logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ತಾಲ್ಲೂಕು ಆಡಳಿತ ಅವ್ಯವಸ್ಥೆ ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ, ದಲ್ಲಾಳಿಗಳ ಹಾವಳಿ, ಲಂಚ ಆರೋಪ; ಪಿ.ನಂಬರ್ ದುರಸ್ತಿ ಹಾಗೂ ಒತ್ತುವರಿ ತೆರವಿಗೆ ವಿಶೇಷ ತಂಡ ರಚನೆಗೆ ಆಗ್ರಹ, ಕೋಲಾರ: ತಾಲ್ಲೂಕು ಆಡಳಿತದಲ್ಲಿನ ಅವ್ಯವಸ್ಥೆ, ದಲ್ಲಾಳಿಗಳ ಹಾವಳಿ ಹಾಗೂ ಲಂಚದ ಆರೋಪಗಳನ್ನು ಖಂಡಿಸಿ ರೈತ ಸಂಘದ ಕಾರ್ಯಕರ್ತರು ತಹಸಿಲ್ದಾರ್ ಕಛೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿ ಉಪತಹಸೀಲ್ದಾರ್ ಸುಬ್ರಹ್ಮಣ್ಯ ರವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು. ಈ ಸಂದರ್ಭದಲ್ಲಿ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ. ನಾರಾಯಣಗೌಡ ಮಾತನಾಡಿ, ಸರ್ಕಾರದ ಕೆಲಸ ದೇವರ ಕೆಲಸ ಎಂಬ ಘೋಷವಾಕ್ಯ ಬರೆದಿರುವ ತಾಲ್ಲೂಕು ಆಡಳಿತ ಸೌಧವನ್ನು ದಲ್ಲಾಳಿಗಳ ಹಾಗೂ ಲಂಚಬಾಕ ಅಧಿಕಾರಿಗಳ ಸೌಧ ಎಂದು ಮರುನಾಮಕರಣ ಮಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ ಎಂದು ಅವ್ಯವಸ್ಥೆಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ತಾಲ್ಲೂಕು ಕಚೇರಿಯಲ್ಲಿ ಸಾಮಾನ್ಯ ರೈತರು ಮತ್ತು ಕೂಲಿ ಕಾರ್ಮಿಕರ ಕೆಲಸಗಳು ಸುಗಮವಾಗಿ ನಡೆಯುತ್ತಿಲ್ಲ. ಅಧಿಕಾರಿಗಳನ್ನು ಭೇಟಿ ಮಾಡಬೇಕಾದರೂ ಹಣ ನೀಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಕಚೇರಿಯ ಎಲ್ಲೆಡೆ ದಲ್ಲಾಳಿಗಳ ಹಾವಳಿ ಹೆಚ್ಚಾಗಿದೆ ಎಂದು ಆರೋಪಿಸಿದರು. ಗ್ರಾಮ ಲೆಕ್ಕಿಗರು, ರಾಜಸ್ವ ನಿರೀಕ್ಷಕರು ಹಾಗೂ ಇತರ ಕಂದಾಯ ಅಧಿಕಾರಿಗಳು ಗ್ರಾಮೀಣ ಸೇವೆಯನ್ನು ನಿರ್ಲಕ್ಷಿಸಿ ಜನರಿಗೆ ಸಕಾಲದಲ್ಲಿ ಜಾತಿ, ಆದಾಯ ಮತ್ತು ಭೂ ದಾಖಲೆಗಳನ್ನು ನೀಡುತ್ತಿಲ್ಲ. ಅರ್ಜಿಗಳನ್ನು ಸಲ್ಲಿಸಿದರೂ ತಿಂಗಳುಗಟ್ಟಲೆ, ವರ್ಷಗಳಾದರೂ ವಿಲೇವಾರಿಯಾಗುತ್ತಿಲ್ಲ ಎಂದು ದೂರಿದರು. ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ ಮಾತನಾಡಿ, ಬಡ ರೈತರು ಮತ್ತು ಕೂಲಿ ಕಾರ್ಮಿಕರ ಪಿ.ನಂಬರ್ ದುರಸ್ತಿಗೆ ಸರ್ಕಾರ ಆದೇಶ ನೀಡಿದ್ದರೂ, ಅದರ ಪ್ರಯೋಜನ ಸಾಮಾನ್ಯರಿಗೆ ಸಿಗುತ್ತಿಲ್ಲ. ಶ್ರೀಮಂತರ ಕಡತಗಳಿಗೆ ಆದ್ಯತೆ ನೀಡಿ, ಬಡವರ ಕಡತಗಳನ್ನು ವಿವಿಧ ಕಾರಣಗಳನ್ನು ಹೇಳಿ ವಿಳಂಬ ಮಾಡಲಾಗುತ್ತಿದ ಕೆರೆ, ರಾಜಕಾಲುವೆ, ಬಂಡಿದಾರಿ, ಕಾಲುದಾರಿ ಹಾಗೂ ಸ್ಮಶಾನ ಸೇರಿದಂತೆ ಸರ್ಕಾರಿ ಆಸ್ತಿಗಳ ಒತ್ತುವರಿಯನ್ನು ತೆರವುಗೊಳಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ. ಇದರಿಂದ ರೈತರ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಒಂದು ವಾರದೊಳಗೆ ತಾಲ್ಲೂಕು ಆಡಳಿತದಲ್ಲಿನ ಅವ್ಯವಸ್ಥೆ ಸರಿಪಡಿಸಿ, ದಲ್ಲಾಳಿಗಳ ಹಾವಳಿಗೆ ಕಡಿವಾಣ ಹಾಕಬೇಕು. ಪಿ.ನಂಬರ್ ದುರಸ್ತಿಯಲ್ಲಿ ನಡೆದಿರುವ ಅಕ್ರಮಗಳ ತನಿಖೆ ನಡೆಸಿ, ಸರ್ಕಾರಿ ಆಸ್ತಿಗಳ ಒತ್ತುವರಿಯನ್ನು ತೆರವುಗೊಳಿಸಬೇಕು. ಇಲ್ಲದಿದ್ದರೆ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯಂದು ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸುವುದಾಗಿ ರೈತ ಸಂಘ ಎಚ್ಚರಿಕೆ ನೀಡಿತು. ಮನವಿ ಸ್ವೀಕರಿಸಿದ ಉಪತಹಸೀಲ್ದಾರ್ ಸುಬ್ರಹ್ಮಣ್ಯ ಮಾತನಾಡಿ, ತಾಲ್ಲೂಕು ಕಚೇರಿಯಲ್ಲಿ ದಲ್ಲಾಳಿಗಳ ಹಾವಳಿ ಹಾಗೂ ಇತರ ಸಮಸ್ಯೆಗಳ ಕುರಿತು ದೂರುಗಳು ಬಂದಿವೆ. ಪಿ.ನಂಬರ್ ದುರಸ್ತಿ ಸೇರಿದಂತೆ ಕಂದಾಯ ಇಲಾಖೆಯ ಕಾರ್ಯವೈಖರಿಯನ್ನು ಪರಿಶೀಲಿಸಿ, ತಪ್ಪಿತಸ್ಥರ ವಿರುದ್ಧ ಅಗತ್ಯ ಕ್ರಮ ಕೈಗೊಂಡು ದಲ್ಲಾಳಿಗಳ ಹಾವಳಿಗೆ ಕಡಿವಾಣ ಹಾಕಲಾಗುವುದು ಎಂದು ಭರವಸೆ ನೀಡಿದರು. ಪ್ರತಿಭಟನೆಯಲ್ಲಿ ಮಹಿಳಾ ಜಿಲ್ಲಾಧ್ಯಕ್ಷ ಎ ನಳಿನಿಗೌಡ ವಕ್ಕಲೇರಿ ಹನುಮಯ್ಯ, ಮಂಗಸಂದ್ರ ತಿಮ್ಮಣ್ಣ, ಪುತ್ತೇರಿ ರಾಜು, ಗಿರೀಶ್, ಚಂದ್ರಪ್ಪ, ತೆರಹಳ್ಳಿ ಆಂಜಿನಪ್ಪ, ವಾನರಾಶಿ ವೀರಭದ್ರಪ್ಪ, ಹನುಮನಹಳ್ಳಿ ನಾಗರಾಜ, ಸುಪ್ರಿಂ ಚಲ, ಶೈಲಜ, ರತ್ನಮ್ಮ, ವಿಶ್ವ, ಜನಾರ್ಧನ, ನಟರಾಜ್, ರಾಜಣ್ಣ, ಕುವಣ್ಣ, ರಾಮಕೃಷ್ಣಪ್ಪ ಸೇರಿದಂತೆ ಹಲವರು ಭಾಗವಹಿಸಿದ್ದರು. ತಾಲ್ಲೂಕು ಆಡಳಿತ ಅವ್ಯವಸ್ಥೆ ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ, ದಲ್ಲಾಳಿಗಳ ಹಾವಳಿ, ಲಂಚ ಆರೋಪ; ಪಿ.ನಂಬರ್ ದುರಸ್ತಿ ಹಾಗೂ ಒತ್ತುವರಿ ತೆರವಿಗೆ ವಿಶೇಷ ತಂಡ ರಚನೆಗೆ ಆಗ್ರಹ, ಕೋಲಾರ: ತಾಲ್ಲೂಕು ಆಡಳಿತದಲ್ಲಿನ ಅವ್ಯವಸ್ಥೆ, ದಲ್ಲಾಳಿಗಳ ಹಾವಳಿ ಹಾಗೂ ಲಂಚದ ಆರೋಪಗಳನ್ನು ಖಂಡಿಸಿ ರೈತ ಸಂಘದ ಕಾರ್ಯಕರ್ತರು ತಹಸಿಲ್ದಾರ್ ಕಛೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿ ಉಪತಹಸೀಲ್ದಾರ್ ಸುಬ್ರಹ್ಮಣ್ಯ ರವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು. ಈ ಸಂದರ್ಭದಲ್ಲಿ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ. ನಾರಾಯಣಗೌಡ ಮಾತನಾಡಿ, ಸರ್ಕಾರದ ಕೆಲಸ ದೇವರ ಕೆಲಸ ಎಂಬ ಘೋಷವಾಕ್ಯ ಬರೆದಿರುವ ತಾಲ್ಲೂಕು ಆಡಳಿತ ಸೌಧವನ್ನು ದಲ್ಲಾಳಿಗಳ ಹಾಗೂ ಲಂಚಬಾಕ ಅಧಿಕಾರಿಗಳ ಸೌಧ ಎಂದು ಮರುನಾಮಕರಣ ಮಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ ಎಂದು ಅವ್ಯವಸ್ಥೆಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ತಾಲ್ಲೂಕು ಕಚೇರಿಯಲ್ಲಿ ಸಾಮಾನ್ಯ ರೈತರು ಮತ್ತು ಕೂಲಿ ಕಾರ್ಮಿಕರ ಕೆಲಸಗಳು ಸುಗಮವಾಗಿ ನಡೆಯುತ್ತಿಲ್ಲ. ಅಧಿಕಾರಿಗಳನ್ನು ಭೇಟಿ ಮಾಡಬೇಕಾದರೂ ಹಣ ನೀಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಕಚೇರಿಯ ಎಲ್ಲೆಡೆ ದಲ್ಲಾಳಿಗಳ ಹಾವಳಿ ಹೆಚ್ಚಾಗಿದೆ ಎಂದು ಆರೋಪಿಸಿದರು. ಗ್ರಾಮ ಲೆಕ್ಕಿಗರು, ರಾಜಸ್ವ ನಿರೀಕ್ಷಕರು ಹಾಗೂ ಇತರ ಕಂದಾಯ ಅಧಿಕಾರಿಗಳು ಗ್ರಾಮೀಣ ಸೇವೆಯನ್ನು ನಿರ್ಲಕ್ಷಿಸಿ ಜನರಿಗೆ ಸಕಾಲದಲ್ಲಿ ಜಾತಿ, ಆದಾಯ ಮತ್ತು ಭೂ ದಾಖಲೆಗಳನ್ನು ನೀಡುತ್ತಿಲ್ಲ. ಅರ್ಜಿಗಳನ್ನು ಸಲ್ಲಿಸಿದರೂ ತಿಂಗಳುಗಟ್ಟಲೆ, ವರ್ಷಗಳಾದರೂ ವಿಲೇವಾರಿಯಾಗುತ್ತಿಲ್ಲ ಎಂದು ದೂರಿದರು. ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ ಮಾತನಾಡಿ, ಬಡ ರೈತರು ಮತ್ತು ಕೂಲಿ ಕಾರ್ಮಿಕರ ಪಿ.ನಂಬರ್ ದುರಸ್ತಿಗೆ ಸರ್ಕಾರ ಆದೇಶ ನೀಡಿದ್ದರೂ, ಅದರ ಪ್ರಯೋಜನ ಸಾಮಾನ್ಯರಿಗೆ ಸಿಗುತ್ತಿಲ್ಲ. ಶ್ರೀಮಂತರ ಕಡತಗಳಿಗೆ ಆದ್ಯತೆ ನೀಡಿ, ಬಡವರ ಕಡತಗಳನ್ನು ವಿವಿಧ ಕಾರಣಗಳನ್ನು ಹೇಳಿ ವಿಳಂಬ ಮಾಡಲಾಗುತ್ತಿದ ಕೆರೆ, ರಾಜಕಾಲುವೆ, ಬಂಡಿದಾರಿ, ಕಾಲುದಾರಿ ಹಾಗೂ ಸ್ಮಶಾನ ಸೇರಿದಂತೆ ಸರ್ಕಾರಿ ಆಸ್ತಿಗಳ ಒತ್ತುವರಿಯನ್ನು ತೆರವುಗೊಳಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ. ಇದರಿಂದ ರೈತರ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಒಂದು ವಾರದೊಳಗೆ ತಾಲ್ಲೂಕು ಆಡಳಿತದಲ್ಲಿನ ಅವ್ಯವಸ್ಥೆ ಸರಿಪಡಿಸಿ, ದಲ್ಲಾಳಿಗಳ ಹಾವಳಿಗೆ ಕಡಿವಾಣ ಹಾಕಬೇಕು. ಪಿ.ನಂಬರ್ ದುರಸ್ತಿಯಲ್ಲಿ ನಡೆದಿರುವ ಅಕ್ರಮಗಳ ತನಿಖೆ ನಡೆಸಿ, ಸರ್ಕಾರಿ ಆಸ್ತಿಗಳ ಒತ್ತುವರಿಯನ್ನು ತೆರವುಗೊಳಿಸಬೇಕು. ಇಲ್ಲದಿದ್ದರೆ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯಂದು ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸುವುದಾಗಿ ರೈತ ಸಂಘ ಎಚ್ಚರಿಕೆ ನೀಡಿತು. ಮನವಿ ಸ್ವೀಕರಿಸಿದ ಉಪತಹಸೀಲ್ದಾರ್ ಸುಬ್ರಹ್ಮಣ್ಯ ಮಾತನಾಡಿ, ತಾಲ್ಲೂಕು ಕಚೇರಿಯಲ್ಲಿ ದಲ್ಲಾಳಿಗಳ ಹಾವಳಿ ಹಾಗೂ ಇತರ ಸಮಸ್ಯೆಗಳ ಕುರಿತು ದೂರುಗಳು ಬಂದಿವೆ. ಪಿ.ನಂಬರ್ ದುರಸ್ತಿ ಸೇರಿದಂತೆ ಕಂದಾಯ ಇಲಾಖೆಯ ಕಾರ್ಯವೈಖರಿಯನ್ನು ಪರಿಶೀಲಿಸಿ, ತಪ್ಪಿತಸ್ಥರ ವಿರುದ್ಧ ಅಗತ್ಯ ಕ್ರಮ ಕೈಗೊಂಡು ದಲ್ಲಾಳಿಗಳ ಹಾವಳಿಗೆ ಕಡಿವಾಣ ಹಾಕಲಾಗುವುದು ಎಂದು ಭರವಸೆ ನೀಡಿದರು. ಪ್ರತಿಭಟನೆಯಲ್ಲಿ ಮಹಿಳಾ ಜಿಲ್ಲಾಧ್ಯಕ್ಷ ಎ ನಳಿನಿಗೌಡ ವಕ್ಕಲೇರಿ ಹನುಮಯ್ಯ, ಮಂಗಸಂದ್ರ ತಿಮ್ಮಣ್ಣ, ಪುತ್ತೇರಿ ರಾಜು, ಗಿರೀಶ್, ಚಂದ್ರಪ್ಪ, ತೆರಹಳ್ಳಿ ಆಂಜಿನಪ್ಪ, ವಾನರಾಶಿ ವೀರಭದ್ರಪ್ಪ, ಹನುಮನಹಳ್ಳಿ ನಾಗರಾಜ, ಸುಪ್ರಿಂ ಚಲ, ಶೈಲಜ, ರತ್ನಮ್ಮ, ವಿಶ್ವ, ಜನಾರ್ಧನ, ನಟರಾಜ್, ರಾಜಣ್ಣ, ಕುವಣ್ಣ, ರಾಮಕೃಷ್ಣಪ್ಪ ಸೇರಿದಂತೆ ಹಲವರು ಭಾಗವಹಿಸಿದ್ದರು.

5 hrs ago
user_Rownak Ali khan
Rownak Ali khan
Local News Reporter ಕೋಲಾರ, ಕೋಲಾರ, ಕರ್ನಾಟಕ•
5 hrs ago
af25dab5-4ef8-41c0-afed-9ddc4fa966d0

ತಾಲ್ಲೂಕು ಆಡಳಿತ ಅವ್ಯವಸ್ಥೆ ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ, ದಲ್ಲಾಳಿಗಳ ಹಾವಳಿ, ಲಂಚ ಆರೋಪ; ಪಿ.ನಂಬರ್ ದುರಸ್ತಿ ಹಾಗೂ ಒತ್ತುವರಿ ತೆರವಿಗೆ ವಿಶೇಷ ತಂಡ ರಚನೆಗೆ ಆಗ್ರಹ, ಕೋಲಾರ: ತಾಲ್ಲೂಕು ಆಡಳಿತದಲ್ಲಿನ ಅವ್ಯವಸ್ಥೆ, ದಲ್ಲಾಳಿಗಳ ಹಾವಳಿ ಹಾಗೂ ಲಂಚದ ಆರೋಪಗಳನ್ನು ಖಂಡಿಸಿ ರೈತ ಸಂಘದ ಕಾರ್ಯಕರ್ತರು ತಹಸಿಲ್ದಾರ್ ಕಛೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿ ಉಪತಹಸೀಲ್ದಾರ್ ಸುಬ್ರಹ್ಮಣ್ಯ ರವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು. ಈ ಸಂದರ್ಭದಲ್ಲಿ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ. ನಾರಾಯಣಗೌಡ ಮಾತನಾಡಿ, ಸರ್ಕಾರದ ಕೆಲಸ ದೇವರ ಕೆಲಸ ಎಂಬ ಘೋಷವಾಕ್ಯ ಬರೆದಿರುವ ತಾಲ್ಲೂಕು ಆಡಳಿತ ಸೌಧವನ್ನು ದಲ್ಲಾಳಿಗಳ ಹಾಗೂ ಲಂಚಬಾಕ ಅಧಿಕಾರಿಗಳ ಸೌಧ ಎಂದು ಮರುನಾಮಕರಣ ಮಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ ಎಂದು ಅವ್ಯವಸ್ಥೆಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ತಾಲ್ಲೂಕು ಕಚೇರಿಯಲ್ಲಿ ಸಾಮಾನ್ಯ ರೈತರು ಮತ್ತು ಕೂಲಿ ಕಾರ್ಮಿಕರ ಕೆಲಸಗಳು ಸುಗಮವಾಗಿ ನಡೆಯುತ್ತಿಲ್ಲ. ಅಧಿಕಾರಿಗಳನ್ನು ಭೇಟಿ ಮಾಡಬೇಕಾದರೂ ಹಣ ನೀಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಕಚೇರಿಯ ಎಲ್ಲೆಡೆ ದಲ್ಲಾಳಿಗಳ ಹಾವಳಿ ಹೆಚ್ಚಾಗಿದೆ ಎಂದು ಆರೋಪಿಸಿದರು. ಗ್ರಾಮ ಲೆಕ್ಕಿಗರು, ರಾಜಸ್ವ ನಿರೀಕ್ಷಕರು ಹಾಗೂ ಇತರ ಕಂದಾಯ ಅಧಿಕಾರಿಗಳು ಗ್ರಾಮೀಣ ಸೇವೆಯನ್ನು ನಿರ್ಲಕ್ಷಿಸಿ ಜನರಿಗೆ ಸಕಾಲದಲ್ಲಿ ಜಾತಿ, ಆದಾಯ ಮತ್ತು ಭೂ ದಾಖಲೆಗಳನ್ನು ನೀಡುತ್ತಿಲ್ಲ. ಅರ್ಜಿಗಳನ್ನು ಸಲ್ಲಿಸಿದರೂ ತಿಂಗಳುಗಟ್ಟಲೆ, ವರ್ಷಗಳಾದರೂ ವಿಲೇವಾರಿಯಾಗುತ್ತಿಲ್ಲ ಎಂದು ದೂರಿದರು. ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ ಮಾತನಾಡಿ, ಬಡ ರೈತರು ಮತ್ತು ಕೂಲಿ ಕಾರ್ಮಿಕರ ಪಿ.ನಂಬರ್ ದುರಸ್ತಿಗೆ ಸರ್ಕಾರ ಆದೇಶ ನೀಡಿದ್ದರೂ, ಅದರ ಪ್ರಯೋಜನ ಸಾಮಾನ್ಯರಿಗೆ ಸಿಗುತ್ತಿಲ್ಲ. ಶ್ರೀಮಂತರ ಕಡತಗಳಿಗೆ ಆದ್ಯತೆ ನೀಡಿ, ಬಡವರ ಕಡತಗಳನ್ನು ವಿವಿಧ ಕಾರಣಗಳನ್ನು ಹೇಳಿ ವಿಳಂಬ ಮಾಡಲಾಗುತ್ತಿದ ಕೆರೆ, ರಾಜಕಾಲುವೆ, ಬಂಡಿದಾರಿ, ಕಾಲುದಾರಿ ಹಾಗೂ ಸ್ಮಶಾನ ಸೇರಿದಂತೆ ಸರ್ಕಾರಿ ಆಸ್ತಿಗಳ ಒತ್ತುವರಿಯನ್ನು ತೆರವುಗೊಳಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ. ಇದರಿಂದ ರೈತರ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಒಂದು ವಾರದೊಳಗೆ ತಾಲ್ಲೂಕು ಆಡಳಿತದಲ್ಲಿನ ಅವ್ಯವಸ್ಥೆ ಸರಿಪಡಿಸಿ, ದಲ್ಲಾಳಿಗಳ ಹಾವಳಿಗೆ ಕಡಿವಾಣ ಹಾಕಬೇಕು. ಪಿ.