ಮನೆ ಕಳ್ಳತನ ಮಾಡಿದ್ದ ಆರೋಪಿ ಬಂಧನ; ₹1,90,000 ಜಪ್ತಿ , ಹೊಸ ಪೊಲೀಸರ ಕಾರ್ಯಕ್ಕೆ ಮೇಲಾಧಿಕಾರಿಗಳ ಮೆಚ್ಚುಗೆ ಮನೆ ಕಳ್ಳತನ ಮಾಡಿದ್ದ ಆರೋಪಿ ಬಂಧನ; ₹1,90,000 ಜಪ್ತಿ ಕೂಡ್ಲಿಗಿ ಮನೆ ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕಾನಹೊಸಹಳ್ಳಿಯ ಪೊಲೀಸರು ಯಶಸ್ವಿಯಾಗಿದರೆ. ನಜೀರ್ ಶಫಿ ಬಂಧಿತ ಆರೋಪಿ, ಕಾನಹೊಸಹಳ್ಳಿ ಪೊಲೀಸ್ ಠಾಣ ವ್ಯಾಪ್ತಿಯ ಮಂಗಾಪುರ ಗ್ರಾಮದಲ್ಲಿ ಜನವರಿ ಹಾಗು ಡಿಸೆಂಬರ್ ತಿಂಗಳಲ್ಲಿ ಎರಡು ಪ್ರತ್ಯಕ ಮನೆಗಳ್ಳತಾನವಾದ ಕುರಿತು ಪ್ರಕರಣ ದಾಕಲಾಗಿದ್ದವು, ಪ್ರಕರಣದ ಜಾಡು ಹಿಡಿದ ಕಾನಾಹೊಸಹಳ್ಳಿ ಪೊಲೀಸರು ಆರೋಪಿಯನ್ನು ಬಂಧಿಸಿ ₹1,90000 ಹಣವನ್ನು ವಶಕ್ಕೆ ಪಡೆದಿದ್ದಾರೆ. ಮಂಗಪುರದ ಬಸವರಾಜ ಎಂಬುವವರ ಮನೆಯಲ್ಲಿ ಬೀರುವಿನಲ್ಲಿದ್ದ 145000 ಹಾಗೂ ಗುರುಬಸವರಾಜ್ ಎಂಬುವವರ ಮನೆಯಲ್ಲಿ ₹55000 ಹಣವನ್ನು ಯಾರು ಇಲ್ಲದ ವೇಳೆ ಕಳ್ಳತನ ಮಾಡಿರುವ ಬಗ್ಗೆ ಪ್ರಕರಣ ದಾಕಲಾಗಿತ್ತು. ಎಸ್ಪಿ ಜಾಹ್ನವಿ ಎಸ್, ಎಎಸ್ಪಿ ಮಂಜುನಾಥ, ಡಿವೈಸ್ಪಿ ಮಲ್ಲೇಶ್ ದೊಡ್ಡಮನಿ, ಸಿಪಿಐ ಡಿ ದುರುಗಪ್ಪ ಮಾರ್ಗದರ್ಶನದಲ್ಲಿ ಪಿಎಸ್ಐ ಸಿದ್ರಾಮ್ ಬಿದರಾಣಿ ನೇತೃತ್ವದಲ್ಲಿ ಸಿಬಂದ್ದಿ ಕೃಷ್ಣಪ್ಪ, ಸುರೇಶ್, ಕೊಟ್ರೇಶ ಅಂಗಡಿ, ಸಿದ್ದಲಿಂಗಪ್ಪ, ವಿನಾಯಕ್, ಸಂದೀಪ್, ರವಿಚಂದ್ರ ಗೌಡ, ಕೃಷ್ಣ ನಾಯಕ್ ಒಳಗೊಂಡ ತಂಡ ಕಾರ್ಯಾಚರಣೆ ನಡೆಸಿದೆ. ಕಾರ್ಯಾಚರಣೆಯಲ್ಲಿ ಭಾಗಿಯಾದ ಅಧಿಕಾರಿ ಹಾಗೂ ಸಿಬಂದ್ದಿ ವರ್ಗಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್ ಜಾಹ್ನವಿ ಅಭಿನಂದಿಸಿದ್ದಾರೆ.
