logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ ಚಿಂತಾಮಣಿ:ನಗರದಲ್ಲಿರುವ ಪರಿಶಿಷ್ಟ ಜಾತಿ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಕೆ.ಎಂ.ಶಿವಪ್ರಸಾದ್‌ ಹಾಗೂ ಉಪಾಧ್ಯಕ್ಷರಾಗಿ ಎನ್‌.ಕೆ.ನರಸಿಂಹಪ್ಪ ಆಯ್ಕೆಯಾಗಿದ್ದಾರೆ. ಸಂಘದ  ಮುಂದಿನ ಐದು ವರ್ಷಗಳ ಅವಧಿಗೆ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಶುಕ್ರವಾರ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಕೆ ಎಂ ಶಿವಪ್ರಸಾದ್ ಮತ್ತು ಎಸ್ ಪ್ರದೀಪ್ ರವರು ನಾಮಪತ್ರ ಸಲ್ಲಿಸಿದ್ದರು. ಎರಡು ನಾಮಪತ್ರಗಳು ಕ್ರಮಬದ್ದವಾಗಿದ್ದು ಇಬ್ಬರೂ ವಾಪಸ್‌ ಪಡೆಯಲಿಲ್ಲ. ಹೀಗಾಗಿ ಇಬ್ಬರ ನಡುವೆ ನೇರ ಹಣಾಹಣಿ ನಡೆಯಿತು. ಕೆ.ಎಂ.ಶಿವಪ್ರಸಾದ್‌ 10 ಮತಗಳು ಮತ್ತು ಎಸ್‌.ಪ್ರದೀಪ್‌ 5 ಮತಗಳನ್ನು ಪಡೆದರು. 5 ಮತಗಳ ಬಹುಮತದಿಂದ ಕೆ.ಎಂ.ಶಿವಪ್ರಸಾದ್‌ ಅಧ್ಯಕ್ಷರಾಗಿ ಜಯಶೀಲರಾದರು. ಉಪಾಧ್ಯಕ್ಷರ ಸ್ಥಾನಕ್ಕೆ ಎನ್. ಕೆ ನರಸಿಂಹಪ್ಪ ಮಾತ್ರ ನಾಮಪತ್ರ ಸಲ್ಲಿಸಿದ್ದು ಬೇರೆ ಯಾರು ನಾಮಪತ್ರ ಸಲ್ಲಿಸಲಿಲ್ಲ. ಪರಿಶೀಲನೆಯಲ್ಲಿ ನಾಮಪತ್ರ ಕ್ರಮಬದ್ದವಾಗಿತ್ತು. ಚುನಾವಣೆ ಪ್ರಕ್ರಿಯೆ ಪೂರ್ಣವಾದ ಕೂಡಲೇ ಅವರನ್ನು ಆವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಚುನಾವಣಾ ಅಧಿಕಾರಿ ಹರೀಶ್ ಕುಮಾರ್ ಘೋಷಣೆ ಮಾಡಿದರು. ನೂತನ ಅಧ್ಯಕ್ಷ ಕೆ. ಎಂ ಶಿವಪ್ರಸಾದ್ ಮಾತನಾಡಿ ಐದು ವರ್ಷಗಳ ಕಾಲ, ಸಂಘದ ಎಲ್ಲ ನಿರ್ದೇಶಕರ ಸಹಕಾರದಿಂದ  ಪತ್ತಿನ ಸಹಕಾರ ಸಂಘವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುವ ಕೆಲಸ ಮಾಡುತ್ತೇನೆ ಎಂದು ಹೇಳಿದರು. ನಿರ್ದೇಶಕರಾದ ಎಚ್.ಎ.ಶ್ರೀನಿವಾಸ್, ಕೆ.ವೆಂಕಟಾಚಲಪತಿ, ಎಸ್.ಪ್ರದೀಪ್,ಎಂ.ಅಂಜನಪ್ಪ ಅರ್.ಶ್ರೀನಿವಾಸ್,ಜಿ.ವಿ.ರೆಡ್ಡಪ್ಪ,ಡಿ.ಎಂ.ನಾಗರಾಜ್, ಟಿ.ಎಸ್.ಶಿವಾನಂದ,ವೈ.ಎಸ್.ನರೇಂದ್ರ,ಎಂ.ಡಿ.ವೆಂಕಟ್‌,ಎನ್‌.ಸುಧಾ ಮತ್ತು ಡಿ.ಕೆ.ರಾಧಾ ಉಪಸ್ಥಿತರಿದ್ದರು.

