Shuru
Apke Nagar Ki App…
ಯುಪಿಎಸ್ಸಿ ಸಾಧಕನಿಗೆ ಸನ್ಮಾನಿಸಿದ ಶಾಸಕ ನಾರಾ ಭರತ್ ರೆಡ್ಡಿ ಬಳ್ಳಾರಿ, ಮಾ.11: ಪ್ರಸಕ್ತ ಸಾಲಿನ ಯುಪಿಎಸ್ಸಿ ಪರೀಕ್ಷೆಯಲ್ಲಿ 409ನೇ ರ್ಯಾಂಕ್ ಗಳಿಸಿ ಸಾಧನೆಗೈದ ನಗರದ ಸಿ.ಯಶ್ವಂತಕುಮಾರ್ ಅವರನ್ನು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಮಂಗಳವಾರ ಸನ್ಮಾನಿಸಿ, ಅಭಿನಂದಿಸಿದರು. ಪರೀಕ್ಷೆಯಲ್ಲಿ ಸಾಧನೆಗೈದಿರುವಂತೆ ಭಾರತೀಯ ಆಡಳಿತ ಸೇವೆಯಲ್ಲಿ ನಿಮಗೆ ಉತ್ತಮ ಹುದ್ದೆ ಸಿಗಲಿ, ನಿಮ್ಮಿಂದ ಜನರಿಗೆ ಹಾಗೂ ದೇಶಕ್ಕೆ ಒಳಿತಾಗಲಿ ಎಂದು ಹಾರೈಸಿದರು. ಈ ಸಂದರ್ಭ ಸಿ.ಯಶ್ವಂತಕುಮಾರ್ ಅವರ ತಂದೆ ತಾಯಿಯವರಿಗೂ ಶಾಸಕರು ಅಭಿನಂದಿಸಿದರು. ಪರಶುರಾಮುಡು, ಸಿದ್ಧೇಶ್ ಮೊದಲಾದವರು ಹಾಜರಿದ್ದರು.
Aslam Basha
ಯುಪಿಎಸ್ಸಿ ಸಾಧಕನಿಗೆ ಸನ್ಮಾನಿಸಿದ ಶಾಸಕ ನಾರಾ ಭರತ್ ರೆಡ್ಡಿ ಬಳ್ಳಾರಿ, ಮಾ.11: ಪ್ರಸಕ್ತ ಸಾಲಿನ ಯುಪಿಎಸ್ಸಿ ಪರೀಕ್ಷೆಯಲ್ಲಿ 409ನೇ ರ್ಯಾಂಕ್ ಗಳಿಸಿ ಸಾಧನೆಗೈದ ನಗರದ ಸಿ.ಯಶ್ವಂತಕುಮಾರ್ ಅವರನ್ನು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಮಂಗಳವಾರ ಸನ್ಮಾನಿಸಿ, ಅಭಿನಂದಿಸಿದರು. ಪರೀಕ್ಷೆಯಲ್ಲಿ ಸಾಧನೆಗೈದಿರುವಂತೆ ಭಾರತೀಯ ಆಡಳಿತ ಸೇವೆಯಲ್ಲಿ ನಿಮಗೆ ಉತ್ತಮ ಹುದ್ದೆ ಸಿಗಲಿ, ನಿಮ್ಮಿಂದ ಜನರಿಗೆ ಹಾಗೂ ದೇಶಕ್ಕೆ ಒಳಿತಾಗಲಿ ಎಂದು ಹಾರೈಸಿದರು. ಈ ಸಂದರ್ಭ ಸಿ.ಯಶ್ವಂತಕುಮಾರ್ ಅವರ ತಂದೆ ತಾಯಿಯವರಿಗೂ ಶಾಸಕರು ಅಭಿನಂದಿಸಿದರು. ಪರಶುರಾಮುಡು, ಸಿದ್ಧೇಶ್ ಮೊದಲಾದವರು ಹಾಜರಿದ್ದರು.
