ಕುಷ್ಟಗಿ ಪಟ್ಟಣದ ಸರ್ಕಾರಿ ಬಾಲಕಿಯರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿರ್ಮಾಣ ಹಂತದಲ್ಲೇ ಸ್ಥಗಿತಗೊಂಡಿರುವ ಕಟ್ಟಡ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಹಾಗೂ ಶಾಲಾ ಕಾಂಪೌಂಡ್ಗೆ ಹೊಂದಿಕೊಂಡು ಇಡಲಾಗಿರುವ ಕಪಾಟುಗಳನ್ನು ತೆರವುಗೊಳಿಸುವಂತೆ ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ (ಎಸ್ಡಿಎಂಸಿ) ಅಧ್ಯಕ್ಷರು ಮತ್ತು ಸದಸ್ಯರು ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಈ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ವ್ಯವಸ್ಥಾಪಕ ಶಿವಶಂಕರಪ್ಪ, ಪುರಸಭೆ ಮುಖ್ಯಾಧಿಕಾರಿ ವೆಂಕಪ್ಪ ಬಿಳಗಿ ಹಾಗೂ ಕುಷ್ಟಗಿ ಪೊಲೀಸ್ ಠಾಣೆ ಅಧಿಕಾರಿಗಳಿಗೆ ಪ್ರತ್ಯೇಕ ಮನವಿ ನೀಡಲಾಗಿದೆ. ಎಸ್ಡಿಎಂಸಿ ಅಧ್ಯಕ್ಷ ಪವಾಡೆಪ್ಪ ಚೌಡ್ಕಿ ಮಾತನಾಡಿ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಯೋಜನೆಯಡಿ ಸುಮಾರು ₹32 ಲಕ್ಷ ವೆಚ್ಚದಲ್ಲಿ ಎರಡು ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಯನ್ನು ನಿರ್ಮಿತಿ ಕೇಂದ್ರದ ಮೂಲಕ ಆರಂಭಿಸಲಾಗಿತ್ತು. ಆದರೆ, ಈ ಕಾಮಗಾರಿ ಕಳೆದ ಒಂದೂವರೆ ವರ್ಷಗಳಿಂದ ಅರ್ಧಕ್ಕೆ ನಿಂತಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ತೀವ್ರ ತೊಂದರೆಯಾಗಿದೆ ಎಂದು ಆರೋಪಿಸಿದ್ದಾರೆ. ಈ ಸಮಸ್ಯೆಯನ್ನು ಹಲವು ಬಾರಿ ಶಾಸಕ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ ಮತ್ತು ಸಂಬಂಧಿತ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಸ್ಪಂದನೆ ದೊರೆತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು. ಪ್ರಸ್ತುತ 2026-27ನೇ ಶೈಕ್ಷಣಿಕ ವರ್ಷದ ತರಗತಿಗಳು ಆರಂಭವಾಗಿದ್ದು, ಶಾಲೆಯಲ್ಲಿ ಕೊಠಡಿಗಳ ಕೊರತೆಯಿಂದ ಪಾಠ ಬೋಧನೆಗೆ ಅಡಚಣೆ ಉಂಟಾಗಿದೆ. ಸರ್ಕಾರದ ಆಂಗ್ಲ ಮಾಧ್ಯಮ ವಿಭಾಗದಲ್ಲಿ ಎಲ್ಕೆಜಿ ಯಿಂದ ಮೂರನೇ ತರಗತಿವರೆಗೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಹೆಚ್ಚುವರಿ ಕೊಠಡಿಗಳ ಅಗತ್ಯ ತುರ್ತಾಗಿ ಎದುರಾಗಿದೆ ಎಂದು ಎಸ್ಡಿಎಂಸಿ ಸದಸ್ಯರು ತಿಳಿಸಿದರು. ಎಸ್ಡಿಎಂಸಿ ಸದಸ್ಯ ಮಲ್ಲಪ್ಪ ಕಂಚಿ ಮಾತನಾಡಿ, ಹಲವು ಬಾರಿ ಮನವಿ ಸಲ್ಲಿಸಿದ್ದರೂ ಕಾಮಗಾರಿ ಪೂರ್ಣಗೊಳಿಸದಿರುವುದು ಬೇಸರದ ಸಂಗತಿಯಾಗಿದೆ. ಕೂಡಲೇ ಕಟ್ಟಡ ನಿರ್ಮಾಣ ಕಾರ್ಯ ಆರಂಭಿಸದಿದ್ದರೆ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು. ಎಸ್ಡಿಎಂಸಿ ಸದಸ್ಯ ಗುರುರಾಜ ಆಗೋಲಿ ಅವರು, ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಹೊಣೆಗಾರರಾಗಿರುವ ಇಲಾಖೆಗಳು ನಿರ್ಲಕ್ಷ್ಯ ತೋರಬಾರದು, ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಈ ಮನವಿಗೆ ಪ್ರತಿಕ್ರಿಯಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ ಬಸಾಪೂರ ಅವರು, ವಿಷಯ ಇಲಾಖೆಯ ಗಮನಕ್ಕೆ ಬಂದಿದ್ದು, ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ. ಸಂಬಂಧಿತ ಅಧಿಕಾರಿಗಳೊಂದಿಗೆ ಚರ್ಚಿಸಿ ಎರಡು ದಿನಗಳೊಳಗೆ ಅಗತ್ಯ ಪ್ರಕ್ರಿಯೆ ಆರಂಭಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯ ಸಿದ್ರಾಮಪ್ಪ ಅಮರಾವತಿ, ಎಸ್ಡಿಎಂಸಿ ಸದಸ್ಯರಾದ ರಾಮಣ್ಣ ಭೋವಿ, ಮಂಜುನಾಥ ತಳುಗೇರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕುಷ್ಟಗಿ ಪಟ್ಟಣದ ಸರ್ಕಾರಿ ಬಾಲಕಿಯರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿರ್ಮಾಣ ಹಂತದಲ್ಲೇ ಸ್ಥಗಿತಗೊಂಡಿರುವ ಕಟ್ಟಡ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಹಾಗೂ ಶಾಲಾ ಕಾಂಪೌಂಡ್ಗೆ ಹೊಂದಿಕೊಂಡು ಇಡಲಾಗಿರುವ ಕಪಾಟುಗಳನ್ನು ತೆರವುಗೊಳಿಸುವಂತೆ ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ (ಎಸ್ಡಿಎಂಸಿ) ಅಧ್ಯಕ್ಷರು ಮತ್ತು ಸದಸ್ಯರು ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಈ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ವ್ಯವಸ್ಥಾಪಕ ಶಿವಶಂಕರಪ್ಪ, ಪುರಸಭೆ ಮುಖ್ಯಾಧಿಕಾರಿ ವೆಂಕಪ್ಪ ಬಿಳಗಿ ಹಾಗೂ ಕುಷ್ಟಗಿ ಪೊಲೀಸ್ ಠಾಣೆ ಅಧಿಕಾರಿಗಳಿಗೆ ಪ್ರತ್ಯೇಕ ಮನವಿ ನೀಡಲಾಗಿದೆ. ಎಸ್ಡಿಎಂಸಿ ಅಧ್ಯಕ್ಷ ಪವಾಡೆಪ್ಪ ಚೌಡ್ಕಿ ಮಾತನಾಡಿ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಯೋಜನೆಯಡಿ ಸುಮಾರು ₹32 ಲಕ್ಷ ವೆಚ್ಚದಲ್ಲಿ ಎರಡು ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಯನ್ನು ನಿರ್ಮಿತಿ ಕೇಂದ್ರದ ಮೂಲಕ ಆರಂಭಿಸಲಾಗಿತ್ತು. ಆದರೆ, ಈ ಕಾಮಗಾರಿ ಕಳೆದ ಒಂದೂವರೆ ವರ್ಷಗಳಿಂದ ಅರ್ಧಕ್ಕೆ ನಿಂತಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ತೀವ್ರ ತೊಂದರೆಯಾಗಿದೆ ಎಂದು ಆರೋಪಿಸಿದ್ದಾರೆ. ಈ ಸಮಸ್ಯೆಯನ್ನು ಹಲವು ಬಾರಿ ಶಾಸಕ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ ಮತ್ತು ಸಂಬಂಧಿತ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಸ್ಪಂದನೆ ದೊರೆತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು. ಪ್ರಸ್ತುತ 2026-27ನೇ ಶೈಕ್ಷಣಿಕ
