logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕರ್ನಾಟಕವನ್ನು ಘನ ತ್ಯಾಜ್ಯ ನಿರ್ವಹಣೆಯಲ್ಲಿ ದೇಶದಲ್ಲೇ ಒಂದು “ಮಾದರಿ ರಾಜ್ಯ”ವನ್ನಾಗಿ ಮಾಡಲು ಎಲ್ಲಾ ಅಧಿಕಾರಿಗಳು ಮತ್ತು ಸಾರ್ವಜನಿಕರು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಕರೆ ನೀಡಿದ್ದಾರೆ. ಬೆಂಗಳೂರಿನ ವಿಧಾನಸೌಧದಲ್ಲಿ ಘನ ತ್ಯಾಜ್ಯ ನಿರ್ವಹಣೆ ನಿಯಮಗಳು-2026ರ ಅನುಷ್ಠಾನ ಕುರಿತು ನಡೆದ ರಾಜ್ಯ ಮಟ್ಟದ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಮಾನ್ಯ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಈಗಾಗಲೇ ದೇಶದ ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿ, ಈ ನಿಯಮಗಳ ಕಟ್ಟುನಿಟ್ಟಿನ ಜಾರಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು. ಕೇಂದ್ರ ಸರ್ಕಾರವು ಈ ನಿಯಮಗಳ ಯಶಸ್ವಿ ಅನುಷ್ಠಾನದ ಹೊಣೆಗಾರಿಕೆಯನ್ನು ರಾಜ್ಯಗಳ ಐದು ಜವಾಬ್ದಾರಿಯುತ ಕಾರ್ಯದರ್ಶಿಗಳಿಗೆ ನೀಡಿದ್ದು, ಯಾವುದೇ ರೀತಿಯ ನಿರ್ಲಕ್ಷ್ಯ ವಹಿಸದೆ ಎಲ್ಲಾ ಹಂತಗಳಲ್ಲಿಯೂ ಸಂಪೂರ್ಣ ಅರಿವು ಮೂಡಿಸುವಂತೆ ಮತ್ತು ಸಂಬಂಧಪಟ್ಟವರು ತಮ್ಮ ಜವಾಬ್ದಾರಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಿದರು. ಮನೆಗಳಲ್ಲಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿದಿನ ಉತ್ಪತ್ತಿಯಾಗುವ ಸಾವಿರಾರು ಟಿಪಿಡಿ ಘನ ತ್ಯಾಜ್ಯವನ್ನು ಪರಿಣಾಮಕಾರಿಯಾಗಿ ನಿರ್ವಹಿಸದಿದ್ದರೆ ಪರಿಸರಕ್ಕೆ ಭಾರಿ ಹಾನಿಯಾಗಬಹುದು. ಆದ್ದರಿಂದ, ಮನೆ-ಮನೆ ಕಸ ಸಂಗ್ರಹಣೆಗೆ ಹೊಸ ನಿಯಮಗಳ ಪ್ರಕಾರ 4 ರೀತಿಯ ವಿಂಗಡಣೆಯನ್ನು ಜಾರಿಗೆ ತರಬೇಕು. ವಿಂಗಡಿಸಿದ ಕಸವನ್ನು ಪ್ರತ್ಯೇಕವಾಗಿ ಸಂಸ್ಕರಣಾ ಘಟಕಗಳಿಗೆ ತಲುಪಿಸಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಸಮಗ್ರ ಮೇಲ್ವಿಚಾರಣಾ ತಂತ್ರಜ್ಞಾನ ಹಾಗೂ ಮ್ಯಾಪಿಂಗ್ ವ್ಯವಸ್ಥೆ ರೂಪಿಸಬೇಕು. ಇದರ ಜೊತೆಗೆ, ಸುಮಾರು 4,000 ಗ್ರಾಮ ಪಂಚಾಯತ್‌ಗಳಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಸ್ವ-ಸಹಾಯ ಗುಂಪುಗಳನ್ನು (ಸ್ವಚ್ಛತಾ ವಾಹಿನಿಗಳು) ರಾಜ್ಯದ ಎಲ್ಲಾ 6,000 ಗ್ರಾಮ ಪಂಚಾಯತ್‌ಗಳಿಗೂ ವಿಸ್ತರಿಸಿ, ಅವರಿಗೆ ಸೂಕ್ತ ತರಬೇತಿ ನೀಡಬೇಕು. ಸರ್ವೋಚ್ಚ ನ್ಯಾಯಾಲಯವು ಈ ನಿಯಮಗಳ ಪಾಲನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ನಿಯಮಗಳನ್ನು ಸರಿಯಾಗಿ ಪಾಲಿಸದಿದ್ದರೆ ಸರ್ಕಾರ ಮತ್ತು ಸಾರ್ವಜನಿಕ ವಲಯಕ್ಕೆ ಬೀಳಬಹುದಾದ ದಂಡವನ್ನು ತಪ್ಪಿಸಲು ಇದು ಅನಿವಾರ್ಯವಾಗಿದೆ ಎಂದು ಎಚ್ಚರಿಸಿದರು. ಎಲ್ಲಾ ಬೃಹತ್ ಪ್ರಮಾಣದ ತ್ಯಾಜ್ಯ ಉತ್ಪಾದಕರನ್ನು ಕಡ್ಡಾಯವಾಗಿ ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಸಬೇಕು ಹಾಗೂ ಅವರಿಗೆ ತ್ಯಾಜ್ಯ ಸಂಗ್ರಹಣೆ, ಸಂಸ್ಕರಣೆ ಮತ್ತು ಉಳಿದಿರುವ ತ್ಯಾಜ್ಯದ ಬಗ್ಗೆ ಸ್ಪಷ್ಟ ತಿಳುವಳಿಕೆ ನೀಡಬೇಕು. ಹೆಚ್ಚು ತ್ಯಾಜ್ಯ ಉತ್ಪಾದನೆಯಾಗುವ ಸ್ಥಳಗಳಲ್ಲಿ ವೈಜ್ಞಾನಿಕ ಕಸ ವಿಂಗಡಣೆಗೆ ಆದ್ಯತೆ ನೀಡಬೇಕು ಮತ್ತು ಜೈವಿಕ ಶಕ್ತಿ ಉತ್ಪಾದನಾ ಘಟಕಗಳನ್ನು ನಿರ್ಮಿಸಿಕೊಳ್ಳಲು ಪ್ರೇರೇಪಿಸಬೇಕು. ಪ್ಲಾಸ್ಟಿಕ್ ಬಾಟಲ್ ತ್ಯಾಜ್ಯ, ಸ್ಯಾನಿಟರಿ ತ್ಯಾಜ್ಯ ಮತ್ತು ಬಯೋ-ಮೆಡಿಕಲ್ ತ್ಯಾಜ್ಯಗಳನ್ನು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಎಂಪ್ಯಾನಲ್ ಆಗಿರುವ ಅಧಿಕೃತ ಏಜೆನ್ಸಿಗಳ ಮೂಲಕ ಸಮರ್ಪಕವಾಗಿ ವಿಲೇವಾರಿ ಮಾಡಬೇಕು. 