ನಂಬರ್ ದುರಸ್ತಿಯಲ್ಲಿ ನಡೆದಿರುವ ಅಕ್ರಮಗಳ ತನಿಖೆ ನಡೆಸಿ, ಸರ್ಕಾರಿ ಆಸ್ತಿಗಳ ಒತ್ತುವರಿಯನ್ನು ತೆರವುಗೊಳಿಸಬೇಕು. ಇಲ್ಲದಿದ್ದರೆ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯಂದು ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸುವುದಾಗಿ ರೈತ ಸಂಘ ಎಚ್ಚರಿಕೆ ನೀಡಿತು. ಮನವಿ ಸ್ವೀಕರಿಸಿದ ಉಪತಹಸೀಲ್ದಾರ್ ಸುಬ್ರಹ್ಮಣ್ಯ ಮಾತನಾಡಿ, ತಾಲ್ಲೂಕು ಕಚೇರಿಯಲ್ಲಿ ದಲ್ಲಾಳಿಗಳ ಹಾವಳಿ ಹಾಗೂ ಇತರ ಸಮಸ್ಯೆಗಳ ಕುರಿತು ದೂರುಗಳು ಬಂದಿವೆ. ಪಿ.ನಂಬರ್ ದುರಸ್ತಿ ಸೇರಿದಂತೆ ಕಂದಾಯ ಇಲಾಖೆಯ ಕಾರ್ಯವೈಖರಿಯನ್ನು ಪರಿಶೀಲಿಸಿ, ತಪ್ಪಿತಸ್ಥರ ವಿರುದ್ಧ ಅಗತ್ಯ ಕ್ರಮ ಕೈಗೊಂಡು ದಲ್ಲಾಳಿಗಳ ಹಾವಳಿಗೆ ಕಡಿವಾಣ ಹಾಕಲಾಗುವುದು ಎಂದು ಭರವಸೆ ನೀಡಿದರು. ಪ್ರತಿಭಟನೆಯಲ್ಲಿ ಮಹಿಳಾ ಜಿಲ್ಲಾಧ್ಯಕ್ಷ ಎ ನಳಿನಿಗೌಡ ವಕ್ಕಲೇರಿ ಹನುಮಯ್ಯ, ಮಂಗಸಂದ್ರ ತಿಮ್ಮಣ್ಣ, ಪುತ್ತೇರಿ ರಾಜು, ಗಿರೀಶ್, ಚಂದ್ರಪ್ಪ, ತೆರಹಳ್ಳಿ ಆಂಜಿನಪ್ಪ, ವಾನರಾಶಿ ವೀರಭದ್ರಪ್ಪ, ಹನುಮನಹಳ್ಳಿ ನಾಗರಾಜ, ಸುಪ್ರಿಂ ಚಲ, ಶೈಲಜ, ರತ್ನಮ್ಮ, ವಿಶ್ವ, ಜನಾರ್ಧನ, ನಟರಾಜ್, ರಾಜಣ್ಣ, ಕುವಣ್ಣ, ರಾಮಕೃಷ್ಣಪ್ಪ ಸೇರಿದಂತೆ ಹಲವರು ಭಾಗವಹಿಸಿದ್ದರು. ತಾಲ್ಲೂಕು ಆಡಳಿತ ಅವ್ಯವಸ್ಥೆ ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ, ದಲ್ಲಾಳಿಗಳ ಹಾವಳಿ, ಲಂಚ ಆರೋಪ; ಪಿ.ನಂಬರ್ ದುರಸ್ತಿ ಹಾಗೂ ಒತ್ತುವರಿ ತೆರವಿಗೆ ವಿಶೇಷ ತಂಡ ರಚನೆಗೆ ಆಗ್ರಹ, ಕೋಲಾರ: ತಾಲ್ಲೂಕು ಆಡಳಿತದಲ್ಲಿನ ಅವ್ಯವಸ್ಥೆ, ದಲ್ಲಾಳಿಗಳ ಹಾವಳಿ ಹಾಗೂ ಲಂಚದ ಆರೋಪಗಳನ್ನು ಖಂಡಿಸಿ ರೈತ ಸಂಘದ ಕಾರ್ಯಕರ್ತರು ತಹಸಿಲ್ದಾರ್ ಕಛೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿ ಉಪತಹಸೀಲ್ದಾರ್ ಸುಬ್ರಹ್ಮಣ್ಯ ರವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು. ಈ ಸಂದರ್ಭದಲ್ಲಿ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ. ನಾರಾಯಣಗೌಡ ಮಾತನಾಡಿ, ಸರ್ಕಾರದ ಕೆಲಸ ದೇವರ ಕೆಲಸ ಎಂಬ ಘೋಷವಾಕ್ಯ ಬರೆದಿರುವ ತಾಲ್ಲೂಕು ಆಡಳಿತ ಸೌಧವನ್ನು ದಲ್ಲಾಳಿಗಳ ಹಾಗೂ ಲಂಚಬಾಕ ಅಧಿಕಾರಿಗಳ ಸೌಧ ಎಂದು ಮರುನಾಮಕರಣ ಮಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ ಎಂದು ಅವ್ಯವಸ್ಥೆಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ತಾಲ್ಲೂಕು ಕಚೇರಿಯಲ್ಲಿ ಸಾಮಾನ್ಯ ರೈತರು ಮತ್ತು ಕೂಲಿ ಕಾರ್ಮಿಕರ ಕೆಲಸಗಳು ಸುಗಮವಾಗಿ ನಡೆಯುತ್ತಿಲ್ಲ. ಅಧಿಕಾರಿಗಳನ್ನು ಭೇಟಿ ಮಾಡಬೇಕಾದರೂ ಹಣ ನೀಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಕಚೇರಿಯ ಎಲ್ಲೆಡೆ ದಲ್ಲಾಳಿಗಳ ಹಾವಳಿ ಹೆಚ್ಚಾಗಿದೆ ಎಂದು ಆರೋಪಿಸಿದರು. ಗ್ರಾಮ ಲೆಕ್ಕಿಗರು, ರಾಜಸ್ವ ನಿರೀಕ್ಷಕರು ಹಾಗೂ ಇತರ ಕಂದಾಯ ಅಧಿಕಾರಿಗಳು ಗ್ರಾಮೀಣ ಸೇವೆಯನ್ನು ನಿರ್ಲಕ್ಷಿಸಿ ಜನರಿಗೆ ಸಕಾಲದಲ್ಲಿ ಜಾತಿ, ಆದಾಯ ಮತ್ತು ಭೂ ದಾಖಲೆಗಳನ್ನು ನೀಡುತ್ತಿಲ್ಲ. ಅರ್ಜಿಗಳನ್ನು ಸಲ್ಲಿಸಿದರೂ ತಿಂಗಳುಗಟ್ಟಲೆ, ವರ್ಷಗಳಾದರೂ ವಿಲೇವಾರಿಯಾಗುತ್ತಿಲ್ಲ ಎಂದು ದೂರಿದರು. ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ ಮಾತನಾಡಿ, ಬಡ ರೈತರು ಮತ್ತು ಕೂಲಿ ಕಾರ್ಮಿಕರ ಪಿ.ನಂಬರ್ ದುರಸ್ತಿಗೆ ಸರ್ಕಾರ ಆದೇಶ ನೀಡಿದ್ದರೂ, ಅದರ ಪ್ರಯೋಜನ ಸಾಮಾನ್ಯರಿಗೆ ಸಿಗುತ್ತಿಲ್ಲ. ಶ್ರೀಮಂತರ ಕಡತಗಳಿಗೆ ಆದ್ಯತೆ ನೀಡಿ, ಬಡವರ ಕಡತಗಳನ್ನು ವಿವಿಧ ಕಾರಣಗಳನ್ನು ಹೇಳಿ ವಿಳಂಬ ಮಾಡಲಾಗುತ್ತಿದ ಕೆರೆ, ರಾಜಕಾಲುವೆ, ಬಂಡಿದಾರಿ, ಕಾಲುದಾರಿ ಹಾಗೂ ಸ್ಮಶಾನ ಸೇರಿದಂತೆ ಸರ್ಕಾರಿ ಆಸ್ತಿಗಳ ಒತ್ತುವರಿಯನ್ನು ತೆರವುಗೊಳಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ. ಇದರಿಂದ ರೈತರ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಒಂದು ವಾರದೊಳಗೆ ತಾಲ್ಲೂಕು ಆಡಳಿತದಲ್ಲಿನ ಅವ್ಯವಸ್ಥೆ ಸರಿಪಡಿಸಿ, ದಲ್ಲಾಳಿಗಳ ಹಾವಳಿಗೆ ಕಡಿವಾಣ ಹಾಕಬೇಕು. ಪಿ.ನಂಬರ್ ದುರಸ್ತಿಯಲ್ಲಿ ನಡೆದಿರುವ ಅಕ್ರಮಗಳ ತನಿಖೆ ನಡೆಸಿ, ಸರ್ಕಾರಿ ಆಸ್ತಿಗಳ ಒತ್ತುವರಿಯನ್ನು ತೆರವುಗೊಳಿಸಬೇಕು. ಇಲ್ಲದಿದ್ದರೆ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯಂದು ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸುವುದಾಗಿ ರೈತ ಸಂಘ ಎಚ್ಚರಿಕೆ ನೀಡಿತು. ಮನವಿ ಸ್ವೀಕರಿಸಿದ ಉಪತಹಸೀಲ್ದಾರ್ ಸುಬ್ರಹ್ಮಣ್ಯ ಮಾತನಾಡಿ, ತಾಲ್ಲೂಕು ಕಚೇರಿಯಲ್ಲಿ ದಲ್ಲಾಳಿಗಳ ಹಾವಳಿ ಹಾಗೂ ಇತರ ಸಮಸ್ಯೆಗಳ ಕುರಿತು ದೂರುಗಳು ಬಂದಿವೆ. ಪಿ.ನಂಬರ್ ದುರಸ್ತಿ ಸೇರಿದಂತೆ ಕಂದಾಯ ಇಲಾಖೆಯ ಕಾರ್ಯವೈಖರಿಯನ್ನು ಪರಿಶೀಲಿಸಿ, ತಪ್ಪಿತಸ್ಥರ ವಿರುದ್ಧ ಅಗತ್ಯ ಕ್ರಮ ಕೈಗೊಂಡು ದಲ್ಲಾಳಿಗಳ ಹಾವಳಿಗೆ ಕಡಿವಾಣ ಹಾಕಲಾಗುವುದು ಎಂದು ಭರವಸೆ ನೀಡಿದರು. ಪ್ರತಿಭಟನೆಯಲ್ಲಿ ಮಹಿಳಾ ಜಿಲ್ಲಾಧ್ಯಕ್ಷ ಎ ನಳಿನಿಗೌಡ ವಕ್ಕಲೇರಿ ಹನುಮಯ್ಯ, ಮಂಗಸಂದ್ರ ತಿಮ್ಮಣ್ಣ, ಪುತ್ತೇರಿ ರಾಜು, ಗಿರೀಶ್, ಚಂದ್ರಪ್ಪ, ತೆರಹಳ್ಳಿ ಆಂಜಿನಪ್ಪ, ವಾನರಾಶಿ ವೀರಭದ್ರಪ್ಪ, ಹನುಮನಹಳ್ಳಿ ನಾಗರಾಜ, ಸುಪ್ರಿಂ ಚಲ, ಶೈಲಜ, ರತ್ನಮ್ಮ, ವಿಶ್ವ, ಜನಾರ್ಧನ, ನಟರಾಜ್, ರಾಜಣ್ಣ, ಕುವಣ್ಣ, ರಾಮಕೃಷ್ಣಪ್ಪ ಸೇರಿದಂತೆ ಹಲವರು ಭಾಗವಹಿಸಿದ್ದರು.