More news from Karnataka and nearby areas
- ಸಿರಗುಪ್ಪ ನಗರಸಭೆ ವ್ಯಾಪ್ತಿಯಲ್ಲಿ ಸರ್ಕಾರಿ ಜಮೀನುಗಳಿಗೆ ಕಾನೂನುಬಾಹಿರವಾಗಿ ನಮೂನೆ-3ಬಿ ಖಾತಾ ನೀಡಿರುವ ಬಗ್ಗೆ ಗಂಭೀರ ಆರೋಪ ಕೇಳಿಬಂದಿದೆ. ಸರ್ವೇ ನಂ.437/ಬಿ2ರಲ್ಲಿ ಉದ್ಯಾನವನಕ್ಕಾಗಿ ಕಾಯ್ದಿರಿಸಿದ್ದ 3.05 ಎಕರೆ ಜಾಗದಲ್ಲಿ ಒತ್ತುವರಿ ಮಾಡಿಕೊಂಡಿರುವವರಿಗೆ ಖಾತಾ ನೀಡಲಾಗಿದೆ ಎನ್ನಲಾಗಿದೆ. ಇದೇ ರೀತಿ ಸರ್ವೇ ನಂ.337ಎ ಹಾಗೂ 345ಬಿ/1 ಸರ್ಕಾರಿ ಹಳ್ಳ ಪರಂಬೋಕು ಜಮೀನುಗಳಿಗೂ ಖಾತಾ ನೀಡಿರುವ ಬಗ್ಗೆ ದೂರು ಸಲ್ಲಿಸಲಾಗಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಡಳಿತಕ್ಕೆ ಆಗ್ರಹಿಸಲಾಗಿದೆ.1
- ಸಂಬಂಧಪಟ್ಟ ಅಧಿಕಾರಿಗಳು ಆದಷ್ಟು ಬೇಗ ಸೇರ್ಪಡಿಸಬೇಕಾಗಿ ವಿನಂತಿ1
- Post by Welding Nizam Welding Nizam5
- ಚಳ್ಳಕೆರೆ: ತಾಲೂಕಿನ ಗೋಪನಹಳ್ಳಿ ಗ್ರಾಮದ ರೈತ ನಾಗರಾಜ್ ಅವರ ಬಣವೆಗೆ ಸೋಮವಾರ ಬೆಂಕಿ ಬಿದ್ದು ಮೇವು ಸಂಪೂರ್ಣವಾಗಿ ಸುಟ್ಟು ಹೋಗಿದ್ದ ಘಟನೆಗೆ ಸಂಬಂಧಿಸಿದಂತೆ ಜನಧ್ವನಿ ನ್ಯೂಸ್ ಪ್ರಕಟಿಸಿದ ವರದಿಗೆ ಉತ್ತಮ ಸ್ಪಂದನೆ ದೊರೆತಿದೆ. ವರದಿ ಬೆಳಕಿಗೆ ಬಂದ ಬೆನ್ನಲ್ಲೇ ಪಾವಗಡದ ಶ್ರೀರಾಮಕೃಷ್ಣ ಸೇವಾಶ್ರಮದ ಶ್ರೀ ಜಪಾನಂದ ಸ್ವಾಮೀಜಿ ಬುಧವಾರ ಗೋಪನಹಳ್ಳಿ ಗ್ರಾಮದ ರೈತ ನಾಗರಾಜ್ ಅವರಿಗೆ ಒಂದು ಲೋಡ್ ಭತ್ತದ ಮೇವನ್ನು ವಿತರಣೆ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಈ ವೇಳೆ ಮಾತನಾಡಿದ ಅವರು, ರೈತರು ಹಾಗೂ ಜಾನುವಾರುಗಳ ಪಾಲನೆ-ಪೋಷಣೆ ಮಾಡುವಲ್ಲಿ ಎದುರಿಸುವ ಕಷ್ಟಗಳನ್ನು ನಾನು ಚೆನ್ನಾಗಿ ಅರಿತಿದ್ದೇನೆ. ಗೋಪನಹಳ್ಳಿ ಗ್ರಾಮದ ರೈತ ನಾಗರಾಜ್ ಅವರ ಬಣವೆಗೆ ಬೆಂಕಿ ಬಿದ್ದು ಉಂಟಾದ ನಷ್ಟದ ಕುರಿತು ಜನಧ್ವನಿ ನ್ಯೂಸ್ ವರದಿ ನೋಡಿ ಮನಸ್ಸಿಗೆ ಬೇಸರವಾಯಿತು. ಆದ್ದರಿಂದ ರೈತನ ಜಾನುವಾರುಗಳಿಗೆ ನೆರವಾಗುವ ಉದ್ದೇಶದಿಂದ ಮೇವು ವಿತರಣೆ ಮಾಡಲಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮೇವು ನೆರವು ನೀಡಿದ ಶ್ರೀ ಜಪಾನಂದ ಸ್ವಾಮೀಜಿಗಳಿಗೆ ರೈತ ನಾಗರಾಜ್ ಕೃತಜ್ಞತೆ ಸಲ್ಲಿಸಿದರು.1