'ವೇಸ್ಟ್ ಟು ಎನರ್ಜಿ' ಮತ್ತು 'ವೇಸ್ಟ್ ಟು ವೆಲ್ತ್' ಉತ್ಪಾದನೆಗೆ ಖಾಸಗಿ ಉದ್ಯಮಿಗಳನ್ನು ಒಳಗೊಂಡು ಹೆಚ್ಚಿನ ಆದ್ಯತೆ ನೀಡಬೇಕು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಕೈಗಾರಿಕಾ ಅಸೋಸಿಯೇಷನ್‌ಗಳೊಂದಿಗೆ ಚರ್ಚಿಸಿ ವಿಕೇಂದ್ರೀಕೃತ ತ್ಯಾಜ್ಯ ವಿನಿಮಯಕ್ಕೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು. ಗೋಶಾಲೆಯಂತಹ ಸ್ಥಳಗಳಲ್ಲಿ ಹಸಿ ಕಸವನ್ನು ಸಮರ್ಪಕವಾಗಿ ನಿರ್ವಹಿಸಬೇಕು. ದ್ರವ ತ್ಯಾಜ್ಯ ನಿರ್ವಹಣೆಗಾಗಿ ಒಳಚರಂಡಿ ನೀರಿನ ಮರುಬಳಕೆ ನೀತಿಯನ್ನು ಬಳಸಿಕೊಳ್ಳಬಹುದು; ಈ ನಿಟ್ಟಿನಲ್ಲಿ ಸೂಕ್ತ ತರಬೇತಿ ಮತ್ತು ತಂತ್ರಜ್ಞಾನವನ್ನು ಒದಗಿಸಬೇಕು. ಕೈಗಾರಿಕೆಗಳಲ್ಲಿ ಸಂಸ್ಕರಿಸಿದ ನೀರನ್ನು ಮಾತ್ರ ಬಳಸುವಂತೆ ನಿಯಮ ರೂಪಿಸಿ, ಕುಡಿಯುವ ನೀರನ್ನು ಕೈಗಾರಿಕಾ ಉದ್ದೇಶಗಳಿಗೆ ಬಳಸುವುದನ್ನು ಕಡ್ಡಾಯವಾಗಿ ನಿಷೇಧಿಸಬೇಕು. ಪರಿಸರಕ್ಕೆ ಮಾರಕವಾಗಿರುವ ವಸ್ತುಗಳ ಬಳಕೆಯನ್ನು ಕಡಿಮೆ ಮಾಡಲು ಪರ್ಯಾಯ ಹಸಿರು ಉತ್ಪನ್ನಗಳನ್ನು ಉತ್ಪಾದಿಸುವ ಉದ್ಯಮಿಗಳನ್ನು ಪ್ರೋತ್ಸಾಹಿಸಬೇಕು ಮತ್ತು ಅವು ಮಾರುಕಟ್ಟೆಯಲ್ಲಿ ಸುಲಭವಾಗಿ ದೊರೆಯುವಂತೆ ಮಾಡಬೇಕು. ಕಸದಿಂದ ತಯಾರಿಸಿದ ಉಪ ಉತ್ಪನ್ನಗಳನ್ನು ಮಾರಾಟ ಮಾಡಲು ವ್ಯವಸ್ಥಿತ ಮಾರುಕಟ್ಟೆ ಮತ್ತು ಸೂಕ್ತ ಬ್ರ್ಯಾಂಡಿಂಗ್ ವ್ಯವಸ್ಥೆಯನ್ನು ಕಲ್ಪಿಸಬೇಕು. ಸಾರ್ವಜನಿಕ ಜಾಗೃತಿಗಾಗಿ, ಹಳ್ಳಿಗಳಲ್ಲಿ ಸ್ವಚ್ಛತಾ ಕಾರ್ಯಕ್ರಮಗಳನ್ನು ಜನಸಾಮಾನ್ಯರ ಹಬ್ಬದಂತೆ ಆಚರಿಸುವ ಮೂಲಕ ಕಸ ವಿಂಗಡಣೆಯ ಬಗ್ಗೆ ಅರಿವು ಮೂಡಿಸಬೇಕು. ಇದಕ್ಕಾಗಿ ತಳಮಟ್ಟದ ಐಇಸಿ ಚಟುವಟಿಕೆಗಳನ್ನು ತೀವ್ರಗೊಳಿಸಬೇಕು ಹಾಗೂ ಶಾಲಾ ಹಂತದಲ್ಲಿಯೇ ಡಿಜಿಟಲ್ ಮಾಧ್ಯಮಗಳ ಮೂಲಕ ವಿದ್ಯಾರ್ಥಿಗಳಿಗೆ ಸ್ವಚ್ಛತೆಯ ಬಗ್ಗೆ ತರಬೇತಿ ನೀಡಿ, ಈ ಅಭಿಯಾನದಲ್ಲಿ ಅವರನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಇದೇ ಸಂದರ್ಭದಲ್ಲಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಆಯುಕ್ತಾಲಯವು ಸಿದ್ಧಪಡಿಸಿದ ನೂತನ ಘನ ತ್ಯಾಜ್ಯ ನಿರ್ವಹಣೆ ನಿಯಮಗಳು-2026ರ ಕುರಿತ ವಿಶೇಷ ಪ್ರಚಾರ ಸಾಮಗ್ರಿಯನ್ನು ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಅಧಿಕೃತವಾಗಿ ಲೋಕಾರ್ಪಣೆ ಮಾಡಿದರು. ಗ್ರಾಮೀಣಾಭಿವೃದ್ಧಿ ಇಲಾಖೆಯ ಆಯುಕ್ತರಾದ ಫೌಜಿಯಾ ತರನ್ನುಮ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಘನ ತ್ಯಾಜ್ಯ ನಿರ್ವಹಣೆ ನಿಯಮಗಳು-2026ರ ಪ್ರಕಾರ ಪ್ರತಿಯೊಂದು ಗ್ರಾಮ ಪಂಚಾಯಿತಿಯಲ್ಲಿ ಸಮರ್ಪಕ ನಿರ್ವಹಣಾ ನಿಯಮಗಳನ್ನು ಅಳವಡಿಸಿಕೊಳ್ಳಬೇಕಿದೆ ಎಂದು ತಿಳಿಸಿ, ರಾಜ್ಯದ ಪ್ರಸಕ್ತ ಪ್ರಗತಿಯ ಅಂಕಿ-ಅಂಶಗಳನ್ನು ಸಭೆಯ ಮುಂದಿಟ್ಟರು. ಅದರಂತೆ, ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಮೂಲಸೌಕರ್ಯ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು, ಒಟ್ಟು 5,959 ಎಸ್.ವಿ.ಎಂ ಘಟಕಗಳನ್ನು ನಿರ್ಮಿಸಲಾಗಿದೆ. ಪ್ರತಿ ವರ್ಷ 4,252 ಟಿಪಿಡಿ (ಟನ್ ಪ್ರತಿ ದಿನ) ಸಂಸ್ಕರಣಾ ಸಾಮರ್ಥ್ಯದ ಕಸವನ್ನು ವಿಲೇವಾರಿ ಮಾಡಲಾಗುತ್ತಿದೆ. ರಾಜ್ಯದಲ್ಲಿ ಒಟ್ಟು 7,312 ತ್ಯಾಜ್ಯ ಸಂಗ್ರಹಣಾ ವಾಹನಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿವೆ. 16,992 ಗ್ರಾಮಗಳಲ್ಲಿ ಒಣ ಕಸ ಸಂಗ್ರಹಣೆಗಾಗಿ ವ್ಯವಸ್ಥಿತ ಕ್ರಮ ಕೈಗೊಳ್ಳಲಾಗಿದೆ. ಈ ಬೃಹತ್ ನಿರ್ವಹಣೆಗಾಗಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಒಟ್ಟು 5,501 ಸ್ವಚ್ಛ ವಾಹಿನಿಗಳನ್ನು ನಿಯೋಜಿಸಿಕೊಳ್ಳಲಾಗಿದೆ. ಈ ಉನ್ನತ ಮಟ್ಟದ ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕಾರ್ಯದರ್ಶಿ ಡಾ. ಸಮೀರ್ ಶುಕ್ಲಾ, ಪಂಚಾಯತ್ ರಾಜ್ ಕಾರ್ಯದರ್ಶಿ ರಂದೀಪ್ ಡಿ, ಆರ್‌ಡಿಡಬ್ಲ್ಯೂಎಸ್‌ಡಿ ಉಪಕಾರ್ಯದರ್ಶಿ (ಅಭಿವೃದ್ಧಿ) ಎಸ್.ಸಿ. ಮಹೇಶ್, ಉಪಕಾರ್ಯದರ್ಶಿ (ಆಡಳಿತ) ಜಾಫರ್‌ಶರೀಫ್ ಸುತಾರ, ಯೋಜನಾಧಿಕಾರಿ ಸ್ನೇಹಲತಾ, ರಾಜ್ಯದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಎಸ್‌ವಿಎಂ ನೋಡಲ್ ಅಧಿಕಾರಿಗಳು, ಎಲ್ಲಾ ಇಂಜಿನಿಯರ್‌ಗಳು, ಜಿಲ್ಲಾ ಎಸ್‌ಬಿಎಂಜಿ ಸಮಾಲೋಚಕರು ಮತ್ತು ಇತರರು ಉಪಸ್ಥಿತರಿದ್ದರು.

