ಶಿಕಾರಿಪುರದ ಆರಾಧ್ಯ ದೈವ ಶ್ರೀ ಹುಚ್ಚರಾಯ ಸ್ವಾಮಿ ಬ್ರಹ್ಮರಥೋತ್ಸವ. ಶಿಕಾರಿಪುರ ತಾಲೂಕಿನ ಆರಾಧ್ಯ ದೈವ ಶ್ರೀ ಹುಚ್ಚಾರಾಯ ಸ್ವಾಮಿ ರಥೋತ್ಸವವು ಇಂದು ಬೆಳಗ್ಗೆ ಅದ್ದೂರಿಯಾಗಿ ನೆರವೇರಿದ್ದು, ತೇರು ರಥಬೀದಿಯಲ್ಲಿ ವಿಜೃಂಭಣೆಯಿಂದ ಸಂಚರಿಸಿತು. ಸಹಸ್ರಾರು ಸಂಖ್ಯೆಯಲ್ಲಿ ನೆರೆದಿದ್ದ ಭಕ್ತಾದಿಗಳ ಹರ್ಷೋದ್ಗಾರದ ನಡುವೆ ಸಾಗಿದ ರಥೋತ್ಸವವು ನಾಡಿನ ಸಾಂಸ್ಕೃತಿಕ ಸೊಬಗನ್ನು ಎತ್ತಿ ಹಿಡಿದಿದೆ. ಈ ಸಾಂಪ್ರದಾಯಿಕ ರಥೋತ್ಸವದಲ್ಲಿ ಹಿರಿಯ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು, ಶಿಕಾರಿಪುರ ಕ್ಷೇತ್ರದ ಶಾಸಕರು ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ರವರು ಕುಟುಂಬದ ಸದಸ್ಯರೊಂದಿಗೆ ಪಾಲ್ಗೊಂಡು ಸ್ವಾಮಿಯ ದರ್ಶನ ಪಡೆದರು. ಈ ಸಂದರ್ಭದಲ್ಲಿ ರಥಕ್ಕೆ ಭಕ್ತಿಪೂರ್ವಕ ಪೂಜೆ ಸಲ್ಲಿಸಿ, ಸಮಸ್ತ ಜನಕುಲಕ್ಕೆ ಒಳಿತಾಗಲಿ, ನಾಡಿನಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸಲಿ, ಸ್ವಾಮಿಯ ಕೃಪಾಶೀರ್ವಾದ ಸದಾ ನಮ್ಮೆಲ್ಲರ ಮೇಲಿರಲಿ ಎಂದು ಪ್ರಾರ್ಥಿಸಲಾಯಿತು. ವಿವಿಧ ಸಂಘ ಸಂಸ್ಥೆಗಳಿಂದ ಅನ್ನಸಂತರ್ಪಣೆ ಹಾಗೂ ತಂಪು ಪಾನೀಯ ವಿತರಣೆ ನಡೆಯಲಿದ್ದು, ರಾಜ್ಯಾದ್ಯಂತ ಅಸಂಖ್ಯಾತ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸ್ವಾಮಿಯ ಕೃಪಾಶೀರ್ವದಕ್ಕೆ ಪಾತ್ರರಾಗಲಿದ್ದಾರೆ.
