Shuru
Apke Nagar Ki App…
Omprakash rajkumar khot
More news from ಕರ್ನಾಟಕ and nearby areas
- ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ, ಬೆಂಗಳೂರ ಜಿಲ್ಲಾ ಘಟಕ ವಿಜಯಪುರ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಮುಖಾಂತರ ಶ್ರೀ ಮಧು ಎಸ್ ಬಂಗಾರಪ್ಪನವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು, ಮನವಿ ಸಲ್ಲಿಸಿದರು.1
- ವಿಜಯಪುರ ಆಟುವರು ಬೆಂಕಿ ಹಚ್ಚಿಕೊಂಡು ಸಾಯುತ್ತೇವೆ ಎಂದು ಹೇಳಿದ್ದಾರೆ ಎಲ್ಪಿಜಿ ಗ್ಯಾಸ್ ಗೋಸ್ಕರ1
- ಬಾದಾಮಿ : ತಾಲೂಕಿನ ಶಿವಯೋಗಮಂದಿರ ಹತ್ತಿರದ ಮಲಪ್ರಭಾ ನದಿಯಲ್ಲಿ ಅಕ್ರಮವಾಗಿ ಮರಳು ತುಂಬಿಕೊಂಡು ಸಾಗುತ್ತಿದ್ದ ಟ್ರ್ಯಾಕ್ಟರ್ ವಶಕ್ಕೆ ಪಡೆದಿರುವ ಪೊಲೀಸರು ಚಾಲಕನನ್ನು ಬಾದಾಮಿ ಪೊಲೀಸರು ಬುಧವಾರ ಮಧ್ಯರಾತ್ರಿ 1:30ರ ಸುಮಾರಿನಲ್ಲಿ ವಶಕ್ಕೆ ಪಡೆದಿದ್ದಾರೆ. ಬಂಧಿತ ಟ್ರ್ಯಾಕ್ಟರ್ ಚಾಲಕ ಬಸಯ್ಯ ವಸ್ತ್ರದ ಎಂದು ಗುರುತಿಸಲಾಗಿದ್ದು, ಮರಳು ತುಂಬಿದ ಟ್ರ್ಯಾಕ್ಟರ್ ನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.1
- “ಮಹಿಳೆ ಪ್ರತಿಯೊಬ್ಬರ ಜೀವನದಲ್ಲಿ ಪ್ರಮುಖ ಸ್ಥಾನ ಹೊಂದಿದ್ದಾಳೆ… ಮಹಿಳೆಯರ ಅಭಿವೃದ್ಧಿಯೇ ಸಮಾಜದ ಅಭಿವೃದ್ಧಿ ಎಂದು ತಹಸೀಲ್ದಾರ್ ಎ.ಡಿ. ಅಮರಾವದಗಿ ಹೇಳಿದ್ದಾರೆ. ನಿಡಗುಂದಿಯಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಹಿಳೆಯರ ಶಕ್ತಿಯನ್ನು ಕೊಂಡಾಡಲಾಯಿತು. ಈ ಕಾರ್ಯಕ್ರಮದಲ್ಲಿ ಇನ್ನೇನು ಮಾತುಗಳು ಕೇಳಿಬಂದವು? ಸಂಪೂರ್ಣ ಮಾಹಿತಿ ಈ ವರದಿಯಲ್ಲಿ…” ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಪಟ್ಟಣದ ತಾಪಂ ಸಭಾಭವನದಲ್ಲಿ ನಡೆದ ಈ ಕಾರ್ಯಕ್ರಮವನ್ನು ತಹಸೀಲ್ದಾರ್ ಎ.ಡಿ. ಅಮರಾವದಗಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಪ್ರಾಕೃತಿಕವಾಗಿ ದೊರೆತಿರುವ ದಿವ್ಯ ಶಕ್ತಿಯಿಂದ ಮಹಿಳೆ ಸಮಾಜದಲ್ಲಿ ಪ್ರಮುಖ ಸ್ಥಾನ ಪಡೆದಿದ್ದಾಳೆ. ಮಹಿಳೆಯರು ತಮ್ಮ ಹಕ್ಕುಗಳ ಜೊತೆಗೆ ಕರ್ತವ್ಯಗಳನ್ನು ಕೂಡ ಸಮರ್ಪಕವಾಗಿ ಪಾಲಿಸಬೇಕು” ಎಂದು