Shuru
Apke Nagar Ki App…
YADGIR NEWS||6 ತಾಲ್ಲೂಕು ಬರಪೀಡಿತ ಘೋಷಣೆ..! ಸರ್ವ ಸಂಘಟನೆಗಳ ಹೋರಾಟಕ್ಕೆ ಫಲ: ಹರ್ಷ ವ್ಯಕ್ತಪಡಿಸಿದ ಆಶೋಕ್ ಐಕೂರು ಯಾದಗಿರಿ: ಜಿಲ್ಲೆಯ ಆರು ತಾಲೂಕುಗಳ ಪೈಕಿ ಶಹಾಪುರ ತಾಲೂಕನ್ನು ಮಾತ್ರ ಬರಪೀಡಿತ ಎಂದು ಘೋಷಿಸಲಾಗಿತ್ತು. ಉಳಿದ ಐದು ತಾಲೂಕುಗಳ ರೈತರೂ ಸಂಕಷ್ಟದಲ್ಲಿದ್ದು, ಇಡೀ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಬೇಕೆಂದು ಸರ್ವ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಹೋರಾಟ ನಡೆಸಲಾಗಿತ್ತು. ಸೆ.16ರಂದು ಯಾದಗಿರಿ ಬಂದ್ಗೂ ಕರೆ ನೀಡಲಾಗಿತ್ತು. ಹೋರಾಟದ ಫಲವಾಗಿ ರಾಜ್ಯ ಸರ್ಕಾರ ಯಾದಗಿರಿ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಿರುವುದು ರೈತರಿಗೆ ಪರಿಹಾರ ನೀಡಿದಂತಾಗಿದೆ ಎಂದು ವರ್ತೂರು ಪ್ರಕಾಶ್ ಯುವ ಘರ್ಜನೆ ಜಿಲ್ಲಾಧ್ಯಕ್ಷ ಆಶೋಕ್ ಐಕೂರು ಹರ್ಷ ವ್ಯಕ್ತಪಡಿಸಿದರು. ಘೋಷಣೆ ಕೇವಲ ಕಾಗದಕ್ಕೆ ಸೀಮಿತವಾಗದೆ, ಆರು ತಾಲೂಕುಗಳ ರೈತರಿಗೆ ಅಗತ್ಯ ನೆರವು ಹಾಗೂ ಪರಿಹಾರ ಕಲ್ಪಿಸಬೇಕು. ಹೋರಾಟಕ್ಕೆ ಬೆಂಬಲ ನೀಡಿದ ಸಂಘಟನೆಗಳು, ಪತ್ರಕರ್ತರು, ಮಾಧ್ಯಮದವರು, ಕಾರ್ಮಿಕರು ಹಾಗೂ ವ್ಯಾಪಾರಸ್ಥರಿಗೆ ಅವರು ಕೃತಜ್ಞತೆ ಸಲ್ಲಿಸಿದರು.
ಪೃಥ್ವಿ ಮಾಧ್ಯಮ
YADGIR NEWS||6 ತಾಲ್ಲೂಕು ಬರಪೀಡಿತ ಘೋಷಣೆ..! ಸರ್ವ ಸಂಘಟನೆಗಳ ಹೋರಾಟಕ್ಕೆ ಫಲ: ಹರ್ಷ ವ್ಯಕ್ತಪಡಿಸಿದ ಆಶೋಕ್ ಐಕೂರು ಯಾದಗಿರಿ: ಜಿಲ್ಲೆಯ ಆರು ತಾಲೂಕುಗಳ ಪೈಕಿ ಶಹಾಪುರ ತಾಲೂಕನ್ನು ಮಾತ್ರ ಬರಪೀಡಿತ ಎಂದು ಘೋಷಿಸಲಾಗಿತ್ತು. ಉಳಿದ ಐದು ತಾಲೂಕುಗಳ ರೈತರೂ ಸಂಕಷ್ಟದಲ್ಲಿದ್ದು, ಇಡೀ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಬೇಕೆಂದು ಸರ್ವ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಹೋರಾಟ ನಡೆಸಲಾಗಿತ್ತು. ಸೆ.16ರಂದು ಯಾದಗಿರಿ ಬಂದ್ಗೂ ಕರೆ ನೀಡಲಾಗಿತ್ತು. ಹೋರಾಟದ ಫಲವಾಗಿ ರಾಜ್ಯ ಸರ್ಕಾರ ಯಾದಗಿರಿ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಿರುವುದು ರೈತರಿಗೆ ಪರಿಹಾರ ನೀಡಿದಂತಾಗಿದೆ ಎಂದು ವರ್ತೂರು ಪ್ರಕಾಶ್ ಯುವ ಘರ್ಜನೆ ಜಿಲ್ಲಾಧ್ಯಕ್ಷ ಆಶೋಕ್ ಐಕೂರು ಹರ್ಷ ವ್ಯಕ್ತಪಡಿಸಿದರು. ಘೋಷಣೆ ಕೇವಲ ಕಾಗದಕ್ಕೆ ಸೀಮಿತವಾಗದೆ, ಆರು ತಾಲೂಕುಗಳ ರೈತರಿಗೆ ಅಗತ್ಯ ನೆರವು ಹಾಗೂ ಪರಿಹಾರ ಕಲ್ಪಿಸಬೇಕು. ಹೋರಾಟಕ್ಕೆ ಬೆಂಬಲ ನೀಡಿದ ಸಂಘಟನೆಗಳು, ಪತ್ರಕರ್ತರು, ಮಾಧ್ಯಮದವರು, ಕಾರ್ಮಿಕರು ಹಾಗೂ ವ್ಯಾಪಾರಸ್ಥರಿಗೆ ಅವರು ಕೃತಜ್ಞತೆ ಸಲ್ಲಿಸಿದರು.
More news from ಕರ್ನಾಟಕ and nearby areas
- ಯಾದಗಿರಿ ತಾಲೂಕಿನ ತಹಸಿಲ್ ಕಚೇರಿಯಲ್ಲಿ ಆಧಾರ್ ಕಾರ್ಡ್ ಅಪ್ಲೋಡ್ ಮತ್ತು ರೇಷನ್ ಕಾರ್ಡ್ ಕೆವೈಸಿ ಮಾಡಲು ಬೆಂಗಳೂರಿನಿಂದ ಆಗಮಿಸಿ ಒಳಗಡೆ ಕರ್ನಾಟಕ 1 ನಲ್ಲಿ ಬೆಳಗ್ಗೆ 3:00 ಯಿಂದ ಯಾದಗಿರಿಯ ತಾಲೂಕಿನ ಕಚೇರಿಯ ಒಳಗಡೆ ಜನ ಜಾತ್ರೆ ಆಗಿದೆ ಬೆಂಗಳೂರಿನಲ್ಲಿ ಬಂದು ಲೈನ್ ಅಲ್ಲಿ ನಿಂತುಕೊಂಡು ಆದರೂ ಕೂಡ ಸರಿಯಾಗಿ ನೆಟ್ವರ್ಕ್ ಇಲ್ಲ ಮತ್ತು ಜನರು ಕಿತ್ತಿ ಹಾಡುತ್ತಿದ್ದರೆ ಜಿಲ್ಲೆಯ 16 ವರ್ಷ ಆದರೂ ಕೂಡ ಜಿಲ್ಲಾ ಆಡಳಿತ ಇದನ್ನು ಗಮನಿಸಿ ಸರಿಪಡಿಸಬೇಕು ಈಗಾಗಲೇ ಯಾತಗಿರಿ ಜಿಲ್ಲೆಯ ಬರಗಲ ಆಗಿದೆ ಬೆಳೆ ಇಲ್ಲದ ಕಾರಣ ರೈತರು ಸಾಲ ಮಾಡಿ ಬೆಂಗಳೂರಿನಲ್ಲಿ ದುಡಿ ದುಡಿಯುತ್ತಾ ಇದ್ದರೂ ಕೂಡ ಈ ಕೆವೈಸಿ ರೇಷನ್ ಕಾರ್ಡ್ ಸಲುವಾಗಿ ಜಿಲ್ಲೆಗೆ ಆಗಮಿಸಿ ತಿದ್ದು ಇದನ್ನು ಬಹಳ ರೈತರು ಕೂಲಿ ಕಾರ್ಮಿಕರು ಕೆಲಸ ಬಿಟ್ಟು ಬೆಳಗ್ಗೆ ಮೂರು ಗಂಟೆಯಿಂದ ಸಾಲಗಿ ನಿಲ್ಲುತ್ತದೆ ಇದು ಯಾವ ಶಾಪ ರೈತರ ಗೋಳು ವರು ಯಾರು ಇಲ್ಲ ಸರ್ಕಾರವೇ ಕಣ್ಣು ಮುಚ್ಚಿ ಕುಂತಿದೆ ಜನ ಆಕ್ರೋಶ1
- YADGIR NEWS||ನೀರು ಬೇಕಾಗಿದೆ, ನೀರು ಬಿಡಿ||ಅನ್ನದಾತರ ಭಜನೆ ಮುಖಾಂತರ|| ಜಿಲ್ಲಾಧಿಕಾರಿ ಕಚೇರಿ ಮುಂದೆ ಅಹೋರಾತ್ರಿ ಹೋರಾಟ..! ಯಾದಗಿರಿ: ರಾಜ್ಯದಲ್ಲಿ ಆವರಿಸಿರುವ ಭೀಕರ ಬರದ ಹಿನ್ನೆಲೆಯಲ್ಲಿ ಬತ್ತಿಹೋದ ಕೆರೆಗಳಿಗೆ ನೀರು ಹರಿಸಿ ಭರ್ತಿ ಮಾಡುವಂತೆ ಆಗ್ರಹಿಸಿ ರೈತರು ಜಿಲ್ಲಾಧಿಕಾರಿ ಕಚೇರಿ ಎದುರು ಅಹೋರಾತ್ರಿ ಹೋರಾಟ ನಡೆಸಿದರು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಬೆಂಬಲದೊಂದಿಗೆ ನಡೆದ ಪ್ರತಿಭಟನೆಯಲ್ಲಿ ರೈತರು ಭಜನೆ ಮಾಡುವ ಮೂಲಕ ವಿನೂತನವಾಗಿ ಆಕ್ರೋಶ ವ್ಯಕ್ತಪಡಿಸಿದರು. ಬದ್ದೆಪಲ್ಲಿ ಹಾಗೂ ಮಲ್ಕಪನಳ್ಳಿ ಕೆರೆಗಳಿಗೆ ಏತ ನೀರಾವರಿ ಯೋಜನೆಯ ಮೂಲಕ ನೀರು ಹರಿಸಿ ಭರ್ತಿ ಮಾಡಬೇಕು ಎಂದು ಒತ್ತಾಯಿಸಿದರು. ಕೆಬಿಜೆಎನ್ಎಲ್ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕೆರೆಗಳು ಸಮರ್ಪಕವಾಗಿ ತುಂಬಿಲ್ಲ ಎಂದು ಆರೋಪಿಸಿದರು. ಮಳೆ ಕೈಕೊಟ್ಟ ಪರಿಣಾಮ ಕೆರೆಗಳು ಸಂಪೂರ್ಣ ಬತ್ತಿಹೋಗಿದ್ದು, ಕೆರೆ ನೀರನ್ನು ನಂಬಿ ಬೆಳೆ ಹಾಕಿದ್ದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆ ಹಾಗೂ ಜಾನುವಾರುಗಳಿಗಾಗಿ ತಕ್ಷಣ ನೀರು ಹರಿಸಬೇಕು ಎಂದು ಆಗ್ರಹಿಸಿದ ರೈತರು, “ನೀರು ಬೇಕಾಗಿದೆ, ನೀರು ಬಿಡಿ” ಎಂದು ಭಜನೆ ಮಾಡಿ ಪ್ರತಿಭಟಿಸಿದರು. ಕೆರೆಗಳು ತುಂಬುವವರೆಗೆ ಹೋರಾಟ ಕೈಬಿಡುವುದಿಲ್ಲ ಎಂದು ಎಚ್ಚರಿಸಿದರು.1
