Shuru
Apke Nagar Ki App…
ಕರ್ನಾಟಕ ರಾಜ್ಯ ಸರ್ಕಾರದ ಆದೇಶದಂತೆ ಹಾಗೂ ಗೃಹ ಇಲಾಖೆಯ ಸಹಯೋಗದೊಂದಿಗೆ, ಶಿರಾ ನಗರ ಪೊಲೀಸ್ ಠಾಣೆಯು ಇಂದು ತಾಲೂಕಿನ ಬುಕ್ಕಾಪಟ್ಟಣ ಗ್ರಾಮದಲ್ಲಿ 'ಮನೆ ಮನೆ ಪೊಲೀಸ್' ಎಂಬ ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಪ್ರಾರಂಭಿಸಿದೆ. ಈ ಕಾರ್ಯಕ್ರಮವನ್ನು 'ಮನೆ ಮನೆ ಪೊಲೀಸ್ - ನಮ್ಮ ನಡೆ ಜಾಗೃತಿ ಕಡೆ' ಎಂಬ ಘೋಷವಾಕ್ಯದೊಂದಿಗೆ ಆರಂಭಿಸಲಾಗಿದೆ.
Prabha News digital
ಕರ್ನಾಟಕ ರಾಜ್ಯ ಸರ್ಕಾರದ ಆದೇಶದಂತೆ ಹಾಗೂ ಗೃಹ ಇಲಾಖೆಯ ಸಹಯೋಗದೊಂದಿಗೆ, ಶಿರಾ ನಗರ ಪೊಲೀಸ್ ಠಾಣೆಯು ಇಂದು ತಾಲೂಕಿನ ಬುಕ್ಕಾಪಟ್ಟಣ ಗ್ರಾಮದಲ್ಲಿ 'ಮನೆ ಮನೆ ಪೊಲೀಸ್' ಎಂಬ ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಪ್ರಾರಂಭಿಸಿದೆ. ಈ ಕಾರ್ಯಕ್ರಮವನ್ನು 'ಮನೆ ಮನೆ ಪೊಲೀಸ್ - ನಮ್ಮ ನಡೆ ಜಾಗೃತಿ ಕಡೆ' ಎಂಬ ಘೋಷವಾಕ್ಯದೊಂದಿಗೆ ಆರಂಭಿಸಲಾಗಿದೆ.
More news from ಕರ್ನಾಟಕ and nearby areas
- ತುಮಕೂರು ಜಿಲ್ಲೆಯ ತುರುವೇಕೆರೆ ಪಟ್ಟಣದಲ್ಲಿ ರಾಜ್ಯ ಪೊಲೀಸ್ ಗೃಹಮಂಡಳಿಯಿಂದ ನಿರ್ಮಿಸಲಾಗುತ್ತಿರುವ ಪೊಲೀಸ್ ಸಿಬ್ಬಂದಿಗಳ ವಸತಿ ಗೃಹಗಳ ಕಾಮಗಾರಿ ತೀರಾ ಕಳಪೆಯಾಗಿದೆ ಎಂದು ರಾಜ್ಯ ರೈತಸಂಘ ಹಾಗೂ ಹಸಿರುಸೇನೆಯ ತಾಲ್ಲೂಕು ಅಧ್ಯಕ್ಷ ಕಣಕೂರು ಚಂದ್ರಶೇಖರ್ ಮತ್ತು ಡಿ.ಎಸ್.ಎಸ್ ತಾಲ್ಲೂಕು ಸಂಚಾಲಕ ಕೃಷ್ಣ ಮಾದಿಗ ಗಂಭೀರ ಆರೋಪ ಮಾಡಿದ್ದಾರೆ. ಕಾಮಗಾರಿಯನ್ನು ಪರಿಶೀಲಿಸಿದ ಕಣಕೂರು ಚಂದ್ರಶೇಖರ್ ಅವರು, ಕಟ್ಟಡದ ಎಸ್ಟಿಮೇಟ್ ಕೇಳಿದರೆ ಎಸ್.ಪಿ. ಕಚೇರಿಯಲ್ಲಿದೆ ಎಂದು ಸಬೂಬು ಹೇಳಲಾಗುತ್ತಿದೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಇಡಬಹುದಾಗಿದ್ದ ದಾಖಲೆಗಳನ್ನು ಎಸ್.