logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಭಾರತದಲ್ಲಿ ಆರ್ಥಿಕ ತೆ ಸ್ಥಿರತೆ, ಕೊಲ್ಲಿಯಲ್ಲಿ ಭಯಂಕರ ಯುದ್ಧದಲ್ಲಿಯೂ ರಶಿಯಾದ ಆಭಯ ಹಸ್ತ. ಮಾರ್ಚ್ 2026 ರ ಹೊತ್ತಿಗೆ, ಸಂಭಾವ್ಯ ಪೂರೈಕೆ ಆಘಾತಗಳು ಮತ್ತು ಮಧ್ಯಪ್ರಾಚ್ಯ ಅಡಚಣೆಗಳನ್ನು ನಿವಾರಿಸಲು ರಷ್ಯಾವು ಭಾರತೀಯ ನೀರಿನ ಬಳಿ ಸುಮಾರು 9.5 ಮಿಲಿಯನ್ ಬ್ಯಾರೆಲ್ ಕಚ್ಚಾ ತೈಲವನ್ನು ಟ್ಯಾಂಕರ್‌ಗಳಲ್ಲಿ ಸಾಗಿಸುತ್ತಿದೆ. ಕಾರ್ಯತಂತ್ರದ ಬದಲಾವಣೆಯ ಭಾಗವಾಗಿರುವ ಈ ಹಡಗುಗಳು ವಾರಗಳಲ್ಲಿ ತೈಲವನ್ನು ತಲುಪಿಸುವ ನಿರೀಕ್ಷೆಯಿದ್ದು, ಭಾರತದ ಆಮದು ಅಗತ್ಯಗಳಲ್ಲಿ 40% ಅನ್ನು ಪೂರೈಸುವ ಸಾಧ್ಯತೆಯಿದೆ. ಭಾರತಕ್ಕೆ ಒಂದು ತಿಂಗಳಿಗೆ ಒಂದು ಮಿಲಿಯನ್ ಉಪಭೋಗಕ್ಕೆ ಬೇಕು, ಆದರೆ ರಶಿಯಾ ಅಧ್ಯಕ್ಷ ಪುಟಿನ ಅಧಿಕೃತ Discount ದೊಂದಿಗೆ ಕಚ್ಛಾತೈಲ ಪೂರೈಕೆ ಆಗುತ್ತಿದೆ. 1990 ದಲ್ಲಿ ನಡೆದ ಕೊಲ್ಲಿಯಲ್ಲಿ ಇರಾಕ್ vs ಕೊವೈತ್ ಯುದ್ಧ ನೆಡೆದಾಗ 12₹ ಇದ್ದ ಪೆಟ್ರೋಲ್ ಬೆಲೆ ಒಮ್ಮೆಲೇ 25₹ ಏರಿಕೆ ಕಂಡಿತ್ತು,. ಭಾರತದಲ್ಲಿ ಪ್ರತಿಯೊಂದು ಪೆಟ್ರೋಲ್ ಬಂಕ್ ಮುಂದೆ ಉದ್ದದ Q ನಲ್ಲಿ ಭಾರತೀಯರು ನಿಂತಿದ್ದರು. ಆದರೆ ಈಗ ಇಂದು ಆ ಪರಿಸ್ಥಿತಿ ಇಲ್ಲ. ಈಗ ಭಯಂಕರ ಯುದ್ಧ ನಡೆದರೂ ಭಾರತದಲ್ಲಿ ಸ್ಥಿರತೆ ಇದೆ, ಸಮಾಧಾನ ಇದೆ, ಯುದ್ಧದಲ್ಲಿಯೂ ಭಾರತೀಯರು ಭಾರತಕ್ಕೆ ಮರಳುತ್ತಿದ್ದಾರೆ. ಭಾರತ ಹೀಗೆ ಮುಂದುವರೆಯಲಿ ಎಂದು ಹಾರೈಕೆ.