ವರ್ಷದ ತರಗತಿಗಳು ಆರಂಭವಾಗಿದ್ದು, ಶಾಲೆಯಲ್ಲಿ ಕೊಠಡಿಗಳ ಕೊರತೆಯಿಂದ ಪಾಠ ಬೋಧನೆಗೆ ಅಡಚಣೆ ಉಂಟಾಗಿದೆ. ಸರ್ಕಾರದ ಆಂಗ್ಲ ಮಾಧ್ಯಮ ವಿಭಾಗದಲ್ಲಿ ಎಲ್ಕೆಜಿ ಯಿಂದ ಮೂರನೇ ತರಗತಿವರೆಗೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಹೆಚ್ಚುವರಿ ಕೊಠಡಿಗಳ ಅಗತ್ಯ ತುರ್ತಾಗಿ ಎದುರಾಗಿದೆ ಎಂದು ಎಸ್ಡಿಎಂಸಿ ಸದಸ್ಯರು ತಿಳಿಸಿದರು. ಎಸ್ಡಿಎಂಸಿ ಸದಸ್ಯ ಮಲ್ಲಪ್ಪ ಕಂಚಿ ಮಾತನಾಡಿ, ಹಲವು ಬಾರಿ ಮನವಿ ಸಲ್ಲಿಸಿದ್ದರೂ ಕಾಮಗಾರಿ ಪೂರ್ಣಗೊಳಿಸದಿರುವುದು ಬೇಸರದ ಸಂಗತಿಯಾಗಿದೆ. ಕೂಡಲೇ ಕಟ್ಟಡ ನಿರ್ಮಾಣ ಕಾರ್ಯ ಆರಂಭಿಸದಿದ್ದರೆ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು. ಎಸ್ಡಿಎಂಸಿ ಸದಸ್ಯ ಗುರುರಾಜ ಆಗೋಲಿ ಅವರು, ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಹೊಣೆಗಾರರಾಗಿರುವ ಇಲಾಖೆಗಳು ನಿರ್ಲಕ್ಷ್ಯ ತೋರಬಾರದು, ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಈ ಮನವಿಗೆ ಪ್ರತಿಕ್ರಿಯಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ ಬಸಾಪೂರ ಅವರು, ವಿಷಯ ಇಲಾಖೆಯ ಗಮನಕ್ಕೆ ಬಂದಿದ್ದು, ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ. ಸಂಬಂಧಿತ ಅಧಿಕಾರಿಗಳೊಂದಿಗೆ ಚರ್ಚಿಸಿ ಎರಡು ದಿನಗಳೊಳಗೆ ಅಗತ್ಯ ಪ್ರಕ್ರಿಯೆ ಆರಂಭಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯ ಸಿದ್ರಾಮಪ್ಪ ಅಮರಾವತಿ, ಎಸ್ಡಿಎಂಸಿ ಸದಸ್ಯರಾದ ರಾಮಣ್ಣ ಭೋವಿ, ಮಂಜುನಾಥ ತಳುಗೇರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
- ಇಳಕಲ್ ನಗರದಲ್ಲಿ ಮಡಿವಾಳ ಸಮಾಜದ ವತಿಯಿಂದ ಮಾಧ್ಯಮ ಘೋಷ್ಠಿ ನಡೆಸಲಾಯಿತು. ಈ ಸಂದರ್ಭದಲ್ಲಿ, ಉತ್ತರ ಕರ್ನಾಟಕದ ಯುವಕರ ಕಣ್ಮಣಿ ಹಾಗೂ ಅಭಿವೃದ್ಧಿಯ ಹರಿಕಾರರೆಂದು ಗುರುತಿಸಿಕೊಂಡಿರುವ ಹುನಗುಂದ ಮತಕ್ಷೇತ್ರದ ಜನಪ್ರಿಯ ಶಾಸಕರಾದ ವಿಜಯಾನಂದ ಕಾಶಪ್ಪನವರಿಗೆ ಸಚಿವ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಗೆ ಮನವಿ ಮಾಡಲಾಯಿತು. ಮಾಧ್ಯಮ ಘೋಷ್ಠಿಯಲ್ಲಿ ಮಡಿವಾಳ ಸಮಾಜದ ಮುಖಂಡರು ಹಾಗೂ ಯುವ ಮಿತ್ರರು ಉಪಸ್ಥಿತರಿದ್ದರು. ಜನಪ್ರಿಯ ಶಾಸಕ ವಿಜಯಾನಂದ ಕಾಶಪ್ಪನವರಿಗೆ ಸಚಿವ ಸ್ಥಾನ ದೊರಕಿಸಿಕೊಡಬೇಕೆಂದು ಮಡಿವಾಳ ಸಮಾಜದ ಮುಖಂಡರು ಬಲವಾಗಿ ಆಗ್ರಹಿಸಿದರು.3
