆದ ಕಂಬದಾಳ್ ಹೊಸೂರು ಗ್ರಾಮ ಪಂಚಾಯಿತಿ ಮತ್ತು ತಾವರಗಟ್ಟ ಗ್ರಾಮ ಪಂಚಾಯಿತಿಯ ಗೋಡಿಬೀಡು ಮತ್ತು ಮಲ್ಲಿಗೆನಹಳ್ಳಿ ಗ್ರಾಮಗಳ ವ್ಯಾಪ್ತಿಯ ಪಂಚ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಸಮಿತಿ ಸಭೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರನ್ನು ಕಂಡು ಮನತುಂಬಿ ಬಂತು, ಈ ಕಾರ್ಯಕ್ರಮಕ್ಕೆ ಇಡೀ ಗ್ರಾಮವನ್ನೇ ಹಬ್ಬದ ರೀತಿಯಲ್ಲಿ ಸಿಂಗರಿಸಿ ಹಗಲಿರುಳು ಶ್ರಮಿಸಿದ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಕಂಬದಾಳ್ ಹೊಸೂರು ಗ್ರಾಮ ಪಂಚಾಯಿತಿಯ ಮತ್ತು ತಾವರಗಟ್ಟ ಗ್ರಾಮ ಪಂಚಾಯಿತಿಯ ಗೋಡಿಬೀಡು ಮತ್ತು ಮಲ್ಲಿಗೆನಹಳ್ಳಿ ಗ್ರಾಮಗಳ ಮಾಜಿ ಅಧ್ಯಕ್ಷರು, ಮಾಜಿ ಉಪಾಧ್ಯಕ್ಷರು, ಮಾಜಿ ಸದಸ್ಯರುಗಳು, ಸರ್ಕಾರಿ ಅಧಿಕಾರಿಗಳು ಮತ್ತು ಆರಕ್ಷಕ ಅಧಿಕಾರಿಗಳಿಗೂ ವಿಶೇಷ ಧನ್ಯವಾದಗಳು. ಎಲ್ಲಾ ಇಲಾಖೆಯ ಅಧಿಕಾರಿಗಳನ್ನು ಒಂದೇಡೆ ಸೇರಿಸಿ ಜನರ ಕುಂದುಕೊರತೆಗಳನ್ನು ಆಲಿಸಿ ಸ್ಥಳದಲ್ಲೆ ಪರಿಹಾರ ಮಾಡುವಲ್ಲಿ ಯಶಸ್ವಿಗೊಳ್ಳಲಾಯಿತು.ನಿಮ್ಮ ಈ ಪ್ರೀತಿ ಅಭಿಮಾನ ಚಿರಕಾಲ ನಮ್ಮ ಕುಟುಂಬದ ಮೇಲೆ ಇರಲಿ ಎಂದು ಬಯಸುತ್ತೆನೆ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಕೊಟ್ಟ ಪ್ರತಿಯೊಬ್ಬ ಕಾರ್ಯಕರ್ತರಿಗೂ ಮತ್ತು ನಮ್ಮ ಕುಟುಂಬದ ಅಭಿಮಾನಿಗಳಿಗೂ ನನ್ನ ಸಾಷ್ಟಂಗ ನಮಸ್ಕಾರ1
- ಧಾರವಾಡ ಹೊಸಯಲ್ಲಾಪುರದ ಕಸದ ಗುಡ್ಡಕ್ಕೆ ಬಿಳುತ್ತಿರುವ ಬೆಂಕಿಯಿಂದಾಗಿ ಧಾರವಾಡದ ಜನ ವಿಷಯುಕ್ತ ಗಾಳಿ ಸೇವಿಸಬೇಕಾಗಿದೆ. ಇದರಿಂದ ಆಕ್ರೋಶಗೊಂಡ ಧಾರವಾಡ ಹೊಸಯಲ್ಲಾಪುರ, ಗಾಂಧಿನಗರ, ಟೋಲನಾಕಾ ಪ್ರದೇಶದಲ್ಲಿನ ಜನ ಹುಬ್ಬಳ್ಳಿ ಧಾರವಾಡ ರಸ್ತೆ ತಡೆದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಹೊಸಯಲ್ಲಾಪುರದಲ್ಲಿರುವ ಕಸದ ಗುಡ್ಡಕ್ಕೆ ಸೋಮವಾರ ಬೆಳಿಗ್ಗೆ ಬೆಂಕಿ ಬಿದ್ದಿದ್ದು, ಇದರಿಂದ ಹೊರಹೊಮ್ಮಿದ ವಿಷಯುಕ್ತ ದಟ್ಟ ಹೊಗೆ ಟೋಲನಾಕಾ, ಗಾಂಧಿನಗರ ಸೇರಿದಂತೆ ಸುತ್ತಮುತ್ತಲಿನ ಹಲವು ಪ್ರದೇಶಗಳನ್ನು ಆವರಿಸಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ದಟ್ಟ ಹೊಗೆಯಿಂದ ಉಸಿರುಗಟ್ಟಿದ ಸ್ಥಳೀಯ ನಿವಾಸಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸೋಮವಾರ ಬೆಳಿಗ್ಗೆಯಿಂದಲೂ ದಟ್ಟ ಹೊಗೆಯಲ್ಲಿ ಉಸಿರಾಟ ನಡೆಸುವಂತಾದ ಟೋಲನಾಕಾ ನಿವಾಸಿಗಳು, ಈ ಸಮಸ್ಯೆಗೆ ಶಾಶ್ವತ ಪರಿಹಾರ ನೀಡುವಂತೆ ಆಗ್ರಹಿಸಿ ಟೋಲನಾಕಾ ವೃತ್ತದಲ್ಲಿ ರಸ್ತೆ ತಡೆ ನಡೆಸಿದರು. ವಿಷಯುಕ್ತ ಹೊಗೆಯಿಂದ ತೀವ್ರ ತೊಂದರೆಗೊಳಗಾದ ನಿವಾಸಿಗಳು ಪಾಲಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಈ ಪ್ರತಿಭಟನೆಯಿಂದಾಗಿ ಟೋಲನಾಕಾ ರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ವಿಷಯ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರಯತ್ನಿಸಿದರು.1
- ಬಾಗಲಕೋಟೆ: ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ವಿವಿಕೆ ಫೌಂಡೇಶನ್ ವತಿಯಿಂದ ನಗರದಲ್ಲಿ ಆಯೋಜಿಸಿದ್ದ ಸ್ತ್ರೀ ಸಂಭ್ರಮ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ವೀಣಾ ವಿಜಯಾನಂದ ಕಾಶಪ್ಪನವರ್ ಅವರು “ನಾ ಡ್ರೈವರ” ಹಾಡಿಗೆ ಸಕ್ಕತ್ ಹೆಜ್ಜೆ ಹಾಕಿ ಗಮನ ಸೆಳೆದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಹಿಳೆಯರ ಜೊತೆ ಉತ್ಸಾಹದಿಂದ ನೃತ್ಯ ಮಾಡಿದ ಅವರು, ವೇದಿಕೆಯಲ್ಲಿ ಹರ್ಷಭರಿತ ವಾತಾವರಣ ನಿರ್ಮಿಸಿದರು. ಅವರ ನೃತ್ಯವನ್ನು ಕಂಡು ಮಹಿಳೆಯರು ಕೈತಟ್ಟಿ ಪ್ರೋತ್ಸಾಹ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಹಲವಾರು ಮಹಿಳೆಯರು ಭಾಗವಹಿಸಿ ಸಂಭ್ರಮಿಸಿದರು.1
- ಬಾಗಲಕೋಟ ಜಿಲ್ಲೆಯ ಬದಾಮಿ ತಾಲೂಕಿನ ಶಿವಯೋಗಮಂದಿರದ ಗೋವು ಶಾಲೆಗೆ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಬಾಗಲವಾಡ ಗ್ರಾಮದ ಶ್ರೀಅಮರೇಗೌಡ್ರ ಬಿಳಿ ಜೋಳದ ಮೇವು ಪೆಂಡಿಗಳನ್ನು ಶಿವಯೋಗಮಂದಿರಕ್ಕೆ ನೀಡಿದ್ದಾರೆ. ಅಮರೇಗೌಡ್ರ ಅವರನ್ನು ಶಿವಯೋಗಮಂದಿರದ ಮ್ಯಾನೇಜರ್ ಅವರು ಸತ್ಕರಿಸಿ ಗೌರವಿಸಿದರು.1