5 hrs ago
user_✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
Auto parts store ಹುಬ್ಬಳ್ಳಿ, ಧಾರವಾಡ, ಕರ್ನಾಟಕ•
5 hrs ago
5bf9ab76-fe81-4cae-b1c1-8b13727f34f4

ಭಾರತದಲ್ಲಿ ಆರ್ಥಿಕ ತೆ ಸ್ಥಿರತೆ, ಕೊಲ್ಲಿಯಲ್ಲಿ ಭಯಂಕರ ಯುದ್ಧದಲ್ಲಿಯೂ ರಶಿಯಾದ ಆಭಯ ಹಸ್ತ. ಮಾರ್ಚ್ 2026 ರ ಹೊತ್ತಿಗೆ, ಸಂಭಾವ್ಯ ಪೂರೈಕೆ ಆಘಾತಗಳು ಮತ್ತು ಮಧ್ಯಪ್ರಾಚ್ಯ ಅಡಚಣೆಗಳನ್ನು ನಿವಾರಿಸಲು ರಷ್ಯಾವು ಭಾರತೀಯ ನೀರಿನ ಬಳಿ ಸುಮಾರು 9.5 ಮಿಲಿಯನ್ ಬ್ಯಾರೆಲ್ ಕಚ್ಚಾ ತೈಲವನ್ನು ಟ್ಯಾಂಕರ್‌ಗಳಲ್ಲಿ ಸಾಗಿಸುತ್ತಿದೆ. ಕಾರ್ಯತಂತ್ರದ ಬದಲಾವಣೆಯ ಭಾಗವಾಗಿರುವ ಈ ಹಡಗುಗಳು ವಾರಗಳಲ್ಲಿ ತೈಲವನ್ನು ತಲುಪಿಸುವ ನಿರೀಕ್ಷೆಯಿದ್ದು, ಭಾರತದ ಆಮದು ಅಗತ್ಯಗಳಲ್ಲಿ 40% ಅನ್ನು ಪೂರೈಸುವ ಸಾಧ್ಯತೆಯಿದೆ. ಭಾರತಕ್ಕೆ ಒಂದು ತಿಂಗಳಿಗೆ ಒಂದು ಮಿಲಿಯನ್ ಉಪಭೋಗಕ್ಕೆ ಬೇಕು, ಆದರೆ ರಶಿಯಾ ಅಧ್ಯಕ್ಷ ಪುಟಿನ ಅಧಿಕೃತ Discount ದೊಂದಿಗೆ ಕಚ್ಛಾತೈಲ ಪೂರೈಕೆ ಆಗುತ್ತಿದೆ. 1990 ದಲ್ಲಿ ನಡೆದ ಕೊಲ್ಲಿಯಲ್ಲಿ ಇರಾಕ್ vs ಕೊವೈತ್ ಯುದ್ಧ ನೆಡೆದಾಗ 12₹ ಇದ್ದ ಪೆಟ್ರೋಲ್ ಬೆಲೆ ಒಮ್ಮೆಲೇ 25₹ ಏರಿಕೆ ಕಂಡಿತ್ತು,. ಭಾರತದಲ್ಲಿ ಪ್ರತಿಯೊಂದು ಪೆಟ್ರೋಲ್ ಬಂಕ್ ಮುಂದೆ ಉದ್ದದ Q ನಲ್ಲಿ ಭಾರತೀಯರು ನಿಂತಿದ್ದರು. ಆದರೆ ಈಗ ಇಂದು ಆ ಪರಿಸ್ಥಿತಿ ಇಲ್ಲ. ಈಗ ಭಯಂಕರ ಯುದ್ಧ ನಡೆದರೂ ಭಾರತದಲ್ಲಿ ಸ್ಥಿರತೆ ಇದೆ, ಸಮಾಧಾನ ಇದೆ, ಯುದ್ಧದಲ್ಲಿಯೂ ಭಾರತೀಯರು ಭಾರತಕ್ಕೆ ಮರಳುತ್ತಿದ್ದಾರೆ. ಭಾರತ ಹೀಗೆ ಮುಂದುವರೆಯಲಿ ಎಂದು ಹಾರೈಕೆ.