- 📱 ಪೊಲೀಸರು ನಿಮ್ಮ WhatsApp ಚಾಟ್ಗಳನ್ನು ನೋಡಬಹುದಾ? ಸಾಮಾನ್ಯವಾಗಿ: ❌ ಪೊಲೀಸರು ನಿಮ್ಮ WhatsApp ಚಾಟ್ಗಳನ್ನು ನೇರವಾಗಿ ನೋಡಲು ಸಾಧ್ಯವಿಲ್ಲ. ⚖️ ಯಾವಾಗ ನೋಡಬಹುದು? ನ್ಯಾಯಾಲಯದ ಆದೇಶ (Court Order) ಇದ್ದರೆ ತನಿಖೆ ನಡೆಯುತ್ತಿರುವ ಕ್ರಿಮಿನಲ್ ಪ್ರಕರಣದಲ್ಲಿ 📜 ಸಂಬಂಧಿತ ಕಾನೂನು Bharatiya Nagarik Suraksha Sanhita (BNSS) Section 94 ಪ್ರಕಾರ: ಪೊಲೀಸ್ ಅಧಿಕಾರಿಗಳು ತನಿಖೆಗೆ ಸಂಬಂಧಿಸಿದ ದಾಖಲೆಗಳು / ಡಿಜಿಟಲ್ ಸಾಧನಗಳನ್ನು (ಮೊಬೈಲ್, ಲ್ಯಾಪ್ಟಾಪ್ ಇತ್ಯಾದಿ) ಜಪ್ತಿ (Seize) ಮಾಡಬಹುದು. 🔍 ಆದರೆ ಮುಖ್ಯ ವಿಷಯ ಮೊಬೈಲ್ ಜಪ್ತಿ ಮಾಡಿದರೂ ಚಾಟ್ ಓದಲು ಕಾನೂನು ಪ್ರಕ್ರಿಯೆ ಅಗತ್ಯ. ಕೋರ್ಟ್ ಆದೇಶ ಅಥವಾ ಕಾನೂನುಬದ್ಧ ತನಿಖೆ ಇದ್ದಾಗ ಮಾತ್ರ ಪರಿಶೀಲಿಸಬಹುದು. ⚖️ ನಿಮ್ಮ ಹಕ್ಕು ನಿಮ್ಮ ಖಾಸಗಿ ಮಾಹಿತಿಗೆ (Privacy) ಕಾನೂನು ರಕ್ಷಣೆ ಇದೆ. ಪೊಲೀಸರು ಯಾವುದೇ ಕಾರಣವಿಲ್ಲದೆ ನಿಮ್ಮ ಫೋನ್ ಅಥವಾ ಚಾಟ್ ಪರಿಶೀಲಿಸಲು ಸಾಧ್ಯವಿಲ್ಲ.1
- ಚಿತ್ರದುರ್ಗ, ಬಿಸಿಲ ಝಳ-ಜನರಿಗೆ ತಂಪು ನೀರಿನ ವ್ಯವಸ್ಥೆ ಚಿತ್ರದುರ್ಗ ಜಿಲ್ಲೆ,ಮೊಳಕಾಲ್ಮೂರಲ್ಲಿ ಬಿಸಿಲಿನ ತಾಪಕ್ಕೆ ಜನ ಹೈರಾಣಾಗಿದ್ದು, ಜನರ ತಾಪ ತಣ್ಣಗಾಗಿಸಲು ಹಾನಗಲ್ ಗೆಳೆಯರ ಬಳಗದಿಂದ ಶುದ್ಧ ಹಾಗೂ ತಂಪು ನಿರಿನ ಅರವಟ್ಟಿಗೆ ನಿರ್ಮಿಸಿ ವಿನೂತನ ಪ್ರಯತ್ನ ಮಾಡಿದ್ದಾರೆ. ಮೊಳಕಾಲ್ಮೂರು ತಾಲೂಕಿನ ಹಾನಗಲ್ ಕ್ರಾಸ್ ನಲ್ಲಿ ಜನರ ತೃಷೆ ಇಂಗಿಸಲು ಹಾನಗಲ್ ಗೆಳೆಯರ ಬಳಗದಿಂದ ಅರಟಿಕೆ ನಿರ್ಮಾಣ ಮಾಡಿದ್ದಾರೆ. ತೆಂಗಿನ ಗರಿಗಳಿಂದ ಚಪ್ಪರ ಹಾಕಿ, ಮಣ್ಣಿನ ಮಡಿಕೆಗಳಲ್ಲಿ ತಂಪಾದ ಶುದ್ಧ ಕುಡಿಯುವ ನಿರನ್ನು ಇಟ್ಟಿದ್ದಾರೆ. ಮೊಳಕಾಲ್ಮೂರು ತಾಲೂಕು ಮೊದಲೇ ಹೆಚ್ವು ಬಿಸಿಲು ದಾಖಲಾಗೋದ್ರಿಂದ ಜನರ ಬಾಯಾರಿಕೆ ನೋಗಿಸಲು ಪ್ರತಿನಿತ್ಯ ಈ ಮಡಕೆಗಳಿಗೆ ಶುದ್ಧ ಕುಡಿಯುವ ನೀರನ್ನು ತುಂಬಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿದ್ದಾರೆ. ಮಹಿಳೆಯರು, ಮಕ್ಕಳು ಹಾಗೂ ವೃದ್ಧರಿಗೆ ಇದರಿಂದ ತುಂಬಾ ಸಹಾಯವಾಗಿದೆ. ಹಾನಗಲ್ ಗೆಳೆಯರ ಬಳಗದ ಈ ಪ್ರಯತ್ನಕ್ಕೆ ಸಾರ್ವಜನಿಕರು ಭೇಷ್ ಎಂದಿದ್ದಾರೆ....1
- ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಇಂದು ರಾಯಚೂರಿನಲ್ಲಿ ಬಂದ್ಗೆ ಕರೆ ನೀಡಲಾಗಿತ್ತು. ಈ ವೇಳೆ ನಗರದ ಅಂಬೇಡ್ಕರ್ ವೃತ್ತದಲ್ಲಿ ಬುಧವಾರ 1 ಗಂಟೆಗೆ ಪ್ರತಿಭಟನೆ ನಡೆಯುವ ಸಂದರ್ಭದಲ್ಲಿ ಜಹರಾಬಾದ್ ನಿವಾಸಿ ಭರತ್ ಎಂಬ ಯುವಕ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಯತ್ನಕ್ಕೆ ಮುಂದಾದನು. ಬೆಂಕಿ ಹಚ್ಚಿಕೊಳ್ಳಲು ಪ್ರಯತ್ನಿಸುತ್ತಿದ್ದಾಗ ಅಲ್ಲಿದ್ದ ಹೋರಾಟಗಾರರು ತಕ್ಷಣವೇ ಅವನನ್ನು ಹಿಡಿದು ತಡೆದರು. ನಂತರ ಗಾಯಗೊಂಡ ಯುವಕನನ್ನು ತಕ್ಷಣ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕಳುಹಿಸಿ ಚಿಕಿತ್ಸೆ ನೀಡಲಾಗಿದೆ. ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.1
- ಬಳ್ಳಾರಿ ನಗರದ 3ನೇ ವಾರ್ಡ್ ವ್ಯಾಪ್ತಿಯ ಮುಸ್ಲಿಂ ಖಬರಸ್ತಾನದ ಕಂಪೌಂಡ್ ನಿರ್ಮಾಣ ಹಾಗೂ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ನಾರಾ ಭರತ್ ರೆಡ್ಡಿ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಡ್ಡರಬಂಡೆ ಪ್ರದೇಶದಲ್ಲಿ ಶೀಘ್ರದಲ್ಲೇ ಶಾದಿ ಮಹಲ್ ಕಾಮಗಾರಿ ಆರಂಭವಾಗಲಿದೆ ಎಂದು ತಿಳಿಸಿದರು. ರಾಜ್ಯಸಭಾ ಸದಸ್ಯ ಡಾ. ಸಯ್ಯದ್ ನಾಸಿರ್ ಹುಸೇನ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಅವರ ಸಹಯೋಗದಲ್ಲಿ ನಗರದಲ್ಲಿ ಎರಡು ಶಾದಿ ಮಹಲ್ ನಿರ್ಮಾಣ ಮಾಡುವ ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು. ಬಡ ಕುಟುಂಬಗಳ ಮಕ್ಕಳ ಮದುವೆ ಕಾರ್ಯಕ್ರಮಗಳಿಗೆ ಶಾದಿ ಮಹಲ್ ಸಹಾಯಕವಾಗಲಿದೆ ಎಂದರು. ಇದೇ ವೇಳೆ ಈದ್ಗಾ ಮತ್ತು ಖಬರಸ್ತಾನದ ಸ್ವಚ್ಛತೆ ಹಾಗೂ ಹಸೀರಿಕರಣದಲ್ಲಿ ತೊಡಗಿದ್ದ ಯುವಕರ ಕಾರ್ಯವನ್ನು ಮೆಚ್ಚಿ ಯೂತ್ ರೆವಲ್ಯೂಷನ್ ತಂಡದ ಸದಸ್ಯರನ್ನು ಸನ್ಮಾನಿಸಿದರು.1