4 hrs ago
user_Savitha
Savitha
ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
4 hrs ago
03bc3620-15b3-43ef-9fe2-78e734c0caf0

ಕರ್ನಾಟಕವನ್ನು ಘನ ತ್ಯಾಜ್ಯ ನಿರ್ವಹಣೆಯಲ್ಲಿ ದೇಶದಲ್ಲೇ ಒಂದು “ಮಾದರಿ ರಾಜ್ಯ”ವನ್ನಾಗಿ ಮಾಡಲು ಎಲ್ಲಾ ಅಧಿಕಾರಿಗಳು ಮತ್ತು ಸಾರ್ವಜನಿಕರು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಕರೆ ನೀಡಿದ್ದಾರೆ. ಬೆಂಗಳೂರಿನ ವಿಧಾನಸೌಧದಲ್ಲಿ ಘನ ತ್ಯಾಜ್ಯ ನಿರ್ವಹಣೆ ನಿಯಮಗಳು-2026ರ ಅನುಷ್ಠಾನ ಕುರಿತು ನಡೆದ ರಾಜ್ಯ ಮಟ್ಟದ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಮಾನ್ಯ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಈಗಾಗಲೇ ದೇಶದ ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿ, ಈ ನಿಯಮಗಳ ಕಟ್ಟುನಿಟ್ಟಿನ ಜಾರಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು. ಕೇಂದ್ರ ಸರ್ಕಾರವು ಈ ನಿಯಮಗಳ ಯಶಸ್ವಿ ಅನುಷ್ಠಾನದ ಹೊಣೆಗಾರಿಕೆಯನ್ನು ರಾಜ್ಯಗಳ ಐದು ಜವಾಬ್ದಾರಿಯುತ ಕಾರ್ಯದರ್ಶಿಗಳಿಗೆ ನೀಡಿದ್ದು, ಯಾವುದೇ ರೀತಿಯ ನಿರ್ಲಕ್ಷ್ಯ ವಹಿಸದೆ ಎಲ್ಲಾ ಹಂತಗಳಲ್ಲಿಯೂ ಸಂಪೂರ್ಣ ಅರಿವು ಮೂಡಿಸುವಂತೆ ಮತ್ತು ಸಂಬಂಧಪಟ್ಟವರು ತಮ್ಮ ಜವಾಬ್ದಾರಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಿದರು. ಮನೆಗಳಲ್ಲಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿದಿನ ಉತ್ಪತ್ತಿಯಾಗುವ ಸಾವಿರಾರು ಟಿಪಿಡಿ ಘನ ತ್ಯಾಜ್ಯವನ್ನು ಪರಿಣಾಮಕಾರಿಯಾಗಿ ನಿರ್ವಹಿಸದಿದ್ದರೆ ಪರಿಸರಕ್ಕೆ ಭಾರಿ ಹಾನಿಯಾಗಬಹುದು. ಆದ್ದರಿಂದ, ಮನೆ-ಮನೆ ಕಸ ಸಂಗ್ರಹಣೆಗೆ ಹೊಸ ನಿಯಮಗಳ ಪ್ರಕಾರ 4 ರೀತಿಯ ವಿಂಗಡಣೆಯನ್ನು ಜಾರಿಗೆ ತರಬೇಕು. ವಿಂಗಡಿಸಿದ ಕಸವನ್ನು ಪ್ರತ್ಯೇಕವಾಗಿ ಸಂಸ್ಕರಣಾ ಘಟಕಗಳಿಗೆ ತಲುಪಿಸಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಸಮಗ್ರ ಮೇಲ್ವಿಚಾರಣಾ ತಂತ್ರಜ್ಞಾನ ಹಾಗೂ ಮ್ಯಾಪಿಂಗ್ ವ್ಯವಸ್ಥೆ ರೂಪಿಸಬೇಕು. ಇದರ ಜೊತೆಗೆ, ಸುಮಾರು 4,000 ಗ್ರಾಮ ಪಂಚಾಯತ್‌ಗಳಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಸ್ವ-ಸಹಾಯ ಗುಂಪುಗಳನ್ನು (ಸ್ವಚ್ಛತಾ ವಾಹಿನಿಗಳು) ರಾಜ್ಯದ ಎಲ್ಲಾ 6,000 ಗ್ರಾಮ ಪಂಚಾಯತ್‌ಗಳಿಗೂ ವಿಸ್ತರಿಸಿ, ಅವರಿಗೆ ಸೂಕ್ತ ತರಬೇತಿ ನೀಡಬೇಕು. ಸರ್ವೋಚ್ಚ ನ್ಯಾಯಾಲಯವು ಈ ನಿಯಮಗಳ ಪಾಲನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ನಿಯಮಗಳನ್ನು ಸರಿಯಾಗಿ ಪಾಲಿಸದಿದ್ದರೆ ಸರ್ಕಾರ ಮತ್ತು ಸಾರ್ವಜನಿಕ ವಲಯಕ್ಕೆ ಬೀಳಬಹುದಾದ ದಂಡವನ್ನು ತಪ್ಪಿಸಲು ಇದು ಅನಿವಾರ್ಯವಾಗಿದೆ ಎಂದು ಎಚ್ಚರಿಸಿದರು. ಎಲ್ಲಾ ಬೃಹತ್ ಪ್ರಮಾಣದ ತ್ಯಾಜ್ಯ ಉತ್ಪಾದಕರನ್ನು ಕಡ್ಡಾಯವಾಗಿ ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಸಬೇಕು ಹಾಗೂ ಅವರಿಗೆ ತ್ಯಾಜ್ಯ ಸಂಗ್ರಹಣೆ, ಸಂಸ್ಕರಣೆ ಮತ್ತು ಉಳಿದಿರುವ ತ್ಯಾಜ್ಯದ ಬಗ್ಗೆ ಸ್ಪಷ್ಟ ತಿಳುವಳಿಕೆ ನೀಡಬೇಕು. ಹೆಚ್ಚು ತ್ಯಾಜ್ಯ ಉತ್ಪಾದನೆಯಾಗುವ ಸ್ಥಳಗಳಲ್ಲಿ ವೈಜ್ಞಾನಿಕ ಕಸ ವಿಂಗಡಣೆಗೆ ಆದ್ಯತೆ ನೀಡಬೇಕು ಮತ್ತು ಜೈವಿಕ ಶಕ್ತಿ ಉತ್ಪಾದನಾ ಘಟಕಗಳನ್ನು ನಿರ್ಮಿಸಿಕೊಳ್ಳಲು ಪ್ರೇರೇಪಿಸಬೇಕು. ಪ್ಲಾಸ್ಟಿಕ್ ಬಾಟಲ್ ತ್ಯಾಜ್ಯ, ಸ್ಯಾನಿಟರಿ ತ್ಯಾಜ್ಯ ಮತ್ತು ಬಯೋ-ಮೆಡಿಕಲ್ ತ್ಯಾಜ್ಯಗಳನ್ನು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಎಂಪ್ಯಾನಲ್ ಆಗಿರುವ ಅಧಿಕೃತ ಏಜೆನ್ಸಿಗಳ ಮೂಲಕ ಸಮರ್ಪಕವಾಗಿ ವಿಲೇವಾರಿ ಮಾಡಬೇಕು. 