Shuru
Apke Nagar Ki App…
ಬಿಸಿಲಿಗೆ ಬ್ರೇಕ್! ☀️ ಟ್ರಾಫಿಕ್ ಪೊಲೀಸರಿಗೆ AC ಹೆಲ್ಮೆಟ್ 🚓🔥 ತೀವ್ರ ಬಿಸಿಲಿನ ನಡುವೆಯೂ ಕರ್ತವ್ಯ ನಿರ್ವಹಿಸುತ್ತಿರುವ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯ ಕಷ್ಟವನ್ನು ಮನಗಂಡ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಅವರು ಮಾನವೀಯ ಕ್ರಮ ಕೈಗೊಂಡಿದ್ದಾರೆ 👏 ಗುಲ್ಬರ್ಗ ನಗರದಲ್ಲಿ ಟ್ರಾಫಿಕ್ ಪೊಲೀಸರಿಗೆ ಎಸಿ ಹೆಲ್ಮೆಟ್ಗಳನ್ನು ವಿತರಿಸಲಾಗಿದ್ದು, ಬಿಸಿಲಿನ ತಾಪದಿಂದ ರಕ್ಷಣೆ ಸಿಗುವಂತೆ ಮಾಡಲಾಗಿದೆ ☀️ ಈ ಕ್ರಮದಿಂದ ಸಿಬ್ಬಂದಿಯ ಆರೋಗ್ಯ ಕಾಪಾಡುವುದರ ಜೊತೆಗೆ, ಅವರ ಕಾರ್ಯಕ್ಷಮತೆ ಹೆಚ್ಚಲು ಸಹಕಾರಿಯಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.
ASN News24Kannada
ಬಿಸಿಲಿಗೆ ಬ್ರೇಕ್! ☀️ ಟ್ರಾಫಿಕ್ ಪೊಲೀಸರಿಗೆ AC ಹೆಲ್ಮೆಟ್ 🚓🔥 ತೀವ್ರ ಬಿಸಿಲಿನ ನಡುವೆಯೂ ಕರ್ತವ್ಯ ನಿರ್ವಹಿಸುತ್ತಿರುವ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯ ಕಷ್ಟವನ್ನು ಮನಗಂಡ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಅವರು ಮಾನವೀಯ ಕ್ರಮ ಕೈಗೊಂಡಿದ್ದಾರೆ 👏 ಗುಲ್ಬರ್ಗ ನಗರದಲ್ಲಿ ಟ್ರಾಫಿಕ್ ಪೊಲೀಸರಿಗೆ ಎಸಿ ಹೆಲ್ಮೆಟ್ಗಳನ್ನು ವಿತರಿಸಲಾಗಿದ್ದು, ಬಿಸಿಲಿನ ತಾಪದಿಂದ ರಕ್ಷಣೆ ಸಿಗುವಂತೆ ಮಾಡಲಾಗಿದೆ ☀️ ಈ ಕ್ರಮದಿಂದ ಸಿಬ್ಬಂದಿಯ ಆರೋಗ್ಯ ಕಾಪಾಡುವುದರ ಜೊತೆಗೆ, ಅವರ ಕಾರ್ಯಕ್ಷಮತೆ ಹೆಚ್ಚಲು ಸಹಕಾರಿಯಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.