More news from ಕರ್ನಾಟಕ and nearby areas
  • *ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದರೊಂದಿಗೆ,ನಶೆ ಮುಕ್ತ ಕಟ್ಟಿಗೆನಹಳ್ಳಿ‌ ಮಾಡಲು ಶ್ರಮಿಸಿ: ಡಿ.ವೈ.ಎಸ್.ಪಿ. ಮಲ್ಲೇಶ್ ಕರೆ* ಹೊಸಕೋಟೆ :ಮುಸ್ಲಿಂ ಸಮುದಾಯ ಪ್ರವಾದಿ ಮಹಮ್ಮದ್ ಪೈಗಂಬರ್   ಬರೆದಿರುವ  ಪವಿತ್ರ ಕುರಾನ್ ಅನುಸರಿಸುತ್ತಿರುವ ನೀವುಗಳು ಯಾವುದೇ ತಪ್ಪುಗಳನ್ನು ಮಾಡಬಾರದು,ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದರೊಂದಿಗೆ, ನಶೆ ಮುಕ್ತ ಕಟ್ಟಿಗೆನಹಳ್ಳಿ‌ ಮಾಡಲು ಶ್ರಮಿಸಿ ಎಂದು ತಿರುಮಲ ಶೆಟ್ಟಿಹಳ್ಳಿ ಪೊಲೀಸ್ ಠಾಣೆಯ ಡಿ.ವೈ.ಎಸ್.ಪಿ.ಮಲ್ಲೇಶ್ ಕಿವಿಮಾತು ಹೇಳಿದರು. ಹೊಸಕೋಟೆ ತಾಲ್ಲೂಕು ಜಡಿಗೇನಹಳ್ಳಿ ಹೋಬಳಿಯ ಕಟ್ಟಿಗೇನಹಳ್ಳಿಯಲ್ಲಿ ಪೊಲೀಸ್ ಇಲಾಖೆ ಹಾಗೂ ಜಾಮೀಯಾ ಮಸೀದಿ ಕಮಿಟಿ ಆಯೋಜಿಸಿದ್ದ ನಶೆ ಮುಕ್ತ ಕಟ್ಟಿಗೇನಹಳ್ಳಿ ಗ್ರಾಮ ಮತ್ತು ಮಾದಕ ವಸ್ತುಗಳ ಬಳಕೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಮಾತನಾಡಿ ಮಾದಕ ವಸ್ತುಗಳ ಸೇವನೆಯು ಮನುಷ್ಯನ ದೇಹ, ಮನಸ್ಸು ಮತ್ತು ಸಮಾಜದ ಮೇಲೆ ಅತ್ಯಂತ ಗಂಭೀರವಾದ ಹಾಗೂ ಮಾರಕ ದುಷ್ಪರಿಣಾಮಗಳನ್ನು ಉಂಟುಮಾಡುತ್ತದೆ ಎಂದರು. ಬಹಳಷ್ಟು ಅಪರಾಧಗಳು ನಶೆ ಬರುವ ಮಾದಕ ವಸ್ತುಗಳ ಸೇವನೆಯಿಂದ ನಡೆಯುತ್ತದೆ.ಇದಕ್ಕೆ ಅವಕಾಶ ನೀಡಬಾರದೆಂದ ಅವರು ಕಟ್ಟಿಗೇನಹಳ್ಳಿ ಗ್ರಾಮಕ್ಕೆ ಇರುವ ಕಳಂಕ ದೂರ ಮಾಡಬೇಕು ಹಾಗೂ ಯುವಕರು ಮಾದಕ ವಸ್ತುಗಳಿಂದ ದೂರ ಇರಬೇಕೆಂದ ಅವರು ಗ್ರಾಮದ ಹಿರಿಯರು ಯುವಕರಿಗೆ ಮಾರ್ಗದರ್ಶನ ನೀಡ ಬೇಕೆಂದು ಸಲಹೆ ನೀಡಿದರು. ಸರ್ಕಲ್ ಇನ್ಸ್ಪೆಕ್ಟರ್ ಸುಂದರ್ ಮಾತನಾಡಿ ಮಾದಕ ವಸ್ತುಗಳ ಬಳಕೆಯಿಂದ ವ್ಯಕ್ತಿಯ ಆರೋಗ್ಯವನ್ನು ಹಾಳುಮಾಡುವುದಲ್ಲದೆ, ಕುಟುಂಬಗಳನ್ನು ಬೀದಿಗೆ ತಳ್ಳುತ್ತದೆ ಮತ್ತು ಅಪರಾಧ ಚಟುವಟಿಕೆಗಳನ್ನು ಹೆಚ್ಚಿಸುತ್ತದೆ ಎಂದರು. ಮಾದಕವಸ್ತು ಮಾರಾಟ,ಸೇವನೆ ಬಗ್ಗೆ ಯಾವುದೇ ಮಾಹಿತಿ ದೊರೆತರೆ ತಕ್ಷಣ ಪೊಲೀಸಿರಿಗೆ ಮಾಹಿತಿ ಒದಗಿದರೆ ಅಪರಾಧಿಗಳನ್ನು ಹಿಡಿಯಲು ಅನುಕೂಲ ಆಗುತ್ತದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಮಸೀದಿ ಕಮಿಟಿಯ ಸಾದರ್ ಅಯಾಸ್ ಉಲ್ಲಾ ಖಾನ್, ಸೈಯದ್ ಶಬೀರ್,ರಿಯಾಜ್ ಖಾನ್,ಅಯಾಜ್ ಖಾನ್,ಮದರಸಾ ಮಖಂಡರಾದ ಎಜಾಜ್ ಶರೀಫ್ ಮುಂತಾದವರು ಇದ್ದರು
    3
    *ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದರೊಂದಿಗೆ,ನಶೆ ಮುಕ್ತ ಕಟ್ಟಿಗೆನಹಳ್ಳಿ‌ ಮಾಡಲು ಶ್ರಮಿಸಿ: ಡಿ.ವೈ.ಎಸ್.ಪಿ. ಮಲ್ಲೇಶ್ ಕರೆ*
ಹೊಸಕೋಟೆ :ಮುಸ್ಲಿಂ ಸಮುದಾಯ ಪ್ರವಾದಿ ಮಹಮ್ಮದ್ ಪೈಗಂಬರ್  
ಬರೆದಿರುವ  ಪವಿತ್ರ ಕುರಾನ್ ಅನುಸರಿಸುತ್ತಿರುವ ನೀವುಗಳು ಯಾವುದೇ ತಪ್ಪುಗಳನ್ನು ಮಾಡಬಾರದು,ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದರೊಂದಿಗೆ, ನಶೆ ಮುಕ್ತ ಕಟ್ಟಿಗೆನಹಳ್ಳಿ‌ ಮಾಡಲು ಶ್ರಮಿಸಿ ಎಂದು ತಿರುಮಲ ಶೆಟ್ಟಿಹಳ್ಳಿ ಪೊಲೀಸ್ ಠಾಣೆಯ ಡಿ.ವೈ.ಎಸ್.ಪಿ.ಮಲ್ಲೇಶ್ ಕಿವಿಮಾತು ಹೇಳಿದರು.
ಹೊಸಕೋಟೆ ತಾಲ್ಲೂಕು ಜಡಿಗೇನಹಳ್ಳಿ ಹೋಬಳಿಯ ಕಟ್ಟಿಗೇನಹಳ್ಳಿಯಲ್ಲಿ ಪೊಲೀಸ್ ಇಲಾಖೆ ಹಾಗೂ ಜಾಮೀಯಾ ಮಸೀದಿ ಕಮಿಟಿ ಆಯೋಜಿಸಿದ್ದ ನಶೆ ಮುಕ್ತ ಕಟ್ಟಿಗೇನಹಳ್ಳಿ ಗ್ರಾಮ ಮತ್ತು ಮಾದಕ ವಸ್ತುಗಳ ಬಳಕೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಮಾತನಾಡಿ  ಮಾದಕ ವಸ್ತುಗಳ ಸೇವನೆಯು ಮನುಷ್ಯನ ದೇಹ, ಮನಸ್ಸು ಮತ್ತು ಸಮಾಜದ ಮೇಲೆ ಅತ್ಯಂತ ಗಂಭೀರವಾದ ಹಾಗೂ ಮಾರಕ ದುಷ್ಪರಿಣಾಮಗಳನ್ನು ಉಂಟುಮಾಡುತ್ತದೆ ಎಂದರು.
ಬಹಳಷ್ಟು ಅಪರಾಧಗಳು ನಶೆ ಬರುವ ಮಾದಕ ವಸ್ತುಗಳ ಸೇವನೆಯಿಂದ ನಡೆಯುತ್ತದೆ.ಇದಕ್ಕೆ ಅವಕಾಶ ನೀಡಬಾರದೆಂದ ಅವರು ಕಟ್ಟಿಗೇನಹಳ್ಳಿ ಗ್ರಾಮಕ್ಕೆ ಇರುವ ಕಳಂಕ ದೂರ ಮಾಡಬೇಕು ಹಾಗೂ ಯುವಕರು ಮಾದಕ ವಸ್ತುಗಳಿಂದ ದೂರ ಇರಬೇಕೆಂದ ಅವರು ಗ್ರಾಮದ ಹಿರಿಯರು ಯುವಕರಿಗೆ ಮಾರ್ಗದರ್ಶನ ನೀಡ ಬೇಕೆಂದು ಸಲಹೆ ನೀಡಿದರು.
ಸರ್ಕಲ್ ಇನ್ಸ್ಪೆಕ್ಟರ್ ಸುಂದರ್ ಮಾತನಾಡಿ ಮಾದಕ ವಸ್ತುಗಳ ಬಳಕೆಯಿಂದ ವ್ಯಕ್ತಿಯ ಆರೋಗ್ಯವನ್ನು ಹಾಳುಮಾಡುವುದಲ್ಲದೆ, ಕುಟುಂಬಗಳನ್ನು ಬೀದಿಗೆ ತಳ್ಳುತ್ತದೆ ಮತ್ತು ಅಪರಾಧ ಚಟುವಟಿಕೆಗಳನ್ನು ಹೆಚ್ಚಿಸುತ್ತದೆ ಎಂದರು.
ಮಾದಕವಸ್ತು ಮಾರಾಟ,ಸೇವನೆ ಬಗ್ಗೆ ಯಾವುದೇ ಮಾಹಿತಿ ದೊರೆತರೆ ತಕ್ಷಣ ಪೊಲೀಸಿರಿಗೆ ಮಾಹಿತಿ ಒದಗಿದರೆ 
ಅಪರಾಧಿಗಳನ್ನು ಹಿಡಿಯಲು ಅನುಕೂಲ ಆಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಸೀದಿ ಕಮಿಟಿಯ ಸಾದರ್ ಅಯಾಸ್ ಉಲ್ಲಾ ಖಾನ್, ಸೈಯದ್ ಶಬೀರ್,ರಿಯಾಜ್ ಖಾನ್,ಅಯಾಜ್ ಖಾನ್,ಮದರಸಾ ಮಖಂಡರಾದ ಎಜಾಜ್ ಶರೀಫ್ ಮುಂತಾದವರು ಇದ್ದರು
    user_ಎಸ್.ಎನ್.ಪ್ರಕಾಶ್
    ಎಸ್.ಎನ್.ಪ್ರಕಾಶ್
    Grain Trader ಕೋಲಾರ, ಕೋಲಾರ, ಕರ್ನಾಟಕ•
    8 hrs ago
  • ಕಾವೇರಿ ನೀರು ಬಿಡುಗಡೆ ವಿಚಾರದಲ್ಲಿ ರಾಜ್ಯ ಸರ್ಕಾರದ ನಿರ್ಲಕ್ಷ್ಯ ಮತ್ತು ರೈತ ವಿರೋಧಿ ನೀತಿ ಖಂಡಿಸಿ ಇಂದು ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್.‌ ಯಡಿಯೂರಪ್ಪ, ಪ್ರತಿಪಕ್ಷ ನಾಯಕರಾದ ಶ್ರೀ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಮಂಡ್ಯದ ಕೆ. ಆರ್.‌ ಎಸ್.‌ ಡ್ಯಾಂ ಬಳಿ ಬೃಹತ್‌ ಪ್ರತಿಭಟನೆ ನಡೆಯಿತು. ಕಾವೇರಿ ನೀರು ಬಿಡುಗಡೆ ವಿಚಾರದಲ್ಲಿ ರಾಜ್ಯ ಸರ್ಕಾರದ ನಿರ್ಲಕ್ಷ್ಯ ಮತ್ತು ರೈತ ವಿರೋಧಿ ನೀತಿ ಖಂಡಿಸಿ ಇಂದು ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್.‌ ಯಡಿಯೂರಪ್ಪ, ಪ್ರತಿಪಕ್ಷ ನಾಯಕರಾದ ಶ್ರೀ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಮಂಡ್ಯದ ಕೆ. ಆರ್.‌ ಎಸ್.‌ ಡ್ಯಾಂ ಬಳಿ ಬೃಹತ್‌ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರೀ ಸಿ. ಟಿ. ರವಿ, ಶ್ರೀ ಕೆ. ಸಿ. ನಾರಾಯಣಗೌಡ, ಶಾಸಕರಾದ ಶ್ರೀ ಟಿ. ಎಸ್.‌ ಶ್ರೀವತ್ಸ, ಶ್ರೀ ರಘು ಕೌಟಿಲ್ಯ, ರಾಜ್ಯ ಉಪಾಧ್ಯಕ್ಷರಾದ ಶ್ರೀ ಎನ್.‌ ಮಹೇಶ್‌, ರಾಜ್ಯ ಪ್ರಧಾ‌ನ ಕಾರ್ಯದರ್ಶಿಗಳಾದ ಶ್ರೀ ಪ್ರೀತಮ್‌ ಗೌಡ, ರಾಜ್ಯ ಕಾರ್ಯದರ್ಶಿಗಳಾದ ಡಾ. ಲಕ್ಷ್ಮೀ ಅಶ್ವಿನ್‌ ಗೌಡ, ಮಾಜಿ ಸಂಸದರಾದ ಶ್ರೀಮತಿ ಸುಮಲತಾ ಅಂಬರೀಶ್‌, ರಾಜ್ಯ ಮುಖ್ಯ ವಕ್ತಾರರಾದ ಶ್ರೀ ಅಶ್ವತ್ಥ ನಾರಾಯಣ, ಮೈಸೂರು ನಗರ ಜಿಲ್ಲಾಧ್ಯಕ್ಷರಾದ ಶ್ರೀ ಎಲ್.‌ ನಾಗೇಂದ್ರ, ಮಂಡ್ಯ ಜಿಲ್ಲಾಧ್ಯಕ್ಷರಾದ ಶ್ರೀ ಇಂದ್ರೇಶ್ ಕುಮಾರ್, ಜಿಲ್ಲಾ ಪದಾಧಿಕಾರಿಗಳು, ಪ್ರಮುಖರು, ರೈತರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
    1
    ಕಾವೇರಿ ನೀರು ಬಿಡುಗಡೆ ವಿಚಾರದಲ್ಲಿ ರಾಜ್ಯ ಸರ್ಕಾರದ ನಿರ್ಲಕ್ಷ್ಯ ಮತ್ತು ರೈತ ವಿರೋಧಿ ನೀತಿ ಖಂಡಿಸಿ ಇಂದು ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್.‌ ಯಡಿಯೂರಪ್ಪ, ಪ್ರತಿಪಕ್ಷ ನಾಯಕರಾದ ಶ್ರೀ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಮಂಡ್ಯದ ಕೆ. ಆರ್.‌ ಎಸ್.‌ ಡ್ಯಾಂ ಬಳಿ ಬೃಹತ್‌ ಪ್ರತಿಭಟನೆ ನಡೆಯಿತು. 
ಕಾವೇರಿ ನೀರು ಬಿಡುಗಡೆ ವಿಚಾರದಲ್ಲಿ ರಾಜ್ಯ ಸರ್ಕಾರದ ನಿರ್ಲಕ್ಷ್ಯ ಮತ್ತು ರೈತ ವಿರೋಧಿ ನೀತಿ ಖಂಡಿಸಿ ಇಂದು ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್.‌ ಯಡಿಯೂರಪ್ಪ, ಪ್ರತಿಪಕ್ಷ ನಾಯಕರಾದ ಶ್ರೀ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಮಂಡ್ಯದ ಕೆ. ಆರ್.‌ ಎಸ್.‌ ಡ್ಯಾಂ ಬಳಿ ಬೃಹತ್‌ ಪ್ರತಿಭಟನೆ ನಡೆಯಿತು. 
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರೀ ಸಿ. ಟಿ. ರವಿ, ಶ್ರೀ ಕೆ. ಸಿ. ನಾರಾಯಣಗೌಡ, ಶಾಸಕರಾದ ಶ್ರೀ ಟಿ. ಎಸ್.‌ ಶ್ರೀವತ್ಸ, ಶ್ರೀ ರಘು ಕೌಟಿಲ್ಯ, ರಾಜ್ಯ ಉಪಾಧ್ಯಕ್ಷರಾದ ಶ್ರೀ ಎನ್.‌ ಮಹೇಶ್‌, ರಾಜ್ಯ ಪ್ರಧಾ‌ನ ಕಾರ್ಯದರ್ಶಿಗಳಾದ ಶ್ರೀ ಪ್ರೀತಮ್‌ ಗೌಡ, ರಾಜ್ಯ ಕಾರ್ಯದರ್ಶಿಗಳಾದ ಡಾ. ಲಕ್ಷ್ಮೀ ಅಶ್ವಿನ್‌ ಗೌಡ, ಮಾಜಿ ಸಂಸದರಾದ ಶ್ರೀಮತಿ ಸುಮಲತಾ ಅಂಬರೀಶ್‌, ರಾಜ್ಯ ಮುಖ್ಯ ವಕ್ತಾರರಾದ ಶ್ರೀ ಅಶ್ವತ್ಥ ನಾರಾಯಣ, ಮೈಸೂರು ನಗರ ಜಿಲ್ಲಾಧ್ಯಕ್ಷರಾದ ಶ್ರೀ ಎಲ್.‌ ನಾಗೇಂದ್ರ, ಮಂಡ್ಯ ಜಿಲ್ಲಾಧ್ಯಕ್ಷರಾದ ಶ್ರೀ ಇಂದ್ರೇಶ್ ಕುಮಾರ್, ಜಿಲ್ಲಾ ಪದಾಧಿಕಾರಿಗಳು, ಪ್ರಮುಖರು, ರೈತರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
    user_ಜನಪರ ಸುದ್ದಿ 91
    ಜನಪರ ಸುದ್ದಿ 91
    Singer ಕೋಲಾರ, ಕೋಲಾರ, ಕರ್ನಾಟಕ•
    10 hrs ago
  • KOLAR KI.AWAAZ KOUSAR NEWS
    1
    KOLAR KI.AWAAZ KOUSAR NEWS
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop Kolar, Karnataka•
    12 hrs ago
