ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣದಲ್ಲಿ ನರೇಗಾ ಹಣ ದುರ್ಬಳಕೆ; ಸಾಮಾಜಿಕ ಕಾರ್ಯಕರ್ತ ಕಂಚನಹಳ್ಳಿ ರವಿಕುಮಾರ್ ದೂರು ಕನಕಪುರ:ಕಬ್ಬಾಳು ಗ್ರಾಮ ಪಂಚಾಯಿತಿ ಸರ್ವೆ ನಂಬರ್ 17ರಲ್ಲಿ ಘನ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಕ್ಕೆ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ನರೇಗಾ ಹಣವನ್ನು ಕಾನೂನು ಬಾಹಿರವಾಗಿ ಬಳಸಲಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಕಂಚನಹಳ್ಳಿ ರವಿ ಕುಮಾರ್ ದೂರಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಈ ಸಂಬಂಧ ಆಗಸ್ಟ್ 19 ರಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಲಿಖಿತ ದೂರು ನೀಡಿ ಕಾನೂನು ಕ್ರಮಕ್ಕೆ ಒತ್ತಾಯಿಸಲಾಗಿದೆ ಎಂದು ತಿಳಿಸಿದ್ದಾರೆ. ಸರ್ವೆ ನಂಬರ್ 17ರ ಸರ್ಕಾರಿ ಗೋಮಾಳದ ಜಮೀನಿನಲ್ಲಿ ಅಕ್ರಮ ಗಣಿಗಾರಿಕೆ ಮಾಡಿ ಪಂಚಾಯಿತಿಯಿಂದ ಕೂಲಿ ಕಾರ್ಮಿಕರಿಂದಲೇ ಕಾಮಗಾರಿ ನಡೆಸಲಾಗಿದೆ ಎಂದು ನಕಲಿ ದಾಖಲೆಗಳನ್ನು ಸೃಷ್ಟಿಸಿ ಯೋಜನೆಯ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ದೂರಿದರು. 10 ಎಕರೆ ವಿಸ್ತೀರ್ಣದಲ್ಲಿರುವ ಕಲ್ಲು ಬಂಡೆಗಳನ್ನು ಹೊಡೆದು ಅಕ್ರಮ ಗಣಿಗಾರಿಕೆ ಮಾಡಲಾಗುತ್ತಿದೆ. ಇದರಿಂದ ಸರ್ಕಾರಕ್ಕೆ ವಂಚನೆ ಮಾಡಲಾಗುತ್ತಿದೆ ಎಂದು ದೂರಿನಲ್ಲಿ ವಿವರಿಸುತ್ತಾರೆ. ಇಂತವರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕೆಂದು ಆಗ್ರಹಿಸಿದ್ದಾರೆ.
ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣದಲ್ಲಿ ನರೇಗಾ ಹಣ ದುರ್ಬಳಕೆ; ಸಾಮಾಜಿಕ ಕಾರ್ಯಕರ್ತ ಕಂಚನಹಳ್ಳಿ ರವಿಕುಮಾರ್ ದೂರು ಕನಕಪುರ:ಕಬ್ಬಾಳು ಗ್ರಾಮ ಪಂಚಾಯಿತಿ ಸರ್ವೆ ನಂಬರ್ 17ರಲ್ಲಿ ಘನ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಕ್ಕೆ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ನರೇಗಾ ಹಣವನ್ನು ಕಾನೂನು ಬಾಹಿರವಾಗಿ ಬಳಸಲಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಕಂಚನಹಳ್ಳಿ ರವಿ ಕುಮಾರ್ ದೂರಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಈ ಸಂಬಂಧ ಆಗಸ್ಟ್ 19 ರಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಲಿಖಿತ ದೂರು ನೀಡಿ ಕಾನೂನು ಕ್ರಮಕ್ಕೆ ಒತ್ತಾಯಿಸಲಾಗಿದೆ ಎಂದು ತಿಳಿಸಿದ್ದಾರೆ. ಸರ್ವೆ ನಂಬರ್ 17ರ ಸರ್ಕಾರಿ ಗೋಮಾಳದ ಜಮೀನಿನಲ್ಲಿ ಅಕ್ರಮ ಗಣಿಗಾರಿಕೆ ಮಾಡಿ ಪಂಚಾಯಿತಿಯಿಂದ ಕೂಲಿ ಕಾರ್ಮಿಕರಿಂದಲೇ ಕಾಮಗಾರಿ ನಡೆಸಲಾಗಿದೆ ಎಂದು ನಕಲಿ ದಾಖಲೆಗಳನ್ನು ಸೃಷ್ಟಿಸಿ ಯೋಜನೆಯ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ದೂರಿದರು. 10 ಎಕರೆ ವಿಸ್ತೀರ್ಣದಲ್ಲಿರುವ ಕಲ್ಲು ಬಂಡೆಗಳನ್ನು ಹೊಡೆದು ಅಕ್ರಮ ಗಣಿಗಾರಿಕೆ ಮಾಡಲಾಗುತ್ತಿದೆ. ಇದರಿಂದ ಸರ್ಕಾರಕ್ಕೆ ವಂಚನೆ ಮಾಡಲಾಗುತ್ತಿದೆ ಎಂದು ದೂರಿನಲ್ಲಿ ವಿವರಿಸುತ್ತಾರೆ. ಇಂತವರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕೆಂದು ಆಗ್ರಹಿಸಿದ್ದಾರೆ.
