Shuru
Apke Nagar Ki App…
ಚಾಮರಾಜನಗರದಲ್ಲಿ ನೂತನ ಸಚಿವ ರಾದ ಪುಟ್ಟರಂಗಶೆಟ್ಟಿ ಅಭಿಮಾನಿಗಳ ಹರ್ಷ ಸತತ ನಾಲ್ಕು ಬಾರಿ ಶಾಸಕರಾದ ಶ್ರೀ ಪುಟ್ಟರಂಗಶೆಟ್ಟಿ ರವರಿಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಕ್ಯಾಬಿನೆಟ್ ನಲ್ಲಿ ನೂತನ ಸಚಿವ ರಾಗಿ ಆಯ್ಕೆ ಮಾಡಿದ್ದಕ್ಕೆ ಅವರ ಅಭಿಮಾನಿ ಬಳಗ ತುಂಬಾ ಸಂತೋಷ ವ್ಯಕ್ತಪಡಿಸಿದರು. ನೂತನ ಸಚಿವ ಮಾಡಿದ್ದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಮಲ್ಲಿಕಾರ್ಜುನ ಖರ್ಗೆ ರವರಿಗೆ ವಿಶೇಷ ಧನ್ಯವಾದ ತಿಳಿಸಿದರು. ಈ ಸಂದರ್ಭದಲ್ಲಿ ನಲ್ಲೂರು ಮಹದೇವಸ್ವಾಮಿ ಮತ್ತು ರಾಮಸಮುದ್ರ ನಾಗ್ ರವರು ಮತ್ತು ಅಕ್ಷಯ್ ಕುಮಾರ್ ಮತ್ತು ಚಂದಕವಾಡಿ ಸಿದ್ದಪ್ಪಾಜಿ ಸಹ ಭಾಗವಹಿಸಿದರು.
ಶಿವಕುಮಾರ ಬಿ
ಚಾಮರಾಜನಗರದಲ್ಲಿ ನೂತನ ಸಚಿವ ರಾದ ಪುಟ್ಟರಂಗಶೆಟ್ಟಿ ಅಭಿಮಾನಿಗಳ ಹರ್ಷ ಸತತ ನಾಲ್ಕು ಬಾರಿ ಶಾಸಕರಾದ ಶ್ರೀ ಪುಟ್ಟರಂಗಶೆಟ್ಟಿ ರವರಿಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಕ್ಯಾಬಿನೆಟ್ ನಲ್ಲಿ ನೂತನ ಸಚಿವ ರಾಗಿ ಆಯ್ಕೆ ಮಾಡಿದ್ದಕ್ಕೆ ಅವರ ಅಭಿಮಾನಿ ಬಳಗ ತುಂಬಾ ಸಂತೋಷ ವ್ಯಕ್ತಪಡಿಸಿದರು. ನೂತನ ಸಚಿವ ಮಾಡಿದ್ದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಮಲ್ಲಿಕಾರ್ಜುನ ಖರ್ಗೆ ರವರಿಗೆ ವಿಶೇಷ ಧನ್ಯವಾದ ತಿಳಿಸಿದರು. ಈ ಸಂದರ್ಭದಲ್ಲಿ ನಲ್ಲೂರು ಮಹದೇವಸ್ವಾಮಿ ಮತ್ತು ರಾಮಸಮುದ್ರ ನಾಗ್ ರವರು ಮತ್ತು ಅಕ್ಷಯ್ ಕುಮಾರ್ ಮತ್ತು ಚಂದಕವಾಡಿ ಸಿದ್ದಪ್ಪಾಜಿ ಸಹ ಭಾಗವಹಿಸಿದರು.