  • ಬಂಗಾರಪೇಟೆ ದಕ್ಷಿಣ ಶಿರಡಿ ಶ್ರೀ ಸಾಯಿಬಾಬಾ ಮಂದಿರದಲ್ಲಿ ಗುರುಪೂರ್ಣಿಮೆಯನ್ನು ಅಂಗವಾಗಿ ಸಾಯಿಬಾಬಾ ಗುರುವಿನ ವಿಶೇಷ ಆರಾಧನೆ ಬಂಗಾರಪೇಟೆ–ಕೆಜಿಎಫ್ ಮುಖ್ಯರಸ್ತೆಯ ಎಸ್.ಜಿ.ಕೋಟೆಯಲ್ಲಿರುವ ದಕ್ಷಿಣ ಶಿರಡಿ ಶ್ರೀ ಸಾಯಿಬಾಬಾ ಮಂದಿರದಲ್ಲಿ ಗುರುಪೂರ್ಣಿಮೆಯನ್ನು ಅಂಗವಾಗಿ ಸಾಯಿಬಾಬಾ ಗುರುವಿನ ವಿಶೇಷ ಆರಾಧನೆ ಭಕ್ತಿಭಾವದಿಂದ ನೆರವೇರಿತು.ಧರ್ಮದರ್ಶಿ ಮುನಿಮಾರಪ್ಪ ಮಾತನಾಡಿ, ಕಳೆದ 10 ವರ್ಷಗಳಿಂದ ಗುರುಪೂರ್ಣಿಮೆ ಹಾಗೂ ಹೊಸ ವರ್ಷದ ಆರಂಭದ ದಿನ ವಿಶೇಷ ಪೂಜೆಗಳನ್ನು ನಡೆಸಲಾಗುತ್ತಿದೆ. ಈ ವರ್ಷವೂ ಮುಂಜಾನೆಯಿಂದಲೇ ಸಾಯಿಬಾಬಾ ಸ್ವಾಮಿಗೆ ವಿವಿಧ ಅಭಿಷೇಕ, ಹೋಮ, ಸತ್ಯನಾರಾಯಣ ಪೂಜೆ ಹಾಗೂ ಭಕ್ತರಿಂದ ಹಾಲಿನ ಅಭಿಷೇಕ ನೆರವೇರಿಸಲಾಯಿತು. ಜೊತೆಗೆ ರಕ್ತದಾನ ಶಿಬಿರ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು. ಮಧ್ಯಾಹ್ನ ಮಹಾಮಂಗಳಾರತಿ, ಸಂಜೆ ಭಜನೆ–ಕೀರ್ತನೆ, ಪಲ್ಲಕ್ಕಿ ಉತ್ಸವ ಹಾಗೂ ದಿನವಿಡೀ ಅನ್ನದಾಸೋಹ ಮತ್ತು ಪ್ರಸಾದ ವಿತರಣೆಯ ವ್ಯವಸ್ಥೆ ಮಾಡಲಾಗಿತ್ತು ಎಂದು ತಿಳಿಸಿದರು.ಕಾರ್ಯದರ್ಶಿ ಡಾ. ರಾಧಾ ವಿ ಮಾತನಾಡಿ, ಆಷಾಢ ಮಾಸದ ಮೊದಲ ಹುಣ್ಣಿಮೆಯನ್ನು ಗುರುಪೂರ್ಣಿಮೆಯಾಗಿ ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ದೇವಾಲಯದಲ್ಲಿ ವಿಶೇಷ ಪೂಜೆಗಳನ್ನು ಹಮ್ಮಿಕೊಳ್ಳಲಾಗಿದೆ. ದೇವಾಲಯದ ವತಿಯಿಂದ ವರ್ಷಪೂರ್ತಿ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದ್ದು, ನವರಾತ್ರಿ ಸಂದರ್ಭದಲ್ಲಿ ನವದುರ್ಗೆಯರ ಆರಾಧನೆ, ವಿಜಯದಶಮಿ ವಾರ್ಷಿಕೋತ್ಸವ, ಗ್ರಾಮೀಣ ಪ್ರದೇಶದ ವೃದ್ಧರಿಗೆ ಕಂಬಳಿ ವಿತರಣೆ, ಮಕ್ಕಳ ದಿನಾಚರಣೆಯ ಅಂಗವಾಗಿ ಮಕ್ಕಳಿಗೆ ಅಗತ್ಯ ವಸ್ತುಗಳ ವಿತರಣೆ, ಸ್ವಾತಂತ್ರ್ಯ ದಿನಾಚರಣೆಯಂದು ರಾಷ್ಟ್ರಧ್ವಜಾರೋಹಣ, ವೀರಯೋಧರ ಸನ್ಮಾನ ಹಾಗೂ ಅಂಗವಿಕಲರಿಗೆ ಅಗತ್ಯ ಸಾಮಗ್ರಿಗಳ ವಿತರಣೆ ಸೇರಿದಂತೆ ವಿವಿಧ ಸೇವಾ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.ದೇವಾಲಯದ ಅಭಿವೃದ್ಧಿಗೆ ಸಹಕರಿಸುತ್ತಿರುವ ದಾನಿಗಳು ಹಾಗೂ ಭಕ್ತರಿಗೆ ಧರ್ಮದರ್ಶಿ ಮುನಿಮಾರಪ್ಪ ಮತ್ತು ಕಾರ್ಯದರ್ಶಿ ಡಾ. ರಾಧಾ ವಿ ಕೃತಜ್ಞತೆ ಸಲ್ಲಿಸಿ, ಮುಂದೆಯೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದೇವರ ಕೃಪೆಗೆ ಪಾತ್ರರಾಗುವುದರೊಂದಿಗೆ ಸಮಾಜಮುಖಿ ಸೇವಾ ಕಾರ್ಯಗಳಿಗೆ ಸಹಕಾರ ನೀಡುವಂತೆ ಮನವಿ ಮಾಡಿದರು.
    1
    ಬಂಗಾರಪೇಟೆ ದಕ್ಷಿಣ ಶಿರಡಿ ಶ್ರೀ ಸಾಯಿಬಾಬಾ ಮಂದಿರದಲ್ಲಿ ಗುರುಪೂರ್ಣಿಮೆಯನ್ನು ಅಂಗವಾಗಿ ಸಾಯಿಬಾಬಾ ಗುರುವಿನ ವಿಶೇಷ ಆರಾಧನೆ
ಬಂಗಾರಪೇಟೆ–ಕೆಜಿಎಫ್ ಮುಖ್ಯರಸ್ತೆಯ ಎಸ್.ಜಿ.ಕೋಟೆಯಲ್ಲಿರುವ ದಕ್ಷಿಣ ಶಿರಡಿ ಶ್ರೀ ಸಾಯಿಬಾಬಾ ಮಂದಿರದಲ್ಲಿ ಗುರುಪೂರ್ಣಿಮೆಯನ್ನು ಅಂಗವಾಗಿ ಸಾಯಿಬಾಬಾ ಗುರುವಿನ ವಿಶೇಷ ಆರಾಧನೆ ಭಕ್ತಿಭಾವದಿಂದ ನೆರವೇರಿತು.ಧರ್ಮದರ್ಶಿ ಮುನಿಮಾರಪ್ಪ ಮಾತನಾಡಿ, ಕಳೆದ 10 ವರ್ಷಗಳಿಂದ ಗುರುಪೂರ್ಣಿಮೆ ಹಾಗೂ ಹೊಸ ವರ್ಷದ ಆರಂಭದ ದಿನ ವಿಶೇಷ ಪೂಜೆಗಳನ್ನು ನಡೆಸಲಾಗುತ್ತಿದೆ. ಈ ವರ್ಷವೂ ಮುಂಜಾನೆಯಿಂದಲೇ ಸಾಯಿಬಾಬಾ ಸ್ವಾಮಿಗೆ ವಿವಿಧ ಅಭಿಷೇಕ, ಹೋಮ, ಸತ್ಯನಾರಾಯಣ ಪೂಜೆ ಹಾಗೂ ಭಕ್ತರಿಂದ ಹಾಲಿನ ಅಭಿಷೇಕ ನೆರವೇರಿಸಲಾಯಿತು. ಜೊತೆಗೆ ರಕ್ತದಾನ ಶಿಬಿರ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು. ಮಧ್ಯಾಹ್ನ ಮಹಾಮಂಗಳಾರತಿ, ಸಂಜೆ ಭಜನೆ–ಕೀರ್ತನೆ, ಪಲ್ಲಕ್ಕಿ ಉತ್ಸವ ಹಾಗೂ ದಿನವಿಡೀ ಅನ್ನದಾಸೋಹ ಮತ್ತು ಪ್ರಸಾದ ವಿತರಣೆಯ ವ್ಯವಸ್ಥೆ ಮಾಡಲಾಗಿತ್ತು ಎಂದು ತಿಳಿಸಿದರು.ಕಾರ್ಯದರ್ಶಿ ಡಾ. ರಾಧಾ ವಿ ಮಾತನಾಡಿ, ಆಷಾಢ ಮಾಸದ ಮೊದಲ ಹುಣ್ಣಿಮೆಯನ್ನು ಗುರುಪೂರ್ಣಿಮೆಯಾಗಿ ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ದೇವಾಲಯದಲ್ಲಿ ವಿಶೇಷ ಪೂಜೆಗಳನ್ನು ಹಮ್ಮಿಕೊಳ್ಳಲಾಗಿದೆ. ದೇವಾಲಯದ ವತಿಯಿಂದ ವರ್ಷಪೂರ್ತಿ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದ್ದು, ನವರಾತ್ರಿ ಸಂದರ್ಭದಲ್ಲಿ ನವದುರ್ಗೆಯರ ಆರಾಧನೆ, ವಿಜಯದಶಮಿ ವಾರ್ಷಿಕೋತ್ಸವ, ಗ್ರಾಮೀಣ ಪ್ರದೇಶದ ವೃದ್ಧರಿಗೆ ಕಂಬಳಿ ವಿತರಣೆ, ಮಕ್ಕಳ ದಿನಾಚರಣೆಯ ಅಂಗವಾಗಿ ಮಕ್ಕಳಿಗೆ ಅಗತ್ಯ ವಸ್ತುಗಳ ವಿತರಣೆ, ಸ್ವಾತಂತ್ರ್ಯ ದಿನಾಚರಣೆಯಂದು ರಾಷ್ಟ್ರಧ್ವಜಾರೋಹಣ, ವೀರಯೋಧರ ಸನ್ಮಾನ ಹಾಗೂ ಅಂಗವಿಕಲರಿಗೆ ಅಗತ್ಯ ಸಾಮಗ್ರಿಗಳ ವಿತರಣೆ ಸೇರಿದಂತೆ ವಿವಿಧ ಸೇವಾ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.ದೇವಾಲಯದ ಅಭಿವೃದ್ಧಿಗೆ ಸಹಕರಿಸುತ್ತಿರುವ ದಾನಿಗಳು ಹಾಗೂ ಭಕ್ತರಿಗೆ ಧರ್ಮದರ್ಶಿ ಮುನಿಮಾರಪ್ಪ ಮತ್ತು ಕಾರ್ಯದರ್ಶಿ ಡಾ. ರಾಧಾ ವಿ ಕೃತಜ್ಞತೆ ಸಲ್ಲಿಸಿ, ಮುಂದೆಯೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದೇವರ ಕೃಪೆಗೆ ಪಾತ್ರರಾಗುವುದರೊಂದಿಗೆ ಸಮಾಜಮುಖಿ ಸೇವಾ ಕಾರ್ಯಗಳಿಗೆ ಸಹಕಾರ ನೀಡುವಂತೆ ಮನವಿ ಮಾಡಿದರು.
    user_Vishnu Press
    Vishnu Press
    Local News Reporter ಬಂಗಾರಪೇಟೆ, ಕೋಲಾರ, ಕರ್ನಾಟಕ•
    8 hrs ago
  • ಮುಳುಬಾಗಿಲು : ಅಂತರ್ಜಾತಿ ವಿವಾಹಕ್ಕೆ ದ್ವೇಷ.!? ಕುಟುಂಬ ವೈಷಮ್ಯಕ್ಕೆ ಹೊಸದಾಗಿ ಕಟ್ಟುತ್ತಿದ್ದ ಮನೆ ನೆಲಸಮ.!? #kolar #mulbagil #nangali #intercastmarrage #lovemarrage #lovecontroversy #janasuddhitv
    1
    ಮುಳುಬಾಗಿಲು : ಅಂತರ್ಜಾತಿ ವಿವಾಹಕ್ಕೆ ದ್ವೇಷ.!? ಕುಟುಂಬ ವೈಷಮ್ಯಕ್ಕೆ ಹೊಸದಾಗಿ ಕಟ್ಟುತ್ತಿದ್ದ ಮನೆ ನೆಲಸಮ.!?