- ವಿಜಯಪುರ ಜಿಲ್ಲೆಯ ಐತಿಹಾಸಿಕ ತಾಳಿಕೋಟಿ ಪಟ್ಟಣದಲ್ಲಿ, ಶ್ರೀ ವೀರರಾಣಿ ಕಿತ್ತೂರು ಚೆನ್ನಮ್ಮ ಪುತ್ಥಳಿ ನಿರ್ಮಾಣ ಸೇವಾ ಸಮಿತಿಯ ವತಿಯಿಂದ ಅದರ ಮೂರನೇ ವಾರ್ಷಿಕೋತ್ಸವದ ನಿಮಿತ್ತ ಪುರಾಣ ಕಾರ್ಯಕ್ರಮವನ್ನು ರಾಜವಾಡೆ ಆವರಣದಲ್ಲಿ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಪ್ರಗತಿಪರ ರೈತರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಮಾರಂಭದ ದಿವ್ಯ ಸಾನಿಧ್ಯ ವಹಿಸಿದ್ದ ಪೂಜ್ಯ ಶ್ರೀ ಪ್ರಭುಲಿಂಗ ಮಹಾಸ್ವಾಮಿಗಳು ಆಶೀರ್ವಚನ ನೀಡಿ, ಈ ದೇಶದ ರೈತರು ಅನ್ನದಾತರಾಗಿದ್ದು, ದೇಶಕ್ಕೆ ಅನ್ನ ನೀಡುವ ಅವರ ಸೇವೆ ದೇವರ ಸೇವೆಗೆ ಸಮಾನವಾಗಿದೆ ಎಂದು ಹೇಳಿದರು. ರೈತರನ್ನು ಸನ್ಮಾನಿಸಿರುವುದು ಹೆಮ್ಮೆಯ ವಿಷಯ ಎಂದು ಅವರು ಬಣ್ಣಿಸಿದರು. ಪುರಸಭೆ ಮಾಜಿ ಅಧ್ಯಕ್ಷರು ಹಾಗೂ ರೈತ ಮುಖಂಡರಾದ ದಶರಥಸಿಂಗ್ ಮನಗೂಳಿ ಅವರು ಮಾತನಾಡಿ, ಹುಟ್ಟು ಹೋರಾಟಗಾರ್ತಿಯಾದ ನೀಲಮ್ಮಗೌಡತಿ ಪಾಟೀಲ ಅವರು ಹಲವಾರು ಸಮಾಜಸೇವಾ ಕಾರ್ಯಗಳನ್ನು ಮಾಡುತ್ತಿದ್ದು, ಅವರಿಗೆ ಎಲ್ಲರ ಸಹಕಾರ ನೀಡುವ ಅಗತ್ಯವಿದೆ ಎಂದು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಸುಮಾರು 15 ಜೋಡಿ ರೈತ ದಂಪತಿಗಳನ್ನು ಸನ್ಮಾನಿಸಲಾಯಿತು. ಕಿತ್ತೂರಾಣಿ ಚೆನ್ನಮ್ಮಳ ನೂರಾರು ಅಭಿಮಾನಿಗಳು ಈ ಪುರಾಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.1
- ಗದಗ್ ಜಿಲ್ಲೆಯ ಶಿರಹಟ್ಟಿ ತಾಲ್ಲೂಕಿನ ಕೊಂಚಿಗೇರಿ ಗ್ರಾಮದ ಅಂಬೇಡ್ಕರ್ ಕಾಲೋನಿಯಲ್ಲಿ ಅಳವಡಿಸಲಾಗಿರುವ ಹೈ ಮಾಸ್ಕ್ ದೀಪ ಇಂದಿಗೂ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಈ ಹೈ ಮಾಸ್ಕ್ ದೀಪ ಸರಿಯಾಗಿ ಆನ್ ಆಗದಿರುವುದು ಮುಖ್ಯ ಸಮಸ್ಯೆಯಾಗಿದ್ದು, ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದಾಗ ಅವರು 'ನೋಡೋಣ' ಎಂದು ಹೇಳಿ ನಿರ್ಲಕ್ಷ್ಯ ತೋರುತ್ತಿದ್ದಾರೆ.1
- ಕೂಡ್ಲಿಗಿ ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಕಾರಣ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಮಳೆರಾಯನ ಆಗಮನಕ್ಕಾಗಿ ತಾಲ್ಲೂಕಿನಾದ್ಯಂತ ವಿವಿಧ ಆಚರಣೆಗಳು ಮತ್ತು ಪೂಜೆಗಳನ್ನು ನಡೆಸಲಾಗುತ್ತಿದ್ದು, ಅದರ ಭಾಗವಾಗಿ ಶನಿವಾರ ಅಮ್ಮನಕೆರಿ ಗ್ರಾಮದಲ್ಲಿ ವಿಶೇಷ ಗುರ್ಜಿ ಪೂಜೆ ಸಲ್ಲಿಸಲಾಯಿತು. ಈ ಆಚರಣೆಯಲ್ಲಿ, ಜೋಳದ ರೊಟ್ಟಿ ಬೇಯಿಸುವ ಹಂಚಿನ ಮೇಲೆ ಸೆಗಣಿಯಿಂದ ತಯಾರಿಸಿದ ಗುರ್ಜಿಯನ್ನು ಒಬ್ಬ ಯುವಕನ ತಲೆಯ ಮೇಲೆ ಇಟ್ಟುಕೊಂಡು ಮನೆ ಮನೆಗೆ ಹೋಗಲಾಯಿತು. ಈ ವೇಳೆ ಮಹಿಳೆಯರು "ಗುರ್ಜಿ ಗುರ್ಜಿ ಎಲ್ಲಾಡಿ ಬಂದೆ. ಹಳ್ಳಕೊಳ್ಳ ಸುತ್ತಾಡಿ ಬಂದೆ. ಕಾರ ಮಳೆಯೋ ಕಪ್ಪತ್ತ ಮಳೆಯೋ.. ಸುರಿ ಸುರಿ ಸುರಿಯೋ ಮಳೆರಾಯ, ಬಣ್ಣ ಕೊಡ್ತೀನಿ ಬಾರಲೇ ಮಳೆಯೇ ಸುಣ್ಣ ಕೊಡ್ತೀನಿ ಸುರಿಯಲೇ ಮಳೆಯೇ" ಎಂದು ಹಾಡುತ್ತಾ ಮಳೆಗಾಗಿ ಪ್ರಾರ್ಥಿಸಿದರು. ಅಮ್ಮನಕೆರಿ ಗ್ರಾಮದಲ್ಲಿ ಬೇಗ ಮಳೆ ಬರುವಂತೆ ಕೋರಿ ಈ ಗುರ್ಜಿ ಪೂಜೆಯನ್ನು ಆಚರಿಸಲಾಯಿತು.1
- ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಅಮ್ಮನಕೇರಿ ಗ್ರಾಮದಲ್ಲಿ, ಮಳೆಗಾಗಿ 'ಗೊರ್ಜೆವ್ವ' (ಗೌರವ್ವ) ಹೊತ್ತ ಮಕ್ಕಳಿಗೆ ಗಂಗೆ ಪೂಜೆ ನೆರವೇರಿಸಲಾಯಿತು. ಗೊರ್ಜೆವ್ವಳ ಮೂರ್ತಿ ಹೊತ್ತ ಬಾಲಕ ಗ್ರಾಮದಾದ್ಯಂತ ಮನೆ ಮನೆಗೆ ತೆರಳಿ ಪೂಜೆ ಸಲ್ಲಿಸುವ ಮೂಲಕ ವರುಣ ದೇವರ ಕೃಪೆಗೆ ಪ್ರಾರ್ಥಿಸಲಾಯಿತು. 'ಗೊರ್ಜೆಮ್ಮ' ಅಥವಾ ಗೌರಮ್ಮ ಆರಾಧನೆಯು ಕರ್ನಾಟಕದ ಗ್ರಾಮೀಣ ಜಾನಪದ ಸಂಪ್ರದಾಯದ ಒಂದು ವಿಶಿಷ್ಟ ಭಾಗವಾಗಿದೆ. ಇದು ಮುಖ್ಯವಾಗಿ ಮಹಿಳಾ ಶಕ್ತಿಯ ಆರಾಧನೆಯನ್ನು, ಗ್ರಾಮೀಣ ಪಶುಪಾಲನಾ ಸಮುದಾಯಗಳ ಸಂಸ್ಕೃತಿಯನ್ನು ಪ್ರತಿಬಿಂಬಿಸುವ, ಪ್ರಕೃತಿ, ಕೃಷಿ ಮತ್ತು ದೈವಭಕ್ತಿಯ ಸಂಗಮವಾಗಿರುವ ಆಚರಣೆಯಾಗಿದೆ. ಕಲ್ಯಾಣ ಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿ ಗೊರ್ಜೆವ್ವ ಆಚರಣೆಯನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ನಡೆಸಲಾಗುತ್ತದೆ. ಗೊರ್ಜೆವ್ವ (ಗೌರವ್ವ) ದೇವಿಯನ್ನು ಪಶುಪಾಲಕರ ಮತ್ತು ಅವರ ಜಾನುವಾರುಗಳ ರಕ್ಷಕಿಯಾಗಿ ಪೂಜಿಸಲಾಗುತ್ತದೆ. ಈ ಸಂದರ್ಭದಲ್ಲಿ, ಮಹಿಳೆಯರು, ಯುವತಿಯರು ಮತ್ತು ಮಕ್ಕಳು ಒಗ್ಗೂಡಿ ಅರಿಶಿನ, ಮಣ್ಣು ಮತ್ತು ನೈಸರ್ಗಿಕ ಸಾಮಗ್ರಿಗಳನ್ನು ಬಳಸಿ ಗೌರಮ್ಮಳ (ಗೊರ್ಜೆಮ್ಮ) ವಿಗ್ರಹವನ್ನು ಸರಳ ಹಾಗೂ ಸಾಂಪ್ರದಾಯಿಕ ರೀತಿಯಲ್ಲಿ ತಯಾರಿಸುತ್ತಾರೆ. ಗೊರ್ಜೆವ್ವ ಉತ್ಸವವನ್ನು ರಾತ್ರಿ ಸಮಯದಲ್ಲಿ ಆಚರಿಸಲಾಗುತ್ತದೆ. ದೇವಿಯ ವಿಗ್ರಹವನ್ನು ಗ್ರಾಮದ ವಿವಿಧ ದೇವಾಲಯಗಳಿಗೆ ಮೆರವಣಿಗೆಯಲ್ಲಿ ಕೊಂಡೊಯ್ಯಲಾಗುತ್ತದೆ. ಮೆರವಣಿಗೆಯಲ್ಲಿ ಮಹಿಳೆಯರು ಕೈಯಲ್ಲಿ ತೈಲದೀಪಗಳನ್ನು ಹಿಡಿದು, ಹೂವುಗಳನ್ನು ಅರ್ಪಿಸಿ ಭಕ್ತಿಭಾವದಿಂದ ಸಾಗುತ್ತಾರೆ. ಹಬ್ಬದ ಪ್ರಮುಖ ಆಕರ್ಷಣೆಯಾಗಿ, ಪುರುಷ ಭಕ್ತರು ದೇವಿಯ ಮೇಲಿನ ಅಚಲ ಭಕ್ತಿಯ ಸಂಕೇತವಾಗಿ ಮುಖ್ಯ ದೇವಾಲಯದ ಎದುರು 'ಉರುಳು ಸೇವೆ' ಮಾಡುತ್ತಾರೆ. ಜಾನಪದ ಹಾಡುಗಳು ಮತ್ತು ಸೋಬಾನೆ ಪದಗಳ ಮೂಲಕ ಗೊರ್ಜೆವ್ವಳನ್ನು ಆರಾಧಿಸಲಾಗುತ್ತದೆ. ಮಹಿಳೆಯರು ವಿಶೇಷವಾಗಿ ಸೋಬಾನೆ ಪದಗಳನ್ನು ಹಾಗೂ ದೇವಿಯ ಮಹಿಮೆಯನ್ನು ಸಾರುವ ಜಾನಪದ ಗೀತೆಗಳನ್ನು ಹಾಡುತ್ತಾರೆ. "ಗಂಗಮ್ಮ ಗೌರಮ್ಮ" ಮುಂತಾದ ಭಕ್ತಿಗೀತೆಗಳನ್ನು ಹಾಡಿ, ಭಜನೆ ಮಾಡುವ ಮೂಲಕ ಮಳೆ ದೇವರನ್ನು ಆಹ್ವಾನಿಸಲಾಗುತ್ತದೆ. ಬಹುತೇಕ ಗ್ರಾಮೀಣ ಭಾಗಗಳಲ್ಲಿ, ಮಕ್ಕಳು ಅರೆಬೆತ್ತಲಾಗಿ ಮಣ್ಣಿನ ಗೊರ್ಜೆವ್ವಳನ್ನು ಕಟ್ಟಿಗೆಯ ಹಲಗೆಯ ಮೇಲೆ ಪ್ರತಿಷ್ಠಾಪಿಸಿಕೊಂಡು ವಿಶೇಷವಾಗಿ ಪೂಜಿಸುತ್ತಾರೆ. ಒಬ್ಬ ಅರೆಬೆತ್ತಲೆಯ ಬಾಲಕ ಅದನ್ನು ತನ್ನ ತಲೆಯ ಮೇಲೆ ಹೊತ್ತು ಗ್ರಾಮದ ಮನೆ ಮನೆಗೆ ತೆರಳಿ ಗೊರ್ಜೆವ್ವಳನ್ನು ಆರಾಧಿಸುತ್ತಾನೆ. ಮನೆಯ ಬಾಗಿಲಿಗೆ ಬಂದ ಗೊರ್ಜೆವ್ವಳಿಗೆ ಪೂಜೆ ಸಲ್ಲಿಸುವಂತೆ ಕೋರಲಾಗುತ್ತದೆ. ಮನೆಯವರು ಗೊರ್ಜೆವ್ವಳನ್ನು ಭಕ್ತಿಯಿಂದ ಸ್ವಾಗತಿಸಿ, ಹೊತ್ತವರಿಗೆ ಗಂಗಾಭಿಷೇಕ ಮಾಡಿ ನಮಿಸುತ್ತಾರೆ ಮತ್ತು ಆರಾಧಕರಿಗೆ ಧಾನ್ಯಗಳು ಹಾಗೂ ದಕ್ಷಿಣೆಯನ್ನು ನೀಡಿ ಕಳುಹಿಸಿಕೊಡುತ್ತಾರೆ. ಗೊರ್ಜೆವ್ವಳ ಆರಾಧಕರು ಜನರು ನೀಡಿದ ಧಾನ್ಯಗಳನ್ನು ಸಂಗ್ರಹಿಸಿ, ನಂತರ ಒಗ್ಗೂಡಿ ತಿಂಡಿ ತಿನಿಸುಗಳನ್ನು ತಯಾರಿಸಿ ಗೊರ್ಜೆವ್ವಳಿಗೆ ಎಡೆ ಮಾಡಿ ನಮಿಸುತ್ತಾರೆ. ನಂತರ ಶ್ರದ್ಧಾಭಕ್ತಿಯಿಂದ ಪ್ರಸಾದವನ್ನು ಸೇವಿಸುತ್ತಾರೆ. ಈ ಆರಾಧನೆಯಲ್ಲಿ ಬಾಲಕರು ಮತ್ತು ಬಾಲೆಯರ ದಂಡೇ ಭಾಗಿಯಾಗಿರುತ್ತದೆ. ಗೊರ್ಜೆವ್ವಳ ಆರಾಧಕರು ಗ್ರಾಮವೆಲ್ಲಾ ಅಲೆದಾಡಿದ ನಂತರ ಕೊನೆಗೆ ಗ್ರಾಮದಾಚೆಯ ದೇವಸ್ಥಾನದಲ್ಲಿ ತಂಗುತ್ತಾರೆ. ಇದು ಒಂದು ವಿಶಿಷ್ಟ ಮತ್ತು ವಿಶೇಷ ಜಾನಪದ ಆಚರಣೆಯಾಗಿದೆ.4
- ಬಳ್ಳಾರಿ ನಗರದ ಹವಾಂಭಾವಿ ಪ್ರದೇಶದಲ್ಲಿ ಅಕ್ರಮ ಸರ್ಕಾರಿ ಜಾಗ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿದಿದೆ. ಜಿಲ್ಲಾಡಳಿತವು ಪೊಲೀಸ್ ಭದ್ರತೆಯಲ್ಲಿ ಸರ್ವೇ ನಂ. 275ರಲ್ಲಿರುವ 1.33 ಎಕರೆ ಸರ್ಕಾರಿ ಜಾಗವನ್ನು ತೆರವುಗೊಳಿಸಿ ವಶಕ್ಕೆ ಪಡೆದುಕೊಂಡಿದೆ. ಈ ಜಾಗದ ಮೌಲ್ಯ ಕೋಟ್ಯಾಂತರ ರೂಪಾಯಿ ಎಂದು ಅಂದಾಜಿಸಲಾಗಿದೆ. ಜಿಲ್ಲಾಡಳಿತವು ತೆರವುಗೊಳಿಸಿದ ಈ ಜಾಗದಲ್ಲಿ ಸರ್ಕಾರಿ ಸ್ವಾಮ್ಯದ ಫಲಕವನ್ನು ಅಳವಡಿಸಿದ್ದು, ಅಕ್ರಮವಾಗಿ ಒತ್ತುವರಿ ಮಾಡಿದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಕ್ರಮಗಳನ್ನು ಕೈಗೊಳ್ಳಲಾಗಿದೆ.1
