ಚಾಮರಾಜನಗರ ಜಿಲ್ಲೆಯ ಯಳಂದೂರಿನಲ್ಲಿ ತಾಲ್ಲೂಕು ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹಿತರಕ್ಷಣಾ ಸಮಿತಿ ಸಭೆಯನ್ನು ದಲಿತ ಮುಖಂಡರು ಬಹಿಷ್ಕರಿಸಿದ್ದಾರೆ. ಕೆಲವು ಪ್ರಮುಖ ಅಧಿಕಾರಿಗಳು ಗೈರಾದ ಕಾರಣ ಮುಖಂಡರು ಸಭೆಯನ್ನು ಬಹಿಷ್ಕರಿಸಿ ಹೊರನಡೆದರು. ಪಟ್ಟಣದ ತಾಲ್ಲೂಕು ಪಂಚಾಯತಿ ಕಚೇರಿ ಆವರಣದಲ್ಲಿ ತಹಶೀಲ್ದಾರ್ ಎಸ್.ಎಲ್. ನಯನಾ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಗೆ ಅಬಕಾರಿ, ಸಣ್ಣ ನೀರಾವರಿ, ಅರಣ್ಯ ಸೇರಿದಂತೆ ಅನೇಕ ಇಲಾಖೆಗಳ ಅಧಿಕಾರಿಗಳು ಗೈರಾಗಿದ್ದರು. ಅಲ್ಲದೆ, ಕೆಲವು ಇಲಾಖೆಗಳಲ್ಲಿ ಕೇವಲ ಕೆಳ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿ ಮಾತ್ರ ಹಾಜರಾಗಿದ್ದಕ್ಕೆ ದಲಿತ ಮುಖಂಡರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಮೂರು ತಿಂಗಳಿಗೊಮ್ಮೆ ನಡೆಯಬೇಕಿದ್ದ ಈ ಸಭೆಯನ್ನು ವಿಳಂಬವಾಗಿ ಆಯೋಜಿಸಿದ್ದನ್ನು ಖಂಡಿಸಿದ ಮುಖಂಡರು, ಇದು ತಹಶೀಲ್ದಾರ್ ಮತ್ತು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳ ದಲಿತ ವಿರೋಧಿ ಧೋರಣೆ ಎಂದು ಆರೋಪಿಸಿದರು. ಹಿಂದಿನ ಸಭೆಯ ಅನುಪಾಲನಾ ವರದಿಯನ್ನು ಸರಿಯಾಗಿ ಸಿದ್ಧಪಡಿಸಿಲ್ಲ ಮತ್ತು ಕಳೆದ ಸಭೆಗೆ ಗೈರಾದ ಅಧಿಕಾರಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ತಾಲ್ಲೂಕು ಆಡಳಿತ ಕಾಟಾಚಾರಕ್ಕೆ ಸಭೆ ನಡೆಸುತ್ತಿದೆ ಎಂದು ತೀವ್ರವಾಗಿ ಖಂಡಿಸಿ, ಸಭೆಯನ್ನು ಬಹಿಷ್ಕರಿಸಿ ಹೊರನಡೆದರು. ದಲಿತ ಮುಖಂಡರ ಬಹಿಷ್ಕಾರದ ನಂತರ ಮಾತನಾಡಿದ ತಹಶೀಲ್ದಾರ್ ಎಸ್.ಎಲ್. ನಯನಾ ಅವರು, ಸಭೆಗೆ ಗೈರಾದ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗುವುದು ಮತ್ತು ಮುಂದಿನ ಸಭೆಯನ್ನು ಜೂನ್ 8 ರಂದು ಆಯೋಜಿಸಲಾಗುವುದು ಎಂದು ತಿಳಿಸಿದರು. ಈ ಸಭೆಯಲ್ಲಿ ಡಿವೈಎಸ್ಪಿ ಮೋಹನ್, ಕ್ಷೇತ್ರ ಶಿಕ್ಷಣಾಧಿಕಾರಿ ಮಾರಯ್ಯ, ಪಟ್ಟಣ ಪಂಚಾಯತಿ ಮುಖ್ಯಧಿಕಾರಿ ಎಂ.ಪಿ. ಮಹೇಶ್ ಕುಮಾರ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಕೇಶವಮೂರ್ತಿ ಸೇರಿದಂತೆ ದಲಿತ ಮುಖಂಡರು, ವಿವಿಧ ಇಲಾಖಾ ಅಧಿಕಾರಿಗಳು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.