ಮನೆ ಕಳ್ಳತನ ಮಾಡಿದ್ದ ಆರೋಪಿ ಬಂಧನ; ₹1,90,000 ಜಪ್ತಿ , ಹೊಸ ಪೊಲೀಸರ ಕಾರ್ಯಕ್ಕೆ ಮೇಲಾಧಿಕಾರಿಗಳ ಮೆಚ್ಚುಗೆ ಮನೆ ಕಳ್ಳತನ ಮಾಡಿದ್ದ ಆರೋಪಿ ಬಂಧನ; ₹1,90,000 ಜಪ್ತಿ ಕೂಡ್ಲಿಗಿ ಮನೆ ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕಾನಹೊಸಹಳ್ಳಿಯ ಪೊಲೀಸರು ಯಶಸ್ವಿಯಾಗಿದರೆ. ನಜೀರ್ ಶಫಿ ಬಂಧಿತ ಆರೋಪಿ, ಕಾನಹೊಸಹಳ್ಳಿ ಪೊಲೀಸ್ ಠಾಣ ವ್ಯಾಪ್ತಿಯ ಮಂಗಾಪುರ ಗ್ರಾಮದಲ್ಲಿ ಜನವರಿ ಹಾಗು ಡಿಸೆಂಬರ್ ತಿಂಗಳಲ್ಲಿ ಎರಡು ಪ್ರತ್ಯಕ ಮನೆಗಳ್ಳತಾನವಾದ ಕುರಿತು ಪ್ರಕರಣ ದಾಕಲಾಗಿದ್ದವು, ಪ್ರಕರಣದ ಜಾಡು ಹಿಡಿದ ಕಾನಾಹೊಸಹಳ್ಳಿ ಪೊಲೀಸರು ಆರೋಪಿಯನ್ನು ಬಂಧಿಸಿ ₹1,90000 ಹಣವನ್ನು ವಶಕ್ಕೆ ಪಡೆದಿದ್ದಾರೆ. ಮಂಗಪುರದ ಬಸವರಾಜ ಎಂಬುವವರ ಮನೆಯಲ್ಲಿ ಬೀರುವಿನಲ್ಲಿದ್ದ 145000 ಹಾಗೂ ಗುರುಬಸವರಾಜ್ ಎಂಬುವವರ ಮನೆಯಲ್ಲಿ ₹55000 ಹಣವನ್ನು ಯಾರು ಇಲ್ಲದ ವೇಳೆ ಕಳ್ಳತನ ಮಾಡಿರುವ ಬಗ್ಗೆ ಪ್ರಕರಣ ದಾಕಲಾಗಿತ್ತು. ಎಸ್ಪಿ ಜಾಹ್ನವಿ ಎಸ್, ಎಎಸ್ಪಿ ಮಂಜುನಾಥ, ಡಿವೈಸ್ಪಿ ಮಲ್ಲೇಶ್ ದೊಡ್ಡಮನಿ, ಸಿಪಿಐ ಡಿ ದುರುಗಪ್ಪ ಮಾರ್ಗದರ್ಶನದಲ್ಲಿ ಪಿಎಸ್ಐ ಸಿದ್ರಾಮ್ ಬಿದರಾಣಿ ನೇತೃತ್ವದಲ್ಲಿ ಸಿಬಂದ್ದಿ ಕೃಷ್ಣಪ್ಪ, ಸುರೇಶ್, ಕೊಟ್ರೇಶ ಅಂಗಡಿ, ಸಿದ್ದಲಿಂಗಪ್ಪ, ವಿನಾಯಕ್, ಸಂದೀಪ್, ರವಿಚಂದ್ರ ಗೌಡ, ಕೃಷ್ಣ ನಾಯಕ್ ಒಳಗೊಂಡ ತಂಡ ಕಾರ್ಯಾಚರಣೆ ನಡೆಸಿದೆ. ಕಾರ್ಯಾಚರಣೆಯಲ್ಲಿ ಭಾಗಿಯಾದ ಅಧಿಕಾರಿ ಹಾಗೂ ಸಿಬಂದ್ದಿ ವರ್ಗಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್ ಜಾಹ್ನವಿ ಅಭಿನಂದಿಸಿದ್ದಾರೆ.