#kolar #mulbagil #nangali #intercastmarrage #lovemarrage #lovecontroversy #janasuddhitv
    user_Janasuddhi
    Janasuddhi
    ಮುಳಬಾಗಿಲು, ಕೋಲಾರ, ಕರ್ನಾಟಕ•
    9 hrs ago
  • ಬೇತಮಂಗಲದ ಗ್ರಾಮೀಣ ವಿದ್ಯಾ ಸಂಸ್ಥೆಯ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಎನ್‌ಸಿಸಿಗೆ ಆಯ್ಕೆ ಬೇತಮಂಗಲ ಗ್ರಾಮೀಣ ವಿದ್ಯಾ ಸಂಸ್ಥೆಯ ಪಿಯು ಕಾಲೇಜು ವಿಭಾಗದ ವಿದ್ಯಾರ್ಥಿಗಳು ಕಠಿಣ ಅರ್ಹತಾ ಹಾಗೂ ದೈಹಿಕ ಪರೀಕ್ಷೆಗಳಲ್ಲಿ ಉತ್ತೀರ್ಣರಾಗುವ ಮೂಲಕ ರಾಷ್ಟ್ರೀಯ ಕೆಡೆಟ್ ಪಡೆಗೆ (ಎನ್‌ಸಿಸಿ) ಹೆಮ್ಮೆಯಿಂದ ಆಯ್ಕೆಯಾಗಿದ್ದಾರೆ. ಕೋಲಾರದ ಎನ್‌ಸಿಸಿ ಅಧಿಕಾರಿಗಳ ತಂಡವು ಗ್ರಾಮೀಣ ವಿದ್ಯಾ ಸಂಸ್ಥೆಗೆ ಭೇಟಿ ನೀಡಿ, ಶಾಲೆಯ 50ಕ್ಕೂ ಹೆಚ್ಚು ಆಸಕ್ತ ವಿದ್ಯಾರ್ಥಿಗಳಿಗೆ ವಿವಿಧ ಹಂತದ ಅರ್ಹತಾ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆಗಳನ್ನು ನಡೆಸಿತು. ಈ ಪೈಕಿ ಅತ್ಯುತ್ತಮ ಪ್ರದರ್ಶನ ನೀಡಿದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಂತಿಮವಾಗಿ ಎನ್‌ಸಿಸಿಗೆ ಆಯ್ಕೆಯಾಗಿದ್ದಾರೆ. ನೂತನವಾಗಿ ಆಯ್ಕೆಯಾದ ಎಲ್ಲಾ ದೇಶಪ್ರೇಮಿ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದದವರು ಹೃತ್ಪೂರ್ವಕವಾಗಿ ಅಭಿನಂದಿಸಿದ್ದಾರೆ. ಶಿಸ್ತು ಮತ್ತು ಉನ್ನತ ಭವಿಷ್ಯಕ್ಕೆ ಎನ್‌ಸಿಸಿ ಪೂರಕ: ವಿದ್ಯಾರ್ಥಿಗಳನ್ನು ಅಭಿನಂದಿಸಿ ಮಾತನಾಡಿದ ಸಂಸ್ಥೆಯ ಕಾರ್ಯದರ್ಶಿಗಳಾದ ಅ.ಮು. ಲಕ್ಷ್ಮೀನಾರಾಯಣ ಅವರು, "ವಿದ್ಯಾರ್ಥಿ ಜೀವನದಲ್ಲಿ ಶಿಸ್ತು, ಸಮಯ ಪ್ರಜ್ಞೆ ಮತ್ತು ದೇಶಭಕ್ತಿಯನ್ನು ಮೈಗೂಡಿಸಿಕೊಳ್ಳಲು ಎನ್‌ಸಿಸಿ ಅತ್ಯಂತ ಪ್ರಮುಖ ಮಾಧ್ಯಮವಾಗಿದೆ. ಇಲ್ಲಿ ಕಠಿಣ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ ರಕ್ಷಣೆ, ಆಡಳಿತ ಸೇರಿದಂತೆ ವಿವಿಧ ರಂಗಗಳಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಲು ಉತ್ತಮ ಅವಕಾಶಗಳು ಸಿಗಲಿವೆ. ನಮ್ಮ ಗ್ರಾಮೀಣ ವಿದ್ಯಾ ಸಂಸ್ಥೆಯಲ್ಲಿ ಕೇವಲ ಪಠ್ಯ ಶಿಕ್ಷಣಕ್ಕೆ ಮಾತ್ರ ಸೀಮಿತವಾಗದೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ ಹಾಗೂ ಎನ್‌ಸಿಸಿಯಂತಹ ರಾಷ್ಟ್ರ ನಿರ್ಮಾಣದ ತರಬೇತಿಗಳಿಗೂ ಸದಾ ಉತ್ತೇಜನ ನೀಡಲಾಗುತ್ತದೆ," ಎಂದು ಹೆಮ್ಮೆಯಿಂದ ನುಡಿದರು. ಈ ಸಂದರ್ಭದಲ್ಲಿ ಕೋಲಾರದ ಎನ್‌ಸಿಸಿ ಅಧಿಕಾರಿಗಳಾದ ರಾಜೇಂದ್ರ ರಾವ್, ಕಿರಣ್ ಕುಮಾರ್, ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ, ಸಂಸ್ಥೆಯ ನಿರ್ದೇಶಕರಾದ ವಿಜಯೇಂದ್ರ ಹಾಗೂ ಎನ್‌ಸಿಸಿ ಹಿರಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದು, ನೂತನ ಕೆಡೆಟ್‌ಗಳಿಗೆ ಮಾರ್ಗದರ್ಶನ ನೀಡಿದರು.
    1
    ಬೇತಮಂಗಲದ ಗ್ರಾಮೀಣ ವಿದ್ಯಾ ಸಂಸ್ಥೆಯ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಎನ್‌ಸಿಸಿಗೆ ಆಯ್ಕೆ

ಬೇತಮಂಗಲ ಗ್ರಾಮೀಣ ವಿದ್ಯಾ ಸಂಸ್ಥೆಯ ಪಿಯು ಕಾಲೇಜು ವಿಭಾಗದ ವಿದ್ಯಾರ್ಥಿಗಳು ಕಠಿಣ ಅರ್ಹತಾ ಹಾಗೂ ದೈಹಿಕ ಪರೀಕ್ಷೆಗಳಲ್ಲಿ ಉತ್ತೀರ್ಣರಾಗುವ ಮೂಲಕ ರಾಷ್ಟ್ರೀಯ ಕೆಡೆಟ್ ಪಡೆಗೆ (ಎನ್‌ಸಿಸಿ) ಹೆಮ್ಮೆಯಿಂದ ಆಯ್ಕೆಯಾಗಿದ್ದಾರೆ.
ಕೋಲಾರದ ಎನ್‌ಸಿಸಿ ಅಧಿಕಾರಿಗಳ ತಂಡವು ಗ್ರಾಮೀಣ ವಿದ್ಯಾ ಸಂಸ್ಥೆಗೆ ಭೇಟಿ ನೀಡಿ, ಶಾಲೆಯ 50ಕ್ಕೂ ಹೆಚ್ಚು ಆಸಕ್ತ ವಿದ್ಯಾರ್ಥಿಗಳಿಗೆ ವಿವಿಧ ಹಂತದ ಅರ್ಹತಾ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆಗಳನ್ನು ನಡೆಸಿತು. ಈ ಪೈಕಿ ಅತ್ಯುತ್ತಮ ಪ್ರದರ್ಶನ ನೀಡಿದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಂತಿಮವಾಗಿ ಎನ್‌ಸಿಸಿಗೆ ಆಯ್ಕೆಯಾಗಿದ್ದಾರೆ.
ನೂತನವಾಗಿ ಆಯ್ಕೆಯಾದ ಎಲ್ಲಾ ದೇಶಪ್ರೇಮಿ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದದವರು ಹೃತ್ಪೂರ್ವಕವಾಗಿ ಅಭಿನಂದಿಸಿದ್ದಾರೆ.
ಶಿಸ್ತು ಮತ್ತು ಉನ್ನತ ಭವಿಷ್ಯಕ್ಕೆ ಎನ್‌ಸಿಸಿ ಪೂರಕ:
ವಿದ್ಯಾರ್ಥಿಗಳನ್ನು ಅಭಿನಂದಿಸಿ ಮಾತನಾಡಿದ ಸಂಸ್ಥೆಯ ಕಾರ್ಯದರ್ಶಿಗಳಾದ ಅ.ಮು. ಲಕ್ಷ್ಮೀನಾರಾಯಣ ಅವರು, "ವಿದ್ಯಾರ್ಥಿ ಜೀವನದಲ್ಲಿ ಶಿಸ್ತು, ಸಮಯ ಪ್ರಜ್ಞೆ ಮತ್ತು ದೇಶಭಕ್ತಿಯನ್ನು ಮೈಗೂಡಿಸಿಕೊಳ್ಳಲು ಎನ್‌ಸಿಸಿ ಅತ್ಯಂತ ಪ್ರಮುಖ ಮಾಧ್ಯಮವಾಗಿದೆ.
ಇಲ್ಲಿ ಕಠಿಣ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ ರಕ್ಷಣೆ, ಆಡಳಿತ ಸೇರಿದಂತೆ ವಿವಿಧ ರಂಗಗಳಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಲು ಉತ್ತಮ ಅವಕಾಶಗಳು ಸಿಗಲಿವೆ.
ನಮ್ಮ ಗ್ರಾಮೀಣ ವಿದ್ಯಾ ಸಂಸ್ಥೆಯಲ್ಲಿ ಕೇವಲ ಪಠ್ಯ ಶಿಕ್ಷಣಕ್ಕೆ ಮಾತ್ರ ಸೀಮಿತವಾಗದೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ ಹಾಗೂ ಎನ್‌ಸಿಸಿಯಂತಹ ರಾಷ್ಟ್ರ ನಿರ್ಮಾಣದ ತರಬೇತಿಗಳಿಗೂ ಸದಾ ಉತ್ತೇಜನ ನೀಡಲಾಗುತ್ತದೆ," ಎಂದು ಹೆಮ್ಮೆಯಿಂದ ನುಡಿದರು.