ಶಿಕಾರಿಪುರದ ಆರಾಧ್ಯ ದೈವ ಶ್ರೀ ಹುಚ್ಚರಾಯ ಸ್ವಾಮಿ ಬ್ರಹ್ಮರಥೋತ್ಸವ. ಶಿಕಾರಿಪುರ ತಾಲೂಕಿನ ಆರಾಧ್ಯ ದೈವ ಶ್ರೀ ಹುಚ್ಚಾರಾಯ ಸ್ವಾಮಿ ರಥೋತ್ಸವವು ಇಂದು ಬೆಳಗ್ಗೆ ಅದ್ದೂರಿಯಾಗಿ ನೆರವೇರಿದ್ದು, ತೇರು ರಥಬೀದಿಯಲ್ಲಿ ವಿಜೃಂಭಣೆಯಿಂದ ಸಂಚರಿಸಿತು. ಸಹಸ್ರಾರು ಸಂಖ್ಯೆಯಲ್ಲಿ
ನೆರೆದಿದ್ದ ಭಕ್ತಾದಿಗಳ ಹರ್ಷೋದ್ಗಾರದ ನಡುವೆ ಸಾಗಿದ ರಥೋತ್ಸವವು ನಾಡಿನ ಸಾಂಸ್ಕೃತಿಕ ಸೊಬಗನ್ನು ಎತ್ತಿ ಹಿಡಿದಿದೆ. ಈ ಸಾಂಪ್ರದಾಯಿಕ ರಥೋತ್ಸವದಲ್ಲಿ ಹಿರಿಯ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು, ಶಿಕಾರಿಪುರ ಕ್ಷೇತ್ರದ ಶಾಸಕರು ಹಾಗೂ ರಾಜ್ಯ
ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ರವರು ಕುಟುಂಬದ ಸದಸ್ಯರೊಂದಿಗೆ ಪಾಲ್ಗೊಂಡು ಸ್ವಾಮಿಯ ದರ್ಶನ ಪಡೆದರು. ಈ ಸಂದರ್ಭದಲ್ಲಿ ರಥಕ್ಕೆ ಭಕ್ತಿಪೂರ್ವಕ ಪೂಜೆ ಸಲ್ಲಿಸಿ, ಸಮಸ್ತ ಜನಕುಲಕ್ಕೆ ಒಳಿತಾಗಲಿ, ನಾಡಿನಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸಲಿ,
ಸ್ವಾಮಿಯ ಕೃಪಾಶೀರ್ವಾದ ಸದಾ ನಮ್ಮೆಲ್ಲರ ಮೇಲಿರಲಿ ಎಂದು ಪ್ರಾರ್ಥಿಸಲಾಯಿತು. ವಿವಿಧ ಸಂಘ ಸಂಸ್ಥೆಗಳಿಂದ ಅನ್ನಸಂತರ್ಪಣೆ ಹಾಗೂ ತಂಪು ಪಾನೀಯ ವಿತರಣೆ ನಡೆಯಲಿದ್ದು, ರಾಜ್ಯಾದ್ಯಂತ ಅಸಂಖ್ಯಾತ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸ್ವಾಮಿಯ ಕೃಪಾಶೀರ್ವದಕ್ಕೆ ಪಾತ್ರರಾಗಲಿದ್ದಾರೆ.
- ಸೊರಬ: ಸುರಭಿ ಜ್ಯುವೆಲ್ಲರಿ ಫೆಡರೇಷನ್ ಸೊರಬ ತಾಲ್ಲೂಕು ಘಟಕದ ನೂತನ ಅಧ್ಯಕ್ಷರಾಗಿ ಪ್ರಸನ್ನ ಕುಮಾರ್ ದೊಡ್ಡಮನೆ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಸೊರಬ ಪಟ್ಟಣದ ಶ್ರೀ ಸತ್ಯನಾರಾಯಣ ಸ್ವಾಮಿ ದೇವಸ್ಥಾನದಲ್ಲಿ ನಡೆದ ಸಭೆಯಲ್ಲಿ ಚಿನ್ನ-ಬೆಳ್ಳಿ ವ್ಯಾಪಾರಸ್ಥರು, ಮಾರಾಟಗಾರರ ಹಿತ ಕಾಪಾಡುವ ನಿಟ್ಟಿನಲ್ಲಿ ಸುರಭಿ ಜ್ಯುವೆಲ್ಲರಿ ಫೆಡರೇಷನ್ ರಚಿಸಲಾಗಿದ್ದು, ಗೌರವಾಧ್ಯಕ್ಷರಾಗಿ ಮಧುರಾಯ್ ಜಿ ಶೇಟ್, ಮಂಜುನಾಥ್ ಶೇಟ್, ರಾಮಕೃಷ್ಣ ಶೇಟ್, ಉಪಾಧ್ಯಕ್ಷರಾಗಿ ಪವನ್, ಸಚಿನ್, ಮೌನೇಶ್, ಗಿರೀಶ್ ಶೇಟ್, ಪ್ರಧಾನ ಕಾರ್ಯದರ್ಶಿಯಾಗಿ ಮರಿ ಶೇಟ್, ರಾಜು ಗೌರಿ ಜುವೆಲರಿ ವರ್ಕ್ಸ್, ಕಾರ್ಯದರ್ಶಿಗಳಾಗಿ ಭೂಷಣ್, ಪ್ರಶಾಂತ್ ಕುಮಾರ್ ದೊಡ್ಮನೆ. ವಿಜಯ್ ಯಶೋಧರ್ ಜುವೆಲ್ಲರಿ, ಖಜಾಂಚಿಯಾಗಿ ಗೋಪಾಲ್ ಶೇಟ್, ಸಹ ಖಜಾಂಚಿಗಳಾಗಿ ಗಜೇಂದ್ರ, ಸಂಜಯ್ ಕಾಳಿಕಾಂಬ ಜುವೆಲ್ಲರ್ಸ್, ಮಾಧ್ಯಮ ಸಲಹೆಗಾರರಾಗಿ ಎಸ್.ಜಿ ರಾಮಚಂದ್ರ ಸುರಭಿವಾಣಿ, ಕಾನೂನು ಸಲಹೆಗಾರಾಗಿ ವಕೀಲರಾದ ಬಂಗಾರಪ್ಪ, ಮಾಲತೇಶ್, ಪ್ರವೀಣ್ ಕುಮಾರ್ ದೊಡ್ಮನೆ ಹಾಗೂ ನಿರ್ದೇಶಕರಾಗಿ ವಸಂತ, ಸುರೇಂದ್ರ ಆನಂದ ಮಹಾಲಸ ಜ್ಯುವೆಲರಿ, ಲಕ್ಷ್ಮಿನಾರಾಯಣ, ಶ್ರೀನಿವಾಸ, ವಿಶ್ವ, ರಾಜಣ್ಣ, ರಾಮನಾಥ, ಸದಸ್ಯರಾಗಿ ಚಂದ್ರು, ಶ್ರೀಧರ್ ಮಂಜುನಾಥ್, ಕರಡಿಗೆರೆ ಶೆಟ್ರು ವಸಂತ ಆಯ್ಕೆಯಾದರು. ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಪ್ರಸನ್ನ ಕುಮಾರ್ ದೊಡ್ಡಮನೆ ಮಾತನಾಡಿ ಪ್ರತಿದಿನ ಚಿನ್ನದ ದರದ ಏರಿಳಿತದಿಂದ ನಿರಂತರವಾಗಿ ಬಂಗಾರದ ಅಂಗಡಿಯ ಮೇಲೆ ದೌರ್ಜನ್ಯವಾಗುವ ನಿಟ್ಟಿನಲ್ಲಿ ಹಾಗೂ ಬಂಗಾರದ ಅಂಗಡಿಗಳ ಹಿತವನ್ನು ಕಾಯುವ ನಿಟ್ಟಿನಲ್ಲಿ, ಬಂಗಾರದ ಕೆಲಸ ಮಾಡುವ ಕೆಲಸಗಾರರ ಹಿತವನ್ನು ಕಾಯುವ ನಿಟ್ಟಿನಲ್ಲಿ ಶ್ರದ್ಧೆಯಿಂದ ಕೆಲಸ ಮಾಡಲಾಗುವದು. ಹಾಗೂ ಸೊರಬದಲ್ಲಿ ಒಂದೇ ಬಂಗಾರದ ದರ ನಿಗದಿ ಮಾಡುವ ನಿಟ್ಟಿನಲ್ಲಿ ಈ ಸಂಘ ಬದ್ಧವಾಗಿರುತ್ತದೆ. ಎಲ್ಲಾ ಬಂಗಾರದ ಅಂಗಡಿಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾವನ್ನು ಅಳವಡಿಸಬೇಕು. ಗುರುತು ಪರಿಚಯ ಇರುವ ಹಾಗೂ ಕಡ್ಡಾಯವಾಗಿ ಬಿಲ್ಲನ್ನು ಇರುವ ಗ್ರಾಹಕರಿಗೆ ಮಾತ್ರ ಗಿರವಿಯನ್ನು ಕೊಡಬೇಕೆಂದು ತಿಳಿಸಿದರು3