More news from ಕರ್ನಾಟಕ and nearby areas
- ಯಾದಗಿರಿ: ಬಸ್-ಕಾರು ಮುಖಾಮುಖಿ ಡಿಕ್ಕಿ; ಬೆಂಕಿಯ ಕೆನ್ನಾಲಗೆಗೆ ಆರು ಮಂದಿ ಸಜೀವ ದಹನ!1
- ಸುರಪುರ ತಾಲೂಕಿನ ಶಾಂತ್ ಪುರ್ ಕ್ರಾಸ್ ಅತ್ತಿರ ಬಸ್ಸು ಬೆಂಕಿ ಹತ್ತಿರುತ್ತದೆ ಬಸ್ಸು ಮತ್ತು ಕಾರು ಮುಖಾಮುಖಿ ಏಳು ಜನರ ಸಜೀವ ದಾಹನ ಸ್ಥಳಕ್ಕೆ ಸುರಪುರ ಪೊಲೀಸ್ ಠಾಣೆ ಸಿಬ್ಬಂದಿಗಳು ತಕ್ಷಣ ಬಂದು ಗಾಯಾಳುಗಳನ್ನು ಹಾಸ್ಪಿಟಲ್ಗೆ ಕಳಿಸಲಾಯಿತು ಡಿಎಸ್ಪಿ .ಎಸ್ ಪಿ. ಸ್ಥಳೀಯ ಶಾಸಕರಾದ ವೇಣುಗೋಪಾಲ್ ನಾಯಕ್ ಅವರು ಕೂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ1
- ಯಾದಗಿರಿ ಭೀಕರ ಅಪಘಾತದಲ್ಲಿ ಮೃತಪಟ್ಟವರ ಗುರುತು ಪತ್ತೆ, ರಾಯಚೂರು ಪಟ್ಟಣದ ಪಂಚಾಯತ್ ಸದಸ್ಯನ ಇಡೀ ಕುಟುಂಬ ನಾಶ!ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಾಂತಪುರ ಕ್ರಾಸ್ ಬಳಿ ಖಾಸಗಿ ಬಸ್ ಮತ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಕುಟುಂಬದ ಆರು ಮಂದಿ ಸಜೀವ ದಹನಗೊಂಡಿದ್ದಾರೆ. ಈ ದುರಂತವು ರಾಜ್ಯದ ಜನರನ್ನು ಬೆಚ್ಚಿಬೀಳಿಸಿದೆ. ಅಪಘಾತ ಅದೆಷ್ಟು ಭಯಾನಕವಾಗಿತ್ತು ಎಂದರೆ ಘಟನಾ ಸ್ಥಳದಲ್ಲಿ ಹೊತ್ತಿ ಉರಿದ ತಲೆಬುರುಡೆಗಳು ಕಾಣಿಸಿತು. ಬೆಳಗ್ಗೆ ನಡೆದ ಭೀಕರ ಅಪಘಾತ ಇಂದು ಬೆಳಗ್ಗೆ ಸುಮಾರು 9:45ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಕಲಬುರಗಿಯತ್ತ ಸಾಗುತ್ತಿದ್ದ ಖಾಸಗಿ ಬಸ್ ಮತ್ತು ಕಲಬುರಗಿಯಿಂದ ರಾಯಚೂರು ಜಿಲ್ಲೆಯ ಸಿರವಾರ ಕಡೆಗೆ ತೆರಳುತ್ತಿದ್ದ ಕಾರಿನ ನಡುವೆ ಭೀಕರ ಡಿಕ್ಕಿಯಾಗಿದೆ. ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿ ಕ್ಷಣಾರ್ಧದಲ್ಲಿ ಹೊತ್ತಿ ಉರಿದಿದೆ. ಒಂದೇ ಕುಟುಂಬದ 6 ಮಂದಿ ಸಜೀವ ದಹನ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಎಂಟು ಮಂದಿಯಲ್ಲಿ ಆರು ಮಂದಿ ಸ್ಥಳದಲ್ಲೇ ಸಜೀವ ದಹನಗೊಂಡಿದ್ದಾರೆ. ಮೃತರು ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದ ಪಂಚಾಯತ್ ಸದಸ್ಯ ಕೃಷ್ಣನಾಯಕ ಕುಟುಂಬಸ್ಥರು ಎಂದು ಗುರುತಿಸಲಾಗಿದೆ. ಮೃತರಲ್ಲಿ ಕೃಷ್ಣನಾಯಕ (52), ಪತ್ನಿ ಅನಂತಕಲಾ (45), ಅಳಿಯ ಶರಣಪ್ಪ (36), ಮಗಳು ನಿಸರ್ಗ (30), ಶಶಿಕಲಾ (30) ಹಾಗೂ ಮಗು ಸಿದ್ಧಾರ್ಥ (3) ಸೇರಿದ್ದಾರೆ. ಇಬ್ಬರಿಗೆ ಗಂಭೀರ ಗಾಯ ಕಾರಿನಲ್ಲಿ ಇದ್ದ ಅದ್ವಿಕಾ (5) ಮತ್ತು ಶ್ರೀನಿಧಿ (ಒಂದೂವರೆ ವರ್ಷದ ಮಗು) ಗಂಭೀರವಾಗಿ ಗಾಯಗೊಂಡಿದ್ದು, ಯಾದಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಿದೆ. ಮೃತರ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ ದರ್ಶನ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ದುರಂತ ಈ ಕುಟುಂಬ ಅಮಾವಾಸ್ಯೆ ನಿಮಿತ್ತ ತಿಂಥಣಿ ಮೌನೇಶ್ವರ/ವೇಣುಗೋಪಾಲ ಸ್ವಾಮಿ ದರ್ಶನ ಮುಗಿಸಿಕೊಂಡು ಸಿರವಾರಕ್ಕೆ ವಾಪಸ್ಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಸಂತೋಷದ ಪ್ರಯಾಣ ಕ್ಷಣಾರ್ಧದಲ್ಲಿ ದುರಂತ ಅಂತ್ಯ ಕಂಡಿದೆ. ಅಪಘಾತದಲ್ಲಿ ಬಸ್ಗೂ ಬೆಂಕಿ ತಗುಲಿದರೂ, ಅದರಲ್ಲಿದ್ದ ಸುಮಾರು 33 ಪ್ರಯಾಣಿಕರಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕೆಲವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಭೀಕರ ದೃಶ್ಯ - ಕಾರು ಭಸ್ಮ ಅಪಘಾತದ ತೀವ್ರತೆಗೆ ಕಾರಿನ ಬಾಗಿಲುಗಳು ಲಾಕ್ ಆಗಿ ಒಳಗಿದ್ದವರು ಹೊರಬರಲು ಸಾಧ್ಯವಾಗಿಲ್ಲ. ಬೆಂಕಿ ವೇಗವಾಗಿ ವ್ಯಾಪಿಸಿ ಕಾರು ಸಂಪೂರ್ಣ ಕರಕಲಾಗಿದ್ದು, ಸುಟ್ಟ ಅವಶೇಷಗಳ ನಡುವೆ ತಲೆಬುರುಡೆಗಳು ಪತ್ತೆಯಾಗಿದ್ದು ಆ ದೃಶ್ಯಗಳು ಮನಕಲುಕುವಂತಿತ್ತು. ಘಟನೆಯ ಮಾಹಿತಿ ತಿಳಿದು ಸುರಪುರ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದರು. ಬಳಿಕ ಮೃತದೇಹಗಳನ್ನು ಹೊರತೆಗೆದು ಗುರುತಿಸುವ ಕಾರ್ಯ ಮಾಡಲಾಯ್ತು. ತನಿಖೆ ಆರಂಭ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅಪಘಾತದ ನಿಖರ ಕಾರಣ ಪತ್ತೆಹಚ್ಚುವ ಕಾರ್ಯ ಆರಂಭಿಸಿದ್ದಾರೆ. ಅತಿವೇಗ, ನಿರ್ಲಕ್ಷ್ಯ ಚಾಲನೆ ಅಥವಾ ತಾಂತ್ರಿಕ ದೋಷವೇ ಕಾರಣವೇ ಎಂಬುದು ತನಿಖೆಯಿಂದ ತಿಳಿಯಬೇಕಾಗಿದೆ. ಈ ದುರಂತದಿಂದ ರಾಜ್ಯದಲ್ಲಿ ರಸ್ತೆ ಸುರಕ್ಷತೆ ಕುರಿತು ಮತ್ತೆ ಪ್ರಶ್ನೆಗಳು ಎದ್ದಿವೆ. ಇತ್ತೀಚಿನ ಸರಣಿ ಅಪಘಾತದಿಂದ ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದೆ. 1
- ಸುರಪುರ ತಾಲೂಕಿನ ಶಾಂತಪುರ ಕ್ರಾಸ್ ಬಳಿ ವಿಆರ್ಎಲ್ ಬಸ್ ಹಾಗೂ ಕಾರು ಮಧ್ಯೆ ಭೀಕರ ಅಪಘಾತ.6 ಜನ ಸುಟ್ಟು ಕರಕಲು.ಬಸ್ ಕಾರು ಎರಡೂ ಬೆಂಕಿಗಾಹುತಿ.1