'ವೇಸ್ಟ್ ಟು ಎನರ್ಜಿ' ಮತ್ತು 'ವೇಸ್ಟ್ ಟು ವೆಲ್ತ್' ಉತ್ಪಾದನೆಗೆ ಖಾಸಗಿ ಉದ್ಯಮಿಗಳನ್ನು ಒಳಗೊಂಡು ಹೆಚ್ಚಿನ ಆದ್ಯತೆ ನೀಡಬೇಕು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಕೈಗಾರಿಕಾ ಅಸೋಸಿಯೇಷನ್‌ಗಳೊಂದಿಗೆ ಚರ್ಚಿಸಿ ವಿಕೇಂದ್ರೀಕೃತ ತ್ಯಾಜ್ಯ ವಿನಿಮಯಕ್ಕೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು. ಗೋಶಾಲೆಯಂತಹ ಸ್ಥಳಗಳಲ್ಲಿ ಹಸಿ ಕಸವನ್ನು ಸಮರ್ಪಕವಾಗಿ ನಿರ್ವಹಿಸಬೇಕು. ದ್ರವ ತ್ಯಾಜ್ಯ ನಿರ್ವಹಣೆಗಾಗಿ ಒಳಚರಂಡಿ ನೀರಿನ ಮರುಬಳಕೆ ನೀತಿಯನ್ನು ಬಳಸಿಕೊಳ್ಳಬಹುದು; ಈ ನಿಟ್ಟಿನಲ್ಲಿ ಸೂಕ್ತ ತರಬೇತಿ ಮತ್ತು ತಂತ್ರಜ್ಞಾನವನ್ನು ಒದಗಿಸಬೇಕು. ಕೈಗಾರಿಕೆಗಳಲ್ಲಿ ಸಂಸ್ಕರಿಸಿದ ನೀರನ್ನು ಮಾತ್ರ ಬಳಸುವಂತೆ ನಿಯಮ ರೂಪಿಸಿ, ಕುಡಿಯುವ ನೀರನ್ನು ಕೈಗಾರಿಕಾ ಉದ್ದೇಶಗಳಿಗೆ ಬಳಸುವುದನ್ನು ಕಡ್ಡಾಯವಾಗಿ ನಿಷೇಧಿಸಬೇಕು. ಪರಿಸರಕ್ಕೆ ಮಾರಕವಾಗಿರುವ ವಸ್ತುಗಳ ಬಳಕೆಯನ್ನು ಕಡಿಮೆ ಮಾಡಲು ಪರ್ಯಾಯ ಹಸಿರು ಉತ್ಪನ್ನಗಳನ್ನು ಉತ್ಪಾದಿಸುವ ಉದ್ಯಮಿಗಳನ್ನು ಪ್ರೋತ್ಸಾಹಿಸಬೇಕು ಮತ್ತು ಅವು ಮಾರುಕಟ್ಟೆಯಲ್ಲಿ ಸುಲಭವಾಗಿ ದೊರೆಯುವಂತೆ ಮಾಡಬೇಕು. ಕಸದಿಂದ ತಯಾರಿಸಿದ ಉಪ ಉತ್ಪನ್ನಗಳನ್ನು ಮಾರಾಟ ಮಾಡಲು ವ್ಯವಸ್ಥಿತ ಮಾರುಕಟ್ಟೆ ಮತ್ತು ಸೂಕ್ತ ಬ್ರ್ಯಾಂಡಿಂಗ್ ವ್ಯವಸ್ಥೆಯನ್ನು ಕಲ್ಪಿಸಬೇಕು. ಸಾರ್ವಜನಿಕ ಜಾಗೃತಿಗಾಗಿ, ಹಳ್ಳಿಗಳಲ್ಲಿ ಸ್ವಚ್ಛತಾ ಕಾರ್ಯಕ್ರಮಗಳನ್ನು ಜನಸಾಮಾನ್ಯರ ಹಬ್ಬದಂತೆ ಆಚರಿಸುವ ಮೂಲಕ ಕಸ ವಿಂಗಡಣೆಯ ಬಗ್ಗೆ ಅರಿವು ಮೂಡಿಸಬೇಕು. ಇದಕ್ಕಾಗಿ ತಳಮಟ್ಟದ ಐಇಸಿ ಚಟುವಟಿಕೆಗಳನ್ನು ತೀವ್ರಗೊಳಿಸಬೇಕು ಹಾಗೂ ಶಾಲಾ ಹಂತದಲ್ಲಿಯೇ ಡಿಜಿಟಲ್ ಮಾಧ್ಯಮಗಳ ಮೂಲಕ ವಿದ್ಯಾರ್ಥಿಗಳಿಗೆ ಸ್ವಚ್ಛತೆಯ ಬಗ್ಗೆ ತರಬೇತಿ ನೀಡಿ, ಈ ಅಭಿಯಾನದಲ್ಲಿ ಅವರನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಇದೇ ಸಂದರ್ಭದಲ್ಲಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಆಯುಕ್ತಾಲಯವು ಸಿದ್ಧಪಡಿಸಿದ ನೂತನ ಘನ ತ್ಯಾಜ್ಯ ನಿರ್ವಹಣೆ ನಿಯಮಗಳು-2026ರ ಕುರಿತ ವಿಶೇಷ ಪ್ರಚಾರ ಸಾಮಗ್ರಿಯನ್ನು ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಅಧಿಕೃತವಾಗಿ ಲೋಕಾರ್ಪಣೆ ಮಾಡಿದರು. ಗ್ರಾಮೀಣಾಭಿವೃದ್ಧಿ ಇಲಾಖೆಯ ಆಯುಕ್ತರಾದ ಫೌಜಿಯಾ ತರನ್ನುಮ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಘನ ತ್ಯಾಜ್ಯ ನಿರ್ವಹಣೆ ನಿಯಮಗಳು-2026ರ ಪ್ರಕಾರ ಪ್ರತಿಯೊಂದು ಗ್ರಾಮ ಪಂಚಾಯಿತಿಯಲ್ಲಿ ಸಮರ್ಪಕ ನಿರ್ವಹಣಾ ನಿಯಮಗಳನ್ನು ಅಳವಡಿಸಿಕೊಳ್ಳಬೇಕಿದೆ ಎಂದು ತಿಳಿಸಿ, ರಾಜ್ಯದ ಪ್ರಸಕ್ತ ಪ್ರಗತಿಯ ಅಂಕಿ-ಅಂಶಗಳನ್ನು ಸಭೆಯ ಮುಂದಿಟ್ಟರು. ಅದರಂತೆ, ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಮೂಲಸೌಕರ್ಯ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು, ಒಟ್ಟು 5,959 ಎಸ್.ವಿ.ಎಂ ಘಟಕಗಳನ್ನು ನಿರ್ಮಿಸಲಾಗಿದೆ. ಪ್ರತಿ ವರ್ಷ 4,252 ಟಿಪಿಡಿ (ಟನ್ ಪ್ರತಿ ದಿನ) ಸಂಸ್ಕರಣಾ ಸಾಮರ್ಥ್ಯದ ಕಸವನ್ನು ವಿಲೇವಾರಿ ಮಾಡಲಾಗುತ್ತಿದೆ. ರಾಜ್ಯದಲ್ಲಿ ಒಟ್ಟು 7,312 ತ್ಯಾಜ್ಯ ಸಂಗ್ರಹಣಾ ವಾಹನಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿವೆ. 16,992 ಗ್ರಾಮಗಳಲ್ಲಿ ಒಣ ಕಸ ಸಂಗ್ರಹಣೆಗಾಗಿ ವ್ಯವಸ್ಥಿತ ಕ್ರಮ ಕೈಗೊಳ್ಳಲಾಗಿದೆ. ಈ ಬೃಹತ್ ನಿರ್ವಹಣೆಗಾಗಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಒಟ್ಟು 5,501 ಸ್ವಚ್ಛ ವಾಹಿನಿಗಳನ್ನು ನಿಯೋಜಿಸಿಕೊಳ್ಳಲಾಗಿದೆ. ಈ ಉನ್ನತ ಮಟ್ಟದ ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕಾರ್ಯದರ್ಶಿ ಡಾ. ಸಮೀರ್ ಶುಕ್ಲಾ, ಪಂಚಾಯತ್ ರಾಜ್ ಕಾರ್ಯದರ್ಶಿ ರಂದೀಪ್ ಡಿ, ಆರ್‌ಡಿಡಬ್ಲ್ಯೂಎಸ್‌ಡಿ ಉಪಕಾರ್ಯದರ್ಶಿ (ಅಭಿವೃದ್ಧಿ) ಎಸ್.ಸಿ. ಮಹೇಶ್, ಉಪಕಾರ್ಯದರ್ಶಿ (ಆಡಳಿತ) ಜಾಫರ್‌ಶರೀಫ್ ಸುತಾರ, ಯೋಜನಾಧಿಕಾರಿ ಸ್ನೇಹಲತಾ, ರಾಜ್ಯದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಎಸ್‌ವಿಎಂ ನೋಡಲ್ ಅಧಿಕಾರಿಗಳು, ಎಲ್ಲಾ ಇಂಜಿನಿಯರ್‌ಗಳು, ಜಿಲ್ಲಾ ಎಸ್‌ಬಿಎಂಜಿ ಸಮಾಲೋಚಕರು ಮತ್ತು ಇತರರು ಉಪಸ್ಥಿತರಿದ್ದರು.