on 13 March
user_Md mansoor
Md mansoor
Local News Reporter ಚಿಂತಾಮಣಿ, ಚಿಕ್ಕಬಳ್ಳಾಪುರ, ಕರ್ನಾಟಕ•
on 13 March
e744a86f-07ad-49ab-9368-865e37782899

ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ ಚಿಂತಾಮಣಿ:ನಗರದಲ್ಲಿರುವ ಪರಿಶಿಷ್ಟ ಜಾತಿ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಕೆ.ಎಂ.ಶಿವಪ್ರಸಾದ್‌ ಹಾಗೂ ಉಪಾಧ್ಯಕ್ಷರಾಗಿ ಎನ್‌.ಕೆ.ನರಸಿಂಹಪ್ಪ ಆಯ್ಕೆಯಾಗಿದ್ದಾರೆ. ಸಂಘದ  ಮುಂದಿನ ಐದು ವರ್ಷಗಳ ಅವಧಿಗೆ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಶುಕ್ರವಾರ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಕೆ ಎಂ ಶಿವಪ್ರಸಾದ್ ಮತ್ತು ಎಸ್ ಪ್ರದೀಪ್ ರವರು ನಾಮಪತ್ರ ಸಲ್ಲಿಸಿದ್ದರು. ಎರಡು ನಾಮಪತ್ರಗಳು ಕ್ರಮಬದ್ದವಾಗಿದ್ದು ಇಬ್ಬರೂ ವಾಪಸ್‌ ಪಡೆಯಲಿಲ್ಲ. ಹೀಗಾಗಿ ಇಬ್ಬರ ನಡುವೆ ನೇರ ಹಣಾಹಣಿ ನಡೆಯಿತು. ಕೆ.ಎಂ.ಶಿವಪ್ರಸಾದ್‌ 10 ಮತಗಳು ಮತ್ತು ಎಸ್‌.ಪ್ರದೀಪ್‌ 5 ಮತಗಳನ್ನು ಪಡೆದರು.

5c0832d9-cb36-41b4-9c97-349fc96617c6

5 ಮತಗಳ ಬಹುಮತದಿಂದ ಕೆ.ಎಂ.ಶಿವಪ್ರಸಾದ್‌ ಅಧ್ಯಕ್ಷರಾಗಿ ಜಯಶೀಲರಾದರು. ಉಪಾಧ್ಯಕ್ಷರ ಸ್ಥಾನಕ್ಕೆ ಎನ್. ಕೆ ನರಸಿಂಹಪ್ಪ ಮಾತ್ರ ನಾಮಪತ್ರ ಸಲ್ಲಿಸಿದ್ದು ಬೇರೆ ಯಾರು ನಾಮಪತ್ರ ಸಲ್ಲಿಸಲಿಲ್ಲ. ಪರಿಶೀಲನೆಯಲ್ಲಿ ನಾಮಪತ್ರ ಕ್ರಮಬದ್ದವಾಗಿತ್ತು. ಚುನಾವಣೆ ಪ್ರಕ್ರಿಯೆ ಪೂರ್ಣವಾದ ಕೂಡಲೇ ಅವರನ್ನು ಆವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಚುನಾವಣಾ ಅಧಿಕಾರಿ ಹರೀಶ್ ಕುಮಾರ್ ಘೋಷಣೆ ಮಾಡಿದರು. ನೂತನ ಅಧ್ಯಕ್ಷ ಕೆ. ಎಂ ಶಿವಪ್ರಸಾದ್ ಮಾತನಾಡಿ ಐದು ವರ್ಷಗಳ ಕಾಲ, ಸಂಘದ ಎಲ್ಲ ನಿರ್ದೇಶಕರ ಸಹಕಾರದಿಂದ  ಪತ್ತಿನ ಸಹಕಾರ ಸಂಘವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುವ ಕೆಲಸ ಮಾಡುತ್ತೇನೆ ಎಂದು ಹೇಳಿದರು. ನಿರ್ದೇಶಕರಾದ ಎಚ್.ಎ.ಶ್ರೀನಿವಾಸ್, ಕೆ.ವೆಂಕಟಾಚಲಪತಿ, ಎಸ್.ಪ್ರದೀಪ್,ಎಂ.ಅಂಜನಪ್ಪ ಅರ್.ಶ್ರೀನಿವಾಸ್,ಜಿ.ವಿ.ರೆಡ್ಡಪ್ಪ,ಡಿ.ಎಂ.ನಾಗರಾಜ್, ಟಿ.ಎಸ್.ಶಿವಾನಂದ,ವೈ.ಎಸ್.ನರೇಂದ್ರ,ಎಂ.ಡಿ.ವೆಂಕಟ್‌,ಎನ್‌.ಸುಧಾ ಮತ್ತು ಡಿ.ಕೆ.ರಾಧಾ ಉಪಸ್ಥಿತರಿದ್ದರು.

More news from ಕರ್ನಾಟಕ and nearby areas
  • Post by Chand Pasha
    1
    Post by Chand Pasha
    user_Chand Pasha
    Chand Pasha
    ಕೋಲಾರ, ಕೋಲಾರ, ಕರ್ನಾಟಕ•
    4 hrs ago
  • KOLAR KI.AWAAZ KOUSAR
    1
    KOLAR KI.AWAAZ KOUSAR
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop Kolar, Karnataka•
    13 hrs ago
  • ನೆಲಮಂಗಲದಲ್ಲಿ ಬಾಲಕಿಯ ಬಾಲ್ಯವಿವಾಹಕ್ಕೆ ಯತ್ನ! 17 ವರ್ಷದ ಬಾಲಕಿಯ ಬಲವಂತ ವಿವಾಹಕ್ಕೆ ತಡೆ ನೆಲಮಂಗಲ ಕವಾಡಿಮಠದ ವೀರಭದ್ರೇಶ್ವರದಲ್ಲಿ ಕಲ್ಯಾಣ ಮಂಟಪದಲ್ಲಿ ಘಟನೆ ಮಧ್ಯರಾತ್ರಿ 1098 ಮಕ್ಕಳ ಸಹಾಯವಾಣಿಗೆ ಕರೆಮಾಡಿ ಮಾಹಿತಿ ಮಾಹಿತಿ ತಿಳಿಯುತ್ತಿದ್ದಂತೆ ಅಧಿಕಾರಿಗಳ ದಾಳಿ, ಪರಿಶೀಲನೆ ಬಾಲಕಿ ದಾಖಲೆ ಪರಿಶೀಲನೆ ವೇಳೆ ಅಪ್ರಾಪ್ತತೆ ಎಂದು ಬಹಿರಂಗ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ತಂಡದಿಂದ ಕಾರ್ಯಾಚರಣೆ ನೆಲಮಂಗಲ ಟೌನ್ ಪೊಲೀಸರ ಸಹಾಯದಲ್ಲಿ ದಾಳಿ 18 ವರ್ಷದ ಒಳಗಿನ ಬಾಲಕಿ ಆದ್ದರಿಂದ ಬಾಲ್ಯ ವಿವಾಹವೆಂದು ಪರಿಗಣಿಸಿ ಪ್ರಕರಣ ಮಧ್ಯರಾತ್ರಿ 3 ಗಂಟೆಗೆ ದಾಳಿ ನಡೆಸಿ ಬಾಲಕಿ ರಕ್ಷಣೆ ತಾಯಿಯೊಂದಿಗೆ ಸುರಕ್ಷಿತ ಸ್ಥಳಕ್ಕೆ ಬಾಲಕಿ ಸ್ಥಳಾಂತರ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲು ಕ್ರಮ ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲು.
    4
    ನೆಲಮಂಗಲದಲ್ಲಿ ಬಾಲಕಿಯ ಬಾಲ್ಯವಿವಾಹಕ್ಕೆ ಯತ್ನ!
17 ವರ್ಷದ ಬಾಲಕಿಯ ಬಲವಂತ ವಿವಾಹಕ್ಕೆ ತಡೆ
ನೆಲಮಂಗಲ ಕವಾಡಿಮಠದ ವೀರಭದ್ರೇಶ್ವರದಲ್ಲಿ ಕಲ್ಯಾಣ ಮಂಟಪದಲ್ಲಿ ಘಟನೆ
ಮಧ್ಯರಾತ್ರಿ 1098 ಮಕ್ಕಳ ಸಹಾಯವಾಣಿಗೆ ಕರೆಮಾಡಿ ಮಾಹಿತಿ
ಮಾಹಿತಿ ತಿಳಿಯುತ್ತಿದ್ದಂತೆ ಅಧಿಕಾರಿಗಳ ದಾಳಿ, ಪರಿಶೀಲನೆ
ಬಾಲಕಿ ದಾಖಲೆ ಪರಿಶೀಲನೆ ವೇಳೆ ಅಪ್ರಾಪ್ತತೆ ಎಂದು ಬಹಿರಂಗ
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ತಂಡದಿಂದ ಕಾರ್ಯಾಚರಣೆ
ನೆಲಮಂಗಲ ಟೌನ್ ಪೊಲೀಸರ ಸಹಾಯದಲ್ಲಿ ದಾಳಿ 
18 ವರ್ಷದ ಒಳಗಿನ ಬಾಲಕಿ ಆದ್ದರಿಂದ ಬಾಲ್ಯ ವಿವಾಹವೆಂದು ಪರಿಗಣಿಸಿ ಪ್ರಕರಣ
ಮಧ್ಯರಾತ್ರಿ 3 ಗಂಟೆಗೆ  ದಾಳಿ ನಡೆಸಿ ಬಾಲಕಿ ರಕ್ಷಣೆ
ತಾಯಿಯೊಂದಿಗೆ ಸುರಕ್ಷಿತ ಸ್ಥಳಕ್ಕೆ ಬಾಲಕಿ ಸ್ಥಳಾಂತರ
ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲು ಕ್ರಮ
ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲು.