- ಮಳವಳ್ಳಿಯಲ್ಲಿ ಮಾಮರ ಸೌಹಾರ್ದ ಸಹಕಾರ ಸಂಘದ ಪ್ರಥಮ ವರ್ಷದ ಸರ್ವ ಸದಸ್ಯರ ಸಾಮಾನ್ಯ ಸಭೆಗೆ ಮೈಸೂರು ಕೊಡಗು ಜಿಲ್ಲಾ ಸಹಕಾರ ಒಕ್ಕೂಟಗಳ ಸಂಯೋಜಕರಾದ ಬಲರಾಮ್ ಚಾಲನೆ ಮಳವಳ್ಳಿ;ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಅರ್ಥಿಕ ಸೌಲಭ್ಯಗಳನ್ನು ನೀಡುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ--ಸಂಯೋಜಕ ಬಲರಾಂ ಹೇಳಿಕೆ ಮಳವಳ್ಳಿ:ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಅರ್ಥಿಕ ಸೌಲಭ್ಯಗಳನ್ನು ನೀಡುವಲ್ಲಿ ಸಹಕಾರಿ ಸಂಘಗಳ ಪಾತ್ರ ಅಪಾರವಾಗಿದೆ ಎಂದು ಮೈಸೂರು ಕೊಡಗು ಸೌಹರ್ಧ ಸಹಕಾರಿ ಒಕ್ಕೂಟದ ವಿಭಾಗದ ಸಂಯೋಜಕ ಎನ್.ಬಲರಾಂ ಹೇಳಿದರು. ಪಟ್ಟಣದ ಶ್ರೀವೀರಭದ್ರೇಶ್ವರ ದೇವಸ್ಥಾನದ ಅವರಣದಲ್ಲಿ ಮಾಮರ ಸೌಹರ್ಧ ಸಹಕಾರಿ ಸಂಘ ಅಯೋಜಿಸಿದ್ದ ಪ್ರಥಮ ವರ್ಷದ ಸರ್ವ ಸದಸ್ಯರ ಸಭೆಗೆ ಗಿಡಕ್ಕೆ ನೀರು ಹಾಕುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಸಹಕಾರಿ ಸಂಘಗಳ ಮೂಲ ಉದ್ದೇಶವೇ ಸದಸ್ಯರಿಗೆ ಮೂಲ ಅಗತ್ಯ ಸೌಲಭ್ಯಗಳನ್ನು ಒದಗಿಸುವುದಾಗಿದೆ ಎಂದರು. ಮಾಮರ ಸೌಹರ್ದ ಸಹಕಾರ ಸಂಘ ಅರಂಭದ ವರ್ಷದಲ್ಲೆ ಉತ್ತಮ ಪ್ರಗತಿಯತ್ತ ಸಾಗಿದೆ,೧ ಕೋಟಿ ವಹಿವಾಟು ನಡೆಸಿರುವುದು,೫೦ ಲಕ್ಷಕ್ಕೂ ಮೂಲ ಬಂಡವಾಳ ಹೊಂದಿರುವುದು ಸೇರಿದಂತೆ ಸಂಘದ ಪಾರದರ್ಶಕ ಅರ್ಥಿಕ ವರದಿ ಭವಿಷ್ಯದಲ್ಲಿ ಉನ್ನತ ಸ್ಥಾನದ ಪಡೆಯಲಿದೆ ಎಂದ ಅವರು ಅಭಿವೃದ್ದಿ ಪಥದತ್ತ ಸಾಗುತ್ತಿರುವ ಸಂಘಕ್ಕೆ ಸದಸ್ಯರು ಹೆಚ್ಚಿನ ಸಹಕಾರ ನೀಡಬೇಕು,ಸಂಘದ ಸೌಲಭ್ಯಗಳನ್ನು ಪಡೆಯುವುದಲ್ಲದೇ ಅಕ್ಕಪಕ್ಕದ ಜನರಿಗೂ ಸೌಲಭ್ಯ ಕೊಡಿಸುವತ್ತ ಮುಂದಾಗುವAತೆ ಸಲಹೆ ನೀಡಿದರು. ಇದೇ ಸಂದರ್ಭದಲ್ಲಿ ಲೆಕಪರಿಶೋಧಕರಾದ ರಾಜೇಶ್ ಸಂಘದ ಪ್ರಗತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಮಾತನಾಡಿದರು.ಕಾರ್ಯಕ್ರಮದಲ್ಲಿ ನಿರ್ದೇಶಕರಾದ ಕವಿತಾ ಶ್ರೀಕಂಠಸ್ವಾಮಿ ಹಾಗೂ ಕು.ಕುಸುಮ ಸಂಘದ ವಾರ್ಷಿಕ ಲೆಕ್ಕ ಪರಿಶೋಧನ ವರದಿಯನ್ನು ಸಭೆಯಲ್ಲಿ ಮಂಡಿಸಿದರು.