ಹೇಳಿದರು. ಇನ್ನು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಮಹಿಳೆಯರ ಬದುಕಿಗೆ ಮಹತ್ತರ ಬದಲಾವಣೆ ತಂದಿವೆ ಎಂದು ಅವರು ಅಭಿಪ್ರಾಯಪಟ್ಟರು. ಮಹಿಳೆಯರು ಶಿಕ್ಷಣ, ಉದ್ಯೋಗ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಮುನ್ನಡೆಯುತ್ತಿದ್ದು, ತಮ್ಮ ಕುಟುಂಬದ ಜೊತೆಗೆ ಸಮಾಜದ ಅಭಿವೃದ್ಧಿಗೂ ಮಹತ್ವದ ಕೊಡುಗೆ ನೀಡುತ್ತಿದ್ದಾರೆ ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಚಂದ್ರಶೇಖರ ಹಳೇಮನಿ, ಸರಕಾರ ಬಡಜನರಿಗೆ ನೆರವಾಗಲು ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಪ್ರತಿಯೊಬ್ಬರೂ ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ತಿಳಿಸಿದರು. ತಾಲೂಕಿನಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಶೇ. 99.48, ಗೃಹಜ್ಯೋತಿ ಯೋಜನೆಯಡಿ ಶೇ. 96.34 ಸಾಧನೆ ಆಗಿದೆ. ಇನ್ನೂ ಯುವನಿಧಿ ಯೋಜನೆಯಡಿ 466 ಜನ ಫಲಾನುಭವಿಗಳು ಇದ್ದಾರೆ ಎಂದು ಮಾಹಿತಿ ನೀಡಿದರು. ಶಕ್ತಿ ಯೋಜನೆ ಸೇರಿದಂತೆ ಪಂಚ ಗ್ಯಾರಂಟಿ ಯೋಜನೆಗಳಿಂದ ಬಡವರು ಮತ್ತು ಮಹಿಳೆಯರಿಗೆ ಹೆಚ್ಚಿನ ಅನುಕೂಲವಾಗುತ್ತಿದೆ ಎಂದು ಅವರು ಹೇಳಿದರು. ಈ ಕಾರ್ಯಕ್ರಮದಲ್ಲಿ ಎಸಿಡಿಪಿಒ ದುಂಡಮ್ಮ ಕಾಗಲ, ಪಪಂ ಅಧ್ಯಕ್ಷೆ ಜಂಬಕ್ಕ ವಿಭೂತಿ, ತಾಪಂ ಇಒ ವೆಂಕಟೇಶ ವಂದಾಲ, ತಾಪಂ ಸಹಾಯಕ ನಿರ್ದೇಶಕ ಶರಣಬಸವ ಬಿರಾದಾರ, ಆಹಾರ ನಿರೀಕ್ಷಕ ಎಂ.ಎಸ್. ಗುತ್ತಿರಗಿ, ಸಹಾಯಕ ಉದ್ಯೋಗಾಧಿಕಾರಿ ಎಸ್.ಎಸ್. ಆಲಮೇಲ, ಅಂಗನವಾಡಿ ಮೇಲ್ವಿಚಾರಕಿ ಬೋರಮ್ಮ ಬಿರಾದಾರ, ಸಾರಿಗೆ ನಿಯಂತ್ರಣಾಧಿಕಾರಿ ಎಸ್.ಎಸ್. ಕಟಬರ ಹಾಗೂ ಗ್ಯಾರಂಟಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಇದು ನಿಡಗುಂದಿಯಿಂದ ಭೀಮ ಹೆಜ್ಜೆ ನ್ಯೂಸ್ ವರದಿ.1
- ಗುಳೇದಗುಡ್ಡ: ಸಮೀಪದ ಕೆಲವಡಿ ಗ್ರಾಮದ ಶ್ರೀಲಕ್ಷ್ಮೀ ರಂಗನಾಥ ದೇವರ ರಥೋತ್ಸವ ಗುರುವಾರ ಸಂಜೆ ಸಾವಿರಾರು ಭಕ್ತರ ಹರ್ಷೋದ್ಘಾರದ ನಡುವೆ ವಿಜೃಂಭಣೆಯಿಂದ ನಡೆಯಿತು. ವಿವಿಧ ಊರುಗಳಿಂದ ಆಗಮಿಸಿದ ಭಕ್ತರು ರಥಕ್ಕೆ ಬಾಳೆಹಣ್ಣು, ಉತ್ತತ್ತಿ ಎಸೆದು ಭಕ್ತಿ ಮೆರೆದರು.1