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    14 hrs ago
  • ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ನಾಗಪುರದಲ್ಲಿರುವ ಶ್ರೀ ಲಕ್ಷ್ಮೀದೇವಿ ರೈಸ್ ಕಾರ್ನರ್ ಅಂಗಡಿಯಲ್ಲಿ ಮಧ್ಯರಾತ್ರಿ ತೆಂಗಿನಕಾಯಿ ಕಳ್ಳತನ ನಡೆದಿರುವ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಂಗಡಿ ಮುಚ್ಚಿದ್ದ ವೇಳೆ ಮಹಿಳೆಯೊಬ್ಬಳು ಬೆಳಗಿನ ಜಾವ ಸುಮಾರು 3 ಗಂಟೆಗೆ ಬಂದು ಸುಮಾರು 15 ತೆಂಗಿನಕಾಯಿಗಳನ್ನು ಕದ್ದೊಯ್ದಿರುವುದು ದೃಶ್ಯಗಳಲ್ಲಿ ಕಾಣಿಸಿದೆ. ಇದೇ ಅಂಗಡಿಯಲ್ಲಿ ಈ ಹಿಂದೆ ಹಲವು ಬಾರಿ ಕಳ್ಳತನ ನಡೆದಿದ್ದರಿಂದ ಅಂಗಡಿ ಮಾಲೀಕರು ಕಳೆದ ಒಂದು ವಾರದಿಂದ ಖದೀಮೆಯನ್ನು ಹಿಡಿಯಲು ಕಾಯುತ್ತಿದ್ದರು ಎಂದು ತಿಳಿದುಬಂದಿದೆ. ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಆರೋಪಿಯನ್ನು ಪತ್ತೆಹಚ್ಚಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ.
    1
    ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ನಾಗಪುರದಲ್ಲಿರುವ ಶ್ರೀ ಲಕ್ಷ್ಮೀದೇವಿ ರೈಸ್ ಕಾರ್ನರ್ ಅಂಗಡಿಯಲ್ಲಿ ಮಧ್ಯರಾತ್ರಿ ತೆಂಗಿನಕಾಯಿ ಕಳ್ಳತನ ನಡೆದಿರುವ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಂಗಡಿ ಮುಚ್ಚಿದ್ದ ವೇಳೆ ಮಹಿಳೆಯೊಬ್ಬಳು ಬೆಳಗಿನ ಜಾವ ಸುಮಾರು 3 ಗಂಟೆಗೆ ಬಂದು ಸುಮಾರು 15 ತೆಂಗಿನಕಾಯಿಗಳನ್ನು ಕದ್ದೊಯ್ದಿರುವುದು ದೃಶ್ಯಗಳಲ್ಲಿ ಕಾಣಿಸಿದೆ. ಇದೇ ಅಂಗಡಿಯಲ್ಲಿ ಈ ಹಿಂದೆ ಹಲವು ಬಾರಿ ಕಳ್ಳತನ ನಡೆದಿದ್ದರಿಂದ ಅಂಗಡಿ ಮಾಲೀಕರು ಕಳೆದ ಒಂದು ವಾರದಿಂದ ಖದೀಮೆಯನ್ನು ಹಿಡಿಯಲು ಕಾಯುತ್ತಿದ್ದರು ಎಂದು ತಿಳಿದುಬಂದಿದೆ. ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಆರೋಪಿಯನ್ನು ಪತ್ತೆಹಚ್ಚಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    1 hr ago
  • Post by Shilpa
    3
    Post by Shilpa
    user_Shilpa
    Shilpa
    ಬೆಂಗಳೂರು ಉತ್ತರ, ಬೆಂಗಳೂರು ನಗರ, ಕರ್ನಾಟಕ•
