Shuru
Apke Nagar Ki App…
Sharanugouda Patil
More news from ಕರ್ನಾಟಕ and nearby areas
- ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ದಲಿತ ಹಿತ ರಕ್ಷಣಾ ವೇದಿಕೆ ವತಿಯಿಂದ ಸಂವಿಧಾನ ಶಿಲ್ಪಿ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಭಾವಚಿತ್ರದ ಮೆರವಣಿಗೆ ನಗರದಲ್ಲಿ ಸಡಗರ ಸಂಭ್ರಮದಿಂದ ನಡೆಯಿತು. ಮೆರವಣಿಗೆಯಲ್ಲಿ ಡಿಜೆ ಹಾಡಿಗೆ ಯುವಕರು ಮಹಿಳೆಯರು, ಮಕ್ಕಳು ಕುಣಿದು ಕುಪ್ಪಳಿಸಿದರು.2
- ವಿಜಯಪುರ: ನಾನು ಸಾಯುವ ಒಳಗೆ ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು ವಿಜಯಪುರದಲ್ಲಿ ಬಿಜೆಪಿ ಹಿರಿಯ ಸಂಸದ ರಮೇಶ ಜಿಗಜಿಣಗಿ ಅವರು, ರಾಜ್ಯಕ್ಕೆ ದಲಿತ ಮುಖ್ಯಮಂತ್ರಿ ಆಗಬೇಕು ಎಂದು ಮೊಟ್ಟಮೊದಲು ಹೇಳಿದ್ದು ನಾನೇ ಎಂದು ಹೇಳಿದ್ದಾರೆ. ನಾಲ್ಕು ವರ್ಷಗಳ ಹಿಂದೆ ತಾವು ಈ ಹೇಳಿಕೆ ನೀಡಿದ್ದಾಗ ಕಾಂಗ್ರೆಸ್ ನಲ್ಲಿದ್ದ ದಲಿತರು ಈಗ ಎಚ್ಚೆತ್ತುಕೊಂಡು ತಮ್ಮ ಹಕ್ಕನ್ನು ಕೇಳುತ್ತಿದ್ದಾರೆ. ಅಂದು ಕೇಳಿದ್ದರೆ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಆಗುತ್ತಿದ್ದರು, ಆಗ ಪಕ್ಷ ಬೇರೆಯಾದರೂ ತಮ್ಮ ಸಮಾಜದವರು ಮುಖ್ಯಮಂತ್ರಿಯಾಗಿದ್ದಕ್ಕೆ ತಮಗೆಲ್ಲರಿಗೂ ಖುಷಿಯಾಗುತ್ತಿತ್ತು ಎಂದು ಅವರು ತಿಳಿಸಿದರು.1
- Post by @april14news1
- ಅಫಜಲಪೂರ : ತಾಲೂಕಿನಲ್ಲಿ ಈ ಬಾರಿ ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿಗಳ ಫಲಿತಾಂಶ ಉತ್ತಮವಾಗಿ ಹೊರಬಂದಿದ್ದು, ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ. ಕಲಾ ವಿಭಾಗದಲ್ಲಿ ಸರ್ಕಾರಿ ಕಾಲೇಜುಗಳಲ್ಲಿಯೇ ಅತ್ಯುತ್ತಮ ಫಲಿತಾಂಶವನ್ನು ಈ ಕಾಲೇಜು ದಾಖಲಿಸಿದ್ದು, ಭಾಗಣ್ಣ ಎಂಬ ವಿದ್ಯಾರ್ಥಿ ಶೇ. 97.16 ಅಂಕಗಳನ್ನು ಗಳಿಸಿ ಕಾಲೇಜಿಗೆ ಪ್ರಥಮ ಕೀರ್ತಿಯನ್ನು ತಂದಿದ್ದಾನೆ. ವಾಣಿಜ್ಯ ವಿಭಾಗದಲ್ಲಿ ಶೇ 85% ಫಲಿತಾಂಶ ಹಾಗೂ ವಿಜ್ಞಾನ ವಿಭಾಗದಲ್ಲಿಯೂ ಉತ್ತಮ ಸಾಧನೆ ಕಂಡುಬಂದಿದ್ದು, ಕುಮಾರಿ ಅಂಕಿತಾ ಅವರು ಶೇ. 82.33 ಅಂಕಗಳನ್ನು ಪಡೆದು ಪ್ರಥಮ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಯ ಹಿಂದೆ ಶಿಕ್ಷಕರ ಮಾರ್ಗದರ್ಶನ ಹಾಗೂ ವಿದ್ಯಾರ್ಥಿಗಳ ಶ್ರಮ ಪ್ರಮುಖ ಕಾರಣವಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಗುರುಲಿಂಗಯ್ಯ ಸಾಲಿಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.1
- Post by Mouli Varma1
- Post by Nava karnataka News channel1
- Post by Sharanugouda Patil1
- ಬಿಹಾರ ಮಾದರಿಯಲ್ಲಿ ರಕ್ತದ ಕೋಡಿ ಹರಿಸಿದ ಹಂತಕರು: ವಿಜಯಪುರದಲ್ಲಿ ಗುಂಡಿನ ಸದ್ದು | ವಿಜಯಪುರದಲ್ಲಿ ಮಾಜಿ ಗ್ರಾ.ಪಂ ಸದಸ್ಯ ರಾಜು ಖರೆ ಅವರ ಭೀಕರ ಹತ್ಯೆಯು ಇಡೀ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದ್ದು, ಬಿಹಾರ ಮಾದರಿಯ ಗುಂಡಿನ ದಾಳಿ ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಹಾಡಹಗಲೇ ನಡೆದ ಈ ರಕ್ತಪಾತದ ಹಿಂದೆ ರಾಜಕೀಯ ಹಗೆತನವಿದೆಯೇ ಅಥವಾ ಹಳೆಯ ದ್ವೇಷವಿದೆಯೇ ಎಂಬ ಶಂಕೆ ವ್ಯಕ್ತವಾಗುತ್ತಿದೆ.1
- Post by @april14news1