- "ಬಳ್ಳಾರಿಯಲ್ಲಿ ಆಟೋ ಡ್ರೈವರ್ ಗಳ ಜೀವನ ಏನಾಗಿದೆ ಗೊತ್ತಾ?" "ನಾವು ಹೇಗೆ ಜೀವನ ಸಾಗಿಸೋದು ಸಾರ್? ಇಷ್ಟು ದರ ವ್ಯತ್ಯಾಸ ಯಾಕೆ?" "ಗಾಂಧಿನಗರದಲ್ಲಿ ಆಟೋ ಗ್ಯಾಸ್ ದರ ₹93.54… MG ರೋಡ್ ನಲ್ಲಿ ₹84.10…" ಬಳ್ಳಾರಿಯಲ್ಲಿ ಒಂದೇ ನಗರದಲ್ಲಿ ಎರಡು ಗ್ಯಾಸ್ ದರ! 😡 ಆಟೋ ಡ್ರೈವರ್ ಗಳ ಬದುಕು ಸಂಕಷ್ಟದಲ್ಲಿದೆ. ಇದಕ್ಕೆ ಯಾರು ಉತ್ತರ ಕೊಡ್ತಾರೆ? "ಇಂಧನ ದರ ಏರಿದ್ರೆ… ಆಟೋ ಭಾಡಿಗೆ ಏರಿಸೋಕೆ ಆಗಲ್ಲ… ಜನ ಬೈತಾರೆ… ಸರ್ಕಾರ ಕೇಳ್ತಾ ಇಲ್ಲ…" "ಈ ವಿಡಿಯೋ share ಮಾಡಿ… ನಮ್ಮ ಧ್ವನಿ ಸರ್ಕಾರದವರೆಗೆ ತಲುಪಿಸೋಣ!"1
- ದಾವಣಗೆರೆ ಬ್ರೇಕಿಂಗ್ ರಂಗೇರಿದ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾಚಣೆ ದಾವಣಗೆರೆಯಲ್ಲಿ ಹಾಲಿ ಸಿಎಂ ಹಾಗೂ ಮಾಜಿ ಸಿಎಂ ಅಬ್ಬರದ ಪ್ರಚಾರ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಪರ ಹಾಲಿ ಸಿಎಂ ಸಿದ್ದರಾಮಯ್ಯ ಕ್ಯಾಂಪಿಯನ್ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಪರ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅಬ್ಬರದ ಪ್ರಚಾರ ಗ್ರಾಮಾಂತರ ಭಾಗದಲ್ಲಿ ಸಿಎಂ ಸಿದ್ದರಾಮಯ್ಯ ಪ್ರಚಾರ ಮಾಡಿದ್ರೆ ನಗರ ಭಾಗದಲ್ಲಿ ಮಾಜಿ ಸಿಎಂ ಬಿಎಸ್ ವೈ ಪ್ರಚಾರ1
- Post by H M ಹರಕುಣಿ2
- Post by Nitin 9071795156 press reporte2
- ನರಹರಿ ನಗರದ ಶ್ರೀ ಗುರು ಕರಿಬಸವೇಶ್ವರ ಅಜ್ಜಯ್ಯ ದೇವಸ್ಥಾನದಲ್ಲಿ ಮಂಡಲದ ಪೂಜೆ.. ಚಳ್ಳಕೆರೆ ನಗರದ ನರಹರಿ ನಗರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಕರಿಬಸವೇಶ್ವರ ಅಜ್ಜಯ ದೇವಸ್ಥಾನದಲ್ಲಿ.. ದೇವಸ್ಥಾನ ನಿರ್ಮಾಣಗೊಂಡ ಹಿನ್ನೆಲೆಯಲ್ಲಿ 48ನೇ ದಿನದ ಮಂಡಲ ಪೂಜೆ ಕಾರ್ಯಕ್ರಮವನ್ನ ಶ್ರದ್ಧಾ ಭಕ್ತಿಯಿಂದ ಹಮ್ಮಿಕೊಳ್ಳಲಾಯಿತು. ಸುಮಾರು 50 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ನೂತನ ದೇವಾಲಯದಲ್ಲಿ ಪೆಬ್ರವರಿ 11ರಂದು ಶ್ರೀ ಕರಿಬಸವೇಶ್ವರ ಸ್ವಾಮಿ ವಿಗ್ರಹ ಪ್ರತಿಷ್ಠಾಪನೆ ಹಾಗೂ ಕಳಸಸ್ಥಾಪನೆ ಮಾಡಲಾಗಿತ್ತು. ಅಂದಿನಿಂದ ಕರಿಬಸವೇಶ್ವರ ಗದ್ದಿಗೆಯಲ್ಲಿ ವಿಶೇಷ ಪೂಜೆ, ಭಜನೆ, ಕೀರ್ತನೆಗಳು ಜರಗಿದವು. ಕರಿಬಸವೇಶ್ವರ ದೇವಸ್ಥಾನ ನಿರ್ಮಾಣಗೊಂಡು ಇಲ್ಲಿಗೆ 48ನೇ ದಿನ ಆಗಿರುವುದರಿಂದ ದೇವಸ್ಥಾನದಲ್ಲಿ ಮಂಡಲ ಪೂಜೆ ಅಂಗವಾಗಿ ಬೆಳಗಿನಜಾವ ಮೂರು ಗಂಟೆಯಿಂದಲೇ ನವಗ್ರಹ ಪೋಜೆ ಅಷ್ಟಲಕ್ಷ್ಮಿ ಪೂಜೆ, ಪಾರ್ವತಿ, ಪರಮೇಶ್ವರ ವಿಘ್ನೇಶ್ವರ ಪೂಜೆ ,ಹೋಮ ಹವನ ಭಜನೆ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.. ಗುರು ಕರಿಬಸವೇಶ್ವರ ದೇವಸ್ಥಾನಕ್ಕೆ ಸಾಕಷ್ಟು ಭಕ್ತರು ಆಗಮಿಸಿ ಎಲ್ಲಾ ಪೂಜೆ ಕಾರ್ಯದಲ್ಲಿ ಭಾಗಿಯಾಗಿ ಅನ್ನದಾಸೋಹ ಪಾಲ್ಗೊಂಡರು ಗುರು ಕರಿಬಸವೇಶ್ವರ ಸ್ವಾಮಿ ದೇವಸ್ಥಾನ ಟ್ರಸ್ಟ್ ವತಿಯಿಂದ ವಿವಿಧ ಧಾರ್ಮಿಕ ಕಾರ್ಯಗಳು ಜತೆಗೆ ಸಾಮಾಜಿಕ ಕಾರ್ಯಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಪ್ರಧಾನ ಅರ್ಚಕರು ಹಾಗೂ ಶ್ರೀ ಕರಿಬಸವೇಶ್ವರ ಸ್ವಾಮಿ ಟ್ರಸ್ಟ್ ನ ಅಧ್ಯಕ್ಷ ಟಿ. ವೀರಭದ್ರ ಸ್ವಾಮಿ ತಿಳಿಸಿದ್ದಾರೆ....1
- ದೊಡ್ಡ ಉಳ್ಳಾರ್ತಿ ಗ್ರಾಮದ ಗೋಮಾಳ ಜಾಗದಲ್ಲಿ ರಾತ್ರೋರಾತ್ರಿ ಕಿಡಿಗೇಡಿಗಳು ಯಾವುದೋ ಫ್ಯಾಕ್ಟರಿಯ ಕಲುಷಿತ ಕೆಮಿಕಲ್ ಆಯಿಲ್ ತಂದು ಸುರಿದು ಹೋದ ಘಟನೆ ಬೆಳಕಿಗೆ ಬಂದಿದೆ. ಈ ಕಲುಷಿತ ಆಯಿಲ್ ಗೋಮಾಳ ಜಾಗವನ್ನು ಸಂಪೂರ್ಣವಾಗಿ ಹಾನಿಗೊಳಪಡಿಸಿದೆ.1
- Post by Nitin 9071795156 press reporte1