    3 hrs ago
  • ಹನೂರು ತಾಲೂಕಿನ ಪಿಜಿಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎರಡನೇ ವಾರ್ಡ್‌ನಲ್ಲಿ ಕುಡಿಯುವ ನೀರಿನ ತೀವ್ರ ಅಭಾವ ಉಂಟಾಗಿ, ಗ್ರಾಮಸ್ಥರು ಸಂಕಷ್ಟಕ್ಕೊಳಗಾಗಿದ್ದಾರೆ. ಸಮಸ್ಯೆಯಿಂದ ಬೇಸತ್ತ ಮಹಿಳೆಯರು ಬುಧವಾರ ಖಾಲಿ ಬಿಂದಿಗೆಗಳನ್ನು ಹಿಡಿದು ತಮ್ಮ ಆಕ್ರೋಶ ಮತ್ತು ನೋವನ್ನು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಹಿಳೆಯರು, “ಎರಡನೇ ವಾರ್ಡ್‌ನಲ್ಲಿ ವಾಸಿಸುವ ಕ್ರಿಶ್ಚಿಯನ್ ಸಮುದಾಯದ ಜನರು ನೀರಿನ ಕೊರತೆಯಿಂದ ದಿನನಿತ್ಯದ ಜೀವನ ನಡೆಸುವುದು ದುಸ್ತರವಾಗಿದೆ. ಕುಡಿಯಲು ನೀರಿಲ್ಲದೆ, ಶೌಚಾಲಯಗಳಿಗೂ ನೀರಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ನಾವು ತೀವ್ರ ಸಂಕಷ್ಟ ಅನುಭವಿಸುತ್ತಿದ್ದೇವೆ,” ಎಂದು ಹೇಳಿದರು. “ನಾವು ಅಲ್ಪಸಂಖ್ಯಾತರು. ನಮ್ಮ ಸಮಸ್ಯೆಯನ್ನು ಕೇಳುವವರೇ ಇಲ್ಲ. ನಮಗೆ ಬೇರೆ ಏನೂ ಬೇಡ, ಕುಡಿಯಲು ನೀರು ಕೊಟ್ಟರೆ ಸಾಕು,” ಎಂದು ಮಹಿಳೆಯರು ಕಳವಳ ವ್ಯಕ್ತಪಡಿಸಿದರು.
    1
    ಹನೂರು ತಾಲೂಕಿನ ಪಿಜಿಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎರಡನೇ ವಾರ್ಡ್‌ನಲ್ಲಿ ಕುಡಿಯುವ ನೀರಿನ ತೀವ್ರ ಅಭಾವ ಉಂಟಾಗಿ, ಗ್ರಾಮಸ್ಥರು ಸಂಕಷ್ಟಕ್ಕೊಳಗಾಗಿದ್ದಾರೆ. ಸಮಸ್ಯೆಯಿಂದ ಬೇಸತ್ತ ಮಹಿಳೆಯರು ಬುಧವಾರ ಖಾಲಿ ಬಿಂದಿಗೆಗಳನ್ನು ಹಿಡಿದು ತಮ್ಮ ಆಕ್ರೋಶ ಮತ್ತು ನೋವನ್ನು ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಹಿಳೆಯರು, “ಎರಡನೇ ವಾರ್ಡ್‌ನಲ್ಲಿ ವಾಸಿಸುವ ಕ್ರಿಶ್ಚಿಯನ್ ಸಮುದಾಯದ ಜನರು ನೀರಿನ ಕೊರತೆಯಿಂದ ದಿನನಿತ್ಯದ ಜೀವನ ನಡೆಸುವುದು ದುಸ್ತರವಾಗಿದೆ. ಕುಡಿಯಲು ನೀರಿಲ್ಲದೆ, ಶೌಚಾಲಯಗಳಿಗೂ ನೀರಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ನಾವು ತೀವ್ರ ಸಂಕಷ್ಟ ಅನುಭವಿಸುತ್ತಿದ್ದೇವೆ,” ಎಂದು ಹೇಳಿದರು.
“ನಾವು ಅಲ್ಪಸಂಖ್ಯಾತರು. ನಮ್ಮ ಸಮಸ್ಯೆಯನ್ನು ಕೇಳುವವರೇ ಇಲ್ಲ. ನಮಗೆ ಬೇರೆ ಏನೂ ಬೇಡ, ಕುಡಿಯಲು ನೀರು ಕೊಟ್ಟರೆ ಸಾಕು,” ಎಂದು ಮಹಿಳೆಯರು ಕಳವಳ ವ್ಯಕ್ತಪಡಿಸಿದರು.