- ತಾಲೂಕಾ ಮಟ್ಟದ ಪದವಿ ಪೂರ್ವ ಕಾಲೇಜು ಕ್ರೀಡಾಕೂಟ, ಪೈನಲ್ ವಾಲಿಬಾಲ್ ಪಂದ್ಯ ಪ್ರಗತಿ ಕಾಲೇಜು ರೋಚಕ ಜಯ ಪಟ್ಟಣದ ಜವಹಾರಲಾಲ್ ನೆಹರು ಕ್ರೀಡಾಂಗಣದಲ್ಲಿ ಬುಧವಾರ ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಯಾದಗಿರಿ ಹಾಗೂ ಪ್ರಗತಿ ಪದವಿ ಪೂರ್ವ ಕಾಲೇಜು ಗುರುಮಠಕಲ್ ಇವರ ಸಂಯುಕ್ತಾಶ್ರಯದಲ್ಲಿ ತಾಲೂಕ ಮಟ್ಟದ ಪದವಿ ಪೂರ್ವ ಕ್ರೀಡಾಕೂಟದಲ್ಲಿ ಪೈನಲ್ ವಾಲಿಬಾಲ್ ಪಂದ್ಯ ಪ್ರಗತಿ vs ಎಸ್.ವಿ ಪದವಿ ಪೂರ್ವ ಕಾಲೇಜು ಗುರುಮಠಕಲ್, ಬಾಲಕರ ಪ್ರಗತಿ ಪದವಿ ಪೂರ್ವ ಕಾಲೆಜು ಜಯ1
- ನಾಳೆ ಅದ್ಧೂರಿ ಪ್ರಶಸ್ತಿ ಪ್ರದಾನ — ಎಂ.ಯಲ್ಲಪ್ಪ ಮರಾಠಗೆ ಶಿಕ್ಷಕ ರತ್ನ ಗೌರವ ನಾಳೆ ಅದ್ಧೂರಿ ಪ್ರಶಸ್ತಿ ಪ್ರದಾನ — ಎಂ.ಯಲ್ಲಪ್ಪ ಮರಾಠಗೆ ಶಿಕ್ಷಕ ರತ್ನ ಗೌರವ1
- ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವ- ಸಿಎಂ ಡಿಕೆಶಿ ಯಿಂದ ಧ್ವಜಾರೋಹಣ ಕಲಬುರಗಿ-ಕಲ್ಯಾಣ ಕರ್ನಾಟಕ 79 ನೇ ಉತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರಿಂದ ಧ್ವಜಾರೋಹಣ ನೆರವೇರಿಸಲಾಯಿತು. ಕಲಬುರಗಿಯ ಪೊಲೀಸ್ ಪರೇಡ್ ಮೈದಾನದಲ್ಲಿ ರಾಷ್ಟ್ರೀಯ ಧ್ವಜಾರೋಹಣ ಮಾಡಲಾಯಿತು. ಸಚಿವ ಪ್ರೀಯಾಂಕ್ ಖರ್ಗೆ ಸೇರಿ ಶಾಸಕರು,ಪರಿಷತ್ ಸದಸ್ಯರು, ಅಧಿಕಾರಿಗಳು ಸಾಥ್ ನೀಡಲಾಗಿತು. ಧ್ವಜಾರೋಹಣ ಬಳಿಕ ತೆರೆದ ವಾಹನದಲ್ಲಿ ಪೊಲೀಸ್ ಪೆರೇಡ್ ವೀಕ್ಷಿಸಿದರು1