More news from ಕರ್ನಾಟಕ and nearby areas
- ಮಳವಳ್ಳಿ:ಆಗಸ್ಟ್.15 ರಂದು ಬೃಹತ್ ರಕ್ತದಾನ ಶಿಬಿರ-ಪ್ರಚಾರ ರಥಕ್ಕೆ ವಿದ್ಯುಕ್ತ ಚಾಲನೆ ಮಳವಳ್ಳಿ:ಆಗಸ್ಟ್.೧೫ ರಂದು ಬೃಹತ್ ರಕ್ತದಾನ ಶಿಬಿರ-ಪ್ರಚಾರ ರಥಕ್ಕೆ ವಿದ್ಯುಕ್ತ ಚಾಲನೆ • ರಕ್ತದಾನ ಮಹಾದಾನ-ರಕ್ತದಾನ ಮಾಡೋಣ ಜೀವ ಉಳಿಸೋಣ-ಸರ್ಕಾರಿ ವಕೀಲ ಎಂ.ಎಸ್.ಶ್ರೀಕAಠಸ್ವಾಮಿ ಕರೆ ಮಳವಳ್ಳಿಯಲ್ಲಿ ಆಗಸ್ಟ್ ೧೫ ರಂದು ಗಡಿ ಕಾಯುವ ಯೋಧರ ಹಾಗೂ ಅನ್ನ ನೀಡುವ ರೈತರ ಸ್ಮರಣಾರ್ಥ ಯುವಕ ಮಿತ್ರರ ತಂಡ ಹಮ್ಮಿಕೊಂಡಿರುವ ಬೃಹತ್ ರಕ್ತದಾನ ಶಿಬಿರದ ಪ್ರಚಾರ ರಥಕ್ಕೆ ಮಂಗಳವಾರ ಚಾಲನೆ ನೀಡಲಾಯಿತು. ಪಟ್ಟಣದ ಇತಿಹಾಸ ಪ್ರಸಿದ್ದ ಶ್ರೀ ಗಂಗಾಧರೇಶ್ವರಸ್ವಾಮಿ ದೇವಸ್ಥಾನದ ಅವರಣದಲ್ಲಿ ಅಯೋಜಿಸಿದ್ದ ಕಾರ್ಯಕ್ರಮದಲ್ಲಿ ತಾಲೂಕಿನ ಪ್ರತಿ ಹಳ್ಳಿ ಹಳ್ಳಿಯಲ್ಲೂ ಸಂಚಾರ ನಡೆಸಿ ರಕ್ತದಾನದ ಬಗ್ಗೆ ಜಾಗೃತಿ ಮೂಡಿಸಲು ವಿಶೇಷವಾಗಿ ಸಿದ್ದಗೊಳಿಸಿರುವ ಪ್ರಚಾರ ರಥಕ್ಕೆ ವಿಶೇಷ ಪೂಜೆ ಸಲ್ಲಿಸಿ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ರೈತ ಮುಖಂಡರು,ಮಳವಳ್ಳಿ ಯುವಕ ತಂಡದ ಸ್ವಯಂ ಸೇವಕರು ಬಾವುಟ ತೋರಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅಪರ ಸರ್ಕಾರಿ ವಕೀಲ ಎಂ.ಎಸ್.ಶ್ರೀಕAಠಸ್ವಾಮಿ ಮಾತನಾಡಿ, ಇದೊಂದು ಮಾನವೀಯತೆಯ ನೆಲೆಯಲ್ಲಿ ನಡೆಯುತ್ತಿರುವ ಬೃಹತ್ ರಕ್ತದಾನ ಶಿಬಿರವಾಗಿದೆ.ರಕ್ತದಾನ ಮಾಡುವುದರಿಂದ ಇನ್ನೊಂದು ಜೀವ ಉಳಿಸಿದ ಪುಣ್ಯ ರಕ್ತದಾನಿಗೆ ಸಿಗಲಿದೆ,ರಕ್ತದಾನದಿಂದ ಅವರ ಅರೋಗ್ಯ ಉತ್ತಮವಾಗಲಿದೆ,ಜನರು ಯಾವುದೆ ಅತಂಕ ವಿಲ್ಲದೆ ನಿರ್ಭಿತಿಯಿಂದ ರಕ್ತದಾನ ಮಾಡುವ ಮೂಲಕ ಆ.೧೫ ರ ೨೬ ಗಮಟೆಗಳ ನಿರಂತರ ರಕ್ತದಾನ ಶಿಬಿರವನ್ನು ಯಶಸ್ವಿಗೊಳಿಸುವಂತೆ ಹಾಗೂ ೨೦೨೬ ಕ್ಕೂ ಹೆಚ್ಚು ಜನರು ದಾಖಲೆ ರಕ್ತದಾನ ಮಾಡುವ ಮೂಲಕ ಐತಿಹಾಸಿಕ ದಾಖಲೆ ನಿರ್ಮಾಣಕ್ಕೆ ಎಲ್ಲರೂ ಕಂಕಣಬದ್ದರಾಗೋಣವೆAದರು. ಈ ಸಮದರ್ಭದಲ್ಲಿ ಮಳವಳ್ಳಿ ತಂಡದ ನೂರಾರು ಸ್ವಯಂ ಸೇವಕರು,ರೈತರು,ಸಮಾಜ ಸೇವಕರು,ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಬಾಗವಹಿಸಿದ್ದರು.1