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Farmer ಹನೂರು, ಚಾಮರಾಜನಗರ, ಕರ್ನಾಟಕ•
    13 hrs ago
  • ​ಹನೂರಿನಲ್ಲಿ ಇಂದು ರೈತರ ಬೃಹತ್ ಪ್ರತಿಭಟನೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ ​ಹನೂರು: ತಾಲ್ಲೂಕಿನ ರೈತರು ಎದುರಿಸುತ್ತಿರುವ ವಿವಿಧ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಹನೂರು ಶಾಖೆ) ವತಿಯಿಂದ ಇಂದು (ದಿನಾಂಕ: 15-04-2026) ಬೆಳಿಗ್ಗೆ 10 ಗಂಟೆಗೆ ಹನೂರು ಪಟ್ಟಣದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಳ್ಳಲಾಗಿದೆ. ​ರೈತ ವಿರೋಧಿ ಧೋರಣೆ ಅನುಸರಿಸುತ್ತಿರುವ ಸರ್ಕಾರ ಹಾಗೂ ಮೌನವಾಗಿರುವ ಅಧಿಕಾರಿಗಳನ್ನು ಎಚ್ಚರಿಸಲು ಈ 'ಬೃಹತ್ ಚಳುವಳಿ'ಯನ್ನು ಹಮ್ಮಿಕೊಳ್ಳಲಾಗಿದ್ದು, ಪ್ರಮುಖವಾಗಿ ಈ ಕೆಳಗಿನ ಬೇಡಿಕೆಗಳನ್ನು ಮುಂದಿಡಲಾಗಿದೆ: ​ಜಲಮೂಲಗಳ ಸಂರಕ್ಷಣೆ: ಗುಂಡಾಲ್ ಜಲಾಶಯದಿಂದ ಹನೂರು ತಾಲ್ಲೂಕಿನ ಎಲ್ಲಾ ಕೆರೆ-ಕಟ್ಟೆಗಳಿಗೆ ನೀರು ತುಂಬಿಸಿ ಅಂತರ್ಜಲ ಮಟ್ಟ ಹೆಚ್ಚಿಸಬೇಕು. ​ಅಧಿಕಾರಿಗಳ ನಿರ್ಲಕ್ಷ್ಯ: ತಹಶೀಲ್ದಾರ್ ಕಚೇರಿಯಲ್ಲಿನ ಅವ್ಯವಹಾರಗಳನ್ನು ತಡೆಗಟ್ಟಬೇಕು ಹಾಗೂ ಸಾಗುವಳಿ ಚೀಟಿ ವಿತರಣೆ, ಪೋಡಿ ವಿಳಂಬ ಮತ್ತು ರಸ್ತೆ ಸೌಕರ್ಯಗಳ ಬಗ್ಗೆ ಅಧಿಕಾರಿಗಳು ತೋರುತ್ತಿರುವ ಬೇಜವಾಬ್ದಾರಿಯನ್ನು ಖಂಡಿಸಲಾಗಿದೆ. ​ಮೂಲಸೌಕರ್ಯ: ಮಲೆ ಮಹದೇಶ್ವರ ಬೆಟ್ಟದ ಸುತ್ತಮುತ್ತಲ ಗ್ರಾಮಗಳಿಗೆ ಕನಿಷ್ಠ ಮೂಲಭೂತ ಸೌಕರ್ಯ ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ​ಪಶುಸಂಗೋಪನೆ: ಸಾಂಕ್ರಾಮಿಕ ರೋಗಗಳಿಂದ ಸಾಯುತ್ತಿರುವ ಕುರಿ, ಮೇಕೆ ಹಾಗೂ ಜಾನುವಾರುಗಳಿಗೆ ಸೂಕ್ತ ಔಷಧ ಮತ್ತು ಚಿಕಿತ್ಸಾ ಸೌಲಭ್ಯ ಒದಗಿಸಬೇಕು. ​ವನ್ಯಜೀವಿ ಸಂಘರ್ಷ: ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ರೈತರ ಮೇಲೆ ನಡೆಯುತ್ತಿರುವ ಕಾಡುಪ್ರಾಣಿಗಳ ದಾಳಿ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಬೆಳೆ ಹಾನಿಗೆ ಸೂಕ್ತ ಪರಿಹಾರ ನೀಡಬೇಕು. ​ಯೋಜನೆಗಳ ಅನುಷ್ಠಾನ: ಉಡುತೊರೆಹಳ್ಳದ ನೀರಾವರಿ ಯೋಜನೆಯ ವಿಳಂಬ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು. ​"ರೈತರು ಇಂದು ಸಂಕಷ್ಟದಲ್ಲಿದ್ದಾರೆ. ನಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ಈ ಹೋರಾಟ ಅನಿವಾರ್ಯವಾಗಿದೆ," ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ. ಈ ಪ್ರತಿಭಟನೆಯಲ್ಲಿ ತಾಲ್ಲೂಕಿನ ಸಾವಿರಾರು ರೈತರು, ಯುವಜನರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದಾರೆ.. ಈ ಸಂದರ್ಭದಲ್ಲಿ ಅವತಾರ್ ಶಿವ ರೈತ ಸಂಘದ ಯುವ ಸದಸ್ಯರು ಮಾತನಾಡಿ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮೂರು ತಿಂಗಳಿಗೆ ಒಮ್ಮೆ ಸಭೆ ಮಾಡಿ ರೈತರು ಹಾಗೂ ಸಾರ್ವಜನಿಕರಿಗೆ ಕಾಡಿನ ಪ್ರಾಮುಖ್ಯತೆ ಹಾಗೂ ರೈತರಿಗೆ ಇದರ ಮಹತ್ವ ತಿಳಿಸಿ ಹಾಗೂ ಕಾಡ್ಗಿಚ್ಚು ಇದರ ಬಗ್ಗೆ ಸಭೆಗಳು ಮಾಡಿಸಿ ರೈತರು ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದರು.