- ಮುಖ್ಯಮಂತ್ರಿ ಡಿಕೆ ಶಿವಕುಮಾರರಿಗೆ ನಾಸಿಕ ಡೋಲ್ ಬಾರಿಸುವುದರೊಂದಿಗೆ ಸ್ವಾಗತ ಮುಖ್ಯಮಂತ್ರಿ ಡಿಕೆ ಶಿವಕುಮಾರರಿಗೆ ನಾಸಿಕ ಡೋಲ್ ಬಾರಿಸುವುದರೊಂದಿಗೆ ಸ್ವಾಗತ1
- ಕಲ್ಯಾಣ ಕರ್ನಾಟಕ ಅಭಿವೃದ್ಧಿ ಯಾವಾಗ? ಸಾಮಾಜಿಕ ಹೋರಾಟಗಾರ ವಿರುಪಾಕ್ಷಿ ಮಾಲಿಪಾಟೀಲ್ ಯಾದಗಿರಿ: ಸೆಪ್ಟೆಂಬರ್ 17 "ಕಲ್ಯಾಣ ಕರ್ನಾಟಕ ವಿಮೋಚನ ದಿನ" ಇದು ಕೇವಲ ಒಂದು ದಿನಾಂಕವಲ್ಲ. ನಮ್ಮ ನೆಲದ ನೋವು, ನಮ್ಮ ಜನರ ಹೋರಾಟ, ನಮ್ಮ ಹಿರಿಯರ ತ್ಯಾಗ ಮತ್ತು ನಮ್ಮ ಸ್ವಾಭಿಮಾನದ ವಿಜಯಗಾಥೆಯನ್ನು ನೆನಪಿಸುವ ಪವಿತ್ರ ದಿನವಾಗಿದೆ. ತಲೆಮಾರುಗಳ ಸಂಕಷ್ಟವನ್ನು ಹೊತ್ತುಕೊಂಡು, ಅನ್ಯಾಯದ ವಿರುದ್ಧ ಧ್ವನಿ ಎತ್ತಿ, ತಮ್ಮ ಬದುಕನ್ನೇ ಹೋರಾಟಕ್ಕೆ ಸಮರ್ಪಿಸಿದ ಅಸಂಖ್ಯಾತ ಹೋರಾಟಗಾರರ ತ್ಯಾಗದ ಫಲವೇ ನಮ್ಮ ಈ ವಿಮೋಚನೆ. ಅವರ ತ್ಯಾಗವನ್ನು ನೆನಪಿಸಿಕೊಂಡಾಗ ಕಣ್ಣುಗಳು ತೇವವಾಗುತ್ತವೆ. ಆದರೆ, ಅದೇ ಕ್ಷಣದಲ್ಲಿ ಹೃದಯದಲ್ಲಿ ಒಂದು ಪ್ರಶ್ನೆಯೂ? ಮೂಡುತ್ತದೆ. ಅವರು ಕಂಡ ಕನಸಿನ ಕಲ್ಯಾಣ ಕರ್ನಾಟಕವನ್ನು ನಾವು ನಿರ್ಮಿಸಿದ್ದೇವೆಯೇ? ಇದು ಕೇವಲ ಪ್ರಶ್ನೆಯಲ್ಲ; ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ. ನಮ್ಮ ಮಣ್ಣಿನ ಪ್ರತಿಯೊಂದು ಮಗುವಿಗೂ ಗುಣಮಟ್ಟದ ಶಿಕ್ಷಣ ಸಿಗಬೇಕು. ನಮ್ಮ ಯುವಕರ ಕೈಗಳಿಗೆ ಉದ್ಯೋಗ ಸಿಗಬೇಕು. ನಮ್ಮ ರೈತರ ಹೊಲಗಳಿಗೆ ನೀರು ಹರಿಯಬೇಕು. ನಮ್ಮ ತಾಯಂದಿರಿಗೆ ಉತ್ತಮ ಆರೋಗ್ಯ ಸೇವೆ ದೊರೆಯಬೇಕು. ನಮ್ಮ ಗ್ರಾಮಗಳು ಅಭಿವೃದ್ಧಿಯ ಬೆಳಕಿನಲ್ಲಿ ನಗಬೇಕು. ನಮ್ಮ ಪ್ರತಿಭೆಗಳಿಗೆ ನಮ್ಮ ನೆಲದಲ್ಲಿಯೇ ಅವಕಾಶಗಳು ಸಿಗಬೇಕು. ವಿಮೋಚನೆ ನಮಗೆ ಇತಿಹಾಸವನ್ನು