More news from ಕರ್ನಾಟಕ and nearby areas
  • ಕಸದ ಗುಡ್ಡಕ್ಕೆ ಬೆಂಕಿ ಹೊತ್ತಿಕೊಂಡು ಧಾರವಾಡ ನಗರದಲ್ಲಿ ವಿಷಕಾರಿ ಹೊಗೆ ಆವರಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜನರು ಕಸದ ಡಂಪಿಂಗ್ ಯಾರ್ಡ್ ಎದುರು ಜಮಾಯಿಸಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಕಸದ ಗಾಡಿಗಳನ್ನು ಕಸ ತಂದು ಸುರಿಯುವುದನ್ನು ತಡೆಯುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.‌ ಮಂಗಳವಾರ ಬೆಳಗ್ಗೆ ಧಾರವಾಡ ಹೊಸ ಯಲ್ಲಾಪೂರದ ಬಳಿಯ ಕಸದ ಡಂಪಿಂಗ್ ಯಾರ್ಡ್ ಎದುರು ಜಮಾಯಿಸಿದ ಜನರು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಕಸದ ಡಂಪಿಂಗ್ ಯಾರ್ಡ್ ನ್ನು ಬೇರೆ ಕಡೆಗೆ ಸ್ಥಳಾಂತರ ಮಾಡಬೇಕು ಎಂದು ಆಗ್ರಹಿಸಿದರು.
    1
    ಕಸದ ಗುಡ್ಡಕ್ಕೆ ಬೆಂಕಿ ಹೊತ್ತಿಕೊಂಡು ಧಾರವಾಡ ನಗರದಲ್ಲಿ ವಿಷಕಾರಿ ಹೊಗೆ  ಆವರಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜನರು ಕಸದ ಡಂಪಿಂಗ್ ಯಾರ್ಡ್ ಎದುರು ಜಮಾಯಿಸಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಕಸದ ಗಾಡಿಗಳನ್ನು ಕಸ ತಂದು ಸುರಿಯುವುದನ್ನು ತಡೆಯುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.‌ ಮಂಗಳವಾರ ಬೆಳಗ್ಗೆ ಧಾರವಾಡ ಹೊಸ ಯಲ್ಲಾಪೂರದ ಬಳಿಯ ಕಸದ ಡಂಪಿಂಗ್ ಯಾರ್ಡ್ ಎದುರು ಜಮಾಯಿಸಿದ ಜನರು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಕಸದ ಡಂಪಿಂಗ್ ಯಾರ್ಡ್ ನ್ನು ಬೇರೆ ಕಡೆಗೆ ಸ್ಥಳಾಂತರ ಮಾಡಬೇಕು ಎಂದು ಆಗ್ರಹಿಸಿದರು.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    8 hrs ago
  • ಕರ್ನಾಟಕ ರಾಜ್ಯ ವಕೀಲರ ಪರಿಷತ್ ಚುನಾವಣೆ ಗೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಹೊಸ ನೀರಲಗಿ ಗ್ರಾಮದ ವಕೀಲರಾದ ಸಿದ್ದನಗೌಡ ವೀರಭದ್ರ ಗೌಡ ಪಾಟೀಲ ಚುನಾವಣಾ ಕಣಕ್ಕೆ
    2
    ಕರ್ನಾಟಕ ರಾಜ್ಯ ವಕೀಲರ ಪರಿಷತ್ ಚುನಾವಣೆ ಗೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಹೊಸ ನೀರಲಗಿ ಗ್ರಾಮದ ವಕೀಲರಾದ ಸಿದ್ದನಗೌಡ ವೀರಭದ್ರ ಗೌಡ ಪಾಟೀಲ ಚುನಾವಣಾ ಕಣಕ್ಕೆ
    user_H M ಹರಕುಣಿ
    H M ಹರಕುಣಿ
    ಶಿಗ್ಗಾಂವ್, ಹಾವೇರಿ, ಕರ್ನಾಟಕ•
    7 hrs ago
  • ಬೆಳಗಾವಿಯ ವಡಗಾಂವದ ರಯತ್ ಗಲ್ಲಿಯ ಮಹಿಳೆಯರು ನೀರಿನ ಸಮಸ್ಯೆಯನ್ನು ಖಂಡಿಸಿ ಹಮ್ಮಿಕೊಂಡಿದ್ದ 'ಘಾಗರ್ ಮೋರ್ಚಾ'ದ (ಕೊಡಗಳ ಮೆರವಣಿಗೆ)
    1
    ಬೆಳಗಾವಿಯ ವಡಗಾಂವದ ರಯತ್ ಗಲ್ಲಿಯ ಮಹಿಳೆಯರು ನೀರಿನ ಸಮಸ್ಯೆಯನ್ನು ಖಂಡಿಸಿ ಹಮ್ಮಿಕೊಂಡಿದ್ದ 'ಘಾಗರ್ ಮೋರ್ಚಾ'ದ (ಕೊಡಗಳ ಮೆರವಣಿಗೆ)
    user_Udaysingh Patel
    Udaysingh Patel
    Content Creator (YouTuber) Belagavi, Karnataka•
    6 hrs ago
  • ಬಾಗಲಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರು ಹಾಗೂ ಜಗಜ್ಯೋತಿ ಬಸವೇಶ್ವರರ ಪುತ್ಥಳಿ ಪ್ರತಿಷ್ಠಾಪನೆಗೆ ತಲಾ ₹4 ಲಕ್ಷ ಅನುದಾನ ನೀಡಲಾಗಿದೆ ಎಂಬ ಲೆಟರ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆದರೆ ಪ್ರತಿಷ್ಠಾಪನೆಗೆ ಇನ್ನೂ ಸರ್ಕಾರದಿಂದ ಅನುಮತಿ ಇಲ್ಲ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ್ ಆರೋಪಿಸಿದ್ದಾರೆ. ಬೈಎಲೆಕ್ಷನ್ ಹಿನ್ನೆಲೆಯಲ್ಲಿ ರಾಜಕೀಯ ಡ್ರಾಮಾ ಮಾಡಬೇಡಿ, ಮೊದಲು ಅನುಮತಿ ನೀಡಿ ಎಂದು ಆಗ್ರಹಿಸಿದ್ದಾರೆ.
    1
    ಬಾಗಲಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರು ಹಾಗೂ ಜಗಜ್ಯೋತಿ ಬಸವೇಶ್ವರರ ಪುತ್ಥಳಿ ಪ್ರತಿಷ್ಠಾಪನೆಗೆ ತಲಾ ₹4 ಲಕ್ಷ ಅನುದಾನ ನೀಡಲಾಗಿದೆ ಎಂಬ ಲೆಟರ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆದರೆ ಪ್ರತಿಷ್ಠಾಪನೆಗೆ ಇನ್ನೂ ಸರ್ಕಾರದಿಂದ ಅನುಮತಿ ಇಲ್ಲ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ್ ಆರೋಪಿಸಿದ್ದಾರೆ. ಬೈಎಲೆಕ್ಷನ್ ಹಿನ್ನೆಲೆಯಲ್ಲಿ ರಾಜಕೀಯ ಡ್ರಾಮಾ ಮಾಡಬೇಡಿ, ಮೊದಲು ಅನುಮತಿ ನೀಡಿ ಎಂದು ಆಗ್ರಹಿಸಿದ್ದಾರೆ.
    user_PKBagalkot
    PKBagalkot
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    8 hrs ago
  • Post by @april14news
    1
    Post by @april14news
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    2 hrs ago
  • ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕು ಸಂಗನಾಳ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟದ ವಿರುದ್ಧ ಮಹಿಳೆಯರು ತೀವ್ರ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಗ್ರಾಮದಲ್ಲಿ ಹಲವಾರು ದಿನಗಳಿಂದ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿದೆ ಎಂದು ಆರೋಪಿಸಿರುವ ಗ್ರಾಮಸ್ಥರು, ವಿಶೇಷವಾಗಿ ಮಹಿಳೆಯರು, ಇದರಿಂದ ಯುವಕರು ಮತ್ತು ಕುಟುಂಬಗಳು ಹಾನಿಯಾಗುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಗ್ರಾಮದಲ್ಲಿನ ಇಬ್ಬರು ವ್ಯಕ್ತಿಗಳು ಮದ್ಯದ ನಿಷೆಯಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಘಟನೆ ನಡೆದಿದೆ. ಈ ದುರ್ಘಟನೆಯಲ್ಲಿ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದು, ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ಈ ಘಟನೆ ಹಿನ್ನೆಲೆಯಲ್ಲಿ ಬೇಸತ್ತ ಮಹಿಳೆಯರು ಸಂಗನಾಳ ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಸೇರಿ ಅಕ್ರಮ ಮದ್ಯ ಮಾರಾಟವನ್ನು ತಕ್ಷಣ ನಿಲ್ಲಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಮದ್ಯ ಮಾರಾಟದಿಂದ ಗ್ರಾಮದಲ್ಲಿ ಶಾಂತಿ ಭಂಗವಾಗುತ್ತಿದೆ ಮತ್ತು ಕುಟುಂಬಗಳು ಸಂಕಷ್ಟಕ್ಕೆ ಸಿಲುಕುತ್ತಿವೆ ಎಂದು ಮಹಿಳೆಯರು ಆರೋಪಿಸಿದರು. ಪ್ರತಿಭಟನೆ ವೇಳೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಕೂಡಲೇ ಕ್ರಮ ಕೈಗೊಂಡು ಅಕ್ರಮ ಮದ್ಯ ಮಾರಾಟವನ್ನು ನಿಲ್ಲಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