More news from ಕರ್ನಾಟಕ and nearby areas
  • ಗೋವುಗಳ ವಾಸ್ತವಿಕ ಸ್ಥಿತಿಯನ್ನು ಗಮನಿಸಿದ ನಂತರವೇ ಮಾತನಾಡಬೇಕೆಂದು ಸಾರ್ವಜನಿಕರು ಪುನೀತ್ ಕೆರೆಹಳ್ಳಿ ಅವರ ಸಹಾಯಕನಿಗೆ ತೀವ್ರ ತಿರುಗೇಟು ನೀಡಿದ್ದಾರೆ.
    1
    ಗೋವುಗಳ ವಾಸ್ತವಿಕ ಸ್ಥಿತಿಯನ್ನು ಗಮನಿಸಿದ ನಂತರವೇ ಮಾತನಾಡಬೇಕೆಂದು ಸಾರ್ವಜನಿಕರು ಪುನೀತ್ ಕೆರೆಹಳ್ಳಿ ಅವರ ಸಹಾಯಕನಿಗೆ ತೀವ್ರ ತಿರುಗೇಟು ನೀಡಿದ್ದಾರೆ.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    5 hrs ago
  • ಬಿಗ್‌ಬಾಸ್ ಖ್ಯಾತಿಯ ಜಾನವಿ ಇಂದು ಬೆಳಿಗ್ಗೆ (ಮೇ 30, 2026) ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪಕ್ಷಕ್ಕೆ ಸೇರ್ಪಡೆಯಾದ ತಕ್ಷಣ, ಅವರು ಮಾಜಿ ಪ್ರಧಾನ ಮಂತ್ರಿ ಶ್ರೀ ಎಚ್.ಡಿ. ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಅವರ ಆಶೀರ್ವಾದ ಪಡೆದರು.
    1
    ಬಿಗ್‌ಬಾಸ್ ಖ್ಯಾತಿಯ ಜಾನವಿ ಇಂದು ಬೆಳಿಗ್ಗೆ (ಮೇ 30, 2026) ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪಕ್ಷಕ್ಕೆ ಸೇರ್ಪಡೆಯಾದ ತಕ್ಷಣ, ಅವರು ಮಾಜಿ ಪ್ರಧಾನ ಮಂತ್ರಿ ಶ್ರೀ ಎಚ್.ಡಿ. ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಅವರ ಆಶೀರ್ವಾದ ಪಡೆದರು.
    user_Manish
    Manish
    Local News Reporter ಬೆಂಗಳೂರು ದಕ್ಷಿಣ, ಬೆಂಗಳೂರು ನಗರ, ಕರ್ನಾಟಕ•
    7 hrs ago
  • ಭಾಲ್ಕಿಯಿಂದ ಬಂದ ವರದಿಯ ಪ್ರಕಾರ, ಕಾಂಗ್ರೆಸ್ ಪಕ್ಷದ ನಿಷ್ಠಾವಂತ ನಾಯಕ ಹಾಗೂ ಪ್ರಸ್ತುತ ಅರಣ್ಯ ಸಚಿವರಾಗಿರುವ ಈಶ್ವರ್ ಖಂಡ್ರೆ ಅವರಿಗೆ ಕರ್ನಾಟಕದ ಉಪಮುಖ್ಯಮಂತ್ರಿ (DyCM) ಹುದ್ದೆಯನ್ನು ನೀಡಬೇಕೆಂದು ಕಾಂಗ್ರೆಸ್ ಮುಖಂಡ ವಿಲಾಸ್ ಮೋರೆ ನೇತೃತ್ವದಲ್ಲಿ ಪಕ್ಷದ ಹೈಕಮಾಂಡ್‌ಗೆ ಪ್ರಬಲವಾಗಿ ಒತ್ತಾಯಿಸಲಾಗಿದೆ. ಇತ್ತೀಚೆಗೆ ಮಾಧ್ಯಮಗಳೊಂದಿಗೆ ಮಾತನಾಡಿದ ವಿಲಾಸ್ ಮೋರೆ, ದಶಕಗಳ ರಾಜಕೀಯ ಅನುಭವ ಹೊಂದಿರುವ ಈಶ್ವರ್ ಖಂಡ್ರೆ ಅವರ ಆಡಳಿತಾತ್ಮಕ ಸಾಧನೆ, ಪಕ್ಷದ ಸಂಘಟನಾ ಚಾತುರ್ಯ ಮತ್ತು ನಿಷ್ಠೆಯನ್ನು ಗುರುತಿಸಿ ಅವರಿಗೆ ಸೂಕ್ತ ಸ್ಥಾನಮಾನ ನೀಡಲು ಇದು ಅತ್ಯಂತ ಸೂಕ್ತ ಸಮಯ ಎಂದು ಪ್ರತಿಪಾದಿಸಿದರು. ಖಂಡ್ರೆ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎನ್ನುವುದಕ್ಕೆ ಮುಖಂಡರು ಮೂರು ಪ್ರಮುಖ ಕಾರಣಗಳನ್ನು ಮುಂದಿಟ್ಟಿದ್ದಾರೆ. ಮೊದಲನೆಯದಾಗಿ, ಅರಣ್ಯ ಸಚಿವರಾಗಿ ಸಾವಿರಾರು ಎಕರೆ ಅತಿಕ್ರಮಣಗೊಂಡಿದ್ದ ಅರಣ್ಯ ಭೂಮಿಯನ್ನು ಯಶಸ್ವಿಯಾಗಿ ತೆರವುಗೊಳಿಸಿ ಮತ್ತು ಕರ್ನಾಟಕದ ಹಸಿರು ಹೊದಿಕೆಯನ್ನು ವಿಸ್ತರಿಸಲು 12 ಕೋಟಿ ಸಸಿಗಳನ್ನು ನೆಡುವ ಬೃಹತ್ ಅರಣ್ಯೀಕರಣ ಯೋಜನೆಗೆ ಚಾಲನೆ ನೀಡಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಎರಡನೆಯದಾಗಿ, ಅವರು ತಲೆಮಾರುಗಳಿಂದ ಕಾಂಗ್ರೆಸ್ ಪಕ್ಷಕ್ಕೆ ಸೇವೆ ಸಲ್ಲಿಸುತ್ತಾ ಬಂದಿರುವ ಕುಟುಂಬದಿಂದ ಬಂದಿದ್ದು, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ತಳಮಟ್ಟದಲ್ಲಿ ಪಕ್ಷವನ್ನು ಬಲಪಡಿಸಲು ಶ್ರಮಿಸಿದ್ದಾರೆ ಹಾಗೂ ದಶಕಗಳಿಂದ ಕಾಂಗ್ರೆಸ್ ಸಿದ್ಧಾಂತಕ್ಕೆ ನಿಷ್ಠರಾಗಿದ್ದಾರೆ. ಮೂರನೆಯದಾಗಿ, ಆಡಳಿತಾತ್ಮಕ ಸಾಮರ್ಥ್ಯದ ಜೊತೆಗೆ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಮತ್ತು ಲಿಂಗಾಯತ ಸಮುದಾಯದಲ್ಲಿ ಖಂಡ್ರೆ ಅವರು ಬಲವಾದ ಸಾರ್ವಜನಿಕ ಸಂಪರ್ಕ ಮತ್ತು ಜನಾಕರ್ಷಣೆ ಹೊಂದಿದ್ದು, ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡುವುದರಿಂದ ಪಕ್ಷಕ್ಕೆ ಮತ್ತಷ್ಟು ಬಲ ಬರಲಿದೆ ಎಂದು ತಿಳಿಸಿದ್ದಾರೆ. "ಪಕ್ಷ ಹಾಗೂ ಸಾರ್ವಜನಿಕ ಸೇವೆಗೆ ತಮ್ಮ ಜೀವನವನ್ನೇ ಮುಡುಪಾಗಿಟ್ಟ ನಾಯಕನನ್ನು ಈಶ್ವರ್ ಖಂಡ್ರೆ ಅವರನ್ನು ಕರ್ನಾಟಕದ ಉಪಮುಖ್ಯಮಂತ್ರಿಯಾಗಿ ಉನ್ನತೀಕರಿಸುವ ಮೂಲಕ ಕಾಂಗ್ರೆಸ್ ಹೈಕಮಾಂಡ್ ಅವರ ಕೊಡುಗೆಗಳನ್ನು ಪುರಸ್ಕರಿಸಬೇಕು" ಎಂದು ವಿಲಾಸ್ ಮೋರೆ ಒತ್ತಿ ಹೇಳಿದರು. ಈ ಸಂದರ್ಭದಲ್ಲಿ ಮಾರುತಿ ಬಾವಿಕಟ್ಟೆ, ಓಂಕಾರ್ ಮೋರೆ, ಸುನಿಲ್ ವಂಜ್ರೆ, ಚಂದು ಸಂಪಾಂಗೆ, ನಾರಾಯಣರಾವ್ ಮೋರೆ, ರಾಜಕುಮಾರ್ ಬೌದೆ, ಜೈಪಾಲ್ ಬೋರಳೆ, ಕಿಶನ್ ವಾಘಮಾರೆ, ಬಂಟ್ಟಿ ಸೇರಿದಂತೆ ಕಾಂಗ್ರೆಸ್‌ನ ಹಲವಾರು ಪ್ರಮುಖ ಯುವ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದು, ಈ ಬೇಡಿಕೆಗೆ ಪ್ರಬಲ ಬೆಂಬಲ ಸೂಚಿಸಿದರು.
    1
    ಭಾಲ್ಕಿಯಿಂದ ಬಂದ ವರದಿಯ ಪ್ರಕಾರ, ಕಾಂಗ್ರೆಸ್ ಪಕ್ಷದ ನಿಷ್ಠಾವಂತ ನಾಯಕ ಹಾಗೂ ಪ್ರಸ್ತುತ ಅರಣ್ಯ ಸಚಿವರಾಗಿರುವ ಈಶ್ವರ್ ಖಂಡ್ರೆ ಅವರಿಗೆ ಕರ್ನಾಟಕದ ಉಪಮುಖ್ಯಮಂತ್ರಿ (DyCM) ಹುದ್ದೆಯನ್ನು ನೀಡಬೇಕೆಂದು ಕಾಂಗ್ರೆಸ್ ಮುಖಂಡ ವಿಲಾಸ್ ಮೋರೆ ನೇತೃತ್ವದಲ್ಲಿ ಪಕ್ಷದ ಹೈಕಮಾಂಡ್‌ಗೆ ಪ್ರಬಲವಾಗಿ ಒತ್ತಾಯಿಸಲಾಗಿದೆ.

ಇತ್ತೀಚೆಗೆ ಮಾಧ್ಯಮಗಳೊಂದಿಗೆ ಮಾತನಾಡಿದ ವಿಲಾಸ್ ಮೋರೆ, ದಶಕಗಳ ರಾಜಕೀಯ ಅನುಭವ ಹೊಂದಿರುವ ಈಶ್ವರ್ ಖಂಡ್ರೆ ಅವರ ಆಡಳಿತಾತ್ಮಕ ಸಾಧನೆ, ಪಕ್ಷದ ಸಂಘಟನಾ ಚಾತುರ್ಯ ಮತ್ತು ನಿಷ್ಠೆಯನ್ನು ಗುರುತಿಸಿ ಅವರಿಗೆ ಸೂಕ್ತ ಸ್ಥಾನಮಾನ ನೀಡಲು ಇದು ಅತ್ಯಂತ ಸೂಕ್ತ ಸಮಯ ಎಂದು ಪ್ರತಿಪಾದಿಸಿದರು.

ಖಂಡ್ರೆ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎನ್ನುವುದಕ್ಕೆ ಮುಖಂಡರು ಮೂರು ಪ್ರಮುಖ ಕಾರಣಗಳನ್ನು ಮುಂದಿಟ್ಟಿದ್ದಾರೆ. ಮೊದಲನೆಯದಾಗಿ, ಅರಣ್ಯ ಸಚಿವರಾಗಿ ಸಾವಿರಾರು ಎಕರೆ ಅತಿಕ್ರಮಣಗೊಂಡಿದ್ದ ಅರಣ್ಯ ಭೂಮಿಯನ್ನು ಯಶಸ್ವಿಯಾಗಿ ತೆರವುಗೊಳಿಸಿ ಮತ್ತು ಕರ್ನಾಟಕದ ಹಸಿರು ಹೊದಿಕೆಯನ್ನು ವಿಸ್ತರಿಸಲು 12 ಕೋಟಿ ಸಸಿಗಳನ್ನು ನೆಡುವ ಬೃಹತ್ ಅರಣ್ಯೀಕರಣ ಯೋಜನೆಗೆ ಚಾಲನೆ ನೀಡಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಎರಡನೆಯದಾಗಿ, ಅವರು ತಲೆಮಾರುಗಳಿಂದ ಕಾಂಗ್ರೆಸ್ ಪಕ್ಷಕ್ಕೆ ಸೇವೆ ಸಲ್ಲಿಸುತ್ತಾ ಬಂದಿರುವ ಕುಟುಂಬದಿಂದ ಬಂದಿದ್ದು, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ತಳಮಟ್ಟದಲ್ಲಿ ಪಕ್ಷವನ್ನು ಬಲಪಡಿಸಲು ಶ್ರಮಿಸಿದ್ದಾರೆ ಹಾಗೂ ದಶಕಗಳಿಂದ ಕಾಂಗ್ರೆಸ್ ಸಿದ್ಧಾಂತಕ್ಕೆ ನಿಷ್ಠರಾಗಿದ್ದಾರೆ. ಮೂರನೆಯದಾಗಿ, ಆಡಳಿತಾತ್ಮಕ ಸಾಮರ್ಥ್ಯದ ಜೊತೆಗೆ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಮತ್ತು ಲಿಂಗಾಯತ ಸಮುದಾಯದಲ್ಲಿ ಖಂಡ್ರೆ ಅವರು ಬಲವಾದ ಸಾರ್ವಜನಿಕ ಸಂಪರ್ಕ ಮತ್ತು ಜನಾಕರ್ಷಣೆ ಹೊಂದಿದ್ದು, ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡುವುದರಿಂದ ಪಕ್ಷಕ್ಕೆ ಮತ್ತಷ್ಟು ಬಲ ಬರಲಿದೆ ಎಂದು ತಿಳಿಸಿದ್ದಾರೆ.