ಪಿ. ಕಚೇರಿಯಲ್ಲೇಕೆ ರಕ್ಷಣೆ ನೀಡಬೇಕು ಎಂದು ಪ್ರಶ್ನಿಸಿದ್ದಾರೆ. ಸೈಟ್ ಎಂಜಿನಿಯರ್ ಬಳಿ ಯಾವುದೇ ದಾಖಲಾತಿಗಳಿಲ್ಲ, ಇಲ್ಲಿ ಕೇಳುವವರಿಲ್ಲ ಹೇಳುವವರಿಲ್ಲ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಚರಂಡಿ ತೆಗೆದ ಮಣ್ಣನ್ನು ತಂದು ತುಂಬಿಸಲಾಗಿದೆ ಮತ್ತು ಕಲ್ಲಿನಿಂದ ಕಟ್ಟಬೇಕಾದ ಅಡಿಪಾಯವನ್ನು ಸಿಮೆಂಟ್ ಇಟ್ಟಿಗೆಗಳಿಂದ ಕಟ್ಟಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ನಮ್ಮ ಅಧಿಕಾರಿಗಳು ವಾಸಿಸುವ ಸ್ಥಳ ಸುರಕ್ಷಿತವಾಗಿರಬೇಕು ಎಂಬುದು ನಮ್ಮ ಕರ್ತವ್ಯ ಎಂದು ಅವರು ಒತ್ತಿಹೇಳಿದರು. ಡಿ.ಎಸ್.ಎಸ್ ತಾಲ್ಲೂಕು ಸಂಚಾಲಕ ಕೃಷ್ಣ ಮಾದಿಗ ಮಾತನಾಡಿ, ಕಾಮಗಾರಿಯ ಉಸ್ತುವಾರಿ ವಹಿಸಿಕೊಂಡವರು ಯಾವುದೇ ಎಸ್ಟಿಮೇಟ್ ನೋಡಲು ಅವಕಾಶ ನೀಡುತ್ತಿಲ್ಲ, ಇದು ಅನುಮಾನಕ್ಕೆ ಎಡೆಮಾಡಿಕೊಡುತ್ತದೆ ಎಂದರು. ಕಟ್ಟಡಕ್ಕೆ ತುಂಬಿರುವ ಮಣ್ಣು ಸಹ ಕಳಪೆಯಾಗಿದ್ದು, ಅದರಲ್ಲಿ ಕಸಕಡ್ಡಿ, ಪ್ಲಾಸ್ಟಿಕ್ ತ್ಯಾಜ್ಯ ಮತ್ತು ಬಟ್ಟೆಗಳ ತುಂಡುಗಳಿವೆ. ಇದರಿಂದ ಕಟ್ಟಡ ಯಾವುದೇ ಕಾರಣಕ್ಕೂ ಬಾಳಿಕೆ ಬರುವುದಿಲ್ಲ. ಇದರಲ್ಲಿ ಕೆಲವು ಅಧಿಕಾರಿಗಳು ಭ್ರಷ್ಟಾಚಾರ ಎಸಗಿರುವ ಅನುಮಾನಗಳೂ ಇವೆ ಎಂದು ಅವರು ದೂರಿದ್ದಾರೆ. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಬಂದು ಪರಿಶೀಲಿಸುವವರೆಗೂ ಕಾಮಗಾರಿಯನ್ನು ನಿಲ್ಲಿಸಬೇಕು ಎಂದು ಆಗ್ರಹಿಸಲಾಗಿದ್ದು, ಸರ್ಕಾರದ ಅನುಮೋದನೆಯಂತೆ ಕಾಮಗಾರಿ ನಡೆಯಬೇಕು ಎಂದು ಆಗ್ರಹಿಸಲಾಗಿದೆ. ಅಧಿಕಾರಿಗಳು ಪರಿಶೀಲಿಸಿ ಕಾಮಗಾರಿ ಕಳಪೆಯಾಗಿದ್ದರೆ ಗುತ್ತಿಗೆದಾರನನ್ನು ಕಪ್ಪುಪಟ್ಟಿಗೆ ಸೇರಿಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ. ಇದೇ ರೀತಿ ಅಕ್ರಮಗಳು ಮುಂದುವರಿದರೆ, ಮುಂದಿನ ದಿನಗಳಲ್ಲಿ ರಾಜ್ಯ ರೈತಸಂಘ, ದಲಿತ ಸಂಘರ್ಷ ಸಮಿತಿ ಹಾಗೂ ಪ್ರಗತಿಪರ ಸಂಘಟನೆಗಳ ಜೊತೆಗೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.4
- ರಾಜ್ಯಾಧ್ಯಕ್ಷರಾದ ಹೆಚ್ ಎಂ ರೇವಣ್ಣ ಅವರು ಚಿತ್ರದುರ್ಗದ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾದೀಕಾರದ ಕಚೇರಿಗೆ ಭೇಟಿ ನೀಡಿದ್ದಾರೆ. ಬುಧವಾರ ಮಧ್ಯಾಹ್ನ 12.15 ಕ್ಕೆ ಕಚೇರಿಗೆ ಭೇಟಿ ನೀಡಿದ ಹೆಚ್ ಎಂ ರೇವಣ್ಣ ಅವರು ಪರಿಶೀಲನೆ ನಡೆಸಿದರು. ಇದೇ ವೇಳೆ, ಕಾಂಗ್ರೆಸ್ ಹಾಗೂ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾದೀಕಾರದ ವತಿಯಿಂದ ಹೆಚ್ ಎಂ ರೇವಣ್ಣ ಅವರನ್ನು ಸನ್ಮಾನಿಸಿ ಶುಭಕೋರಲಾಯಿತು.1
- ಚಳ್ಳಕೆರೆ: ಆಧುನಿಕ ಭಗೀರಥ ಎಂದು ಖ್ಯಾತಿ ಪಡೆದಿರುವ ಮತ್ತು ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಮೂಲಕ ಅದನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸಿದ ಶಾಸಕ ಟಿ. ರಘುಮೂರ್ತಿ ಅವರಿಗೆ ಈ ಬಾರಿಯಾದರೂ ಸಚಿವ ಸ್ಥಾನ ನೀಡಬೇಕು ಎಂದು ಈಡಿಗ ಸಮುದಾಯದ ಮುಖಂಡ ಹಾಗೂ ನಗರಸಭೆ ಸ್ಥಾಯಿಸಮಿತಿ ಮಾಜಿ ಅಧ್ಯಕ್ಷ ಟಿ. ಮಲ್ಲಿಕಾರ್ಜುನ ಒತ್ತಾಯಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ, ಶಾಸಕ ರಘುಮೂರ್ತಿ ಅವರು ಕ್ಷೇತ್ರದಿಂದ ಮೂರು ಬಾರಿ ಗೆಲುವು ಸಾಧಿಸಿ ಅಭಿವೃದ್ಧಿ ಹರಿಕಾರರಾಗಿದ್ದಾರೆ. ಅವರು ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳನ್ನು ಇಡೀ ರಾಜ್ಯವೇ ಗಮನಿಸುತ್ತಿದೆ. ಅವರಲ್ಲಿ ಇನ್ನಷ್ಟು ಅಭಿವೃದ್ಧಿ ಯೋಜನೆಗಳಿದ್ದು, ಮಂತ್ರಿ ಸ್ಥಾನ ನೀಡಿದರೆ ಅವುಗಳನ್ನು ಸಾಕಾರಗೊಳಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. ಈ ಹಿನ್ನೆಲೆಯಲ್ಲಿ, ತಮ್ಮ ಈಡಿಗ ಸಮುದಾಯದ ವತಿಯಿಂದ ಶಾಸಕ ಟಿ. ರಘುಮೂರ್ತಿ ಅವರಿಗೆ ಮಂತ್ರಿ ಸ್ಥಾನವನ್ನು ಕೊಡಲೇಬೇಕು ಎಂದು ಮಲ್ಲಿಕಾರ್ಜುನ ತೀವ್ರವಾಗಿ ಒತ್ತಾಯಿಸಿದ್ದಾರೆ.1
- ರೌಡಿ ಮಂಜುನಾಥ್ ಎಂಬಾತ ಇಬ್ಬರ ಮೇಲೆ ಹಲ್ಲೆ ನಡೆಸಿದ್ದಾನೆ. ಈ ಘಟನೆಯಲ್ಲಿ ಆತ ದಾಂದಲೆ ಸೃಷ್ಟಿಸಿದ್ದು, ಇದರ ಜೊತೆಗೆ ಪೊಲೀಸರಿಗೂ ಅವಾಜ್ ಹಾಕಿರುವ ಸಂಗತಿ ತಿಳಿದುಬಂದಿದೆ.1