- ಮನೆ ಕಳ್ಳತನ ಮಾಡಿದ್ದ ಆರೋಪಿ ಬಂಧನ; ₹1,90,000 ಜಪ್ತಿ ಕೂಡ್ಲಿಗಿ ಮನೆ ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕಾನಹೊಸಹಳ್ಳಿಯ ಪೊಲೀಸರು ಯಶಸ್ವಿಯಾಗಿದರೆ. ನಜೀರ್ ಶಫಿ ಬಂಧಿತ ಆರೋಪಿ, ಕಾನಹೊಸಹಳ್ಳಿ ಪೊಲೀಸ್ ಠಾಣ ವ್ಯಾಪ್ತಿಯ ಮಂಗಾಪುರ ಗ್ರಾಮದಲ್ಲಿ ಜನವರಿ ಹಾಗು ಡಿಸೆಂಬರ್ ತಿಂಗಳಲ್ಲಿ ಎರಡು ಪ್ರತ್ಯಕ ಮನೆಗಳ್ಳತಾನವಾದ ಕುರಿತು ಪ್ರಕರಣ ದಾಕಲಾಗಿದ್ದವು, ಪ್ರಕರಣದ ಜಾಡು ಹಿಡಿದ ಕಾನಾಹೊಸಹಳ್ಳಿ ಪೊಲೀಸರು ಆರೋಪಿಯನ್ನು ಬಂಧಿಸಿ ₹1,90000 ಹಣವನ್ನು ವಶಕ್ಕೆ ಪಡೆದಿದ್ದಾರೆ. ಮಂಗಪುರದ ಬಸವರಾಜ ಎಂಬುವವರ ಮನೆಯಲ್ಲಿ ಬೀರುವಿನಲ್ಲಿದ್ದ 145000 ಹಾಗೂ ಗುರುಬಸವರಾಜ್ ಎಂಬುವವರ ಮನೆಯಲ್ಲಿ ₹55000 ಹಣವನ್ನು ಯಾರು ಇಲ್ಲದ ವೇಳೆ ಕಳ್ಳತನ ಮಾಡಿರುವ ಬಗ್ಗೆ ಪ್ರಕರಣ ದಾಕಲಾಗಿತ್ತು. ಎಸ್ಪಿ ಜಾಹ್ನವಿ ಎಸ್, ಎಎಸ್ಪಿ ಮಂಜುನಾಥ, ಡಿವೈಸ್ಪಿ ಮಲ್ಲೇಶ್ ದೊಡ್ಡಮನಿ, ಸಿಪಿಐ ಡಿ ದುರುಗಪ್ಪ ಮಾರ್ಗದರ್ಶನದಲ್ಲಿ ಪಿಎಸ್ಐ ಸಿದ್ರಾಮ್ ಬಿದರಾಣಿ ನೇತೃತ್ವದಲ್ಲಿ ಸಿಬಂದ್ದಿ ಕೃಷ್ಣಪ್ಪ, ಸುರೇಶ್, ಕೊಟ್ರೇಶ ಅಂಗಡಿ, ಸಿದ್ದಲಿಂಗಪ್ಪ, ವಿನಾಯಕ್, ಸಂದೀಪ್, ರವಿಚಂದ್ರ ಗೌಡ, ಕೃಷ್ಣ ನಾಯಕ್ ಒಳಗೊಂಡ ತಂಡ ಕಾರ್ಯಾಚರಣೆ ನಡೆಸಿದೆ. ಕಾರ್ಯಾಚರಣೆಯಲ್ಲಿ ಭಾಗಿಯಾದ ಅಧಿಕಾರಿ ಹಾಗೂ ಸಿಬಂದ್ದಿ ವರ್ಗಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್ ಜಾಹ್ನವಿ ಅಭಿನಂದಿಸಿದ್ದಾರೆ.1
- ಬಿಸಿಲಿನ ತೀವ್ರತೆ ಹೆಚ್ಚಿರುವ ಕಾರಣ, ಸರ್ಕಾರಿ ಕಚೇರಿಗಳ ಕಾರ್ಯನಿರ್ವಹಣಾ ಅವಧಿಯನ್ನು ಹೊಸ ಸಮಯ: ಇನ್ಮುಂದೆ ಬೆಳಿಗ್ಗೆ 8:00 ಗಂಟೆಯಿಂದ ಮಧ್ಯಾಹ್ನ 1:30 ರವರೆಗೆ ನಿಗದಿ ಮಾಡಿ ಯಂದು ಕೇಳಿಕೊಳ್ಳುತ್ತಿದ್ದಾರೆ ಮಧ್ಯಾಹ್ನದ ಸುಡುವ ಬಿಸಿಲಿನಿಂದ ನೌಕರರನ್ನು ಮತ್ತು ದೂರದ ಊರುಗಳಿಂದ ಬರುವ ಜನರನ್ನು ರಕ್ಷಿಸುವುದು ಈ ಬದಲಾವಣೆಯ ಹಿಂದಿನ ಮುಖ್ಯ ಉದ್ದೇಶವಾಗಿದೆ. "ಜನಸಾಮಾನ್ಯರ ಆರೋಗ್ಯ ಮತ್ತು ಕೆಲಸದ ದಕ್ಷತೆಯನ್ನು ಕಾಪಾಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬಿಸಿಲು ಕಡಿಮೆಯಾಗುವವರೆಗೆ ಈ ಹೊಸ ವೇಳಾಪಟ್ಟಿ ಜಾರಿಗೆ ತರಬಹುದು ಬಿಸಿಲಿನಿಂದ ರಕ್ಷಿಸಿಕೊಳ್ಳಲು ಜನರು ಹೆಚ್ಚಿನ ಪ್ರಮಾಣದಲ್ಲಿ ನೀರು ಸೇವಿಸಬೇಕು ಮತ್ತು ಅನಗತ್ಯವಾಗಿ ಮಧ್ಯಾಹ್ನ ಹೊರಬರಬಾರದು ಎಂದು ಆರೋಗ್ಯ ಇಲಾಖೆ ಕೂಡ ಸೂಚಿಸಿದೆ. ಈ ಸಮಯದ ಬದಲಾವಣೆಯನ್ನ ಮಾಡುವಂತೆ ಸರ್ಕಾರಕ್ಕೆ ಬಸವರಾಜ ಬಳ್ಳಾರಿ ಗದಗ ಜಿಲ್ಲಾ ನೌಕರರ ಸಂಘದ ಅಧ್ಯಕ್ಷೆರು ಸರ್ಕಾರ ಕ್ಕೆ ಮನವಿ ಮಾಡಿದ್ದಾರೆ ಸರ್ಕಾರ ಸಮಯ ಬದಲಾವಣೆ ಮಾಡುತ್ತಾ ಕಾದು ನೋಡಬೇಕಿದೆ ಮತ್ತು ಸರ್ಕಾರಿ ಕೆಲಸಗಳಿಗೆ ಬರುವ ಜನರಿಗೆ ಎಷ್ಟರ ಮಟ್ಟಿಗೆ ಸಹಕಾರಿಯಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.1
- ಭಾರತೀಯ ಜನತಾ ಪಾರ್ಟಿ ಬಳ್ಳಾರಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ಹಂಪಿ ರಮಣ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಮಾತನಾಡಿದ ಹಂಪಿ ರಮಣ ಅವರು, ಈ ಹೊಣೆಗಾರಿಕೆಯನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿ, ಪಕ್ಷವನ್ನು ತಳಮಟ್ಟದಲ್ಲಿ ಸದೃಡಗೊಳಿಸುವುದಾಗಿ ತಿಳಿಸಿದ್ದಾರೆ. ಮುಂಬರುವ ಸವಾಲುಗಳನ್ನು ಎದುರಿಸಿ, ಪಕ್ಷದ ವರ್ಚಸ್ಸನ್ನು ಹೆಚ್ಚಿಸಲು ಸತತವಾಗಿ ಕೆಲಸ ಮಾಡುವುದಾಗಿ ಅವರು ಭರವಸೆ ನೀಡಿದ್ದಾರೆ.1
- ಭೀಕರ ಬಸ್ ಅಪಘಾತ: ಮರಕ್ಕೆ ಡಿಕ್ಕಿ ಹೊಡೆದ ಬಸ್, ಐವರು ಸ್ಥಳದಲ್ಲೇ ಸಾವು! #JB_News_Kannada1
- ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದು ಮರಳುತ್ತಿದ್ದ ಭಕ್ತರ ಬಾಳಿನಲ್ಲಿ ವಿಧಿ ಅಟ್ಟಹಾಸ ಮೆರೆದಿದೆ. ಮಂತ್ರಾಲಯದ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಚಿಕ್ಕಬಳ್ಳಾಪುರ ಮೂಲದ ಎಂಟು ಮಂದಿ ಭಕ್ತರು ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಡೆದಿದೆ...ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ತಾಲೂಕಿನ ಕಲ್ಲುದೇವರಕುಂಟ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಮಂತ್ರಾಲಯಕ್ಕೆ ತೆರಳಿದ್ದ ಭಕ್ತರು ಸಂಚರಿಸುತ್ತಿದ್ದ ಬೊಲೆರೊ ವಾಹನಕ್ಕೆ, ವೇಗವಾಗಿ ಬಂದ ಸಿಮೆಂಟ್ ಮತ್ತು ಜಲ್ಲಿಕಲ್ಲು ಸಾಗಿಸುತ್ತಿದ್ದ ಟ್ಯಾಂಕರ್ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೊಲೆರೊ ವಾಹನ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ವಾಹನದಲ್ಲಿದ್ದ ಎಂಟು ಮಂದಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಮೃತಪಟ್ಟವರೆಲ್ಲರೂ ಕರ್ನಾಟಕದ ಚಿಕ್ಕಬಳ್ಳಾಪುರ ಜಿಲ್ಲೆಯ ನಿವಾಸಿಗಳು ಎಂದು ಗುರುತಿಸಲಾಗಿದೆ.ಟ್ಯಾಂಕರ್ ಡಿಕ್ಕಿಯಾದ ರಭಸಕ್ಕೆ ಬೊಲೆರೊ ವಾಹನ ಅಪ್ಪಚ್ಚಿಯಾಗಿದ್ದು, ಮೃತದೇಹಗಳನ್ನು ಹೊರತೆಗೆಯಲು ಹರಸಾಹಸ ಪಡಬೇಕಾಗಿದೆ.1
- ಹೊಳಲ್ಕೆರೆ ಪಟ್ಟಣದ ಇಂಡೇನ್ ಏಜೆನ್ಸಿಯ ಗ್ರಾಹಕರು ಒಂದು ತಿಂಗಳ ಹಿಂದೆ ಗ್ಯಾಸ್ ಬುಕ್ ಮಾಡಿದರು ಸಹ ಏಜೆನ್ಸಿ ಅವರು ಗ್ರಾಮಗಳಿಗೆ ತೆರಳಿ ಸಿಲಿಂಡರ್ ಗಳನ್ನು ನೀಡುತ್ತಿಲ್ಲ, ದಿನನಿತ್ಯ ಹೊಳಲ್ಕೆರೆ ತಾಲೂಕಿನ ಗಡಿಭಾಗದ ಸಾಸಲುಹಳ್ಳ, ರಾಮೇನಹಳ್ಳಿ, ತುಪ್ಪದಹಳ್ಳಿ, ರಾಮಘಟ್ಟ,ಕೆಂಚಾಪುರ,ಬಿ,ಜಿ ಹಳ್ಳಿ,ತಾಳ್ಯ, ಅಂದನೂರು, ರಾಮಗಿರಿ, ಟಿ ,ನೂಲೆನೂರು, ಲಿಂಗದಹಳ್ಳಿ, ಹೊಳಲ್ಕೆರೆ ಪಟ್ಟಣ ಹೊರಕೆದೇವಪುರ,ಎಲ್ಲಾ ಗ್ರಾಮಗಳಿಂದ ಗ್ರಾಹಕರು ಅಡುಗೆಗೆ ಸಿಲಿಂಡರ್ ಇಲ್ಲದೇ ಅಖಿಲ್ ಇಂಡಿಯನ್ ಏಜೆನ್ಸಿ ಆಫೀಸ್ ಮುಂದೆ ಬರುತ್ತಿದ್ದಾರೆ.1