    4
    ​ಹನೂರಿನಲ್ಲಿ ಇಂದು ರೈತರ ಬೃಹತ್ ಪ್ರತಿಭಟನೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ
​ಹನೂರು: ತಾಲ್ಲೂಕಿನ ರೈತರು ಎದುರಿಸುತ್ತಿರುವ ವಿವಿಧ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಹನೂರು ಶಾಖೆ) ವತಿಯಿಂದ ಇಂದು (ದಿನಾಂಕ: 15-04-2026) ಬೆಳಿಗ್ಗೆ 10 ಗಂಟೆಗೆ ಹನೂರು ಪಟ್ಟಣದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಳ್ಳಲಾಗಿದೆ.
​ರೈತ ವಿರೋಧಿ ಧೋರಣೆ ಅನುಸರಿಸುತ್ತಿರುವ ಸರ್ಕಾರ ಹಾಗೂ ಮೌನವಾಗಿರುವ ಅಧಿಕಾರಿಗಳನ್ನು ಎಚ್ಚರಿಸಲು ಈ 'ಬೃಹತ್ ಚಳುವಳಿ'ಯನ್ನು ಹಮ್ಮಿಕೊಳ್ಳಲಾಗಿದ್ದು, ಪ್ರಮುಖವಾಗಿ ಈ ಕೆಳಗಿನ ಬೇಡಿಕೆಗಳನ್ನು ಮುಂದಿಡಲಾಗಿದೆ:
​ಜಲಮೂಲಗಳ ಸಂರಕ್ಷಣೆ: ಗುಂಡಾಲ್ ಜಲಾಶಯದಿಂದ ಹನೂರು ತಾಲ್ಲೂಕಿನ ಎಲ್ಲಾ ಕೆರೆ-ಕಟ್ಟೆಗಳಿಗೆ ನೀರು ತುಂಬಿಸಿ ಅಂತರ್ಜಲ ಮಟ್ಟ ಹೆಚ್ಚಿಸಬೇಕು.
​ಅಧಿಕಾರಿಗಳ ನಿರ್ಲಕ್ಷ್ಯ: ತಹಶೀಲ್ದಾರ್ ಕಚೇರಿಯಲ್ಲಿನ ಅವ್ಯವಹಾರಗಳನ್ನು ತಡೆಗಟ್ಟಬೇಕು ಹಾಗೂ ಸಾಗುವಳಿ ಚೀಟಿ ವಿತರಣೆ, ಪೋಡಿ ವಿಳಂಬ ಮತ್ತು ರಸ್ತೆ ಸೌಕರ್ಯಗಳ ಬಗ್ಗೆ ಅಧಿಕಾರಿಗಳು ತೋರುತ್ತಿರುವ ಬೇಜವಾಬ್ದಾರಿಯನ್ನು ಖಂಡಿಸಲಾಗಿದೆ.
​ಮೂಲಸೌಕರ್ಯ: ಮಲೆ ಮಹದೇಶ್ವರ ಬೆಟ್ಟದ ಸುತ್ತಮುತ್ತಲ ಗ್ರಾಮಗಳಿಗೆ ಕನಿಷ್ಠ ಮೂಲಭೂತ ಸೌಕರ್ಯ ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು.
​ಪಶುಸಂಗೋಪನೆ: ಸಾಂಕ್ರಾಮಿಕ ರೋಗಗಳಿಂದ ಸಾಯುತ್ತಿರುವ ಕುರಿ, ಮೇಕೆ ಹಾಗೂ ಜಾನುವಾರುಗಳಿಗೆ ಸೂಕ್ತ ಔಷಧ ಮತ್ತು ಚಿಕಿತ್ಸಾ ಸೌಲಭ್ಯ ಒದಗಿಸಬೇಕು.