"ಪಕ್ಷ ಹಾಗೂ ಸಾರ್ವಜನಿಕ ಸೇವೆಗೆ ತಮ್ಮ ಜೀವನವನ್ನೇ ಮುಡುಪಾಗಿಟ್ಟ ನಾಯಕನನ್ನು ಈಶ್ವರ್ ಖಂಡ್ರೆ ಅವರನ್ನು ಕರ್ನಾಟಕದ ಉಪಮುಖ್ಯಮಂತ್ರಿಯಾಗಿ ಉನ್ನತೀಕರಿಸುವ ಮೂಲಕ ಕಾಂಗ್ರೆಸ್ ಹೈಕಮಾಂಡ್ ಅವರ ಕೊಡುಗೆಗಳನ್ನು ಪುರಸ್ಕರಿಸಬೇಕು" ಎಂದು ವಿಲಾಸ್ ಮೋರೆ ಒತ್ತಿ ಹೇಳಿದರು. ಈ ಸಂದರ್ಭದಲ್ಲಿ ಮಾರುತಿ ಬಾವಿಕಟ್ಟೆ, ಓಂಕಾರ್ ಮೋರೆ, ಸುನಿಲ್ ವಂಜ್ರೆ, ಚಂದು ಸಂಪಾಂಗೆ, ನಾರಾಯಣರಾವ್ ಮೋರೆ, ರಾಜಕುಮಾರ್ ಬೌದೆ, ಜೈಪಾಲ್ ಬೋರಳೆ, ಕಿಶನ್ ವಾಘಮಾರೆ, ಬಂಟ್ಟಿ ಸೇರಿದಂತೆ ಕಾಂಗ್ರೆಸ್‌ನ ಹಲವಾರು ಪ್ರಮುಖ ಯುವ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದು, ಈ ಬೇಡಿಕೆಗೆ ಪ್ರಬಲ ಬೆಂಬಲ ಸೂಚಿಸಿದರು.
    user_JB NEWS ಕನ್ನಡ
    JB NEWS ಕನ್ನಡ
    Bengaluru North, Bengaluru Urban•
    17 hrs ago
  • ಹಾಂಗ್ ಕಾಂಗ್‌ನಲ್ಲಿ 2026ರಲ್ಲಿ ನಡೆದ U-20 ಏಷ್ಯನ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ 19 ವರ್ಷದ ಪೂಜಾ ಅವರು ಹೈಜಂಪ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಐತಿಹಾಸಿಕ ವಿಜಯ ಸಾಧಿಸಿದ್ದಾರೆ. ಈ ವಿಜಯದೊಂದಿಗೆ, ಪೂಜಾ 1.93 ಮೀಟರ್ ಜಿಗಿತವನ್ನು ದಾಖಲಿಸಿ, ಹಿರಿಯರ ರಾಷ್ಟ್ರೀಯ ದಾಖಲೆಯನ್ನು ಸಹ ಮುರಿದರು. ಈ ಸಾಧನೆಯು ಭಾರತಕ್ಕೆ ವಿಶ್ವ ವೇದಿಕೆಯಲ್ಲಿ ಹೆಮ್ಮೆ ತಂದಿದ್ದು, ತ್ರಿವರ್ಣ ಧ್ವಜವನ್ನು ಹಾರಿಸುವಂತಹ ಕ್ಷಣವನ್ನು ಸೃಷ್ಟಿಸಿದೆ. ಈ ಹೆಮ್ಮೆಯ ಕ್ಷಣವು ಪ್ರತಿಯೊಬ್ಬ ಭಾರತೀಯರ ಹೃದಯದಲ್ಲಿ ದೇಶಭಕ್ತಿಯ ರೋಮಾಂಚನವನ್ನು ಮೂಡಿಸಿದೆ. ಪೂಜಾ ಅವರ ಈ ಐತಿಹಾಸಿಕ ಗೆಲುವಿಗೆ ಒಂದು ಸಲಾಮ್ ಸಲ್ಲಿಸಲಾಗಿದೆ.
    2
    ಹಾಂಗ್ ಕಾಂಗ್‌ನಲ್ಲಿ 2026ರಲ್ಲಿ ನಡೆದ U-20 ಏಷ್ಯನ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ 19 ವರ್ಷದ ಪೂಜಾ ಅವರು ಹೈಜಂಪ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಐತಿಹಾಸಿಕ ವಿಜಯ ಸಾಧಿಸಿದ್ದಾರೆ. ಈ ವಿಜಯದೊಂದಿಗೆ, ಪೂಜಾ 1.93 ಮೀಟರ್ ಜಿಗಿತವನ್ನು ದಾಖಲಿಸಿ, ಹಿರಿಯರ ರಾಷ್ಟ್ರೀಯ ದಾಖಲೆಯನ್ನು ಸಹ ಮುರಿದರು. ಈ ಸಾಧನೆಯು ಭಾರತಕ್ಕೆ ವಿಶ್ವ ವೇದಿಕೆಯಲ್ಲಿ ಹೆಮ್ಮೆ ತಂದಿದ್ದು, ತ್ರಿವರ್ಣ ಧ್ವಜವನ್ನು ಹಾರಿಸುವಂತಹ ಕ್ಷಣವನ್ನು ಸೃಷ್ಟಿಸಿದೆ.

ಈ ಹೆಮ್ಮೆಯ ಕ್ಷಣವು ಪ್ರತಿಯೊಬ್ಬ ಭಾರತೀಯರ ಹೃದಯದಲ್ಲಿ ದೇಶಭಕ್ತಿಯ ರೋಮಾಂಚನವನ್ನು ಮೂಡಿಸಿದೆ. ಪೂಜಾ ಅವರ ಈ ಐತಿಹಾಸಿಕ ಗೆಲುವಿಗೆ ಒಂದು ಸಲಾಮ್ ಸಲ್ಲಿಸಲಾಗಿದೆ.
    user_Surendra Shimoga
    Surendra Shimoga
    Shuru News Publisher Bengaluru South, Bengaluru Urban•
    18 hrs ago
  • ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕೆ.ಎಚ್. ಮುನಿಯಪ್ಪ ಅವರಿಗೆ ಉಪಮುಖ್ಯಮಂತ್ರಿ (ಡಿಸಿಎಂ) ಸ್ಥಾನ ನೀಡುವಂತೆ ಅವರ ಬೆಂಬಲಿಗರು ತೀವ್ರವಾಗಿ ಆಗ್ರಹಿಸಿದ್ದಾರೆ. ಏರ್‌ಪೋರ್ಟ್‌ನ ಟರ್ಮಿನಲ್ 1ರ ಬಳಿ ಜಮಾಯಿಸಿದ ಬೆಂಬಲಿಗರು, ಕೆ.ಎಚ್. ಮುನಿಯಪ್ಪ ಪರ ಘೋಷಣೆಗಳನ್ನು ಕೂಗುವ ಮೂಲಕ ಶಕ್ತಿ ಪ್ರದರ್ಶನಕ್ಕೆ ಮುಂದಾದರು. ಕೆಲವೇ ನಿಮಿಷಗಳಲ್ಲಿ ಕೆಂಪೇಗೌಡ ಏರ್‌ಪೋರ್ಟ್‌ಗೆ ಆಗಮಿಸಲಿರುವ ಸುರ್ಜೆವಾಲಾ ಅವರ ಎದುರು ಈ ಬೇಡಿಕೆಯನ್ನು ಪ್ರಸ್ತುತಪಡಿಸುವುದು ಅವರ ಉದ್ದೇಶವಾಗಿದೆ. ಕೆ.ಎಚ್. ಮುನಿಯಪ್ಪಗೆ ಡಿಸಿಎಂ ಸ್ಥಾನ ನೀಡಬೇಕೆಂಬುದು ಅವರ ಪ್ರಮುಖ ಬೇಡಿಕೆಯಾಗಿದೆ.
    3
    ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕೆ.ಎಚ್. ಮುನಿಯಪ್ಪ ಅವರಿಗೆ ಉಪಮುಖ್ಯಮಂತ್ರಿ (ಡಿಸಿಎಂ) ಸ್ಥಾನ ನೀಡುವಂತೆ ಅವರ ಬೆಂಬಲಿಗರು ತೀವ್ರವಾಗಿ ಆಗ್ರಹಿಸಿದ್ದಾರೆ. ಏರ್‌ಪೋರ್ಟ್‌ನ ಟರ್ಮಿನಲ್ 1ರ ಬಳಿ ಜಮಾಯಿಸಿದ ಬೆಂಬಲಿಗರು, ಕೆ.ಎಚ್. ಮುನಿಯಪ್ಪ ಪರ ಘೋಷಣೆಗಳನ್ನು ಕೂಗುವ ಮೂಲಕ ಶಕ್ತಿ ಪ್ರದರ್ಶನಕ್ಕೆ ಮುಂದಾದರು. ಕೆಲವೇ ನಿಮಿಷಗಳಲ್ಲಿ ಕೆಂಪೇಗೌಡ ಏರ್‌ಪೋರ್ಟ್‌ಗೆ ಆಗಮಿಸಲಿರುವ ಸುರ್ಜೆವಾಲಾ ಅವರ ಎದುರು ಈ ಬೇಡಿಕೆಯನ್ನು ಪ್ರಸ್ತುತಪಡಿಸುವುದು ಅವರ ಉದ್ದೇಶವಾಗಿದೆ. ಕೆ.ಎಚ್. ಮುನಿಯಪ್ಪಗೆ ಡಿಸಿಎಂ ಸ್ಥಾನ ನೀಡಬೇಕೆಂಬುದು ಅವರ ಪ್ರಮುಖ ಬೇಡಿಕೆಯಾಗಿದೆ.
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    13 hrs ago
  • ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಪಟ್ಟಣದಲ್ಲಿ ಯಾದವ ಸಮಾಜದ ಸಾಧಕರಿಗೆ ವ್ಯಾಪಕ ಸನ್ಮಾನ ಸಮಾರಂಭ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮವು ಸಾಧಕರಿಗೆ ಹರಿದುಬಂದ ಗೌರವದ ಮಹಾಪೂರವಾಗಿತ್ತು. ಝೆಡ್ ನ್ಯೂಸ್‌ನ ವ್ಯವಸ್ಥಾಪಕ ನಿರ್ದೇಶಕ ಮನ್ಸೂರ್ ಅಹ್ಮದ್ ಅವರು ಚಿಂತಾಮಣಿ ಪಟ್ಟಣದೊಂದಿಗೆ ಸಂಬಂಧ ಹೊಂದಿದ್ದಾರೆ.
    1
    ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಪಟ್ಟಣದಲ್ಲಿ ಯಾದವ ಸಮಾಜದ ಸಾಧಕರಿಗೆ ವ್ಯಾಪಕ ಸನ್ಮಾನ ಸಮಾರಂಭ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮವು ಸಾಧಕರಿಗೆ ಹರಿದುಬಂದ ಗೌರವದ ಮಹಾಪೂರವಾಗಿತ್ತು. ಝೆಡ್ ನ್ಯೂಸ್‌ನ ವ್ಯವಸ್ಥಾಪಕ ನಿರ್ದೇಶಕ ಮನ್ಸೂರ್ ಅಹ್ಮದ್ ಅವರು ಚಿಂತಾಮಣಿ ಪಟ್ಟಣದೊಂದಿಗೆ ಸಂಬಂಧ ಹೊಂದಿದ್ದಾರೆ.
    user_Md mansoor
    Md mansoor
    Local News Reporter ಚಿಂತಾಮಣಿ, ಚಿಕ್ಕಬಳ್ಳಾಪುರ, ಕರ್ನಾಟಕ•
    4 hrs ago
  • ಪೊಲೀಸ್ ಅಧಿಕಾರಿಯೊಬ್ಬರು ಮದ್ಯಪಾನ ಮಾಡಿ ಬಿದ್ದಿದ್ದ ಘಟನೆ ಸಾರ್ವಜನಿಕ ವಲಯದಲ್ಲಿ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಈ ಬೆಳವಣಿಗೆಯಿಂದಾಗಿ ಖಾಕಿ ಸಮವಸ್ತ್ರದ ಮೇಲಿನ ಸಾರ್ವಜನಿಕರ ನಂಬಿಕೆ ಕುರಿತು ಗಂಭೀರ ಪ್ರಶ್ನೆಗಳು ಎದ್ದಿವೆ.
    1
    ಪೊಲೀಸ್ ಅಧಿಕಾರಿಯೊಬ್ಬರು ಮದ್ಯಪಾನ ಮಾಡಿ ಬಿದ್ದಿದ್ದ ಘಟನೆ ಸಾರ್ವಜನಿಕ ವಲಯದಲ್ಲಿ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಈ ಬೆಳವಣಿಗೆಯಿಂದಾಗಿ ಖಾಕಿ ಸಮವಸ್ತ್ರದ ಮೇಲಿನ ಸಾರ್ವಜನಿಕರ ನಂಬಿಕೆ ಕುರಿತು ಗಂಭೀರ ಪ್ರಶ್ನೆಗಳು ಎದ್ದಿವೆ.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    9 hrs ago
  • ಬ್ಯಾಟರಾಯಣಪುರ ಸಂಚಾರ ಪೊಲೀಸ್ ಠಾಣೆಯ ಪಿಸಿ 18416 ಅನೀಲ್ ಅವರು, ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರನ್ನು ಸಮಯಪ್ರಜ್ಞೆಯಿಂದ ರಕ್ಷಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಅಪಾಯವನ್ನು ಅರಿಯದೆ ನೀರಿನ ಸೆಳೆತಕ್ಕೆ ಸಿಲುಕಿದ್ದ ವ್ಯಕ್ತಿಯನ್ನು ಕಂಡು, ಪಿಸಿ ಅನೀಲ್ ಕೂಡಲೇ ಸ್ಪಂದಿಸಿ, ತಮ್ಮ ಪ್ರಾಣದ ಹಂಗು ತೊರೆದು ಆತನನ್ನು ಸುರಕ್ಷಿತವಾಗಿ ದಡಕ್ಕೆ ಎಳೆತಂದರು. ಸದ್ಯ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸ್ ಪೇದೆಯ ಧೈರ್ಯ ಮತ್ತು ಕರ್ತವ್ಯ ಪ್ರಜ್ಞೆಯನ್ನು ಸಾರ್ವಜನಿಕರು ಹಾಗೂ ಮೇಲಧಿಕಾರಿಗಳು ಮುಕ್ತಕಂಠದಿಂದ ಶ್ಲಾಘಿಸುತ್ತಿದ್ದಾರೆ.
    1
    ಬ್ಯಾಟರಾಯಣಪುರ ಸಂಚಾರ ಪೊಲೀಸ್ ಠಾಣೆಯ ಪಿಸಿ 18416 ಅನೀಲ್ ಅವರು, ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರನ್ನು ಸಮಯಪ್ರಜ್ಞೆಯಿಂದ ರಕ್ಷಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಅಪಾಯವನ್ನು ಅರಿಯದೆ ನೀರಿನ ಸೆಳೆತಕ್ಕೆ ಸಿಲುಕಿದ್ದ ವ್ಯಕ್ತಿಯನ್ನು ಕಂಡು, ಪಿಸಿ ಅನೀಲ್ ಕೂಡಲೇ ಸ್ಪಂದಿಸಿ, ತಮ್ಮ ಪ್ರಾಣದ ಹಂಗು ತೊರೆದು ಆತನನ್ನು ಸುರಕ್ಷಿತವಾಗಿ ದಡಕ್ಕೆ ಎಳೆತಂದರು.

ಸದ್ಯ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸ್ ಪೇದೆಯ ಧೈರ್ಯ ಮತ್ತು ಕರ್ತವ್ಯ ಪ್ರಜ್ಞೆಯನ್ನು ಸಾರ್ವಜನಿಕರು ಹಾಗೂ ಮೇಲಧಿಕಾರಿಗಳು ಮುಕ್ತಕಂಠದಿಂದ ಶ್ಲಾಘಿಸುತ್ತಿದ್ದಾರೆ.
    user_Mohan
    Mohan
    ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    12 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.