- ಪರಿಸರ ಸಂರಕ್ಷಣೆ ಮತ್ತು ಹಸಿರು ಅಭಿವೃದ್ಧಿಯ ಉದ್ದೇಶದಿಂದ ಅರಣ್ಯ ಇಲಾಖೆಯು ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ರಸ್ತೆ ಮತ್ತು ಹೆದ್ದಾರಿಗಳ ಬದಿಯಲ್ಲಿ ಸಸಿ ನೆಡುವ ಕಾರ್ಯ ಕೈಗೊಂಡಿದ್ದರೂ, ಸಮರ್ಪಕ ಯೋಜನೆಯಿಲ್ಲದೆ ವಿದ್ಯುತ್ ತಂತಿಗಳ ಕೆಳಗೆ ಸಸಿಗಳನ್ನು ನೆಡುತ್ತಿರುವುದರಿಂದ ಸಾರ್ವಜನಿಕರ ತೆರಿಗೆ ಹಣ ವ್ಯರ್ಥವಾಗುತ್ತಿದೆ ಎಂದು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೇಹಾದುಲ್-ಮುಸ್ಲಿಮೀನ್ (AIMIM) ಪಕ್ಷದ ರಾಯಚೂರು ನಗರ ಅಧ್ಯಕ್ಷ ಶಬ್ಬೀರ್ ಅಹ್ಮದ್ ಹೌದಾದಿ ಆರೋಪಿಸಿದ್ದಾರೆ. ಈ ಕುರಿತು ಅವರು 2026ರ ಜೂನ್ 20ರಂದು ಕಲಬುರ್ಗಿ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ರಾಯಚೂರಿನ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಅಧಿಕೃತ ಮನವಿ ಪತ್ರ ಸಲ್ಲಿಸಿದ್ದಾರೆ. ವಿದ್ಯುತ್ ತಂತಿಗಳ ಕೆಳಗೆ ಸಸಿ ನೆಡುವುದರಿಂದ ಹಲವು ಸಮಸ್ಯೆಗಳು ಉದ್ಭವಿಸುತ್ತಿವೆ. ಮರಗಳು ಬೆಳೆದು ದೊಡ್ಡದಾದಾಗ ಅವುಗಳ ಕೊಂಬೆಗಳು ವಿದ್ಯುತ್ ತಂತಿಗಳಿಗೆ ತಾಗಿ, ಗಾಳಿಯ ಸಂದರ್ಭದಲ್ಲಿ ಘರ್ಷಣೆಯಿಂದ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳುವ ಸಾಧ್ಯತೆ ಹೆಚ್ಚುತ್ತದೆ. ಇದರಿಂದ ಟ್ರಾನ್ಸ್ಫಾರ್ಮರ್ಗಳು ಸುಟ್ಟುಹೋಗುವ ಅಪಾಯವಿದ್ದು, ಟಿವಿ, ಫ್ರಿಡ್ಜ್ ಸೇರಿದಂತೆ ಮನೆಗಳಲ್ಲಿನ ಬೆಲೆಬಾಳುವ ವಿದ್ಯುತ್ ಉಪಕರಣಗಳಿಗೆ ಹಾನಿಯಾಗುತ್ತಿದೆ. ಅಲ್ಲದೆ, ಮರಗಳ ಕೊಂಬೆಗಳು ಬೀದಿ ದೀಪಗಳನ್ನು ಮರೆಮಾಡುವುದರಿಂದ ರಸ್ತೆಗಳು ಕತ್ತಲಲ್ಲಿ ಮುಳುಗುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಮರಗಳ ಕೊಂಬೆಗಳನ್ನು ಕತ್ತರಿಸುವ ಜವಾಬ್ದಾರಿ ಜೆಸ್ಕಾಂ ಹಾಗೂ ಮಹಾನಗರ ಪಾಲಿಕೆ ಸಿಬ್ಬಂದಿಗಳ ಮೇಲೆ ಬೀಳುತ್ತಿದ್ದು, ಇದು ಇಲಾಖೆಗಳ ನಡುವೆ ಅನಗತ್ಯ ಕೆಲಸದ ಒತ್ತಡಕ್ಕೆ ಕಾರಣವಾಗುತ್ತಿದೆ ಎಂದು ಮನವಿಯಲ್ಲಿ ವಿವರಿಸಲಾಗಿದೆ. ರೈಲ್ವೆ ಸ್ಟೇಷನ್ ರಸ್ತೆಯಿಂದ RTO ಸರ್ಕಲ್ ವರೆಗೆ, RTO ಸರ್ಕಲ್ನಿಂದ BRB ಸರ್ಕಲ್ ವರೆಗೆ, ಜಿಲ್ಲಾಧಿಕಾರಿ ಬಂಗ್ಲಾದಿಂದ ಅಸ್ನಿಹಾಳ್ ಹಾಗೂ ಅಸ್ನಿಹಾಳ್ನಿಂದ ಮಿನಿ ವಿಧಾನಸೌಧದವರೆಗೆ, ಮಂತ್ರಾಲಯ ಕೆಫೆಯಿಂದ ಹಜರತ್ ಖ್ವಾಜಾ ಬಂದೇನವಾಜ್ ಕಾಲೋನಿ ಮಾರ್ಗವಾಗಿ ಮಿನಿ ವಿಧಾನಸೌಧದವರೆಗೆ, ಮತ್ತು ಬಸವೇಶ್ವರ ಸರ್ಕಲ್ನಿಂದ ಶಕ್ತಿನಗರ ಹಾಗೂ ರೈಲ್ವೆ ಸರ್ಕಲ್ ವರೆಗಿನ ಪ್ರದೇಶಗಳಲ್ಲಿ ಈ ಸಮಸ್ಯೆ ಕಂಡುಬಂದಿದೆ ಎಂದು ಶಬ್ಬೀರ್ ಅಹ್ಮದ್ ಹೌದಾದಿ ಗುರುತಿಸಿದ್ದಾರೆ. ಸಾರ್ವಜನಿಕರ ತೆರಿಗೆ ಹಣದ ಸದ್ಬಳಕೆಯೊಂದಿಗೆ ರಾಯಚೂರನ್ನು ಸುಂದರ ಹಾಗೂ ಹಸಿರು ನಗರವನ್ನಾಗಿ ರೂಪಿಸಲು, ಅರಣ್ಯ ಇಲಾಖೆ, ಜೆಸ್ಕಾಂ ಹಾಗೂ ಮಹಾನಗರ ಪಾಲಿಕೆ ಜಂಟಿಯಾಗಿ ಮುಂದಾಲೋಚನೆಯೊಂದಿಗೆ ಸಸಿ ನೆಡುವ ಯೋಜನೆ ರೂಪಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಈ ಮನವಿ ಪತ್ರದ ಪ್ರತಿಗಳನ್ನು ರಾಯಚೂರು ಜಿಲ್ಲಾಧಿಕಾರಿಗಳು, ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಜೆಸ್ಕಾಂನ ಪ್ರಭಾರಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ಗಳಿಗೂ ಸೂಕ್ತ ಕ್ರಮಕ್ಕಾಗಿ ಸಲ್ಲಿಸಲಾಗಿದ್ದು, ಮನವಿ ಸಲ್ಲಿಸುವ ಸಂದರ್ಭದಲ್ಲಿ AIMIM ಮುಖಂಡರಾದ ಶಹಬಾಜ್ ಖಾನ್, ತನ್ವೀರ್ ಅಹ್ಮದ್, ಮೊಹಮ್ಮದ್ ಸೋಫಿ ಹಾಗೂ ಆಸಿಫ್ ಬಾಬಾ ಉಪಸ್ಥಿತರಿದ್ದರು.3
- ಬೆಂಗಳೂರಿನಲ್ಲಿ ಕರ್ನಾಟಕ ಜನತಾ ಸೇನಾ ದಳ ಆಯೋಜಿಸಿದ್ದ ಸಂಗಮ ಸಮಾವೇಶ ಕಾರ್ಯಕ್ರಮದಲ್ಲಿ ಸಮಾಜಸೇವಕ ಹಾಗೂ ಪತ್ರಕರ್ತ ನಜೀರ್ ಅಹ್ಮದ್ ಚೋರಗಸ್ತಿ ಅವರಿಗೆ 'ಭಾರತ ಬುದ್ಧ ಶ್ರೀ ರಾಷ್ಟ್ರೀಯ ಪ್ರಶಸ್ತಿ' ನೀಡಿ ಗೌರವಿಸಲಾಯಿತು. ಅವರ ಸಮಾಜಮುಖಿ ಸೇವೆ, ಪತ್ರಿಕೋದ್ಯಮ ಕ್ಷೇತ್ರದ ಕೊಡುಗೆ ಹಾಗೂ ಜನಪರ ಕಾರ್ಯಗಳನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಕಾರ್ಯಕ್ರಮದ ಸಾನ್ನಿಧ್ಯವನ್ನು ಬೆಂಗಳೂರಿನ ಶ್ರೀ ಬೇಲಿ ಮಠ ಮಹಾಸಂಸ್ಥಾನದ ಶ್ರೀ ಶ್ರೀ ಪರಮಪೂಜ್ಯ ಶ್ರೀ ನಿ.ಪ್ರ. ಶಿವಾನುಭವ ಚರಮೂರ್ತಿ ಶಿವರುದ್ರ ಮಹಾಸ್ವಾಮಿಗಳು ವಹಿಸಿದ್ದರು. ಸನ್ಮಾನ್ಯ ಶ್ರೀ ಪುರುಷೋತ್ತಮ ಬಿಳಿಮಳೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು, ಹಾಗೂ ಬೆಂಗಳೂರು ಉಪ ಪೊಲೀಸ್ ಆಯುಕ್ತರಾದ ಶ್ರೀ ಮಂಜುನಾಥ ಬಾಬು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಜನತಾ ಸೇನಾ ದಳದ ಗೌರವಾಧ್ಯಕ್ಷರು, ಖ್ಯಾತ ಪತ್ರಕರ್ತರು, ನಾಟಕಕಾರರು, ಲೇಖಕರು, ನಿರ್ದೇಶಕರು, ಚಲನಚಿತ್ರ ತಂತ್ರಜ್ಞರು, ಪರಿಸರ ಪ್ರೇಮಿಗಳು, ಚಿಂತಕರು, ಸಾಹಿತಿಗಳು, ಸಮಾಜಸೇವಕರು ಹಾಗೂ ವಾಸ್ತು-ಜ್ಯೋತಿಷ್ಯ ತಜ್ಞರಾದ ಡಾ. ಕೆಂಚನೂರ್ ಶಂಕರ್ ಸ್ವಾಗತ ಭಾಷಣ ನೆರವೇರಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಜನತಾ ಸೇನಾ ದಳದ ರಾಜ್ಯಾಧ್ಯಕ್ಷರಾದ ಶ್ರೀ ಎಚ್. ಸದಾಶಿವ, ಜಿಲ್ಲಾ ಕಾರ್ಮಿಕ ಅಧ್ಯಕ್ಷರಾದ ಡಾ. ಸಿದ್ದು ಕಲ್ಲೂರ್, ಶ್ರೀ ಆನಂದ ಜಾದವ್ ಸೇರಿದಂತೆ ಹಲವು ಗಣ್ಯರು, ಪತ್ರಕರ್ತರು, ಸಾಮಾಜಿಕ ಹೋರಾಟಗಾರರು ಹಾಗೂ ಸಮಾಜಸೇವಕರು ಉಪಸ್ಥಿತರಿದ್ದರು.1