​ವನ್ಯಜೀವಿ ಸಂಘರ್ಷ: ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ರೈತರ ಮೇಲೆ ನಡೆಯುತ್ತಿರುವ ಕಾಡುಪ್ರಾಣಿಗಳ ದಾಳಿ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಬೆಳೆ ಹಾನಿಗೆ ಸೂಕ್ತ ಪರಿಹಾರ ನೀಡಬೇಕು.
​ಯೋಜನೆಗಳ ಅನುಷ್ಠಾನ: ಉಡುತೊರೆಹಳ್ಳದ ನೀರಾವರಿ ಯೋಜನೆಯ ವಿಳಂಬ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು.
​"ರೈತರು ಇಂದು ಸಂಕಷ್ಟದಲ್ಲಿದ್ದಾರೆ. ನಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ಈ ಹೋರಾಟ ಅನಿವಾರ್ಯವಾಗಿದೆ," ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ. ಈ ಪ್ರತಿಭಟನೆಯಲ್ಲಿ ತಾಲ್ಲೂಕಿನ ಸಾವಿರಾರು ರೈತರು, ಯುವಜನರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದಾರೆ..
ಈ ಸಂದರ್ಭದಲ್ಲಿ ಅವತಾರ್ ಶಿವ ರೈತ ಸಂಘದ ಯುವ ಸದಸ್ಯರು ಮಾತನಾಡಿ 
ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮೂರು ತಿಂಗಳಿಗೆ ಒಮ್ಮೆ ಸಭೆ ಮಾಡಿ ರೈತರು ಹಾಗೂ ಸಾರ್ವಜನಿಕರಿಗೆ ಕಾಡಿನ ಪ್ರಾಮುಖ್ಯತೆ ಹಾಗೂ ರೈತರಿಗೆ ಇದರ ಮಹತ್ವ ತಿಳಿಸಿ ಹಾಗೂ ಕಾಡ್ಗಿಚ್ಚು ಇದರ ಬಗ್ಗೆ ಸಭೆಗಳು ಮಾಡಿಸಿ ರೈತರು ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದರು.
    user_ಉಸ್ಮಾನ್ ಖಾನ್
    ಉಸ್ಮಾನ್ ಖಾನ್
    Local News Reporter ಹನೂರು, ಚಾಮರಾಜನಗರ, ಕರ್ನಾಟಕ•
    21 hrs ago
  • ಬೆಂಗಳೂರು ಏರ್ಪೋರ್ಟ್‌ನಿಂದ ಹುಬ್ಬಳ್ಳಿಗೆ ತೆರಳುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಎಂಎಲ್ಸಿ ನಾಜಿರ್ ಅಹಮದ್ ರಾಜ್ಯ ರಾಜಕಾರಣದ ಪ್ರಚಲಿತ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯೆ ನೀಡಿದರು. ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಶಾಸಕರು ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ದಾವಣಗೆರೆ ಉಪಚುನಾವಣೆ ಹಾಗೂ ಮುಸ್ಲಿಂ ಮುಖಂಡರ ನಡುವಿನ ಭಿನ್ನಾಭಿಪ್ರಾಯದ ಪ್ರಶ್ನೆಗೆ ಉತ್ತರಿಸಿದ ಅವರು, ಹೈಕಮಾಂಡ್ ಎಲ್ಲಾ ಬೆಳವಣಿಗೆಗಳನ್ನು ಗಮನಿಸುತ್ತಿದೆ ಎಂದು ಹೇಳಿದರು. ಈ ಹೇಳಿಕೆ ರಾಜ್ಯ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
    1
    ಬೆಂಗಳೂರು ಏರ್ಪೋರ್ಟ್‌ನಿಂದ ಹುಬ್ಬಳ್ಳಿಗೆ ತೆರಳುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಎಂಎಲ್ಸಿ ನಾಜಿರ್ ಅಹಮದ್ ರಾಜ್ಯ ರಾಜಕಾರಣದ ಪ್ರಚಲಿತ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯೆ ನೀಡಿದರು. ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಶಾಸಕರು ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ದಾವಣಗೆರೆ ಉಪಚುನಾವಣೆ ಹಾಗೂ ಮುಸ್ಲಿಂ ಮುಖಂಡರ ನಡುವಿನ ಭಿನ್ನಾಭಿಪ್ರಾಯದ ಪ್ರಶ್ನೆಗೆ ಉತ್ತರಿಸಿದ ಅವರು, ಹೈಕಮಾಂಡ್ ಎಲ್ಲಾ ಬೆಳವಣಿಗೆಗಳನ್ನು ಗಮನಿಸುತ್ತಿದೆ ಎಂದು ಹೇಳಿದರು. ಈ ಹೇಳಿಕೆ ರಾಜ್ಯ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    19 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.