- ಆಗಸ್ಟ್ 15 ರಂದು ನಡೆಯಲಿರುವ ಬೃಹತ್ ರಕ್ತದಾನ ಶಿಬಿರ ಹಿನ್ನಲೆ, ಮಳವಳ್ಳಿ ಪಟ್ಟಣದಲ್ಲಿ ಶಿಬಿರದ ಪ್ರಚಾರ ರಥಕ್ಕೆ ಚಾಲನೆ ಮಳವಳ್ಳಿ : ಬರುವ ಆಗಸ್ಟ್ 15 ರಂದು ಪಟ್ಟಣದಲ್ಲಿ ಟೀಮ್ ಮಳವಳ್ಳಿ ಯುವಕ ಮಿತ್ರರ ಬಳಗದ ವತಿಯಿಂದ ಏರ್ಪಡಿಸಿ ರುವ ಐತಿಹಾಸಿಕ ಬೃಹತ್ ರಕ್ತದಾನ ಶಿಬಿರದ ಪ್ರಚಾರ ರಥಕ್ಕೆ ಚಾಲನೆ ನೀಡಲಾಯಿತು. ಮಂಗಳವಾರ ಬೆಳಿಗ್ಗೆ 11.30 ರ ಸಮಯದಲ್ಲಿ ಮಳವಳ್ಳಿ ಪಟ್ಟಣದ ಕೋಟೆ ಶ್ರೀ ಗಂಗಾಧರೇಶ್ವರಸ್ವಾಮಿ ದೇವಾಲಯದ ಬಳಿ ಪ್ರಚಾರ ರಥಕ್ಕೆ ಪೂಜೆ ಸಲ್ಲಿಸಿದ ನಂತರ ಅನ್ನದಾತ ರೈತರಾದ ಡಾ ಕಪನೀಗೌಡ, ಚಿಕ್ಕಣ್ಣ ಶಿವಕುಮಾರ್ ನಾಗರಾಜು, ಮಹೇಶ್ ಹಾಗೂ ನೀವೃತ್ತ ಸೈನಿಕರಾದ ಸುರೇಶ್, ಪ್ರಕಾಶ್ ಮಾದೇಶ, ಬಿಎಸ್ ಎಫ್ ನ ಕೇಶವಮೂರ್ತಿ, ಅವರುಗಳು ಹಸಿರು ನಿಶಾನೆ ತೋರಿಸುವುದ ರೊಂದಿಗೆ ಚಾಲನೆ ನೀಡಿದರು. ಟೀಮ್ ಮಳವಳ್ಳಿ ಬಳಗದ ಪ್ರಮುಖರಾದ ಪೊಲೀಸ್ ಪ್ರಭು, ಶಿವಪ್ರಸಾದ್ ಹರ್ಷಿತ್ ಅಖಿಲ್, ಕಮಲ್ ಷರೀಫ್ ನಗು ಫೌಂಡೇಷನ್ ಡಾ. ಅರುಣ್ ಕುಮಾರ್ , ವಕೀಲ ರಾದ ಶ್ರೀಕಂಠಸ್ವಾಮಿ ಮತ್ತಿತರ ರು ಈ ವೇಳೆ ಹಾಜರಿದ್ದರು. ಸದರಿ ಪ್ರಚಾರ ವಾಹನ ತಾಲ್ಲೂಕಿನ ಎಲ್ಲಾ 200ಕ್ಕೂ ಗ್ರಾಮಗಳಲ್ಲಿ ಸಂಚರಿಸಿ ಪ್ರಚಾರ ನಡೆಸಲಿದ್ದು ಈ ವಾಹನ ತಮ್ಮ ಗ್ರಾಮಗಳಿಗೆ ಬಂದಾಗ ಗ್ರಾಮದ ಮುಖಂಡರು ಯುವಕರು ಜೊತೆಯಾಗಿ ಪ್ರಚಾರ ನಡೆಸುವುದರ ಜೊತೆಗೆ ಆಗಸ್ಟ್ 15 ರ ರಕ್ತದಾನ ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂ ಡು ರಕ್ತದಾನ ಮಾಡುವ ಮೂಲಕ ಶಿಬಿರವನ್ನು ಯಶಸ್ವಿ ಗೊಳಿಸಬೇಕು ಎಂದು ಟೀಮ್ ಮಳವಳ್ಳಿ ಸದಸ್ಯರು ಕೋರಿದ್ದಾರೆ.1
- ವಿದ್ಯಾಗಣಪತಿ ದೇವಾಲಯದಲ್ಲಿ ಚಾಮುಂಡೇಶ್ವರಿ ವರ್ಧಂತಿ, ಚಂಢಿಕಾ ಹೋಮ ಅಷ್ಟೋತ್ತರ ಪಾರಾಯಣ ಮಂಡ್ಯ ಆಷಾಢ ಮಾಸದ ಬಹುಳ ಷಷ್ಠಿ ದಿನವಾದ ಇಂದು ಚಾಮುಂಡೇಶ್ವರಿ ವರ್ದಂತಿ ಪ್ರಯುಕ್ತ ಮಂಡ್ಯದ ವಿದ್ಯಾನಗರದ ವಿದ್ಯಾಗಣಪತಿ ದೇವಸ್ಥಾನದಲ್ಲಿ ಮಾತ ಸೇವಾ ಟ್ರಸ್ಟ್ ನಿಂದ ಇಂದು ಚಂಡಿಕಾಯಾಗ,ಅಷ್ಟೋತ್ತರ ಪಾರಾಯಣ ಜರುಗಿತು. ಕಾರ್ಯಕ್ರಮದಲ್ಲಿ ಮಾತಾ ಟ್ರಸ್ಟ್ ನ ಪದಾದಿಕಾರಿ ಗಳಾದಪ್ರತಿಮಾರಮೇಶ್,ಮಾಲಾನಾಗೇಶ್,ಭಾರತೀಅಡಿಗ ಮತ್ತು ಟ್ರಸ್ಟಿಗಳು ಬಾಗವಹಿಸಿದ್ದರು. ದೇವಿಕೃಪೆಗೆಪಾತ್ರರಾಗಲು ಬಂದ ಭಕ್ತಾಧಿಗಳಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.1