- ವಿಜಯಪುರ: ಕೆ ಎಸ್ ಆರ್ ಟಿ ಸಿ ಬಸ್ ಟಿಪ್ಪರ್ ಡಿಕ್ಕಿ ಪ್ರಯಾಣಿಕರಿಗೆ ಗಾಯ ವಿಜಯಪುರ ನಗರದ ಹೊರಭಾಗದಲ್ಲಿರುವ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಕೆಎಸ್ಆರ್ಟಿಸಿ ಬಸ್ ಮತ್ತು ಟಿಪ್ಪರ್ ನಡುವೆ ಸಂಭವಿಸಿದ ಭೀಕರ ಡಿಕ್ಕಿಯಲ್ಲಿ ಕೆಎಸ್ಆರ್ಟಿಸಿ ಬಸ್ ಕಂದಕಕ್ಕೆ ಉರುಳಿ ಬಿದ್ದಿದೆ. ಈ ದುರ್ಘಟನೆಯಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.1
- ಕರ್ನಾಟಕದಲ್ಲಿ ಕಾಂಗ್ರೇಸ್ ಸರಕಾರದ ಅಡಳಿತ ಜನರು ನೋಡಲೆಬೇಕಾದಂಥ ಇಂಥಾ ಸರಕಾರ ಬೇಕಾ.1
- ಅಫಜಲಪುರ ತಾಲೂಕಿನ ರಾಜಕೀಯ ಬೆಳವಣಿಗೆ ಕುರಿತು ನಾನು "ನಾಟಕ " ಬರಿಯುತ್ತೆನೆ: ಚಂದು ಬನ್ನಟ್ಟಿ.1
- BREAKING NEWS || ಮುಸ್ಲಿಂ, ಜೈನ, ಬೌದ್ಧ, ಸಿಖ್, ಪಾರ್ಸಿ ಸಮುದಾಯಗಳಿಗೆ ಅವಕಾಶ, #hindu #muslim #jain #bhoudha #shikh #Christian1
- ಕೆಂಭಾವಿ: ಕೃಷಿ ಹಾಗೂ ಕಂದಾಯ ಇಲಾಖೆಯಿಂದ ಹಲವಾರು ದಿನಗಳಿಂದ ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸುತ್ತಿದ್ದರು ಹೋಬಳಿಯ ರೈತರು ಎಫ್ ಐಡಿ ಮಾಡಿಸಿಕೊಳ್ಳುಲು ಹಿಂಜರಿಯುತ್ತಿದ್ದಾರೆ ಂದು ರೈತ ಸಂಪರ್ಕ ಕೇಂದ್ರದ ಕೃಷಿ ಅಧಿ ಕಾರಿ ಶ್ರೀಧರ ಎಸ್. ತಿಳಿಸಿದರು. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಎಫ್ಐಡಿ ಮಾಡಿಸದೆ ಇದ್ದಲ್ಲಿ ರಸಗೊಬ್ಬರ ಮಾರಾಟ ಮಳಿಗೆಯಲ್ಲಿ ಈ ಬಾರಿ ರಸಗೊಬ್ಬರ ಸಿಗುವುದಿಲ್ಲ. ಎಫ್ಐಡಿ ಮಾಡಿಸುವುದರಿಂದ ರೈತರಿಗೆ ಎಲ್ಲ ರೀತಿಯಿಂದ ಸಹಾಯವಾಗಲಿದೆ. ರಾಜ್ಯ ಸರಕಾರ 2014-15ರಲ್ಲಿ ಎಫ್ಐಡಿ ಯೋಜನೆಯನ್ನು ಜಾರಿಗೆ ತಂದಿದ್ದು, ಕೆಂಭಾವಿ ಹೋಬಳಿಯಲ್ಲಿ ಒಟ್ಟು 27,185 ರೈತರ ಹೊಲಗಳಿದ್ದು, ಅದರಲ್ಲಿ 18,870 ರೈತರು ನೋಂದಣಿ ಮಾಡಿಸಿಕೊಂಡಿದ್ದಾರೆ. ಅದರಲ್ಲಿ 8,315 ಜನ ರೈತರು ಇನ್ನು ಎಫ್ಐಡಿ ಮಾಡಿಸಿಕೊಳ್ಳದೆ ಬಾಕಿ ಉಳಿದಿದ್ದಾರೆ. ಎಫ್ಐಡಿ ಮಾಡಿಸಿಕೊಳ್ಳದಿದ್ದರೆ ರೈತರಿಗೆ ಬೆಳೆ ಪರಿಹಾರ ಬರುವುದಿಲ್ಲ, ಬೆಳೆ ವಿಮೆ, ಎಲ್ಲ ಬ್ಯಾಂಕ್ ಸೌಲಭ್ಯಗಳಿಗೆ ಎಫ್ಐಡಿ ಕಡ್ಡಾಯವಾಗಿದೆ. ಈ ಮುಂಗಾರು ಹಂಗಾಮಿನ ದಿನಗಳಲ್ಲಿ ಗೊಬ್ಬರ ವಿತರಣೆಗೆ ಸಮಸ್ಯೆ ಆಗಬಾರದೆಂದರೆ ಕಡ್ಡಾಯವಾಗಿ ಒಂದು ವಾರದ ಒಳಗಾಗಿ ಬಾಕಿ ಉಳಿದಿರುವ ಎಲ್ಲರೂ ಎಫ್ಐಡಿ ಮಾಡಿಸಿಕೊಳ್ಳಬೇಕು ಹಾಗೂ ಇರುವ ಎಫ್ ಐಡಿಗಳಿಗೆ ಇಕೆವೈಸಿ ಮಾಡಿಸಿಕೊಳ್ಳುವುದು ಅನಿವಾರ್ಯ ಎಂದು ತಿಳಿಸಿದ್ದಾರೆ. ಈ1