ಸAಘದ ಸೌಲಭ್ಯಗಳ ಬಗ್ಗೆ ಸಂಘದ ಅಪಾಧ್ಯಕ್ಷರಾದ ಗುರುಮೂರ್ತಿ ಮಾಹಿತಿ ನೀಡಿದರು.ಸಂಘದ ಸೇವೆಗಳ ಕುರಿತು ನಿರ್ದೇಶಕ ಶಿವಕುಮಾರ್ ಮಾತನಾಡಿದರು.ಮುಖ್ಯ ಕಾರ್ಯನಿರ್ವಹಣಾಧಿಕಶಾರಿ ಪೂರ್ಣಿಮ ಸಂಘ ಬೆಳೆದು ಬಂದ ಹಾದಿಯ ಕುರಿತು ವರದಿ ಮಂಡಿಸಿದರು.ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಎಂ.ಶಿವಕುಮಾರ್ ಸಂಘದ ಅರಂಭ ಹಾಗೂ ಮುಂಗಡ ವರ್ಷದ ಯೋಜನೆಗಳು ಬಗ್ಗೆ ಸಭೆಯಲ್ಲಿ ಮಂಡಿಸಿದರು. ಬಾಕ್ಸ್ ಸುದ್ದಿ: ಹೋಸ ಯೋಜನೆಗಳ ಅನುಷ್ಠಾನ್ಕಕೆ ಅನುಮೋಧನೆ: ಸಹಕಾರ ಸಂಘದಿAದ ಸೂಪರ್ ಮಾರ್ಕೆಟ್ ಅರಂಭ,ಹಲಗೂರಿನಲ್ಲಿ ಹೊಸ ಉಪ ಶಾಖೆ ತೆರಯುವುದು,ಬಂಕ್ ಉದ್ಯಮ ಸೇರಿದಂತೆ ಸಹಕಾರ ಸಂಘದ ಪ್ರಗತಿಗೆ ಕೈಗೊಳ್ಳಬೇಕಾದ ಹೊಸ ಯೋಜನೆಗಳ ಅನುಷ್ಠಾನ ಹಾಗೂ ಲೆಕ್ಕ ಪರಿಶೋಧಕರ ನಿಯೋಜನೆ.ಹೊಸ ಕಛೇರಿ ತೆರೆಯುವುದು,ಸಾಮಾನ್ಯ ಸೇವಾ ಕೇಂದ್ರದ ಸೇವೆಗಳನ್ನು ಸದಸ್ಯರ ಮನೆಗೆ ನೀಡುವುದು ಸೇರಿದಂತೆ ಹಲವು ಯೋಜನೆಗಳ ಬಗ್ಗೆ ಸಭೆಯಲ್ಲಿ ವಿಷಯ ಮಂಡಿಸಿ ಅನುಮೋಧನೆ ಪಡೆಯಲಾಯಿತು. ಇದೇ ಸಂದರ್ಭದಲ್ಲಿ ಸಂಘಕ್ಕೆ ನೂತನ ವೃತ್ತಿ ಪರ ನಿರ್ದೇಶಕರಾಗಿ ಅಯ್ಕಯಾಗಿದ್ದ ಬೆಳಕವಾಡಿ ಚೇತನ್ ಹಾಗೂ ರೇಷ್ಮೆ ಕೃಷಿಕ ಮೂಗನಕೊಪ್ಪಲು ತ್ಯಾಗರಾಜುರವರನ್ನು ಅಭಿನಂಧಿಸಿ ಆಢಳಿತ ಮಂಡಳಿಗೆ ಬರಮಾಡಿಕೊಳ್ಳಲಾಯಿತು. ಸಭೆಯಲ್ಲಿ ಸಂಯೋಜಕ ಬಲರಾಂ,ಲೆಕ್ಕ ಪರಿಶೋಧಕರಾದ ರಾಜೆಶ್.ಪಿ ಹಾಗೂ ಹಿರಿಯ ಸದಸ್ಯರು ಹಾಗೂ ಶಿಕ್ಷಣ ತಜ್ಞೆ ಶಾಂತ ಬಸವರಾಜು,ವೈದ್ಯರಾದ ಗೀರೀಶ್,ಪತ್ರಬರಹಗಾರ ಸದಾಶಿವಮೂರ್ತಿ,ಬಸವೇಶ್ ಮೂರ್ತಿ,ನಿವೃತ್ತ ಉಪ ತಹಶೀಲ್ದಾರ್ ಶಿವಮೂರ್ತಿಯವರನ್ನು ಅಭಿನಂಧಿಸಲಾಯಿತು. ಸಭೆಗೂ ಮುನ್ನ ಶ್ರೀ ವೀರಭದ್ರೇಶ್ವರಸ್ವಾಮಿಗೆ ಸಂಘದವತಿಯಿAದ ವಿಶೇಷ ಪೂಜೆ ಸಲ್ಲಿಸಲಾಯಿತು,ಅರ್ಚಕರಾದ ಮಲ್ಲಯ್ಯನವರು ದೇವರಿಗೆ ಪೂಜೆ ಸಲ್ಲಿಸಿ ಅಗಮಿಸಿದ ಜನರಿಗೆ ಮಹಾಮಂಗಳಾರತಿ ನೀಡಿ ಪ್ರಸಾದ ನೀಡಿದರು. ಸಭೆಯಲ್ಲಿ ಅಢಳಿತ ಮಂಡಳಿಯ ನಿರ್ದೇಶಕರಾದ ಎಸ್ ನಾಗಭೂಷಣಾರಾದ್ಯ,ಎನ್.ಮಂಟ್ಯೆಸ್ವಾಮಿ,ಕವಿತ.ಎಸ್,ಮಾನಸ.ಪಿ,ಗAಗಾಧರ್,ವ್ಯವಸ್ಥಾಪಕಿ ರಮ್ಯ,ಸೇವಾ ಪ್ರತಿನಿಧಿ ಕುಸುಮ,ಸಿಇಓ ಪೂರ್ಣಿಮಾ, ಪಿಗ್ಮಿ ಸಂಗ್ರಾಹಕ ಸುಬ್ರಮಣ್ಯ ಎಂ.ಅರ್ ಸೇರಿದಂತೆ ಸರ್ವ ಸದಸ್ಯರು ಉಪಸ್ಥಿತರಿದ್ದರು.1