- ಲಿಂಕ್ ಕೆನಾಲ್ ಕಾಮಗಾರಿ ಬಿಡುವ ಪ್ರಶ್ನೆಯೇ ಇಲ್ಲ ಮಾಡಿಯೇ ತೀರುತ್ತೇವೆ ನೂತನ ಸಚಿವ ಹೆಚ್ ಸಿ ಬಾಲಕೃಷ್ಣ ಕುಣಿಗಲ್ ತಾಲೂಕಿನ ಹುತ್ರಿದುರ್ಗ ಹೋಬಳಿಯ ಜೋಡಿ ಹೊಸಳ್ಳಿ ಗ್ರಾಮದ ಮಹಾಲಕ್ಷ್ಮಿ ದೇವಾಲಯಕ್ಕೆ ಭೇಟಿ ನೀಡಿದ ನೂತನ ಸಚಿವರಾದ ಹೆಚ್ ಸಿ ಬಾಲಕೃಷ್ಣ , ಶಾಸಕ ಡಾಕ್ಟರ್ ಎಚ್ ಡಿ ರಂಗನಾಥ್, ಯಾವುದೆ ಖಾತೆ ಕೊಟ್ಟರು ನಿಭಾಯಿಸುವೆ ಎಂದು ನೂತನ ಸಚಿವ ಹೆಚ್.ಸಿ ಬಾಲಕೃಷ್ಣ ತಿಳಿಸಿದರು. ಲಿಂಕ್ ಕೆನಾಲ್ ಯೋಜನೆಯ ಕಾಮಗಾರಿಯನ್ನು ಯಾವುದೇ ಕಾರಣಕ್ಕೂ ಬಿಡುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು.1
- very important message city next News 24 7 WhatsApp Account Hack very important message city next News 24 7 WhatsApp Account Hack1
- *ವಿಬಿ-ಜಿ ರಾಮ್ ಜಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಅನುಷ್ಠಾನ ಇಲಾಖೆಗಳೊಂದಿಗೆ ಸಮನ್ವಯ ಸಭೆ* ಮಂಡ್ಯ, ಆಗಸ್ಟ್ 3: ಪ್ರಸಕ್ತ ಸಾಲಿನಲ್ಲಿ ವಿಕಸಿತ ಭಾರತ್ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಆಜೀವಿಕಾ ಮಿಷನ್ (ಗ್ರಾಮೀಣ) [VB-G RAM G] ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಎಲ್ಲಾ ಅನುಷ್ಠಾನ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು CEO ನಂದಿನಿ ಅಧಿಕಾರಿಗಳಿಗೆ ಸೂಚಿಸಿದರು. ಸೋಮವಾರ ಜಿಲ್ಲಾ ಪಂಚಾಯತ್ನ ಕೆಸ್ವಾನ್ ಸಭಾಂಗಣದಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಕ್ರಿಯಾ ಯೋಜನೆ ಸಿದ್ಧಪಡಿಸುವ ಕುರಿತು ನಡೆದ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಕೃಷಿ, ಅರಣ್ಯ ಇಲಾಖೆ ಸೇರಿದಂತೆ ಎಲ್ಲಾ ಅನುಷ್ಠಾನ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ವಿಶೇಷವಾಗಿ ಜಲ ಸಂರಕ್ಷಣೆ (Water Conservation) ಹಾಗೂ ಮಣ್ಣಿನ ತೇವಾಂಶ ಸಂರಕ್ಷಣೆ (Soil Moisture Conservation) ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಿ, ರೈತರಿಗೆ ದೀರ್ಘಾವಧಿಯಲ್ಲಿ ಅನುಕೂಲವಾಗುವ ಶಾಶ್ವತ ಆಸ್ತಿಗಳ ನಿರ್ಮಾಣಕ್ಕೆ ಒತ್ತು ನೀಡಬೇಕು ಎಂದು ಅವರು ತಿಳಿಸಿದರು. ಇಲಾಖಾವಾರು ಕ್ರಿಯಾ ಯೋಜನೆ ಸಿದ್ಧಪಡಿಸಲು ಸೂಚನೆ: ಎಲ್ಲಾ ಇಲಾಖೆಗಳ ಅಧಿಕಾರಿಗಳು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಇಲಾಖಾವಾರು ಹಾಗೂ ಗ್ರಾಮ ಪಂಚಾಯಿತಿವಾರು ಕ್ರಿಯಾ ಯೋಜನೆಗಳನ್ನು ಸಿದ್ಧಪಡಿಸಬೇಕು. ಹಿಂದಿನ ಮಾದರಿ ಅಂದಾಜುಪಟ್ಟಿಗಳ ಆಧಾರದ ಮೇಲೆ ಎಸ್ಟಿಮೇಟ್ ತಯಾರಿಸಿ, ಜಿಲ್ಲಾ ಡಿಪಿಸಿ (District Planning Cell) ಲಾಗಿನ್ ಮೂಲಕ ಅನುಮೋದನೆ ಪಡೆದು, ನಂತರ ಹೊಸ ವಿಬಿ-ಜಿ ರಾಮ್ ಜಿ ಸಾಫ್ಟ್ವೇರ್ನಲ್ಲಿ ಅಪ್ಲೋಡ್ ಮಾಡಿ ಕಾಮಗಾರಿಗಳನ್ನು ತ್ವರಿತವಾಗಿ ಆರಂಭಿಸುವಂತೆ ಸೂಚಿಸಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ (ಅಭಿವೃದ್ಧಿ) ಲಕ್ಷ್ಮಿ ಪಿ., ಜಿಲ್ಲಾ ಮಟ್ಟದ ಇಲಾಖಾಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು, ವಿವಿಧ ಇಲಾಖೆಗಳ ಸಹಾಯಕ ನಿರ್ದೇಶಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.1
- ಟೈರ್ಗೆ ಬೆಂಕಿ ಹಚ್ಚಲು ಯತ್ನ: ಪ್ರತಿಭಟನಾಕಾರರನ್ನು ವಶಕ್ಕೆ ಪಡೆದ ಪೊಲೀಸರು. ತನ್ವೀರ್ ಸೇಠ್ಗೆ ಸಚಿವ ಸ್ಥಾನ ತಪ್ಪಿದ್ದಕ್ಕೆ ಭುಗಿಲೆದ್ದ ಆಕ್ರೋಶ: ಮೈಸೂರು-ಬೆಂಗಳೂರು ಹೆದ್ದಾರಿ ತಡೆದು ಕಾರ್ಯಕರ್ತರ ಪ್ರತಿಭಟನೆ! ಸಚಿವ ಸ್ಥಾನ ಸಿಗದಿದ್ದಕ್ಕೆ ಕಣ್ಣೀರು-ಆಕ್ರೋಶ: ರಸ್ತೆಯಲ್ಲೇ ಮಲಗಿ ತನ್ವೀರ್ ಸೇಠ್ ಬೆಂಬಲಿಗರ ಹೈಡ್ರಾಮಾ! ಮೈಸೂರಿನಲ್ಲಿ ತನ್ವೀರ್ ಸೇಠ್ ಅಭಿಮಾನಿಗಳ ಭಾರಿ ಪ್ರತಿಭಟನೆ: ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ತೂರಾಟ!1