ಈ ಸಂದರ್ಭದಲ್ಲಿ ಕೋಲಾರದ ಎನ್‌ಸಿಸಿ ಅಧಿಕಾರಿಗಳಾದ ರಾಜೇಂದ್ರ ರಾವ್, ಕಿರಣ್ ಕುಮಾರ್, ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ, ಸಂಸ್ಥೆಯ ನಿರ್ದೇಶಕರಾದ ವಿಜಯೇಂದ್ರ ಹಾಗೂ ಎನ್‌ಸಿಸಿ ಹಿರಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದು, ನೂತನ ಕೆಡೆಟ್‌ಗಳಿಗೆ ಮಾರ್ಗದರ್ಶನ ನೀಡಿದರು.
    user_Prashanth  Vibes
    Prashanth Vibes
    Video Creator ಕೋಲಾರ ಗೋಲ್ಡ್ ಫೀಲ್ಡ್, ಕೋಲಾರ, ಕರ್ನಾಟಕ•
    13 hrs ago
  • *ಶ್ರೀ ಚಾಮುಂಡೇಶ್ವರಿ ದೇವಿಯ ಜನ್ಮ ದಿನೋತ್ಸವ ಹಾಗೂ 32 ನೇ ವಾರ್ಷಿಕೋತ್ಸವ ಆಗಸ್ಟ್  3 ಮತ್ತು 4 ರಂದು ದೇವಾಲಯದ ಧರ್ಮಾಧಿಕಾರಿ ಚಂದ್ರು ರವರ ನೇತೃತ್ವದಲ್ಲಿ ಅದ್ದೂರಿಯಾಗಿ ನಡೆಯಲಿದೆ : ಸಮಾಜ ಸೇವಕ ಜಿ. ಸುನೀಲ್ ಕುಮಾರ್* ಕೋಲಾರ ತಾಲ್ಲೂಕು ನರಸಾಪುರ ಹೋಬಳಿಯ ಲಕ್ಷ್ಮೀಸಾಗರದಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ಆಗಸ್ಟ್ 3 ರ ಸೋಮವಾರ  ದಿಂದ 4 ರ ಮಂಗಳವಾರದ ರವರೆಗೆ ಶ್ರೀ ಚಾಮುಂಡೇಶ್ವರಿ ದೇವಿಯ ಜನ್ಮ ದಿನೋತ್ಸವ ಹಾಗೂ 32 ನೇ ವಾರ್ಷಿಕೋತ್ಸವ ದೇವಾಲಯದ ಧರ್ಮಾಧಿಕಾರಿ ಚಂದ್ರು ರವರ ನೇತೃತ್ವದಲ್ಲಿ ವಿಜೃಂಭಣೆಯಿಂದ ನಡೆಯಲಿದೆ ಎಂದು ಲಕ್ಷ್ಮೀಸಾಗರದ ಸಮಾಜ ಸೇವಕರು‌ ಹಾಗೂ ಕಾಂಗ್ರೆಸ್ ಮುಖಂಡರಾದ ಜಿ. ಸುನೀಲ್ ಕುಮಾರ್ ತಿಳಿಸಿದರು. ಅವರನ್ನು ಭೇಟಿ ಮಾಡಿದ ಮಾಧ್ಯಮದ ವರೊಂದಿಗೆ  ಮಾತನಾಡಿದ ಅವರು ಕಾರ್ಯಕ್ರಮದಲ್ಲಿ ಹಾಸನ ಜಿಲ್ಲೆಯ ಹಾರನಹಳ್ಳಿಯ ಕೋಡಿ ಮಠ ಮಹಾ ಸಂಸ್ಥಾನದ ಶ್ರೀ ಶ್ರೀ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಮಾಹಾ ಸ್ವಾಮಿಗಳು, ನಾಗಲಾಪುರ ಸಂಸ್ಥಾನ ಮಠದ ಶ್ರೀ ತೇಜೇಶಲಿಂಗ ಶಿವಾಚಾರ್ಯ ಸ್ವಾಮಿಗಳು ಮತ್ತು ಕತ್ತರಿಘಟ್ಟದ ಶ್ರೀ ಮೆಳಿಯಮ್ಮ ಆಧ್ಯಾತ್ಮಿಕ ಕೇಂದ್ರದ ಶ್ರೀ ಚಂದ್ರಶೇಖರ ಗುರೂಜಿಗಳು ಭಾಗವಹಿಸಿ ಪ್ರವಚನ ಹಾಗೂ ಆಶೀರ್ವಾದ ನೀಡುವರು ಎಂದು ತಿಳಿಸಿದರು. 4 ರ ಮಂಗಳವಾರ ದೇವಿಗೆ ಸುಪ್ರಭಾತ ಸೇವೆ,ಪಂಚಾಮೃತ ಅಭಿಷೇಕ,ವಿಷೇಶ ಹೂವಿನ ಅಲಂಕಾರ,ಗಣಪತಿ ಹೋಮ, ನವಗ್ರಹ ಹೋಮ,ಚಂಡಿಕಾ ಹೋಮ, ಪೂರ್ಣಾಹುತಿ ನಡೆಯಲಿದ್ದು ,11 ಗಂಟೆಗೆ ಪ್ರಾಕಾರೋತ್ಸವ,ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗದೊಂದಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ ಎಂದು ತಿಳಿಸಿದರು. ಈ ಸಂಧರ್ಭದಲ್ಲಿ ದೇವಾಲಯದ ಧರ್ಮಾಧಿಕಾರಿ ಚಂದ್ರು,ಡಾಬಾ ನಾರಾಯಣ ಸ್ವಾಮಿ, ಬಾರ್ ಬೈರಣ್ಣ,ಬಾರ್ ಲೋಕೇಶ್, ನಾಗರಾಜ್,ಗ್ರಾಮ ಪಂಚಾಯತಿ ಸದಸ್ಯರು ಗಳಾದ ಶಂಕರ್, ಸತೀಶ್, ಶಿಕ್ಷಕ ವೆಂಕಟೇಶ್,ಮಂಜು ಗಣಿ, ವಕೀಲರುಗಳಾದ ಸೋಮ ಶೇಖರ್, ರವಿ ಕುಮಾರ್ ಹಾಗೂ ಗ್ರಾಮಸ್ಥರ ಇದ್ದರು.
    2
    *ಶ್ರೀ ಚಾಮುಂಡೇಶ್ವರಿ ದೇವಿಯ ಜನ್ಮ ದಿನೋತ್ಸವ ಹಾಗೂ 32 ನೇ ವಾರ್ಷಿಕೋತ್ಸವ ಆಗಸ್ಟ್  3 ಮತ್ತು 4 ರಂದು ದೇವಾಲಯದ ಧರ್ಮಾಧಿಕಾರಿ ಚಂದ್ರು ರವರ ನೇತೃತ್ವದಲ್ಲಿ ಅದ್ದೂರಿಯಾಗಿ ನಡೆಯಲಿದೆ : ಸಮಾಜ ಸೇವಕ ಜಿ. ಸುನೀಲ್ ಕುಮಾರ್*
ಕೋಲಾರ ತಾಲ್ಲೂಕು ನರಸಾಪುರ ಹೋಬಳಿಯ ಲಕ್ಷ್ಮೀಸಾಗರದಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ಆಗಸ್ಟ್ 3 ರ ಸೋಮವಾರ  ದಿಂದ 4 ರ ಮಂಗಳವಾರದ ರವರೆಗೆ ಶ್ರೀ ಚಾಮುಂಡೇಶ್ವರಿ ದೇವಿಯ ಜನ್ಮ ದಿನೋತ್ಸವ ಹಾಗೂ 32 ನೇ ವಾರ್ಷಿಕೋತ್ಸವ ದೇವಾಲಯದ ಧರ್ಮಾಧಿಕಾರಿ ಚಂದ್ರು ರವರ ನೇತೃತ್ವದಲ್ಲಿ ವಿಜೃಂಭಣೆಯಿಂದ ನಡೆಯಲಿದೆ ಎಂದು ಲಕ್ಷ್ಮೀಸಾಗರದ ಸಮಾಜ ಸೇವಕರು‌ ಹಾಗೂ ಕಾಂಗ್ರೆಸ್ ಮುಖಂಡರಾದ ಜಿ. ಸುನೀಲ್ ಕುಮಾರ್ ತಿಳಿಸಿದರು.
ಅವರನ್ನು ಭೇಟಿ ಮಾಡಿದ ಮಾಧ್ಯಮದ ವರೊಂದಿಗೆ  ಮಾತನಾಡಿದ ಅವರು ಕಾರ್ಯಕ್ರಮದಲ್ಲಿ ಹಾಸನ ಜಿಲ್ಲೆಯ ಹಾರನಹಳ್ಳಿಯ ಕೋಡಿ ಮಠ ಮಹಾ ಸಂಸ್ಥಾನದ ಶ್ರೀ ಶ್ರೀ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಮಾಹಾ ಸ್ವಾಮಿಗಳು, ನಾಗಲಾಪುರ ಸಂಸ್ಥಾನ ಮಠದ ಶ್ರೀ ತೇಜೇಶಲಿಂಗ ಶಿವಾಚಾರ್ಯ ಸ್ವಾಮಿಗಳು ಮತ್ತು ಕತ್ತರಿಘಟ್ಟದ ಶ್ರೀ ಮೆಳಿಯಮ್ಮ ಆಧ್ಯಾತ್ಮಿಕ ಕೇಂದ್ರದ ಶ್ರೀ ಚಂದ್ರಶೇಖರ ಗುರೂಜಿಗಳು ಭಾಗವಹಿಸಿ ಪ್ರವಚನ ಹಾಗೂ ಆಶೀರ್ವಾದ ನೀಡುವರು ಎಂದು ತಿಳಿಸಿದರು.
4 ರ ಮಂಗಳವಾರ ದೇವಿಗೆ ಸುಪ್ರಭಾತ ಸೇವೆ,ಪಂಚಾಮೃತ ಅಭಿಷೇಕ,ವಿಷೇಶ ಹೂವಿನ ಅಲಂಕಾರ,ಗಣಪತಿ ಹೋಮ,
ನವಗ್ರಹ ಹೋಮ,ಚಂಡಿಕಾ ಹೋಮ,
ಪೂರ್ಣಾಹುತಿ ನಡೆಯಲಿದ್ದು ,11 ಗಂಟೆಗೆ ಪ್ರಾಕಾರೋತ್ಸವ,ಮಹಾಮಂಗಳಾರತಿ,
ತೀರ್ಥ ಪ್ರಸಾದ ವಿನಿಯೋಗದೊಂದಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ ಎಂದು ತಿಳಿಸಿದರು.
ಈ ಸಂಧರ್ಭದಲ್ಲಿ ದೇವಾಲಯದ ಧರ್ಮಾಧಿಕಾರಿ ಚಂದ್ರು,ಡಾಬಾ ನಾರಾಯಣ ಸ್ವಾಮಿ, ಬಾರ್ ಬೈರಣ್ಣ,ಬಾರ್ ಲೋಕೇಶ್,
ನಾಗರಾಜ್,ಗ್ರಾಮ ಪಂಚಾಯತಿ ಸದಸ್ಯರು ಗಳಾದ ಶಂಕರ್, ಸತೀಶ್, ಶಿಕ್ಷಕ ವೆಂಕಟೇಶ್,ಮಂಜು ಗಣಿ,
ವಕೀಲರುಗಳಾದ ಸೋಮ ಶೇಖರ್, ರವಿ ಕುಮಾರ್ ಹಾಗೂ ಗ್ರಾಮಸ್ಥರ ಇದ್ದರು.
    user_ಎಸ್.ಎನ್.ಪ್ರಕಾಶ್
    ಎಸ್.ಎನ್.ಪ್ರಕಾಶ್
    Grain Trader ಕೋಲಾರ, ಕೋಲಾರ, ಕರ್ನಾಟಕ•
    10 hrs ago
  • ಮುದುವಾಡಿ–ರೋಜರಪಲ್ಲಿ ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ. ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವ್ಯಕ್ತಿಗೆ ಟೊಮೆಟೊ ಸಾಗಿಸುತ್ತಿದ್ದ ಈಚರ್ ವಾಹನದಿಂದ ಡಿಕ್ಕಿ..
    1
    ಮುದುವಾಡಿ–ರೋಜರಪಲ್ಲಿ ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ.
ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವ್ಯಕ್ತಿಗೆ ಟೊಮೆಟೊ ಸಾಗಿಸುತ್ತಿದ್ದ ಈಚರ್ ವಾಹನದಿಂದ ಡಿಕ್ಕಿ..
    user_Arunkumar H M
    Arunkumar H M
    ಶ್ರೀನಿವಾಸಪುರ, ಕೋಲಾರ, ಕರ್ನಾಟಕ•
    13 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.