ಕೊಟ್ಟಿದೆ; ಅಭಿವೃದ್ಧಿ ನಮ್ಮ ಮುಂದಿನ ತಲೆಮಾರಿಗೆ ಭವಿಷ್ಯವನ್ನು ಕೊಡಬೇಕು. ನಮ್ಮ ಹಿರಿಯರು ನಮಗೆ ಸ್ವಾಭಿಮಾನದ ನೆಲವನ್ನು ಕೊಟ್ಟರು. ನಾವು ನಮ್ಮ ಮಕ್ಕಳಿಗೆ ಸಮೃದ್ಧಿಯ ನೆಲವನ್ನು ಕೊಡುವ ಸಂಕಲ್ಪ ಮಾಡೋಣ. ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಯಾವುದೋ ಒಂದು ಸರ್ಕಾರದ, ಒಂದು ವ್ಯಕ್ತಿಯ ಅಥವಾ ಒಂದು ಕಾಲಘಟ್ಟದ ಜವಾಬ್ದಾರಿಯಲ್ಲ. ಇದು ನಮ್ಮೆಲ್ಲರ ಕನಸು, ನಮ್ಮೆಲ್ಲರ ಕರ್ತವ್ಯ. ಈ ಮಣ್ಣಿನ ಪ್ರತಿಯೊಂದು ಕಣ್ಣೀರಿಗೂ ಬೆಲೆ ಸಿಗಲಿ, ಪ್ರತಿಯೊಂದು ಬೆವರಿನ ಹನಿಗೂ ಫಲ ಸಿಗಲಿ, ಪ್ರತಿಯೊಂದು ಯುವ ಕನಸಿಗೂ ರೆಕ್ಕೆಗಳು ಮೂಡಲಿ ಎಂದು ಆಶಿಸುತ್ತೇನೆ. ಪ್ರತಿಯೊಂದು ಮನೆಯಲ್ಲೂ ಅಭಿವೃದ್ಧಿಯ ನಗು ಅರಳಲಿ, ವಿಮೋಚನೆಗಾಗಿ ಹೋರಾಡಿದ ಮಹನೀಯರಿಗೆ ಶತ ಶತ ನಮನಗಳು. ಅವರ ತ್ಯಾಗದ ಜ್ಯೋತಿ ಎಂದಿಗೂ ಆರದಿರಲಿ, ಅವರ ಕನಸುಗಳ ಕಲ್ಯಾಣ ಕರ್ನಾಟಕ ನಿರ್ಮಾಣವಾಗಲಿ, ಅಭಿವೃದ್ಧಿಯ ಪರ್ವ ನಿಲ್ಲದೆ, ಇನ್ನಷ್ಟು ವೇಗವಾಗಿ, ಇನ್ನಷ್ಟು ದೂರವಾಗಿ ಮುಂದುವರಿಯಲಿ, ಇದೇ ನನ್ನ ಹೃದಯದಾಳದ ಆಶಯ. ವಿಮೋಚನೆಯ ಹೆಮ್ಮೆ ನಮ್ಮದಾಗಲಿ, ಅಭಿವೃದ್ಧಿಯ ಭವಿಷ್ಯವೂ ನಮ್ಮದಾಗಲಿ, ಸಮೃದ್ಧ ಕಲ್ಯಾಣ ಕರ್ನಾಟಕ ನಮ್ಮೆಲ್ಲರ ಸಂಕಲ್ಪವಾಗಲಿ. ಜೈ ಕಲ್ಯಾಣ ಕರ್ನಾಟಕ 🙏 ಜೈ ಕರ್ನಾಟಕ ಇಂತಿ ನಿಮ್ಮ ವಿಶ್ವಾಸಿ ಸಾಮಾಜಿಕ ಹೋರಾಟಗಾರ ವಿರುಪಾಕ್ಷಿ ಮಾಲಿಪಾಟೀಲ್ ಗುರುಮಠಕಲ್1