- ರಾಜ್ಯದ MBBS ಪದವೀಧರರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಸಿಹಿಸುದ್ದಿ ದೊರೆತಿದೆ. ರಾಜ್ಯದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ (PHC) ಸೇವೆ ಸಲ್ಲಿಸಲು ಇಚ್ಛಿಸುವ ವೈದ್ಯರಿಗೆ ನೇರ ನೇಮಕಾತಿ ಅವಕಾಶ ಕಲ್ಪಿಸಲಾಗಿದೆ. ಇದು ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಸೇವೆಗಳನ್ನು ಬಲಪಡಿಸಲು ಸರ್ಕಾರ ಕೈಗೊಂಡ ಮಹತ್ವದ ನಿರ್ಧಾರವಾಗಿದೆ. ನೇಮಕಾತಿ ಪ್ರಕ್ರಿಯೆಯನ್ನು ಸರಳಗೊಳಿಸಲಾಗಿದ್ದು, ಆಸಕ್ತ ವೈದ್ಯರು ನೇರವಾಗಿ DHO (ಜಿಲ್ಲಾ ಆರೋಗ್ಯ ಅಧಿಕಾರಿ) ಕಚೇರಿಗೆ ಅರ್ಜಿ ಸಲ್ಲಿಸಬಹುದು. ವಾಕ್-ಇನ್ ಇಂಟರ್ವ್ಯೂ ಮೂಲಕ ನೇಮಕಾತಿ ನಡೆಯಲಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ವಾರದೊಳಗೆ ಉದ್ಯೋಗ ದೊರೆಯಲಿದೆ. ಅಲ್ಲದೆ, ಈ ಪ್ರಕ್ರಿಯೆಯಲ್ಲಿ ಯಾವುದೇ ವಿಳಂಬ ಮಾಡಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿಯೂ ಸರ್ಕಾರ ಎಚ್ಚರಿಕೆ ನೀಡಿದೆ.1
- ಚಳ್ಳಕೆರೆ ನಗರದ ತರಕಾರಿ ಮಾರುಕಟ್ಟೆಯಲ್ಲಿ ನಿಂತ ನೀರು ಸೊಳ್ಳೆಗಳ ತಾಣವಾಗಿ ಮಾರ್ಪಟ್ಟಿದೆ. ಈ ಪರಿಸ್ಥಿತಿಯಿಂದಾಗಿ, ಮಾರುಕಟ್ಟೆಯಲ್ಲಿ ವ್ಯಾಪಾರ ಮಾಡುವ ತರಕಾರಿ ಮಾರಾಟಗಾರರು ಅನಾರೋಗ್ಯಕ್ಕೆ ಒಳಗಾಗುವ ಭೀತಿಯಲ್ಲಿದ್ದಾರೆ.1
- ಕರ್ನಾಟಕ ರಾಜ್ಯ ಸರ್ಕಾರದ ಆದೇಶದಂತೆ ಹಾಗೂ ಗೃಹ ಇಲಾಖೆಯ ಸಹಯೋಗದೊಂದಿಗೆ, ಶಿರಾ ನಗರ ಪೊಲೀಸ್ ಠಾಣೆಯು ಇಂದು ತಾಲೂಕಿನ ಬುಕ್ಕಾಪಟ್ಟಣ ಗ್ರಾಮದಲ್ಲಿ 'ಮನೆ ಮನೆ ಪೊಲೀಸ್' ಎಂಬ ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಪ್ರಾರಂಭಿಸಿದೆ. ಈ ಕಾರ್ಯಕ್ರಮವನ್ನು 'ಮನೆ ಮನೆ ಪೊಲೀಸ್ - ನಮ್ಮ ನಡೆ ಜಾಗೃತಿ ಕಡೆ' ಎಂಬ ಘೋಷವಾಕ್ಯದೊಂದಿಗೆ ಆರಂಭಿಸಲಾಗಿದೆ.1