- Keywords (ಕೀವರ್ಡ್ಗಳು) Kannada: ಸಕ್ಕರೆ ಬೆಲೆ ಏರಿಕೆ, ಕರ್ನಾಟಕ ಸರ್ಕಾರ ಆದೇಶ, ಸಕ್ಕರೆ ದರ ಹೆಚ್ಚಳ, ಸಕ್ಕರೆ ಸಚಿವಾಲಯ, ಕರ್ನಾಟಕ ಸುದ್ದಿಗಳು, ಬೆಲೆ ಏರಿಕೆ English: Sugar Price Hike Karnataka, Karnataka Govt Sugar Order, Sugar Rate Hike News, Karnataka News, Price Rise Karnataka Hashtags (ಹ್ಯಾಷ್ಟ್ಯಾಗ್ಗಳು) #SugarPriceHike #KarnatakaGovt #SugarRateHike #KarnatakaNews #PriceRise #KannadaNews #KarnatakaUpdates Keywords (ಕೀವರ್ಡ್ಗಳು) Kannada: ಸಕ್ಕರೆ ಬೆಲೆ ಏರಿಕೆ, ಕರ್ನಾಟಕ ಸರ್ಕಾರ ಆದೇಶ, ಸಕ್ಕರೆ ದರ ಹೆಚ್ಚಳ, ಸಕ್ಕರೆ ಸಚಿವಾಲಯ, ಕರ್ನಾಟಕ ಸುದ್ದಿಗಳು, ಬೆಲೆ ಏರಿಕೆ English: Sugar Price Hike Karnataka, Karnataka Govt Sugar Order, Sugar Rate Hike News, Karnataka News, Price Rise Karnataka Hashtags (ಹ್ಯಾಷ್ಟ್ಯಾಗ್ಗಳು) #SugarPriceHike #KarnatakaGovt #SugarRateHike #KarnatakaNews #PriceRise #KannadaNews #KarnatakaUpdates1
- ತಾಲ್ಲೂಕಿನ ಗುಳ್ಳಗಟ್ಟ ಗ್ರಾಮದ ಕಾಂಗ್ರೆಸ್ ಮುಖಂಡ ಶಿವರುದ್ರ ಅವರ ಕೊಲೆ ಪ್ರಕರಣದ ಆರೋಪಿ ಬಂಧಿಸಿದ ಗ್ರಾಮಾಂತರ ಠಾಣೆ ಪೊಲೀಸರು ಮಳವಳ್ಳಿ : ಕಳೆದ ಒಂದು ತಿಂಗಳ ಹಿಂದೆ ಮಳವಳ್ಳಿ ತಾಲ್ಲೂಕಿನ ಗುಳ್ಳಗಟ್ಟ ಗ್ರಾಮದಲ್ಲಿ ನಡೆದಿದ್ದ ಕಾಂಗ್ರೆಸ್ ಮುಖಂಡ ಶಿವರುದ್ರ ಅವರ ಕೊಲೆ ಪ್ರಕರಣಕ್ಕೆ ಸಂಬಂದಿಸಿ ದಂತೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿ ದ್ದಾರೆ. ಗುಳ್ಳಗಟ್ಟ ಗ್ರಾಮದ ವಾಸಿ ಲೇ ರಾಜಣ್ಣ ಎಂಬುವರ ಮಗನಾದ 42 ವರ್ಷದ ಮಹೇಶ ಎಂಬಾತನೇ ಬಂಧಿತ ಆರೋಪಿಯಾಗಿದ್ದು ಕಳೆದ ಜುಲೈ 24 ರಂದು ಈ ಘಟನೆ ನಡೆದಿತ್ತು . ಅಂದು ಸಂಜೆ 6.30 ರ ಸಮಯದಲ್ಲಿ ತಮ್ಮ ಜಮೀ ನಿನ ಬಳಿ ವಾಕಿಂಗ್ ಮುಗಿಸಿ ಮನೆಕಡೆ ಸ್ಕೂಟರ್ ನಲ್ಲಿ ಹೊರಟಿದ್ದ 57 ವರ್ಷದ ಶಿವರುದ್ರ ಅವರನ್ನು ಅಡ್ಡಗಟ್ಟಿ ದ ಮಹೇಶ ದೊಣ್ಣೆಯಿಂದ ತಲೆಗೆ ಹೊಡೆದು ಕೊಲೆ ಮಾಡಿ ಸ್ಕೂಟರ್ ಸಮೇತ ಶವವನ್ನು ಹಳ್ಳಕ್ಕೆ ತಳ್ಳಿ ಪರಾರಿಯಾಗಿದ್ದಾನೆ ಎಂದು ಮೃತನ ಮಗ ಡಾ ವಿನಯ್ ಪೊಲೀಸರಿಗೆ ನೀಡಿ ರುವ ದೂರಿನಲ್ಲಿ ಆರೋಪಿಸಿ ದ್ದರು ಟಿ ಸಿ ಯಿಂದ ವಿದ್ಯುತ್ ಸಂಪರ್ಕ ಪಡೆಯುವ ವಿಚಾರ ವಾಗಿ ಉಂಟಾಗಿದ್ದ ವೈಷಮ್ಯವೇ ಈ ಕೊಲೆಗೆ ಕಾರಣವೆಂದು ದೂರಿನಲ್ಲಿ ತಿಳಿಸಲಾಗಿತ್ತು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಈ ಪ್ರಕರಣದ ಆರೋಪಿ ಬಂಧನ ಕ್ಕಾಗಿ ಜಿಲ್ಲಾ ಎಸ್ಪಿ ಡಾ. ಶೋಭಾ ರಾಣಿ ಅವರು ವಿಶೇಷ ತಂಡ ರಚಿಸಿದ್ದರು. ಅಂದಿನಿಂದಲೂ ವಿವಿಧ ಸ್ಥಳಗಳಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನಕ್ಕಾಗಿ ಡಿ ವೈ ಎಸ್ಪಿ ಯಶವಂತ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಗ್ರಾಮಾಂ ತರ ಠಾಣಾ ಪೊಲೀಸರು ಶೋಧ ಕಾರ್ಯ ಕೈಗೊಂಡಿ ದ್ದರು. ಮಂಡ್ಯ ತಾಲ್ಲೂಕು ಚಂದಗಾಲು ಬಳಿಯ ವಡ್ಡರ ಹಳ್ಳಿ ಗ್ರಾಮದ ಚಾಕಿ ಸಾಕಾಣಿಕ ಕೇಂದ್ರದಲ್ಲಿ ಇರುವ ಖಚಿತ ಮಾಹಿತಿ ಮೇರೆಗೆ ಭಾನುವಾರ ಸಾಯಂಕಾಲ ಕಾರ್ಯಾಚರಣೆ ನಡೆಸಿದ ಗ್ರಾಮಾಂತರ ಠಾಣೆ ಇನ್ಸ್ ಪೆಕ್ಟರ್ ಬಸವರಾಜು, ಎಎಸ್ ಐ ಸಿದ್ದರಾಜು, ಸಿಬ್ಬಂದಿಗಳಾದ ನಾಗೇಂದ್ರ, ಸುರೇಶ, ದೇವರಾಜು ಅವರನ್ನು ಒಳಗೊಂಡ ತಂಡ ಆರೋಪಿ ಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಸೋಮವಾರ ಸಾಯಂಕಾಲ 5.30 ರ ಸಮಯದಲ್ಲಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.1
- not cleaning 🤬 Nanhi layout Buddha Nagar government hospital not clean BBMP . BBMP complaint . not cleaning my area BBMP . ward number . cleaning my area . ward number 42 . Nandini layout . government hospital back side . Buddha Nagar. .560096 . Avadi quarters .4
- ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್,ರೈತಮುಖಂಡರಿಂದ ಕಡಿಮೆ ಆರ್ ಎಸ್ ಮುತ್ತಿಗೆ,ಬಂಧನ ಬಿಡುಗಡೆ ಮಂಡ್ಯ- ಶ್ರೀರಂಗಪಟ್ಟಣದ ಕೆ. ರ್ ಎಸ್ ಆಣೆಕಟ್ಟೆಯಿಂದ ನೀರು ಹರಿಸುತ್ತದೆ ಇರುವುದನ್ನ ಖಂಡಿಸಿ ಕನ್ನಡ ಚಳುವಳಿ ವಾಟಾಳ್ ನಾಗರಾಜ್ ಕೆಆರ್ ಎಸ್ ಮುತ್ತಿಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದರು, ತಮಿಳು ನಾಡು ಏಜೆಂಟ್ ನಂತೆ ವರ್ತಿಸುತ್ತಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ದಿಕ್ಕಾರ ಕೂಗಿ ಕೂಡಲೇ ತಮಿಳುನಾಡಿಗೆ ನೀರು ನಿಲ್ಲಿಸುವಂತೆ ಸರ್ಕಾರಕ್ಕೆ ಆಗ್ರಹಮಾಡಿದ್ರು, ರಾಜ್ಯಸರ್ಕಾರದ ವಿರುದ್ದ ದಿಕ್ಕಾರ ಕೂಗಿದ್ರು. ರಾಜ್ಯಹಾಗೂ ಕೇಂದ್ರ ಸರ್ಕಾದ ವಿರುದ್ದ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ರು, ಪ್ರತಿಭನಾ ಕಾರರನ್ನು ಪೊಲೀಸ್ ಬಂದಿಸಿದರು, ಕನ್ನಡ ಹೋರಾಟಗಾರರು ವಾಟಾಳ್ ನಾಗರು ಮತ್ತು ರೈತ ಹೋರಾಟಗಾರ ರಾಜ್ಯಾಧ್ಯಕ್ಷರಾದ ಇಂಗಲಗುಪ್ಪೆ ಕೃಷ್ಣೆಗೌಡ ಮತ್ತಿತರರನ್ನು ಬಂಧಿಸಿ ಬಿಡುಗಡೆ ಮಾಡಲಾಯಿತು..1
- ಲೊಕೇಶನ್ ಒಂದು ಹತ್ತಿರ ಹಾಕಿ ಇನ್ನೊಂದು ಹತ್ತಿರ ಬಾ ಅಂತಾರೆ ಇದನ್ನ ಯಾರು ಕೇಳ್ತಾರೆ? ಲೊಕೇಶನ್ ಒಂದು ಹತ್ತಿರ ಹಾಕಿ ಇನ್ನೊಂದು ಹತ್ತಿರ ಬಾ ಅಂತಾರೆ ಇದನ್ನ ಯಾರು ಕೇಳ್ತಾರೆ?1
- ಸೂಳೇರಿಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಬ್ಲಾಕ್ ಚಿಕ್ಕುಡಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿದ ಶಾಸಕ ಎಂ.ಆರ್. ಮಂಜುನಾಥ್: ರೈತ ಸಂಘದಿಂದ ಧನ್ಯವಾದ ಹನೂರು: ತಾಲೂಕಿನ ಸೂಳೇರಿಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕುಡಿ ಗ್ರಾಮದಲ್ಲಿ ತೀವ್ರವಾಗಿದ್ದ ಕುಡಿಯುವ ನೀರಿನ ಅಭಾವವನ್ನು ಆಲಿಸಿ, ತಕ್ಷಣವೇ ಕೊಳವೆ ಬಾವಿ ಕೊರೆಯಿಸಿ ನೀರು ಪೂರೈಸಲು ಕ್ರಮ ಕೈಗೊಂಡ ಹನೂರು ಕ್ಷೇತ್ರದ ಶಾಸಕರಾದ ಎಂ.