ಚಾಮರಾಜನಗರ ಜಿಲ್ಲೆಯ ಯಳಂದೂರಿನಲ್ಲಿ ತಾಲ್ಲೂಕು ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹಿತರಕ್ಷಣಾ ಸಮಿತಿ ಸಭೆಯನ್ನು ದಲಿತ ಮುಖಂಡರು ಬಹಿಷ್ಕರಿಸಿದ್ದಾರೆ. ಕೆಲವು ಪ್ರಮುಖ ಅಧಿಕಾರಿಗಳು ಗೈರಾದ ಕಾರಣ ಮುಖಂಡರು ಸಭೆಯನ್ನು ಬಹಿಷ್ಕರಿಸಿ ಹೊರನಡೆದರು. ಪಟ್ಟಣದ ತಾಲ್ಲೂಕು ಪಂಚಾಯತಿ ಕಚೇರಿ ಆವರಣದಲ್ಲಿ ತಹಶೀಲ್ದಾರ್ ಎಸ್.ಎಲ್. ನಯನಾ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಗೆ ಅಬಕಾರಿ, ಸಣ್ಣ ನೀರಾವರಿ, ಅರಣ್ಯ ಸೇರಿದಂತೆ ಅನೇಕ ಇಲಾಖೆಗಳ ಅಧಿಕಾರಿಗಳು ಗೈರಾಗಿದ್ದರು. ಅಲ್ಲದೆ, ಕೆಲವು ಇಲಾಖೆಗಳಲ್ಲಿ ಕೇವಲ ಕೆಳ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿ ಮಾತ್ರ ಹಾಜರಾಗಿದ್ದಕ್ಕೆ ದಲಿತ ಮುಖಂಡರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಮೂರು ತಿಂಗಳಿಗೊಮ್ಮೆ ನಡೆಯಬೇಕಿದ್ದ ಈ ಸಭೆಯನ್ನು ವಿಳಂಬವಾಗಿ ಆಯೋಜಿಸಿದ್ದನ್ನು ಖಂಡಿಸಿದ ಮುಖಂಡರು, ಇದು ತಹಶೀಲ್ದಾರ್ ಮತ್ತು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳ ದಲಿತ ವಿರೋಧಿ ಧೋರಣೆ ಎಂದು ಆರೋಪಿಸಿದರು. ಹಿಂದಿನ ಸಭೆಯ ಅನುಪಾಲನಾ ವರದಿಯನ್ನು ಸರಿಯಾಗಿ ಸಿದ್ಧಪಡಿಸಿಲ್ಲ ಮತ್ತು ಕಳೆದ ಸಭೆಗೆ ಗೈರಾದ ಅಧಿಕಾರಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ತಾಲ್ಲೂಕು ಆಡಳಿತ ಕಾಟಾಚಾರಕ್ಕೆ ಸಭೆ ನಡೆಸುತ್ತಿದೆ ಎಂದು ತೀವ್ರವಾಗಿ ಖಂಡಿಸಿ, ಸಭೆಯನ್ನು ಬಹಿಷ್ಕರಿಸಿ ಹೊರನಡೆದರು. ದಲಿತ ಮುಖಂಡರ ಬಹಿಷ್ಕಾರದ ನಂತರ ಮಾತನಾಡಿದ ತಹಶೀಲ್ದಾರ್ ಎಸ್.ಎಲ್. ನಯನಾ ಅವರು, ಸಭೆಗೆ ಗೈರಾದ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗುವುದು ಮತ್ತು ಮುಂದಿನ ಸಭೆಯನ್ನು ಜೂನ್ 8 ರಂದು ಆಯೋಜಿಸಲಾಗುವುದು ಎಂದು ತಿಳಿಸಿದರು. ಈ ಸಭೆಯಲ್ಲಿ ಡಿವೈಎಸ್ಪಿ ಮೋಹನ್, ಕ್ಷೇತ್ರ ಶಿಕ್ಷಣಾಧಿಕಾರಿ ಮಾರಯ್ಯ, ಪಟ್ಟಣ ಪಂಚಾಯತಿ ಮುಖ್ಯಧಿಕಾರಿ ಎಂ.ಪಿ. ಮಹೇಶ್ ಕುಮಾರ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಕೇಶವಮೂರ್ತಿ ಸೇರಿದಂತೆ ದಲಿತ ಮುಖಂಡರು, ವಿವಿಧ ಇಲಾಖಾ ಅಧಿಕಾರಿಗಳು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.
- ಚಾಮರಾಜನಗರ ಜಿಲ್ಲೆಯ ಯಳಂದೂರಿನಲ್ಲಿ ತಾಲ್ಲೂಕು ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹಿತರಕ್ಷಣಾ ಸಮಿತಿ ಸಭೆಯನ್ನು ದಲಿತ ಮುಖಂಡರು ಬಹಿಷ್ಕರಿಸಿದ್ದಾರೆ. ಕೆಲವು ಪ್ರಮುಖ ಅಧಿಕಾರಿಗಳು ಗೈರಾದ ಕಾರಣ ಮುಖಂಡರು ಸಭೆಯನ್ನು ಬಹಿಷ್ಕರಿಸಿ ಹೊರನಡೆದರು. ಪಟ್ಟಣದ ತಾಲ್ಲೂಕು ಪಂಚಾಯತಿ ಕಚೇರಿ ಆವರಣದಲ್ಲಿ ತಹಶೀಲ್ದಾರ್ ಎಸ್.ಎಲ್. ನಯನಾ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಗೆ ಅಬಕಾರಿ, ಸಣ್ಣ ನೀರಾವರಿ, ಅರಣ್ಯ ಸೇರಿದಂತೆ ಅನೇಕ ಇಲಾಖೆಗಳ ಅಧಿಕಾರಿಗಳು ಗೈರಾಗಿದ್ದರು. ಅಲ್ಲದೆ, ಕೆಲವು ಇಲಾಖೆಗಳಲ್ಲಿ ಕೇವಲ ಕೆಳ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿ ಮಾತ್ರ ಹಾಜರಾಗಿದ್ದಕ್ಕೆ ದಲಿತ ಮುಖಂಡರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಮೂರು ತಿಂಗಳಿಗೊಮ್ಮೆ ನಡೆಯಬೇಕಿದ್ದ ಈ ಸಭೆಯನ್ನು ವಿಳಂಬವಾಗಿ ಆಯೋಜಿಸಿದ್ದನ್ನು ಖಂಡಿಸಿದ ಮುಖಂಡರು, ಇದು ತಹಶೀಲ್ದಾರ್ ಮತ್ತು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳ ದಲಿತ ವಿರೋಧಿ ಧೋರಣೆ ಎಂದು ಆರೋಪಿಸಿದರು. ಹಿಂದಿನ ಸಭೆಯ ಅನುಪಾಲನಾ ವರದಿಯನ್ನು ಸರಿಯಾಗಿ ಸಿದ್ಧಪಡಿಸಿಲ್ಲ ಮತ್ತು ಕಳೆದ ಸಭೆಗೆ ಗೈರಾದ ಅಧಿಕಾರಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ತಾಲ್ಲೂಕು ಆಡಳಿತ ಕಾಟಾಚಾರಕ್ಕೆ ಸಭೆ ನಡೆಸುತ್ತಿದೆ ಎಂದು ತೀವ್ರವಾಗಿ ಖಂಡಿಸಿ, ಸಭೆಯನ್ನು ಬಹಿಷ್ಕರಿಸಿ ಹೊರನಡೆದರು. ದಲಿತ ಮುಖಂಡರ ಬಹಿಷ್ಕಾರದ ನಂತರ ಮಾತನಾಡಿದ ತಹಶೀಲ್ದಾರ್ ಎಸ್.ಎಲ್. ನಯನಾ ಅವರು, ಸಭೆಗೆ ಗೈರಾದ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗುವುದು ಮತ್ತು ಮುಂದಿನ ಸಭೆಯನ್ನು ಜೂನ್ 8 ರಂದು ಆಯೋಜಿಸಲಾಗುವುದು ಎಂದು ತಿಳಿಸಿದರು. ಈ ಸಭೆಯಲ್ಲಿ ಡಿವೈಎಸ್ಪಿ ಮೋಹನ್, ಕ್ಷೇತ್ರ ಶಿಕ್ಷಣಾಧಿಕಾರಿ ಮಾರಯ್ಯ, ಪಟ್ಟಣ ಪಂಚಾಯತಿ ಮುಖ್ಯಧಿಕಾರಿ ಎಂ.ಪಿ. ಮಹೇಶ್ ಕುಮಾರ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಕೇಶವಮೂರ್ತಿ ಸೇರಿದಂತೆ ದಲಿತ ಮುಖಂಡರು, ವಿವಿಧ ಇಲಾಖಾ ಅಧಿಕಾರಿಗಳು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.1
- ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ದೊಡ್ಡಾಲತ್ತೂರು ಗ್ರಾಮದಲ್ಲಿ ಸಂತಾನ ಭಾಗ್ಯಕ್ಕಾಗಿ ಪ್ರಸಿದ್ಧವಾದ ತೊಟ್ಟಿಲು ಪೂಜೆ ಕಾರ್ಯಕ್ರಮವು ಭಕ್ತಿಭಾವದಿಂದ ನಡೆಯಿತು. ಬೆಟ್ಟದ ಶಂಕರಪ್ಪ ಅವರು ನೀಡುವ ಗಿಡಮೂಲಿಕೆ ಔಷಧಿ ಹಾಗೂ 'ನ್ಯಾಣ ಪೂಜೆ'ಯಿಂದ ಮಕ್ಕಳಾದವರು ಎಂಬ ದೃಢ ನಂಬಿಕೆಯಿಂದ ರಾಜ್ಯದ ವಿವಿಧ ಭಾಗಗಳಿಂದ ನೂರಾರು ದಂಪತಿಗಳು ತಮ್ಮ ಮಕ್ಕಳೊಂದಿಗೆ ಈ ಮಹತ್ವದ ಕಾರ್ಯಕ್ರಮದಲ್ಲಿ ಭಾಗವಹಿಸಿ ಪೂಜೆ ಸಲ್ಲಿಸಿದರು. ಕನ್ನಡ ಚಿತ್ರರಂಗದ ಖ್ಯಾತ ನಟರಾದ ತಾರಾ ಮತ್ತು ಶಶಿಕುಮಾರ್ ಕೂಡ ಈ ವಿಶೇಷ ಕಾರ್ಯಕ್ರಮಕ್ಕೆ ಭೇಟಿ ನೀಡಿ, ಭಕ್ತಿಪೂರ್ವಕವಾಗಿ ನಡೆಯುತ್ತಿದ್ದ ತೊಟ್ಟಿಲು ಪೂಜೆಯನ್ನು ವೀಕ್ಷಿಸಿ ಸಂತಸ ವ್ಯಕ್ತಪಡಿಸಿದರು.3
- ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಷ್ಮೇಶ್ವರ ಸ್ವಾಮಿ ಪುಣ್ಯಕ್ಷೇತ್ರದಲ್ಲಿ, ಶ್ರೀ ಬೆಟ್ಟದ ಶಂಕರಪ್ಪ ಅವರು ಕಳೆದ 300-400 ವರ್ಷಗಳಿಂದ ತಲೆಮಾರುಗಳಿಂದ ಬಂದಿರುವ ಪವಿತ್ರ ಪರಂಪರೆಯನ್ನು ಅತ್ಯಂತ ಶ್ರದ್ಧೆಯಿಂದ ಮುಂದುವರಿಸಿಕೊಂಡು ಹೋಗುತ್ತಿದ್ದಾರೆ. ಆಧುನಿಕ ವೈದ್ಯಕೀಯ ಜಗತ್ತಿನಲ್ಲಿ ಭರವಸೆ ಕಳೆದುಕೊಂಡ ಮಕ್ಕಳಿಲ್ಲದ ನೂರಾರು ದಂಪತಿಗಳ ಬಾಳಿನಲ್ಲಿ ನಗು ಮೂಡಿಸುವ ಪ್ರಯತ್ನವನ್ನು ಅವರು ನಿರಂತರವಾಗಿ ಮಾಡುತ್ತಿದ್ದಾರೆ. ಶಂಕರಪ್ಪ ಅವರು ತಮ್ಮ ಪೂರ್ವಿಕರಿಂದ ಬಂದಿರುವ ಈ ಪುಣ್ಯ ಕಾರ್ಯಕ್ರಮವನ್ನು ಕೇವಲ ಹಣಕ್ಕಾಗಿ ಅಲ್ಲದೆ, ದಂಪತಿಗಳ ಅಳಲನ್ನು ಕಂಡು, ಅವರಿಗೆ ದೈವಿಕ ಆಶೀರ್ವಾದದೊಂದಿಗೆ ಗಿಡಮೂಲಿಕೆ ಔಷಧಿಯನ್ನು ನೀಡಿ ಸಂತೋಷ ತರುತ್ತಿದ್ದಾರೆ. ಇದು ಅವರ ಬದುಕಿನ ಒಂದು ಅವಿಭಾಜ್ಯ ಭಾಗವಾಗಿದೆ. 'ಶ್ರೀ ಮಕ್ಷ್ಮೇಶ್ವರ ಸ್ವಾಮಿ, ಶ್ರೀ ಮಲೆ ಮಹದೇಶ್ವರ ಸ್ವಾಮಿ ಹಾಗೂ ಶ್ರೀ ಸಿದ್ದಪ್ಪಾಜಿ ಸ್ವಾಮಿಯವರ ಆಶೀರ್ವಾದದಿಂದ ಈ ಔಷಧವು ಕೆಲಸ ಮಾಡುತ್ತದೆ' ಎಂಬುದು ಶಂಕರಪ್ಪ ಅವರ ಅಚಲ ನಂಬಿಕೆ. ಎಷ್ಟೋ ವೈದ್ಯಕೀಯ ಚಿಕಿತ್ಸೆಗಳ ಬಳಿಕವೂ ಮಕ್ಕಳ ಭಾಗ್ಯ ಕಾಣದ ನೂರಾರು ದಂಪತಿಗಳು ಶಂಕರಪ್ಪನವರ ಬಳಿ ಬಂದು ಆಶೀರ್ವಾದ ಮತ್ತು ಔಷಧಿ ಪಡೆದು ಸಂತಾನ ಭಾಗ್ಯ ಪಡೆದ ಉದಾಹರಣೆಗಳಿವೆ. ಇತ್ತೀಚೆಗೆ ನಡೆದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ಮಾಜಿ ಲೋಕಸಭಾ ಸದಸ್ಯರಾದ ಶ್ರೀ ಶಶಿಕುಮಾರ್ ಮತ್ತು ಖ್ಯಾತ ನಟಿ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ತಾರಾ ಅವರು ಭಾಗವಹಿಸಿದ್ದರು. ಈ ಗಣ್ಯರು ಶಂಕರಪ್ಪ ಅವರು ನಡೆಸಿಕೊಂಡು ಬರುತ್ತಿರುವ ಈ ಸಮಾಜಮುಖಿ ಮತ್ತು ಸಾಂಪ್ರದಾಯಿಕ ಕಾರ್ಯವನ್ನು ವಿಶೇಷವಾಗಿ ಶ್ಲಾಘಿಸಿದರು. ಪ್ರತಿ ಮೂರು ತಿಂಗಳಿಗೊಮ್ಮೆ ದಂಪತಿಗಳನ್ನು ಕರೆಸಿ, ಪೂಜೆ ಮಾಡಿಸಿ, ಅವರ ಕಷ್ಟಗಳಿಗೆ ಆಸರೆಯಾಗಿ ನಿಲ್ಲುವ ಬೆಟ್ಟದ ಶಂಕರಪ್ಪ ಅವರ ಈ ಸೇವಾ ಕಾರ್ಯವು ಇಂದಿಗೂ ದೊಡ್ಡಾಲತ್ತೂರಿನ ಪುಣ್ಯಕ್ಷೇತ್ರದಲ್ಲಿ ನಂಬಿಕೆಯ ದೀವಿಗೆಯಾಗಿ ಬೆಳಗುತ್ತಿದೆ. ಆಸಕ್ತ ದಂಪತಿಗಳು ಶ್ರೀ ಬೆಟ್ಟದ ಶಂಕರಪ್ಪ ಅವರನ್ನು 9449588654 ಮೊಬೈಲ್ ಸಂಖ್ಯೆಯಲ್ಲಿ ಸಂಪರ್ಕಿಸಬಹುದು.1
- ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಬುಧವಾರ ಸಂಜೆ ದಾರುಣ ಘಟನೆ ನಡೆದಿದೆ. ಸೆಲ್ಫಿ ತೆಗೆದುಕೊಳ್ಳುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ ಸಿಲುಕಿದ ಪರಿಣಾಮ ಬೆಂಗಳೂರು ಮೂಲದ ಒಂದೇ ಕುಟುಂಬದ ನಾಲ್ವರು ಮಹಿಳೆಯರು ಹಾಗೂ ಕಾರಿನ ಚಾಲಕ ಸೇರಿ ಒಟ್ಟು ಐವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಒಬ್ಬರು ಪಾರಾಗಿರುವುದಾಗಿ ವರದಿಯಾಗಿದೆ. ಮೃತರನ್ನು ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ವಿರುಪಾಕ್ಷಿಪುರ ಹೋಬಳಿಯ ಜಗದಪುರ ಗ್ರಾಮದ ನಿವಾಸಿಗಳಾದ ವಿಜಯಮ್ಮ (೫೨), ಅವರ ಮಗಳು ಪ್ರಿಯಾಂಕ, ಶ್ವೇತಾ (೩೮), ಅವರ ಮಗಳು ಚೈತ್ರಾ (೨೦) ಹಾಗೂ ಬೆಂಗಳೂರಿನ ಕಾರಿನ ಚಾಲಕ ಮಹೇಶ್ (೩೦) ಎಂದು ಗುರುತಿಸಲಾಗಿದೆ. ಕಬ್ಬಾಳು ದೇವಸ್ಥಾನದಲ್ಲಿ ಬೀಗರ ಔತಣ ಕೂಟದ ನಿಮಿತ್ತ ಆಗಮಿಸಿದ್ದ ಇವರು, ಪೂಜೆ ಸಲ್ಲಿಸಿದ ನಂತರ ಮಳವಳ್ಳಿ ತಾಲ್ಲೂಕಿನ ಮುತ್ತತ್ತಿ ಪ್ರವಾಸಿ ತಾಣಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದರು. ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾಗ ಅಕಸ್ಮಿಕವಾಗಿ ಕಾಲು ಜಾರಿ ನಾಲ್ವರು ಮಹಿಳೆಯರು ನದಿಗೆ ಬಿದ್ದಿದ್ದಾರೆ. ನದಿಯ ವೇಗದ ಹರಿವಿಗೆ ಸಿಲುಕಿದ ಅವರನ್ನು ರಕ್ಷಿಸಲು ಮುಂದಾದ ಕಾರಿನ ಚಾಲಕ ಮಹೇಶ್ ಕೂಡ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ನೀರಿನಲ್ಲಿ ಮುಳುಗಿದ್ದ ಮೃತದೇಹಗಳನ್ನು ನುರಿತ ಈಜುಗಾರರ ಸಹಾಯದಿಂದ ರಾತ್ರಿ ಸುಮಾರು ೭ ಗಂಟೆಗೆ ಹೊರತೆಗೆಯಲಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಪರೀಕ್ಷೆ ಬಳಿಕ ಮೃತದೇಹಗಳನ್ನು ವಾರಸುದಾರರಿಗೆ ಹಸ್ತಾಂತರಿಸಲಾಗುವುದು. ಘಟನಾ ಸ್ಥಳಕ್ಕೆ ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ್, ಜಿಲ್ಲಾ ಪೊಲೀಸ್ ಅಧೀಕ್ಷಕಿ ವಿ.ಜೆ. ಶೋಭರಾಣಿ, ಡಿವೈಎಸ್ಪಿ ಯಶವಂತ್ ಕುಮಾರ್ ಹಾಗೂ ಹಲಗೂರು ಪೊಲೀಸ್ ಠಾಣೆಯ ಪಿಎಸ್ಐ ಲೋಕೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಸಿಹೆಚ್ಸಿ ಗೋವರ್ಧನ್, ಮೋಹನ್ ಕುಮಾರ್, ಪ್ರಶಾಂತ್ ಕುಮಾರ್ ಹಾಗೂ ಮಹಿಳಾ ಪೊಲೀಸ್ ಸಿಬ್ಬಂದಿ ಗೀತಾ ಅಂಚಿನಾಳ ಸೇರಿದಂತೆ ಇತರರು ಉಪಸ್ಥಿತರಿದ್ದರು. ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.1
- ಮೈಸೂರಿನ ಕೃಷ್ಣಮೂರ್ತಿಪುರಂನ ಕಾಂತರಾಜ ಅರಸು ರಸ್ತೆಯಲ್ಲಿರುವ ಶ್ರೀ ರಾಮ ಮಂದಿರದಲ್ಲಿ, ಶ್ರೀ ವೀರಾಂಜನೇಯ ಮಹಾಸಂಸ್ಥಾನಮ್, ಹೇಮಪುರ ಮಹಾಪೀಠಂ, ಶ್ರೀ ಕ್ಷೇತ್ರ ಬಂಗಾರಮಕ್ಕಿಯ ಪೀಠಾಧಿಪತಿಗಳಾದ ಪೂಜ್ಯ ಶ್ರೀ ಶ್ರೀ ಶ್ರೀ ಮಾರುತಿ ಗುರೂಜಿ ಅವರ ನೇತೃತ್ವದಲ್ಲಿ ಜೂನ್ 23ರಿಂದ ಆರಂಭಗೊಂಡ ಮೂರು ದಿನಗಳ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಭಕ್ತರ ಭಾರೀ ಭಾಗವಹಿಸುವಿಕೆಯೊಂದಿಗೆ ನಡೆಯುತ್ತಿದ್ದು, ನಾಳೆ (ಜೂನ್ 25) ಸಮಾರೋಪಗೊಳ್ಳಲಿವೆ. ಭಕ್ತರ ಕೋರಿಕೆಯ ಮೇರೆಗೆ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ವಿವಿಧ ಪೂಜಾ ಕೈಂಕರ್ಯಗಳು, ಹವನಗಳು ಹಾಗೂ ವಿಶೇಷ ಅರ್ಚನೆಗಳು ನೆರವೇರಿವೆ. ಕಾರ್ಯಕ್ರಮದ ಮೊದಲ ದಿನ, ಜೂನ್ 23ರಂದು ಲೋಕಕಲ್ಯಾಣಾರ್ಥವಾಗಿ ರಾಮತಾರಕ ಮಂತ್ರ ಹವನ ಹಾಗೂ ಆಂಜನೇಯ ಮಂತ್ರ ಹವನವನ್ನು ಆಯೋಜಿಸಲಾಗಿತ್ತು. ಈ ಪೂರ್ಣಾಹುತಿ ಕಾರ್ಯಕ್ರಮವು ಬೆಳಿಗ್ಗೆ 11.30ಕ್ಕೆ ನೆರವೇರಿದ್ದು, ನೂರಾರು ಭಕ್ತರು ಹವನದಲ್ಲಿ ಭಾಗವಹಿಸಿ ಪೂರ್ಣಾಹುತಿಗೆ ಸಾಕ್ಷಿಯಾದರು. ಜೂನ್ 24ರಂದು ಸಿಂಧೂರ ಅರ್ಚನೆ ವಿಶೇಷವಾಗಿ ನಡೆಯಿತು. ಈ ಅರ್ಚನೆಯಲ್ಲಿ ಪೂರ್ವ ನೋಂದಣಿ ಮಾಡಿಕೊಂಡ ದಂಪತಿಗಳು ಸಂಕಲ್ಪದೊಂದಿಗೆ ಭಾಗವಹಿಸಿದ್ದು, ಮೊದಲಿಗೆ ನೋಂದಾಯಿಸಿಕೊಂಡ 108 ದಂಪತಿಗಳಿಗೆ ಆದ್ಯತೆ ನೀಡಲಾಯಿತು. ಶ್ರೀ ವೀರಾಂಜನೇಯ ಸ್ವಾಮಿಗೆ ಸಿಂಧೂರ ಅರ್ಪಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ಪೂಜೆಗೆ ಅಗತ್ಯವಾದ ಸಿಂಧೂರ ಹಾಗೂ ಯಂತ್ರಗಳನ್ನು ಸಂಸ್ಥಾನದ ವತಿಯಿಂದಲೇ ಒದಗಿಸಲಾಗಿತ್ತು. ಕಾರ್ಯಕ್ರಮದ ಅಂತಿಮ ದಿನವಾದ ನಾಳೆ, ಜೂನ್ 25ರಂದು ಶ್ರೀ ವೀರಾಂಜನೇಯ ದೇವರಿಗೆ ಆಯುತ ಸಂಖ್ಯೆಯಲ್ಲಿ ಅರ್ಚನೆ ನಡೆಯಲಿದೆ. ಬಳಿಕ ಶ್ರೀ ಮಾರುತಿ ಗುರೂಜಿ ಅವರು ಭಕ್ತರಿಗೆ ಆಶೀರ್ವಚನ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ಗುರುವಂದನಾ ಕಾರ್ಯಕ್ರಮವೂ ಆಯೋಜಿಸಲಾಗಿದ್ದು, ಮೈಸೂರಿನ ವಿವಿಧ ಸಂಘ-ಸಂಸ್ಥೆಗಳು ಹಾಗೂ ಭಕ್ತವೃಂದದ ವತಿಯಿಂದ ಗುರೂಜಿಯವರಿಗೆ ಗುರುನಮನ ಸಮರ್ಪಿಸಲಾಗುತ್ತದೆ. ತದನಂತರ ಗುರೂಜಿಯವರು ಭಕ್ತರಿಗೆ ಆಶೀರ್ವಾದ ನೀಡಲಿದ್ದಾರೆ. ಈ ಮೂರು ದಿನಗಳ ಆಧ್ಯಾತ್ಮಿಕ ಕಾರ್ಯಕ್ರಮದಲ್ಲಿ ಮೈಸೂರು ಹಾಗೂ ಸುತ್ತಮುತ್ತಲಿನ ಭಾಗಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಶ್ರೀ ವೀರಾಂಜನೇಯ ದೇವರ ಕೃಪೆಗೆ ಪಾತ್ರರಾಗಿದ್ದಾರೆ. ನಾಳೆ ನಡೆಯಲಿರುವ ಸಮಾರೋಪ ಕಾರ್ಯಕ್ರಮದಲ್ಲಿ ಇನ್ನಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆಯಿದೆ.3
- ಮಳವಳ್ಳಿ ತಾಲೂಕಿನ ಪ್ರಸಿದ್ಧ ಪ್ರೇಕ್ಷಣೀಯ ಸ್ಥಳವಾದ ಹಲಗೂರು ಸಮೀಪದ ಮುತ್ತತ್ತಿಯಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಒಂದೇ ಕುಟುಂಬದ ಐವರು ಕಾವೇರಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಈ ಘಟನೆ ಬುಧವಾರ ನಡೆದಿದ್ದು, ಮೃತರ ಹೆಸರು ಮತ್ತು ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ. ಮೃತಪಟ್ಟವರಲ್ಲಿ ನಾಲ್ವರು ಮಹಿಳೆಯರು ಮತ್ತು ಒಬ್ಬ ಪುರುಷ ಸೇರಿದ್ದಾರೆ. ಇವರೆಲ್ಲರೂ ಚೆನ್ನಪಟ್ಟಣ ತಾಲೂಕಿನ ಬ್ಯಾಡರಹಳ್ಳಿ ಗ್ರಾಮದವರು ಎಂದು ತಿಳಿದುಬಂದಿದೆ. ಚಾಲಕ ಸೇರಿದಂತೆ ಒಂದೇ ಕುಟುಂಬದ ಒಟ್ಟು ಏಳು ಜನರ ತಂಡ ಬುಧವಾರ ಬೆಳಗ್ಗೆ ಸಾತನೂರು ಬಳಿಯ ಕಬ್ಬಾಳಮ್ಮ ದೇವಾಲಯಕ್ಕೆ ಕಾರಿನಲ್ಲಿ ತೆರಳಿತ್ತು. ಕಬ್ಬಾಳಮ್ಮನ ಪೂಜೆ ಮುಗಿಸಿಕೊಂಡು ಮಧ್ಯಾಹ್ನ 3 ಗಂಟೆಗೆ ಮುತ್ತತ್ತಿಗೆ ಬಂದಿದ್ದ ಈ ಕುಟುಂಬ, ಆಂಜನೇಯಸ್ವಾಮಿ ದರ್ಶನಕ್ಕೂ ಮುನ್ನ ಕಾವೇರಿ ನದಿಯಲ್ಲಿ ಸ್ನಾನ ಮಾಡಲು ಇಳಿದಾಗ ಐವರು ನೀರಿನಲ್ಲಿ ಮುಳುಗಿ ಪ್ರಾಣ ಕಳೆದುಕೊಂಡಿದ್ದಾರೆ. ಈಗಾಗಲೇ ಮೂವರ ಮೃತದೇಹಗಳನ್ನು ನದಿಯಿಂದ ಹೊರತೆಗೆಯಲಾಗಿದ್ದು, ಉಳಿದ ಇಬ್ಬರ ಶವಗಳಿಗಾಗಿ ಶೋಧಕಾರ್ಯ ಮುಂದುವರಿದಿದೆ. ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಹಲಗೂರು ಸಬ್ ಇನ್ಸ್ಪೆಕ್ಟರ್ ಲೋಕೇಶ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ನಂತರ ಎಸ್ಪಿ ಡಾ. ಶೋಭರಾಣಿ, ಡಿವೈಎಸ್ಪಿ ಯಶವಂತ್ ಕುಮಾರ್ ಹಾಗೂ ಸಿಪಿಐ ಶ್ರೀಧರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.1
- ಭಾರತದಲ್ಲಿ ವೈರಲ್ ಆಗಿರುವ ವಿಷಯಕ್ಕೆ ಸಂಬಂಧಿಸಿದಂತೆ, ಹಗಲುಗನಸುಗಾರರು ಯಾವುದೇ ಸಮಯದಲ್ಲಿ ತಮ್ಮ ಸ್ವಾರ್ಥಕ್ಕಾಗಿ ಸುಳ್ಳು ನಿರೂಪಣೆಗಳನ್ನು ಹರಡುತ್ತಿರುತ್ತಾರೆ ಎಂದು ಸ್ಪಷ್ಟಪಡಿಸಲಾಗಿದೆ. ಇಂತಹ ವ್ಯಕ್ತಿಗಳು ಕೇವಲ ತಮ್ಮ ವೈಯಕ್ತಿಕ ಹಿತಾಸಕ್ತಿಗಳನ್ನು ಪೂರೈಸಿಕೊಳ್ಳುವ ಉದ್ದೇಶದಿಂದ ನಕಲಿ ಕಥೆಗಳನ್ನು ಹರಡುವಲ್ಲಿ ನಿರತರಾಗಿರುತ್ತಾರೆ.1
- ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮೆಲ್ಲಹಳ್ಳಿ ಸರ್ಕಾರಿ ಆದರ್ಶ ವಿದ್ಯಾಲಯವು 2024-25 ಮತ್ತು 2025-26ನೇ ಸಾಲಿನ ರಾಷ್ಟ್ರಮಟ್ಟದ ಅತ್ಯುನ್ನತ ವಿಜ್ಞಾನ ಸ್ಪರ್ಧೆಯಾದ 'ಇನ್ಸ್ಪೈರ್ ಅವಾರ್ಡ್ ಮಾನಕ್' ಸ್ಪರ್ಧೆಗೆ ನೋಂದಣಿಯಾಗಿದ್ದು, ಶಾಲೆಯ ಐದು ವಿದ್ಯಾರ್ಥಿಗಳು ಈ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಈ ಪೈಕಿ, 2024-25ನೇ ಸಾಲಿನಲ್ಲಿ ನಾಲ್ಕು ವಿದ್ಯಾರ್ಥಿಗಳು ಆಯ್ಕೆಯಾಗಿದ್ದರೆ, 2025-26ನೇ ಸಾಲಿನಲ್ಲಿ ಒಬ್ಬ ವಿದ್ಯಾರ್ಥಿ ಆಯ್ಕೆಗೊಂಡಿದ್ದಾರೆ. ಈ ಮೂಲಕ ವಿದ್ಯಾರ್ಥಿಗಳು ಶಾಲೆಗೆ ರಾಷ್ಟ್ರಮಟ್ಟದಲ್ಲಿ ಕೀರ್ತಿ ತಂದಿದ್ದಾರೆ. ಆಯ್ಕೆಯಾದ ವಿದ್ಯಾರ್ಥಿಗಳು ಮತ್ತು ಅವರ ವಿಜ್ಞಾನ ಮಾದರಿಗಳು ಹೀಗಿವೆ: ದಿಗಂತ್ ವೈ. ಪಿ - ಆಟೋಮ್ಯಾಟಿಕ್ ವೀಲ್ ಚೇರ್, ಸಾನಿಕ ಎಸ್ - ಸಿಟ್ಟಿಂಗ್ ಅಲರ್ಟ್, ರೆಡ್ ಅಲರ್ಟ್, ನಂದಿನಿ ಎನ್ - ಫಾರ್ಮರ್ ಅಂಬ್ರಲ್ಲಾ, ರಾಜವರ್ಧನ್ - ರಿಮೋಟ್ ಕಂಟ್ರೋಲ್ ಹೋಮ್ ಅಪ್ಲೈಯನ್ಸಸ್, ಮತ್ತು ಸಾನ್ವಿ ಎಸ್. ಜಿ - ಬ್ಲೈಂಡ್ ಗ್ಲಾಸ್ ಫಾರ್ ಆಲ್. ವಿದ್ಯಾರ್ಥಿಗಳ ಈ ಗಮನಾರ್ಹ ಸಾಧನೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಮಾರಯ್ಯ, ಶಾಲೆಯ ಮುಖ್ಯಶಿಕ್ಷಕ ವಿನಯ್ ಹಾಗೂ ಸಹಶಿಕ್ಷಕರು ಅಭಿನಂದನೆಗಳನ್ನು ತಿಳಿಸಿದ್ದಾರೆ.1