- कर्नाटक के बेलगावी में 33 साल की फैशन डिजाइनर दीपा अवतागी ने सोशल मीडिया पर अमीर पुरुषों को अपने जाल में फंसाकर उनके पैसे, गहने और यहां तक कि गाड़ी भी चुरा ली। उसने पहले दोस्ती और प्यार का दिखावा किया, फिर लॉज या होटल में बुलाकर चोरी की। जो पैसे देने से इनकार करते, उन्हें ब्लैकमेल की धमकी दी जाती थी। तिलकवाड़ी पुलिस ने दीपा को गिरफ्तार कर उसके फरार साथी की तलाश शुरू कर दी है। सोशल मीडिया पर दोस्ती करते समय सावधानी बरतना जरूरी है।1
- ವಿಜಯಪುರ ನಗರದಲ್ಲಿ ಬುದ್ಧ, ಬಸವ, ಬಾಬಾಸಾಹೇಬ ಅಂಬೇಡ್ಕರ್ ಪುಸ್ತಕ ಮೇಳ, ಏಪ್ರಿಲ್ 10,14, 2026 ಸ್ಥಳ ದರ್ಬಾರ್ ಹೈಸ್ಕೂಲ್ ಮೈದಾನ, ಸ್ಟೇಶನ್ ರಸ್ತೆ, ವಿಜಯಪುರ1
- ವಿಜಯಪುರ: ಗ್ಯಾಸ್ ಅಭಾವ ಆಟೋ ಚಾಲಕರ ಪರದಾಟ ವಿಜಯಪುರದಲ್ಲಿ ಆಟೋ ಗ್ಯಾಸ್ ಅಭಾವದಿಂದ ಚಾಲಕರು ತೀವ್ರ ತೊಂದರೆ ಎದುರಿಸುತ್ತಿದ್ದಾರೆ. ಗ್ಯಾಸ್ ಲಭ್ಯತೆ ಇಲ್ಲದೆ ಆಟೋಗಳನ್ನು ನಿಲ್ಲಿಸಬೇಕಾದ ಪರಿಸ್ಥಿತಿ ಎದುರಾಗಿದೆ. ಇದರಿಂದಾಗಿ ದುಡಿಮೆ ಇಲ್ಲದೆ, ಮನೆಯ ಸಂಘ, ಫೈನಾನ್ಸ್ ಕೆಲಸಗಳನ್ನು ನಿಭಾಯಿಸುವುದು ಕಷ್ಟವಾಗುತ್ತಿದೆ ಎಂದು ಆಟೋ ಚಾಲಕ ಮಹೆಬೂಬ್ ತಿಳಿಸಿದ್ದಾರೆ. ಸರ್ಕಾರ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.1
- ಬೆಂಗಳೂರು: ಸರ್ಕಾರಿ ಸವಲತ್ತುಗಳನ್ನು ಪಡೆಯಲು ಕಚೇರಿಗಳಿಗೆ ಬರುವ ನಾಗರಿಕರನ್ನು ಹಲವೆಡೆ ಹೀನಾಯವಾಗಿ ನಡೆಸಿಕೊಳ್ಳಲಾಗುತ್ತಿದೆ ಎಂದು ಪರಿಷತ್ ಸದಸ್ಯ ಪಿ.ಹೆಚ್. ಪೂಜಾರ್ ಅವರು ವಿಧಾನ ಪರಿಷತ್ನಲ್ಲಿ ಸರ್ಕಾರದ ಗಮನಕ್ಕೆ ತಂದರು. ಒಂದು ಇ-ಖಾತಾ ಪಡೆಯುವುದಕ್ಕೂ ಜನರು ಹಲವಾರು ಬಾರಿ ಕಚೇರಿಗಳಿಗೆ ಅಲೆದಾಡಬೇಕಾದ ಪರಿಸ್ಥಿತಿ ಇದೆ. ಜನರು ತಮ್ಮ ಚಪ್ಪಲಿ ಸವೆಸುವವರೆಗೆ ಅಧಿಕಾರಿಗಳ ಹಿಂದೆ ತಿರುಗಬೇಕಾಗುತ್ತಿದೆ ಎಂದು ಅವರು ಆರೋಪಿಸಿದರು. ಸರ್ಕಾರಿ ಸೇವೆಗಳು ಜನರಿಗೆ ಸುಲಭವಾಗಿ ದೊರೆಯುವಂತೆ ವ್ಯವಸ್ಥೆ ಮಾಡಬೇಕು. ನಾಗರಿಕರಿಗೆ ಆಗುತ್ತಿರುವ ತೊಂದರೆಗಳನ್ನು ಸರ್ಕಾರ ಕೂಡಲೇ ಬಗೆಹರಿಸಬೇಕು ಎಂದು ಅವರು ಆಗ್ರಹಿಸಿದರು.1