- ಯಾದಗಿರಿ ನಾಳೆ ಸೆಪ್ಟೆಂಬರ್ 17 ರಂದು ಸೃಷ್ಟಿಕರ್ತ ಭಗವಾನ್ ವಿಶ್ವಕರ್ಮ ಜಯಂತಿಯ ಶುಭಾಶಯಗಳು ಸನ್ಮಾನ್ಯ ಶ್ರೀ ಕೆ ಪಿ ನಂಜುಂಡಿ ವಿಶ್ವಕರ್ಮ ಇವರ ಶ್ರಮ ದಿಂದ ವಿಶ್ವಕರ್ಮ ಜಯಂತಿಯ ಆಚರಿಸುವಂತೆ ಅದು ಸೆಪ್ಟೆಂಬರ್ 17 ರಂದು ವಿಶ್ವಕರ್ಮರ ಹಬ್ಬ ಅಂತೆ ಮನೆ ಮನೆಯಲ್ಲಿ ವಿಶ್ವಕರ್ಮರು ಭಾವಚಿತ್ರಕ್ಕೆ ಪೂಜ್ಯ ಮಾಡಲು ಸೃಷ್ಟಿಕರ್ತನಾದ ಪ್ರೀತಿ ನಂಜುಂಡಿ ಇವರ ಶ್ರಮ1
- ಕಲಬುರಗಿ: ಅನುಮತಿ ಇಲ್ಲದೆ ರಾತ್ರೋ ರಾತ್ರಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಮೆ ಸ್ಥಾಪನೆ ಕಲಬುರಗಿ- ಮಾಜಿ ಸಿಎಂ ಸಿದ್ದರಾಮಯ್ಯ ನವರ ಪ್ರತಿಮೆಯನ್ನು ರಾತ್ರೋರಾತ್ರಿ ಸ್ಥಾಪಿಸಿದ ಘಟನೆ ನಗರದ ಹೈಕೋರ್ಟ್ ಕ್ರಾಸ್ ಬಳಿ ನಡೆದಿದೆ. ಯಾವುದೇ ಅನುಮತಿ ಪಡೆಯದೇನೆ ಸುಮಾರು ಏಳೆಂಟು ಜನರಿಂದ ರಾತ್ರೋ ರಾತ್ರಿ ಮೂರ್ತಿ ಸ್ಥಾಪನೆ ಮಾಡಲಾಗಿದೆ. ಎರಡು ವರ್ಷಗಳ ಹಿಂದೆಯೂ ಇದೆ ತರಹ ರಾತ್ರೋ ರಾತ್ರಿ ಸಿದ್ದರಾಮಯ್ಯ ಭಾವಚಿತ್ರದ ಬ್ಯಾನರ್ ಅಳವಡಿಸಿ ಸಿದ್ದರಾಮಯ್ಯ ಸರ್ಕಲ್ ನಿರ್ಮಾಣ ಮಾಡಲಾಗಿತ್ತು. ಸಿದ್ದರಾಮಯ್ಯ ಸಿಎಂ ಆಗಿದ್ದಾಗಲೆ ಸಿದ್ದರಾಮಯ್ಯ ಸರ್ಕಲ್ ನಿರ್ಮಾಣ ಮಾಡಿದ್ರು ಈ ಹಿಂದೆಯೋ ಸಿದ್ದರಾಮಯ್ಯ ಸರ್ಕಲ್ ಮಾಡೋದಕ್ಕು ಅನುಮತಿ ಪಡೆಯದೇನೆ ನಿರ್ಮಾಣ ಮಾಡಲಾಗಿತ್ತು. ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಇದಿಗಾ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಲಬುರಗಿ ಪ್ರವಾಸದಲ್ಲಿರುವಾಗ್ಲೆ ಮೂರ್ತಿ ಸ್ಥಾಪನೆ ಮಾಡಲಾಗಿದೆ. ಸಿದ್ದರಾಮಯ್ಯ ಮೂರ್ತಿ ಪ್ರತಿಷ್ಟಾಪನೆ ಮಾಡಿದ ಸರ್ಕಲ್ ನಿಂದಲೇ ಸಿಎಂ ಡಿಕೆಶಿ ಅಫಜಲಪುರಕ್ಕೆ ತೇರಳಲಿರುವರು.ಅನುಮತಿಯಿಲ್ಲದೆ ಮೂರ್ತಿ ಪ್ರತಿಮೆ ಸ್ಥಾಪನೆ ಮಾಡಿದ ಹಿನ್ನಲೆ ಜಿಲ್ಲಾಡಳಿತ ಏನು ಕ್ರಮ ಕೈಗೊಳ್ಳುತ್ತೆ ಅನ್ನೋದೆ ಕೂತುಹಲ ಮೂಡಿದೆ2