    1
    ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕು ಸಂಗನಾಳ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟದ ವಿರುದ್ಧ ಮಹಿಳೆಯರು ತೀವ್ರ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
ಗ್ರಾಮದಲ್ಲಿ ಹಲವಾರು ದಿನಗಳಿಂದ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿದೆ ಎಂದು ಆರೋಪಿಸಿರುವ ಗ್ರಾಮಸ್ಥರು, ವಿಶೇಷವಾಗಿ ಮಹಿಳೆಯರು, ಇದರಿಂದ ಯುವಕರು ಮತ್ತು ಕುಟುಂಬಗಳು ಹಾನಿಯಾಗುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗೆ ಗ್ರಾಮದಲ್ಲಿನ ಇಬ್ಬರು ವ್ಯಕ್ತಿಗಳು ಮದ್ಯದ ನಿಷೆಯಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು  ಘಟನೆ ನಡೆದಿದೆ. ಈ ದುರ್ಘಟನೆಯಲ್ಲಿ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದು, ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ.
ಈ ಘಟನೆ ಹಿನ್ನೆಲೆಯಲ್ಲಿ ಬೇಸತ್ತ ಮಹಿಳೆಯರು ಸಂಗನಾಳ ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಸೇರಿ ಅಕ್ರಮ ಮದ್ಯ ಮಾರಾಟವನ್ನು ತಕ್ಷಣ ನಿಲ್ಲಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು.
ಮದ್ಯ ಮಾರಾಟದಿಂದ ಗ್ರಾಮದಲ್ಲಿ ಶಾಂತಿ ಭಂಗವಾಗುತ್ತಿದೆ ಮತ್ತು ಕುಟುಂಬಗಳು ಸಂಕಷ್ಟಕ್ಕೆ ಸಿಲುಕುತ್ತಿವೆ ಎಂದು ಮಹಿಳೆಯರು ಆರೋಪಿಸಿದರು.
ಪ್ರತಿಭಟನೆ ವೇಳೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಕೂಡಲೇ ಕ್ರಮ ಕೈಗೊಂಡು ಅಕ್ರಮ ಮದ್ಯ ಮಾರಾಟವನ್ನು ನಿಲ್ಲಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
    user_Rahuldev singh
    Rahuldev singh
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    6 hrs ago
  • ಹೌದು ಹೋಳಿ ಹಬ್ಬದ ವೇಳೆ ನಡೆದ ಜಗಳ ಸ್ನೇಹಿತನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬಾಗಲಕೋಟ ಜಿಲ್ಲೆಯ ತೇರದಾಳ ಪಟ್ಟಣದಲ್ಲಿ ನಡೆದಿದೆ. ರಾಹುಲ್ ಬಾಹುಬಲಿ ಕೊಲೆಯಾದ ದುರ್ದೈವಿ, ಹೋಳಿ ಹಬ್ಬದಂದು ರಾಹುಲ ಹಾಗೂ ಆತನ ಸ್ನೇಹಿತನ ಕ್ಷುಲ್ಲಕ ಕಾರಣಕ್ಕೆ ಜಗಳವುಂಟಾಗಿತ್ತು. ಇದೇ ವಿಷಯವಾಗಿ ಮಾತನಾಡಲು ಸ್ನೇಹಿತರೆಲ್ಲ ದೇವಸ್ಥಾನ ಒಂದರ ಬಳಿ ಸೇರಿದ್ದ ವೇಳೆಯಲ್ಲಿ ಮಾತಿಗೆ ಮಾತು ಬೆಳೆದು ರಾಹುಲ್ ನನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ್ ಗೋಯಲ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.
    1
    ಹೌದು ಹೋಳಿ ಹಬ್ಬದ ವೇಳೆ ನಡೆದ ಜಗಳ ಸ್ನೇಹಿತನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬಾಗಲಕೋಟ ಜಿಲ್ಲೆಯ ತೇರದಾಳ ಪಟ್ಟಣದಲ್ಲಿ ನಡೆದಿದೆ. 
ರಾಹುಲ್ ಬಾಹುಬಲಿ ಕೊಲೆಯಾದ ದುರ್ದೈವಿ, ಹೋಳಿ ಹಬ್ಬದಂದು ರಾಹುಲ ಹಾಗೂ ಆತನ ಸ್ನೇಹಿತನ ಕ್ಷುಲ್ಲಕ ಕಾರಣಕ್ಕೆ ಜಗಳವುಂಟಾಗಿತ್ತು. ಇದೇ ವಿಷಯವಾಗಿ ಮಾತನಾಡಲು ಸ್ನೇಹಿತರೆಲ್ಲ ದೇವಸ್ಥಾನ ಒಂದರ ಬಳಿ ಸೇರಿದ್ದ ವೇಳೆಯಲ್ಲಿ ಮಾತಿಗೆ ಮಾತು ಬೆಳೆದು ರಾಹುಲ್ ನನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ್ ಗೋಯಲ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    10 hrs ago
  • ಜನವಿರೋಧಿ ಕರಾಳ ವಿದ್ಯುತ್ ತಿದ್ದುಪಡಿ ಮಸೂದೆ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಧಾರವಾಡ ಮಹಾನಗರ ಪಾಲಿಕೆ ಕಚೇರಿ ಎದುರು ಕರ್ನಾಟಕ ರಾಜ್ಯ ವಿದ್ಯುತ್ ಬಳಕೆದಾರರ ಸಂಘ ಹಾಗೂ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನ ವಿರೋಧಿ ನೀತಿ ಅನುಸರಿಸುತ್ತಿದೆ. ವಿದ್ಯುತ್ ದರ ಏರಿಕೆ ಮಾಡುವ ಮೂಲಕ ಜನರ ಜೀವನ ಜೊತೆ ಆಟವಾಡುತ್ತಿವೆ. ಕೂಡಲೇ ಸಂಸತ್ತಿನ ಅಧಿವೇಶನದಲ್ಲಿ ಮಂಡಿಸಲಾದ ಕರಾಳ ವಿದ್ಯುತ್ ತಿದ್ದುಪಡಿ ಮಸೂದೆ ವಾಪಸ್ ಪಡೆಯಬೇಕು ಹಾಗೂ ವಿದ್ಯುತ್ ಗ್ರಾಹಕರು, ರೈತರು ಮತ್ತು ಸಣ್ಣ ಪ್ರಮಾಣದ ಕೈಗಾರಿಕೆಗಳ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
    1
    ಜನವಿರೋಧಿ ಕರಾಳ ವಿದ್ಯುತ್ ತಿದ್ದುಪಡಿ ಮಸೂದೆ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಧಾರವಾಡ ಮಹಾನಗರ ಪಾಲಿಕೆ ಕಚೇರಿ ಎದುರು ಕರ್ನಾಟಕ ರಾಜ್ಯ ವಿದ್ಯುತ್ ಬಳಕೆದಾರರ ಸಂಘ ಹಾಗೂ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನ ವಿರೋಧಿ ನೀತಿ ಅನುಸರಿಸುತ್ತಿದೆ. ವಿದ್ಯುತ್ ದರ ಏರಿಕೆ ಮಾಡುವ ಮೂಲಕ ಜನರ ಜೀವನ ಜೊತೆ ಆಟವಾಡುತ್ತಿವೆ. ಕೂಡಲೇ ಸಂಸತ್ತಿನ ಅಧಿವೇಶನದಲ್ಲಿ ಮಂಡಿಸಲಾದ ಕರಾಳ ವಿದ್ಯುತ್ ತಿದ್ದುಪಡಿ ಮಸೂದೆ ವಾಪಸ್ ಪಡೆಯಬೇಕು ಹಾಗೂ ವಿದ್ಯುತ್ ಗ್ರಾಹಕರು, ರೈತರು ಮತ್ತು ಸಣ್ಣ ಪ್ರಮಾಣದ ಕೈಗಾರಿಕೆಗಳ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    8 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.