- ದಾವಣಗೆರೆ: ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಿಂದ ಶ್ರೀ ವಚನಾನಂದ ಸ್ವಾಮೀಜಿ ಅವರನ್ನು ಪದಚ್ಯುತಿಗೊಳಿಸಿರುವ ಹಿನ್ನೆಲೆ, ದಾವಣಗೆರೆಯಲ್ಲಿ ಟ್ರಸ್ಟಿ ಬಾವಿ ಬೆಟ್ಟಪ್ಪ ಅವರು ಸ್ಪಷ್ಟನೆ ನೀಡಿದರು. ಸ್ವಾಮೀಜಿಗಳು ಸಮಾಜದ ಹಿರಿಯರಿಗೆ ಗೌರವ ನೀಡುತ್ತಿರಲಿಲ್ಲ. ಅಲ್ಲದೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡುತ್ತಿದ್ದರು ಎಂದು ಆರೋಪಿಸಿದರು. ಸಮಾಜ ಸಂಘಟನೆ ಕಾರ್ಯಗಳನ್ನೂ ಅವರು ಸಮರ್ಪಕವಾಗಿ ನಡೆಸುತ್ತಿರಲಿಲ್ಲ ಎಂದು ಹೇಳಿದರು. ಇದಕ್ಕೂ ಮೊದಲು ಸ್ವಾಮೀಜಿಗಳಿಗೆ ತಮ್ಮ ತಪ್ಪುಗಳನ್ನು ತಿದ್ದಿಕೊಳ್ಳಲು ಗಡುವು ನೀಡಲಾಗಿತ್ತು. ಆದರೆ ಅವರು ಯಾವುದೇ ಬದಲಾವಣೆ ತೋರಿಸಲಿಲ್ಲ. ಈ ಹಿನ್ನೆಲೆಯಲ್ಲಿ ಅವರನ್ನು ಪೀಠಾಧ್ಯಕ್ಷ ಸ್ಥಾನದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ತಿಳಿಸಿದರು. ಅವಾಚ್ಯ ಶಬ್ದಗಳನ್ನು ಬಳಸುವ ವ್ಯಕ್ತಿಯನ್ನು ಪೀಠಾಧ್ಯಕ್ಷರಾಗಿ ಮುಂದುವರಿಸುವುದು ಸರಿಯಲ್ಲ ಎಂಬ ಕಾರಣದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು. ಇದಲ್ಲದೆ, ತಮ್ಮ ತಪ್ಪುಗಳನ್ನು ತಿದ್ದಿಕೊಳ್ಳದೇ ಈಗ ಲೆಕ್ಕ ಕೇಳುವ ನೆಪದಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಬಾವಿ ಬೆಟ್ಟಪ್ಪ ಆರೋಪಿಸಿದರು.1
- ಚಳ್ಳಕೆರೆ ನಗರದಲ್ಲಿ ಕಬ್ಬಿಣದ ಅದಿರು ಸಾಗಣೆ ಲಾಲಗಳಿಂದ ಉಂಟಾಗುತ್ತಿರುವ ಧೂಳು ಮತ್ತು ರಸ್ತೆ ಸಮಸ್ಯೆ ನಿವಾರಣೆಗೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಇನ್ನೂ ಕರ್ನಾಟಕ ರಕ್ಷಣಾ ವೇಧಿಕೆ ಚಳ್ಳಕೆರೆ ಘಟಕದ ವತಿಯಿಂದ ಮನವಿ ಸಲ್ಲಿಸಿದ್ದಾರೆ. ಚಳ್ಳಕೆರೆ ನಗರದ ರೈಲ್ವೆ ನಿಲ್ದಾಣದಿಂದ ಹೆಗ್ಡೆರೆ ಪಾಗದಲ್ಲಿರುವ ಕಬ್ಬಿಣದ ಕಾರ್ಖಾನೆಗೆ ಕಬ್ಬಿಣದ ಅದಿರನ್ನು ಸಾಗಿಸುವ ನೂರಾರು ಟಿಪ್ಪರ್ ಲಾರಿಗಳು ಪ್ರತಿದಿನ ಸಂಚಣಸುತ್ತಿವೆ. ಆದರೆ ಈ ಲಾದಿಗಳು ಯಾವುದೇ ಸುರಕ್ಷತಾ ಕ್ರಮಗಳನ್ನು ಪಾಲಿಸದೇ ಅದಿರನ್ನು ಸಾಗಿಸುತ್ತಿರುವುದರಿಂದ ನಗರದ ಬೆಂಗಳೂರು ರಸ್ತೆಯಲ್ಲಿ ಭಾರೀ ಪ್ರಮಾಣದ ಕೆಂಪು ಧೂಳು ಎಳುತ್ತಿದ್ದು, ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.1