ಆರ್. ಮಂಜುನಾಥ್ ಅವರಿಗೆ ಮೂಲ ಸಿದ್ಧಾಂತದ ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರು ಹಾಗೂ ಗ್ರಾಮಸ್ಥರು ಹೃತ್ಪೂರ್ವಕ ಧನ್ಯವಾದ ಸಲ್ಲಿಸಿದ್ದಾರೆ. ಚಿಕ್ಕುಡಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದ ಹಿನ್ನೆಲೆಯಲ್ಲಿ, ರೈತ ಸಂಘದ ಮುಖಂಡರು ಶಾಸಕರ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ್ದರು. ಗ್ರಾಮಸ್ಥರ ಹಾಗೂ ರೈತ ಮುಖಂಡರ ಮನವಿಗೆ ತಕ್ಷಣ ಸ್ಪಂದಿಸಿದ ಶಾಸಕ ಎಂ.ಆರ್. ಮಂಜುನಾಥ್ ಅವರು, ಗ್ರಾಮದಲ್ಲಿ ಹೊಸ ಕೊಳವೆ ಬಾವಿ ಕೊರೆಯಿಸಲು ಇಂದು ಬೋರ್ವೆಲ್ ವಾಹನವನ್ನು ಕಳುಹಿಸಿಕೊಟ್ಟಿದ್ದರು. ಗ್ರಾಮದಲ್ಲಿ ಕೈಗೊಂಡ ಬೋರ್ವೆಲ್ ಕೊರೆತದ ಸಂದರ್ಭದಲ್ಲಿ ಸುಮಾರು ಎರಡು ಇಂಚು ಉತ್ತಮ ಪ್ರಮಾಣದ ನೀರು ಬಿದ್ದಿದ್ದು, ಗ್ರಾಮಸ್ಥರಲ್ಲಿ ಮತ್ತು ರೈತರ ಮುಖಂಡರಲ್ಲಿ ಸಂತಸ ಮೂಡಿಸಿದೆ. ಹಲವು ದಿನಗಳಿಂದ ಎದುರಿಸುತ್ತಿದ್ದ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಸಿಕ್ಕಂತಾಗಿದ್ದು, ಶಾಸಕರ ಶೀಘ್ರ ಸ್ಪಂದನೆ ಮತ್ತು ಜನಪರ ಕಾಳಜಿಗೆ ರೈತ ಸಂಘದ ತಾಲೂಕು ಹಾಗೂ ಗ್ರಾಮ ಮಟ್ಟದ ಮುಖಂಡರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಮೂಲ ಸಿದ್ಧಾಂತದ ಕರ್ನಾಟಕ ರಾಜ್ಯ ರೈತ ಸಂಘದ ಪ್ರಮುಖ ಮುಖಂಡರು, ಸ್ಥಳೀಯ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.1
- *ನಕಲಿ ಗ್ರಾಮ ಲೆಕ್ಕಿಗರ ಪೋಷಣೆ, ಕಂದಾಯ ಇಲಾಖೆ ವಿರುದ್ಧ ತಮಟೆ ಚಳುವಳಿ ಮಂಡ್ಯ.ಏಳು ಜನ ನಕಲಿ ಗ್ರಾಮ ಲೆಕ್ಕಿಗರು ಡ್ಯೂಪ್ಲಿಕೇಟ್ ಮಾರ್ಕ್ಸ್ ಕಾರ್ಡ್ ಮತ್ತು ಅಂಗವಿಕಲತೆ ಸರ್ಟಿಫಿಕೇಟ್ ನೀಡಿ 2011 ರಲ್ಲಿ ಗ್ರಾಮ ಲೆಕ್ಕಿಗರ ಹುದ್ದೆ ಪಡೆದು ಕಂದಾಯ ಇಲಾಖೆಯಲ್ಲಿ 10 ವರ್ಷದಿಂದ ಕಾರ್ಯನಿರ್ವಹಿಸುತ್ತಿದ್ದು, ಈ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ವತಿಯಿಂದ ತನಿಖೆ ನಡೆದಿದ್ದರು ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳದೆ ವಿಳಂಬ ಮಾಡಿರುವುದು ಮತ್ತು ನಕಲಿ ಗ್ರಾಮ ಲೆಕ್ಕಿಗರನ್ನು ಹುದ್ದೆಯಿಂದ ವಜಾಗೊಳಿಸಿ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಬೇಕೆಂದು ಕರ್ನಾಟಕ ಸಂವಿಧಾನ ಸೇನೆಯ ರಾಜ್ಯಾಧ್ಯಕ್ಷ ಎಚ್ ಎನ್ ನರಸಿಂಹಮೂರ್ತಿ ನೇತೃತ್ವದಲ್ಲಿ ಇಂದು ತಾಲೂಕು ಆಡಳಿತ ಸೌಧ ಆವರಣದಲ್ಲಿ ತಮಟೆ ಚಳುವಳಿಯನ್ನು ನಡೆಸಲಾಯಿತು ಪಟ್ಟಣದ ವೈಭವ ಹೋಟೆಲ್ ವೃತ್ತದಿಂದ ತಾಲೂಕು ಕಚೇರಿ ಆವರಣದವರೆಗೆ ತಮಟೆ ಚಳುವಳಿಯ ಮೂಲಕ ಕಂದಾಯ ಇಲಾಖೆ ಮತ್ತು ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗುತ್ತಾ ಮೆರವಣಿಗೆ ನಡೆಸಲಾಯಿತು ಸಂಘಟನೆಯ ಸಂಚಾಲಕ ಮಾತನಾಡಿ ಲೋಕೇಶ್ ಮೌರ್ಯ ಮಾತನಾಡಿ ನಿಜವಾದ ಅಂಗ ಅಂಗವಿಕಲತೆ ಹೊಂದಿರುವ ವ್ಯಕ್ತಿಗಳಿಗೆ ನಕಲಿ ಸರ್ಟಿಫಿಕೇಟ್ ಪಡೆದಿರುವ ಗ್ರಾಮ ಲೆಕ್ಕಿಗರು ವಂಚಿಸಿದ್ದಾರೆ ಈ ಸಂಬಂಧ ಇಲಾಖೆಯಿಂದ ಪೂರ್ಣ ಪ್ರಮಾಣದ ತನಿಖೆ ನಡೆದರೂ ಕೂಡ ಇವರ ವಿರುದ್ಧ ಕ್ರಮವಹಿಸಿಲ್ಲ ಈ ತಕ್ಷಣದಿಂದಲೇ ಇವರನ್ನು ವಜಾ ಗೊಳಿಸಿ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು ಕರ್ನಾಟಕ ಸಂವಿಧಾನ ಸೇನೆಯ ರಾಜ್ಯಾಧ್ಯಕ್ಷ ಎಚ್ ಎಂ ನರಸಿಂಹಮೂರ್ತಿ ಮಾತನಾಡಿ ನಕಲಿ ಅಂಗವಿಕಲತೆ ಸರ್ಟಿಫಿಕೇಟ್ ಪಡೆದಿರುವ ಅಪಾದಿತ ಗ್ರಾಮ ಲೆಕ್ಕಿಗರನ್ನು ತಕ್ಷಣದಿಂದಲೇ ವಜಾ ಗೊಳಿಸಿ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಮೊಕದ್ದಮೆ ಹೂಡಿ ಎಸ್ಐಟಿ ತನಿಖೆಗೆ ಒಳಪಡಿಸಬೇಕು ಹಾಗೂ ನಕಲಿ ಗ್ರಾಮಲೆಕ್ಕಿಗರ ಕುಟುಂಬಸ್ಥರ ಆಸ್ತಿಯ ವಿವರವನ್ನು ಸಂಗ್ರಹಿಸಿ ತನಿಖೆಗೆ ಒಳಪಡಿಸಬೇಕು ಹಾಗೂ ಜಿಲ್ಲಾಧಿಕಾರಿಗಳು ತಕ್ಷಣದಿಂದಲೇ ಇವರು ವಿರುದ್ಧ ಕ್ರಮ ಜರುಗಿಸಬೇಕು ಇಲ್ಲದಿದ್ದರೆ ನಿರಂತರವಾಗಿ ಹೋರಾಟ ನಡೆಸಲಾಗುವುದೆಂದು ತಿಳಿಸಿದರು ಪ್ರತಿಭಟನೆಯಲ್ಲಿ ಕರ್ನಾಟಕ ಸಂವಿಧಾನ ಸೇನೆಯ ವಕೀಲರಾದ ಪ್ರಭಾಕರ್ ಮತ್ತು ಪದಾಧಿಕಾರಿಗಳಾದ ಕುಮಾರ್ ಪ್ರದೀಪ್ ಸೋಮಶೇಖರ್ ಚೆನ್ನಕೇಶವ ನರಸಿಂಹರಾಜು ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು1